Categories
ಸಿನಿ ಸುದ್ದಿ

ಪುನೀತ ಪರ್ವಕ್ಕೆ ಸೌತ್ ಇಂಡಿಯನ್ ಸ್ಟಾರ್ಸ್ ಆಗಮನ: ಅ.28 ಕ್ಕೆ ಅಪ್ಪು ಗಂಧದ ಗುಡಿ ರಿಲೀಸ್…

ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರು ನಿಜ ಜೀವನದ ಸ್ಟಾರ್ ಆಗಿ ಕಾಣಿಸಿಕೊಂಡಿರುವ ‘ಗಂಧದ ಗುಡಿ’ ಚಿತ್ರ ಬಿಡುಗಡೆಗೆ ದಿನಗಣನೆ ಶುರುವಾಗಿದೆ.

‘ಗಂಧದ ಗುಡಿ’ ಅಕ್ಟೋಬರ್ 28ರಂದು ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮುನ್ನ ಅಕ್ಟೋಬರ್ 21ರ ಶುಕ್ರವಾರ ಚಿತ್ರದ ಫ್ರೀ ರಿಲೀಸ್ ಇವೆಂಟ್ ನಡೆಯಲಿದೆ.ಈ ಅಪರೂಪದ ಸಮಾರಂಭಕ್ಕೆ ‘ಪುನೀತ ಪರ್ವ’ ಎಂದು ಹೆಸರಿಡಲಾಗಿದೆ.

ಈ ಪುನೀತ ಪರ್ವ ಕಾರ್ಯಕ್ರಮಕ್ಕೆ ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಹ್ವಾನಿಸಲಾಗಿದ್ದು, ಇದರ ಜೊತೆಗೆ ಭಾರತೀಯ ಚಿತ್ರರಂಗದ ತಾರೆಯರನ್ನು ಆಹ್ವಾನಿಸಲಾಗಿದೆ.

ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರು ಮಂಗಳವಾರ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ. ಈ ವೇಳೆ ರಾಘವೇಂದ್ರ ರಾಜ್ ಕುಮಾರ್, ಯುವ ರಾಜಕುಮಾರ್ ಹಾಗೂ ಕುಟುಂಬದ ಸದಸ್ಯರು ಹಾಜರಿದ್ದರು.

ಸೌತ್ ಇಂಡಿಯನ್ ಸ್ಟಾರ್ಸ್ ರಜನಿಕಾಂತ್, ಚಿರಂಜೀವಿ, ಸೂರ್ಯ ಸೇರಿದಂತೆ ಹಲವು ನಟರು ಭಾಗವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅಪ್ಪು ಅವರಿಗೆ ಆತ್ಮೀಯರಾದ ತಮಿಳು ಹಾಗೂ ತೆಲುಗು ಚಿತ್ರರಂಗದ ನಟರು ಆಗಮಿಸಲಿದ್ದಾರೆ.

ಕಳೆದ ವಾರ ಅಪ್ಪು ‘ಗಂಧದ ಗುಡಿ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ದಾಖಲೆ ವೀಕ್ಷಣೆ ಕಂಡಿದೆ.

ಪುನೀತ್ ರಾಜ್‍ಕುಮಾರ್ ಅರಣ್ಯದ ಪ್ರಾಣಿ ಪಕ್ಷಿಗಳ ಬಗ್ಗೆ ವಿವರಣೆ ನೀಡುವುದರ ಜೊತೆ ಒಂದಷ್ಟು ಅಪರೂಪದ ಕ್ಷಣಗಳನ್ನು ಕಳೆದಿದ್ದಾರೆ. ಸಾಗರದ ಆಳದಲ್ಲೂ ಅಪ್ಪು ಈಜಿ ಅಲ್ಲಿನ ನಿಗೂಢ ಜಗತ್ತಿನ ಬಗ್ಗೆಯೂ ಹೇಳಿದ್ದಾರೆ. ಒಟ್ಟಾರೆ ಟ್ರೇಲರ್ ಗಂಧದ ಗುಡಿ ನೋಡಲೇಬೇಕೆಂಬ ಕುತೂಹಲ ಮೂಡಿಸಿದೆ.

ಅಪ್ಪು ಅವರು ಕಣ್ಮರೆಯಾಗಿ ಒಂದು ವರ್ಷ ಆಗುತ್ತಿರುವಾಗ ಅವರ ಪುಣ್ಯ ಸ್ಮರಣೆಯ ಒಂದು ದಿನ ಮುನ್ನ, ಅಕ್ಟೋಬರ್‌ 28ರಂದು ‘ಗಂಧದ ಗುಡಿ’ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ.

ವನ್ಯಜೀವಿ ಛಾಯಾಗ್ರಾಹಕ ಅಮೋಘ ವರ್ಷ ನಿರ್ದೇಶನ ಮಾಡಿರುವ ಈ ಚಿತ್ರದಲ್ಲಿ ನಿಜ ಜೀವನದ ಅಪ್ಪುವಾಗಿ ಪುನೀತ್ ರಾಜ್‍ಕುಮಾರ್ ಕಾಣಿಸಿಕೊಂಡಿರುವುದು ವಿಶೇಷವಾಗಿದೆ.

Categories
ಸಿನಿ ಸುದ್ದಿ

ಬಾಲಿವುಡ್ ನಲ್ಲೂ ಕಾಂತಾರಾ ಕಹಳೆ! ಅ.14ರಿಂದ ಶೆಟ್ಟರ ಹವಾ: ಹಿಂದಿ ಭಾಷೆಯಲ್ಲಿ 2500 ಪರದೆ ಮೇಲೆ ಪ್ರದರ್ಶನ…

ಒಳ್ಳೆಯ ಕಥಾವಸ್ತುವುಳ್ಳ ಚಿತ್ರವನ್ನು ಚಿತ್ರರಸಿಕರು ಮೆಚ್ಚಿಕೊಳ್ಳುತ್ತಾರೆ ಎನ್ನುವುದಕ್ಕೆ “ಕಾಂತಾರ” ಚಿತ್ರದ ಯಶಸ್ಸೇ ಸಾಕ್ಷಿ.

ನಮ್ಮ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಮನಮುಟ್ಟುವಂತೆ ಈ ಚಿತ್ರದಲ್ಲಿ ತೋರಿಸಲಾಗಿದೆ. ಇಂತಹ ಉತ್ತಮ ಚಿತ್ರವನ್ನು ನಿರ್ಮಾಣ ಮಾಡಿರುವ ಹೊಂಬಾಳೆ ಫಿಲಂಸ್ ನ ವಿಜಯ್ ಕಿರಗಂದೂರು ಹಾಗೂ ನಿರ್ದೇಶಿಸಿರುವ ರಿಷಬ್ ಶೆಟ್ಟಿ ಅವರಿಗೆ ನಿಜಕ್ಕೂ ಅಭಿನಂದನೆ ಸಲ್ಲಬೇಕು.

