Categories
ಸಿನಿ ಸುದ್ದಿ

ಸಿರಿ ಕನ್ನಡದಲ್ಲಿ ಹಾಸ್ಯ ಕನ್ನಡ! ಹಾಸ್ಯ ದಿಗ್ಗಜರ ದರ್ಬಾರ್ ಶುರು

ಕನ್ನಡ ಕಿರುತೆರೆ ಲೋಕದಲ್ಲಿ ವಿಭಿನ್ನ ಕಾರ್ಯಕ್ರಮಗಳೊಂದಿಗೆ ಒಂದೊಂದೆ ಯಶಸ್ವಿ ಹಂತಗಳನ್ನು
ಮುಟ್ಟುತ್ತಿರುವ ಸಿರಿಕನ್ನಡ ವಾಹಿನಿಯಲ್ಲಿ ಜನಪ್ರಿಯ ಕಾರ್ಯಕ್ರಮಗಳು ಪ್ರಸಾರವಾಗುತ್ತಿದೆ. ಆ ಪೈಕಿ ಕರ್ನಾಟಕದ ಹೆಸರಾಂತ ಹಾಸ್ಯ ದಿಗ್ಗಜರು ನಡೆಸಿಕೊಡುವ “ಹಾಸ್ಯ ದರ್ಬಾರ್ ಸೀಸನ್ 02” ಹಾಗೂ ತಾಯಿ – ಮಗು ಭಾಗವಹಿಸುವ
“ಲಿಟಲ್ ಕಿಲಾಡೀಸ್” ಗೇಮ್ ಶೋ ಆರಂಭವಾಗಿದೆ.

ವಾಹಿನಿಯ ರಾಜೇಶ್ ರಾಜಘಟ್ಟ‌, “ಹಾಸ್ಯ ದರ್ಬಾರ್ ಸೀಸನ್ 2” ನಲ್ಲಿ ಭಾಗಿಯಾಗಿರುವ ಎಲ್ಲಾ ಹಾಸ್ಯ ದಿಗ್ಗಜರು ಹಾಗೂ “ಲಿಟಲ್ ಕಿಲಾಡೀಸ್” ಕಾರ್ಯಕ್ರಮದ ನಿರ್ದೇಶಕ ಮಂಜೇಶ್ ಮಾಹಿತಿ ನೀಡಿದರು. ನಿರೂಪಕಿ ರಶ್ಮಿತಾ ಚಂಗಪ್ಪ ಉಪಸ್ಥಿತರಿದ್ದರು.

ಮಾತನಾಡಿದ ಸಿರಿಕನ್ನಡ ವಾಹಿನಿಯ ಮುಖ್ಯಸ್ಥರಾದ ರಾಜೇಶ್ ರಾಜಘಟ್ಟ, ನಾಡಿನ ಪ್ರತಿಯೊಬ್ಬ ವೀಕ್ಷಕರನ್ನು ತಲುಪುವಂತಹ ಎರಡು ಜನಪ್ರಿಯ ಕಾರ್ಯಕ್ರಮಗಳು ನಮ್ಮ ವಾಹಿನಿಯಲ್ಲಿ ಆರಂಭವಾಗಿದೆ. ಅದರಲ್ಲಿ ನಾಡಿನ ಪ್ರಮುಖ ಹಾಸ್ಯ ದಿಗ್ಗಜರು ನಡೆಸಿಕೊಡುವ “ಹಾಸ್ಯ ದರ್ಬಾರ್ ಸೀಸನ್ 2” ಸೋಮವಾರದಿಂದ ಶುಕ್ರವಾರದವರೆಗೂ ರಾತ್ರಿ 8 ರಿಂದ 9 ರವರೆಗೂ ಪ್ರಸಾರವಾಗಲಿದೆ. ಮಕ್ಕಳು ಹಾಗೂ
ಅಮ್ಮಂದಿರನ್ನು ಒಂದೇ ವೇದಿಕೆಯಲ್ಲಿ ಒಟ್ಟಾಗಿಸಿ ತಾಯಿ ಮಗುವಿನ emotion, fun, game, drama ಹಾಗೂ team building activity ಗಳನ್ನು ಒಳಗೊಂಡ
” ಲಿಟಲ್ ಕಿಲಾಡೀಸ್”ಎಂಬ ವಿಭಿನ್ನ ಗೇಮ್ ಶೋ ಸೋಮವಾರದಿಂದ ಶುಕ್ರವಾರ ಸಂಜೆ 6 ರಿಂದ 7
ಗಂಟೆಯವರೆಗೆ ಪ್ರಸಾರ ಮಾಡಲಾಗುತ್ತಿದ್ದು, ಕಿರುತೆರೆಯ ಜನಪ್ರಿಯ ನಟಿ ರಶ್ಮಿತಾ ಚಂಗಪ್ಪ
ನಿರೂಪಣೆಯಲ್ಲಿ ಅಮೋಘವಾಗಿ ಮೂಡಿ ಬರುತ್ತಿದೆ. ಎರಡು ಕಾರ್ಯಕ್ರಮಗಳು ಎಲ್ಲರ ಸಹಕಾರದಿಂದ ಉತ್ತಮವಾಗಿ ಮೂಡಿಬರುತ್ತಿದ್ದು ಜನಮನ್ನಣೆ ಪಡೆಯುತ್ತಿದೆ ಎಂದರು.

“ಹಾಸ್ಯ ದರ್ಬಾರ್ ಸೀಸನ್ 2” ನಲ್ಲಿ ಭಾಗವಹಿಸುತ್ತಿರುವ ಹಿರೇಮಗಳೂರು ಕಣ್ಣನ್, ಮುಖ್ಯಮಂತ್ರಿ ಚಂದ್ರು, ರಿಚರ್ಡ್ ಲೂಯಿಸ್, ಪ್ರಾಣೇಶ್, ಪ್ರೊ .ಕೃಷ್ಣೇ ಗೌಡ, ಎಂ.ಎಸ್ ನರಸಿಂಹಮೂರ್ತಿ, ಮಿಮಿಕ್ರಿ ದಯಾನಂದ್, ಯಶವಂತ ಸರ್ ದೇಶಪಾಂಡೆ, ಗುಂಡುರಾವ್, ದುಂಡಿರಾಜ್, ನರಸಿಂಹ ಜೋಶಿ, ಮಹಾಮನೆ ಮುಂತಾದವರು ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿ, ಇಂತಹ ಕಾರ್ಯಕ್ರಮವನ್ನು ಪ್ರಸಾರ ಮಾಡುತ್ತಿರುವ “ಸಿರಿ ಕನ್ನಡ” ವಾಹಿನಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು.

ಗೌರಿಗಣೇಶ ಹಬ್ಬದ ಪ್ರಯುಕ್ತ “ಲಿಟಲ್ ಕಿಲಾಡೀಸ್” ಕಾರ್ಯಕ್ರಮದಲ್ಲಿ “ಟಗರು’ ಖ್ಯಾತಿಯ ಮಾನ್ವಿತಾ ಕಾಮತ್
ನಿಮ್ಮನೆಲ್ಲಾ ಮನರಂಜಿಸಲಿದ್ದಾರೆ. ಹಾಗೂ ಮತ್ತಷ್ಟು ವಿಶೇಷ ಮನರಂಜನೆಯ ಕಾರ್ಯಕ್ರಮಗಳು
ಮೂಡಿಬರಲಿದೆ. ಇದರೊಟ್ಟಿಗೆ ಇತರ ಕಾರ್ಯಕ್ರಮಗಳನ್ನು ವೀಕ್ಷಿಸುವ ವೀಕ್ಷಕರಿಗೆ ವರಮಹಾಲಕ್ಷ್ಮೀ
ಹಬ್ಬದಿಂದ ದೀಪಾವಳಿಯವರೆಗೂ ಚಿನ್ನ ಮತ್ತು ಬೆಳ್ಳಿ ನಾಣ್ಯಗಳನ್ನು ಉಡುಗೊರೆಯಾಗಿ ಸಿರಿಕನ್ನಡ ವಾಹಿನಿ ನೀಡುತ್ತಿದ್ದು,
ಪ್ರತೀದಿನ ಬೆಳಗ್ಗೆ 10 ರಿಂದ ರಾತ್ರಿ 10 ಗಂಟೆಯ ವರೆಗೂ ನಿರ್ದಿಷ್ಟ ಅವಧಿಯಲ್ಲಿ ಮಿಸ್ ಕಾಲ್
ಕೊಟ್ಟವರಿಗೆ ಬಹುಮಾನ ಸಿಗಲಿದೆ ಎಂದು ಸಿರಿ ಕನ್ನಡ ವಾಹಿನಿಯ ಸಂಸ್ಥಾಪಕ ನಿರ್ದೇಶಕರಾದ ಸಂಜಯ್ ಶಿಂಧೆ ತಿಳಿಸಿದರು ‌

