Categories
ಸಿನಿ ಸುದ್ದಿ

ಅಂಕಿತಾ-ಆದಿತ್ಯ ಬರೆದ ಹೊಸ ಕಾಗದ: ಫಸ್ಟ್ ಲುಕ್ ರಿಲೀಸ್ ಮಾಡಿದ ಡಾರ್ಲಿಂಗ್ ಜೋಡಿ

ಈ ಹಿಂದೆ ಆ್ಯಪಲ್ ಕೇಕ್ ಎಂಬ ಸಿನಿಮಾ ನಿರ್ದೇಶಿಸಿದ್ದ ರಂಜಿತ್ ಕುಮಾರ್ ಗೌಡ ಎರಡನೇ ಹೆಜ್ಜೆ ಕಾಗದ. ಮದರಂಗಿ, ವಾಸ್ಕೋ ಡಿಗಾಮ ಸೇರಿದಂತೆ ಹಲವರು ಚಿತ್ರಗಳಲ್ಲಿ ಕೋ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದ ರಂಜಿತ್ ಆ್ಯಪಲ್ ಕೇಕ್ ಮೂಲಕ ನಿರ್ದೇಶಕರಾಗಿ ಭಡ್ತಿ ಪಡೆದಿದ್ದರು. ಈಗ ಅವರ ನಿರ್ದೇಶನದ ಎರಡನೇ ಸಿನಿಮಾ ಕಾಗದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಸ್ಯಾಂಡಲ್ ವುಡ್ ಕ್ಯೂಟ್ ಕಪಲ್ ಮಿಲನಾ ನಾಗರಾಜ್ ಹಾಗೂ ಡಾರ್ಲಿಂಗ್ ಕೃಷ್ಣ ಫಸ್ಟ್ ಲುಕ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭಾಶಯ ಕೋರಿದ್ದಾರೆ.

ಕಾಗದ ಸಿನಿಮಾ ಮೂಲಕ ಬಾಲನಟಿ ಅಂಕಿತಾ ನಾಯಕಿಯಾಗಿ, ಆದಿತ್ಯ ನಾಯಕನಾಗಿ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿದ್ದಾರೆ. ಮಫ್ತಿ ಖ್ಯಾತಿಯ ಬಾಲರಾಜವಾಡಿ, ನೇಹಾ ಪಾಟೀಲ್, ಶಿವಮಂಜು, ಅಶ್ವತ್ಥ್ ನೀನಾಸಂ, ಗೌತಮ್ ತಾರಾಬಳಗದಲ್ಲಿದ್ದಾರೆ. ಕಾಗದ ಪ್ರೇಮಕಥಾಹಂದರದ ಚಿತ್ರ. 2005ರ ಸಮಯದಲ್ಲಿ ನಡೆಯುವ ಕಾಲ್ಪನಿಕ ಕಥೆ. ಮೊಬೈಲ್ ಇಲ್ಲದ ಕಾಲಘಟ್ಟದಲ್ಲಿ ಕಾಗದ ಎಷ್ಟು ಮುಖ್ಯ ಪಾತ್ರ ವಹಿಸಿದೆ ಅನ್ನೋದು ಚಿತ್ರದ ಕಂಟೆಂಟ್.

ರಂಜಿತ್ ಕುಮಾರ್ ಗೌಡ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಕಾಗದ ಸಿನಿಮಾಗೆ ಅರುಣ್ ಕುಮಾರ್ ಎ ಬಂಡವಾಳ ಹೂಡಿದ್ದಾರೆ. ಅಮ್ಮ ಸಿನಿ ಕ್ರಿಯೇಷನ್ ನಡಿ ಸಿನಿಮಾ ಮೂಡಿ ಬರಲಿದ್ದು, ಇದೇ ನಿರ್ಮಾಣ ಸಂಸ್ಥೆಯಡಿ ಈ ಹಿಂದೆ ರಗಡ್ ಎಂಬ ಚಿತ್ರ ನಿರ್ಮಾಣವಾಗಿತ್ತು.

ಕಾಗದ ಸಿನಿಮಾದ ಬಹುತೇಕ ಶೂಟಿಂಗ್ ಮುಕ್ತಾಯಗೊಂಡಿದ್ದು, ಒಂದು ಹಾಡಿನ ಚಿತ್ರೀಕರಣವಷ್ಟೇ ಬಾಕಿ ಇದೆ. ವೀನಸ್ ನಾಗರಾಜ್ ಮೂರ್ತಿ ಛಾಯಾಗ್ರಹಣ, ಎಸ್ ಪ್ರದೀಪ್ ವರ್ಮಾ ಸಂಗೀತ, ಪವನ್ ಗೌಡ ಸಂಕಲನ, ಭೂಷಣ್ ಕೊರಿಯೋಗ್ರಫಿ ಸಿನಿಮಾಕ್ಕಿದೆ. ಬೇಲೂರು, ಮೂಡಿಗೆರೆ ಭಾಗದಲ್ಲಿ ಕಾಗದ ಸಿನಿಮಾದ ಚಿತ್ರೀಕರದ ಮಾಡಲಾಗಿದೆ.

Categories
ಸಿನಿ ಸುದ್ದಿ

ರಚಿತಾಗೆ ಸಂಜೆ ಮೇಲೆ ಸುಮ್ನೆ‌ ಫೋನ್ ಮಾಡ್ಲ ಅಂತಂದ ನೀನಾಸಂ ಸತೀಶ್ !

ನೀನಾಸಂ ಸತೀಶ್ ಹಾಗೂ ರಚಿತಾರಾಮ್ ಅಭಿನಯಿಸಿದ್ದ ಅಯೋಗ್ಯ ಚಿತ್ರದ “ಏನಮ್ಮಿ ಏನಮ್ಮಿ” ಹಾಡು ಸಖತ್ ಹಿಟ್ ಆಗಿತ್ತು. ಈಗಲೂ ಆ ಹಾಡು ಜನಪ್ರಿಯ. ಈಗ ಅವರಿಬ್ಬರ ಕಾಂಬಿನೇಶನ್ ನಲ್ಲಿ ಮೂಡಿಬಂದಿರುವ “ಮ್ಯಾಟ್ನಿ” ಚಿತ್ರದಿಂದ “ಸಂಜೆ ಮೇಲೆ ಸುಮ್ನೆ ಫೋನು ಮಾಡ್ಲ ನಿಂಗೆ ” ಎಂಬ ಹಾಡು ಇತ್ತೀಚೆಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಪೂರ್ಣಚಂದ್ರ ತೇಜಸ್ವಿ ಬರೆದು ಸಂಗೀತ ನೀಡಿರುವ ಹಾಗೂ ವಿಜಯ್ ಪ್ರಕಾಶ್ ಹಾಡಿರುವ ಈ ಹಾಡಿಗೂ ಮೆಚ್ಚುಗೆ ಸಿಗುತ್ತಿದೆ.

ಬಹಳ ಅದ್ಭುತವಾದ ಹಾಡು. ಕಲಾ ನಿರ್ದೇಶನ, ನೃತೃ ನಿರ್ದೇಶನ, ಛಾಯಾಗ್ರಹಣ ಎಲ್ಲವೂ ಚೆನ್ನಾಗಿದೆ ಎಂದು ಮಾತು ಪ್ರಾರಂಭಿಸಿದ ನೀನಾಸಂ ಸತೀಶ್, ನಾನೊಬ್ಬ ಪ್ರೇಕ್ಷಕನಾಗಿ ನೋಡಿದಾಗ ಈ ಹಾಡು ಬಹಳ ಚೆನ್ನಾಗಿದೆ ಎಂದೆನಿಸುತ್ತದೆ. ನನ್ನ ಕೆರಿಯರ್ ನಲ್ಲಿ ಇದು ಬೆಸ್ಟ್ ಸಾಂಗ್ ಇದು. ಸಂಗೀತ ನಿರ್ದೇಶಕ ಪೂರ್ಣಚಂದ್ರ ತೇಜಸ್ವಿ ಅವರಿಗೆ ಬಹಳ ತೊಂದರೆ ಕೊಟ್ಟಿದ್ದೇನೆ. ಅವರು ಅಷ್ಟೇ ಚೆನ್ನಾಗಿ ಹಾಡು ಮಾಡಿದ್ದಾರೆ. ಈ ಹಾಡನ್ನು ಮೊದಲು ಅವರೇ ಹಾಡಿದ್ದರು. ಎಲ್ಲರೂ ಇಷ್ಟಪಟ್ಟಿದ್ದರು. ಆದರೂ ಈ ಹಾಡನ್ನು ವಿಜಯಪ್ರಕಾಶ್ ಹಾಡಿದರೆ ಚೆನ್ನಾಗಿರುತ್ತದೆ ಎಂದೆನಿಸಿತು. ಅದಕ್ಕೆ ಪೂರ್ಣಚಂದ್ರ ಅವರು ಒಪ್ಪಿಕೊಂಡು ವಿಜಯಪ್ರಕಾಶ್ ಅವರಿಂದ ಹಾಡಿಸಿದ್ದಾರೆ.

