Categories
ಸಿನಿ ಸುದ್ದಿ

ಆಧುನಿಕ ರಾಮನ ಬಿಡುವಿಲ್ಲದ ಓಡಾಟ- ನೋಡುಗನ ಆಯಾಸ !

ಚಿತ್ರ ವಿಮರ್ಶೆ: ರೇಟಿಂಗ್ 2.5/5

ವಿಜಯ್ ಭರಮಸಾಗರ

ಚಿತ್ರ: ರಾಮನ ಅವತಾರ
ನಿರ್ದೇಶಕ: ವಿಕಾಸ್ ಪಂಪಾಪತಿ
ನಿರ್ಮಾಣ: ಅಮರೇಜ್ ಸೂರ್ಯವಂಶಿ
ತಾರಾಗಣ: ರಿಷಿ, ಪ್ರಣೀತಾ, ಶುಭ್ರ ಅಯ್ಯಪ್ಪ, ಅರುಣ್ ಸಾಗರ್ ಇತರರು

ಜೀವನದಲ್ಲಿ ಎಲ್ಲ ಕಷ್ಟ ಗಳು ನಮ್ಮನ್ನೇ ಯಾಕೆ ಹುಡಿಕೊಂಡ್ ಬರ್ತವೆ. ಹಾಗೆ ಬಂದಾಗಲೇ ನಮ್ಮವರು ಯಾರು ಅಂತ ಗೊತ್ತಾಗೋದು..’
ಈ ಡೈಲಾಗ್ ಬರುವ ಹೊತ್ತಿಗೆ ಅಲ್ಲೊಂದು ಮೆಲೋ ಡ್ರಾಮ ನಡೆದಿರುತ್ತೆ. ಏನದು ಎಂಬ ಕುತೂಹಲಕ್ಕೆ ಸಿನಿಮಾ ನೋಡಿ.

ಮನೆಗೆ ಮಾರಿ, ಊರಿಗೆ ಉಪಕಾರಿ ಇದು ಗಾದೆ ಮಾತು. ಮನೆಗೊಬ್ಬ ಇಂತಹ ವ್ಯಕ್ತಿ ಇದ್ದೇ ಇರ್ತಾರೆ. ಆದರೆ ಅಲ್ಲೊಬ್ಬ ಆಧುನಿಕ ರಾಮ, ಊರ ಉದ್ಧಾರ ಮಾಡಬೇಕು. ಜನಸೇವೆ ಮೂಲಕ ಹೆಸರಾಗಬೇಕು ಅಂದುಕೊಳ್ತಾನೆ. ಅವನ ಕನಸು ತುಂಬಾ ದೊಡ್ಡದು. ಆದರೆ ಆ ಕನಸು ನನಸಾಗುತ್ತಾ ಅನ್ನುವುದನ್ನು ಹಾಸ್ಯ ಪ್ರಧಾನವಾಗಿ ಕಟ್ಟಿಕೊಡುವ ಪ್ರಯತ್ನದಲ್ಲಿ ನಿರ್ದೇಶಕರು ತಕ್ಕಮಟ್ಟಿಗೆ ಕೆಲಸ‌ ಮಾಡಿದ್ದಾರೆ. ಹಾಗಂತ ಇದು ಪೂರ್ಣ ಪ್ರಮಾಣದ‌ ಕಾಮಿಡಿ ಸಿನಿಮಾವಂತೂ ಅಲ್ಲ. ನೀತಿ ಬೋಧನೆಯೂ ಇಲ್ಲ. ಮೊದಲರ್ಧ ಹೇಗೋ ನಗಾಡಿಸಿಕೊಂಡು ಸಾಗುವ ಸಿನಿಮಾ, ದ್ವಿತಿಯಾರ್ಧದಲ್ಲಿ ಏರುಪೇರಾಗುತ್ತೆ. ಎಲ್ಲೋ ಒಂದು ಕಡೆ ಕಥೆ ಮಂದಗತಿ ಎನಿಸುತ್ತೆ. ಇದು ತೀರಾ ಹೊಸ ಕಥೆಯೇನಲ್ಲ. ಇನ್ನಷ್ಟು ಬಿಗಿ ಹಿಡಿತ ಇದ್ದಿದ್ದರೆ ಸಿನಿಮಾದ ಅಂದ, ಗುಣಮಟ್ಟ, ವೇಗ ಹೆಚ್ಚುತ್ತಿತ್ತು. ಮೊದಲರ್ಧಕ್ಕೆ‌ ಕೊಟ್ಟ ಗಮನ ದ್ವಿತಿಯಾರ್ಧಕ್ಕೆ ನೀಡಿದ್ದರೆ ಹೊಸ ಅವತಾರವಾದರೂ ಕಾಣಬಹುದಿತ್ತು.

ನಿರ್ದೇಶಕರ ಕಥೆಯ ಎಳೆ ಹೊಸದಲ್ಲ. ಹೋಗಲಿ ನಿರೂಪಣೆಯನ್ನಾದರೂ ಇನ್ನಷ್ಟು ಚುರುಕಾಗಿಸಬಹುದಿತ್ತು. ಆದರೆ ಪ್ರಯತ್ನದಲ್ಲಿ ನಿರ್ದೇಶಕರು ಹಿಂದುಳಿದಿದ್ದಾರೆ. ಕಚಗುಳಿ ಮಾತು ಕೊಂಚ ನೋಡಿಸಿಕೊಂಡು ಹೋಗುತ್ತೆ ಅನ್ನೋದೇ ಸಮಾಧಾನ.

ಆರಂಭದಲ್ಲಿ ಮಜವೆನಿಸುವ ಕಥೆಯ ಜರ್ನಿ ಹೋಗ್ತಾ ಹೋಗ್ತಾ ತೀರಾ ಸರಳವೆನಿಸುತ್ತೆ. ಹಾಗಾಗಿ ನೋಡುಗರಿಗೆ ಹೇಳಿಕೊಳ್ಳುವಷ್ಟು ಮಜ ತರಿಸಲ್ಲ. ಆದರೆ, ತರಹೇವಾರಿ ಪಾತ್ರಗಳ ಮೋಡಿ ನೋಡಿಸಿಕೊಂಡು ಹೋಗುತ್ತೆ.

ಬಹುತೇಕ ಅಲ್ಲಲ್ಲೇ ಕಥೆ ಟ್ರಾವೆಲ್ ಆಗಿದ್ದರೂ, ಕೊಂಚ ಕಚಗುಳಿ ಇಡುವ ಅಂಶಗಳು ಗಮನ ಸೆಳೆಯುತ್ತವೆ. ಕೆಲವು ಕಡೆ ತೀರಾ ಸಿಲ್ಲಿ ಎನಿಸುವ ದೃಶ್ಯಗಳು ಎದುರಾಗಿ ನೋಡುಗನ ತಾಳ್ಮೆಗೆಡಿಸುತ್ತವೆ. ಅವುಗಳಿಗೆ ಕತ್ತರಿ ಬಿದ್ದಿದ್ದರೆ ಹೊಸ ಅವತಾರ ಕಾಣಬಹುದಿತ್ತು.
ರೊಮ್ಯಾಂಟಿಕ್ ಕಾಮಿಡಿ ಇಷ್ಟ ಪಡೋರಿಗೆ ಇದು ರುಚಿಸುತ್ತೆ. ರಿಷಿ ಕಾಮಿಡಿ ಸಬ್ಜೆಕ್ಟ್ ಗೆ ಫಿಟ್ ಅನ್ನೋದನ್ನ ಮತ್ತೆ ಪ್ರೂವ್ ಮಾಡಿದಾರೆ. ಆದರೆ ಈ ಕಥೆಯ ಆಯ್ಕೆಯಲ್ಲಿ ಗೊಂದಲಗೊಂಡಿದ್ದಾರೆ. ಹಿಂದೆ ಆಪರೇಷನ್ ಅಲಮೇಲಮ್ಮ ಕೊಟ್ಟ ಮಜ ಜನ ಮರೆತಿಲ್ಲ. ಅದೇ ಗುಂಗಲ್ಲಿ ಈ ಹೊಸ ಅವತಾರ ನೋಡಿದರೆ ಗಾಬರಿ ಆಗುವಂತಿಲ್ಲ.!!

ಕಥೆ ಏನು?

ರಾಮ (ರಿಷಿ) ಊರ ಜನರ‌ ಸೇವೆ ಮಾಡಬೇಕು. ಎಲ್ಲರೂ ದುಡಿದು ಬದುಕಬೇಕು ಅಂತ ಕನಸು ಕಂಡವನು. ಆದರೆ ಅವನ ಬದುಕಲ್ಲಿ ಒಂದು ಘಟನೆ ನಡೆದು ಹೋಗುತ್ತೆ. ಯಾರೋ ಮಾಡಿದ ತಪ್ಪು ಅವನ ಮೇಲೆ ಬರುತ್ತೆ. ಊರ ಜನ ತಿರುಗಿ ಬೀಳುವ ಮೊದಲು ಊರು ಬಿಡಬೇಕು ಅಂತ ನಿರ್ಧರಿಸಿ ರಾತ್ರೋ ರಾತ್ರಿ ಊರು ಬಿಡ್ತಾನೆ. ಮಂಗಳೂರು ಅಂಗಳಕ್ಕೆ ಬಂದು ಬೀಳೋ ರಾಮನ ಕಣ್ಣಿಗೆ ಸೀತೆಯಂತಹ ಹುಡುಗಿ ಕಾಣ್ತಾಳೆ.

