Categories
ಸಿನಿ ಸುದ್ದಿ

ಜುಲೈ 21ಕ್ಕೆ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ!

ಟೀಸರ್, ಸಾಂಗ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಜುಲೈ 21ಕ್ಕೆ ರಾಜ್ಯಾದ್ಯಂತ ಚಿತ್ರ ತೆರೆಗಪ್ಪಳಿಸಲಿದೆ. ಸೆಟ್ಟೇರಿದ ದಿನದಿಂದಲೂ ವಿಭಿನ್ನ ಬಗೆಯಲ್ಲಿ ಪ್ರಚಾರ ನಡೆಸುತ್ತಿರುವ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾಗೆ ಪುನೀತ್ ರಾಜ್ ಕುಮಾರ್, ರಮ್ಯಾ, ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ, ಶೈನಿ ಶೆಟ್ಟಿ, ಪವನ್ ಕುಮಾರ್ ಸೇರಿದಂತೆ ಚಂದನವನದ ಹಲವು ತಾರೆಯರು ಸಾಥ್ ಕೊಟ್ಟಿದ್ದಾರೆ. ಇತ್ತೀಚೆಗಷ್ಟೇ ದೂದ್ ಪೇಡಾ ದಿಗಂತ್ ಹಾಸ್ಟೆಲ್ ಹುಡುಗರ ಬಳಗ ಸೇರಿದ್ದಾರೆ.

ಯೂತ್ ಸಬ್ಜೆಕ್ಟ್ ಕಥೆಯನ್ನೊಳಗೊಂಡ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾವನ್ನು ನಿತಿನ್ ಕೃಷ್ಣಮೂರ್ತಿ ಕಥೆ ಬರೆದು ನಿರ್ದೇಶಿಸಿದ್ದಾರೆ. ಬಹುತೇಕ ರಂಗಭೂಮಿ ಪ್ರತಿಭೆಗಳು ನಟಿಸಿರುವ ಈ ಚಿತ್ರವನ್ನು ವರುಣ್ ಸ್ಟುಡಿಯೋಸ್ ಹಾಗೂ ಗುಲ್ ಮೋಹರ್ ಫಿಲ್ಮಂಸ್ ಬ್ಯಾನರ್ ನಡಿ ಪ್ರಜ್ವಲ್ ಬಿ.ಪಿ, ವರುಣ್ ಕುಮಾರ್ ಗೌಡ, ನಿತಿನ್ ಕೃಷ್ಣಮೂರ್ತಿ, ಅರವಿಂದ್ ಕೆ ಕಶ್ಯಪ್ ಬಂಡವಾಳ ಹೂಡಿದ್ದಾರೆ.

ಪ್ರತಿ ಬಾರಿ ಯುನಿಕ್ ಕಾನ್ಸಎಪ್ಟ್ ಮೂಲಕ ಪ್ರಚಾರ ಮಾಡುತ್ತಿರುವ ಹಾಸ್ಟೆಲ್ ಹುಡುಗರನು ಸಿನಿಮಾವನ್ನು ರಕ್ಷಿತ್ ಶೆಟ್ಟಿ ತಮ್ಮದೇ ಪರಂವಃ ಪಿಕ್ಚರ್ಸ್ ಮೂಲಕ ಪ್ರಸ್ತುತಪಡಿಸುತ್ತಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಅರವಿಂದ್ ಛಾಯಾಗ್ರಹಣ, ಸುರೇಶ್ ಸಂಕಲನವಿರುವ ಚಿತ್ರದ ಶ್ರೀಮಂತಿಕೆ ಹೆಚ್ಚಿಸಿದೆ. ಬಿಡುಗಡೆ ದಿನಾಂಕ ಘೋಷಿಸಿರುವ ಚಿತ್ರತಂಡ ಶೀಘ್ರದಲ್ಲಿಯೇ ಟ್ರೇಲರ್ ಬಿಡುಗಡೆ ಮಾಡಲು ಯೋಜನೆ ಹಾಕಿಕೊಂಡಿದೆ.

Categories
ಸಿನಿ ಸುದ್ದಿ

ನಿಮ್ಮೆಲ್ಲರ ಆಶೀರ್ವಾದ ಈ ಸಿನಿಮಾ ತಂಡದ ಮೇಲಿರಲಿ: ಪೋಸ್ಟರ್ ರಿಲೀಸ್ ಆಯ್ತು; ಶೀಘ್ರವೇ ಚಿತ್ರ ಬಿಡುಗಡೆ

ವರುಣ್ ಸಿನಿ ಕ್ರಿಯೇಷನ್ಸ್ ಚೊಚ್ಚಲ ಹೆಜ್ಜೆ ನಿಮ್ಮೆಲ್ಲರ ಆರ್ಶೀರ್ವಾದ ಸಿನಿಮಾ ಪೋಸ್ಟ್ ಪ್ರೊಡಕ್ಷನ್ಸ್ ಕೆಲಸ ಮುಗಿಸಿ ಬಿಡುಗಡೆಗೆ ಹಂತಕ್ಕೆ ಬಂದಿದೆ. ಯುವ ಸಿನಿ ಸಿನಿಮೋತ್ಸಾಹಿಗಳೇ ಸೇರಿಕೊಂಡು ತಯಾರಿಸಿರುವ ಈ ಚಿತ್ರಕ್ಕೆ ವರುಣ್ ಹೆಗ್ಡೆ ಹಣ ಹಾಕಿದ್ದು, ಇದು ಇವರ ಮೊದಲ ಪ್ರಯತ್ನವಾಗಿದೆ. ಚಿತ್ರರಂಗದ ಮೇಲಿನ ಅಪಾರ ಅಭಿಮಾನ ಹಾಗೂ ಆಸಕ್ತಿಯಿಂದಾಗಿ ವರುಣ್ ಹೆಗ್ಡೆ ಸಿನಿಮಾ ನಿರ್ಮಾಣಕ್ಕಿಳಿದಿದ್ದಾರೆ. ಈ ಚಿತ್ರದ ಹೊಸ ಪೋಸ್ಟರ್ ರಿಲೀಸ್ ಆಗಿದ್ದು,‌ ನೋಡುಗರ ಗಮನಸೆಳೆಯುತ್ತಿದೆ.