ಶೀಘ್ರದಲ್ಲೇ “ಅಮೃತ ಘಳಿಗೆ” ಎಂಬ ಹೊಚ್ಚ ಹೊಸ ಧಾರಾವಾಹಿ ಸಹ ಸಿರಿಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ.

Categories
ಸಿನಿ ಸುದ್ದಿ

ದೇಶ ಪ್ರೇಮ ಮೆರೆವ ಯಂಗ್ ಮ್ಯಾನ್! ಇದು ಸಿಂಗಲ್ ಟೇಕ್ ಸಿನಿಮಾ ಕಣ್ರೀ

ಕನ್ನಡ ಚಿತ್ರರಂಗದಲ್ಲಿ ಹೊಸ ಪ್ರಯತ್ನಗಳು ನಡೆಯುತ್ತಿರುತ್ತದೆ. ಆ ಸಾಲಿಗೆ ಹೊಸ ಚಿತ್ರವೂ ಸೇರಿದೆ. ಹೊಸತಂಡದಿಂದ 2 ಗಂಟೆ 38 ನಿಮಿಷಗಳ ಅವಧಿಯ “ಯಂಗ್ ಮ್ಯಾನ್” ಎಂಬ ಚಿತ್ರ ನಿರ್ಮಾಣವಾಗಿದೆ. ಸಿಂಗಲ್ ಟೇಕ್ ನಲ್ಲಿ ಚಿತ್ರೀಕರಣವಾಗಿರುವುದು ಈ ಚಿತ್ರದ ವಿಶೇಷ.

ನಾನು ಈ ಹಿಂದೆ ಕೆಲವು ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದೇನೆ. ಇದು ಮೊದಲ ನಿರ್ದೇಶನದ ಸಿನಿಮಾ. ಚೊಚ್ಚಲ ನಿರ್ದೇಶನದಲ್ಲೇ ಏನಾದರೂ ವಿಶೇಷತೆ ಇರಬೇಕೆಂಬ ಹಂಬಲದಿಂದ ಈ ಚಿತ್ರವನ್ನು ಸಿಂಗಲ್ ಟೇಕ್ ನಲ್ಲಿ ಮಾಡಿ ಮುಗಿಸಿದ್ದೇನೆ. ಈ ಹಿಂದೆ ಶಂಕರ್ ನಾಗ್, ಎಸ್ ನಾರಾಯಣ್ ಮುಂತಾದವರು ಈ ಪ್ರಯತ್ನ ಮಾಡಿದ್ದಾರೆ. ಆ ಸಿನಿಮಾಗಳ ಸ್ಪೂರ್ತಿಯಿಂದ ನಾನು ಈ ಪ್ರಯತ್ನವನ್ನು ಮಾಡಿದ್ದೇನೆ.

ಸುಮಾರು ಮೂರು ತಿಂಗಳು ಪೂರ್ವ ತಯಾರಿ ಮಾಡಿಕೊಂಡಿದ್ದೇನೆ. ನಮ್ಮ ಸಿನಿಮಾದಲ್ಲಿ ಬಹುತೇಕ ಹೊಸ ಕಲಾವಿದರೆ ನಟಿಸಿರುವ ಕಾರಣ ಅವರಿಗೆಲ್ಲಾ ತರಭೇತಿ ನೀಡಿ ಆನಂತರ ಚಿತ್ರೀಕರಣ ಮಾಡಿದ್ದೇನೆ. ನಮ್ಮ ಚಿತ್ರದಲ್ಲಿ ದೇಶಪ್ರೇಮವನ್ನು ಆಧರಿಸಿದ ಕಥೆಯಿದೆ. ಯಾರು ಊಹಿಸಲಾಗದ್ದ ಕ್ಲೈಮ್ಯಾಕ್ಸ್ ಸಹ ಇದೆ. ನನ್ನ ಈ ಕನಸ್ಸನ್ನು ನನಸು ಮಾಡಿದ ನನ್ನ ತಾಯಿ ತಂದೆ ವಿಜಯಲಕ್ಷ್ಮಿ – ರಾಮೇಗೌಡ, ಹರೀಶ್ ಹೆಚ್ ಎಸ್ ಹಾಗೂ ಕ್ರಿಯೇಟಿವ್ ಹೆಡ್ ಮುರಳಿ ಎಸ್ ವೈ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು ನಿರ್ದೇಶಕ ಮುತ್ತುರಾಜ್.

ಸಿಂಗಲ್ ಟೇಕ್ ನಲ್ಲಿ ಚಿತ್ರ ಮಾಡುವುದು ಸುಲಭದ ಮಾತಲ್ಲ ಎಂದು ಮಾತನಾಡಿದ ಛಾಯಾಗ್ರಾಹಕ ವೀನಸ್ ನಾಗರಾಜ್ ಮೂರ್ತಿ, ನಾವು ಅಂದುಕೊಂಡ ಹಾಗೆ ಚಿತ್ರೀಕರಣ ಮಾಡಲು ಸಹಕಾರ ನೀಡಿದ ಕಲಾವಿದರಿಗೆ ಧನ್ಯವಾದ ಹೇಳಬೇಕು. ಅವರ ಸಹಕಾರವಿಲ್ಲದಿದ್ದರೆ ಸಿಂಗಲ್ ಟೇಕ್ ನಲ್ಲಿ ಚಿತ್ರೀಕರಣ ಮಾಡಲಾಗುತ್ತಿರಲಿಲ್ಲ. ಕನಕಪುರದ ಬಳಿಯ ಮನೆಯೊಂದರಲ್ಲಿ ವಿಶೇಷ ಕ್ಯಾಮೆರಾಗಳನ್ನು ಬಳಸಿ ಚಿತ್ರೀಕರಣ ಮಾಡಿರುವುದಾಗಿ ಹೇಳಿದರು.

ಚಿತ್ರವನ್ನು ಲಿಮ್ಕಾ ದಾಖಲೆಗೆ ಹಾಗೂ ಕೆಲವು ಚಿತ್ರೋತ್ಸವಗಳಿಗೆ ಕಳುಹಿಸುತ್ತಿರುವುದಾಗಿ ಕ್ರಿಯೇಟಿವ್ ಹಡ್ ಮುರಳಿ ತಿಳಿಸಿದರು.

ನಿರ್ಮಾಪಕರಾದ ವಿಜಯಲಕ್ಷ್ಮಿ ರಾಮೇಗೌಡ, ಹರೀಶ್ ಹೆಚ್ ಎಸ್ ಹಾಗೂ ಕಲಾವಿದರಾದ ಸುನೀಲ್ ಗೌಡ, ನಯನ ಪುಟ್ಟಸ್ವಾಮಿ, ಹರೀಶ್ ಆಚಾರ್ಯ, ಆನಂದ್ ಕೆಂಗೇರಿ, ರಾಶಿಕ ಪುಟ್ಟಸ್ವಾಮಿ, ತನುಜಾ, ಶೃತಿ ಗೌಡ ಮುಂತಾದವರು “ಯಂಗ್ ಮ್ಯಾನ್” ಚಿತ್ರದ ಕುರಿತು ಮಾತನಾಡಿದರು.

