ಸುದೀಪ್ ಈಗ ಬಿಝಿ. ಅದು ಎಲ್ಲರಿಗೂ ಗೊತ್ತಿದೆ. ಅವರ ಅಭಿನಯದ “ಕೋಟಿಗೊಬ್ಬ 3′ ಬಿಡುಗಡೆಗೆ ಸಜ್ಜಾಗಿದೆ. ಇನ್ನು ಅನೂಪ್ ಭಂಡಾರಿ ನಿರ್ದೇಶನದ, ಜಾಕ್ ಮಂಜು ನಿರ್ಮಾಣದ “ಫ್ಯಾಂಟಮ್” ಕೂಡ ಚಿತ್ರೀಕರಣದಲ್ಲಿದೆ. ಇದರ ನಡುವೆ ಒಂದಷ್ಟು ಹೊಸ ಸಿನಿಮಾಗಳೂ ಕೂಡ ಸೆಟ್ಟೇರಲು ಸಜ್ಜಾಗಿವೆ. ವಿಶೇಷವೆಂದರೆ, ಸುದೀಪ್ ಮತ್ತೊಮ್ಮೆ ಜೋಗಿ ಪ್ರೇಮ್ ಜೊತೆ ಮತ್ತೊಂದು ಚಿತ್ರದಲ್ಲಿ ನಟಿಸಲಿದ್ದಾರೆ.
ಹೌದು, ಈ ವಿಷಯವನ್ನು ಸ್ವತಃ ಜೋಗಿ ಪ್ರೇಮ್ ಸ್ಪಷ್ಟಪಡಿಸಿದ್ದಾರೆ. ಸುದೀಪ್ ಹುಟ್ಟುಹಬ್ಬಕ್ಕೆ ಟ್ವಿಟ್ಟರ್ನಲ್ಲಿ ಶುಭಕೋರಿದ್ದ ಪ್ರೇಮ್ ಅವರಿಗೆ ಸುದೀಪ್ ಅಭಿಮಾನಿಗಳು ತಮ್ಮ ಮುಂದಿನ ಸಿನಿಮಾ ಯಾವಾಗ, ಯಾರ ಜೊತೆ ಎಂದು ಪ್ರಶ್ನಿಸಿದ್ದರು. ಅವರ ಪ್ರಶ್ನೆಗಳಿಗೆ ಪ್ರೇಮ್, ನಾನು ಸುದೀಪ್ ಜೊತೆ ಮತ್ತೊಂದು ಸಿನಿಮಾ ಮಾಡಲಿದ್ದೇನೆ ಎಂದಿದ್ದಾರೆ. “ದಿ ವಿಲನ್” ಬಳಿಕ ಮಾಡುತ್ತಿರುವ ಸಿನಿಮಾ ಇದಾಗಿರುವುದರಿಂದ ಕಥೆ, ಪಾತ್ರ ಎಲ್ಲವೂ ವಿಶೇಷವಾಗಿರಲಿದೆ ಎಂಬುದು ಪ್ರೇಮ್ ಸ್ಪಷ್ಟನೆ. ಹೊಸ ಚಿತ್ರದಲ್ಲಿ ಸುದೀಪ್ ಅವರ ಗೆಟಪ್ ವಿಭಿನ್ನವಾಗಿರಲಿದೆ ಎಂದಿದ್ದಾರೆ ಪ್ರೇಮ್.
ಸದ್ಯಕ್ಕೆ ಪ್ರೇಮ್ ಅವರು ರಕ್ಷಿತಾ ಸಹೋದರ ರಾಣಾ ಅವರ “ಏಕ್ ಲವ್ ಯಾ” ಸಿನಿಮಾದತ್ತ ಗಮನ ಹರಿಸಿದ್ದಾರೆ. ಆ ಚಿತ್ರದಲ್ಲಿ ರಿಷಾ ಮತ್ತು ರಚಿತಾ ನಾಯಕಿಯರು. ರಕ್ಷಿತಾ ತಮ್ಮ ಬ್ಯಾನರ್ನಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಅದೇನೆ ಇರಲಿ, ಜೋಗಿ ಪ್ರೇಮ್ ಪುನಃ ಸುದೀಪ್ ಜೊತೆ ಸಿನಿಮಾ ಮಾಡುವ ವಿಷಯ ಹೊರಹಾಕಿದ್ದಾರೆ. ಆದರೆ, ಆ ಚಿತ್ರ ಯಾವಾಗ ಸೆಟ್ಟೇರಲಿದೆ, ಯಾರು ನಿರ್ಮಾಣ ಮಾಡಲಿದ್ದಾರೆ. ಕಥೆ ಹೇಗಿರಲಿದೆ. ಸುದೀಪ್ ಅವರ ಗೆಟಪ್ ಹೇಗೆಲ್ಲಾ ಇರಲಿದೆ. ಇಲ್ಲೂ ಸುದೀಪ್ ಜೊತೆ ಬೇರೆ ಸ್ಟಾರ್ ಯಾರಾದರೂ ಇರುತ್ತಾರಾ ಎಂಬಿತ್ಯಾದಿ ಪ್ರಶ್ನೆಗಳಿಗೆ ಸದ್ಯ ಉತ್ತರವಿಲ್ಲ. ಹೊಸ ಸಿನಿಮಾ ಮಾಡ್ತೀನಿ ಅಂತ ಪ್ರೇಮ್ ಹೇಳಿದ್ದಾರೆ. ಆದರೆ, ಅದು ಸೆಟ್ಟೇರಿ, ಶೀರ್ಷಿಕೆ ಅನೌನ್ಸ್ ಮಾಡಿ, ಟೀಮ್ ಸೆಟ್ ಮಾಡುವವರೆಗೂ ಪ್ರೇಮ್ ಇನ್ನೂ ಸಾಕಷ್ಟು ಸರ್ ಪ್ರೈಸ್ ನ್ಯೂಸ್ಗಳನ್ನು ಕೊಡುತ್ತಲೇ ಇರುತ್ತಾರೆ ಎಂಬುದಂತೂ ಸತ್ಯ.
