ದೊಡ್ಡಗೌಡರ ಮನೆ-ಮನದಂಗಳದಲ್ಲಿ ಸಂತೋಷ- ಸಂಭ್ರಮ ಹಾಗೂ ಹಬ್ಬದ ವಾತಾವರಣ. ಆನಂದಸಾಗರದಲ್ಲಿ, ಖುಷಿಯ ಅಲೆಯಲ್ಲಿ ಗೌಡ್ರ ಕುಟುಂಬ ನಲಿಯುತ್ತಿದೆ. ಸ್ಯಾಂಡಲ್ವುಡ್ ಯುವರಾಜ ನಿಖಿಲ್ ತಂದೆಯಾಗುತ್ತಿರುವ ಸಂಭ್ರಮದಲ್ಲಿದ್ದಾರೆ. ತಮ್ಮ ಮನೆಯ ಕೀರ್ತಿಯ ಕೂಸನ್ನ ಮಡಿಲಲ್ಲಿ ಹೊತ್ತಿರುವ, ಮನೆಮಗಳ ರೂಪದಲ್ಲಿರುವ ರೇವತಿಗೆ ಸೀಮಂತಕಾರ್ಯ ನಡೆಸಿದ್ದಾರೆ. ಎಚ್ ಎಸ್ ಆರ್ ಲೇಔಟ್ನ ಖಾಸಗಿ ಕನ್ವೆಷನ್ ಹಾಲ್ನಲ್ಲಿ ಗೌಡ್ರ ಕುಟುಂಬ ವಿಜೃಂಭಣೆಯಿಂದ ಸೀಮಂತಶಾಸ್ತ್ರವನ್ನು ಮಾಡಿಮುಗಿಸಿದ್ದಾರೆ.
ಪ್ರತಿಹೆಣ್ಣು ತನ್ನ ಮದುವೆ ಬಗ್ಗೆ ಎಷ್ಟು ಕನಸುಗಳನ್ನ ಕಂಡಿರುತ್ತಾಳೋ ಅಷ್ಟೇ ಆಸೆ-ಕನಸು ತನ್ನ ಸೀಮಂತಶಾಸ್ತ್ರದ ಮೇಲೆಯೂ ಹೊತ್ತಿರುತ್ತಾಳೆ. ಅದರಂತೇ, ರೇವತಿ ಕೂಡ ಬೇಬಿಶವರ್ ಮೇಲೆ ಮಹದಾಸೆ ಹೊತ್ತಿದ್ದರು. ಪತ್ನಿ ರೇವತಿಯ ಕನಸಿನಂತೆಯೇ ನಿಖಿಲ್ ಸೀಮಂತಶಾಸ್ತ್ರವನ್ನು ಅರೇಂಜ್ ಮಾಡಿದ್ದರು. ವೈಟ್ ಅಂಡ್ ವೈಟ್ ಲುಕ್ನಲ್ಲಿ ಗೌಡ್ರುಡುಗ ನಿಖಿಲ್ ಮಿಂಚಿದರೆ, ಗೋಲ್ಡನ್ ವಿತ್ ಆರೇಂಜ್ ಕಲರ್ ಕಾಂಬಿನೇಷನ್ ರೇಷ್ಮೆಸ್ಯಾರಿಯಲ್ಲಿ ರೇವತಿ ಕಂಗೊಳಿಸಿದರು. ಅಪ್ಪ-ಅಮ್ಮನಾಗಿ ಪ್ರಮೋಷನ್ ಪಡೆಯುತ್ತಿರುವ ನಿಖಿಲ್-ರೇವತಿ ಖುಷಿಖುಷಿಯಾಗಿ ಈ ರೀತಿ ಕ್ಯಾಮೆರಾಗೆ ಪೋಸ್ ಕೊಟ್ಟರು ನೋಡಿ.
ಕೊರೊನಾ ಆತಂಕದ ಹಿನ್ನಲೆ ಕುಟುಂಬಸ್ತರ ಜೊತೆಗೆ ಆಪ್ತರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು. ಸಿನಿಮಾ ಹಾಗೂ ರಾಜಕೀಯ ಲೋಕದ ಕೆಲವೇ ಕೆಲವು ಗಣ್ಯರು ಸೀಮಂತಶಾಸ್ತ್ರದಲ್ಲಿ ಭಾಗಿಯಾಗಿದ್ದರು. ದೊಡ್ಡಗೌಡರ ಕುಡಿಯನ್ನ ಹೊತ್ತಿರುವ ರೇವತಿಗೆ ಶುಭಹಾರೈಸಿದರು. ಅಂದ್ಹಾಗೇ, ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನಿಖಿಲ್-ರೇವತಿಗೆ ಗಂಡುಮಗು ಜನಿಸುವುದಾಗಿ ವಿನಯ್ ಗುರೂಜಿ ಈಗಾಗಲೇ ಭವಿಷ್ಯ ನುಡಿದಿದ್ದಾರೆ. ಆ ಮಗು ಭವಿಷ್ಯ ಉಜ್ವಲವಾಗಿರುತ್ತದಲ್ಲದೇ ನಿಖಿಲ್ಗೆ ಶಾಸಕನಾಗುವ ಅದೃಷ್ಠ ಇರುವುದಾಗಿ ವಿನಯ್ ಗುರೂಜಿ ತಿಳಿಸಿದ್ದಾರೆ.
ಸ್ಯಾಂಡಲ್ವುಡ್ ಯುವರಾಜ ನಿಖಿಲ್ಕುಮಾರಸ್ವಾಮಿಯವರು ಸಿನಿಮಾ ಮಾತ್ರವಲ್ಲದೇ ರಾಜಕೀಯದಲ್ಲೂ ಸಕ್ರಿಯರಾಗಿದ್ದಾರೆ. ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷರಾಗಿರುವ ನಿಖಿಲ್, ಗಂಧದಗುಡಿಯ ಅಂಗಳದಲ್ಲಿ ಗೆಲುವಿನ ಗದ್ದುಗೆ ಏರುವುದರ ಜೊತೆಗೆ ರಾಜಕೀಯ ನಾಯಕರಾಗಿ ಅಧಿಕಾರದ ಚುಕ್ಕಾಣಿ ಹಿಡಿಬೇಕು ಎನ್ನುವ ಮಹದಾಸೆವೊತ್ತಿದ್ದಾರೆ. ಪಕ್ಷಸಂಘಟನೆ ಹಾಗೂ ಪ್ರಚಾರದ ಜೊತೆಗೆ ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ. ಸದ್ಯಕ್ಕೆ, ರೈಡರ್ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಪತ್ನಿಯ ಆಸೆಯಂತೆ ಸೀಮಂತಶಾಸ್ತ್ರ ನೆರವೇರಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ನಲ್ಲಿ ಬಿಡದಿಯ ಫಾರ್ಮ್ಹೌಸ್ನಲ್ಲಿ ನಿಖಿಲ್-ರೇವತಿ ವೈವಾಹಿಕ ಬದುಕಿಗೆ ಕಾಲಿಟ್ಟಿದ್ದರು. ಇವರಿಬ್ಬರ ದಾಂಪತ್ಯ ಜೀವನಕ್ಕೆ ಸಾಕ್ಷಿಯಾಗಿ ಇದೀಗ ರೇವತಿಗೆ ಎಂಟುತಿಂಗಳು. ಇನ್ನೊಂದು ತಿಂಗಳಲ್ಲಿ ಗೌಡ್ರ ಮನೆಗೆ ಪುಟ್ಟಕಂದಮ್ಮನ ಆಗಮನವಾಗಲಿದೆ. ಮರಿಯುವರಾಜನೋ.. ಅಥವಾ ಮರಿ ಯುವರಾಣಿಯೋ ಕಾದುನೋಡ್ಲೆಬೇಕು ಅಲ್ಲವೇ.
ಮಧು ಮಂದಗೆರೆ ಈವರೆಗೆ ನಟಿಸಿರುವ 75 ಚಿತ್ರಗಳ ಪೈಕಿ ಸುಮಾರು 50 ಕ್ಕೂ ಹೆಚ್ಚು ಚಿತ್ರಗಳಲ್ಲಿ ಅವರು ಪೊಲೀಸ್ ಅಧಿಕಾರಿ ಪಾತ್ರದಲ್ಲೇ ಕಾಣಿಸಿಕೊಂಡಿದ್ದಾರೆ ಅನ್ನೋದು ವಿಶೇಷ. ಅದಕ್ಕೆ ಕಾರಣ, ಅವರ ಪರ್ಸನಾಲಿಟಿ. ಒಳ್ಳೇ ಹೈಟು, ಕಟ್ಟುಮಸ್ತಾದ ದೇಹ ಅವರನ್ನು ಪೊಲೀಸ್ ಅಧಿಕಾರಿ ಪಾತ್ರಕ್ಕೆ ಆಯ್ಕೆ ಮಾಡುವಂತಾಗಿದೆ. ಈಗ ಅವರು “ದನಗಳು’ ಚಿತ್ರದಲ್ಲೂ ದಕ್ಷ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ನಟಿಸಿದ್ದಾರೆ
ಕನ್ನಡದಲ್ಲಿ ಕಾದಂಬರಿ ಆಧಾರಿತ ಚಿತ್ರಗಳಿಗೇನು ಕೊರತೆ ಇಲ್ಲ. ಈಗಾಗಲೇ ಕನ್ನಡದಲ್ಲಿ ಸಾಕಷ್ಟು ಕಾಂಬರಿ ಆಧಾರಿತ ಸಿನಿಮಾಗಳು ಬಂದಿವೆ. ಈಗಲೂ ಬರುತ್ತಲೂ ಇವೆ. ಒಂದಷ್ಟು ಸಿನಿಮಾಗಳು ಸದ್ದು ಮಾಡಿದ್ದೂ ಇದೆ. ಈಗ ಆ ಸಾಲಿಗೆ “ದನಗಳು’ ಎಂಬ ಚಿತ್ರವೂ ಸೇರಿದೆ ಅನ್ನೋದು ವಿಶೇಷ. ಹೌದು, ಇದು ಕಥೆಗಾರ ಡಾ.ಬಿ.ಎಲ್.ವೇಣು ಅವರ ಕಾದಂಬರಿ ಆಧರಿಸಿದ ಚಿತ್ರ. ಈ ಚಿತ್ರಕ್ಕೆ ಬಾಲಾಜಿ ಪೋಳ್ ನಿರ್ದೇಶಕರು. ಇದರೊಂದಿಗೆ ಅವರೇ ನಿರ್ಮಾಣದ ಜವಾಬ್ದಾರಿಯನ್ನೂ ಹೊತ್ತಿದ್ದಾರೆ. ಈ ಚಿತ್ರದ ಮೂಲಕ ಮಧು ಮಂದಗೆರೆ ಅವರೂ ಹೀರೋ ಆಗಿ ತೆರೆ ಮೇಲೆ ಅಬ್ಬರಿಸಲು ರೆಡಿಯಾಗಿದ್ದಾರೆ. ಹಾಗೆ ನೋಡಿದರೆ, ಮಧು ಅವರಿಗೆ ಸಿನಿಮಾರಂಗ ಹೊಸದೇನೂ ಅಲ್ಲ, ಒಂದು ದಶಕಕ್ಕೂ ಹೆಚ್ಚು ಕಾಲ ಕನ್ನಡ ಸಿನಿಮಾರಂಗವನ್ನು ಅರಿತಿರುವ ಮಧು ಮಂದಗೆರೆ, ಸಾಕಷ್ಟು ಹೀರೋಗಳ ಜೊತೆ ನಟಿಸಿದ್ದಾರೆ. ಈಗಿನ ಸ್ಟಾರ್ ನಟರ ಸಿನಿಮಾದಲ್ಲೂ ಕಾಣಿಸಿಕೊಂಡಿದ್ದಾರೆ. ಹಾಗೆ ಹೇಳುವುದಾದರೆ, ಮಧು ಮಂದಗೆರೆ ಅವರು ಇದುವರೆಗೆ ಸುಮಾರು ೭೫ ಚಿತ್ರಗಳಲ್ಲಿ ನಟಿಸಿದ್ದಾರೆ ಅನ್ನೋದು ಮತ್ತೊಂದು ವಿಶೇಷ.
ಹೌದು, ಮಧು ಮಂದಗೆರೆ ಈವರೆಗೆ ನಟಿಸಿರುವ ೭೫ ಚಿತ್ರಗಳ ಪೈಕಿ ಸುಮಾರು ೫0 ಕ್ಕೂ ಹೆಚ್ಚು ಚಿತ್ರಗಳಲ್ಲಿ ಅವರು ಪೊಲೀಸ್ ಅಧಿಕಾರಿ ಪಾತ್ರದಲ್ಲೇ ಕಾಣಿಸಿಕೊಂಡಿದ್ದಾರೆ ಅನ್ನೋದು ವಿಶೇಷ. ಅದಕ್ಕೆ ಕಾರಣ, ಅವರ ಪರ್ಸನಾಲಿಟಿ. ಒಳ್ಳೇ ಹೈಟು, ಕಟ್ಟುಮಸ್ತಾದ ದೇಹ ಅವರನ್ನು ಪೊಲೀಸ್ ಅಧಿಕಾರಿ ಪಾತ್ರಕ್ಕೆ ಆಯ್ಕೆ ಮಾಡುವಂತಾಗಿದೆ. ಈಗ ಅವರು “ದನಗಳು’ ಚಿತ್ರದಲ್ಲೂ ದಕ್ಷ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದ ಶೀರ್ಷಿಕೆಯೇ ಹೇಳುವಂತೆ, ಇದು ಕಲಾತ್ಮಕ ಚಿತ್ರ. ನೈಜ ಘಟನೆಯೊಂದನ್ನು ಲೇಖಕರು ಕಾದಂಬರಿಗೆ ಅಳವಡಿಸಿದ್ದು, ಅದನ್ನು ನೈಜವಾಗಿಯೇ ಚಿತ್ರೀಕರಿಸಿರುವ ಖುಷಿ ಚಿತ್ರ ನಿರ್ದೇಶಕರದ್ದು. “ದನಗಳು” ಚಿತ್ರ ಈಗ ರಿಲೀಸ್ಗೆ ರೆಡಿಯಾಗಿದೆ. ಸೆನ್ಸಾರ್ ಮುಗಿಸಿರುವ ಚಿತ್ರ, ಪ್ರೇಕ್ಷಕರ ಮುಂದೆ ಬರಲು ಅಣಿಯಾಗುತ್ತಿದೆ. ಕೊರೊನಾ ಹಾವಳಿಯಿಂದಾಗಿ ಶೇ.೫೦ರಷ್ಟು ಆಸನ ಭರ್ತಿಗೆ ಅವಕಾಶ ಕೊಟ್ಟಿರುವುದರಿಂದ ರಿಲೀಸ್ಗೆ ತಡವಾಗುತ್ತಿದೆ. ಸರ್ಕಾರ ಶೇ.೧೦೦ ರಷ್ಟು ಆಸನ ಭರ್ತಿಗೆ ಅವಕಾಶ ಕೊಟ್ಟರೆ, ಚಿತ್ರ ಬಿಡುಗಡೆ ಮಾಡಲು ತಂಡ ತಯಾರಿ ಮಾಡಿಕೊಳ್ಳಲಿದೆ.
