ನಟ ಅನಿರುದ್ದ್ ನಾಯಕರಾಗಿ ನಟಿಸುತ್ತಿರುವ ಶೆಫ್ ಚಿದಂಬರ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನಡೆದಿತ್ತು. ಈಗ ಮೊದಲ ಹಂತದ ಚಿತ್ರೀಕರಣ ಯಶಸ್ವಿಯಾಗಿ ಮುಕ್ತಾಯವಾಗಿದೆ.
ಅನಿರುದ್ದ್ ಈ ಚಿತ್ರದಲ್ಲಿ ಶೆಫ್” ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಪಾತ್ರಕ್ಕಾಗಿ ಅನಿರುದ್ದ್ ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಅನಿರುದ್ದ್ ಅವರಿಗೆ ಹೆಸರಾಂತ ಬಾಣಸಿಗರು ತರಬೇತಿ ನೀಡುತ್ತಿದ್ದಾರೆ. ಈ ಟ್ರೈನಿಂಗ್ ವಿಡಿಯೋವನ್ನು ಚಿತ್ರತಂಡ ಬಿಡುಗಡೆ ಮಾಡಿದೆ.
ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ರೂಪ ಡಿ.ಎನ್ ನಿರ್ಮಿಸುತ್ತಿರುವ ಈ ಚಿತ್ರವನ್ನು ಎಂ.ಆನಂದರಾಜ್ ನಿರ್ದೇಶಿಸುತ್ತಿದ್ದಾರೆ. ರೆಚೆಲ್ ಡೇವಿಡ್ ಹಾಗೂ ನಿಧಿ ಸುಬ್ಬಯ್ಯ ಈ ಚಿತ್ರದ ನಾಯಕಿಯರು.
ಕೊಡಗಿನ ವಿರಾಜಪೇಟೆಯ ಅಮ್ಮಾತಿ ಕೊಡವ ಸಮಾಜದಲ್ಲಿ ಆಗಸ್ಟ್ 24ರಂದು ನಟಿ ಹರ್ಷಿಕಾ ಹಾಗು ನಟ ಭುವನ್ ಅವರ ನಡೆದ ವಿವಾಹ ವಿಜೃಂಭಣೆಯಿಂದ ನೆರವೇರಿತು. ಎರಡು ದಿನಗಳ ಕಾಲ ನಡೆದ ಕೊಡವ ಶೈಲಿಯ ಅದ್ದೂರಿ ವಿವಾಹಕ್ಕೆ ಅನೇಕ ಸಿನಿಮಾ ತಾರೆಯರು ಸಾಕ್ಷಿಯಾದರು. ಮೊದಲ ದಿನ ಊರು ಕೂಡುವ ಶಾಸ್ತ್ರ ನಡೆಯಿತು. ಊರು ಕೂಡವ ಶಾಸ್ತ್ರದ ದಿನವೇ ತಾಯಿಯಿಂದ ಹರ್ಷಿಕಾಗೆ ಮಾಂಗಲ್ಯಧಾರಣೆ ಆಯಿತು.
ನಂತರ ವಧು ಮತ್ತು ವರ ಇಬ್ಬರೂ ಪರಸ್ಪರ ನೋಡುವ ಆಗಿಲ್ಲ. ಎರಡನೇ ದಿನ ಇಬ್ಬರಿಗೂ ಹಿರಿಯರಿಂದ ಪ್ರತ್ಯೇಕವಾಗಿ ಮೆಹಂದಿ ಶಾಸ್ತ್ರ ನೆರವೇರಿತು.
ಬೆಳಗ್ಗೆ ಬಳೆ ಶಾಸ್ತ್ರನಂತರ ಪೊಂಬಣ ಪೂಜೆ, ಅಂದರೆ ವರ ಪೂಜೆ ರೀತಿಯ ಪೂಜೆ.ಹುಡುಗ ಮಂಟಪಕ್ಕೆ ಬಂದು ಬಾಳೆ ಕಟ್ ಮಾಡಲು ಹೊರಟು ಬಾಳೆ ಕಡೆದು ಬರುವ ಪದ್ಧತಿ ನಡೆಯಿತು. ಆಗ ಅವನನ್ನ ಹುಡುಗಿ ಮನೆಯವರು ಕರೆದುಕೊಂಡು ಹೋಗುವುದು ವಾಡಿಕೆ. ಅದೂ ಕೂಡ ವಿಶೇಷವಾಗಿ ನೆರವೇರಿತು.
ನಂತರ ಬಂದ ಹುಡುಗನಿಗೆ ಹುಡುಗಿ ಅಮ್ಮ ಹಾಲು ಬಾಳೆ ಹಣ್ಣು ಅನ್ನ ತಿನ್ನಿಸುವ ಶಾಸ್ತ್ರ ನಡೆಯಿತು. ಅದಾದ ಮೇಲೆ ಹುಡುಗ ಹುಡುಗಿಯನ್ನ ವೇದಿಕೆ ಮೇಲೆ ಕೂರಿಸಿ ಮಹೂರ್ತಕ್ಕೆ ಅಣಿಯಾಗುತ್ತಾರೆ.