ಪ್ರಾಜೆಕ್ಟ್ ಒಂದರ ರೀ ಸರ್ಚ್ ಗೆ ಬರುವ ಅವಳ ಜೊತೆ ಒಂದು ವಾರ ಸುತ್ತಾಡುತ್ತಾನೆ. ಮೆಲ್ಲನೆ‌ ಪ್ರೀತಿಯೂ ಶುರುವಾಗುತ್ತೆ. ಇನ್ನೇನು ಹೇಳಿಕೊಳ್ಳಬೇಕೆಂಬ ಹೊತ್ತಲ್ಲಿ ಅ ಹುಡುಗಿಯ ಕಿಡ್ನಾಪ್ ಆಗುತ್ತೆ. ಅಲ್ಲಿಂದ ಕಥೆ ಇನ್ನೊಂದು ಮಜಲಿಗೆ ಹೊರಳುತ್ತೆ. ಹಾಗಾದರೆ ಆಕೆಯನ್ನು ಕಿಡ್ನಾಪ್ ಮಾಡಿದ್ಯಾರು? ರಾಮ ತನ್ನ ಸೀತೆಯನ್ನು ಕಾಪಾಡ್ತಾನಾ? ತನ್ನೂರಿಗೆ ಹಿಂದಿರುಗುತ್ತಾನಾ? ಇದನ್ನು ತಿಳಿಯೋ ಕುತೂಹಲ ಇದ್ದರೆ ರಿಷಿ ಅವತಾರ ನೋಡಬಹುದು.

ಯಾರು ಹೇಗೆ?

ರಿಷಿ ನಟನೆಯಲ್ಲಿ ಲವಲವಿಕೆ ಇದೆ. ಮಾತಿನ‌ಲಹರಿ ಚಂದ. ರೊಮ್ಯಾಂಟಿಕ್ ಹುಡುಗನಾಗಿ ಇಷ್ಟವಾಗುತ್ತಾರೆ. ಅವರ ಬಾಡಿ ಲಾಂಗ್ವೇಜ್ ಎಂದಿಗಿಂತಲೂ ಗಮನ ಸೆಳೆಯುತ್ತೆ. ಕಾಮಿಡಿ ಫೈಟಲ್ಲೂ ಸೈ ಎನಿಸಿಕೊಳ್ಳುತ್ತಾರೆ.
ಪ್ರಣೀತಾ ಸಿಕ್ಕ ಪಾತ್ರಕ್ಕೆ ನ್ಯಾಯ ಸಲ್ಲಿಸಿದ್ದಾರೆ. ಅರುಣ್ ಸಾಗರ್ ಕಿಡ್ನಾರ್ ಲೀಡರ್ ಆಗಿ ಇಷ್ಟವಾಗುತ್ತಾರೆ. ಉಳಿದಂತೆ ಬರುವ ಪಾತ್ರಗಳು ನಾಯಕ, ನಾಯಕಿಗೆ ಹೆಗಲಾಗಿವೆ.
ವಿಷ್ಣು ಪ್ರಸಾದ್ ಛಾಯಾಗ್ರಹಣ ಪರವಾಗಿಲ್ಲ. ಜೂಡಾ ಸ್ಯಾಂಡಿ ಸಂಗೀತಕ್ಕಿನ್ನು ಧಮ್ ಬೇಕಿತ್ತು.

Categories
ಸಿನಿ ಸುದ್ದಿ

ಗಾಡ್ ಪ್ರಾಮೀಸ್ ಅಂದ್ರು ಸೂಚನ್ ಶೆಟ್ಟಿ: ಸಿನಿಮಾ ಮುಹೂರ್ತಕ್ಕೆ ಆನೆಗುಡ್ಡೆ ಗಣಪತಿ ಸಾಕ್ಷಿ

ಯುವ ಪ್ರತಿಭೆ ಸೂಚನ್ ಶೆಟ್ಟಿ ನಟಿಸಿ ನಿರ್ದೇಶನ ಮಾಡುತ್ತಿರುವ ಚೊಚ್ಚಲ ಪ್ರಯತ್ನ ಗಾಡ್ ಪ್ರಾಮಿಸ್ ಸಿನಿಮಾಗೆ ಮುನ್ನುಡಿ ಸಿಕ್ಕಿದೆ. ಉಡುಪಿ ಜಿಲ್ಲೆಯ ಕುಂದಾಪುರದ ಆನೆಗುಡ್ಡದ ಗಣಪತಿ ದೇಗಲುದಲ್ಲಿಂದು ಮುಹೂರ್ತ ನೆರವೇರಿದಿದ್ದು, ನಟ ಪ್ರಮೋದ್ ಶೆಟ್ಟಿ ಹಾಗೂ ಸಂಗೀತ ನಿರ್ದೇಶಕ ರವಿ ಬಸ್ರೂರು ಸೂಚನ್ ಕನಸಿಗೆ ಸಾಥ್ ಕೊಟ್ಟಿದ್ದಾರೆ. ಗಾಡ್ ಪ್ರಾಮಿಸ್ ಸಿನಿಮಾಗೆ ರವಿ ಬಸ್ರೂರ್ ಕ್ಲ್ಯಾಪ್ ಮಾಡಿದ್ದು, ಪ್ರಮೋದ್ ಶೆಟ್ಟಿ ಕ್ಯಾಮೆರಾಗೆ ಚಾಲನೆ ನೀಡಿದರು. ಕಾಂತಾರ ಸರಣಿ ಸಿನಿಮಾಗಳ ಮುಹೂರ್ತ ಕೂಡ ಇದೇ ದೇಗುಲದಲ್ಲಿ ನಡೆದಿರುವುದು ವಿಶೇಷ.

ನಿರ್ದೇಶಕ ಸೂಚನ್ ಶೆಟ್ಟಿ ಮಾತನಾಡಿ, ಗಾಡ್ ಪ್ರಾಮಿಸ್ ಸಿನಿಮಾದ ಮುಹೂರ್ತ ಇಂದು ನೆರವೇರಿದೆ. ಕಳೆದ ಆರೇಳು ತಿಂಗಳಿನಿಂದ ಈ ಚಿತ್ರಕ್ಕೆ ಪ್ರೀ ಪ್ರೊಡಕ್ಷನ್ ಕೆಲಸ ಶುರು ಮಾಡಿದ್ದೇವೆ. 2015ರಿಂದ ರವಿ ಬಸ್ರೂರು ಜೊತೆ ಕೆಲಸ ಮಾಡುತ್ತಿದ್ದೇನೆ. ಈಗ ಈ ಚಿತ್ರದ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದೇನೆ. ಸಿನಿಮಾ ಕುಂದಾಪುರ ಸುತ್ತಮುತ್ತ ನಡೆಯುತ್ತಿದೆ. ಫ್ಯಾಮಿಲಿ ಡ್ರಾಮಾ ಕಥೆಯನ್ನು ಒಳಗೊಂಡಿದೆ. ಆಡಿಷನ್ ನಡೆಸಿದ್ದೇವೆ. ಯಾರು ಆಯ್ಕೆಯಾಗಿದ್ದಾರೆ ಎಂಬುದನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇವೆ. ರವಿ ಸರ್ ಗೆ ನನಗೆ ಗುರುಗಳು. ಡೈರೆಕ್ಟನ್ ತಂಡದ ಜೊತೆಗೆ ಕಟಕ, ಗಿರ್ಮಿಟ್ ಸಿನಿಮಾಗಳ ಬರವಣಿಗೆಯಲ್ಲಿಯೂ ತೊಡಗಿಸಿಕೊಂಡಿದ್ದೆ. ಹೀಗಾಗಿ ಆ ಅನುಭವದ ಇಟ್ಟುಕೊಂಡು ನಿರ್ದೇಶನಕ್ಕೆ ಇಳಿದಿದ್ದೇನೆ ಎಂದರು.

ಸಂಗೀತ ನಿರ್ದೇಶಕ ರವಿ ಬಸ್ರೂರ್ ಮಾತನಾಡಿ, ಒಂದು ಸಿನಿಮಾ ಮಾಡುವುದರಿಂದ ಎಷ್ಟೋ ಜನ ಕಲಾವಿದರ ಭವಿಷ್ಯ ನಿರ್ಧಾರವಾಗುತ್ತದೆ. ನಮ್ಮ ಕರಾವಳಿಯವರಿಗೆ ಒಳ್ಳೆ ಫ್ಲಾಟ್ ಫಾರಂ ಸಿಗುತ್ತಿಲ್ಲ. ಆ ನಿಟ್ಟಿನಲ್ಲಿ ನಮ್ಮ ಜೊತೆ ಬಂದವರಿಗೆ ಎಲ್ಲಾ ಕೆಲಸ ಕಲಿಯಿರಿ ಎಂದು ಹೇಳುತ್ತೇನೆ. ಇದೇ ರೀತಿ ಎಲ್ಲರೂ ಎಲ್ಲಾ ವಿಭಾಗ ಕಲಿರಿ. ಒಂದು ಸಿನಿಮಾದಿಂದ ಎಷ್ಟೋ ಜನರ ಬದುಕು ಹಸನಾಗಲಿ. ಇವರ ರೀತಿ ನಮ್ಮ ಭಾಗದಲ್ಲಿ ನೂರಾರು ಸಿನಿಮಾಗಳು ಆಗಲಿ. ಇಡೀ ತಂಡಕ್ಕೆ ಒಳ್ಳೆದಾಗಲಿ ಎಂದು ತಿಳಿಸಿದರು.