ನಿರ್ದೇಶಕ ಮನೋಹರ್ ಅವರು ಕಥೆ ಹೇಳಿದಾಗ ತಕ್ಷಣ ಒಪ್ಪಿಕೊಂಡೆ. ಬಹಳ ಚೆನ್ನಾಗಿ ಕಥೆ ಮಾಡಿಕೊಂಡಿದ್ದಾರೆ. “ಅಯೋಗ್ಯ” ನಂತರ ನಾನು ಮತ್ತು ರಚಿತಾ ಒಟ್ಟಿಗೆ ಅಭಿನಯಿಸಿರುವ ಚಿತ್ರವಿದು. ಈ ಚಿತ್ರದ ಕಥೆ ಕೇಳಿದಾಗ, ಈ ಕಥೆಗೆ ರಚಿತಾ ರಾಮ್ ಅವರೇ ಸೂಕ್ತ ಅನಿಸಿತು. ನಂತರ ಮತ್ತೊಬ್ಬ ನಾಯಕಿಯಾಗಿ ಅದಿತಿ ಚಿತ್ರತಂಡ ಸೇರಿದರು. ಈಗಾಗಲೇ ರಚಿತಾ ರಾಮ್ ಅವರು ಈ ಚಿತ್ರದಲ್ಲಿದ್ದಾರೆ. ಒಬ್ಬರು ಇರುವಾಗ ಅದಿತಿ ಒಪ್ಪುತ್ತಾರಾ ಎಂಬ ಗೊಂದಲವಿತ್ತು. ಅವರು ಒಂದೇ ಮಾತಿಗೆ ಒಪ್ಪಿಕೊಂಡರು. ನಾಗಭೂಷಣ್, ಶಿವರಾಜ್ ಕೆ.ಆರ್. ಪೇಟೆ, ಪೂರ್ಣ ಎಲ್ಲರೂ ಸ್ನೇಹಿತರು. ಎಲ್ಲರೂ ಚೆನ್ನಾಗಿ ಮಾಡಿದ್ದಾರೆ. ಮುಂದೆ ನನ್ನ ಹಾಗೂ ಅದಿತಿ ಅವರ ಇನ್ನೊಂದು ಹಾಡು ಬಿಡುಗಡೆಯಾಗಲಿದೆ. ಚಿತ್ರದಲ್ಲಿ ನಾಲ್ಕು ಹಾಡುಗಳಿವೆ. ಆನಂದ್ ಆಡಿಯೋದವರು ಹಾಡುಗಳನ್ನು ಬಿಡುಗಡೆ ಮಾಡಿದ್ದಾರೆ. ನಮ್ಮದು ಹಳೆಯ ನಂಟು. ನನ್ನ ಹಲವು ಚಿತ್ರದ ಹಾಡುಗಳನ್ನು ಅವರು ಬಿಡುಗಡೆ ಮಾಡಿದ್ದಾರೆ. ನನಗೆ ಬಹಳ ಲಕ್ಕಿ. ಸೆಪ್ಟೆಂಬರ್ ನಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ತಿಳಿಸಿದರು.

ಈ ಹಾಡಿನ ಚಿತ್ರೀಕರಣದಲ್ಲೇ ಇದು ಬಹಳ ಚೆನ್ನಾಗಿ ಮೂಡಿಬರುತ್ತದೆ ಎಂದೆನಿಸಿತ್ತು. ಅದರಂತೆ ಹಾಡು ಬಹಳ ಚೆನ್ನಾಗಿ ಮೂಡಿಬಂದಿದೆ. ಹಾಡು, ಸಾಹಿತ್ಯ ಬಹಳ ಚೆನ್ನಾಗಿದೆ. ಸಂತು ಬಹಳ ಚೆನ್ನಾಗಿ ನೃತ್ಯ ನಿರ್ದೇಶನ ಮಾಡಿದ್ದಾರೆ. ತುಂಬಾ ಎಂಜಾಯ್ ಮಾಡಿಕೊಂಡು ಚಿತ್ರೀಕರಣ ಮಾಡಿದ್ದೇವೆ. ಪ್ರತಾಪ್ ಅವರು ಅದ್ಭುತ ಸೆಟ್‌ಗಳನ್ನು ಹಾಕಿದ್ದಾರೆ. ಅದರಲ್ಲೂ ಒಂದು ಸೆಟ್ ನಲ್ಲಿ ಚಿತ್ರೀಕರಣ ಮಾಡಿದ್ದು, ಸ್ವಿಟ್ಜರ್ ಲ್ಯಾಂಡ್ ನಲ್ಲಿ ಚಿತ್ರೀಕರಣ ಮಾಡಿದ ಹಾಗನಿಸಿತು. ಇಡೀ ತಂಡದ ಶ್ರಮದಿಂದ ಈ ಹಾಡು ಚೆನ್ನಾಗಿ ಮೂಡಿ ಬಂದಿದೆ. ನಿರ್ದೇಶಕರ ಮನೋಹರ್ ಕಥೆ ಮಾಡಿಕೊಂಡು ಬಂದಾಗ ಖುಷಿಯಾಯಿತು. ಅದ್ಭುತವಾದ ತಾರಾಗಣ ಈ ಚಿತ್ರದಲ್ಲಿದೆ. ಒಳ್ಳೆಯ ಪಾತ್ರವಿದೆ. ಇದರಲ್ಲಿ ಹೊಸ ಶೇಡ್ ಇದೆ. ಟ್ರೇಲರ್ ಬಿಡುಗಡೆಯಾದಾಗ ನನ್ನ ಪಾತ್ರದ ಬಗ್ಗೆ ಗೊತ್ತಾಗುತ್ತದೆ ಎಂದರು ರಚಿತರಾಮ್.

ಚಿತ್ರಕ್ಕೆ ಹಾಡುಗಳು ಇನ್ವಿಟೇಶನ್ ಎನ್ನುತ್ತೇವೆ. ಅದೇ ರೀತಿ ನಮ್ಮ ಚಿತ್ರದ ಅದ್ಭುತ ಹಾಡನ್ನು ಬಿಡುಗಡೆ ಮಾಡುವ ಮೂಲಕ ಪ್ರೇಕ್ಷಕರನ್ನು ನಮ್ಮ ಚಿತ್ರ ವೀಕ್ಷಣೆಗೆ ಆಹ್ವಾನಿಸುತ್ತಿದ್ದೇವೆ. ಸತೀಶ್ ಹಾಗೂ ರಚಿತಾರಾಮ್ ಅಭಿನಯದ ಈ ಹಾಡು ಅದ್ಭುತವಾಗಿದೆ. ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದು ಅದಿತಿ ಪ್ರಭುದೇವ ತಿಳಿಸಿದರು.

ನಿರ್ಮಾಪಕಿ ಪಾರ್ವತಿ ಎಸ್ ಗೌಡ, ನಿರ್ದೇಶಕ ಮನೋಹರ್ ಕಾಂಪಲ್ಲಿ, ಸಂಗೀತ ನಿರ್ದೇಶಕ ಪೂರ್ಣಚಂದ್ರ ತೇಜಸ್ವಿ, ಪೂರ್ಣಚಂದ್ರ ಮೈಸೂರು ಹಾಗು ನಟರಾದ ನಾಗಭೂಷಣ್, ಶಿವರಾಜ್ ಕೆ.ಆರ್. ಪೇಟೆ ಮುಂತಾದವರು “ಮ್ಯಾಟ್ನಿ” ಕುರಿತು ಮಾತನಾಡಿದರು.

