Categories
ಸಿನಿ ಸುದ್ದಿ

‘Love..ಲಿ’ ಸಿಂಹ ಎಂದ ಮಲೆನಾಡ ಬೆಡಗಿ; ವಸಿಷ್ಠಗೆ ಸಮೀಕ್ಷಾ ಜೋಡಿ

ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಾಯಕಿ…ಮಲೆನಾಡ ಬೆಡಗಿ ಸಮೀಕ್ಷಾ ಈಗ ಬೆಳ್ಳಿತೆರೆ ಮೇಲೆ ದಿಬ್ಬಣ ಹೋಗುತ್ತಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಕೊನೆಯ ಸಿನಿಮಾ ಜೇಮ್ಸ್ ನಲ್ಲಿ ಜಗಮಗಿಸಿದ್ದ ಸಮೀಕ್ಷಾ ಈಗ ಚಿಟ್ಟೆಯೊಟ್ಟಿಗೆ ಮಿಂಚಲು ಸಜ್ಜಾಗಿದ್ದಾರೆ.

ಚಿಟ್ಟೆಯ ‘Love…ಲಿ’ ಸಿನಿಮಾದಲ್ಲಿ ಸಮೀಕ್ಷಾ

ವಸಿಷ್ಠ ಸಿಂಹ ನಾಯಕನಾಗಿ ಬಣ್ಣ ಹಚ್ಚಿರುವ ಮತ್ತೊಂದು‌ ಬಹುನಿರೀಕ್ಷಿತ ಸಿನಿಮಾ love..ಲಿ ಇತ್ತೀಚೆಗಷ್ಟೇ ಸಿನಿಮಾದ ಮುಹೂರ್ತ ನೆರವೇರಿದ್ದು, ಈಗ ಚಿತ್ರತಂಡ ಪಾತ್ರವೊಂದನ್ನು ಪರಿಚಯಿಸ್ತಿದೆ. ಗಣೇಶ್ ಹಾಗೂ ಭಾವನಾ ನಟನೆಯ 99 ಸಿನಿಮಾ, ಫ್ಯಾನ್, ಜೇಮ್ಸ್ ಸಿನಿಮಾದಲ್ಲಿ ಅಭಿನಯಿಸಿದ್ದ ಸಮೀಕ್ಷಾ ಈಗ love…ಲಿ ಸಿನಿಮಾದಲ್ಲಿ ಬಣ್ಣ ಹಚ್ಚಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. Love..ಲಿ ಸಿನಿಮಾದಲ್ಲಿ‌ ಸಮೀಕ್ಷಾ ಕಾರ್ಪೋರೇಟ್ ಹುಡ್ಗಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

ಅಂದಹಾಗೇ love..ಲಿ ಸಿನಿಮಾ ರೋಮ್ಯಾಂಟಿಕ್,ಲವ್ ಸ್ಟೋರಿ ಸಿನಿಮಾವಾಗಿದ್ದು, ಚೇತನ್ ಕೇಶವ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಎಂ ಆರ್ ರವೀಂದ್ರ ಕುಮಾರ್ ನಿರ್ಮಾಣ, ಅನೂಪ್ ಸೀಳಿನ್ ಸಂಗೀತ, ಅಶ್ವಿನ್ ಕೆನೆಡಿ ಛಾಯಾಗ್ರಹಣ ಸಿನಿಮಾಕ್ಕಿದೆ.

Categories
ಸಿನಿ ಸುದ್ದಿ

ಬೆಂಕಿ ಬಿರುಗಾಳಿ ಹಾಡು! ಮೋಹಕ ತಾರೆ ರಮ್ಯಾ ರಿಲೀಸ್ ಮಾಡಿದ ಕಲರ್ ಫುಲ್ ಸಾಂಗು…

ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಾಯಕ ನಟ ಅನೀಶ್ ತೇಜೇಶ್ವರ್ ನಟಿಸುತ್ತಿರುವ ಬಹು ನಿರೀಕ್ಷಿತ ಸಿನಿಮಾ ಬೆಂಕಿ ಅಂಗಳದಿಂದ ಮೊದಲ ಹಾಡು ಬಿಡುಗಡೆಯಾಗಿದೆ. ಮೋಹಕ ತಾರೆ ರಮ್ಯಾ ಹಾಡು ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭಾಶಯ ಕೋರಿದ್ದಾರೆ.

ಒಕೆನಾ ಇದು ಅನೀಶ್ ಡ್ಯಾನ್ಸಿಂಗ್‌ ನಂಬರ್

ಸಖತ್ ಕ್ಯಾಚಿ-ಮ್ಯಾಚಿಯಾಗಿರುವ ಒಕೆನಾ ಹಾಡಿಗೆ ನಾಗಾರ್ಜುನ್ ಶರ್ಮಾ ಸಾಹಿತ್ಯ ಬರೆದಿದ್ದು, ಆನಂದ್ ರಾಜವಿಕ್ರಮ್ ಸಂಗೀತ‌ ನೀಡಿದ್ದು, ಐಶ್ವರ್ಯ ರಂಗರಾಜನ್ ಹಾಗೂ ಪಂಚಮ್ ಜೀವ ಧ್ವನಿಯಾಗಿದ್ದಾರೆ.

ಕಲರ್ ಫುಲ್ ಆಗಿ ಮೂಡಿ‌ ಬಂದಿರುವ ಹಾಡಿನಲ್ಲಿ ಅನೀಶ್ ಹಾಗೂ‌ ಸಂಪದ ಜಬರ್ದಸ್ತ್ ಸ್ಟೆಪ್ಸ್ ಹಾಕಿದ್ದು, ಇದು ಅನೀಶ್ ಡ್ಯಾನ್ಸಿಂಗ್‌ ನಂಬರ್ ಗುರು ಅಂತಾ ಮೆಚ್ಚುಗೆ ಮಾತುಗಳು ವ್ಯಕ್ತವಾಗುತ್ತಿವೆ.

ಪಕ್ಕ ಮಾಸ್‌ ಹಾಗೂ ಕಮರ್ಷಿಯಲ್‌ ಬೆಂಕಿ ಸಿನಿಮಾವನ್ನು ವಿಂಕ್‌ವಿಷಲ್‌ ಪ್ರೊಡಕ್ಷನ್‌ ಬ್ಯಾನರ್‌ ನಡಿ ಅನೀಶ್ ತೇಜೇಶ್ವರ್ ನಿರ್ಮಾಣ ಮಾಡ್ತಿದ್ದು, ಇದು ಇವರ ಹತ್ತನೇ ಸಿನಿಮಾವಾಗಿದೆ. ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎ.ಆರ್‌.ಬಾಬು ಅವರ ಪುತ್ರ ಶಾನ್‌ ಈ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ.

ಅಣ್ಣ-ತಂಗಿ ಸೆಂಟಿಮೆಂಟ್‌ ಕಥೆಯ ಜೊತೆಗೆ, ಹಳ್ಳಿ ಸೊಡಗಿನ ಕಂಪು ಚೆಲ್ಲುವ ಬೆಂಕಿ ಸಿನಿಮಾದಲ್ಲಿ ಶೃತಿ ಪಾಟೀಲ್, ಅಚ್ಯುತ್‌ ಕುಮಾರ್‌, ಸಂಪತ್‌, ಉಗ್ರಂ ಮಂಜು, ಹರಿಣಿ ಸೇರಿದಂತೆ ಅನುಭವಿ ಕಲಾ ಬಳಗವಿದ್ದು, ವೀನಸ್‌ ನಾಗರಾಜ್‌ ಮೂರ್ತಿ ಛಾಯಾಗ್ರಹಣವಿದೆ.