ಸ್ಯಾಂಡಲ್ ವುಡ್ ನಲ್ಲಿ ಈಗ ಎಲ್ಲಿ ನೋಡಿದರೂ “ಕಾಂತಾರ” ದೆ ಮಾತು. ನಿರೀಕ್ಷೆಗೂ ಮೀರಿದ ಯಶಸ್ಸು ಕೂಡ. ಇಂತಹ ಅದ್ಭುತ ಚಿತ್ರ ಬೇರೆ ಬೇರೆ ರಾಜ್ಯಗಳಲ್ಲಿ, ಅಯಾ ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಇದೇ ಅಕ್ಟೋಬರ್ 14ರ ಶುಕ್ರವಾರ ಹಿಂದಿ ಭಾಷೆಯಲ್ಲೂ “ಕಾಂತಾರ” ಚಿತ್ರ ತೆರೆ ಕಾಣುತ್ತಿದೆ.. ಮುಂಬೈ ಸೇರಿದಂತೆ ವಿವಿಧೆಡೆ ಸುಮಾರು 2500 ಕ್ಕೂ ಅಧಿಕ ಸ್ಕೀನ್ ಗಳಲ್ಲಿ “ಕಾಂತಾರ” ಪ್ರದರ್ಶನವಾಗಲಿದೆ.

ಹೊಂಬಾಳೆ ಫಿಲಂಸ್ ನಿರ್ಮಾಣದ “ಕೆ.ಜಿ.ಎಫ್ 2” ಬಾಲಿವುಡ್ ನಲ್ಲಿ ದಾಖಲೆ ಮಟ್ಟದ ಯಶಸ್ಸು ಗಳಿಸಿದ್ದು ಗಮನಾರ್ಹ. ಈಗ “ಕಾಂತಾರ” ಚಿತ್ರವನ್ನು ಅಧಿಕ ಸಂಖ್ಯೆಯ ಚಿತ್ರಮಂದಿಗಳಲ್ಲಿ ಬಿಡುಗಡೆ ಮಾಡುವ ಮೂಲಕ ಇಡೀ ದೇಶವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡು ಹಾಗೆ ಮಾಡುತ್ತಿದ್ದಾರೆ ಕನ್ನಡದ ಹೆಮ್ಮೆಯ ನಿರ್ಮಾಪಕ ವಿಜಯ್ ಕಿರಗಂದೂರು.

Categories
ಸಿನಿ ಸುದ್ದಿ

ಬ್ಯೂಟಿಫುಲ್‌ ಮ್ಯೂಸಿಕಲ್ ಲವ್ ಸ್ಟೋರಿ ರೇಮೊ ರೆಡಿ: ನವೆಂಬರ್ 25ರಂದು ರಿಲೀಸ್…

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿ ಚಿತ್ರಗಳನ್ನು ನೀಡಿರುವ ಸಿ.ಆರ್. ಮನೋಹರ್ ಅವರ ನಿರ್ಮಾಣದ , ಉತ್ತಮ ಪ್ರೇಮಕಥೆಯುಳ್ಳ ಚಿತ್ರಗಳನ್ನು ನಿರ್ದೇಶಿಸಿರುವ ಪವನ್ ಒಡೆಯರ್ ನಿರ್ದೇಶನದ ಹಾಗು ಸ್ಪುರದ್ರೂಪಿ ನಟ ಇಶಾನ್ – ಆಶಿಕಾ ರಂಗನಾಥ್ ನಾಯಕ-ನಾಯಕಿಯಾಗಿ ನಟಿಸಿರುವ, ಬ್ಯೂಟಿಫುಲ್‌ ಮ್ಯೂಸಿಕಲ್ ಲವ್ ಸ್ಟೋರಿ “ರೇಮೊ” ನವೆಂಬರ್ 25 ರಂದು ಬಿಡುಗಡೆಯಾಗಲಿದೆ. ಸಿ.ಆರ್.ಗೋಪಿ ಈ ಚಿತ್ರದ ಸಹ ನಿರ್ಮಾಪಕರು.

ನಾನು ಮೊದಲ ಬಾರಿ ಇಶಾನ್ ಅವರನ್ನು ಭೇಟಿ ಮಾಡಿದ್ದು ದುಬೈನಲ್ಲಿ. ಇಷ್ಟು ಚೆನ್ನಾಗಿದ್ದಾರೆ. ಇವರನ್ನು ಹೀರೋ ಮಾಡಬೇಕು ಅಂದು ಕೊಂಡೆ. ನಂತರ “ರೇಮೊ” ಚಿತ್ರದ ಕಥೆ ಬರೆದೆ. 2019ರಲ್ಲಿ ಚಿತ್ರೀಕರಣ ಬೆಂಗಳೂರಿನಲ್ಲಿ ಆರಂಭವಾಯಿತು. ಆನಂತರ ಹೈದರಾಬಾದ್, ಜಮ್ಮು-ಕಾಶ್ಮೀರ, ಸೌತ್ ಆಫ್ರಿಕಾ, ಸಿಂಗಾಪುರ ಮುಂತಾದ ಕಡೆ ಚಿತ್ರೀಕರಣ ನಡೆಸಲಾಯಿತು.


ಇದೊಂದು ಮ್ಯೂಸಿಕಲ್ ಲವ್ ಸ್ಟೋರಿ. ಮ್ಯಾಜಿಕಲ್‌ ಕಂಪೋಸರ್ ಅರ್ಜುನ್ ಜನ್ಯ ಅವರು ಸಂಗೀತ ನೀಡಿರುವ ಆರು ಅದ್ಭುತ ಹಾಡುಗಳು ಈ ಚಿತ್ರದಲ್ಲಿದೆ.
ಇಶಾನ್ – ಆಶಿಕಾ ರಂಗನಾಥ್ ಅವರ ಸುಂದರ ಜೋಡಿಯನ್ನು ತೆರೆ ಮೇಲೆ ನೋಡಿದವರು ಫಿದಾ ಆಗುವುದು ಖಂಡಿತಾ. ವೈದಿ ಅವರ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ “ರೇಮೊ” ಚಿತ್ರದ ಅಂದವನ್ನು ಮತ್ತಷ್ಟು ಹೆಚ್ಚಿಸಿದೆ ಎಂದರೆ ತಪ್ಪಾಗಲಾರದು.


ಸದ್ಯದಲ್ಲೇ ಲಿರಿಕಲ್ ಸಾಂಗ್, ಒಂದು ವಿಡಿಯೋ ಸಾಂಗ್ ಮತ್ತು ಟ್ರೇಲರ್ ಬಿಡುಗಡೆ ಮಾಡುತ್ತೇವೆ.
“ರೇಮೊ” ಚಿತ್ರದಲ್ಲಿ ಪರಿಶುದ್ಧ ಪ್ರೇಮಕಥೆಯೊಂದಿಗೆ ಭಾವನಾತ್ಮಕ ಸನ್ನಿವೇಶಗಳು ನೋಡುಗರ ಮನಸ್ಸಿಗೆ ಹತ್ತಿರವಾಗಲಿದೆ.

ನವೆಂಬರ್ 25 ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಚಿತ್ರವನ್ನು ತೆರೆಯ ಮೇಲೆ ನೋಡಲು ನಾನು ಕಾತುರದಿಂದ ಕಾಯುತ್ತಿದ್ದೇನೆ. ನೀವೆಲ್ಲರು ನೋಡಿ ಹರಿಸಿ ಎನ್ನುತ್ತಾರೆ ನಿರ್ದೇಶಕ ಪವನ್ ಒಡೆಯರ್.

