Categories
ಸಿನಿ ಸುದ್ದಿ

ಸಂಚಿತ್ ಸಂಜೀವ್ ಎಂಬ ಹುಡುಗನಾದ ನಾನು ಜಿಮ್ಮಿ ಚಿತ್ರದ ಹೀರೋ: ಸುದೀಪ್ ಅಳಿಯನ ಸಿನಿಮಾ ಎಂಟ್ರಿ

ಖ್ಯಾತ ನಟ ಕಿಚ್ಚ ಸುದೀಪ್ ಅವರ ಅಕ್ಕನ ಮಗ ಸಂಚಿತ್ ಸಂಜೀವ್ ನಾಯಕರಾಗಿ ನಟಿಸಿ, ನಿರ್ದೇಶಿಸುತ್ತಿರುವ ಚಿತ್ರ “ಜಿಮ್ಮಿ”. ಚಿತ್ರದ ಕ್ಯಾರೆಕ್ಟರ್ ಟೀಸರ್ ಬಿಡುಗಡೆಯಾಗಿದೆ.
ಸುದೀಪ್ ಅವರ ತಂದೆ ಸಂಜೀವ್ ಹಾಗೂ ತಾಯಿ ಸರೋಜ ಸಂಜೀವ್(ಸಂಚಿತ್ ಅಜ್ಜಿ-ತಾತಾ) ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ.


ಕ್ರೇಜಿಸ್ಟಾರ್ ರವಿಚಂದ್ರನ್, ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ಶಾಸಕ, ಮುನಿರತ್ನ, ಸಂಗೀತ ನಿರ್ದೇಶಕ ಗುರುಕಿರಣ್, ನಿರ್ದೇಶಕರ ಆದ ಆರ್ ಚಂದ್ರು, ಅನೂಪ್ ಭಂಡಾರಿ ಸೇರಿದಂತೆ ಸ್ಯಾಂಡಲ್ ವುಡ್ ನ ಅನೇಕ ಗಣ್ಯರು ಈ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. ಕ್ಯಾರೆಕ್ಟರ್ ಟೀಸರ್ ಗೆ ವಾಸುಕಿ ವೈಭವ್ ಸಂಗೀತ ನೀಡಿದ್ದಾರೆ. ಸುದೀಪ್ ಪುತ್ರಿ ಸಾನ್ವಿ ಹಾಡಿದ್ದು ವಿಶೇಷ.

ವೆಲ್ಕಮ್ ಟು ಎಸ್ ಗ್ರೂಪ್ ಎಂದು ಮಾತು ಆರಂಭಿಸಿದ ಶಿವರಾಜಕುಮಾರ್, ಎಸ್ ಅಂದರೆ ಸುಪೀರಿಯರ್ ಮತ್ತು ಸೂಪರ್ಬ್ ಅಂತ. ನಿಮ್ಮಲ್ಲಿ ನಿಮ್ಮ ತಾಯಿ ಮುಖ ಇದೆ. ಸಂಜೀವ್ ಅವರ ಗಾಂಭೀರ್ಯ ಮತ್ತು ಸುದೀಪ್ ಅವರ ಧ್ವನಿ ಇದೆ. ತಾಯಿ ಮುಖ ಬಂದರೆ ಲಕ್ ಜಾಸ್ತಿ. ತುಂಬಾ ಚೆನ್ನಾಗಿ ಕಾಣುತ್ತೀರಾ. ಮೇಕಿಂಗ್ ಚೆನ್ನಾಗಿದೆ. ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿದ್ದೀರಿ ಒಳ್ಳೆಯದಾಗಲಿ ಎಂದು ಶುಭ ಕೋರಿದರು ‌

ಈ ಸಂದರ್ಭದಲ್ಲಿ ಮಾತನಾಡಿದ ಕ್ರೇಜಿಸ್ಟಾರ್ ರವಿಚಂದ್ರನ್, ಸಂಚಿತ್ ನಾಯಕನಾಗಿ ನಟಿಸುತ್ತಿದ್ದಾರೆ ಅಂದುಕೊಂಡಿದ್ದೆ. ನಿರ್ದೇಶನ ಮಾಡುತ್ತಿರುವುದು ಗೊತ್ತಿರಲಿಲ್ಲ. ಇಲ್ಲಿ ಬಂದ ಮೇಲೆ ಗೊತ್ತಾಯಿತು. ಮೊದಲು ಖುಷಿಯಾಗಿದ್ದು ಅವರ (ಸಂಚಿತ್) ಅಜ್ಜಿ ಮುಖದ ಮೇಲಿರುವ ನಗು. ಅವರಿಗಾಗುತ್ತಿರುವ ಸಂತೋಷ ನೋಡಿ ಖುಷಿ ಆಯ್ತು. ಸುದೀಪ್ ಎಲ್ಲದಕ್ಕೂ ಕರೆಯುತ್ತಾರೆ. ಬರುವುದಿಲ್ಲ ಅಂದರೂ ಬಿಡುವುದಿಲ್ಲ. ಅದು ಹೇಗೆ ಬರುವುದಿಲ್ಲ ಎನ್ನುತ್ತಾರೆ? ಆ ರೀತಿ ನನ್ನ ಅವರ ಸಂಬಂಧ. ಸುದೀಪ್ ಅವರ ತಂದೆಯವರದು ನಮ್ಮದು ಕೂಡ ಹಳೆಯ ಸಂಬಂಧ. ಟ್ರೇಲರ್ ನೋಡಿದ ತಕ್ಷಣ ವೈಬ್ರೇಷನ್ ಇದೆ. ನೀವು ತೆರೆಯ ಮೇಲೆ ಚೆನ್ನಾಗಿ ಕಾಣುತ್ತೀರಿ. ಸುದೀಪ್ ನೋಡಿದ ಹಾಗೆ ಅನಿಸುತ್ತದೆ. ವಾಸುಕಿ ವೈಭವ್ ತಮ್ಮ ಜಾನರ್ ಬದಲಾಯಿಸಿದ್ದಾರೆ. ಈ ಬಾರಿ ಬೇರೆ ತರಹ ಸಂಗೀತ ಮಾಡಿದ್ದಾರೆ. ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು.

ನನಗೆ ಶಿವರಾಜಕುಮಾರ್ ಹಾಗೂ ರವಿಚಂದ್ರನ್ ಅವರು ಸ್ಪೂರ್ತಿ. ಅವರಿಂದಲೇ ನಮ್ಮ ಸಂಚಿತ್ ನನ್ನು ಚಿತ್ರರಂಗಕ್ಕೆ ಪರಿಚಯಿಸುವ ಆಸೆಯಿತ್ತು. ಅದು ಇಂದು ಈಡೇರಿದೆ. ಹಾಗಾಗಿ ಅವರಿಬ್ಬರಿಗೂ ವಿಶೇಷ ಧನ್ಯವಾದ. ಅನೇಕ ಹಿರಿಯರು ಕನ್ನಡ ಚಿತ್ರರಂಗದಲ್ಲಿ ಭದ್ರಕೋಟೆ ಕಟ್ಟಿದ್ದಾರೆ. ಅದನ್ನು ಕಾಪಾಡಿಕೊಂಡು ಹೋಗುವ ಜವಾಬ್ದಾರಿ ಸಂಚಿತ್ ನಂತಹ ಯುವಕರದು ಎಂದು ಕಿಚ್ಚ ಸುದೀಪ್ ಹೇಳಿದರು.

