Categories
ಸಿನಿ ಸುದ್ದಿ

ವಿಜಯಾನಂದ ಮೋಷನ್‌ ಪೋಸ್ಟರ್‌ ಲಾಂಚ್‌ ; ಕುತೂಹಲ ಮೂಡಿಸುತ್ತಿದೆ ವಿಆರ್‌ ಎಲ್‌ ಸಾಮ್ರಾಜ್ಯದ ರೋಚಕ ಕಥೆ!

ಒಂದು ಲಾರಿಯ ಬೆನ್ನೇರಿ ಪ್ರಪಂಚವನ್ನೇ ತನ್ನೆಡೆಗೆ ತಿರುಗಿಸಿಕೊಂಡ ಸಾಧಕನ ದಂತ ಕತೆ…

ವಿಆರ್‌ಎಲ್‌ ಫಿಲಂಸ್‌ ಪ್ರೊಡಕ್ಷನ್‌ ನಿರ್ಮಾಣದ ಮೊದಲ ಬಹುನಿ ರೀಕ್ಷಿತ ಚಿತ್ರ ʼವಿಜಯಾನಂದʼ ಈಗ ಮೋಷನ್‌ ಟೀಸರ್‌ ಮೂಲಕ ಸೌಂಡ್‌ ಮಾಡುತ್ತಿದೆ. ರಿಷಿಕಾ ಶರ್ಮಾ ನಿರ್ದೇಶನ ಹಾಗೂ ನಿಹಾಲ್‌ ರಜಪೂತ್‌ ಅಭಿನಯದ ʼವಿಜಯಾನಂದʼ ಚಿತ್ರದ ಮೋಷನ್‌ ಟೀಸರ್‌ ಗುರುವಾರ ಲಾಂಚ್‌ ಆಗಿದೆ. ಚಿತ್ರದ ಶೀರ್ಷಿಕೆಯೇ ಹೇಳುವ ಹಾಗೆ ಇದು ವಿಆರ್‌ ಎಲ್‌ ಸಂಸ್ಥೆಯ ಮಾಲೀಕ ಪದ್ಮಶ್ರೀ ಡಾ. ವಿಜಯ ಸಂಕೇಶ್ವರ್‌ ಅವರ ಜೀವನ ಆಧರಿತ ಸಿನಿಮಾ , ಆಗಸ್ಟ್‌ ೨ ರಂದು ಇದರ ಟೈಟಲ್‌ ಲಾಂಚ್‌ ಜತೆಗೆ ಫಸ್ಟ್‌ ಲುಕ್‌ ಪೋಸ್ಟರ್‌ ಹೊರ ಬಂದಿತ್ತು. ವಿಜಯ್‌ ಸಂಕೇಶ್ವರ್‌ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ವಿಆರ್‌ಎಲ್‌ ಸಮೂ ಹ ಸಂಸ್ಥೆಗಳ ಮ್ಯಾನೇಜಿಂಗ್‌ ಡೈರೆಕ್ಟರ್‌ ಆನಂದ್‌ ಸಂಕೇಶ್ವರ ಅವರು ಈ ಚಿತ್ರದ ಫಸ್ಟ್‌ ಲುಕ್‌ ಲಾಂಚ್‌ ಮಾಡಿದ್ದರು. ಇದೀಗ ಮೋಷನ್‌ ಪೋಸ್ಟ ರ್‌ ಲಾಂಚ್‌ ಆಗಿದ್ದು, ಸಿನಿಮಾ ಪ್ರಿಯರಲ್ಲಿ ಹೊಸ ಭರವಸೆ ಮೂಡಿಸಿದೆ.

ಲಾಜಿಸ್ಟಿಕ್‌ ಹಾಗೂ ಮಾಧ್ಯಮ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಹೆಸರು ವಿಆರ್‌ಎಲ್. ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿಲ್ಲ, ಇಡೀ ಭಾರತದಲ್ಲಿಯೇ ವಿಆರ್‌ ಎಲ್‌ ಜನಜನಿತ. ಇಷ್ಟು ದೊಡ್ಡ ಸಾಮ್ರಾಜ್ಯವನ್ನು ಕಟ್ಟಿ ಬೆಳೆಸಿದ ವ್ಯಕ್ತಿ ವಿಜಯ್ ಸಂಕೇಶ್ವರ.‌ ಅವರ ಸಾಧನೆಯ ಹಿಂದಿನ ರೋಚಕ ಕಥೆಯನ್ನು ಸಿನಿಮಾ ರೂಪದಲ್ಲಿ ತೆರೆಗೆ ತರುವ ಪ್ರಯತ್ನವೇ ʼವಿಜಯಾನಂದ ʼಸಿನಿಮಾ. ವಿಆರ್‌ ಎಲ್‌ ಫಿಲಂ ಪ್ರೊಡಕ್ಷನ್‌ ಲಾಂಛನದಲ್ಲಿ ವಿಜಯ್‌ ಸಂಕೇಶ್ವರ ಅವರ ಪುತ್ರ ಆನಂದ್‌ ಸಂಕೇಶ್ವರ ಇದರ ನಿರ್ಮಾಪಕರು.

ಯುವ ನಿರ್ದೇಶಕಿ ರಿಷಿಕಾ ಶರ್ಮಾ ಈ ಚಿತ್ರದ ನಿರ್ದೇಶಕರು. ಕಳೆದ ಎಂಟು ವರ್ಷಗಳಿಂದ ಸಿನಿಮಾ ರಂಗದಲ್ಲಿ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭದ ಅವರಿಗಿದೆ. ಹಾಗೆಯೇ ʼಟ್ರಂಕ್‌ ʼ ಹೆಸರಿನ ಚಿತ್ರದ ಮೂಲಕ ನಿರ್ದೇಶಕರಾಗಿಯೂ ಗುರುತಿಸಿಕೊಂಡಿದ್ದು, ಇದೀಗ ಅದೃಷ್ಟವೇ ಎನ್ನುವ ಹಾಗೆ ವಿಆರ್‌ ಎಲ್‌ ಸಂಸ್ಥೆಯ ಮಾಲೀಕ ವಿಜಯ್‌ ಸಂಕೇಶ್ವರ ಅವರ ಬಯೋಫಿಕ್‌ ಅನ್ನು ತೆರೆಗೆ ತರುವ ಅವಕಾಶ ಸಿಕ್ಕಿದೆ.

https://www.youtube.com/watch?v=jfTVhiwGhFY

ಇನ್ನು ವಿಜಯಾನಂದ ಚಿತ್ರದಲ್ಲಿ ಕಥಾ ನಾಯಕ ವಿಜಯ್‌ ಸಂಕೇಶ್ವರ್‌ ಅವರ ಪಾತ್ರಕ್ಕೆ ಯುವ ನಟ ನಿಹಾನ್‌ ರಜಪೂತ್‌ ಬಣ್ಣ ಹಚ್ಚುತ್ತಿದ್ದಉ, ಇದೀಗ ಮೋಷನ್‌ ಪೋಸ್ಟರ್‌ ನಲ್ಲಿ ಅವರ ಮೊದಲ ಲುಕ್‌ ರಿವೀಲ್‌ ಆಗಿದೆ.


ಮಲಯಾಳಂ ಚಿತ್ರರಂಗದ ಹೆಸರಾಂತ ಸಂಗೀತ ನಿರ್ದೇಶಕ ಗೋಪಿ ಸುಂದರ್‌ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಇನ್ನು ಕಡಲ ತೀರದ ಭಾರ್ಗವ ಮತ್ತು ಮಹಿರ ಚಿತ್ರಗಳಿಗೆ ಛಾಯಾಗ್ರಹಣ ಮಾಡಿದ ಕೀರ್ತನ ಪೂಜಾರಿ ಈ ಚಿತ್ರಕ್ಕೂ ಛಾಯಾಗ್ರಹಣದ ಜವಾಬ್ದಾರಿ ಹೊತ್ತುಕೊಂ ಡಿದ್ದಾರೆ. ಹೇಮಂತ್‌ ಕುಮಾರ್‌ ಸಂಕಲನ, ರಘು ನಿಡುವಳ್ಳಿ ಸಂಭಾಷಣೆ ಚಿತ್ರಕ್ಕಿದ್ದು, ಸೆಪ್ಟೆಂಬರ್‌ ನಲ್ಲಿ ಚಿತ್ರೀಕರಣ ಶುರುವಾಗುವ ಸಾಧ್ಯತೆಗಳಿವೆ ಎನ್ನುತ್ತಿದೆ ಚಿತ್ರತಂಡ.

Categories
ಸಿನಿ ಸುದ್ದಿ

ಅಮರ ಪ್ರೇಮಿ ಅರುಣ್‌! ಮೊದಲ ಹಂತ ಮುಗಿಸಿದ ಖುಷಿಯಲ್ಲಿ ಹೊಸಬರು…

ಅಮರ ಪ್ರೇಮಿ ಅರುಣ್ ಸಿನಿಮಾದ ವಿಶೇಷ ಪಾತ್ರದಲ್ಲಿ ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾಗಿರುವ ಪದ್ಮಶ್ರೀ ಜೋಗತಿ ಮಂಜಮ್ಮ ನಟಿಸಿದ್ದಾರೆ…

ಒಲವು ಸಿನಿಮಾ ಸಂಸ್ಥೆಯು ನಿರ್ಮಿಸುತ್ತಿರುವ ʼಅಮರ ಪ್ರೇಮಿ ಅರುಣ್ʼ ಸಿನಿಮಾ, ತನ್ನ ಮೊದಲ ಸುತ್ತಿನ ಚಿತ್ರೀಕರಣವನ್ನು ಬಳ್ಳಾರಿ ನಗರದಲ್ಲಿ ಮುಗಿಸಿದ್ದು, ಈಗ ಮತ್ತೆ ಬಳ್ಳಾರಿಯಲ್ಲಿಯೇ ನಡೆಯಲಿರುವ ಎರಡನೇ ಸುತ್ತಿನ ಚಿತ್ರೀಕರಣಕ್ಕೆ ತಂಡ ತಯಾರಾಗುತ್ತಿದೆ.

ಬಳ್ಳಾರಿ ನಗರದ ಪ್ರಮುಖ ಜಾಗಗಳಲ್ಲಿ ನಾಯಕ ಹರಿಶರ್ವಾ, ನಾಯಕಿ ದೀಪಿಕಾ ಆರಾಧ್ಯ ಸೇರಿದಂತೆ ಧರ್ಮಣ್ಣ, ಭೂಮಿಕಾ ಭಟ್, ಮಹೇಶ್ ಬಂಗ್, ಬಲರಾಜ್ವಾಡಿ, ರೋಹಿಣಿ, ವಿಜಯಲಕ್ಷ್ಮಿ ಮತ್ತು ಅನೇಕ ಕಲಾವಿದರ ನಟನೆಯಲ್ಲಿ ದೃಶ್ಯಗಳನ್ನು ಚಿತ್ರಿಸಲಾಗಿದೆ.