ಕೌಟುಂಬಿಕ ಕಥಾಹಂದರದ ನಿಮ್ಮೆಲ್ಲರ ಆಶೀರ್ವಾದ ಸಿನಿಮಾದಲ್ಲಿ ಪೊಲೀಸ್‌ ಅಧಿಕಾರಿಯೊಬ್ಬರ ವೃತ್ತಿ ಬದುಕು ಮತ್ತು ವೈಯಕ್ತಿಕ ಬದುಕಿನ ದಿನಚರಿಯನ್ನು ವಿಭಿನ್ನವಾಗಿ ಕಟ್ಟಿಕೊಡಲಾಗಿದೆ. ಈ ಚಿತ್ರದ ಮೂಲಕ ಪ್ರತೀಕ್‌ ಶೆಟ್ಟಿ ನಾಯಕನಾಗಿ ಸ್ಯಾಂಡಲ್ ವುಡ್ ಗೆ ಪದಾರ್ಪಣೆ ಮಾಡಿದ್ದು, ಭಿನ್ನ ಸಿನಿಮಾ ಖ್ಯಾತಿಯ ಪಾಯಲ್‌ ರಾಧಾಕೃಷ್ಣ ನಾಯಕಿಯಾಗಿ ನಟಿಸಿದ್ದಾರೆ. ಎಂ. ಎನ್‌.ಲಕ್ಷ್ಮೀದೇವಿ, ಅರವಿಂದ ಬೋಳಾರ್‌, ಗೋವಿಂದೇಗೌಡ, ಸ್ವಾತಿ ಗುರುದತ್‌, ದಿನೇಶ್‌ ಮಂಗಳೂರು ಸೇರಿದಂತೆ ಹಿರಿಯ ಹಾಗೂ ಅನುಭವಿ ಕಲಾದಂಡು ಚಿತ್ರದಲ್ಲಿದೆ.

ನಿಮ್ಮೆಲ್ಲರ ಆಶೀರ್ವಾದ ಸಿನಿಮಾಗೆ
ಯುವ ನಿರ್ದೇಶಕ ರವಿಕಿರಣ್‌ ಆಕ್ಷನ್ ಕಟ್ ಹೇಳಿದ್ದು, ಸರವಣನ್‌ ಜಿ.ಎನ್‌.ಛಾಯಾಗ್ರಹಣ, ರಘು ನಿಡುವಳ್ಳಿ ಡೈಲಾಗ್, ರೂಪೇಂದ್ರ ಆಚಾರ್‌ ಕಲಾ ನಿರ್ದೇಶನ, ಸುನಾದ್‌ ಗೌತಮ್‌ ಸಂಗೀತ ಮತ್ತು ವಿವೇಕ್‌ ಚಕ್ರವರ್ತಿ ಹಿನ್ನೆಲೆ ಸಂಗೀತ, ಸುರೇಶ್‌ ಆರುಮುಗಂ ಸಂಕಲನ ಸಿನಿಮಾದ ಶ್ರೀಮಂತಿಕೆ ಹೆಚ್ಚಿಸಿದೆ.

ಕರಾವಳಿಯ ವಿವಿಧ ಭಾಗಗಳಲ್ಲಿ ಸಿನಿಮಾವನ್ನು ಚಿತ್ರೀಕರಿಸಲಾಗಿದೆ.
ಈಗಾಗಲೇ ಒಂದಷ್ಟು ಪೋಸ್ಟರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ನಿಮ್ಮೆಲ್ಲರ ಆಶೀರ್ವಾದ ಚಿತ್ರ ಇದೇ ತಿಂಗಳು ರಾಜ್ಯಾದ್ಯಂತ ತೆರೆಗಪ್ಪಳಿಸಲಿದೆ. ಅದಕ್ಕೂ ಮುನ್ನ ಚಿತ್ರತಂಡ ಇದೇ ವಾರ ಆಡಿಯೋ ಬಿಡುಗಡೆಗೆ ತಯಾರಿ ನಡೆಸಿದೆ.

Categories
ಸಿನಿ ಸುದ್ದಿ

ಮನಸು ಜಾರಿದೆ ಆಲ್ಬಂ ಸಾಂಗ್ ಬಿಡುಗಡೆ ವೇಳೆ ಪ್ರಣಯ ರಾಜ ಶ್ರೀನಾಥ್ ಗೆ ಸನ್ಮಾನ

ಭಜರಂಗಿ 2 ಖ್ಯಾತಿಯ ಚೆಲುವರಾಜು ಹಾಗೂ ಕನ್ನಡ ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಕಲಾವಿದೆಯಾಗಿ ಗುರುತಿಸಿಕೊಂಡಿರುವ ನಟಿ ವಿದ್ಯಾವಿಜಯ್ ಅಭಿನಯಿಸಿರುವ “ಮನಸು ಜಾರಿದೆ” ಆಲ್ಬಂ ಸಾಂಗ್ ಇತ್ತೀಚೆಗೆ ಬಿಡುಗಡೆಯಾಗಿದೆ.

ಇದೇ ಸಂದರ್ಭದಲ್ಲಿ ಪ್ರಣಯ ರಾಜ ಶ್ರೀನಾಥ್ ಅವರಿಗೆ ಜೀವಮಾನ ಸಾಧನೆಗಾಗಿ ವಿಶೇಷ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮಾಜಿ ಸಚಿವರಾದ ಕೃಷ್ಣಪ್ಪ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಮುಂತಾದ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇಲ್ಲಿರುವವರೆಲ್ಲ ಬಹಳ ಚಿಕ್ಕವರು. ಈಗಿನ ಪೀಳಿಗೆಯವರು ನನಗೆ ಈ ಪ್ರಶಸ್ತಿ ನೀಡಿ ಗೌರವಿಸಿರುವುದು ತುಂಬಾ ಖುಷಿಯಾಗಿದೆ ಎಂದರು ಪ್ರಣಯರಾಜ ಶ್ರೀನಾಥ್.