Category: ಸಿನಿ ಸುದ್ದಿ
ನಟ ಸುದೀಪ್ ಹೇಳಿದ್ದು ಯಾವುದರ ಕುರಿತು ಗೊತ್ತಾ?
…………………………………….
ಶಿವಣ್ಣ ಆಯ್ತು, ಉಪೇಂದ್ರ ಆಯ್ತು, ದರ್ಶನ್ ಆಯ್ತ, ಕೊನೆಗೆ ಸುದೀಪ್ ಪ್ರತಿಕ್ರಿಯೆ ಏನು ಅಂತ ಕಾತರದಲ್ಲಿದ್ದ ಚಿತ್ರೋದ್ಯಮಕ್ಕೆಕೊನೆಗೂ ಉತ್ತರ ಸಿಕ್ಕಿತು. ಕಳೆದ ನಾಲ್ಕೈದು ದಿನಗಳಿಂದ ಬಾರೀ ಸದ್ದುಮಾಡುತ್ತಿದ್ದ ಡ್ರಗ್ಸ್ ಮಾಫಿಯಾ ಕುರಿತು ನಟ ಕಿಚ್ಚ ಸುದೀಪ್ ಕೊನೆಗೂ ಪ್ರತಿಕ್ರಿಯೆ ಕೊಟ್ಟರು. ಅಚ್ಚರಿ ಅಂದ್ರೆ ಡ್ರಗ್ಸ್ ಮಾಫಿಯಾ ಆರೋಪ ಪ್ರಕರಣದಲ್ಲಿ ಕೇಂದ್ರ ಬಿಂದು ಆಗಿರುವ ಇಂದ್ರಜಿತ್ ಲಂಕೇಶ್ ಅವರ ಜತೆಗೆಯೇ ಸುದ್ದಿ ಗೋಷ್ಟಿಯಲ್ಲಿ ಮಾತನಾಡಿದ್ದು.
ಡ್ರಗ್ಸ್ ಮಾಫಿಯಾ: ಸುದೀಪ್ ಹೇಳಿದ್ದಿಷ್ಟು!
ಡ್ರಗ್ಸ್ ದಂಧೆ ಬಗ್ಗೆ ನಾನೇನು ಹೇಳಲ್ಲ. ನಾನು ಕೂಡಾ ಚಿತ್ರರಂಗದವನೇ, ಆದರೆ ಅದರ ಬಗ್ಗೆ ನನಗೇನೂ ಗೊತ್ತಿಲ್ಲ. ಗೊತ್ತಿಲ್ಲದ ವಿಚಾರದ ಬಗ್ಗೆ ಮಾತನಾಡಲು ಹೋಗಬಾರದು. ನಮಗೆ ರೈಸ್, ದಾಲ್ ಗೊತ್ತು….ಇದರ ಬಗ್ಗೆ ಗೊತ್ತಿಲ್ಲ ಎಂದು ನಗೆ ಚಟಾಕಿ ಹಾರಿಸಿದರು.
ಚಿರು ಹೆಸರು ಪ್ರಸ್ತಾಪಕ್ಕೆ ಗರಂ
ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್ ದಂಧೆ ನಡೆಯುತ್ತಿದೆ ಎಂಬುದರ ಬಗ್ಗೆ ನನಗೇನೂ ಗೊತ್ತಿಲ್ಲ. ಚಿತ್ರರಂಗವನ್ನು ಎಲ್ಲರೂ ಸೇರಿ ಕಟ್ಟಿದ್ದಾರೆ. ಯಾವುದೋ ಒಂದು ವಿಚಾರದಿಂದಾಗಿ ಚಿತ್ರರಂಗದ ದೂಷಣೆ ಬೇಡ ಎಂದು ಸುದೀಪ್ ಹೇಳಿದರು.ಹಾಗೆಯೇ ಡ್ರಗ್ಸ್ ಮಾಫಿಯಾ ಆರೋಪ ಪ್ರಕರಣದಲ್ಲಿ ಚಿರು ಹೆಸರು ಕೇಳಿಬಂದಿದ್ದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ನಟ ಚಿರಂಜೀವಿ ಸರ್ಜಾಗೆ ಕುಟುಂಬ ಇದೆ, ಪತ್ನಿಯೂ ಇದ್ದಾರೆ. ಹೀಗಾಗಿ ನಿಧನರಾದವರ ಬಗ್ಗೆ ಮಾತನಾಡೋದು ಬೇಡ ಎಂದುವಿನಂತಿಸಿಕೊಂಡರು.
ನಂಗೆ ಡ್ರಗ್ಸ್ ಪಾರ್ಟಿ ಗೊತ್ತಿಲ್ಲ:
ನನಗೆ ಪಾರ್ಟಿ ಆಫರ್ ಬಂದಿರೋದು ರಾಜಕೀಯ ಪಕ್ಷಗಳಿಂದ, ಹೀಗಾಗಿ ಬೇರೆ ಪಾರ್ಟಿಗಳ ಬಗ್ಗೆ ನನಗೆ ಗೊತ್ತಿಲ್ಲ ಎನ್ನುತ್ತಾ ತಮ್ಮದೇ ಶೈಲಿಯಲ್ಲಿ ಡ್ರಗ್ಸ್ವಮಾಫಿಯಾ ಆರೋಪಕ್ಕೆ ಪ್ರತಿಕ್ರಿಯೆ ಕೊಟ್ಟರು.
