Categories
ಸಿನಿ ಸುದ್ದಿ

ಅರ್ಧ ಶತಕ ಬಾರಿಸಿದ ಮುಸ್ತಫಾ: ಸಂಭ್ರಮದಲ್ಲಿ ಡೇರ್ ಡೆವಿಲ್ ಟೀಮ್

ಇಂದು ಕನ್ನಡ ಚಿತ್ರಗಳ ಪಾಲಿಗೆ ಸಂಭ್ರಮವೆಂದರೆ ಬರೀ ವಾರ, ತಿಂಗಳ ಸುತ್ತ ಬಂಧಿಯಾಗುವ ಕಾಲಮಾನ. ಇಂಥ ಹೊತ್ತಿನಲ್ಲಿ ಸಿನಿಮಾವೊಂದು ಯಶಸ್ವಿಯಾಗಿ 50 ದಿನ ಪೂರೈಸಿದರೆ ಬರೀ ಚಿತ್ರತಂಡ ಮಾತ್ರವಲ್ಲ ಒಂದಿಡಿ ಚಿತ್ರರಂಗವೇ ಖುಷಿಪಡುವ ಸಂಗತಿ. ಅಂತಹ ಯಶಸ್ಸಿಗೆ ಪೂರ್ಣಚಂದ್ರ ತೇಜಸ್ವಿಯವರ ಕಥೆಯಾಧಾರಿತ ಡೇರ್ ಡೆವಿಲ್ ಮುಸ್ತಫಾ ಸಿನಿಮಾ ಸಾಕ್ಷಿಯಾಗಿದೆ. ಭರ್ಜರಿಯಾಗಿ ಐವತ್ತು ದಿನ ಪೂರೈಸಿ ಅಮೇಜಾನ್ ಪ್ರೈಮ್ ಒಟಿಟಿಯಲ್ಲಿಯೂ ಭರಪೂರ ಮೆಚ್ಚುಗೆ ಪಡೆಯುತ್ತಿರುವ ಖುಷಿ ಕ್ಷಣಗಳನ್ನು ಚಿತ್ರತಂಡ ಸೆಲೆಬ್ರೆಟ್ ಮಾಡಿದೆ.

ಬೆಂಗಳೂರಿನ ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ನಡೆದ ಐವತ್ತು ದಿನದ ಸಂಭ್ರಮಾಚರಣೆಯಲ್ಲಿ ಇಡೀ ತಂಡಕ್ಕೆ ಗೆಲುವಿನ ಪಾರಿತೋಷಕ ನೀಡಿ ಗೌರವಿಸಲಾಯಿತು. ಜೊತೆಗೆ ಬಿರಿಯಾನಿ ಪುಳಿಯೊಗ್ಗರೆ ಪಾರ್ಟಿ ಮಾಡಿ ಇಡೀ ಡೇರ್ ಡೆವಿಲ್ ಮುಸ್ತಾಫ್ ಬಳಗ ಖುಷಿಪಟ್ಟಿತು.

ಡೇರ್ ಡೆವಿಲ್ ಮುಸ್ತಫಾ ಸಿನಿಮಾವನ್ನು ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ಪ್ರೆಸೆಂಟ್ ಮಾಡಿರುವ ಧನಂಜಯ್ ಮಾತನಾಡಿ, ನಾನು ಡೇರ್ ಡೆವಿಲ್ ಮುಸ್ತಫಾ ಸಿನಿಮಾದ ಭಾಗವಾಗಿರುವುದು ನನಗೆ ಖುಷಿ. ಶಶಾಂಕ್ ಕಾಲೇಜ್ ನಲ್ಲಿ ನನಗೆ ಜೂನಿಯರ್. ಅಲ್ಲಿಂದನೂ ನೋಡ್ತಾ ಇದ್ದೆ. ತುಂಬಾ ಜನ ನಿರ್ದೇಶಕರು ಆಗಬೇಕು ಅಂತಾ ಬರುತ್ತಾರೆ. ನಾನು ಕಥೆ ಮಾಡಿದ್ದೇನೆ ಇನ್ವೆಸ್ಟ್ ಮಾಡಿ ಅಂತಾರೇ. ನಾನು ಅವರಿಗೆ ಶಶಾಂಕ್ ಎಕ್ಸಂಪಲ್ ಕೊಟ್ಟು ಕಳಿಸುತ್ತೇನೆ.‌‌ ಕೆಲಸ ಮಾಡುತ್ತಾ ಮಾಡುತ್ತಾ ಕಲಿಯುವುದು.