ವಿದ್ಯಾವಿಜಯ್ ಅವರು ಸಹ “ಮನಸು ಜಾರಿದೆ” ಆಲ್ಬಂ ಸಾಂಗ್ ಕುರಿತು ಹಾಗೂ VIDIS ಎಂಟರ್ಟೈನ್ಮೆಂಟ್ ಮೂಲಕ ಆಯೋಜಿಸಲಾಗಿರುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಸ್ಮರಣಾರ್ಥ ನಡೆದ ಈ ಸಮಾರಂಭದಲ್ಲಿ ಮಕ್ಕಳಿಗಾಗಿ ದೇಸಿಶೈಲಿಯ “ದೇಸಿ ನಡಿಗೆ” ಎಂಬ ಫ್ಯಾಶನ್ ಶೋ ಕೂಡ ಆಯೋಜಿಸಲಾಗಿತ್ತು.

Categories
ಸಿನಿ ಸುದ್ದಿ

ಭೂತಾತ್ಮನಿಗೆ ಸಾಥ್ ಕೊಟ್ಟ ಧ್ರುವ ಸರ್ಜಾ: ಕೋಮಲ್ ಚಿತ್ರದ ಟೀಸರ್ ಬಂತು

ಸಹಜ ಅಭಿನಯದ ಮೂಲಕ ಜನರ ಮನ ಗೆದ್ದಿರುವ ನಟ ಕೋಮಲ್ ಕುಮಾರ್ ನಾಯಕರಾಗಿ ನಟಿಸಿರುವ “ನಮೋ ಭೂತಾತ್ಮ 2 ” ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನೃತ್ಯ ನಿರ್ದೇಶಕ ಮುರಳಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ನಟ ಧ್ರುವ ಸರ್ಜಾ ಟೀಸರ್ ಬಿಡುಗಡೆ ಮಾಡಿದರು.

ಟೀಸರ್ ಬಿಡುಗಡೆ ಮಾಡಿ ಮಾತನಾಡಿದ ಧ್ರುವ ಸರ್ಜಾ, ನಾನು ಮೊದಲಿನಿಂದಲೂ ಕೋಮಲ್ ಅವರ ಅಭಿಮಾನಿ. ಅವರ ಅಭಿನಯದ ಎಲ್ಲಾ ಚಿತ್ರಗಳನ್ನು ನೋಡಿದ್ದೇನೆ. ಈ ಚಿತ್ರದ ಬಿಡುಗಡೆಗೂ ಕಾಯುತ್ತಿದ್ದೇನೆ. ಮುರಳಿ ಮಾಸ್ಟರ್ ಸಹ ನನ್ನ ಚಿತ್ರಗಳ ಹಾಡುಗಳಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. “ನಮೋ ಭೂತಾತ್ಮ 2” ಸೂಪರ್ ಹಿಟ್ ಆಗಲಿ ಎಂದು ಹಾರೈಸಿದರು.

ನಾನು ನಿರ್ಮಿಸಿ, ನಟಿಸಿದ್ದ, ಮುರಳಿ ಮಾಸ್ಟರ್ ನಿರ್ದೇಶಿಸಿದ್ದ “ನಮೋ ಭೂತಾತ್ಮ” ಚಿತ್ರದ ಮೊದಲ ಭಾಗ ಬಿಡುಗಡೆಯಾಗಿ ಹತ್ತು ವರ್ಷಗಳಾಗಿದೆ. ಆ ಚಿತ್ರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ನಂತರ ಮುರಳಿ ಮಾಸ್ಟರ್ ಹಾಗೂ ನಾನು ಇನ್ನೆರಡು ಚಿತ್ರಗಳ ಬಗ್ಗೆ ಚರ್ಚೆ ಮಾಡಿದ್ದೆವು. ಆದರೆ ಎಷ್ಟೋ ವರ್ಷಗಳ ಬಳಿಕ ಈ “ನಮೋ ಭೂತಾತ್ಮ ೨” ಚಿತ್ರ ನಮ್ಮಿಬ್ಬರ ಕಾಂಬಿನೇಶನ್ ನಲ್ಲಿ ಬರುತ್ತಿದೆ‌. ಮೊದಲಭಾಗಕ್ಕೆ ಭಯ ಹುಟ್ಟಿಸುವ ಸನ್ನಿವೇಶಗಳು ಹೆಚ್ಚಾಗಿದ್ದವು. ಆದರೆ ಈ ಚಿತ್ರದಲ್ಲಿ ಕಾಮಿಡಿ ಕೂಡ ಅರ್ಧ ಭಾಗದಷ್ಟಿರುತ್ತದೆ. ಟೀಸರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾ ಅವರಿಗೆ ಧನ್ಯವಾದ ಎಂದು ನಾಯಕ ಕೋಮಲ್ ಕುಮಾರ್ ತಿಳಿಸಿದರು.

2014 ರಲ್ಲಿ ನನಗೆ ಕೋಮಲ್ ಅವರು “ನಮೋ ಭೂತಾತ್ಮ” ಚಿತ್ರ ನಿರ್ದೇಶಿಸಲು ಅವಕಾಶ ನೀಡಿದ್ದರು. ಆನಂತರ ಈಗ “ನಮೋ ಭೂತಾತ್ಮ 2” ಚಿತ್ರದಲ್ಲಿ ಅವರ ಜೊತೆ ಮಾಡಿದ್ದೇನೆ. ನನ್ನ ಅಕ್ಕನ ಮಗ ಸಂತೋಷ್ ಶೇಖರ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಕೊರೋನ ಸಮಯದಲ್ಲೇ ಈ ಚಿತ್ರದ ಕಥೆ ಸಿದ್ದ ಮಾಡಿಕೊಂಡಿದ್ದೆ. ಆನಂತರ ಕೋಮಲ್ ಅವರಿಗೆ ನಾನು ಹಾಗೂ ಸಂತೋಷ್ ಹೋಗಿ ಈ ಚಿತ್ರದ ಕಥೆ ಹೇಳಿದ್ದೆವು. ಕೋಮಲ್ ಅವರು ನಟಿಸಲು ಒಪ್ಪಿದರು.