ಸಂಬಂಜ ಅನ್ನೋದು ದೊಡ್ಡದು ಕನಾ…
ಈ ಪದಗಳೊಮ್ಮೆ ಕಿವಿಗಪ್ಪಳಿಸಿದರೆ, ನೆನಪಾಗೋದೇ ದೇವನೂರು ಮಹಾದೇವ ಅವರು. ಹೌದು ಅವರ ಜನಪ್ರಿಯಗೊಂಡ “ಕುಸುಮ ಬಾಲೆ” ಪುಸ್ತಕದೊಳಗಿರುವ ಮರೆಯದ ಸಾಲುಗಳಿದು. ಇಷ್ಟಕ್ಕೂ ಈ ದೇವನೂರು ಮಹಾದೇವ ಅವರ ಪುಸ್ತಕದೊಳಗಿರುವ “ಸಂಬಂಜ ಅನ್ನೋದು ದೊಡ್ಡದು ಕನಾ…ʼ ಚಿತ್ರವೊಂದರ ಟ್ಯಾಗ್ ಲೈನ್. ಅ ಚಿತ್ರ ಬೇರಾವೂದೂ ಅಲ್ಲ, ಈಗಾಗಲೇ ಎಲ್ಲರಿಗೂ ಗೊತ್ತಿರುವಂತೆ ಸದ್ದಿಲ್ಲದೆಯೇ ಶೂಟಿಂಗ್ ಮುಗಿಸಿ, ಸೆನ್ಸಾರ್ ಮಂಡಳಿಯಿಂದ ಯು ಪ್ರಮಾಣ ಪತ್ರ ಪಡೆದಿರುವ “ಡಿ ಎನ್ ಎ” ಸಿನಿಮಾ.
ಹೌದು, ನಿರ್ದೇಶಕ ಪ್ರಕಾಶ್ ರಾಜ್ ಮೇಹು ಅವರು ಹೊಸ ರೀತಿಯ ನಿರೂಪಣೆಯೊಂದಿಗೆ ಈ ಸಿನಿಮಾವನ್ನು ನಿರ್ದೇಶಿಸಿದ್ದಾರೆ. ಚಿತ್ರದ ಶೀರ್ಷಿಕೆ ಹೇಳುವಂತೆ ಇದೊಂದು, ಭಾವನಾತ್ಮಕ ಸಂಬಂಧಗಳ ನಡುವಿನ ಕಥಾಹಂದರ ಹೊಂದಿದೆ. ಪ್ರಸ್ತುತ ದಿನಮಾನದಲ್ಲಿ ನಡೆಯುವ ವಿಷಯಗಳೇ ಚಿತ್ರದ ಹೈಲೈಟ್. ಜಾತಿ,ಧರ್ಮಗಳ ಹೆಸರಿನಲ್ಲಿ ಮನಷ್ಯ-ಮನಷ್ಯರ ನಡುವಿನ ಗೋಡೆಗಳು ಭದ್ರಗೊಳ್ಳುತ್ತಿರುವ ಪ್ರಸ್ತುತ ದಿನಗಳಲ್ಲಿ, ನಿಜವಾದ ಸಂಬಂಧ ಯಾವುದು? ರಕ್ತ ಸಂಬಂಧವೆ? ಭಾವನಾತ್ಮಕ ಸಂಬಂಧವೆ? ಅನ್ನುವ ವಿಷಯವನ್ನು ಈ ಸಿನಿಮಾದ ಮೂಲಕ ಹೇಳಲು ಹೊರಟಿದ್ದಾರೆ ನಿರ್ದೇಶಕ ಪ್ರಕಾಶ್ ರಾಜು ಮೇಹು. ಈಗಾಗಲೇ ಚಿತ್ರವನ್ನು ವೀಕ್ಷಿಸಿರುವ ಸಿನಿಮಾರಂಗದ ಕೆಲ ಗೆಳೆಯರು, ಅಪ್ತರು, ತಂತ್ರಜ್ಞರು, ಚಿತ್ರದೊಳಗಿರುವ ಅಂಶಗಳ ಬಗ್ಗೆ, ನಿರ್ದೇಶಕರ ಆಲೋಚನೆಗಳ ಕುರಿತು ಸಾಕಷ್ಟು ಮೆಚ್ಚುಗೆ ವ್ಯಕ್ತಪಡಿಸಿದ್ದಾರ. ಸೆನ್ಸಾರ್ ಮಂಡಳಿ ಕೂಡ ಸಿನಿಮಾ ವೀಕ್ಷಿಸಿ, ಯಾವುದೇ ಕಟ್, ಮ್ಯೂಟ್ ಇಲ್ಲದೆ ಯು ಪ್ರಮಾಣ ಪತ್ರ ನೀಡುವುದರ ಜೊತೆಗೆ ಚಿತ್ರದೊಳಗಿರುವ ತಾಕತ್ತಿನ ಕುರಿತು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಸಂಬಂಧಗಳ ಮೌಲ್ಯಗಳಿರುವ ಕಥೆಯಲ್ಲಿ ಭಾವುಕತೆಯೇ ತುಂಬಿದೆ. ಹಾಗಾಗಿ, ಇದು ಎಲ್ಲಾ ವರ್ಗದವರಿಗೂ ಇಷ್ಟವಾಗುವ ಸಿನಿಮಾ ಇದಾಗಲಿದೆ ಎಂಬುದು ಅವರ ಮಾತು.
ಅದೇನೆ ಇರಲಿ, ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಕೊರೊನಾ ಸಮಸ್ಯೆಯಿಂದ ಇಡೀ ಚಿತ್ರರಂಗವೇ ಸ್ಥಬ್ಧಗೊಂಡಿತ್ತು. ಇನ್ನೇನು ಕೆಲವೇ ದಿನಗಳಲ್ಲಿ ಚಿತ್ರರಂಗ ಚೇತರಿಸಿಕೊಂಡು, ಪುನಃ ಮೊದಲಿನಂತೆಯೇ ರಂಗೇರಲಿದೆ. “ಡಿಎನ್ಎ” ಕೂಡ ಬಿಡುಗಡೆಗೆ ಎದುರು ನೋಡುತ್ತಿದೆ. ಸದ್ಯ ಚಿತ್ರಮಂದಿರಕ್ಕೆ ದೊಡ್ಡ ಸಿನಿಮಾಗಳು ಅಪ್ಪಳಿಸಿದ ಬಳಿಕ ಈ ಸಿನಿಮಾ ಕೂಡ ಪ್ರೇಕ್ಷಕರ ಮುಂದೆ ಬರಲು ಅಣಿಯಾಗುತ್ತಿದೆ.