Categories
ಸಿನಿ ಸುದ್ದಿ

ಹೊಂಬಾಳೆ ನಿರ್ಮಾಣದ ಧೂಮಂ ಶುರು: ನಾಲ್ಕು ಭಾಷೆಯ ಚಿತ್ರಕ್ಕೆ ಪವನ್ ಕುಮಾರ್ ನಿರ್ದೇಶನ…

ಇಡೀ ವಿಶ್ವವೇ ಕನ್ನಡ ಚಿತ್ರರಂಗದತ್ತ ನೋಡುವಂತಹ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಹೊಂಬಾಳೆ ಫಿಲಂಸ್ ಮೂಲಕ ವಿಜಯ್ ಕಿರಗಂದೂರು ಅವರು ನಿರ್ಮಿಸುತ್ತಿರುವ “ಧೂಮಂ” ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. ಇದು ಹೊಂಬಾಳೆ ಫಿಲಂಸ್ ನಿರ್ಮಾಣದ ಹನ್ನೆರಡನೇ ಚಿತ್ರ. ಮಲೆಯಾಳಂ, ಕನ್ನಡ, ತೆಲುಗು ಹಾಗೂ ತಮಿಳು ಭಾಷೆಗಳಲ್ಲಿ ಈ ಚಿತ್ರ ಬರಲಿದ್ದು, “ಲೂಸಿಯಾ” ಖ್ಯಾತಿಯ ಪವನ್ ಕುಮಾರ್ ನಿರ್ದೇಶನ ಮಾಡಲಿದ್ದಾರೆ.

ಮಲೆಯಾಳಂನ ಹೆಸರಾಂತ ನಟ
ಫಹಾದ್ ಫಾಸಿಲ್ ಹಾಗೂ ಅಪರ್ಣ ಬಾಲಮುರಳಿ(ಸೂರರೈ ಪೊಟ್ರು) ನಾಯಕ- ನಾಯಕಿಯಾಗಿ ನಟಿಸುತ್ತಿರುವ ಈ ಚಿತ್ರದ ಮೊದಲ ಸನ್ನಿವೇಶಕ್ಕೆ ಮಂಜುನಾಥ್ ಕಿರಗಂದೂರು ಆರಂಭ ಫಲಕ ತೋರಿದರು. ಶೈಲಜಾ ವಿಜಯ್ ಕಿರಗಂದೂರು ಕ್ಯಾಮೆರಾ ಚಾಲನೆ ಮಾಡಿದರು.


ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು “ಕೆ ಜಿ ಎಫ್” ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ಆಗಮಿಸಿ ಶುಭ ಕೋರಿದರು. ಮುಂದಿನ ತಿಂಗಳಿನಿಂದ “ಧೂಮಂ” ಚಿತ್ರದ ಚಿತ್ರೀಕರಣ ಆರಂಭವಾಗಲಿದೆ.

ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನ ಹಾಗೂ ಪ್ರೀತಾ ಜಯರಾಮನ್ ಛಾಯಾಗ್ರಹಣ “ಧೂಮಂ” ಚಿತ್ರಕ್ಕಿದೆ.

ಒಂದರ ಮೇಲೆ ಒಂದು ಹಿಟ್ ಚಿತ್ರಗಳನ್ನು ನೀಡುತ್ತಿರುವ ಹೊಂಬಾಳೆ ಫಿಲಂಸ್ ಹಾಗೂ ಪ್ರತಿಭಾವಂತ ನಿರ್ದೇಶಕ ಪವನ್ ಕುಮಾರ್ ಕಾಂಬಿನೇಶನ್ ನಲ್ಲಿ‌ ಬರುತ್ತಿರುವ ಈ ಚಿತ್ರದ ಪೋಸ್ಟರ್ ಈಗಾಗಲೇ ಕುತೂಹಲ ಹುಟ್ಟಿಸಿದೆ.
“ಧೂಮಂ” ಬಗ್ಗೆ ಅಭಿಮಾನಿ ವಲಯದಲ್ಲಿ ಸಾಕಷ್ಟು ನಿರೀಕ್ಷೆಯಿದೆ.

Categories
ಸಿನಿ ಸುದ್ದಿ

ಅಪ್ಪು ಕಪ್ ಸ್ಯಾಂಡಲ್ ವುಡ್ ಬ್ಯಾಡ್ಮಿಂಟನ್ ಲೀಗ್ ಲೋಗೋ ಲಾಂಚ್ ಇವೆಂಟ್ ಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಚಾಲನೆ: ಅ. 21ರಿಂದ ಮೂರು ದಿನಗಳ ಪಂದ್ಯಾವಳಿ ಶುರು…

ಪುನೀತ್ ರಾಜ್ ಕುಮಾರ್ ನೆನಪಿನಲ್ಲಿ ಆಯೋಜಿಸಿರುವ ‘ಅಪ್ಪು ಕಪ್’ ಸ್ಯಾಂಡಲ್ ವುಡ್ ಬ್ಯಾಡ್ಮಿಂಟನ್ ಲೀಗ್ ನ ಲೋಗೋ, ಜರ್ಸಿ, ಥೀಮ್ ಸಾಂಗ್ ಲಾಂಚ್ ಉದ್ಘಾಟನಾ ಸಮಾರಂಭ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನೇರವೇರಿದೆ. ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಆಟಗಾರರಿಗೆ ಶುಭಾಶಯ ಕೋರಿದರು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸಚಿವ ಆರ್. ಅಶೋಕ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗಿಯಾಗಿದ್ದರು.

ಅಪ್ಪು ಕಪ್ ಬ್ಯಾಡ್ಮಿಂಟನ್ ಬಗ್ಗೆ ಮಾತಾನಾಡಿದ ಸಚಿವ ಆರ್. ಅಶೋಕ, ಅಪ್ಪು ಕಪ್ ಬ್ಯಾಡ್ಮಿಂಟನ್ ಲೀಗ್ ಉದ್ಘಾಟನೆಯಾಗಿದೆ. ಎಲ್ಲರೂ ನಿಮ್ಮ ಅಭಿಪ್ರಾಯ ಹಂಚಿಕೊಂಡಿದ್ದೀರಾ. ಎಲ್ಲರೂ ನಾನೇ ಗೆಲ್ಲುತ್ತೇನೆ ಎಂದು ಹೇಳಿದ್ದೀರಾ. ಇದು ಪ್ರತಿಯೊಬ್ಬ ಆಟಗಾರನ ಆತ್ಮವಿಶ್ವಾಸ. ಎಲ್ಲರೂ ಗೆಲ್ಲಲು ಸಾಧ್ಯವಿಲ್ಲ. ಒಬ್ಬರೇ ಗೆಲ್ಲಲು ಆಗುವುದು. ಅಪ್ಪು ಹೆಸರಲ್ಲಿ ಮಾಡುತ್ತಿರುವ ಈ ಪಂದ್ಯಾವಳಿ ಯಶಸ್ವಿಯಾಗಲಿ. ಎಲ್ಲರಿಗೂ ಒಳ್ಳೆಯದಾಗಲಿ ಎಂದ ಅವರು, ಅಪ್ಪು ಒಟ್ಟಿಗಿನ ಒಡನಾಟ ಬಿಚ್ಚಿಟ್ಟರು. ರಾಜ್ ಕುಮಾರ್ ಅವರಲ್ಲಿದ್ದ ಗುಣಗಳು ಅಪ್ಪುವಿನಲ್ಲಿದ್ದವು. ನವೆಂಬರ್ ತಿಂಗಳಲ್ಲಿ ಅವರಿಗೆ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ಕೊಡಲಿದೆ ಎಂದರು.