ಮದುವೆಗೆ ಬಂದ ಅತಿಥಿಗಳೆಲ್ಲ ಹುಡುಗ ಹುಡುಗಿಗೆ ಅಕ್ಷತೆ ಕಾಳು ಹಾಕಿ ಆಶೀರ್ವಾದ ಮಾಡುತ್ತಾರೆ. ಕೊನೆಯಲ್ಲಿ ಹುಡುಗ ಹುಡುಗಿ ಕೈ ಹಿಡಿದು ಎದ್ದು ನಿಲ್ಲುತ್ತಾರೆ.
ಬಗೆ ಬಗೆಯ ಭೋಜನ
ಕೊಡವ ಜೋಡಿಯ ಮದ್ವೆಯಲ್ಲಿ ಬಗೆ ಬಗೆಯ ಭೋಜನ ಸಿದ್ಧವಾಗಿತ್ತು. ನಾನ್ ವೆಜ್, ವೆಜ್ ಎರಡು ಶೈಲಿಯ ಊಟದ ವ್ಯವಸ್ಥೆ ಆಯೋಜಿಸಲಾಗಿತ್ತು. ಕೊಡವ ಶೈಲಿಯ , ನೂಪಟ್ಟು, ಪೋರ್ಕ್ ಪ್ರೈ, ಪೋರ್ಕ್ ಕರಿ, ಮಟನ್ ಬಿರ್ಯಾನಿ, ಮಟನ್ ಪ್ರೈ, ಚಿಕನ್ ಪ್ರೈ ಇತ್ಯಾದಿ ರೆಡಿಯಾಗಿತ್ತು.
ಡಾಲಿ ಧನಂಜಯ್ ಹುಟ್ಟು ಹಬ್ಬಕ್ಕೆ ಒಂದಷ್ಟು ಹೊಸ ಸಿನಿಮಾಗಳು ಅನೌನ್ಸ್ ಆಗಿವೆ. ಆ ಸಾಲಿಗೆ ಈಗ ‘ಜೀಬ್ರಾ’ ಸಿನಿಮಾ ಕೂಡ ಸೇರಿದೆ. ವಿಶೇಷ ಅಂದರೆ ಈ ಸಿನಿಮಾ ಸದ್ದಿಲ್ಲದೆ ಚಿತ್ರೀಕರಣ ವಕೂಡ ನಡೆದಿದೆ.
ಮಲ್ಟಿ ಸ್ಟಾರರ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಡಾಲಿ ಎಂಟ್ರಿ ಕೊಡುತ್ತಿದ್ದಾರೆ. ಜೀಬ್ರಾ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಲಿದ್ದಾರೆ ಡಾಲಿ ಧನಂಜಯ.
ಅಂದಹಾಗೆ ಈ ಸಿನಿಮಾಗೆ ಈ ಶ್ವರ್ ಕಾರ್ತಿಕ್ ನಿರ್ದೇಶಕರು. ತಮಿಳು ನಿರ್ಮಾಣ ಸಂಸ್ಥೆಯಲ್ಲಿ ಈ ಸಿನಿಮಾ ಮೂಡಿ ಬರುತ್ತಿದೆ. ಜೀಬ್ರಾ ಸಿನಿಮಾಗೆ ಎಸ್ ಎನ್ ರೆಡ್ಡಿ,ಬಾಲ ಸುಂದರಂ, ದಿನೇಶ್ ಸುಂದರಂ ನಿರ್ಮಾಪಕರು. ಚಿತ್ರಕ್ಕೆ ರವಿ ಬಸರೂರು ಸಂಗೀತವಿದೆ.
ಡಾಲಿ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಜೀಬ್ರಾ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮೂಡಿ ಜೀಬ್ರಾ ತಯಾರಾಗುತ್ತಿದೆ. ಈಗಾಗಲೇ ಶೇ. 90ರಷ್ಟು ಚಿತ್ರೀಕರಣ ಮುಗಿಸಿರುವ ಸಿನಿಮಾ ತಂಡ, ರಿಲೀಸ್ ಗೆ ಸಿದ್ದವಾಗಿರುವ ಈ ಸಿನಿಮಾವನ್ನು ಸದ್ಯದಲ್ಲೆ ಅಭಿಮಾನಿಗಳ ಮುಂದೆ ತರಲು ತಯಾರಿ ನಡೆಸುತ್ತಿದೆ.
ನಟ-ನಿರ್ಮಾಪಕ ಡಾಲಿ ಧನಂಜಯ್ ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ “ಉತ್ತರಕಾಂಡ” ಚಿತ್ರತಂಡದವರು ಚಿತ್ರದಲ್ಲಿನ ಧನಂಜಯ್ ಅವರ ಪಾತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ.