ಇನ್ನ, “ದನಗಳು” ಚಿತ್ರದ ಕಥೆ ಬಗ್ಗೆ ಹೇಳುವುದಾದರೆ, ರಾತ್ರಿ ವೇಳೆಯಲ್ಲಿ ದನ, ಹಸುಗಳನ್ನು ವಾಹನಗಳಲ್ಲಿ ಸಾಗಿಸುವ ಮೂಲಕ ಅವುಗಳನ್ನು ಕಸಾಯಿ ಖಾನೆಗೆ ತಳ್ಳುವ ಗುಂಪಿನ ಕಥೆಯೇ ಇದರ ಹೈಲೈಟು. ಆ ದುಷ್ಟ ಗುಂಪನ್ನು ಹಿಡಿದು, ಬಗ್ಗು ಬಡಿಯುವ ಪೊಲೀಸ್ ಅಧಿಕಾರಿ, ರೈತರ ಗೋವುಗಳನ್ನು ರಕ್ಷಣೆ ಮಾಡಿ ರೈತರಿಗೆ ಒಪ್ಪಿಸುವ ಕಥೆ ಇಲ್ಲಿದೆ. ಚಿತ್ರದ ಚಿತ್ರೀಕರಣ ಬಹುತೇಕ ಕೆ.ಆರ್.ಪೇಟೆ, ಕಿಕ್ಕೇರಿ, ಬೆಂಗಳೂರು ಸುತ್ತಮುತ್ತಲ ತಾಣಗಳಲ್ಲಿ ಸುಮಾರು 35 ದಿನಗಳ ಕಾಲ ನಡೆದಿದೆ.
ಈಗಾಗಲೇ “ದನಗಳು’ ಚಿತ್ರದ ಮೇಲೆ ಒಂದಷ್ಟು ನಿರೀಕ್ಷೆ ಇದೆ. ವಾಸ್ತವ ಸಂಗತಿಗಳನ್ನೂ ಇಲ್ಲಿ ಬಿಚ್ಚಿಡುವ ಪ್ರಯತ್ನ ಮಾಡಲಾಗಿದೆ. ಹೀರೋ, ಮಧು ಮಂದಗೆರೆ ಅವರಿಗೆ ಈ ಸಿನಿಮಾ ಒಳ್ಳೆಯ ಅನುಭವ ನೀಡಿದೆಯಂತೆ. ಒಂದೊಳ್ಳೆಯ ಕಥಾಹಂದರ ಇರುವಂತಹ ಚಿತ್ರದಲ್ಲಿ ನಟಿಸಿದ್ದು, ಖುಷಿ ಕೊಟ್ಟಿದೆ ಎನ್ನುವ ಅವರು, “ದನಗಳು” ಚಿತ್ರ ಹೊರಬಂದರೆ, ನಿಜಕ್ಕೂ ಮೆಚ್ಚುಗೆ ಪಡೆದುಕೊಳ್ಳುತ್ತದೆ ಎಂಬ ನಿರೀಕ್ಷೆ ಇದೆ ಎನ್ನುತ್ತಾರೆ.
ಚಿತ್ರದಲ್ಲಿ ಮಧು ಮಂದಗೆರೆ ಅವರ ಜೊತೆ ಸಂಗೀತಾ ಜೋಡಿಯಾಗಿದ್ದಾರೆ. ಉಳಿದಂತೆ ಚಿತ್ರದಲ್ಲಿ ವಿವನ್ಕೃಷ್ಣ, ಅಶೋಕ್ ಜಂಬೆ, ಸಂಪತ್, ಪ್ರಿಯಾ, ಚಂದ್ರು, ಹರಿಚರಣ ತಿಲಕ್, ಸೇರಿದಂತೆ ಬಹುತೇಕ ಹೊಸ ಪ್ರತಿಭೆಗಳು ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ವಿಶ್ವನಾಥ್ ಛಾಯಾಗ್ರಹಣವಿದೆ. ಸ್ವಾಮಿ ಅವರ ಸಂಕಲನವಿದೆ. ಅರವ್ ರಿಶಿಕ್ ಸಂಗೀತವಿದೆ. ಮಧು ಮಂದಗೆರೆ ಅವರು ನಟಿಸಿರುವ “ಭಜರಂಗಿ ೨”, “ಅರ್ಜುನ್ ಗೌಡ”, “ಜಾಸ್ತಿ ಪ್ರೀತಿ”,” ಕಬ್ಜ”,” ಪ್ರಾರಂಭ”,” ಅಲ್ಲೇ ಡ್ರಾ ಅಲ್ಲೇ ಬಹುಮಾನ”, “ಫೈಟರ್” ಸೇರಿದಂತೆ ಒಂದಷ್ಟು ಚಿತ್ರಗಳಿವೆ.
ಶುಭಕ್ಕ ಒಂದೇ ತರಹದ ಪಾತ್ರಕ್ಕೆ ಸ್ಟಿಕನ್ ಆಗಲಿಕ್ಕೆ ಬಯಸಲ್ಲ. ಗ್ಲಾಮರಸ್ ಪಾತ್ರಗಳ ಮೂಲಕ ಕ್ಯಾಮೆರಾ ಮುಂದೆ ಕಿಕ್ಕೇರಿಸುವುದಕ್ಕೆ ಇಷ್ಟಪಡುವುದಿಲ್ಲ. ಸಿನಿಮಾದಿಂದ ಸಿನಿಮಾಗೆ ಎಕ್ಸ್ ಪಿರಿಮೆಂಟ್ ಮಾಡೋದಕ್ಕೆ ಹಾತೊರೆಯುತ್ತಾರೆ. ಅಭಿನಯಕ್ಕೆ ಆದ್ಯತೆ ಇರುವ ಪಾತ್ರಗಳಿಗಾಗಿ ಹಂಬಲಿಸ್ತಾರೆ. ಕಲೆ ಮತ್ತು ಪಾತ್ರಕ್ಕಾಗಿ ಹಪಹಪಿಸುವ ಶುಭಕ್ಕನಿಗೆ ‘ಅಂಬುಜ’ ಹೆಸರಿನ ಸಿನಿಮಾ ಸಿಕ್ಕಿದೆ. ಮಹಿಳಾಪ್ರಧಾನ ಸಿನಿಮಾ ಇದಾಗಿದ್ದು, ಲಂಬಾಣಿ ಲುಕ್ ನಲ್ಲಿ ಶುಭಕ್ಕ ಧಗಧಗಿಸ್ತಿರುವ ಪೋಸ್ಟರ್ ಸಿನಿಲಹರಿಗೆ ಲಭ್ಯವಾಗಿದೆ
ಸ್ಯಾಂಡಲ್ ವುಡ್ ನ ಸೆಕ್ಸಿ ಸುಂದರಿ, ಪಡ್ಡೆಹೈಕ್ಳ ಮೋಹಕ ಮದನಾರಿ ಶುಭಪುಂಜಾ, ತಮ್ಮ ಮಾದಕ ನೋಟ ಹಾಗೂ ಮೈಮಾಟದಿಂದಲೇ ನೋಡುಗರ ಎದೆಗೆ ಕಿಚ್ಚು ಹಚ್ಚುತ್ತಾರೆ. ಬೋಲ್ಡ್ ಅಂಡ್ ಬೊಂಬಾಟ್ ಅಭಿನಯದ ಮೂಲಕ ಸಿನಿಪ್ರಿಯರ ಮನಸೂರೆಗೊಳ್ತಾರೆ. ಬೆಲ್ಲಿಡ್ಯಾನ್ಸ್ ಮಾಡುತ್ತಾ ಬೆಳ್ಳಿತೆರೆಯನ್ನ ಬೆಳಗುತ್ತಾರೆ. ಇಂತಿಪ್ಪ ನಟಿ ಶುಭಾ ಪುಂಜಾ ಈಗ ತಮ್ಮ ನಯಾ ಲುಕ್ ನಿಂದ ಚಿತ್ರಪ್ರೇಮಿಗಳನ್ನ ದಂಗುಬಡಿಸಿದ್ದಾರೆ. ಯಸ್, ನಟಿ ಶುಭಾ ಪುಂಜಾ ನಯಾ ಅವತಾರದಲ್ಲಿ ಮಿಂಚಿ ನೋಡುಗರನ್ನ ಬೆರಗುಗೊಳಿಸಿದ್ದಾರೆ. ಲಂಬಾಣಿ ಉಡುಗೆ ತೊಟ್ಟುಒಂದು ಕೈಯಲ್ಲಿ ಚೂಪಾದ ಚೂರಿ, ಇನ್ನೊಂದು ಕೈಯಲ್ಲಿ ತಲೆಬುರುಡೆ ಹಿಡ್ಕೊಂಡು ಕ್ಯಾಮರಾ ಕಣ್ಣಿಗೆ ಕೆಂಡದಂತಹ ಪೋಸ್ ಕೊಟ್ಟಿದ್ದಾರೆ. ಬದಲಾದ ಲುಕ್ ಗೆಟಪ್ ನಲ್ಲಿ ಮೊಗ್ಗಿನ ಮನಸ್ಸಿನ ಹುಡುಗಿಯನ್ನ ನೋಡಿದವರು ವಾರೆವ್ಹಾ ಶುಭಕ್ಕ ಅಂತ ಚಪ್ಪಾಳೆ ತಟ್ಟುತ್ತಿದ್ದಾರೆ.
ಅಂದ್ಹಾಗೇ, ಶುಭಕ್ಕ ಒಂದೇ ತರಹದ ಪಾತ್ರಕ್ಕೆ ಸ್ಟಿಕನ್ ಆಗಲಿಕ್ಕೆ ಬಯಸಲ್ಲ. ಗ್ಲಾಮರಸ್ ಪಾತ್ರಗಳ ಮೂಲಕ ಕ್ಯಾಮೆರಾ ಮುಂದೆ ಕಿಕ್ಕೇರಿಸುವುದಕ್ಕೆ ಇಷ್ಟಪಡುವುದಿಲ್ಲ. ಸಿನಿಮಾದಿಂದ ಸಿನಿಮಾಗೆ ಎಕ್ಸ್ ಪಿರಿಮೆಂಟ್ ಮಾಡೋದಕ್ಕೆ ಹಾತೊರೆಯುತ್ತಾರೆ. ಅಭಿನಯಕ್ಕೆ ಆದ್ಯತೆ ಇರುವ ಪಾತ್ರಗಳಿಗಾಗಿ ಹಂಬಲಿಸ್ತಾರೆ. ಕಲೆ ಮತ್ತು ಪಾತ್ರಕ್ಕಾಗಿ ಹಪಹಪಿಸುವ ಶುಭಕ್ಕನಿಗೆ ‘ಅಂಬುಜ’ ಹೆಸರಿನ ಸಿನಿಮಾ ಸಿಕ್ಕಿದೆ. ಮಹಿಳಾಪ್ರಧಾನ ಸಿನಿಮಾ ಇದಾಗಿದ್ದು, ಲಂಬಾಣಿ ಲುಕ್ ನಲ್ಲಿ ಶುಭಕ್ಕ ಧಗಧಗಿಸ್ತಿರುವ ಪೋಸ್ಟರ್ ಸಿನಿಲಹರಿಗೆ ಲಭ್ಯವಾಗಿದೆ.ಕುತೂಹಲಭರಿತ ಫಸ್ಟ್ ಲುಕ್ ಪೋಸ್ಟರ್ ಸಿನಿಮಾ ಪ್ರೇಮಿಗಳ ದಿಲ್ ಕದಿಯುತ್ತಿದೆ.
ನಟಿ ಶುಭಾ ಪೂಂಜಾ ಅವರ ಸಿನಿ ಕೆರಿಯರ್ ನಲ್ಲಿಯೇ ಇದೊಂದು ಸ್ಪೆಷಲ್ ಲುಕ್. ಲಂಬಾಣಿ ಪಾತ್ರ ಈ ಉಡುಗೆಯಲ್ಲಿ ಅವರು ಕಾಣಿಸಿಕೊಂಡಿದ್ದು ಇದೇ ಮೊದಲು. ಅವರಿಲ್ಲಿ ಹಾಕಿರುವ ಈ ಕಾಸ್ಟ್ಯೂಮ್ನ ತೂಕ ಬರೋಬ್ಬರಿ ೨೦ ಕೆಜಿ ಇದೆ. ಗದಗ ಜಿಲ್ಲೆಯ ಒಂದು ಲಂಬಾಣಿ ತಾಂಡದಲ್ಲಿ ಇದನ್ನು ನಾಲ್ಕು ತಿಂಗಳು ಸಮಯ ತೆಗೆದುಕೊಂಡು ತಯಾರು ಮಾಡಿಸಿದ್ದಾರಂತೆ ಶ್ರೀನಿ ಹನುಮಂತ ರಾಜು. ಅವರ ಪ್ರಕಾರ ಇದೊಂದು ವಿಶೇಷ ಕಥಾಹಂದರದ ಚಿತ್ರ. ʼ ಸಮಾಜದಲ್ಲಿ ಆಗುವ ಒಂದಷ್ಟು ಅವಘಡಗಳು ಹೇಗೆ ಸಾಮಾನ್ಯ ಜನರ ಬದುಕನ್ನ ಹಾಳು ಮಾಡುತ್ತದೆ, ಹಾಗೂ ಅವರು ಅನುಭವಿಸುವ ತೊಂದರೆಗಳೇನು ಎನ್ನುವುದರ ಜತೆಗೆ ಅವರ ಅಸಹಾಯಕತೆಯನ್ನು ಸಮಾಜ ಹೇಗೆ ದುರ್ಬಳಕೆ ಮಾಡಿಕೊಳ್ಳುತ್ತದೆ ಎನ್ನುವುದರ ಒಟ್ಟು ಒಟ್ಟು ಚಿತ್ರಣ ಈ ಚಿತ್ರದಲ್ಲಿದೆ ಯಂತೆ.
