Categories
ಸಿನಿ ಸುದ್ದಿ

ಗುರು ರಾಗವೇ ಚಂದ…! ‘ಶ್ರೀ ಗುರು’ ಮಠದೊಳಗೆ ವಾಸಂತಿಯ ಹೊಸ ಗಾನ ಬಜಾನ…

ಸಿನಿಮಾ ಅನ್ನೋದೇ ಹಾಗೆ. ಇಲ್ಲೊಮ್ಮೆ ಎಂಟ್ರಿಕೊಟ್ಟರೆ ಮುಗೀತು ಏನಾದರೊಂದು ಸಾಧಿಸಲೇಬೇಕೆಂಬ ಹಠ ಸಾಮಾನ್ಯ. ಅದೆಷ್ಟೋ ಪ್ರತಿಭಾವಂತ ನಟ, ನಟಿಯರು ಹಾಗು ತಂತ್ರಜ್ಞರು ಇಲ್ಲಿ ಬೇರೂರಿದ್ದಾರೆ. ಒಂದಷ್ಟು ಮಂದಿ ಗಟ್ಟಿ ನೆಲೆ ಕಾಣಲು ಪ್ರಯತ್ನಿಸುತ್ತಿದ್ದಾರೆ. ತಮ್ಮ ತಮ್ಮ ಕ್ಷೇತ್ರದಲ್ಲಿ ಗೆಲ್ಲಬೇಕೆಂಬ ತಯಾರಿಯಲ್ಲಿದ್ದಾರೆ. ಅಂತಹವರ ಸಾಲಿಗೆ ಸಂಗೀತ ನಿರ್ದೇಶಕ ಶ್ರೀ ಗುರು ಕೂಡ ಸೇರಿದ್ದಾರೆ. ಕಳೆದ ಒಂದುವರೆ ದಶಕದಿಂದ ಕನ್ನಡ ಚಿತ್ರರಂಗದಲ್ಲಿರುವ ಶ್ರೀಗುರು, ನಿರಂತರವಾಗಿ ತಮ್ಮ ಸಂಗೀತ ಯಾನ ಮುಂದುವರೆಸಿದ್ದಾರೆ. ಅವರ ಬದುಕಿನ ರಾಗ ಕುರಿತು ‘ಸಿನಿಲಹರಿ’ ಜೊತೆ ಒಂದಷ್ಟು ಮಾತಾಡಿದ್ದಾರೆ…

ಓವರ್ ಟು ಶ್ರೀ ಗುರು…

‘ನಾನು ದೂರದ ಬೀದರ್ ನವನು. ಸಿನಿಮಾ ರಂಗ ಸ್ಪರ್ಶಿಸಿದ್ದೇ ಅಕಸ್ಮಿಕ. 2007ರಲ್ಲಿ ನಾನು ಈ ಗಂಧದ ಗುಡಿಗೆ ಕಾಲಿಟ್ಟೆ. ನನ್ನ ಮೊದಲ ಸಂಗೀತ ಕೆಲಸ ಶುರು ಮಾಡಿದ್ದು, ‘ ನಿನ್ನ ವಿನಹ’ ಸಿನಿಮಾಗೆ. ಆ ಚಿತ್ರದ ಸಂಗೀತ ಕೆಲಸಕ್ಕಾಗಿ ತಿಂಗಳುಗಟ್ಟಲೆ ಮಡಿಕೇರಿಯಲ್ಲೇ ಇದ್ದು, ರಾಗ ಸಂಯೋಜಿಸಿದೆ. ಅದೇಕೋ ಏನೋ, ಆ ಚಿತ್ರ ಶುರುವಾಗಲೇ ಇಲ್ಲ. ಮೊದಲ ಸಿನಿಮಾ ಹೀಗಾಯಿತಲ್ಲ ಎಂಬ ಬೇಸರವಾಯ್ತು. ಇಲ್ಲಿ ಯಾರೂ ಪರಿಚಯ ಇರಲಿಲ್ಲ. ಇಲ್ಲಿ ಸಾಧಿಸೋಕೆ ಅಗತ್ತಾ ಅಂತಂದುಕೊಂಡೇ, ಮತ್ತೆ ನನ್ನೂರಿನ ಕಡೆ ಮುಖ ಮಾಡಿದೆ. ಆರಂಭದಲ್ಲೇ ಪರಿಚಯವಾಗಿದ್ದ ನಿರ್ದೇಶಕ ರವೀಂದ್ರ ವೆಂಶಿ ಅವರು ಸ್ವಲ್ಪ ದಿನಗಳ ಬಳಿಕ ಕಾಲ್ ಮಾಡಿ, ಒಂದು ಸಿನಿಮಾ ಸಿಕ್ಕಿದೆ. ಬನ್ನಿ ಕೆಲಸ‌ ಮಾಡುವ ಅಂದರು.

ಇಲ್ಲಿಗೆ ಬಂದಾಗ, ಮೊದಲು ಶುರುವಾಗಿ ನಿಂತಿದ್ದ ಸಿನಿಮಾ ನಿರ್ಮಾಪಕರೇ ರವೀಂದ್ರ ವೆಂಶಿ ಸಿನಿಮಾ ಮಾಡುತ್ತಿದ್ದರು. ಸೋ, ಕೆಲಸಕ್ಕಾಗಿ ಹಪಹಪಿಸುತ್ತಿದ್ದೆ. ಕೆಲಸ ಮಾಡಿದೆ. ಆಗ ಗೀತ ಸಾಹಿತಿ ಗೌಸ್ ಪೀರ್ ಪರಿಚಯವಾದರು. ಮೆಲ್ಲನೆ ಇಂಡಸ್ಟ್ರಿಯ ಹಲವು ಮಂದಿ ಗೆಳೆಯರಾದರು. ಆಗಲೂ ನಾನು ಕೆಲಸ‌ ಮಾಡಿದ ಸಿನಿಮಾ ಶುರುವಾಗಲಿಲ್ಲ. ಮತ್ತದೇ ಬೇಸರ. ಆದರೆ, ನಾನು ಆತ್ಮವಿಶ್ವಾಸ ಕಳೆದುಕೊಳ್ಳದೆ, ಸಂಗೀತ ಯಾನ ಮುಂದುವರೆಸಿದೆ.

ಹೊಸ ಜೀವನ…

ಮತ್ತೆ ಅದೇ ನಿರ್ದೇಶಕ ರವೀಂದ್ರ ವೆಂಶಿ ಜೊತೆ ‘ ಕಥೆ ಅಲ್ಲ ಜೀವನ’ ಸಿನಿಮಾಗೆ ಕೆಲಸ ಮಾಡಿದೆ. ಅಲ್ಲಿಂದ ಗೆಳೆಯರ ಸರ್ಕಲ್ ಬೆಳೀತಾ ಹೋಯ್ತು. ‘ಮಾರ್ಚ್ 23’ ಸಿನಿಮಾಗೂ ಕೆಲಸ ಮಾಡಿದೆ. ಅಲ್ಲಿಂದ ಇಲ್ಲಿಯವರೆಗೆ ಹತ್ತಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕೆಲಸ ಮಾಡಿದೆ. ಇಂಡಸ್ಟ್ರಿ ನನ್ನನ್ನೂ ಗುರುತಿಸುತ್ತಾ ಬಂತು. ನನ್ನೀ ಸಂಗೀತ ಪಯಣ ಈಗಲೂ ಮೊದಲಿಗಿಂತ ತುಸು ಹೆಚ್ಚೇ ಸದ್ದು ಮಾಡುತ್ತಿದೆ ಎಂಬ ಖುಷಿ ಇದೆ.

ಸದ್ಯ ರವೀಂದ್ರ ವೆಂಶಿ ಅವರ ‘ಮಠ’ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ನವೆಂಬರ್ 18ರಂದು ರಿಲೀಸ್ ಆಗುತ್ತಿದೆ. ಈ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ. ಅದಕ್ಕೆ ಕಾರಣ, ಸಿನಿಮಾದ ಹಾಡು. ಯೋಗರಾಜ್ ಭಟ್ಟರು ಬರೆದ ‘ಕಲ್ಲ ಮೇಲೆ ಕಲ್ಲ ಇಟ್ಟು’ ಹಾಡು ಎಲ್ಲೆಡೆ ಮೆಚ್ಚುಗೆ ಪಡೆದಿದೆ. ‘ಮಠ’ಕ್ಕೊಂದು ಇತಿಹಾಸವಿದೆ. ಆ ಪರಂಪರೆ ಹೊಸ ಮಠಕ್ಕೂ ಇದೆ ಎಂಬ ವಿಶ್ವಾಸವಿದೆ.

ಇದರ ಜೊತೆ ರವೀಂದ್ರ ವೆಂಶಿ ಅವರ ‘ವಾಸಂತಿ ನಲಿದಾಗ’ ಸಿನಿಮಾ ಕೂಡ ರಿಲೀಸ್ ಆಗೋಕೆ ರೆಡಿ ಇದೆ. ಇದರಲ್ಲೂ ಒಳ್ಳೆಯ ಹಾಡುಗಳನ್ನು ಕೊಟ್ಟಿದ್ದೇನೆ. ಇನ್ನು, ‘ ಬೀಗ’ ಎಂಬ ಹಾರರ್ ಸಿನಿಮಾ ಮತ್ತು ಅದೇ ಸಿನಿಮಾ ತೆಲುಗಲ್ಲೂ ಲೈ ಲವರ್ಸ್ ಹೆಸರಲ್ಲಿ ರೆಡಿಯಾಗಿದ್ದು, ಅಲ್ಲೂ ಸಂಗೀತ ನೀಡಿದ್ದೇನೆ. ಇದರ ಹೊರತಾಗಿ, ನಟ ಕಿಶೋರ್ ಅವರ ‘ಫೈ’ ಮತ್ತು ‘ಉದಾಹರಣೆ’ ಎಂಬ ಮಕ್ಕಳ ಸಿನಿಮಾಗಳಿಗೂ ಸಂಗೀತ ನೀಡುತ್ತಿದ್ದೇನೆ. ನನ್ನ ಕೆಲಸ ನೋಡಿ ಒಂದಷ್ಟು ನಿರ್ದೇಶಕರು ಜೊತೆಗೆ ಕೆಲಸ ಮಾಡಲು ಹೇಳುತ್ತಿದ್ದಾರೆ.