ಹುಟ್ಟುಹಬ್ಬದ ಪೂರ್ವಭಾವಿಯಾಗಿ ಬೆಂಗಳೂರಿನ ಸಂತೋಷ್ ಚಿತ್ರಮಂದಿರದಲ್ಲಿ ನಡೆದ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದವರು ಮತ್ತು ಅಪಾರ ಸಂಖ್ಯೆಯ ಅಭಿಮಾನಿಗಳು ಪಾಲ್ಗೊಂಡಿದ್ದರು.
ಧನಂಜಯ್ ಅವರ ಪಾತ್ರವಾದ “ಗಬ್ರು ಸತ್ಯ”ನ ಪರಿಚಯಿಸುವ ಟೀಸರ್ ಬಿಡುಗಡೆ ಮಾಡಲಾಯಿತು. ಈ ಟೀಸರ್ ಈಗಾಗಲೇ ಹಿಟ್ ಆಗಿದ್ದು, ಅಭಿಮಾನಿಗಳ ವಲಯದಲ್ಲಿ ಸಾಕಷ್ಟು ನಿರೀಕ್ಷೆ ಮತ್ತು ಕುತೂಹಲವನ್ನು ಹುಟ್ಟುಹಾಕಿದೆ.
“ಉತ್ತರಕಾಂಡ” ಚಿತ್ರವು ಉತ್ತರ ಕರ್ನಾಟಕದ ಪ್ರದೇಶದಲ್ಲಿ ನಡೆಯುವ ಕಥೆಯಾಗಿದ್ದು, ಗಬ್ರು ಸತ್ಯ ಎಂಬ ಗ್ಯಾಂಗ್ ಸ್ಟರ್ ಪಾತ್ರದಲ್ಲಿ ಧನಂಜಯ್ ಕಾಣಿಸಿಕೊಂಡಿದ್ದಾರೆ. ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಮತ್ತು ದಿಗಂತ್ ಸಹ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.
ಕೆ ಆರ್ ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ಈ ಚಿತ್ರವನ್ನು ರೋಹಿತ್ ಪದಕಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಅದ್ವೈತ ಗುರುಮೂರ್ತಿ ಅವರ ಛಾಯಾಗ್ರಹಣ ಮತ್ತು ಚರಣ್ ರಾಜ್ ಅವರ ಸಂಗೀತ ಈ ಚಿತ್ರಕ್ಕಿದೆ.
“ಉತ್ತರಕಾಂಡ” , ಕೆ ಅರ್ ಜಿ ಸ್ಟುಡಿಯೋಸ್ ಮತ್ತು ಧನಂಜಯ್ ಅವರ ಕಾಂಬಿನೇಷನ್ ನಲ್ಲಿ ಮೂಡಿ ಬರುತ್ತಿರುವ ಮೂರನೇ ಚಿತ್ರವಾಗಿದ್ದು, ಕನ್ನಡ ಚಿತ್ರರಂಗದ ಅತೀ ನಿರೀಕ್ಷಿತ ಚಿತ್ರವಾಗಿದೆ.
ಇತ್ತೀಚಿಗೆ ಚಿತ್ರೀಕರಣ ಮುಗಿಸಿಕೊಂಡ ತಾರಿಣಿ ಚಿತ್ರ ಈಗ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿದೆ. “ಶ್ರೀ ಗಜನಿ ಪ್ರೊಡಕ್ಷನ್ಸ್” ಲಾಂಛನದಲ್ಲಿ ಮೂಡಿಬಂದಿರುವ ಚಿತ್ರಕ್ಕೆ ಡಾ.ಸುರೇಶ್ ಕೋಟ್ಯಾನ್ ಚಿತ್ರಾಪು ರವರು ಬಂಡವಾಳ ಹೂಡಿದ್ದಾರೆ. ಸಿದ್ದು ಪೂರ್ಣಚಂದ್ರ ರವರು ಕಥೆ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.
ಮಮತಾ ರಾವತ್ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಇವರು ಈ ಕಥೆಗಾಗಿಯೇ ಮಾನಸಿಕ ಪೂರ್ವತಯಾರಿ ಮಾಡಿಕೊಂಡು ಉತ್ತಮವಾಗಿ ನಟಿಸಿದ್ದಾರೆ. ಇದೊಂದು “ಗರ್ಭಿಣಿ” ಹೆಂಗಸಿನ ಕಥೆಯಾಧಾರಿತ ಚಿತ್ರವಾಗಿರುವುದರಿಂದ ಈ ಚಿತ್ರದಲ್ಲಿ “ಮಮತಾ ರಾಹುತ್” ರವರು ನಿಜ ಜೀವನದಲ್ಲು ಸ್ವತಃ ಗರ್ಭಿಣಿಯಾಗಿಯೇ ಮನೋಜ್ಞವಾಗಿ ನಟಿಸಿದ್ದಾರೆಂದು ಚಿತ್ರದ ನಿರ್ದೇಶಕರು ಹೇಳಿದ್ದಾರೆ. ಅವರದೇ ಮಗುವಿನ ದೃಶ್ಯವನ್ನು ಹುಟ್ಟಿದ ಕೂಡಲೇ ಸೆರೆಹಿಡಿಯಲಾಗಿದೆಯಂತೆ.