ರವಿಚಂದ್ರನ್ ಹಾಗೂ ಶಿವರಾಜಕುಮಾರ್ ಅವರಿಗೆ ನನ್ನ ಧನ್ಯವಾದ. ಸುದೀಪ್ ಮಾವ ಹಾಗೂ ಪ್ರಿಯ ಅತ್ತೆ ಅವರ ಪ್ರೋತ್ಸಾಹಕ್ಕೆ ನಾನು ಚಿರ ಋಣಿ. ನಿರ್ಮಾಪಕರಾದ ಜಿ.ಮನೋಹರನ್, ಕೆ.ಪಿ.ಶ್ರೀಕಾಂತ್ ಹಾಗೂ ಪ್ರಿಯಾ ಸುದೀಪ್ ಅವರು ನನ್ನ‌ ಮೇಲೆ ಭರವಸೆಯಿಟ್ಟು ನಿರ್ಮಾಣ ಮಾಡುತ್ತಿದ್ದಾರೆ. ಅವರಿಗೂ ವಿಶೇಷ ಧನ್ಯವಾದ. ಆಗಸ್ಟ್ ನಲ್ಲಿ ಚಿತ್ರೀಕರಣ ಆರಂಭಿಸುತ್ತಿದ್ದೇವೆ‌. ಮುಂದಿನ ದಿನಗಳಲ್ಲಿ ಚಿತ್ರದ ಕುರಿತು ಹೆಚ್ಚು ಮಾಹಿತಿ ನೀಡುವುದಾಗಿ ನಾಯಕ ಹಾಗೂ ನಿರ್ದೇಶಕ ಸಂಚಿತ್ ಸಂಜೀವ್ ತಿಳಿಸಿದರು.

ಲಹರಿ ವೇಲು, ಕೆ.ಪಿ.ಶ್ರೀಕಾಂತ್, ಪ್ರಿಯಾ ಸುದೀಪ್, ಸಂಗೀತ ನಿರ್ದೇಶಕ ವಾಸುಕಿ ವೈಭವ್ ಚಿತ್ರದ ಕುರಿತು ಮಾತನಾಡಿದರು. ಸಾನ್ವಿ ಸುದೀಪ್ “ಜಿಮ್ಮಿ” ಚಿತ್ರದ ಹಾಡು ಹಾಡಿದರು.

Categories
ಸಿನಿ ಸುದ್ದಿ

ಬೆಂಗಳೂರಲ್ಲಿ ‘ಸ್ಪೈ’ ಅದ್ಧೂರಿ ಪ್ರಚಾರ: ಜೂನ್ 29ಕ್ಕೆ ನಿಖಿಲ್ ಸಿದ್ಧಾರ್ಥ್ ಸಿನಿಮಾ ರಿಲೀಸ್

ಕಾರ್ತಿಕೇಯ, ಕಾರ್ತಿಕೇಯ-2 ಬ್ಲಾಕ್ ಬಸ್ಟರ್ ಹಿಟ್ ಬಳಿಕ ನಿಖಿಲ್ ಸಿದ್ಧಾರ್ಥ್ ನಟಿಸುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ ಸ್ಪೈ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಇದೇ 29ಕ್ಕೆ ವಿಶ್ವಾದ್ಯಂತ ರಿಲೀಸ್ ಆಗ್ತಿರುವ ಚಿತ್ರದ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದೆ. ಮುಂಬೈನಲ್ಲಿ ಪ್ರಮೋಷನ್ ಮುಗಿಸಿ ನೇರವಾಗಿ ಬೆಂಗಳೂರಿಗೆ ಬಂದಿಳಿದ ಚಿತ್ರತಂಡವನ್ನು ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಭಾ.ಮಾ,ಹರೀಶ್ ಸ್ವಾಗತಿಸಿ ಶುಭಕೋರಿದರು. ಬಳಿಕ ಚಿತ್ರತಂಡ ಮಾಧ್ಯಮದವರೊಂದಿಗೆ ತಮ್ಮ ಬಹುನಿರೀಕ್ಷಿತ ಸ್ಪೈ ಬಗ್ಗೆ ಸಾಕಷ್ಟು ವಿಷಯವನ್ನು ಹಂಚಿಕೊಂಡರು.

ನಟ ನಿಖಿಲ್ ಸಿದ್ಧಾರ್ಥ್ ಮಾತನಾಡಿ, ಕಾರ್ತಿಕೇಯ ಸಿನಿಮಾಗೆ ಕರ್ನಾಟದಲ್ಲಿ ಒಳ್ಳೆ ರೆಸ್ಪಾನ್ಸ್ ಸಿಕ್ಕಿದೆ. ಕನ್ನಡ ಪ್ರೆಕ್ಷಕರಿಗೆ ನನ್ನ ಧನ್ಯವಾದ. ಅದೇ ರೀತಿ ಜೂನ್ 29ಕ್ಕೆ ಬರ್ತಿರುವ ಸ್ಪೈ ಚಿತ್ರಕ್ಕೆ ನಿಮ್ಮ ಬೆಂಬಲ ಇರಲಿ. ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಸಿನಿಮಾ ಮಾಡಿರೋದು ನನಗೆ ಹೆಮ್ಮೆ ಇದೆ. ಅವರ ಸಾವಿನ ಬಗ್ಗೆ ಈ ಚಿತ್ರದ ಮೂಲಕ ಒಂದು ಕ್ಲಾರಿಟಿ ಸಿಗಲಿದೆ. ಆಕ್ಷನ್, ಎಂಟರ್ ಟೈನರ್ ಎಲ್ಲವೂ ಚಿತ್ರದಲ್ಲಿದೆ. ಪ್ರತಿಯೊಬ್ಬ ಭಾರತೀಯ ಈ ಸಿನಿಮಾ ನೋಡಲೇಬೇಕು.

ನಟಿ ಐಶ್ವರ್ಯ ಮೆನನ್ ಮಾತನಾಡಿ, ಇದೇ 29ಕ್ಕೆ ಸ್ಪೈ ಸಿನಿಮಾ ರಿಲೀಸ್ ಆಗ್ತಿದೆ. ಪ್ರತಿಯೊಬ್ಬರೂ ಚಿತ್ರಕ್ಕೆ ಬೆಂಬಲ ನೀಡಿ. ನಾನು ವೈಷ್ಣವಿ ಎಂಬ ಪಾತ್ರದಲ್ಲಿ ನಟಿಸಿದ್ದು, ರಾ ಏಜೆಂಟ್ ಆಗಿ ಕಾಣಿಸಿಕೊಂಡಿದ್ದೇನೆ. ದಾಸವಾಳ ಹಾಗೂ ನಮೋ ಭೂತಾತ್ಮ ಕನ್ನಡ ಸಿನಿಮಾಗಳಲ್ಲಿ ನನ್ನ ಜರ್ನಿ ಶುರುವಾಗಿದೆ. ಕನ್ನಡ ಇಂಡಸ್ಟ್ರೀ ನನಗೆ ಬಹಳ ವಿಶೇಷ. ಸ್ಪೈ ಕನ್ನಡದಲ್ಲಿಯೂ ಬಿಡುಗಡೆಯಾಗುತ್ತಿದೆ. ಪ್ರತಿಯೊಬ್ಬರಿಗೂ ಈ ಚಿತ್ರ ಇಷ್ಟವಾಗಲಿದೆ ಎಂದರು.