ನಿರಂತರ ಕೆಲಸ‌ ಮಾಡಬೇಕು…

ನಾನು ಮೊದಲು ಕೆಲಸ ಮಾಡುವಾಗ, ನಿರ್ದೇಶಕರೊಬ್ಬರು ಕಥೆ ಮತ್ತು ತಂಡ, ಬ್ಯಾನರ್ ನೋಡಿಕೊಂಡು ಕೆಲಸ ಮಾಡಿ ಹಾಗಾದರೆ ಗಟ್ಟಿ ನೆಲೆ ಕಾಣುತ್ತೀರಿ ಅಂದಿದ್ದರು. ನಾನೂ ಕೂಡ ಅವರ ಮಾತು ಪಾಲಿಸಿದೆ. ಆಗ ಅದು ವರ್ಕೌಟ್ ಆಗಲಿಲ್ಲ. ದೊಡ್ಡದೋ, ಚಿಕ್ಕದೋ, ಹೊಸಬರೋ, ಹಳಬರೋ ಕೆಲಸ ನಿರಂತರವಾಗಿದ್ದರೆ ಮಾತ್ರ ಇಲ್ಲಿರಲು ಸಾಧ್ಯ ಅಂತಂದುಕೊಂಡೆ. ಹಾಗಾಗಿ ನಾನೀಗ ಎಲ್ಲಾ ಬಗೆಯ ಕಥೆ ಇರುವ ಸಿನಿಮಾಗಳಿಗೆ ಸಂಗೀತ ನೀಡುತ್ತಿದ್ದೇನೆ. ಆ ಮೂಲಕ ಹೊಸ ಹೊಸ ಜನರ ಪರಿಚಯ ಆಗುತ್ತಿದೆ.

ಮಧ್ಯೆ ಎರಡು ವರ್ಷ ಗ್ಯಾಪ್ ಆಯ್ತು. ತಂದೆಯ ಅನಾರೋಗ್ಯ ಇತ್ತು. ಇಲ್ಲೂ ಸಹ ಆಗ ಕೆಲಸ ಇರಲಿಲ್ಲ ಪುನಃ ಬೀದರ್ ಕಡೆ ಮುಖ ಮಾಡಿದೆ. ಎರಡು ವರ್ಷ ಬದುಕಿಗಾಗಿ ರೋಡ್ ಕಂಟ್ರ್ಯಾಕ್ಟ್ ಕೆಲಸ ಮಾಡಿದೆ. ಮತ್ತೆ ರವೀಂದ್ರ ಅವರ ಜೊತೆ ಕೆಲಸ ಶುರುವಾಗಿ ಈಗ ಒಂದಷ್ಟು ಸಿನಿಮಾಗಳು ಕೈಯಲ್ಲಿವೆ ಎಂಬ ಸಮಾಧಾನವಿದೆ.

ಗೆಳೆಯರ ಸಾಥ್ ಮರೆಯಲ್ಲ…

ಈಗ ಅನುಭವ ಆಗಿದೆ. ಯಾರ ಜೊತೆ ಹೇಗೆ ಇರಬೇಕೆಂಬ ತಿಳಿವಳಿಕೆಯೂ ಇದೆ. ಎಲ್ಲರ ಜೊತೆ ಕೆಲಸ ಮಾಡುವ ಉತ್ಸಾಹವಿದೆ. ಹಗಲಿರುಳು ದುಡಿಯೋ ಹುಮ್ಮಸ್ಸು ಇದೆ. ಇಂಡಸ್ಟ್ರಿ ದೊಡ್ಡ ಹೆಸರು ಮಾಡಿದೆ. ನಮ್ಮಂತಹ ಅದೆಷ್ಟೋ ಸಂಗೀತ ನಿರ್ದೇಶಕರು ಬಿಜಿಯಾಗುತ್ತಿದ್ದಾರೆ. ನಾನು ಸಂಗೀತ ನಿರ್ದೇಶಕನಾಗಿ ಹೊಸ ಗಾಯಕರನ್ನೂ ಇಂಡಸ್ಟ್ರಿಗೆ ಪರಿಚಯಿಸಿದ ಖುಷಿ ಇದೆ.

ನನ್ನ ಈ ಸಂಗೀತ ಪಯಣದಲ್ಲಿ ಹಲವು ಗೆಳೆಯರ ಸಾಥ್ ಇದೆ. ಅದರಲ್ಲಿ ಸಂಗೀತ ನಿರ್ದೇಶಕ ವೀರ್ ಸಮರ್ಥ್ ಅವರ ಬೆಂಬಲ ಮರೆಯಂಗಿಲ್ಲ. ಅಂತೆಯೇ ಒಂದಷ್ಟು ನಿರ್ದೇಶಕರ ಪ್ರೋತ್ಸಾಹವೂ ಇದೆ.

ಈಗ ನನ್ನ ಹೊಸ ರಾಗ ರೀಸ್ಟಾರ್ಟ್ ಆಗಿದೆ. ರಿಲೀಸ್ ಆಗಲಿರುವ ಮಠ ಮತ್ತು ವಾಸಂತಿ ನಲಿದಾಗ ಚಿತ್ರಗಳ ಮೇಲೆ ಸಾಕಷ್ಟು ನಿರೀಕ್ಷೆ ಇದೆ’ ಎನ್ನುತ್ತಲೆ ಮಾತು ಮುಗಿಸುತ್ತಾರೆ ಶ್ರೀಗುರು.

Categories
ಸಿನಿ ಸುದ್ದಿ

ನೀ ನೋಡೋಕ್ಕೆ ಸಿಕ್ಸ್ಟೀನು ಸ್ವೀಟಿ ಅಂದ ಉಪೇಂದ್ರ! ಹುಷಾರ್ ಆಗಿ ಹಾಡಿದ ಉಪ್ಪಿ…

ಸತೀಶ್ ರಾಜ್ ನಿರ್ಮಿಸಿ, ನಿರ್ದೇಶಿಸಿರುವ “ಹುಷಾರ್” ಚಿತ್ರದ “ನೀ ನೋಡೋಕ್ಕೆ ಸಿಕ್ಸ್ಟೀನು ಸ್ವೀಟಿ” ಎಂಬ ಹಾಡನ್ನು ರಿಯಲ್ ಸ್ಟಾರ್ ಉಪೇಂದ್ರ ಹಾಡಿದ್ದಾರೆ. ಇತ್ತೀಚಿಗೆ ಈ ಹಾಡನ್ನು ಪ್ರಿಯಾಂಕ ಉಪೇಂದ್ರ ಬಿಡುಗಡೆ ಮಾಡಿದ್ದಾರೆ. ಚಿತ್ರದ ಟ್ರೇಲರ್ ನ್ನು ನಿರ್ಮಾಪಕ ಎನ್.ಎಂ.ಸುರೇಶ್ ಅವರು ಬಿಡುಗಡೆ ಮಾಡಿ ಶುಭ ಕೋರಿದ್ದಾರೆ.

ನಾನು ಈ ಸಮಾರಂಭಕ್ಕೆ ಬರಲು ಮುಖ್ಯ ಕಾರಣ ಉಪೇಂದ್ರ ಅವರು ಹಾಡಿರುವುದು. ಈ ಹಾಡು H20 ಚಿತ್ರದ “ದಿಲ್ ಇಲ್ದೇ ಲವ್ ಮಾಡೋಕಾಗಲ್ವೆ” ಹಾಡಿನ ತರಹ ಇದೆ. ಈ ಹಾಡು ಅದೇ ರೀತಿ ಹಿಟ್ ಆಗಲಿ. ಹಾರರ್ ಜಾನರ್ ನ ಈ ಸಿನಿಮಾ ಎಲ್ಲರ ಮನ ಗೆಲ್ಲಲಿ ಎಂದು ಪ್ರಿಯಾಂಕ ಉಪೇಂದ್ರ ಶುಭ ಹಾರೈಸಿದರು. ‌

ನಾನು ಡಾ.ರಾಜ್ ಅವರ ಅಭಿಮಾನಿ. ಕನ್ನಡ ಚಿತ್ರರಂಗದ ವಿವಿಧ ವಿಭಾಗದಲ್ಲಿ ಕೆಲಸ ಮಾಡಿದ್ದೇನೆ. ರಂಗಭೂಮಿ ನಂಟು ಇದೆ. ಲಾಕ್ ಡೌನ್ ಸಮಯದಲ್ಲಿ “ಹುಷಾರ್” ಪೆನ್ ಡ್ರೈವ್ ಎಂಬ ಕಥೆ ಬರೆದೆ. ಈ ಕಥೆ ಪುಸ್ತಕ ರೂಪದಲ್ಲಿ ಎಲ್ಲೆಡೆ ಲಭ್ಯವಿವೆ. ಆನಂತರ ಇದನ್ನು ಸಿನಿಮಾ‌ ಮಾಡೋಣ ಎಂದು ಚಿತ್ರೀಕರಣ ಆರಂಭಿಸಿದೆ. ಹಲವು ಅಡೆತಡೆಗಳನ್ನು ದಾಟಿ, ಚಿತ್ರ ಬಿಡುಗಡೆ ಹಂತ ತಲುಪಿದೆ. ಉಪೇಂದ್ರ ಅವರು ನಮ್ಮ ಸಿನಿಮಾದ ಹಾಡೊಂದು ಹಾಡಿರುವುದು ನಮ್ಮ ಹೆಮ್ಮೆ. ಆ ಹಾಡನ್ನು ಬಿಡುಗಡೆ ಮಾಡಿದ ಪ್ರಿಯಾಂಕ ಉಪೇಂದ್ರ ಅವರಿಗೆ ಧನ್ಯವಾದ ಎಂದರು ನಿರ್ಮಾಪಕ- ನಿರ್ದೇಶಕ ಸತೀಶ್ ರಾಜ್.

