Categories
ಸಿನಿ ಸುದ್ದಿ

ಹಿರಣ್ಯನಿಗೆ ಕುಂಬಳಕಾಯಿ: ಇದು ರಾಜವರ್ಧನ್ ಅಭಿನಯದ ಚಿತ್ರ

ಮ್ಯಾಸೀವ್ ಸ್ಟಾರ್ ರಾಜವರ್ಧನ್ ನಟನೆಯ ಬಹುನಿರೀಕ್ಷಿತ ಹಿರಣ್ಯ ಸಿನಿಮಾದ ಶೂಟಿಂಗ್ ಕಂಪ್ಲೀಟ್ ಆಗಿದೆ. ಬೆಂಗಳೂರು ಸುತ್ತಮುತ್ತ ಇಡೀ ಚಿತ್ರದ ಚಿತ್ರೀಕರಣ ನಡೆಸಲಾಗಿದ್ದು, ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿವೆ.

ಹಿರಣ್ಯ ಸಿನಿಮಾಗೆ ಪ್ರವೀಣ್ ಅವ್ಯುಕ್ತ್ ಆಕ್ಷನ್ ಕಟ್ ಹೇಳಿದ್ದಾರೆ. ಈಗಾಗಲೇ ಹಲವು ಶಾರ್ಟ್‌ ಮೂವಿಗಳನ್ನು ಮಾಡಿದ ಅನುಭವ ಇರುವ ಪ್ರವೀಣ್‌ ಅವ್ಯೂಕ್ತ್ ಈ ಚಿತ್ರದ ಮೂಲಕ ಪೂರ್ಣ ಪ್ರಮಾಣದಲ್ಲಿ ನಿರ್ದೇಶಕನಾಗಿ ಸ್ಯಾಂಡಲ್‌ ವುಡ್‌ಗೆ ಪರಿಚಯವಾಗುತ್ತಿದ್ದಾರೆ. ರಾಜವರ್ಧನ್ ಗೆ ಜೋಡಿಯಾಗಿ ಮಾಡೆಲ್ ರಿಹಾನಾ ನಟಿಸಿದ್ದು, ಈ ಚಿತ್ರದ ಮೂಲಕ ರಿಹಾನಾ ಚಂದನವನ ಪ್ರವೇಶಿಸಿದ್ದಾರೆ.

ಕಂಪ್ಲೀಟ್ ಆಕ್ಷನ್ ಥ್ರಿಲ್ಲರ್ ಜೊತೆಗೆ ತಾಯಿ ಸೆಂಟಿಮೆಂಟ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ಸ್ಪೆಷಲ್ ರೋಲ್ ನಲ್ಲಿ ಕಾಣಿಸಿಕೊಂಡಿದ್ದು, ಹುಲಿ ಕಾರ್ತಿಕ್, ಅರವಿಂದ್ ರಾವ್, ದಿಲೀಪ್ ಶೆಟ್ಟಿ ಮುಂತಾದವರು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.

“ವೇದಾಸ್‌ ಇನ್ಫಿನಿಟಿ ಪಿಕ್ಚರ್’ ಬ್ಯಾನರ್‌ನಡಿ ವಿಘ್ನೇಶ್ವರ. ಯು ಹಾಗೂ ವಿಜಯ್‌ ಕುಮಾರ್‌ ಬಿ.ವಿ. “ಹಿರಣ್ಯ’ ಸಿನಿಮಾಗೆ ಬಂಡವಾಳ ಹೂಡಿ ನಿರ್ಮಿಸುತ್ತಿದ್ದು, ಚಿತ್ರಕ್ಕೆ ಯೋಗೇಶ್ವರನ್‌ ಆರ್‌ ಛಾಯಾಗ್ರಹಣವಿದೆ. ಚಿತ್ರದ ಹಾಡುಗಳಿಗೆ ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜನೆಯಿದೆ. ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿ ಇರುವ ಚಿತ್ರತಂಡ ಆದಷ್ಟು ಬೇಗ ಸಿನಿಮಾವನ್ನು ತೆರೆಗೆ ತರುವ ಪ್ರಯತ್ನ ನಡೆಸುತ್ತಿದೆ.

Categories
ಸಿನಿ ಸುದ್ದಿ

ಕನ್ನಡ ಸಿನಿಮಾ ಪಿ ಆರ್ ಓ ಸುಧೀಂದ್ರ ಮಗಳ ಮದ್ವೆಗೆ ಸ್ಯಾಂಡಲ್ವುಡ್ ನಟ- ನಟಿಯರ ಶುಭ ಹಾರೈಕೆ

ಕನ್ನಡ ಚಿತ್ರರಂಗದ ಪ್ರಚಾರಕರ್ತ(ಪಿ ಆರ್ ಓ) ಸುಧೀಂದ್ರ ವೆಂಕಟೇಶ್ ಅವರ ಪುತ್ರಿ ಚಿ.ಸೌ. ಚಂದನ‌ ವಿವಾಹ ಚಿ.ರಾ.ಪ್ರಸನ್ನ ಭಾಸ್ಕರ್ ಅವರೊಂದಿಗೆ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಈ ಮದುವೆಗೆ ಕನ್ನಡ‌ ಸಿನಿಮಾ ತಾರೆಯರ ದಂಡೇ ಆಗಮಿಸಿ, ನೂತನ ವಧು ವರರಿಗೆ ಹರಸಿತು.

ಈ ವೇಳೆ ಕನ್ನಡ ಸಿನಿಮಾ ರಂಗದ ಸ್ಟಾರ್ ರವಿಚಂದ್ರನ್, ರಮೇಶ್ ಅರವಿಂದ್, ಉಪೇಂದ್ರ, ಧ್ರುವ ಸರ್ಜಾ, ಅಜೇಯ್ ರಾವ್ , ವಿನೋದ್ ಪ್ರಭಾಕರ್, ಹಂಸಲೇಖ ದಂಪತಿ, ಸುಧಾರಾಣಿ, ರಾಗಿಣಿ ದ್ವಿವೇದಿ, ಚಾಂದಿನಿ,

ಅಮೂಲ್ಯ, ಸೋನು ಗೌಡ , ಪ್ರಗತಿ ರಿಷಭ್ ಶೆಟ್ಟಿ, ಶ್ರೀನಿವಾಸಮೂರ್ತಿ, ರಮೇಶ್ ಭಟ್, ಧರ್ಮ, ತಬಲ ನಾಣಿ, ಶ್ರೀನಾಥ್, ಕೀರ್ತಿ ರಾಜ್, ಧರ್ಮ ಕೀರ್ತಿರಾಜ್, ಸಿಹಿಕಹಿ ಚಂದ್ರು, ಬಿ.ಸುರೇಶ್,

ಗುರುದತ್, ರವಿಚೇತನ್ ನಿರ್ಮಾಪಕರಾದ ಸಾ.ರಾ.ಗೋವಿಂದು, ಎಸ್.ಎ.ಚಿನ್ನೇಗೌಡ, ಎಸ್ ವಿ ಬಾಬು, ಎಂ.ಜಿ.ರಾಮಮೂರ್ತಿ, ಟಿ.ಪಿ.ಸಿದ್ದರಾಜು, ಶೈಲಜಾ ನಾಗ್ ಅಗಮಿಸಿದ್ದರು