ʼಅಮರ ಪ್ರೇಮಿ ಅರುಣ್ʼ ಸಿನಿಮಾ ವಿಶೇಷ ಪಾತ್ರಗಳಲ್ಲಿ ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾಗಿರುವ ಪದ್ಮಶ್ರೀ ಜೋಗತಿ ಮಂಜಮ್ಮನವರು ಮತ್ತು ಖ್ಯಾತ ರಂಗಕರ್ಮಿ ಹುಲಿಗೆಪ್ಪ ಕಟ್ಟಿಮನಿ ಅವರು ನಟಿಸಿದ್ದಾರೆ.

ಚಿತ್ರಕ್ಕೆ ಪ್ರವೀಣ್ ಕುಮಾರ್ ಜಿ ಅವರ ರಚನೆ-ನಿರ್ದೇಶನ, ಪ್ರವೀಣ್ ಎಸ್ ಅವರ ಛಾಯಾಗ್ರಹಣ, ಕಿರಣ್ ರವೀಂದ್ರನಾಥ್ ಅವರ ಸಂಗೀತ, ನಿರಂಜನ್ ದೇವರ ಮನೆಯವರ ಸಂಕಲನ, ಮಂಡ್ಯ ಮಂಜು ಅವರ ಕಾರ್ಯಕಾರಿ ನಿರ್ಮಾಣವಿದೆ. ಜಯಂತ ಕಾಯ್ಕಿಣಿ ಮತ್ತು ಯೋಗರಾಜ್ ಭಟ್ ಅವರ ಸಾಹಿತ್ಯವಿದೆ.

Categories
ಸಿನಿ ಸುದ್ದಿ

ಜೋಗಿ ಪ್ರೇಮ್ ಚಿತ್ರದಲ್ಲಿ ಹಳ್ಳಿ ಹೈದ ಹನುಮಂತ ಗಾನ; ಕೊಟ್ಟ ಮಾತು ಉಳಿಸಿಕೊಂಡ್ರು ಅರ್ಜುನ್ ಜನ್ಯಾ !

ಹೊತ್ತಿಲ್ಲದ ಹೊತ್ತು, ತುತ್ತಿಲ್ಲದೇ ನಿಂತು,ಕಾದಿದ್ದೆ ನಿನಗಾಗಿ ಯಾಕೇ, ಹೇಳು ಯಾಕೇ, ಹೇಳು ಯಾಕೇ.ಆಣೆಯ ಇಟ್ಟು ಭಾಷೆಯ ಕೊಟ್ಟು, ಹಿಂದಿಂದೆ ಬಂದಿದ್ದು ಯಾಕೇ,ಹೇಳು ಯಾಕೇ, ಹೇಳು ಯಾಕೇ, ಈ ರೀತಿ ಸಾಗುವ ಏಕ್ ಲವ್ ಯಾ’ ಚಿತ್ರದ ಹಾಡು ಸುನೀಲ್ ಹಾಗೂ ಹನುಮನ ಕಂಠಸಿರಿಯಲ್ಲಿ ಮೂಡಿ ಬರಲಿದೆ…

  • ವಿಶಾಲಾಕ್ಷಿ

ಹೊಡಿರೀ ಹಲಗಿ.. ಹಚ್ಚಿ ಪಟಾಕಿ… ಹಳ್ಳಿಹೈದ ಹನುಮಂತಣ್ಣ ಮತ್ತೆ ಅಖಾಡಕ್ಕೆ ಇಳಿದಿದ್ದಾನೆ. ಮ್ಯೂಸಿಕ್ ಲೋಕದಲ್ಲಿ ಮ್ಯಾಜಿಕ್ ಮಾಡೋದಕ್ಕೆ ಗ್ರ್ಯಾಂಡ್ ಎಂಟ್ರಿಕೊಟ್ಟಿದ್ದಾನೆ. ಅಂದ್ಹಾಗೇ, ಚಿಲ್ಲೂರು ಚಿಂಗಾರಿಯನ್ನು ಮತ್ತೆ ಕಣಕ್ಕೆ ಇಳಿಸಿರುವುದು ಡೈರೆಕ್ಟರ್ ಜೋಗಿ ಪ್ರೇಮ್ ಹಾಗೂ ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯಾ . ಹಾವೇರಿ ಜಿಲ್ಲೆ ಸವಣೂರ್ ತಾಲೂಕ್ ಬಡ್ನಿ ತಾಂಡಾದಲ್ಲಿ ಮತ್ತೆ ಕುರಿ ಕಾಯುವ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದ ಹನುಮನನ್ನು ಮತ್ತೆ ಬೆಂಗಳೂರಿಗೆ ಕರೆತಂದಿದ್ದಾರೆ. ಜನ್ಯಾಜೀ ಫೋನ್ ಹೋಗಿದ್ದೇ ತಡ ಬಡ್ನಿ ಹೈದ ಹನುಮ ಅಂಗಿ-ಲುಂಗಿ ತೊಟ್ಟು ಹೆಗಲಿಗೊಂದು ಟವಲ್ ಹಾಕಿಕೊಂಡು ಬೆಂಗಳೂರಿಗೆ ಬಂದಿಳಿದಿದ್ದಾನೆ.

ಸವಣೂರ್ ಸೂಪರ್‌ಸ್ಟಾರ್ ಎನಿಸಿಕೊಂಡಿದ್ದ ಹನುಮಂತನಿಗೆ ಅರ್ಜುನ್ ಜನ್ಯಾ ತಮ್ಮ ಸಿನಿಮಾದಲ್ಲಿ ಒಂದು ಅವಕಾಶ ಕೊಡ್ತೀನಿ ಅಂತ ಸಾರೆಗಾಮ' ಅಂಗಳದಲ್ಲೇ ಅನೌನ್ಸ್ ಮಾಡಿದ್ದರು. ಪ್ರೇಮ್ ನಿರ್ದೇಶನದ ಸಿನೆಮಾದಲ್ಲಿ ಸಾರೆಗಾಮ ರನ್ನರ್ ಅಪ್ ಹನುಮನಿಗೆ ಹಾಡುವ ಅವಕಾಶ ಸಿಗಲಿದೆ ಎನ್ನುವ ಸುದ್ದಿಯೊಂದು ಈ ಹಿಂದೆ ಗಾಂಧಿನಗರದಲ್ಲಿ ಗುಲ್ಲೆದ್ದಿತ್ತು. ಇದೀಗ, ಆ ಸುದ್ದಿ ನಿಜವಾಗಿದೆ. ಹಳ್ಳಿಹಕ್ಕಿ ಹನುಮನಿಗೆ ಜೋಗಿ ಪ್ರೇಮ್ ನಿರ್ದೇಶನದಏಕ್ ಲವ್’ ಯಾ’ ಚಿತ್ರದಲ್ಲಿ ಹಾಡುವ ಚಾನ್ಸ್ ಸಿಕ್ಕಿದೆ. ಅರ್ಜುನ್ ಜನ್ಯಾ ಮ್ಯೂಸಿಕ್ ಕಂಪೋಸ್ ಮಾಡಿದ್ದು, `ಸಾರೆಗಾಮ’ ಸೀಸನ್ 13ರ ವಿನ್ನರ್ ಸುನೀಲ್ ಜೊತೆ ಚಿಲ್ಲೂರು ಚಿಂಗಾರಿ ಹನುಮಂತ ಕಂಠಕುಣಿಸಿದ್ದಾರೆ.

ಹೊತ್ತಿಲ್ಲದ ಹೊತ್ತು, ತುತ್ತಿಲ್ಲದೇ ನಿಂತು.. ಕಾದಿದ್ದೆ ನಿನಗಾಗಿ ಯಾಕೇ.. ಹೇಳು ಯಾಕೇ.. ಹೇಳು ಯಾಕೇ.. ಆಣೆಯ ಇಟ್ಟು ಭಾಷೆಯ ಕೊಟ್ಟು.. ಹಿಂದಿಂದೆ ಬಂದಿದ್ದು ಯಾಕೇ.. ಹೇಳು ಯಾಕೇ.. ಹೇಳು ಯಾಕೇ.. ಈ ರೀತಿಯಾಗಿ ಸಾಗುವ ಏಕ್ ಲವ್ ಯಾ’ ಚಿತ್ರದ ಹಾಡು ಸುನೀಲ್ ಹಾಗೂ ಹನುಮನ ಕಂಠಸಿರಿಯಲ್ಲಿ ಮೂಡಿಬರಲಿದೆ. ಇತ್ತೀಚೆಗೆ ಅರ್ಜುನ್ ಜನ್ಯಾ ಸ್ಟುಡಿಯೋದಲ್ಲಿ ಈ ಹಾಡಿನ ರೆಕಾರ್ಡಿಂಗ್ ಕಾರ್ಯ ಮುಗಿದಿದೆ. ಅದರ ಝಲಕ್‌ನ ಡೈರೆಕ್ಟರ್ ಪ್ರೇಮ್ ಹಾಗೂ ಜನ್ಯಾಜೀಯವರು ತಮ್ಮ ಸೋಷಿಯಲ್ ಪೇಜ್‌ಗಳಲ್ಲಿ ಹಂಚಿಕೊಂಡಿದ್ದಾರೆ.

ಇದನ್ನು ನೋಡಿ ಬಡ್ನಿಭೀಮನ ಫ್ಯಾನ್ಸ್ ದಿಲ್ ಖುಷ್ ಆಗಿದ್ದಾರೆ. ಕೊಟ್ಟ ಮಾತನ್ನು ಉಳಿಸಿಕೊಂಡಂತಹ ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯಾಗೆ ಉಘೇ ಉಘೇ ಎನ್ನುತ್ತಿದ್ದಾರೆ. ಸೆನ್ಸೇಷನಲ್ ಡೈರೆಕ್ಟರ್ ಸಿನಿಮಾದಲ್ಲಿ ಹನುಮ ಹಾಡಿದ್ದಾಯ್ತು ಈ ಹಾಡಿನಿಂದ ಹಳ್ಳಿ ಹೈದನ ಸಂಗೀತ ಪಯಣಕ್ಕೆ ಕಿಕ್‌ಸ್ಟಾರ್ಟ್ ಸಿಗುವಂತಾಗಲಿ, ಬಣ್ಣದ ಲೋಕದಲ್ಲಿ ಬಡ್ನಿಭೀಮನ ಜವಾರಿ ಬಂಡಿ ಸಾಗಲಿ ಅನ್ನೋದೇ ಸಿನಿಲಹರಿ ಆಶಯ

ಎಂಟರ್‌ಟೈನ್ಮೆಂಟ್ ಬ್ಯೂರೋ ಸಿನಿಲಹರಿ

Categories
ಸಿನಿ ಸುದ್ದಿ

ಕೆಜಿಎಫ್ ಚಾಪ್ಟರ್-2 ಗೆ ಓಟಿಟಿ ಬಿಗ್ ಆಫರ್; ನೋ ವೇ ಚಾನ್ಸೇ ಇಲ್ಲ ಅಂದ್ರಂತೆ ರಾಕಿಭಾಯ್!