Categories
ಸಿನಿ ಸುದ್ದಿ

ಚಂದ್ರಮುಖಿಯಲ್ಲಿ ಕಂಗನಾ ಆಗಮನ: ಆಭರಣ ರಾಣಿಯ ಫಸ್ಟ್ ಲುಕ್ ರಿಲೀಸ್

ರಾಘವ್ ಲಾರೆನ್ಸ್ ಹಾಗೂ ಕಂಗನಾ ರಣಾವತ್ ನಟನೆಯ ಬಹುನಿರೀಕ್ಷಿತ ಚಂದ್ರಮುಖಿ-2 ಸಿನಿಮಾ ಬಿಡುಗಡೆಗೆ ಹೊಸ್ತಿಲಲ್ಲಿ ನಿಂತಿದೆ. ಗಣೇಶ್ ಚತುರ್ಥಿಗೆ ಬೆಳ್ಳಿತೆರೆಗೆ ಈ ಚಿತ್ರ ಎಂಟ್ರಿ ಕೊಡ್ತಿದ್ದು, ಇಂದು ಕಂಗನಾ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದೆ. ಸಂಪ್ರಾದಾಯಿಕ ಉಡುಗೆ ತೊಟ್ಟು, ಬಂಗಾರದ ಆಭರಣಗಳಲ್ಲಿ ಕಂಗನಾ ಕಂಗೊಳಿಸಿದ್ದಾಳೆ. ಕಳೆದ ವಾರವಷ್ಟೇ ಸೂಪರ್ ಸ್ಟಾರ್ ರಜನಿಕಾಂತ್ ರಾಘವ್ ಲಾರೆನ್ಸ್ ಫಸ್ಟ್ ಲುಕ್ ಬಿಡುಗಡೆ ಮಾಡಿ ಶುಭಾಶಯ ಕೋರಿದ್ದರು.

ಹಿರಿಯ ನಿರ್ದೇಶಕ ಪಿ ವಾಸು ನಿರ್ದೇಶನದಲ್ಲಿ ಮೂಡಿ ಬಂದಿರುವ ಚಂದ್ರಮುಖಿ-2 ಸಿನಿಮಾದಲ್ಲಿ ರಾಘವ್ ಲಾರೆನ್ಸ್ ವೆಟ್ಟೈಯನ್ ರಾಜನಾಗಿ ಕಾಣಿಸಿಕೊಂಡಿದ್ದಾರೆ. ಚಂದ್ರಮುಖಿಯಾಗಿ ಕಂಗನಾ ನಟಿಸಿದ್ದಾರೆ. 2005ರಲ್ಲಿ ಬಿಡುಗಡೆಯಾಗಿದ್ದ ಕ್ಲಾಸಿಕ್ ಸಿನಿಮಾ ಚಂದ್ರಮುಖಿ ಬಾಕ್ಸಾಫೀಸ್ ನಲ್ಲಿ ಹೊಸ ದಾಖಲೆ ಸೃಷ್ಟಿಸಿತ್ತು. ಸೂಪರ್ ಸ್ಟಾರ್ ರಜನಿಕಾಂತ್ ನಾಯಕನಾಗಿ ನಟಿಸಿದ್ದ ಈ ಚಿತ್ರ ಹಿಟ್ ಲೀಸ್ಟ್ ಸೇರಿತ್ತು. 18 ವರ್ಷದ ಬಳಿಕ ಚಂದ್ರಮುಖಿ ಸೀಕ್ವೆಲ್ ಬರ್ತಿದ್ದು, ನಿರೀಕ್ಷೆಯನ್ನು ಹೆಚ್ಚಿಸಿದೆ.

ಲೈಕಾ ಸಂಸ್ಥೆಯ ಒಡೆಯ ಸುಭಾಷ್ ಕರಣ್ ಬಹಳ ಅದ್ಧೂರಿಯಾಗಿ ಚಿತ್ರ ನಿರ್ಮಿಸಿದ್ದು, ಆಸ್ಕರ್ ಅವಾರ್ಡ್ ವಿನ್ನರ್ ಎಂ.ಎಂ ಕೀರವಾಣಿ ಸಂಗೀತ ನಿರ್ದೇಶನ, ಆರ್ ಡಿ ರಾಜಶೇಖರ್ ಛಾಯಾಗ್ರಹಣ, ಅಂಥೋನಿ ಸಂಕಲನ ಚಿತ್ರಕ್ಕಿದೆ. ವಡಿವೇಲು, ಲಕ್ಷ್ಮೀ ಮೆನನ್, ಮಹಿಮಾ ನಂಬಿಯಾರ್, ರಾಧಿಕಾ ಶರತ್ ಕುಮಾರ್, ಸುರೇಶ್ ಮೆನನ್ ತಾರಾಬಳಗದಲ್ಲಿದ್ದಾರೆ. ಗಣೇಶ್ ಹಬ್ಬಕ್ಕೆ ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ಚಂದ್ರಮುಖಿ-2 ಸಿನಿಮಾ ಬಿಡುಗಡೆಯಾಗಲಿದೆ.

Categories
ಸಿನಿ ಸುದ್ದಿ

ವುಲ್ಫ್ ಟೀಸರ್ ಭರ್ಜರಿ ಸೌಂಡ್: ಇದು ಪ್ರಭುದೇವ ಇರುವ ಸಂದೇಶ ಚಿತ್ರ!

ಸಂದೇಶ್ ಪ್ರೊಡಕ್ಷನ್ ನಿರ್ಮಾಣದ 30ನೇ ಚಿತ್ರ ಬಹು ಭಾಷೆಗಳಲ್ಲಿ (ತಮಿಳು,ಕನ್ನಡ,ಹಿಂದಿ, ತೆಲುಗು) ತಯಾರಾಗಿರುವ ಡಾನ್ಸಿಂಗ್ ಸ್ಟಾರ್ ಪ್ರಭುದೇವ, ಅನುಸೂಯ ಭಾರದ್ವಾಜ್,ಲಕ್ಷ್ಮಿ ರೈ,ವಸಿಷ್ಠ ಸಿಂಹ,ಅಂಜು ಕುರಿಯನ್,ಮುಂತಾದ ಖ್ಯಾತ ತಾರಾ ಬಳಗವನ್ನೆ ಹೊಂದಿರುವ ವುಲ್ಫ್ ತಾಂತ್ರಿಕ ಕೆಲಸಗಳನ್ನು ಮುಗಿಸಿದೆ. ಈಗಾಗಲೇ ಟೀಸರ್ ಬಿಡುಗಡೆಯಾಗಿದ್ದು, ಎಲ್ಲೆಡೆ ಟೀಸರ್ ಕೂಡ ಮೆಚ್ಚುಗೆ ಪಡೆದಿದೆ.

ದಕ್ಷಿಣ ಭಾರತೀಯ ಚಿತ್ರರಂಗದಲ್ಲೇ ವಿಭಿನ್ನ ಕಥಾ ಹಂದರದ ಈ ಚಿತ್ರವನ್ನು ಮೊದಲ ಬಾರಿಗೆ ಪ್ರೇಕ್ಷಕರ ಮುಂದೆ ಇಡಲು ಚಿತ್ರ ತಂಡ ಸಜ್ಜಾಗಿದೆ. ಆಗಸ್ಟ್ 16 ನಿರ್ಮಾಪಕರಾದ ಸಂದೇಶ್ ನಾಗರಾಜ್ ಅವರ ಜನುಮದಿನ. ಅಂದು ನಟ ವಿಜಯ ಸೇತುಪತಿ ಹಾಡಿರುವ ಚಿತ್ರದ ಮೊದಲ ಲಿರಿಕಲ್ ವೀಡಿಯೋ ಸಹ ಬಿಡುಗಡೆಯಾಗುತ್ತಿದೆ.

ಈ ಚಿತ್ರವನ್ನು ವಿನು ವೆಂಕಟೇಶ್ ನಿರ್ದೇಶನ ಮಾಡಿದ್ದು, ಅರುಳ್ ವಿನ್ಸೆಂಟ್ ಛಾಯಾಗ್ರಹಣ, ಖ್ಯಾತ ತಾರೆ ಜಯಸುಧಾ ಅವರ ಪುತ್ರ ಹಾಗೂ ಖ್ಯಾತ ಸಂಗೀತ ನಿರ್ದೇಶಕ ಅಮರೀಶ್ ಸಂಗೀತ ನಿರ್ದೇಶನ ಮಾಡಿರುವ, ಪ್ರೊಡಕ್ಷನ್ ಎಕ್ಸಿಕ್ಯೂಟಿವ್ ಆಗಿ ಪ್ರಸಾದ್ ಬಿ ಏನ್ ಮತ್ತು ಕಾಮರಾಜು ಕಾರ್ಯ ನಿರ್ವಹಿಸಿರುವ ಈ ಚಿತ್ರವನ್ನು ಸಂದೇಶ ನಾಗರಾಜ್ ಅವರು ಸಂದೇಶ್ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಿಸಿದ್ದಾರೆ….