ಸಿದಾ ಬಂದು ಕಥೆ ಮಾಡಿದ್ದೇನೆ ಕೋಟ್ಯಾಂತರ ರೂಪಾಯಿ ದುಡ್ಡು ಹಾಕಿ ಎಂದರೆ ಕಷ್ಟವಾಗುತ್ತದೆ. ಡೇರ್ ಡೆವಿಲ್ ಮುಸ್ತಫಾ ಮಾಸ್ ಸಿನಿಮಾ ಅಂತಾನೇ ಕರೆಯುತ್ತೇನೆ. ಥಿಯೇಟರ್ ನಲ್ಲಿ‌ ಕುಳಿತು ನೋಡಿ ಸೆಲಬ್ರೆಟ್ ಮಾಡುವ ಸಿನಿಮಾ.
ಹಳೆ ಬೇರು ಹೊಸ ಚಿಗರು ಕೂಡಿರಲು ಮರ ಸೊಬಗು ಎನ್ನುವಂತೆ ಹಿರಿಯರು ಹಾಗೂ ಕಿರಿಯರು ಎಲ್ಲರೂ ಇಟ್ಟುಕೊಂಡು ಸಿನಿಮಾವನ್ನು ಅದ್ಭುತವಾಗಿ ಕಟ್ಟಿಕೊಡಲಾಗಿದೆ ಎಂದರು.

ಒಳ್ಳೆಯ ಸಿನಿಮಾಗಳು ಬಂದಾಗ ಜನರು ಖಂಡಿತವಾಗಿಯೂ ಬೆಂಬಲ ನೀಡುತ್ತಾರೆ ಎಂಬ ನಂಬಿಕೆ ಗಾಂಧಿನಗರದಲ್ಲಿದೆ. ಅದು ‘ಡೇರ್ಡೆವಿಲ್ ಮುಸ್ತಫಾ’ ವಿಚಾರದಲ್ಲಿ ನಿಜವಾಗಿದೆ. ಇದು ಪೂರ್ಣಚಂದ್ರ ತೇಜಸ್ವಿ ಅಭಿಮಾನಿಗಳೇ ನಿರ್ಮಾಣ ಮಾಡಿರುವ ಸಿನಿಮಾ. ಅನಂತ ಶಾಂತಯ್ಯ ಜೊತೆಗೂಡಿ ಚಿತ್ರಕಥೆ ಬರೆದಿರುವ ಶಶಾಂಕ್ ಸೋಗಾಲ್ ಅವರು ಈ ಸಿನಿಮಾ ನಿರ್ದೇಶನ ಮಾಡಿದ್ದಾರೆ.