ಚಿನ್ನದ ಸಾಮ್ರಾಜ್ಯದ ಅಧಿಪತಿಗಳಿಗೆ ಆಫರ್ ಕೊಡ್ತಿರಾ, ಕೋಟಿ ಆಸೆ ತೋರಿಸಿ ಕ್ಯಾಚ್ ಹಾಕಿಕೊಳ್ಳೋ ದುರಾಸೆ ಬುಟ್ಬುಡಿ…

ಇಡೀ ಜಗತ್ತೇ ಎದುರು ನೋಡ್ತಿರುವ ಕನ್ನಡದ ಹೆಮ್ಮೆಯ ಸಿನಿಮಾ ಅಂದರೆ ಅದು ಎಲ್ಲರಿಗೂ ಗೊತ್ತು
ಕೆಜಿಎಫ್ ಚಾಪ್ಟರ್ 2. ಪ್ರಶಾಂತ್ ನೀಲ್‌ ನಿರ್ದೇಶನದ, ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಪಾರ್ಟ್ 1 ಬಿಡುಗಡೆಯಾಗಿ ಎರಡೂವರೆ ವರ್ಷಗಳು ಉರುಳಿವೆ. ಆದರೂ ಕೂಡ ಈ‌ ಸಿನಿಮಾದ ಕ್ರೇಜ್ ಮಾತ್ರ ಕಿಂಚಿತ್ತೂ ಕಡಿಮೆಯಾಗಿಲ್ಲ. ದಿನಗಳು ಉರುಳಿದಂತೆ ಕೆಜಿಎಫ್ ಕ್ರೇಜ್‌ ಹೆಚ್ಚಾಗುತ್ತಲೇ ಇದೆ. ಆಲ್ ಓವರ್ ಇಂಡ್ಯಾ ಕೆಜಿಎಫ್ ಚಾಪ್ಟರ್ 2 ರಿಲೀಸ್ ಯಾವಾಗ ಅಂತ ಕೇಳ್ತಿದ್ದಾರೆ. ವಲ್ಡ್ ವೈಡ್ ಕನ್ನಡದ ಚಿತ್ರಕ್ಕಿರುವ ಬೇಡಿಕೆಯನ್ನು ಗಮನಿಸಿದ ಓಟಿಟಿ ಕೆಜಿಎಫ್ ಚಾಪ್ಟರ್ 2 ಮೇಲೆ ಕಣ್ಣಿಟ್ಟು ಬಿಗ್ ಆಫರ್ ಮಾಡಿದೆಯಂತೆ.

ಹೌದು, ಕೆಜಿಎಫ್ ಚಾಪ್ಟರ್ 2 ಸಿನಿಮಾಗೆ ಭಾರೀ ಬೇಡಿಕೆ ಇದೆ. ಆಚೆ-ಈಚೆ-ನೀಚೆ- ಪೀಚೆ ಮಾತ್ರವಲ್ಲ ದೇಶ- ವಿದೇಶದ ಸಿನಿಮಾ ಮಂದಿ ಕೂಡ ಕನ್ನಡದ‌ ಕೆಜಿಎಫ್ ನ ನಮ್ಮ ಅಂಗಳದಲ್ಲಿ‌ ರಿಲೀಸ್ ಮಾಡೋಕೆ ಅವಕಾಶ ಕೊಡಿ ಅಂತ ಹೊಂಬಾಳೆ ನಿರ್ಮಾಣ ಸಂಸ್ಥೆಯ ದುಂಬಾಲು ಬಿದ್ದಿದ್ದಾರೆ. ಈ ಮಧ್ಯೆ ಲೀಡಿಂಗ್ ನಲ್ಲಿರುವ ಜನಪ್ರಿಯ ಓಟಿಟಿ ಸಂಸ್ಥೆ ಕೆಜಿಎಫ್ ಚಾಪ್ಟರ್ ೨ ಗೆ 250 ಕೋಟಿ ಆಫರ್ ಮಾಡಿದೆಯಂತೆ. ಆದರೆ, ಈ ಆಫರ್ ನ ರಾಕಿಭಾಯ್ ಎಡಗೈ ನಲ್ಲಿ ಸರಿಸಿದ್ದಾರಂತೆ.

ಕೊರೊನಾ ಅಟ್ಟಹಾಸ ಮುಗಿಯುತ್ತಿಲ್ಲ, ಚಿತ್ರಮಂದಿರಗಳು‌ ಬಾಗಿಲು ತೆರೆಯುತ್ತಿಲ್ಲ.‌ ಶೇಕಡ 100 ರಷ್ಟು ಆಸನ ಭರ್ತಿಗೆ ಸರ್ಕಾರ ಇನ್ನೂ ಅನುಮತಿ ಕೊಟ್ಟಿಲ್ಲ. ಹೀಗಾಗಿ ಕೆಜಿಎಫ್ ಸೇರಿದಂತೆ ಬಹುತೇಕ ಎಲ್ಲಾ ದೊಡ್ಡ ಸಿನಿಮಾಗಳು ಹಾಗೂ ಕಡಿಮೆ ಬಜೆಟ್ ನ ಹೊಸಬರ ಚಿತ್ರಗಳು ತೆರೆಗೆ ತರುವುದಕ್ಕೆ ಚಿತ್ರತಂಡಗಳು ಹಿಂದೇಟು‌ ಹಾಕುತ್ತಿವೆ. ಇದೇ ಟೈಮ್ ನ‌ ಸದುಪಯೋಗ ಪಡಿಸಿಕೊಳ್ಳಬೇಕು ಅಂತ ಜನಪ್ರಿಯ ಓಟಿಟಿ ಸಂಸ್ಥೆ 250 ಕೋಟಿ ಕೊಡ್ತೀವಿ ನೇರವಾಗಿ ಕೆಜಿಎಫ್ ಚಾಪ್ಟರ್ 2 ನ ಓಟಿಟಿ ವೇದಿಕೆಯಲ್ಲಿ ‌ರಿಲೀಸ್ ಮಾಡ್ತೀರಾ ಅಂತ ಕೇಳಿಕೊಂಡಿದ್ದಾರೆ. ಇದಕ್ಕೆ ಹೊಂಬಾಳೆ ಬ್ಯಾನರ್ ನ ಓನರ್ ಏನಂದ್ರೋ ಗೊತ್ತಿಲ್ಲ ಆದರೆ, ರಾಕಿಭಾಯ್ ಮಾತ್ರ ನೋ‌ ವೇ ಚಾನ್ಸೇ ಇಲ್ಲ ಗುರು ಎಂದಿದ್ದಾರಂತೆ.

ಆಲ್ ಓವರ್ ಇಂಡ್ಯಾದಲ್ಲಿರುವ ನನ್ನ ಫ್ಯಾನ್ಸ್ ಹಾಗೂ ಕೆಜಿಎಫ್ ಸಿನಿಮಾಗಾಗಿ ಕಾದು ಕುಳಿತಿರುವ ಪ್ರೇಕ್ಷಕ ಮಹಾಷಯರು ಕೆಜಿಎಫ್ ಚಾಪ್ಟರ್-2 ನ ಥಿಯೇಟರ್ ನಲ್ಲೇ‌ ನೋಡಬೇಕು, ಬಿಗ್ ಸ್ಕ್ರೀನ್ ನಲ್ಲೇ ನಮ್ಮ ಸಿನಿಮಾನ‌ ಕಣ್ತುಂಬಿಕೊಳ್ಳಬೇಕು. ಇಂತಹದ್ದೊಂದು ಟೈಮ್ ಬರುವುವವರೆಗೂ ಕಾಯ್ತೇವೆ ಹೊರೆತು ಯಾವುದೇ ಕಾರಣಕ್ಕೂ ಓಟಿಟಿಯಲ್ಲಿ ರಿಲೀಸ್ ಮಾಡೋದಿಲ್ಲ‌ ಅಂತ ನ್ಯಾಷನಲ್‌ಸ್ಟಾರ್ ರಾಕಿಭಾಯ್ ತೀರ್ಮಾನ ಮಾಡಿದ್ದಾರಂತೆ.‌ ಹೀಗಂತ ತಮಿಳಿನ ಖ್ಯಾತ ಅಂಕಣಕಾರರು ಹಾಗೂ ಲೇಖಕರಾಗಿ ಗುರ್ತಿಸಿ ಕೊಂಡಿರುವ ಮನೋಬಾಲ ಅವರು ತಮ್ಮ ಟ್ವೀಟರ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ. ಈ‌ ಸುದ್ದಿ ಕೇಳಿ ರಾಕಿಂಗ್ ಫ್ಯಾನ್ಸ್ ದಿಲ್ ಖುಷ್ ಆಗಿದ್ದಾರೆ. ಥಿಯೇಟರ್ ನಲ್ಲಿ ಕೆಜಿಎಫ್ ರಿಲೀಸ್ ಆಗಬೇಕು ಎನ್ನುವ ರಾಕಿ ನಿರ್ಧಾರಕ್ಕೆ ಎಲ್ಲರೂ ಜೈಕಾರ ಹಾಕುತ್ತಿದ್ದಾರೆ. ಅಧೀರ ಹಾಗೂ ರಾಕಿ ಕಾಳಗ ಹೇಗಿರಬಹುದು ಅಂತ ಲೆಕ್ಕಚ್ಚಾರ ಹಾಕುತ್ತಾ ಕೆಜಿಎಫ್ ಸಾಮ್ರಾಜ್ಯನ ಕಣ್ಮುಂದೆ ತಂದುಕೊಳ್ತಿದ್ದಾರೆ. ಎನಿವೇ,
ಸಿನಿಮಾ ಬಿಡುಗಡೆ ಯಾವಾಗ ಎನ್ನುವ ಬಿಗ್ ಅಪ್ ಡೇಟ್ ಶೀಘ್ರದಲ್ಲೇ ರಿವೀಲ್ ಆಗಲಿದೆ. ಅಲ್ಲಿವರೆಗೂ ವೇಯ್ಟ್ ಅಂಡ್ ಸೀ

ವಿಶಾಲಾಕ್ಷಿ ಎಂಟರ್ ಟೈನ್ಮೆಂಟ್ ಬ್ಯೂರೋ ಸಿನಿಲಹರಿ

Categories
ಸಿನಿ ಸುದ್ದಿ

ಲವ್ ಯೂ ರಚ್ಚು ‘ದುರಂತ ; ಮೃತ ಫೈಟರ್ ವಿವೇಕ್ ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಣೆ- ಸದ್ಯ 5 ಲಕ್ಷ ಚೆಕ್ ಹಸ್ತಾಂತರ !

