Categories
ಸಿನಿ ಸುದ್ದಿ

ಕಿರಣ್ ರಾಜ್ ಈಗ ರಾನಿ! ಯುಗಾದಿಗೆ ಪೋಸ್ಟರ್ ಬಂತು…

ಸ್ಟಾರ್ ಕ್ರಿಯೇಷನ್ಸ್ ಮೂಲಕ ಚಂದ್ರಕಾಂತ್ ಪೂಜಾರಿ, ಉಮೇಶ್ ಹೆಗ್ಡೆ ಅವರು ನಿರ್ಮಿಸಿರುವ, ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಹಾಗೂ ಕಿರಣ್ ರಾಜ್ ನಾಯಕರಾಗಿ ನಟಿಸುತ್ತಿರುವ “ರಾನಿ” ಚಿತ್ರದ ಪೋಸ್ಟರ್ ಯಗಾದಿ ಹಬ್ಬಕ್ಕೆ ಬಿಡುಗಡೆಯಾಗಿದೆ. ನಾಯಕ ಕಿರಣ್ ರಾಜ್ ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ.

ಕಿರಣ್ ರಾಜ್ 13,000 ಅಡಿ ಎತ್ತರದಿಂದ ಜಿಗಿದು ಟೈಟಲ್ ಬಿಡುಗಡೆ ಮಾಡಿ ಚಿತ್ರರಂಗ ಹಾಗೂ ಪ್ರೇಕ್ಷಕರಿಂದ ಪ್ರಶಂಸೆ ಪಡೆದುಕೊಂಡಿದ್ದರು. ಈಗ ಬಿಡುಗಡೆಯಾಗಿರುವ ಮಾಸ್ ಲುಕ್ ಪೋಸ್ಟರ್ ಬಗ್ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡಿರುವ ಕಿರಣ್ ರಾಜ್ ಚಿತ್ರದಲ್ಲಿ ಭರ್ಜರಿ ಫೈಟ್ಸ್ ಮಾಡಿದ್ದಾರಂತೆ.

ಚಿತ್ರದಲ್ಲಿ 6 ಸಾಹಸ ಸನ್ನಿವೇಶಗಳಿವೆ. “ರಾನಿ” ಚಿತ್ರಕ್ಕಾಗಿ 7 ಸೆಟ್ ಗಳನ್ನು ಹಾಕಲಾಗಿದೆ‌. 5 ಸೆಟ್ ಗಳಲ್ಲಿ ಚಿತ್ರಿಕರಣ ಈಗಾಗಲೇ ಮುಗಿದಿದೆ. ಈಗಾಗಲೇ ಶೇಕಡಾ 60 ರಷ್ಟು ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ.

ರವಿಶಂಕರ್, ಮೈಕೋ ನಾಗರಾಜ್, ನಾಗತಿ ಹಳ್ಳಿ ಚಂದ್ರಶೇಖರ್, ಬಿ ಸುರೇಶ, ಉಗ್ರಂ ಮಂಜು, ಉಗ್ರಂ ರವಿ, ಧರ್ಮಣ್ಣ, ಸೂರ್ಯ ಕುಂದಾಪುರ, ಗಿರೀಶ್ ಹೆಗ್ಡೆ, ಪೃಥ್ವಿರಾಜ್‌, ಯಶ್ ಶೆಟ್ಟಿ, ಉಮೇಶ್, ಸುಜಯ್ ಶಾಸ್ತ್ರಿ, ಲಕ್ಷ್ಮಿ ಸಿದ್ದಯ್ಯ, ಸಂದೀಪ್ ಮಲಾನಿ, ಅನಿಲ್, ಧರ್ಮೆಂದ್ರ ಆರಸ್, ಮನಮೋಹನ್ ರೈ ಮುಂತಾದವರ ತಾರಾಬಳಗ ಚಿತ್ರಕ್ಕಿದೆ‌. “ಸಿಂಗಾರ ಸಿರಿಯೆ” ಹಾಡು ಬರೆದಿರುವ ಪ್ರಮೋದ್ ಮರವಂತೆ ಈ ಚಿತ್ರದ ನಾಲ್ಕು ಹಾಡುಗಳನ್ನು ಬರೆದಿದ್ದಾರೆ.

ಮಣಿಕಾಂತ್ ಕದ್ರಿ ಸಂಗೀತ ನೀಡಿದ್ದಾರೆ. ಸೂಕ್ಷ್ಮ ಕಥೆಯುಳ್ಳ, ಪಕ್ಕ ಆಕ್ಷನ್ ಚಿತ್ರ ಇದಾಗಿದ್ದು, ಎಲ್ಲಾ ರಾಜ್ಯದಲ್ಲೂ ಕನ್ನಡದಲ್ಲೇ ಬಿಡುಗಡೆ ಯಾಗಲಿದೆ. ಡಿಸೆಂಬರ್ ನಲ್ಲಿ ಚಿತ್ರ ತೆರೆಗೆ ಬರಲಿದೆ. ಚಿತ್ರದಲ್ಲಿ ಮೂವರು ನಾಯಕಿಯರಿದ್ದಾರೆ. ಮುಂದಿನ ದಿನಗಳಲ್ಲಿ ನಾಯಕಿಯರು ಯಾರು ಎಂಬುದನ್ನು ತಿಳಿಸುತ್ತೇವೆ ಎನ್ನುತ್ತಾರೆ ನಿರ್ದೇಶಕ ಗುರುತೇಜ್ ಶೆಟ್ಟಿ.

Categories
ಸಿನಿ ಸುದ್ದಿ

ಇಂಗ್ಲೀಷ್ ಆಲ್ಬಂಗೆ ಕನ್ನಡ ಹುಡುಗಿಯ ಸ್ಪರ್ಶ: ಅಮೇರಿಕನ್ ಮ್ಯೂಸಿಕ್ ವೀಡಿಯೋದಲ್ಲಿ ಇತಿ ಆಚಾರ್ಯ…

‘ಕವಚ’ ಸಿನಿಮಾ ಖ್ಯಾತಿಯ ನಟಿ ಹಾಗೂ ನಿರ್ಮಾಪಕಿ ಇತಿ ಆಚಾರ್ಯ ಅಮೇರಿಕನ್ ಮ್ಯೂಸಿಕ್ ವೀಡಿಯೋದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಮೇರಿಕಾದ ಖ್ಯಾತ ಗಾಯಕ ಹಾಗೂ ಸಂಗೀತ ನಿರ್ದೇಶಕ ಕಂಪೋಸ್ ಮಾಡಿರುವ ಆಲ್ಬಂ ಸಾಂಗ್ ನಲ್ಲಿ ಕನ್ನಡತಿ ಇತಿ ಆಚಾರ್ಯ ನಟಿಸುವ ಮೂಲಕ ಗಮನ ಸೆಳೆದಿದ್ದಾರೆ.