ಇವರೊಂದಿಗೆ ರಾಜಕುಮಾರ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ನಿರ್ದೇಶಕರಾದ ಗಿರೀಶ್ ಕಾಸರವಳ್ಳಿ, ಟಿ.ಎಸ್.ನಾಗಾಭರಣ, ಪಿ.ಶೇಷಾದ್ರಿ, ಆರ್ ಚಂದ್ರು, ಟಿ.ಎನ್ ಸೀತಾರಮ್, ಬಹದ್ದೂರ್ ಚೇತನ್, ಸಾಹಸ ನಿರ್ದೇಶಕ ರವಿವರ್ಮ,

ಗಾಯಕಿಯರಾದ ಮಂಜುಳಾ ಗುರುರಾಜ್, ಬಿ.ಆರ್ ಛಾಯಾ, ಸಂಗೀತ ಕಟ್ಟಿ ಸೇರಿದಂತೆ ಮುಂತಾದ ಚಿತ್ರರಂಗದ ಗಣ್ಯರು ವಿವಾಹ ಮಹೋತ್ಸವಕ್ಕೆ ಆಗಮಿಸಿ ವಧು-ವರರನ್ನು ಆಶೀರ್ವದಿಸಿದರು.

Categories
ಸಿನಿ ಸುದ್ದಿ

ಅನ್ನ ಹಾಕುವ ಕೈಗೆ ಜೈ ಅನ್ನಿ! ಇದು ದಣಿವ ಮನಸ್ಸಿನ ಚಿತ್ರಣ : ಶ್ರೀಮಂತ ಚಿತ್ರ: ಮೇ 19ಕ್ಕೆ ಜನರ ಹತ್ರ

ಈಗ ಎಲ್ಲೆಲ್ಲೂ ಎಲೆಕ್ಷನ್ ಜ್ವರ. ಚುನಾವಣೆ ಕಾವು ಜೋರಾಗಿಯೇ ಇದೆ. ಚುನಾವಣೆ ಮುಗಿಯುತ್ತಿದ್ದಂತೆಯೇ ಸಿನಿಮಾ ಜಪ ಸುಳ್ಳಲ್ಲ. ಹೌದು, ಎಲೆಕ್ಷನ್ ಸಲುವಗಿ ಕನ್ನಡ‌ ಸಿನಿಮಾಗಳ ಬಿಡುಗಡೆ ಪರ್ವ ಮುಂದೆ ಹೋಗಿತ್ತು. ಈಗ ಚುನಾವಣೆ ಮುಗಿಯೋ ಸಮಯ. ಮೇ 10 ಕ್ಕೆ ಎಲೆಕ್ಷನ್, ಮೇ 13 ಕ್ಕೆ ಕೌಂಟ್. ಇದಾದ ಬಳಿಕ ಸಿನಿಮಾಗಳು ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿವೆ.

ಹಾಗೆ ಸಾಲುಗಟ್ಟಿ ನಿಂತಿರುವ ಸಿನಿಮಾಗಳು ಸಾಕಷ್ಟಿವೆ. ಆದರೆ,ಆ ಪೈಕಿ ಕೊಂಚ ಗಮನ ಸೆಳೆದಿರುವ ಮತ್ತು ಕುತೂಹಲ ಕೆರಳಿಸಿರುವ ಸಿನಿಮಾ ‘ಶ್ರೀಮಂತ. ಈ’ ಶೀರ್ಷಿಕೆ ಕೇಳಿದೊಡನೆ ಇದ್ಯಾವುದೋ ಪಕ್ಕಾ‌ ಅದ್ಧೂರಿಯ ಮಾಸ್ ಸಿನಿಮಾ ಎನಿಸಬಹುದು. ಆದರೆ, ಇದು ಅದ್ಧೂರಿ ಸಿನಿಮಾ‌ವಂತೂ ಹೌದು, ಅದಕ್ಕೆ ತಕ್ಕಂತೆ ಕ್ಲಾಸ್ ಸಿನಿಮಾ ಕೂಡ. ಶ್ರೀಮಂತ ಒಂದು ರೈತರ ಹಿನ್ನೆಲೆ ಇರುವ ಸಿನಿಮಾ. ಈ ಚಿತ್ರ ಮೇ.19ಕ್ಕೆ ರಾಜ್ಯಾದ್ಯಂತ ಅದ್ಧೂರಿಯಾಗಿ ತೆರೆ ಕಾಣಲಿದೆ.

ಚಿತ್ರದ ಮುಖ್ಯ ಆಕರ್ಷಣೆ ಹಂಸಲೇಖ ಹಾಗು ಎಸ್ ಪಿ ಬಿ ಕಾಂಬಿನೇಷನ್ ಹಾಡುಗಳು. ಈ ಸಿನಿಮಾಗೆ ಹಂಸಲೇಖ ಅವರ ಸಂಗೀತವಿದೆ.

ಹಂಸಲೇಖ ಹಾಗು ಎಸ್ ಪಿ ಬಿ ಜೊತೆಗಿನ ಕಾಂಬಿನೇಷನ್ ಹಾಡುಗಳನ್ನು ಮರೆಯೋಕೆ ಸಾಧ್ಯವಿಲ್ಲ. ಎಸ್ ಪಿ ಬಿ ಹಾಡಿದ ಕೊನೆಯ ಗೀತೆ ಶ್ರೀಮಂತ ಸಿನಿಮಾದಲ್ಲಿದೆ ಎಂಬುದು ವಿಶೇಷ.

ಇನ್ನು ನಿರ್ದೇಶಕ ಹಾಸನ ರಮೇಶ್ ತಮ್ಮ ‘ಶ್ರೀಮಂತ’ ಸಿನಿಮಾ ಮೂಲಕ ರೈತನೇ ನಿಜವಾದ ಶ್ರೀಮಂತ ಎಂದು ತೋರಿಸಿದ್ದಾರೆ.

ಈಗಾಗಲೇ ಸಿನಿಮಾ ತಂಡ ಬಿಡುಗಡೆಗೂ ಮುನ್ನ ಭರ್ಜರಿ ಪ್ರಚಾರ ಮಾಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಶ್ರೀಮಂತ ರೈತನಿಗೆ ಭರಪೂರ ಹೊಗಳಿಕೆ ಸಿಕ್ಕಿದೆ.

ಚಿತ್ರದ ಮತ್ತೊಂದು ವಿಶೇಷ ಅಂದರೆ, ರಿಯಲ್ ಹೀರೋ ಸೋನುಸೂದ್ ಅವರು ರೈತರಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಹೊಸ ಕಲಾವಿದರ ಸಮ್ಮಿಲನ ಚಿತ್ರದಲ್ಲಿದೆ.

ದೇಶದಲ್ಲಿ ಶೇ.80ರಷ್ಟು ರೈತರಿದ್ದಾರೆ. ಈ ಥಾಟ್ ಇಟ್ಟುಕೊಂಡು ಮಾಡಿರುವ ಸಂಗೀತಮಯ ಚಿತ್ರವಿದು. ಚಿತ್ರದಲ್ಲಿ ಮನರಂಜನಾತ್ಮಕ ಅಂಶಗಳಿವೆ.

ನಾರಾಯಣಪ್ಪ, ಸಂಜಯ್‌ಬಾಬು ಹಾಗೂ ಹಾಸನ್ ರಮೇಶ್ ಸಿನಿಮಾಗೆ ಬಂಡವಾಳ ಹಾಕಿದ್ದಾರೆ.