ಒಟ್ಟಾರೆ ನೈಜವಾಗಿ ಸಹಜವಾಗಿ ಎಲ್ಲಾ ಕಲಾವಿದರೂ ಕೂಡ ಅಭಿನಯಿಸಿದ್ದಾರೆ. ಉಳಿದಂತೆ ರೋಹಿತ್, ಭವಾನಿ ಪ್ರಕಾಶ್, ವಿಜಯ ಲಕ್ಷ್ಮಿ, ಡಾ. ಸುರೇಶ್ ಕೋಟ್ಯಾನ್ ಚಿತ್ರಾಪು, ಸುಧಾ ಪ್ರಸನ್ನ, ಪ್ರಮಿಳಾ ಸುಬ್ರಹ್ಮಣ್ಯಂ, ಮಟಿಲ್ಡಾ ಡಿಸೋಜಾ, ದೀಪಿಕಾ ಗೌಡ, ತೇಜಸ್ವಿನಿ, ಶ್ವೇತಾ, ಮಂಜು, ಇನ್ನೂ ಮುಂತಾದ ನುರಿತ ಕಲಾವಿದರು ಅಭಿನಯಿಸಿದ್ದಾರೆ.
ನಾಗರತ್ನ ಕೆ.ಹೆಚ್ ವಸ್ತ್ರ ವಿನ್ಯಾಸ, ಅನಂತ್ ಆರ್ಯನ್ ಸಂಗೀತ, ದೀಪಕ್ ಸಿ ಎಸ್ ಸಂಕಲನ, ರಾಜು ಹೆಮ್ಮಿಗೇಪುರ ಛಾಯಾಗ್ರಹಣ, ಬಸವರಾಜ್ ಆಚಾರ್ ಕೆ ಆರ್ ಕಲೆ, ಕಲರಿಂಗ್ ನಿಖಿಲ್ ಕಾರ್ಯಪ್ಪ, ಶ್ರೀ ರಾಮ್ ಶಬ್ದ ವಿನ್ಯಾಸ, ಪ್ರದೀಪ್ ಜಿ ಎಫೆಕ್ಟ್ಸ್, ಮುಂತಾದವರ ತಾಂತ್ರಿಕ ಬಳಗವಿದೆ.
ನಟರಾಕ್ಷಸ ಡಾಲಿ ಧನಂಜಯ್ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಧನು ಜನ್ಮದಿನದ ಅಂಗವಾಗಿ ಹೊಸ ಸಿನಿಮಾಗಳ ಪೋಸ್ಟರ್, ಟೀಸರ್ ಉಡುಗೊರೆಯಾಗಿ ಸಿಕ್ಕಿದೆ. ಅದರಂತೆ ಬಡವ ರಾಸ್ಕಲ್ ಚಿತ್ರತಂಡದಿಂದ ಡಾಲಿ ಬರ್ತ್ ಡೇ ಸ್ಪೆಷಲ್ ಗಿಫ್ಟ್ ಸಿಕ್ಕಿದೆ. ಮಧ್ಯರಾತ್ರಿ 12 ಗಂಟೆಗೆ ಟೈಟಲ್ ಹಾಗೂ ಫಸ್ಟ್ ಲುಕ್ motion ಪೋಸ್ಟರ್ ಅನೌನ್ಸ್ ಮಾಡಲಾಗಿದೆ. ಈ ಚಿತ್ರಕ್ಕೆ ’ಅಣ್ಣ From Mexico’ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ.
2021ರಲ್ಲಿ ತೆರೆಗೆ ಬಂದ ಬಡವ ರಾಸ್ಕಲ್ ಸೂಪರ್ ಡೂಪರ್ ಹಿಟ್ ಆಗಿತ್ತು. ಈ ಚಿತ್ರದ ಮೂಲಕ ಧನಂಜಯ್ ನಿರ್ಮಾಪಕರಾಗಿದ್ದರು. ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ನಿರ್ಮಿಸಿ ನಟಿಸಿದ್ದ ಬಡವ ರಾಸ್ಕಲ್ ಚಿತ್ರವನ್ನು ಶಂಕರ್ ಗುರು ನಿರ್ದೇಶಿಸಿದ್ದರು. ಮೊದಲ ಹೆಜ್ಜೆಯಲ್ಲಿಯೇ ಗೆದ್ದಿದ್ದ ಶಂಕರ್ ಗುರು, ಈಗ ಮತ್ತೊಂದು ಚೆಂದದ ಕಥೆ ಮಾಡಿ ಡಾಲಿ ಫ್ಯಾನ್ಸ್ ರಂಜಿಸಲು ಅಣಿಯಾಗಿದ್ದಾರೆ. ಅದರ ಮೊದಲ ಭಾಗವೆಂಬಂತೆ ಇಂದು ’ಅಣ್ಣ From Mexico’ ಟೈಟಲ್ ಹಾಗೂ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಕೊರಳಿಗೆ ಕರ್ನಾಟಕ ಮ್ಯಾಪ್ ಇರುವ ಪೆಂಡೆಂಟ್ ಆಭರಣ ಧರಿಸಿ, suite ತೊಟ್ಟಿರುವ ಧನಂಜಯ್ ಲುಕ್ ರಿವೀಲ್ ಮಾಡದೇ ಚಿತ್ರತಂಡ ನಿರೀಕ್ಷೆ ಹೆಚ್ಚಿಸಿದೆ.