ಮೆರ್ಲಿನ್ ಬಾಬಾಜಿ ಅಮೇರಿಕದಲ್ಲಿ ಖ್ಯಾತಿ ಗಳಿಸಿರುವ ಖ್ಯಾತ ಗಾಯಕ ಹಾಗೂ ಸಂಗೀತ ನಿರ್ದೇಶಕ. ಕಳೆದ ವರ್ಷ ಇವರ ‘ವೈಬ್ಸ್’ ಸಾಂಗ್ ಬಿಡುಗಡೆಯಾಗಿ ಪ್ರಪಂಚದಾದ್ಯಂತ ಜನಪ್ರಿಯ ಗೊಂಡಿತ್ತು. ಸೋಶಿಯಲ್ ಮೀಡಿಯಾ ಸೆನ್ಸೇಶನ್ ಆಗಿದ್ದ ‘ವೈಬ್ಸ್’ ಸಾಂಗ್ ಹತ್ತು ಮಿಲಿಯನ್ ವೀವ್ಸ್ ಪಡೆದುಕೊಂಡಿತ್ತು. ಇದೀಗ ಮತ್ತೊಂದು ವೀಡಿಯೋ ಸಾಂಗ್ ಮೂಲಕ ಮೆರ್ಲಿನ್ ಸೆನ್ಸೇಶನ್ ಕ್ರಿಯೇಟ್ ಮಾಡಲು ಸಜ್ಜಾಗಿದ್ದಾರೆ. ತಮ್ಮ ಹೊಸ ವೀಡಿಯೋ ಹಾಡಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸುತ್ತಿರುವ ನಟಿ ಹಾಗೂ ಮಾಡೆಲ್ ಇತಿ ಆಚಾರ್ಯ ಅವರ ಜೊತೆ ಕೈ ಜೋಡಿಸಿರೋದು ವಿಶೇಷ.

ಮೆರ್ಲಿನ್ ಬಾಬಾಜಿ ಕಳೆದ ಒಂದು ವರ್ಷದಿಂದ ನನಗೆ ಪರಿಚಿತರು. ಅವರ ಸಂಗೀತದ ದೊಡ್ಡ ಅಭಿಮಾನಿ ನಾನು. ‘ಲವ್ ಹರ್ ಟೂ ಮಚ್’ ಸಾಂಗ್ ಕೇಳಿದ ಮೇಲೆ ತುಂಬಾ ಇಷ್ಟವಾಯ್ತು. ನಾನು ಈ ಹಾಡಿನಲ್ಲಿ ನಟಿಸುವೆ ಎಂದು ಹೇಳಿದೆ ಎಂದು ಇತಿ ಆಚಾರ್ಯ ಸಂತಸ ಹಂಚಿಕೊಂಡಿದ್ದಾರೆ.

ಇತಿ ಆಚಾರ್ಯ ಸಹೋದರ ಅಭಿ ಆಚಾರ್ಯ ಕೂಡ ಅಮೇರಿಕಾದಲ್ಲಿ ಸಂಗೀತ ಕಲಾವಿದರಾಗಿದ್ದು, 2023ರ ಗ್ರ್ಯಾಮ್ಮಿ ಅವಾರ್ಡ್ ನಲ್ಲಿ ಇವರ ಹೆಸರು ನಾಮ ನಿರ್ದೇಶನವಾಗಿತ್ತು. ಅಮೇರಿಕಾದಲ್ಲಿ ನನ್ನ ಸಹೋದರ ನೆಲೆಸಿರೋದು ಅಲ್ಲಿನ ಜನರೊಂದಿಗೆ ಸಂಪರ್ಕ ಸಾಧಿಸಲು ಸಹಾಯವಾಗಿದೆ ಎನ್ನುತ್ತಾರೆ ಇತಿ ಆಚಾರ್ಯ.

ನಟಿ ಹಾಗೂ ಮಾಡೆಲ್ ಆಗಿರುವ ಇತಿ ಆಚಾರ್ಯ 2016ರ ಮಿಸ್ ಸೌತ್ ಇಂಡಿಯಾ ವಿನ್ನರ್. ಆರ್ ವಿ ಎಸ್ ಪಿ ಪ್ರೊಡಕ್ಷನ್ ಹೌಸ್ ಮೂಲಕ ನಿರ್ಮಾಪಕಿಯಾಗಿಯೂ ಗುರುತಿಸಿಕೊಂಡಿದ್ದಾರೆ. ಕನ್ನಡ ಒಳಗೊಂಡಂತೆ ಹಿಂದಿ, ತಮಿಳು, ಮಲಯಾಳಂ ಸಿನಿಮಾಗಳಲ್ಲೂ ಇತಿ ಆಚಾರ್ಯ ಬ್ಯುಸಿಯಾಗಿದ್ದಾರೆ. ಟೈಮ್ಸ್ ಸ್ಕ್ವೇರ್ ಬಿಲ್ ಬೋರ್ಡ್ ಹೋಲ್ಡಿಂಗ್ಸ್ ನಲ್ಲಿ ಕಾಣಿಸಿಕೊಂಡ ಹಿರಿಮೆ ಇವರದ್ದು, 2022ರ ಕ್ಯಾನಿಸ್ ಫಿಲ್ಮಂ ಫೆಸ್ಟ್ ರೆಡ್ ಕಾರ್ಪೆಟ್ ನಲ್ಲೂ ಇತಿ ಹೆಜ್ಜೆ ಹಾಕಿದ್ದಾರೆ. ಇದೀಗ ಅಮೇರಿಕಾದ ಖ್ಯಾತ ಗಾಯಕ ಹಾಗೂ ಸಂಗೀತ ನಿರ್ದೇಶಕ ಮೆರ್ಲಿನ್ ಬಾಬಾಜಿ ಸಾಂಗ್ ನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸುತ್ತಿದ್ದಾರೆ.