Categories
ಸಿನಿ ಸುದ್ದಿ

ಸಾಧು ಬ್ರದರ್ ಈಗ ಡೈರೆಕ್ಟರ್: ತಾಯ್ತ ಎಂಬ ನಯಾ ಚಿತ್ರ ನಿರ್ದೇಶಿಸಿದ ಲಯ

ನಟನಾಗಿ, ಸಂಗೀತ ನಿರ್ದೇಶಕನಾಗಿ ಗುರುತಿಸಿಕೊಂಡಿರುವ ಲಯಕೋಕಿಲ ಚೊಚ್ಚಲ ನಿರ್ದೇಶನದ “ತಾಯ್ತ” ಚಿತ್ರಕ್ಕಾಗಿ ರಾಮ್ ನಾರಾಯಣ್ ಅವರು ಬರೆದಿರುವ “ಶಿವನೇ ಕಾಪಾಡು” ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಹಿಂದೂ, ಮುಸ್ಲಿಂ ಹಾಗೂ ಕ್ರೈಸ್ತ ಧರ್ಮದ ಮೂರು ದೇವರ ಕುರಿತಾದ ಈ ಹಾಡನ್ನು ಮೂರು ಧರ್ಮದ ಗುರುಗಳು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಸಾಧುಕೋಕಿಲ , ಉಷಾ ಕೋಕಿಲ, ಸಿರಿ ಮ್ಯೂಸಿಕ್ ಚಿಕ್ಕಣ್ಣ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸಿರಿ ಮ್ಯೂಸಿಕ್ ಮೂಲಕ ಈ ಚಿತ್ರದ ಹಾಡುಗಳು ಬಿಡುಗಡೆಯಾಗಿದೆ.

ನಮ್ಮದು ಸಂಗೀತದ ಕುಟುಂಬ. ಬಹುತೇಕ ಎಲ್ಲರೂ ಸಂಗೀತಕ್ಕೆ ಸಂಬಂಧಿಸಿದ ವಿವಿಧ ಭಾಗಗಳಲ್ಲಿ ಕೆಲಸ ಮಾಡುತ್ತಿದ್ದೇವೆ‌. ನಮ್ಮ ಅಣ್ಣ ಲಯಕೋಕಿಲ ಈಗ ನಿರ್ದೇಶಕನಾಗಿದ್ದಾರೆ. ಅವರ ನಿರ್ದೇಶನದ “ತಾಯ್ತ” ಚಿತ್ರದ ಹಾಡೊಂದು ಇಂದು ಬಿಡುಗಡೆಯಾಗಿದೆ. ಅವರೇ ಸಂಗೀತ ನೀಡಿದ್ದಾರೆ. ನಾನು ಕೂಡ ಚಿತ್ರದಲ್ಲಿ ಅಭಿನಯಿಸಿದ್ದೇನೆ. ಚಿತ್ರ ಯಶಸ್ವಿಯಾಗಲಿ ಎಂದು ಸಾಧುಕೋಕಿಲ ಹಾರೈಸಿದರು.

ಇದು ನನ್ನ ಮೊದಲ ನಿರ್ದೇಶನದ ಚಿತ್ರ. ಹಾರರ್ ಜಾನರ್ ನ ಚಿತ್ರವಾಗಿದ್ದರೂ, ಕಾಮಿಡಿ ಹಾಗೂ ಥ್ರಿಲ್ಲರ್ ಕೂಡ ಇದೆ. ನಿರ್ಮಾಪಕ ಶಾಹಿದ್ ಅವರು ಕಥೆ ಬರದಿದ್ದಾರೆ. ಚಿತ್ರಕಥೆ, ಸಂಭಾಷಣೆ ಬರೆದು ಸಂಗೀತ ಸಂಯೋಜನೆ ಹಾಗೂ ನಿರ್ದೇಶನವನ್ನು ನಾನು ಮಾಡಿದ್ದೇನೆ. ರಿಯಾನ್ ಈ ಚಿತ್ರದ ನಾಯಕನಾಗಿ, ಹರ್ಷಿಕಾ ಪೂಣಚ್ಛ ನಾಯಕಿಯಾಗಿ ನಟಿಸಿದ್ದಾರೆ.

ನನ್ನ ಮಗಳು ಭಾನುಪ್ರಿಯ ಕೂಡ ಅಭಿನಯಿಸಿದ್ದಾರೆ. ಕೆಲವರನ್ನು ಬಿಟ್ಟು, ಈ ಚಿತ್ರದಲ್ಲಿ ಅಭಿನಯಿಸಿರುವ ಎಲ್ಲರೂ ಹೊಸ ಕಲಾವಿದರೆ. ಚಿತ್ರದಲ್ಲಿ ನಾಲ್ಕು ಹಾಡುಗಳಿವೆ. ಇಂದು ಬಿಡುಗಡೆಯಾಗಿರುವ ಹಾಡನ್ನು ರಾಮ್ ನಾರಾಯಣ್ ಬರೆದಿದ್ದಾರೆ. ಅನುರಾಧ ಭಟ್ ಹಾಡಿದ್ದಾರೆ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದೆ ಎಂದರು ಲಯಕೋಕಿಲ.

ನಾಯಕ ರಿಯಾನ್, ನಾಯಕಿ ಹರ್ಷಿಕಾ ಪೂಣಚ್ಛ, ನಟಿ ಭಾನುಪ್ರಿಯ, ಸೇರಿದಂತೆ ಅನೇಕ ಕಲಾವಿದರು ಹಾಗೂ ಹಾಡು ಬರೆದಿರುವ ರಾಮ್ ನಾರಾಯಣ್ ಮುಂತಾದವರು “ತಾಯ್ತ” ಚಿತ್ರದ ಕುರಿತು ಮಾತನಾಡಿದರು.

Categories
ಸಿನಿ ಸುದ್ದಿ

ಕೌಸಲ್ಯ ಸುಪ್ರಜಾ ರಾಮರನ್ನ ಮೆಚ್ಚಿದ ಜನ! ಸಂಭ್ರಮಿಸಿದ ಕೃಷ್ಣ-ಮಿಲನ

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿರುವ ನಿರ್ದೇಶಕ ಶಶಾಂಕ್ ನಿರ್ದೇಶನದ, ಡಾರ್ಲಿಂಗ್ ಕೃಷ್ಣ – ಮಿಲನ ನಾಗರಾಜ್ ಜೋಡಿಯ ” ಕೌಸಲ್ಯ ಸುಪ್ರಜಾ ರಾಮ” ಚಿತ್ರ ಕಳೆದವಾರ ಬಿಡುಗಡೆಯಾಗಿ, ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಈ ಯಶಸ್ಸಿನ ಖುಷಿಯನ್ನು ಚಿತ್ರತಂಡದ ಸದಸ್ಯರು ಮಾಧ್ಯಮದ ಮುಂದೆ ಹಂಚಿಕೊಂಡಿದ್ದಾರೆ.

ನನಗೆ ಶಶಾಂಕ್, “ಕೌರವ” ಚಿತ್ರದ ಕಾಲದಿಂದಲೂ ಪರಿಚಯ. ಈ ಚಿತ್ರದ ಕಥೆ ಅವರು ಹೇಳಿದ ತಕ್ಷಣ ನನಗೆ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆ. ಈಗ ಚಿತ್ರ ಬಿಡುಗಡೆಯಾಗಿ ಎಲ್ಲರ ಮನ ಗೆಲ್ಲುತ್ತಿದೆ. ಮುಂದಿನವಾರ ವಿದೇಶಗಳಲ್ಲೂ ಈ ಚಿತ್ರ ಬಿಡುಗಡೆಯಾಗಲಿದೆ. ಜೀ ವಾಹಿನಿಗೆ ಟಿವಿ ರೈಟ್ಸ್ ಹಾಗೂ ವೂಟ್ ಗೆ ಓಟಿಟಿ ಹಕ್ಕು ಮಾರಾಟವಾಗಿದೆ. ಚಿತ್ರದ ಯಶಸ್ಸಿಗೆ ಕಾರಾಣರಾದ ಪ್ರತಿಯೊಬ್ಬರಿಗೂ ಧನ್ಯವಾದವೆಂದರು ನಿರ್ಮಾಪಕ ಬಿ.ಸಿ.ಪಾಟೀಲ್. ಸೃಷ್ಟಿ ಪಾಟೀಲ್ ಅವರು ಚಿತ್ರತಂಡಕ್ಕೆ ಅಭಿನಂದನೆ ತಿಳಿಸಿದರು‌.