CTR ದೋಸೆ ಚಪ್ಪರಿಸಿ ತಿಂದ ನಿಖಿಲ್
ಬೆಂಗಳೂರಿ ಸಿಟಿಆರ್ ಹೋಟೆಲ್ ದೋಸೆ ಇಂಡಿಯಾಗೆ ಫೇಮಸ್. ಈ ಹೋಟೆಲ್ ನಲ್ಲಿ ಬಂದ ಸೆಲೆಬ್ರಿಟಿಗಳೆಲ್ಲಾ ದೋಸೆ ರುಚಿ ಸವಿಯುತ್ತಾರೆ. ಅದರಂತೆ ನಿಖಿಲ್ ಸಿದ್ಧಾರ್ಥ್ ಸಿಟಿಆರ್ ಹೋಟೆಲ್ ನಲ್ಲಿ ದೋಸೆಯನ್ನು ಚಪ್ಪರಿಸಿ ತಿಂದಿದ್ದಾರೆ. ಇದೇ ವೇಳೆ ಅಭಿಮಾನಿಗಳು ನಿಖಿಲ್ ಜೊತೆ ಫೋಟೋಗೆ ಮುಗಿಬಿದ್ದರು. ಬಳಿಕ ರಾಮೇಶ್ವರಂ ಕೆಫೆಯಲ್ಲಿ ಕಾಫಿ ಕುಡಿದರು.

ಸುಭಾಷ್ ಚಂದ್ರ ಬೋಸ್ ಸಾವಿನ ರಹಸ್ಯ ಕಥಾಹಂದರ ಹೊಂದಿರುವ ಸ್ಪೈ ಸಿನಿಮಾಗೆ ಖ್ಯಾತ ನಿರ್ದೇಶಕ ಹಾಗೂ ಸಂಕಲನಕಾರರು ಆಗಿರುವ ಗ್ಯಾರಿ ಬಿ ಹೆಚ್‌ ಸ್ಪೈ ಸಿನಿಮಾಗೆ ಆಕ್ಷನ್‌ ಕಟ್‌ ಹೇಳಿದ್ದಾರೆ. ಎವರು ಮತ್ತು ಹಿಟ್‌ ಸಿನಿಮಾಗಳ ನಿರ್ಮಾಪಕ ಕೆ.ರಾಜಶೇಖರ್‌ ರೆಡ್ಡಿ, ಚರಣ್‌ ರಾಜ್‌ ಉಪ್ಪಲಪತಿ ಚಿತ್ರ ನಿರ್ಮಿಸಿದ್ದಾರೆ. ಸನ್ಯಾ ಠಾಕೂರ್‌ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಸ್ಪೆಷಲ್‌ ರೋಲ್‌ ನಲ್ಲಿ ಬಾಹುಬಲಿ ಬಲ್ಲಾಳದೇವ ರಾಣಾ ದಗ್ಗುಭಾಟಿ ಕೂಡ ಕಾಣಿಸಿಕೊಂಡಿದ್ದಾರೆ. ಅಭಿನವ್‌ ಗೋಮತಮ್, ಮಕರಂದ್‌ ದೇಶಪಾಂಡೆ, ನಿತಿನ್‌ ಮೆಹ್ತಾ, ರವಿವರ್ಮ, ಕೃಷ್ಣ ತೇಜ, ಪ್ರಿಶಾ ಸಿಂಗ್‌, ಸೋನಿಯಾ ನರೇಶ್‌ ಮತ್ತು ಇತರರು ತಾರಾಬಳಗದಲ್ಲಿದ್ದಾರೆ. ಬ್ಯಾಕ್ ಟು ಬ್ಯಾಕ್ ಹಿಟ್ ಕೊಟ್ಟಿರುವ ನಿಖಿಲ್ ಸಿದ್ಧಾರ್ಥ್ ಪ್ಯಾನ್ ಇಂಡಿಯಾ ಸ್ಪೈ 29ಕ್ಕೆ ಬಿಡುಗಡೆಯಾಗಲಿದೆ.

Categories
ಸಿನಿ ಸುದ್ದಿ

ಕೆ ಆರ್ ಜಿ ಸ್ಟುಡಿಯೋಸ್ ಮಾಡಿಕೊಂಡ ಕಿರಿಕ್! ಇದು ಕ್ರಿಕೆಟ್ ಗೇಮ್ ಪ್ಲಾನಾ? ಬ್ಯಾಟ್ ಹಿಡಿತಾರೆ ದಾನಿಶ್ ಸೇಠ್

ಕನ್ನಡದಲ್ಲಿ ಕೆ ಆರ್ ಜಿ ಸ್ಟುಡಿಯೋಸ್ ಸಾಕಷ್ಟು ಉತ್ತಮ ಚಿತ್ರಗಳನ್ನು ಕೊಡುವ ನಿಟ್ಟಿನಲ್ಲಿ ಹುಟ್ಟಿಕೊಂಡ ಸಂಸ್ಥೆ. ಈ ನಿರ್ಮಾಣ ಸಂಸ್ಥೆಯ ಮೂಲಕ ಈಗಾಗಲೇ ಒಂದಷ್ಟು ಯಶಸ್ವಿ ಸಿನಿಮಾಗಳು ಮೂಡಿಬಂದಿವೆ. ಆ ಸಾಲಿಗೆ ಈಗ ಕಿರಿಕ್ et 11 ಸಿನಿಮಾ ಕೂಡ ಸೇರಿದೆ. ಶೀರ್ಷಿಕೆಯೇ ವಿಭಿನ್ನವಾಗಿದೆ. ಕಥೆ ಕೂಡ ವಿಶೇಷವಾಗಿದೆ ಎಂಬುದು ಸಿನಿಮಾ ನಿರ್ಮಾಣ ಸಂಸ್ಥೆಯ ಮಾತು.

ಬಹಳ ದಿನಗಳ ಬಳಿಕ ನಟ ದಾನಿಶ್ ಸೇಠ್ ಅವರು ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನವೀನ್ ಶಂಕರ್ ಕೂಡ ಇದ್ದಾರೆ.

ಕಿರಿಕ್ ‘et’ 11 ಚಿತ್ರ ಒಂದು ನಗೆ ಹಬ್ಬವಾಗಿ ತಯಾರಾಗಲಿದೆ. ಒಂದಷ್ಟು ಯುವಕರು ಯಾವುದೇ ರೀತಿಯಲ್ಲೂ ಅದೃಷ್ಟ ದೇವತೆ ಒಲಿಯದೆ ಇದ್ದಾಗ ಇಡೀ ದೇಶ ಅತ್ಯಂತ ಹುಮ್ಮಸ್ಸಿನಿಂದ ಆಡುವ, ನೋಡುವ ಕ್ರಿಕೆಟ್ ನಲ್ಲಿ ಭವಿಷ್ಯ ರೂಪಿಸಿಕೊಳ್ಳಲು ಮುಂದಾಗುತ್ತಾರೆ.


ನವೀನ್ ಶಂಕರ್ ಮತ್ತು ದಾನಿಶ್ ಸೇಠ್ ನಟನೆಯ ಈ ಚಿತ್ರವನ್ನು ಮನೋಜ್ ಕುಮಾರ್ ಕಾಲಾವನನ್ ಕಥೆ ಹೆಣೆದಿದ್ದರೆ , ಸುಮನ್ ಕುಮಾರ್ ಅವರು ನಿರ್ದೇಶಿಸಲಿದ್ದಾರೆ.
ಸುಮನ್ ಕುಮಾರ್ ಅವರು ಈ ಹಿಂದೆ ರಘುತಾತ ಚಿತ್ರವನ್ನು ನಿರ್ದೇಶಿಸಿದ್ದು , ವೆಬ್ ಸೀರಿಸ್ ಲೋಕದಲ್ಲಿ ಬಹಳ ಜನಪ್ರಿಯ ಆಗಿರುವ The Family Man ಮತ್ತು Farzi ಯ ಕಥೆಯನ್ನು ಹೆಣೆದಿದ್ದಾರೆ.