Categories
ಸಿನಿ ಸುದ್ದಿ

ಮಾದೇವ ಚಿತ್ರೀಕರಣ ಪೂರ್ಣ: ಪೋಸ್ಟ್ ಪ್ರೊಡಕ್ಷನ್ ನಲ್ಲಿ ವಿನೋದ್ ಪ್ರಭಾಕರ್ ಸಿನಿಮಾ

ಮರಿ ಟೈಗರ್ ವಿನೋದ್ ಪ್ರಭಾಕರ್ ನಟನೆಯ ಮಾದೇವ ಸಿನಿಮಾಗೆ ಚಿತ್ರೀಕರಣ ಪೂರ್ಣಗೊಂಡಿದೆ. ನವೀನ್ ರೆಡ್ಡಿ ಮಾದೇವ ಸಿನಿಮಾದ ನಿರ್ದೇಶಕ. ಒಂದಷ್ಟು ಪೋಸ್ಟರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಮಾದೇವ ಸಿನಿಮಾಗೆ ಕನಕಪುರ, ಚನ್ನಪಟ್ಟಣ, ಶಿವಮೊಗ್ಗ, ರಾಮೋಜಿ ಫಿಲ್ಮಂಸಿಟಿ, ಹೆಸರಘಟ್ಟ ಭಾಗಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ.

ನೈಜ ಘಟನೆಗಳಿಂದ ಸ್ಪೂರ್ತಿ ಪಡೆದ ಈ ಸಿನಿಮಾದ ಕಥೆಯು 1965, 1980 ಮತ್ತು 1999ರ ಕಾಲಘಟ್ಟದಲ್ಲಿ ನಡೆಯಲಿದೆ. ಹಿಂದೆಂದೂ ಕಂಡಿರದಂತಹ ಲುಕ್‌ನಲ್ಲಿ ವಿನೋದ್ ಪ್ರಭಾಕರ್ ಕಾಣಿಸಿಕೊಳ್ಳಲಿದ್ದಾರಂತೆ. ಖಳನಾಯಕನಾಗಿ ಶ್ರೀನಗರಕಿಟ್ಟಿ, ಶ್ರುತಿ ಮತ್ತು ಅಚ್ಯುತ್ ಕುಮಾರ್, ಕಾಕ್ರೋಚ್ ಸುಧಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
‘ರಾಬರ್ಟ್‌’ ಸಿನಿಮಾದಲ್ಲಿ ರಾಘವ್‌ ಮತ್ತು ತನು ಪಾತ್ರಗಳ ಮೂಲಕ ಪ್ರೇಕ್ಷಕರಿಗೆ ಸಖತ್ ಇಷ್ಟವಾಗಿದ್ದ ವಿನೋದ್‌ ಪ್ರಭಾಕರ್‌ ಮತ್ತು ಸೋನಲ್‌ ಮೊಂಥೆರೋ ‘ಮಾದೇವ’ ಚಿತ್ರದಲ್ಲೂ ಜೋಡಿಯಾಗಿ ಅಭಿನಯಿಸಿದ್ದಾರೆ.

ಬಾಹುಬಲಿ, ಆರ್‌ಆರ್‌ಆರ್ ಸಿನಿಮಾಗಳ ಛಾಯಾಗ್ರಾಹಕ ಸೆಂಥಿಲ್‌ ಕುಮಾರ್ ಬಳಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಬಾಲಕೃಷ್ಣ ತೋಟ ‘ಮಾದೇವ’ ಚಿತ್ರಕ್ಕೆ ಛಾಯಾಗ್ರಾಹಕರಾಗಿ ಕೆಲಸ ಮಾಡುತ್ತಿದ್ದಾರೆ. ರಾಧಾಕೃಷ್ಣ ಬ್ಯಾನರ್ ನಡಿ ಆರ್ ಆರ್ ಕೇಶವ ದೇವಸಂದ್ರ ಚಿತ್ರಕ್ಕೆ ಹಣ ಹಾಕಿದ್ದಾರೆ. ಸದ್ಯ ಶೂಟಿಂಗ್ ಮುಗಿಸಿರುವ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ.

Categories
ಸಿನಿ ಸುದ್ದಿ

ಕನ್ನಡದಲ್ಲೂ ನಂದಿ ಫಿಲ್ಮ್ ಅವಾರ್ಡ್: ಲೋಗೋ ಲಾಂಚ್ ಮಾಡಿದ ಸಿಎಂ ಸಿದ್ದರಾಮಯ್ಯ

ತೆಲುಗು ಸಿನಿಮಾ ರಂಗದಲ್ಲಿ ಅನನ್ಯ ಸೇವೆಗೈದ ಸಾಧಕರಿಗೆ ಕೊಡ ಮಾಡುವ ನಂದಿ ಪ್ರಶಸ್ತಿ ಈಗ ಕನ್ನಡದಲ್ಲಿಯೂ ಪ್ರಾರಂಭವಾಗುತ್ತಿದೆ. ಅದರ ಮೊದಲ ಭಾಗ ಎನ್ನುವಂತೆ ನಂದಿ ಅವಾರ್ಡ್ ಲೋಗೋ ಬಿಡುಗಡೆ ಮಾಡಲಾಗಿದೆ. ನಾಡಿನ ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಗೋ ಲಾಂಚ್ ಮಾಡಿ ಶುಭ ಕೋರಿದ್ದಾರೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಭಾ.ಮಾ.ಹರೀಶ್ ನೇತೃತ್ವದಲ್ಲಿ ನಿನ್ನೆ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಲೋಗೋ ಅನಾವರಣ ಮಾಡಿಸಿದ್ದಾರೆ. ಅನಿತಾ ರೆಡ್ಡಿ, ನಿತ್ಯನಂದ ಪ್ರಭು, ಪದ್ಮವತಿ ಚಂದ್ರಶೇಖರ್, ಭಾಮಾ ಗಿರೀಶ್, Aiplex ಗಿರೀಶ್ ಸೇರಿದಂತೆ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ನಂದಿ..ಕನ್ನಡದ ಹೆಮ್ಮೆ..ಈ ಹೆಸರಿನಲ್ಲಿ ಪ್ರಶಸ್ತಿ ಕೊಡಬೇಕೆಂಬು ಸಿನಿಮಾ ರಂಗದ ಸ್ನೇಹಿರೊಟ್ಟಿಗೆ ಚರ್ಚಿಸಿ ಈ ತೀರ್ಮಾನ ಮಾಡಲಾಗಿದೆ ಎಂದು ಅಧ್ಯಕ್ಷ ಭಾ.ಮಾಹರೀಶ್ ತಿಳಿಸಿದ್ದಾರೆ. ನವೆಂಬರ್ ತಿಂಗಳಲ್ಲಿ ಪ್ರಶಸ್ತಿ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತದೆ. ಪ್ರತಿ ವರ್ಷ ಸಿನಿಮಾ ರಂಗದಲ್ಲಿ ಸಾಧನೆ ಮಾಡಿ ಕಲಾವಿದರನ್ನು ಸನ್ಮಾನಿಸಿ ಗೌರವಿಸಿ ನಂದಿ ಪ್ರಶಸ್ತಿ ನೀಡಲಾಗುತ್ತದೆ.