ಕನ್ನಡ ಚಲನಚಿತ್ರ ಕಲಾವಿದರು ಮತ್ತು ತಂತ್ರಜ್ಞರು ಆಡುತ್ತಿರುವ ಈ ಪಂದ್ಯಾವಳಿಯಲ್ಲಿ ಜಾಕಿ ರೈಡರ್ಸ್, ರಾಜ್ ಕುಮಾರ್ ಕಿಂಗ್ಸ್, ಅರಸು ಹಂಟರ್ಸ್, ಬಿಂದಾಸ್ ಸೂಪರ್ ಸ್ಟಾರ್ಸ್, ಮಯೂರ್ ಸ್ಟ್ರೈಕರ್ಸ್, ಜೇಮ್ಸ್ ವಾರಿಯರ್, ಪವರ್ ಪೈಥಾನ್, ದೊಡ್ಮನೆ ಡ್ರ್ಯಾಗನ್ ಸೇರಿದಂತೆ ಎಂಟು ತಂಡಗಳು ಭಾಗಿಯಾಗಲಿವೆ.

ದಿಗಂತ್, ಸೃಜನ್ ಲೋಕೇಶ್, ವಸಿಷ್ಠ ಸಿಂಹ, ಪ್ರಿಯಾಂಕಾ ಉಪೇಂದ್ರ, ರಾಗಿಣಿ, ಕವಿತಾ ಲಂಕೇಶ್, ಶ್ವೇತಾ ಶ್ರೀವಾಸ್ತವ್, ಮಾಸ್ಟರ್ ಆನಂದ್ ತಂಡಗಳನ್ನು ಮುನ್ನೆಡೆಸಲಿದ್ದಾರೆ. ಇದರ ಜೊತೆಗೆ ಸ್ಯಾಂಡಲ್ ವುಡ್ ಸೆಲೆಬ್ರೆಟಿಗಳು ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾಗಿಯಾಗಲಿದ್ದಾರೆ.

ನಟ ಚೇತನ್ ಸೂರ್ಯ ತಮ್ಮದೇ ಸ್ಟೆಲ್ಲರ್ ಸ್ಟುಡಿಯೋ ಅಂಡ್ ಇವೆಂಟ್ ನಡಿ ಈ ಪಂದ್ಯಾವಳಿ ಆಯೋಜಿಸಿದ್ದು, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ ಮಾ ಹರೀಶ್ ಚೇತನ್ ಗೆ ಸಾಥ್ ಕೊಟ್ಟಿದ್ದಾರೆ. ಇದೇ ತಿಂಗಳ 21ರಿಂದ ಮೂರು ದಿನಗಳ ಕಾಲ ಅಪ್ಪು ನೆನಪಿನಲ್ಲಿ ಸ್ಯಾಂಡಲ್ ವುಡ್ ಬ್ಯಾಡ್ಮಿಂಟನ್ ಲೀಗ್ ನಡೆಯಲಿದೆ.

ಇನ್ನು ಜಾಕಿ ರೈಡರ್ಸ್ ತಂಡದ ಒಡೆತನದ ಜವಾಬ್ದಾರಿಯನ್ನು ಅಪ್ಲೆಕ್ಸ್ ಸಾಫ್ಟ್‌ವೇರ್ ಮಾಲೀಕರಾದ ಗಿರೀಶ್ ಕುಮಾರ್ ಹೊತ್ತುಕೊಂಡಿದ್ದರೆ, ರಾಜ್ ಕುಮಾರ್ ಕಿಂಗ್ಸ್ ತಂಡಕ್ಕೆ ನಿರ್ಮಾಪಕ ರವಿಕುಮಾರ್ ಬಿ ಮಾಲೀಕರು, ಅರಸು ಹಂಟರ್ಸ್ ಟೀಂ ನಮೋ ವೆಲ್ ನೆಸ್ ಮಾಲೀಕ ಮಹೀಂದ್ರ, ಬಿಂದಾಸ್ ಸೂಪರ್ ಸ್ಟಾರ್ಸ್ ತಂಡಕ್ಕೆ ನಿರ್ಮಾಪಕಿ ರಾಮದೇವಿ ಇದ್ದಾರೆ.

ಜೇಮ್ಸ್ ವಾರಿಯರ್ ತಂಡಕ್ಕೆ ಬ್ಯಾಡ್ಮಿಂಟನ್ ಅಕಾಡೆಮಿ ಮಾಲೀಕ ಚಂದ್ರಶೇಖರ್, ಪವರ್ ಪೈಥಾನ್ ತಂಡಕ್ಕೆ ಬಿಗ್ ಮೇಕರ್ಸ್ ಮಾಲೀಕ ಸಂತೋಷ್, ದೊಡ್ಮನೆ ಡ್ರ್ಯಾಗನ್ ತಂಡಕ್ಕೆ ನಿರ್ಮಾಪಕ ಮಂಜುನಾಥ್ ಸುಪುತ್ರ ಹರ್ಷ, ಮಯೂರ್ ಸ್ಟ್ರೈಕರ್ ತಂಡದ ಒಡೆತನವನ್ನು ಗುಬ್ಬಿ ವೀರಣ್ಣ ಮೊಮ್ಮಗ ಹಾಗೂ ಕಾರ್ನರ್ ಹೌಸ್ ಮಾಲೀಕ ಶಿವಪ್ರದೀಪ್ ಹೊತ್ತುಕೊಂಡಿದ್ದಾರೆ.

Categories
ಸಿನಿ ಸುದ್ದಿ

ರಾಂಚಿ ಟೀಸರ್ ಹೊರಬಂತು: ಇದು ರಿಯಲ್ ಸ್ಟೋರಿ ಸಿನಿಮಾ…

ರುದ್ರಾನಂದ ಆರ್ ಎನ್ ಹಾಗೂ ಅರುಣ್ ಕುಮಾರ್ ಎನ್ ನಿರ್ಮಾಣ‌ದ, ಶಶಿಕಾಂತ್ ಗಟ್ಟಿ ನಿರ್ದೇಶನದ, ನೈಜಘಟನೆ ಆಧಾರಿತ “ರಾಂಚಿ” ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರ ನವೆಂಬರ್ 11 ರಂದು ಬಿಡುಗಡೆಯಾಗುತ್ತಿದೆ.

ನಾನು ಐ ಪಿ ಸಿ ಸೆಕ್ಷನ್ 300 ಎಂಬ ಸಿನಿಮಾ ನಿರ್ದೇಶನ ಮಾಡುತ್ತಿದ್ದೆ. ಆಗ ನನಗೆ “ರಾಂಚಿ”ಯಿಂದ ಒಂದು ಕರೆ ಬರುತ್ತದೆ. ನೀವು ರೈಲ್ವೆ ಇಲಾಖೆ ಕುರಿತು ಒಂದು ಡಾಕ್ಯುಮೆಂಟರಿ ಮಾಡಿಕೊಡಬೇಕು. ರಾಂಚಿಗೆ ಬನ್ನಿ. ಅವರ ಪರಿಶುದ್ಧ ಹಿಂದಿ ಭಾಷೆ ಕೇಳಿ, ಇದು ಸರ್ಕಾರದಿಂದ ಬಂದಿರುವ ಕರೆ ಎಂದು ತಿಳಿದು ಸಂತೋಷವಾಯಿತು. ಆಮೇಲೆ ಯೋಚನೆ ಮಾಡಿದೆ. ಸರ್ಕಾರ ಇಂತಹ ವಿಷಯವನ್ನು ಟೆಂಡರ್ ಮೂಲಕ ಕರೆಯುತ್ತಾರೆ. ಇದು ಸುಳ್ಳು ಇರಬಹುದು ಎಂದು ಅಲ್ಲಿನ ಪೊಲೀಸ್ ಅಧಿಕಾರಿ ಪ್ರವೀಣ್ ಕುಮಾರ್ ಅವರಿಗೆ ಫೋನ್ ಮಾಡಿ ಈ ಬಗ್ಗೆ ಕೇಳಿದೆ. ಅವರು ಇದೆಲ್ಲಾ ಸುಳ್ಳು. ನೀವು ಇಲ್ಲಿಗೆ ಬರಬೇಡಿ ಎಂದರು. ಈ ರೀತಿ ಸಾಕಷ್ಟು ನಿರ್ದೇಶಕರು, ನಿರ್ಮಾಪಕರು ಈ ರೀತಿಯ ಕರೆಯಿಂದ ಮೋಸ ಹೋಗಿದ್ದಾರೆ. ಈ ವಿಷಯವನ್ನಿಟ್ಟುಕೊಂಡೆ “ರಾಂಚಿ” ಸಿನಿಮಾ ಮಾಡಿದ್ದೇವೆ.