Categories
ಸಿನಿ ಸುದ್ದಿ

ಈ ಪ್ರಶಸ್ತಿ ನಿರೀಕ್ಷಿಸಿರಲಿಲ್ಲ; ಅತ್ಯುತ್ತಮ ನಟ ಪ್ರಶಸ್ತಿ ಪಡೆದ ವಿಶೃತ್ ನಾಯಕ್ ಭಾವುಕ ಮಾತು…

ವಿಶೃತ್ ನಾಯಕ್ ನಟಿಸಿ ನಿರ್ದೇಶಿಸಿರುವ ಮಂಜರಿ ಸಿನಿಮಾಗೆ 2017 ನೇ ರಾಜ್ಯ ಪ್ರಶಸ್ತಿ ಲಭಿಸಿದೆ. ಈ ಚಿತ್ರದ ನಟನೆಗಾಗಿ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ನೀಡಲಾಗಿದೆ

ಪ್ರಶಸ್ತಿ ಸ್ವೀಕರಿಸಿದ ವಿಶೃತ್, ಮಾಧ್ಯಮ ಎದುರು ತಮ್ಮ ಜರ್ನಿ ಕುರುತು ಹೇಳಿದ್ದು ಹೀಗೆ. ‘ನಾನು ಕುಣಿಗಲ್ ನ ಹೊಸಕೆರೆಯವನು. ಅಲ್ಲಿಂದ ಬೆಂಗಳೂರಿಗೆ ಬಂದೆ. ಟ್ರಾವೆಲ್ ಒಂದರ ಓನರ್ ಆದೆ. ಕಾರಣಾಂತರದಿಂದ ಅದನ್ನು ಮಾರಿದೆ. ನಂತರ ಮುಂದೇನು? ಯೋಚಿಸುತ್ತಿದಾಗ, ನನ್ನ ಹೆಂಡತಿ ನನ್ನನ್ನು ಕಾನ್ಫಿಡಾಗೆ ಸೇರಿಸಿದಳು. ಅಲ್ಲಿ ಹಿರಿಯ ನಿರ್ದೇಶಕರಾದ ಸಿದ್ದಲಿಂಗಯ್ಯ, ನಾಗಾಭರಣ, ಕೋಡ್ಲು ರಾಮಕೃಷ್ಣ ಅವರಂತಹ ದಿಗ್ಗಜರ ಮಾರ್ಗದರ್ಶನ ದೊರೆಯಿತು. ನಂತರ ನಿರ್ದೇಶಕನಾದೆ. ನನಗೆ ಬರವಣಿಗೆಯಲ್ಲಿ ಆಸಕ್ತಿ ಹೆಚ್ಚು. ಓದುವ ಹವ್ಯಾಸ ನನಗೆ ಬೆಳೆದಿದ್ದು, ರವಿ ಬೆಳಗೆರೆ ಅವರಿಂದ.

ಆ ನಂತರ ನನ್ನ ನಿರ್ದೇಶನದ “ಮಂಜರಿ” ಚಿತ್ರ ಆರಂಭವಾಯಿತು. ಮೊದಲು ನಾನು ನಿರ್ದೇಶನ ಮಾತ್ರ ಮಾಡುವುದೆಂದು ತೀರ್ಮಾನವಾಗಿತ್ತು. ನನ್ನ ಅಭಿನಯದ ಪಾತ್ರ ಬೇರೊಬ್ಬರು ಮಾಡಬೇಕಿತ್ತು. ಕೆಲವು ಕಾರಣದಿಂದ ಅವರು ಮಾಡುವುದು ತಪ್ಪಿ ಹೋಯಿತು. ಆಗ ನಿರ್ಮಾಪಕ ಶಂಕರ್ ಅವರು ಆ ಪಾತ್ರವನ್ನು ನನಗೆ ಮಾಡಲು ಹೇಳಿದರು. ನಾನೇ ಅಭಿನಯಿಸಿದೆ. ಆಗ ಕನಸಿನಲ್ಲೂ ನನಗೆ ಪ್ರಶಸ್ತಿ ಬರುತ್ತದೆ ಎಂದು ಅಂದು ಕೊಂಡಿರಲಿಲ್ಲ. ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಅನಂತು ಎಂಬುವರು ನನ್ನ ಕರೆದು, ರಾಜ್ಯ ಪ್ರಶಸ್ತಿಗೆ ನೊಂದಾಯಿಸಿದ್ದೀರಾ? ಅಂದರು. ಇಲ್ಲ ಅಂದೆ. ಮೊದಲು ನೊಂದಾಯಿಸಿ ಎಂದರು. ನಾನು ಪ್ರಶಸ್ತಿಗೆ ಅಪ್ಲೈ ಮಾಡುವಾಗ ಕೂಡ ನನಗೆ ಬರುತ್ತದೆ ಎಂದು ನಿರೀಕ್ಷಿಸಿರಲಿಲ್ಲ. ನಟಿ ರೂಪಿಕಾ ಅವರಿಗೂ ಅಥವಾ ಬೇರೆ ಯಾರಿಗೋ ಬರುತ್ತದೆ ಅಂದುಕೊಂಡೆ. ನಂತರ ಆತ್ಮೀಯರೊಬ್ಬರ ಮೂಲಕ ನನಗೆ ಪ್ರಶಸ್ತಿ ಬಂದಿರುವ ವಿಷಯ ತಿಳಿದು ಸಂತೋಷವಾಯಿತು. ವಿಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಳ್ಳುವ ಹಂಬಲ ಹೆಚ್ಚಿತ್ತು. ಈ ಪ್ರಶಸ್ತಿ ಬರಲು ಕಾರಣರಾದ ನಿರ್ಮಾಪಕರೂ ಸೇರಿದಂತೆ ನನ್ನ ತಂಡಕ್ಕೆ ಹಾಗೂ ನನ್ನ ಹೆಂಡತಿಗೆ ಧನ್ಯವಾದ.
ಈಗ ಜೆ.ಕೆ.ಅವರ ಅಭಿನಯದ “ಕಾಡ” ಹಾಗೂ “ಕಾಲ ನಾಗಿಣಿ” ಚಿತ್ರಗಳು ಕೂಡ ಬಿಡುಗಡೆ ಹಂತದಲ್ಲಿದೆ ಎಂದರು.

ನನ್ನ ಹಾರೈಸಲು ಬಂದಿರುವ ಗುರು ಸಮಾನರಾದ ಭಾ.ಮ.ಹರೀಶ್, ನಟ ಜೆ.ಕೆ, ನಿರ್ಮಾಪಕ ಶಂಕರ್, ಜಗದೀಶ್ ಅವರಿಗೆ ಅಭಿನಂದನೆ ಸಲ್ಲಿಸಿದರು ರಾಜ್ಯ ಪ್ರಶಸ್ತಿ ವಿಜೇತ ನಟ ವಿಶೃತ್ ನಾಯಕ್.

ಶ್ರೇಷ್ಠ ನಟ ಪ್ರಶಸ್ತಿ ಪಡೆಯುವುದು ಅಷ್ಟು ಸುಲಭವಲ್ಲ. ಪೈಪೋಟಿಗೆ ಸಾಕಷ್ಟು ಜನ ಇರುತ್ತಾರೆ. ಅಂತಹುದರಲ್ಲಿ ವಿಶೃತ್ ನಾಯಕ್ ಅವರಿಗೆ ಪ್ರಶಸ್ತಿ ಬಂದಿರುವು ಖುಷಿ ತಂದಿದೆ ಎಂದರು ಭಾ.ಮ.ಹರೀಶ್.