ರಾಹುಲ್‌ ರಾಯ್‌ ಛಾಯಾಗ್ರಹಣ, ಶಶಾಂಕ್ ಸೋಗಾಲ್, ಸಂಪತ್ ಸಿರಿಮನೆ, ಡಾಲಿ ಧನಂಜಯ್ ಸಾಹಿತ್ಯದ ಹಾಡುಗಳಿಗೆ ನವನೀತ್‌ ಶ್ಯಾಮ್‌ ಸಂಗೀತವಿದೆ. ಶಿಶಿರ್‌ ಬೈಕಾಡಿ, ಆದಿತ್ಯ ಅಶ್ರೀ, ಅಭಯ್‌, ಸುಪ್ರೀತ್‌ ಭಾರದ್ವಾಜ್‌, ಆಶಿತ್, ಶ್ರೀವತ್ಸ, ಪ್ರೇರಣಾ, ಎಂ.ಎಸ್‌. ಉಮೇಶ್‌, ಮಂಡ್ಯ ರಮೇಶ್‌, ಮೈಸೂರ್‌ ಆನಂದ್‌, ಸುಂದರ್‌ ವೀಣಾ, ನಾಗಭೂಷಣ್‌, ಪೂರ್ಣಚಂದ್ರ ಮೈಸೂರು ಸೇರಿ ಅನೇಕ ಕಲಾವಿದರು ಸಿನಿಮಾದ ಭಾಗವಾಗಿದ್ದಾರೆ. ಸಿನಿಮಾಮರ ಬ್ಯಾನರ್‌ನಲ್ಲಿ ಡೇರ್ ಡೆವಿಲ್ ಮುಸ್ತಾಫಾ ನಿರ್ಮಾಣವಾಗಿದೆ.

Categories
ಸಿನಿ ಸುದ್ದಿ

ಮಲೆನಾಡ ಹುಡುಗನ ಕಥೆ ದೆವ್ವದ ಜೊತೆ!! ನಮಸ್ತೆ ಗೋಸ್ಟ್ ಸಿನಿಮಾದಲ್ಲಿ ಶಿವಮೊಗ್ಗ ಹರೀಶ್

ಮಲೆನಾಡಿನ ಹೊಸ ಪ್ರತಿಭೆ ಹರೀಶ್ ಬಣ್ಣದ ಲೋಕಕ್ಕೆ ಎಂಟ್ರಿಕೊಟ್ಟಿದ್ದಾನೆ. ಕನ್ನಡದಲ್ಲಿ ಈಗಾಗಲೇ ಸಾಕಷ್ಟು ದೆವ್ವದ ಕಥೆಗಳು ಬಂದಿವೆ. ಆ ಸಾಲಿಗೆ ನಮಸ್ತೆ ಗೋಸ್ಟ್ ಸಿನಿಮಾ ಕೂಡ ಸೇರಿದೆ. ಹೆಸರೇ ಹೇಳುವಂತೆ ಇದೊಂದು ಹಾರರ್ ಕಥೆ. ಇಲ್ಕಿ ದೆವ್ವವುಂಟು. ಆ ದೆವ್ವದ ಜೊತೆ ಶಿವಮೊಗ್ಗದ ಪ್ರತಿಭೆ ಹರೀಶ್ ಕಾಣಿಸಿಕೊಂಡಿದ್ದಾರೆ. ಈ ಚಿತ್ರ ಜುಲೈ 14ರಂದು ಬಿಡುಗಡೆಯಾಗುತ್ತಿದೆ