ಇನ್ನು, ಯುವ ನಟ ಕ್ರಾಂತಿ ನಾಯಕನಾಗಿ ನಟಿಸಿದ್ದಾರೆ. ಅವರಿಗೆ ನಾಯಕಿಯರಾಗಿ ಮುಂಬೈ ಬೆಡಗಿ ವೈಷ್ಣವಿ ಪಟುವರ್ಧನ್ , ವೈಷ್ಣವಿ ಚಂದ್ರನ್ ಮೆನನ್ ಇದ್ದಾರೆ. ಅಲ್ಲದೆ ನಟ ಚರಣರಾಜ್ ಇಲ್ಲೊಂದು ವಿಶೇಷ ಪಾತ್ರ ನಿರ್ವಹಿಸುತ್ತಿದ್ದಾರೆ.

ನಟಿ ಕಲ್ಯಾಣಿ ಇಲ್ಲಿ ನಾಯಕನ ಅಮ್ಮನಾಗಿ ಕಾಣಿಸಿಕೊಂಡಿದ್ದಾರೆ. ಸಾಧುಕೋಕಿಲ, ರಮೇಶ್ ಭಟ್, ಕುರಿ ರಂಗ ಇತರರು ಇದ್ದಾರೆ. ಕೆ.ಎಂ.ವಿಷ್ಣುವರ್ಧನ್ ಹಾಗೂ ರವಿಕುಮಾರ್ ಸನಾ ಅವರು ಕ್ಯಾಮೆರಾ ಹಿಡಿದಿದ್ದಾರೆ. ಮಾಸ್ ಮಾದ ಸಾಹಸವಿದೆ. ಮದನ್ ಹರಿಣಿ, ಮೋಹನ್ ಅವರ ನೃತ್ಯ ನಿರ್ದೇಶನವಿದೆ. ಕೆ.ಎಂ. ಪ್ರಕಾಶ್ ಸಂಕಲನ ಮಾಡಿದ್ದಾರೆ.

ಒಂದೊಳ್ಳೆಯ ಕಥಾ ಹಂದರದ ಈ ಸಿನಿಮಾ ನೋಡಲು ರೈತಾಪಿ ವರ್ಗ ಕೂಡ ಕಾದಿದೆ. ಮೇ 19 ಕ್ಕೆ ಸಿನಿಮಾ ತೆರೆಗೆ ಅಪ್ಪಳಿಸಲಿದ್ದು, ಶ್ರೀಮಂತನನ್ನು ಕಣ್ತುಂಬಿಕೊಳ್ಳುವ ಸರದಿ ಪ್ರೇಕ್ಷಕರದ್ದು.

Categories
ಸಿನಿ ಸುದ್ದಿ

ರಾಧಿಕಾ ಕುಮಾರಸ್ವಾಮಿ ಅಭಿನಯದ ಹೊಸ ಚಿತ್ರ ಅಜಾಗ್ರತ: ವಿಭಿನ್ನ ಕಥೆ ಸಿನಿಮಾ ಮೇ 13ಕ್ಕೆ ಶುರು

ರಾಧಿಕಾ ಕುಮಾರಸ್ವಾಮಿ ಅವರು ನಾಯಕಿಯಾಗಿ ನಟಿಸುತ್ತಿರುವ “ಅಜಾಗ್ರತ” ಚಿತ್ರದ ಮುಹೂರ್ತ ಸಮಾರಂಭ ಮೇ 13 ರಂದು ಹೈದರಾಬಾದ್ ನ ರಾಮನಾಯ್ಡು ಸ್ಟುಡಿಯೋದಲ್ಲಿ ನಡೆಯಲಿದೆ‌.

ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ರವಿರಾಜ್ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಯುವ ನಿರ್ದೇಶಕ ಎಂ.ಶಶಿಧರ್ ನಿರ್ದೇಶಿಸುತ್ತಿದ್ದಾರೆ.

ಎಂ.ಎಸ್.ಸಿ ಇನ್ ಫಿಲಂ ಮೇಕಿಂಗ್ ಕಲಿತಿರುವ ನಿರ್ದೇಶಕ ಶಶಿಧರ್ ವಿ, ಎಫ್ ಎಕ್ಸ್ ನಲ್ಲೂ ಪರಿಣತಿ ಹೊಂದಿದ್ದಾರೆ. ಅಶ್ವಿನಿ ರಾಮ್ ಪ್ರಸಾದ್ ಅವರ ಪುತ್ರ ಅರುಣ್ ರಾಮ್ ಪ್ರಸಾದ್ ಅಭಿನಯದ “ಘಾರ್ಗ” ಚಿತ್ರವನ್ನು ನಿರ್ದೇಶಿಸಿರುವ ಶಶಿಧರ್ ಅವರಿಗೆ ಇದು ಎರಡನೇ ನಿರ್ದೇಶನದ ಚಿತ್ರ.

“ಅಜಾಗ್ರತ ” ಒಂದು ಸೈಕಾಲಜಿಕಲ್ ಕ್ರೈಂ ಥ್ರಿಲ್ಲೆರ್ ಕಥೆ ಹೊಂದಿರುವ ಚಿತ್ರವಾಗಿದೆ. ಏಳು ಭಾಷೆಗಳಲ್ಲಿಯೂ ನೇರ ಚಿತ್ರೀಕರಣವಾಗುತ್ತಿರುವುದು ಇದರ ವಿಶೇಷ.

ಕನ್ನಡ ಚಿತ್ರರಂಗದ ರಾಧಿಕಾ ಕುಮಾರಸ್ವಾಮಿ, ಸ್ಪರ್ಶ ರೇಖಾ, ದೇವರಾಜ್, ಸುಚೇಂದ್ರ ಪ್ರಸಾದ್, ವಿನಯ್ ಪ್ರಸಾದ್, ಚಿತ್ರ ಶೆಣೈ, ಮುಂತಾದವರು .
ಹಾಗೆ ತೆಲುಗು ಚಿತ್ರರಂಗದ ರಾವ್ ರಮೇಶ್, ಪುಷ್ಪ ಸುನಿಲ್, ರಾಘವೇಂದ್ರ ಶ್ರವಣ್, ಕಾಲಿವುಡ್ ನಿಂದ ಆದಿತ್ಯ ಮೆನನ್, ಸಮುದ್ರ ಕಣಿ, ಜಯ್ ಪ್ರಕಾಶ್ ಮತ್ತು ಬಾಲಿವುಡ್ ನ ಶ್ರೇಯಸ್ ತಲಪಾಡೆ ನಾಯಕ ನಟನಾಗಿ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಚಿತ್ರ ಪ್ರೇಮಿಗಳಿಗೆ ಹೊಸ ಅನುಭವ ಕೊಡಲು ಅವರವರ ಭಾಷೆ ಯಲ್ಲಿ ಚಿತ್ರೀಕರಿಸಿ, ಅವರವರಭಾಷೆ ಯಲ್ಲೇ “ಅಜಾಗ್ರತ ” ಚಿತ್ರವನ್ನು ಬಿಡುಗಡೆ ಮಾಡಲು ಚಿತ್ರ ತಂಡ ತಯಾರಿ ನಡೆಸಿದೆ..