ಈ ಗೆಲವು ನನಗೆ ಬೇಕಿತ್ತು ಎಂದ ಮಾತು ಆರಂಭಿಸಿದ ನಿರ್ದೇಶಕ ಶಶಾಂಕ್, “ಕೌಸಲ್ಯ ಸುಪ್ರಜಾ ರಾಮ” ಚಿತ್ರದ ಕಥೆಯನ್ನು ಡಾರ್ಲಿಂಗ್ ಕೃಷ್ಣ ಅವರಿಗಾಗಿ ಮಾಡಿದ್ದು, ನಾನು ಸಾಮಾನ್ಯವಾಗಿ ಕಥೆ ಮಾಡಿಕೊಳ್ಳುತ್ತೇನೆ. ಆಮೇಲೆ ನಾಯಕರ ಬಳಿ ಚರ್ಚಿಸುತ್ತೇನೆ.
ಆದರೆ ಈ ಕಥೆ ಕೃಷ್ಣ ಅವರಿಗಾಗಿಯೇ ಮಾಡಿದ್ದೇನೆ. ಮಿಲನ ನಾಗರಾಜ್ ಅವರು ಮೊದಲು ಈ ಪಾತ್ರಕ್ಕೆ ಒಪ್ಪಲಿಲ್ಲ. ನಾನು ಹಾಗೂ ಕೃಷ್ಣ ಅವರನ್ನು ನಟಿಸಲು ಒಪ್ಪಿಸಲು ಬಹಳ ಶ್ರಮ ಪಟ್ಟೆವು.

ಈಗ ಅವರ ಪಾತ್ರವನ್ನು ಎಲ್ಲರೂ ಮೆಚ್ಚಿಕೊಳ್ಳುತ್ತಿದ್ದಾರೆ. ಇನ್ನೂ ಈ ಚಿತ್ರ ಇಷ್ಟು ಅದ್ದೂರಿಯಾಗಿ ಮೂಡಿಬರಲು ಬಿ.ಸಿ.ಪಾಟೀಲ್ ಅವರು ಕಾರಣ. ನಮ್ಮ ಚಿತ್ರ ಕರ್ನಾಟಕ ಮಾತ್ರವಲ್ಲ. ಪಕ್ಕದ ಆಂದ್ರ ಪ್ರದೇಶ ಹಾಗೂ ತಮಿಳುನಾಡಿನಲ್ಲೂ ಬಿಡುಗಡೆಯಾಗಿತ್ತು. ಅಲ್ಲಿನ ಜನರು ನಮ್ಮ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಈ ಯಶಸ್ಸಿಗೆ ಕಾರಣರಾದ ನನ್ನ ಇಡೀ ತಂಡಕ್ಕೆ ಧನ್ಯವಾದ ತಿಳಿಸುತ್ತೇನೆ ಎಂದರು.

ಶಶಾಂಕ್ ಸರ್ ನನ್ನ ಬಳಿ ಬಂದು, ಆಕ್ಷನ್ ಜಾನರ್ ಸಿನಿಮಾ ಮಾಡೋಣವಾ? ಎಂದರು. ನಾನು ಬೇಡ ಸರ್ . “ಕೃಷ್ಣ ಲೀಲಾ” ತರಹ ಕೌಟುಂಬಿಕ ಚಿತ್ರ ಮಾಡೋಣ ಎಂದೆ. ಒಂದು ತಿಂಗಳಲ್ಲಿ ಶಶಾಂಕ್ ಅವರು ಕಥೆ ಸಿದ್ದ ಮಾಡಿಕೊಂಡು ಬಂದರು. ಚಿತ್ರ ಆರಂಭವಾಯಿತು. ನನ್ನ ಹತ್ತು ವರ್ಷಗಳ ಸಿನಿ ಜರ್ನಿಯಲ್ಲೇ ನಾನು ಕೇಳಿರುವ ಉತ್ತಮ ಕಥೆಯಿದು. ಚಿತ್ರ ಬಿಡುಗಡೆಯಾದ ಮೇಲೆ ಪ್ರೇಕ್ಷಕರುವ ತೋರಿಸುತ್ತಿರುವ ಪ್ರೀತಿಗೆ ಮನಸ್ಸು ತುಂಬು ಬಂದಿದೆ. ನನ್ನೊಡನೆ ನಟಿಸಿರುವ ಎಲ್ಲಾ ಕಲಾವಿದರ ಅದ್ಭುತ ಅಭಿನಯ, ತಂತ್ರಜ್ಞರ ಕಾರ್ಯವೈಖರಿ ಈ ಚಿತ್ರದ ಯಶಸ್ಸಿಗೆ ಕಾರಣ. ಎಲ್ಲರಿಗೂ ನನ್ನ ಧನ್ಯವಾದ. ಬಿ.ಸಿ.ಪಾಟೀಲ್ ಅವರಿಗೆ ವಿಶೇಷ ಧನ್ಯವಾದ ಎಂದರು ನಾಯಕ ಡಾರ್ಲಿಂಗ್ ಕೃಷ್ಣ.

ನಾನು ಮೊದಲು ಈ ಪಾತ್ರ ಮಾಡಲು ಒಪ್ಪಿರಲಿಲ್ಲ. ಕೃಷ್ಣ ಹಾಗೂ ಶಶಾಂಕ್ ಅವರು ಒಪ್ಪಿಸಿದರು. ಈಗ ನನ್ನ ಪಾತ್ರಕ್ಕೆ ಸಿಗುತ್ತಿರುವ ಪ್ರಶಂಸೆ ಕಂಡು ಸಂತೋಷವಾಗಿದೆ ಎಂದರು ಮಿಲನ ನಾಗರಾಜ್.

ನಟ ನಾಗಭೂಷಣ್ ಹಾಗೂ ಚಿತ್ರದ ಮತ್ತೊಬ್ಬ ನಾಯಕಿ ಬೃಂದಾ ಆಚಾರ್ಯ ಚಿತ್ರದ ಕುರಿತು ಮಾತನಾಡಿದರು. ಬೃಂದಾ ಆಚಾರ್ಯ ಅವರೇ ನಿರೂಪಣೆ ಮಾಡಿದ್ದು ವಿಶೇಷವಾಗಿತ್ತು.

Categories
ಸಿನಿ ಸುದ್ದಿ

ಲಂಡನ್ ಕೆಫೆಯಲ್ಲಿ ಆಪರೇಷನ್ ಮುಗಿಸಿದ ಮೇಘಾ ಶೆಟ್ಟಿ

ಈ ವರ್ಷ ತೆರೆ ಕಾಣುತ್ತಿರುವ ಚಿತ್ರಗಳ ಪೈಕಿ ಅತೀ ಹೆಚ್ಚು ಕುತೂಹಲ ಮೂಡಿಸುತ್ತಿರುವ ಆಕ್ಷನ್ ಪ್ಯಾಕೇಜ್ ಚಿತ್ರ ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್ನಿನ ಕನ್ನಡ ಮರಾಠಿ ಹಿಂದಿ ತೆಲುಗು ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ತಯಾರಾಗುತ್ತಿರುವ ‘ಆಪರೇಷನ್ ಲಂಡನ್ ಕೆಫೆ’ ಬಹುತೇಕ ಚಿತ್ರೀಕರಣ ಮುಗಿಸಿದ್ದು. ಚಿತ್ರದ ಡಬ್ಬಿಂಗ್ ಹಂತದ ಚಟುವಟಿಕೆಗಳು ಭರದಿಂದ ಸಾಗುತ್ತಿದೆ.