ಯುವ ನಟ ಶಿವಮೊಗ್ಗ ಹರೀಶ್‌ ಈಗ ಮತ್ತೊಂದು ಅವತಾರದೊಂದಿಗೆ ಪ್ರೇಕ್ಷಕರ ಮುಂದೆ ಬರಲು ರೆಡಿ ಆಗಿದ್ದಾರೆ. ಇಷ್ಟು ದಿನ ರಂಗಭೂಮಿ ಮತ್ತು ಕಿರುತೆರೆ ಎರಡರಲ್ಲೂ ಅಭಿನಯಿಸಿ, ಪ್ರೇಕ್ಷಕರ ಪ್ರೀತಿಗೆ ಪಾತ್ರರಾಗಿದ್ದ ಹರೀಶ್‌, ಈಗ ಮೊಟ್ಟ ಮೊದಲ ಬಾರಿಗೆ ಬೆಳ್ಳಿ ಪರದೆ ಮೇಲೆ ಕಾಣಿಸುತ್ತಿದ್ದಾರೆ. ಅಂದರೆ ಸಿನಿಮಾ ನಟನಾಗಿ ನಿಮ್ಮ ಮುಂದೆ ಕಾಣಿಸಿಕೊಳ್ಳುತ್ತಿದ್ದಾರೆ. ಅವರು ಪ್ರಮುಖ ಪಾತ್ರವೊಂದರಲ್ಲಿ ಅಭಿನಯಿಸಿರುವ ʼನಮಸ್ತೆ ಗೋಸ್ಟ್‌ʼ ಹೆಸರಿನ ಚಿತ್ರ ಜುಲೈ 14 ರಂದು ರಾಜ್ಯಾಧ್ಯಂತ ತೆರೆ ಕಾಣುತ್ತಿದೆ. ಈ ಚಿತ್ರ ಅಂದು ಶಿವಮೊಗ್ಗದ ಸಿಟಿ ಸೆಂಟರ್‌ ನಲ್ಲಿರುವ ಭಾರತ್‌ ಸಿನಿಮಾಸ್‌ ನಲ್ಲಿ ಬಿಡುಗಡೆ ಆಗುತ್ತಿದೆ ಎಂಬುದು ವಿಶೇಷ.

ಮೂಲತಃ ಶಿವಮೊಗ್ಗದವರೇ ಆದ ಶಿವಮೊಗ್ಗ ಹರೀಶ್‌ , ಈಗಾಗಲೇ ರಂಗಭೂಮಿ ಮೂಲಕ ಒಂದಷ್ಟು ಹೆಸರು ಮಾಡಿದವರು. ಅದೇ ಅನುಭವದೊಂದಿಗೆ ಈಗ ಕಿರುತೆರೆಯಲ್ಲೂ ಸಾಕಷ್ಟು ಅವಕಾಶ ಗಿಟ್ಟಿಸಿಕೊಂಡು , ಪ್ರೇಕ್ಷಕರ ಮನ ಗೆದ್ದಿದ್ದಾರೆ. ಅಲ್ಲಿಂದಲೇ ಈಗ ಬಡ್ತಿ ಪಡೆದು ಹಿರಿ ತೆರೆಯಲ್ಲೂ ತಮ್ಮ ನಟನಾ ಪ್ರತಿಭೆ ಯನ್ನು ಅಗ್ನಿ ಪರೀಕ್ಷಗೆ ಒಡ್ಡುತ್ತಿದ್ದಾರೆ.

ನಾಟಕ, ಸೀರಿಯಲ್‌ ನಲ್ಲಿ ತಮ್ಮ ನಟನೆಯನ್ನು ನೋಡಿ ಮೆಚ್ಚಿಕೊಂಡ ಪ್ರೇಕ್ಷಕರು, ಸಿನಿಮಾದಲ್ಲಿನ ಅಭಿನಯಕ್ಕೂ ಮೆಚ್ಚುಗೆ ಹೇಳಬಹುದು ಎನ್ನುವ ನಿರೀಕ್ಷೆ ಅವರದು. ಅದರಲ್ಲೂ ತಾವು ಅಭಿನಯಿಸಿದ ಮೊದಲ ಸಿನಿಮಾ ಸಿಟಿ ಸೆಂಟರ್‌ ನ ಭಾರತ್‌ ಸಿನಿಮಾಸ್‌ ನಲ್ಲಿ ತೆರೆ ಕಾಣುತ್ತಿರುವುದಕ್ಕೆ ಶಿವಮೊಗ್ಗ ಹರೀಶ್‌ ಫುಲ್‌ ಎಕ್ಸೈಟ್‌ ಆಗಿದ್ದಾರೆ.