ಸದ್ಯ ನಂದಿ ಪ್ರಶಸ್ತಿ ಲೋಗೋ ಬಿಡುಗಡೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಕಾರ್ಯಕ್ರಮ ರೂಪರೇಷೆಗಳನ್ನು ತಿಳಿಸಲಾಗುತ್ತದೆ. ಸೈಮಾ, ಫಿಲ್ಮಂ ಫೇರ್ ಮಾದರಿಯಲ್ಲಿಯೇ ಕನ್ನಡ ಸಿನಿಮಾರಂಗಕ್ಕೆ ಪ್ರತ್ಯಕ್ಷ ಪ್ರಶಸ್ತಿ ನಂದಿ ಎನ್ನುತ್ತಾರೆ ವಾಣಿಜ್ಯ ಚಲನಚಿತ್ರ ಮಂಡಳಿ ಅಧ್ಯಕ್ಷರಾದ ಭಾ.ಮಾ.ಹರೀಶ್ ತಿಳಿಸಿದ್ದಾರೆ.

Categories
ಸಿನಿ ಸುದ್ದಿ

ಫೈಟರ್ ಸಿನಿಮಾದ ಹಾಡು ಹೊರ ಬಂತು : ಅಕ್ಟೋಬರ್ ಗೆ ವಿನೋದ್ ಪ್ರಭಾಕರ್ ನಟನೆಯ ಚಿತ್ರ ರಿಲೀಸ್

ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ, ನೂತನ್ ಉಮೇಶ್ ನಿರ್ದೇಶನದ ಹಾಗೂ ಸೋಮಶೇಖರ್ ಕಟ್ಟಿಗೇನಹಳ್ಳಿ ನಿರ್ಮಿಸಿರುವ “ಫೈಟರ್” ಚಿತ್ರಕ್ಕಾಗಿ ಕವಿರಾಜ್ ಅವರು ಬರೆದಿರುವ “ಐ ವಾನ ಫಾಲೋ ಯು” ಎಂಬ ಹಾಡು ಬಿಡುಗಡೆಯಾಗಿದೆ. ಗುರುಕಿರಣ್ ಸಂಗೀತ ನೀಡಿರುವ ಈ ಹಾಡನ್ನು ಚೈತ್ರ ಹೆಚ್. ಜಿ ಹಾಡಿದ್ದಾರೆ.

ಗುರುರಂಜನ್ ಶೆಟ್ಟಿ(ನಟಿ ಅನುಷ್ಕಾ ಶೆಟ್ಟಿ ಸಹೋದರ), ನಾಗರಾಜ್, ಕೃಷ್ಣಪ್ಪ , ಗೌರೀಶ್ ಹಾಗೂ ಹಿರಿಯ ಪತ್ರಕರ್ತರಾದ ಕೆ.ಎಸ್ ವಾಸು, ಕೆ.ಎನ್.ನಾಗೇಶ್ ಕುಮಾರ್ ಮುಂತಾದ ಗಣ್ಯರು “ಐ ವಾನ ಫಾಲೋ ಯು” ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

ಈ ಹಾಡಿನ ಮೊದಲ ಪದ “ಐ ವಾನ ಫಾಲೋ” ಎಂಬುದನ್ನು ನಿರ್ದೇಶಕರು ಹೇಳಿದಾಗ “ಫಾಲೋ” ಎಂಬ ಪದದಿಂದಲೇ ಈ ಹಾಡು ಆರಂಭವಾಯಿತು. ವಿಶೇಷವೆಂದರೆ, ಈ ಹಾಡಿನಲ್ಲಿ ಬರುವ ಪದಗಳಿಗೆ ಎರಡು ಅರ್ಥಗಳಿದೆ. ಕವಿರಾಜ್ ಅದ್ಭುತವಾಗಿ ಹಾಡು ಬರೆದಿದ್ದಾರೆ. ಚೈತ್ರ ಸೊಗಸಾಗಿ ಹಾಡಿದ್ದಾರೆ ಎಂದು ಸಂಗೀತ ನಿರ್ದೇಶಕ ಗುರುಕಿರಣ್ ಹಾಡಿನ ಬಗ್ಗೆ ಮಾಹಿತಿ ನೀಡಿದರು.

ಈ ಹಾಡನ್ನು ಪಾಂಡಿಚೆರಿಯಲ್ಲಿ ಚಿತ್ರಿಸಲಾಗಿದೆ. ಗುರುಕಿರಣ್ ಅವರ ಸಂಗೀತ, ಕವಿರಾಜ್ ಅವರ ಸಾಹಿತ್ಯ, ಮೋಹನ್ ನೃತ್ಯ ನಿರ್ದೇಶನ ಹಾಗೂ ವಿನೋದ್ ಪ್ರಭಾಕರ್, ಲೇಖಾ ಚಂದ್ರ ಅವರ ಅಭಿನಯ ಎಲ್ಲವೂ ಸೇರಿ ಈ “ಫಾಲೋ ಯು” ಹಾಡು ಅದ್ಭುತವಾಗಿ ಹಾಗೂ ಅದ್ದೂರಿಯಾಗಿ ಮೂಡಿಬಂದಿದೆ. ಸದ್ಯದಲ್ಲೇ ಟ್ರೇಲರ್ ಬರಲಿದ್ದು, ಚಿತ್ರ ಅಕ್ಟೋಬರ್ ನಲ್ಲಿ ಬಿಡುಗಡೆಯಾಗಲಿದೆ ಎನ್ನುತ್ತಾರೆ ನಿರ್ದೇಶಕ ನೂತನ್ ಉಮೇಶ್.

ಚಿತ್ರದ ಮುಹೂರ್ತಕ್ಕೆ ಬಂದು ಹಾರೈಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ನೆನೆಯುತ್ತಾ ಮಾತು ಆರಂಭಿಸಿದ ನಾಯಕ ವಿನೋದ್ ಪ್ರಭಾಕರ್, ಈ “ಫೈಟರ್” ಅನ್ಯಾಯದ ವಿರುದ್ಧ ಹಾಗೂ ರೈತರ ಪರವಾಗಿ ಹೋರಾಡುವ “ಫೈಟರ್”. ನಿರ್ಮಾಪಕ ಸೋಮಶೇಖರ್ ಯಾವುದೇ ಕೊರತೆ ಬಾರದ ಹಾಗೆ ಚಿತ್ರ ನಿರ್ಮಾಣ ಮಾಡಿದ್ದಾರೆ. ನಿರ್ದೇಶಕರು ಅಷ್ಟೇ ಚೆನ್ನಾಗಿ ಕಥೆ ,ಚಿತ್ರಕಥೆ ಬರೆದಿದ್ದಾರೆ. ಇಂದು ಬಿಡುಗಡೆಯಾದ ಹಾಡಿನ ಚಿತ್ರೀಕರಣ ಮಾರ್ಚ್ ನಲ್ಲಿ ಪಾಂಡಿಚೆರಿಯಲ್ಲಿ ಚಿತ್ರೀಕರಣವಾಗಿದ್ದು, ಅಲ್ಲಿನ ಬಿಸಿಲು ತಡೆಯುವುದು ಕಷ್ಟ. ಎಲ್ಲರ ಶ್ರಮದಿಂದ ಈ ಹಾಡು ಚೆನ್ನಾಗಿ ಬಂದಿದೆ. ನಿರ್ಮಾಪಕ ಸೋಮಶೇಖರ್ ಅವರಿಗೆ ಈ ಚಿತ್ರ ದೊಡ್ಡ ಯಶಸ್ಸು ತಂದು ಕೊಡಲಿ. ಅವರಿಂದ ಸಾಕಷ್ಟು ಚಿತ್ರಗಳು ನಿರ್ಮಾಣವಾಗಲಿ ಎಂದು ಹಾರೈಸಿದರು.