ನಮ್ಮ ಚಿತ್ರದಲ್ಲಿ ಅಭಿನಯಿಸಲು ಒಪ್ಪಿ, ಈಗ ಪ್ರಶಸ್ತಿ ಪಡೆದುಕೊಂಡಿರುವ ವಿಶೃತ್ ನಾಯಕ ಅವರಿಂದ ನಮ್ಮ ಚಿತ್ರಕ್ಕೂ ಉತ್ತಮ ಹೆಸರು ಬಂದಿದೆ. ಒಳ್ಳೆಯದಾಗಲಿ ಎಂದರು ನಿರ್ಮಾಪಕ ಶಂಕರ್.

ಒಬ್ಬ ನಟನಿಗೆ ರಾಷ್ಟ್ರ ಹಾಗೂ ರಾಜ್ಯ ಪ್ರಶಸ್ತಿ ಬಂದರೆ, ಅವರ ಉತ್ಸಾಹ ಇನ್ನಷ್ಟು ಹೆಚ್ಚುತ್ತದೆ ಎಂದು ಗೆಳೆಯ ವಿಶೃತ್ ನಾಯಕ್ ಅವರಿಗೆ ಶುಭಕೋರಿದರು ನಟ ಜೆ.ಕೆ.

ಗಂಡನ ಯಶಸ್ಸಿನ ಹಿಂದೆ ಹೆಂಡತಿ ಇರುತ್ತಾಳೆ ಎನ್ನುತ್ತಾರೆ. ಆದರೆ ನನ್ನ ಎಲ್ಲಾ ಕಾರ್ಯಗಳ ಹಿಂದೆ ನನ್ನ ಪತಿ ವಿಶೃತ್ ನಾಯಕ್ ಇರುತ್ತಾರೆ. ನಾನು ಪ್ರೇರಣ ಎಂಬ ಸಂಸ್ಥೆ ಮೂಲಕ ಸಾಕಷ್ಟು ವಿಶೇಷ ಮಕ್ಕಳನ್ನು ನೋಡಿಕೊಳ್ಳುತ್ತಿದ್ದೇನೆ. ಇದಕ್ಕೆ ರಾಷ್ಟ್ರಪ್ರಶಸ್ತಿ ಕೂಡ ಪಡೆದಿದ್ದೇನೆ. ಈಗ ವಿಶೃತ್ ಅವರಿಗೆ ರಾಜ್ಯ ಪ್ರಶಸ್ತಿ ಬಂದಿದೆ ಅಭಿನಂದನೆಗಳು ಎಂದರು ವಿಶೃತ್ ನಾಯಕ್ ಅವರ ಪತ್ನಿ ಮೇಘನಾ ಜೋಯಿಸ್.

Categories
ಸಿನಿ ಸುದ್ದಿ

ಹಾಡುಗಳ ಸಿಂಧೂರ…


’ಸಿಂಧೂರ’ ಹಾಡುಗಳ ಬಿಡುಗಡೆ ಕಾರ್ಯಕ್ರಮ ತಡವಾದರೂ ಅರ್ಥಪೂರ್ಣವಾಗಿ ನಡೆಯಿತು. ಕಾಳಿಮಠದ ಋಷಿಕುಮಾರ ಸ್ವಾಮೀಜಿ, ಸ್ವಸ್ತಿಕ್‌ ಶಂಕರ್, ಉಮೇಶ್‌ ಬಣಕಾರ್ ಇತರರು ಆಡಿಯೋ ಬಿಡುಗಡೆ ಮಾಡಿ ತಂಡಕ್ಕೆ ಶುಭ ಕೋರಿದರು. ಇದೊಂದು ತ್ರಿಕೋನ ಪ್ರೇಮಕಥೆ. ನಾಯಕ, ನಿರ್ಮಾಪಕ ಮತ್ತು ನಿರ್ದೇಶಕ ಸಚ್ಚಿನ ಪುರೋಹಿತ್ ತಂದೆ ದಿವಂಗತ ರಾಮ್‌ ಪುರೋಹಿತ್ ಎಂಟು ವರ್ಷಗಳ ಹಿಂದೆ ಬರೆದ ಕಥೆಯು ಈಗ ಚಿತ್ರ ರೂಪದಲ್ಲಿ ಸಿದ್ದಗೊಂಡಿದೆ.


ಕ್ರಿಶ್ಚಿಯನ್ ಶಾಸಕನ ಮಗಳು, ಮದ್ಯಮ ವರ್ಗದ ಪ್ರಾದ್ಯಪಕನ ಮಗನ ಮೇಲೆ ಪ್ರೀತಿ ಹುಟ್ಟಿಕೊಳ್ಳುತ್ತದೆ. ಎಲ್ಲಾ ಕಡೆಯಲ್ಲೂ ಸಮಾನತೆ ಕಾಣುವ ಶಾಸಕ, ಮಗಳ ವಿಷಯ ಬಂದಾಗ ತಿರುಗಿ ಬೀಳುತ್ತಾನೆ. ಮುಂದೆ ಜೀವನದಲ್ಲಿ ಮೇಲೆ ಬರುತ್ತೇನೆಂದು ಚಾಲೆಂಜ್ ತೆಗೆದುಕೊಂಡು ಪಟ್ಟಣಕ್ಕೆ ಬರುತ್ತಾನೆ. ಆ ಸಮಯದಲ್ಲಿ ಮತ್ತೊಂದು ಹುಡುಗಿಯ ಪರಿಚಯ ಪ್ರೇಮಕ್ಕೆ ತಿರುಗುತ್ತದೆ. ಅಲ್ಲೊಂದು ಉಪಕಥೆ ಹುಟ್ಟಿಕೊಳ್ಳುತ್ತದೆ. ಅಂತಿಮವಾಗಿ ಆತ ಯಾರಿಗೆ ಒಲಿಯುತ್ತಾನೆ ಎಂಬುದು ಒಂದು ಕಥೆ ಸಾರಾಂಶ.


ಶಾಸಕನ ಮಗಳಾಗಿ ನಿವೀಕ್ಷಾನಾಯ್ಡು, ಕಂಪೆನಿ ಕಾರ್ಯದರ್ಶಿಯಾಗಿ ಸುರಕ್ಷಿತಶೆಟ್ಟಿ ನಾಯಕಿಯರು. ಉಳಿದಂತೆ ಬ್ಯಾಂಕ್‌ ಜನಾರ್ದನ, ರೇಖಾದಾಸ್, ರಾಂಪುರೋಹಿತ್, ಅರುಣ್‌ದೇವಸ್ಯ, ಜ್ಯೋತಿ ಮುರೂರು, ದಯಾನಂದ್‌ ನೀನಾಸಂ, ಶ್ರೀವಿಷ್ಣು, ಉಮಾಶಂಕರ್ ಮುಂತಾದವರು ನಟಿಸಿದ್ದಾರೆ, ಗೋವಾ, ಮಡಿಕೇರಿ, ಸಕಲೇಶಪುರ, ಬಾಗಲಕೋಟೆ, ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ಐದು ಹಾಡುಗಳಿಗೆ ಸಾಹಿತ್ಯ ಮತ್ತು ಸಂಗೀತ ಒದಗಿಸಿರುವುದು ಕಾರ್ತಿಕ್‌ ವೆಂಕಟೇಶ್. ಗಣೇಶ್‌ರಾಜನ್ ಛಾಯಾಗ್ರಹಣ, ಅರವಿಂದ್.ಜೆ.ಪಿ ಸಂಕಲನ, ಅಶೋಕ್ ಸಾಹಸ, ಸೂರಿ-ಜೆ.ಪಿ.ಆರಾಧ್ಯ ನೃತ್ಯ ನಿರ್ವಹಿಸಿದ್ದಾರೆ.