ನಾಯಕ ಸಿದ್ದೇಶ್, ನಾಯಕಿ ಆದ್ಯಪ್ರಿಯ, ನಟಿ ಪುಷ್ಪಸ್ವಾಮಿ, ನಟರಾದ ಬುಲೆಟ್ ವಿನೋದ್, ಡಿಂಗ್ರಿ ನಾಗರಾಜ್, ನಟಿ ರಚನಾ ಮಲ್ನಾಡ್ ಮುಂತಾದ ಕಲಾವಿದರು ತಮ್ಮ ಅಭಿನಯದ ಬಗ್ಗೆ ಮಾತನಾಡಿದರು. ಸಹ ನಿರ್ಮಾಪಕಿ ಅಶ್ವಿನಿ ಅರುಣ್ ಕೃಷ್ಣನ್ ಎಲ್ಲರಿಗೂ ಧನ್ಯವಾದ ತಿಳಿಸಿದರು.
ಆರ್ಥಿಕ ಸಲಹೆಗಾರರಾದ ಇಂದು ಶೇಖರ್ ಸೇರಿದಂತೆ ಅನೇಕ ಗಣ್ಯರು ಈ ಸಮಾರಂಭಕ್ಕೆ ಸಾಕ್ಷಿಯಾದರು.

Categories
ಸಿನಿ ಸುದ್ದಿ

ಜಮಾಲಿ ಗುಡ್ಡದ ಮೇಲೆ ಡಾಲಿ ಸ್ಮೈಲ್! ಡಿ.30ಕ್ಕೆ ಸಿನಿಮಾ ರಿಲೀಸ್…

ಕನ್ನಡದಲ್ಲಿ ಈ ವರ್ಷದ ಮೋಸ್ಟ್‌ ಬ್ಯುಸಿಯೆಸ್ಟ್‌ ನಟ ಡಾಲಿ ಧನಂಜಯ್‌ ಅಭಿನಯದ ಈ ವರ್ಷದ ಕೊನೆಯ ಸಿನಿಮಾ, ‘ಒನ್ಸ್‌ ಅಪಾನ್‌ ಏ ಟೈಮ್‌ ಇನ್‌ ಜಮಾಲಿಗುಡ್ಡ’ ಈ ವರ್ಷದ ಕೊನೆ ವಾರ, ಡಿ.30ರಂದು ತೆರೆಗೆ ಬರುತ್ತಿದೆ. ಕನ್ನಡ ಇಂಡಸ್ಟ್ರಿಯ ಮೋಸ್ಟ್‌ ಲಕ್ಕಿಯೆಸ್ಟ್‌ ವೀಕ್‌ ಅಂತಲೇ ಪಾಪ್ಯುಲರ್‌ ಆಗಿರೋ ಡಿಸೆಂಬರ್‌ ಕೊನೆಯ ವಾರದಲ್ಲಿ ರಿಲೀಸ್‌ ಆಗುತ್ತಿದೆ.

ಜಮಾಲಿಗುಡ್ಡ, ತನ್ನ ವಿಭಿನ್ನ ಮೇಕಿಂಗ್‌, ಸಾಂಗ್‌ ಎಲ್ಲದ್ದಕ್ಕೂ ಮೊದಲು ಸಿನಿಮಾದ ಟೈಟಲ್‌ ಮೂಲಕ ಸೌಂಡ್ ಆಗಿದೆ. ಬ್ಯಾಕ್‌ ಟು ಬ್ಯಾಕ್‌ ಆಕ್ಷನ್‌ , ರೊಮ್ಯಾಂಟಿಕ್‌ ಸಿನಿಮಾಗಳಲ್ಲಿ ನಟಿಸುತ್ತಿರುವ ಡಾಲಿ ಧನಂಜಯ್‌, ಮೊದಲ ಬಾರಿಗೆ ಜಮಾಲಿ ಗುಡ್ಡ ಸಿನಿಮಾ‌ಮೂಲಕ ಒಂದು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಅನ್ನೋದು ವಿಶೇಷ.

ಕನ್ನಡ ಹಾಗೂ ತೆಲುಗಿನಲ್ಲಿ ಈ ಚಿತ್ರ ತೆರೆಗೆ ಬರುತ್ತಿದೆ. ಜಮಾಲಿಗುಡ್ಡ ಸಿನಿಮಾದಲ್ಲಿ ಡಾಲಿ ಧನಂಜಯ್‌ ಅವರ ಜೊತೆಗೆ ಅದಿತಿ ಪ್ರಭುದೇವ, ಬಾಲ ನಟಿ ಪ್ರಾಣ್ಯ ರಾವ್‌, ಭಾವನಾ ರಾಮಯ್ಯ ಮುಂತಾದವರು ನಟಿಸಿದ್ದಾರೆ.

ಇನ್ನು ಈ ಚಿತ್ರಕ್ಕೆ ಕನ್ನಡಕ್ಕೆ ಒಂದನ್ನು ಒತ್ತಿ ಖ್ಯಾತಿಯ ಕುಶಾಲ್‌ ಗೌಡ ನಿರ್ದೇಶಕರು. ತಮ್ಮ ಕನಸಿನ ಕಥೆ ಕಟ್ಟಿಕೊಂಡು ಮಾಡಿರುವ ಸಿನಿಮಾ ಇದು. ಸಿನಿಮಾಗೆ ಮ್ಯಾಜಿಕಲ್‌ ಕಂಪೋಸರ್‌ ಅರ್ಜುನ್‌ ಜನ್ಯ ಸಂಗೀತ ನೀಡಿದ್ದಾರೆ.

ಈಗಾಗಲೇ ಸಿನಿಮಾದ ‘ಸಾಗಿದೆ ಹಾಡು’ ಸಾಕಷ್ಟು ಜನಪ್ರಿಯವಾಗಿದೆ. ಶ್ರೀಹರಿ ನಿರ್ಮಾಣ ಮಾಡಿರುವ ಸಿನಿಮಾ ಮೂಲಕ ಡಾಲಿಯ ಮತ್ತೊಂದು ಹೊಸ ಅವತಾರ ಡಿಸೆಂಬರ್ 30ಕ್ಕೆ ನೋಡಬಹುದು.

Categories
ಸಿನಿ ಸುದ್ದಿ

ಗೌರಿಯ ಹೊಸ ಕೆರೆಬೇಟೆ! ಮಲೆನಾಡ ಆಚರಣೆಯ ವಿಶೇಷ ಕಥಾಹಂದರದ ಸಿನಿಮಾಗೆ ಚಾಲನೆ…

ಈ ಸಿನಿಮಾ ಪ್ರೀತಿಯೇ ಹಾಗೆ. ಇಲ್ಲಿಗೆ ಒಮ್ಮೆ ಎಂಟ್ರಿ ಕೊಟ್ಟರೆ ಸಾಕು. ಸೋಲಿರಲಿ, ಗೆಲುವಿರಲಿ ಆ ಸೆಳೆತ ಬಿಡೋದೇ ಇಲ್ಲ. ಇಲ್ಲೆ‌ ಅದೆಷ್ಟೋ ಒಳ್ಳೆಯ ಪ್ರತಿಭಬೆಗಳು ಬಂದು ನೆಲೆ ಕಂಡಿವೆ. ಒಂದಷ್ಟು ಪ್ರತಿಭಾವಂತರು ನೆಲೆ ಕಾಣಲು ಹರಸಾಹಸ ಮಾಡುತ್ತಿದ್ದಾರೆ. ಆ ನಿಟ್ಟಿನಲ್ಲಿ ಹೊಸ ಬಗೆಯ ಕಥೆಗಳನ್ನಿಟ್ಟುಕೊಂಡು ಇಲ್ಲಿಗೆ ಬರುವವರ ಸಂಖ್ಯೆಗೇನು ಕಮ್ಮಿಯಿಲ್ಲ. ಆ ಸಾಲಿಗೆ ಈಗ ‘ಕೆರೆಬೇಟೆ’ ಸಿನಿಮಾ ಕೂಡ ಸೇರಿದೆ

ಹೌದು, ಇದು ಹೊಸ ಬಗೆಯ ಕಥೆ ಇಟ್ಟುಕೊಂಡು ಬರುತ್ತಿರುವ ಸಿನಿಮಾ. ಅಂದಹಾಗೆ, ಈ ಹಿಂದೆ ‘ರಾಜಹಂಸ’ ಚಿತ್ರದಲ್ಲಿ ಹೀರೋ ಆಗಿ ಕಾಣಿಸಿಕೊಂಡು‌ ಒಂದಷ್ಟು ಸುದ್ದಿಯಾಗಿದ್ದ, ಗೌರಿಶಂಕರ್ ಈಗ ಲೇಟೆಸ್ಟ್ ಕಥೆಯೊಂದಿಗೆ ಎಂಟ್ರಿಯಾಗುತ್ತಿದ್ದಾರೆ. ಇನ್ನು
‘ಕೆರೆಬೇಟೆ’ ಚಿತ್ರದ ಮುಹೂರ್ತ ಶಿವಮೊಗ್ಗ ಜಿಲ್ಲೆಯ ಹೊಗೆವಡ್ಡಿ ಹಾಲುರಾಮೇಶ್ವರ ದೇವಸ್ಥಾನದಲ್ಲಿ ಇತ್ತೀಚೆಗೆ ನೆರವೇರಿದೆ.