ಈ ಚಿತ್ರಕ್ಕೆ ಸಂಗೀತವನ್ನು ಬಡವ ರಾಸ್ಕಲ್ ಚಿತ್ರಕ್ಕೆ ಸಂಗೀತ ನೀಡಿದ್ದ ವಾಸುಕಿ ವೈಭವ್ ಅವರು ನೀಡಲಿದ್ದಾರೆ.
ಈ ಚಿತ್ರವನ್ನು ಕಾರ್ತಿಕ್ , ವಿಜಯ್ ಸುಬ್ರಮಣ್ಯಂ ಮತ್ತು ಯೋಗಿ ಜಿ ರಾಜ್ ಅವರು ನಿರ್ಮಿಸಲಿದ್ದಾರೆ.


ಕೆ ಆರ್ ಜಿ ಸ್ಟುಡಿಯೋಸ್ ನ 6 ವರ್ಷಗಳ ಚಿತ್ರರಂಗದ ಪಯಣದಲ್ಲಿ ಇದು 4 ನೇ ಚಿತ್ರ ನಿರ್ಮಾಣವಾಗಲಿದೆ.
ಕಿರಿಕ್ et 11 ಚಿತ್ರದ ಚಿತ್ರೀಕರಣ ಈ ವರ್ಷ ನಡೆಯಲಿರುವ ಕ್ರಿಕೆಟ್ ವಿಶ್ವಕಪ್ ಸಮಯದಲ್ಲೇ ಶುರುವಾಗಲಿದೆ.

Categories
ಸಿನಿ ಸುದ್ದಿ

ಗರಡಿ ಹಾಡು ಹಿಟ್ ಆಯ್ತು! ಹೊಡಿರೆಲೆ ಹಲಗಿ…

ಕೌರವ ಪ್ರೊಡಕ್ಷನ್ ಹೌಸ್ ಲಾಂಛನದಲ್ಲಿ ವನಜಾ ಪಾಟೀಲ್ ನಿರ್ಮಿಸಿರುವ, ಯೋಗರಾಜ್ ಭಟ್ ನಿರ್ದೇಶನದ “ಗರಡಿ” ಚಿತ್ರದ ಮೊದಲ ಹಾಡು “ಹೊಡಿರೆಲೆ ಹಲಗಿ” ಇತ್ತೀಚೆಗಷ್ಟೆ ಬಿಡುಗಡೆಯಾಗಿತ್ತು.

ಈ ಹಾಡಿನ ಮಾಧುರ್ಯಕ್ಕೆ ಕನ್ನಡಿಗರು ಮನ ಸೋತ್ತಿದ್ದಾರೆ. ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಈ ಹಾಡನ್ನು 16ಲಕ್ಷ ಜನ ವೀಕ್ಷಿಸಿದ್ದಾರೆ.

ಪ್ರಶಂಸೆಯ ಮಳೆಯನ್ನೇ ಸುರಿಸುತ್ತಿದ್ದಾರೆ. ಮುಂದಿನ ಹಾಡು ಯಾವಾಗ ಬಿಡುಗಡೆಯಾಗುವುದೊ? ಎಂಬ ನಿರೀಕ್ಷೆಯಲ್ಲಿದ್ದಾರೆ. ಮೊದಲ ಹಾಡಿಗೆ ಸಿಗುತ್ತಿರುವ ಉತ್ತಮ ಪ್ರತಿಕ್ರಿಯೆಗೆ “ಗರಡಿ” ತಂಡ ಸಂತಸ ವ್ಯಕ್ತಪಡಿಸಿದೆ.

ಯೋಗರಾಜ್ ಭಟ್ ಅವರು ಬರೆದಿರುವ ಈ ಹಾಡನ್ನು ಉತ್ತರ ಕರ್ನಾಟಕದ ಪ್ರತಿಭೆ ಮೇಘನಾ ಹಳಿಯಾಳ್ ಹಾಡಿದ್ದಾರೆ. ವಿ ಹರಿಕೃಷ್ಣ ಸಂಗೀತ ನೀಡಿದ್ದಾರೆ. ನಿಶ್ವಿಕಾ ನಾಯ್ಡು ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ.

ಸೂರ್ಯ, ಸೋನಾಲ್ ಮಾಂಟೆರೊ, ಬಿ.ಸಿ.ಪಾಟೀಲ್, ಸುಜಯ್, ರಾಘವೇಂದ್ರ, ಧರ್ಮಣ್ಣ ಮುಂತಾದವರು “ಗರಡಿ” ಚಿತ್ರದಲ್ಲಿ ಅಭಿನಯಿಸಿದ್ದಾರೆ.

Categories
ಸಿನಿ ಸುದ್ದಿ

ನಕುಲ್ ಗೌಡನ ‘ಬ್ಯಾಡ್’ ಬಾಯ್ ಮಾಡಿದ ನಿರ್ದೇಶಕ ಪಿ.ಸಿ.ಶೇಖರ್

“ರೋಮಿಯೋ” ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನಿರ್ದೇಶಿರುವ ಪಿ.ಸಿ ಶೇಖರ್ ನಿರ್ದೇಶನದಲ್ಲಿ ನಕುಲ್ ಗೌಡ(ಪ್ರೀತಿಯ ರಾಯಭಾರಿ ಖ್ಯಾತಿ) ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ಚಿತ್ರ “BAD”. ಎಸ್.ಆರ್.ವೆಂಕಟೇಶ್ ಗೌಡ ನಿರ್ಮಾಣದ ಈ ಚಿತ್ರ ಕನ್ನಡದಲ್ಲಿ ವಿಭಿನ್ನ ಪ್ರಯತ್ನ ಎನ್ನಬಹುದು.

ಈ ಚಿತ್ರಕ್ಕೆ ” BAD” ಅಂತ ಹೆಸರಿಡಲು ಕಾರಣವಿದೆ. ಏಕೆಂದರೆ ಇದರಲ್ಲಿ ನಾಯಕ ಹಾಗೂ ನಾಯಕಿ ಅಂತ ಇಲ್ಲ. ಎಲ್ಲಾ ವಿಲನ್ ಪಾತ್ರಗಳೆ. ಅದರಲ್ಲಿ ಮುಖ್ಯ ವಿಲನ್ ಗಳಿರುತ್ತಾರಷ್ಟೆ. “ರೋಷಮಾನ್ ಎಫೆಕ್ಟ್” ಎಂಬ ವಿಧಾನವನ್ನು ಈ ಚಿತ್ರದಲ್ಲಿ ಬಳಸಿಕೊಳ್ಳಲಾಗುತ್ತಿದೆ‌. ಜಪಾನ್ ನಿರ್ದೇಶರೊಬ್ಬರು ಈ ವಿಧಾನವನ್ನು ತಮ್ಮ ಚಿತ್ರದ ಮೂಲಕ ಪರಿಚಯಿಸಿದ್ದರು. ಕನ್ನಡದಲ್ಲಿ ಇದರ ಬಳಕೆಯಾಗಿರುವುದು ವಿರಳ ಎನ್ನಬಹುದು. ಒಂದೇ ಕಥೆಯನ್ನೇ ಬೇರೆಬೇರೆಯವರು ಹೇಳುವ ವಿಧಾನ ಬೇರೆ ರೀತಿ ಆಗಿರುತ್ತದೆ. ಪ್ರಸ್ತುತ ಈ ಚಿತ್ರದ ಚಿತ್ರೀಕರಣ ಮುಕ್ಕಾಲು ಭಾಗ ಮುಕ್ತಾಯವಾಗಿದೆ. ಕೆಲವು ದಿನಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಇದು ನನ್ನ ನಿರ್ದೇಶನದ ಹತ್ತನೇ ಚಿತ್ರ.