ಇಡೀ ಚಿತ್ರತಂಡದ ಶ್ರಮದಿಂದ ” ಫೈಟರ್ ” ಚಿತ್ರ ಉತ್ತಮವಾಗಿ ಮೂಡಿಬಂದಿದೆ. ‌ಇಂದು ಹಾಡು ಬಿಡುಗಡೆಯಾಗಿದೆ. ಚಿತ್ರತಂಡಕ್ಕೆ ಹಾಗೂ ಆಗಮಿಸಿರುವ ಗಣ್ಯರಿಗೆ ನನ್ನ ಧನ್ಯವಾದ ಎನ್ನುತ್ತಾರೆ ನಿರ್ಮಾಪಕ ಸೋಮಶೇಖರ್ ಕಟ್ಟಿಗೇನಹಳ್ಳಿ.

ಹಾಡು ಬರೆದಿರುವ ಕವಿರಾಜ್, ಹಾಡಿರುವ ಚೈತ್ರ ಹಾಗೂ ನಾಯಕಿ ಲೇಖಾ ಚಂದ್ರ ” ಫಾಲೋ ಯು” ಹಾಡಿನ ಬಗ್ಗೆ ಮಾತನಾಡಿದರು.

Categories
ಸಿನಿ ಸುದ್ದಿ

ಲವ್ಲಿ ಡಾಟರ್ ಈಗ ಸೂರ್ಯಕಾಂತಿ! ಟಗರು ಪಲ್ಯ ಸಿನಿಮಾದ ಎರಡನೇ ಹಾಡು ರಿಲೀಸ್

ಡಾಲಿ ಧನಂಜಯ್ ನಟನೆಯಲ್ಲಿ ಮಾತ್ರವಲ್ಲ, ನಿರ್ಮಾಣದಲ್ಲೂ ಪ್ರಯೋಗಾತ್ಮಕ ಸಿನಿಮಾಗಳ ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ. ಹೊಸ ಪ್ರತಿಭೆಗಳಿಗೆ ಅವಕಾಶ ನೀಡಬೇಕು ಎನ್ನುವ ಉದ್ದೇಶದೊಂದಿಗೆ ಅವರು ‘ಡಾಲಿ ಪಿಕ್ಚರ್ಸ್​’ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಈ ಸಂಸ್ಥೆಯ ಮೂರನೇ ಪ್ರಯತ್ನವೇ ‘ಟಗರು ಪಲ್ಯ’. ಸೆಟ್ಟೇರಿದ ದಿನದಿಂದಲೂ ಭಾರೀ ಸದ್ದು ಮಾಡುತ್ತಿರುವ ಟಗರು ಪಲ್ಯ ಸಿನಿಮಾದ ಎರಡನೇ ಹಾಡು ಬಿಡುಗಡೆಯಾಗಿದೆ.

ಈಗಾಗಲೇ ರಿಲೀಸ್ ಆಗಿರುವ ಟೈಟಲ್ ಟ್ರ್ಯಾಕ್ ಗೆ ಅದ್ಭುತ ಪ್ರತಿಕ್ರಿಯೆ ಸಿಕ್ಕಿದೆ. ಇದೀಗ ಚಿತ್ರತಂಡ ಸೂರ್ಯಕಾಂತಿ ನಾನು ಎಂಬ ಮೆಲೋಡಿ ಹಾಡನ್ನು ಅನಾವರಣ ಮಾಡಿದೆ. ಸ್ವತಃ ಧನಂಜಯ್ ಅವರೇ ಕ್ಯಾಚಿ‌ ಮ್ಯಾಚಿ ಪದಗಳನ್ನು ಪೋಣಿಸಿ ಸಾಹಿತ್ಯ ಬರೆದಿದ್ದು, ಮಾಧುರಿ ಶೇಷಾದ್ರಿ ಹಾಡಿದ್ದು, ವಾಸುಕಿ ವೈಭವ್ ಟ್ಯೂನ್ ಹಾಕಿದ್ದಾರೆ. ಹಳ್ಳಿ ಸೊಗಡಿನ ಕಂಪು ಹೊಂದಿರುವ ಈ ಮೆಲೋಡಿ ಹಾಡಿಗೆ ಲವ್ಲಿ ಸ್ಟಾರ್ ಪ್ರೇಮ್ ಪುತ್ರಿ ಅಮೃತಾ ಪ್ರೇಮ್ ಹೆಜ್ಜೆ ಹಾಕಿದ್ದಾರೆ.

ಡಾಲಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಆಗುತ್ತಿರುವ ‘ಟಗರು ಪಲ್ಯ’ ಚಿತ್ರಕ್ಕೆ ಉಮೇಶ್ ಕೆ ಕೃಪ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಮೂಲಕ ಅನೇಕ ಹೊಸಬರಿಗೆ ಅವಕಾಶ ಸಿಕ್ಕಿದೆ. ಈ ಸಿನಿಮಾ ಮೂಲಕ ನಟಿಯಾಗಿ ನೆನಪಿರಲಿ ಪ್ರೇಮ್ ಮಗಳು ಅಮೃತಾ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ವಿಭಿನ್ನ ಪಾತ್ರಗಳನ್ನ ಆಯ್ಕೆ ಮಾಡಿಕೊಂಡು, ಕನ್ನಡ ಸಿನಿಮಾ ಪ್ರೇಕ್ಷಕರನ್ನು ರಂಜಿಸುತ್ತಿರುವ ನಾಗಭೂಷಣ್ ಟಗರು ಪಲ್ಯದ ನಾಯಕ.

‘ಟಗರು ಪಲ್ಯ’ ಸಿನಿಮಾದಲ್ಲಿ ದೊಡ್ಡ ತಾರಾಬಳಗವೇ ಇದ್ದು ಕೂತೂಹಲ ದುಪ್ಪಟ್ಟಾಗಿದೆ. ಹಿರಿಯ ಕಲಾವಿದರಾದ ರಂಗಾಯಣ ರಘು, ತಾರಾ, ಶರತ್ ಲೋಹಿತಾಶ್ವ ಸೇರಿದಂತೆ ದೊಡ್ಡ ಸ್ಟಾರ್ ಕಾಸ್ಟ್ ಚಿತ್ರಕ್ಕೆ ಸಾಥ್ ಕೊಟ್ಟಿದೆ. ಹಾಗೇ ವಾಸುಕಿ ವೈಭವ್ ಸಂಗೀತವಿದೆ ಇನ್ನು ಎಸ್.ಕೆ.ರಾವ್ ಕ್ಯಾಮೆರಾ ಕೈಚಳಕ ತೋರಿಸಿದ್ದಾರೆ. ಪ್ರಚಾರ ಕಾರ್ಯ ಆರಂಭಿಸಿರುವ ಟಗರು ಪಲ್ಯ ತಂಡ ಇದೇ ವರ್ಷದ ಕನ್ನಡ ರಾಜ್ಯೋತ್ಸವಕ್ಕೆ ಸಿನಿಮಾ ರಿಲೀಸ್ ಮಾಡಲು ಸಕಲ ಸಿದ್ಧತೆ ನಡೆಸುತ್ತಿದೆ.

Categories
ಸಿನಿ ಸುದ್ದಿ

ಪ್ರೇಮಗೀತೆ ಹಾಡಿದ ಸಪ್ಲೈಯರ್ ಶಂಕರ!

ತ್ರಿನೇತ್ರ ಫಿಲಂಸ್ ಬ್ಯಾನರ್ ನಲ್ಲಿ ಎಂ. ಚಂದ್ರಶೇಖರ್ ಹಾಗೂ ಎಂ.ನಾಗೇಂದ್ರ ಸಿಂಗ್ ನಿರ್ಮಿಸಿರುವ ಹಾಗೂ ರಂಜಿತ್ ನಿರ್ದೇಶನದಲ್ಲಿ ನಿಶ್ಚಿತ್ ಕರೋಡಿ ನಾಯಕನಾಗಿ ನಟಿಸಿರುವ “ಸಪ್ಲೈಯರ್ ಶಂಕರ” ಚಿತ್ರದ ಎರಡನೇ ಹಾಡು ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದೆ.