ನಾಯಕ ಪ್ರಭು ಮುಂಡ್ಕರ್ ಕಥೆ ಕೇಳಿ ನಟಿಸಲು ಒಪ್ಪಿದರು. ರುದ್ರಾನಂದ ಹಾಗೂ ಅರುಣ್‌ ಕುಮಾರ್ ನಿರ್ಮಾಣಕ್ಕೆ ಮುಂದಾದರು. ನೈಜಘಟನೆ ಆಧಾರಿತ ಸಿನಿಮಾ‌ವಿದು. “ರಾಂಚಿ”ಯಲ್ಲೇ ಹೆಚ್ಚಿನ ಭಾಗದ ಚಿತ್ರೀಕರಣ ನಡೆದಿದೆ‌. 2020 ರಲ್ಲೇ ಸೆನ್ಸಾರ್ ಆಗಿತ್ತು. ಕೊರೋನ ಕಾರಣದಿಂದ ಬಿಡುಗಡೆ ವಿಳಂಬವಾಯಿತು. ಒಂದೊಳ್ಳೆ ಸಿನಿಮಾ ಮಾಡಿರುವ ಖುಷಿಯಿದೆ. ದಿವ್ಯ ಉರುಡಗ, ಟೋಟ ರಾಯ್ ಚೌಧರಿ, ಆರತಿ ನಾಯರ್, ಲಕ್ಷ್ಮಣ್ ಗೌಡ, ಸುರೇಶ್ ಹೆಬ್ಳೀಕರ್, ಉಷಾ ಭಂಡಾರಿ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ ಎಂದು ಚಿತ್ರದ ಕುರಿತು ನಿರ್ದೇಶಕ ಶಶಿಕಾಂತ್ ಗಟ್ಟಿ ಮಾಹಿತಿ ನೀಡಿದರು.

ಕೋವಿಡ್ ನಂತರ ಜನ ಸಿನಿಮಾ ನೋಡುವ ರೀತಿ ಬದಲಾಗಿದೆ. ಜನರ ನಿರೀಕ್ಷೆ ಬೇರೆ ತರಹ ಇದೆ.
” ಕೆ.ಜಿ.ಎಫ್”, “ಚಾರ್ಲಿ”, ” ಕಾಂತಾರ” ದಂತಹ ಚಿತ್ರಗಳ ಗೆಲುವು ಇದಕ್ಕೆ ಸಾಕ್ಷಿ. ನಾನು ಸೈಂಟಿಸ್ಟ್ ಆಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದೆ. ಆನಂತರ ಚಿತ್ರರಂಗಕ್ಕೆ ಬಂದೆ. ನಾನು “ಡಬಲ್ ಇಂಜಿನ್” ಚಿತ್ರದಲ್ಲಿ ನಟಿಸಬೇಕಾದರೆ ಶಶಿಕಾಂತ್ ಈ ಚಿತ್ರದ ಕಥೆ ಹೇಳಿದರು. ನನಗೂ ನೈಜಘಟನೆ ಆಧಾರಿತ ಚಿತ್ರದಲ್ಲಿ ನಟಿಸಬೇಕೆಂಬ ಆಸೆಯಿತ್ತು. ಆ ಸಮಯದಲ್ಲಿ ಈ ಕಥೆ ಕೇಳಿ, ನಟಿಸಲು ಒಪ್ಪಿದೆ ಎಂದರು ನಟ ಪ್ರಭು ಮುಂಡ್ಕರ್.

ಪ್ರಭು ಅವರ ಮೂಲಕ ನಿರ್ದೇಶಕ ಶಶಿಕಾಂತ್ ಗಟ್ಟಿ ಅವರ ಪರಿಚಯವಾಯಿತು. ಅವರು ಹೇಳಿದ ಕಥೆ ಮನಸ್ಸಿಗೆ ಹತ್ತಿರವಾಯಿತು. ನಿರ್ಮಾಣಕ್ಕೆ ಮುಂದಾದೆ ಎಂದು ನಿರ್ಮಾಪಕ ಅರುಣ್ ಕುಮಾರ್ ತಿಳಿಸಿದರು. ಚಿತ್ರದಲ್ಲಿ ನಟಿಸಿರುವ ಆರತಿ ನಾಯರ್, ಲಕ್ಷ್ಮಣ್ ಗೌಡ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Categories
ಸಿನಿ ಸುದ್ದಿ

ಹಬೀಬಿ ಅಂತ ಹಾಡಿ ಕುಣಿದ ಜಯರಾಜ್! ಕನ್ನಡಕ್ಕೆ ಬಂದ ಪಂಜಾಬಿ ಬೆಡಗಿ: ಡಾಲಿ ಜೊತೆ ಸಖತ್ ಸ್ಟೆಪ್…

ನಟ ಡಾಲಿ ಧನಂಜಯ ಕನ್ಮಡ ಚಿತ್ರ ರಂಗದಲ್ಲಿ ಸಕಲಕಲಾವಲ್ಲಭ ಅಂತಾನೇ ಪ್ರಖ್ಯಾತಿ . ಡಾಲಿ ಧನಂಜಯ್ ಅಭಿನಯದ ಹೆಡ್ ಬುಷ್ ಸಿನಿಮಾ ತೆರೆಗೆ ಬರಲು ಸಿದ್ದವಾಗಿದೆ. ಸಿನಿಮಾ ತಂಡ ಭರ್ಜರಿ ಪ್ರಚಾರದಲ್ಲಿ ಬ್ಯುಸಿ ಆಗಿದೆ. ಸದ್ಯ ಪ್ರೇಕ್ಷಕರ ಹಾಗೂ ಪಡ್ಡೆ ಹುಡುಗರ ಹಾರ್ಡ್ ಬೀಟ್ ಹೆಚ್ಚು ಮಾಡೋ ಹೊಸ ಸಾಂಗ್ ರಿಲೀಸ್ ಆಗಿದೆ.

ಹೆಡ್ ಬುಷ್ ಚಿತ್ರದ ಪಾಯಲ್ ರಜಪೂತ್ ಹೆಜ್ಜೆ ಹಾಕಿರೋ ಹಬೀಬಿ ಸಾಂಗ್ ರಿಲೀಸ್ ಆಗಿದೆ . ಪಂಜಾಬಿ ಬೆಡಗಿ ಪಾಯಲ್ ಮೈಮಾಟಕ್ಕೆ ಹುಡುಗರು ಪಾಗಲ್ ಆಗೋದು ಗ್ಯಾರೆಂಟಿ.

