Categories
ಸಿನಿ ಸುದ್ದಿ

ಇದು ಹೆಣ್ಮಕ್ಳ ಕಬ್ಬಡ್ಡಿ ಗುರು: ಏಪ್ರಿಲ್ 5 ಕ್ಕೆ CWKL ಶುರು

ನವರಸನ್ ನೇತೃತ್ವದ “ಸೆಲೆಬ್ರಿಟಿ ವುಮೆನ್ಸ್ ಕಬ್ಬಡಿ ಲೀಗ್” ಗೆ ಚಂದನ್ ಶೆಟ್ಟಿ ಅವರು ಚಂದದ ಥೀಮ್ ಸಾಂಗ್ ಬರೆದಿದ್ದಾರೆ.

ನಿರ್ಮಾಪಕ, ನಿರ್ದೇಶಕ, ನಟ ನವರಸನ್ “ಸೆಲೆಬ್ರಿಟಿ ವುಮೆನ್ಸ್ ಕಬ್ಬಡಿ ಲೀಗ್” ಆಯೋಜಿಸುವ ಮೂಲಕ ಕ್ರೀಡಾಲೋಕಕ್ಕೂ‌ ಪಾದಾರ್ಪಣೆ ಮಾಡಿರುವುದು ಎಲ್ಲರಿಗೂ ತಿಳಿದ ಸಂಗತಿ. ಕಳೆದ ಕೆಲವು ದಿನಗಳ ಹಿಂದೆ “CWKL” ಲೋಗೊ ಅನಾವರಣವನ್ನು ನವರಸನ್ ಅದ್ದೂರಿಯಾಗಿ ಬಿಡುಗಡೆ ಮಾಡಿದ್ದರು. ಪ್ರಸ್ತುತ ಹೆಸರಾಂತ ಗಾಯಕ, ನಾಯಕ ಹಾಗೂ ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಅವರು “CWKL” ಗಾಗಿ “ಕಬ್ಬಡಿ ಕಬ್ಬಡಿ” ಎಂಬ ಚಂದದ ಥೀಮ್ ಸಾಂಗ್ ಬರೆದು ಸಂಗೀತ ಸಂಯೋಜಿಸಿದ್ದಾರೆ.

ಇದೇ ಸಂದರ್ಭದಲ್ಲಿ “CWKL” ಪಂದ್ಯಗಳು ನಡೆಯುವ ದಿನಾಂಕಗಳನ್ನು ಸಹ ತಿಳಿಸಲಾಯಿತು. ವಿಧಾನ ಪರಷತ್ ಸದಸ್ಯರು ಹಾಗೂ‌ ಸಾಯಿಗೋಲ್ಡ್ ಸಂಸ್ಥೆಯ ಮಾಲೀಕರಾದ ಶರವಣ ಅವರು ಪಂದ್ಯಗಳು ನಡೆಯುವ ದಿನಾಂಕಗಳ ಬಗ್ಗೆ ತಿಳಿಸಿ, “CWKL” ಯಶಸ್ವಿಯಾಗಲೆಂದು ಶುಭ ಹಾರೈಸಿದರು. ಏಪ್ರಿಲ್ 5 ಹಾಗೂ 6 “CWKL” ನ ಪಂದ್ಯಗಳು ನಡೆಯಲಿದೆ. ಥೀಮ್ ಸಾಂಗ್ ಅನ್ನು ಪಿ.ಆರ್.ಓ ಸುಧೀಂದ್ರ ವೆಂಕಟೇಶ್ ಬಿಡುಗಡೆ ಮಾಡಿದರು.

“CWKL” ತಂಡಗಳ ಮಾಲೀಕರಾದ ಸಾಯಿಗೋಲ್ಡ್ ಪ್ಯಾಲೆಸ್ ನ ಶರವಣ,‌ “ವಾಮನ” ಚಿತ್ರದ ನಿರ್ಮಾಪಕ ಚೇತನ್ ಗೌಡ,‌ ನಿರ್ಮಾಪಕ ಸುರೇಶ್ ಗೌಡ, ನಿರ್ಮಾಪಕ ರಾಜೇಶ್ ಗೌಡ, ನಿರ್ಮಾಪಕ ಗೋವಿಂದರಾಜು ಹಾಗೂ ಗಜೇಂದ್ರ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಈ ಲೀಗ್ ನಲ್ಲಿ ಏಳು ತಂಡಗಳಿದ್ದು, ಏಳೂ ತಂಡಗಳ ನಾಯಕಿಯರು ಹಾಗೂ ಆಟಗಾರರು ಸಹ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಹಾಡು ಬಿಡುಗಡೆ ನಂತರ ಆಯೋಜಕರಾದ ನವರಸನ್ ಮಾತನಾಡಿದರು.

ಕಳೆದ ಕೆಲವು ದಿನಗಳ ಹಿಂದಷ್ಟೇ “CWKL” ಲೋಗೊ ಅನಾವರಣ ಮಾಡುವ ಮೂಲಕ ಅದ್ದೂರಿ ಚಾಲನೆ ನೀಡಲಾಗಿತ್ತು. ಈಗಂತೂ ಎಲ್ಲೆಲ್ಲೂ ನಮ್ಮ “CWKL” ದೇ ಮಾತು. ನಾನು ಇತ್ತೀಚೆಗೆ ಬೇರೆ ಭಾಷೆಗಳ ಸಿನಿಮಾ ಇವೆಂಟ್ ಗಳಿಗೆ ಹೋದಾಗಲೂ ಅಲ್ಲಿನ ಸೆಲೆಬ್ರಿಟಿಗಳು ಹಾಗೂ ನಮ್ಮ ಕನ್ನಡದ ಸೆಲೆಬ್ರಿಟಿಗಳು “CWKL” ಬಗ್ಗೆ ಮೆಚ್ಚುಗೆ ಮಾತುಗಳಾಡಿದ್ದು ನನಗೆ ಬಹಳ ಖುಷಿಯಾಗಿದೆ. ಈ ಲೀಗ್ ಗಾಗಿ ಒಂದು ಹಾಡನ್ನು ಬರೆದು ಸಂಗೀತ ಸಂಯೋಜಿಸಿ ಕೊಡಿ ಎಂದು ಚಂದನ್ ಶೆಟ್ಟಿ ಅವರನ್ನು ಕೇಳಿದಾಗ ಅದ್ಭುತವಾದ ಥೀಮ್ ಸಾಂಗ್ ಬರೆದುಕೊಟ್ಟಿದ್ದಾರೆ.