ಈಗಾಗಲೇ ಈ ಚಿತ್ರದ ಚಿತ್ರೀಕರಣ ಮುಗಿಸಿರುವ ನಟಿ ಮೇಘಾ ಶೆಟ್ಟಿ ಅದೇ ಖುಷಿಯಲ್ಲಿ ತಮ್ಮ ಹುಟ್ಟುಹಬ್ಬದ ಸಂಭ್ರಮವನ್ನು ಆಚರಿಸಿಕೊಳ್ಳುತ್ತಿದ್ದಾರೆ.

ಇಂಡಿಯನ್ ಫಿಲ್ಮ್ ಫ್ಯಾಕ್ಟರಿ ಮತ್ತು ದೀಪಕ್ ರಾಣೆ ಫಿಲ್ಮ್ಸ್ ಲಾಂಛನದಡಿಯಲ್ಲಿ ವಿಜಯ್ ಕುಮಾರ್ ಶೆಟ್ಟಿ ಹವರಾಲ್ ರಮೇಶ್ ಕೊಠಾರಿ ಮತ್ತು ದೀಪಕ್ ರಾಣೆ ಅದ್ದೂರಿಯಾಗಿ ನಿರ್ಮಿಸುತ್ತಿರುವ ಈ ಚಿತ್ರವನ್ನು ಸಡಗರ ರಾಘವೇಂದ್ರ ನಿರ್ದೇಶಿಸುತ್ತಿದ್ದಾರೆ.

ಡಿ ನಾಗಾರ್ಜುನ್ ಛಾಯಾಗ್ರಹಣ ಪ್ರಾನ್ಷು ಝಾ ಸಂಗೀತ ಕೆ. ಎಂ ಪ್ರಕಾಶ್ ಸಂಕಲನ ವರದರಾಜ್ ಕಾಮತ್ ಕಲೆ ವಿಕ್ರಂ ಮೋರ್ ಮಾಸ್ ಮಾದ ಸಾಹಸ ಕವಿರಾಜ್ ವಿ ನಾಗೇಂದ್ರ ಪ್ರಸಾದ್ ಮತ್ತು ಕ್ಷಿತಿಜ್ ಪಟವರ್ಧನ್ ಸಾಹಿತ್ಯವಿದೆ.

ಈ ಚಿತ್ರದಲ್ಲಿ ಮರಾಠಿಯ ಹೆಸರಾಂತ ಶಿವಾನಿ ಸುರ್ವೆ, ವಿರಾಟ್ ಮಡಕೆ ಸಹಿತ ಅರ್ಜುನ್ ಕಾಪಿಕ್ಕಾಡ್ ಬಿ ಸುರೇಶ್ ಇನ್ನಿತರ ಹೆಸರಾಂತ ಕಲಾವಿದರು ಬಣ್ಣ ಹಚ್ಚಿದ್ದಾರೆ.

ಸದ್ಯದಲ್ಲೇ ಚಿತ್ರಕ್ಕೆ ಸಂಬಂಧಿಸಿದ ಇನ್ನಷ್ಟೂ ಸಿಹಿ ಸುದ್ಧಿಯನ್ನು ಹಂಚಿಕೊಳ್ಳುವುದಾಗಿ ಹೇಳಿಕೊಂಡ ನಿರ್ದೇಶಕ ಸಡಗರ ರಾಘವೇಂದ್ರ ಈ ಮೂಲಕ ಹುಟ್ಟುಹಬ್ಬದ ಖುಷಿಯನ್ನು ಆಚರಿಸಿಕೊಳ್ಳುತ್ತಿರುವ ಮೇಘಾ ಶೆಟ್ಟಿಯವರಿಗೆ ಇಡೀ ಚಿತ್ರತಂಡದ ಪರವಾಗಿ ಶುಭಾಶಯವನ್ನು ಕೋರಿದ್ದಾರೆ.

Categories
ಸಿನಿ ಸುದ್ದಿ

ಯಥಾಭವ ಎಂಬ ಕೋರ್ಟ್ ಡ್ರಾಮ: ಡಬ್ಬಿಂಗ್ ಮುಗೀತು- ಆ.25ಕ್ಕೆ ಟೀಸರ್ ರಿಲೀಸ್

ಗೌತಮ್ ಬಸವರಾಜ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ “ಯಥಾಭವ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಪ್ರಸ್ತುತ ಡಬ್ಬಿಂಗ್ ಸಹ ಪೂರ್ಣವಾಗಿದೆ. “ಕೋರ್ಟ್ ಡ್ರಾಮ” ಜಾನರ್ ನ ಈ ಚಿತ್ರದ ಟೀಸರ್ ಆಗಸ್ಟ್ 25 ರಂದು ಬಿಡುಗಡೆಯಾಗಲಿದೆ.

ಪವನ್ ಶಂಕರ್ ಹಾಗೂ ಸಹನ ಸುಧಾಕರ್ ನಾಯಕ, ನಾಯಕಿಯಾಗಿ ನಟಿಸಿರುವ ಈ ಚಿತ್ರದ ಪ್ರಮುಖಪಾತ್ರದಲ್ಲಿ ದತ್ತಣ್ಣ, ಬಾಲ ರಾಜವಾಡಿ ಹಾಗೂ ಗೋಪಾಲಕೃಷ್ಣ ದೇಶಪಾಂಡೆ ಅಭಿನಯಿಸಿದ್ದಾರೆ.

ಎಂಭತ್ತರ ಹರಯದಲ್ಲೂ ಯುವಕರು ನಾಚುವಂತಹ ದತ್ತಣ್ಣ ಈ ಚಿತ್ರದಲ್ಲಿ ನ್ಯಾಯಾಧೀಶರಾಗಿ ಅಭಿನಯಿಸಿದ್ದಾರೆ. ಗೋಪಾಲಕೃಷ್ಣ ದೇಶಪಾಂಡೆ ಅವರು ವಕೀಲರಾಗಿ ಹಾಗೂ ಬಾಲ ರಾಜವಾಡಿ ಅವರು ಗೃಹ ಸಚಿವರಾಗಿ ಕಾಣಿಸಿಕೊಂಡಿದ್ದಾರೆ. ಮೂವರ ಅಭಿನಯವೂ ಮನೋಜ್ಞವಾಗಿ ಮೂಡಿಬಂದಿದೆ ಎನ್ನುತ್ತಾರೆ ನಿರ್ದೇಶಕರು.

ನಿರ್ದೇಶಕ ಗೌತಮ್ ಬಸವರಾಜ್ ಅವರು ಸೇರಿದಂತೆ ಈ ಚಿತ್ರದಲ್ಲಿ ನಟಿಸಿರುವ ಬಹುತೇಕ ತಂತ್ರಜ್ಞರು ಹೈದರಾಬಾದ್ ನ ಅನ್ನಪೂರ್ಣ ಸ್ಟುಡಿಯೋಸ್ ನಲ್ಲಿ ಮೂರುವರ್ಷಗಳ‌ ಕಾಲ ಫಿಲಂ ಮೇಕಿಂಗ್ ಕೋರ್ಸ್ ಮುಗಿಸಿ ಈ ಮಾಡಿರುವುದು ವಿಶೇಷ.

Macht entertainments ಲಾಂಛನದಲ್ಲಿ ಸುಜಾತ ಕುಮಾರಿ ಹಾಗೂ ಅನಿಲ್ ಕುಮಾರ್ ಬಿ.ಎನ್ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಹರ್ಷ್ ಮಿಶ್ರ ಛಾಯಾಗ್ರಹಣ, ಹರೀಶ್ ಚೌಧರಿ ಸಂಕಲನ, ಕುಂಗ್ಫು ಚಂದ್ರು ಸಾಹಸ ನಿರ್ದೇಶನ, ಸುಚಿತ್ ಚವ್ಹಾಣ್, ನೃತ್ಯ ನಿರ್ದೇಶನವಿದೆ.

ಸ್ಮಿತ ಕುಲಕರ್ಣಿ ಕಲಾ ನಿರ್ದೇಶನ ಹಾಗೂ ನಿರ್ಮಾಲ್ ಜೋಶಿ ಅವರ ಸಹ ನಿರ್ದೇಶನವಿದೆ. ಉತ್ಸವ್ ಶ್ರೇಯಸ್ ಸಂಗೀತ ನೀಡಿರುವ ಈ ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಸುರೇಶ್ ರೆಡ್ಡಿ ಹಾಗೂ ಅಭಿಷೇಕ್ ಅಕ್ಕಣ್ಣನವರ್ ಹಾಡುಗಳನ್ನು ಬರೆದಿದ್ದಾರೆ.