ಅರ್ಜುನ್ ಜನ್ಯ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ನನ್ನ ನಿರ್ದೇಶನದ ಹತ್ತು ಚಿತ್ರಗಳಲ್ಲಿ ಒಂಭತ್ತು ಚಿತ್ರಗಳಿಗೆ ಅರ್ಜುನ್ ಜನ್ಯ ಅವರೆ ಸಂಗೀತ ನೀಡಿದ್ದಾರೆ. ನಾನೇ ಕಥೆ, ಚಿತ್ರಕಥೆ ರಚಿಸಿದ್ದೇನೆ. ಸಂಕಲನವನ್ನು ಮಾಡುತ್ತಿದ್ದೇನೆ. ನನ್ನ ಹಿಂದಿನ “ರಾಗ ಹಾಗೂ “ದಿ ಟೆರರಿಸ್ಟ್” ಚಿತ್ರಗಳಿಗೆ ಸಂಭಾಷಣೆ ಬರೆದಿದ್ದ ಸಚಿನ್ ಬಿ ಹೊಳಗುಂಡಿ ಈ ಚಿತ್ರಕ್ಕೂ ಸಂಭಾಷಣೆ ಬರೆದಿದ್ದಾರೆ. ಜಿ.ರಾಜಶೇಖರ್ ಅವರ ಕಲಾ ನಿರ್ದೇಶನವಿದೆ.
ಇದೊಂದು ಪ್ರಯೋಗಾತ್ಮಕ ಚಿತ್ರವಾಗಿದ್ದು, ಬರುವ ಪಾತ್ರಗಳ ಅಭಿನಯ ನೋಡುಗರಿಗೆ ಸಹಜ ರೀತಿಯಲ್ಲಿ ಕಾಣಬೇಕು ಹಾಗೂ ಅವರ ಪಾತ್ರವನ್ನು ನೋಡಿದ ಕೂಡಲೆ, ಇವರದು ಇಂತಹುದೇ ಪಾತ್ರ ಎಂದು ಪ್ರೇಕ್ಷಕರು ಅಂದುಕೊಳ್ಳಬಾರದು. ಹಾಗಾಗಿ ಈ ಚಿತ್ರದಲ್ಲಿ ಹೆಚ್ಚು ಹೊಸ ಕಲಾವಿದರೆ ಅಭಿನಯಿಸುತ್ತಿದ್ದಾರೆ.


“ಪ್ರೀತಿಯ ರಾಯಭಾರಿ” ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದ ನಕುಲ್ ಗೌಡ, ಮಾನ್ವಿತ ಹರೀಶ್, ಸಾಯಿ ಕೃಷ್ಣ, ಅಪೂರ್ವ ಭಾರದ್ವಾಜ್, ಮಂಜುನಾಥ್ , ಅಶ್ವಿನಿ ಹಾಗೂ ಅನೇಕ ರಂಗಭೂಮಿ ಪ್ರತಿಭೆಗಳು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ‌. ಶಕ್ತಿ ಶೇಖರ್ ಈ ಚಿತ್ರದ ಛಾಯಾಗ್ರಾಹಕರು ಎಂದು ನಿರ್ದೇಶಕ ಪಿ.ಸಿ.ಶೇಖರ್ ಚಿತ್ರದ ಕುರಿತು ಮಾಹಿತಿ ನೀಡಿದ್ದಾರೆ.

Categories
ಸಿನಿ ಸುದ್ದಿ

ಕಿರಣ್ ರಾಜ್ ಹುಟ್ದಬ್ಬಕ್ಕೆ ರಾನಿ ಟೀಸರ್ ರಿಲೀಸ್

ಟೈಟಲ್ ಹಾಗೂ ಪೋಸ್ಟರ್ ನಿಂದ ಸಿನಿ ಪ್ರೇಕ್ಷರಲ್ಲಿ ಕುತೂಹಲ ಹುಟ್ಟಿಸಿದ “ರಾನಿ” ಸಿನಿಮಾದ ಟೀಸರ್ ನಾಯಕ ನಟ ಕಿರಣ್ ರಾಜ್ ಹುಟ್ಟುಹಬ್ಬದ ದಿನ ಜುಲೈ 5 ರಂದು ಬಿಡುಗಡೆಯಾಗುತ್ತಿದೆ. “ರಾನಿ” ಚಿತ್ರದ​ ನಾಯಕ ಕಿರಣ್ ರಾಜ್ ದುಬೈಗೆ ಹೋಗಿ 13 ಸಾವಿರ ಅಡಿ ಎತ್ತರದಿಂದ ಸ್ಕೈ ಡೈವ್ ಮಾಡಿ “ರಾನಿ” ಚಿತ್ರದ ಟೈಟಲ್ ಅನಾವರಣಗೊಳಿಸಿದ್ದರು, ಅವರ ಈ ಸಾಹಸಕ್ಕೆ ಇಡೀ ಚಿತ್ರರಂಗವೆ ಮೆಚ್ಚುಗೆ ವ್ಯಕ್ತಪಡುಸಿತ್ತು. ನಂತರ ಬಿಡುಗಡೆಯಾದ ಪೋಸ್ಟರ್ ಚಿತ್ರದ ಮೇಲಿನ ಕುತೂಹಲ ಇನ್ನಷ್ಟು ಹೆಚ್ಚಿಸಿತ್ತು.

ಈ ಬಾರಿ ಗಟ್ಟಿ ಕಥೆಯೊಂದಿಗೆ ಆಕ್ಷನ್-ಕಮರ್ಷಿಯಲ್ ಸಿನಿಮಾ ಮಾಡಿದ್ದೇನೆ ಎನ್ನುವ ನಿರ್ದೇಶಕ ಗುರುತೇಜ್ ಶೆಟ್ಟಿ, ಇದೊಂದು ಗ್ಯಾಂಗ್ ಸ್ಟರ್ ಸಿನಿಮಾ ಆದರೂ ಕುಟುಂಬ ಸಮೇತ ನೋಡುವಂತಹ ಭಾವನಾತ್ಮಕ ವಿಷಯಗಳು ಚಿತ್ರದಲ್ಲಿದೆ ಎನ್ನುತ್ತಾರೆ.

ರವಿಶಂಕರ್ ಮೈಕೋ ನಾಗರಾಜ್ ,ಉಗ್ರಂ ರವಿ , ಉಗ್ರಂ ಮಂಜು, B ಸುರೇಶ , ಮಂಡ್ಯ ರಮೇಶ್ , ಸುಜಯ್ ಶಾಸ್ತ್ರಿ, ಸೂರ್ಯ ಕುಂದಾಪುರ, ಧರ್ಮಣ್ಣ ಕಡೂರು, ಗಿರೀಶ್ ಹೆಗ್ಡೆ ಹೀಗೆ ಮುಂತಾದ ದೊಡ್ಡ ಕಲಾವಿದರ ದಂಡೇ ಈ ಚಿತ್ರದಲ್ಲಿದೆ. ಸಮೀಕ್ಷಾ, ಅಪೂರ್ವ, ರಾದ್ಯಾ ಮೂವರು ಈ ಚಿತ್ರದ ನಾಯಕಿಯರು. ಮೂವರು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಾಘವೇಂದ್ರ B.ಕೋಲಾರ್ ಛಾಯಾಗ್ರಹಣ, ಮಣಿಕಾಂತ್ ಕದ್ರಿ ಸಂಗೀತ ನಿರ್ದೆಶನ​​ವಿರುವ ಈ ಚಿತ್ರಕ್ಕೆ ಸಚಿನ್ ಬಸ್ರೂರ್ ಹಿನ್ನಲೆ ಸಂಗೀತ ನೀಡುತ್ತಿದ್ದಾರೆ.