ಪ್ರಮೋದ್ ಮರವಂತೆ ಬರೆದಿರುವ “ಮಾಡೊ ಕೆಲಸವ ನೀನು ಮರೆಸಿದೆ” ಎಂಬ ಈ ಪ್ರೇಮಗೀತೆ ನಕುಲ್ ಅಭಯಂಕರ್ ಹಾಗೂ ಐಶ್ವರ್ಯ ರಂಗರಾಜನ್ ಅವರ ಕಂಠದಲ್ಲಿ ಸುಮಧುರವಾಗಿ ಮೂಡಿ ಬಂದಿದ್ದು, ಆರ್ ಬಿ ಭರತ್ ಸಂಗೀತ ನೀಡಿದ್ದಾರೆ. ಹಾಡು ಬಿಡುಗಡೆಯಾದ ತಕ್ಷಣದಿಂದಲೇ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.

“ಸಪ್ಲೈಯರ್ ಶಂಕರ” ಬಾರ್ ಸಪ್ಲೈಯರ್ ಒಬ್ಬನ ಸುತ್ತ ನಡೆಯುವ ಕಥೆಯಾಗಿದೆ. “ಗಂಟು ಮೂಟೆ” ಮತ್ತು “ಟಾಮ್ & ಜೆರ್ರಿ” ಚಿತ್ರಗಳ ಮೂಲಕ ಜನಪ್ರಿರಾಗಿರುವ ನಿಶ್ಚಿತ್ ಕರೋಡಿ ಈ ಚಿತ್ರದಲ್ಲಿ “ಸಪ್ಲೈಯರ್ ಶಂಕರ” ನಾಗಿ ಕಾಣಿಸಿಕೊಂಡಿದ್ದಾರೆ. ದೀಪಿಕಾ ಆರಾಧ್ಯ ಈ ಚಿತ್ರದ ನಾಯಕಿ. ಗೋಪಾಲಕೃಷ್ಣ ದೇಶಪಾಂಡೆ, ನವೀನ್ ಪಡೀಲ್, ಜ್ಯೋತಿ ರೈ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ನಿರ್ದೇಶಕ ರಂಜಿತ್ ಅವರೆ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ.
ಲವ್, ಕಾಮಿಡಿ, ತಾಯಿ-ಮಗನ ಸೆಂಟಿಮೆಂಟ್, ಬಾರ್ ಸಪ್ಲೇಯರ್ ಜೀವನದ ಜೊತೆಗೆ ಸಸ್ಪೆನ್ ಥ್ರಿಲ್ಲರ್ ಕಥಾಹಂದರವನ್ನು ಈ ಚಿತ್ರ ಒಳಗೊಂಡಿದೆ.
ಸತೀಶ್ ಕುಮಾರ್ ಛಾಯಾಗ್ರಹಣ , ಸತೀಶ್ ಚಂದ್ರಯ್ಯ ಅವರ ಸಂಕಲನ ಹಾಗೂ ಬಾಲಾಜಿ ಅವರ ಕಲಾ ನಿರ್ದೇಶನ “ಸಪ್ಲೇಯರ್ ಶಂಕರ” ಚಿತ್ರಕ್ಕಿದೆ.

ಈಗಾಗಲೇ ಚಿತ್ರೀಕರಣ ಮುಗಿಸಿರುವ “ಸಪ್ಲೈಯರ್ ಶಂಕರ”, ಪೋಸ್ಟ್ ಪ್ರೊಡಕ್ಷನ್ ವರ್ಕ್ ನಲ್ಲಿ ಬ್ಯುಸಿಯಾಗಿದ್ದಾನೆ. ಈ ವರ್ಷದ ಕೊನೆಗೆ ತೆರೆಯ ಮೇಲೆ ರಾರಾಜಿಸಲಿದ್ದಾನೆ.

Categories
ಸಿನಿ ಸುದ್ದಿ

ಸಾಯಿರ ಬಾನು, ಮೋಹನ್ ಕುಮಾರ್ ಬದುಕು ಬವಣೆ ! 13 ಎಂಬ ಹಿಂದೂ ಮುಸ್ಲಿಂ ಸತಿ ಪತಿಯ ಭಾವೈಕ್ಯತೆ ಚಿತ್ರ

ಭಾವೈಕ್ಯತೆಯ ಕಥೆಯ ಜೊತೆಗೆ 13 ಕೋಟಿ ಹಣದ ಸುತ್ತ ನಡೆಯುವ ಕುತೂಹಲಕರ ಕಥೆಯನ್ನು ಹೇಳುವ ಚಿತ್ರ 13 ಈ ವಾರ ರಾಜ್ಯಾದ್ಯಂತ ತೆರೆಕಾಣುತ್ತಿದೆ. ಈ ಚಿತ್ರದಲ್ಲಿ ಹಿರಿಯನಟ ರಾಘವೇದ್ರ ರಾಜ್‌ಕುಮಾರ್ ಅವರು ಗುಜರಿ ಅಂಗಡಿ ಮಾಲೀಕ ಮೋಹನ್ ಕುಮಾರ್ ಪಾತ್ರದಲ್ಲಿ ಹಾಗೂ ಹಿರಿಯ ಕಲಾವಿದೆ ಶೃತಿ ಅವರು ಸಾಯಿರಾಭಾನು ಎಂಬ ಮುಸ್ಲಿಂ ಮಹಿಳೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಮೋದ್ ಶೆಟ್ಟಿ ಇಲ್ಲಿ ‌ಪೋಲೀಸ್ ಪಾತ್ರ ನಿರ್ವಹಿಸಿದ್ದಾರೆ.

ಪಲ್ಲಕ್ಕಿ ಖ್ಯಾತಿಯ ನರೇಂದ್ರಬಾಬು ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ನಾನು ಹಿಂದೂ ನೀನು ಮುಸ್ಲಿಂ ಎನ್ನುವ ಭೇದ ಭಾವ ಇಲ್ಲದೆ ನಾಯಕ, ನಾಯಕಿ ಇಬ್ಬರೂ ಸತಿ ಪತಿಗಳಾಗಿ ಅನ್ಯೋನ್ಯ ಜೀವನ ನಡೆಸುತ್ತಿರುವಾಗ ನಡೆಯುವ ಒಂದು ಘಟನೆ ಇವರಿಬ್ಬರ ಜೀವನದಲ್ಲಿ ಹಲವಾರು ತಿರುವುಗಳಿಗೆ ಕಾರಣವಾಗುತ್ತದೆ.

ಅದು ಕೊನೆಗೆ ಅವರನ್ನು ಯಾವ ಹಂತಕ್ಕೆ ಕೊಂಡೊಯ್ಯುತ್ತದೆ ಎಂದು ಹೇಳುವುದೇ ಚಿತ್ರದ ಕಥೆ. ಹಾಡುಗಳು, ಟ್ರೈಲರ್ ಈಗಾಗಲೇ ವೈರಲ್ ಅಗಿದ್ದು ನೋಡಿದವರೆಲ್ಲ ಇಷ್ಟಪಟ್ಟಿದ್ದಾರೆ.

ಐಟಂ ಸಾಂಗ್, ಡ್ರಿಂಕ್ಸ್ ಸೀನ್ ಇರೋದ್ರಿಂದ ಯಾವುದೇ ಕಟ್ ಇಲ್ಲದೆ ಚಿತ್ರಕ್ಕೆ ಯು/ಎ ಸಿಕ್ಕಿದೆ.
ಸಂಗೀತ ನಿರ್ದೇಶಕ ಶೋಗನ್‌ ಬಾಬು ಅವರು ಮೂರು ಸುಂದರವಾದ ಹಾಡುಗಳನ್ನು ಮಾಡಿ ಕೊಟ್ಟಿದ್ದಾರೆ. ಅಜಯ್ ಮಂಜು ಅವರ ಕ್ಯಾಮೆರಾ ವರ್ಕ್, ಗಿರೀಶ್ ಕುಮಾರ್ ಅವರ ಸಂಕಲನ, ಮದನ್ ಹರಿಣಿ, ಸಶಿಕುಮಾರ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದ್ದು, ಜಯಸಿಂಹ ಸಂಭಾಷಣೆ ಇದೆ.