ನಟ ಪ್ರಮೋದ್ ಶೆಟ್ಟಿ ಮಾತನಾಡಿ, ಸೂಚನ್ ಯಾವುದೇ ಕೆಲಸ ಮಾಡಿದ್ರೂ ಅಚ್ಚುಕಟ್ಟಾಗಿ ಮಾಡಿ ಮುಗಿಸ್ತಾನೆ. ನಟನೆ, ನಿರ್ದೇಶನ ಎರಡು ಒಟ್ಟಿಗೆ ಮಾಡುತ್ತಿರುವುದರಿಂದ ಎಲ್ಲರೂ ಒಟ್ಟಿಗೆ ಸೇರಿ ಮುಂದುವರೆಯಲಿ. ಒಂದೊಳ್ಳೆ ತಂಡವಾಗಿ ಹೊರಹೊಮ್ಮಲಿ. ನನ್ನ ಪ್ರಕಾರ ಈ ಸಿನಿಮಾ ತುಂಬಾ ಚೆನ್ನಾಗಿ ಬರಲಿದೆ ಎಂಬ ಭರವಸೆ ಇದೆ. ಒಳ್ಳೆ ಬಜೆಟ್ ಕೂಡ ಇದೆ. ಸೂಚನ್ ನಮ್ಮ ಸಿನಿಮಾದಲ್ಲಿ ಅದ್ಭುತವಾಗಿ ನಟಿಸಿದ್ದಾನೆ. ಇಡೀ ತಂಡದ ಮೇಲೆ ನಿಮ್ಮ ಬೆಂಬಲ ಇರಲಿದೆ ಎಂದು ಹೇಳಿದರು.

ನಿರ್ಮಾಪಕ ಮೈತ್ರಿ ಮಂಜುನಾಥ್ ಮಾತನಾಡಿ, ನಾವು ಈ ಹಿಂದೆ ಹಫ್ತಾ ಸಿನಿಮಾ ಮಾಡಿದ್ದೇವೆ. ಇದು ನನ್ನ ಎರಡನೇ ಸಿನಿಮಾ. ಗಾಡ್ ಪ್ರಾಮಿಸ್ ಸಿನಿಮಾದ ಸ್ಕ್ರೀಪ್ಟ್ ತುಂಬಾ ಚೆನ್ನಾಗಿದೆ. ಒಳ್ಳೆ ಅನುಭವ ತಂಡದೊಂದಿಗೆ ಕೈ ಜೋಡಿಸಿದೆ ಎಂದರು.

ಗಾಡ್ ಪ್ರಾಮಿಸ್ ಸಿನಿಮಾ ಮೂಲಕ ಸೂಚನ್ ಶೆಟ್ಟಿ ಡೈರೆಕ್ಟರ್ ಕುರ್ಚಿ ಅಲಂಕರಿಸಿದ್ದು, ಅವರ ಹೊಸ ಪಯಣಕ್ಕೆ ಮೈತ್ರಿ ಮಂಜುನಾಥ್ ಬಲ ತುಂಬಿದ್ದಾರೆ. ಚಿತ್ರವನ್ನು ಮೈತ್ರಿ ಪ್ರೊಡಕ್ಷನ್ ನಡಿ ಮಂಜುನಾಥ್ ನಿರ್ಮಾಣ ಮಾಡುತ್ತಿದ್ದಾರೆ. ಈ ಹಿಂದೆ ಕರಾವಳಿಯ ಭೂಗತ ಕಥೆ ಹಫ್ತಾ ಸಿನಿಮಾವನ್ನು ಇದೇ ಸಂಸ್ಥೆ ನಿರ್ಮಾಣ ಮಾಡಿತ್ತು.

ನೈಜ ಘಟನೆಯ ಸ್ಫೂರ್ತಿ ಪಡೆದ ಫ್ಯಾಮಿಲಿ ಹಾಗೂ ಕಾಮಿಡಿ ಕಥಾಹಂದರ ಸಿನಿಮಾಗೆ ಗುರುಪ್ರಸಾದ್ ನರ್ನಾಡ್ ಛಾಯಾಗ್ರಹಣ, ಭರತ್ ಮಧುಸೂದನನ್ ಸಂಗೀತ ನಿರ್ದೇಶನ, ನವೀನ್ ಶೆಟ್ಟಿ ಸಂಕಲನ ಚಿತ್ರಕ್ಕಿದೆ. ಸದ್ಯ ಮುಹೂರ್ತ ಮುಗಿಸಿಕೊಂಡಿರುವ ಚಿತ್ರತಂಡ ಶೀಘ್ರದಲ್ಲೇ ಶೂಟಿಂಗ್ ಅಖಾಡಕ್ಕೆ ಇಳಿಯಲಿದೆ.

Categories
ಸಿನಿ ಸುದ್ದಿ

ಮಕ್ಕಳಿಗೆ ಸಿನಿಮಾ ಗಿಫ್ಟ್ ಕೊಟ್ಟ ಅಪ್ಪ: ರಣಹದ್ದು ಟೀಸರ್ ರಿಲೀಸ್

ಕಳೆದ ನಲವತ್ತು ವರ್ಷಗಳಿಂದ ಪೋಷಕ ಕಲಾವಿದರಾಗಿ ಪ್ರಸನ್ನಕುಮಾರ್(ಜಂಗ್ಲಿ ಪ್ರಸನ್ನ) ಕನ್ನಡ ಚಿತ್ರರಂಗಕ್ಕೆ ಚಿರಪರಿಚಿತ. ನೂರಾರು ಚಿತ್ರಗಳಲ್ಲಿ ನಟಿಸಿ ನಟನಾಗಿ ಜನಪ್ರಿಯರಾಗಿರುವ ಪ್ರಸನ್ನ ಕುಮಾರ್ “ರಣಹದ್ದು” ಚಿತ್ರದ ಮೂಲಕ ನಿರ್ದೇಶಕರಾಗಿದ್ದಾರೆ.ಇವರೆ ಚಿತ್ರದ ನಿರ್ಮಾಪಕರು ಕೂಡ. ಪ್ರಸನ್ನಕುಮಾರ್ ಅವರ ಮಕ್ಕಳಾದ ಶಶಾಂಕ್ ಹಾಗೂ ಸೂರಜ್ ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ‌. ಒಬ್ಬ ಮಗ ನಾಯಕನಾಗಿ, ಮತ್ತೊಬ್ಬ ಮಗ ಖಳನಾಯಕನಾಗಿ ಈ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ್ದಾರೆ.

ಇತ್ತೀಚಿಗೆ ಈ ಚಿತ್ರದ ಹಾಡುಗಳು ಹಾಗು ಟೀಸರ್ ಸಿರಿಮ್ಯೂಸಿಕ್ ಮೂಲಕ ಬಿಡುಗಡೆಯಾಯಿತು. ಡಾ||ರಾಜಕುಮಾರ್ ಪುತ್ರಿ ಲಕ್ಷ್ಮೀ ಗೋವಿಂದರಾಜು ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಎಸ್.ಎ.ಚಿನ್ನೇಗೌಡ, ಎಸ್ ಎ ಗೋವಿಂದರಾಜು, ಎಸ್ ಎ ಶ್ರೀನಿವಾಸ್ ಅವರು ಟೀಸರ್ ಅನಾವರಣಗೊಳಿಸಿದರು. ಖ್ಯಾತ ನಟ ಶರಣ್ ಹಾಡುಗಳನ್ನು ಲೋಕಾರ್ಪಣೆ ಮಾಡಿದರು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್ ಎಂ ಸುರೇಶ್, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್, ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷರಾದ ಎನ್ ಆರ್ ಕೆ ವಿಶ್ವನಾಥ್, ಸಿರಿ ಮ್ಯೂಸಿಕ್ ನ ಸುರೇಶ್ ಚಿಕ್ಕಣ್ಣ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದು, ಪ್ರಸನ್ನ ಕುಮಾರ್(ಜಂಗ್ಲಿ ಪ್ರಸನ್ನ) ಅವರ ಒಡನಾಟವನ್ನು ನೆನಪಿಸಿಕೊಂಡು ಚಿತ್ರಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಮೊದಲು ಮಾತನಾಡಿದ ನಿರ್ಮಾಪಕ, ನಿರ್ದೇಶಕ ಪ್ರಸನ್ನಕುಮಾರ್, ಕಳೆದ ನಲವತ್ತು ವರ್ಷಗಳಿಂದ ಕನ್ನಡ ಚಿತ್ರರಂಗ ನನಗೆ ಅನ್ನ ಹಾಕುತ್ತಿದೆ. ಅದಕ್ಕೆ ನಾನು ಹಾಗೂ ನನ್ನ ಕುಟುಂಬ ಚಿರ ಋಣಿ. ಕೆಲವು ವರ್ಷಗಳ ಹಿಂದೆ ಅಪಘಾತದಲ್ಲಿ ನನ್ನ ಕಾಲಿಗೆ ತೀವ್ರ ಪೆಟ್ಟಾಗಿತ್ತು. ಆ ಸಮಯದಲ್ಲಿ ತುಂಬಾ ಯೋಚನೆ ಮಾಡುತ್ತಿದೆ‌. ಸ್ವಲ್ಪ ದಿನಗಳ ನಂತರ ಚಿತ್ರವೊಂದನ್ನು ನಿರ್ಮಾಣದ ಜೊತೆಗೆ ನಿರ್ದೇಶನ ಕೂಡ ಮಾಡಬೇಕೆಂದು ಆಸೆಯಾಯಿತು. ಆ ಆಸೆಯನ್ನು ಮಕ್ಕಳ ಬಳಿ ಹೇಳಿಕೊಂಡೆ. ನನ್ನ ಆಸೆಗೆ ಮಕ್ಕಳು ಆಸರೆಯಾದರು.