Categories
ಸಿನಿ ಸುದ್ದಿ

ತಿಲಕ್ ಈಗ ಫ್ರಾಂಕ್ ಸ್ಟಾರ್! ಸದ್ದಿಲ್ಲದೆ ಶೂಟಿಂಗ್ ಮುಕ್ತಾಯ

ವುಡ್ ಕ್ರೀಪರ್ಸ್ ಬ್ಯಾನರ್ ನಲ್ಲಿ ನಿರ್ಮಾಣವಾಗಿರುವ, ತಿಲಕ್ ಶೇಖರ್(ಉಗ್ರಂ ಖ್ಯಾತಿ) “ಗ್ಯಾಂಗ್ ಸ್ಟರ್” ಆಗಿ ಹಾಗೂ ಗಿರೀಶ್ ಕುಮಾರ್ ಬಿ “ಫ್ರಾಂಕ್ ಸ್ಟರ್” ಆಗಿ ನಟಿಸಿರುವ “ಗ್ಯಾಂಗ್ ಸ್ಟರ್ ಅಲ್ಲ ಫ್ರಾಂಕ್ ಸ್ಟರ್” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಮುಖ್ಯಪಾತ್ರದಲ್ಲಿ ನಟಿಸಿರುವ ಗಿರೀಶ್ ಕುಮಾರ್ ಬಿ. ಈ ಚಿತ್ರದ ನಿರ್ದೇಶಕರು ಹೌದು‌‌‌. ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಸಹ ಮುಕ್ತಾಯ ಹಂತ ತಲುಪಿದೆ. ಸದ್ಯದಲ್ಲೇ ಪ್ರಥಮ ಪ್ರತಿ ಸಿದ್ದವಾಗಲಿದೆ.

ಕಾಮಿಡಿ – ಆಕ್ಷನ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಗಿರೀಶ್ ಕುಮಾರ್ ಅವರೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಈ ಹಿಂದೆ “ಭಾವಚಿತ್ರ” ಎಂಬ ಚಿತ್ರವನ್ನು ನಿರ್ದೇಶಿಸಿದ್ದ ಗಿರೀಶ್ ಕುಮಾರ್ ಅವರಿಗೆ ಇದು ಮೂರನೇ ಚಿತ್ರ.

ಜಾನ್ ಕೆನಡಿ ಸಂಗೀತ ಸಂಯೋಜಿಸಿರುವ ನಾಲ್ಕು ಹಾಡುಗಳು ಈ ಚಿತ್ರದಲ್ಲಿದೆ. ಖ್ಯಾತ ಆನಂದ್ ಆಡಿಯೋ ಸಂಸ್ಥೆ ಮೂಲಕ ಹಾಡುಗಳು ಬಿಡುಗಡೆಯಾಗಲಿದೆ. ಅಜಯ್ ಕುಮಾರ್ ಛಾಯಾಗ್ರಹಣ, ರತೀಶ್ ಕುಮಾರ್ ಸಂಕಲನ ಹಾಗೂ ಗಿರೀಶ್ ಬಿಜ್ಜಳ್ ಅವರ ಸಹ ನಿರ್ದೇಶನ ಈ ಚಿತ್ರಕ್ಕಿದೆ.

ತಿಲಕ್ , ಗಿರೀಶ್ ಕುಮಾರ್, ವಿರಾಣಿಕ ಶೆಟ್ಟಿ, ಬಲ ರಾಜವಾಡಿ, ಗಿರೀಶ್ ಬಿಜ್ಜಳ್, ಹೊನವಳ್ಳಿ ಕೃಷ್ಣ, ಸಂಗೀತ ಅನಿಲ್, ಸುಂದರ್, ರತೀಶ್ ಕುಮಾರ್ , ಮಜಾಟಾಕೀಸ್ ಪವನ್, ಹನುಮಂತೇಗೌಡ, ಭವಾನಿ ಪ್ರಕಾಶ್ ಮುಂತಾದವರ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Categories
ಸಿನಿ ಸುದ್ದಿ

ಲಿಲ್ಲಿ ಜೊತೆ ರಾಗಿಣಿ! ಮೊದಲ ಪ್ಯಾನ್ ಇಂಡಿಯಾ ಮಕ್ಕಳ ಸಿನಿಮಾ ಬಿಡುಗಡೆಗೆ ರೆಡಿ…

ಕೆ.ಬಾಬು ರೆಡ್ಡಿ ಹಾಗೂ ಜಿ.ಸತೀಶ್ ಕುಮಾರ್ ನಿರ್ಮಿಸಿರುವ, ಶಿವಂ ನಿರ್ದೇಶನದ ಮೊದಲ ಪ್ಯಾನ್ ಇಂಡಿಯಾ ಮಕ್ಕಳ ಚಿತ್ರ “ಲಿಲ್ಲಿ”. ಇತ್ತೀಚೆಗೆ ಈ ಚಿತ್ರದ ಹಾಡು, ಟ್ರೇಲರ್ ಹಾಗೂ ಪೋಸ್ಟರ್ ಬಿಡುಗಡೆ ಸಮಾರಂಭ ನಡೆಯಿತು.
ನಟಿ ರಾಗಿಣಿ ದ್ವಿವೇದಿ, ಡಾ. ಮೌಲಾ ಶರೀಫ್, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಹಾಗೂ ತೆಲುಗು ಚಿತ್ರನಟ ಶಿವಕೃಷ್ಣ ಅತಿಥಿಗಳಾಗಿ ಆಗಮಿಸಿದ್ದರು.

ಹಾಡು ಬಿಡುಗಡೆ‌ ಮಾಡಿದ ನಟಿ ರಾಗಿಣಿ, ಎಲ್ಲದಕ್ಕಿಂತ ಮುಖ್ಯ ಮಾನವೀಯತೆ ಎಂಬ ಉತ್ತಮ ಕಥಾಹಂದರ ಹೊಂದಿರುವ ಈ ಮಕ್ಕಳ ಚಿತ್ರ ದೊಡ್ಡಮಟ್ಟದ ಯಶಸ್ಸು ಕಾಣಲಿ ಎಂದು ಹಾರೈಸಿದರು. ಉಮೇಶ್ ಬಣಕಾರ್, ಮೌಲಾ ಶರೀಫ್ ಹಾಗೂ ನಟ ಶಿವಕೃಷ್ಣ ಸಹ ಚಿತ್ರತಂಡಕ್ಕೆ ಶುಭ ಕೋರಿದರು.

ನಾನು ಕನ್ನಡದಲ್ಲೂ ಕೆಲವು ಚಿತ್ರಗಳಿಗೆ ಕೆಲಸ ಮಾಡಿದ್ದೀನಿ. ಆದರೆ ಇದು ನಿರ್ದೇಶಕನಾಗಿ ಮೊದಲ ಚಿತ್ರ. ಮಾನವೀಯತೆಯ ಮೌಲ್ಯ ಸಾರುವ ಚಿತ್ರವಿದು. ಯಾವುದೇ ಒಂದು ವಿಷಯವನ್ನು ಮಕ್ಕಳ ಮೂಲಕ ಹೇಳಿದಾಗ ಬೇಗ ತಲುಪುತ್ತದೆ. ಈ ಹಿಂದೆ ಮಣಿರತ್ನಂ ಸರ್ ಅವರ ” ಅಂಜಲಿ” ಚಿತ್ರ ಎಲ್ಲರ ಮನ ಗೆದ್ದಿತ್ತು. ಈಗ ನಮ್ಮ “ಲಿಲ್ಲಿ” ಚಿತ್ರ ಸಹ ಮಕ್ಕಳ ಜೊತೆಗೆ ಹಿರಿಯರಿಗೂ ಇಷ್ಟವಾಗುತ್ತದೆ. ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ನಮ್ಮ ಚಿತ್ರ ಸದ್ಯದಲ್ಲೇ ತೆರೆ ಕಾಣಲಿದೆ. ನೋಡಿ ಪ್ರೋತ್ಸಾಹ ನೀಡಿ ಎಂದರು ನಿರ್ದೇಶಕ ಶಿವಂ.