ಚಂದನ್ ಶೆಟ್ಟಿ ಅವರ ತಮ್ಮ ಪುನೀತ್ ಈಗಿನ AI ತಂತ್ರಜ್ಞಾನದ ಮೂಲಕ ಈ ಹಾಡನ್ನು ಸಿದ್ದ ಮಾಡಿಕೊಟ್ಟಿದ್ದಾರೆ. ನಮ್ಮ “CWKL” ನ ಮುಂದಿನ ಎಲ್ಲಾ ಕಾರ್ಯಕ್ರಮಗಳಲ್ಲೂ ಈ ಥೀಮ್ ಸಾಂಗ್ ಅನ್ನು ಬಳಸಿಕೊಳ್ಳಲಾಗುವುದು. ನಮ್ಮ ತಂಡಗಳ ಮಾಲೀಕರಾದ ಸಾಯಿ ಗೋಲ್ಡ್ ಪ್ಯಾಲೆಸ್ ನ ಶರವಣ,‌ “ವಾಮನ” ಚಿತ್ರದ ನಿರ್ಮಾಪಕ ಚೇತನ್ ಗೌಡ, ಸುರೇಶ್ ಗೌಡ, ರಾಜೇಶ್ ಗೌಡ, ಎ.ವಿ.ಅರ್ ಫಿಲಂಸ್ ನ ವೆಂಕಟೇಶ್ ರೆಡ್ಡಿ,

ಗಜೇಂದ್ರ ಹಾಗೂ ಗೋವಿಂದರಾಜು ಅವರಿಗೆ, ನನಗೆ ಬೆನ್ನೆಲುಬಾಗಿ ನಿಂತಿರುವ ನನ್ನ ತಂಡಕ್ಕೆ ಹಾಗೂ ಈ ಲೀಗ್ ನಲ್ಲಿ ಭಾಗವಹಿಸುತ್ತಿರುವ ಎಲ್ಲಾ ಸೆಲೆಬ್ರಿಟಿ ನಟಿಯರಿಗೆ ನನ್ನ ಧನ್ಯವಾದ ಎಂದು ತಿಳಿಸಿದ ನವರಸನ್, ಏಪ್ರಿಲ್ 5 ಹಾಗೂ 6 ನಮ್ಮ “CWKL” ನ ಪಂದ್ಯಗಳು ಅದ್ದೂರಿಯಾಗಿ ನಡೆಯಲಿದೆ ಎಂದರು.

Categories
ಸಿನಿ ಸುದ್ದಿ

ಬೆಂಗಳೂರಲ್ಲಿ ಮೋಹನ್ ಲಾಲ್ ಮತ್ತು ಪೃಥ್ವಿರಾಜ್ ಸುಕುಮಾರನ್: ಎಲ್ 2 ಎಂಪುರಾನ್ ಭರ್ಜರಿ ಪ್ರಚಾರ

ಮಾಲಿವುಡ್ ಬಹುನಿರೀಕ್ಷಿತ ಸಿನಿಮಾ ‘ಎಲ್ 2 ಎಂಪುರಾನ್’ ಇಂದು ತೆರೆಗೆ ಬಂದಿದೆ. ಈಗಾಗಲೇ ನಾನಾ ರಾಜ್ಯದಲ್ಲಿ ಅದ್ಧೂರಿಯಾಗಿ ಪ್ರಚಾರ ಮಾಡಿರುವ ಚಿತ್ರತಂಡ ಇಂದು ಬೆಂಗಳೂರಿನಲ್ಲಿ ಪ್ರಚಾರ ನಡೆಸಿದೆ. ನಗರದ ಓರಿಯಾನ್ ಮಾಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಲಿವುಡ್ ಸೂಪರ್ ಸ್ಟಾರ್ ಮೋಹನ್ ಲಾಲ್, ಚಿತ್ರದ ನಿರ್ದೇಶಕ ಪೃಥ್ವಿರಾಜ್ ಸುಕುಮಾರನ್, ನಟಿ ಮಂಜು ವಾರಿಯರ್, ನಟ ಟೊವಿನೋ ಥಾಮಸ್ ಭಾಗಿಯಾಗಿದ್ದರು. ಈ ವೇಳೆ ಸಿನಿಮಾದ ಬಗ್ಗೆ ಸಾಕಷ್ಟು ಮಾಹಿತಿ ಹಂಚಿಕೊಂಡರು.

ಪೃಥ್ವಿರಾಜ್ ಸುಕುಮಾರನ್ ನಿರ್ದೇಶಿಸಿ ನಟಿಸಿರುವ ‘ಎಲ್-2:ಎಂಪುರಾನ್’ ಇಂದು ಮಲಯಾಳಂ, ತೆಲುಗು, ತಮಿಳು, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ವಿಶ್ವದಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಿದೆ. ಲೂಸಿಫರ್ ಸೀಕ್ವೆಲ್ ಆಗಿರುವುದರಿಂದ ಈ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿದೆ. ಪೃಥ್ವಿರಾಜ್ ಸುಕುಮಾರನ್ ಈ ಚಿತ್ರಕ್ಕೆ ಸ್ಯಾಂಡಲ್ವುಡ್ನ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಮ್ಸ್ ಸಾಥ್ ನೀಡಿದೆ. ಕರ್ನಾಟಕದಾದ್ಯಂತ ಹೊಂಬಾಳೆ ಫಿಲಂಸ್ ಸಂಸ್ಥೆಯ ವಿಜಯ್ ಕಿರಗಂದೂರ್ ‘ಎಲ್-2:ಎಂಪುರಾನ್’ ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದಾರೆ.

L2E: ಎಂಪುರಾನ್ ಚಿತ್ರಕ್ಕೆ ಕಥೆ ಮುರಳಿ ಗೋಪಿ ಬರೆದಿದ್ದಾರೆ, ದೀಪಕ್ ದೇವ್ ಸಂಗೀತ ಸಂಯೋಜಿಸಿದ್ದಾರೆ ಮತ್ತು ಸುಜಿತ್ ವಾಸುದೇವ್ ಅವರ ಛಾಯಾಗ್ರಹಣವಿದೆ. ಸುರೇಶ್ ಬಾಲಾಜೆ ಮತ್ತು ಜಾರ್ಜ್ ಪಯಸ್ ಕಾರ್ಯಕಾರಿ ನಿರ್ಮಾಪಕರಾಗಿ ಸಾಥ್ ಕೊಟ್ಟಿದ್ದಾರೆ. ಮೋಹನ್ದಾಸ್ ಕಲಾ ನಿರ್ದೇಶಕರಾಗಿ ದುಡಿದ್ದಾರೆ. 2019ರಲ್ಲಿ ಬಿಡುಗಡೆಯಾಗಿ ಭರ್ಜರಿ ಯಶಸ್ಸು ಕಂಡಿದ್ದ ಲೂಸಿಫರ್ ಚಿತ್ರಕ್ಕೆ ಪೃಥ್ವಿರಾಜ್ ಸುಕುಮಾರ್ ಆಕ್ಷನ್ ಕಟ್ ಹೇಳಿದ್ದರು. ಲೂಸಿಫರ್ ಪಾರ್ಟ್ 2 ಸಿನಿಮಾವನ್ನು ನಿರ್ಮಾಪಕ ಸುಭಾಷ್ಕರ್ ಹಾಗೂ ಆಂಟೋನಿ ಪೆರುಂಬವೂರ್ ನಿರ್ಮಾಣ ಮಾಡಿದ್ದಾರೆ.

ಈ ಚಿತ್ರದಲ್ಲಿ ಸ್ಟೀಫನ್ ನೆಡುಂಪಲ್ಲಿ ಪಾತ್ರದಲ್ಲಿ ಮೋಹನ್ ಲಾಲ್ ನಟಿಸಿದ್ದು, ನಿರ್ದೇಶನದ ಜೊತೆಗೆ ಪೃಥ್ವಿರಾಜ್ ಸುಕುಮಾರನ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಇಂದ್ರಜಿತ್ ಸುಕುಮಾರನ್, ಟೊವಿನೋ ಥಾಮಸ್, ಮಂಜು ವಾರಿಯರ್, ಸಾನಿಯಾ ಅಯ್ಯಪ್ಪನ್, ಸಾಯಿ ಕುಮಾರ್ ಮತ್ತು ಬೈಜು ಸಂತೋಷ್ ತಾರಾಬಳಗದಲ್ಲಿದ್ದಾರೆ.