ಸ್ಯಾಂಡಲ್ ವುಡ್ ನ ಅವಳಿ ಸುಂದರಿಯರು ಹಾಗೂ ಕರಾವಳಿಯ ಕ್ಯೂಟ್ ಸಿಸ್ಟರ್ಸ್ ಅದ್ವಿತಿ ಶೆಟ್ಟಿ ಹಾಗೂ ಅಶ್ವಿತಿ ಶೆಟ್ಟಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಈ ಸಹೋದರಿಯರಿಬ್ಬರೂ ಈಗ ಬಣ್ಣದ ಲೋಕದಲ್ಲಿ ನಟಿಯರಾಗಿ ಮಿಂಚುತ್ತಿರುವ ಉದಯೋನ್ಮುಖ ತಾರೆಯರು. ‘ಮಿಸ್ಟರ್ ಆ್ಯಂಡ್ ಮಿಸೆಸ್ ರಾಮಚಾರಿ ‘ ಚಿತ್ರ ನೋಡಿದವರಿಗೆ ಈ ಅವಳಿ ಸಹೋದರಿಯರು ಚಿರ ಪರಿಚಿತ.ಅದೇ ಅವರಿಬ್ಬರ ಮೊದಲ ಸಿನಿಮಾ. ಯಶ್ ಹಾಗೂ ರಾಧಿಕಾ ದಂಪತಿ ಅಭಿನಯಿಸಿದ್ದ ಈ ಸಿನಿಮಾದಲ್ಲಿ ಅವಳಿ ಸಹೋದರಿರು ವಿಶೇಷವಾಗಿ ಕಾಣಿಸಿಕೊಂಡಿದ್ದರು. ಅಲ್ಲಿಂದಲೇ ಶುರುವಾಗಿದ್ದು ಈ ಕ್ಯೂಟ್ ಟ್ವಿನ್ಸ್ ಸಿನಿ ಜರ್ನಿ.
‘ಸುಳಿ’ಚಿತ್ರದೊಂದಿಗೆ ಸಿನಿ ಪಯಣ ಆರಂಭಿಸಿದ ಅದ್ವಿತಿ ಶೆಟ್ಟಿ, ಚಂದನವನದಲ್ಲೀಗ ಬೇಡಿಕೆಯ ನಟಿ . ‘ಫ್ಯಾನ್’ ಚಿತ್ರದ ನಂತರವೀಗ ಅವರು ಹೊಸದೊಂದು ಚಿತ್ರ ಒಪ್ಪಿಕೊಂಡಿದ್ದಾರೆ. ಆ ಚಿತ್ರದ ಹೆಸರು ‘ಎಸ್’. ಇನ್ನು ಅಶ್ವಿತಿಶೆಟ್ಟಿ ಕೂಡ’ ಸುಳಿ ‘ನಂತರ ಅನಂತು ವರ್ಸಸ್ ನುಸ್ರತ್ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಈಗ ನಟನೆಯನ್ನೆ ವೃತ್ತಿಯಾಗಿಸಿಕೊಂಡಿರುವ ಅಶ್ವಿತಿ ಕಿರುತೆರೆ ಯಲ್ಲಿ ಬ್ಯುಸಿಯಾಗುತ್ತಿದ್ದಾರೆ. ಈ ಅವಳಿ ಸಹೋದರಿಯರಿಗೆ ಹುಟ್ಟು ಹಬ್ಬದ ಶುಭಾಶಯ.
ಬೇಬಿ ಡಾಲ್ ಗೆ ಇಂದು ಬರ್ತ್ ಡೇ ಸಂಭ್ರಮ
ಬೇಬಿ ಡಾಲ್ ಆದ್ಯಾಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಸಾಮಾಜಿಕ ಜಾಲ ತಾಣದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಆದ್ಯಾಗೆ ಹುಟ್ಟುಹಬ್ಬದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ಜೀ ಕನ್ನಡ ವಾಹಿನಿಯ ಬಹು ಜನಪ್ರಿಯ ಕಾರ್ಯಕ್ರಮ ‘ಸರಿಗಮಪ ಲಿಟ್ಲ್ ಚಾಂಪ್ ೧೨’ ನೇ ಸರಣಿಯ ಕಂಟೆಸ್ಟೆಂಡ್ ಆಗಿದ್ದ ಅದ್ಯಾ,ತನ್ನ ಮುದ್ದು ಮುಖ, ಆಕರ್ಷಣೆಯ ನಗು ಮತ್ತು ಮಧುರವಾದ ಕಂಠ ಸಿರಿಯೊಂದಿಗೆ ಸರಿಗಮಪ ಲಿಟಲ್ ಚಾಂಪ್ ರಿಯಾಲಿಟಿ ಶೋನ ಪ್ರಮುಖ ಆಕರ್ಷಣೆ ಆಗಿದ್ದಳು. ಅಪಾರ ಪ್ರತಿಭೆಯ ಮೂಲಕ ಬೇಬಿ ಡಾಲ್ ಅಂತಲೇ ಮನೆ ಮಾತಾಗಿದ್ದು ನಿಮಗೂ ಗೊತ್ತು.ಅದೇ ಜನಪ್ರಿಯತೆಯೊಂದಿಗೆ ಬೇಬಿಡಾಲ್ ಆದ್ಯಾ, ಬಾಲನಟಿಯಾಗಿ ಚಂದನವನ ಪ್ರವೇಶಿಸಿದಳು.
ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ‘ಹೋಮ್ ಮಿನಿಸ್ಟರ್” ಚಿತ್ರದಲ್ಲಿ ಕಾಣಿಸಿಕೊಂಡಳು. ಹಾಗೆಯೇ ಪುಷ್ಕರ್ ಮಲ್ಲಿಕಾರ್ಜುನಯ್ಯ ನಿರ್ಮಾಣದ ‘ಭೀಮಸೇನ ನಳ ಮಹಾರಾಜ’ ಚಿತ್ರದಲ್ಲೂ ಮುದ್ದಾದ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾಳೆ. ಆ ಚಿತ್ರ ಶೀಘ್ರದಲ್ಲೇ ತೆರೆಗೆ ಬರಲಿದೆ.