ಈ ಚಿತ್ರದಲ್ಲಿ ನಟಿಸುವ ಮೂಲಕ ನನ್ನ ಇಬ್ಬರು ಮಕ್ಕಳು ಚಿತ್ರರಂಗ ಪ್ರವೇಶಿಸಿದ್ದಾರೆ‌‌. ಅನೇಕ ಜನ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ‌. ಹಣವಿಲ್ಲದ ಮನುಷ್ಯನನ್ನು ಸಮಾಜ ಹೇಗೆ ನೋಡುತ್ತದೆ ಎಂಬುದೆ ಚಿತ್ರದ ಕಥಾ ಸಾರಾಂಶ‌. ಅಷ್ಟೇ ಅಲ್ಲದೆ ನೋಡುಗನಿಗೆ ಬೇಕಾದ ಎಲ್ಲಾ ಅಂಶಗಳು ಈ ಚಿತ್ರದಲ್ಲಿದೆ‌‌‌. ಚಿತ್ರೀಕರಣ ಮುಕ್ತಾಯವಾಗಿ ಬಿಡುಗಡೆ ಹಂತದಲ್ಲಿದೆ‌. ಇಂದಿನ ಸಮಾರಂಭಕ್ಕೆ ನಮ್ಮ ಆಹ್ವಾನವನ್ನು ಮನಿಸಿ ಬಂದಿರುವ ಎಲ್ಲಾ ಗಣ್ಯರಿಗೂ ತುಂಬು ಹೃದಯದ ಧನ್ಯವಾದ ಎಂದರು.

ತಮ್ಮ ಪಾತ್ರದ ಬಗ್ಗೆ ಶಶಾಂಕ್, ಸೂರಜ್ ಮಾಹಿತಿ ನೀಡಿದರು. ಚಿತ್ರದಲ್ಲಿ ನಾಲ್ಕು ಹಾಡುಗಳಿರುವುದಾಗಿ ಸಂಗೀತ ನಿರ್ದೇಶಕ ಸಿಂಗರ್ ಶ್ರೀನಿವಾಸ್ ತಿಳಿಸಿದರು.

Categories
ಸಿನಿ ಸುದ್ದಿ

4 ಎನ್ 6 ಎಂಬ ಸೈಕಲಾಜಿಕಲ್ ಥ್ರಿಲ್ಲರ್: ಈ ವಾರ ರಿಲೀಸ್


  
ಪರ್ಪಲ್ ಪ್ಯಾಚ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಸಾಯಿಪ್ರೀತಿ   ನಿರ್ಮಿಸಿರುವ, ಮರ್ಡರ್‌ ಮಿಸ್ಟ್ರಿ ಜೊತೆಗೆ ಇನ್ ವೆಸ್ಟಿಗೇಷನ್ ಥ್ರಿಲ್ಲರ್ ಕಾನ್ಸೆಪ್ಟ್  ಹೊಂದಿರುವ ಚಿತ್ರ ‘4 ಎನ್ 6’ ಮೇ 10 ರಂದು ಶುಕ್ರವಾರ ರಾಜ್ಯಾದ್ಯಂತ ತೆರೆಗೆ ಬರಲಿದೆ. ಕೊಲೆಯೊಂದರ ತನಿಖೆಯ ಸುತ್ತ ನಡೆಯುವ ಕಥಾಹಂದರ  ಚಿತ್ರದಲ್ಲಿದ್ದು, ಇಂಥ ಪ್ರಕರಣ ಪತ್ತೆಹಚ್ಚುವಲ್ಲಿ ಫೋರೆನ್ಸಿಕ್ ರಿಪೋರ್ಟ್ ತುಂಬಾ ಪ್ರಮುಖವಾಗಿರುತ್ತದೆ. ಇದು ಬರೀ ಮರ್ಡರ್ ಇನ್ವೆಸ್ಟಿಗೇಶನ್ ಸುತ್ತ ನಡೆವ ಕಥೆಯಲ್ಲ, ಸೈಕಲಾಜಿಕಲ್ ಚಿತ್ರವೂ ಹೌದು,

ಲವ್ ಮಾಕ್ಟೇಲ್ ಹಾಗೂ ಲವ್ 360  ಖ್ಯಾತಿಯ ರಚನಾ ಇಂದರ್ ಅವರು  ಇದೇ ಮೊದಲ ಬಾರಿಗೆ ಫಾರೆನ್ಸಿಕ್ ಡಿಟೆಕ್ಟಿವ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ದರ್ಶನ್ ಶ್ರೀನಿವಾಸ್ ಈ ಚಿತ್ರಕ್ಕೆ  ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ.

ರಚನಾ ಇಂದರ್,  ಭವಾನಿ ಪ್ರಕಾಶ್, ನವೀನ್ ಕುಮಾರ್ ಹಾಗೂ  ಆದ್ಯಶೇಖರ್ ಈ  ೪ ಪ್ರಮುಖ ಪಾತ್ರಗಳ ಸುತ್ತ ಚಿತ್ರಕಥೆ ನಡೆಯುತ್ತದೆ.

ಬೆಂಗಳೂರು ಸುತ್ತಮುತ್ತ 30 ದಿನಗಳ‌ ಕಾಲ ಈ ಚಿತ್ರದ  ಚಿತ್ರೀಕರಣ ನಡೆಸಲಾಗಿದ್ದು, ಸೆನ್ಸಾರ್ ನಿಂದ ಯು/ಎ ಸರ್ಟಿಫಿಕೇಟ್ ಸಿಕ್ಕಿದೆ.
ಇನ್ನು‌ ಈ ಚಿತ್ರಕ್ಕೆ ನಿರ್ದೇಶಕರೇ ಎಡಿಟರ್ ಆಗಿದ್ದು ಮುತ್ತುರಾಜ್ ಸಾಥ್ ನೀಡಿದ್ದಾರೆ. ಚರಣ್ ತೇಜ್ ಅವರ ಛಾಯಾಗ್ರಹಣ, ಸತ್ಯಕಹಿ ಅವರ ಸಂಭಾಷಣೆ ಹಾಗೂ ಸಾಯಿ ಸೋಮೇಶ್ ಅವರ ಸಂಗೀತ ನಿರ್ದೇಶನವಿದೆ.

ಅರ್ಜುನ್, ಆಶಿತಾ ಅಲ್ವಾ, ಮುಕ್ತಿ ಅಲ್ವಾ, ಆರ್ ನಿಕ್ಸಾನ್, ಪ್ರಶಾಂತ್, ಸಂಜಯ್ ನಾಯಕ್, ಸೌರವ್, ಸತ್ಯ ಕಹಿ, ಬೇಬಿ ವಂಶಿಕಾ, ಬೇಬಿ ರೇಯನ್ಸ್  ಇತರೆ ಪಾತ್ರಗಳಲ್ಲಿ‌ ಅಭಿನಯಿಸಿದ್ದಾರೆ.

Categories
ಸಿನಿ ಸುದ್ದಿ

ಸತ್ಯಂ ರಿಲೀಸ್ ಗೆ ರೆಡಿ

ಅಶೋಕ್ ಕಡಬ ಅವರ ನಿರ್ದೇಶನದ, ಮಹಾಂತೇಶ್ ವಿ.ಕೆ. ಅವರ ನಿರ್ಮಾಣದ ಸತ್ಯಂ’ ಚಿತ್ರವೀಗ ಬಿಡುಗಡೆಗೆ ಸಿದ್ದವಾಗಿದೆ. ಇತ್ತೀಚೆಗಷ್ಟೇ ಈ ಚಿತ್ರವನ್ನು ವೀಕ್ಷಿಸಿದ ಸೆನ್ಸಾರ್ ಮಂಡಳಿ ಚಿತ್ರದ ಕಾನ್ಸೆಪ್ಟ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಚಿತ್ರಕ್ಕೆ ಯು/ಎ ಸರ್ಟಿಫಿಕೇಟ್ ನೀಡಿದೆ.


ಕೆಂಪ, ಗಣಪ ಖ್ಯಾತಿಯ ನಟ ಸಂತೋಷ್ ಬಾಲರಾಜ್ ನಾಯಕನಾಗಿ ನಟಿಸಿರುವ ಈ ಚಿತ್ರದಲ್ಲಿ ಕನ್ನಡತಿ ಖ್ಯಾತಿಯ ರಂಜನಿ ರಾಘವನ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಸತ್ಯಂ ಮಾಸ್ ಚಿತ್ರವಾದರೂ ತುಳುನಾಡಿನ ದೈವಾರಾಧನೆಯ ಬಗ್ಗೆ ಒಂದು ಎಳೆ ಈ ಚಿತ್ರದಲ್ಲಿರುವುದು ಕುತೂಹಲ ಮೂಡಿಸಿದೆ. ಕಾಂತಾರ ಚಿತ್ರಕ್ಕೂ ಮುನ್ನವೇ ಸತ್ಯಂ ಕಥೆಯನ್ನು ರೆಡಿ ಮಾಡಿಕೊಂಡಿದ್ದಾಗಿ ನಿರ್ದೇಶಕರೇ ಹೇಳಿದ್ದಾರೆ.