Categories
ಸಿನಿ ಸುದ್ದಿ

ಇನ್ ದಿ ನೈಟ್’ ಫೈರ್ ಫ್ಲೈ ಮೆಲೋಡಿ ಹಾಡು ರಿಲೀಸ್

ಫೈರ್ ಫ್ಲೈ’ ಸಿನಿಮಾದ ಮೊದಲ ಹಾಡು ರಿಲೀಸ್…ಇನ್ ದಿ‌ ನೈಟ್ ಎನ್ನುತ್ತಾ ಹೆಜ್ಜೆ ಹಾಕಿದ ವಂಶಿ-ರಚನಾ

ಶ್ರೀ ಮುತ್ತು ಸಿನಿ ಸರ್ವೀಸಸ್ ಅಂಡ್ ಪ್ರೊಡಕ್ಷನ್ ಬ್ಯಾನರ್ ಮೂಲಕ ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಚೊಚ್ಚಲ ಸಿನಿಮಾ ಫೈರ್ ಫ್ಲೈ ಈಗಾಗಲೇ ನಾನಾ ವಿಷಯಗಳಿಂದ ಸುದ್ದಿಯಲ್ಲಿದೆ. ಪೋಸ್ಟರ್, ಟೀಸರ್ ನಿಂದಲೇ ಕುತೂಹಲ ಹೆಚ್ಚಿಸಿರುವ ಈ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ.

ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ಇನ್ ದಿ ನೈಟ್ ಎಂಬ ಮೆಲೋಡಿ ಗೀತೆಯನ್ನು ಅನಾವರಣ ಮಾಡಲಾಗಿದೆ. ಧನಂಜಯ್ ರಂಜನ್ ಸಾಹಿತ್ಯ ಬರೆದಿರುವ ಗೀತೆಗ ಸಾಹಿತ್ಯ ಬರೆದಿದ್ದು, ಕಪಿಲ್ ಕಪಿಲನ್ ಧ್ವನಿಯಾಗಿದ್ದಾರೆ. ಚರಣ್ ರಾಜ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಇನ್ ದಿ ನೈಟ್ ಎನ್ನುತ್ತಾ ವಂಶಿ ಹಾಗೂ ರಚನಾ ಹೆಜ್ಜೆ ಹಾಕಿದ್ದಾರೆ.

ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಸಿನಿಮಾದಲ್ಲಿ ವಂಶಿ ಹೀರೋ ಜೊತೆ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಉಳಿದಂತೆ, ಅಚ್ಯುತ್ ಕುಮಾರ್, ಸುಧಾರಾಣಿ, ರಚನಾ ಇಂದರ್, ಶೀತಲ್ ಶೆಟ್ಟಿ, ಆನಂದ್ ನೀನಾಸಂ, ಚಿತ್ಕಳಾ ಬಿರಾದರ್, ಮೂಗು ಸುರೇಶ್ ಮುಂತಾದವರು ನಟಿಸಿದ್ದಾರೆ.

ಈ ಚಿತ್ರದ ಹಾಡುಗಳಿಗೆ ಚರಣ್ ರಾಜ್ ಅವರು ಸಂಗೀತ ನೀಡಿದ್ದಾರೆ. ರಘು ನಿಡುವಳ್ಳಿ ಅವರ ಸಂಭಾಷಣೆ ಈ ಸಿನಿಮಾಕ್ಕಿದೆ. ಅಭಿಲಾಷ್ ಕಳತ್ತಿ ಕ್ಯಾಮೆರಾ ಚಿತ್ರಕ್ಕಿದೆ. ವರನಟ ಡಾ. ರಾಜ್‌ಕುಮಾರ್ ಅವರ ಹುಟ್ಟುಹಬ್ಬದಂದೇ ನಿವೇದಿತಾ ನಿರ್ಮಾಣದ ಮೊದಲ ಸಿನಿಮಾ ತೆರೆಕಾಣುತ್ತಿದೆ.

Categories
ಸಿನಿ ಸುದ್ದಿ

ಮನದ ಕಡಲು ಜನ ಕಾಯುತ್ತಿರಲು!

.

ಇ.ಕೆ.ಎಂಟರ್ ಟೈನರ್ಸ್ ಲಾಂಛನದಲ್ಲಿ ಇ.ಕೃಷ್ಣಪ್ಪ ಅವರು ನಿರ್ಮಿಸಿ, ಯೋಗರಾಜ್ ಭಟ್ ನಿರ್ದೇಶಿಸಿದ್ದ ಯಶಸ್ವಿ “ಮುಂಗಾರು ಮಳೆ” ಚಿತ್ರದ ನಂತರ ಇದೇ ಕಾಂಬಿನೇಷನ್ ನಲ್ಲಿ ಮೂಡಿಬಂದಿರುವ “ಮನದ ಕಡಲು” ಚಿತ್ರ ಈ ವಾರ ರಾಜ್ಯಾದ್ಯಂತ (ಮಾರ್ಚ್ 28) ಬಿಡುಗಡೆಯಾಗುತ್ತಿದೆ.

ಜಿ.ಗಂಗಾಧರ್ ಅವರ ಸಹ ನಿರ್ಮಾಣ ಹಾಗೂ ಪ್ರತಾಪ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿರುವ ಈ ಚಿತ್ರ ಈಗಾಗಲೇ ಟೀಸರ್,‌ ಟ್ರೇಲರ್ ಹಾಗೂ ಹಾಡುಗಳ ಮೂಲಕ ಪ್ರೇಕ್ಷಕರ ಮನ ಗೆದ್ದಿದೆ. ನಾಯಕನಾಗಿ ಸುಮುಖ ಅಭಿನಯಿಸಿದ್ದಾರೆ. ನಾಯಕಿಯರಾಗಿ ರಾಶಿಕಾ ಶೆಟ್ಟಿ ಹಾಗೂ ಅಂಜಲಿ ಅನೀಶ್ ನಟಿಸಿದ್ದಾರೆ. ರಂಗಾಯಣ ರಘು, ದತ್ತಣ್ಣ, ಶಿವಧ್ವಜ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ವಿ.ಹರಿಕೃಷ್ಣ ಸಂಗೀತ ಸಂಯೋಜಿಸಿರುವ ಈ ಚಿತ್ರದ ಹಾಡುಗಳನ್ನು ಜಯಂತ ಕಾಯ್ಕಿಣಿ, ಯೋಗರಾಜ್ ಭಟ್ ಬರೆದಿದ್ದಾರೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಶಿವಕುಮಾರ್ ಕಲಾ‌ ನಿರ್ದೇಶನ, ವಿನೋದ್ ಹಾಗೂ ಕೌರವ ವೆಂಕಟೇಶ್ ಸಾಹಸ ನಿರ್ದೇಶನ ಮತ್ತು ಮುರಳಿ, ಕಂಬಿ ರಾಜು , ಗೀತಾ ಸಾಯಿ ಅವರ ನೃತ್ಯ ನಿರ್ದೇಶನವಿರುವ “ಮನದ ಕಡಲು” ಚಿತ್ರಕ್ಕೆ ಯೋಗರಾಜ್ ಭಟ್, ಗಡ್ಡ ವಿಜಿ ಹಾಗೂ ಅಮೋಲ್ ಪಾಟೀಲ್ ಚಿತ್ರಕಥೆ ಬರೆದಿದ್ದಾರೆ.
.

Categories
ಸಿನಿ ಸುದ್ದಿ

ರಾಜಸ್ಥಾನದಲ್ಲಿ ಡೆವಿಲ್

ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸುತ್ತಿರುವ ಬಹು ನಿರೀಕ್ಷಿತ “ದಿ ಡೆವಿಲ್” ಚಿತ್ರದ ಚಿತ್ರೀಕರಣ ರಾಜಸ್ಥಾನದಲ್ಲಿ ಬಿರುಸಿನಿಂದ ಸಾಗಿದೆ. ಮಾತಿನ ಭಾಗದ ಚಿತ್ರೀಕರಣ ನಡೆಯುತ್ತಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್, ರಚನ ರೈ, ಮಹೇಶ್ ಮಂಜ್ರೇಕರ್, ಅಚ್ಯುತಕುಮಾರ್ ಮುಂತಾದ ಕಲಾವಿದರು ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.