ʼ ಕಳೆದ ಒಂದು ವಾರದಿಂದ ನಿದ್ದೆ ಇಲ್ಲದೆ ಪ್ರಚಾರದಲ್ಲಿ ತೊಡಗಿದ್ದೇನೆ. ನನಗಿದು ಎರಡನೇ ಸಿನಿಮಾ. ಆದ್ರೆ ಫಸ್ಟ್‌ ಟೈಮ್‌ ಒಂದು ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚುವ ಅವಕಾಶ ಈ ಸಿನಿಮಾದ ಮೂಲಕ ಸಿಕ್ಕಿದೆ. ಕಲಾವಿದರು ಅಂತೆನಿಸಿಕೊಂಡ ಪ್ರತಿಯೊಬ್ಬರಿಗೂ ಒಂದು ಪ್ರಮುಖ ಪಾತ್ರದಲ್ಲಿ ಅಭಿನಯಿಸಬೇಕು, ಪ್ರೇಕ್ಷಕರಿಂದ ಒಂದಷ್ಟು ಒಳ್ಳೆಯ ಮಾತುಗಳನ್ನು ಕೇಳಬೇಕೆನ್ನುವ ತುಡಿತ ಇದ್ದೇ ಇರುತ್ತದೆ.

ಅಂತಹ ತುಡಿತ ನನ್ನಲ್ಲೂ ಇದೆ. ಅದೇ ಕಾರಣದಿಂದ ಪ್ರೇಕ್ಷಕರು ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಲಿ ಎನ್ನುವ ತವಕದಲ್ಲಿದ್ದೇನೆ. ನನ್ನಿಂದ ಆದಷ್ಟು ಪ್ರಚಾರ ನಡೆಸಿದ್ದೇನೆ. ಗೆಳೆಯರು, ಹಿತೈಷಿಗಳು, ಪರಿಚಯಸ್ಥರಿಗೆಲ್ಲ ನಾನೇ ಭೇಟಿ ಮಾಡಿ ಸಿನಿಮಾ ನೋಡಿ ಪ್ರೋತ್ಸಾಹಿಸಿ ಎಂದು ಕೇಳುತ್ತಿದ್ದೇನೆ. ಅಂದ್ರೆ ಹೊಸಬರನ್ನು ಪ್ರೋತ್ಸಾಹಿಸಿ ಎನ್ನುವುದಷ್ಟೇ ಇಲ್ಲಿ ನನ್ನ ವಿನಂತಿʼ ಎನ್ನುವ ಮೂಲಕ ತಮ್ಮ ಸಿನಿಮಾದ ಬಿಡುಗಡೆಯ ತವಕ, ತುಡಿತವನ್ನು ಬಿಚ್ಚಿಡುತ್ತಾರೆ ಯುವ ನಟ ಶಿವಮೊಗ್ಗ ಹರೀಶ್.‌