Categories
ಸಿನಿ ಸುದ್ದಿ

ಮುಸ್ತಫಾಗೆ ಡಾಲಿ ಸಾಥ್! ಡೇರ್ ಡೆವಿಲ್ ಮುಸ್ತಫಾ ಮೇ 19ಕ್ಕೆ ರಿಲೀಸ್…

ಪೂರ್ಣಚಂದ್ರ ತೇಜಸ್ವಿ ಅವರ ಕಥೆಗಳನ್ನು ಓದುಗರೇ ಹಣ ಹಾಕಿ ಸಿನಿಮಾ ಮಾಡುತ್ತಿರುವುದು ಗೊತ್ತೇ‌ ಇದೆ. ಡೇರ್ ಡೆವಿಲ್ ಮುಸ್ತಫಾ ಎಂಬ ಶೀರ್ಷಿಕೆಯಡಿ ಮೂಡಿಬರ್ತಿರುವ ಈ ಚಿತ್ರ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಈಗಾಗಲೇ ವಿಭಿನ್ನವಾಗಿ ಪ್ರಚಾರ ನಡೆಸುತ್ತಿರುವ ಚಿತ್ರತಂಡ ಮೇ 19ಕ್ಕೆ ರಾಜ್ಯಾದ್ಯಂತ ಸಿನಿಮಾ ಬಿಡುಗಡೆ ಮಾಡಲು ಸಜ್ಜಾಗಿದೆ.

ಅಂದಹಾಗೆ, ಡೇರ್ ಡೆವಿಲ್ ಮುಸ್ತಫಾ ಸಿನಿಮಾಗೆ ಶಶಾಂಕ್ ಸೋಗಾಲ್ ಸಾರಥಿ. ಅವರೇ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ಫಟಿಂಗ ಎಂಬ ಜನಪ್ರಿಯ ಕಿರುಚಿತ್ರ ನಿರ್ದೇಶಿಸಿದ್ದ ಶಶಾಂಕ್ ಸೋಗಾಲ್ ಈ ಸಿನಿಮಾ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ.

ಆರಂಭದಲ್ಲಿ ನಾನಾ ಬಗೆಯಲ್ಲಿ ಸಿನಿರಸಿಕರನ್ನು ಗಮನಸೆಳೆಯುತ್ತಿರುವ ಡೇರ್ ಡೆವಿಲ್ ಮುಸ್ತಫಾ ಸಿನಿಮಾದ ನಿನ್ನಂಥೋರ್ ಯಾರೂ ಇಲ್ವಲ್ಲೋ ಎಂಬ ಹಾಡು ಸೂಪರ್ ಹಿಟ್ ಲಿಸ್ಟ್ ಸೇರಿದೆ. ಅಣ್ಣಾವ್ರ ಅನಿಮೇಷನ್ ಮೂಲಕ ಗಮನಸೆಳೆದಿರುವ ಈ ಗಾನಲಹರಿಗೆ ವಾಸುಕಿ ವೈಭವ್ ಹಾಗೂ ಸಿದ್ದಾರ್ಥ್ ಬೆಳ್ಮಣ್ಣು ಧ್ವನಿಯಾಗಿದ್ದಾರೆ. ವಿಭಿನ್ನವಾಗಿ ಮೂಡಿಬಂದಿರುವ ನಿನ್ನಂಥೋರ್ ಯಾರೂ ಇಲ್ವಲ್ಲೋ ಹಾಡು ಸಿನಿಮಾದಲ್ಲಿ ಹೇಗಿರಲಿ ಎಂಬ ನಿರೀಕ್ಷೆ ಹೆಚ್ಚಿಸಿದೆ.

ಆನಿಮೇಷನ್‌ ಹಾಡಿನ ಮೂಲಕ ಗಮನಸೆಳೆದಿರುವ ಡೇರ್ ಡೆವಿಲ್ ಮುಸ್ತಫಾ ಟ್ರೇಲರ್ ಬಿಡುಗಡೆಯಾಗಿದೆ. ಯೂಟ್ಯೂಬ್ ಸೆನ್ಸೇಷನ್ ಸ್ಟಾರ್ ಡಾ.ಬ್ರೋ ವಾಯ್ಸ್ ನಿಂದ ಪೂಚಂತೇ ಪ್ರಪಂಚ ಪರಿಚಯ ಮಾಡಿಕೊಡಲಾಗುತ್ತದೆ. ಬಾಲ್ಯದ ಆಟ ಪಾಠ ತುಂಟಾಟದ ಡೇರ್ ಡೆವಿಲ್ ಮುಸ್ತಫಾ ಮೊದಲ ನೋಟ ನೋಡುಗರಿಗೆ ಇಂಪ್ರೆಸ್ ಮಾಡುತ್ತಿದೆ.

ಪೂರ್ಣಚಂದ್ರ ತೇಜಸ್ವಿ ಅಭಿಮಾನಿಗಳಿಂದಲೇ ತಯಾರಾಗಿರುವ ಸಿನಿಮಾಗೆ ನಟರಾಕ್ಷಸ ಡಾಲಿ ಧನಂಜಯ್ ಬೆಂಬಲವಾಗಿ ನಿಂತಿದ್ದಾರೆ. ಹೇಳಿಕೇಳಿ ಸಾಹಿತ್ಯ ಪ್ರೇಮಿಯಾಗಿರುವ ಧನಂಜಯ್ ಈ ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿದ್ದು, ಕೆ ಆರ್ ಜಿ ಸ್ಟುಡಿಯೊಸ್ ರಾಜ್ಯದೆಲ್ಲೆಡೆ ವಿತರಿಸುವ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.

ರಾಹುಲ್‌ ರಾಯ್‌ ಛಾಯಾಗ್ರಹಣ, ಶಶಾಂಕ್ ಸೋಗಾಲ್, ಸಂಪತ್ ಸಿರಿಮನೆ, ಡಾಲಿ ಧನಂಜಯ್ ಸಾಹಿತ್ಯದ ಹಾಡುಗಳಿಗೆ ನವನೀತ್‌ ಶ್ಯಾಮ್‌ ಸಂಗೀತವಿದೆ. ಶಿಶಿರ್‌ ಬೈಕಾಡಿ, ಆದಿತ್ಯ ಅಶ್ರೀ, ಅಭಯ್‌, ಸುಪ್ರೀತ್‌ ಭಾರದ್ವಾಜ್‌, ಆಶಿತ್, ಶ್ರೀವತ್ಸ, ಪ್ರೇರಣಾ, ಎಂ.ಎಸ್‌. ಉಮೇಶ್‌, ಮಂಡ್ಯ ರಮೇಶ್‌, ಮೈಸೂರ್‌ ಆನಂದ್‌, ಸುಂದರ್‌ ವೀಣಾ, ನಾಗಭೂಷಣ್‌, ಪೂರ್ಣಚಂದ್ರ ಮೈಸೂರು ಸೇರಿ ಅನೇಕ ಕಲಾವಿದರು ಈ ಸಿನಿಮಾದ ಭಾಗವಾಗಿದ್ದಾರೆ.