‘ಲವ್ ಯೂ ರಚ್ಚು’ ಸಿನಿಮಾ ಸೆಟ್ ನಲ್ಲಿ ನಡೆದ ದುರಂತದ ಬಗ್ಗೆ ನಿಮ್ಮೆಲ್ಲರಿಗೂ ಗೊತ್ತೆಯಿದೆ. ಹೈ ಟೆನ್ಷನ್ ವಿದ್ಯುತ್ ತಂತಿ ತಗುಲಿ ಪ್ರಾಣಬಿಟ್ಟ ಫೈಟರ್ ವಿವೇಕ್ ಸಾವಿಗೆ ನೀವೆಲ್ಲರೂ ಕೂಡ ಕಂಬನಿ ಮಿಡಿದಿದ್ದೀರಾ, ಮರುಕ ಪಟ್ಟಿದ್ದೀರಾ ಅದೇ ರೀತಿ ಚಿತ್ರತಂಡ ಕೂಡ ಕೊರಗುತ್ತಿದೆ, ನಿರ್ಮಾಪಕ ಗುರು ದೇಶ್ ಪಾಂಡೆ ಕುಟುಂಬ ಕೂಡ ವಿಷಾದ ವ್ಯಕ್ತಪಡಿಸುತ್ತಿದೆ.‌

ನಮ್ಮ ಬ್ಯಾನರ್ ನ ಸಿನಿಮಾದಲ್ಲಿ ಇಂತಹದ್ದೊಂದು‌ ಅವಘಡ ಸಂಭವಿಸಿಬಾರದಿತ್ತು, ದುರದೃಷ್ಟವಶಾತ್ ದುರಂತ ಸಂಭವಿಸಿದೆ. ಈಗ ಮೃತ ವಿವೇಕ್ ನ ಜೀವಂತವಾಗಿ ತಂದು ಕೊಡುವುದಕ್ಕಂತೂ ಆಗೋದಿಲ್ಲ ಹಾಗಂತ ವಿವೇಕ್ ಕುಟುಂಬವನ್ನೂ ನಾವು ಕೈಬಿಡುವುದಿಲ್ಲ. ವಿವೇಕ್ ಅಂತಿಮ ಕಾರ್ಯಕ್ಕೂ ಹಣ ನೀಡಿದ್ದೇವೆ, ಗಾಯಗೊಂಡು ಆಸ್ಪತ್ರೆ ಸೇರಿರುವ ರಂಜಿತ್ ಚಿಕಿತ್ಸಾ ವೆಚ್ಚ ಕೂಡ ಭರಿಸಿದ್ದಾರೆ ಎಂದಿದ್ದಾರೆ.

ಸದ್ಯ ಗುರುದೇಶ್ ಪಾಂಡೆ ಎಲ್ಲಿದ್ದಾರೋ ಗೊತ್ತಿಲ್ಲ.
ಘಟನೆ ನಡೆದ ಕ್ಷಣದಿಂದ ಯಾರ ಕೈಗೂ ಕೂಡ ಸಿಗುತ್ತಿಲ್ಲ. ಅಜ್ಞಾತ ಸ್ಥಳದಿಂದಲೇ ಲಾಯರ್ ಗೆ ಮೇಲ್ ಮಾಡಿ ಮೃತ ವಿವೇಕ್ ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಿಸಿ ಎಂದು ಹೇಳಿದ್ದರಂತೆ. ಹೀಗಾಗಿ, ಗುರು ದೇಶ್ ಪಾಂಡೆಯವರ ಪತ್ನಿ ಪ್ರಿತಿಕಾ ದೇಶ್ ಪಾಂಡೆ
ಜಿ ಸಿನಿಮಾ ಅಕಾಡೆಮಿ ಪರ ವಕೀಲ ನಾಗಭೂಷಣ್, ಹಾಗೂ ಗುರು ದೇಶ್ ಪಾಂಡೆ ಪರ ವಕೀಲ ಕೆಂಪೇಗೌಡರ ಜೊತೆ ಸುದ್ದಿಗೋಷ್ಠಿ ನಡೆಸಿದರು.


10 ಲಕ್ಷ ಪರಿಹಾರ ಕೊಡುವುದಾಗಿ ಹೇಳಿದ್ದೇವೆ, ಸದ್ಯ 5 ಲಕ್ಷ ಚೆಕ್ ನ ಹಸ್ತಾಂತರಿಸುತ್ತೇವೆ. ವಿವೇಕ್ ಮನೆಗೆ ನಾವೇ ಖುದ್ದಾಗಿ ಹೋಗಿ ಅವರ ತಾಯಿ ಕೈಗೆ 5 ಲಕ್ಷ ಚೆಕ್ ಒಪ್ಪಿಸಲಿದ್ದೇವೆ ಅಂತ ಸುದ್ದಿ ಗೋಷ್ಟಿಯಲ್ಲಿ ತಿಳಿಸಿದರು.

ಪ್ರಕರಣ ತನಿಖೆಯ ಹಂತದಲ್ಲಿದೆ ಹೆಚ್ಚು ಮಾತನಾಡುವುದಿಲ್ಲ, ತಪ್ಪಿತಸ್ಥರು ನೀವೇ ಅಂತ ನಮ್ಮ ನಿರ್ಮಾಣ ಸಂಸ್ಥೆಯ ಮೇಲೆ ಬಂದರೆ ಅದರ ಹೊಣೆಯನ್ನ ನಾವೇ ಹೊರುತ್ತೇವೆ ಎಂದು
ಕ್ಯಾಮೆರಾ ಮುಂದೆ ಹೇಳಿದ್ದಾರೆ. ಪ್ರಕರಣ ಸಂಬಂಧ ಲವ್ ಯೂ ರಚ್ಚು ಚಿತ್ರದ ನಿರ್ದೇಶಕ ಶಶಾಂಕ್ ರಾಜ್, ನಿರ್ಮಾಪಕ ಗುರುದೇಶ್ ಪಾಂಡೆ, ಸಾಹಸ ನಿರ್ದೇಶಕ ವಿನೋದ್, ಸಿನಿಮಾ ಇನ್ ಚಾರ್ಜ್ ಫರ್ನಾಂಡೀಸ್, ಕ್ರೇನ್ ಆಪರೇಟರ್ ಮಹದೇವ್ ಸೇರಿದಂತೆ ಐವರ ಮೇಲೆ ಎಫ್ ಐ ಆರ್ ದಾಖಲಾಗಿದೆ.

ಈಗಾಗಲೇ ಮೂವರನ್ನು ಅರೆಸ್ಟ್ ಮಾಡಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ‌ ಒಪ್ಪಿಸಿದ್ದಾರೆ.
ಮುಂದಿನ ದಿನಗಳಲ್ಲಿ ಕಾನೂನು ಯಾವ ರೀತಿಯ ತೀರ್ಪು ಕೊಡುತ್ತೆ ಕಾದುನೋಡಬೇಕಿದೆ.

Categories
ಸಿನಿ ಸುದ್ದಿ

ಶಿವಣ್ಣ ನಿಮ್ಮ ಆಶೀರ್ವಾದದಿಂದಲೇ ಈ‌ ಟ್ರೋಪಿ ನಂಗೆ ಸಿಕ್ತು! ದೊಡ್ಮನೆಗೆ ಬಿಗ್ ಬಾಸ್ ವಿನ್ನರ್ ಮಂಜಣ್ಣ ಎಂಟ್ರಿ…

ಬಿಗ್‌ ಬಾಸ್‌ ವಿನ್ನರ್‌ ಮಂಜು ಪಾವಗಡ ಬುಧವಾರ ನಟ ಶಿವರಾಜ್‌ ಕುಮಾರ್‌ ಅವರನ್ನು ಭೇಟಿ ಮಾಡಿದರು. ಅವರೊಂದಿಗೆ ಕೆಲ ಹೊತ್ತು ಮಾತನಾಡಿ ಅವರ ಆಶೀರ್ವಾದ ಪಡೆದರು. ಶಿವಣ್ಣ ಅವರ ಕಾಲಿಗೆ ನಮಸ್ಕರಿಸೀದ ಮಂಜು ಪಾವಗಡ, ಸಿಹಿ ತಿನಿಸಿ ಸಂಭ್ರಮಪಟ್ಟರು.

ಶಿವರಾಜ್‌ ಕುಮಾರ್‌ ಅವರೊಂದಿಗೆ ಮಾತನಾಡಬೇಕೆನ್ನುವ ಬಹುದೊಡ್ಡ ಆಸೆಯನ್ನು ಬಿಗ್‌ ಬಾಸ್‌ ಮನೆಯಲ್ಲಿದ್ದಾಗಲೇ ಈಡೇರಿಸಿಕೊಂಡಿದ್ದ ಮಂಜು, ಬುಧವಾರ ನಾಗವಾರದಲ್ಲಿರುವ ಶಿವರಾಜ್‌ ಕುಮಾರ್‌ ನಿವಾಸಕ್ಕೆ ತೆರಳಿ ತಮ್ಮ ಮತ್ತೊಂದು ಆಸೆಯನ್ನು ಈಡೇರಿಸಿಕೊಂಡಿದ್ದುವಿಶೇಷ.

ಬಿಗ್‌ ಬಾಸ್‌ ಟ್ರೋಪಿ ಸಮೇತ ತೆರಳಿದ್ದ ಮಂಜು ಪಾವಗಡ, ಟ್ರೋಪಿ ಹಿಡಿದುಕೊಂಡೇ ಶಿವರಾಜ್‌ ಕುಮಾರ್‌ ಜತೆಗೆ ಕ್ಯಾಮಾರಾಕ್ಕೆ ಪೋಸು ಕೊಟ್ಟರು.

Categories
ಸಿನಿ ಸುದ್ದಿ

ಗಂಧದಗುಡಿ ಅರಗಿಣಿ ಯಾವುದರಲ್ಲಿ ಕಮ್ಮಿ ಗುರು ; ಕಣ್ಣರಳಿಸಿ ನೋಡಿ- ಗಡಿದಾಟೋದು ಬಿಡಿ !?

ಕೋಟಿ ಕೋಟಿ ಸುರಿದು ಅದ್ಯಾಕೆ ಬೇರೆ ಭಾಷೆಯ ಬೆಡಗಿಯರನ್ನು ರತ್ನಗಂಬಳಿ ಹಾಕಿಕೊಂಡು ಕರೆತರುತ್ತೀರಿ? ನಮ್ಮಲ್ಲೇ ಗಿಲ್ಲಿಯಂಹ ಗರ್ಲ್ಸ್ ಇದ್ದಾರೆ, ಮಾದಕತೆ ತುಂಬಿರುವ ಅಭಿನಯದ ಮೂಲಕ ಕಿಕ್ಕೇರಿಸುವ ನಟಿಮಣಿಯರು ಇದ್ದಾರೆ. ಒಂದೇ ಒಂದು ಸೆಕೆಂಡ್ ಕಣ್ಣರಳಿಸಿ ನೋಡಿದ್ರೆ ನೀವ್ಯಾರು ಗಡಿದಾಟಲ್ಲ ಬರೆದಿಟ್ಟುಕೊಳ್ಳಿ!