ಈ ಚಿತ್ರದ ಶೀರ್ಷಿಕೆಯೇ ಹೇಳುವ ಹಾಗೆ ಇದೊಂದು ಹಾರರ್‌ ಕಥಾ ಹಂದರದ ಚಿತ್ರ. ಸಸ್ಪೆನ್ಸ್‌, ಹಾರರ್‌ ಜತೆಗೆ ಒಂದಷ್ಟು ನೈಜ ಘಟನೆಯ ಅಂಶಗಳು ಈ ಚಿತ್ರದಲ್ಲಿ ಇವೆಯಂತೆ. ಚಿತ್ರದ ಕಥಾ ಹಂದರ ಬಗ್ಗೆ ಸಣ್ಣ ಸುಳಿವು ನೀಡುವ ಶಿವಮೊಗ್ಗ ಹರೀಶ್‌, ಏನೋ ಅತ್ಯದ್ಬುತ ಕಥೆ ಅಂತ ಹೇಳಲಾರೆ, ಆದರೂ ಪ್ರೇಕ್ಷಕರನ್ನು ಹಿಡಿದಿಡಬಲ್ಲ ಒಂದಷ್ಟು ಅಂಶಗಳು ಚಿತ್ರದಲ್ಲಿವೆ. ಚಿತ್ರದ ಕಥಾ ನಾಯಕನಿಗೆ ಪ್ರತಿ ನಿತ್ಯವೂ ಒಂದು ಕನಸು ಬಿಳುತ್ತೆ. ಆ ಕನಸಿನಲ್ಲಿ ದ್ವೆವ ಬರುತ್ತದೆ. ಅದು ಯಾಕಾಗಿ ಹಾಗೆಲ್ಲ ಆಗುತ್ತೆ, ಕೊನೆಗೆ ಅದು ಹೇಗೆ ಪರಿಹಾರ ಕಾಣುತ್ತೆ ಎನ್ನುವುದು ಚಿತ್ರದ ಒನ್‌ ಲೈನ್‌ ಸ್ಟೋರಿ. ಈ ಕತೆಯಲ್ಲಿ ನಾಲ್ಕು ಪಾತ್ರಗಳಿವೆ. ಆ ಪಾತ್ರಗಳಲ್ಲಿ ಹೀರೋ ಗೆಳೆಯನಾಗಿ ನಾನುಕಾಣಿಸಿಕೊಂಡಿದ್ದೇನೆ. ಕಥೆ ಶುರುವಾಗೋದೆ ನನ್ನ ಪಾತ್ರ ಮೂಲಕ. ಕೊನೆಗೆ ಕಥೆ ಮುಗಿಯುವುದು ಕೂಡ ನನ್ನದೇ ಪಾತ್ರದ ಮೂಲಕ . ಹಾಗಾಗಿ ಚಿತ್ರದಲ್ಲಿ ನನ್ನ ಪಾತ್ರಕ್ಕೂ ಪ್ರಮುಖ ಸ್ಥಾನ ಇದೆ ಎನ್ನುತ್ತಾರೆ ಶಿವಮೊಗ್ಗ ಹರೀಶ್.‌

ರಂಗಭೂಮಿ, ಆನಂತರ ಕಿರುತೆರೆ, ಈಗ ಸಿನಿಮಾ ನಟನಾಗಿಯೂ ಬೆಳ್ಳಿ ಪರದೆಯ ಮೇಲೆ ಕಾಣಿಸಿಕೊಳ್ಳುತ್ತಿರುವ ಶಿವಮೊಗ್ಗ ಹರೀಶ್‌, ಸಿನಿಮಾದ ಅನುಭವವೇ ತುಂಬಾನೆ ಭಿನ್ನ ಎನ್ನುವ ಅನಿಸಿಕೆ ಹಂಚಿಕೊಳ್ಳುತ್ತಾರೆ. ʼ ನಾನು ಸೀರಿಯಲ್‌ ಗೆ ಹೋಗಬೇಕು ಅಂತ ಇಲ್ಲಿಂದ ಹೋದಾಗ ನಾಟಕದಂತೆ ಅಲ್ಲ ಸಿರೀಯಲ್‌ ಅಂತಿದ್ರು. ಅಲ್ಲಿ ಕೆಲಸ ಮಾಡಿ ಸಿನಿಮಾಕ್ಕೆ ಬಂದಾಗ, ಸೀರಿಯಲ್‌ ಇದ್ದಂತೆ ಅಲ್ಲ ಅಂತಿದ್ರು. ಹಾಗೆಲ್ಲ ನಾಟಕ, ಸೀರಿಯಲ್‌ ಹಾಗೂ ಸಿನಿಮಾದ ನಡುವೆ ಸಾಕಷ್ಟು ವ್ಯತ್ಯಾಸಗಳಿರುವ ಅನುಭವ ನನಗಾಗಿದೆ. ನಟನೆ ಒಂದು ಬಗೆಯದ್ದಾದರೂ, ಅಲ್ಲಿ ಇಷ್ಟು, ಇಲ್ಲಿ ಇಂತಿಷ್ಟು ಎನ್ನುವ ಗೆರೆಗಳು ಇದ್ದಿದ್ದು ನಾನು ಕಂಡೆ. ಆ ಇತಿ ಮಿತಿಗಳ ನಡುವೆಯೇ ಕಲಾವಿದನಾಗಿ ನಿಮ್ಮ ಮುಂದೆ ಕಾಣಿಸಿಕೊಂಡಿರುವ ನಾನು ಈ ಗ ಸಿನಿಮಾ ನಟನಾಗಿ ನಿಮ್ಮ ಮುಂದೆ ಬರುತ್ತಿದ್ದೇನೆ. ನೋಡಿ, ಪ್ರೋತ್ಸಾಹಿಸಿ, ಹಾರೈಸಿ ʼ ಎನ್ನುವ ಮಾತು ಹರೀಶ್‌ ಅವರದ್ದು.