ಸುಧಾಕರ್.ಎಸ್.ರಾಜ್ ಅವರ ಛಾಯಾಗ್ರಹಣವಿರುವ “ದಿ ಡೆವಿಲ್” ಚಿತ್ರಕ್ಕೆ ಬಿ.ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಮೋಹನ್ ಬಿ ಕೆರೆ ಕಲಾ ನಿರ್ದೇಶನ ಹಾಗೂ ರಾಮ್ ಲಕ್ಷ್ಮಣ್ ಅವರ ಸಾಹಸ ನಿರ್ದೇಶನವಿದೆ.

ದರ್ಶನ್ ಅವರಿಗೆ ನಾಯಕಿಯಾಗಿ ರಚನ ರೈ ಅಭಿನಯಿಸುತ್ತಿದ್ದಾರೆ. ತುಳಸಿ,‌ ಅಚ್ಯುತಕುಮಾರ್, ಮಹೇಶ್ ಮಂಜ್ರೇಕರ್, ಶ್ರೀನಿವಾಸಪ್ರಭು , ಶೋಭ್ ರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Categories
ಸಿನಿ ಸುದ್ದಿ

ಮಲೆನಾಡಲ್ಲಿ ಪದವೇ ಹಾಡಿನ ತುಂತುರು: ಪ್ರೇಮಗೀತೆ ಹಾಡಿದ ಆದರ್ಶ ಅಯ್ಯಂಗಾರ್

ಇಷ್ಟಕಾಮ್ಯ ಕೇಶವ ಪ್ರೊಡಕ್ಷನ್ಸ್ ಮತ್ತು ಸಿನಿಮ್ಯಾಟಿಕ್ಸ್ ಬ್ಯಾನರಿನ ಅಡಿಯಲ್ಲಿ ಆದರ್ಶ್ ಅಯ್ಯಂಗಾರ್ ಅವರು ನಿರ್ಮಿಸಿ ಅವರೆ ಹಾಡಿರುವ ’ಪದವೇ’ ಎಂಬ ಹಾಡು ’ಆದರ್ಶ್ ಅಯ್ಯಂಗಾರ್’ ಯೂಟ್ಯೂಬ್ ಚಾನಲಿನಲ್ಲಿ ಬಿಡುಗಡೆಯಾಗಿದೆ. ಇದು ಆದರ್ಶ್ ಅಯ್ಯಂಗಾರ್ ಅವರು ತಮ್ಮ ಬ್ಯಾನರ್ ಮೂಲಕ ಹೊರ ತರುತ್ತಿರುವ ಏಳನೇ ವಿಡಿಯೋ ಹಾಡಾಗಿದ್ದು ಅವರ ನಿರ್ಮಾಣದ “ತಿಮ್ಮನ ಮೊಟ್ಟೆಗಳು” ಚಿತ್ರ ಕೂಡ ಬಿಡುಗಡೆಗೆ ಸಿದ್ಧವಾಗಿದೆ.


ಸುಂದರ ತಾಣಗಳಲ್ಲಿ ಚಿತ್ರೀಕರಿಸಿರುವ ಹಾಡಿಗೆ ಹೇಮಂತ್ ಜೋಯಿಸ್ ಸಂಗೀತ ನೀಡಿದ್ದು ರಕ್ಷಿತ್ ತೀರ್ಥಹಳ್ಳಿ ಸಾಹಿತ್ಯ ಬರೆದು ನಿರ್ದೇಶನ ಮಾಡಿದ್ದಾರೆ. ಕಿರಿಕ್ ಪಾರ್ಟಿ ಚಿತ್ರದಲ್ಲಿ ನಟಿಸಿದ್ದ ಶಂಕರಮೂರ್ತಿ ಈ ಹಾಡಿನಲ್ಲಿ ಒಂದೊಳ್ಳೆ ಪಾತ್ರ ನಿರ್ವಹಿಸಿದ್ದಾರೆ. ಅವರ ಜೊತೆಗೆ ಆದರ್ಶ್ ಅಯ್ಯಂಗಾರ್ ಹಾಗೂ ಹೊಸ ಪ್ರತಿಭೆ ಸಂದೀಪ್ ಕುಂದಾದ್ರಿ ಪ್ರಮುಖ ಪಾತ್ರದಲ್ಲಿದ್ದಾರೆ. ಉಳಿದಂತೆ ಸಮೀರ್ ನಗರದ್, ನೇಹಾ ಶಾಂತವೇರಿ, ಅರ್ಚನ ಎಸ್ ಎಚ್, ಅನಂತ್ ಭಟ್ ಹೊದಲ ಮುಂತಾದವರು ತಮ್ಮ ಪಾತ್ರಗಳಿಗೆ ಜೀವ ತುಂಬಿದ್ದಾರೆ. ಪ್ರಶಾಂತ್ ಸಾಗರ ಅವರ ಕ್ಯಾಮರ ಕೆಲಸ ಕಣ್ಣಿಗೆ ಮುದ ನೀಡುತ್ತದೆ. ಸುಧೀರ್ ಎಸ್ ಜೆ ಸಂಕಲನ ಅಚ್ಚುಕಟ್ಟಾಗಿದೆ.

ಬರಹಗಾರನೊಬ್ಬ ತನ್ನ ಕಥೆ ಹುಡುಕಾಟದಲ್ಲಿ ಎರಡು ಪಾತ್ರಗಳೊಡನೆ ಮಲೆನಾಡಿನ ಪುಟ್ಟ ಪರಿಸರದಲ್ಲಿ ಸಂಚರಿಸುವುದರ ಸುತ್ತಾ ಹಾಡು ಸಾಗುತ್ತದೆ. ಎರಡು ಭಿನ್ನ ಪ್ರೇಮಕಥೆಗಳನ್ನು ನಿನಿಮ್ಯಾಟಿಕ್ ಆಗಿ ತೋರಿಸಲಾಗಿದೆ. ಕಥೆ ಸಾಗುತ್ತಾ ಬರಹಗಾರ ಆ ಕಥೆಗಳಿಗೆ ಯಾವ ಅಂತ್ಯ ಕೊಡುತ್ತಾನೆ ಎಂಬುವುದರೊಂದಿಗೆ ಹಾಡು ಕೊನೆಗೊಳ್ಳುತ್ತದೆ.

Categories
ಸಿನಿ ಸುದ್ದಿ

ಮನದ ಕಡಲಿಗೆ ರಾಕಿಭಾಯ್ ಹಾರೈಕೆ: ಟ್ರೇಲರ್ ರಿಲೀಸ್ ಮಾಡಿದ ಯಶ್

ಇ.ಕೆ. ಎಂಟರ್ ಟೈನರ್ಸ್ ಲಾಂಛನದಲ್ಲಿ ಈ.ಕೃಷ್ಣಪ್ಪ ಅವರು ನಿರ್ಮಿಸಿ, ಯೋಗರಾಜ್ ಭಟ್ ನಿರ್ದೇಶಿಸಿದ್ದ ಯಶಸ್ವಿ “ಮುಂಗಾರು ಮಳೆ” ಚಿತ್ರದ ನಂತರ ಇದೇ ಕಾಂಬಿನೇಷನ್ ನಲ್ಲಿ ಮೂಡಿಬಂದಿರುವ ಚಿತ್ರ “ಮನದ ಕಡಲು”.