ಗಂಧದಗುಡಿ ಅರಗಿಣಿ ಯಾವುದರಲ್ಲಿ ಕಮ್ಮಿ ಗುರು.. ಕಣ್ಣರಳಿಸಿ ನೋಡಿ- ಗಡಿದಾಟೋದು ಬಿಡಿ, ಹೀಗಂತ ನಾವು ಹೇಳ್ತಿಲ್ಲ ಅವರ ಫ್ಯಾನ್ಸ್ ಹೇಳ್ತಿದ್ದಾರೆ. ಗಿಣಿಯ ಫ್ಯಾನ್ಸ್ಫಾಲೋಯರ್ಸ್ ಈ ರೀತಿಯಾಗಿ ಗುಡುಗುತ್ತಿರುವುದಕ್ಕೂ ಕಾರಣ ಇದೆ ಅದೇನು ಅಂತ ಹೇಳ್ತೀವಿ. ಅದಕ್ಕೂ ಮುನ್ನ ಅರಗಿಣಿಯ ಹವಾ ಕಥೆ ಕೇಳಿ.ಗಿಣಿ ಅಂದಾಕ್ಷಣ ನಿಮ್ಮೆಲ್ಲರ ಕಣ್ಮುಂದೆ ನಟಿ ರಾಗಿಣಿ ಬಂದು ನಿಲ್ತಾರೆ ಅಪ್ ಕೋರ್ಸ್ ನಿಲ್ಲಬೇಕು. ಚಂದನವನಕ್ಕೆ ಊರಿಗೊಬ್ಳೆ ಪದ್ಮಾವತಿ ಹೇಗೋ ಸ್ಯಾಂಡಲ್ ವುಡ್ ಗೆ ಒಬ್ಬರೇ ಗಿಣಿ ಅವರೇ ನಟಿ ರಾಗಿಣಿಯವರು. ಸೌಂದರ್ಯದ ಕಣಿಯಂ ತಿರುವ ಅರಗಿಣಿ ಮಾದಕ ನೋಟ ಮಾತ್ರವಲ್ಲ ಮನಮೋಹಕ ಅಭಿನ ಯ ದ ಮೂಲಕ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಬೆಳ್ಳಿತೆರೆಯನ್ನೂ ಮೆಚ್ಚಿಸಿ ಬಿಗ್ ಸ್ಕ್ರೀನ್ ನಲ್ಲಿ ದಶಕ ಪೂರೈಸಿದ್ದಾರೆ.

ಈ ಹತ್ತು ವರ್ಷದ ಸಿನಿಜರ್ನಿಯಲ್ಲಿ ತಮ್ಮದೇ ಆದ ಐಡೆಂಟಿಟಿ ಕ್ರಿಯೇಟ್ ಮಾಡಿಕೊಂಡಿದ್ದಾರೆ. ನಾಯಕನ ಜೊತೆ ಬರೀ ಮರಸುತ್ತು ವುದಲ್ಲದೇ ನಾಯಕಿ ಪ್ರಧಾನ ಸಿನಿಮಾ ಮೂಲಕ ಬೆಳ್ಳಿಪರದೆಯನ್ನು ಬೆಚ್ಚಿಸಿ, ಬಾಕ್ಸ್ ಆಫೀಸ್ ನ ಶೇಕ್ ಮಾಡಿದ್ದಾರೆ. ನಾಯಕಿಯಾಗಿ ತರಹೇವಾರಿ ಪಾತ್ರಗಳಿಗೆ ಜೀವತುಂಬಿ ಸಿಲ್ವರ್‌ಸ್ಕ್ರೀನ್ ಮೇಲೆ ದಿಬ್ಬಣ ಹೋಗಿ ಬಂದಿದ್ದಾರೆ. ಎಕ್ಸ್‌ ಪಿರಿಮೆಂಟ್ ಮಾಡುವ ಹೊತ್ತಲ್ಲಿ ಎಡವಿ ದ್ದಾರೆ, ಕೆಳಗೆ ಬಿದ್ದು ಮೇಲೇಳಲು ಒದ್ದಾಡಿದ್ದಾರೆ. ಚಾರ್ಮ್ ಉಳಿಸಿ ಕೊಳ್ಳೋದಕ್ಕೆ ಹಗಲು-ರಾತ್ರಿ ಕಷ್ಟಪಟ್ಟಿದ್ದಾರೆ.

ಯಾವುದೇ ಜರ್ನಿಯಲ್ಲಿ ಅಪ್ಸ್ ಅಂಡ್ ಡೌನ್ಸ್ ಇದ್ದೇ ಇರುತ್ತೆ. ಅಂತಹ ಜರ್ನಿಯ ಅನುಭವ ರಾಗಿಣಿಗೂ ಆಗಿದೆ. ಜೀವನದಲ್ಲಿ ಸಾಕಷ್ಟು ಏಳು-ಬೀಳುಗಳನ್ನು ಕಂಡಿರುವ ರಾಗಿಣಿ ಡ್ರಗ್ಸ್ ವಿಚಾರದಲ್ಲಿ ಜೈಲಿಗೆ ಹೋಗಬೇಕಾಗಿ ಬಂತು. ಅಲ್ಲಿಂದ ಬಂದ್ಮೇಲೆ ತಾವಾಯ್ತು ತಮ್ಮ ಕೆಲಸ ಆಯ್ತು ಅಂತ ಇರಬಹುದಾಗಿತ್ತು ಆದರೆ ಅದಕ್ಕೆ ರಾಗಿಣಿ ಮನಸ್ಸು ಒಪ್ಪಲಿಲ್ಲ. ಹೀಗಾಗಿ, ಮತ್ತೆ ಸಾಮಾಜಿಕ ಕೆಲಸಕ್ಕೆ ಅಣಿಯಾದರು. ಕೊರೊನಾ ಸಂಕಷ್ಟದಿಂದ ನರಳುತ್ತಿದ್ದವರಿಗೆ ನೆರವಿನ ಹಸ್ತ ಚಾಚಿದರು ಅನ್ನಪೂರ್ಣೇಶ್ವರಿ ಎನಿಸಿಕೊಂಡರು. ನಟಿ ರಾಗಿಣಿಯ ಹೃದಯವಂತಿಕೆ ಹಾಗೂ ಸಮಾಜಮುಖಿ ಕೆಲಸಕ್ಕೆ ಅತ್ಯದ್ಬುತ ಪ್ರಶಸ್ತಿ ಕೂಡ ಸಿಗ್ತು.

ಇಷ್ಟೆಲ್ಲಾ ಹೇಳಿದ್ಮೇಲೆ ನಟಿ ರಾಗಿಣಿಯ ಹೊಸ ವರಸೆ ಹಾಗೂ ಅವರ ಅಭಿಮಾನಿಗಳ ಒಕ್ಕೊರಲ ಅಭಿಪ್ರಾಯವನ್ನು ನಿಮ್ಮ ಮುಂದೆ ಇಡಲೆ ಬೇಕು. ನಟಿ ರಾಗಿಣಿ ದ್ವಿವೇದಿ ಬದಲಾಗಿದ್ದಾರೆ. ಎಷ್ಟರ ಮಟ್ಟಿಗೆ ಅಂದರೆ ಬಜಾರ್‌ನಲ್ಲಿ ನಾವೇ ಸ್ಲಿಮ್ ಸುಂದರಿಯರು ಅಂತ ಮೆರೆಯುತ್ತಿ ದ್ದವರು ಕೂಡ ಅರಗಿಣಿಯ ಜಿರೋ ಸೈಜ್ ಫಿಗರ್‌ನ ನೋಡಿ ಹೊಟ್ಟೆ ಉರಿದು ಕೊಳ್ಳುತ್ತಿದ್ದಾರೆ. ಹೌದು, ಮೊದಲೇ ಸ್ಲಿಮ್ ಆಗಿದ್ದ ರಾಗಿಣಿ ಮೊಗದಷ್ಟು ಸ್ಲಿಮ್ ಆಗಿದ್ದಾರೆ. ಜಿಮ್-ವರ್ಕೌಟ್‌ನ ಬದಿಗಿಟ್ಟು ಯೋಗದ ಮೊರೆ ಹೋದ ರಾಗಿಣಿ ಭರ್ತಿ ಐದು ಕೆ.ಜಿ ತೂಕ ಇಳಿಸಿಕೊಂ ಡಿದ್ದಾರೆ. ಯೋಗ ಮಾಡಿ ದೈಹಿಕವಾಗಿ ಮತ್ತು ಮಾನಸಿ ಕವಾಗಿ ಸ್ಟ್ರಾಂಗ್ ಆಗಿದ್ದೇನೆಂದು ಸಿನಿಲಹರಿ ಜೊತೆ ಹೇಳಿಕೊಂಡಿದ್ದಾರೆ.

ನಟಿ ರಾಗಿಣಿ ತೂಕ ಇಳಿಸಿಕೊಂಡಿರುವುದು ಯಾವುದೋ ಸಿನಿಮಾಗಾಗಿ ಅಲ್ಲ ಫಿಸಿಕಲಿ ಫಿಟ್ ಆಗರ‍್ಬೇಕು ಹಾಗೂ ಹೆಲ್ತಿಯಾಗರ‍್ಬೇಕು ಎನ್ನುವ ಕಾರಣಕ್ಕೆ ಯೋಗದ ಮೊರೆ ಹೋಗಿದ್ದಾರೆ. ತಮ್ಮ ನೆಚ್ಚಿನ ನಾಯಕಿಯ ನಯಾ ಲುಕ್‌ನ ನೋಡಿದ ಅವರ ಫ್ಯಾನ್ಸು ನಮ್ಮ ಅರಗಿಣಿಗೆ ಏನ್ ಕಮ್ಮಿಯಾಗಿದೆ ಹೇಳ್ರಪ್ಪಾ? ಆರಡಿ ಹೀರೋಗೆ ಹೈಟ್ ಮ್ಯಾಚ್ ಮಾಡ್ತಾರೆ? ಜಿರೋ ಸೈಜ್‌ನ ಮೆಂಟೇನ್ ಮಾಡಿದ್ದಾರೆ, ಬೋಲ್ಡ್ ಅಂಡ್ ಬ್ಯೂಟಿಫುಲ್ ಆಗಿಯೂ ಇದ್ದಾರೆ. ಇಷ್ಟೆಲ್ಲಾ, ಇದ್ದರೂ ಕೂಡ ನಮಗೆ ಗಿಲ್ಲಿ ಗರ್ಲ್ ಬೇಕು, ಕಿಕ್ ಸುಂದರಿನೇ ಆಗ್ಬೇಕು, ಮಲೆಯಾಳಂ ಕುಟ್ಟಿನೇ ಬೇಕು ಅಂತ ಯಾಕೇ ಹಠ ಮಾಡ್ತೀರಿ? ನಮ್ಮ ಇಂಡಸ್ಟ್ರಿಯ ಹೆಣ್ಣುಮಕ್ಕಳನ್ನು ಅದ್ಯಾಕೆ ಕಡೆಗಣಿಸ್ತೀರಿ ?ಕೋಟಿ ಕೋಟಿ ಸುರಿದು ಅದ್ಯಾಕೆ ಬೇರೆ ಭಾಷೆಯ ಬೆಡಗಿಯರನ್ನು ರತ್ನಗಂಬಳಿ ಹಾಕಿಕೊಂಡು ಕರೆತರುತ್ತೀರಿ? ನಮ್ಮಲ್ಲೇ ಗಿಲ್ಲಿಯಂಹ ಗರ್ಲ್ಸ್ ಇದ್ದಾರೆ, ಮಾದಕತೆ ತುಂಬಿರುವ ಅಭಿನಯದ ಮೂಲಕ ಕಿಕ್ಕೇರಿಸುವ ನಟಿಮಣಿಯರು ಇದ್ದಾರೆ. ಒಂದೇ ಒಂದು ಸೆಕೆಂಡ್ ಕಣ್ಣರಳಿಸಿ ನೋಡಿದ್ರೆ ನೀವ್ಯಾರು ಗಡಿದಾಟಲ್ಲ ಬರೆದಿಟ್ಟುಕೊಳ್ಳಿ ಹೀಗಂತಾರೇ, ಸಕಲ ಕನ್ನಡ ನಟಿಮಣಿಯರ ಅಭಿಮಾನಿ ದೇವರುಗಳು.