ಸೆನ್ಸಾರ್ ಅಧಿಕಾರಿಗಳು ಹಲವಾರು ಚಿತ್ರಗಳನ್ನು ವೀಕ್ಷಿಸುತ್ತಾರೆ. ಅದರ ನಡುವೆ ಹೊಸತನದಿಂದ ಕೂಡಿದ ಚಿತ್ರ ನೋಡಿದಾಗ ಅವರ ಪ್ರತಿಕ್ರಿಯೆ ಬೇರೆಥರ ಇರುತ್ತದೆ. ಅಂದಹಾಗೆ, ಯಾವುದೇ ಕಟ್, ಮ್ಯೂಟ್ ಇಲ್ಲದೆ ಈ ಚಿತ್ರ ಸೆನ್ಸಾರ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದೆ.

ಶ್ರೀ ಮಾತಾ ಕ್ರಿಯೇಷನ್ಸ್ ಬ್ಯಾನರಿನಡಿಯಲ್ಲಿ ಮಹಾಂತೇಶ್ ವಿ.ಕೆ. ಅವರ ನಿರ್ಮಾಣದ ಸತ್ಯಂ ಚಿತ್ರವೀಗ ಬಿಡುಗಡೆಯ ಹಂತ ತಲುಪಿದೆ, ಎಲ್ಲ ವರ್ಗದ ಪ್ರೇಕ್ಷಕರನ್ನೂ ಆವರಿಸಿಕೊಳ್ಳುವಂಥ ಕಥೆ ಸತ್ಯಂ ಚಿತ್ರಕ್ಕಿದೆ. ಕೆಜಿಎಫ್. ಖ್ಯಾತಿಯ ರವಿ ಬಸ್ರೂರು ಈ ಚಿತ್ರದ ಸಂಗೀತ ನಿರ್ದೇಶನ ಮಾಡಿದರೆ. ಸಿನೆಟೆಕ್ ಸೂರಿ ಛಾಯಾಗ್ರಹಣ ನಿರ್ವಹಿಸಿದ್ದಾರೆ.

ತೆಲುಗು ನಟ ಸುಮನ್, ಸೈಯಾಜಿ ಶಿಂಧೆ, ಪವಿತ್ರಾ ಲೋಕೇಶ್, ಅವಿನಾಶ್, ವಿನಯಾ ಪ್ರಸಾದ್, ಮುಖ್ಯಮಂತ್ರಿ ಚಂದ್ರು, ಎಂ.ಎನ್. ಲಕ್ಷ್ಮಿದೇವಿ, ಶೃಂಗೇರಿ ರಾಮಣ್ಣ, ತನುಶ್ರೀ, ಎಂ.ಎಸ್. ಉಮೇಶ್, ಬಸವರಾಜ್ ಕಟ್ಟಿ, ಮೀನಾಕ್ಷಿ ಮುಂತಾದವರ ತಾರಾಗಣ ಸತ್ಯಂ ಚಿತ್ರಕ್ಕಿದೆ. ಐಪಿಎಲ್ ನಂತರ ಚಿತ್ರವನ್ನು ಪ್ರೇಕ್ಷಕರ ಮುಂದೆ ತರಲು ಚಿತ್ರತಂಡ ಸಿದ್ದತೆ ನಡೆಸಿದೆ. ಶೀಘ್ರದಲ್ಲೇ ಚಿತ್ರದ ಟ್ರೈಲರ್ ಕೂಡ ಬಿಡುಗಡೆಯಾಗಲಿದೆ,

Categories
ಸಿನಿ ಸುದ್ದಿ

ರಾಗಿಣಿ ಹೊಸ ಸಿನಿಮಾಗೆ ಗಿರಿರಾಜ ನಿರ್ದೇಶನ

“ಚಿತ್ರಸಂತೆ” ಮಾಸಪತ್ರಿಕೆಯ ಸಂಪಾದಕ ಗಿರೀಶ್ ವಿ ಗೌಡ ಸಾರಥ್ಯದಲ್ಲಿ, ರಾಮಕೃಷ್ಣ ನಿಗಾಡಿ ಅವರ ನಿರ್ಮಾಣದಲ್ಲಿ ಹಾಗೂ “ಜಟ್ಟ”, ” ಮೈತ್ರಿ” ಚಿತ್ರಗಳ ಖ್ಯಾತಿಯ ಬಿ.ಎಂ.ಗಿರಿರಾಜ್ ನಿರ್ದೇಶನದಲ್ಲಿ ನೂತನ ಚಿತ್ರವೊಂದು ಸದ್ಯದಲ್ಲೇ ಆರಂಭವಾಗಲಿದೆ. ರಾಗಿಣಿ ದ್ವಿವೇದಿ ಈ ಚಿತ್ರದ ನಾಯಕಿಯಾಗಿ ನಟಿಸಲಿದ್ದಾರೆ. ಇತ್ತೀಚಿಗೆ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಯಿತು. ಇದೇ ಸಂದರ್ಭದಲ್ಲಿ ಮೇ 24 ರಂದು ರಾಗಿಣಿ ದ್ವಿವೇದಿ ಅವರ ಹುಟ್ಟುಹಬ್ಬ ಇರುವುದರಿಂದ “ಚಿತ್ರಸಂತೆ” ಮಾಸಪತ್ರಿಕೆ ಹೊರತಂದಿರುವ ವಿಶೇಷ ಕವರ್ ಪೇಜ್ ಸಹ ಬಿಡುಗಡೆಯಾಯಿತು.

ರಾಷ್ಟ್ರಪ್ರಶಸ್ತಿ ವಿಜೇತ “ಹರಿವು” ಚಿತ್ರದಿಂದ ನನ್ನ ಸಿನಿ ಜರ್ನಿ ಆರಂಭವಾಯಿತು ಎಂದು ಮಾತನಾಡಿದ ಗಿರೀಶ್ ವಿ ಗೌಡ, ಹತ್ತು ವರ್ಷಗಳಿಂದ ರಾಗಿಣಿ ಅವರ ಜೊತೆಗೆ ಚಿತ್ರ ನಿರ್ಮಾಣ ಮಾಡಬೇಕೆಂದು ಪ್ರಯತ್ನಿಸುತ್ತಿದೆ. ಈಗ ಕಾಲ ಕೂಡಿ ಬಂದಿದೆ. ನಿರ್ದೇಶಕ ಬಿ.ಎಂ.ಗಿರಿರಾಜ್ ಒಳ್ಳೆ ಕಥೆ ಮಾಡಿಕೊಂಡಿದ್ದಾರೆ. ಹಿಂದೆ “ಹೊಂಬಣ್ಣ” ಚಿತ್ರ ನಿರ್ಮಿಸಿದ್ದ ರಾಮಕೃಷ್ಣ ನಿಗಾಡಿ ಅವರು ಸಂಚಲನ ಮೂವೀಸ್ ಮೂಲಕ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಇಂದು ಫಸ್ಟ್ ಲುಕ್ ಬಿಡುಗಡೆಯಾಗಿದೆ‌. ಇದೇ ಸಂದರ್ಭದಲ್ಲಿ ಜಿ.ಜಿ.ಸ್ಟುಡಿಯೋಸ್ ಎಂಬ ಸಂಸ್ಥೆ ಕೂಡ ಆರಂಭಿಸಿದ್ದೇವೆ‌. ಇತ್ತೀಚೆಗೆ ಅನೇಕ ಚಿತ್ರ ನಿರ್ಮಾಣವಾಗುತ್ತಿದೆ.

ಆದರೆ ಬಿಡುಗಡೆ ಸಮಯದಲ್ಲಿ ಪ್ರಮೋಶನ್ ಹೇಗೆ ಮಾಡಬೇಕೆಂಬುದು ತಿಳಿಯದೆ ಕೆಲವು ಸಿನಿಮಾಗಳು ಸೋತಿದೆ.‌ ನಮ್ಮ‌ ಸಂಸ್ಥೆ ಮುಂಬೈನ ಸಂಸ್ಥೆಯೊಂದರ ಜೊತೆ ಸೇರಿ ಆಸಕ್ತಿಯುಳ್ಳ ಸಿನಿಮಾ ನಿರ್ಮಾಪಕರಿಗೆ ಸಿನಿಮಾ ಪ್ರಮೋಷನ್ ಕುರಿತು ತಿಳಿಸುವ ಕೆಲಸ ಮಾಡಲಾಗುವುದು. ಇನ್ನು, ಮೇ 24 ನಟಿ ರಾಗಿಣಿ ದ್ವಿವೇದಿ ಅವರ ಹುಟ್ಟುಹಬ್ಬ. ಹಾಗಾಗಿ ನಮ್ಮ “ಚಿತ್ರಸಂತೆ” ಪತ್ರಿಕೆಯಿಂದ ವಿಶೇಷ ಕವರ್ ಪೇಜ್ ಬಿಡುಗಡೆ ಮಾಡಿದ್ದೇವೆ. ಕಿರಣ್, ಪೂಜಾ ಮುಂತಾದ ತಂತ್ರಜ್ಞರು ಇದಕ್ಕಾಗಿ ಶ್ರಮವಹಿಸಿದ್ದಾರೆ‌ ಎಂದರು.

“ಕೌಂಡಿನ್ಯ” ಅವರು ನನ್ನ ನೆಚ್ಚಿನ ಲೇಖಕರು. ಅವರ ಕಥೆಗಳಿಂದ ಪ್ರೇರಿತನಾಗಿ ಈ ಚಿತ್ರದ ಕಥೆ ಸಿದ್ದ ಮಾಡಿದ್ದೇನೆ. ರಾಗಿಣಿ ಅವರ ಜೊತೆ ಇದು ನನ್ನ ಮೊದಲ ಸಿನಿಮಾ ಎಂದರು ನಿರ್ದೇಶಕ ಬಿ.ಎಂ.ಗಿರಿರಾಜ್.