ಇದಕ್ಕೂ ಮುನ್ನ ಚಿತ್ರದ ಟೀಸರ್ ಮತ್ತು ಹಾಡುಗಳ ತುಣುಕು ತೋರಿಸಲಾಯಿತು. ಆನಂದ್ ಆಡಿಯೋ ಹಾಡುಗಳ ಹಕ್ಕು ಪಡೆದುಕೊಂಡಿದೆ. ಸೆನ್ಸಾರ್‌ನಿಂದ ಪ್ರಶಂಸೆಗೆ ಒಳಗಾದ ಚಿತ್ರವು ಕರೋನ ಪರಿಸ್ಥಿತಿ ನೋಡಿಕೊಂಡು ತೆರೆಗೆ ತರಲು ನಿರ್ಮಾಪಕರು ಯೋಜನೆ ರೂಪಿಸಿಕೊಂಡಿದ್ದಾರೆ.

Categories
ಸಿನಿ ಸುದ್ದಿ

ಹೊಂಬಾಳೆ ಫಿಲಂಸ್ ಮೂಲಕ ಗಂಧದ ಗುಡಿಗೆ ರಾಜ್ ಮೊಮ್ಮಗನ ಆಗಮನ; ಸಂತೋಷ್ ನಿರ್ದೇಶನದಲ್ಲಿ ಯುವ ರಾಜಕುಮಾರ್ ನಟನೆ

“ಕೆ.ಜಿ.ಎಫ್ 2” ಚಿತ್ರದ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ‌ ಸಂಸ್ಥೆ ಹೊಂಬಾಳೆ ಫಿಲಂಸ್. ವಿಜಯ್ ಕಿರಗಂದೂರ್ ಈ ಸಂಸ್ಥೆಯ ನಿರ್ಮಾಪಕರು.

ಈಗ ಈ ಸಂಸ್ಥೆಯಿಂದ ಹೊಸ ಚಿತ್ರಗಳ ನಿರ್ಮಾಣದ ಸರಣಿ ಆರಂಭವಾಗಿದೆ. ಮೊನ್ನೆಯಷ್ಟೇ ಖ್ಯಾತ ನಿರ್ದೇಶಕಿ ಸುಧಾ ಕೊಂಗರ ಅವರ ನಿರ್ದೇಶನದಲ್ಲಿ ನೂತನ ಚಿತ್ರ ಆರಂಭಿಸುವ ಸುದ್ದಿ ಹೊರ ಬಂದಿತ್ತು. ನಿನ್ನೆ ಸಾಮಾಜಿಕ ಜಾಲತಾಣಗಳಲ್ಲಿ ಇಂದು ಮತ್ತೊಂದು ಹೊಸ ಚಿತ್ರದ ಬಗ್ಗೆ ಮಾಹಿತಿ ನೀಡುವುದಾಗಿ ಹೊಂಬಾಳೆ ಫಿಲಂಸ್ ಸಂಸ್ಥೆ ಹೇಳಿಕೊಂಡಿತ್ತು. ಈಗ ಆ ಚಿತ್ರದ ಬಗ್ಗೆ ಮಾಹಿತಿ ಬಂದಿದೆ.

ರಾಜವಂಶದ ಕುಡಿ ಯುವ ರಾಜಕುಮಾರ್ ನಟನೆಯ ನೂತನ ಸಿನಿಮಾ ಆರಂಭಿಸುವುದಾಗಿ ಸಂಸ್ಥೆ ಹೇಳಿದೆ. ಖ್ಯಾತ ನಿರ್ದೇಶಕ ಸಂತೋಷ್ ಆನಂದರಾಮ್ ಈ ಚಿತ್ರ ನಿರ್ದೇಶಕರು. ಸದ್ಯಕ್ಕೆ ಇಷ್ಟು ಮಾಹಿತಿ ನೀಡಿರುವ ಹೊಂಬಾಳೆ ಫಿಲಂಸ್, ನಂತರದ ದಿನಗಳಲ್ಲಿ ಹೆಚ್ಚಿನ ಮಾಹಿತಿ ನೀಡುವುದಾಗಿ ಹೇಳಿದೆ.

ಮೊದಲಿನಿಂದಲೂ ರಾಜಕುಮಾರ್ ಅವರ ಕುಟುಂಬದ ಮೇಲೆ ನಿರ್ಮಾಪಕ ವಿಜಯ್ ಕಿರಗಂದೂರ್ ಅವರಿಗೆ ಅಪಾರ ಪ್ರೀತಿ. ಪುನೀತ್ ರಾಜಕುಮಾರ್ ಅವರ ಜೊತೆ ಸಂಸ್ಥೆಯ ಮೊದಲ ಚಿತ್ರವಾಗಿ “ನಿನ್ನಿಂದಲೇ” ಚಿತ್ರ ನಿರ್ಮಿಸಿದ್ದರು. ನಂತರ ಸಂತೋಷ್ ಆನಂದರಾಮ್ ನಿರ್ದೇಶನದಲ್ಲಿ ಪುನೀತ್ ಅವರು ಅಭಿನಯಿಸಿದ್ದ “ರಾಜಕುಮಾರ” ಚಿತ್ರ ಸಹ ಇದೇ ಸಂಸ್ಥೆಯಿಂದ ನಿರ್ಮಾಣವಾಗಿತ್ತು. ಈ ಮೂವರ ಸಂಗಮದಲ್ಲಿ ಬಂದಿದ್ದ “ಯುವರತ್ನ” ಚಿತ್ರ ಸಹ ಎಲ್ಲರ ಮನ ಗೆದ್ದಿತ್ತು.

ಸಂತೋಷ್ ಆನಂದರಾಮ್ ಹಾಗೂ ಪುನೀತ್ ರಾಜ್‍ಕುಮಾರ್ ಅವರ ಕಾಂಬಿನೇಶನಲ್ಲಿ ಮತ್ತೊಂದು ಹೊಸ ಚಿತ್ರ ಆರಂಭಕ್ಕೆ ಸಿದ್ದತೆ ನಡೆದಿತ್ತು. ಆದರೆ ಆ ಸಮಯದಲ್ಲಿ ಯಾರು ನಿರೀಕ್ಷಿಸದ ಘಟನೆ ನಡೆದು ಹೋಯಿತು. ಈಗ ಅದೇ ಕುಟುಂಬದ ಯುವ ರಾಜಕುಮಾರ್ ಅವರು ನಾಯಕರಾಗಿ ನಟಿಸುತ್ತಿರುವ ಆಕ್ಷನ್ ಓರಿಯಂಟೆಡ್ ಚಿತ್ರವನ್ನು ವಿಜಯ್ ಕಿರಗಂದೂರ್ ನಿರ್ಮಿಸುತ್ತಿದ್ದಾರೆ. ಸಂತೋಷ್ ಆನಂದರಾಮ್ ಅವರೆ ನಿರ್ದೇಶಿಸುತ್ತಿದ್ದಾರೆ. ಸದ್ಯದಲ್ಲೇ ಈ ನೂತನ ಚಿತ್ರಕ್ಕೆ ಚಾಲನೆ ದೊರಕಲಿದೆ.