ಸದ್ಯ ನಟನೆ, ವಿದ್ಯಾಭ್ಯಾಸದ ಜತೆಗೆ ಆಲ್ಬಂ ಸಾಂಗ್ ನಿರ್ಮಾಣದಲ್ಲೂ ಬ್ಯುಸಿ ಆಗಿದ್ದಾಳೆ.ಸಂಗೀತದ ಮೇಲೆ ಇನ್ನಷ್ಟುಹಿಡಿತ ಸಾಧಿಸಲು ಕಲಿಕೆಗೆ ಒತ್ತು ನೀಡಿದ್ದಾಳೆ. ಆದ್ಯಾಳ ಆಸಕ್ತಿಗೆ ತಕ್ಕಂತೆ ತರಬೇತಿ ನೀಡುತ್ತಿದ್ದೇವೆ ಎನ್ನುತ್ತಾರೆ ತಾಯಿ ಅಶ್ವಿನಿ ಉಡುಪಿ.ಸಿನಿಲಹರಿ ಕಡೆಯಿಂದ ಬೇಬಿಡಾಲ್ ಆದ್ಯಾಗೆ ಹುಟ್ಟು ಹಬ್ಬದ ಶುಭಾಶಯ.
ಹಾಟ್ ಫೋಟೋಶೂಟ್ ಮೂಲಕವೇ ಉದಯೋನ್ಮುಖ ನಟಿಗೆ ಸಿಕ್ಕಿತಾ ಅಂತಹದೊಂದು ಅವಕಾಶ ?
ಮಾರಿಮುತ್ತು ಪಾತ್ರದ ಖ್ಯಾತಿಯ ಹಿರಿಯ ನಟಿ ಸರೋಜಮ್ಮ ಅವರ ಮೊಮ್ಮಗಳು ಹಾಗೂ ಕನ್ನಡದ ಉದಯೋನ್ಮುಖ ನಟಿ ಜಯಶ್ರೀ ಆರಾಧ್ಯ ಗೆ ಅದೃಷ್ಟ ಖುಲಾಯಿಸಿದೆ. ಕೊರೋನಾ ಸಂಕಷ್ಟದ ನಡುವೆಯೂ ಅವರಿಗೆ ಸಿನಿಮಾ ಅವಕಾಶಗಳು ಹುಡುಕಿಕೊಂಡು ಬರುತ್ತಿವೆ. ಇತ್ತೀಚೆಗೆ ಹಾಟ್ ಫೋಟೋ ಶೂಟ್ ನಲ್ಲಿ ಪಡ್ಡೆ ಹುಡುಗರ ಎದೆಯೊಳಗೆ ಕಿಚ್ಚು ಹೊತ್ತುವ ಹಾಗೆ ಮಿರ ಮಿರ ಮಿಂಚಿದ ಕಾರಣವೋ, ಪ್ರತಿಭೆಗೆ ಒಲಿದು ಪ್ರತಿಫಲವೋ ಗೊತ್ತಿಲ್ಲ, ಬಹುಬೇಗ ಜಯಶ್ರೀ ಆರಾಧ್ಯ ಕನ್ನಡದಾಚೆ ಈಗ ಕಾಲಿವುಡ್ ಗೂ ಕಾಲಿಡುತ್ತಿರುವುದು ವಿಶೇಷ.
‘ಪುಟ್ಟರಾಜು ಲವರ್ ಆಫ್ ಶಶಿಕಲಾ’ ಹಾಗೂ ಅಧಿಕ ಪ್ರಸಂಗಿ ಚಿತ್ರಗಳ ನಂತರವೀಗ ಜಯಶ್ರೀ, ಮೂರನೇ ಚಿತ್ರವೊಂದಕ್ಕೆ ನಾಯಕಿ ಆಗಿದ್ದಾರೆ.’ ಎ ವಿಲನ್ ಇನ್ ವಿಲ್ಲಾ ‘ ಎನ್ನುವುದು ಆ ಚಿತ್ರದ ಹೆಸರು.ಶುಕ್ರವಾರವಷ್ಟೆ ಆ ಚಿತ್ರದ ಮೊದಲ ಪೋಸ್ಟರ್ ರಿವೀಲ್ ಆಗಿದೆ. ನವ ಪ್ರತಿಭೆ ಅಭಿನವ್ ವಿಖ್ಯಾತ್ ಇದರ ನಾಯಕ ನಟ. ಕನ್ನಡದ ಜತೆಗೆ ಈ ಚಿತ್ರ ತಮಿಳಿನಲ್ಲೂ ನಿರ್ಮಾಣವಾಗುತ್ತಿದೆ. ವೃಂದ ಮಾಸ್ಟರ್ ನಿರ್ದೇಶನದ ಈ ಚಿತ್ರಕ್ಕೆ ದೀಪಾ ಪ್ರಶಾಂತ್ ಬಂಡವಾಳ ಹಾಕುತ್ತಿದ್ದಾರೆ. ಉಳಿದಂತೆ ನಟಿ ಜಯಶ್ರೀ ಪಾಲಿಗೆ ಇದು ಅದೃಷ್ಟದ ಅವಕಾಶ.
. ಕಳೆದ ವರ್ಷವಷ್ಟೇ ಪುಟ್ಟರಾಜು ಲವರ್ ಆಫ್ ಶಶಿಕಲಾ’ ಚಿತ್ರದ ಮೂಲಕ ಬೆಳ್ಳಿತೆರೆಗೆ ಕಾಲಿಟ್ಟಿದ್ದರು.ಅ ಚಿತ್ರ ತೆರೆ ಕಾಣುವ ಹೊತ್ತಿಗೆ ‘ ಅಧಿಕ ಪ್ರಸಂಗಿ’. ಹೆಸರಿನ ಹೊಸಬರ ಚಿತ್ರಕ್ಕೆನಾಯಕಿಆಗಿದ್ದರು. ಕೊರೋನಾ ಕಾರಣ ಅದಿನ್ನೂ ಬಿಡುಗಡೆ ಆಗುವುದಕ್ಕೆ ಸಿದ್ದತೆ ನಡೆಸಿರುವಾಗಲೇ, ದ್ವಿಭಾಷಾ ಚಿತ್ರವೊಂದಕ್ಕೆ ನಾಯಕಿಆಗಿದ್ದಾರೆ. ಅವರೇ ಹೇಳುವ ಹಾಗೆ ಇದೊಂದುಅದೃಷ್ಟದ ಅವಕಾಶ.