ಫಸ್ಟ್ ಲುಕ್ ಸಖತಾಗಿದೆ‌. ಅದಕ್ಕಿಂತ ಚಿತ್ರದ ಶೀರ್ಷಿಕೆ ಹಾಗೂ ಕಥೆ ಇನ್ನೂ ಚೆನ್ನಾಗಿದೆ. ಸದ್ಯದಲ್ಲೇ ಶೀರ್ಷಿಕೆ ಅನಾವರಣವಾಗಲಿದೆ. “ಚಿತ್ರಸಂತೆ” ಪತ್ರಿಕೆ ನನ್ನ ಹುಟ್ಟುಹಬ್ಬಕ್ಕೆ ಹೊರತಂದಿರುವ ಮುಖ ಪುಟ ಸಹ ಮುದ್ದಾಗಿದೆ. ಗಿರೀಶ್ ವಿ ಗೌಡ ಅವರಿಗೆ ಧನ್ಯವಾದಗಳು ಎಂದರು ನಾಯಕಿ ರಾಗಿಣಿ ದ್ವಿವೇದಿ.

ಅರುಣ್ ಗುರೂಜಿ, ಭಾಸ್ಕರ್ ಗುರೂಜಿ , ಮೋಕ್ಷಗುಂಡಂ ಗುರೂಜಿ ಹಾಗೂ ಪಿ.ಆರ್.ಓ ಸುಧೀಂದ್ರ ವೆಂಕಟೇಶ್ ಅವರು ನೂತನ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿ ಶುಭ ಕೋರಿದರು.

Categories
ಸಿನಿ ಸುದ್ದಿ

ದ ಸೂಟ್ ಟ್ರೇಲರ್ ನೋಡಿ ಶುಭ ಕೋರಿದ ಧ್ರುವ ಸರ್ಜಾ ; ಮೇ 17ಕ್ಕೆ ಚಿತ್ರ ರಿಲೀಸ್

ನಾವು ಧರಿಸುವ ಉಡುಗೆಗಳಲ್ಲಿ “ಸೂಟ್” ಗೆ ಅದರದೆ ಆದ ವಿಶೇಷತೆ ಇದೆ. ಈ “ಸೂಟ್” ನ ಕುರಿತಂತೆ “ದ ಸೂಟ್” ಚಿತ್ರ ಬರುತ್ತಿದ್ದು, ಇತ್ತೇಚೆಗೆ ಟ್ರೇಲರ್ ಬಿಡುಗಡೆಯಾಗಿದೆ. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ “ದ ಸೂಟ್” ಚಿತ್ರಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಮೇ 17 ಚಿತ್ರ ಬಿಡುಗಡೆಯಾಗುತ್ತಿದೆ.‌ ಮಾಲತಿ ಗೌಡ ಹಾಗೂ ರಾಮಸ್ವಾಮಿ ಅವರು ನಿರ್ಮಿಸಿರುವ, ಎಸ್ ಭಗತ್ ರಾಜ್ ನಿರ್ದೇಶಿಸಿರುವ ಹಾಗೂ ಬಾಲಿವುಡ್ ನಿಂದ ಬಂದಿರುವ ಕಮಲ್ ಪ್ರಮುಖಪಾತ್ರದಲ್ಲಿ ನಟಿಸಿರುವ “ದ ಸೂಟ್” ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭಕ್ಕೆ ಶಾಸಕ ಗೋಪಾಲಯ್ಯ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್ ಎಂ ಸುರೇಶ್, ಪ್ರಶಾಂತ್ ಚಕ್ರವರ್ತಿ ಮುಂತಾದ ಗಣ್ಯರು “ದ ಸೂಟ್” ಆಗಮಿಸಿ ಶುಭ ಕೋರಿದರು. ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಈ ಚಿತ್ರದ ಟ್ರೇಲರ್ ನೋಡಿ ಖುಷಿಪಟ್ಟಿದ್ದಾರೆ‌. ಚಿತ್ರ ಯಶಸ್ವಿಯಾಗಲಿ ಎಂದು ವಿಡಿಯೋ ಮೂಲಕ ಶುಭ ಹಾರೈಸಿದ್ದಾರೆ.

ನಿರ್ಮಾಪಕಿ ಮಾಲತಿ ಗೌಡ ಸಮಾರಂಭಕ್ಕೆ ಆಗಮಿಸಿದ ಗಣ್ಯರನ್ನು ಸ್ವಾಗತಿಸಿ, ನಮ್ಮ ಚಿತ್ರಕ್ಕೆ ಎಲ್ಲರೂ ಪ್ರೋತ್ಸಾಹ ನೀಡಿ ಎಂದರು. ಮಾಲತಿ ಗೌಡ ಅವರ ಪತಿ ರಾಮಸ್ವಾಮಿ ಈ ಚಿತ್ರದ ನಿರ್ಮಾಪಕರು.

ನಿರ್ದೇಶಕ ಎಸ್. ಭಗತ್ ರಾಜ್ ಮಾತನಾಡಿ, ನಾನು ಖ್ಯಾತ ನಟ, ನಿರ್ದೇಶಕ ಕಾಶಿನಾಥ್ ಅವರ ಬಳಿ ನಿರ್ದೇಶನ ಕಲಿತಿದ್ದೀನಿ. ಅವರು ನನ್ನ ಗುರುಗಳು .” ದ ಸೂಟ್” ನನ್ನ ಮೊದಲ ನಿರ್ದೇಶನದ ಚಿತ್ರ. “ಸೂಟ್”, ಬದುಕು ಹಾಗೂ ಭಾವನೆಗಳ ಸಂಗಮ. ನಮ್ಮ ಚಿತ್ರಕ್ಕೆ ಸೂಟೇ ಕಥಾನಾಯಕ. ಕಥೆ ಕೇಳಿದ ಕೆಲವರು ಈ ವಿಷಯ ಕೇಳಿ ಆಶ್ಚರ್ಯಪಟ್ಟಿದ್ದು ಉಂಟು. ಆದರೆ ನಮ್ಮ ಚಿತ್ರದಲ್ಲಿ ” ಸೂಟ್” ನ ಪಾತ್ರವೇನು? ಎಂಬುದು ಮೇ 17 ರಂದು ತಿಳಿಯಲಿದೆ. “ಸೂಟ್” ಅನ್ನು ಬರೀ ಬಟ್ಟೆಯಂತೆ ತೋರಿಸಿಲ್ಲ. ಮನುಷ್ಯನ ಹೊರಗಿನ ಮನಸ್ಸನ್ನು “ಸೂಟ್” ನ ಮೂಲಕ ತೋರಿಸುವ ಪ್ರಯತ್ನ ಮಾಡಿದ್ದೇನೆ. ಚಿತ್ರಕ್ಕೆ ಅತಿಥಿದೇವೋಭವ ಎಂಬ ಅಡಿಬರಹವಿದೆ.

“ಸೂಟ್” ಚಿತ್ರದ ಪ್ರಚಾರವನ್ನು ವಿನೂತನವಾಗಿ ಮಾಡಿದ್ದೇವೆ‌. “ಸೂಟ್” ನ ಬಗ್ಗೆ ಅನೇಕ ಗಣ್ಯರು ತಮ್ನಗನಿಸಿದನ್ನು ಕವನಗಳ ಮೂಲಕ ಬರೆದಿದ್ದಾರೆ. ಅದನ್ನು ಸಂಕಲನವಾಗಿ ಹೊರ ತಂದಿದ್ದೇವೆ. ನಮ್ಮ ಚಿತ್ರದಲ್ಲಿ ಮೂರು ಕಿರಣಗಳಿದೆ. ಸಂಗೀತ ನಿರ್ದೇಶಕ ಕಿರಣ್ ಶಂಕರ್, ಛಾಯಾಗ್ರಾಹಕ ಕಿರಣ್ ಹಂಪಾಪುರ ಹಾಗೂ ರೇಖಾಚಿತ್ರಗಳ ಮೂಲಕ ನಮ್ಮ ಚಿತ್ರಕ್ಕೆ ಜೀವ ತುಂಬಿರುವ ಕಿರಣ್ ಅವರು. ಈ ಚಿತ್ರದಲ್ಲಿ ಕಮಲ್, ಉಮೇಶ್ ಬಣಕಾರ್, ವಿ.ನಾಗೇಂದ್ರ ಪ್ರಸಾದ್, ಜೋಸೆಫ್, ಸುಜಯ್, ಭೀಷ್ಮ ರಾಮಯ್ಯ, ಗಡ್ಡ ವಿಜಿ. ಪ್ರಣಯ ಮೂರ್ತಿ ಸೇರಿದಂತೆ ಐವತ್ತಕ್ಕೂ ಅಧಿಕ ಕಲಾವಿದರು ನಟಿಸಿದ್ದಾರೆ ಎಂದರು.