ಹಿರಿಯ ನಟ ರಾಕ್ ಲೈನ್ ಸುಧಾಕರ್ ಅವರ ಪುತ್ರ ಗೌತಮ್ ಸುಧಾಕರ್ ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಮಾಸ್ಟರ್ ಶಮಂತ್, ನೀನಾಸಂ ಆನಂದ್, ಉಮಾ ಹೆಬ್ಬಾರ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

Categories
ಸಿನಿ ಸುದ್ದಿ

ತೋತಾಪುರಿ ಹಿಡಿದ ಡಾಲಿ: ಜಗ್ಗೇಶ್ ಜೊತೆ ಧನಂಜಯ್ ಅಬ್ಬರ

ಹಾಡು ಮತ್ತು ಟ್ರೇಲರ್ ಮೂಲಕ ಸದ್ದು ಮಾಡಿದ್ದ ‘ತೋತಾಪುರಿ’, ಬಿಡುಗಡೆಯಾದ ಮೇಲೂ ಗಮನ ಸೆಳೆದಿತ್ತು. ಇದೀಗ ‘ತೋತಾಪುರಿ-2’ ಬಿಡುಗಡೆಗೆ ಸಜ್ಜಾಗಿದೆ. ಇತ್ತೀಚೆಗೆ ಹರಿಬಿಟ್ಟ ಈ ಸಿನಿಮಾದ ಪೋಸ್ಟರ್‌ಗಳು ಹಾಗೂ ಹಾಡೊಂದು ನಾನಾ ಕಾರಣಗಳಿಂದಾಗಿ ಸದ್ದು ಮಾಡಿ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಜಗ್ಗೇಶ್-ಡಾಲಿ ಧನಂಜಯ್ ಕಾಂಬಿನೇಷನ್ ಇದೇ ಮೊದಲ ಬಾರಿಗೆ ಎಂಬುದು ಒಂದೆಡೆಯಾದರೆ, ಎರಡು ಭಾಗಗಳಲ್ಲಿ ಮೂಡಿಬಂದಿರುವ ರೊಮ್ಯಾಂಟಿಕ್ ಕಾಮಿಡಿ ಸಿನಿಮಾದಲ್ಲಿ ಕಾನಿಸಿಕೊಂಡಿರೋದು ವಿಶೇಷ.

ಡಾಲಿ ಧನಂಜಯ್ ಈವರೆಗೂ ವಿಭಿನ್ನ ರೀತಿಯ ಪಾತ್ರಗಳ ಮೂಲಕ ಮಿಂಚು ಹರಿಸಿದ್ದಾರೆ. ಅವರು ನಟಿಸಿರುವ ಪಾತ್ರಗಳಲ್ಲಿ ನಾಯಕ-ಖಳನಾಯಕನಾಗಿ ಅಬ್ಬರಿಸಿದ್ದಾರೆ. ಇದೀಗ ‘ತೋತಾಪುರಿ-2’ ಮೂಲಕ ಮತ್ತಷ್ಟು ಸೌಂಡು ಮಾಡಲು ಸಜ್ಜಾಗಿದ್ದಾರೆ ಡಾಲಿ.

ಈಗಾಗಲೇ ತೋತಾಪುರಿ ಮೊದಲ ಭಾಗದಲ್ಲಿ ಅವರ ಪಾತ್ರದ ಪರಿಚಯವಾಗಿತ್ತು. ಆದರೆ ಅವರು ಎಷ್ಟು ಶೇಡ್‌ಗಳಲ್ಲಿ ಕಾಣಿಸಿಕೊಂಡಿದ್ದಾರೆ, ಗೆಟಪ್, ಡೈಲಾಗ್ ಇತ್ಯಾದಿ ವಿಷಯಗಳ ಕುರಿತು ಚಿತ್ರತಂಡ ಹೆಚ್ಚಿನ ಮಾಹಿತಿ ಹೊರ ಹಾಕಿರಲಿಲ್ಲ. ಇದೀಗ ‘ತೋತಾಪುರಿ-2’ ಬಿಡುಗಡೆಯ ಹಂತಕ್ಕೆ ಬಂದಿದೆ. ಹೀಗಾಗಿ ಅವರ ಪಾತ್ರದ ಬಗ್ಗೆ ಒಂದಷ್ಟು ವಿವರಣೆ ಹೊರಬಿದ್ದಿದೆ.

ನಾರಾಯಣ್ ಪಿಳ್ಳೈ ಎಂಬ ಪಾತ್ರ ನಿರ್ವಹಿಸುತ್ತಿರುವ ಡಾಲಿ, ಬೃಹತ್ ಉದ್ಯಮಿಯಾಗಿ ಕಾಣಿಸಿಕೊಂಡಿದ್ದಾರೆ. ಅವರ ಲೈಫ್‌ಸ್ಟೈಲ್, ಲವ್‌ಸ್ಟೋರಿ ಸೇರಿದಂತೆ ಇನ್ನಿತರ ವಿಷಯಗಳ್ನು ‘ತೋತಾಪುರಿ-೨’ರಲ್ಲಿ ತೆರೆದಿಡುವ ಪ್ರಯತ್ನವಾಗಿದೆಯಂತೆ. ಇತ್ತೀಚೆಗಷ್ಟೇ ಡಾಲಿ ಹಾಗೂ ಸುಮನ್ ರಂಗನಾಥ್ ಕಾಣಿಸಿಕೊಂಡಿರುವ ‘ಮೊದಲ ಮಳೆ’ ಹಾಡು ಬಿಡುಗಡೆಯಾಗಿದ್ದು. ಇದೀಗ ‘ಲಾಂಗ್ ಡ್ರೈವ್ ಹೋಗೋಣ’ ಎಂಬ ಹಾಡು ಸಹ ಬಿಡುಗಡೆಯಾಗಲಿದೆ.

ಚಿತ್ರದಲ್ಲಿ ಡಾಲಿ ಮೂರ‍್ನಾಲ್ಕು ಗೆಟಪ್‌ಗಳಲ್ಲಿ ಕಾಣಿಸಿಕೊಂಡಿದ್ದು, ವಿಭಿನ್ನ ಶೇಡ್ ಕೂಡ ಇರಲಿದೆ ಎಂಬುದು ಸದ್ಯದ ಮಾಹಿತಿ. ಈವರೆಗೂ ಕಾಣಿಸಿಕೊಂಡಿರದ ಸ್ಟೈಲ್, ಮಾತಿನ ಲಹರಿ ‘ತೋತಾಪುರಿ-2′ ಮೂಲಕ ಅನಾವರಣ ಮಾಡಲು ಸಜ್ಜಾಗಿದೆ ಚಿತ್ರತಂಡ. ಬಿಡುಗಡೆಗೂ ಮುನ್ನ ಡಾಲಿ ಗೆಟಪ್‌ಗಳನ್ನು ಹರಿಬಿಟ್ಟಿರುವ ಚಿತ್ರತಂಡ, ಸಿನಿಮಾ ಮೇಲೆ ನೀರಿಕ್ಷೆ ಹೆಚ್ಚುವಂತೆ ಮಾಡಿದೆ. ಮೈಸೂರು, ಕೂರ್ಗ್, ಕೇರಳ ಸೇರಿದಂತೆ ರಮಣೀಯ ಸ್ಥಳಗಳಲ್ಲಿ ಡಾಲಿ-ಸುಮನ್ ಅಭಿನಯಿಸಿರುವ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ.

ಇನ್ನು ಡಾಲಿ ಜೋಡಿಯಾಗಿ ಸುಮನ್ ರಂಗನಾಥ್ ನಟಿಸಿದ್ದಾರೆ. ಹಾಗೆಯೇ ಈ ಚಿತ್ರದಲ್ಲಿ ಜಗ್ಗೇಶ್, ಅದಿತಿ ಪ್ರಭುದೇವ, ದತ್ತಣ್ಣ, ವೀಣಾ ಸುಂದರ್, ಹೇಮಾದತ್ ಸೇರಿದಂತೆ ಬೃಹತ್ ತಾರಾಗಣವೇ ಇದೆ. ವಿಜಯಪ್ರಸಾದ್ ನಿರ್ದೇಶನವಿರುವ ಈ ಚಿತ್ರವನ್ನು ಕೆ.ಎ.ಸುರೇಶ್ ನಿರ್ಮಿಸಿದ್ದಾರೆ.