ಇತ್ತೀಚೆಗೆ ಬಹು ನಿರೀಕ್ಷಿತ ಈ ಚಿತ್ರದ ಟ್ರೇಲರ್ ಅನ್ನು ರಾಕಿಂಗ್ ಸ್ಟಾರ್ ಯಶ್ ಬಿಡುಗಡೆ ಮಾಡಿದರು. ಕಳೆದ ನಾಲ್ಕು ವರ್ಷಗಳಿಂದ ಯಶ್ ಅವರು ಯಾವುದೇ ಸಿನಿಮಾ ಸಮಾರಂಭಗಳಲ್ಲಿ ಪಾಲ್ಗೊಂಡಿರಲಿಲ್ಲ‌. ಬಹಳ ದಿನಗಳ ನಂತರ ಯಶ್ ಅವರು ಪಾಲ್ಗೊಂಡಿದ್ದ ಸಿನಿಮಾ ಸಮಾರಂಭವಿದು. ಲುಲು ಮಾಲ್ ನ ಹೊರಂಗಣದಲ್ಲಿ ನಡೆದ “ಮನದ ಕಡಲು” ಟ್ರೇಲರ್ ಸಮಾರಂಭಕ್ಕೆ ಯಶ್ ಅವರು ಬರುವುದನ್ನು ತಿಳಿದ ಅಭಿಮಾನಿಗಳು ಮನೆಮಂದಿ ಸಹಿತ ಮಧ್ಯಾಹ್ನದಿಂದಲೇ ಮಾಲ್ ಬಳಿ‌ ಜಮಾಯಿಸಿದ್ದರು. ಕಣ್ಣು ಹಾಯಿಸಿದಷ್ಟು “ಜನರ ಕಡಲು” ಅಲ್ಲಿತ್ತು‌. ವರ್ಣರಂಜಿತ ಸಮಾರಂಭದಲ್ಲಿ ಟ್ರೇಲರ್ ಬಿಡುಗಡೆ ಮಾಡಿದ ಯಶ್, ನಂತರ ತಮ್ಮ ಮಾತುಗಳ ಮೂಲಕ ಚಿತ್ರತಂಡಕ್ಕೆ ಹಾರೈಸಿದರು

ನಾನು ಈ ಸಮಾರಂಭಕ್ಕೆ ಬರಲು ಮೊದಲ ಕಾರಣ‌ ನಿರ್ಮಾಪಕ ಈ ಕೃಷ್ಣಪ್ಪ ಅವರು ಎಂದು ಮಾತನಾಡಿದ ಯಶ್, ಕೃಷ್ಣಪ್ಪ ಅವರು ನನಗೆ “ಮೊಗ್ಗಿನ ಮನಸ್ಸು” ಚಿತ್ರದಲ್ಲಿ ನಟಿಸಲು ಅವಕಾಶ ನೀಡದೆ ಇದ್ದಿದ್ದರೆ ನಾನು ಇಂದು ನಾಯಕನಾಗುತ್ತಿರಲ್ಲಿಲ್ಲ. ನನ್ನ ಮೊದಲ ಚಿತ್ರದ ನಿರ್ಮಾಪಕರು ಅವರು. ನಿರ್ದೇಶಕ ಯೋಗರಾಜ್ ಭಟ್, ಸಂಗೀತ ನಿರ್ದೇಶಕ ವಿ.ಹರಿಕೃಷ್ಣ, ಸಹ ನಿರ್ಮಾಪಕ ಗಂಗಾಧರ್ ಹೀಗೆ ಇಲ್ಲಿರುವ ಬಹುತೇಕರು ನನ್ನ ಬೆಳವಣಿಗೆಗೆ ಶ್ರಮ ಪಟ್ಟಿದ್ದಾರೆ. “ಮನದ ಕಡಲು” ಟ್ರೇಲರ್ ಚೆನ್ನಾಗಿದೆ. ಎಲ್ಲರೂ ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಿ. ಕನ್ನಡದಲ್ಲಿ ಹೊಸ ಪ್ರತಿಭೆಗಳು ಬರಬೇಕು. ನಾವು ಯಾರಿಗೂ ಕಡಿಮೆ ಇಲ್ಲದಂತೆ ಬೆಳೆಯಬೇಕು. ಒಳ್ಳೆಯ ಚಿತ್ರಗಳನ್ನು ಕನ್ನಡಿಗರು ಎಂದಿಗೂ ಕೈ ಬಿಡುವುದಿಲ್ಲ ಎಂದರು.

ಕಳೆದ‌ ನಾಲ್ಕು ವರ್ಷಗಳಿಂದ ಯಾವುದೇ ಸಿನಿಮಾ ಸಮಾರಂಭಕ್ಕೆ ಹೋಗದ ಯಶ್ ಅವರು ನಮ್ಮ ಸಮಾರಂಭಕ್ಕೆ ಬಂದು ಚಿತ್ರದ ಟ್ರೇಲರ್ ಬಿಡುಗಡೆ ಮಾಡಿಕೊಟ್ಟಿದ್ದು ಬಹಳ ಖುಷಿಯಾಗಿದೆ. ಅವರಿಗೆ ಧನ್ಯವಾದ ಎಂದರು ನಿರ್ಮಾಪಕ ಈ ಕೃಷ್ಣಪ್ಪ.

ಯಶ್ ಅವರ ಸ್ವಾಗತಕ್ಕೆ ವಿಶೇಷ ವಿಡಿಯೋ ತುಣುಕು ಸಿದ್ದಪಡಿಸಿದ್ದ ನಿರ್ದೇಶಕ ಯೋಗರಾಜ್ ಭಟ್ ಅವರು ವೇದಿಕೆಯ ಮೇಲೂ ತಮ್ಮ ಪ್ರೀತಿ‌ ತುಂಬಿದ ಮಾತುಗಳಿಂದ ಯಶ್ ಅವರನ್ನು ಆತ್ಮೀಯವಾಗಿ‌ ಸ್ವಾಗತಿಸಿ, ಟ್ರೇಲರ್ ಬಿಡುಗಡೆ ಮಾಡಿಕೊಟ್ಟಿದ್ದಕ್ಕೆ ಧನ್ಯವಾದ ತಿಳಿಸಿದರು. “ಮನದ ಕಡಲು” ಈ ತಿಂಗಳ 28 ರಿಂದ “ಜನರ ಕಡಲಾ”ಗಲಿದೆ. ಎಲ್ಲರೂ ನಮ್ಮ ಚಿತ್ರ ನೋಡಿ. ಪ್ರೋತ್ಸಾಹ ನೀಡಿ ಅಂತಲೂ ಯೋಗರಾಜ್ ಭಟ್ ಹೇಳಿದರು.

ನಾಯಕ ಸುಮುಖ, ನಾಯಕಿಯರಾದ ರಾಶಿಕಾ ಶೆಟ್ಟಿ, ಅಂಜಲಿ ಅನೀಶ್‌,‌ ಸಹ ನಿರ್ಮಾಪಕ ಜಿ.ಗಂಗಾಧರ್, ಕಾರ್ಯಕಾರಿ ನಿರ್ಮಾಪಕ ಪ್ರತಾಪ್, ಸಂಗೀತ ನಿರ್ದೇಶಕ ವಿ.ಹರಿಕೃಷ್ಣ, ನೃತ್ಯ ನಿರ್ದೇಶಕ ಮುರಳಿ ಮಾಸ್ಟರ್ ಹಾಗೂ ಛಾಯಾಗ್ರಾಹಕ ಸಂತೋಷ್ ರೈ ಪಾತಾಜೆ ಮುಂತಾದ ಚಿತ್ರತಂಡದ ಸದಸ್ಯರು “ಮನದ ಕಡಲಿ” ಬಗ್ಗೆ ಮಾತನಾಡಿ, ಯಶ್ ಅವರಿಗೆ ವಿಶೇಷ ಧನ್ಯವಾದ ಹೇಳಿದರು.