’ಅಣ್ಣ From Mexico’ ಶಂಕರ್ ಗುರು ನಿರ್ದೇಶನದ ಎರಡನೇ ಸಿನಿಮಾ. ಪಕ್ಕ ಆಕ್ಷನ್ ಎಂಟರ್ ಟೈನರ್ ಚಿತ್ರವಾಗಿದ್ದು, ಅಜ್ಜಿ ಮೊಮ್ಮಗನ ಬಾಂಧವ್ಯದ ಕಥೆಯೂ ಸಿನಿಮಾದಲ್ಲಿರಲಿದೆ. ಸತ್ಯ ರಾಯಲ್ ನಿರ್ಮಾಣದಲ್ಲಿ ತಯಾರಾಗಲಿರುವ ಈ ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ನಿರ್ದೇಶನ ಮಾಡಲಿದ್ದಾರೆ.
ನವೆಂಬರ್ ತಿಂಗಳಿನಿಂದ ಶೂಟಿಂಗ್ ಶುರುವಾಗಲಿದ್ದು, ಮೆಕ್ಸಿಕೋ ಸೇರಿದಂತೆ ಹಲವೆಡೆ ಚಿತ್ರೀಕರಣ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.
ಈ ಹಿಂದೆ ಒಂದು ಶಿಕಾರಿಯ ಕಥೆ ನಿರ್ದೇಶಿಸಿದ್ದ ಸಚಿನ್ ಶೆಟ್ಟಿ, ಈಗ ಹೊಸ ಚಿತ್ರ ಅನೌನ್ಸ್ ಮಾಡಿದ್ದಾರೆ. ಸಂಪೂರ್ಣವಾಗಿ ಬೇರೆಯದೇ ಜಾನರ್ ಗೆ ಹೊರಳಿರುವ ನಿರ್ದೇಶಕ ಸಚಿನ್ ಶೆಟ್ಟಿ, ಈ ಬಾರಿ ಟೀನೇಜ್ ಲವ್ ಸ್ಟೋರಿಯೊಂದನ್ನು ಕ್ಲಾಸ್ ಸ್ಟೈಲ್ ನಲ್ಲಿ ನಿರೂಪಿಸಲು ಹೊರಟಿದ್ದಾರೆ.
ಚಿತ್ರದ ನಾಯಕ ಸಚಿನ್ ರಾಠೋಡ್, ನಾಯಕಿ ರಾಧಾ ಭಗವತಿ ಮತ್ತು ನಿರ್ಮಾಪಕರೆಲ್ಲರೂ ಬಿಜಾಪುರದವರಾಗಿದ್ದು, ಅದೇ ಜಿಲ್ಲೆಯ ಕನಮಡಿ ಎಂಬ ಗ್ರಾಮದಲ್ಲಿ ಸಂಪೂರ್ಣವಾಗಿ ಚಿತ್ರೀಕರಣ ನಡೆಸಲಾಗಿದೆ.
ಕನ್ನಡ ಚಿತ್ರರಂಗದಲ್ಲಿ ಉತ್ತರ ಕರ್ನಾಟಕದ ಪ್ರತಿಭೆಗಳು, ಆ ಭಾಗದ ಕಥೆಗಳು ಮುನ್ನೆಲೆಗೆ ಬರಬೇಕು ಎಂಬ ಈಗಿನ ಕೂಗಿಗೆ ಈ ಚಿತ್ರ ಒಂದು ಸಣ್ಣ ಉತ್ತರವಾಗಬಹುದು. ಕರಾವಳಿಯ ನಿರ್ದೇಶಕರು ತಮ್ಮ ಕಥೆಯನ್ನು ಉತ್ತರ ಕರ್ನಾಟಕದ ಪರಿಸರದ ಹಿನ್ನೆಲೆಯ ಜೊತೆ ಹೇಳಲು ಹೊರಟಿರುವುದು ವಿಶೇಷವಾಗಿದೆ. ಇನ್ನು ಚಿತ್ರದ ಪೋಸ್ಟ್ ಪ್ರೊಡಕ್ಷನ್ ನಲ್ಲಿ ನಿರತವಾಗಿರುವ ಚಿತ್ರತಂಡ ಇನ್ನು ಮುಂದೆ ಚಿತ್ರದ ಒಂದೊಂದೇ ವಿವರಗಳನ್ನು ಬಿಡುಗಡೆ ಮಾಡಲಿದೆ.