ಮಕ್ಕಳ ಚಿತ್ರ ಅಂತ ಯಾವುದಕ್ಕೂ ಕೊರತೆ ಬಾರದ ಹಾಗೆ ಈ ಸಿನಿಮಾ ನಿರ್ಮಾಣವಾಗಬೇಕು. ಉತ್ತಮ ಕಥೆಯಿರುವ ಈ ಚಿತ್ರ ಎಲ್ಲಾ ಭಾಷೆಯ ಜನರಿಗೂ ತಲುಪಬೇಕು ಎಂದು ನಾನು ನಿರ್ದೇಶಕರಿಗೆ ಹೇಳಿದ್ದೆ. ಅಂದುಕೊಂಡದಕ್ಕಿಂತ ಚಿತ್ರ ಚೆನ್ನಾಗಿ ಬಂದಿದೆ ಎನ್ನುತ್ತಾರೆ ನಿರ್ಮಾಪಕ ಬಾಬು ರೆಡ್ಡಿ.

ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿರುವ ಬೇಬಿ ನೇಹಾ, ಮಾಸ್ಟರ್ ವೇದಂತ್ ವರ್ಮ , ಬೇಬಿ ಪ್ರಣೀತಾ ರೆಡ್ಡಿ ಹಾಗೂ ರಾಜ್ ವೀರ್ ಅವರು ತಮ್ಮ ಪಾತ್ರ ಹಾಗೂ ಚಿತ್ರದ ಬಗ್ಗೆ ಮಾತನಾಡಿದರು.

Categories
ಸಿನಿ ಸುದ್ದಿ

ಎಲ್ಲೋ ಜೋಗಪ್ಪ ನಿನ್ನರಮನೆ ಅಂತಿದಾರೆ ಸಂಜನಾ ದಾಸ್ : ಹಯವದನ ನಿರ್ದೇಶನದ ಸಿನಿಮಾಗೆ ನಾಯಕಿ

ಹಯವದನ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಚೊಚ್ಚಲ ಸಿನಿಮಾ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಸಿನಿಮಾ ದಿನದಿಂದ ದಿನಕ್ಕೆ ಕುತೂಹಲ ಮೂಡಿಸುತ್ತಿದೆ. ಫಸ್ಟ್ ಲುಕ್ ಮೂಲಕ ಗಮನ ಸೆಳೆದ ಚಿತ್ರತಂಡ ಚಿತ್ರದ ಹೊಸ ನಾಯಕ ನಟಿಯನ್ನು ಪರಿಚಯಿಸಿತ್ತು ಇದೀಗ ಮತ್ತೊಬ್ಬ ಪ್ರತಿಭಾನ್ವಿತ ನಟಿ ಸಿನಿಮಾ ತಂಡವನ್ನು ಸೇರಿಕೊಂಡಿದ್ದಾರೆ.

ಈಗಾಗಲೇ ವೆನ್ಯ ರೈ ಎಂಬ ನವ ಪ್ರತಿಭೆಯನ್ನು ನಾಯಕಿಯಾಗಿ ಪರಿಚಯಿಸಿರುವ ಸಿನಿಮಾ ತಂಡ ಇದೀಗ ಚಿತ್ರಕ್ಕೆ ಮತ್ತೊಬ್ಬ ನಟಿಮಣಿ ಸಂಜನಾ ದಾಸ್ ರನ್ನು ಕರೆ ತಂದಿದೆ. ಕನ್ನಡದಲ್ಲಿ ‘ಕೆಟಿಎಂ’, ‘ಮೂನ್ ವಾಕ್’ ಹಾಗೂ ಮಲಯಾಳಂ ನಲ್ಲಿ ‘ಮನಸ್ಮಿತ’ ಸಿನಿಮಾದಲ್ಲಿ ನಟಿಸಿರುವ ಸಂಜನಾ ದಾಸ್ ಅನೇಕ ಜಾಹೀರಾತುಗಳಲ್ಲೂ ಕಾಣಿಸಿಕೊಂಡಿದ್ದಾರೆ. ಇದೀಗ ಹಯವದನ ನಿರ್ದೇಶನದ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಮಿಂಚಲಿದ್ದಾರೆ.

‘ಎಲ್ಲೋ ಜೋಗಪ್ಪ ನಿನ್ನರಮನೆ’ ಸಿನಿಮಾ ತಂಡ ಮಹಾರಾಷ್ಟ್ರ ದಲ್ಲಿಎರಡನೇ ಹಂತದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದೆ. ಚಿತ್ರದಲ್ಲಿ ‘ಕಂಬ್ಳಿಹುಳ’ ಖ್ಯಾತಿಯ ಅಂಜನ್ ನಾಗೇಂದ್ರ ನಾಯಕ ನಟನಾಗಿ ನಟಿಸುತ್ತಿದ್ದಾರೆ. ತಂದೆ ಮಗನ ಬಾಂದವ್ಯದ ಜೊತೆಗೆ ಪ್ರೇಮ್ ಕಹಾನಿ, ಕಾಮಿಡಿ ಹಾಗೂ ಸೆಂಟಿಮೆಂಟ್ ಎಲಿಮೆಂಟ್ ಗಳನ್ನ ಒಳಗೊಂಡ ಜರ್ನಿ ಸಿನಿಮಾ ಇದಾಗಿದೆ.