ದುಬೈನಿಂದ ಬಂದು ಬಾಲಿವುಡ್ ನ ಖ್ಯಾತ ನಟ ಸಲ್ಮಾನ್ ಖಾನ್ ಅವರಿಗೆ ಮ್ಯಾನೇಜರ್ ಆಗಿದ್ದ ನಟ ಕಮಲ್ ಅವರು “ದ ಸೂಟ್” ಚಿತ್ರದ ತಮ್ಮ ಜರ್ನಿಯ ಬಗ್ಗೆ ವಿವರಣೆ ನೀಡಿದರು. ಪ್ರೊಡಕ್ಷನ್ ಎಕ್ಸಿಕ್ಯುಟಿವ್ ರವಿಶಂಕರ್, ಕಲಾವಿದರಾದ ಮಂಜು ಪಾಟೀಲ್. ಸುಜಯ್, ಭೀಷ್ಮ ರಾಮಯ್ಯ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

Categories
ಸಿನಿ ಸುದ್ದಿ

ರಾಮನ ಅವತಾರ ಸಿನಿಮಾ ರೇಟ್ ಕೇವಲ 99 ರೂ! ಖುಷಿಯಿಂದ ಹೇಳಿದ್ರು ರಿಷಿ

‘ಕವಲುದಾರಿ’ಯಂತಹ ಗಂಭೀರ ಸಿನಿಮಾಗೂ ಸೈ..’ನೋಡಿ ಸ್ವಾಮಿ ಇವನು ಇರೋದು ಹೀಗೆ’, ‘ಆಪರೇಷನ್ ಅಲಮೇಲಮ್ಮ’ ದಂತಹ ಕಾಮಿಡಿ ಚಿತ್ರಗಳಲ್ಲಿಯೂ ನಟಿಸಿ ಗಮನ ಸೆಳೆದಿರುವ ರಿಷಿ ಇದೀಗ ‘ರಾಮನ ಅವತಾರ’ ಮೂಲಕ ಪ್ರೇಕ್ಷಕರ ಎದುರು ಬರ್ತಿದ್ದಾರೆ. ಈಗಾಗ್ಲೇ ಈ ಚಿತ್ರದ ಪ್ರಚಾರ ಕಾರ್ಯ ಕೂಡ ಭರದಿಂದ ಸಾಗ್ತಿದೆ. ವಿಭಿನ್ನ ಪ್ರಮೋಷನ್ ವಿಡಿಯೋ ಮೂಲಕ ರಾಮನ ಅವತಾರ ಬಳಗವೀಗ ಪ್ರೇಕ್ಷಕರನ್ನು ಸೆಳೆಯುತ್ತಿದೆ. ಈಗ ಚಿತ್ರತಂಡದ ಕಡೆಯಿಂದ ಮೆಗಾ ಆಫರ್ ವೊಂದು ಸಿಕ್ಕಿದೆ. ರಾಮನ ಅವತಾರ ಸಿನಿಮಾದ ಟಿಕೆಟ್ ಬೆಲೆಯನ್ನು ಕಡಿಮೆ ಮಾಡಲಾಗಿದೆ. ಸಿಂಗಲ್ ಸ್ಕ್ರೀನ್ ಜೊತೆಗೆ ಮಲ್ಟಿಫ್ಲೆಕ್ಸ್ ಗಳಲ್ಲಿ ಟಿಕೆಟ್ ದರ ತಗ್ಗಿಸಲಾಗಿದ್ದು, ಕೇವಲ 99 ರೂಪಾಯಿ ರಾಮನ ಅವತಾರ ಸಿನಿಮಾವನ್ನು ನೀವು ಕಣ್ತುಂಬಿಕೊಳ್ಳಬಹುದು.

ಮೇ 9ಕ್ಕೆ ಪ್ರೀಮಿಯರ್..ಮೇ 10ಕ್ಕೆ ಚಿತ್ರ ರಿಲೀಸ್
ರಾಮನ ಅವತಾರ ಸಿನಿಮಾ ಮೇ 10ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಮೇ 10ಕ್ಕೂ ಮುನ್ನ ಒಂದು ದಿನ ಮೊದಲು ಅಂದ್ರೆ ಮೇ 9ರಂದು ಪೇಯ್ಡ್ ಪ್ರೀಮಿಯರ್ ಶೋ ಏರ್ಪಡಿಸಲಾಗಿದೆ. ಪೇಯ್ಡ್ ಪ್ರೀಮಿಯರ್ ಶೋ ಟಿಕೆಟ್ ದರ ಕೂಡ 99ರೂಪಾಯಿಗೆ ನಿಗದಿ ಮಾಡಲಾಗಿದೆ. ಕೇವಲ ಈ ಒಂದು ದಿನ ಮಾತ್ರವಲ್ಲ. ಚಿತ್ರ ಬಿಡುಗಡೆ ದಿನ ಅಂದ್ರೆ ಮೇ 10ಕ್ಕೂ ಕೂಡ ಟಿಕೆಟ್ ಬೆಲೆ 99ರೂಪಾಯಿ ಇರಲಿದೆ. ಮೇ 9 ಹಾಗೂ ಮೇ 10ರಂದು ರಾಮನ ಅವತಾರ ಸಿನಿಮಾದ ಟಿಕೆಟ್ ಬೆಲೆ 99ರೂಪಾಯಿಗೆ ದೊರೆಯಲಿದೆ.

ರಾಮನ ಅವತಾರ ಸಿನಿಮಾದಲ್ಲಿ ರಿಷಿಗೆ ಜೋಡಿಯಾಗಿ ಪ್ರಣೀತಾ ಸುಭಾಷ್ ಹಾಗೂ ಶುಭ್ರ ಅಯ್ಯಪ್ಪ ಸಾಥ್ ಕೊಟ್ಟಿದ್ದಾರೆ. ಅರುಣ್ ಸಾಗರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವಿಕಾಸ್ ಪಂಪಾಪತಿ ಸಾರಥ್ಯದಲ್ಲಿ ಚಿತ್ರ ಮೂಡಿ ಬಂದಿದ್ದು, ನಿರ್ದೇಶಕರಾಗಿ ಇವರಿಗೆ ಇದು ಮೊದಲ ಸಾಹಸ. ರಾಮನ ಅವತಾರ ಸಿನಿಮಾದ ಮೂಲಕ ವಿಕಾಸ್, ಮಾರ್ಡನ್ ರಾಮನ ಕಥೆಯನ್ನು ಹೇಳೋದಿಕ್ಕೆ ಹೊರಟಿದ್ದಾರೆ. ಟ್ರೇಲರ್ ನೋಡ್ತಿದ್ರೆ ರಾಮಾಯಣ ನೆನಪಿಸುವ ಒಂದಷ್ಟು ದೃಶ್ಯಗಳು ಕಾಣುತ್ತವೆ. ರಾಮ ಹೆಗೆ ಜೆಂಟಲ್ ಮ್ಯಾನ್ ಆಗ್ತಾನೆ? ರಾವಣನ ರೀತಿ ಸಮಸ್ಯೆಗಳನ್ನು ಹೇಗೆ ಎದುರಿಸ್ತಾನೆ ಅನ್ನೋದನ್ನು ಕಟ್ಟಿಕೊಡಲಾಗದೆ.

ಸ್ಟಾರ್ ಫ್ಯಾಬ್ ಪ್ರೊಡಕ್ಷನ್ನಡಿ ‘ಆಪರೇಷನ್ ಅಲಮೇಲಮ್ಮ’ ಸಿನಿಮಾ ನಿರ್ಮಾಣ ಮಾಡಿದ್ದ ಅಮರೇಜ್ ಸೂರ್ಯವಂಶಿ ಚಿತ್ರ ನಿರ್ಮಾಣ ಮಾಡಿದ್ದಾರೆ. ರೋಮ್ಯಾಂಟಿಕ್ ಕಾಮಿಡಿ ಜಾನರ್ ಈ ಸಿನಿಮಾಗೆ ವಿಷ್ಣುಪ್ರಸಾದ್ ಹಾಗೂ ಸಮೀರ್ ದೇಶ್ ಪಾಂಡೇ ಕ್ಯಾಮೆರಾ ಕೈಚಳಕವಿದ್ದು, ಜೂಡಾ ಸ್ಯಾಂಡಿ ಟ್ಯೂನ್ ಹಾಕಿದ್ದು, ಅಮರನಾಥ್ ಸಂಲಕನವಿದೆ. ಉಡುಪಿ, ಬೆಂಗಳೂರು ಸುತ್ತುಮುತ್ತ ಶೂಟಿಂಗ್ ನಡೆಸಲಾಗಿದೆ.

Categories
ಸಿನಿ ಸುದ್ದಿ

ಕ್ರೌನ್ ಆಫ್ ಬ್ಲಡ್ ಬಾಹುಬಲಿ: ಇದು ಹೊಸ ಅಧ್ಯಾಯ

ಎಸ್.ಎಸ್.ರಾಜಮೌಳಿ ನಿರ್ದೇಶನದಲ್ಲಿ ’ಬಾಹುಬಲಿ’ ಪಾರ್ಟ್-1,2 ಚಿತ್ರವು ಬಿಡುಗಡೆಗೊಂಡು ವಿಶ್ವದಾದ್ಯಂತ ಸದ್ದು ಮಾಡಿ ಗಲ್ಲಾಪೆಟ್ಟಿಗೆಯನ್ನು ದೋಚಿತ್ತು. ಇದರಲ್ಲಿ ಕೆಲಸ ಮಾಡಿದ ಕಲಾವಿದರು ಹಾಗೂ ತಂತ್ರಜ್ಘರುಗಳಿಗೆ ಹೆಚ್ಚಿನ ಅವಕಾಶಗಳು ಲಭಿಸಿದವು.