ಚಿರಾಯು ಕ್ರಿಯೇಟಿವ್‌ ಸಿನಿಮಾಸ್‌ ಬ್ಯಾನರ್‌ ನಲ್ಲಿ ರಮೇಶ್‌ ಕುಮಾರ್‌ ನಿರ್ಮಾಣದ ಈ ಚಿತ್ರಕ್ಕೆ ಭರತ್‌ ನಂದ ಆಕ್ಷನ್‌ ಕಟ್‌ ಹೇಳಿದ್ದಾರೆ. ನಿರ್ದೇಶನದ ಜತೆಗೆ ಭರತ್‌ ನಂದ ಅವರು ಚಿತ್ರದ ನಾಯಕರಾಗಿಯೂ ಕಾಣಿಸಿಕೊಂಡಿದ್ದಾರೆ. ನಾಯಕಿಯಾಗಿ ವಿದ್ಯಾರಾಜ್‌ ಅಭಿನಯಿಸಿದ್ದಾರೆ. ಉಳಿದಂತೆ ಚಿತ್ರದ ತಾರಾಗಣದಲ್ಲಿ ಬಾಲರಾಜ್‌ ವಾಡಿ, ಶಿವಮೊಗ್ಗ ಹರೀಶ್‌, ಶಿವಕುಮಾರ್‌ ಆರಾಧ್ಯ, ಅಖಿಲೇಶ್‌ ಮತ್ತಿತರರು ಇದ್ದಾರೆ. ವಿಶೇಷ ಅಂದ್ರೆ ಶಿವಮೊಗ್ಗದವರೇ ಆದ ಮಧುಸೂಧನ್‌ ಈಚಿತ್ರಕ್ಕೆ ಛಾಯಾಗ್ರಹಣ ಮಾಡಿದ್ದಾರೆ. ಹಾಗೆಯೇ ರೂಪಾ ಹರೀಶ್‌ ಪ್ರಸಾದನವಿದೆ. ಉಳಿದಂತೆ ಶೇ. 80 ರಷ್ಟು ಚಿತ್ರದ ಸಿಬ್ಬಂದಿ ಶಿವಮೊಗ್ಗದವರೇ ಎನ್ನುವುದು ವಿಶೇಷ.

Categories
ಸಿನಿ ಸುದ್ದಿ

ಓ ಮನಸೇ ಜುಲೈ 14ಕ್ಕೆ ಬಿಡುಗಡೆ: ತ್ರಿಕೋನ ಪ್ರೇಮ ಕಥೆಗೆ ವಿಜಯ್ ರಾಘವೇಂದ್ರ, ಧರ್ಮ ಕೀರ್ತಿರಾಜ್ ಆಕರ್ಷಣೆ