ಟಾಲಿವುಡ್ ನಲ್ಲಿ ಮಿಂಚಿನ ಸಂಚಲನ ಮೂಡಿಸಿದ್ದ ಪಾಯಲ್ ಈಗ ಸ್ಯಾಂಡಲ್ ವುಡ್ ಗೆ ಹೆಜ್ಜೆ ಇಟ್ಟಿದ್ದು ಜೈರಾಜ್ ಜೊತೆ ಮಸ್ ಆಗಿ ಹೆಜ್ಜೆ ಹಾಕಿದ್ದಾರೆ.

ಇಷ್ಟು ದಿನ ಅಭಿನಯದ ಮೂಲಕವೇ ಪ್ರೇಕ್ಷಕರನ್ನ ರಂಜಿಸಿ ನಟ ರಾಕ್ಷಸ ಎಂದು ಹೆಸರು ಪಡೆದುಕೊಂಡಿದ್ದ ಧನಂಜಯ್ ಈ ಹಾಡಿನ ಮೂಲಕ ಅಭಿಮಾನಿಗಳಿಂದ ಪದ ರಾಕ್ಷಸ ಎಂದು ಕರೆಸಿಕೊಳ್ತಿದ್ದಾರೆ. ಯೆಸ್ ಸದ್ಯ ಬಿಡುಗಡೆ ಆಗಿರೋ ಹೆಡ್ ಬುಷ್ ಸಿನಿಮಾದ ಹಬೀಬಿ ಹಾಡನ್ನ ಖುದ್ದು ಡಾಲಿ ಧನಂಜಯ್ ಅವರೇ ಬರೆದಿರೋದು ವಿಶೇಷ.

ಈ ಹಿಂದೆ ಬಡವರಾಸ್ಕಲ್, ಆರ್ಕ್ಯಾಸ್ಟ್ರಾ ಚಿತ್ರಗಳಿಗೆ ಸಾಹಿತ್ಯ ಬರೆದ ಮೇಲೆ, ಹೆಡ್ ಬುಷ್ ಗಾಗಿ ರಮಿಸೋ, ರಂಜಿಸೋ ಸಾಹಿತ್ಯ ಬರೆದಿದ್ದಾರೆ ಡಾಲಿ ಧನಂಜಯ, ಚರಣ್ ರಾಜ್ ಸಂಗೀತ ಅರೆಬಿಕ್ ಶೈಲಿಯ ಕ್ಯಾಬರೇ ಹಾಡಿಗೆ ಸದ್ಯ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹೆಡ್ ಬುಸ್ ಸಿನಿಮಾ ಇದೇ ತಿಂಗಳ 21ಕ್ಕೆ ತೆರೆಗೆ ಬರುತ್ತಿದ್ದು, ಡಾಲಿ ಧನಂಜಯ್ ಜಯರಾಜ್ ಆಗಿ ಪ್ರೇಕ್ಷಕರ ಮುಂದೆ ರೆಟ್ರೋ ಸ್ಟೈಲ್ ನಲ್ಲಿ ಎಂಟ್ರಿಕೊಡಲಿದ್ದಾರೆ.

ಅಗ್ನಿ ಶ್ರೀಧರ್ ಕತೆ , ಶೂನ್ಯ ಅವ್ರ ನಿರ್ದೇಶನ ಸಿನಿಮಾಗಿದ್ದು ಸೋಮಣ್ಣ ಟಾಕೀಸ್ ಹಾಗೂ ಡಾಲಿ ಪಿಚ್ಚರ್ ಅಡಿಯಲ್ಲಿ ಚಿತ್ರ ನಿರ್ಮಾಣ ಆಗಿದೆ. ಜೀ ಸ್ಟುಡಿಯೋಸ್ ಸಿನಿಮಾವನ್ನ ವಿತರಣೆ ಮಾಡುತ್ತಿದೆ. ಸಿನಿಮಾದಲ್ಲಿ ಬಹು ದೊಡ್ಡ ತಾರಾಬಳಗವಿದ್ದು ಲೂಸ್ ಮಾದ ಯೋಗಿ , ನಿರಂಜನ್ ,ರೋಷನ್ ಶ್ರುತಿ ಹರಿಹರನ್ , ಇನ್ನು ಅನೇಕರು ಅಭಿನಯಿಸಿದ್ದಾರೆ…

Categories
ಸಿನಿ ಸುದ್ದಿ

ಮತ್ತೆ ಉಪ್ಪಿ- ಶಿವಣ್ಣ ಕಾಂಬಿನೇಷನ್ ಸಿನಿಮಾ: ಅರ್ಜುನ್‌ ಜನ್ಯ ನಿರ್ದೇಶನದ ಪ್ಯಾನ್ ಇಂಡಿಯಾ ಚಿತ್ರ…

ಇತ್ತೀಚೆಗಷ್ಟೇ ‘ಗಾಳಿಪಟ 2’ ಎಂಬ ಬ್ಲಾಕ್ಬಸ್ಟರ್ ಚಿತ್ರವನ್ನು ತಮ್ಮ ಸೂರಜ್ ಪ್ರೊಡಕ್ಷನ್ಸ್ನಡಿ ನಿರ್ಮಿಸಿದ್ದ ರಮೇಶ್ ರೆಡ್ಡಿ, ಇದೀಗ ಇನ್ನೊಂದು ದೊಡ್ಡ ಸಾಹಸಕ್ಕೆ ಕೈ ಹಾಕಿದ್ದಾರೆ. ಅರ್ಜುನ್ ಜನ್ಯ ನಿರ್ದೇಶನದಲ್ಲಿ, ಶಿವರಾಜಕುಮಾರ್ ಅಭಿನಯದಲ್ಲಿ ಅವರು ‘45’ ಎಂಬ ಪ್ಯಾನ್ ಇಂಡಿಯಾ ಚಿತ್ರವನ್ನು ನಿರ್ಮಿಸುತ್ತಿರುವುದು ಗೊತ್ತೇ ಇದೆ. ಈಗ ಈ ಚಿತ್ರಕ್ಕೆ ಉಪೇಂದ್ರ ಸೇರ್ಪಡೆಯಾಗಿದ್ದು, ಅವರೂ ಇನ್ನೊಬ್ಬ ನಾಯಕನಾಗಿ ಅಭಿನಯಿಸುತ್ತಿದ್ದಾರೆ.


ಶಿವಣ್ಣ ಮತ್ತು ಉಪೇಂದ್ರ ಜೊತೆಯಾಗಿ ಕೆಲಸ ಮಾಡುತ್ತಿರುವುದು ಇದು ನಾಲ್ಕನೇ ಬಾರಿ. ಈ ಹಿಂದೆ ‘ಓಂ’ ಚಿತ್ರದಲ್ಲಿ ಶಿವಣ್ಣ ಅವರನ್ನು ನಿರ್ದೇಶಿಸಿದ್ದರು ಉಪೇಂದ್ರ. ಆ ನಂತರ ಇಬ್ಬರೂ ‘ಪ್ರೀತ್ಸೇ‘ ಮತ್ತು ‘ಲವ-ಕುಶ’ ಚಿತ್ರದಲ್ಲಿ ಜೊತೆಯಾಗಿ ನಟಿಸಿದ್ದರು. ಈಗ ದೊಡ್ಡ ಗ್ಯಾಪ್ನ ನಂತರ ಅವರಿಬ್ಬರೂ ‘45’ ಚಿತ್ರದಲ್ಲಿ ಮತ್ತೆ ಒಟ್ಟಾಗಿ ನಟಿಸಲಿದ್ದಾರೆ.