ಸ್ಟಾರ್ ಕ್ರಿಯೇಷನ್ ಬ್ಯಾನರ್ ಅಡಿಯಲ್ಲಿ ಚಂದ್ರಕಾಂತ್ ಪೂಜಾರಿ ,ಉಮೇಶ್ ಹೆಗ್ಡೆ ನಿರ್ಮಿಸುತ್ತಿರುವ ಚೊಚ್ಚಲ ಚಿತ್ರವಿದು. ಇದೆ ವರ್ಷ ಡಿಸೆಂಬರ್ ನಲ್ಲಿ ಚಿತ್ರ ಬಿಡುಗಡೆ ಮಾಡುವ​ ಯೋಜನೆಯಲ್ಲಿದ್ದಾರೆ ನಿರ್ಮಾಪಕರು.

Categories
ಸಿನಿ ಸುದ್ದಿ

ಭವಾನಿ ಹಿಂದೆ ಆರ್ಯನ್! ಹೊಸ ಸಿನಿಮಾ ಅನೌನ್ಸ್ ಮಾಡಿದ ಬಿಗ್ ಬಾಸ್ ಹುಡುಗ: ಶೀರ್ಷಿಕೆ ಬಿಡುಗಡೆ ಮಾಡಿದ ಅಶ್ವಿನಿ ಪುನೀತ್ ರಾಜಕುಮಾರ್

ನೂರು ಜನ್ಮಕ್ಕೂ, ಡಿಯರ್ ಸತ್ಯ ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ಪ್ರತಿಭಾನ್ವಿತ ನಾಯಕ ಆರ್ಯನ್. ಇದೀಗ ಅವರು ದಿ ಭವಾನಿ ಫೈಲ್ಸ್ ಎಂಬ ಹೊಸ ಸಿನಿಮಾ ಘೋಷಿಸಿದ್ದಾರೆ. ಈ ಚಿತ್ರದಲ್ಲಿ ನಟನೆ ಜೊತೆಗೆ ಕ್ರಿಯೇಟಿವ್ ಡೈರೆಕ್ಟರ್ ಆಗಿಯೂ ಜವಾಬ್ದಾರಿ ಹೊತ್ತುಕೊಂಡಿರುವ ಆರ್ಯನ್ ಚಿತ್ರಕ್ಕೆ ದೊಡ್ಮನೆ ಸೊಸೆ ಸಾಥ್ ಕೊಟ್ಟಿದ್ದಾರೆ. ದಿ ಭವಾನಿ ಫೈಲ್ಸ್ ಸಿನಿಮಾದ ಟೈಟಲ್ ಲಾಂಚ್ ಮಾಡಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಶುಭ ಹಾರೈಸಿದ್ದಾರೆ.

ಸದ್ಯ ಸಿನಿಮಾದ ಪ್ರೀ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿದ್ದು, ಮುಂದಿನ ತಿಂಗಳು ಫಸ್ಟ್ ಲುಕ್ ಲಾಂಚ್ ಮಾಡಲು ಚಿತ್ರತಂಡ ಪ್ಲಾನ್ ಮಾಡಿಕೊಂಡಿದೆ. 14ನೇ ಶತಮಾನ ‘ದಿ ಭವಾನಿ ಫೈಲ್ಸ್’ ಕಥೆಯನ್ನು ಆರ್ಯನ್ ತಮ್ಮ ಸ್ನೇಹಿತರ ಜೊತೆಗೂಡಿ ನಿರ್ದೇಶಿಸುತ್ತಿದ್ದಾರೆ.

ಮೋಹನ್ ಮೆನನ್, ಜೇಕಬ್ ವರ್ಗೀಸ್ ಹಾಗೂ ಆರ್ಯನ್ ಸಿನಿಮಾಗೆ ಚಿತ್ರಕಥೆ ಬರೆದಿದ್ದು, ಚೇತನ್ ಡಿಕ್ರೋಸ್ ಸ್ಟಂಟ್, ಜೋ ಕೋಸ್ಟ್ ಟ್ಯೂನ್ ಹಾಕಿದ್ದಾರೆ. ವೈಟ್ ಹಾರ್ಸ್ ಪ್ರೊಡಕ್ಷನ್ ಬ್ಯಾನರ್ ನಡಿ ನಿರ್ಮಾಣವಾಗುತ್ತಿರುವ ದಿ ಭವಾನಿ ಫೈಲ್ಸ್ ಸಿನಿಮಾವನ್ನು ವಿಂಟರ್ ಬ್ರಿಡ್ಜ್ ಸ್ಟುಡಿಯೋಸ್ ನಿರ್ಮಾಣದಲ್ಲಿ ಸಾಥ್ ಕೊಡಲಿದೆ. ಕಲ್ಟ್ ಜಾನರ್ ಈ ಸಿನಿಮಾದ ಉಳಿದ ಸ್ಟಾರ್ ಕಾಸ್ಟ್ ಹಾಗೂ ತಾಂತ್ರಿಕ ವರ್ಗದ ಬಗ್ಗೆ ಶೀಘ್ರದಲ್ಲೇ ಚಿತ್ರತಂಡ ಮಾಹಿತಿ ನೀಡಲಿದೆ.

Categories
ಸಿನಿ ಸುದ್ದಿ

ಬ್ಲಿಂಕ್ ಸಿನಿಮಾಗೆ ಹಿನ್ನೆಲೆ ಸಂಗೀತ ಕಂಪ್ಲೀಟ್; ರ್ಟಕಿ, ಅರೇಬಿಕ್ , ಪಾಕಿಸ್ತಾನದ ರಬಾಬ್ ಉಪಕರಣ ಬಳಕೆ

ಜನನಿ ಪಿಕ್ಚರ್ಸ್ ಅಡಿಯಲ್ಲಿ ರವಿಚಂದ್ರ ಎ.ಜೆ ನಿರ್ಮಾಣದಲ್ಲಿ ತಯಾರಾಗುತ್ತಿರುವ ಬ್ಲಿಂಕ್ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಚಿತ್ರದ ಆರ್ಕೆಸ್ಟ್ರಾ ಸೆಷನ್ ಭಾಗದ ರೀ-ರೆಕಾರ್ಡಿಂಗ್ ಕೊಚ್ಚಿ ಸ್ಟುಡಿಯೋದಲ್ಲಿ ಪೂರ್ಣಗೊಂಡಿದೆ. ಟರ್ಕಿ, ಅರೇಬಿಕ್, ಪಾಕಿಸ್ತಾನದ ರಬಾಬ್ ಇನ್ಸ್ಟ್ರುಮೆಂಟ್ ಬಳಸಿ ರೀ-ರೆಕಾರ್ಡಿಂಗ್ ಮಾಡಿರೋದು ವಿಶೇಷ. ನೋಡುಗರಿಗೆ ಹೊಸ ಅನುಭವ ನೀಡುವ ಉದ್ದೇಶದಿಂದ ಬ್ಲಿಂಕ್ ಸಿನಿಮಾ ಬಳಗ ಕಂಸಾಳೆ, ಜನಪದ ಗೀತೆ ಕಂಪನ್ನು ಸಿನಿಮಾದಲ್ಲಿ ಅಳವಡಿಸಿದೆ. ಇದು ಪ್ರೇಕ್ಷಕರಿಗೆ ಹೊಸ ಫ್ಲೇವರ್ ಕೊಡಲಿದೆ ಅನ್ನೋದು ಚಿತ್ರತಂಡ ಮಾತು.