‘ ನಿಜವಾಗಿಯೂ ನನಗಿದು ಅದೃಷ್ಟದ ಅವಕಾಶ. ಯಾಕಂದ್ರೆ ನಾನು ಇಷ್ಟು ಬೇಗ ಕಾಲಿವುಡ್ ಗೂ ಪರಿಚಯವಾಗಬಹುದು ಅಂತ ಯೋಚಿಸಿರಲಿಲ್ಲ.ಆದರೆ ನಿರ್ದೇಶಕ ವೃಂದಾ ಮಾಸ್ಟರ್ ಕಡೆಯಿಂದಲೇ ಈ ಅವಕಾಶ ಬಂತು. ಸಿನಿಮಾದ ಬಗ್ಗೆ ಹೇಳಿದರು. ನಿರ್ಮಾಪಕರ ಜತೆಗೂ ಮಾತುಕತೆ ನಡೆಯಿತು. ಕತೆ ಜತೆಗೆ ಪಾತ್ರದ ಬಗ್ಗೆ ಚರ್ಚೆ ಆಯಿತು. ಕತೆಜತೆಗೆ ಪಾತ್ರವೂ ಇಷ್ಟವಾಯಿತು. ಹಾಗಾಗಿಒಪ್ಪಿಕೊಂಡೆ’ ಎನ್ನುವ ಜಯಶ್ರೀ ಅವರಿಗೆ ಪಾತ್ರ ಅಥವಾ ಕತೆ ಚೆನ್ನಾಗಿದೆ ಎನ್ನುವುದಕ್ಕಿಂದ ಎರಡು ಭಾಷೆಯಲ್ಲಿ ನಿರ್ಮಾಣವಾಗುತ್ತಿರುವ ಚಿತ್ರ ಎನ್ನುವುದೇ ಫುಲ್ ಎಕ್ಸೈಟ್ ಮೆಂಟ್ ತಂದಿದೆ.
ಎವಿಡೆನ್ಸ್ ಹಿಂದೆ ಬಂದ ಮಾನಸ ಜೋಶಿ
ವಿಭಿನ್ನ ಕ್ರೈಂ ಥ್ರಿಲ್ಲರ್ ನಲ್ಲಿ ರೋಬೋ ಗಣೇಶ್
ಮಾನಸ ಜೋಶಿ ಈ ಹೆಸರು ಕೇಳಿದಾಕ್ಷಣ , ಹಾಗೊಮ್ಮೆ ‘ಕಿರಗೂರಿನ ಗಯ್ಯಾಳಿಗಳು’ ಸಿನ್ಮಾ ನೆನಪಾಗುತ್ತೆ. ಪಕ್ಕಾ ಜಗಳಗಂಟಿ ಹೆಣ್ಣಾಗಿ ಗಮನ ಸೆಳೆದಿದ್ದ ಮಾನಸ ಜೋಶಿ ಆ ಬಳಿಕ ಹೊಸ ಬಗೆಯ ಕಥೆ, ಪಾತ್ರಗಳತ್ತ ಗಮನಹರಿಸಿದರು. ಈಗ ತಮಗೆ ಸರಿಹೊಂದುವ ಕಥೆ ,ಪಾತ್ರ ಹಾಗೂ ಒಳ್ಳೆಯ ತಂಡ ಸಿಕ್ಕ ಖುಷಿಯಲ್ಲಿ ಹೊಸದೊಂದು ಚಿತ್ರಕ್ಕೆ ಜೈ ಎಂದಿದ್ದಾರೆ.
ಹೌದು, ಮಾನಸ ಜೋಶಿ ಈ ಬಾರಿ ವಿಭಿನ್ನ ಕಥೆ, ಪಾತ್ರವಿರುವ ಚಿತ್ರ ಒಪ್ಪಿಕೊಂಡಿದ್ದು, ಹೊಸ ಗೆಟಪ್ ಮೂಲಕ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ. ಅಂದಹಾಗೆ, ಆ ಚಿತ್ರಕ್ಕೆ ‘ಎವಿಡೆನ್ಸ್’ ಎಂದು ನಾಮಕರಣ ಮಾಡಲಾಗಿದೆ.
ಈ ಚಿತ್ರವನ್ನು ಪ್ರವೀಣ್ (ಪಿ ಆರ್) ನಿರ್ದೇಶನ ಮಾಡುತ್ತಿದ್ದಾರೆ. ಅವರದೇ ಶ್ರೀ ಧೃತಿ ಪ್ರೊಡಕ್ಷನ್ ಮೂಲಕ ತಯಾರಾಗುತ್ತಿರುವ ‘ಎವಿಡೆನ್ಸ್’ ಚಿತ್ರಕ್ಕೆ ಅರವಿಂದ್ ಕುಮಾರ್, ಸುರೇಂದ್ರ ಶೆಟ್ಟಿ, ನರಸಿಂಹಮೂರ್ತಿ ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ.
ವಿಶೇಷವೆಂದರೆ, ಈ ಚಿತ್ರದಲ್ಲಿ ಕೇವಲ ಎರಡು ಮುಖ್ಯ ಪಾತ್ರಗಳಿವೆ. ಮಾನಸ ಜೋಶಿ ಜೊತೆ ರೋಬೊ ಗಣೇಶ್ ನಟಿಸುತ್ತಿದ್ದಾರೆ. ಅವರಿಲ್ಲಿ ನೆಗೆಟಿವ್ ಶೇಡ್ ಪಾತ್ರ ಮಾಡಿದರೆ, ಮಾನಸ ಜೋಶಿ ಮೊದಲ ಸಲ ತನಿಖಾಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೊಂದು ಕ್ರೈಮ್ ಥ್ರಿಲ್ಲರ್ ಕಥೆಯಾಗಿದ್ದು, ಒಂದೇ ರೂಮ್ ನಲ್ಲಿ ಕಥೆ ನಡಯಲಿದೆ. ಎರಡು ತಾಸು ಇಡೀ ಚಿತ್ರ ಒಂದೇ ರೂಮ್ ನಲ್ಲಿ ಸಾಗಲಿದೆ ಎಂಬುದು ವಿಶೇಷ.