-ಎಂಟರ್‌ಟೈನ್ಮೆಂಟ್ ಬ್ಯೂರೋ ಸಿನಿಲಹರಿ

Categories
ಸಿನಿ ಸುದ್ದಿ

ಲವ್ಲಿ ನ್ಯೂಸ್:‌ ನೆನಪಿರಲಿ ಪ್ರೇಮ್‌ ಅವರ ಚಿತ್ರ ಪೂಜೆಗೆ ರೆಡಿಯಾಗಿ- ಅಕ್ಟೋಬರ್‌ 29ಕ್ಕೆ ಪ್ರೇಮಂ ಪೂಜ್ಯಂ ವರ್ಲ್ಡ್‌ ವೈಡ್‌ ರಿಲೀಸ್!

ನಟ ಲವ್ಲಿ ಸ್ಟಾರ್ ಪ್ರೇಮ್ ಅಭಿನಯದ “ಪ್ರೇಮಂ ಪೂಜ್ಯಂ” ಚಿತ್ರ ಇನ್ನೇನು ಬಿಡುಗಡೆಗೆ ಸಜ್ಜಾಗಿದೆ. ಬಿಡುಗಡೆ ಮುನ್ನವೇ ಸಾಕಷ್ಟು ಸುದ್ದಿ ಮಾಡಿರುವ ಈ ಚಿತ್ರ ಅಷ್ಟೇ ನಿರೀಕ್ಷೆ ಹೆಚ್ಚಿಸಿದೆ. ಈಗಾಗಲೇ ಚಿತ್ರದ ಟೈಟಲ್ ಲಿರಿಕಲ್ ಸಾಂಗ್ ವಿಡಿಯೋ ಬಿಡುಗಡೆಯಾಗಿ, ಎಲ್ಲೆಡೆಯಿಂದ ಭರ್ಜರಿ ಮೆಚ್ಚುಗೆ ಪಡೆದಿದೆ. ಈಗ ಈ ಚಿತ್ರದ ಹೊಸ ಸುದ್ದಿ ಅಂದರೆ, ಚಿತ್ರತಂಡ ಬಿಡುಗಡೆ ದಿನವನ್ನು ಘೋಷಿಸಿದೆ. ಹೌದು, “ಪ್ರೇಮಂ ಪೂಜ್ಯಂ” ಪ್ರೇಮ್ ಅವರ 25ನೇ ಸಿನಿಮಾ ಅನ್ನೋದು ವಿಶೇಷ. ಈಗಾಗಲೇ ಸಾಕಷ್ಟು ಕುತೂಹಲ ಕೆರಳಿಸಿದೆ ಕೂಡ. ಚಿತ್ರದ‌ ಟೈಟಲ್ಲೇ ಹೇಳುತ್ತೆ ಇದೊಂದು ಪಕ್ಕಾ ಇಂಟ್ರೆಸ್ಟಿಂಗ್‌ ಲವ್‌ಸ್ಟೋರಿ ಅಂತ. ಸಿನಿಮಾ ಯಾವಾಗ ಅಂತ ಪ್ರೇಮ್‌ ಫ್ಯಾನ್ಸ್‌ ಕೇಳುತ್ತಲೇ ಇದ್ದರು. ಅವರಿಗೆ ಇಲ್ಲೊಂದು ಸಂತಸದ ಸುದ್ದಿ ಇದೆ. ಅದೇ ಚಿತ್ರ ಬಿಡುಗಡೆ ಆಗುತ್ತಿರುವ ಸುದ್ದಿ. ಅಕ್ಟೋಬರ್‌ 29 ರಂದು ಚಿತ್ರ ಬಿಡುಗಡೆಯಾಗುತ್ತಿದೆ.‌

ಈ ಬಿಡುಗಡೆ ಸುದ್ದಿಯನ್ನು ಚಿತ್ರತಂಡ ಅನೌನ್ಸ್‌ ಮಾಡಿದೆ. ಸಹಜವಾಗಿಯೇ ಇದು ಪ್ರೇಮ್‌ ಫ್ಯಾನ್ಸ್‌ಗೆ ಖುಷಿ ಹೆಚ್ಚಿಸಿದೆ.
ಅಂದಹಾಗೆ, ಈ ಚಿತ್ರವನ್ನು ಜಗತ್ತಿನಾದ್ಯಂತ ರಿಲೀಸ್‌ ಮಾಡಲು ಚಿತ್ರತಂಡ ತಯಾರು ಮಾಡಿಕೊಂಡಿದೆ. ಸದ್ಯದ ಸ್ಥಿತಿಯಲ್ಲಿ ಶೇ.50ರಷ್ಟು ಮಾತ್ರ ಚಿತ್ರಮಂದಿರಗಳಲ್ಲಿ ಅವಕಾಶ ಕಲ್ಪಿಸಲಾಗಿದೆ. ಅಕ್ಟೋಬರ್‌ ಹೊತ್ತಿಗೆ ಶೇ.100ರಷ್ಟು ಅನುಮತಿ ಸಿಗಬಹುದು. ಹಾಗಾಗಿ, ಚಿತ್ರತಂಡ ಎಲ್ಲವನ್ನೂ ಯೋಚಿಸಿಯೇ ಈ ನಿರ್ಧಾರ ಪ್ರಕಟಿಸಿದೆ.
ಆರಂಭದಿಂದಲೂ ಪೋಸ್ಟರ್ ಮೂಲಕವೇ ಸದ್ದು ಮಾಡಿದ್ದ “ಪ್ರೇಮಂ ಪೂಜ್ಯಂ”, ಈಗ ಬಿಡುಗಡೆಯ ದಿನಾಂಕ ಘೋಷಣೆ ಮಾಡಿ, ಎಲ್ಲರಲ್ಲೂ ಒಂದಷ್ಟು ನಿರಿಕ್ಷೆಯನ್ನು ಹೆಚ್ಚಿಸಿದೆ. ಕಳೆದ ಯುಗಾದಿಗೆ ಚಿತ್ರದ ಟೈಟಲ್‌ ಸಾಂಗ್‌ ಲಿರಿಕಲ್‌ ಸಾಂಗ್ ವಿಡಿಯೊ ಬಿಡುಗಡೆಯಾಗಿತ್ತು.

ಅದಕ್ಕೆ ಮಿಲಯನ್ಸ್‌ ವೀವ್ಸ್‌ ಬಂದಿತ್ತು. ಅದರ ಬೆನ್ನಲ್ಲೇ ಚಿತ್ರತಂಡ “ವೈದ್ಯೋ ನಾರಾಯಣ ಹರಿಹಿ.. ಎಂದು ಸಾಗುವ… ಸಾಗುವ ಲಿರಿಕಲ್‌ ಸಾಂಗ್ ವಿಡಿಯೋ ಕೂಡ ಬಿಡುಗಡೆ ಮಾಡಿತ್ತು. ಅದೊಂದು ಒಳ್ಳೆಯ ಪ್ರಯತ್ನವಾಗಿ ಹೊರಬಂದಿತ್ತು. ” ನನ್ನ ಜೀವನ ನಿನಗೆ ಸಮರ್ಪಣ ಕೈ ಮುಗಿವೆನು ಈ ನಾರಾಯಣ” ಎಂಬ ಹಾಡು ಅರ್ಥಪೂರ್ಣವಾಗಿದೆ. ಇನ್ನು, ಈ ಚಿತ್ರ ಕೆಡಂಬದಿ ಕ್ರಿಯೇಷನ್ಸ್‌ನಲ್ಲಿ ಮೂಡಿ ಬಂದಿದ್ದು, ಲವ್ಲಿ ಸ್ಟಾರ್‌ ಪ್ರೇಮ್‌ಗೆ ಜೋಡಿಯಾಗಿ ಬೃಂದಾ ಆಚಾರ್ಯ ಕಾಣಿಸಿಕೊಂಡಿದ್ದಾರೆ.

ಡಾ.ರಾಘವೇಂದ್ರ ಬಿ.ಎಸ್.‌ ಅವರು ಈ ಸಿನಿಮಾದ ನಿರ್ದೇಶನ ಮಾತ್ರವಲ್ಲ, ಸಂಗೀತ ಸಂಯೋಜನೆ ಜೊತೆ ಸಾಹಿತ್ಯವನ್ನೂ ಬರೆದಿರುವುದು ವಿಶೇಷ. ಈ ಚಿತ್ರದ ಪೋಸ್ಟರ್‌ಗಳು ಸಾಕಷ್ಟು ಸುದ್ದಿ ಮಾಡಿದ್ದಂತೂ ನಿಜ. ಅವೆಲ್ಲವನ್ನೂ ನೋಡಿದವರಿಗೆ ಪ್ರೇಮ್‌ ಮತ್ತಷ್ಟು ನ್ಯೂ ಲುಕ್‌ನಲ್ಲಿ ಆಕರ್ಷಿಸುತ್ತಾರೆ. ಫ್ರೆಶ್‌ ಲೊಕೇಷನ್‌ ಜೊತೆ ಅಷ್ಟೇ ಕ್ಯೂಟ್‌ ಜೋಡಿ ಕಾಣಿಸಿಕೊಂಡಿರುವುದನ್ನು ನೋಡಿದರೆ, ಸಿನಿಮಾ ನೋಡುವ ಕಾತುರ ಹೆಚ್ಚದೇ ಇರದು. ಚಿತ್ರಕ್ಕೆ ನವೀನ್‌ ಕುಮಾರ್‌ ಕ್ಯಾಮೆರಾ ಹಿಡಿದರೆ, ಹರೀಶ್‌ ಕೊಮ್ಮೆ ಸಂಕಲನವಿದೆ. ಇಂತಹ ನಿರೀಕ್ಷೆಯ ಸಿನಿಮಾಗೆ ಡಾ.ರಕ್ಷಿತ್‌ ಕೆಡಂಬದಿ, ಡಾ.ರಾಜಕುಮಾರ್‌ ಜಾನಕಿರಾಮನ್‌, ಡಾ.ರಾಘವೇಂದ್ರ ಎಸ್‌, ಮನೋಜ್‌ ಕೃಷ್ಣನ್‌ ನಿರ್ಮಾಪಕರು.