Categories
ಸಿನಿ ಸುದ್ದಿ

ಕರಳೆ ಎಂಬ ನೈಜತೆಯ ಭಿನ್ನ ಮಹಿಳಾ ಚಿತ್ರ: ರಿಲೀಸ್ ಆಯ್ತು ಫಸ್ಟ್ ಲುಕ್ ಪೋಸ್ಟರ್

ಈ ಹಿಂದೆ ಕಲಿವೀರ, ಕನ್ನಡದೇಶದೊಳ್ ಚಿತ್ರ ಮಾಡಿದ್ದ ನಿರ್ದೇಶಕ ಅವಿರಾಮ್ ಕಂಠೀರವ ಮತೊಮ್ಮೆ ವಿಭಿನ್ನ ಕಥಾ ಹಂದರ ಹೊಂದಿರುವ “ಕರಳೆ” ಎಂಬ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಇದು ನೈಜ ಘಟನೆ ಆಧಾರಿತ ಚಿತ್ರ, ಈಗಾಗಲೇ ಎರಡು ಹಂತದ ಚಿತ್ರೀಕರಣ ಪೂರ್ಣಗೊಳಿಸಿರುವ ಚಿತ್ರತಂಡ ಮೂರನೇ ಹಂತದ ಚಿತ್ರೀಕರಣಕ್ಕೆ ಸಜ್ಜಾಗಿದೆ.

ಇದು ಮಹಿಳಾ ಪ್ರಧಾನ ಚಿತ್ರವಾಗಿದ್ದು ಇತ್ತೀಚೆಗೆ ಚಿತ್ರದ ಮೊದಲ ಪೋಸ್ಟರ್ ಬಿಡುಗಡೆ ಗೊಳಿಸಿದೆ. ಪೋಸ್ಟರ್ ಸದ್ಯ ಮೆಚ್ಚುಗೆ ಗಳಿಸಿದೆ, ಚಿತ್ರದಲ್ಲಿ ಸಮಾಜದ ವಾಸ್ತವ ಅಂಶಗಳನ್ನೇ ಇಲ್ಲಿ ಚಿತ್ರೀಕರಿಸಲಾಗುತ್ತಿದೆ. ಎಮೋಷನಲ್, ರಾ, ಮನಕಲಕುವ ದೃಶ್ಯಗಳು ಚಿತ್ರದಲ್ಲಿ ಇರಲಿವೆ ಎಂದು ನಿರ್ದೇಶಕರ ಮಾತು. ಈಗಾಗಲೇ ಚಿಂತಾಮಣಿ, ಮದ್ದೂರು, ಹುಲಿರಾಯನದುರ್ಗ ಸೇರಿ ಹಲವು ಕಡೆ ಶೂಟಿಂಗ್ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.


ಕನ್ನಡ, ಚೈನೀಸ್ ಭಾಷೆಯಲ್ಲಿ ಸಿನಿಮಾ ಭಾರತ ಹಾಗೂ ಚೀನಾ ದೇಶಕ್ಕೆ ಸಾಮ್ಯತೆ ಹೊಂದಿರುವ ಕಥೆ ಇದಾಗಿದ್ದು, ಹೀಗಾಗಿ ಈ ಚಿತ್ರವನ್ನು ಕನ್ನಡ ಹಾಗೂ ಚೈನೀಸ್ ಭಾಷೆಯಲ್ಲಿ ತೆರೆಗೆ ತರಲು ನಿರ್ದೇಶಕ ಅವಿರಾಮ್ ಕಂಠೀರವ ಸಿದ್ಧತೆ ನೆಡೆಸುತ್ತಿದ್ದಾರೆ, ಎರಡು ದೇಶಗಳಲ್ಲಿ ನೆಡೆಯುವ ಘಟನೆಗಳಿಗೆ ಸಾಮ್ಯತೆ ಇರುವ ಕಾರಣ ಕನ್ನಡ ಚೈನೀಸ್ ಭಾಷೆಯಲ್ಲಿ ಸಿನಿಮಾ ನಿರ್ಮಿಸುತ್ತಿದ್ದೇವೆ,

ಕನ್ನಡ ಜೊತೆಗೆ ನೆರೆ ರಾಷ್ಟ್ರ ಚೈನಾದ ಚೈನೀಸ್ ಭಾಷೆಯಲ್ಲಿ ತಯಾರಾಗುತ್ತಿರುವ ಮೊದಲ ಭಾರತದ ಸಿನಿಮಾ ಎಂಬ ಹೆಗ್ಗಳಿಕೆ “ಕರಳೆ” ಚಿತ್ರಕ್ಕಿದೆ. ಡಾರ್ಕ್ ಶೇಡ್ ನಲ್ಲಿ ಮೇಕಿಂಗ್ ಮಾಡಲಾಗುತ್ತಿದೆ. ಈಗಾಗಲೇ 52 ದಿನಗಳ ಚಿತ್ರೀಕರಣ ಪೂರ್ಣಗೊಳಿಸಲಾಗಿದೆ, ಇನ್ನು 20 ದಿನಗಳ ಶೂಟಿಂಗ್ ಬಾಕಿಯಿದೆ, ಚಿತ್ರೀಕರಣ ಪೂರ್ಣಗೊಳಿಸಿ ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಮುಂದಕ್ಕೆ ನೀಡುತ್ತೇವೆ ಎಂದು ನಿರ್ದೇಶಕ ಅವಿರಾಮ್ ಹೇಳುತ್ತಾರೆ.

Categories
ಸಿನಿ ಸುದ್ದಿ

ಉಪ್ಪಿ ಅಣ್ಣನ ಮಗ ಈಗ ಜರ್ನಲಿಸ್ಟ್: ಹೊಸ ಸ್ಪಾರ್ಕ್ ಗೆ ರೆಡಿ

ನಿರ್ದೇಶನದ ಅಖಾಡಕ್ಕೆ ಜೇಮ್ಸ್ ಕೋ-ಡೈರೆಕ್ಟರ್…ಮಹಾಂತೇಶ್ ಹಂದ್ರಾಳ್ ಜೊತೆ ನಿರಂಜನ್ ಸುಧೀಂದ್ರ ಹೊಸ ಸಿನಿಮಾ

ಸ್ಯಾಂಡಲ್‌ವುಡ್‌ನ ಭರವಸೆಯ ನಾಯಕ ನಟರಾಗುವ ನಿರೀಕ್ಷೆ ಹುಟ್ಟಿಸಿರುವ ಉಪ್ಪಿ ಅವರ ಸಹೋದರನ ಪುತ್ರ ನಿರಂಜನ್‌ ಸುಧೀಂದ್ರ ಹೊಸ ಸಿನಿಮಾ ಸ್ಪಾರ್ಕ್.
ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿರುವ ಶ್ರೀ ಪ್ರಸನ್ನ ವೀರಾಂಜನೇಯ ಸ್ವಾಮಿ ದೇಗುಲದಲ್ಲಿಂದು ಚಿತ್ರದ‌ ಮುಹೂರ್ತ ನೆರವೇರಿದೆ. ಸ್ಪಾರ್ಕ್ ಚಿತ್ರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ, ಎಂಎಲ್ ಸಿ ಆಗಿರುವ ಚನ್ನರಾಜ್ ಹಟ್ಟಿಹೊಳಿ ಕ್ಲ್ಯಾಪ್ ಮಾಡಿದರು. ಉದ್ಯಮಿ ಅಂಕಿತಾ ವಸಿಷ್ಠ ಕ್ಯಾಮೆರಾಗೆ ಚಾಲನೆ ಕೊಟ್ಟರು. ಡಾರ್ಲಿಂಗ್ ಕೃಷ್ಣ ,‌ ಮಿಲನಾ ನಾಗರಾಜ್ ಹಾಗೂ ನವೀನ್ ಶಂಕರ್ ವಿಶೇಷ ಅತಿಥಿಯಾಗಿ ಆಗಮಿಸಿ ಇಡೀ ಚಿತ್ರತಂಡಕ್ಕೆ ಶುಭಾಶಯ ತಿಳಿಸಿದರು.