ಸಿನಿಮಾಮರ ಬ್ಯಾನರ್‌ನಲ್ಲಿ ಡೇರ್ ಡೆವಿಲ್ ಮುಸ್ತಫಾ ನಿರ್ಮಾಣವಾಗಿದೆ.
ಕನ್ನಡ ಚಿತ್ರರಸಿಕರನ್ನು ಪೂಚಂತೇ ಪ್ರಪಂಚಕ್ಕೆ ಕರೆದುಕೊಂಡು ಹೋಗಲು ಹೊಸ ಉತ್ಸಾಹಿ ಯುವಕರೇ ಕೂಡಿರುವ ಇಡೀ ಚಿತ್ರ ತಂಡ ಅತ್ಯಂತ ಫ್ಯಾಷನೆಟೇಡ್ ಆಗಿ ಕೆಲಸ ಮಾಡಿದೆ. ಇದು ದೊಡ್ಡ ಪರದೆಯಲ್ಲಿ ಅದ್ಭುತ ಅನುಭವ ಅಂತಾರೆ ನಿರ್ದೇಶಕ ಶಶಾಂಕ್ ಸೋಗಾಲ್.

Categories
ಸಿನಿ ಸುದ್ದಿ

ಕಮಲ ಹಾಸನ್ ನಿರ್ಮಾಣದ ಹೊಸ ಚಿತ್ರ ಅನೌನ್ಸ್: ಶಿವಕಾರ್ತಿಕೇಯನ್-ಸಾಯಿಪಲ್ಲವಿ ಜೋಡಿ

ಸೂಪರ್ ಸ್ಟಾರ್ ಕಮಲ್ ಹಾಸನ್ ಸಾರಥ್ಯದ ರಾಜ್ ಕಮಲ್ ಫಿಲ್ಮ್ಸ್ಇಂಟರ್ನ್ಯಾಷನಲ್ (RKFI) ನಡಿ ಮೂಡಿಬಂದಿದ್ದ ವಿಕ್ರಮ್ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಸೇರಿದೆ. ಇದು ರಾಜ್ ಕಮಲ್ ಫಿಲ್ಮ್ಸ್ ಇಂಟರ್ ನ್ಯಾಷನಲ್ ನ 50 ಚಿತ್ರ. ಲೋಕೇಶ್ ಕನಗರಾಜ್ ನಿರ್ದೇಶನದ ಹಾಗೂ ಕಮಲ್ ನಟನೆಯ ವಿಕ್ರಮ್ ಅದ್ಧೂರಿ ಸಕ್ಸಸ್ ಕಂಡಿದೆ.

ಈ ಸಕ್ಸಸ್ ಬಳಿಕ ಈ ನಿರ್ಮಾಣ ಸಂಸ್ಥೆಯಡಿ 51 ಚಿತ್ರ ಸೆಟ್ಟೇರಿದೆ. ಮೇಜರ್ ಚಿತ್ರ ನಿರ್ಮಿಸಿದ್ದ ರಾಜ್ ಕಮಲ್ ಫಿಲ್ಮ್ಸ್ ಹಾಗೂ ಸೋನಿ ಪಿಕ್ಚರ್ಸ್ ಇಂಟರ್ನ್ಯಾಷನಲ್ ಪ್ರೊಡಕ್ಷನ್ಸ್ (SPIP) ಮತ್ತೊಂದು ಜೊತೆಗೂಡಿ ಹೊಸ ಸಿನಿಮಾಗೆ ಮುನ್ನುಡಿ ಬರೆದಿದ್ದಾರೆ.

ತಮಿಳು ಚಿತ್ರರಂಗದ ಖ್ಯಾತ ನಟ ಶಿವಕಾರ್ತಿಯೇನ್ ನಟಿಸುತ್ತಿರುವ #SK21 ಚಿತ್ರದ ಸಮಾರಂಭ ಚೆನ್ನೈನಲ್ಲಿ ಅದ್ಧೂರಿಯಾಗಿ ನೆರವೇರಿದೆ. ಕಮಲ್ ಹಾಸನ್ ಈ ಸಿನಿಮಾಗೆ ಕ್ಲಾಪ್ ಮಾಡಿ ಶುಭ ಹಾರೈಸಿದ್ದಾರೆ. ಶ್ರೀ ಆರ್ ಮಹೇಂದ್ರನ್, ಶ್ರೀ ಶಿವಕಾರ್ತಿಕೇಯನ್, ಎಂಎಸ್ ಸಾಯಿ ಪಲ್ಲವಿ, ಶ್ರೀ ರಾಜ್ ಕುಮಾರ್ ಪೆರಿಯಸಾಮಿ, ಶ್ರೀ ಜಿವಿ ಪ್ರಕಾಶ್, ಸಹ ನಿರ್ಮಾಪಕ ಶ್ರೀ ವಕೀಲ್ ಖಾನ್, ಶ್ರೀ ಲಾಡಾ ಗುರುಡೆನ್ ಸಿಂಗ್, ಜನರಲ್ ಮ್ಯಾನೇಜರ್ ಮತ್ತು ಹೆಡ್, ಸೋನಿ ಪಿಕ್ಚರ್ಸ್ ಇಂಟರ್ನ್ಯಾಷನಲ್ ಪ್ರೊಡಕ್ಷನ್ಸ್, ಇಂಡಿಯಾ ಮತ್ತು ಶ್ರೀ ನಾರಾಯಣನ್, CEO, RKFI ಮುಂತಾದವರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು,

ರಾಜ್ ಕುಮಾರ್ ಪೆರಿಯಸಾಮಿ ಕಥೆ ಬರೆದು ನಿರ್ದೇಶಿಸಿದ್ದು, ಶಿವಕಾರ್ತಿಕೇಯನ್ ಅವರನ್ನು ಅವರ ಅಭಿಮಾನಿಗಳು ಹಿಂದೆಂದೂ ನೋಡಿರದ ರೀತಿಯಲ್ಲಿ ದೊಡ್ಡ ಪರದೆಯ ಮೇಲೆ ತರುವ ಪ್ರಯತ್ನದಲ್ಲಿದ್ದಾರೆ. #SK21 ಚಿತ್ರಕ್ಕೆ ಸಾಯಿ ಪಲ್ಲವಿ ನಾಯಕಿಯಾಗಿ ನಟಿಸ್ತಿದ್ದು, ಕಾಶ್ಮೀರದಲ್ಲಿ ಎರಡು ತಿಂಗಳುಗಳ ಕಾಲ ಶೂಟಿಂಗ್ ನಡೆಸಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ.

ಜಿ ವಿ ಪ್ರಕಾಶ್ ಸಂಗೀತ ನಿರ್ದೇಶನ, , ಸಿಎಚ್ ಸಾಯಿ ಛಾಯಾಗ್ರಹಣ, ಆರ್. ಕಲೈವನನ್ ಸಂಕಲನಕಾರ ಮತ್ತು ಸ್ಟೀಫನ್ ರಿಕ್ಟರ್ ಸಾಹಸ ನಿರ್ದೇಶಕ ಚಿತ್ರಕ್ಕಿದೆ. ಗಾಡ್ ಬ್ಲೆಸ್ ಎಂಟರ್‌ಟೈನ್‌ಮೆಂಟ್‌ನ ಸಹ-ನಿರ್ಮಾಣದಲ್ಲಿದೆ ಕೈ ಜೋಡಿಸಿದೆ.