ಶಿವರಾಜಕುಮಾರ್ ಅವರ ಹುಟ್ಟುಹಬ್ಬದಂದು ಅಧಿಕೃತವಾಗಿ ಘೋಷಣೆಯಾದ ‘45’, ಈಗ ಪ್ರೀ-ಪ್ರೊಡಕ್ಷನ್ ಹಂತದಲ್ಲಿದೆ. ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದ ಚಿತ್ರೀಕರಣವು ಡಿಸೆಂಬರ್ನಿಂದ ಅಧಿಕೃತವಾಗಿ ಪ್ರಾರಂಭವಾಗಲಿದೆ.


ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಅವರೇ ಕಥೆ-ಚಿತ್ರಕಥೆ ಬರೆದಿದ್ದು, ನಿರ್ದೇಶನದ ಜೊತೆಗೆ ಸಂಗೀತ ನಿರ್ದೇಶನದ ಜವಾಬ್ದಾರಿಯನ್ನು ಸಹ ಅವರೇ ಹೊತ್ತಿದ್ದಾರೆ. ಈಗಾಗಲೇ ಚಿತ್ರ ಪ್ರಾರಂಭವಾಗುವುದಕ್ಕೆ ಮುನ್ನವೇ ಚಿತ್ರದ ಆಡಿಯೋ ಹಕ್ಕುಗಳಿಗೆ ಭಾರೀ ಡಿಮ್ಯಾಂಡ್ ಉಂಟಾಗಿದೆ.

Categories
ಸಿನಿ ಸುದ್ದಿ

ಪಂಖುರಿ ಸಿನಿಮಾ ಟೀಸರ್ ರಿಲೀಸ್ ಆಯ್ತು: ಇದು ಕುಂದನಾ ರೆಡ್ಡಿ ಚಿತ್ರ…

ದಿನ ಕಳೆದಂತೆ ಹೊಸ ಬಗೆಯ ಚಿತ್ರಗಳು ರಿಲೀಸ್ ಆಗುತ್ತಲೇ ಇವೆ. ಆ ಸಾಲಿಗೆ ಈಗ ಪ್ರೇಕ್ಷಕರ ಮುಂದೆ ಬರಲು ಪಂಖುರಿ ಚಿತ್ರ ರೆಡಿಯಾಗುತ್ತಿದೆ.
ಅದಕ್ಕೂ ಮುನ್ನ ಚಿತ್ರದ ಟೀಸರ್ ರಿಲೀಸ್ ಆಗಿದ್ದು ಎಲ್ಲೆಡೆ ಒಳ್ಳೆಯ ಮೆಚ್ಚುಗೆ ಪಡೆದುಕೊಂಡಿದೆ. ಇನ್ನು ಚಿತ್ರದ ನಾಯಕಿ ಕುಂದನಾ ರೆಡ್ಡಿ ಅವರು ಇತ್ತೀಚೆಗೆ ತಮ್ಮ ಹುಟ್ಟುಹಬ್ಬವನ್ನು ಬೆತೆಲ್ ಚೈಲ್ಡ್ ಕೇರ್ ಸೆಂಟರ್ ನ ಮಕ್ಕಳ ಜೊತೆ ಅರ್ಥಪೂರ್ಣವಾಗಿ ಆಚರಿಸಿಕೊಂಡರು. A2Music ನಲ್ಲಿ ಚಿತ್ರದ ಟೀಸರ್ ಬಿಡುಗಡೆ ಆಗಿದ್ದು, ಸಾಕಷ್ಟು ವೀಕ್ಷಣೆ ಪಡೆದುಕೊಂಡಿದೆ.

ಕುಂದನಾ ನಟಿಸಿರುವ ಪಂಖುರಿ ಸಿನಿಮಾ ಮಹಿಳಾ ದೌರ್ಜನ್ಯದ ವಿರುದ್ಧದ ಕಥಾಹಂದರವಿದೆ. ಒಂಟಿ ಹೆಣ್ಣಿಗೆ ಸಮಾಜದಲ್ಲಿ ಎದುರಾಗುವ ಸಮಸ್ಯೆಗಳೇನು ಎಂಬ ಅಂಶವನ್ನು ಇಲ್ಲಿ ತೋರಿಸಲಾಗಿದೆ. ಕುಂದನಾ ಜತೆ ಶಶಿಶೇಖರ್ ಪ್ರಧಾನ ಪಾತ್ರದಲ್ಲಿ ನಟಿಸಿದ್ದಾರೆ.

ಸಿನಿಮಾ ಕುರಿತು ಹೇಳುವ ಕುಂದನಾ, ಉತ್ತಮ ಪಾತ್ರದ ನಿರೀಕ್ಷೆಯಲ್ಲಿದ್ದ ನನಗೆ ಉತ್ತಮ ಅವಕಾಶ ಸಿಕ್ಕಿದೆ ಎನ್ನುತ್ತಾರೆ.

ಅಂದಹಾಗೆ, ಪ್ರಕೃತಿ ಪಿಕ್ಚರ್ಸ್ ಬ್ಯಾನರ್ ನಲ್ಲಿ , ಅಫ್ಜಲ್ ಅವರ ಸಹಯೋಗದೊಂದಿಗೆ ಸಿನಿಮಾ ನಿರ್ಮಾಣದ ಮೂಲಕ ಯುವ ನಿರ್ಮಾಪಕಿ ಆಗಿಯೂ ಪಂಖುರಿ ಚಿತ್ರದ ನಟಿ ಕುಂದನಾ ಕಾರ್ಯನಿರ್ವಹಿಸುತ್ತಿದ್ದಾರೆ. ಇಲ್ಲಿ ಶಾರದ ಪಾತ್ರದಲ್ಲಿ ಕುಂದನಾ ಕಾಣಿಸಿಕೊಳ್ಳುತ್ತಿದ್ದಾರೆ.

ಅದೇನೆ ಇರಲಿ, ಚಿಕ್ಕಂದಿನಲ್ಲೇ ಸೆಲೆಬ್ರಿಟಿಯಾಗುವ ಆಸೆ ಕಂಡಿದ್ದ ಕುಂದನಾ, ತಮ್ಮ ಆಸೆ ಈಡೇರಿಸಿಕೊಳ್ಳಲು ಹಗಲಿರಳು ಶ್ರಮಿಸಿ ಇಂದು ಕಂಡ ಕನಸನ್ನು ಈಡೇರಿಸಿಕೊಂಡಿದ್ದಾರೆ. ಬಾಲ್ಯದ ದಿನಗಳಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿ ಮುಂದಿದ್ದರು . ಇದೀಗ ‘ಪಂಖುರಿ’ ಚಿತ್ರದ ಮೂಲಕ ಕನ್ನಡ ಚಂದನವನಕ್ಕೆ ಪಾದಾರ್ಪಣೆ ಮಾಡಿದ್ದಾರೆ.