ಚಿತ್ರದಲ್ಲಿ ಶರತ್ ಲೋಹಿತಾಶ್ವ, ಸ್ವಾತಿ, ದಾನಪ್ಪ, ಲಕ್ಷ್ಮೀ ನಾಡಗೌಡ, ದಿನೇಶ್ ಮಂಗಳೂರು,ಬಿರಾದರ್ ಒಳಗೊಂಡ ತಾರಾಬಳಗವಿದೆ. ಪೆಂಡೋರಾಸ್ ಬಾಕ್ಸ್ ಪ್ರೊಡಕ್ಷನ್ ಹಾಗೂ ಕೃಷ್ಣಛಾಯ ಚಿತ್ರ ಬ್ಯಾನರ್ ನಡಿ ಪವನ್ ಸಿಮಿಕೇರಿ ಮತ್ತು ಸಿಂಧು ಹಯವದನ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಶಿವ ಪ್ರಸಾದ್ ಸಂಗೀತ ಸಂಯೋಜನೆ, ನಟರಾಜ್ ಮದ್ದಾಲ ಕ್ಯಾಮೆರಾ ವರ್ಕ್, ರವಿಚಂದ್ರನ್ ಸಂಕಲನದಲ್ಲಿ ಸಿನಿಮಾ ಮೂಡಿ ಬರಲಿದೆ. ಪ್ರಮೋದ್ ಮರವಂತೆ ಸಾಹಿತ್ಯ, ಭಜರಂಗಿ ಮೋಹನ್ ನೃತ್ಯ ನಿರ್ದೇಶನ, ನರಸಿಂಹ ಮಾಸ್ಟರ್ ಸಾಹಸ ನಿರ್ದೇಶನ ಚಿತ್ರಕ್ಕಿದೆ.

Categories
ಸಿನಿ ಸುದ್ದಿ

ಉಂಡೆನಾಮ ಹಾಕೋಕೆ ಬರ್ತಾರೆ ಕೋಮಲ್! ಮತ್ತೊಮ್ಮೆ ನಕ್ಕು ನಗಿಸೋಕೆ ರೆಡಿಯಾದ್ರು ಸೆನ್ಸೇಷನಲ್ ಸ್ಟಾರ್….

ತುಂಬಾ ದಿನಗಳ ನಂತರ ನಗುವಿನ ಕಚುಗುಳಿ ಇಡೋಕೆ ಕೋಮಲ್ ಕುಮಾರ್ ಉಂಡೆನಾಮ ಹಾಕ್ಕೊಂಡು ಬರ್ತಾ ಇದ್ದಾರೆ. ಚಿತ್ರದ ಶೀರ್ಷಿಕೆ ಯನ್ನು ಸ್ಯಾಂಡಲ್ ವುಡ್ ನ ಸೆಲೆಬ್ರಿಟಿ ಗಳು ಹೇಳುವುದರ ಮುಖಾಂತರ ವಿನೂತನವಾಗಿ ಅನಾವರಣ ಗೊಳಿಸಿದ್ದಾರೆ.


ಹೆಸರಿನಲ್ಲೇ ಹಾಸ್ಯ ಹೊಂದಿರುವ ಉಂಡೆನಾಮ ಏಪ್ರಿಲ್ 14 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕೋಮಲ್ ಅವರ ಜೊತೆ ಹರೀಶ್ ರಾಜ್,ಧನ್ಯ

ಲಕೃಷ್ಣ,ತಬಲಾನಾಣಿ,ಅಪೂರ್ವ,ವೈಷ್ಣವಿ,ತನಿಷ ಕುಪ್ಪಂಡ,ಬ್ಯಾಕ್ ಜನಾರ್ಧನ್ ಮುಂತಾದವರು ನಟಿಸಿದ್ದಾರೆ.


ಈ ಚಿತ್ರವು ಎನ್.ಕೆ. ಸ್ಟುಡಿಯೋಸ್ ನ ಅಡಿಯಲ್ಲಿ ಸಿ.ನಂದ ಕಿಶೋರ್ ಅವರು ನಿರ್ಮಿಸಿದ್ದಾರೆ.
ಮಜಾಟಾಕೀಸ್,ರಾಬರ್ಟ,ಖ್ಯಾ ತಿಯ ಸಂಭಾಷಾಣೆಗಾರ ಕೆ.ಎಲ್.ರಾಜಶೇಖರ್ ಕಥೆ,ಚಿತ್ರಕಥೆ,ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ.


ಇನ್ನುಳಿದಂತೆ ಶ್ರೀಧರ್ ಸಂಭ್ರಮ ಅವರ ಸಂಗೀತ,ನವೀನ್ಕುಮಾರ್ ಛಾಯಾಗ್ರಾಹಣ,ಕೆ.ಎಮ್.ಪ್ರಕಾಶ್ ಸಂಕಲನ ಚಿತ್ರಕ್ಕಿದೆ

Categories
ಸಿನಿ ಸುದ್ದಿ

ಮಧ್ಯಪ್ರದೇಶ ಕಡೆಗೆ ಮೈ ಹೀರೋ ಪಯಣ…

ಎ.ವಿ .ಸ್ಟುಡಿಯೋಸ್ ಬ್ಯಾನರ್ ನಲ್ನಿಲಿ ನಿರ್ಮಾಣವಾಗುತ್ತಿರುವ “ಮೈ ಹೀರೊ” ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಚಿಕ್ಕಮಗಳೂರಿನ ಸುಂದರ ಪರಿಸರದಲ್ಲಿ ಹತ್ತುದಿನಗಳ ಚಿತ್ರೀಕರಣ ನಡೆದಿದೆ. ಹಾಲಿವುಡ್ ನಟ ಜಿಲಾಲಿ ರೆಜ್ ಕಲ್ಲಾಹ್, ಬಾಲನಟ ವೇದಿಕ್ ಕೌಶಿಕ್, ದತ್ತಣ್ಣ, ಪ್ರಕಾಶ್ ಬೆಳವಾಡಿ, ನಿರಂಜನ್ ದೇಶಪಾಂಡೆ ಹಾಗು


ತನುಜಾ ಕೃಷ್ಣಪ್ಪ, ನವೀನ್ ಬೊಂದೇಲ್ ಮುಂತಾದವರು ಈ ಹಂತದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು.
ಈ ತಿಂಗಳ ಕೊನೆಗೆ ದ್ವಿತೀಯ ಹಂತದ ಚಿತ್ರೀಕರಣ ಮಧ್ಯಪ್ರದೇಶದಲ್ಲಿ ಆರಂಭವಾಗಲಿದೆ.

ವಿಶ್ವದಾದ್ಯಂತ ಇರುವ ಸಾಮಾಜಿಕ ಸಮಸ್ಯೆಯೊಂದನ್ನು ಕೇಂದ್ರವಾಗಿಟ್ಟುಕೊಂಡು ಅವಿನಾಶ್ ವಿಜಯಕುಮಾರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಇದು ಅವರಿಗೆ ಚೊಚ್ಚಲ ನಿರ್ದೇಶನದ ಚಿತ್ರ. ಎ.ವಿ.ಸ್ಟುಡಿಯೋಸ್ ಮೂಲಕ ಈ ಚಿತ್ರವನ್ನು ಅವಿನಾಶ್ ವಿಜಯ ಕುಮಾರ್ ಅವರೆ ನಿರ್ಮಿಸುತ್ತಿದ್ದಾರೆ.