ಜನಮನ ಸಿನಿಮಾಸ್ ಬ್ಯಾನರ್ ಮೂಲಕ ಜೈ ಶಂಕರ್ ಪಟೇಲ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಗುರುಶಿವ ಹಿತೈಶಿ ಕಥೆ ಜೊತೆ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಚಿತ್ರಕಥೆಯಲ್ಲಿ ಗೌರಿಶಂಕರ್ ಕೂಡ ನಿರ್ದೇಶಕರ ಜೊತೆ ಕೈ ಜೋಡಿಸಿದ್ದಾರೆ. ವಿಶೇವೆಂದರೆ, ಹೀರೋ ಗೌರಿಶಂಕರ್ ಅವರೇ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ. ಅವರೇ ನಿರ್ಮಾಣ ಮಾಡುವ ಮೂಲಕ ನಿರ್ಮಾಪಕರಾಗಿಯೂ ಗುರುತಿಸಿಕೊಳ್ಳುತ್ತಿದ್ದಾರೆ. ಇನ್ನು ಗುರುಶಿವ ಹಿತೈಶಿ ಅವರು ಕಳೆದ ಹತ್ತು ವರ್ಷಗಳಿಂದಲೂ ಪವನ್ ಒಡೆಯರ್ ಜೊತೆ ಕೆಲಸ ಮಾಡಿದ್ದಾರೆ. ಆ ಅನುಭವ ಮೇಲೆ ಕೆರೆಬೇಟೆ ನಿರ್ದೇಶಿಸುತ್ತಿದ್ದಾರೆ.

ಕೆರೆಬೇಟೆ ಒಂದು ಹಳ್ಳಿ ಸೊಗಡಿನಲ್ಲಿ ನಡೆಯೋ ಕಥೆ. ಅದರಲ್ಲೊಂದು ಮುದ್ದಾದ ಪ್ರೇಮ ಕಥೆಯೂ ಇದೆ. ಮಲೆನಾಡ ಭಾಗದಲ್ಲಿ ನಡೆಐವ ಕೆರೆಬೇಟೆ ಎಂಬ ವಿಶೇಷ ಆಚರಣೆ ಈ ಚಿತ್ರದ ಆಕರ್ಷಣೆ. ಈಗಾಗಲೇ ಚಿತ್ರೀಕರಣ ಶುರುವಾಗಿದೆ. ಸಿಗಂಧೂರು, ಕೋಗಾರ್ ಘಾಟ್ ಮತ್ತು ಶಿವಮೊಗ್ಗ ಜಿಲ್ಲೆಯ ಹಲವು ಭಾಗಗಳಲ್ಲಿ ಚಿತ್ರೀಕರಣ ನಡೆಯಲಿದೆ.

ಚಿತ್ರಕ್ಕೆ ಬಿಂದು ಶಿವರಾಮ್ ನಾಯಕಿ, ಉಳಿದಂತೆ ಚಿತ್ರದಲ್ಲಿ ಗೋಪಾಲ್ ದೇಶಪಾಂಡೆ, ಸಂಪತ್, ಹರಿಣಿ, ರಘುರಾಜನಂದ, ರಾಕೇಶ್ ಪೂಜಾರಿ, ಚಿಲ್ಲರ್ ಮಂಜು, ಗೌತಮ್ ರಾಜ್ ಸೇರಿದಂತೆ ಶಿವಮೊಗ್ಗ ಭಾಗದ ಅನೇಕ ಕಲಾವಿದರು ಚಿತಗರದಲ್ಲಿ ನಟಿಸುತ್ತಿದ್ದಾರೆ.

ಕೀರ್ತನ್ ಪೂಜಾರಿ ಕ್ಯಾಮೆರಾ ಹಿಡಿದರೆ, ಗಗನ್ ಬಡೇರಿಯಾ ಅವರ ಸಂಗೀತವಿದೆ. ಡಿಫರೆಂಟ್ ಡ್ಯಾನಿ ಅವರ ಸಾಹಸ ಮತ್ತು ಜ್ಞಾನೇಶ್ ಅವರ ಸಂಕಲನವಿದೆ. ಕಂಬಿರಾಜು ಅವರ ನೃತ್ಯ ನಿರ್ದೇಶನವಿದೆ.

ಅದೇನೆ ಇರಲಿ ಮಲೆನಾಡ ಭಾಗದ ವಿಶೇಷ ಕಥೆಯೊಂದು ಚಿತ್ರವಾಗುತ್ತಿದೆ. ಪಕ್ಕಾ ದೇಸಿ ಕಥೆಯ ಈ ಚಿತ್ರ ಕುತೂಹಲವಂತೂ ಮೂಡಿಸಿದೆ.

Categories
ಸಿನಿ ಸುದ್ದಿ

ಧರ್ಮ ಕೀರ್ತಿಯ ಹೊಸ ಬುಲೆಟ್ ರೈಡ್! ಥ್ರಿಲ್ಲರ್ ಸಿನಿಮಾಗೆ ಚಾಲನೆ…

ಧರ್ಮ ಕೀರ್ತಿರಾಜ್ ನಾಯಕರಾಗಿ ನಟಿಸುತ್ತಿರುವ, ಸತ್ಯಜಿತ್ ನಿರ್ಮಿಸಿ, ನಿರ್ದೇಶಿಸುತ್ತಿರುವ “ಬುಲೆಟ್” ಚಿತ್ರದ ಮುಹೂರ್ತ ಸಮಾರಂಭ ಆರ್ ಟಿ ನಗರದ ವಿನಾಯಕನ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ದೃಶ್ಯಕ್ಕೆ ಶಾಸಕ ಭೈರತಿ ಸುರೇಶ್ , ಕರ್ನಾಟಕ ರಕ್ಷಣ ವೇದಿಕೆ ಅಧ್ಯಕ್ಷ ಪ್ರವೀಣ್ ಶೆಟ್ಟಿ ಆರಂಭ ಫಲಕ ತೋರಿದರು. ಮಹಿಮ್ ಕ್ಯಾಮೆರಾ ಚಾಲನೆ ಮಾಡಿ ಶುಭ ಕೋರಿದರು.

ವಿನಾಯಕನ ಸನ್ನಿಧಿಯಲ್ಲಿ ಮುಹೂರ್ತ‌ ಮಾಡಿದ್ದೇವೆ. ಒಂದೇ ಹಂತದಲ್ಲಿ ಚಿತ್ರೀಕರಣ ನಡೆಯಲಿದೆ. ಬೆಂಗಳೂರು, ಗೋವಾ, ಮಂಗಳೂರಿನಲ್ಲಿ ಚಿತ್ರೀಕರಣ ನಡೆಯಲಿದೆ.‌ ಈ ಚಿತ್ರದ ನಾಯಕನಾಗಿ ಧರ್ಮ ಕೀರ್ತಿರಾಜ್ ನಟಿಸುತ್ತಿದ್ದಾರೆ. ಮುಂಬೈನ ಶ್ರೀಯಾ ಶುಕ್ಲಾ ಹಾಗೂ ಅಜಿತಾ ಜಾ ನಾಯಕಿಯರು. ಶ್ರೀಯಾ ಅವರು ಸುಶಾಂತ್ ಸಿಂಗ್ ಅವರ ಬಯೋಪಿಕ್ ಚಿತ್ರದಲ್ಲಿ ನಟಿಸಿದ್ದಾರೆ. ಅಜಿತಾ ವೆಬ್ ಸೀರಿಸ್ ಗಳಲ್ಲಿ ನಟಿಸಿದ್ದಾರೆ. ಚಿತ್ರ ಕ್ರೈಮ್ ಥ್ರಿಲ್ಲರ್ ಹಾಗೂ ಫ್ಯಾಮಿಲಿ ಸೆಂಟಿಮೆಂಟ್ ಕಥೆ ಆಧರಿಸಿದೆ ಎಂದು ನಿರ್ಮಾಪಕ ಹಾಗೂ ನಿರ್ದೇಶಕ ಸತ್ಯಜಿತ್ ಮಾಹಿತಿ ನೀಡಿದರು.

ಸತ್ಯಜಿತ್ ಅವರು ಹಿಂದಿ, ತಮಿಳಿನಲ್ಲಿ ಕೆಲವು ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಈ ಚಿತ್ರವನ್ನು ಅವರೆ ನಿರ್ಮಿಸಿ, ನಿರ್ದೇಶಿಸುತ್ತಿದ್ದಾರೆ. ಕಥೆ ತುಂಬಾ ಚೆನ್ನಾಗಿದೆ. ಅಪ್ಪ, ಮಗನ ಸೆಂಟಿಮೆಂಟ್ ಸನ್ನಿವೇಶಗಳು ಜನರಿಗೆ ಹತ್ತಿರವಾಗಲಿದೆ. ನನ್ನ ತಂದೆಯ ಪಾತ್ರದಲ್ಲಿ ಸತ್ಯಜಿತ್ ಅವರೆ ಅಭಿನಯಿಸುತ್ತಿದ್ದಾರೆ. ಎರಡು ಶೇಡ್ ಗಳಲ್ಲಿ ನನ್ನ ಪಾತ್ರವಿರುತ್ತದೆ. ಒಳ್ಳೆಯ ತಂಡದೊಂದಿಗೆ ಕೆಲಸ ಮಾಡುತ್ತಿರುವ ಖುಷಿಯಿದೆ.‌ ನಮ್ಮ ತಂಡಕ್ಕೆ ಎಲ್ಲರ ಪ್ರೋತ್ಸಾಹವಿರಲಿ ಎಂದರು ನಾಯಕ ಧರ್ಮ ಕೀರ್ತಿರಾಜ್.

ನಾಯಕಿಯರಾದ ಶ್ರೀಯಾ ಶುಕ್ಲ ಹಾಗೂ ಅಜಿತಾ ಜಾ ತಮ್ಮ ಪಾತ್ರ ಪರಿಚಯ ಮಾಡಿಕೊಂಡು, ಕನ್ನಡ ಚಿತ್ರದಲ್ಲಿ ಅಭಿನಯಿಸುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ಸಹ ನಿರ್ದೇಶಕ , ನಟ ಇಶ್ಯಾಕ್ ಬಾಜಿ, ಛಾಯಾಗ್ರಹಕ ಪಿ.ವಿ.ಆರ್ ಸ್ವಾಮಿ, ಸಂಗೀತ ನಿರ್ದೇಶಕ ರಾಜ್ ಭಾಸ್ಕರ್ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದು, ಚಿತ್ರದ ಕುರಿತು ಮಾತನಾಡಿದರು.