Categories
ಸಿನಿ ಸುದ್ದಿ

ಡಾಲಿಗೆ ಲಕ್ ಇಲ್ಲ! ನಾನು ಆ ಸಿನಿಮಾದಲ್ಲಿ ನಟಿಸಲ್ಲ ಧನಂಜಯ್ ಸ್ಪಷ್ಟನೆ…

‘ಕ್ಯಾರಾವಾನ್ ಸ್ಟಾರ್’ ಮಂಜು ಅಭಿನಯದ ‘ಲಕ್’ ಚಿತ್ರದಲ್ಲಿ ಡಾಲಿ ಧನಂಜಯ್ ನಟಿಸುತ್ತಿದ್ದಾರೆ ಎಂದು ಸುದ್ದಿಯಾಗಿತ್ತು. ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ, ಚಿತ್ರದಲ್ಲಿ ಧನಂಜಯ್ ಅತಿಥಿ ಪಾತ್ರದಲ್ಲಿ ನಟಿಸುತ್ತಿರುವ ವಿಷಯವನ್ನು ಸ್ವತಃ ಚಿತ್ರತಂಡದವರು ಘೋಷಿಸಿದ್ದರು. ಆದರೆ, ಆ ಚಿತ್ರದಲ್ಲಿ ನಟಿಸುತ್ತಿಲ್ಲ ಎಂದು ಸ್ವತಃ ಧನಂಜಯ್ ಸ್ಪಷ್ಟಪಡಿಸಿದ್ದಾರೆ.


ಈ ಕುರಿತು ಮಾತನಾಡಿರುವ ಧನಂಜಯ್, ‘’ಲಕ್’ ಚಿತ್ರದ ನಾಯಕ ಮತ್ತು ನಿರ್ಮಾಪಕ ಸ್ಮೈಲ್ ಮಂಜು ನನಗೆ ಬಹಳ ಒಳ್ಳೆಯ ಸ್ನೇಹಿತರು. ಅವರ ಪ್ರಯತ್ನಗಳಿಗೆ ನನ್ನ ಬೆಂಬಲ ಇರುತ್ತದೆ. ಅದರಂತೆ, ‘ಲಕ್’ ಚಿತ್ರದ ಪ್ರಚಾರದಲ್ಲಿ ತೊಡಗಿಸಿಕೊಂಡು, ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿಕೊಟ್ಟದ್ದೇನೆ. ಆದರೆ, ಕಾರಣಾಂತರಗಳಿಂದ ನನಗೆ ಅವರ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ನಟಿಸಲು ಸಾಧ್ಯವಾಗುತ್ತಿಲ್ಲ.

ಈ ವಿಷಯವನ್ನು ಚಿತ್ರತಂಡದವರಿಗೂ ಮನವರಿಕೆ ಮಾಡಿಕೊಟ್ಟಿದ್ದೇನೆ. ಹಾಗಾಗಿ, ಲಕ್ ಚಿತ್ರದಲ್ಲಿ ನಾನು ನಟಿಸುತ್ತಿಲ್ಲ ಎಂದು ಈ ಮೂಲಕ ಮತ್ತೊಮ್ಮೆ ಸ್ಪಷ್ಟಪಡಿಸುತ್ತಿದ್ದೇನೆ’ ಎನ್ನುತ್ತಾರೆ ಧನಂಜಯ್.
‘ಲಕ್’ ಚಿತ್ರವನ್ನು ಹರೀಶ್ ನಿರ್ದೇಶನ ಮಾಡುತ್ತಿದ್ದು, ವಿಜಯ್ ಹರಿತ್ಸ ಸಂಗೀತ ಸಂಯೋಜಿಸುತ್ತಿದ್ದಾರೆ.

Categories
ಸಿನಿ ಸುದ್ದಿ

ಎಂಗೇಜ್ಮೆಂಟ್ ಗೆ ರೆಡಿಯಾದ ಐಶ್ವರ್ಯಾ!

ಇತ್ತೀಚೆಗೆ ಬಿಡುಗಡೆಯಾದ ‘ಪ್ರವೀಣ’ ಚಿತ್ರದಲ್ಲಿ ತಮ್ಮ ಅಭಿನಯದಿಂದ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿರುವ ನಟಿ ಐಶ್ವರ್ಯಾ ಗೌಡ, ಇದೀಗ ಬೋನಗಾನಿ ಎಂಟರ್ಟೈನ್ಮೆಂಟ್ ನಡಿ ನಿರ್ಮಾಣವಾಗುತ್ತಿರುವ ‘ಎಂಗೇಜ್ಮೆಂಟ್’ ಎಂಬ ಪ್ಯಾನ್ ಇಂಡಿಯಾ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.
ನಿಖಿಲ್ ಕುಮಾರ್ ಅಭಿನಯದ ‘ಜಾಗ್ವಾರ್’ ಚಿತ್ರದಲ್ಲಿ ಬಾಲನಟಿಯಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ಐಶ್ವರ್ಯಾ, ‘ಪ್ರವೀಣ’ ಚಿತ್ರದಲ್ಲಿ ನಟಿಸಿದರು.

ಆ ನಂತರ ರಾಜು ಬೋನಗಾನಿ ನಿರ್ದೇಶನದ ಪ್ಯಾನ್ ಇಂಡಿಯಾ ಚಿತ್ರ ‘ರೇವ್ ಪಾರ್ಟಿ’ಯಲ್ಲಿ ದ್ವಿತೀಯ ನಾಯಕಿಯಾಗಿ ಅಭಿನಯಿಸಿದರು. ಇಂದಿನ ಯುವಜನತೆ ಡ್ರಗ್ಸ್ಗೆ ಹೇಗೆ ದಾಸರಾಗುತ್ತಿದ್ದಾರೆ ಎಂದು ಸಾರುವ ಈ ಚಿತ್ರ ಬಿಡುಗಡೆ ಆಗುವುದಕ್ಕಿಂತ ಮೊದಲೇ, ಅದೇ ನಿರ್ದೇಶಕರ ಇನ್ನೊಂದು ಪ್ಯಾನ್ ಇಂಡಿಯಾ ಚಿತ್ರವಾದ ‘ಎಂಗೇಜ್ಮೆಂಟ್’ಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.


ತಮ್ಮ ಚಿತ್ರಜೀವನದ ಕುರಿತು ಮಾತನಾಡುವ ಐಶ್ವರ್ಯಾ, ‘ನನಗೆ ಚಿಕ್ಕಂದಿನಿಂದಲೂ ನಟನೆಯ ಬಗ್ಗೆ ಅಪಾರವಾದ ಆಸಕ್ತಿ. ಅದೇ ಆಸಕ್ತಿಯಿಂದ ‘ಜಾಗ್ವಾರ್’ ಚಿತ್ರದ ಮೂಲಕ ಚಿತ್ರರಂಗಕ್ಕೆ ಬಂದೆ. ‘ಪ್ರವೀಣ’ ಚಿತ್ರ ಸಹ ನನಗೆ ಒಳ್ಳೆಯ ಬ್ರೇಕ್ ನೀಡಿತು. ಆ ಚಿತ್ರದಿಂದ ನನಗೆ ‘ರೇವ್ ಪಾರ್ಟಿ’ ಚಿತ್ರದಲ್ಲಿ ನಟಿಸುವ ಅವಕಾಶ ಸಿಕ್ಕಿತು.

ಅದರಲ್ಲಿನ ನನ್ನ ಅಭಿನಯದ ನೋಡಿ ನಿರ್ದೇಶಕ ಬೋನಗಾನಿ ಅವರು ‘ಎಂಗೇಜ್ಮೆಂಟ್’ ಚಿತ್ರದಲ್ಲಿ ನಾಯಕಿಯಾಗುವ ಅವಕಾಶವನ್ನು ನೀಡಿದ್ದಾರೆ. ಈ ಚಿತ್ರ ಸಹ ಬಾಕ್ಸ್ ಆಫೀಸ್ನಲ್ಲಿ ದೊಡ್ಡ ಯಶಸ್ಸು ಕಾಣಲಿದೆ ಎಂಬ ನಂಬಿಕೆ ನನಗಿದೆ’ ಎಂದು ಹೇಳುತ್ತಾರೆ.
‘ಎಂಗೇಜ್ಮೆಂಟ್’ ಚಿತ್ರದ ಪ್ರೀಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗಿದ್ದು, ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ.