ಚಿತ್ರಕ್ಕೆ ರವಿಸುವರ್ಣ ಛಾಯಾಗ್ರಹಣವಿದೆ. ಇದು ಅವರ 25ನೇ ಚಿತ್ರ ಎಂಬುದು ಮತ್ತೊಂದು ವಿಶೇಷ.
ಚಿತ್ರಕ್ಕೆ ಆರ್. ಚಂದ್ರಶೇಖರ್ ಪ್ರಸಾದ್ ಸಂಭಾಷಣೆ ಬರೆದಿದ್ದಾರೆ. ಕಾರ್ತಿಕ್ ವೆಂಕಟೇಶ್ ಸಂಗೀತ, ಸಾಹಿತ್ಯವಿದೆ.
ಸೆಪ್ಟೆಂಬರ್ 9ರಂದು ‘ಎವಿಡೆನ್ಸ್’ ಗೆ ಪೂಜೆ ನಡೆಯಲಿದೆ. ಇಡೀ ಸಿನಿಮಾ ಕೇವಲ 7 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ
‘ಡಾಟರ್ ಆಫ್ ಪಾರ್ವತಮ್ಮ’ ಮೂಲಕ ನಿರ್ಮಾಪಕರಾದ ಶಶಿಧರ್ ಕೆ.ಎಂ.ಅವರು ಹೊಸದೊಂದು ಕಥೆ ಬರೆದು, ನಿರ್ದೇಶನ ಮಾಡಲು ಹೊರಟ ಸುದ್ದಿ ಹೊಸದೇನಲ್ಲ. ಮೊದಲ ಸಲ ಅವರು ‘ಶುಗರ್ಲೆಸ್ ‘ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಲು ಹೊರಟಿದ್ದಾರೆ.
ಗುರುವಾರ
ಅವರ ಚೊಚ್ಚಲ ಚಿತ್ರಕ್ಕೆ ಮುಹೂರ್ತ ನೆರವೇರಿದೆ.
ಗುರುವಾರ ರಾಯರ ಅನುಗ್ರಹದಲ್ಲಿ ಇಂದು ಪುಷ್ಕರ್ ಫಿಲ್ಮ್ಸ್ ಸಹಯೋಗದಲ್ಲಿ ‘ಶುಗರ್ ಲೆಸ್’ ಚಿತ್ರವನ್ನು ನಿರ್ದೇಶನದ ಜೊತೆಗೆ ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ.
ಚಿತ್ರದ ಕಥೆ ತಕ್ಕಂತೆ ಶೀರ್ಷಿಕೆ ಇಟ್ಟಿರುವ ನಿರ್ದೇಶಕ ಶಶಿಧರ್, ಡಯಾಬಿಟಿಸ್ ಕುರಿತ ಕಥೆ ಹೇಳಲು ಹೊರಟಿದ್ದಾರೆ. ಈ ಕಥೆ ಜೊತೆ ಒಂದು ಬ್ಲಾಕ್ ಕಾಮಿಡಿಯಲ್ಲೇ ಗಂಭೀರ ವಿಷಯ ಹೇಳಲು ಹೊರಟಿದ್ದಾರೆ.
ಅವರು ಹೇಳುವಂತೆ, ಇಂದು ಡಯಾಬಿಟಿಕ್ ಅನ್ನೋದು, ಮಕ್ಕಳಿಂದ ಹಿಡಿದು ದೊಡ್ಡವರಿಗೂ ಇದೆ. ಆದರೆ, ಅದೇ ಸುಮಾರು 30 ವರ್ಷದ ಯುವಕನಿಗೆ ಡಯಾ ಬಿಟಿಸ್ ಬಂದಾಗ, ಅವರ ಬದುಕು ಹೇಗೆ ಇರುತ್ತೆ. ನಿತ್ಯ ಅವನ ಬದುಕಲ್ಲಿ ಏನೆಲ್ಲಾ ಸಮಸ್ಯೆ ಎದುರಾಗುತ್ತವೆ. ಸಮಾಜದಲ್ಲಿ ಆ ವಿಷಯವನ್ನು ಹೇಳಿಕೊಳ್ಳಲೂ ಆಗದ ವ್ಯಕ್ತಿಗಳು ಎಷ್ಟೆಲ್ಲಾ ಯಾತನೆ ಅನು ಭವಿಸುತ್ತಾರೆ ಎಂಬುದನ್ನು ಹೇಳುವ ಪ್ರಯತ್ನ ಮಾಡುತ್ತಿದ್ದಾರೆ ಅವರು. ಯಾವ ಭಾಷೆಯಲ್ಲೂ ಈ ಕಂಟೆಂಟ್ ಇರದ ಕಾರಣ, ಅವರು ಇದನ್ನೇ ಇಟ್ಟು ಕೊಂಡು ಹೊದ ವ್ಯಾಖ್ಯಾನದೊಂದಿಗೆ ಸಿನಿಮಾ ಮಾಡಲು ಹೊರಟಿದ್ದಾರೆ.
ತಮ್ಮ ದಿಶಾ ಎಂಟರ್ಟೈನರ್ಸ್ ಬ್ಯಾನರ್ನಲ್ಲಿ ಈ ಚಿತ್ರ ನಿರ್ಮಿಸುತ್ತಿದ್ದು, ಶಶಿಧರ್ ಗೆ ನಿರ್ಮಾಪಕ ಪುಷ್ಕರ್ ಕೈ ಜೋಡಿಸಿದ್ದಾರೆ.
ಗುಬ್ಬಿ ಮರಿ ಹಾರಲು ರೆಡಿ
ಈ ಹಿಂದೆ ಎ.ಪಿ.ಪ್ರೊಡಕ್ಷನ್ಸ್ ಬ್ಯಾನರ್ ತನ್ನ ಸ್ನೇಹಿತರ ಜೊತೆಗೂಡಿ “ಕಮರೊಟ್ಟು ಚೆಕ್ ಪೋಸ್ಟ್” ಎಂಬ ಹಾರರ್ ಚಿತ್ರವನ್ನು ನಿರ್ಮಾಣ ಮಾಡಿ ಯಶಸ್ವಿಯಾಗಿದ್ದ ಆನಂದ ಬಾಬು ಈಗ ಇನ್ನೊಂದು ಸಿನಿಮಾಗೆ ಕೈ ಹಾಕಿದ್ದಾರೆ.