ವಸಂತ ಕಾಲದ ಹೂಗಳು ಚಿತ್ರದಲ್ಲಿ ಗುರುರಾಜ್ ಶೆಟ್ಟಿ, ಪವನ್, ನಂದೀಶ್ ಇತರರು ನಟಿಸಲಿದ್ದಾರೆ. ಅಶೋಕ್ ರಾಠೋಡ್, ಸಿದ್ದು ರಾಸುರೆ ನಿರ್ಮಾಣವಿದೆ. ಶಿವಶಂಕರ ನೂರಂಬಡ ಕ್ಯಾಮೆರಾ ಹಿಡಿದರೆ, ಬಿ.ಎಸ್.ಕೆಂಪರಾಜ್ ಅಂಕಲನವಿದೆ. ಭರತ್ ಜನಾರ್ಧನ್ ಸಂಗೀತವಿದೆ.
ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿಗಿಂದು ಹುಟ್ಟುಹಬ್ಬದ ಸಂಭ್ರಮ..ಮೆಗಾಸ್ಟಾರ್ ಜನ್ಮದಿನದ ಅಂಗವಾಗಿ 157ನೇ ಸಿನಿಮಾ ಅನೌನ್ಸ್ ಆಗಿದೆ. ತೆಲುಗು ಚಿತ್ರರಂಗದ ಎವರ್ಗ್ರೀನ್ ಕ್ಲಾಸಿಕ್ಗಳಲ್ಲಿ ಒಂದಾಗಿರುವ ಜಗದೇಕ ವೀರುಡು ಅತಿಲೋಕ ಸುಂದರಿಯಂತಹ ಮತ್ತೊಂದು ಫ್ಯಾಂಟಸಿ ಎಂಟರ್ಟೈನರ್ನಲ್ಲಿ ಚಿರು ನಟಿಸುತ್ತಿದ್ದಾರೆ.
ಬಿಂಬಿಸಾರ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದ ವಸಿಷ್ಠ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಯುವಿ ಕ್ರಿಯೇಷನ್ಸ್ನ ಯಶಸ್ವಿ ಬ್ಯಾನರ್ ಅಡಿಯಲ್ಲಿ ವಿ ವಂಶಿ ಕೃಷ್ಣಾ ರೆಡ್ಡಿ, ಪ್ರಮೋದ್ ಉಪ್ಪಲಪಟ್ಟಿ ಮತ್ತು ವಿಕ್ರಮ್ ರೆಡ್ಡಿ ನಿರ್ಮಿಸಲಿರುವ #Mega157 ಚಿತ್ರ ಚಿರಂಜೀವಿ ಅವರ ವೃತ್ತಿಜೀವನದಲ್ಲಿ ಅತ್ಯಂತ ದುಬಾರಿ ಚಿತ್ರ ಎನ್ನಲಾಗಿದೆ.
ನಿರ್ದೇಶಕ ವಸಿಷ್ಠ ಈ ಸಿನಿಮಾ ಮೂಲಕ ಮೆಗಾ ಮಾಸ್ ಯೂನಿವರ್ಸ್ ನ್ನು ಸಿನಿರಸಿಕರಿಗೆ ಪರಿಚಯಿಸಲಿದ್ದಾರೆ. ಭೂಮಿ, ನೀರು, ಬೆಂಕಿ, ಗಾಳಿ ಮತ್ತು ಆಕಾಶದಂತಹ ಪಂಚಭೂತಗಳು (ಪ್ರಕೃತಿಯ ಐದು ಅಂಶಗಳು) ತ್ರಿಶೂಲದೊಂದಿಗೆ ನಕ್ಷತ್ರಾಕಾರದ ಅಂಶವನ್ನು ಹೊಂದಿರುವ ಪೋಸ್ಟರ್ ಅನಾವರಣ ಮಾಡಲಾಗಿದ್ದು, ನಿರೀಕ್ಷೆ ಹೆಚ್ಚಿಸಿದೆ.
ಚಿರು ಹುಟ್ಟುಹಬ್ಬದ ಅಂಗವಾಗಿ ಹೊಸ ಪೋಸ್ಟರ್ ಅನಾವರಣ ಮಾಡಿರುವ ಚಿತ್ರತಂಡ ಮುಂದಿನ ದಿನಗಳಲ್ಲಿ ಉಳಿದ ತಾರಾಬಳಗ ಹಾಗೂ ತಾಂತ್ರಿಕ ವರ್ಗವನ್ನು ಪರಿಚಯಿಸಲಿದೆ.
ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿಗಿಂದು ಹುಟ್ಟುಹಬ್ಬದ ಸಂಭ್ರಮ. ಮೆಗಾಸ್ಟಾರ್ ಜನ್ಮದಿನದ ಅಂಗವಾಗಿ 157ನೇ ಸಿನಿಮಾ ಅನೌನ್ಸ್ ಆಗಿದೆ. ತೆಲುಗು ಚಿತ್ರರಂಗದ ಎವರ್ಗ್ರೀನ್ ಕ್ಲಾಸಿಕ್ಗಳಲ್ಲಿ ಒಂದಾಗಿರುವ ಜಗದೇಕ ವೀರುಡು ಅತಿಲೋಕ ಸುಂದರಿಯಂತಹ ಮತ್ತೊಂದು ಫ್ಯಾಂಟಸಿ ಎಂಟರ್ಟೈನರ್ನಲ್ಲಿ ಚಿರು ನಟಿಸುತ್ತಿದ್ದಾರೆ. ಬಿಂಬಿಸಾರ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದ ವಸಿಷ್ಠ, ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ.