ಅಮೇರಿಕಾದಿಂದ ಬಂದ ಅಧಿಕಾರಿಯೊಬ್ಬರು ಭಾರತದ ಹುಡುಗನೊಬ್ಬನನ್ನು ಭೇಟಿಯಾಗುತ್ತಾರೆ‌‌. ಇವರಿಬ್ಬರ ನಡುವೆ ಹೆಚ್ಚಿನ ಕಥೆ ಸಾಗುತ್ತದೆ. ಹಾಲಿವುಡ್ ನಟ ಜಿಲಾಲಿ ರೆಜ್ ಕಲ್ಲಾಹ್ ಹಾಗೂ ಬಾಲನಟ ವೇದಿಕ್ ಕೌಶಿಕ್ ಈ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

ಗಗನ್ ಬಡೇರಿಯಾ ಸಂಗೀತ ನಿರ್ದೇಶನ ಹಾಗೂ ವೀನಸ್ ನಾಗರಾಜ ಮೂರ್ತಿ ಅವರ ಛಾಯಾಗ್ರಹಣ “ಮೈ ಹೀರೊ” ಚತ್ರಕ್ಕಿದ್ದು, ಎ.ವಿ.ಸ್ಟುಡಿಯೋಸ್ ಮತ್ತು ಜಿಮ್ ಶಿವು ಸಂಭಾಷಣೆ ಬರೆಯುತ್ತಿದ್ದಾರೆ.

Categories
ಸಿನಿ ಸುದ್ದಿ

ಕನ್ನಡ ಸಿನಿರಂಗದ ಅಶ್ವಿನ್ ನಕ್ಷತ್ರ! ಅಶ್ವಿನ್ ಹಾಸನ್ ಎಂಬ ನಿರ್ದೇಶಕರ ಕಲಾವಿದ…

ಕಲಾವಿದನಾಗೋ ಹೆಬ್ಬಯಕೆಯಲ್ಲಿ ಸಂಬಳ ಕೊಡೋ ಕೆಲಸ ಬಿಟ್ಟು ಬಣ್ಣದ ಲೋಕಕ್ಕೆ ಹೆಜ್ಜೆ ಇಡುವ ಅದೆಷ್ಟೋ ಮಂದಿ ನಮ್ಮ ಮುಂದಿದ್ದಾರೆ. ಹಾಗೆ ಬಂದು ಬಣ್ಣದ ಲೋಕದಲ್ಲಿ ಕಳೆದು ಹೋಗುವವರಿಗೂ ಲೆಕ್ಕವಿಲ್ಲ. ಅಂತವರ ಪಟ್ಟಿಯಲ್ಲಿ ಬಹಳ ವಿಭಿನ್ನವಾಗಿ ನಿಲ್ಲುವವರು ರಂಗಭೂಮಿ ಕಲಾವಿದ, ಚಿತ್ರರಂಗದಲ್ಲಿ ತನ್ನದೇ ಛಾಪು ಮೂಡಿಸುತ್ತಿರುವ ಅಶ್ವಿನ್ ಹಾಸನ್. ಬೆಳ್ಳಿತೆರೆ ಮೇಲೆ ಮುಂದೊಂದು ದಿನ ದೊಡ್ಡ ಮಟ್ಟದಲ್ಲಿ ರಾರಾಜಿಸುವ ಕನಸಿನಲ್ಲೇ ಅದಕ್ಕೆ ತಕ್ಕುದಾದ ಎಲ್ಲಾ ತಯಾರಿಯೊಂದಿಗೆ ಹೆಜ್ಜೆ ಇಡುತ್ತಾ ಭರವಸೆ ಮೂಡಿಸುತ್ತಿದ್ದಾರೆ.

ಆರಂಭಿಕ ದಿನಗಳಲ್ಲಿ ಸಿಕ್ಕ ಚಿಕ್ಕ ಪುಟ್ಟ ಪಾತ್ರಗಳಿಗೆ ರಂಗಭೂಮಿ ಅನುಭವವನ್ನೆಲ್ಲ ಧಾರೆ ಎರೆದು ಪಾತ್ರದಿಂದ ಪಾತ್ರಕ್ಕೆ, ಸಿನಿಮಾದಿಂದ ಸಿನಿಮಾಗೆ ತಾವೊಬ್ಬ ಭರವಸೆಯ ನಟನಾಗಬಲ್ಲೇ ಎಂಬುದನ್ನು ನಿರೂಪಿಸುತ್ತಲೇ ಬರುತ್ತಿದ್ದಾರೆ. ಈಗಾಗಲೇ ‘ಜಗ್ಗುದಾದ’, ‘ಹೆಬ್ಬುಲಿ’, ‘ಅವನೇ ಶ್ರೀಮನ್ನಾರಾಯಣ’, ‘ರಾಜಕುಮಾರ’, ‘ಹೆಡ್ ಬುಶ್’, ‘ಥಗ್ಸ್ ಆಫ್ ರಾಮಘಡ’ ಸಿನಿಮಾಗಳಲ್ಲಿ ಇವರ ಅಭಿನಯದ ಸಾಮರ್ಥ್ಯ ಸಾಭೀತಾಗಿದೆ ಕೂಡ. ಸಹಜ, ನೈಜ ಅಭಿನಯದ ಸಾಮರ್ಥ್ಯದ ಫಲವೇ ಸುಮಾರು ಎಪ್ಪತ್ತಕ್ಕೂ ಹೆಚ್ಚಿನ ಸಿನಿಮಾಗಳು ಇವರನ್ನರಸಿ ಬಂದಿರೋದು.

ಕಳೆದ ವರ್ಷ ಅಶ್ವಿನ್ ಹಾಸನ್ ನಟನೆಯ ಹನ್ನೆರಡು ಸಿನಿಮಾಗಳು ಬಿಡುಗಡೆಯಾಗಿದ್ದು, 2023ರ ಆರಂಭದಲ್ಲೇ 6 ಸಿನಿಮಾಗಳು ಬಿಡುಗಡೆಯಾಗಿವೆ. ಬಿಡುಗಡೆಗೆ ಸಾಲಿನಲ್ಲಿರುವ ‘ಸಪ್ತ ಸಾಗರದಾಚೆ ಎಲ್ಲೋ’, ‘ದಸರಾ’, ‘ರಾಯಲ್’, ‘ಕೈವ’, ‘ಎಂಥಾ ಕಥೆ ಮಾರಾಯ’, ‘ನಾಟೌಟ್’, ‘ನೈಟ್ ಕರ್ಪ್ಯೂ’, ‘ಗ್ರೇ ಗೇಮ್ಸ್’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅಶ್ವಿನ್ ಹಾಸನ್ ಅಭಿನಯಿಸಿದ್ದಾರೆ. ‘ಅವನೇ ಶ್ರೀಮನ್ನಾರಾಯಣ’ ‘ಹೋಪ್’ ಹಾಗೂ ‘ಥಗ್ಸ್ ಆಫ್ ರಾಮಘಡ’ ಸಿನಿಮಾಗಳು ಇವರಿಗೆ ಅಪಾರ ಪ್ರಶಂಸೆ ತಂದುಕೊಟ್ಟಿದೆ. ಹನ್ನೊಂದು ಕಿರುಚಿತ್ರಗಳಲ್ಲಿ ಅಭಿನಯಿಸಿದ್ದು, ‘ವರ್ಜಿನ್’ ಹಾಗೂ ‘ಸೆಲ್ಯೂಟ್’ ಕಿರುಚಿತ್ರಗಳ ಅಭಿನಯಕ್ಕೆ ಬೆಸ್ಟ್ ಆ್ಯಕ್ಟರ್ ಅವಾರ್ಡ್ ಕೂಡ ಪಡೆದುಕೊಂಡಿದ್ದಾರೆ.