ನಿರ್ದೇಶಕ ಶ್ರೀನಿ
‘ಅಂಬುಜ’ ನಾಯಕಿ ಪ್ರಧಾನ ಚಿತ್ರ. ಶ್ರೀನಿ ಹನುಮಂತರಾಜು ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ‘ಕೆಲವು ದಿನಗಳ ನಂತರ’ ಸಿನಿಮಾದ ಮೂಲಕ ಭರವಸೆ ಮೂಡಿಸಿದ್ದ ಶ್ರೀನಿಯವರು ‘ ಅಂಬುಜ’ ಸಿನಿಮಾದ ಮೂಲಕ ನಯಾ ಸವಾಲಿಗೆ ಸಿದ್ದರಾಗಿದ್ದಾರೆ.ನಟಿ ಶುಭಪುಂಜಾ ಕೇಂದ್ರಬಿಂದು. ಹಿರಿಯ ನಟಿ ಪದ್ಮಜಾ ರಾವ್, ಕಾಮಿಡಿ ಕಿಲಾಡಿಗಳು ಖ್ಯಾತಿಯ ನಿರ್ದೇಶಕ ಶರಣಯ್ಯ, ಕಲಾವಿದ ಗೋವಿಂದೇ ಗೌಡ, ಸಂದೇಶ್ ಶೆಟ್ಟಿ, ಮಜಾ ಭಾರತದ ಪ್ರಿಯಾಂಕ ಕಾಮತ್, ಬೇಬಿ ಆಕಾಂಕ್ಷ ಪ್ರಮುಖ ಪಾತ್ರ ನಿರ್ವಹಿಸಲಿದ್ದಾರೆ.
ನಿರ್ಮಾಪಕ ಕಾಶೀನಾಥ್ ಮಡಿವಾಳರ್
ಸದ್ಯಕ್ಕೀತ ಚಿತ್ರದ ಪ್ರೀ ಪ್ರೊಡಕ್ಷನ್ ಕೆಲಸಗಳು ಮುಗಿದಿದ್ದು, ಅಕ್ಟೋಬರ್ ತಿಂಗಳಲ್ಲಿ ಒಂದೇ ಶೆಡ್ಯೂಲ್ ನಲ್ಲಿ ಚಿತ್ರೀಕರಣ ನಡೆಸಲು ಚಿತ್ರ ತಂಡ ಸಿದ್ದತೆ ನಡೆಸಿದೆ. ಬೆಂಗಳೂರು, ಗದಗ ಹಾಗೂ ಚಿಕ್ಕಮಂಗಳೂರಿನಲ್ಲಿ ಚಿತ್ರೀಕರಣಕ್ಕೆ ಲೋಕೆಷನ್ ಫಿಕ್ಸ್ ಆಗಿದೆ. ಇನ್ನು ಚಿತ್ರಕ್ಕೆ ಕಾಶೀನಾಥ್ ಮಡಿವಾಳರ್ ಬಂಡವಾಳ ಹೂಡಿದ್ದಾರೆ. ವಿಶೇಷ ಅಂದ್ರೆ ಅವರೇ ಕಥೆ ಬರೆದು ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಇದಕ್ಕೆ ಚಿತ್ರಕಥೆ ಬರೆದು ನಿರ್ದೇಶನ ಮಾಡುವ ಜವಾಬ್ದಾರಿ ಹೊತ್ತಿದ್ದಾರೆ ನಿರ್ದೇಶಕ ಶ್ರೀನಿ. ಹಾಗೆಯೇ ಚಿತ್ರದ ತಾಂತ್ರಿಕ ವರ್ಗದಲ್ಲಿ ಮುರುಳೀಧರ್ ಛಾಯಾಗ್ರಹಣ, ಪ್ರಸನ್ನ ಕುಮಾರ್ ಸಂಗೀತ, ಎಂಸ್ ತ್ಯಾಗರಾಜ್ ಹಿನ್ನೆಲೆ ಸಂಗೀತದ ಮಾಡುತ್ತಿದ್ಧಾರೆ.
ನಟಿ ಶುಭಾ ಪೂಂಜಾ ಅಭಿನಯ ಹಾಗೂ ಶ್ರೀನಿ ಹನುಮಂತರಾಜು ನಿರ್ದೇಶನದ ‘ಅಂಬುಜ’ ಚಿತ್ರ ತಂಡ ಶೂಟಿಂಗ್ ಹೊರಡುವ ತವಕದಲ್ಲಿದೆ. ಎಲ್ಲವೂ ಚಿತ್ರತಂಡ ಅಂದುಕೊಂಡಂತಾದರೆ ಅಕ್ಟೋಬರ್ ಮೊದಲ ವಾರದಿಂದ ಚಿತ್ರೀಕರಣ ಶುರುವಾಗಲಿದೆ. ಆ ನಿಟ್ಟಿನಲ್ಲಿಯೇ ತೆರೆ ಮರೆಯಲ್ಲಿ ಎಲ್ಲಾ ರೀತಿಯ ಸಿದ್ದತೆ ನಡೆಸಿದರುವ ಚಿತ್ರ ತಂಡ ಸೆಪ್ಟೆಂಬರ್ 13 ರಂದು ಸೋಮವಾರ ಚಿತ್ರದ ಫಸ್ಟ್ ಲುಕ್ ಲಾಂಚ್ ಮಾಡಲು ರೆಡಿ ಆಗಿದೆ. ಅಂದು ಬೆಳಗ್ಗೆ 9 ಗಂಟೆಗೆ ಫಸ್ಟ್ ಲುಕ್ ಲಾಂಚ್ ಆಗಲಿದೆ. ಗ್ಲಾಮರಸ್ ನಟಿ ಶುಭಾ ಪೂಂಜಾ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಚಿತ್ರ ಈಗಾಗಲೇ ಹಲವು ಕಾರಣಕ್ಕೆ ಸುದ್ದಿ ಮಾಡಿದೆ. ‘ಕೆಲವು ದಿನಗಳ ನಂತರ’ ಹೆಸರಿನ ಚಿತ್ರದ ಮೂಲಕ ಭರವಸೆ ಮೂಡಿಸಿದ ನಿರ್ದೇಶಕ ಶ್ರೀನಿ ಹನುಮಂತರಾಜು ಮತ್ತೆ ಆಕ್ಷನ್ ಕಟ್ ಹೇಳುತ್ತಿರುವ ಚಿತ್ರ ಇದು. ಇದು ಅವರ ಸೆಕೆಂಡ್ ಅಟ್ಮೆಂಟ್.
ಚೊಚ್ಚಲ ಸಿನಿಮಾದಲ್ಲಿ ಸಸ್ಪೆನ್ಸ್ ಥ್ರಿಲ್ಲರ್ ಕಥೆಯ ಮೂಲಕ ಕುತೂಹಲ ಮೂಡಿಸಿದ್ದ ನಿರ್ದೇಶನ ಶ್ರೀನಿ, ಈಗ ಪಕ್ಕಾ ಮಹಿಳಾ ಪ್ರಧಾನ ಕಥೆ ಆಯ್ಕೆ ಮಾಡಿಕೊಂಡಿರುವುದು ಮತ್ತೆ ಕುತೂಹಲ ಕೆರಳಿಸಿದೆ. ಈಗಾಗಲೇ ಅವರೇ ಮಾಹಿತಿ ನೀಡಿರುವ ಪ್ರಕಾರ ಇದು ಕೂಡ ಕ್ರೈಮ್ ಥ್ರಿಲ್ಲರ್ ಕಥಾ ಹಂದರದ ಪಕ್ಕಾ ಲವ್ ಸ್ಟೋರಿ ಸಿನಿಮಾ. ಎಲ್ಲವೂ ಅಂದುಕೊಂಡಂತಾಗಿದ್ದರೆ ಇಷ್ಟೊರಳಗಾಗಿಯೇ ಈ ಚಿತ್ರಕ್ಕೆ ಚಿತ್ರೀಕರಣ ಆಗಬೇಕಿತ್ತು. ಆದರೆ ಕೊರೋನಾ ಕಾರಣಕ್ಕೆ ಚಿತ್ರೀಕರಣದ ಪ್ಲಾನ್ ಕೂಡ ಏರು ಪೇರಾಯಿತು. ಅದರ ಪರಿಣಾಮ ಒಂದಷ್ಟು ದಿನ ಸೂಕ್ತಸಮಯಕ್ಕಾಗಿ ಕಾಯಬೇಕಾಯಿತು. ಈ ನಡುವೆ ಚಿತ್ರದ ಕಥಾ ನಾಯಕಿ ಶುಭಾ ಪೂಂಜಾ ಬಿಗ್ ಬಾಸ್ ಗೆ ಹೋದರು. ಇನ್ನೊಂದೆಡೆ ಈ ಚಿತ್ರದ ಇನ್ನೊಬ್ಬ ಪಾತ್ರಧಾರಿ ಕಾಮಿಡಿ ಕಿಲಾಡಿಗಳು ಖ್ಯಾತಿಯ ಗೋವಿಂದೇ ಗೌಡರಿಗೆ ಆಕ್ಸಿಡೆಂಟ್ ಆಯ್ತು. ಈಗ ಎಲ್ಲವೂ ಸರಿ ಹೋಗಿದೆ. ಅದೇ ಹಿನ್ನೆಲೆಯಲ್ಲಿ ಚಿತ್ರ ತಂಡ ಚಿತ್ರೀಕರಣಕ್ಕೆ ಸಿದ್ದತೆ ನಡೆಸಿದೆ.
ಸದ್ಯಕ್ಕೆ ಫಸ್ಟ್ ಲುಕ್ ಲಾಂಚ್ ಸಿದ್ದತೆಯಲ್ಲಿರುವ ನಿರ್ದೇಶಕ ಶ್ರೀನಿ ಸಿನಿ ಲಹರಿ ಜತೆಗೆ ಮಾತನಾಡಿ, ಕೊರೋನಾ ಕಾರಣಕ್ಕೆ ಸಿನಿಮಾ ಕೆಲಸಗಳು ತಡವಾದವು. ಈಗ ಎಲ್ಲವೂ ಸರಿ ಹೋಗಿದೆ. ಸೋಮವಾರ ಫಸ್ಟ್ ಲುಕ್ ಲಾಂಚ್ ಆಗುತ್ತಿದೆ. ಬಹುತೇಕ ಅಕ್ಟೋಬರ್ ಫಸ್ಟ್ ವೀಕ್ ನಿಂದ ಶೂಟಿಂಗ್ ಹೊರಡೋಣ ಅಂತಂದುಕೊಂಡಿದ್ದೇವೆ ಎಂದರು. ಇನ್ನು ಫಸ್ಟ್ ಲುಕ್ ಕುತೂಹಲ ಮೂಡಿಸಿದೆ. ನಿರ್ದೇಶಕರ ಪ್ರಕಾರ ಚಿತ್ರದ ಕಥಾ ನಾಯಕಿ ಶುಭಾ ಪೂಂಜಾ ಅವರ ಪಾತ್ರದ ಇನ್ನೊಂದು ಲುಕ್ ಸೋಮವಾರ ರಿವೀಲ್ ಆಗಲಿದೆಯಂತೆ.
ಫೈಟ್ ಮಾಡೋಕೆ ಬೇಕಾಗಿರೋದು ಗ್ರೌಂಡು..ಬ್ಯಾಗ್ರೌಂಡ್ ಅಲ್ಲ.. ಇದು ಕೇವಲ ಬಿಲ್ಡಪ್ಗೋಸ್ಕರ ಹೊಡೆದಂತಹ ಡೈಲಾಗ್ ಅಲ್ಲ. ಆ ಡೈಲಾಗ್ಗೆ ಬಿಲ್ಡಪ್ ಸಿಗಲಿ ಅಂತ ಹೊಡೆಸಿದ್ದು ಅಷ್ಟೇ. ಇದೇ ರಿಯಲ್ಲು.. ಇದೇ ಫ್ಯಾಕ್ಟು. ಆ ಫ್ಯಾಕ್ಟ್ನಂತೆಯೇ ಫೀಲ್ಡಿಗಿಳಿದವರು, ಮೈಕೊಡವಿಕೊಂಡು ಅಖಾಡಕ್ಕೆ ಇಳಿದು ತೊಡೆತಟ್ಟಿದವರು, ಕಲೆಗಾಗಿ ಬೆವರೊಟ್ಟಿಗೆ ರಕ್ತಬಸಿದವರು, ಅಪ್ಪನ ಹೆಸರು ಬಳಸಿಕೊಳ್ಳದೇ ಸ್ವಂತ ಪರಿಶ್ರಮದಿಂದ ಹೋರಾಡಿದವರು, ಬಜಾರ್ನಲ್ಲಿ ಸ್ವಂತ ಬ್ರಾಂಡ್ ಆದವರು, ಗಂಧದಗುಡಿಯಲ್ಲಿ ತಮ್ಮದೇ ಆದ ಸಾಮ್ರಾಜ್ಯ ಕಟ್ಟಿದವರು, ಇಷ್ಟೆಲ್ಲಾ ಮಾಡಿದವರು ಬೇರಾರು ಅಲ್ಲ ತೂಗುದೀಪದ ಕುಡಿ, ಒನ್ ಅಂಡ್ ಓನ್ಲೀ ಡಿಬಾಸ್..!
ಚಾಲೆಂಜಿಂಗ್ ಸ್ಟಾರ್, ಚಕ್ರವರ್ತಿ, ಬಾಕ್ಸ್ ಆಫೀಸ್ ಸುಲ್ತಾನ್, ಯಜಮಾನ, ಒಡೆಯ, ಕುಲಕೋಟಿ ಅಭಿಮಾನಿಗಳ ಆರಾಧ್ಯದೈವ, ದಾಸ, ದಚ್ಚು, ದರ್ಶನ್, ಹೀಗೆ ಒಂದಾ.. ಎರಡಾ..ಹತ್ತಾರು ಹೆಸರುಗಳಿಂದ ಕರೆಸಿಕೊಳ್ಳುವ ನಾಯಕ ಇವರು. ಯಾರಿಗೂ ಸಲಾಂ ಹೊಡೆಯದೇ, ಬಕೆಟ್ ಹಿಡಿಯದೇ, ಸಿಂಟ್ಯಾಕ್ಸ್ ಬಳಸದೇ, ಸ್ವಂತ ಪರಿಶ್ರಮದಿಂದ ಒಂದೊಂದೇ ಮೆಟ್ಟಿಲೇರಿ ಸ್ಟಾರ್ ಆದವರು. ಶ್ರೇಷ್ಟ ಖಳನಾಯಕನ ಮಗನಾದರೂ ಕೂಡ ಅಪ್ಪನ ಹೆಸರೇಳಿ ಅವಕಾಶ ಗಿಟ್ಟಿಸಿಕೊಳ್ಳಲು ಹಿಂಜರಿದವರು. ಬಣ್ಣದ ಲೋಕಕ್ಕೆ ಧುಮಕಲೆಬೇಕು, ಅಪ್ಪನಂತೆ ಕಲಾವಿದನಾಗ್ಬೇಕು ಎನ್ನುವ ಹಂಬಲಕ್ಕೆ, ತುಡಿತಕ್ಕೆ, ಕನಸಿಗೆ, ಮಹದಾಸೆಗೆ ತಾವೇ ನೀರೆರೆದುಕೊಂಡು ಪೋಷಿಸಿದವರು. ಲೈಟ್ಮ್ಯಾನ್ ಆಗಿ ಚಿತ್ರರಂಗಕ್ಕೆ ಎಂಟ್ರಿಕೊಟ್ಟು ಹೆಜ್ಜೆಹೆಜ್ಜೆಗೂ ಕಷ್ಟ-ನೋವು-ಅವಮಾನ, ಅಪಮಾನ, ನಿಂದನಗೆಳನ್ನು ಎದುರಿಸಿದವರು. ಸವಾಲುಗಳಿಗೆ ಹೆದರದೇ ಸೆಡ್ಡುಹೊಡೆದು ಮೆಟ್ಟಿನಿಂತವರು. ಕೊನೆಗೆ ಚಾಲೆಂಜ್ ಹಾಕಿಯೇ ಲೈಫ್ನ ಕಂಡುಕೊಂಡವರು. ಹೀಗಾಗಿಯೇ ಇವತ್ತು ಇವರಿಗೆ ಚಾಲೆಂಜಿಂಗ್ ಸ್ಟಾರ್ ಅಂತ ಕರೆಯುತ್ತಾರೆ. ಕೋಟ್ಯಾಂತರ ಭಕ್ತರು ತಲೆಮೇಲೆ ಹೊತ್ತು ಮೆರೆಸುತ್ತಾರೆ.