“ನಿನ್ನಿಂದಲೇ” ಚಿತ್ರದಿಂದ ಆರಂಭಿಸಿ, ಯಶ್ ಅಭಿನಯದ “ಕೆ.ಜಿ.ಎಫ್”, “ಮಾಸ್ಟರ್ ಪೀಸ್”, ” ರಾಜಕುಮಾರ” ಯುವರತ್ನ”, “ಕೆ‌.ಜಿ.ಎಫ್ ೨” ಹೀಗೆ ಒಂದರ ಹಿಂದೆ ಒಂದು ಅದ್ದೂರಿ ಚಿತ್ರ ನಿರ್ಮಾಣ ಮಾಡಿರುವ ವಿಜಯ್ ಕಿರಗಂದೂರ್ ಅವರು ಸದ್ಯ ಪ್ರಭಾಸ್ ಹಾಗೂ ಪ್ರಶಾಂತ್ ನೀಲ್ ಜೋಡಿಯ “ಸಲಾರ್”, ಜಗ್ಗೇಶ್ ಅವರ ” ರಾಘವೇಂದ್ರ ಸ್ಟೋರ್ಸ್” , ರಿಷಭ್ ಶೆಟ್ಟಿ ನಿರ್ದೇಶನದ “ಕಾಂತಾರ” ಚಿತ್ರಗಳನ್ನು ನಿರ್ಮಿಸುತ್ತಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಏಕಕಾಲಕ್ಕೆ ಇಂತಹ ಸದಭಿರುಚಿಯ ಜೊತೆಗೆ, ಅದ್ದೂರಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಿರುವ ವಿಜಯ್ ಕಿರಗಂದೂರ್ ಅವರ ಸಿನಿಮಾ ಪ್ರೀತಿಗೆ ವಿಶ್ವದಾದ್ಯಂತ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಮುಂದೆ ಈ ಸಂಸ್ಥೆಯಿಂದ ಯಾವ ಚಿತ್ರ ಬರಬಹುದೆಂಬ ನಿರೀಕ್ಷೆ ಕೂಡ ಹೆಚ್ಚಿಸುತ್ತಿದೆ.

ಕನ್ನಡ ಚಿತ್ರರಂಗದ ಮಾರುಕಟ್ಟೆಯನ್ನು ವಿಶ್ವದಾದ್ಯಂತ ವಿಸ್ತರಿಸಿದ ನಿರ್ಮಾಪಕ ವಿಜಯ್ ಕಿರಗಂದೂರ್ ನಿಜಕ್ಕೂ ಅಭಿನಂದನಾರ್ಹರು.

Categories
ಸಿನಿ ಸುದ್ದಿ

ಕನ್ನೇರಿ ಫಿಫ್ಟಿ ಡೇಸ್ ಯಶಸ್ವಿ; ಸಂಭ್ರಮಿಸಿದ ಸಿನಿಮಾ ತಂಡ…

ಮೂಕಹಕ್ಕಿ ಸಿನಿಮಾ ಖ್ಯಾತಿಯ ನಿರ್ದೇಶಕ ನೀನಾಸಂ ಮಂಜು ನಿರ್ದೇಶನದಲ್ಲಿ ಮೂಡಿ ಬಂದಿದ್ದ ಕನ್ನೇರಿ ಸಿನಿಮಾ ಬೆಳ್ಳಿತೆರೆಯಲ್ಲಿ ಯಶಸ್ವಿಯಾಗಿ ಸಾಗುತ್ತಿದೆ. ಮಾರ್ಚ್ 4ರಂದು ರಾಜ್ಯಾದ್ಯಂತ ತೆರೆಕಂಡ ಕನ್ನೇರಿ ಸಿನಿಮಾಗೆ ಚಿತ್ರರಸಿಕರು ಭಾರೀ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅದರಲ್ಲೂ ಉತ್ತರ ಕರ್ನಾಟಕದ ರಾಯಭಾಗದಲ್ಲಂತೂ ಸಿನಿಮಾಗೆ ಭಾರೀ ಪ್ರಶಂಸೆ ವ್ಯಕ್ತವಾಗುತ್ತಿದೆ.

ಐವತ್ತು ದಿನ ಪೂರೈಸಿದ ಕನ್ನೇರಿ


ನೈಜ ಘಟನೆಯಾಧಾರಿತ ಮಹಿಳಾ ಪ್ರಧಾನ ಕನ್ನೇರಿ ಸಿನಿಮಾದಲ್ಲಿ ಕೊಡಗಿನಲ್ಲಿ ಭಾರಿ ಸದ್ದು ಮಾಡಿದ್ದ ದಿಡ್ಡಳ್ಳಿ ಸಂತ್ರಸ್ತರ ಹೋರಾಟ, ಪ್ರಕೃತಿ ಮಡಿಲಲ್ಲಿ ಬದುಕು ಕಟ್ಟಿಕೊಂಡಿದ್ದ ಬುಡಕಟ್ಟು ಜನಾಂಗ ಒಕ್ಕಲೆಬ್ಬಿಸಿದ ಪರಿ, ಹೆಣ್ಣು ಮಕ್ಕಳು ದೌರ್ಜನ್ಯಕ್ಕೆ ಒಳಗಾಗುವ ಕಥೆಯನ್ನು ನೀನಾಸಂ ಮಂಜು ಅಚ್ಚುಕಟ್ಟಾಗಿ ಕಟ್ಟಿಕೊಟ್ಟಿದ್ದಾರೆ.

ಈ ಕಥೆ ಚಿತ್ರಪ್ರೇಮಿಗಳಿಗೆ ಸಖತ್ ಇಷ್ಟವಾಗಿದೆ. ಅದರ ಪ್ರತಿಫಲ, ಇವತ್ತು ಪ್ಯಾನ್ ಇಂಡಿಯಾ ಸಿನಿಮಾ ಹಾಗೂ ಕಮರ್ಷಿಯಲ್ ಸಿನಿಮಾಗಳ ಅಬ್ಬರ ನಡುವೆಯೂ ಕನ್ನೇರಿ ಐವತ್ತು ದಿನ ಪೂರೈಸಿರುವುದು ವಿಶೇಷ.

ಅರ್ಚನಾ ಮಧುಸೂಧನ್, ಅನಿತಾ ಭಟ್, ಅರುಣ್ ಸಾಗರ್, ಎಂ.ಕೆ. ಮಠ, ಕರಿಸುಬ್ಬು ಒಳಗೊಂಡಂತೆ ಹಲವು ಪ್ರತಿಭಾನ್ವಿತ ಕಲಾವಿದರು ನಟಿಸಿರುವ ಕನ್ನೇರಿ ಸಿನಿಮಾವನ್ನು ಬುಡ್ಡಿ ದೀಪ ಸಿನಿಮಾ ಹೌಸ್ ಬ್ಯಾನರ್ ನಡಿ ಪಿ.ಪಿ ಹೆಬ್ಬಾರ್ ನಿರ್ಮಾಣ ಮಾಡಿದ್ದಾರೆ. ಗಣೇಶ್ ಹೆಗ್ಡೆ ಕ್ಯಾಮರಾ ವರ್ಕ್, ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ, ಸುಜಿತ್ ನಾಯಕ್ ಸಂಕಲನ ಸಿನಿಮಾಕ್ಕಿದೆ.