ಒಂದೇ ತರನಾದ ಪಾತ್ರಕ್ಕೆ ಒಗ್ಗಿಕೊಳ್ಳದೇ, ಅಶ್ವಿನ್ ಎಂದರೇ ಎಲ್ಲಾ ಪಾತ್ರಕ್ಕೂ ಸೈ ಎನ್ನುವಂತೆ ಒಂದಿಷ್ಟು ಪ್ರಯೋಗಾತ್ಮಕ ಹಾಗೂ ವಿಭಿನ್ನ ಪಾತ್ರಗಳಿಗೆ ಜೀವ ತುಂಬಿದ್ದಾರೆ. ಪ್ರೇಮ್, ಧ್ರುವ ಸರ್ಜಾ ಜೋಡಿಯ ‘ಕೆಡಿ’ ಚಿತ್ರದಲ್ಲೂ ನಟಿಸುತ್ತಿರೋದು ಇವರ ಯಶಸ್ಸೇಂದೇ ಹೇಳಬಹುದು.

ನಾನೊಬ್ಬ ಅದ್ಭುತ ಅಭಿನಯಗಾರ ಆಗಬೇಕು. ಯಾವುದೇ ಪಾತ್ರವಾದರೂ ಲೀಲಾಜಾಲವಾಗಿ ಅಭಿನಯಿಸುವ ಪರ್ಫಾಮರ್ ಆಗಬೇಕು. ಅದಕ್ಕೆಂದೇ ಒಂದೇ ರೀತಿಯ ಪಾತ್ರಕ್ಕೆ ಬ್ರ್ಯಾಂಡ್ ಆಗದೇ ಪ್ರತಿ ಸಿನಿಮಾದಲ್ಲೂ ವಿಭಿನ್ನ ಪಾತ್ರ ಹುಡುಕುತ್ತಿರುತ್ತೇನೆ. ಆ ನಿಟ್ಟಿನಲ್ಲಿ ಪ್ರಕಾಶ್ ರೈ, ಫಹಾದ್ ಫಾಸಿಲ್, ವಿಜಯ್ ಸೇತುಪತಿ ಹೀಗೆ ಹಲವರು ನನಗೆ ಸ್ಪೂರ್ತಿ. ನಿರ್ದೇಶಕರ ನೆಚ್ಚಿನ ನಟನಾಗಬೇಕು,

ಅವರ ಕಥೆಗಳಲ್ಲಿ ನನಗೆಂದೇ ಒಂದು ಪಾತ್ರವಿರಬೇಕು ಹಾಗಾದ ದಿನವೇ ಕಲಾವಿದನಾಗಿ ನನ್ನ ಯಶಸ್ಸು ಅನ್ನೋದು ನನ್ನ ಕಲಾ ಜೀವನದ ಗುರಿ. ಕಲಾವಿದರಿಗೆ ಭಾಷೆಯ ಎಲ್ಲೆ ಇರೋದಿಲ್ಲ ಅನ್ನೋದು ನನ್ನ ಬಲವಾದ ನಂಬಿಕೆ ಆದ್ರಿಂದ ಬೇರೆ ಭಾಷೆಯ ಸಿನಿಮಾಗಳ ಅವಕಾಶ ಬಂದರೆ ನಟಿಸುವ ಹಂಬಲವಿದೆ ಎಂದು ತಮ್ಮ ಮನದಾಳದ ಅಭಿಪ್ರಾಯ ಹಂಚಿಕೊಳ್ಳುತ್ತಾರೆ ಅಶ್ವಿನ್ ಹಾಸನ್.

Categories
ಸಿನಿ ಸುದ್ದಿ

ದೇಸಾಯಿ ಸಿನಿಮಾಗೆ ಚಾಲನೆ: ಲವ್ 360 ಸಿನಿಮಾದ ಪ್ರವೀಣ್ ಹೀರೋ

ಹಿಂದಿನಿಂದಲೂ “ದೇಸಾಯಿ” ಮನೆತನಕ್ಕೆ ಅದರದೆ ಆದ ಪರಂಪರೆಯ ವೈಶಿಷ್ಟ್ಯವಿದೆ. ಇದನ್ನು ಚಲನಚಿತ್ರದ ಮೂಲಕ ತೆರೆಗೆ ತರುತ್ತಿದ್ದಾರೆ ನಿರ್ಮಾಪಕ ಮಹಾಂತೇಶ್ ವಿ ಚೊಳಚಗುಡ್ಡ. “ಲವ್ 360” ಚಿತ್ರದ ಮೂಲಕ ಎಲ್ಲರ ಮೆಚ್ಚುಗೆ ಪಡೆದಿದ್ದ ಪ್ರವೀಣ್ ಕುಮಾರ್ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ‌.

ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ಬಾಗಲಕೋಟೆಯ ಮುಚಖಂಡಿಯ ಶ್ರೀವೀರಭದ್ರೇಶ್ವರಸ್ವಾಮಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು.

ಚಿತ್ರದ ಮೊದಲ ಸನ್ನಿವೇಶಕ್ಕೆ ಶಾಸಕರಾದ ವೀರಣ್ಣ ಚರಂತಿಮಠ ಅವರು ಆರಂಭಫಲಕ ತೋರಿದರು. ವನಶ್ರೀಮಠ ವಿಜಯಪುರದ ಡಾ! ಜಯಬಸವಕುಮಾರ ಮಹಾಸ್ವಾಮಿಗಳು ಕ್ಯಾಮೆರಾ ಚಾಲನೆ ಮಾಡಿದರು.

ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬದ ದಿನ ಈ ಚಿತ್ರ ಆರಂಭವಾಯಿತು. ಗಣ್ಯರು ಚಿತ್ರತಂಡದ ಸದಸ್ಯರು ಮೊದಲಿಗೆ ಪುನೀತ್ ರಾಜಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ‌

ಡಾ. ಜಯಬಸವಕುಮಾರ ಮಹಾಸ್ವಾಮಿಜಿಗಳು ಚಿತ್ರಕ್ಕೆ ಶುಭ ಕೋರಿದರು.