ಬಳಿಕ ನಿರ್ದೇಶಕರಾದ ಮಹಾಂತೇಶ್ ಹಂದ್ರಾಳ್ ಮಾತನಾಡಿ, ಸ್ಪಾರ್ಕ್ ನನ್ನ ಮೊದಲ ಸಿನಿಮಾ. ಇದೇ ತಿಂಗಳಾಂತ್ಯಕ್ಕೆ ಶೂಟಿಂಗ್ ಹೋಗುತ್ತಿದ್ದೇವೆ. ಬಹುತೇಕ ಶೂಟಿಂಗ್ ಬೆಂಗಳೂರಿನಲ್ಲಿಯೇ ಇರುತ್ತದೆ ಎಂದರು.

ನಟ ನಿರಂಜನ್ ಸುಧೀಂದ್ರ ಮಾತನಾಡಿ, ಈ ಸಿನಿಮಾಗಾಗಿ ಮಹಾಂತೇಶ್ ಒಂದು ಅದ್ಭುತ ಕಥೆ ಬರೆದಿದ್ದಾರೆ. ಸ್ಪಾರ್ಕ್ ಅಂದರೆ ಪ್ರೆಸ್. ಅವರಿಗೆ ಇರುವ ಸ್ಪಾರ್ಕ್ ಇನ್ಯಾರಿಗೂ ಇರುವುದಿಲ್ಲ. ಯಾವುದೇ ವಿಷಯದ ಬಗ್ಗೆ ಮೊದಲು ಕಿಡಿ ಹತ್ತಿಸುವವರು ಅವರೇ. ನಮ್ಮ ಕಥೆಯಲ್ಲಿ ಚಿಕ್ಕ ಕಿಡಿ ಇದೆ. ಅದನ್ನು ಸ್ಪಾರ್ಕ್ ಚಿತ್ರದ ಮೂಲಕ ಅದ್ಭುತವಾಗಿ ಹೇಳಲು ಹೊರಟ್ಟಿದ್ದಾರೆ. ಸಿನಿಮಾದಲ್ಲಿ ನಾನು ಅಭಿರಾಮ್ ಎಂಬ ಜರ್ನಲಿಸ್ಟ್ ಪಾತ್ರ ಮಾಡುತ್ತಿದ್ದೇನೆ. ಈ ಚಿತ್ರಕ್ಕೆ ಇಬ್ಬರು ನಿರ್ಮಾಪಕರು ಸಾಥ್ ಕೊಟ್ಟಿದ್ದಾರೆ. ಸ್ಪಾರ್ಕ್ ಸಿನಿಮಾದ ಭಾಗವಾಗುತ್ತಿರುವುದು ಖುಷಿ ಕೊಟ್ಟಿದೆ ಎಂದರು.

ನಿರ್ಮಾಪಕಿ ಗರಿಮಾ ಮಾತನಾಡಿ, ನನ್ನ ಕನಸು ನನಸಾಗಿದೆ. ಬಹಳ ಖುಷಿಯಾಗುತ್ತಿದೆ. ನಾನು ಮ್ಯೂಸಿಕ್ ಆಲ್ಬಂ ಮಾಡಬೇಕು ಎಂದುಕೊಂಡಿದ್ದೇನೆ ಎಂದಾಗ ನನ್ನ ಕುಟುಂಬ ಸಿನಿಮಾ ಮಾಡೋಲ್ವಾ ಎಂದರು. ಇಂದು ನನ್ನ ಕುಟುಂಬದ ಬೆಂಬಲದಿಂದ ನಾನು ಇವತ್ತು ಮೊದಲ ಚಿತ್ರ ಮಾಡುತ್ತಿದ್ದೇನೆ. ಒಂದೊಳ್ಳೆ ತಂಡದ ಜೊತೆ ಕೆಲಸ ಮಾಡುತ್ತಿರುವುದು ಖುಷಿ ಕೊಟ್ಟಿದೆ ಎಂದು ಸಂತಸ ಹಂಚಿಕೊಂಡರು.

ಜೇಮ್ಸ್, ಭರಾಟೆ, ಕನಕ ಸೇರಿದಂತೆ 15ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕೋ ಡೈರೆಕ್ಟರ್ ಆಗಿ ದುಡಿದಿರುವ ಡಿ.ಮಹಾಂತೇಶ್ ಹಂದ್ರಾಳ್ ಡೈರೆಕ್ಟರ್ ಕುರ್ಚಿ ಅಲಂಕರಿಸುತ್ತಿದ್ದಾರೆ. ಚೇತನ್ ಕುಮಾರ್, ಆರ್.ಚಂದ್ರು ಅವರ ಗರಡಿಯಲ್ಲಿ ನಿರ್ದೇಶನದ ಪಟುಗಳನ್ನು ಕಲಿತಿರುವ ಮಹಾಂತೇಶ್ ಈಗ ಪೂರ್ಣ ಪ್ರಮಾಣದ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಅವರ ಚೊಚ್ಚಲ ಪ್ರಯತ್ನದಲ್ಲಿ ನಾಯಕನಾಗಿ ನಿರಂಜನ್ ಸುಧೀಂದ್ರ ಅಭಿನಯಿಸುತ್ತಿದ್ದಾರೆ.

ಡಿ.ಮಹಾಂತೇಶ್ ಹಂದ್ರಾಳ್ ಆಕ್ಷನ್ ಥ್ರಿಲ್ಲರ್ ಕಥೆಯನ್ನು ಎಣೆದಿದ್ದಾರೆ. ನೈಜ ಘಟನೆಯಿಂದ ಸ್ಫೂರ್ತಿ ಪಡೆದಿರುವ ಈ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಹೊಸ ನಿರ್ಮಾಪಕರ ಆಗಮನವಾಗುತ್ತಿದೆ. ಮಹಾಂತೇಶ್ ವಿಷನ್ ಗೆ ಡಾ.ಗರಿಮಾ ಅವಿನಾಶ್ ವಸಿಷ್ಠ ಸಾಥ್ ಕೊಡುತ್ತಿದ್ದಾರೆ. ಸಾಫ್ಟ್‌ವೇರ್ ಉದ್ಯೋಗಿಯಾಗಿರುವ ಅವಿನಾಶ್, ಗರಿಮಾ ಅವಿನಾಶ್ ಪ್ರೊಡಕ್ಷನ್ ಎಂಬ ನಿರ್ಮಾಣ ಸಂಸ್ಥೆ ಪ್ರಾರಂಭಿಸಿದ್ದಾರೆ. ಈ ನಿರ್ಮಾಣ ಸಂಸ್ಥೆ ಪ್ರಪ್ರಥಮ ಸಿನಿಮಾವನ್ನು ನಿರಂಜನ್ ಸುಧೀಂದ್ರಗೆ ಮಾಡುತ್ತಿದ್ದಾರೆ. ನಾಯಕಿಯಾಗಿ ರಚನಾ ಇಂದರ್ ಸಾಥ್ ಕೊಡುತ್ತಿದ್ದಾರೆ.