ದರ್ಶನ್ ಇವತ್ತು ಏನೇ ಆಗಿದ್ದರೂ ಕೂಡ ಅದಕ್ಕೆ ಕಾರಣ ಅವರೇ. 150 ರೂಪಾಯಿ ಬಾಟದಿಂದ ಹಿಡಿದು ೧೦ ಕೋಟಿ ಸಂಭಾವನೆ ಪಡೆಯುವುದಕ್ಕೆ ಡಿಬಾಸ್ ಪಟ್ಟಿರುವ ಕಷ್ಟ ಡಿಬಾಸ್ಗೆ ಮಾತ್ರ ಗೊತ್ತು. ಹೀಗಾಗಿಯೇ, ಸಾಕಷ್ಟು ಭಾರಿ ಅವರೇ ಹೇಳಿಕೊಂಡಿದ್ದಾರೆ. ನಾನು ದರ್ಶನ್ಗೆ ಬೆಳೆಸದೇ, ನಾನು ದರ್ಶನ್ಗೆ ಅವಕಾಶ ಕೊಡಿಸಿದೇ, ಈ ರೀತಿ ಹೇಳಿಕೊಳ್ಳುವ ಅವಕಾಶವನ್ನ ನಾನು ಯಾರಿಗೂ ಕೊಟ್ಟಿಲ್ಲವೆಂದು. ಅಪ್ಕೋರ್ಸ್ ಯಾರಿಗೂ ಸಲಾಂ ಹೊಡೆದು ಚಾನ್ಸ್ ಗಿಟ್ಟಿಸಿಕೊಂಡಿಲ್ಲ, ಸಲಾಂ ಹೊಡೆದು ಆಳೆತ್ತರಕ್ಕೆ ಬೆಳೆದು ನಿಂತಿಲ್ಲ. ಲೈಟ್ಮ್ಯಾನ್ ಕೆಲಸ ಮಾಡಿ, ಸಣ್ಣ-ಪುಟ್ಟ ಪಾತ್ರಗಳಿಗೆ ಜೀವತುಂಬಿ, ಸೀರಿಯಲ್ ಮಾಡಿ ತನ್ನ ಕಲೆಯನ್ನ ಪ್ರೂ ಮಾಡಿದವರು. ದಾಸನ ಕಲೆಗೆ ಬೆಲೆಕೊಟ್ಟು ಪಿ.ಎನ್. ಸತ್ಯ, ಎಂ.ಜಿ ರಾಮ್ಮೂರ್ತಿ ಅವರು ಬೆಳ್ಳಿತೆರೆಗೆ ಕರೆತಂದರು. ಮೆಜೆಸ್ಟಿಕ್ನಲ್ಲೇ ಮೆಜೆಸ್ಟಿಕ್ ತೋರ್ಸಿದರು. ಮುಂದಾಗಿದ್ದೆಲ್ಲವೂ ಇವತ್ತಿಗೂ ಇತಿಹಾಸವೇ ಸರೀ.
ಸಾರಥಿ ಚಿತ್ರರಂಗಕ್ಕೆ ಬಂದು ೨೪ ವರ್ಷ ಕಳೆದಿದೆ. ಈ ೨೪ ವರ್ಷದ ಸಿನಿಜರ್ನಿಯಲ್ಲಿ ೫೩ ಸಿನಿಮಾಗೆ ಜೀವಕೊಟ್ಟಿದ್ದಾರೆ. ಮಾಸ್ ಹೀರೋ ಆಗಿ ಬೆಳ್ಳಿತೆರೆಮೇಲೆ ಧಗಧಗಿಸಿದ್ದಾರೆ, ಬಾಕ್ಸ್ಆಫೀಸ್ನಲ್ಲಿ ಕೋಟಿ ಕೋಟಿ ಕಮಾಯಿ ಕೊಟ್ಟು ಅನ್ನದಾತರನ್ನ ಬೆಳೆಸಿದ್ದಾರೆ. ಬಾಕ್ಸ್ಆಫೀಸ್ ಸುಲ್ತಾನ್ ಪಟ್ಟಕ್ಕೇರಿದ್ದಾರೆ. ಕೋಟ್ಯಾಂತರ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಕೋಟಿ ಕೋಟಿ ದುಡ್ಡು ಮಾಡಿದ್ದಾರೆ. ಇಷ್ಟೆಲ್ಲಾ ಸಾಧನೆ ಮಾಡೋದಕ್ಕೆ ದರ್ಶನ್ ಗುಂಪುಕಟ್ಟಿಕೊಂಡು ಹೋರಾಡಲಿಲ್ಲ. ಮೇಲ್ನೋಟಕ್ಕೆ ಚೆನ್ನಾಗಿದ್ದು ಒಳಗೊಳಗೆ ಕೇಡು ಬಯಸುವವರಿಗೂ ಕೂಡ ಒಳ್ಳೆಯದನ್ನೇ ಬಯಸಿದರು. ಒಬ್ಬಂಟಿಯಾಗಿ ಒಂಟಿಸಲಗದಂತೆ ಹೋರಾಡಿದರು. ಅದರ ಪ್ರತಿಫಲವೇ ಇವತ್ತು ಗಂಧದಗುಡಿಯಲ್ಲಿ ಸ್ವಂತ ಸಾಮ್ರಾಜ್ಯಕ್ಕೆ ಕಟ್ಟಲಿಕ್ಕೆ ಸಾಧ್ಯವಾಗಿದ್ದು, ತೂಗುದೀಪ ವಂಶ ವಜ್ರದಂತೆ ಹೊಳೆಯುತ್ತಿರುವುದು.
ಕ್ಷೇತ್ರ ಯಾವುದೇ ಇರಲಿ ಏಕಾಂಗಿ ಹೋರಾಟ ತುಂಬಾ ಕಷ್ಟ. ಕೈಗೊಬ್ಬರು.. ಕಾಲಿಗೊಬ್ಬರು ಆಳು.. ಹೆಸರು.. ಕೀರ್ತಿ..ಹಣ..ಆಸ್ತಿ.. ಎಲ್ಲವೂ ಇದ್ದವರು, ಬಲ ತುಂಬಿಕೊಂಡವರು ಒಂಟಿಸಲಗದ ಹೋರಾಟಕ್ಕೆ ಹಿಂಜರಿಯುತ್ತಾರೆ. ಆದರೆ, ದಚ್ಚು ಎದೆಗುಂದಲಿಲ್ಲ, ಮುಂದಿಟ್ಟ ಹೆಜ್ಜೆನಾ ಹಿಂದೆ ತೆಗೆದುಕೊಳ್ಳಲಿಲ್ಲ. ಬದಲಿಗೆ, ವ್ಯಕ್ತಿನಾ ನೋಡಿ ನನ್ನ ಶಕ್ತಿ ಡಿಸೈಡ್ ಆಗಲ್ಲ. ಸೆಡ್ಡು ಹೊಡೆದು ನಿಂತ್ಮೇಲೆ ಸೈಡಿಗೆ ಹೋಗೋ ಮಾತೇಯಿಲ್ಲ. ಹೀಗನ್ನುತ್ತಲೇ ಫೀಲ್ಡಿಗಿಳಿದರು. ಮೂವೀ ಎನ್ನುವ ಮಾಯಲೋಕದಲ್ಲಿ ಮಿನುಗಿದರು. ಸಿನಿಮಾ ಎನ್ನುವ ಸಾಮ್ರಾಜ್ಯದಲ್ಲಿ ಸುಂಟರಗಾಳಿ ಎಬ್ಬಿಸಿ ಒಡೆಯನಾದರು. ಹೀಗಾಗಿ, ಬಣ್ಣ ಹಚ್ಚುವವರು ಯಜಮಾನನ ಬದುಕನ್ನ ಸ್ಪೂರ್ತಿಯಾಗಿಟ್ಟುಕೊಂಡು ಸಿನಿಮಾ ಲೋಕಕ್ಕೆ ಎಂಟ್ರಿಕೊಡ್ತಾರೆ. ಯಜಮಾನ ಸಿನಿಮಾ ನಂತರ ಎರಡನೇ ಭಾರಿ ಕ್ಯಾಪ್ ತೊಟ್ಟಿರುವ ವಿ ಹರಿಕೃಷ್ಣ ಏಕಾಂಗಿಯಾಗಿ ಹೋರಾಡೋದನ್ನ ಕಲಿಯಿರಿ' ಎನ್ನುವ ಟ್ಯಾಗ್ಲೈನ್ ಜೊತೆಗೆ ಚಾಲೆಂಜಿಂಗ್ಕ್ರಾಂತಿ’ ಮಾಡಿಸೋದಕ್ಕೆ ಹೊರಟಿದ್ದಾರೆ.
ಕ್ರಾಂತಿ' ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ೫೫ನೇ ಸಿನಿಮಾ. ಸಿನಿಮಾರಂಗದಲ್ಲಿ ದಚ್ಚು ಬೆಳೆದು ನಿಂತ ಪರಿಯೇ ಒಂದು ರೀತಿ ಕ್ರಾಂತಿಯಾಗಿರುವುದರಿಂದ,ಕ್ರಾಂತಿ’ ಸಿನಿಮಾ ಬಹಳಷ್ಟು ನಿರೀಕ್ಷೆಯನ್ನ ಮೂಡಿಸಿದೆ. ಬಹುಭಾಷೆಯಲ್ಲಿ ಈ ಮೂವೀ ನಿರ್ಮಾಣ ಮಾಡೋದಕ್ಕೆ ನಿರ್ಮಾಪಕರಾದ ಶೈಲಜಾ ನಾಗ್ ಹಾಗೂ ಬಿ ಸುರೇಶ್ ನಿರ್ಧರಿಸಿದ್ದಾರೆ. ಕ್ರೇಜಾ.. ಕ್ರೇಜಿಗೆ ಅಪ್ಪನಪ್ಪನಪ್ಪ ಕಣೋ ಇವ್ರು ಅಂತ ಹೇಳಿ `ಯಜಮಾನ’ ಸುದ್ದಿಗೋಷ್ಟಿಯಲ್ಲಿ ಮತ್ತೊಂದು ಚಿತ್ರ ಮಾಡುವುದಾಗಿ ತಿಳಿಸಿದ್ದರು. ಅದರಂತೇ, ಅದ್ದೂರಿ ಚಿತ್ರಕ್ಕೆ ಕೈಹಾಕಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಕ್ರಾಂತಿ ಮಾಡೋದಕ್ಕೆ ಹೊರಟಿದ್ದಾರೆ. ಅಷ್ಟಕ್ಕೂ, ಸಾರಥಿಯ ಕೈಯಲ್ಲಿ ಯಾವ್ ರೀತಿಯ ಕ್ರಾಂತಿ ಮಾಡಿಸ್ತಾರೆ? ಆದ್ರೆ ಇಲ್ಲಿ ಕ್ಯೂರಿಯಾಸಿಟಿ ಹುಟ್ಟಿಸಿದ್ದು ಕ್ರಾಂತಿ ಹೆಸರಿನ ಚಿತ್ರಕ್ಕೆ ಕೊಟ್ಟ ಟ್ಯಾಗ್ ಲೈನ್. ಲರ್ನ್ ಟು ಫೈಟ್ ಅಲೋನ್. ಅಂದ್ರೆ ಏಕಾಂಗಿಯಾಗಿ ಹೋರಾಡೋದನ್ನು ಕಲಿ ಅಂತ. ಹಾಗಾದ್ರೆ.. ಬೆಳ್ಳಿ ತೆರೆ ಮೇಲೆ ಹೀಗೆ ಹೇಳಲು ಹೊರಟವರು ಯಾರು ? ನಿರ್ದೇಶಕ ಹರಿಕೃಷ್ಣ ತಮ್ಮ ಕಥೆ ಮೂಲಕ ದರ್ಶನ್ ಅವರ ರಿಯಲ್ ಕಥೆ ಹೇಳಿಸ್ತಾರಾ ಅಥವಾ ಹೊಸ ಕಥೆನಾ ಕಟ್ಟಿ ಕೊಡ್ತರಾ ಅನ್ನೋದಿಕ್ಕೆ ಚಿತ್ರ ನೋಡಿದಾಗಲೇ ಗೊತ್ತಗಲಿದೆ. ಅಲ್ಲಿವರೆಗೂ ನೀವು ಒಬ್ಬಂಟಿಯಾಗಿ ಫೈಟ್ ಮಾಡಿ.
ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ಅವರಿಗೆ ನಿರ್ದೇಶಕ ಹಾಗೂ ಪತ್ರಕರ್ತ ಚಕ್ರವರ್ತಿ ಚಂದ್ರಚೂಡ್ ಶನಿಯಂತೆ ಹೆಗಲೇರುವುದು ಗ್ಯಾರಂಟಿ ಆಗಿದೆ. ಅತ್ತ ಡ್ರಗ್ಸ್ ಕೇಸ್ ನಲ್ಲಿರುವವರೆಲ್ಲರೂ ಜೈಲು ಕಂಬಿ ಎಣಿಸಬೇಕೆಂದು ಸಂಬರಗಿ ಗುಡುಗುತ್ತಿದ್ದರೆ, ಇತ್ತ ಸಂಬರಗಿ ಅವರನ್ನೇ ಚಂದ್ರಚೂಡ್ ಕಾನೂನು ತಂತ್ರ ಹೆಣೆಯುತ್ತಿದ್ದಾರೆ. ಗಣೇಶ್ ಹಬ್ಬದ ದಿನವಾದ ಶುಕ್ರವಾರವಷ್ಟೇ ಸೋಷಲ್ ಮೀಡಿಯಾದಲ್ಲಿ ಸಂಬರಗಿ ಅವರ ಮುಖವಾಡ ಬಯಲು ಮಾಡಿದ್ದ ಚಂದ್ರಚೂಡ್, ಈಗ ಅವರ ವಿರುದ್ಧ ಕಾನೂನು ಹೋರಾಟಕ್ಕೂ ಸಿದ್ದತೆ ನಡೆಸಿದ್ದಾರೆ. ಶುಕ್ರವಾರವೇ ಸಂಜೆ ಈ ಸಂಬಂಧ ವಕೀಲರೂ ಹಾಗೂ ಆವರ ಆತ್ಮೀಯರಾದ ಸೂರ್ಯ ಮುಕುಂದರಾಜ್ ಮತ್ತು ಸಂಪತ್ ಕುಮಾರ್, ಜತೆಗೆ ಚರ್ಚೆ ನಡೆಸಿದ್ದಾರೆ. ತಮ್ಮ ನಿವಾಸದಲ್ಲಿಯೇ ಈ ಕುರಿತು ಮಾತುಕತೆ ನಡೆಸಿರುವ ಫೋಟೋಗಳನ್ನು ಸೋಷಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಚಂದ್ರಚೂಡ್, ಕಾನೂನು ಸಮರಕ್ಕೆ ಸಿದ್ದ ಎಂದು ಹೇಳಿದ್ದಾರೆ. ಇಷ್ಟಕ್ಕೂ, ಸಂಬರಗಿ ವಿರುದ್ಧ ಕಾನೂನು ಹೋರಾಟಕ್ಕೆ ಚಂದ್ರಚೂಡ್ ನೀಡುವ ಪ್ರಮುಖ ಕಾರಣಗಳೇನು ? ಸಂಬರಗಿ ಮಾಡಿರುವ ಅಪರಾಧಗಳೇನು ? ಅದೆಲ್ಲದ್ದರ ಬಗ್ಗೆ ಚಂದ್ರಚೂಡ್ ಅಧಿಕೃತವಾಗಿಯೇ ಸೋಷಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದೀಷ್ಟು…
ಸಾಮಾಜಿಕ ಕಾರ್ಯಕರ್ತ (ನಿಜವಾದ ಹೋರಾಟಗಾರರಲ್ಲಿ ಕ್ಷಮೆ ಕೇಳಿ )ನನ್ನ ಮೇಲೆ ವಿಪರೀತ ಕೇಸುಗಳನ್ನು ಹಾಕಲಾಗಿದೆ ಎಂದು ಪೋಸು ಕೊಡುವಾಗಲೇ -ಸಣ್ಣದೊಂದು ಮಾಹಿತಿ ತೆಗೆದರೆ ಈತ ಒಬ್ಬ ನೆಲಹಿಡುಕ ಅವುಗಳ ಹಳವಂಡದ ಕೇಸುಗಳವು. ಸೋನಿಯಾ ಗಾಂಧಿ ಮತ್ತು ಕುಸುಮಾ ಹನುಮಂತರಾಯರಪ್ಪ ಅವರ ವಿರುದ್ಧ ನೀಡಿದ ಸಂವಿಧಾನ ವಿರೋಧಿ ಹೇಳಿಕೆಗಳ ಕಾರಣಕ್ಕೆ ಕಾಂಗ್ರೆಸ್ ನ ಲೀಗಲ್ ಸೆಲ್ ಕೇಸು ಜಡಿದಿದೆ. ನಂತರ ದೇವನಾಥ್ ಎಂಬುವವರು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.ಉಳಿದವುಗಳಲ್ಲೇ ಭೂತಾಯಿಯ ದಲ್ಲಾಳಿ (ಅವನದೇ ಹೇಳಿಕೆ)ತನದ ಕಾರಣದ ಕೇಸುಗಳು. -ಇವನ ಬಳಿ ಇರುವ ರೇಂಜ್ ರೇವರ್ ಕಾರು ಸಿಸಿಬಿ ಕೇಸು, ಬಿಡಿಎ ರವಿ ಎಂಬಾತ ,ದೇವನಾಥ್ ಎಂಬಾತನ ಗೆಳೆತನ -ಇವುಗಳ ಸಣ್ಣ ತನಿಖೆ ಮಾಡಿದಾಗ ತಿಳಿದದ್ದು ತನ್ನ ಹೆಸರಿನ ಲೋನ್ ಪಡೆದು ಕಾರ್ ಕೊಡಿಸಿ ಅದಕ್ಕೂ ಕಮಿಷನ್ ಪಡೆದು ರಾತ್ರೋರಾತ್ರಿ ತನ್ನದೇ ಕಾರೆಂದು ನಂಬಿದ ಸ್ನೇಹಿತನಿಗೇ ವಿಶ್ವಾಸ ದ್ರೋಹ ಮಾಡಿದ ಆಸಾಮಿ ಕಂಡವರ ಬಗ್ಗೆ ಸುಳ್ಳು ಆಸ್ತಿಗಳ ಲೆಕ್ಕ ಕೇಳುತ್ತಾನೆ.
ರಾಗಿಣಿ ಸಂಜನಾ ,ಅನುಶ್ರೀ ಜಮೀರ್ ಮಹಮದ್ ಮುಂತಾದವರ ಬಗ್ಗೆ ಈತ ಈವರೆಗೂ ಒಂದು ಔನ್ಸಿನ ಮಾಹಿತಿ ಕೊಟ್ಟಿಲ್ಲ. ಪೋಲೀಸರ ಕಾರ್ಯಚರಣೆಯ predictions ಗಳನ್ನ ಹೇಳುವ ಜ್ಯೋತಿಷಿ ಇವನು.ಸಿಸಿಬಿ ಕಛೇರಿಯಿಂದ ಬುಲಾವ್ ಹೋದಾಗ ಇವನು ಹಿಡಿದಿದ್ದ ಫೈಲನ್ನೇ ಝೂಮ್ ಮಾಡಿ ಮಾಡಿ ತೋರಿಸಿದವು ಕ್ಯಾಮರಾಗಳು. -ಇವನ ಮೂಲ ಊರು ಮರಾಠರ ಪ್ರಾಂತ್ಯದ್ದು.ಬಿಜೆಪಿಯ ಬೂಟಿನ ರುಚಿಗಾಗಿ ಹಪಹಪಿಸುವ ಇವನು ಕನ್ನಡ ವಿರೋಧಿ ಹಿಂದಿ ಹೇರಿಕೆಯ ಹೇಳಿಕೆಗಳನ್ನ ನಾವೆಲ್ಲ ನೋಡಿಯೂ ಕೇಳಿಯೂ ಕನ್ನಡಿಗ ಅಂತ ಒಪ್ಪಿಕೊಳ್ಳುವವರ ಎದೆಭಾಷೆಯಬಗ್ಗೆ ನನಗಂತೂ ಅನುಮಾನ. ಹಾಳುಬಿದ್ದು ಹೋಗಲಿ ರಾಜಕೀಯ ಕಾರಣಕ್ಕೆ ತಾಯಿಭಾಷೆಯ ಬಲಿಕೊಡುವ ಇಂತಹ ನೆಲಹಿಡುಕರೂ ಇದ್ದಾರೆಂದರೆ ನೆಟ್ಟಗೆ ಕನ್ನಡದ ಸ್ವರ ವ್ಯಂಜನಗಳ ಪರಿಚಯವಿಲ್ಲ.
ಇನ್ನು ಇವನಿಗೆ ಜೀವದ ಗೆಳೆಯರಿರುವುದು ನನಗೆ ಅರಿವಿಲ್ಲ .ಎಲ್ಲರ ಮಾತೂ ರೆಕಾರ್ಡ್ ಎಲ್ಲರ ವೀಡಿಯೋ ರೆಕಾರ್ಡೂ…. ಬಿಗ್ ಬಾಸ್ ನ ಎರಡನೇ ಇನ್ನಿಂಗ್ಸ್ ನ ಕ್ವಾರೈಂಟೈನ್ ಸಂದರ್ಭದಲಿ ಸ್ಪರ್ಧಿ ಅರವಿಂದ ಸೇರಿದಂತೆ ಹಲವರಿಗೆ ಮಧ್ಯಪಾನದ ಪಾರ್ಟಿಕೊಟ್ಟು ( ಚಾನಲ್ ನಿಯಮಾವಳಿ ವಿರೋಧಿಸಿ)ವಿಡಿಯೋ ಮಾಡಿದ .ಸಧ್ಯ ನಾನು ಇಂತಹ ಚಾಣಪತ್ರಿಗಳನ್ನ ತುಂಬಾ ನೋಡಿದವನು ಕ್ಷಣಮಾತ್ರದಲ್ಲಿ ಕುತಂತ್ರ ಕಂಡುಹಿಡಿದು ಹೆಣ್ಣುಮಕ್ಕಳು ಅವನ ರೂಮಿಂದ ಹೋಗುವಂತೆ ಮಾಡಿದೆ.ಆದರೂ ಅರವಿಂದರ ವೀಡಿಯೋ ಮಾಡಿ ಅದನ್ನು ಯಾವಾಗ ಬಿಡುಗಡೆ ಮಾಡಬೇಕೆಂದು ಚಂದನ್ ಎಂಬ ಟ್ರೋಲಿಗನಿಗೆ ಕೊಟ್ಟುಬಂದ
ಜೀವನದಲ್ಲಿ ತಪ್ಪೇ ಮಾಡಾದವರು ಇಲ್ಲವೆಂದಲ್ಲ.ಈಗ ನೋಡಿ ಶುಗರ್ ಡ್ಯಾಡಿ ಪುಸ್ತಕ ಅಂತಾನೆ ಜಮೀರ್ ದಾಯಿತೀಗ ನವೆಂಬರ್ ಒಂದರ ಮಹೂರ್ತಕ್ಕೆ ಆಡಿಯೋ ಬಿಡ್ತೀನಿ ಅಂತಾನೆ.ಮಾಧ್ಯಮಗಳು ಜೊಲ್ಲಿನ ನಾಲಿಗೆಯೊಡ್ಡುತ್ತವೆ.ಹೀಗೆ ತಿಂಗಳಾನುಗಟ್ಟಲೆ ತಾರೀಖು ನೀಡಿ ದಾಖಲೆ ಕೊಡ್ತೀನಿ ಎನ್ನುವ ಕಳ್ಳಾಟದಿಂದ ಆಗುವ ಅನಾಹುತಕ್ಕೆ ಮಾಧ್ಯಮಗಳೂ ಹೊಣೆ.ಇವನ ಬ್ಲಾಕ್ ಮೇಲ್ ತಂತ್ರದಲ್ಲಿ ಈಗ ಅವರೂ ಪಾಲುದಾರರು.
ಇವನ ಸಿಮ್ ಕಾರ್ಡ್ ಮೊಬೈಲ್ ಜಪ್ತಿ ಮಾಡಿ ಕಾರ್ ಡೀಲರ್ ಹೆಸರಿನ ನಂಬರ್ ಗಳ ತಲೆಹಿಡುಕರ ಪಟ್ಟಿ ತೆಗೆದರೆ ಇವನ ಪತ್ನಿ ಸಂಗೀತ ಸಂಬರ್ಗಿ ಪಾಪ ಅದು ಹೇಗೆ ಮತ್ತೆ ಇವನ ಮುಖ ನೋಡುತ್ತಾರೋ? -ಖ್ಯಾತ ಗಾಯಕ ರಘುಧೀಕ್ಷಿತ್ ಬಗ್ಗೆ ಡ್ರಗ್ಸ್ ಆರೋಪ ಮಾಡಿದ.ರಘು ವ್ಯಯಕ್ತಿಕ ಜೀವನದ ನೋವು ನಲಿವುಗಳೇನೇ ಇರಲಿ ಇವನ ಆರೋಪವನ್ನ ಧೂಳಂತೆ ಕೊಡವಿಕೊಂಡು ಎದ್ದರು.ಈ ಗಿಂಡಿಮಾಣಿ ರಘು ಅವರನ್ನ ಇನ್ನೋವೇಟಿವ್ ಸಿಟಿಯಲ್ಲಿ ಮಾತಾದರೂ ಆಡಿಸಲು ತುಂಬಾ ಕರುಳು ಸವೆಸಿದರೂ ಪ್ರಯೋಜನವಾಗಲಿಲ್ಲ.ಅಷ್ಟಕ್ಕೂ ಡ್ರಗ್ ಕುರಿತಂತೆ ಪಾಲುದಾರರಿಗೆ ಶಿಕ್ಷೆಯಾಗಲಿ .ಜೊತೆಗೆ ಇಂತಹ ನಕಲಿಗಳ ಮುಖವಾಡ ಬಯಲಾಗಲಿ. ಈ ಕುರಿತಂತೆ ಯಾವ ವೇದಿಕೆಯಲ್ಲಾದರೂ ಚರ್ಚೆಗೆ ಸಿದ್ಧ….. ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿ ವಿರುದ್ಧ ಚಕ್ರವರ್ತಿ ಚಂದ್ರಚೂಡ್ ಮಾಡಿರುವ ಆರೋಪಗಳಿವು. ಸದ್ಯಕ್ಕೆ ಅವರು ಇವೆಲ್ಲವನ್ನು ಇಟ್ಟುಕೊಂಡೇ ಕಾನೂನು ಸಮರ ನಡೆಸುವುದಾಗಿ ಹೇಳುತ್ತಿದ್ದಾರೆ. ಮುಂದೆನದು ಕಾನೂನು ಹೋರಾಟ. ಅದು ಎಲ್ಲಿಗೆ ಹೋಗಿ ನಿಲ್ಲತ್ತೋ ಕಾದು ನೋಡಬೇಕಿದೆ.