ಯುವಿ ಕ್ರಿಯೇಷನ್ಸ್ನ ಯಶಸ್ವಿ ಬ್ಯಾನರ್ ಅಡಿಯಲ್ಲಿ ವಿ ವಂಶಿ ಕೃಷ್ಣಾ ರೆಡ್ಡಿ, ಪ್ರಮೋದ್ ಉಪ್ಪಲಪಟ್ಟಿ ಮತ್ತು ವಿಕ್ರಮ್ ರೆಡ್ಡಿ ನಿರ್ಮಿಸಲಿರುವ #Mega157 ಚಿತ್ರ ಚಿರಂಜೀವಿ ಅವರ ವೃತ್ತಿ ಜೀವನದಲ್ಲಿ ಅತ್ಯಂತ ದುಬಾರಿ ಚಿತ್ರ ಎನ್ನಲಾಗಿದೆ. ನಿರ್ದೇಶಕ ವಸಿಷ್ಠ ಈ ಸಿನಿಮಾ ಮೂಲಕ ಮೆಗಾ ಮಾಸ್ ಯೂನಿವರ್ಸ್ ನ್ನು ಸಿನಿರಸಿಕರಿಗೆ ಪರಿಚಯಿಸಲಿದ್ದಾರೆ.
ಭೂಮಿ, ನೀರು, ಬೆಂಕಿ, ಗಾಳಿ ಮತ್ತು ಆಕಾಶದಂತಹ ಪಂಚಭೂತಗಳು (ಪ್ರಕೃತಿಯ ಐದು ಅಂಶಗಳು) ತ್ರಿಶೂಲದೊಂದಿಗೆ ನಕ್ಷತ್ರಾಕಾರದ ಅಂಶವನ್ನು ಹೊಂದಿರುವ ಪೋಸ್ಟರ್ ಅನಾವರಣ ಮಾಡಲಾಗಿದ್ದು, ನಿರೀಕ್ಷೆ ಹೆಚ್ಚಿಸಿದೆ. ಚಿರು ಹುಟ್ಟುಹಬ್ಬದ ಅಂಗವಾಗಿ ಹೊಸ ಪೋಸ್ಟರ್ ಅನಾವರಣ ಮಾಡಿರುವ ಚಿತ್ರತಂಡ ಮುಂದಿನ ದಿನಗಳಲ್ಲಿ ಉಳಿದ ತಾರಾಬಳಗ ಹಾಗೂ ತಾಂತ್ರಿಕ ವರ್ಗವನ್ನು ಪರಿಚಯಿಸಲಿದೆ.
ಸೃಜನ್ ಲೋಕೇಶ್ ನಟನಾಗಿ, ನಿರ್ಮಾಪಕನಾಗಿ ಜನಪ್ರಿಯ. ಈಗ “G S T” ಚಿತ್ರದ ಮೂಲಕ ನಿರ್ದೇಶಕನ ಕ್ಯಾಪ್ ತೊಟ್ಟಿದ್ದಾರೆ. ಈ ಚಿತ್ರವನ್ನು ಪ್ರತಿಷ್ಠಿತ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಲಾಂಛನದಲ್ಲಿ ಸಂದೇಶ್ ಎನ್ ನಿರ್ಮಾಣ ಮಾಡುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ಶ್ರೀಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ನೆರವೇರಿತು. ಮೊದಲ ದೃಶ್ಯಕ್ಕೆ ಸಂದೇಶ್ ನಾಗರಾಜ್ ಆರಂಭ ಫಲಕ ತೋರಿದರು. ಗಿರಿಜಾ ಲೋಕೇಶ್ ಕ್ಯಾಮೆರಾ ಚಾಲನೆ ಮಾಡಿದರು. ಟಿ.ಎಸ್.ನಾಗಾಭರಣ, ಪಿ.ಶೇಷಾದ್ರಿ, ಸುಂದರರಾಜ್, ತಾರಾ, ಶೃತಿ, ನಿರೂಪ್ ಭಂಡಾರಿ ಮುಂತಾದ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು.