Categories
ಸಿನಿ ಸುದ್ದಿ

ಇವರು ದಿ ಫಿಲಂ ಮೇಕರ್! ಹೊಸ ಪ್ರಯೋಗದ ಸಿನಿಮಾ ನವೆಂಬರ್ 18ಕ್ಕೆ ರಿಲೀಸ್…

ಲಾಕ್ ಡೌನ್ ನಲ್ಲಿ ಸೆರೆ ಹಿಡಿಯಲಾದ ಹಲವು ವಿಶೇಷತೆಗಳಿಂದ ಕೂಡಿದ ‘ದಿ ಫಿಲಂ ಮೇಕರ್’ ಸಿನಿಮಾ ಬಿಡುಗಡೆಗೆ ಸಿದ್ದವಾಗಿದೆ. ಆರ್ಯ ಎಸ್ ರೆಡ್ಡಿ ನಿರ್ದೇಶನಲ್ಲಿ ಮೂಡಿ ಬಂದಿರುವ ಈ ಚಿತ್ರ ನವೆಂಬರ್ 18ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಕೇವಲ ಒಂದೇ ಪಾತ್ರ ಇರುವ, ಒಂದೇ ಲೊಕೇಷನ್, ಮೂರು ಜನ ಟೆಕ್ನಿಶಿಯನ್ ಗಳಿಂದ ತಯಾರಾದ ಚಿತ್ರ ‘ದಿ ಫಿಲಂ ಮೇಕರ್’. ಕನ್ನಡದಲ್ಲಿ ಇದು ಮೊದಲ ಪ್ರಯತ್ನವಾಗಿದ್ದು, ಈ ಮೂಲಕ ಗ್ಲೋಬಲ್ ವರ್ಲ್ಡ್ ರೆಕಾರ್ಡ್ ಪಟ್ಟಿಗೂ ಸೇರಿದೆ.
ಇದೆಲ್ಲವೂ ನಿರ್ದೇಶಕ ಆರ್ಯ ಎಸ್ ರೆಡ್ಡಿ ಕನಸು. ಅದನ್ನು ಬಹಳ ಸೃಜನಾತ್ಮಕವಾಗಿ, ಯಶಸ್ವಿಯಾಗಿ ನಿಭಾಯಿಸಿ ಬಿಡುಗಡೆಯ ಹಂತಕ್ಕೆ ತಂದಿದ್ದಾರೆ. ಚಿತ್ರಕ್ಕೆ ಕಥೆ ಬರೆದು ನಿರ್ದೇಶನ, ಸಂಕಲನ ಜೊತೆಗೆ ಛಾಯಾಗ್ರಾಹಕನಾಗಿ ಸಂಪೂರ್ಣ ಜವಾಬ್ದಾರಿ ಹೊತ್ತು ಸಿನಿಮಾ ಪೂರ್ಣ ಗೊಳಿಸಿದ್ದಾರೆ.

ಲಾಕ್ ಡೌನ್ ನಿಂದಾಗಿ ಹೊರಗಡೆ ಹೋಗುವಂತಿರಲಿಲ್ಲ. ಏನಾದ್ರು ಮಾಡಬೇಕಲ್ಲ ಎಂದಾಗ ಈ ರೀತಿ ಒಂದು ಎಕ್ಸ್ ಪಿರಿಮೆಂಟ್ ಮಾಡಲು ಪ್ಲ್ಯಾನ್ ಮಾಡಿದೆ. ಸಮಯಕ್ಕೆ ಸರಿಯಾಗಿ ಪರಿಚಿತರಾದ ನಟ ಸುನೀಲ್ ಸಿಕ್ಕರು. ಒಬ್ಬ ವ್ಯಕ್ತಿಯನ್ನಿಟ್ಟುಕೊಂಡು ಒಂದೇ ಸ್ಥಳದಲ್ಲಿ 21 ದಿನಗಳ ಕಾಲ ಈ ಚಿತ್ರವನ್ನು ಸೆರೆ ಹಿಡಿಯಲಾಗಿದೆ. 1 ಗಂಟೆ 40 ನಿಮಿಷ ಇರುವ ಈ ಚಿತ್ರ ಹಲವು ಚಿತ್ರೋತ್ಸವದಲ್ಲಿ ತೆರೆಕಂಡು ಪ್ರಶಂಸೆ ಜೊತೆಗೆ ಪ್ರಶಸ್ತಿಯನ್ನು ಪಡೆದುಕೊಂಡಿದೆ ಎಂದು ನಿರ್ದೇಶಕ ಆರ್ಯ ಎಸ್ ರೆಡ್ಡಿ ತಿಳಿಸಿದ್ದಾರೆ.

ಚಿತ್ರದ ಮುಖ್ಯ ಪಾತ್ರಧಾರಿ ಸುನೀಲ್ ಗೌಡ ಮಾತನಾಡಿ, ನಾನು ರಂಗಭೂಮಿ ಕಲಾವಿದ. ಈ ಚಿತ್ರದಿಂದ ತುಂಬಾ ಕಲಿತಿದ್ದೇನೆ. ಸಿಂಗಲ್ ಕ್ಯಾರೆಕ್ಟರ್ ಪ್ಲೇ ಮಾಡೋದು ಅಷ್ಟು ಸುಲಭದ ಮಾತಲ್ಲ ಆರಂಭದಲ್ಲಿ ಕಷ್ಟ ಆಯ್ತು. ಆದ್ರೆ ನಿರ್ದೇಶಕರು ನನಗೆ ತುಂಬಾ ಸಹಕಾರ ನೀಡಿದ್ರು, ಟ್ರೈನ್ ಮಾಡಿದ್ರು. ಒಂದೊಳ್ಳೆ ಪ್ರಯತ್ನ, ಪ್ರಯೋಗವನ್ನು ಈ ಚಿತ್ರದಲ್ಲಿ ಮಾಡಿದ್ದೇವೆ. ನಿರ್ದೇಶಕರಿಗೆ ಅವಕಾಶ ನೀಡಿದಕ್ಕೆ ನಾನು ಥ್ಯಾಂಕ್ಸ್ ಹೇಳುತ್ತೇನೆ ಎಂದು ಸುನೀಲ್ ತಿಳಿಸಿದ್ದಾರೆ.

ನಿರ್ದೇಶಕ ಆರ್ಯ ಎಸ್ ರೆಡ್ಡಿ ಈ ಚಿತ್ರವನ್ನು ಸ್ನೇಹಿತರೊಡಗೂಡಿ ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ ಮೂರು ಹಾಡುಗಳಿದ್ದು, ವಿಶಾಲ್ ಆಲಾಪ್ ಸಂಗೀತ ನಿರ್ದೇಶನ, ವಿಶ್ವಾಸ್ ಕೌಶಿಕ್ ಹಿನ್ನೆಲೆ ಸಂಗೀತ ಚಿತ್ರಕ್ಕಿದೆ. ಸಾಕಷ್ಟು ವಿಶೇಷತೆ ಹೊತ್ತ ಈ ಚಿತ್ರ ನವೆಂಬರ್ 18ರಂದು ಬಿಡುಗಡೆಯಾಗುತ್ತಿದೆ. ಬಿಯಾಂಡ್ ಡ್ರೀಮ್ಸ್ ನಡಿ ನಂದಳಿಕೆ ನಿತ್ಯಾನಂದ ಪ್ರಭು ಈ ಸಿನಿಮಾದ ವಿತರಣೆ ಜವಾಬ್ದಾರಿ ಹೊತ್ತಿದ್ದಾರೆ.

Categories
ಸಿನಿ ಸುದ್ದಿ

ಉತ್ತರ ಪ್ರದೇಶದಲ್ಲಿ ಕನ್ನಡಿಗರ ಚಿತ್ರ! ರೆಡ್ ರಮ್ ಎಂಬ ಕನ್ನಡ ಸಿನಿಮಾಗೆ ಚಾಲನೆ…

ಕನ್ನಡ ಚಿತ್ರರಂಗವನ್ನು ಈಗ ಇಡೀ ಭಾರತೀಯ ಸಿನಿಮಾರಂಗವೇ ತಿರುಗಿ ನೋಡುವಂತಾಗಿದೆ. ಕನ್ನಡದ ಅನೇಕ ಸಿನಿಮಾಗಳು ಯಶಸ್ಸು ಕಾಣುತ್ತಿವೆ. ವ್ಯಾಪಾರದ ದೃಷ್ಟಿಯಲ್ಲೂ ಕನ್ನಡದ ಸಿನಿಮಾಗಳಿಗೆ ಈಗ ಬೇಡಿಕೆ ಹೆಚ್ಚಿದೆ. ಆ ನಿಟ್ಟಿನಲ್ಲಿ ಅನೇಕ ಹೊಸಬರ ಕಂಟೆಂಟ್ ಸಿನಿಮಾಗಳು ಜೋರಾಗಿಯೇ ಸೆಟ್ಟೇರುತ್ತಿವೆ. ಆ ಸಾಲಿಗೆ ಈಗ ಹೊಸಬರ ‘ರೆಡ್ ರಮ್’ ಸಿನಿಮಾ ಕೂಡ ಸೇರಿದೆ

ಹೌದು, ಕೌಟಿಲ್ಯ ಸಿನಿಮಾಸ್ ಹಾಗೂ ಹನಿ ಚೌಧರಿ ಫಿಲಮ್ಸ್ ಮೂಲಕ ‘ ರೆಡ್ ರಮ್’ ಚಿತ್ರಕ್ಕೆ ಪೂಜೆ ನಡೆದಿದೆ. ಅಶೋಕ್ ದೇವನಾಂಪ್ರಿಯ, ಕಿಶೋರ್ ಎ. ವಿಜಯ್ ಕುಮಾರ್ ಹಾಗೂ ಹನಿ ಚೌಧರಿ ಈ ಸುನಿಮಾದ ನಿರ್ಮಾಪಕರು. ” ರೆಡ್ ರಮ್” ಚಿತ್ರದ ವಿಶೇಷವೆಂದರೆ, ಇದರ ಮುಹೂರ್ತ ಪೂಜೆ ಉತ್ತರ ಪ್ರದೇಶದ ಮೋದಿನಗರದ ಶ್ರೀ ಸನಾತನ ಧರ್ಮ ದೇವಸ್ಥಾನದಲ್ಲಿ ನೆರವೇರಿದೆ.

ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಮೋದಿ ನಗರದ ಶಾಸಕರಾದ ಶ್ರೀಮತಿ ಮಂಜು ಶಿವಾಚ್, ಸ್ಥಳೀಯ ಕೌನ್ಸಿಲರ್ ರಾಜಕುಮಾರಿ ಮುನ್ನಿ ಜಿ ಹಾಗೂ ಅನೇಕ ಗಣ್ಯರು ಆಗಮಿಸಿ ಕನ್ನಡ ಸಿನಿಮಾ ತಂಡಕ್ಕೆ ಶುಭಹಾರೈಸಿದ್ದಾರೆ.

‘ರೆಡ್ ರಮ್’ ಚಿತ್ರಕ್ಕೆ ಆರ್. ಪ್ರಮೋದ್ ಜೋಯಿಸ್ ನಿರ್ದೇಶಕರು. ಇದೊಂದು ಈ ಕ್ರೈಮ್ ಥ್ರಿಲ್ಲರ್ ಕಥೆ ಹೊಂದಿದೆ. ಹಿಂದೆಂದೂ ಕೇಳಿರದ ಕಥಾಹಂದರ ಇಲ್ಲಿದೆ ಎಂಬುದು ನಿರ್ದೇಶಕರ ಮಾತು.

ಚಿತ್ರದಲ್ಲಿ ಬಾಲಿವುಡ್ ನಟ ರಾಜ್ ವೀರ್, ಮಧುರಾ, ಅಫ್ಜಲ್ , ಶ್ರೀದತ್ತಾ, ಪ್ರಾಚಿಶರ್ಮ, ಧ್ರಿತೇಶ್ ವಿನಯ್ ಸೂರ್ಯ ಹಾಗೂ ಯತಿರಾಜ್ ಅಭಿನಯಿಸುತ್ತಿದ್ದಾರೆ. ಸ್ಯಾಂಡಲ್ ವುಡ್ ಹಾಗೂ ಬಾಲಿವುಡ್ ಕಲಾವಿದರ ಸಮಾಗಮವಿದೆ.

ಚಿತ್ರಕ್ಕೆ ಶಿವಶಂಕರ್(ಶಂಖು) ಛಾಯಾಗ್ರಹಣವಿದೆ. ಆರ್. ಚೇತನ್ ಕೃಷ್ಣ ಸಂಗೀತವಿದೆ. ಅಫ್ಜಲ್ ಅವರು ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಕೆಲಸ‌ ನಿರ್ವಹಿಸುತ್ತಿದ್ದಾರೆ.

ಸಿನಿಮಾಗೆ ಮುಹೂರ್ತ ಪೂಜೆ ನಡೆದಿದ್ದು, ಸುಮಾರು 20 ದಿನಗಳ ಕಾಲ ಉತ್ತರ ಪ್ರದೇಶದ ಸುತ್ತ ಮುತ್ತ ಚಿತ್ರೀಕರಣ ನಡೆಯಲಿದೆ. ಕೆಲ ಭಾಗ ಬೆಂಗಳೂರಿನಲ್ಲೂ ಚಿತ್ರೀಕರಣ ಮಾಡುವ ಯೋಜನೆ ಚಿತ್ರತಂಡಕ್ಕಿದೆ ಎಂದು ಕಾರ್ಯಕಾರಿ ನಿರ್ಮಾಪಕ ಅಫ್ಜಲ್ ತಿಳಿಸಿದ್ದಾರೆ.

Categories
ಸಿನಿ ಸುದ್ದಿ

ಗಣೇಶ್ ತ್ರಿಬಲ್ ರೈಡಿಂಗ್ ನಲ್ಲಿ ಮೂವರು ಸುಂದರಿಯರು! ನವೆಂಬರ್ 25ಕ್ಕೆ ಗೋಲ್ಡನ್ ರೈಡಿಂಗ್ ಶುರು…

ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ಅಭಿನಯಿಸಿರುವ “ತ್ರಿಬಲ್ ರೈಡಿಂಗ್” ಚಿತ್ರಕ್ಕಾಗಿ ವಿ. ನಾಗೇಂದ್ರ ಪ್ರಸಾದ್ ಅವರು ಬರೆದಿರುವ “ಟ್ವಿಂಕಲ್ ಟ್ವಿಂಕಲ್ ಲಿಟಲ್‌ ಸ್ಟಾರ್” ಎಂಬ ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಸಾಯಿಕಾರ್ತಿಕ್ ಸಂಗೀತ ನೀಡಿರುವ ಈ ಹಾಡನ್ನು ವಿಜಯ ಪ್ರಕಾಶ್ ಹಾಡಿದ್ದಾರೆ.‌ ಭೂಷಣ್ ನೃತ್ಯ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಬಿಡುಗಡೆಯಾದ ಕ್ಷಣದಿಂದಲೇ ಈ ಹಾಡು ಬಾರಿ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.

ನಮ್ಮ “ತ್ರಿಬಲ್ ರೈಡಿಂಗ್” ಶುರುವಾಗಿದ್ದು, ಕೊರೋನ ಸಮಯದಲ್ಲಿ. ಚಿತ್ರೀಕರಣಕ್ಕೆ ಅನುಮತಿ ಸಿಕ್ಕ ಕೂಡಲೇ ಮೈಸೂರಿನಲ್ಲಿ ಚಿತ್ರೀಕರಣ ಆರಂಭಿಸಿದೆವು. ಅದು ಆಸ್ಪತ್ರೆಯಲ್ಲಿ. ಎಲ್ಲರಲ್ಲೂ ಭಯದ ವಾತಾವರಣ. ಆ ಸಮಯದಲ್ಲಿ ಚಿತ್ರೀಕರಣ ಮಾಡಲಾಯಿತು. ದೇವರ ದಯೆಯಿಂದ ಯಾವುದೇ ತೊಂದರೆ ಆಗಲಿಲ್ಲ. ಇನ್ನೂ ಈಗಾಗಲೇ ಚಿತ್ರದ ಎರಡು ಹಾಡುಗಳು ಬಿಡುಗಡೆಯಾಗಿದ್ದು, ಈಗ ಮೂರನೇ ಹಾಡು ಬಿಡುಗಡೆಯಾಗಿದೆ. ಹಿಂದಿನ ಎರಡು ಹಾಡುಗಳು ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗಿ, ಜನಪ್ರಿಯವಾಗಿದೆ. ನವೆಂಬರ್ ಹದಿನೈದರಂದು ಟ್ರೇಲರ್ ಬಿಡುಗಡೆಯಾಗಲಿದ್ದು, ಇಪ್ಪತ್ತೈದರಂದು ಚಿತ್ರ ತೆರೆಗೆ ಬರಲಿದೆ. ಇಡೀ ಚಿತ್ರತಂಡದ ಸಹಕಾರದಿಂದ “ತ್ರಿಬಲ್ ರೈಡಿಂಗ್” ಚೆನ್ನಾಗಿ ಬಂದಿದೆ. ಪ್ರೇಕ್ಷಕರಿಗೂ ಪ್ರಿಯವಾಗುವ ವಿಶ್ವಾಸವಿದೆ ಎಂದರು ನಾಯಕ ಗೋಲ್ಡನ್ ಸ್ಟಾರ್ ಗಣೇಶ್.

ಈ ಹಿಂದೆ ಬಿಡುಗಡೆಯಾಗಿರುವ ಎರಡು ಹಾಡುಗಳು ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದೆ. ಈ ಹಾಡು ಕೂಡ ಸುಮಧುರವಾಗಿದೆ ಎಂದು ಹಾಡಿನ ಬಗ್ಗೆ ಮಾಹಿತಿ ನೀಡಿದ್ದ ನಿರ್ದೇಶಕ ಮಹೇಶ್ ಗೌಡ, ನವೆಂಬರ್ 25 ಚಿತ್ರ ಬಿಡುಗಡೆಯಾಗುತ್ತಿದೆ. ಎಲ್ಲರು ಪ್ರೋತ್ಸಾಹ ನೀಡಿ ಎಂದರು.

ಇದೇ ತಿಂಗಳ 25 ರಂದು ತೆರೆಗೆ ಬರುತ್ತಿರುವ ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ರಾಮ್ ಗೋಪಾಲ್ ವೈ.ಎಂ.

ಇಂದು ಬಿಡುಗಡೆಯಾಗಿರುವ ಈ ಹಾಡು‌ ತುಂಬಾ ‌ಚೆನ್ನಾಗಿದೆ. ಗಣೇಶ್ ಸರ್ ಚೆನ್ನಾಗಿ ನೃತ್ಯ ಮಾಡಿದ್ದಾರೆ. ಎರಡು ಜಡೆ ಒಟ್ಟಿಗೆ ಸೇರುವುದಿಲ್ಲ ಎನ್ನುತ್ತಾರೆ. ಆದರೆ ಈ ಚಿತ್ರದಲ್ಲಿ ನಾವು ಮೂವರು ನಾಯಕಿಯರು. ಇಡೀ ಚಿತ್ರ ಪೂರ್ತಿ ಖುಷಿಯಿಂದ ಕಾಲ ಕಳೆದೆವು. ನಮ್ಮ ಚಿತ್ರಕ್ಕೆ ಬೆಂಬಲ ನೀಡಿ ಎಂದರು ನಾಯಕಿ ಅದಿತಿ ಪ್ರಭುದೇವ.