Categories
ಸಿನಿ ಸುದ್ದಿ

ನಾಗಚೈತನ್ಯ ಪ್ಯಾನ್ ಇಂಡಿಯಾ ಸಿನಿಮಾ ಘೋಷಣೆ: ಕಾರ್ತಿಕೇಯ-2 ನಿರ್ದೇಶಕನ ಜೊತೆ ಹೊಸ ಚಿತ್ರ

ಟಾಲಿವುಡ್ ಯುವ ಸಾಮ್ರಾಟ ನಾಗಚೈತನ್ಯ ಹೊಸ ಸಿನಿಮಾಗೆ ಸಜ್ಜಾಗುತ್ತಿದ್ದಾರೆ. ಅದಕ್ಕಾಗಿ ಅವರು ಆಂಧ್ರ ಪ್ರದೇಶದ ಶ್ರೀಕಾಕುಳಂ ಹಳ್ಳಿಗೆ ಭೇಟಿ ನೀಡಿ ಮೀನುಗಾರರ ಸಮುದಾಯ ಭೇಟಿ ಮಾಡಿ ಕೆಲ ಸಮಯ ಅವರೊಟ್ಟಿಗೆ ಕಳೆದಿದ್ದಾರೆ. ಮೀನುಗಾರರ ಸಂಸ್ಕೃತಿ, ನೆಲ, ಭಾಷೆ, ಜೀವನಶೈಲಿಯ ಬಗ್ಗೆ ತಿಳಿದುಕೊಂಡಿದ್ದಾರೆ. ಅಂದಹಾಗೇ ನಾಗಚೈತನ್ಯ ನಟಿಸುತ್ತಿರುವ 23 ನೇ ಚಿತ್ರ ಇದಾಗಿದ್ದು, ನೈಜ ಘಟನೆಯ ಸುತ್ತ ಇಡೀ ಕಥೆಯನ್ನು ಕಟ್ಟಿಕೊಡಲಾಗಿದೆ.

ಕಾರ್ತಿಕೇಯ-2 ನಂತಹ ಪ್ಯಾನ್ ಇಂಡಿಯಾ ಬ್ಲಾಕ್ ಬಸ್ಟರ್ ಹಿಟ್ ಕೊಟ್ಟಿರುವ ಚಂದು ಮೊಂಡೇಟಿ ಈ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ಸದ್ಯ NC23 ಎಂಬ ತಾತ್ಕಾಲಿಕ ಟೈಟಲ್ ಇಡಲಾಗಿದ್ದು, ಶೀಘ್ರದಲ್ಲೇ ಈ ಚಿತ್ರ ಸೆಟ್ಟೇರುತ್ತಿದೆ. ತೆಲುಗಿನ ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ ಈ ಸಿನಿಮಾವನ್ನು ಪ್ರಸ್ತುತಪಡಿಸ್ತಿದ್ದು, ಬನ್ನಿ ವಾಸ್ ಗೀತಾ ಆರ್ಟ್ಸ್ ಬ್ಯಾನರ್ ನಡಿ ನಿರ್ಮಾಣ ಮಾಡುತ್ತಿದ್ದಾರೆ.

NC23 ಸಿನಿಮಾದ ಪ್ರೀ ಪ್ರೊಡಕ್ಷನ್ ಕೆಲಸ ಭರದಿಂದ ಸಾಗುತ್ತಿದ್ದು, ಇದೇ ತಿಂಗಳಿಂದ ಚಿತ್ರೀಕರಣ ಆರಂಭಿಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ. ನಾಗಚೈತನ್ಯ, ಚಂದೂ ಮೊಂಡೇಟಿ ಹಾಗೂ ಬನ್ನಿ ವಾಸ್ ನಿನ್ನೆ ವೈಜಾಗ್ ನಲ್ಲಿ ಭೇಟಿಯಾಗಿ ಈ ಬಗ್ಗೆ ಚರ್ಚೆ ನಡೆಸಿದ್ದಾರೆ. ಇಂದು ಶ್ರೀಕಾಕುಳಂ ಗ್ರಾಮಕ್ಕೆ ತೆರಳಿ ಮೀನುಗಾರರ ಕುಟುಂಬವನ್ನು ಭೇಟಿ ಮಾಡಿದ್ದಾರೆ.

ಈ ವೇಳೆ ಮಾಧ್ಯಮದವರನ್ನು ಉದ್ದೇಶಿಸಿ‌ ಮಾತನಾಡಿದ ನಾಯಕ ನಾಗಚೈತನ್ಯ, “ಚಂದು ಅವರು 6 ತಿಂಗಳ ಹಿಂದೆ ಕಥೆಯನ್ನು ಹೇಳಿದ್ದರು. ನಾನು ತುಂಬಾ ಉತ್ಸುಕನಾಗಿದ್ದೇನೆ. ನೈಜ ಘಟನೆಗಳನ್ನು ಆಧರಿಸಿ ಅವರು ಕಥೆಯನ್ನು ಅಭಿವೃದ್ಧಿಪಡಿಸಿದ್ದಾರೆ. ವಾಸ್ ಮತ್ತು ಚಂದೂ ಎರಡು ವರ್ಷಗಳಿಂದ ಕಥೆಯ ಮೇಲೆ ಕೆಲಸ ಮಾಡುತ್ತಿದ್ದಾರೆ. ಕಥೆ ತುಂಬಾ ಸ್ಪೂರ್ತಿದಾಯಕವಾಗಿತ್ತು. ಮೀನುಗಾರರ ಜೀವನಶೈಲಿ, ಅವರ ಭಾಷೆ ಮತ್ತು ಹಳ್ಳಿಯ ಸೊಬಗನ್ನು ತಿಳಿಯಲು ನಾವು ಇಲ್ಲಿಗೆ ಬಂದಿದ್ದೇವೆ. ಪ್ರಿ-ಪ್ರೊಡಕ್ಷನ್ ಕೆಲಸಗಳು ಇಂದಿನಿಂದ ಪ್ರಾರಂಭವಾಗುತ್ತವೆ. ”

ಚಂದೂ ಮೊಂಡೇಟಿ, “ಕಾರ್ತಿಕ್ ಎಂಬ ಸ್ಥಳೀಯ ವ್ಯಕ್ತಿ 2018 ರಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿ ಕಥೆಯನ್ನು ಸಿದ್ಧಪಡಿಸಿದ್ದಾರೆ. ಅವರು ಆರಂಭದಲ್ಲಿ ಅರವಿಂದ್ ಮತ್ತು ಬನ್ನಿ ವಾಸ್ ಅವರಿಗೆ ಕಥೆಯನ್ನು ಹೇಳಿದರು. ಕಥೆ ಕೇಳಿದಾಗ ಎಕ್ಸೈಟ್ ಆದೆ. ನಾವು ಕಳೆದ 2 ವರ್ಷಗಳಿಂದ ಸ್ಕ್ರಿಪ್ಟ್‌ನಲ್ಲಿ ಕೆಲಸ ಮಾಡುತ್ತಿದ್ದೇವೆ.

ಇದೀಗ ಸ್ಕ್ರಿಪ್ಟ್ ಸಿದ್ಧವಾಗಿದ್ದು, ಚೆನ್ನಾಗಿ ಬಂದಿದೆ. ಚೈತನ್ಯ ಕಥೆಯಿಂದ ಸಂತಸಗೊಂಡಿದ್ದಾರೆ. ಘಟನೆ ನಡೆದ ಸ್ಥಳದಲ್ಲಿಯೇ ಸಿನಿಮಾದ ಪ್ರೀ-ಪ್ರೊಡಕ್ಷನ್‌ ಆರಂಭಿಸಲು ನಾವು ಬಯಸಿದ್ದೇವೆ ಎಂದರು.

ಶೀಘ್ರದಲ್ಲೇ ಈ ಪ್ರಾಜೆಕ್ಟ್ ಅಪ್ ಡೇಟ್ ಬಗ್ಗೆ ತಿಳಿಸುವುದಾಗಿ ಚಿತ್ರತಂಡ ಹೇಳಿದೆ.

error: Content is protected !!