ಈ ಚಿತ್ರದಲ್ಲಿ ಮೂರು ವಿಶೇಷಗಳಿವೆ ಎಂದು ಮಾತು ಆರಂಭಿಸಿದ ಸೃಜನ್ ಲೋಕೇಶ್, ನನ್ನ ಲಕ್ಕಿ ನಂಬರ್ 7. ಮೊದಲು ಇದು 2023 ಇದನ್ನು ಕೂಡಿಸಿದಾಗ ಏಳು ಬರುತ್ತದೆ. ನನ್ನ ನಟನೆಯ 25 ನೇ ಚಿತ್ರ. 2+5 =7. ಸಂದೇಶ್ ಪ್ರೊಡಕ್ಷನ್ಸ್ ನಿರ್ಮಾಣದ 34ನೇ ಚಿತ್ರ. 3 + 4 ಕೂಡಿದಾಗ ಏಳಾಗುತ್ತದೆ. ಇನ್ನೊಂದು ವಿಶೇಷ, ನಮ್ಮ ತಾತನ ಚಿತ್ರದಲ್ಲಿ ನಮ್ಮ ಅಪ್ಪ ಬಾಲ ಕಲಾವಿದನಾಗಿ, ನಮ್ಮಪ್ಪನ ಚಿತ್ರದಲ್ಲಿ ನಾನು ಬಾಲ ಕಲಾವಿದನಾಗಿ ಅಭಿನಯಿಸಿದ್ದರು. ಈಗ ನನ್ನ ಚಿತ್ರದಲ್ಲಿ ನನ್ನ ಮಗ ಮಾಸ್ಟರ್ ಸುಕೃತ್ ಬಾಲ ಕಲಾವಿದನಾಗಿ ನಟಿಸುತ್ತಿದ್ದಾನೆ. ನಾಲ್ಕನೇ ಜನರೇಶನ್ ಈ ರೀತಿ ನಟಿಸುತ್ತಿರುವುದು ಇದೇ ಮೊದಲು ಎನ್ನಬಹುದು. ಮತ್ತೊಂದು ವಿಶೇಷವೆಂದರೆ ನನ್ನ ಮೊದಲ ನಿರ್ದೇಶನದ ಚಿತ್ರದಲ್ಲೇ ನನ್ನ ತಾಯಿಗೆ ಆಕ್ಷನ್ ಕಟ್ ಹೇಳುತ್ತಿರುವುದು. ಈ ಎಲ್ಲಾ ಕಾರಣಗಳಿಂದ ಈ ಚಿತ್ರ ನನಗೆ ವಿಶೇಷ.
ಇನ್ನು “G S T” ಬಗ್ಗೆ ಹೇಳಬೇಕೆಂದರೆ, ಚಿತ್ರಕ್ಕೆ “ಘೋಸ್ಟ್ ಇನ್ ಟ್ರಬಲ್” ಎಂಬ ಅಡಿಬರಹವಿದೆ. ಈ ವಾಕ್ಯ ಹೇಳುವಂತೆ “ದೆವ್ವಗಳಿಗೂ ಸಮಸ್ಯೆಯಿದೆ” ಎಂಬುದು. ಆ ಸಮಸ್ಯೆ ಏನು ಎಂಬುದನ್ನು ಚಿತ್ರದಲ್ಲೇ ನೋಡಬೇಕು. ಈ ಚಿತ್ರದಲ್ಲಿ ಮನರಂಜನೆಯ ಮಹಾಪೂರ ಹರಿಯುವುದು ಗ್ಯಾರಂಟಿ. ಇಂದಿನಿಂದಲೇ ಚಿತ್ರೀಕರಣ ಪ್ರಾರಂಭವಾಗಲಿದೆ ಎಂದರು.
ಸೃಜನ್ , ನನ್ನ ಆತ್ಮೀಯ ಗೆಳೆಯ. ಗೆಳೆಯನಿಗಾಗಿ ಮಾಡುತ್ತಿರುವ ಸಿನಿಮಾವಿದು ಎಂದು ನಿರ್ಮಾಪಕ ಸಂದೇಶ್ ಎನ್ ತಿಳಿಸಿದರು. ಸಂದೇಶ್ ಪ್ರೊಡಕ್ಷನ್ಸ್ ನ ಸಂದೇಶ್ ನಾಗರಾಜ್ ಅವರು ಚಿತ್ರತಂಡಕ್ಕೆ ಶುಭ ಹಾರೈಸಿದರು.
ಚಿತ್ರದಲ್ಲಿ ನಟಿಸುತ್ತಿರುವ ರಜನಿ ಭಾರದ್ವಾಜ್, ಗಿರಿಜಾ ಲೋಕೇಶ್, ಪ್ರಮೋದ್ ಶೆಟ್ಟಿ, ನಿವೇದಿತಾ, ತಬಲ ನಾಣಿ, ಅರವಿಂದ್ ರಾವ್, ರವಿಶಂಕರ್ ಗೌಡ, ವಿನೋದ್ ಗೊಬ್ಬರಗಾಲ ಮುಂತಾದವರು, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ, ಛಾಯಾಗ್ರಾಹಕ ಗುಂಡ್ಲುಪೇಟೆ ಸುರೇಶ್, ಗೀತಸಾಹಿತಿ ಕವಿರಾಜ್, ಸಂಭಾಷಣೆಕಾರ ರಾಜಶೇಖರ್ ಮತ್ತು ತೇಜಸ್ವಿ ನಾಗ್ “G S T” ಕುರಿತು ಮಾತನಾಡಿದರು.