Categories
ಸಿನಿ ಸುದ್ದಿ

ಶುಗರ್ ಲೆಸ್ ಸೆನ್ಸಾರ್ ಆಯ್ತು: ಶೀಘ್ರವೇ ಟ್ರೇಲರ್ ಬಿಡುಗಡೆ…


ಸಕ್ಕರೆ ಕಾಯಿಲೆ ಕುರಿತು ಕೆಲವರಲ್ಲಿರುವ ಕಲ್ಪನೆ, ಭಯ ಇದನ್ನೆಲ್ಲ ಇಟ್ಟುಕೊಂಡು ಕಾಮಿಡಿ ಜೊತೆಗೆ ಮೆಸೇಜ್ ಹೇಳುವ ಪ್ರಯತ್ನವೇ ಶುಗರ್‌ಲೆಸ್. ನಿರ್ಮಾಪಕರಾಗಿದ್ದ ಶಶಿಧರ್ ಕೆ.ಎಂ. ಇದೇ ಮೊದಲ ಬಾರಿಗೆ ನಿರ್ದೇಶಿಸಿರುವ ಚಿತ್ರ ಇದಾಗಿದ್ದು, ಇತ್ತೀಚೆಗಷ್ಟೇ ಈ ಚಿತ್ರವನ್ನು ನೋಡಿದ ಸೆನ್ಸಾರ್ ಮಂಡಳಿ ಪ್ರಶಂಸೆಯ ಜೊತೆಗೆ ಯಾವುದೇ ಕಡಿತ ಮತ್ತು ಮ್ಯೂಟ್ ಇಲ್ಲದೆ ಯು ಪ್ರಮಾಣ ಪತ್ರ ‌ನೀಡಿದೆ.
ಚಿತ್ರದಲ್ಲಿ ಸಮಾಜಕ್ಕೆ ಅತ್ಯವಶ್ಯವಾಗಿ ಬೇಕಾಗಿರುವ ಒಂದು ಉತ್ತಮ ಸಂದೇಶವನ್ನು ಹೇಳಲಾಗಿದೆ.


ಶಶಿಧರ್ ಸ್ಟುಡಿಯೋಸ್ ಪ್ರೊಡಕ್ಷನ್ಸ್ ಮೂಲಕ ಶಶಿಧರ್ ಕೆ.ಎಂ. ಅವರೇ ಕಥೆ, ಚಿತ್ರಕಥೆ ಬರೆದು ನಿರ್ಮಾಣವನ್ನೂ ಮಾಡಿದ್ದಾರೆ. ಸಹ ನಿರ್ಮಾಪಕರಾಗಿ ಪ್ರಜ್ವಲ್ ಎಂ.ರಾಜ ಹಾಗೂ ವಿಜಯಲಕ್ಷ್ಮಿ ಕೃಷ್ಣೇಗೌಡ ಸಾಥ್ ನೀಡಿದ್ದಾರೆ. ಲವಿತ್ ಅವರ ಛಾಯಾಗ್ರಹಣ, ಅನೂಪ್ ಸೀಳಿನ್ ಅವರ ಸಂಗೀತ ಸಂಯೋಜನೆ ಚಿತ್ರಕ್ಕಿದ್ದು, ವಿ. ನಾಗೇಂದ್ರಪ್ರಸಾದ್ ಸಾಹಿತ್ಯ ರಚಿಸಿದ್ದಾರೆ. ಗುರು ಕಶ್ಯಪ್ ಚಿತ್ರದ ಸಂಭಾಷಣೆ ರಚಿಸಿದ್ದಾರೆ. ಚಿತ್ರದ ಸಂಕಲನ ರವಿಚಂದ್ರನ್, ನೃತ್ಯ ಸಂಯೋಜನೆ ಮುರಳಿ ಮಾಸ್ಟರ್, ಕಲೆ ವಿನ್ಯಾಸವನ್ನು ರೂಪೇಂದ್ರ ಆಚಾರ್ ಮಾಡಿದ್ದಾರೆ.

ಪೃಥ್ವಿ ಅಂಬರ್, ಪ್ರಿಯಾಂಕ ತಿಮ್ಮೇಶ್ ಪ್ರಮುಖ ಪಾತ್ರದಲ್ಲಿದ್ದು, ಉಳಿದಂತೆ ಹಿರಿಯ ನಿರ್ದೇಶಕ ಎಸ್.ನಾರಾಯಣ್, ರಘು ರಾಮನಕೊಪ್ಪ, ಧರ್ಮಣ್ಣ ಕಡೂರ್, ನವೀನ್ ಡಿ.ಪಡೀಲ್, ಗಿರೀಶ್ ಜತ್ತಿ, ಹೊನ್ನವಳ್ಳಿ ಕೃಷ್ಣ, ಮಾಲತಿ ಅಭಿನಯಿಸಿದ್ದಾರೆ. ಪ್ರಪಂಚದಾದ್ಯಂತ ಸಾಕಷ್ಟು ಮಧುಮೇಹಿಗಳಿದ್ದಾರೆ. ಸಕ್ಕರೆ ಕಾಯಿಲೆ ಮೇಲೆ ಯಾವುದೇ ಸಿನಿಮಾ ನಿರ್ಮಾಣವಾಗಿಲ್ಲ. ಶೀಘ್ರದಲ್ಲೇ ಚಿತ್ರದ ಟ್ರೇಲರ್ ಮತ್ತು ಚಿತ್ರದ ಬಿಡುಗಡೆ ದಿನಾಂಕ ಪ್ರಕಟಿಸುವುದಾಗಿ ನಿರ್ಮಾಪಕ ಕೆ.ಎಂ.ಶಶಿಧರ್ ಹೇಳಿದ್ದಾರೆ.

Categories
ಸಿನಿ ಸುದ್ದಿ

ಬಯಲುಸೀಮೆ ಎಂಬ ಜವಾರಿ ಭಾಷೆಯ ಸಿನಿಮಾ; ಹಾಡು ಬಿಡುಗಡೆಯ ಸಂಭ್ರಮ…

ಉತ್ತರ ಕರ್ನಾಟಕ ಶೈಲಿಯ ರಗಡ್ ಕಥೆಗಳ ಬಗ್ಗೆ ಕನ್ನಡದ ಪ್ರೇಕ್ಷಕರರಲ್ಲಿ ಒಂದು ವಿಶೇಷ ಪ್ರೀತಿ. ಇದೀಗ ಅದೇ ಸೊಗಡಿನ ಪಕ್ಕಾ ರಗಡ್ ಕಥಾನಕ ಹೊಂದಿರೋ ಬಯಲು ಸೀಮೆ ಸಿನಿಮಾ ಶೂಟಿಂಗ್ ಮುಗಿಸಿಕೊಂಡ ಚಿತ್ರ ತಂಡ ಆಡಿಯೋ ಬಿಡುಗಡೆಗೆ ಮಾಡಿದೆ.