ಚಿತ್ರಕ್ಕೆ “ನಮೋ ಭೂತಾತ್ಮ 2” ಎಂದು ಹೆಸರಿಟ್ಟೆವು. ನನ್ನ ತಂಡದ ಸದಸ್ಯರ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ. ಇಂದು ಟೀಸರ್ ಬಿಡುಗಡೆಯಾಗಿದೆ. ಸದ್ಯದಲ್ಲೇ ಚಿತ್ರ ತೆರೆಗೆ. ಟೀಸರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾ ಅವರಿಗೆ ವಿಶೇಷ ಧನ್ಯವಾದ ಎಂದರು ನಿರ್ದೇಶಕ ಮುರಳಿ.

ನಾಯಕಿ ಲೇಖಾ ಚಂದ್ರ, ಚಿತ್ರದಲ್ಲಿ ನಟಿಸಿರುವ ಜಿ.ಜಿ, ಮೋನಿಕಾ, ವರುಣ್ ರಾಜ್ ಹಾಗೂ ಚಿತ್ರದ ನಿರ್ಮಾಪಕ ಸಂತೋಷ್ ಶೇಖರ್ ಚಿತ್ರದ ಕುರಿತು ಮಾತನಾಡಿದರು.

Categories
ಸಿನಿ ಸುದ್ದಿ

ರಾಗಿಣಿಯ ಶೀಲ ಬಿಡುಗಡೆಗೆ ರೆಡಿ

ನಟಿ ರಾಗಿಣಿ ದ್ವಿವೇದಿ ಪ್ರಮುಖಪಾತ್ರದಲ್ಲಿ ನಟಿಸಿರುವ “ಶೀಲ” ಚಿತ್ರ ಜುಲೈ ತಿಂಗಳ ಕೊನೆಗೆ ತೆರೆ ಕಾಣಲಿದೆ. ಚಿತ್ರ ಕನ್ನಡ ಹಾಗೂ ಮಲೆಯಾಳಂನಲ್ಲಿ ನಿರ್ಮಾಣವಾಗಿದೆ

“ಶೀಲ” ಮಹಿಳಾ ಪ್ರಧಾನ ಚಿತ್ರ ಎಂದು ಮಾತು ಆರಂಭಿಸಿದ ರಾಗಿಣಿ ದ್ವಿವೇದಿ, ಪ್ರಸ್ತುತ ಹೆಣ್ಣು ಮಕ್ಕಳು ದಿನನಿತ್ಯ ಸಮಾಜದಲ್ಲಿ ಎದುರಿಸುತ್ತಿರುವ ಹಲವು ಸಮಸ್ಯೆಗಳ ಸುತ್ತ ಈ ಚಿತ್ರದ ಕಥೆ ಹೆಣೆಯಲಾಗಿದೆ. ಹೆಣ್ಣು ಮನಸ್ಸು ಮಾಡಿದರೆ, ತನ್ನಗೆದುರಾಗುವ ಸಮಸ್ಯೆಯನ್ನು ತಾನೇ ಹೇಗೆ ಬಗೆಹರಿಸಿಕೊಳ್ಳಬಹುದು‌ ಎಂಬುದನ್ನು ಕೂಡ ಈ ಚಿತ್ರದಲ್ಲಿ ತೋರಿಸಿದ್ದೇವೆ.

ಹೆಣ್ಣು ಲಕ್ಷ್ಮೀ ಸ್ವರೂಪಳು ಹೌದು. ಕಾಳಿ ಸ್ವರೂಪಳು ಹೌದು. ನಿರ್ದೇಶಕ ಬಾಲು ನಾರಾಯಣನ್ ಉತ್ತಮ ಕಥೆ ಆಯ್ಕೆ ಮಾಡಿಕೊಂಡಿದ್ದಾರೆ.
ಕೇರಳ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ. ಕನ್ನಡ ಹಾಗೂ ಮಲೆಯಾಳಂ ಎರಡೂ ಭಾಷೆಗಳಲ್ಲೂ ಚಿತ್ರೀಕರಣವಾಗಿದೆ. ಚಿತ್ರ ಮೊದಲು ಕನ್ನಡದಲ್ಲಿ ಬಿಡುಗಡೆಯಾಗಲಿದೆ ಎಂದು ತಿಳಿಸಿದರು.

ನಾನು ಮೂಲತಃ ಉದ್ಯಮಿ. ಕಳೆದ ಮೂವತ್ತೈದು ವರ್ಷಗಳಿಂದ ಬೆಂಗಳೂರಿನಲ್ಲೇ ವಾಸಿಸುತ್ತಿದ್ದೇವೆ‌. ಇದು ನನ್ನ ನಿರ್ಮಾಣದ ಮೊದಲ ಚಿತ್ರ. ಕಥೆ ಚೆನ್ನಾಗಿದೆ . ಜುಲೈ ತಿಂಗಳ ಕೊನೆಯವಾರದಲ್ಲಿ ಬಿಡುಗಡೆ ಮಾಡುತ್ತೇವೆ. ನೋಡಿ. ಪ್ರೋತ್ಸಾಹಿಸಿ ಎಂದರು ನಿರ್ಮಾಪಕ ಡಿ.ಎಂ.ಪಿಳ್ಳೈ.

ಬಾಲು ನಾರಾಯಣನ್ ನಿರ್ದೇಶಿಸಿರುವ ಈ ಚಿತ್ರದ ತಾರಾಬಳಗದಲ್ಲಿ
ರಾಗಿಣಿ ದ್ವಿವೇದಿ, ಅವಿನಾಶ್, ಶೋಭ್ ರಾಜ್, ಚಿತ್ರಾ ಶೆಣೈ, ಮಹೇಶ್ ನಾಯರ್, ಶ್ರೀಪತಿ, ರಿಯಾಜ್ ಖಾನ್, ಅಬೆ ಡೇವಿಡ್, ಆರತಿ ಗೋಪಾಲ್ ಮುಂತಾದವರಿದ್ದಾರೆ‌.