Categories
ಸಿನಿ ಸುದ್ದಿ

ಟೆರರ್ ಟೀಸರ್ ಬಂತು: ಆದಿತ್ಯ ಬರ್ತ್ ಡೇಗೆ ತಂಡದ ಗಿಫ್ಟ್ ಇದು

ನಟ ಆದಿತ್ಯ ಅಭಿನಯದ ‘ಟೆರರ್’ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಆದಿತ್ಯ ಅವರ ಹುಟ್ಟುಹಬ್ಬದ ಸಲುವಾಗಿ ಚಿತ್ರತಂಡ ವಿಶೇಷ ಟೀಸರ್ ಬಿಡುಗಡೆ ಮಾಡಿದೆ‌. ನಿರ್ದೇಶಕ – ನಿರ್ಮಾಪಕ ಆರ್. ಚಂದ್ರು ‘ಟೆರರ್’ ಚಿತ್ರದ ಟೀಸರ್ ಬಿಡುಗಡೆಗೊಳಿಸಿದರು.

“ಟೆರರ್’’ ಸಿನಿಮಾದ ಹೆಸರಿನಲ್ಲೆ ಒಂದು ಫೈಯರ್ ಇದೆ. ಟೀಸರಿನಲ್ಲಿ ಕಾಣುವ ಪ್ರತಿಯೊಂದು ಸನ್ನಿವೇಶಗಳು ಗಮನ ಸೆಳೆಯುತ್ತದೆ. ಟೀಸರ್ ನಲ್ಲಿಯೇ ‘ಟೆರರ್’ ದೊಡ್ಡ ಹಿಟ್ ಆಗುವ ಲಕ್ಷಣಗಳು ಕಾಣುತ್ತಿದೆ ಎಂದು ಆರ್ ಚಂದ್ರು ಹಾರೈಸಿದರು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್, ನಿರ್ಮಾಪಕರಾದ ದೇವೇಂದ್ರ ರೆಡ್ಡಿ, ರಮೇಶ್ ರೆಡ್ಡಿ, ಪ್ರಕಾಶ್, ಶ್ರೀನಗರ ಕಿಟ್ಟಿ ಮುಂತಾದವರು ಟೀಸರ್ ಬಿಡುಗಡೆ ಸಮಾರಂಭಕ್ಕೆ ಆಗಮಿಸಿ ಆದಿತ್ಯ ಅವರಿಗೆ ಹಾಗೂ ಚಿತ್ರತಂಡಕ್ಕೆ ಶುಭ ಕೋರಿದರು.

ಈ ಕಥೆ ಕೇಳಿದ ಕೂಡಲೇ ನಿರ್ಮಾಪಕ ಸಿಲ್ಕ್ ಮಂಜು ಈ ಸಿನಿಮಾ ಮಾಡಲು ಒಪ್ಪಿಕೊಂಡರು. ಅವರ ಸಹಕಾರದಿಂದಲೇ ಈ ಸಿನಿಮಾ ಮಾಡಲು ಸಾಧ್ಯವಾಗುತ್ತಿದೆ. ಸಿನಿಮಾದಲ್ಲಿ ಆದಿತ್ಯ ನಾಯಕರಾಗಿ ನಟಿಸುತ್ತಿದ್ದಾರೆ. ಶ್ರೀನಗರ ಕಿಟ್ಟಿ ಕೂಡ ಪಾತ್ರವೊಂದರಲ್ಲಿ ಅಭಿನಯಿಸುತ್ತಿದ್ದಾರೆ. ಕೋಟೆ ಪ್ರಭಾಕರ್, ಧರ್ಮ ಮೊದಲಾದವರು ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಈಗಾಗಲೇ 30% ಚಿತ್ರೀಕರಣ ಪೂರ್ಣಗೊಂಡಿದೆ. ಬೆಂಗಳೂರು ಸುತ್ತಮುತ್ತ ಸಿನಿಮಾದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ ಎಂದು ನಿರ್ದೇಶಕ ರಂಜನ್ ಶಿವರಾಮ್ ಗೌಡ ಹೇಳಿದರು.

ಕನ್ನಡ ಚಿತ್ರರಂಗಕ್ಕೆ “A” ಎಂಬ ಉತ್ತಮ ಚಿತ್ರಕೊಟ್ಟ ನಿರ್ಮಾಪಕ ಸಿಲ್ಕ್ ಮಂಜು ಅವರ ನಿರ್ಮಾಣದಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ರಂಜನ್ ಅವರು ಹೇಳಿದ ಕಥೆ ಇಷ್ಟವಾಯಿತು. ನನ್ನ ಹುಟ್ಟುಹಬ್ಬಕ್ಕಾಗಿ ವಿಶೇಷ ಟೀಸರ್ ಬಿಡುಗಡೆ ಮಾಡಿರುವ ಚಿತ್ರತಂಡಕ್ಕೆ ಇಲ್ಲಿ ಆಗಮಿಸಿರುವ ಪ್ರತಿಯೊಬ್ಬರಿಗೂ ನನ್ನ ಧನ್ಯವಾದ ಎಂದರು ನಾಯಕ ಆದಿತ್ಯ.

‘ಎ’ ಸಿನಿಮಾ ಬಿಡುಗಡೆಯಾಗಿ 25 ವರ್ಷ ಆದ ಮೇಲೆ ಮತ್ತೊಂದು ನಿರೀಕ್ಷಿತ ಸಿನಿಮಾ ಮಾಡುತ್ತಿದ್ದೇವೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಸಿಲ್ಕ್ ಮಂಜು.

Categories
ಸಿನಿ ಸುದ್ದಿ

ಗುಳಿಗ ದೈವಕ್ಕೆ ಕ್ಷೇತ್ರ ನಿರ್ಮಾಣ: ಕೊರಗಜ್ಜ ಸಿನಿಮಾ ನಿರ್ದೇಶಕ ಸುಧೀರ್ ಅತ್ತಾವರ ಅವರ ಅದ್ಧೂರಿ ಕೋಲ ಸೇವೆ

‘ಕರಿ ಹೈದ ಕೊರಗಜ್ಜ” ಚಿತ್ರೀಕರಣದ ವೇಳೆ ಅನೇಕ ಪವಾಡಗಳು ಗೋಚರಕ್ಕೆ ಬಂದ ವಿಷಯವನ್ನು ಕಲಾವಿದರಾದ ಕಬೀರ್ ಬೇಡಿ, ಶ್ರುತಿ, ಭವ್ಯ ಹಾಗೂ ಚಿತ್ರ ತಂಡದ ಸದಸ್ಯರು ಈಗಾಗಲೇ ತಮ್ಮ ಅನುಭವವನ್ನು ಹಂಚಿಕೊಂಡಿದ್ದರು.