“ರಕ್ತ ಚಿಮ್ಮುವ ಅಖಾಡದಲ್ಲಿ ನಿಷ್ಠೆಯ ನೂರು ತಲೆಗಳು ಬಿದ್ದರೂ, ಪ್ರತಿಷ್ಠೆಯ ತಲೆ ಮಾತ್ರ ಬೀಳಬಾರದು… ಮಾರ್ಕೆಟ್ನಲ್ಲಿ ಮಾರೋಕೆ ಏನ್ ತಂದಿದ್ದೇವೆ ಅನ್ನೋದರ ಮೇಲೆ ಬೆಲೆ..” ಇದಿಷ್ಟೇ ಡೈಲಾಗ್ ಆ ಟೀಸರ್ನಲ್ಲಿದೆ. ಅದರ ಮೇಕಿಂಗ್ ನೋಡಿದವರಿಗೆ ಅದೊಂದು ಪಕ್ಕಾ ಮಾಸ್ ಫೀಲ್ ಇರುವ ಸಿನಿಮಾ ಎನಿಸದೇ ಇರದು. ಅಷ್ಟರಮಟ್ಟಿಗೆ ನಿರ್ದೇಶಕ ತಾಯಿ ಲೋಕೇಶ್ ಕಟ್ಟಿಕೊಟ್ಟಿದ್ದಾರೆ. ಶೀರ್ಷಿಕೆ ಹೇಳುವಂತೆಯೇ, ಇದೊಂದು ಟೊಮೆಟೊ ಕಥೆ ಎನಿಸುತ್ತೆ. ಟೊಮ್ಯಾಟೊ ಕಲರ್ ರೆಡ್ ಆಗಿದ್ದರೂ, ಅದರಲ್ಲಿ ರೆಡ್ ಶೇಡ್ ಜಾಸ್ತೀನೆ ಇರಬಹುದಾ ಎಂಬ ಪ್ರಶ್ನೆ ಟೀಸರ್ ನೋಡಿದವರಿಗೆ ಗೊತ್ತಾಗುತ್ತೆ. ಇದು ವಾಸ್ತವತೆಗೆ ಹತ್ತಿರದ ಕಥೆ ಅನ್ನುವುದನ್ನು ಹೇಳುತ್ತದೆ
ಕನ್ನಡದಲ್ಲಿ ದಿನ ಕಳೆದಂತೆ ಹೊಸಬರ ಸಿನಿಮಾಗಳು ಶುರುವಾಗುತ್ತಲೇ ಇವೆ. ಅದರಲ್ಲೂ ಹೊಸ ಪ್ರತಿಭಾವಂತರು ಅಂದರೆ ಸುಮ್ಮನೆ ಅಲ್ಲ ಬಿಡಿ. ಮೊದಲ ಪ್ರಯತ್ನದಲ್ಲೇ ಸುದ್ದಿಯಾಗಿಬಿಡುತ್ತಾರೆ. ಇಲ್ಲೀಗ ಹೇಳಹೊರಟಿರುವುದು ಹೊಸ ಸಿನಿಮಾದ ಫಸ್ಟ್ ಲುಕ್ ಕುರಿತು. ಅಷ್ಟೇ ಅಲ್ಲ, ಈಗಾಗಲೇ ಆ ಚಿತ್ರದ ಟೀಸರ್ ಕೂಡ ಬಿಡುಗಡೆಯಾಗಿದೆ. ಪ್ರತಾಪ್ ನಾರಾಯಣ್ ಅಭಿನಯದ ಈ ಚಿತ್ರದ ಫಸ್ಟ್ ಲುಕ್ ವಿಶೇಷವೆನಿಸಿದೆ. ಹೌದು, ಅ ಚಿತ್ರದ ಹೆಸರು. “ದಿ ಕಲರ್ ಆಫ್ ಟೊಮೆಟೊ” ಚಿತ್ರದ ಶೀರ್ಷಿಕೆಯೇ ವಿಭಿನ್ನ ಅಂದುಕೊಂಡರೆ, ಕಥೆ ಅದಕ್ಕಿಂತಲೂ ವಿಭಿನ್ನವಾಗಿರುತ್ತೆ ಎನ್ನುವುದರಲ್ಲಿ ಎರಡು ಮಾತಿಲ್ಲ ಬಿಡಿ.
ಯಾಕೆಂದರೆ, ಈ ಚಿತ್ರದ ಕಥೆ ಬರೆದಿರೋದು. ಕೋಟಿಗಾನಹಳ್ಳಿ ರಾಮಯ್ಯ. ಈ ಹೆಸರೇ ಸಾಕು ಅದ್ಭುತ ಕಥೆಗಾರ ಅನ್ನುವುದಕ್ಕೆ. ಈಗಾಗಲೇ “ಮೂಕ ಹಕ್ಕಿ” ಸಿನಿಮಾನೇ ಸಾಕು ಅವರ ಬರಹ ಎಂಥದ್ದು ಅಂತ ತಿಳಿಯೋಕೆ. ಅದಾಗಲೇ ಸಾಬೀತು ಮಾಡಿರುವ ಕೋಟಿಗಾನಹಳ್ಳಿ ರಾಮಯ್ಯ, ಈಗ ಮತ್ತೊಂದು ಸಿನಿಮಾ ಮೂಲಕ ಹೊಸ ವಿಷಯ ಹೇಳೋಕೆ ಬಂದಿದ್ದಾರೆ. ಅವರ ಬರಹದಲ್ಲಿ ಸಾಕಷ್ಟು ವಿಶೇಷತೆಗಳಿರುತ್ತವೆ ಎನ್ನುವುದನ್ನು ಹೆಚ್ಚೇನು ಹೇಳಬೇಕಿಲ್ಲ. ಇನ್ನೂ ಬಿಡುಗಡೆಯ ಹಂತದಲ್ಲಿರುವ ಕನ್ನೇರಿ ಸಿನಿಮಾಗೂ ಕೋಟಿಗಾನಹಳ್ಳಿ ರಾಮಯ್ಯ ಅವರದೇ ಬರವಣಿಗೆ ಇದೆ. ಈಗ “ದಿ ಕಲರ್ ಆಫ್ ಟೊಮೆಟೊ” ಸಿನಿಮಾಗೂ ಕಥೆ ಬರೆದಿದ್ದಾರೆ. ಈ ಸಿನಿಮಾಗೆ ಸ್ವಾತಿ ಕುಮಾರ್ ನಿರ್ಮಾಪಕರು. ತಾಯಿ ಲೋಕೇಶ್ ನಿರ್ದೇಶನ ಮಾಡುತ್ತಿರುವ ಸಿನಿಮಾ ಇದು. ಈಗಾಗಲೇ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಅದರೊಂದಿಗೆ ಟೀಸರ್ ಕೂಡ ರಿಲೀಸ್ ಮಾಡಲಾಗಿದೆ.
“ರಕ್ತ ಚಿಮ್ಮುವ ಅಖಾಡದಲ್ಲಿ ನಿಷ್ಟೆಯ ನೂರು ತಲೆಗಳು ಬಿದ್ದರೂ, ಪ್ರತಿಷ್ಟೇಯ ತಲೆ ಮಾತ್ರ ಬೀಳಬಾರದು… ಮಾರ್ಕೆಟ್ನಲ್ಲಿ ಮಾರೋಕೆ ಏನ್ ತಂದಿದ್ದೇವೆ ಅನ್ನೋದರ ಮೇಲೆ ಬೆಲೆ..” ಇದಿಷ್ಟೇ ಡೈಲಾಗ್ ಆ ಟೀಸರ್ನಲ್ಲಿದೆ. ಅದರ ಮೇಕಿಂಗ್ ನೋಡಿದವರಿಗೆ ಅದೊಂದು ಪಕ್ಕಾ ಮಾಸ್ ಫೀಲ್ ಇರುವ ಸಿನಿಮಾ ಎನಿಸದೇ ಇರದು.
ದಿ ಕಲರ್ ಆಫ್ ಟೊಮೆಟೊ ಟೀಸರ್
ಅಷ್ಟರಮಟ್ಟಿಗೆ ನಿರ್ದೇಶಕ ತಾಯಿ ಲೋಕೇಶ್ ಕಟ್ಟಿಕೊಟ್ಟಿದ್ದಾರೆ. ಚಿತ್ರದ ಶೀರ್ಷಿಕೆ ಹೇಳುವಂತೆಯೇ, ಇದೊಂದು ಟೊಮ್ಯಾಟೊ ಕಥಾಹಂದರ ಹೊಂದಿರುವ ಸಿನಿಮಾ. ಟೊಮೆಟೊ ಕಲರ್ ರೆಡ್ ಆಗಿದ್ದರೂ, ಅದರಲ್ಲಿ ರೆಡ್ ಶೇಡ್ ಜಾಸ್ತೀನೆ ಇರಬಹುದಾ ಎಂಬ ಪ್ರಶ್ನೆ ಟೀಸರ್ ನೋಡಿದವರಿಗೆ ಗೊತ್ತಾಗುತ್ತೆ.
ಅದರಲ್ಲೂ, ಇದು ವಾಸ್ತವತೆಗೆ ಹತ್ತಿರವಾಗಿರುವ ಕಥೆ ಅನ್ನುವುದನ್ನು ಈ ಟೀಸರ್ ಹೇಳುತ್ತದೆ. ರೈತ ಇಂದು ಟೊಮೆಟೊ ಬೆಳೆಗೆ ಬೆಂಬಲ ಸಿಗದೆ ಪರದಾಡುತ್ತಿದ್ದಾನೆ. ಇಂತಹ ಸಂದರ್ಭದಲ್ಲಿ ರೈತ ರೊಚ್ಚಿಗೆದ್ದರೆ ರಕ್ತಪಾತವೂ ಗ್ಯಾರಂಟಿ ಅನ್ನೋದು ಯಾವಾಗಲೋ ಸಾಬೀತಾಗಿದೆ. ಅದೇನೆ ಇರಲಿ, ಇಲ್ಲಿ ನಿರ್ದೇಶಕ ತಾಯಿ ಲೋಕೇಶ್ ಏನು ಹೇಳೋಕೆ ಹೊರಟಿದ್ದಾರೋ ಗೊತ್ತಿಲ್ಲ. ಟೀಸರ್ ನೋಡಿದ ಮೇಲೆ, ಅದೊಂದು ಪಕ್ಕಾ ಮಾಸ್ ಎಲಿಮೆಂಟ್ಸ್ ಇರುವ ಸಿನಿಮಾ ಅನ್ನೋದು ಗೊತ್ತಾಗುತ್ತೆ. ಟೀಸರ್ ಮೇಕಿಂಗ್ ಜೊತೆಗೆ ಹಿನ್ನೆಲೆ ಸಂಗೀತ ಇಲ್ಲಿ ಗಮನಸೆಳೆಯುತ್ತದೆ. ಅಲ್ಲೊಂದು ಕುತೂಹಲವೂ ಇದೆ. ಆ ಕುತೂಹಲ ಏನೆಂಬುದಕ್ಕೆ ಸಿನಿಮಾ ಬರೋವರೆಗೆ ಕಾಯಬೇಕು.
ನಿರ್ದೇಶಕ ತಾಯಿ ಲೋಕೇಶ್ ಅವರು ರಂಗಭೂಮಿ ಹಿನ್ನೆಲೆಯಿಂದ ಬಂದವರು. ಹಾಗಾಗಿ ಒಂದಷ್ಟು ಹೋರಾಟದ ಛಾಯೆ ಈ ಟೀಸರ್ನಲ್ಲೂ ಈಗಾಗಲೇ ಎದ್ದು ಕಾಣುತ್ತಿದೆ. ಸಾಂಸ್ಕೃತಿಕ ಲೋಕದ ಬಗ್ಗೆ ಅಪಾರ ಒಲವು ಇಟ್ಟುಕೊಂಡಿರುವ ತಾಯಿ ಲೋಕೇಶ್, ಹಲವು ಬೀದಿ ಬದಿಯ ಬದುಕನ್ನು, ಪಾತ್ರಗಳನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆ ಹಿಡಿದು ದಾಖಲಿಸಿದ್ದಾರೆ.
ದೊಡ್ಡವರ, ಚಿಂತಕರ ಒಡನಾಟವಿರಿಸಿಕೊಂಡಿರುವ ಅವರಿಗೆ ಸಿನಿಮಾ ಹುಚ್ಚು ಹೆಚ್ಚು. ಸಿನಿಮಾ ಕಥೆ ಬಗ್ಗೆ ಅಪಾರ ಆಸಕ್ತಿ ತೋರುವ ಅವರಿಗೆ ಸಿನೆಮಾವನ್ನು ಹೇಗೆ ಕಟ್ಟಬೇಕು ಎಂಬ ಕುರಿತು ಅರಿವಿದೆ. ಒಳ್ಳೆಯ ಆಲೋಚನೆಗಳೊಂದಿಗೆ “ದಿ ಕಲರ್ ಆಫ್ ಟೊಮೆಟೊ” ಸಿನಿಮಾ ಮಾಡಲು ಹೊರಟಿರುವ ಅವರ ತಂಡಕ್ಕೆ “ಸಿನಿಲಹರಿ” ಶುಭ ಹಾರೈಸಲಿದೆ.
ಚೇತನ್ ಒಬ್ಬ ನಟ. ಹಾಗೆಯೇ ಒಬ್ಬ ಸಾಮಾಜಿಕ ಹೋರಾಟಗಾರ. ಅವರಿಗಿರುವ ಅವೆರೆಡು ಬ್ರಾಂಡ್ ಗಳ ಬಗ್ಗೆ ಅನುಮಾನವೇ ಇಲ್ಲ. ಅದರಾಚೆ ಅವರು ಯಾರು ? ಅವರ ಹಿಂದಿನ ಶಕ್ತಿಯಾವುದು ? ಹೋಗ್ಲಿ ಅವರು ಒಪ್ಪಿ-ಅಪ್ಪಿಕೊಂಡಿರುವ ಸಿದ್ದಾಂತವಾದ್ರು ಯಾವ್ದು? ಈ ಪ್ರಶ್ನೆಗಳಿಗೆ ಈಗಲೂ ಉತ್ತರ ಇಲ್ಲ. ಹಾಗೆಯೇ ಚೇತನ್ ಅವರದ್ದು ಎಡಪಂಥವೂ ಅಲ್ಲ ಬಲಪಂಥವೂ ಅಲ್ಲ.