Categories
ಸಿನಿ ಸುದ್ದಿ

ಕೃಷ್ಣಂ ಪ್ರಣಯ ಸಖಿ: ಇದು ಗೋಲ್ಡನ್ ಚಿತ್ರ: ಗಣೇಶ್ ಹುಟ್ದಬ್ಬಕ್ಕೆ ಬಂತು ಫಸ್ಟ್ ಲುಕ್

ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ ಹೊಸ ಚಿತ್ರ ” ಕೃಷ್ಣಂ ಪ್ರಣಯ ಸಖಿ”. ಗಣೇಶ್ ನಾಯಕರಾಗಿ ನಟಿಸುತ್ತಿರುವ 41 ನೇ ಚಿತ್ರವಿದು‌. ಕನ್ನಡದ ಹಲವು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ಶ್ರೀನಿವಾಸರಾಜು ಈ ಚಿತ್ರವನ್ನು ನಿರ್ದೇಶಿಸಿಸುತ್ತಿದ್ದಾರೆ.

ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಮೈಸೂರು, ರಾಜಸ್ಥಾನ ಹಾಗೂ ಯುರೋಪ್ ನಲ್ಲಿ ಚಿತ್ರೀಕರಣ ನಡೆಯಲಿದೆ.

ಜುಲೈ 2, ನಾಯಕ ಗಣೇಶ್ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಫಸ್ಟ್ ಲುಕ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಗಣೇಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.

ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಮೂರನೇ ಚಿತ್ರವಿದು. ಅರ್ಜುನ್ ಜನ್ಯ ಈ ಚಿತ್ರದ ಸಂಗೀತ ನಿರ್ದೇಶಕರು.

ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸುತ್ತಿದ್ದಾರೆ. ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಸುಧಾರಾಣಿ, ಶ್ರೀನಿವಾಸಮೂರ್ತಿ, ಶಿವಧ್ವಜ್ ಶೆಟ್ಟಿ, ಬೆನಕ ಗಿರಿ ಮುಂತಾದ ಕಲಾವಿದರು “ಕೃಷ್ಣಂ ಪ್ರಣಯ ಸಖಿ” ಚಿತ್ರದಲ್ಲಿ ನಟಿಸಿದ್ದಾರೆ.

Categories
ಸಿನಿ ಸುದ್ದಿ

ದೃಶ್ಯರೂಪಕ್ಕೆ ಬಂದ ಹರಿದಾಸ ಶ್ರೀ ಪ್ರಸನ್ನ ವೆಂಕಟದಾಸರ ಚರಿತ್ರೆ

ಈ ಹಿಂದೆ ಶ್ರೀಜಗನ್ನಾಥದಾಸರು ಎಂಬ ಚಿತ್ರ ನಿರ್ಮಾಣ ಮಾಡಿ, ನಿರ್ದೇಶಿಸಿದ್ದ ಮಧುಸೂದನ್ ಹವಾಲ್ದಾರ್, ಈಗ ಕರ್ನಾಟಕದ ಮತ್ತೊಬ್ಬ ಶ್ರೇಷ್ಠ ಹರಿದಾಸರಾದ ಶ್ರೀಪ್ರಸನ್ನವೆಂಕಟದಾಸರ ಕುರಿತಾದ ಚಿತ್ರವನ್ನು ಮಾತಾಂಬುಜ ಮೂವೀಸ್ ಲಾಂಛನದಲ್ಲಿ ನಿರ್ಮಾಣ ಮಾಡಿ, ನಿರ್ದೇಶನವನ್ನೂ ಮಾಡಿದ್ದಾರೆ. ಚಿತ್ರ ಜುಲೈ 7 ರಂದು ಬಿಡುಗಡೆಯಾಗಲಿದೆ‌.

ಪ್ರಸನ್ನ ವೆಂಕಟದಾಸರ ವಂಶಸ್ಥರು ಹಾಗೂ ಜನಪ್ರಿಯ ಬರಹಗಾರರು ಆದ ರೇಖಾ ಕಾಖಂಡಕಿ ಅವರು ಬರೆದಿರುವ ಶ್ರೀ ಪ್ರಸನ್ನವೆಂಕಟದಾಸರ ಕುರಿತಾದ ಪುಸ್ತಕವನ್ನು ಆಧರಿಸಿ ಈ ಚಿತ್ರ ಮಾಡಿದ್ದೇನೆ‌. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ರೇಖಾ ಕಾಖಂಡಕಿ ಅವರೆ ಬರೆದಿದ್ದಾರೆ. ನಿರ್ಮಾಣ ಹಾಗೂ ನಿರ್ದೇಶನವನ್ನು ನಾನು ಮಾಡಿದ್ದೇನೆ. ಜಗನ್ನಾಥದಾಸರು ಸಿನಿಮಾ ನೋಡಿದ ರೇಖಾ ಕಾಖಂಡಕಿ ಹಾಗೂ ಅವರ ಪತಿ ಸುಭಾಷ್ ಕಾಖಂಡಕಿ ಪ್ರಸನ್ನವೆಂಕಟದಾಸರ ಪುಸ್ತಕ ನೀಡಿ, ಸಿನಿಮಾ ಮಾಡಲು ಹೇಳಿದರು. ಸಿಂಗಾಪುರದಲ್ಲಿ ವಾಸವಾಗಿರುವ ಸುಧಾ ಸ್ವಾಮಿರಾವ್ ದೇಸಾಯಿ ಸಹ ನಿರ್ಮಾಪಕರಾಗಿ ಬಂಡವಾಳ ಹೂಡಲು ಮುಂದಾದರು. ಪ್ರಭಂಜನ ದೇಶಪಾಂಡೆ ಪ್ರಸನ್ನವೆಂಕಟದಾಸರ ಪಾತ್ರ ನಿರ್ವಹಿಸಿದ್ದಾರೆ‌. ಸಾಕಷ್ಟು ಹೊಸ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ವಿಜಯ್ ಕೃಷ್ಣ ಸಂಗೀತ ನೀಡಿದ್ದಾರೆ‌. ಜುಲೈ 7 ನಮ್ಮ ಚಿತ್ರ ತೆರೆಗೆ ಬರಲಿದೆ ಎಂದು ನಿರ್ದೇಶಕ ಮಧುಸೂದನ್ ಹವಾಲ್ದಾರ್ ತಿಳಿಸಿದರು.