ನಿರ್ದೇಶಕರು ಏನೇ ವಿಷ್ಯುವಲೈಸೇಷನ್ ಮಾಡಿದರೆ ಅದಕ್ಕೆ ನಿರ್ಮಾಪಕರ ಸಪೋರ್ಟ್ ಬಹಳ‌ ಮುಖ್ಯ. ಪ್ರತಿಯೊಬ್ಬರೂ ಈ ಸಿನಿಮಾಗೆ ಬಹಳಷ್ಟು ಶ್ರಮಿಸಿದ್ದಾರೆ. ನಾಗಾಭರಣ ಅವರ ಜೊತೆ ಆಕ್ಟ್ ಮಾಡಿರೋದು ಖುಷಿ ಕೊಟ್ಟಿದೆ ಎಂದು ಆರ್ಮುಗಂ ರವಿಶಂಕರ್ ತಮ್ಮ ಅನುಭವ ಹಂಚಿಕೊಂಡರು.

ಪೊಲಿಟಿಕಲ್ ಕ್ರೈಂ ಥ್ರಿಲ್ಲರ್ ಜಾನರಿನ ‘ಬಯಲುಸೀಮೆ’ ಸಿನಿಮಾ ನಾನಾ ಮಜಲುಗಳ, ಮೈನವಿರೇಳಿಸೋ ತಿರುವುಗಳ ಮೂಲಕ ಪ್ರೇಕ್ಷಕರನ್ನು ಬೇರೆಯದ್ದೇ ಜಗತ್ತಿಗೆ ಕೊಂಡೊಯ್ಯುವಂತೆ ಸಿನಿಮಾ ಮೂಡಿ‌ಬಂದಿದೆ.

ಲಕ್ಷ್ಮಣ್ ಸಾ ಶಿಂಗ್ರಿ ನಿರ್ಮಾಣದಲ್ಲಿ ಮೂಡಿ ಬಂದಿರುವ ಬಯಲುಸೀಮೆಯನ್ನು ವರುಣ್ ಕಟ್ಟೀಮನಿ ನಿರ್ದೇಶನ ಮಾಡಿದ್ದಾರೆ. ಎಂಬತ್ತರ ದಶಕ ಮತ್ತು ಇವತ್ತಿನ ಕಾಲಮಾನದೊಂದಿಗೆ ಜುಗಲ್ಬಂದಿ ಹೊಂದಿರೋ ಈ ಕಥೆ, ಆ ಎರಡು ಕಾಲಘಟ್ಟಗಳನ್ನೂ ಉತ್ತರ ಕರ್ನಾಟಕದ ಜವಾರಿ ಶೈಲಿಯಲ್ಲಿ ಕಟ್ಟಿಕೊಟ್ಟಿದೆ. ಸಾಹೂರಾವ್ ಶಿಂಧೆ ಎಂಬ ಶ್ರೀಮಂತ ವ್ಯಕ್ತಿಯ ಸುತ್ತ ಬಯಲು ಸೀಮೆಯ ಕಥೆ ಚಲಿಸುತ್ತೆ.

ಆತನ ಸುತ್ತ ಹಬ್ಬಿಕೊಳ್ಳುವ ಅಕ್ರಮ ಸಂಬಂಧ, ಅದರ ಹಿನ್ನೆಲೆಯಲ್ಲೊಂದು ಲವ್ ಸ್ಟೋರಿ ಹಾಗೂ ಅದರ ಗರ್ಭದಲ್ಲಿಯೇ ಹುಟ್ಟಿಕೊಳ್ಳೋ ದ್ವೇಷ… ಕ್ಷಣ ಕ್ಷಣವೂ ಪ್ರೇಕ್ಷಕರನ್ನು ತುದೀ ಸೀಟಿಗೆ ತಂದು ಕೂರಿಸುವಂಥಾ ಗಟ್ಟಿ ಕಥೆಯೊಂದಿಗೆ ಚಿತ್ರತಂಡ ಪ್ರೇಕ್ಷಕರನ್ನು ಮುಖಾಮುಖಿಯಾಗೋ ಉತ್ಸಾಹದಲ್ಲಿದೆ.

ಈ ಸಿನಿಮಾದಲ್ಲಿ ಭಯ ಹುಟ್ಟಿಸೋ ಪಾತ್ರಗಳಿವೆ. ಅದಕ್ಕೆ ಮಹಾರಥ ಕಲಾವಿದರುಗಳು ಜೀವ ತುಂಬಿದ್ದಾರೆ. ಬೃಹತ್ ತಾರಾಗಣ ಹೊಂದಿರೋ ಬಯಲು ಸೀಮೆಯಲ್ಲಿ ಬಿಸಿಲ ನಾಡ ಪ್ರತಿಭೆಗಳೂ ಮಿಂಚಲು ಅಣಿಯಾಗಿದ್ದಾರೆ.

ಟಿ.ಎಸ್ ನಾಗಾಭರಣ, ರವಿಶಂಕರ್, ಸಂಯುಕ್ತ ಹೊರನಾಡು, ಯಶ್ ಶೆಟ್ಟಿ, ಭವಾನಿ ಪ್ರಕಾಶ್, ಅರ್ಚನಾ ಕೊಟ್ಟಿಗೆ, ವರುಣ್ ಕಟ್ಟೀಮನಿ, ಲಕ್ಷ್ಮೀ ನಾಡಗೌಡರ್, ಸಂತೋಷ್ ಉಪ್ಪಿನ್, ನಾಗರಾಜ ಭಟ್, ಮಹೇಶ್ ದೊಡ್ಡಕೈನವರ್, ಪ್ರದೀಪ್ ರಾಜ್ ಮುಂತಾದವರು ಸಿನಿಮಾದಲ್ಲಿದ್ದಾರೆ. ಸುಜಯ್ ಕುಮಾರ್ ಬಾವಿಕಟ್ಟಿ ಛಾಯಾಗ್ರಹಣ, ಮಾನಸ ಹೊಳ್ಳ ಸಂಗೀತ ನಿರ್ದೇಶನ, ಕಿರಣ್ ಕುಮಾರ್ ಸಂಕಲನ ಮತ್ತು ರಾಮು ಅವರ ನೃತ್ಯ ಸಂಯೋಜನೆಯಿಂದ ಬಯಲುಸೀಮೆ ಸಿಂಗರಿಸಿಕೊಂಡಿದೆ.

Categories
ಸಿನಿ ಸುದ್ದಿ

ಪ್ರಶಾಂತ್ ರಾಜ್ ಹೊಸ ಸಿನಿಮಾ ಶುರು: ತಮಿಳು ಹೀರೋ ಸಂತಾನಂಗೆ ಆಕ್ಷನ್ ಕಟ್…

ಆರೆಂಜ್, ದಳಪತಿ, ಜೂಮ್, ಲವ್ ಗುರು ಸಿನಿಮಾಗಳ ಖ್ಯಾತಿಯ ಪ್ರಶಾಂತ್ ರಾಜ್ ನಿರ್ದೇಶನದ ಹೊಸ ಸಿನಿಮಾ ಸೆಟ್ಟೇರಿದೆ. ಈ ಬಾರಿ ಪ್ರಶಾಂತ್ ಕನ್ನಡದ ಜೊತೆಗೆ ತಮಿಳಿನಲ್ಲೂ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಅದರ ಮೊದಲ ಭಾಗವಾಗಿ ಇವತ್ತು ಬೆಂಗಳೂರಿನ ಕೊಂದಂಡ ರಾಮ ದೇಗುಲದಲ್ಲಿರುವ ಸಾಯಿಬಾಬಾ ಮಂದಿರದಲ್ಲಿ ಸಿನಿಮಾದ ಮುಹೂರ್ತ ನೆರವೇರಿದೆ

ಇಂದಿನಿಂದ ಶೂಟಿಂಗ್ ಶುರು
ಫಾರ್ಚುನ್ ಫಿಲ್ಮಂ ಬ್ಯಾನರ್ ನಡಿ ಪ್ರೊಡಕ್ಷನ್ ನಂಬರ್ 10 ಟೈಟಲ್ ನಡಿ ಸೆಟ್ಟೇರಿರುವ ಈ ಸಿನಿಮಾದಲ್ಲಿ ತಮಿಳಿನ ಖ್ಯಾತ ನಟ ಸಂತಾನಂ ನಾಯಕನಾಗಿ ನಟಿಸ್ತಿದ್ದು, ತಾನ್ಯ ಹೋಪ್ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ.