ಅದೇನೆ ಇರಲಿ, ಪ್ರತಿಯೊಬ್ಬ ನಟನಿಗೂ ತನ್ನ ಮೊದಲ ಚಿತ್ರ ಹೇಗೆ ವಿಶೇಷ ಆಗುತ್ತೋ, ಹಾಗೆಯೇ ಅವರ ಪ್ರತಿಯೊಂದು ಸಿನಿಮಾ ಕೂಡ ವಿಶೇಷವೇ. ಅದರಲ್ಲೂ 25 ನೇ ಸಿನಿಮಾ ಅಂದಾಕ್ಷಣ, ಅದೊಂದು ಮೈಲಿಗಲ್ಲು ಎನಿಸುವುದು ಸಹಜ. ಅಂತಹ 25ನೇ ಹೊಸ್ತಿಲಲ್ಲಿ ಇರುವ ಪ್ರೇಮ್‌, 25ನೇ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

Categories
ಸಿನಿ ಸುದ್ದಿ

ಶೂಟಿಂಗ್‌ ಸೆಟ್‌ : ಕಳೆದುಕೊಂಡವರ ಮನೆಗಳಲ್ಲಿ ಬರೀ ನೋವು ಉಳಿಸಿ ಹೋಗುವ ಈ ಅವಘಡಗಳು ಆಗುತ್ತಿರುವುದಾದರೂ ಯಾಕೆ?

ಈಗಲೂ ಸಿನಿಮಾ ರಂಗ ಎಚ್ಚರಿಕೆ ವಹಿಸಿದಂತಿಲ್ಲ. ಆತುರವೋ, ಅಚಾತುರ್ಯವೋ, ಆವೇಶವೋ, ಅಬ್ಬರವೋ…. ಶೂಟಿಂಗ್‌ ಸೆಟ್‌ನಲ್ಲಿ ಅವಘಡಗಳು ನಡೆಯುತ್ತಲೇ ಇವೆ. ಎಚ್ಚರ ವಹಿಸಬೇಕಾದ ಕಡೆ ನಿರ್ಲಕ್ಷ್ಯ ತೋರುತ್ತಿರುವುದರ ಪರಿಣಾಮ ಅನಾಹುತಗಳು ನಡೆದು, ಅಮಾಯಕರು ಬಲಿಯಾಗುತ್ತಿರುವುದು ದುರಂತ. ಮೊನ್ನೆಯಷ್ಟೇ ಆಗಿರುವ ʼಲವ್‌ ಯು ರಚ್ಚುʼ ಚಿತ್ರದ ದುರಂತ ಕೂಡ ಇದರಿಂದ ಹೊರತಲ್ಲ. ಸಾಹಸ ದೃಶ್ಯದ ಸನ್ನಿವೇಶದಲ್ಲಿ ಒಬ್ಬ ಫೈಟರ್‌ ಸಾವನ್ನಪ್ಪಿದ್ದರೆ, ಇನ್ನೊಬ್ಬ ತೀವ್ರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾನೆ. ಮತ್ತೊಂದೆಡೆ ನಿರ್ಮಾಪಕ ಕೆ.ಮಂಜು ನಿರ್ಮಾಣದ ʼರಾಣಾʼ ಚಿತ್ರದ ಚಿತ್ರೀಕರಣದ ವೇಳೆಯೂ ಒಂದು ಅವಘಡ ನಡೆದು ಹೋಗಿದೆ. ಒಬ್ಬ ಛಾಯಾಗ್ರಾಹಕ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೆಲ್ಲ ಆಕಸ್ಮಿಕವಾಗಿಯೇ ನಡೆದು ಹೋದರೂ, ಚಿತ್ರೀಕರಣಕ್ಕೆ ವಹಿಸಬೇಕಾದ ಎಚ್ಚರ ತಪ್ಪಿದ್ದೇ ಇದಕ್ಕೆ ಕಾರಣ ಅನ್ನೋದು ಅಷ್ಟೇ ಸತ್ಯ.

ಯಾಕೆ ಹಾಗೆ ? ಹಾಗೆ ನೋಡಿದರೆ ಕನ್ನಡ ಚಿತ್ರೋದ್ಯಮಕ್ಕೆ ʼಮಾಸ್ತಿಗುಡಿʼ ದುರಂತ ದೊಡ್ಡ ಪಾಠ ಆಗಬೇಕಿತ್ತು. ಸಾಹಸ ನಿರ್ದೇಶಕ ತೋರಿದ ವೈಫ ಲ್ಯದ ಪರಿಣಾಮ ಇಬ್ಬರು ನಟರು ಕಣ್ಣೇದುರೆ ಸಾವು ಕಂಡರು. ಅಲ್ಲಿಂದ ಏನಾ ಯ್ತು ಅನ್ನೋದೆಲ್ಲ ಉದ್ಯಮಕ್ಕೆ ಗೊತ್ತೇ ಇದೆ. ಅಲ್ಲಿ ಸ್ಟಂಟ್‌ ಮಾಸ್ಟರ್‌ ತೋರಿದ ನಿರ್ಲಕ್ಷ್ಯಕ್ಕೆ ನಿರ್ಮಾಪಕರು, ನಿರ್ದೇಶಕರ ಜತೆಗೆ ಕಲವಿದರು ಕೂಡ ಅದರ ನೋವು ಅನುಭವಿಸಬೇಕಾಗಿ ಬಂತು. ಇಷ್ಟಾಗಿ ಯೂ ಚಿತ್ರೋದ್ಯಮ ಪಾಠ ಕಲಿತಿಲ್ಲ ಅಂದ್ರೆ ಏನನ್ನಬೇಕೋ ಗೊತ್ತಿಲ್ಲ. ಹಾಗಂತ ಯಾರೇನು ಇಲ್ಲಿ ಬೇಕಂತ ಮಾಡುತ್ತಿಲ್ಲ. ಯಾರಿಗೂ ಈ ಅವಘ ಡಗಳು ಬೇಕಾಗಿಲ್ಲ. ಸುಸೂತ್ರವಾಗಿ ನಡೆಯುವ ಚಿತ್ರೀಕರಣ ಗಳೆಲ್ಲಿ ಇನ್ನೇನು ತೊಂದರೆ ತಂದುಕೊಂಡು ವಿನಾಕರಣ ಸಂಕಷ್ಟಕ್ಕೆ ಸಿಲುಕಿಕೊಳ್ಳುವ ಪರಿಸ್ಥಿತಿ ಕೂಡ ಯಾರಿಗೂ ಬೇಕಿಲ್ಲ. ಇಷ್ಟಾಗಿಯೂ ಇಂತ ಹ ದುರಂತ ನಡೆದಾಗ ಯಾರನ್ನು ಹೊಣೆಗಾರರನ್ನಾಗಿ ಮಾಡ ಬೇಕು?

ʼಲವ್‌ ಯೂ ರಚ್ಚುʼ ದುರಂತದಲ್ಲೀಗ ಚಿತ್ರದ ನಿರ್ಮಾಪಕರು, ನಿರ್ದೇಶಕರು ಹಾಗೂ ಸಾಹಸ ನಿರ್ದೇಶಕರು ಹೊಣೆಗಾರರಾಗಿದ್ದಾರೆ. ಮಾಡಿದ ತಪ್ಪಿಗೆ ಅವರೇನೋ,ಮಡಿದ ವ್ಯಕ್ತಿಯ ಕುಟಂಬಕ್ಕೆ ಒಂದಷ್ಟು ಪರಿಹಾರ ನೀಡಬಹುದು, ಇಲ್ಲವೇ ಕಾನೂನಿನಡಿ ಒಂದಷ್ಟು ಶಿಕ್ಷಿಗೂ ಗುರಿಯಾಗಬಹುದು, ಆದರೆ ಯಾರದೋ ನಿರ್ಲಕ್ಷ್ಯ ವಿನಾಕಾರಣ ಸತ್ತು ಹೋದ ವ್ಯಕ್ತಿ ಮತ್ತೆ ಬರುತ್ತಾನೆಯೇ? ಸಿನಿಮಾ ಶೂಟಿಂಗ್‌ ಈಗ ತೀರಾ ಆತುರಕ್ಕೆ ನಡೆಯುತ್ತಿವೆ. ಎಷ್ಟೋ ನಿರ್ಮಾಪಕರು ನಿಗದಿ ಮಾಡಿಕೊಂಡ ಶೆಡ್ಯೂಲ್‌ ಗಿಂತ ಮುಂಚೆಯೇ ಶೂಟಿಂಗ್‌ ಮುಗಿಸಿ ಅಂತ ನಿರ್ದೇಶಕರ ಮೇಲೆ ಒತ್ತಡ ಹಾಕುವ ಕಾರಣಕ್ಕೆ ಹಗಲು-ರಾತ್ರಿ ಶೂಟಿಂಗ್‌ ನಡೆದ ಉದಾಹರಣೆಗಳು ಸಾಕಷ್ಟಿವೆ. ಈ ರೀತಿಯ ಅವಸರಗಳು ಕೂಡ ಶೂಟಿಂಗ್‌ ಸೆಟ್‌ ನಲ್ಲಿ ಅವಘಡ ಸಂಭವಿಸುವುದಕ್ಕೂ ಕಾರಣ.

Categories
ಸಿನಿ ಸುದ್ದಿ

ಮತ್ತೆ ರಂಗೇರಿತ್ತಲ್ಲ ದೊಡ್ಮನೆ ಅಖಾಡ; ಕಿರುತೆರೆ ಸೂಪರ್‌ ಸ್ಟಾರ್ಸ್ ಎಂಟ್ರಿಗೆ ಶಾಕ್ ಆಯ್ತು ಬಿಗ್ಬಾಸ್ !