ಮತ್ತಿಬ್ಬರು ನಾಯಕಿಯರಾದ ರಚನಾ ಇಂದರ್ ಹಾಗೂ ಮೇಘ ಶೆಟ್ಟಿ ಸಹ “ತ್ರಿಬಲ್ ರೈಡಿಂಗ್” ಬಗ್ಗೆ ಮಾತನಾಡಿದರು. ಛಾಯಾಗ್ರಹಕ ಜೈ ಆನಂದ್ ಹಾಗೂ ಸಂಭಾಷಣೆ ಬರೆದಿರುವ ರಾಜಶೇಖರ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Categories
ಸಿನಿ ಸುದ್ದಿ

ಪ್ರಜ್ವಲ್ ಅಬ್ಬರಿಸಲು ರೆಡಿ! ನವೆಂಬರ್ 18ಕ್ಕೆ ಅಬ್ಬರ ರಿಲೀಸ್…

ಪ್ರಜ್ವಲ್ ಮತ್ತು ನಿರ್ದೇಶಕ ರಾಮ್ ನಾರಾಯಣ್ ಕಾಂಬಿನೇಷನ್ ಮೂಲಕ ರೆಡಿಯಾಗಿರುವ ಅಬ್ರಾಬರ ರಾಜ್ಯಾದ್ಯಂತ ನವೆಂಬರ್ 18ರಂದು ಬಿಡುಗಡೆಯಾಗುತ್ತಿದೆ. ಚಿತ್ರ ರಿಲೀಸ್‌ಗೂ ಮುನ್ನ ಟ್ರೇಲರ್ ಸಾಕಷ್ಟು ಕುತೂಹಲ ಮೂಡಿಸಿದೆ. ಹಿರಿಯ ನಟ ದೇವರಾಜ್ ಅವರು ಚಿತ್ರದ
ಟ್ರೇಲರ ಅನಾವರಣಗೊಳಿಸಿ ತಂಡಕ್ಕೆ ಶುಭ ಹಾರೈಸಿದ್ದಾರೆ. ಟೈಸನ್, ಕ್ರ‍್ಯಾಕ್ ನಂತರ ರಾಮ್‌ನಾರಾಯಣ್ ನಿರ್ದೇಶಿಸಿರುವ ಈ ಚಿತ್ರವನ್ನು ಸಿ. ಅಂಡ್ ಎಂ.ಮೂವೀಸ್ ಬ್ಯಾನರ್ ನಲ್ಲಿ ಬಸವರಾಜ್ ಮಂಚಯ್ಯ ಅವರು ನಿರ್ಮಿಸಿದ್ದಾರೆ. ಆ್ಯಕ್ಷನ್,
ಫ್ಯಾಮಿಲಿ, ಕಾಮಿಡಿ ಎಂಟರ್‌ಟೈನರ್ ಕಥಾಹಂದರ ಹೊಂದಿರೋ ಈ ಚಿತ್ರದಲ್ಲಿ ಪ್ರಜ್ವಲ್ ಜೊತೆ ರಾಶಿಪೊನ್ನಪ್ಪ, ನಿಮಿಕಾ ರತ್ನಾಕರ್ ಹಾಗೂ ಲೇಖಾಚಂದ್ರ ನಾಯಕಿಯರಾಗಿ ಅಭಿನಯಿಸಿದ್ದಾರೆ.


ಸಿನಿಮಾ ಕುರಿತು ನಿರ್ದೇಶಕ ರಾಮ್‌ನಾರಾಯಣ್ ಹೇಳಿದ್ದಿಷ್ಟು, ನವೆಂಬರ್ 18ಕ್ಕೆ ಅಬ್ಬರ ಬಿಡುಗಡೆಯಾಗುತ್ತಿದೆ. ಎಂಟರ್ಟೈನ್ಮೆಂಟ್ ಜೊತೆಗೆ ಆತಂಕವೂ ಇದೆ. ಈ ಸೀನ್‌ಗೆ, ಈ ಫೈಟ್‌ಗೆ, ಈ ಹಾಡಿಗೆ ಜನ ಏನೆನ್ನಬಹುದು ಎಂಬ ಕುತೂಹಲವಿದೆ. ಆದರೆ ಸಿನಿಮಾ ಗೆದ್ದೇ ಗೆಲ್ಲುತ್ತೆ ಎಂಬ ಭರವಸೆಯಿದೆ. ಅಬ್ಬರ ಡೇ ಒನ್‌ನಿಂದ ಅಬ್ಬರವಾಗೇ ಬರುತ್ತಿದೆ. ಆರಂಭದಲ್ಲಿ ಟೈಟಲ್‌ನ್ನು ಎಸ್.ಗೋವಿಂದ್ ಅವರು ನಮಗೆ ಬಿಟ್ಟುಕೊಟ್ಟರು. ಅಂದುಕೊಂಡದ್ದಕ್ಕಿಂತ ಚೆನ್ನಾಗಿಯೇ ಚಿತ್ರ ಬಂದಿದೆ. ಹಾಡಿನ ಸಮಯದಲ್ಲಿ ನಿಮಿಕಾಗೆ ಕಾಲು ಪೆಟ್ಟಾದರೂ ತೋರಿಸಿಕೊಳ್ಳದೆ ಅಭಿನಯಿಸಿದರು. ಚಿತ್ರದ ಟೈಟಲನ್ನು ಶಿವರಾಜ್‌ಕುಮಾರ್ ರಿಲೀಸ್ ಮಾಡಿದ್ದರು.
ಈಗ ದೇವರಾಜ್ ಟ್ರೇಲರ್ ರಿಲೀಸ್ ಮಾಡಿದ್ದಾರೆ. ನಿರ್ಮಾಪಕರ ಹೆಸರೂ ಬಸವರಾಜ್, ಹೀಗೆ ನಮ್ಮ ಸಿನಿಮಾಗೆ ರಾಜ್ ಎನ್ನುವ ಹೆಸರು ಶಕ್ತಿಯಾಗಿ ನಿಂತಿದೆ. ರವಿಶಂಕರ್ ಅತ್ಯದ್ಭುತವಾಗಿ ಅಭಿನಯಿಸಿದ್ದಾರೆ, ಅವರಿಗೆ ಎರು ಶೇಡ್ಸ್ ಇದೆ. ಶೋಭರಾಜ್, ಶಂಕರ್ ಅಶ್ವಥ್, ವಿಕ್ಟರಿವಾಸು, ಕೋಟೆ ಪ್ರಭಾಕರ್ ತುಂಬಾ ಚೆನ್ನಾಗಿ ಆಕ್ಟ್
ಮಾಡಿದ್ದಾರೆ. ಅಲ್ಲದೆ ರವಿ ಬಸ್ರೂರು ಒಳ್ಳೆಯ ಹಾಡುಗಳನ್ನು ಮಾಡಿಕೊಟ್ಟಿದ್ದಾರೆ. ಜೆ.ಕೆ.ಗಣೇಶ್ ಕ್ಯಾಮೆರಾವರ್ಕ್ ನಿಭಾಯಿಸಿದ್ದು, ಮೂವರು ನಾಯಕಿಯರೂ ಪೈಪೋಟಿಗೆ ಬಿದ್ದವರಂತೆ ಅಭಿನಯಿಸಿದ್ದಾರೆ
ಎಂದರು.


ನಿರ್ಮಾಪಕ ಬಸವರಾಜ್ ಮಂಚಯ್ಯ ಮಾತನಾಡಿ, ಕೋವಿಡ್ ಆಗಷ್ಟೇ ಮುಗಿದಿತ್ತು. ಹಾಡುಗಳನ್ನು ಫಾರಿನ್‌ನಲ್ಲಿ ಶೂಟ್ ಮಾಡಲು ಪ್ರಜ್ವಲ್ ಒಪ್ಪಿದರು. ಎರಡು ಹಾಡುಗಳನ್ನು ಥೈಲ್ಯಾಂಡ್‌ನಲ್ಲೇ
ಶೂಟ್ ಮಾಡಿದ್ದೇವೆ. ತೆರೆಯ ಹಿಂದೆ ನಾವಿದ್ದರೂ, ತೆರೆಯ ಮುಂದೆ ಅವರೆಲ್ಲ ಪಟ್ಟಿರುವ ಶ್ರಮವನ್ನು ಜನರೆಲ್ಲ ನೋಡುತ್ತಾರೆ. ತಂದೆ ಒಂದು ಒಂದು ತಪ್ಪು ಮಾಡುತ್ತಾನೆ, ಅದನ್ನು ಸರಿಪಡಿಸುವುಕ್ಕೆ ಹೋಗಿ ಮತ್ತೊಂದು ತಪ್ಪು ಮಾಡುತ್ತಾನೆ. ನಂತರ ಮಗ ಅದನ್ನು ಹೇಗೆ ಸರಿಪಡಿಸ್ತಾನೆ ಅನ್ನೋದೇ ಈ ಚಿತ್ರದ ಕಥೆ. ಹಾಗಾಗಿ ನಾಯಕನ ತಂದೆ ದೇವರಾಜ್ ಅವರೇ ಟ್ರೇಲರ್ ರಿಲೀಸ್ ಮಾಡಿದ್ದಾರೆ ಎಂದರು.