ಮೂಲತಃ  ಆಂಧ್ರದವರಾದ ಕುಂದನಾ, ಬೆಂಗಳೂರಿನಲ್ಲಿ. ಬದುಕು ಕಟ್ಟಿಕೊಂಡಿದ್ದು , ಕನ್ನಡವನ್ನು ಲೀಲಾಜಾಲವಾಗಿ ಮಾತನಾಡುವ ಮೂಲಕ ಇಲ್ಲಿಯೇ ಗಟ್ಟಿ ನೆಲೆ ಕಾಣುವ ಆಸೆ ಹೊಂದಿದ್ದಾರೆ. ಇ ಕಾಮರ್ಸ್ ನಲ್ಲಿ ಸ್ನಾಕೋತ್ತರ ಪದವಿ ಪಡೆದಿರುವ ಅವರು, ಎಂಎನ್ ಸಿ ಕಂಪನಿಯಲ್ಲಿ ದೊಡ್ಡ ಹುದ್ದೆಯಲ್ಲಿದ್ದಾರೆ. ಆದರೆ, ಕನ್ನಡ ಚಿತ್ರರಂಗದ ಮೇಲಿರುವ ಆಸಕ್ತಿ ಪಂಖುರಿ ಚಿತ್ರದ ಮೂಲಕ ತೆರೆಗೆ ಬರುತ್ತಿದ್ದಾರೆ.

ಈ ಚಿತ್ರಕ್ಕೆ ದೋಸ್ತಿ ವಿ ಆನಂದ ನಿರ್ದೇಶಕರು. ಇನ್ನೂ ಹೆಸರಿಡದ ಎರಡು ಸಿನಿಮಾಊ ಇವರು ಕಾಣಿಸಿಕೊಳ್ಳಲಿದ್ದಾರೆ.

ಕುಂದನ ಕೇವಲ ನಟನೆ ಮಾತ್ರವಲ್ಲದೆ ನೃತ್ಯದಲ್ಲೂ ಸೈ ಎನಿಸಿಕೊಂಡಿದ್ದಾರೆ. ಶಾಲಾ ದಿನಗಳು ಮತ್ತು ಕೆಲಸದಲ್ಲಿದ್ದಾಗ ಸಂಸ್ಥೆಯ ಕಾರ್ಯಕ್ರಮಗಳಲ್ಲಿಯೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಮಾಡಿದ ಅನುಭವ ಇದೆ.

Categories
ಸಿನಿ ಸುದ್ದಿ

ಮರ್ಡರ್ ಲೈವ್ ನಲ್ಲಿ ಶರ್ಮಿಳಾ ಮಾಂಡ್ರೆ! ಹಾಲಿವುಡ್ ಶೈಲಿಯ ಕನ್ನಡ, ತಮಿಳು ಸಿನಿಮಾ…

ಕನ್ನಡತಿ ಶರ್ಮಿಳಾ ಮಾಂಡ್ರೆ ‘ಮಿರತ್ತಲ್’ ಎಂಬ ತಮಿಳು ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದರು. ಈಗ 10 ವರ್ಷಗಳ ನಂತರ ‘ಮರ್ಡರ್ ಲೈವ್’ ಎಂಬ ಹಾಲಿವುಡ್ ಶೈಲಿಯ ಕನ್ನಡ ಮತ್ತು ತಮಿಳು ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದಾರೆ.
‘ಮರ್ಡರ್ ಲೈವ್’ ಒಂದು ಸೈಕಲಾಜಿಕಲ್ ಕ್ರೈಮ್ ಥ್ರಿಲ್ಲರ್ ಚಿತ್ರವಾಗಿದ್ದು, ‘ಬ್ಲೈಂಡ್ ಡೇಟ್’, ‘ಸ್ಕೈ ಹೈ’, ‘ಗ್ಲಿಚ್’ ಮುಂತಾದ ಹಾಲಿವುಡ್ ಚಿತ್ರಗಳನ್ನು ನಿರ್ದೇಶಿಸಿರುವ ನಿಕೋ ಮಾಸ್ತೋರಾಕಿಸ್ ಅವರ ಕಥೆಯನ್ನು ಆಧರಿಸಿದೆ.

ಸೈಕೋ ಕಿಲ್ಲರ್ ಮತ್ತು ನಾಲ್ವರು ಮಹಿಳೆಯರ ಸುತ್ತ ಸುತ್ತುವ ಈ ಚಿತ್ರದಲ್ಲಿ, ಕಷ್ಟದ ಪರಿಸ್ಥಿಯಲ್ಲಿ ಸಾಮಾನ್ಯ ಮನುಷ್ಯರೂ ಹೇಗೆ ಸಿಡಿದೆದ್ದು ಹೀರೋಗಳಾಗುತ್ತಾರೆ ಎಂದು ಹೇಳಲಾಗಿದೆ.


ಸೈಕೋ ಕಿಲ್ಲರ್ ಒಬ್ಬ ಜಗತ್ತಿನ ಯಾವುದೇ ಕಂಪ್ಯೂಟರ್ ಹ್ಯಾಕ್ ಮಾಡಿ, ಅದರ ಮೂಲಕ ಲೈವ್ ಆಗಿ ಕೊಲೆ ಮಾಡುವ ಕಥೆ ಇರುವ ಈ ಚಿತ್ರವನ್ನು ಸಂಪೂರ್ಣವಾಗಿ ಇಂಗ್ಲೆಂಡ್‌ನಲ್ಲಿ ಚಿತ್ರೀಕರಿಸಲಾಗಿದೆ. ಸೂರ್ಯ ಅಭಿನಯದ ‘ಇಟಿ’ ಮತ್ತು ಶಿವಕಾರ್ತಿಕೇಯನ್ ಅಭಿನಯದ ‘ಡಾಕ್ಟರ್’ ಚಿತ್ರಗಳಲ್ಲಿ ವಿಲನ್ ಪಾತ್ರ ಮಾಡಿದ್ದ ವಿನಯ್ ರೈ, ಈ ಚಿತ್ರದಲ್ಲಿ ಬಹಳ ಕ್ಲಿಷ್ಟಕರವಾದ ನೆಗೆಟಿವ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಹಲವು ವಿಭಿನ್ನ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿರುವ ಕನ್ನಡತಿ ಶರ್ಮಿಳಾ ಮಾಂಡ್ರೆ, ಈ ದ್ವಿಭಾಷಾ ಚಿತ್ರದಲ್ಲಿ ನಾಯಕಿಯಾಗಿದ್ದಾರೆ. ಇವರಿಬ್ಬರ ಜೊತೆಗೆ ಹಾಲಿವುಡ್ ನಟಿ ನವೋಮಿ ವಿಲ್ಲೋ ಸಹ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಡಾಟ್‌ಕಾಮ್ ಎಂಟರ್ಟೈನ್ಮೆಂಟ್ ಸಂಸ್ಥೆಯಡಿ ಈ ಚಿತ್ರ ನಿರ್ಮಾಣವಾಗಿದ್ದು, ಮುರುಗೇಶ್ ನಿರ್ದೇಶನ ಮಾಡಿದ್ದಾರೆ. ಅಪಾರ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಚಿತ್ರವನ್ನು ಅತ್ಯುನ್ನತ ತಂತ್ರಜ್ಞಾನ ಬಳಸಿ ಚಿತ್ರೀಕರಣ ಮಾಡಲಾಗಿದೆ.

ಪ್ರಶಾಂತ್ ಡಿ ಸಂಗೀತ ಸಂಯೋಜಿಸಿರುವ ಈ ಚಿತ್ರಕ್ಕೆ ಮದನ್ ಅವರ ಸಂಕಲನವಿದೆ.
ಈಗಾಗಲೇ ‘ಮರ್ಡರ್ ಲೈವ್’ ಚಿತ್ರದ ಚಿತ್ರೀಕರಣ ಮುಗಿದಿದ್ದು, ಇತ್ತೀಚೆಗೆ ಚಿತ್ರದ ಮೊದಲ ಪೋಸ್ಟರ್ ಬಿಡುಗಡೆಯಾಗಿದೆ.

error: Content is protected !!