ರೇಖಾ ಕಾಖಂಡಕಿ ಹಾಗೂ ಸುಭಾಷ್ ಕಾಖಂಡಕಿ ಮಾತಾನಾಡಿ ಮಧುಸೂದನ್ ಹವಾಲ್ದಾರ್ “ಪ್ರಸನ್ನವೆಂಕಟದಾಸರು” ಚಿತ್ರವನ್ನು ಅದ್ಭುತವಾಗಿ ನಿರ್ದೇಶನ ಮಾಡಿದ್ದಾರೆ ಎಂದರು.

ಪ್ರಮುಖ ಪಾತ್ರಧಾರಿ ಪ್ರಭಂಜನ ದೇಶಪಾಂಡೆ ಚಿತ್ರೀಕರಣ ಮಾಡುತ್ತಿರುವಾಗ ತಮ್ಮಗಾದ ಅನುಭವ ಹೇಳಿಕೊಂಡರು. ಚಿತ್ರದಲ್ಲಿ ನಟಿಸಿರುವ ವಿಜಯಾನಂದ ನಾಯಕ್, ವಿಷ್ಣುತೀರ್ಥ ಜೋಶಿ, ದೇವರಥ ಜೋಶಿ, ಲಕ್ಷ್ಮೀ, ಲೀಲಾ ಅನಿಲಾಚಾರ್ ಮುಂತಾದವರು ತಮ್ಮ ಪಾತ್ರದ ಬಗ್ಗೆ ಮಾತನಾಡಿದರು.

ಛಾಯಾಗ್ರಹಕ ನಾಗರಾಜ್, ಸಂಕಲನಕಾರ ದೊರೈರಾಜ್, ವಿತರಕ ಆಟೋ ರಾಜು ಹಾಗೂ ಸಹ ನಿರ್ದೇಶಕರಾದ ಸಾವಂತ್ – ಬಾಬಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Categories
ಸಿನಿ ಸುದ್ದಿ

ಟೋಬಿ ಫಸ್ಟ್ ಲುಕ್ ಬಂತು: ರಾಜ್ ಬಿ ಶೆಟ್ಟಿ ಸಿನಿಮಾ ಕುತೂಹಲ ತಂತು…

ತಮ್ಮ ಸಹಜ ಅಭಿನಯದ ಮೂಲಕ ಎಲ್ಲರ ಮನ ಗೆದ್ದಿರುವ ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ “ಟೋಬಿ” ಚಿತ್ರದ ಫಸ್ಟ್ ಲುಕ್ ಇತ್ತೀಚೆಗೆ ಬಿಡುಗಡೆಯಾಗಿದೆ.
ಫಸ್ಟ್ ಲುಕ್ ಬಾರಿ ಕುತೂಹಲ ಮೂಡಿಸಿದೆ. ರಾಜ್ ಬಿ ಶೆಟ್ಟಿ ಫಸ್ಟ್ ಲುಕ್ ನಲ್ಲಿ ಡಿಫರೆಂಟಾಗಿ ಕಾಣಿಸಿಕೊಂಡಿದ್ದಾರೆ. ಕುರುಚಲು ಗಡ್ಡ, ಮೂಗಿನಲ್ಲಿ ದೊಡ್ಡ ಮೂಗುತಿ, ತಲೆ ಹಾಗೂ ಮೂಗಿನಲ್ಲಿ ರಕ್ತದ ಕಲೆಯಿಂದ ಕೂಡಿರುವ ಗಾಯ ಹೀಗೆ ಹಲವು ವಿಶೇಷತೆಗಳಗಳ್ಳುಳ ಈ ವಿಭಿನ್ನ ಪೋಸ್ಟರ್ ಸಾಕಷ್ಟು ಕುತೂಹಲ ಮೂಡಿಸಿದೆ. ಚಿತ್ರ ನೋಡುವ ಕಾತುರವನ್ನು ಮತ್ತಷ್ಟು ಹೆಚ್ಚಿಸಿದೆ. ಸದ್ಯ ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ಟೀಸರ್, ಟ್ರೇಲರ್ ಸದ್ಯದಲ್ಲೇ ಬರಲಿದೆ. ಆಗಸ್ಟ್ 25 ಕ್ಕೆ ಚಿತ್ರ ತೆರೆ ಕಾಣಲಿದೆ.