ಶ್ರೀನಿಧಿ ಬೆಂಗಳೂರು ನಿರ್ದೇಶಿಸುತ್ತಿರುವ ಚೊಚ್ಚಲ ಚಿತ್ರ ಬ್ಲಿಂಕ್. ಮಿಡಲ್ ಕ್ಲಾಸ್ ಹುಡುಗನ ಜೀವನದಲ್ಲಿ ನಡೆಯುವ unexpected ಘಟನೆಗಳು ಹೇಗೆ ಆವನ ಸುತ್ತ- ಮುತ್ತಲಿನ ವಾತಾವರಣ ಬದಲಿಸುತ್ತದೆ ಎಂಬುದು ಈ ಕಥೆಯ ಸಾರಾಂಶ. Sci-Fi ಶೈಲಿಯಲ್ಲಿ ಮೂಡಿಬರುತ್ತಿರುವ ಬ್ಲಿಂಕ್ ಚಿತ್ರಕ್ಕೆ ನಾಯಕ ನಟರಾಗಿ ದಿಯಾ ಹಾಗೂ ದಸರಾ ಖ್ಯಾತಿಯ ದೀಕ್ಷಿತ್ ಶೆಟ್ಟಿ ಅಭಿನಯಿಸಿದ್ದಾರೆ. ನಾಯಕಿಯಾರಾಗಿ ಮಂದಾರ ಬಟ್ಟಲಹಳ್ಳಿ ಹಾಗೂ ಚೈತ್ರ ಜೆ ಆಚಾರ್ ನಟಿಸುತ್ತಿದ್ದು ಮುಖ್ಯಪಾತ್ರಗಳಲ್ಲಿ ವಜ್ರಧೀರ್ ಜೈನ್ , ಗೋಪಾಲಕೃಷ್ಣ ದೇಶಪಾಂಡೆ, ಸುರೇಶ್ ಅನಗಳ್ಳಿ ಕಾಣಿಸಿಕೊಂಡಿದ್ದಾರೆ.

ಅವಿನಾಶ್ ಶಾಸ್ತ್ರೀ ಛಾಯಾಗ್ರಹಣ, ಪ್ರಸನ್ನ ಕುಮಾರ್ ಸಂಗೀತ, ಸಂಜೀವ್ ಜಗೀರ್ದಾರ್ ಸಂಕಲನ ಚಿತ್ರಕ್ಕಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಬ್ಲಿಂಕ್ ಸಿನಿಮಾವನ್ನು ಆಗಸ್ಟ್ ತಿಂಗಳಲ್ಲಿ ರಿಲೀಸ್ ಮಾಡಲು ಚಿತ್ರತಂಡ ತಯಾರಿ ನಡೆಸುತ್ತಿದೆ. ಶೀಘ್ರದಲ್ಲಿಯೇ ವಿಶೇಷ ಹಾಡು ಬಿಡುಗಡೆ ಮಾಡಲು ಪ್ಲಾನ್ ಹಾಕಿಕೊಂಡಿದೆ.

Categories
ಸಿನಿ ಸುದ್ದಿ

ಮಾಲಾಶ್ರೀ ಮಾತೇ ಕೆಂಡ! ಕೆಂಡದ ಸೆರಗು ಸಿನಿಮಾಗೆ ಕನಸಿನ ರಾಣಿಯ ಕೆಂಡದಂತ ಮಾತು

ಕೆಂಡದ ಸೆರಗು ಎನ್ನುವ ಕುಸ್ತಿ ಆಧಾರಿತ ಕಾದಂಬರಿ ಸಿನಿಮಾದಲ್ಲಿ ಮುಖ್ಯ ಪಾತ್ರದಲ್ಲಿ ನಟಿಸಿರುವ ಮಾಲಾಶ್ರೀ ಅವರು ತಾವೇ ಸ್ವತಃ ಡಬ್ಬಿಂಗ್ ಮಾಡಿ ಮುಗಿಸಿದ್ದಾರೆ. ಮಾಲಾಶ್ರೀ ಅವರು ನಟಿಸಿರುವ ಸಿನಿಮಾಗಳಲ್ಲಿ ಕೆಲವೇ ಕೆಲವು ಸಿನಿಮಾಗಳಿಗೆ ಮಾತ್ರ ತಮ್ಮ ಧ್ವನಿ ಕೊಡುತ್ತಾರೆ ತುಂಬ ವರ್ಷಗಳ ನಂತರ ಕೆಂಡದ ಸೆರಗು ಸಿನಿಮಾಗೆ ಮಾಲಾಶ್ರೀ ಅವರು ಧ್ವನಿ ಕೊಟ್ಟಿದ್ದು ಚಿತ್ರತಂಡಕ್ಕೆ ಮತ್ತೊಂದು ಶಕ್ತಿ ಇದ್ದಂತೆ ಎಂದು ತಿಳಿಸಿದ್ದಾರೆ ನಿರ್ದೇಶಕ ರಾಕಿ‌ ಸೋಮ್ಲಿ ಅವರು.

ಈ ಹಿಂದೆ ಕೆಂಡದ ಸೆರಗು ಸಿನಿಮಾ ಬಗ್ಗೆ ಹೇಳಿದ್ದ ಮಾಲಾಶ್ರೀ ಅವರು, “ಕೆಂಡದ ಸೆರಗು” ದೇಸಿ ಕುಸ್ತಿ ಕಥೆಯ ಜೊತೆಗೆ ಹೃದಯ ಅಂಟುವ ಭಾವನಾತ್ಮಕ ಸಮಾಜಕ್ಕೆ ಒಳ್ಳೆಯ ಸಂದೇಶ ಕೊಡುವ ಸಿನಿಮಾ, ಒಂದೊಂದು ಪಾತ್ರವೂ ಸಹ ತುಂಬ ವಿಶೇಷವಾದ ಪಾತ್ರಗಳು.
ತಂಡದ ಪ್ರತಿ ಒಬ್ಬರು ಸಹ ಸಿನಿಮಾವನ್ನು ಆರಾಧಿಸುವ ತಂತ್ರಜ್ಞಾನರ ತಂಡ, ನಾನು ತುಂಬ ಖುಷಿಯಿಂದ ಸೆಟ್ ನಲ್ಲಿ ಪ್ರೀತಿಯಿಂದ ಕೆಲಸ ಮಾಡಿದ್ದೇನೆ, ತಂಡದ ಪ್ರತಿ ಒಬ್ಬರು ಸಹ ತುಂಬಾನೇ ಶ್ರಮವಹಿಸಿ ಈ ಸಿನಿಮಾದ ಕೆಲಸ ಮಾಡುತ್ತಿದ್ದಾರೆ. ಖಂಡಿತವಾಗಿ ಇದು ಗೆಲ್ಲುವ ಸಿನಿಮಾ, ಈ ವರ್ಷದ ಸಾಲಿನಲ್ಲಿ ನಿಲ್ಲುವ ಸಿನಿಮಾ, ಈ ತಂಡದ ಜೊತೆಗೆ ನಾ ಸದ ಇರುತ್ತೇನೆ ಎಂದು ಹೇಳಿದ್ದಾರೆ.