ಇನ್ನು, ಅನುಭವಿ ತಾಂತ್ರಿಕ ವರ್ಗ ಚಿತ್ರದಲ್ಲಿದೆ. ಅಶ್ವಿನ್ ಕೆನಡಿ ಛಾಯಾಗ್ರಹಣ, ಸಚಿನ್ ಬಸ್ರೂರ್ ಸಂಗೀತ‌ ನಿರ್ದೇಶನ, ಮಧು ಸಂಕಲನ ಈ ಚಿತ್ರಕ್ಕಿದೆ. ಈ ತಿಂಗಳಾಂತ್ಯಕ್ಕೆ ಚಿತ್ರತಂಡ ಶೂಟಿಂಗ್ ಅಖಾಡಕ್ಕೆ ಇಳಿಯಲಿದ್ದು , ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

Categories
ಸಿನಿ ಸುದ್ದಿ

ಕನ್ನಡಕ್ಕೆ ಬಂದ ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್: ಸುಜಯ್ ಶಾಸ್ತ್ರಿ ನಿರ್ದೇಶನದ 8 ಕ್ಕೆ ಎಂಟ್ರಿ

ದಕ್ಷಿಣ ಸಿನಿರಂಗದತ್ತ ಬಾಲಿವುಡ್ ತಾರಾದಂಡು ಒಬ್ಬೊಬ್ಬರಾಗಿ ಹೆಜ್ಜೆ ಹಾಕುತ್ತಿರುವುದು ಹೊಸ ವಿಷಯವಲ್ಲ. ಈಗಾಗಲೇ ಅನೇಕ ಸಿನಿಮೇಕರ್ಸ್, ಸ್ಟಾರ್ಸ್ ಕಾಲಿವುಡ್, ಸ್ಯಾಂಡಲ್ ವುಡ್, ಟಾಲಿವುಡ್ ನಲ್ಲಿ ಧೂಳ್ ಎಬ್ಬಿಸುತ್ತಿದ್ದಾರೆ. ಇದೀಗ ಹೊಸ ಸೇರ್ಪಡೆ ಬಾಲಿವುಡ್ ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್.

ಅನುರಾಗ್ ಕಶ್ಯಪ್ ದಕ್ಷಿಣದ ಕಡೆಗೆ ಬಂದಾಗಿದೆ. ತಮಿಳಿನ ಮಹಾರಾಜ ಚಿತ್ರದಲ್ಲಿ ಅದ್ಭುತ ಪಾತ್ರದಲ್ಲಿ ಗಮನಸೆಳೆದಿದ್ದಾರೆ. ಈ ಮೂಲಕ ತಮಿಳು ಪ್ರೇಕ್ಷಕರನ್ನ ರಂಜಿಸಿದ್ದಾರೆ. ತೆಲುಗಿನ ಡಕಾಯಿತ್ ಚಿತ್ರದಲ್ಲಿ ಕಪಟ ಪೊಲೀಸ್ ಆಫೀಸರ್ ನಟಿಸಿರುವ ಅವರೀಗ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹಾಸ್ಯ ನಟ-ನಿರ್ದೇಶಕ ಸುಜಯ್ ಶಾಸ್ತ್ರಿ ಈ ಚಿತ್ರವನ್ನ ಡೈರೆಕ್ಷನ್ ಮಾಡುತ್ತಿದ್ದಾರೆ. ಈ ಮೂಲಕ ಒಂದು ಒಳ್ಳೆ ಕಥೆಯನ್ನ ಹೇಳುತ್ತಿದ್ದಾರೆ.

8 ಸಿನಿಮಾದ ಟೈಟಲ್ ಲಾಂಚ್ ಕಾರ್ಯಕ್ರಮ ಬೆಂಗಳೂರಿನಲ್ಲಿ ನಿನ್ನೆ ನಡೆಯಿತು. ಈ ವೇಳೆ ನಿರ್ದೇಶಕ ಕಂ ನಟ ಅನುರಾಗ್ ಕಶ್ಯಪ್ ಮಾತನಾಡಿ, ಇದೊಂದು ಎಮೋಷನಲ್ ಕಥೆ. ಜೀವನ ಎಲ್ಲರಿಗೂ ಎರಡನೇ ಅವಕಾಶ ನೀಡುತ್ತದೆ. ಈ ಚಿತ್ರ ಕೂಡ ಅದನ್ನೇ ಹೇಳುತ್ತದೆ. ಅರವಿಂದ್ ಹಾಗೂ ಸುಜಯ್ ಶಾಸ್ತ್ರೀಗೆ ಧನ್ಯವಾದ ಎಂದರು.

ಕನ್ನಡದ ‘8’ ಎಂಬ ಚಿತ್ರದಲ್ಲಿ ಅನುರಾಗ್ ಕಶ್ಯಪ್ ನಟಿಸುತ್ತಿದ್ದಾರೆ. ಹಾಸ್ಯನಟ ಸುಜಯ್ ಶಾಸ್ತ್ರೀ ಈ ಚಿತ್ರದ ಸಾರಥಿ. ಎವಿಆರ್ ಎಂಟರ್‌ಟೈನ್‌ಮೆಂಟ್ ಬ್ಯಾನರ್ ಅಡಿಯಲ್ಲಿ ಅರವಿಂದ್ ವೆಂಕಟೇಶ್ ರೆಡ್ಡಿ ಚಿತ್ರಕ್ಕೆ ಹಣ ಹೂಡುತ್ತಿದ್ದಾರೆ.ಫುಟ್‌ಬಾಲ್ ಆಟದ ಸುತ್ತ ನಡೆಯುವ ಕಥೆ ‘8’ ಚಿತ್ರದಲ್ಲಿದೆ.

AVR ಪ್ರೊಡಕ್ಷನ್ ಚೊಚ್ಚಲ ಸಿನಿಮಾ‌ 8

ಕನ್ನಡ ಚಿತ್ರರಂಗಕ್ಕೆ ಸದಾ ಅಭಿರುಚಿ ಸಿನಿಮಾಗಳನ್ನು ನೀಡುವ ಉದ್ದೇಶದಿಂದ ಶುರುವಾಗಿರುವ ಎವಿಆರ್ ಚೊಚ್ಚಲ ಕಾಣಿಕೆ 8. ಅರವಿಂದ್ ರೆಡ್ಡಿ ನಿರ್ಮಾಣದಲ್ಲಿ ಈ ಸಿನಿಮಾ‌ ಮೂಡಿ ಬರಲಿದೆ. ಈ ಚಿತ್ರದ ಜೊತೆಗೆ ಸಿಂಪಲ್ ಸುನಿ ಜೊತೆಗೂ ಎವಿಆರ್ ಕೈ ಜೋಡಿಸಿದೆ. ಬಿಗ್ ಬಾಸ್ ಖ್ಯಾತಿಯ ಮಹೇಶ್ ಕಾರ್ತಿಕ್ ನಾಯಕನಾಗಿ ನಟಿಸಲಿರುವ ಈ ಸಿನಿಮಾ ಈಗಾಗಲೇ ಘೋಷಣೆಯಾಗಿದೆ. ಸದ್ಯ 8 ಸಿನಿಮಾದ ಚಿತ್ರೀಕರಣ ಬೆಂಗಳೂರಿನಲ್ಲಿ ಭರದಿಂದ ಸಾಗುತ್ತಿದೆ.

error: Content is protected !!