ಆದರೆ ಮತ್ತೊಂದು ಕುತೂಹಲದ ವಿಚಾರ ಇದುವರೆಗೂ ನಿಗೂಢವಾಗಿತ್ತು. ಇದು ಘಟಿಸಿದ್ದು ಚಿತ್ರೀಕರಣದ ಆರಂಭಕ್ಕೂ ಮೊದಲು ಪುತ್ತೂರಿನಲ್ಲಿ ಸೆಟ್ ವಿರ್ಮಾಣದ ವೇಳೆ.

ಸೆಟ್ ಕೆಲಸಗಾರರು ಸೆಟ್ ನಿರ್ಮಾಣದ ವೇಳೆ ಯಾವುದೋ ಆವೇಶ ಬಂದಂತವರಾಗಿ ಅಲ್ಲಲ್ಲೇ ಮೂರ್ಛೆ ಹೋಗ ತೊಡಗಿದರು. ಸ್ಥಳಿಯರು ಅರಶಿನ ನೀರನ್ನು ಪ್ರೋಕ್ಷಿಸಿ , ಕೆಲವರನ್ನು ಅಲ್ಲಿನ ಆಸ್ಪತ್ರೆಗೂ ಸೇರಿಸಲಾಯಿತು.

ನಂತರ ಆ ಪ್ರದೇಶದಲ್ಲಿ ಯಾರೂ ಸೆಟ್ ಕೆಲಸ ಮಾಡಲು ಮುಂದೆ ಬರಲಿಲ್ಲ. ಸೆಟ್ ಹಾಕಲಿದ್ದ ಆ ಜಾಗವು ಕರಾವಳಿಯ ಉಗ್ರ ರೂಪದ ದೈವ “ಗುಳಿಗ”ನ ಸ್ಥಳ ವೆಂದು ಸ್ಥಳಿಯರು ತಿಳಿಸಿದರು.

ದೈವದ ಮೇಲಿನ ಗೌರವ-ಭಕ್ತಿಯಿಂದ ಪುತ್ತೂರಿನಿಂದ ಬೆಳ್ತಂಗಡಿಯ ಅರಣ್ಯ ಪ್ರದೇಶದಲ್ಲಿ ಸೆಟ್ ಕೆಲಸವನ್ನು ಸ್ಥಳಾಂತರ ಗೊಳಿಸಲಾಯಿತು.


ಚಿತ್ರದಲ್ಲಿ ಗುಳಿಗ ದೈವದ ಪಾತ್ರವನ್ನು ಹಾಲಿವುಡ್- ಫ಼್ರೆಂಚ್- ಬಾಲಿವುಡ್ ನಟ ಹಾಗೂ ಕೊರಿಯೋಗ್ರಾಫರ್ ಸಂದೀಪ್ ಸೋಪರ್ಕರ್ ಅಭಿನಯಿಸಿದ್ದು, ಮಂಗಳೂರಿನ ಸೋಮೆಶ್ವರ ಸಮುದ್ರ ಕಿನಾರೆಯಲ್ಲಿ ಗುಳಿಗ ದೈವದ ಚಿತ್ರೀಕರಣವನ್ನು ನಡೆಸುತ್ತಿದ್ದಾಗಲೂ, ತಂಡಕ್ಕೆ ಹಲವಾರು ರೀತಿಯ ಅಡೆತಡೆಗಳು ಎದುರಾಯಿತು.


ಈ ಬಗ್ಗೆತಿಳಿದವರ ಜೊತೆ ಮಾತುಕತೆ ನಡೆಸಿದಾಗ ನಿರ್ದೇಶಕ ಸುಧೀರ್ ಅತ್ತಾವರ್ ರವರ ಹಿರಿಯರಿದ್ದ ಮನೆಯಲ್ಲಿ ಗುಳಿಗ ದೈವದ ಸಾನಿಧ್ಯವಿದ್ದು , ಹಲವಾರು ವರ್ಷಗಳಿಂದ ಆ ಮನೆಯಲ್ಲಿ ಯಾರೂ ವಾಸವಿರದೆ,

ಪಾಳು ಬಿದ್ದ ಕಾರಣ ದೈವಕ್ಕೆ ಪೂಜೆ ಪುರಸ್ಕಾರಗಳು ನಡೆಯದಿರುವ ವಿಚಾರ ಗೋಚರಿಸಿತು.
ಕೂಡಲೇ ನಿರ್ದೇಶಕರು ದೈವಕ್ಕೆ ಗುಡಿ ನಿರ್ಮಾಣ ಮಾಡುವ ಕಾರ್ಯಕ್ಕೆ ಮುಂದಾದರು.

ಚಿತ್ರದ ಎಡಿಟಿಂಗ್ ಕೆಲಸ ಮುಗಿದ ಕೂಡಲೇ, ದೈವಸ್ಥಾನದ ಕಾರ್ಯ ಮುಗಿಸಿ, ಗುಳಿಗ ಹಾಗೂ ಕಲ್ಲುರ್ಟಿ ದೈವಗಳಿಗೆ ಅದ್ದೂರಿಯ ಕೋಲ ಸೇವೆಯನ್ನು ನಡೆಸಿದರು. ಈ ಸಮಯದಲ್ಲಿ ಹಿರಿಯ ನಟಿ ಭವ್ಯ, ನಿರ್ಮಾಪಕರಾದ ತ್ರಿವಿಕ್ರಮ ಸಫಲ್ಯ ಮುಖ್ಕ ಆಕರ್ಷಣೆ.

ಕಾರ್ಯಕಾರಿ ನಿರ್ಮಾಪಕ ವಿದ್ಯಾಧರ್ ಶೆಟ್ಟಿ, ಕಲಾವಿದರಾದ ಭರತ್ ಸೂರ್ಯ, ರಿತಿಕ ಹಾಗೂ ಹಲವು ತಂತ್ರಜ್ಞರು ಅಹೋರಾತ್ರಿ ವಿಜೃಂಭಣೆಯಿಂದ ನಡೆದ ಕೋಲಸೇವೆಯಲ್ಲಿ ಪಾಲ್ಗೊಂಡಿದ್ದರು.

ಇದಕ್ಕೂ ಮುನ್ನ ಚಿತ್ರತಂಡವು ಚಿತ್ರೀಕರಣ ಮುಗಿದ ಕೂಡಲೇ ಕೊರಗಜ್ಜನಿಗೂ ಕೋಲಸೇವೆಯನ್ನು ಅದ್ದೂರಿಯಾಗಿ ನೆರವೇರಿಸಿತ್ತು.


“ಕೊರಗಜ್ಜ”ನ ಕುರಿತಾದ ಸಿನಿಮಾ ಮಾಡಬೇಕೆಂದು ಹಲವಾರು ನಿರ್ಮಾಪಕರು ಕಳೆದ ಕೆಲವು ವರ್ಷಗಳಿಂದ ಪ್ರಯತ್ನಿಸುತ್ತಿದ್ದರು. ಆದರೆ ನಿರ್ಮಾಪಕ ತ್ರಿವಿಕ್ರಮ ರವರು ಬಿಗ್ ಬಜೆಟ್ ನಲ್ಲಿ ಈ ಚಿತ್ರವನ್ನು ನಿರ್ಮಿಸಿದ್ದು, ಆಗಸ್ಟ್ ತಿಂಗಳಲ್ಲಿ ಬಿಡುಗಡೆ ಮಾಡುವ ಯೋಜನೆ ಹಾಕಿಕೊಂಡಿದ್ದಾರೆ.

error: Content is protected !!