ಶಾಕ್ ಆಯ್ತಾ…ಶಾಕ್ ಆಗ್ಲೆಬೇಕು ಅಂತ ತಾನೇ ಕಲರ್ಸ್ ಬ್ಯುಸಿನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಇಂತಹದ್ದೊಂದು ಪ್ಲ್ಯಾನ್ ಮಾಡಿದ್ದು. ಸೈಲೆಂಟಾಗಿ ಮಾಡಿದ ಆ ಮೆಗಾ ಪ್ಲ್ಯಾನ್ ಈ ಮಟ್ಟಿಗೆ ಸುದ್ದಿಸದ್ದು ಮಾಡ್ತಿರುವುದು. ಯಸ್, ಪರಂ ಮಾಡಿದ ಮಾಸ್ಟರ್‌ ಪ್ಲ್ಯಾನ್‌ಗೆ ಕಲರ್ಸ್ ಕನ್ನಡದ ಪ್ರೇಕ್ಷಕರು, ಬಿಗ್ಬಾಸ್ ರಿಯಾಲಿಟಿ ಶೋನ ವೀಕ್ಷಕರು ಮಾತ್ರವಲ್ಲ ಸ್ವತಃ ದೊಡ್ಮನೆ ಅಖಾಡವೇ ಶಾಕ್ ಆಗಿದೆ. ಸೀಸನ್ 8ರ ಗ್ರ್ಯಾಂಡ್ ಫಿನಾಲೆ ಮುಗೀತು ಇನ್ನೇನು ನನ್ನ ಅರಮನೆಗೆ ಬೀಗ ಹಾಕ್ತಾರೆ ಅಂತ ಬೇಸರದಲ್ಲಿದ್ದ ಬಿಗ್ಬಾಸ್ ಅರಮನೆ ಈಗ ಕೇಕೆ ಹಾಕಿಕೊಂಡು ಕುಣಿದಾಡ್ತಿದೆ. ಇಡೀ ಕರ್ನಾಟಕದ ಕಿರುತೆರೆಯ ಪ್ರೇಕ್ಷಕ ಮಹಾಷಯರು ಮತ್ತೆ ತನ್ನತ್ತ ತಿರುತಿರುಗಿ ನೋಡುತ್ತಾರಲ್ಲ ಅಷ್ಟು ಸಾಕು ಎನ್ನುತ್ತಿದೆ ಬಿಗ್ಬಾಸ್ ಮನೆ.

ಪ್ರತಿದಿನ ಒಂಭತ್ತು ಗಂಟೆ ಆದರೆ ಸಾಕು ಬಿಗ್ಬಾಸ್ ಬಿಗ್ಬಾಸ್' ಎನ್ನುವ ಜಿಂಗಲ್ ಮನೆಯ ಪಡಸಾಲೆಯಲ್ಲಿ ರಿಂಗಣಿಸುತ್ತಿತ್ತು. ಮದುವಣಗಿತ್ತಿಯಂತೆ ಸಿಂಗಾರಗೊಂಡ ಅರಮನೆಯನ್ನು ಕಿರುತೆರೆ ಪ್ರೇಕ್ಷಕರು ಕಣ್ಣರಳಿಸಿ ನೋಡ್ತಿದ್ದರು. ಸ್ಪರ್ಧಿಗಳ ನೀಡುವ ಮನರಂಜನೆಗೆ ಮನಸ್ಸು ಒಡ್ಡುತ್ತಿದ್ದರು. ವೀಕೆಂಡ್‌ನಲ್ಲಂತೂ ಬಿಗ್ಬಾಸ್ ಹವಾ ಜೋರಾಗಿರುತ್ತಿತ್ತು. ಅದಕ್ಕೆ ಕಾರಣ ಆಲ್ ಇಂಡಿಯಾ ಕಟೌಟ್ ಕಿಚ್ಚ ಎನ್ನುವುದು ಇಡೀ ಕರ್ನಾಟಕಕ್ಕೆ ಗೊತ್ತು. ಹೀಗೆ, ವೀಕೆಂಡ್‌ನಲ್ಲಿ ಹುಚ್ಚೆಬ್ಬಿಸುತ್ತಿದ್ದ ಬಿಗ್‌ಬಾಸ್ ಶೋ ಮುಗೀತು, ಮನರಂಜನೆಗೆ ಕೊರತೆಯಾಯ್ತು ಎನ್ನುವಷ್ಟರಲ್ಲಿ ಕಲರ್ಸ್ ಕನ್ನಡದ ಬ್ಯುಸಿನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಅವರು ಪ್ಲ್ಯಾನ್ ಮಾಡಿದ್ದಾರೆ. 100 ದಿನದ ಬದಲಾಗಿ ಆರು ದಿನದಬಿಗ್ಬಾಸ್ ಫ್ಯಾಮಿಲಿ’ ಕಿರುಸೀಸನ್ ಆರಂಭಿಸಿದ್ದಾರೆ. ಕಲರ್ಸ್ ಕುಟುಂಬದ ಹದಿನೈದು ಮಂದಿ ಕಲಾವಿದರು ದೊಡ್ಮನೆ ಪ್ರವೇಶಿಸಿದ್ದಾರೆ. ಈಗಾಗಲೇ ಇದರ ಪ್ರೋಮೋ ಕೂಡ ರಿಲೀಸ್ ಆಗಿದ್ದು ಕೂತೂಹಲ ಗರಿಗೆದರುವಂತೆ ಮಾಡಿದೆ.

ಕಲರ್ಸ್ ಕುಟುಂಬದ ಸೂಪರ್‌ ಸ್ಟಾರ್ಸ್ ಗಳನ್ನು ನೋಡಿ ಬಿಗ್ಬಾಸ್ ಮನೆ ಖುಷಿಯಾಗಿದೆ, ದೊಡ್ಮನೆ ಅಂಗಳಕ್ಕೆ ಕಾಲಿಡುವ ಸೌಭಾಗ್ಯ ಸಿಕ್ಕವರು ಸಂತೋಷದಲ್ಲಿದ್ದಾರೆ. ಬಿಗ್ಬಾಸ್ ಸೀಸನ್ ೮ ಅದ್ದೂರಿಯಾಗಿ ಅಂತ್ಯಗೊಂಡ ಬೆನ್ನಲ್ಲೇ `ಬಿಗ್ಬಾಸ್ ಫ್ಯಾಮಿಲಿ’ ಶೋ ಆರಂಭಗೊಂಡಿರುವುದನ್ನು ಕಂಡು ಟಿವಿ ವೀಕ್ಷಕರು ಕೂಡ ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೇ, ಆರು ದಿನದ ಬಿಗ್ಬಾಸ್ ಫ್ಯಾಮಿಲಿ ಕಾರ್ಯಕ್ರಮ ಹೇಗಿರಬಹುದು ಅಂತ ಲೆಕ್ಕಚ್ಚಾರ ಶುರುವಿಟ್ಟುಕೊಂಡಿದ್ದಾರೆ. ದೊಡ್ಮನೆ ಅಖಾಡಕ್ಕೆ ಗ್ರ್ಯಾಂಡ್ ಎಂಟ್ರಿಕೊಟ್ಟಿರುವ ಕಿರುತೆರೆ ಸೂಪರ್‌ಸ್ಟರ‍್ಸ್ಗಳಿಗೆ ಉಘೇ ಉಘೇ ಎನ್ನುತ್ತಿರುವ ವೀಕ್ಷಕ ಮಹಾಪ್ರಭುಗಳು ಹದಿನೈದು ಮಂದಿ ಕಂಟೆಸ್ಟೆಂಟ್‌ಗೆ ಗುಡ್ ಲಕ್ ಹೇಳ್ತಿದ್ದಾರೆ.

ಬಿಗ್ಬಾಸ್ ಸೀಸನ್ 2ರ ವಿನ್ನರ್ ಅಕುಲ್ ಬಾಲಾಜಿ ಮತ್ತೆ ದೊಡ್ಮನೆಗೆ ಗ್ರ್ಯಾಂಡ್ ಎಂಟ್ರಿಕೊಟ್ಟಿದ್ದಾರೆ. ಕನ್ನಡತಿ ಧಾರಾವಾಹಿ ಖ್ಯಾತಿಯ ಕಿರಣ್ ರಾಜ್, ಗಿಣಿರಾಮ ಸೀರಿಯಲ್ ಕೋಸ್ಟಾರ್ಸ್ ಗೀತಾ ಸೀರಿಯಲ್ ಜೋಡಿ, ನನ್ನರಸಿ ರಾಧೆ ಧಾರಾವಾಹಿಯ ಅಗಸ್ತ್ಯ ಹಾಗೂ ಇಂಚರ, ಪದ್ಮಾವತಿಯ ಸೀರಿಯಲ್ ಹೀರೋ, ಮಂಗಳಗೌರಿ ಸೀರಿಯಲ್‌ನ ಕಥಾನಾಯಕ ರಾಜೀವ್, ಮಜಾಭಾರತದ ಸುಂದರಿ ಸೇರಿದಂತೆ ಈಗಾಗಲೇ ಬಿಗ್ಬಾಸ್ ಅಂಗಳಕ್ಕೆ ಬಂದುಹೋಗಿದ್ದ ನಿರಂಜನ್ ದೇಶ್‌ಪಾಂಡೆ ಕೂಡ ಈಗ ಬಿಗ್ಬಾಸ್ ಫ್ಯಾಮಿಲಿ'ಗೆ ಜೊತೆಯಾಗಿದ್ದಾರೆ. ಒಟ್ಟು ಹದಿನೈದು ಜನ ಕಲರ್ಸ್ ಕನ್ನಡದ ಸ್ಪರ್ಧಿಗಳು ದೊಡ್ಮನೆ ಅಖಾಡಕ್ಕೆ ಜಿಗಿದಿದ್ದಾರೆ.

ಒಂದು ವಾರದ ಮಟ್ಟಿಗೆ ನಡೆಯುವ ಶೋಗೆ ರಂಗುತುಂಬಿ ಕರುನಾಡ ಜನರನ್ನು ಮನರಂಜಿಸೋಕೆ ಮನಸ್ಸು ಮಾಡಿದ್ದಾರೆ. ವಿವಿಧ ರೀತಿಯ ಟಾಸ್ಕ್ ಗಳಿರಲಿದ್ದು, ಹದಿನೈದು ಜನ ಸ್ಪರ್ಧಿಗಳ ನಡುವೆ ಪೈಪೋಟಿ ನಡೆಯಲಿದೆ. ಗೆದ್ದವರಿಗೆಬಿಗ್‌ಬಾಸ್ ಫ್ಯಾಮಿಲಿ ಅವಾರ್ಡ್’ ಸಿಗಲಿದೆ. ಶನಿವಾರ ಹಾಗೂ ಭಾನುವಾರ ಸಂಜೆ ೪ಗಂಟೆಗೆ ಕಾರ್ಯಕ್ರಮ ಪ್ರಸಾರ ಆಗಲಿದೆ.
ವೀಕೆಂಡ್‌ನಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿರುವುದರಿಂದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರೇ ಈ ಕಾರ್ಯಕ್ರಮ ನಡೆಸಿಕೊಡಲಿದ್ದಾರೆನ್ನುವ ಕೂತೂಹಲ ಮನೆಮಾಡಿದೆ. ಆ ಕೌತುಕಕ್ಕೆ ಹಾಗೂ
`ಬಿಗ್‌ಬಾಸ್ ಫ್ಯಾಮಿಲಿ ಅವಾರ್ಡ್’ ವಿನ್ನರ್ ಯಾರು ಎನ್ನುವ ಪ್ರಶ್ನೆಗೆ ವಾರಾಂತ್ಯದಲ್ಲಿ ಉತ್ತರ ಸಿಗಲಿದೆ.

ಎಂಟರ್‌ಟೈನ್ಮೆಂಟ್ ಬ್ಯೂರೋ ಸಿನಿಲಹರಿ

error: Content is protected !!