ದೇವರಾಜ್ ಮಾತನಾಡಿ ಟ್ರೇಲರ್ ಹಾಡುಗಳು ತುಂಬಾ ಚೆನ್ನಾಗಿ ಬಂದಿವೆ. ಚಿತ್ರದ ಮೂವರು ನಾಯಕಿಯರು ಮಗನ ಬಗ್ಗೆ ಒಳ್ಳೆಯ ಮಾತುಗಳನ್ನು ಹೇಳಿದಾಗ ಒಬ್ಬ ತಂದೆಯಾಗಿ ನನಗೆ ತುಂಬಾ ಖುಷಿಯಾಯ್ತು. ಕನ್ನಡ ಚಿತ್ರರಂಗಕ್ಕೀಗ ಶುಕ್ರದೆಸೆ ಬಂದಿದೆ. ಇಡೀ ದೇಶ ಹೊಗಳುತ್ತಿದೆ. ರಾಮ ನಾರಾಯಣ್ ಜೊತೆ ನಾನೂ ಕೆಲಸ ಮಾಡಿದ್ದೇನೆ. ಒಬ್ಬ ಸಾಹಿತಿಯ ಕೈಲಿ ಬಂದಿರುವ ಡೈಲಾಗ್‌ಗಳು ತುಂಬಾ ಚೆನ್ನಾಗಿರುತ್ತೆ. ಅವರು ಆಡೋ ಮಾತಲ್ಲಿ ನಾಟಕೀಯತೆ ಕಾಣಲಿಲ್ಲ ಎಂದು ಹೇಳಿದರು.

ನಾಯಕ ಪ್ರಜ್ವಲ್ ಮಾತಾಡಿ, ಚಿತ್ರದ ರಿಲೀಸ್ ಹತ್ತಿರವಾಗ್ತಿದ್ದಂತೆ ಎಕ್ಸೈಟ್‌ಮೆಂಟ್ ಇರುತ್ತೆ, ಆದರೆ ಈ ಸಿನಿಮಾ ಮಾಡಿದಮೇಲೆ
ನೆಮ್ಮದಿ ಕಾಣಿಸ್ತಿದೆ. ಚಿತ್ರ ಇಷ್ಟು ಚೆನ್ನಾಗಿ ಬರಲು ಇಡೀತಂಡ ಹಾಕಿದ ಎಫರ್ಟ್ ಕಾರಣ. ಚಿತ್ರದಲ್ಲಿ ನನಗೆ ಮೂರು ವಿಭಿನ್ನವಾದ ಪಾತ್ರಗಳಿದ್ದು, ೫ ರೀತಿಯಲ್ಲಿ ಕಾಣಿಸಿಕೊಳ್ಳುತ್ತೇನೆ. ಒಂದೇದಿನ ಮೂರೂ
ಪಾತ್ರಗಳನ್ನು ಮಾಡಬೇಕಾಗಿತ್ತು. ಕಾಮಿಡಿ, ಎಂಟರ್‌ಟೈನಿಂಗ್ ಜೊತೆಗೆ ಒಂದು ರಿವೆಂಜ್ ಥಾಟ್ ಚಿತ್ರದಲ್ಲಿದೆ.
ಅದು ಚಿತ್ರದ ಕೊನೇವರೆಗೂ ಪ್ರೇಕ್ಷಕರಲ್ಲಿ ಕುತೂಹಲ ಕೆರಳಿಸುತ್ತಲೇ ಇರುತ್ತದೆ. ನಾನು
ನಡೆಯುವ ದಾರಿ ಹೀಗೇ ಇರಬೇಕು ಅಂದುಕೊಂಡಿರುತ್ತೇವೆ. ಆದರೆ, ಅದು ಹೋಗ್ತಾ ಹೋಗ್ತಾ ಕಳೆದುಹೋಗುತ್ತದೆ. ಮನುಷ್ಯ ಯಾವಾಗಲೂ ಜಾಗೃತನಾಗಿರಬೇಕು ಎನ್ನುವುದೇ ಚಿತ್ರದ ಸಂದೇಶ ಎಂದು ಹೇಳಿದರು.

ನಾಯಕಿಯರಾದ ನಿಮಿಕಾ ರತ್ನಾಕರ್, ಲೇಖಾಚಂದ್ರ ಹಾಗೂ ರಾಜಶ್ರೀ ಪೊನ್ನಪ್ಪ ಇವರೆಲ್ಲರೂ ಚಿತ್ರೀಕರಣದ ಅನುಭವಗಳು ಹಾಗೂ ತಮ್ಮ ಪಾತ್ರಗಳ ಬಗ್ಗೆ
ಹೇಳಿಕೊಂಡರು.

Categories
ಸಿನಿ ಸುದ್ದಿ

ಗಜರಾಮನಿಗೆ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್…

ನಟ ರಾಜವರ್ಧನ್ ನಟಿಸುತ್ತಿರುವ ‘ಗಜರಾಮ’ ಸಿನಿಮಾ ಶೂಟಿಂಗ್ ಜೋರಾಗಿ ಸಾಗುತ್ತಿದೆ. ಸಿನಿಮಾ ಸೆಟ್ಟೇರಿದ ದಿನದಿಂದಲೇ ಚಿತ್ರೀಕರಣ ಆರಂಭಿಸಿದ ಚಿತ್ರತಂಡ 16 ದಿನಗಳ ಮೊದಲ ಹಂತದ ಚಿತ್ರೀಕರಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.

ಹದಿನಾರು ದಿನಗಳ ಕಾಲ ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಿದ್ದೇವೆ. ಮೊದಲ ಶೆಡ್ಯೂಲ್ ಮುಗಿದ್ದಿದ್ದು ಎರಡನೆ ಶೆಡ್ಯೂಲ್ ಗಾಗಿ ಲೊಕೇಶನ್ ಹುಡುಕಾಟದಲ್ಲಿದ್ದೇವೆ. ಇನ್ನು ನಲವತ್ತು ದಿನಗಳ ಶೂಟಿಂಗ್ ಬಾಕಿ ಇದೆ. ನಾನು ಏನು ಅಂದುಕೊಂಡಿದ್ದೆನೋ ಹಾಗೆಯೇ ಚಿತ್ರೀಕರಣ ನಡೆಯುತ್ತಿದೆ, ಸಿನಿಮಾವೂ ಮೂಡಿ ಬರುತ್ತಿದೆ. ಮೊದಲ ಸಿನಿಮಾ ಎಂದು ನೋಡದೇ ಹಿರಿಯ ಹಾಗೂ ಅನುಭವಿ ಛಾಯಾಗ್ರಾಹಕ ಕೆ.ಎಸ್ ಚಂದ್ರಶೇಖರ್ ನನಗೆ ಸಹಕಾರ ನೀಡುತ್ತಾ ನನ್ನ ಬೆನ್ನೆಲುಬಾಗಿ ನಿಂತಿದ್ದಾರೆ ಎಂದು ನಿರ್ದೇಶಕ ಸುನೀಲ್ ಕುಮಾರ್. ವಿ. ಎ ತಿಳಿಸಿದ್ದಾರೆ.

ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಸಹಾಯಕ ನಿರ್ದೇಶಕರಾಗಿ ದುಡಿದಿರುವ ಸುನೀಲ್ ಕುಮಾರ್. ವಿ. ಎ ನಿರ್ದೇಶನದ ಮೊದಲ ಸಿನಿಮಾವಿದು. ಲವ್ ಸ್ಟೋರಿ ಹಾಗೂ ಮಾಸ್ ಆಕ್ಷನ್ ಕಥಾಹಂದರ ಒಳಗೊಂಡ ಚಿತ್ರದಲ್ಲಿ ರಾಜವರ್ಧನ್ ಜೋಡಿಯಾಗಿ ಹರಿಕಥೆ ಅಲ್ಲ ಗಿರಿಕಥೆ ಖ್ಯಾತಿಯ ತಪಸ್ವಿನಿ ಪೂಣಚ್ಚ ನಟಿಸುತ್ತಿದ್ದಾರೆ.

ಶಿಷ್ಯ ದೀಪಕ್ ಚಿತ್ರದ ಪ್ರಮುಖ ಪಾತ್ರದಲ್ಲಿ ಮಿಂಚುತ್ತಿದ್ದು, ಖಳನಟನಾಗಿ ಪೈಲ್ವಾನ್ ಖ್ಯಾತಿಯ ಕಬೀರ್ ದುಹಾನ್ ಸಿಂಗ್ ನಟಿಸುತ್ತಿದ್ದಾರೆ. ಕಾಮಿಡಿ ಕಿಲಾಡಿಗಳು ಖ್ಯಾತಿಯ ಸಂತು, ಗೋವಿಂದೇ ಗೌಡ ಒಳಗೊಂಡ ತಾರಾಬಳಗ ಸಿನಿಮಾದಲ್ಲಿದೆ.

ಲೈಫ್ ಲೈನ್ ಫಿಲ್ಮಂ ಪ್ರೊಡಕ್ಷನ್ ನಡಿ ನರಸಿಂಹ ಮೂರ್ತಿ ಚಿತ್ರವನ್ನು ನಿರ್ಮಾಣ ಮಾಡ್ತಿದ್ದು, ಮಲ್ಲಿಕಾರ್ಜುನ್ ಕಾಶಿ ಮತ್ತು ಝೇವಿಯರ್ ಫರ್ನಾಂಡಿಸ್ ಕೂಡ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.

ಮನೋಮೂರ್ತಿ ಸಂಗೀತ ನಿರ್ದೇಶನ, ಕೆ.ಎಸ್. ಚಂದ್ರಶೇಖರ್ ಛಾಯಾಗ್ರಾಹಣ, ಜ್ಞಾನೇಶ್ ಬಿ ಮಠದ್ ಸಂಕಲನ, ಧನಂಜಯ್ ನೃತ್ಯ ನಿರ್ದೇಶನ, ಚಿನ್ಮಯ್ ಭಾವಿಕೆರೆ, ಜಯಂತ್ ಕಾಯ್ಕಿಣಿ, ಚೇತನ್ ಕುಮಾರ್ ಸಾಹಿತ್ಯದಲ್ಲಿ ಹಾಡುಗಳು ಮೂಡಿ ಬರಲಿದೆ.

error: Content is protected !!