ರೋಮ್ಯಾಂಟಿಕ್ ಕಾಮಿಡಿ ಜಾನರ್ ಈ ಸಿನಿಮಾಗೆ ನವೀನ್ ರಾಜ್ ಬಂಡವಾಳ ಹೂಡಿದ್ದಾರೆ. ಇಂದಿನಿಂದ ಶೂಟಿಂಗ್ ಶುರು ಮಾಡಿರುವ ಪ್ರಶಾಂತ್ ರಾಜ್, ಫಸ್ಟ್ ಡೇ ಶೆಡ್ಯೂಲ್ಡ್ ನಲ್ಲೂ ಬೆಂಗಳೂರಿನಲ್ಲಿ ಮುಗಿಸಿಕೊಂಡು, ಆ ನಂತ್ರ ಚೆನ್ನೈನಲ್ಲಿ ಹಾಗೂ ವಿದೇಶದಲ್ಲಿ ಹಾಡು, ಕೆಲವೊಂದು ದೃಶ್ಯಗಳನ್ನು ಚಿತ್ರೀಕರಿಕರಿಸಲು ಪ್ಲ್ಯಾನ್ ಹಾಕಿಕೊಂಡಿದ್ದಾರೆ.

ಪ್ರಶಾಂತ್ ರಾಜ್ ಸಿನಿಮಾಗಳು ಅಂದ್ರೆ ಅಲ್ಲಿ ಸಂಗೀತಕ್ಕೆ ಹೆಚ್ಚಿನ ಪ್ರಾಧ್ಯಾನ್ಯತೆ ಇರುತ್ತದೆ. ಅದರಂತೆ ಈ ಬಾರಿ ಪ್ರಶಾಂತ್ ಮ್ಯೂಸಿಕಲ್ ಕಂಪೋಸರ್ ಅರ್ಜುನ್ ಜನ್ಯ ಜೊತೆ ಕೈ ಜೋಡಿಸಿದ್ದಾರೆ.

ಪ್ರಶಾಂತ್ ನಿರ್ದೇಶನದ ಹೊಸ ಸಿನಿಮಾಗೆ ಅರ್ಜುನ್ ಜನ್ಯ ಮ್ಯೂಸಿಕ್ ನೀಡಲಿದ್ದು, ಸುಧಾಕರ್ ಕ್ಯಾಮೆರಾ ಕೈಚಳಕ ಸಿನಿಮಾದಲ್ಲಿರಲಿದೆ. ಸದ್ಯದಲ್ಲಿಯೇ ಉಳಿದ ತಾರಾಬಳಗದ ಮಾಹಿತಿಯನ್ನು ಚಿತ್ರತಂಡ ನೀಡಲಿದೆ.

Categories
ಸಿನಿ ಸುದ್ದಿ

ಹೆಡ್ ಬುಷ್ ಆಟ ಕಂಪ್ಲೀಟ್! ಡಾಲಿ-ಯೋಗಿ ಸಿನಿಮಾ ಶೂಟಿಂಗ್ ಮುಗೀತು…

ಭೂಗತ ದೊರೆ ಎಂ.ಪಿ.ಜಯರಾಜ್ ಜೀವನಾಧಾರಿತ “ಹೆಡ್ ಬುಷ್” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬಹುತೇಕ ಬೆಂಗಳೂರಿನಲ್ಲೇ ಚಿತ್ರದ ಚಿತ್ರೀಕರಣ
ನಡೆದಿರುವುದು ವಿಶೇಷ….

ಡಾಲಿ ಧನಂಜಯ ಜಯರಾಜ್ ಅವರ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಅಗ್ನಿ ಶ್ರೀಧರ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಈ ಚಿತ್ರವನ್ನು ಶೂನ್ಯ ನಿರ್ದೇಶಿಸುತ್ತಿದ್ದಾರೆ. 1970 ರ ಬೆಂಗಳೂರಿನ ಭೂಗತ ಜಗತ್ತನ್ನು ಶೂನ್ಯ ಈ ಚಿತ್ರದಲ್ಲಿ ತೋರಿಸಲು ಹೊರಟಿದ್ದಾರೆ. ಆ ಕಾಲಕ್ಕೆ ಸರಿಹೊಂದುವ ಅನೇಕ ಸೆಟ್ ಗಳನ್ನು ಹಾಕಲಾಗಿದೆ.

ಫಿಲಂ ಮೇಕಿಂಗ್ ನಲ್ಲಿ ಎಂ ಎಸ್ ಸಿ ಪದವಿ ಪಡೆದಿರುವ ಶೂನ್ಯ, ರಕ್ಷಿತ್ ಶೆಟ್ಟಿ ಅವರ ಬಳಿ ಅಸೋಸಿಯೇಟ್ ಆಗಿ ಕಾರ್ಯ ನಿರ್ವಹಿಸಿ ಅನುಭವ ಪಡೆದಿದ್ದಾರೆ. ಅಷ್ಟೇ ಅಲ್ಲದೇ, ಶೂನ್ಯ ಫಿಲಂ ಮೇಕಿಂಗ್ ಕುರಿತು ಸಂಶೋಧನೆ ಕೂಡ ನಡೆಸಿದ್ದಾರೆ.

ಡಾಲಿ ಧನಂಜಯ, ಪಾಯಲ್ ರಜಪೂತ್, ಕ್ರೇಜಿಸ್ಟಾರ್ ರವಿಚಂದ್ರನ್, ಲೂಸ್ ಮಾದ ಯೋಗಿ, ವಸಿಷ್ಠ ಎನ್ ಸಿಂಹ, ಡೈನಾಮಿಕ್ ಸ್ಟಾರ್ ದೇವರಾಜ್, ಶೃತಿ ಹರಿಹರನ್, ರಘು ಮುಖರ್ಜಿ, ಬಾಲು ನಾಗೇಂದ್ರ ಮುಂತಾದ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ.

ಡಾಲಿ ಪಿಕ್ಚರ್ಸ್ ಹಾಗೂ ಸೋಮಣ್ಣ ಟಾಕೀಸ್ ಲಾಂಛನದಲ್ಲಿ ಡಾಲಿ ಧನಂಜಯ ಹಾಗೂ ರಾಮ್ಕೊ ಸೋಮಣ್ಣ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

ಅದ್ಭುತ ಹಾಡುಗಳಿಗೆ ಚರಣ್ ರಾಜ್ ಸಂಗೀತ ನಿರ್ದೇಶನವಿದೆ. ಸುನೊಜ್ ವೇಲಾಯಧನ್ ಅವರ ಛಾಯಾಗ್ರಹಣವಿರುವ ಈ ಚಿತ್ರದ ಕಲಾ ನಿರ್ದೇಶಕರು ಬಾಡಲ್ ನಂಜುಂಡಸ್ವಾಮಿ.

error: Content is protected !!