ಬರಹಗಾರ ಟಿ.ಕೆ.ದಯಾನಂದ್ ‘ಟೋಬಿ’ ಚಿತ್ರಕ್ಕೆ ಕಥೆ ಬರೆದಿದ್ದಾರೆ. ನಾನು ಕಾರವಾರದಲ್ಲಿ ಕಂಡ ಒಬ್ಬ ವಿಲಕ್ಷಣ ವ್ಯಕ್ತಿತ್ವದ ವ್ಯಕ್ತಿಯ ಕಥೆಯಿದು. ನೀವೊಬ್ಬರನ್ನು ನೋಡಿದಾಗ ಇವರು ಇಂತಹವರು ಅಂತ ಹೇಳಬಹುದು. ಆದರೆ, ಈ ವ್ಯಕ್ತಿಯನ್ನು ಆ ರೀತಿ ಹೇಳಲಾಗದು. ನಾನು ಆತನ ಕುರಿತು ಕಥೆ ಬರೆದಿದ್ದೇನೆ. ಅದು ಈಗ “ಟೋಬಿ” ಚಿತ್ರವಾಗಿದೆ ಎಂದು ಟಿ.ಕೆ.ದಯಾನಂದ್ ತಿಳಿಸಿದರು.
.
ಸಿನಿಮಾ ನೋಡಲು ಬಂದ ಪ್ರೇಕ್ಷಕನಿಗೆ ಮೊದಲು ಸಿನಿಮಾ ಇಷ್ಟ ಆಗಬೇಕು. ಅಂತಹ ಸಿನಿಮಾ ಮಾಡುವ ಆಸೆ ನನಗೆ. “ಟೋಬಿ” ಫ್ಯಾಮಿಲಿ ಎಂಟರ್ ಟೈನರ್ ಚಿತ್ರ ಎನ್ನಬಹುದು. ನೀವು ಫಸ್ಟ್ ಲುಕ್ ನಲ್ಲಿ ನೋಡುತ್ತಿರುವುದು ಚಿತ್ರದ ಒಂದು ಭಾಗವಷ್ಟೆ. ಇಡೀ ಚಿತ್ರ ಈ ರೀತಿ ಇರುವುದಿಲ್ಲ. ನನಗೆ ಈ ಚಿತ್ರದ ಕಥೆ ಹೊಸತು ಎನಿಸಿತು. ನನ್ನ ಪಾತ್ರ ಕೂಡ ಹಿಂದಿನ ಚಿತ್ರಗಳಿಗಿಂತ ಸ್ವಲ್ಪ ವಿಭಿನ್ನವಾಗಿದೆ. ನನಗೆ ಗೊತ್ತಿಲ್ಲದ ವಿಷಯವನ್ನು ಕಲಿತು ಈ ಚಿತ್ರದಲ್ಲಿ ಹೇಳಿದ್ದೇನೆ. ಚಿತ್ರ ನೋಡಿ. ಪ್ರೋತ್ಸಾಹ ನೀಡಿ ಎನ್ನುತ್ತಾರೆ ರಾಜ್ ಬಿ ಶೆಟ್ಟಿ.

ಲೈಟರ್ ಬುದ್ಧ ಫಿಲಂಸ್, ಅಗಸ್ತ್ಯ ಫಿಲಂಸ್ ಹಾಗೂ ಕಾಫಿ ಗ್ಯಾಂಗ್ ಸ್ಟುಡಿಯೋಸ್ ಮತ್ತು ಸ್ಮೂತ್ ಸೈಲರ್ಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ರವಿ ರೈ ಕಳಸ ಈ ಚಿತ್ರದ ನಿರ್ಮಾಪಕರು. ಶಾಮಿಲ್ ಬಂಗೇರ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.

ನಿರ್ದೇಶಕ ಬಾಸಿಲ್, ಸಂಗೀತ ನಿರ್ದೇಶಕ ಮಿಥುನ್ ಮುಕುಂದನ್, ಚಿತ್ರದ ನಾಯಕಿಯರಾದ ಸಂಯುಕ್ತ ಹೊರನಾಡು, ಚೈತ್ರಾ ಆಚಾರ್ ಚಿತ್ರದಲ್ಲಿ ನಟಿಸಿರುವ ಗೋಪಾಲಕೃಷ್ಣ ದೇಶಪಾಂಡೆ, ರಾಜ್ ದೀಪಕ್ ಶೆಟ್ಟಿ, ಶ್ರೀಕಾಂತ್ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ “ಟೋಬಿ” ಚಿತ್ರದ ಕುರಿತು ಮಾತನಾಡಿದರು‌.

“ಟೋಬಿ” ಚಿತ್ರಕ್ಕೆ ‘ಮಾರಿ ಮಾರಿ ..ಮಾರಿಗೆ ದಾರಿ’ ಎಂಬ ಅಡಿಬರಹವಿದೆ. ರಾಜ್ ಬಿ ಶೆಟ್ಟಿ ಅವರ ಈ ಹಂದಿನ ಚಿತ್ರಗಳಿಗಿಂತ “ಟೋಬಿ” ಬಿಗ್ ಬಜೆಟ್ ನ ಚಿತ್ರವಾಗಿದೆ.

Categories
ಸಿನಿ ಸುದ್ದಿ

ಗಿನ್ನಿಸ್ ರೆಕಾರ್ಡ್ ಮಾಡೋಕೆ ಹೊರಟ ತಂಡ! ದೇವರ ಆಟ ಬಲ್ಲವರಾರು: ಶೂಟಿಂಗ್ ಶುರು

ಕನ್ನಡ ಚಿತ್ರರಂಗದಲ್ಲಿ ಹೊಸ ಪ್ರಯೋಗಗಳು ನಡೆಯುತ್ತಿರುತ್ತವೆ. ಇಂತಹ ಸಿನಿಮಾಗಳು ಯಶಸ್ವಿ ಕೂಡ ಆಗಿದೆ. “ದೇವರ ಆಟ ಬಲ್ಲವರಾರು” ಸಿನಿಮಾ ಕೂಡ ಚಿತ್ರೀಕರಣ ಹಂತದಲ್ಲೇ ಸಾಕಷ್ಟು ಭರವಸೆ ಮೂಡಿಸಿದೆ. ಈ ಚಿತ್ರ ವೇಗದ ಸೆಟ್ ವರ್ಕ್ ನಿರ್ಮಾಣ ಮಾಡಿ ಮೊದಲ ಹಂತ ಗಿನ್ನಿಸ್ ದಾಖಲಿಸಿದೆ. ಇಗ ಎರಡನೇ ಹಂತದ ಗಿನ್ನಿಸ್ ಸರದಿ. ಮಡಿಕೇರಿಯಲ್ಲಿ ಮಳೆಯಲ್ಲೇ ರಾತ್ರಿಯಿಂದ ಚಿತ್ರೀಕರಣ ಆರಂಭಿಸಿದೆ ಚಿತ್ರತಂಡ.

ಸಿ ವಿ ರಾಮನ್ ಅವರು ಕ್ಲಾಪ್ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ನಿರ್ದೇಶಕ ಜನಾರ್ದನ್ ಪಿ ಜಾನು ಗಿನ್ನಿಸ್ ಪ್ರಕ್ರಿಯೆಗೆ ಸಹಿ ಹಾಕಿದ್ದಾರೆ. ಅತೀ ವೇಗದ ಕಮರ್ಷಿಯಿಲ್ ಮೂವಿ ನಿರ್ಮಾಣ ಮಾಡಿ ಗಿನ್ನಿಸ್ ದಾಖಲೆ ಬರೆಯಲು ಚಿತ್ರತಂಡ ಮುಂದಾಗಿದೆ.