ಅನಿಲ್ ಕುಮಾರ್ ಅರ್ಪಿಸುವ ಈ ಚಿತ್ರವನ್ನು, ಯುವಿ ಪ್ರೊಡಕ್ಷನ್ಸ್ ಮೂಲಕ ಕೆ.ಸಂಪತ್ ಕುಮಾರ್, ಮಂಜುನಾಥ್ ಗೌಡ, ಹೆಚ್.ಎಸ್. ಮಂಜುನಾಥ್ ಹಾಗೂ ಸಿ.ಕೇಶವಮೂರ್ತಿ ಸೇರಿ ನಿರ್ಮಾಣ ಮಾಡಿದ್ದಾರೆ.

ಕಾಮಿಡಿ ಕಿಲಾಡಿಗಳು ಲೋಕೇಶ್, ದಿಲೀಪ್ ಪೈ, ವಿನಯ ಸೂರ್ಯ ಮುಂತಾದವರು ಚಿತ್ರದ ಉಳಿದ ಪಾತ್ರಗಳಲ್ಲಿ ನಟಿಸಿದ್ದಾರೆ. ಜಾಕ್ ಮಂಜು ಅವರ ಶಾಲಿನಿ ಎಂಟರ್ ಪ್ರೈಸಸ್ ಚಿತ್ರದ ವಿತರಣೆಯ ಜವಾಬ್ದಾರಿ ಹೊತ್ತಿದೆ.

Categories
ಸಿನಿ ಸುದ್ದಿ

ರೀಲ್ ಅಲ್ಲ, ರಿಯಲ್ ನಲ್ಲೂ ಹೀರೋನೇ! ರಕ್ತಾಕ್ಷ ನಾಯಕನ ಜನಸೇವೆ ಇದು

ರೀಲ್ ಅಲ್ಲ, ರಿಯಲ್ ನಲ್ಲೂ ಇವರು ಹೀರೋನೇ. ಹೌದು, ರಕ್ತಾಕ್ಷ ಸಿನಿಮಾ ನಾಯಕ ರೋಹಿತ್ ಅವರು, ಉತ್ತರ ಕರ್ನಾಟಕ ಭಾಗದ ಅನಾಥಶ್ರಮಗಳಿಗೆ ಹಾಗೂ ಸಮಾಜದ ವಿವಿಧ ವರ್ಗಗಳಿಗೆ ಸಹಾಯ ಹಸ್ತ ಚಾಚಿದ್ದಾರೆ.

ರಕ್ತಾಕ್ಷ ಸಿನಿಮಾ ಮೂಲಕ ನಾಯಕನಾಗಿ ಹಾಗೂ ನಿರ್ಮಾಪಕನಾಗಿ ಮೊದಲ ಹೆಜ್ಜೆ ಇಟ್ಟಿರುವ ರೋಹಿತ್ ಸಾಮಾಜಿಕ ಕೆಲಸಕ್ಕಿಳಿದ್ದಾರೆ. ಆಗಸ್ಟ್ 15ರಂದು ರೋಹಿತ್ ತಮ್ಮ ಹುಟ್ಟುಹಬ್ಬವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಿಕೊಂಡಿದ್ದಾರೆ. ಉತ್ತರ ಕರ್ನಾಟಕದ ಭಾಗದವರೇ ಆದ ರೋಹಿತ್ ಮಸ್ಕಿ, ಲಿಂಗಸಗೂರು, ಸಿಂಧನೂರು ಜನತೆಯೊಂದಿಗೆ ಜನ್ಮದಿನ ಆಚರಿಸಿಕೊಳ್ಳುವುದರ ಜೊತೆಗೆ ಅಲ್ಲಿನ ವಿವಿಧ ವರ್ಗದ ಜನರಿಗೆ ಕೈಲಾದ ಸಹಾಯ ಮಾಡುವುದರ ಜೊತೆಗೆ ಅದೇ ಭಾಗದ ಅನಾಥಶ್ರಮಗಳಿಗೆ ಆಹಾರ ಧಾನ್ಯ ಹಾಗೂ ಪುಸ್ತಕಗಳನ್ನು ವಿತರಣೆ ಮಾಡಿದ್ದಾರೆ.

ಅಂದಹಾಗೆ, ರೋಹಿತ್ ಇದೇ‌ ಮೊದಲ ಬಾರಿಗೆ ಸಾಮಾಜಿಕ ಸೇವೆಗಿಳಿದಿಲ್ಲ. ಹೀರೋ ಆಗಿ ಹೊಸ ಪಯಣ ಆರಂಭಿಸುವುದಕ್ಕೂ ಮುನ್ನ ಅಂದರೆ 2014ರಿಂದಲೂ ಜನೋಪಕಾರಿ ಕೆಲಸ ಮಾಡುತ್ತಿದ್ದು ಅಕ್ಷಯಪಾತ್ರಾ, ಅದಮ್ಯಚೇತನ, ಯೂನಿಸೆಫ್ ಗೆ ಡೋನರ್ ಕೂಡ. ಹೀರೋ ಆದ ಮೇಲೆಯೂ ಜನೋಪಕಾರಿ ಕೆಲಸಗಳನ್ನು ಮುಂದುರೆಸಿಕೊಂಡು ಬರುತ್ತಿದ್ದಾರೆ.

ಉತ್ತರ ಕರ್ನಾಟಕದ ಮಸ್ಕಿ ಊರಿನಲ್ಲಿರುವ ಅನಾಥಶ್ರಮಕ್ಕೆ ಅಪ್ಪು ಅವರ ಹೆಸರಿನಲ್ಲಿ ಕಳೆದ ಒಂದು ವರ್ಷದಿಂದ ಪ್ರತಿ ತಿಂಗಳು ಆಹಾರ ಧಾನ್ಯ ಹಾಗೂ ಪುಸ್ತಕಗಳನ್ನು ವಿತರಣೆ ಮಾಡುತ್ತಿದ್ದಾರೆ. ಇದೀಗ ತಮ್ಮದೇ ಸಾಯಿ ಪ್ರೊಡಕ್ಷನ್ ನಡಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಸಾಮಾಜಿಕ ಕೆಲಸ ಮುಂದುವರೆಸಿಕೊಂಡು ಹೋಗುತ್ತಿದ್ದಾರೆ.

ರೋಹಿತ್‌ ಮಾಡೆಲ್‌ ಆಗಿ ಗುರುತಿಸಿಕೊಂಡವರು. ಮೂಲತಃ ಉತ್ತರ ಕರ್ನಾಟಕದ ರಾಯಚೂರು ಜಿಲ್ಲೆಯ ಪುಟ್ಟ ಹಳ್ಳಿಯ ರೋಹಿತ್, ಸುಮಾರು 6 ವರ್ಷಗಳ ಕಾಲ ಮಾಡೆಲಿಂಗ್ ಸಾಮ್ರಾಜ್ಯದಲ್ಲಿ ಮಿಂಚಿದವರು. ಎರಡು ವರ್ಷಗಳ ರಂಗಭೂಮಿ ಅನುಭವ ಪಡೆದಿರುವ ಅವರು ರಕ್ತಾಕ್ಷ ಸಿನಿಮಾ ಮೂಲಕ ನಾಯಕನಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ಒಂದಷ್ಟು ಪ್ರತಿಷ್ಠಿತ ಬ್ರ್ಯಾಂಡ್ ಪ್ರತಿನಿಧಿಸಿರುವ ರೋಹಿತ್‌ಗೆ, ರಿಲೀಸ್ ಗೆ ರೆಡಿ ಇರುವ ಇನ್ನೊಂದು ದ್ವಿಭಾಷಿಯ ಸಿನಿಮಾದಲ್ಲಿ ಖಳ ನಾಯಕನಾಗಿ ಅಭಿನಯಿಸಿದ ಅನುಭವಿದೆ. ನಾಯಕನಾಗಿ ಬೆಳ್ಳಿ ಪರದೆಯಲ್ಲಿ ರಾರಾಜಿಸಬೇಕೆಂಬ ಹೊಸ ಉತ್ಸಹ ಹಾಗೂ ಹುಮ್ಮಸ್ಸಿನೊಂದಿಗೆ ತಮ್ಮದೇ ಸಾಯಿ ಪ್ರೊಡಕ್ಷನ್ ಹೌಸ್ ಅಡಿ ರಕ್ತಾಕ್ಷ ಚಿತ್ರ ನಿರ್ಮಾಣ ಮಾಡಿ ನಟಿಸುತ್ತಿದ್ದಾರೆ.