ನಟ ಚೇತನ್ ಅಹಿಂಸ ಹೀಗೇಕಾದ್ರೂ ? ಹೀಗಂತ ಕೇಳ್ತೀರೋದು ನಾವಲ್ಲ, ಬದಲಿಗೆ ಕನ್ನಡದ ಸಿನಿಮಾ ಪ್ರೇಕ್ಷಕರು ಹಾಗೂ ಅವರನ್ನು ಹತ್ತಿರದಿಂದ ಬಲ್ಲವರು. ಯಾಕಂದ್ರೆ ನಟ ಚೇತನ್ ದಿನೇ ದಿನೇ ತಾವೊಬ್ಬ ಕಾಂಟ್ರೋವರ್ಷಿ ಹೀರೋ ಎನ್ನುವುದನ್ನು ಪ್ರೂ ಮಾಡುತ್ತಲೇ ಹೊರಟಿದ್ದಾರೆ. ಕೊರೋನಾ ನಂತರದ ಈ ದಿನಗಳಲ್ಲಿ ಉಪೇಂದ್ರ ಆಯ್ತು, ಕುಮಾರ ಸ್ವಾಮಿ ಆಯ್ತು, ಕೊನೆಗೆ ಸಿದ್ದರಾಮಯ್ಯ ಅವರನ್ನು ಬಿಡದೆ ಅವರನ್ನು ಟೀಕಿಸಿದ್ದು ಮುಗೀತು. ಅಲ್ಲಿಂದೀಗ ಕಾಂಗ್ರೆಸ್ಗೂ ಆರ್ಎಸ್ಎಸ್ ಸಂಘಟನೆಯ ನಂಟು ಅಂಟು ಹಾಕಿ, ಬಾಯಿಗೆ ಬಂದಂತೆ ಟೀಕಿಸಿದ್ದಾರೆ. ಸೋಷಲ್ ಮೀಡಿಯಾದಲ್ಲಿ ಅವರು ಹಾಕಿರುವ ಸ್ಟೇಟಸ್ ದೊಡ್ಡ ವಿವಾದಕ್ಕೂ ನಾಂದಿ ಹಾಡಿದೆ. ಉಪೇಂದ್ರ ಬಿಟ್ರು, ಕುಮಾರ ಸ್ವಾಮಿ ಬಿಟ್ರು, ಹೋಗ್ಲಿ ಬಿಡಿ ಆತ ನಮ್ಮಡುಗ ಅಂತ ಸಿದ್ದರಾಮಯ್ಯ ಕೂಡ ಬಿಟ್ರು, ಹಾಗಂತ ಇಡೀ ಪಾರ್ಟಿಗೇ ಡ್ಯಾಮೇಜ್ ಮಾಡಲು ಹೊರಟ್ರೆ, ಕಾಂಗ್ರೆಸ್ನವ್ರು ಬಿಡ್ತಾರಾ?
ಸದ್ಯಕ್ಕೆ ಗೊತ್ತಾಗಿರುವ ಮಾಹಿತಿ ಪ್ರಕಾರ ನಟ ಚೇತನ್ ಅವರ ವಿರುದ್ಧ ಸೋಷಲ್ ಮೀಡಿಯಾದಲ್ಲಿಯೇ ತಕ್ಕ ಉತ್ತರ ನೀಡಲು ಕಾಂಗ್ರೆಸ್ ಮುಂದಾಗಿದೆ. ಮುಂದೆಯೂ ಹೀಗೆಯೇ ಅರ್ಥಹೀನ ಟೀಕೆ ಮಾಡಿದರೆ ಸರಿಯಾದ ಉತ್ತರ ನೀಡಲು ಕಾಂಗ್ರೆಸ್ ಮುದಾಗಿದೆಯಂತೆ. ಇರಲಿ ಬಿಡಿ, ಅದನ್ನ ಅವರವರು ನೋಡಿ ಕೊಳ್ತಾರೆ. ಪ್ರಶ್ನೆ ಇರೋದು ನಟ ಚೇತನ್ ಹೀಗೇಕೆ ಅಂತ. ಹಾಗಂತ ಸಿನಿಮಾ ಪ್ರೇಕ್ಷಕರಿಗೆ ಈ ಪ್ರಶ್ನೆ ಕಾಡ್ತಿರೋದು ಇದೇ ಮೊದಲು ಅಲ್ಲ. ಅವರು ನಟರಾಗಿ ಕನ್ನಡ ಚಿತ್ರರಂಗಕ್ಕೆ ಬಂದ ಆ ದಿನಗಳಿಂದಲೂ ನಟ ಚೇತನ್ ಕೊಂಚ ವಿಚಿತ್ರವಾಗಿಯೇ ಕಾಣಿಸಿಕೊಂಡಿದ್ದು ನಿಮಗೆಲ್ಲ ಗೊತ್ತೇ ಇದೆ. ಅದು ಅವರ ಖಾಸಗಿ ಬದುಕಿನ ಜತೆಗೆ ಸಿನಿ ಕೆರಿಯರ್ ದೃಷ್ಟಿಯಿಂದಲೂ ಹೌದು. ಯುವ ನಿರ್ದೇಶಕ ಕೆ.ಎಂ. ಚೈತನ್ಯ ನಿರ್ದೇಶನ ʼ ಆ ದಿನಗಳುʼ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಯಾದವರು ನಟ ಚೇತನ್. ಇದು ಅವರ ಚೊಚ್ಚಲ ಸಿನಿಮಾ. ಅಮೆರಿಕದಲ್ಲಿದ್ದ ಹುಡುಗ ದಿಢೀರ್ ಕನ್ನಡಕ್ಕೆ ಬಂದು ದೊಡ್ಡ ಸಂಚಲನ ಸೃಷ್ಟಿಸಿದರು.
ಮಾಜಿ ಡಾನ್ ಅಗ್ನಿ ಶ್ರೀಧರ್ ಅವರದ್ದೇ ಬದುಕಿನ ಈ ಕಥಾ ಚಿತ್ರದಲ್ಲಿ ನಟ ಚೇತನ್ ಭರವಸೆಯ ತಾರೆಯಾಗಿ ಕಾಣಿಸಿಕೊಂಡರು. ಇನ್ನೇನು ಬಹುಬೇಡಿಕೆಯ ನಟನಾಗಿ ಅವರು ಕನ್ನಡ ಚಿತ್ರರಂಗದಲ್ಲಿ ಬ್ಯುಸಿ ನಟ ಎನಿಸಿಕೊಳ್ತಾರೆ ಎನ್ನುವ ಸಿನಿಮಾ ಪ್ರೇಕ್ಷಕರ ನಿರೀಕ್ಷೆಯ ನಡುವೆಯೇ ಚೇತನ್ ಕಾಣೆಯಾದರು. ವಾಪಾಸ್ ಅಮೆರಿಕಕ್ಕೆ ಹೋದರು. ಒಂದಷ್ಟು ದಿನಗಳ ನಂತರ ಮತ್ತೆ ಅಲ್ಲಿಂದ ಬಂದವರುʼ ಮೈನಾʼ ದಂತಹ ಬ್ಲಾಕ್ ಬಸ್ಟರ್ ಚಿತ್ರದಲ್ಲಿ ಅಭಿನಯಿಸಿದರು. ಕನ್ನಡ ಚಿತ್ರರಂಗದಲ್ಲಿ ಮತ್ತೆ ಹೊಸ ಭರವಸೆ ಮೂಡಿಸಿದರು. ಆದ್ರೇನು, ಮುಂದೆ ಮತ್ತೆ ಚೇತನ್ ನಟನೆಯಾಚೆ ಹೋರಾಟ, ಸಾಮಾಜಿಕ ಕೆಲಸ ಅಂತೆಲ್ಲ ಬ್ಯುಸಿಯಾದರು. ಅವರ ಈ ನಿಲುವು ಪ್ರಶ್ನಾತೀತವೇ. ಯಾಕಂದ್ರೆ ಪ್ರತಿಯೊಬ್ಬರ ಬದುಕಿನ ಆಯ್ಕೆ, ಇನ್ನಾರೋ ಬಯಸಿದಂತೆಯೇ ಇರಬೇಕಿಲ್ಲ. ತಾನೊಬ್ಬ ನಟನಾಗುವುದಕ್ಕಿಂತ ಸಾಮಾಜಿಕ ಹೋರಾಟಗಾರನಾಬೇಕಿದೆ ಅಂತ ಚೇತನ್ ಅದಕ್ಕೆ ಸ್ಪಷ್ಟನೆ ಕೊಟ್ಟರು. ಕನ್ನಡ ಚಿತ್ರರಂಗದ ಮಟ್ಟಿಗೆ ಚೇತನ್ ಅವರನ್ನು ಇದು ಭಿನ್ನವಾದ ಸ್ಥಾನದಲ್ಲಿ ನಿಲ್ಲಿಸಿತು. ಯಾಕಂದ್ರೆ ನಟರಂದ್ರೆ, ಸಿನಿಮಾ ಮಾಡಬೇಕು, ಸ್ಟಾರ್ ಆಗಿ ಮೆರೀಬೇಕು, ಆ ಮೂಲಕ ಐಷಾರಾಮಿಯ ಕಂಪೋರ್ಟ್ ಜೋನ್ ನಲ್ಲಿ ಕುಳಿತಿರಬೇಕು ಅನ್ನೋ ಸಿನಿಮಾದ ರಂಗದ ಸಿದ್ಧ ಸೂತ್ರಗಳನ್ನು ಬ್ರೇಕ್ ಮಾಡಿ, ಅವರು ಜನರ ಪರವಾಗಿ ಬೀದಿಗಿಳಿಬೇಕು ಅಂದಾಗ ವಾಹ್ಹ್…. ಇಂತಹ ನಟ ಕನ್ನಡಕ್ಕೆ ಬೇಕಿತ್ತು ಅಂತ ಮೆಚ್ಚಿಕೊಂಡು ಮಾತನಾಡಿದವರು ಕಮ್ಮಿ ಇರಲಿಲ್ಲ.
ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರ, ಸಿನಿಮಾ ರಂಗದಲ್ಲಿನ ಮೀಟೂ ಪ್ರಕರಣ, ಸರ್ಕಾರದ ಬೆಲೆ ಏರಿಕೆ ಧೋರಣೆಗಳು.. ಹೀಗೆ ಒಂದಲ್ಲ ನಟ ಚೇತನ್ ಪ್ರತಿಯೊಂದಕ್ಕೂ ಇಲ್ಲಿ ಒಬ್ಬ ಸಾಮಾಜಿಕ ಹೋರಾಟಗಾರನಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಆದರೆ ಇಲ್ಲೆಲ್ಲವೂ ಅನಗತ್ಯ ವಿವಾದವೇ ಆಗಿದೆ.
ಆ ಹೊತ್ತಿಗೆ ಅವರೊಬ್ಬ ಸಾಮಾಜಿಕ ಹೋರಾಟಗಾರನಾಗಿ ಮಾತ್ರ ಗುರುತಿಸಿಕೊಂಡಿದ್ದರು. ಅಲ್ಲಿಂದಾಚೆ ಯಾವುದೇ ಈಸಂ ಗೂ ಸಿಲುಕಿರಲಿಲ್ಲ. ಹಾಗಾಗಿ ಕನ್ನಡದ ಅದೆಷ್ಟೋ ಸಿನಿಮಾ ಪ್ರೇಕ್ಷಕರು ನಟ ಚೇತನ್ ಅವರನ್ನು ಒಬ್ಬ ಡಿಫೆರೆಂಟ್ ಆಕ್ಟರ್ ಅಂತಲೇ ಮಾತನಾಡಿದ್ದರು. ಮುಂದೇನಾಯ್ತೋ ಗೊತ್ತಿಲ್ಲ, ಚೇತನ್ ನಿಲುವು, ನಡೆ ಎಲ್ಲವೂ ಬದಲಾದವು. ಯಾರ ಅಂಕೆಗೂ ಸಿಲುಕದೆ ಹುಚ್ಚು ಕುದುರೆಯಂತೆ ಓಡತೊಡಗಿದರು ಚೇತನ್. ರಾಜಕೀಯ, ಸಾಮಾಜಿಕ, ಆರ್ಥಿಕ ರಂಗಗಳು ಸೇರಿದಂತೆ ಪ್ರಚಲಿತ ವಿದ್ಯಮಾನಗಳಿಗೆಲ್ಲ ಪ್ರತಿಕ್ರಿಯೆ ನೀಡತೊಡಗಿದರು. ವಿವಾದವೋ, ವಿಚಿತ್ರವೋ ದೊಡ್ಡ ಮಟ್ಟದ ಪ್ರಚಾರದಲ್ಲಿ ಚೇತನ್ ಧಗ ಧಗಸಿತೊಡಗಿದರು. ಮೊದಲೆಲ್ಲ ಅವರನ್ನು ಮೆಚ್ಚಿಕೊಂಡು ಮಾತನಾಡಿದವರೆಲ್ಲ ಚೇತನ್ ವಿರುದ್ಧ ಗಡುಗತೊಡಗಿದರು. ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರ, ಸಿನಿಮಾ ರಂಗದಲ್ಲಿನ ಮೀಟೂ ಪ್ರಕರಣ, ಸರ್ಕಾರದ ಬೆಲೆ ಏರಿಕೆ ಧೋರಣೆಗಳು.. ಹೀಗೆ ಒಂದಲ್ಲ ನಟ ಚೇತನ್ ಪ್ರತಿಯೊಂದಕ್ಕೂ ಇಲ್ಲಿ ಒಬ್ಬ ಸಾಮಾಜಿಕ ಹೋರಾಟಗಾರನಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಆದರೆ ಇಲ್ಲೆಲ್ಲವೂ ಅನಗತ್ಯ ವಿವಾದವೇ ಆಗಿದೆ. ಚೇತನ್ ಪ್ರಸ್ತಾಪಿಸಿದ ವಿಷಯ ಎಷ್ಟು ಗಂಭೀರವಾದದ್ದು ಎನ್ನುವುದಕ್ಕಿಂತ ಚೇತನ್ ಅವರನ್ನೇ ಟಾರ್ಗೆಟ್ ಮಾಡಿ, ಟೀಕಿಸಲಾಯಿತು. ಮೀಟೂ ಪ್ರಕರಣದಲ್ಲಂತೂ ಚೇತನ್ ಕೊಲೆ ಬೆದರಿಕೆ ಎದುರಿಸಿದರು. ಚಿತ್ರರಂಗ ಕೂಡ ಅವರನ್ನು ದೂರವೇ ನಿಲ್ಲಿಸಿತು. ಯಾಕಂದ್ರೆ, ಇಲ್ಲಿ ಚೇತನ್ ಅಂದ್ರೆ ಒಬ್ಬ ನಟ ಎಂದಷ್ಟೇ ಕಂಡಿತೇ ಹೊರತು, ಅದರಾಚೆ ಅವರಾರು ಅನ್ನೋದೇ ಇಲ್ಲಿ ದೊಡ್ಡ ಪ್ರಶ್ನೆ ಆಗಿ ಉಳಿಯಿತು.