ಕಥೆಯಲ್ಲಿ ಬಾಹುಬಲಿಯಾಗಿ ಪ್ರಭಾಸ್ ಮತ್ತು ಭಲ್ಲಾಳ ದೇವನಾಗಿ ರಾಣಾದಗ್ಗುಭಾಟಿ ಅಭಿನಯಿಸಿದ್ದರು. ಇಬ್ಬರ ಜೀವನದ ಅನೇಕ ತಿಳಿಯದ ತಿರುವುಗಳು, ಮಾಹಿತಿಗಳನ್ನು ಚಿತ್ರದಲ್ಲಿ ತೋರಿಸಲಿಕ್ಕೆ ಸಾಧ್ಯವಾಗಿರಲಿಲ್ಲ.

ಅದಕ್ಕಾಗಿ ಈಗ ಎಲ್ಲವನ್ನು ಹೊಸ ಅಧ್ಯಾಯದೊಂದಿಗೆ ಅನಿಮೇಟೆಡ್ ಫಾರ್ಮೆಟ್‌ದಲ್ಲಿ ಹೇಳಲು ಯೋಜನೆ ಸಿದ್ದಗೊಂಡಿದೆ.

ಎ ಗ್ರಾಫಿಕ್ ಇಂಡಿಯಾ ಮತ್ತು ಆರ್ಕ ಮೀಡಿಯಾ ವರ್ಕ್ಸ್ ಪ್ರೊಡಕ್ಷನ್ ಅಡಿಯಲ್ಲಿ ಎಸ್.ಎಸ್.ರಾಜಮೌಳಿ-ಶರದ್‌ದೇವರಾಜನ್ ಕ್ರಿಯೆಟೀವ್ ಮುಖ್ಯಸ್ಥರಾಗಿರುತ್ತಾರೆ. ಜೀವನ್.ಜೆ.ಕಾಂಗ್-ನವೀನ್ ಜಾನ್ ಜಂಟಿಯಾಗಿ ನಿರ್ದೇಶನ ಮಾಡಿದ್ದಾರೆ. ಇವರೆಲ್ಲರೂ ನಿರ್ಮಾಣದಲ್ಲಿ ಪಾಲುದಾರರಾಗಿರುತ್ತಾರೆ.

ಅನಿಮೇಟೆಡ್‌ದಲ್ಲಿ ಸಾಹಸ, ರಾಜಕೀಯ ಅಚ್ಚರಿಗಳು, ನಾಟಕ, ಮೋಸ, ಯುದ್ದ, ಹೀರೋಗಿರಿ, ವಿಶ್ವಾಸ, ಧೈರ್ಯ ಎಲ್ಲ ಅಂಶಗಳು ಸೇರಿಕೊಂಡಿದೆ. ಕೇವಲ ಮಕ್ಕಳು ಮಾತ್ರವಲ್ಲದೆ ಇನ್ನು ವಿಶಾಲವಾದ ಪ್ರೇಕ್ಷಕ ವರ್ಗಕ್ಕೆ ಭಾರತೀಯ ಅನಿಮೇಶನ್ ಅನ್ನು ಮರು ರೂಪಿಸಿರುವುದು ವಿಶೇಷ.

ಇಂತಹ ಪವರ್ ಪ್ಯಾಕ್ಡ್ ಆಕ್ಷನ್ ಸೀರೀಸ್ ಕನ್ನಡ ಸೇರಿದಂತೆ, ಎಲ್ಲಾ ಭಾಷೆಗಳಲ್ಲಿ ಮೇ 17, 2024ರಿಂದ ಡಿಸ್ನಿ+ಹಾಟ್‌ಸ್ಟಾರ್‌ದಲ್ಲಿ ಸ್ಟ್ರೀಮ್ ಆಗಲು ಸಜ್ಜಾಗಿದೆ.

Categories
ಸಿನಿ ಸುದ್ದಿ

ಸುಧೀರ್ ಅತ್ತಾವರ್ ಸಿನಿಮಾಗೆ ಕೊರಗಜ್ಜ ದೈವದ ಆಶೀರ್ವಾದ: ಕೊರಗಜ್ಜ ಫಸ್ಟ್ ಲುಕ್ ವೀಕ್ಷಿಸಿದ ದೈವ

ತ್ರಿವಿಕ್ರಮ ಸಪಲ್ಯ ನಿರ್ಮಾಣದ , ಸಕ್ಸಸ್ ಫಿಲಂಸ್ ಮತ್ತು ತ್ರಿವಿಕ್ರಮ ಸಿನಿಮಾಸ್ ಬ್ಯಾನರ್ ನಡಿ, ಸುಧೀರ್ ಅತ್ತಾವರ್ ನಿರ್ದೇಶನದ ಅತೀ ನಿರೀಕ್ಷಿತ
ಕೊರಗಜ್ಜ ಸಿನಿಮಾದ ‘ಮೋಷನ್ ಪೋಸ್ಟರ್‌’ ಜೊತೆ “ಫಸ್ಟ್ ಲುಕ್” ಸಿದ್ಧ ಗೊಂಡಿದ್ದು, ಕೊರಗಜ್ಜ ದೈವದ ಕಳೆ-ಕಾರ್ಣಿಕ ಮತ್ತು ಪಾವಿತ್ರ್ಯತೆಗೆ ಯಾವುದೇ ಧಕ್ಕೆ ಬಾರದಂತೆ ಅದನ್ನು ವಿನ್ಯಾಸ ಗೊಳಿಸಿ ಮೊದಲಿಗೆ ಕೊರಗಜ್ಜ, ಗುಳಿಗ ಹಾಗೂ ಕಲ್ಲುರ್ಟಿ ದೈವಗಳಿಗೆ ನಿರ್ದೇಶಕ ಸುಧೀರ್ ಅತ್ತಾವರ್ ಮತ್ತೆ ವಿಷೇಶ ಕೋಲಸೇವೆ ನೀಡಿ, ಅದೇ ಸಮಯದಲ್ಲಿ ಶ್ರೀ ದೈವಗಳ ಸಮಕ್ಷಮದಲ್ಲಿ ದೈವದ ಒಪ್ಪಿಗೆಗಾಗಿ ಪ್ರದರ್ಶಿಸಿದರು.ಶ್ರೀ ದೈವಗಳಿಂದ ಫಸ್ಟ್ ಲುಕ್ ನ್ನು ಸಾರ್ವಜನಿಕ ಪ್ರದರ್ಶನಕ್ಕೆ ಇಡಲು ಅನುಮತಿಯನ್ನು ಭಯ-ಭಕ್ತಿಯಿಂದ ಬೇಡಿಕೊಂಡು, ಒಪ್ಪಿಗೆ ಪಡೆಯಲಾಗಿದೆ.


ಆದರೆ ಎಲ್ಲೆಂದರಲ್ಲಿ ಈ ಫಸ್ಟ್ ಲುಕ್ ಮತ್ತು ಮೋಷನ್ ಪೋಸ್ಟರನ್ನು ದೈವಕ್ಕೆ ಅಪಚಾರ ಆಗುವ ರೀತಿಯಲ್ಲಿ ಸಾರ್ವಜನಿಕರು ದುರುಪಯೋಗ ಪಡಿಸಬಾರದು ಎಂದು ದೈವಗಳು ಅಪ್ಪಣೆ ನೀಡಿದವು.ಮೋಷನ್ ಪೋಸ್ಟರನ್ನು
ವಿಶೇಷವಾಗಿ ವಿನ್ಯಸಗೊಳಿಸಿದ್ಧರೂ ದೈವಗಳು ಒಪ್ಪಿಗೆ ನೀಡದಿದ್ದರೆ ಅದನ್ನು ಬಿಡುಗಡೆಗೊಳಿಸುವುದು ಅಸಾದ್ಯವಾಗಬಹುದಿತ್ತು.ಈ ರಿಸ್ಕನ್ನು ನಿರ್ದೇಶಕ ಮತ್ತು ನಿರ್ಮಾಪಕರು ತೆಗೆದುಕೊಂಡಿದ್ದರು.
ಚಿತ್ರತಂಡವು ಪ್ರತೀ ಹಂತದಲ್ಲೂ ಕೊರಗಜ್ಜ ಹಾಗೂ ಶ್ರೀ ದೈವಗಳ ಆಶಿರ್ವಾದ ಪಡೆದೇ ಮುಂದಡಿ ಇಡುತ್ತಿರುವುದು ವಿಶೇಷ.


ಈ ಅಪರೂಪದ ಕಾರ್ಯಕ್ರಮದಲ್ಲಿ ಮಾಜಿ ಸಚೀವೆ ಶ್ರೀಮತಿ ಮೋಟಮ್ಮ, ಖ್ಯಾತ ಕಲಾವಿದೆ ಭವ್ಯ ಮತ್ತು ಸುಪುತ್ರಿ ಅದಿತಿ,ಎಡಿಟರ್- ಈಪಿ ವಿದ್ಯಾಧರ್ ಶೆಟ್ಟಿ, ಖ್ಯಾತ ಗಾಯಕ ರಮೇಶ್ಚಂದ್ರ, ನಾಯಕ ನಟ ಭರತ್ ಸೂರ್ಯ, ಶ್ಲಾಘ್ಯ ಕಮಲಿನಿ ಹಾಗೂ ಚಿತ್ರತಂಡದ ಬಹುತೇಕ ಕಲಾವಿದರು ಮತ್ತು ತಂತ್ರಜ್ಞರು ಪಾಲ್ಗೊಂಡಿದ್ದರು.

error: Content is protected !!