ಆನಂದ ಬಾಬು ಅವರು ಡಾ|| ನಿಶ್ಚಿತ ಬಿ. ಅವರ ಜೊತೆ ಸೇರಿ “ಗುಬ್ಬಿ ಮರಿ” ಎನ್ನುವ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಈ ಚಿತ್ರಕ್ಕೆ ಮಧು ಡಕಣಾಚಾರ್ ಅವರು ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಎ.ಟಿ.ರವೀಶ್ ಸಂಗೀತವಿದೆ. ಸಿದ್ದು ಕೆ.ಗೌಡಗೆರೆ ಛಾಯಾಗ್ರಹಣ ಮಾಡಿದ್ದಾರೆ. ಎನ್.ಆದಿತ್ಯ ಕುಣಿಗಲ್ ಸಂಕಲನವಿದೆ. ಗೆಳೆಯ ಆನಂದ ಬಾಬು ಅವರಿಗೆ ಸಾಥ್ ನೀಡಿದ್ದಾರೆ. ಇಷ್ಟರಲ್ಲೇ ಅವರ ಕನಸಿನ ಕೂಸು “ಗುಬ್ಬಿಮರಿ” ಹಾರಲಿದೆ.
ನಿರ್ದೇಶಕ ಮನು ಕಲ್ಯಾಡಿ ಈಗ ಹೀರೋ !
ಅವರದೇ ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಿದೆ ಹೊಸ ಸಿನಿಮಾ
ಪ್ರಾರಂಭ ಚಿತ್ರದ ನಿರ್ದೇಶಕ ಮನುಕಲ್ಯಾಡಿ ಅವರಿಗೆ ಇಂದು ಹುಟ್ಟು ಸಂಭ್ರಮ.ಪ್ರಾರಂಭ ಚಿತ್ರ ತಂಡವು ರಾತ್ರಿಯೇ ಕೇಕ್ ಕತ್ತರಿಸಿ, ಸಿಹಿಹಂಚುವ ಮೂಲಕ ಮನು ಕಲ್ಯಾಡಿ ಅವರ ಹುಟ್ಟು ಹಬ್ಬವನ್ನುಅಚರಿಸಿತು.ಇದೇವೇಳೆ ನಿರ್ದೇಶಕ ಮನು ಕಲ್ಯಾಡಿ ಅವರಿಗೆ ಸಹೋದರ ಜಗದೀಶ್ ಕಲ್ಯಾಡಿ ವಿಶೇಷವಾದ ಗಿಫ್ಟ್ ಕೊಟ್ಟರು. ಮನುಕಲ್ಯಾಡಿ ಅವರನ್ನೆ ಹೀರೋ ಆಗಿಸಿಕೊಂಡು ಹೊಸ ದೊಂದುಸಿನಿಮಾ ಮಾಡುವುದಾಗಿ ಘೋಷಿಸಿದರು.
ಮನು ಕಲ್ಯಾಡಿ ನಿರ್ದೇಶನದ’ ಪ್ರಾರಂಭ ‘ಚಿತ್ರವು ಹೊರಬರುತ್ತಿದ್ದಂತೆ ಮನುಕಲ್ಯಾಡಿ ಆವರನ್ನು ಹೀರೋ ಆಗಿಬೆಳ್ಳಿತೆರೆಗೆ ಪರಿಚಯಿಸುವುದಾಗಿಜಗದೀಶ್ ಕಲ್ಯಾಡಿ ಭರವಸೆ ನೀಡಿದರು. ಅಂದಹಾಗೆ ಈಚಿತ್ರಕ್ಕೆಈಗಾಗಲೇನಿರ್ದೇಶಕರುಫಿಕ್ಸ್ ಆಗಿದ್ದಾರೆ. ಸಾಯಿಕಿಶೋರ್ ತಲ್ಲ ಆ್ಯಕ್ಚನ್ ಹೇಳಲು ರೆಡಿ ಆಗಿದ್ದಾರೆ. ಸ್ಕ್ರಿಪ್ಟ್ ವರ್ಕ್ ಕೂಡಮುಗಿದಿದೆ. ನಾಯಕಿಸೇರಿದಂತೆಉಳಿದಕಲಾವಿದರಆಯ್ಕೆ ಬಾಕಿಯಿದೆ.ಅಕ್ಟೋಬರ್ ತಿಂಗಳಲ್ಲಿಈಚಿತ್ರಸೆಟ್ಟೇರುವುದು ಗ್ಯಾರಂಟಿ ಯಂತೆ.
ಇನ್ನುಎಲ್ಲವೂಅಂದುಕೊಂಡಂತೆಯೇ ಆಗಿದ್ದರೆಜಗದೀಶ್ ಕಲ್ಯಾಡಿನಿರ್ಮಾಣಹಾಗೂ ಮನುಕಲ್ಯಾಡಿ ನಿರ್ದೇಶನದ ಪ್ರಾರಂಭಚಿತ್ರ ರಿಲೀಸ್ಆಗಬೇಕಿತ್ತು. ಆದರೆಕೊರೋನಾ ಕಾರಣಎಲ್ಲವೂ ಏರುಪೇರಾಯಿತು.ಈಗ ಕೊರೋನಾ ಭೀತಿ ಒಂದಷ್ಟು ತಿಳಿಯಾಗುತ್ತಿದೆ. ನಿರ್ಮಾಪಕ ಜಗದೀಶ್ ಕಲ್ಯಾಡಿ ಪ್ರಾರಂಭ ರಿಲೀಸ್ ಗೆಸಿದ್ದತೆನಡೆಸಿದ್ದಾರೆ.ಅದು ತೆರೆಗೆ ಬರುತ್ತಿದ್ದಂತೆ ಮನುಕಲ್ಯಾಡಿ ಅಭಿನಯದ ಚೊಚ್ಚಲ ಚಿತ್ರ ಸೆಟ್ಟೇರಲಿದೆ ಎನ್ನುವುದು ತಂಡದ ಅಧಿಕೃತ ಮಾಹಿತಿ.