ಹೌದು, ಅದು ನಿಜವೂ ಕೂಡ, ಚೇತನ್ ಅಂದ್ರೆ ಯಾರು ಎನ್ನುವುದು ಈಗಲೂ ಎಲ್ಲರಿಗೂ ಇರುವ ಯಕ್ಷ ಪ್ರಶ್ನೆ. ಚೇತನ್ ಒಬ್ಬ ನಟ ಹಾಗೆಯೇ ಒಬ್ಬ ಸಾಮಾಜಿಕ ಹೋರಾಟಗಾರ. ಅವರಿಗಿರುವ ಅವೆರೆಡು ಬ್ರಾಂಡ್ ಗಳ ಬಗ್ಗೆ ಅನುಮಾನವೇ ಇಲ್ಲ. ಅದರಾಚೆ ಅವರು ಯಾರು ? ಅವರ ಹಿಂದಿನ ಶಕ್ತಿಯಾವುದು ? ಹೋಗ್ಲಿ ಅವರು ಒಪ್ಪಿ-ಅಪ್ಪಿಕೊಂಡಿರುವ ಸಿದ್ದಾಂತವಾದ್ರು ಯಾವ್ದು? ಈ ಪ್ರಶ್ನೆಗಳಿಗೆ ಈಗಲೂ ಉತ್ತರ ಇಲ್ಲ. ಚೇತನ್ ಅವರದ್ದು ಎಡಪಂಥಿಯವೋ, ಬಲಪಂಥೀಯವೋ ಅದರಲ್ಲೂ ಗೊಂದಲ ಇದೆ. ಹಾಗಂತ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳಲ್ಲಿ ಅವರು ಒಲವು ಹೊಂದಿರುವ ಪಕ್ಷ ಯಾವುದು ಅಂತಲೂ ಹೇಳೋ ಹಾಗಿಲ್ಲ. ಒಂದೊಮ್ಮೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಕುಮಾರ ಸ್ವಾಮಿ ಅವರನ್ನು ಹಿಗ್ಗಾಮುಗ್ಗಾ ಟೀಕಿಸಿದ್ದ ಚೇತನ್, ಈಗ ಈಗ ಕಾಂಗ್ರೆಸ್ -ಬಿಜೆಪಿ ಎರಡು ಆರ್ ಎಸ್ ಎಸ್ ನ ಕೊಂಬೆಗಳೇ ಅಂತ ಟೀಕಿಸಿ ದೊಡ್ಡ ವಿವಾದ ಸೃಷ್ಟಿಸಿದ್ದಾರೆ. ಅಲ್ಲಿಂದಾಚೆ, ಚೇತನ್ ಅವರು ಒಬ್ಬ ಕಮ್ಯುನಿಸ್ಟಾ? ಅದು ಅಲ್ಲ. ಕಮ್ಯುನಿಸ್ಟರ ಮೇಲೂ ನಂಬಿಕೆ ಇಲ್ಲ. ಉಳಿದಂತೆ ಉಪೇಂದ್ರ ಅವರ ಪ್ರಜಾಕೀಯವನ್ನು ಅವರು ಒಪ್ಪಿಕೊಂಡಿಲ್ಲ. ಉಪೇಂದ್ರ ಅವರು ಕೂಡ ಚೇತನ್ ಅವರ ಟೀಕೆಯ ಬಾಣಕ್ಕೆ ಸಿಲುಕಿ ಒದ್ದಾಡಿದವರೇ. ಹೀಗಾಗಿ ಒಂದ್ರೀತಿ ಚೇತನ್ ಅವರದ್ದು ಏಕಾಂಗಿ, ಎಡಬಿಡಂಗಿ ನಿಲುವು. ಮೇಲ್ನೋಟಕ್ಕೆ ಚೇತನ್ , ಬಿಜೆಪಿ ಸೇರಿದಂತೆ ಬಲಪಂಥೀಯ ಶಕ್ತಿಗಳ ವಿರೋಧಿ ಅಂತ ಕಂಡರೂ, ಈಗ ತಾವೊಬ್ಬ ಕಾಂಗ್ರೆಸ್ ವಿರೋಧಿ ಅಂತಲೂ ತೋರಿಸಿಕೊಂಡಿದ್ದಾರೆ. ಈ ನಿಲುವೇ ಅವರನ್ನು ಒಬ್ಬ ಎಡಬಿಡಂಗಿ ವ್ಯಕ್ತಿಯನ್ನಾಗಿ ರೂಪಿಸುತ್ತಿದೆ. ಯಾರನ್ನು, ಹೇಗೆ, ಯಾವ ರೂಪದಲ್ಲಿ ಟೀಕಿಸಬೇಕೆನ್ನುವ ಅರಿವಿಲ್ಲದೆ ಸಿಕ್ಕ ಸಿಕ್ಕವರನ್ನು ಟೀಕಿಸುತ್ತಿದ್ದಾರೆ. ಆ ಮೂಲಕ ಚೇತನ್ ಒಬ್ಬ ಸಾಮಾಜಿಕ ಹೋರಾಟಗಾರ ಎನ್ನುವುದರ ಬದಲಿಗೆ, ಕಾಂಟ್ರೋವರ್ಷಿ ಹೀರೋ ಅಂತ ಗುರುತಿಸುವಂತೆ ಮಾಡಿದೆ. ಚೇತನ್ ಅವರಿಗೆ ಈ ಅರಿವು ಈಗಲಾದರೂ ಬಂದರೆ ಒಳ್ಳಿತು.
ಹಬ್ಬಗಳು ಬಂದರೆ ಸಿನಿಮಾ ಮಂದಿಗೆ ಅದೊಂದು ರೀತಿ ದೊಡ್ಡ ಸಂಭ್ರಮ. ಕಾರಣ, ತಮ್ಮ ಸಿನಿಮಾಗಳ ಪೋಸ್ಟರ್, ಟೀಸರ್, ಟ್ರೇಲರ್, ಸಾಂಗ್ ಬಿಡುಗಡೆ ಮಾಡುವ ಮೂಲಕ ಪ್ರಚಾರ ಕಾರ್ಯ ಶುರುವಿಟ್ಟುಕೊಳ್ಳುತ್ತಾರೆ. ಆ ಸಾಲಿಗೆ “ಬರ್ಕ್ಲಿʼ ಸಿನಿಮಾ ಕೂಡ ಸೇರಿದೆ. ಹೌದು, ಗೌರಿ-ಗಣೇಶ ಹಬ್ಬಕ್ಕೆ “ಬರ್ಕ್ಲಿ” ಚಿತ್ರದ ಲಿರಿಕಲ್ ಸಾಂಗ್ ಬಿಡುಗಡೆಯಾಗಿದ್ದು, ಎಲ್ಲೆಡೆ ಮೆಚ್ಚುಗೆಗೂ ಪಾತ್ರವಾಗಿದೆ.
ಸಂತೋಷ್ ಬಾಲರಾಜ್ ಹೀರೋ ಆಗಿರುವ ಈ ಚಿತ್ರವನ್ನು ಸುಮಂತ್ ಕ್ರಾಂತಿ ನಿರ್ದೇಶನ ಮಾಡಿದ್ದಾರೆ. ವಿಭಿನ್ನ ಕಥಾಹಂದರ ಹೊಂದಿರುವ “ಬರ್ಕ್ಲಿ” ಚಿತ್ರದ ಲಿರಿಕಲ್ ಸಾಂಗ್ ಝೇಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ. ಬಹದ್ದೂರ್ ಚೇತನ್ ಬರೆದಿರುವ ಈ ಹಾಡನ್ನು ಸಂಜಿತ್ ಹೆಗ್ಡೆ ಹಾಡಿದ್ದಾರೆ. ಜ್ಯೂಡಾ ಸ್ಯಾಂಡಿ ಸಂಗೀತ ಇರುವ ಚಿತ್ರವನ್ನು ಸಂತೋಷ್ ಎಂಟರ್ ಪ್ರೈಸಸ್ ಬ್ಯಾನರ್ನಲ್ಲಿ ಆನೇಕಲ್ ಬಾಲರಾಜ್ ನಿರ್ಮಿಸಿದ್ದಾರೆ. ಸದ್ಯ ಚಿತ್ರದ ಮೊದಲ ಪ್ರತಿ ಸಿದ್ಧವಾಗುತ್ತಿದೆ. “ಕರಿಯ”, “ಗಣಪ”, “ಕರಿಯ ೨”, ಚಿತ್ರಗಳನ್ನು ನಿರ್ಮಿಸಿರುವ ಆನೇಕಲ್ ಬಾಲರಾಜ್ ಅವರ ನಿರ್ಮಾಣದ ಮತ್ತೊಂದು ಅದ್ದೂರಿ ಚಿತ್ರ “ಬರ್ಕ್ಲಿ”. ಉತ್ತಮ ಮನೋರಂಜನೆಯ ಈ ಚಿತ್ರಕ್ಕೆ ಸುಮಂತ್ ಕ್ರಾಂತಿ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ.
ಗಣಪ, ಕರಿಯ ೨ ಚಿತ್ರಗಳಲ್ಲಿ ನಟಿಸಿರುವ ಸಂತೋಷ್ ಬಾಲರಾಜ್ ಈ ಚಿತ್ರದ ನಾಯಕರಾಗಿ ಅಭಿನಯಿಸಿದ್ದಾರೆ. ಬಾಲ್ಯದಲ್ಲಿ ಕೇಂದ್ರ ಸರ್ಕಾರದ ನೋ ಸ್ಮೋಕಿಂಗ್ ಜಾಹೀರಾತಿನ ಮೂಲಕ ಬಾಲನಟಿಯಾಗಿ ಖ್ಯಾತರಾಗಿದ್ದ, ಸಿಮ್ರಾನ್ ನಾಟೇಕರ್ ಈ ಚಿತ್ರದ ನಾಯಕಿ. ಬಹುಭಾಷ ನಟ ಚರಣರಾಜ್, ಖ್ಯಾತ ನಟಿ ಶೃತಿ, ಬಲ ರಾಜವಾಡಿ , ಬುಲೆಟ್ ಪ್ರಕಾಶ್ ಇತರರು ನಟಿಸಿದ್ದಾರೆ.
ಕನ್ನಡದಲ್ಲಿ ಈಗಾಗಲೇ ಭಾಗ-2 3 ಸಿನಿಮಾಗಳಿಗೆ ಲೆಕ್ಕವಿಲ್ಲ. ಪಾರ್ಟ್ 1, ಪಾರ್ಟ್ 2 ಮತ್ತು ಪಾರ್ಟ್ 3 ಸಿನಿಮಾಗಳು ಈಗಾಗಲೇ ಬಂದು ಹೋಗಿವೆ. ಆ ಸಾಲಿಗೆ ಈಗ ರಮೇಶ್ ಅರವಿಂದ್ ಅಭಿಯದ ಸಿನಿಮಾ ಕೂಡ ಸೇರಿದೆ. ಹೌದು, ಕಳೆದ 2020ರಲ್ಲಿ ಬಿಡುಗಡೆಯಾಗಿದ್ದ “ಶಿವಾಜಿ ಸುರತ್ಕಲ್” ಸಿನಿಮಾ ಪ್ರೇಕ್ಷಕರ ಮನಗೆದ್ದಿತ್ತು. ಸ್ವತಃ ವಿತರಕರಿಂದಲೇ ಬ್ಲಾಕ್ ಬಸ್ಟರ್ ಸಿನಿಮಾ ಎನಿಸಿಕೊಂಡಿತ್ತು. ರಮೇಶ್ ಅರವಿಂದ್ ಅವರ ಈ ಚಿತ್ರವನ್ನು ಆಕಾಶ್ ಶ್ರೀವತ್ಸ ನಿರ್ದೇಶಿಸಿದ್ದರು. ರೇಖಾ ಕೆ.ಎನ್ ಮತ್ತು ಅನೂಪ್ ಅವರು ನಿರ್ಮಿಸಿದ್ದರು. ಈಗ ಅದೇ ಶೀರ್ಷಿಕೆಯಲ್ಲಿ ಭಾಗ -2 ಮಾಡ ಹೊರಟಿರುವುದು ಗೊತ್ತೇ ಇದೆ.
ಕಥೆ, ಚಿತ್ರಕಥೆ ರೆಡಿ ಮಾಡಿ ಕೊಂಡಿರುವ ಚಿತ್ರತಂಡ, ಅಕ್ಟೋಬರ್ನಲ್ಲಿ ಚಿತ್ರೀಕರಿಸುವ ಯೋಜನೆ ರೂಪಿಸಿದೆ. ಶಿವಾಜಿಯಾಗಿ ರಮೇಶ್ ಅರವಿಂದ್ ಕಾಣಿಸಿಕೊಳ್ಳಲಿದ್ದು, ರಾಧಿಕಾ ನಾರಾಯಣ್, ರಘು ರಾಮನಕೊಪ್ಪ ಮತ್ತು ವಿದ್ಯಾಮೂರ್ತಿ ಭಾಗ-2ರಲ್ಲೂ ಮುಂದುವರಿಯಲಿದ್ದಾರೆ. ಉಳಿದಂತೆ ಚಿತ್ರದಲ್ಲಿ ಒಂದಷ್ಟು ಹೊಸ ಪ್ರತಿಭೆಗಳು ಕಾಣಿಸಿಕೊಳ್ಳಲಿವೆ. “ಶಿವಾಜಿ ಸುರತ್ಕಲ್” ಎರಡು ಕಾಲಘಟ್ಟದಲ್ಲಿ ನಡೆಯುವ ಚಿತ್ರವಾಗಿತ್ತು.
ಆದರೆ, ಭಾಗ-2 ಬಹುಕೋನಗಳಿರುವ ಚಿತ್ರಕಥೆ ಹೊಂದಿದ್ದು, ಪತ್ತೇದಾರಿ ಕತೆಯಾಗಿರುವುದರಿಂದ ಕೊಲೆಗಾರನ ಹುಡುಕಾಟದ ಅಂಶಗಳು ಇಲ್ಲಿ ಹೈಲೈಟ್ ಆಗಿರಲಿವೆ. ಚಿತ್ರಕ್ಕೆ ಗುರುಪ್ರಸಾದ್ ಕ್ಯಾಮೆರಾ ಹಿಡಿಯಲಿದ್ದು, ಉಳಿದಂತೆ ತಾಂತ್ರಿಕ ತಂಡದ ಆಯ್ಕೆ ಇಷ್ಟರಲ್ಲೇ ನಡೆಯಲಿದೆ. “ಶಿವಾಜಿ ಸುರತ್ಕಲ್” ಚಿತ್ರದ ಯಶಸ್ಸು ಮತ್ತು ತಮಿಳು, ಮಲಯಾಳಂ, ತೆಲುಗಿಗೆ ರೀಮೇಕ್ ರೈಟ್ಸ್ ಮಾರಾಟವಾಗಿದ್ದರಿಂದ ಚಿತ್ರತಂಡ ಮತ್ತಷ್ಟು ಉತ್ಸಾಹದಿಂದ ಅದ್ದೂರಿಯಾಗಿ ಚಿತ್ರ ಮಾಡುವ ತಯಾರಿಯಲ್ಲಿದೆ.