ವಾಸುದೇವ್ ಎಸ್ ಎನ್ ರಕ್ತಾಕ್ಷ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ರೋಹಿತ್ ಜೊತೆ ಒಂದಷ್ಟು ಉತ್ಸಾಹಿ ಪ್ರತಿಭೆಗಳು ಸೇರಿ ‘ರಕ್ತಾಕ್ಷ’ ಸಿನಿಮಾಗೆ ದುಡಿದಿದ್ದಾರೆ. ಆದರ್ಶ್ ಶಿರಾಸ್, ಆರ್ ಜೆ ಛಾಯಾಗ್ರಹಣ ಮಾಡಿದ್ದು , ಚಿತ್ರಕ್ಕೆ ಸುಜಿತ್ ವೆಂಕಟರಾಮಯ್ಯ ಸಾಹಿತ್ಯ, ಧೀರೇಂದ್ರ ಡಾಸ್ ಸಂಗೀತ ನೀಡಿದ್ದಾರೆ.

ರೂಪ ರಾಯಪ್ಪ, ಅರ್ಚನಾ ಕೊಟ್ಟಿಗೆ, ರಚನಾ ದಶರತ್, ಪ್ರಭು, ವಿಶ್ವ, ನಾರಾಯಣ, ಭದ್ರಿ, ಶಿವಮೊಗ್ಗ ರಾಮಣ್ಣ, ವಿಲಾಸ್, ಗುರುದೇವ ನಾಗರಾಜ, ಬಸವರಾಜ ಆದಾಪುರ ನಟಿಸಿದ್ದಾರೆ. ಖಳನಾಯಕ ಪಾತ್ರದಲ್ಲಿ ನಟ ಪ್ರಮೋದಶೆಟ್ಟಿ ಅಭಿನಯಿಸಿದ್ದಾರೆ.

Categories
ಸಿನಿ ಸುದ್ದಿ

ಜಲಪಾತದಿಂದ ಇಳಿದು ಬಂದ ಹಾಡಿದು! ಮಲೆನಾಡ ಉತ್ಸವದಲ್ಲಿ ಜಯಮಾಲ ರಿಲೀಸ್ ಮಾಡಿದ್ರು ಸಾಂಗ್

ರವೀಂದ್ರ ತುಂಬರಮನೆ ನಿರ್ಮಿಸಿ , ರಮೇಶ್ ಬೇಗಾರ್ ಶೃಂಗೇರಿ ರಚಿಸಿ ನಿರ್ದೇಶಿಸಿರುವ ಜಲಪಾತ ಚಿತ್ರದ 2 ನೇ ಹಾಡು ಇದೀಗ ಎ – 2 ಮ್ಯೂಸಿಕ್ ವಾಹಿನಿ ಮೂಲಕ ಬಿಡುಗಡೆಯಾಗಿದೆ. ಇತ್ತೀಚೆಗೆ ಚಿತ್ರ ತಂಡ ಆಯೋಜಿಸಿದ್ದ ‘ಜಲಪಾತ ಮಲೆನಾಡು ಉತ್ಸವ’ ಎಂಬ ಸಾಂಸ್ಕೃತಿಕ ಮೇಳದಲ್ಲಿ ನಟಿ ಜಯಮಾಲ ಅವರು ” ಎಲ್ಲಿ ಹೋದನೇ ಸಖಿ ” ಎಂಬ ಹಾಡನ್ನು ಬಿಡುಗಡೆ ಮಾಡಿದ್ದಾರೆ.

ಈ ಸಂದರ್ಭ ಮಾತಾಡಿದ ಜಯಮಾಲ, ತನ್ನ ಮಲೆನಾಡು ಮೂಲಕ ಚಿಕ್ಕಮಗಳೂರನ್ನು ನೆನಪಿಸಿಕೊಂಡು ಚಿತ್ರದ ನಾಯಕನಟಿ ನಾಗಶ್ರೀಗೆ ಯಶಸ್ಸು ಸಿಗಲಿ ಎಂದು ಶುಭ ಹಾರೈಸಿದರು.

ಇಡೀ ಸಿನಿಮಾದ ಆಶಯವೇ ವಿನಾಶದಂಚಿಗೆ ಸರಿದಿರುವ ಪರಿಸರದ ಕುರಿತು ಕಾಳಜಿ ಮೂಡಿಸುವಂಥದ್ದು. ವ್ಯಾವಹಾರಿಕ ಉದ್ದೇಶಗಳಿಲ್ಲದೇ ನಿಜವಾದ ಪ್ರಕೃತಿ ಪ್ರೀತಿಯಿಂದ ನಿರ್ಮಿಸಿದ ಈ ಚಿತ್ರ ಖಂಡಿತಾ ಜನರಮನಸ್ಸು ಗೆಲ್ಲಲಿದೆ ಎಂದರು ಜಯಮಾಲ.

ನಿರ್ಮಾಪಕ ಟಿ ಸಿ ರವೀಂದ್ರ ತುಂಬರಮನೆ ಮಾತನಾಡಿ, ನಾವು ಸಿನಿಮಾದಲ್ಲಿ ಹೆಚ್ಚು ಗ್ರಾಮೀಣ ಪ್ರತಿಭೆಗಳನ್ನೇ ಬಳಸಿಕೊಂಡು ಅವರಿಗೊಂದು ವೇದಿಕೆ ಒದಗಿಸಿದ್ದೇವೆ. ಬಹಳ ಅರ್ಥಪೂರ್ಣವಾದ ಈ ಲವ್ ಸಾಂಗ್ ಅನ್ನು ವನಿತಾ ವೆಂಕಟೇಶ್ ಎಂಬ ಗೃಹಿಣಿ ಬರೆದಿದ್ದಾರೆ ಎಂದರು ನಿರ್ದೇಶಕ ರಮೇಶ್ ಬೇಗಾರ್. ಸಂಗೀತ ನಿರ್ದೇಶಕಿ ಸಾದ್ವಿನಿ ಕೊಪ್ಪ ಕೂಡ ಹಾಡುಗಳ ಬಗ್ಗೆ ಮಾತನಾಡಿದರು.

ಎಲ್ಲಿ ಹೋದನೇ ಸಖೀ ಹಾಡನ್ನು ವನಿತಾ ವೆಂಕಟೇಶ್ ಬರೆದಿದ್ದಾರೆ. ಶ್ರೀನಿಧಿ ಶಾಸ್ತ್ರೀ ಇವರೊಂದಿಗೆ ಡ್ಯುಯೆಟ್ ಹಾಡಿದ್ದಾರೆ. ಚಿತ್ರ ಸೆಪ್ಟೆಂಬರ್ 29 ಕ್ಕೆ ತೆರೆ ಕಾಣಲಿದೆ.

error: Content is protected !!