ಇದು ನನ್ನ ಮೊದಲ ಚಿತ್ರ ಅದ್ಧೂರಿಯಾಗಿ ತೆರೆಯ ಮೇಲೆ ತರುವ ಹಾಗೆ ನಿರ್ದೇಶನಕ್ಕೆ ಸಿದ್ದ ಮಾಡಿಕೊಂಡಿದ್ದೇನೆ ಎಂದು ನಿರ್ದೇಶಕ ನಾಗಿರೆಡ್ಡಿ ಬಡ ತಿಳಿಸಿದರು.

ಚಿತ್ರದ ನಿರ್ಮಾಪಕ ಮಹಾಂತೇಶ ವಿ ಚೊಳಚಗುಡ್ಡ ಮಾತನಾಡಿ, ವಿಶಿಷ್ಟ ಕಥಾಹಂದರ ಹೊಂದಿರುವ ಕಥೆಯನ್ನು ನಾನು ಹುಡುಕುತ್ತಿದ್ದಾಗ ನನ್ನ ಯೋಚನೆಗೆ ಬಂದದ್ದು ಈ ಗತಕಾಲದ, ತನ್ನದೇ ಆದ ವೈಶಿಷ್ಟ್ಯ ಪರಂಪರೆಯನ್ನು ಹೊಂದಿರುವ “ದೇಸಾಯಿ” ಮನೆತನದ ಕುರಿತು ಸಿನಿಮಾ ಮಾಡಬೇಕು ಎಂದು. ಹಾಗಾಗಿ ನಿರ್ಮಾಣಕ್ಕೆ ಮುಂದಾದೆ ಎಂದರು.

ಈ ಚಿತ್ರ ನನ್ನ ನಟನಾ ವೃತ್ತಿಯಲ್ಲಿ ಒಂದು ಹೊಸ ಅಧ್ಯಾಯ ಆಗಲಿದೆ ಅಂತಹ ಚಾಲೆಂಜಿಂಗ್ ಪಾತ್ರ ಇದಾಗಿದೆ. ಚಿತ್ರದ ಕಥೆ ತುಂಬಾ ಇಷ್ಟವಾಯಿತು‌‌ ಎಂದರು ನಾಯಕ ಪ್ರವೀಣ್ ಕುಮಾರ್.

ಮೈಸೂರು ಮೂಲದ ರಾದ್ಯಾ “ದೇಸಾಯಿ” ಚಿತ್ರದ ನಾಯಕಿಯಾಗಿ ನಟಿಸುತ್ತಿದ್ದಾರೆ. ಚಿತ್ಕಲಾ ಬಿರಾದಾರ್, ಮಧುಸೂದನ್ ರಾವ್, ನಟನ ಪ್ರಶಾಂತ್, ವೀರೇಂದ್ರ, ಹರಿಣಿ ಮುಂತಾದವರು ತಾರಾಬಳಗದಲ್ಲಿದ್ದಾರೆ.


ಜೈ ಆನಂದ್ ಛಾಯಾಗ್ರಹಣ, ಸಾಯಿಕಾರ್ತಿಕ್ ಸಂಗೀತ ನಿರ್ದೇಶನ ಹಾಗೂ ದೀಪು ಎಸ್ ಕುಮಾರ್ ಅವರ ಸಂಕಲನ ಈ ಚಿತ್ರಕ್ಕಿದೆ. ಯಲ್ಲಪ್ಪ ವಿ ಚೊಳಚಗುಡ್ಡ ಸಹ ನಿರ್ಮಾಪಕರಾಗಿರುವ ಈ ಚಿತ್ರದ ಚಿತ್ರೀಕರಣ ಉತ್ತರ ಕರ್ನಾಟಕದಲ್ಲೇ ನಡೆಯಲಿದೆ.

Categories
ಸಿನಿ ಸುದ್ದಿ

ಕೆ ಜಿ ಎಫ್ ಕಾಂತಾರ ಬಳಿಕ ದೇಶಾದ್ಯಂತ ಕನ್ನಡದ ಪತಾಕೆ ಹಾರಿಸಿದ ಕಬ್ಜ: ಮೊದಲ ದಿನ ದಾಖಲೆ ಕಲೆಕ್ಷನ್…

ಬಹು ನಿರೀಕ್ಷಿತ ಕನ್ನಡದ ಹೆಮ್ಮೆಯ ಪ್ಯಾನ್ ಇಂಡಿಯಾ ಸಿನಿಮಾ ” ಕಬ್ಜ ” ಮಾರ್ಚ್ 17 ರಂದು ಬಿಡುಗಡೆಯಾಗಿ, ಭಾರತದಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ.
“ಕೆ.ಜಿ.ಎಫ್”, ” ಕಾಂತಾರ ” ಚಿತ್ರಗಳ ನಂತರ ದೇಶದಾದ್ಯಂತ “ಕಬ್ಜ” ಕನ್ನಡದ ಕೀರ್ತಿ ಪತಾಕೆಯನ್ನು ಮತ್ತೊಮ್ಮೆ ಹಾರಿಸಿದೆ.


ಬಿಡುಗಡೆಯಾದ ಮೊದಲ ದಿನವೇ ಭಾರತಾದ್ಯಂತ 54ಕೋಟಿಗೂ ಹೆಚ್ಚು ‘ಬಾಕ್ಸ್ ಆಫೀಸ್” ಕಲೆಕ್ಷನ್ ಆಗಿದೆ ಎಂದು ಮಾಹಿತಿ ಲಭ್ಯವಾಗಿದೆ.

ಮೂಲಗಳ ಪ್ರಕಾರ ಎರಡನೇ ದಿನವೇ ಐವತ್ತು ಕೋಟಿಗೂ ಅಧಿಕ ಕಲೆಕ್ಷನ್ ಆಗಬಹುದೆಂಬ ಮಾತು ಕೇಳಿ ಬರುತ್ತಿದೆ. ಭಾರತದಾಚೆಗೂ “ಕಬ್ಜ” ಸಿನಿಮಾ ಬಿಡುಗಡೆಯಾಗಿದ್ದು, ಅಲ್ಲೂ ಕೂಡ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.‌


ಆರ್ ಚಂದ್ರು ನಿರ್ದೇಶಿಸಿರುವ ಈ ಚಿತ್ರದ ನಾಯಕರಾಗಿ ರಿಯಲ್ ಸ್ಟಾರ್ ಉಪೇಂದ್ರ ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ಹಾಗೂ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯಿಸಿದ್ದಾರೆ.

error: Content is protected !!