ಚಿತ್ರಿಕರಣ ಮುಗಿಸಿ ಪೊಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಕೆಂಡದ ಸೆರಗು ಇನ್ನೆರಡು ತಿಂಗಳಲ್ಲಿ ಬಿಡುಗಡೆಗೆ ನೀರಿಕ್ಷೆಯಲ್ಲಿದೆ.
ಸಿನಿಮಾದಲ್ಲಿ ಒಟ್ಟು ನಾಲ್ಕು ಫೈಟ್, ಆರು ಹಾಡುಗಳಲ್ಲಿದ್ದು ಈಗಾಗಲೇ ಒಂದು ಹಾಡು ಮತ್ತು ಸಿನಿಮಾದ ಟೀಸರ್ ಬಿಡುಗಡೆ ಆಗಿದೆ.

ಇನ್ನೂ ಉಳಿದ ತಾರಾಗಣದಲ್ಲಿ ಯಶ್ ಶೆಟ್ಟಿ, ವರ್ಧನ್, ಬಾಲುರಾಜ್ ವಾಡಿ, ಶೋಭಿತ, ಹರೀಶ್ ಅರಸು, ಪ್ರತಿಮಾ, ಮೋಹನ್, ಸಿಂಧನೂರು ಉಮೇಶ್, ಸಿಂದೂಲೋಕನಾಥ್ ಅಭಿನಯಿಸಿದ್ದಾರೆ.

ಈ ಚಿತ್ರಕ್ಕೆ ವಿಪಿನ್ ರಾಜ್ ಅವರ ಛಾಯಾಗ್ರಹಣ, ವೀರೇಶ್ ಕಬ್ಳಿ ಯವರ ಸಂಗೀತ, ಶ್ರೀಕಾಂತ್ ರವರ ಸಂಕಲನ, ಶ್ರೀಮುತ್ತು ಟಾಕೀಸ್ ಅಡಿಯಲ್ಲಿ , ಕೊಟ್ರೇಶ್ ಗೌಡ ಅವರು ಬಂಡವಾಳ ಹೂಡಿದ್ದು ಗೆಲ್ಲುವ ಎಲ್ಲಾ ಸಿದ್ದತೆ ಮಾಡಿಕೊಂಡಿದೆ ಚಿತ್ರತಂಡ

Categories
ಸಿನಿ ಸುದ್ದಿ

ವಿಜಯ್ ಹುಟ್ದಬ್ಬಕ್ಕೆ ‘ಲಿಯೋ’ ಚಿತ್ರದ ಫಸ್ಟ್ ಲುಕ್ ಹಾಗು “ನಾ ರೆಡಿ” ಹಾಡಿನ ಪ್ರೋಮೋ ಬಿಡುಗಡೆ

ತಮಿಳಿನ ಸ್ಟಾರ್ ನಟ ವಿಜಯ್ ಹುಟ್ಟು ಹಬ್ಬದ ಸಂಭ್ರಮವನ್ನು ದ್ವಿಗುಣಗೊಳಿಸುವುದಕ್ಕೆ ‘ಲಿಯೋ’ ಚಿತ್ರತಂಡವು “ನಾ ರೆಡಿ” ಎಂಬ ಹಾಡಿನ ಪ್ರೋಮೋ ಜೊತೆಗೆ ಚಿತ್ರದಲ್ಲಿನ ವಿಜಯ್ ಅವರ ಫಸ್ಟ್ ಲುಕ್ ಪೋಸ್ಟರ್ ಸಹ ಬಿಡುಗಡೆ ಮಾಡಿದೆ.
‘ಮಾಸ್ಟರ್’ ನಂತರ ನಿರ್ದೇಶಕ ಲೋಕೇಶ್ ಕನಕರಾಜ್ ಮತ್ತು ವಿಜಯ್, ‘ಲಿಯೋ’ ಎಂಬ ಇನ್ನೊಂದು ಚಿತ್ರದಲ್ಲಿ ಜೊತೆಯಾಗಿ ಕೆಲಸ ಮಾಡುತ್ತಿದ್ದಾರೆ. ಈ ಚಿತ್ರವು ಕೆಲವ ತಿಂಗಳ ಹಿಂದೆ ಚೆನ್ನೈನಲ್ಲಿ ಶುರುವಾಗಿತ್ತು. ಆದರೆ, ಇದುವರೆಗೂ ಚಿತ್ರತಂಡದವರು ಚಿತ್ರದಲ್ಲಿ ವಿಜಯ್ ಅವರ ಪಾತ್ರವೇನು? ಅಥವಾ ಅವರು ಹೇಗೆ ಕಾಣುತ್ತಾರೆ ಎಂಬ ವಿಷಯವನ್ನು ಬಹಿರಂಗಗೊಳಿಸಿರಲಿಲ್ಲ. ಈಗ ಪೋಸ್ಟರ್ ಮತ್ತು ಪ್ರೋಮೋ ಮೂಲಕ ವಿಜಯ್ ಅಭಿಮಾನಿಗಳಿಗೆ ಭರ್ಜರಿ ಉಡುಗೊರೆ ನೀಡಿದ್ದಾರೆ.


‘ನಾ ರೆಡಿದಾ ವರವಾ’ ಎಂಬ ಹಾಡನ್ನು ಸ್ವತಃ ವಿಜಯ್ ಹಾಡಿದ್ದು, ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜಿಸಿದ್ದಾರೆ. ವಿಷ್ಣು ಎಡವನ್ ಬರೆದಿರುವ ಈ ಹಾಡಿನ ಪ್ರೋಮೊ ಸೋನಿ ಮ್ಯೂಸಿಕ್ ಸೌಥ್ ಚಾನಲ್ ನಲ್ಲಿ ಬಿಡುಗಡೆಯಾಗಿದ್ದು, ಸದ್ಯದಲ್ಲೇ ಪೂರ್ತಿ ಹಾಡು ಕೂಡ ಬಿಡುಗಡೆಯಾಗಲಿದೆ.
ಸೆವೆನ್ ಸ್ಕ್ರೀನ್ ಸ್ಟುಡಿಯೋಸ್ ಬ್ಯಾನರ್ ನಲ್ಲಿ ಲಲಿತ್ ಕುಮಾರ್ ನಿರ್ಮಿಸುತ್ತಿರುವ ‘ಲಿಯೋ’ ಚಿತ್ರವನ್ನು ಲೋಕೇಶ್ ಕನಕರಾಜ್ ನಿರ್ದೇಶಿಸುವುದರ ಜೊತೆಗೆ ಕಥೆ ಮತ್ತು ಚಿತ್ರಕಥೆಯನ್ನು ಸಹ ರಚಿಸಿದ್ದಾರೆ.


ಈ ಚಿತ್ರದಲ್ಲಿ ವಿಜಯ್ ಅವರಿಗೆ ನಾಯಕಿಯಾಗಿ ತ್ರಿಷಾ ಕೃಷ್ಣನ್ ಅಭಿನಯಿಸುತ್ತಿದ್ದು, ಬಾಲಿವುಡ್ ನಟ ಸಂಜಯ್ ದತ್, ಅರ್ಜುನ್ ಸರ್ಜಾ, ಪ್ರಿಯಾ ಆನಂದ್, ಮನ್ಸೂರ್ ಅಲಿ ಖಾನ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಸಂಗೀತ ನಿರ್ದೇಶನ ಮತ್ತು ಮನೋಜ್ ಪರಮಹಂಸ ಅವರ ಛಾಯಾಗ್ರಹಣವಿದೆ.

‘ಲಿಯೋ’ ಚಿತ್ರವು ಅಕ್ಟೋಬರ್ 19ರಂದು ಐದು ಭಾಷೆಗಳಲ್ಲಿ ಏಕಕಾಲಕ್ಕೆ ಪ್ಯಾನ್ ಇಂಡಿಯಾ ಚಿತ್ರವಾಗಿ ಬಿಡುಗಡೆಯಾಗುತ್ತಿದೆ.

error: Content is protected !!