ಚಿತ್ರೀಕರಣದ ಸ್ಥಳದಲ್ಲಿಯೇ 30 ದಿನಗಳ ಕಾಲ ಗಿನ್ನಿಸ್ ವೀಕ್ಷೆಣೆಯ ತಂಡದ ಸದಸ್ಯರು ಉಪಸ್ಥಿತರಿರುತ್ತಾರೆ. ಇಂದಿನಿಂದ 30 ದಿನಗಳಲ್ಲಿ ಚಿತ್ರೀಕರಣ ಪೂರ್ಣಗೊಳಿಸಿ,ಚಿತ್ರವನ್ನು ತರೆಗೆ ತರುವ ಪ್ರಕ್ರಿಯೆ ಆರಂಭವಾಗಿದೆ.

ಮಧ್ಯರಾತ್ರಿ 12ಗಂಟೆಯಿಂದ ಶೂಟಿಂಗ್ ಆರಂಭಿವಾಗಿದೆ. ದಿನದ 24 ಗಂಟೆಯೂ ಶೂಟಿಂಗ್, ಲೈವ್ ಎಡಿಟಿಂಗ್, ರೀರೆಕಾರ್ಡಿಂಗ್ ಎಲ್ಲಾ ಕಾರ್ಯಗಳು ಚಿತ್ರೀಕರಣ ಸ್ಥಳದಲ್ಲಿಯೇ ನಡೆಸಲು ಸಿದ್ಧತೆಯಾಗಿದೆ.

ಯಾವುದೇ ಅಡೆತಡೆ ಯಾಗದಂತೆ ಯೋಜನೆ ಹಾಕಿಕೊಂಡು ಚಿತ್ರಿಕರಣ ಆರಂಭಿಸಿರುವುದಾಗಿ ನಿರ್ದೇಶಕರು ತಿಳಿಸಿದ್ದಾರೆ. ಒಟ್ಟು 4 ಕ್ಯಾಮರಗಳು, 150 ಎಕರೆ ವಿಸ್ತೀರ್ಣದ ವ್ಯಾಪ್ತಿಯಲ್ಲಿ ವಿವಿಧ ಸ್ಥಳಗಳಲ್ಲಿ ಚಿತ್ರೀಕರಣ ನಡೆಯಲಿದೆ.

Categories
ಸಿನಿ ಸುದ್ದಿ

ಉಪ್ಪಿ ಹುಟ್ದಬ್ಬಕ್ಕೆ ಬುದ್ಧಿವಂತ -2 ರಿಲೀಸ್: ಇದಕ್ಕೂ ಮುನ್ನ ಬರಲಿದೆ ಟೀಸರ್

“ಚಮಕ್”, ” ಅಯೋಗ್ಯ” ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಾಣ ಮಾಡಿರುವ ಡಾ.ಟಿ.ಆರ್ ಚಂದ್ರಶೇಖರ್, ತಮ್ಮ ಕ್ರಿಸ್ಟಲ್ ಪಾರ್ಕ್ ಸಿನಿಮಾಸ್ ಲಾಂಛನದಲ್ಲಿ ಮತ್ತೊಂದು ಬಹುನಿರೀಕ್ಷಿತ ಚಿತ್ರ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನಗೆದ್ದಿರುವ ರಿಯಲ್ ಸ್ಟಾರ್ ಉಪೇಂದ್ರ ದ್ವಿಪಾತ್ರದಲ್ಲಿ ನಟಿಸಿರುವ ಚಿತ್ರ “ಬುದ್ದಿವಂತ 2”. ನಿರ್ಮಾಣ ಪೂರ್ಣ ಗೊಂಡಿದ್ದು ಇದೀಗ ಬಿಡುಗಡೆ ಸಮಯವನ್ನು ಚಿತ್ರದ ನಿರ್ಮಾಪಕರು ಬಹಿರಂಗಗೊಳಿಸಿದ್ದಾರೆ.

ಈ ಬಾರಿಯ ಉಪೇಂದ್ರ ಅವರ ಹುಟ್ಟು ಹಬ್ಬಕ್ಕೆ ಅವರ ಅಭಿಮಾನಿಗಳಿಗೆ ಉಡುಗೊರೆಯಾಗಿ ಚಿತ್ರವನ್ನು ಬೃಹತ್ ಪ್ರಮಾಣದಲ್ಲಿ ಚಿತ್ರವನ್ನು ಬಿಡುಗಡೆ ಮಾಡುವುದಾಗಿ ಪ್ರಕಟಿಸಿದ್ದಾರೆ. ಹಾಗು ಬುದ್ದಿವಂತ -2 ಚಿತ್ರದ ಟೀಸರ್ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಟೀಸರ್ ಮೂಲಕವೇ ಚಿತ್ರದ ಬಿಡುಗಡೆಯ ದಿನಾಂಕ ಕೂಡ ಘೋಷಣೆಯಾಗಲಿದೆ ಎಂದು ಚಿತ್ರತಂಡ ಪ್ರಕಟಿಸಿದೆ.

ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಜಯರಾಮ್ ಮಾಧವನ್ “ಬುದ್ಧಿವಂತ 2” ಚಿತ್ರದ ನಿರ್ದೇಶಕರು. ಗುರುಕಿರಣ್ ಸಂಗೀತ ನೀಡಿದ್ದಾರೆ. ಎಸ್ ನವೀನ್ ಕುಮಾರ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಜಾಗೂ ರವಿವರ್ಮ, ವಿಕ್ರಮ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಉಪೇಂದ್ರ ಅವರಿಗೆ ನಾಯಕಿಯರಾಗಿ
ಸೋನಾಲ್ ಮೊಂಟೆರೊ ಹಾಗೂ ಮೇಘನರಾಜ್ ನಟಿಸಿದ್ದಾರೆ. ಶ್ರೀನಗರ ಕಿಟ್ಟಿ ಅವರು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

error: Content is protected !!