ಶ್ರೀ ಫ್ರೆಂಡ್ಸ್ ಮೂವೀ ಮೇಕರ್ ಲಾಂಛನದಲ್ಲಿ ‌ಎಂ.ಎನ್ ಭೈರೇಗೌಡ, ಧನಂಜಯ್, ಯುವರಾಜು, ಸು.ಕಾ.ರಾಮು ಮತ್ತು ವೆಂಕಟೇಶ್ ಅವರು ನಿರ್ಮಿಸಿರುವ, ಉಮೇಶ್ ಗೌಡ ನಿರ್ದೇಶನದ, ವಿಜಯ ರಾಘವೇಂದ್ರ, ಧರ್ಮ ಕೀರ್ತಿರಾಜ್, ಸಂಚಿತಾ ಪಡುಕೋಣೆ ಪ್ರಮುಖಪಾತ್ರದಲ್ಲಿ ನಟಿಸಿರುವ “ಓ ಮನಸೇ” ಚಿತ್ರ ಇದೇ ಜುಲೈ 14 ರಂದು ರಾಜ್ಯಾದ್ಯಂತ ‌ಬಿಡುಗಡೆಯಾಗುತ್ತಿದೆ. ಈ ಕುರಿತು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ನಾವು ಐದು ಜನ ಸ್ನೇಹಿತರು ಸೇರಿ ಈ ಚಿತ್ರ ನಿರ್ಮಾಣ ಮಾಡಿದ್ದೇವೆ. ನಿರ್ದೇಶಕ ಉಮೇಶ್ ಗೌಡ ಅವರು ಒಳ್ಳೆಯ ಕಥೆ ಆಯ್ಕೆ ಮಾಡಿಕೊಂಡಿದ್ದಾರೆ. ನಟಿಸಿರುವ ಕಲಾವಿದರ ಅಭಿನಯ ಹಾಗೂ ತಂತ್ರಜ್ಞರ ಕಾರ್ಯವೈಖರಿ ಚೆನ್ನಾಗಿದೆ. ಚಿತ್ರ ಪ್ರೇಕ್ಷಕರ ಮನ ಗೆಲ್ಲುವ ಭರವಸೆ ಇದೆ ಎಂದು ನಿರ್ಮಾಪಕರಲ್ಲೊಬ್ಬರಾದ ಯುವರಾಜ್ ತಿಳಿಸಿದರು.

ನನಗೆ ನಿರ್ದೇಶಕ ಉಮೇಶ್ ಗೌಡ ಹಾಗೂ ಸಂಭಾಷಣೆ ಬರೆದಿರುವ ಸಾಯಿಕೃಷ್ಣ ಅವರು ಬಂದು ಕಥೆ ಹೇಳಿದರು ಎಂದು ಮಾತು ಪ್ರಾರಂಭಿಸಿದ ವಿಜಯ ರಾಘವೇಂದ್ರ, ನಾನು ಚಿತ್ರ ಒಪ್ಪಿಕೊಳ್ಳಲು ಮುಖ್ಯಕಾರಣ ಇದು ಶಿಕ್ಷಣಕ್ಕೆ ಮಹತ್ವ ಕೊಡುವ ಕಥಾಹಂದರ ಹೊಂದಿದೆ. ಲವ್, ಸಸ್ಪೆನ್ಸ್ ಕೂಡ ಇದೆ‌. ನಾನು ಪೊಲೀಸ್ ಅಧಿಕಾರಿಪಾತ್ರದಲ್ಲಿ ಅಭಿನಯಿಸಿದ್ದೇನೆ. ಈ ಚಿತ್ರವನ್ನು ಎಲ್ಲರೂ ನೋಡಿ. ಪ್ರೋತ್ಸಾಹ ನೀಡಿ ಎಂದರು.

ನಾನು ವಿಜಯ್ ರಾಘವೇಂದ್ರ ಅವರ ಜೊತೆ ಅಭಿನಯಿಸುತ್ತಿರುವ ಮೊದಲ ಸಿನಿಮಾವಿದು ಎಂದು ತಿಳಿಸಿದ ಧರ್ಮ ಕೀರ್ತಿರಾಜ್, ಈ ಚಿತ್ರದ ನಿರ್ಮಾಪಕರು ಯಾವುದೇ ಕೊರತೆಯಿಲ್ಲದೆ ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ನಾವು ದುಡುಕಿ ತೆಗೆದುಕೊಳ್ಳುವ ನಿರ್ಧಾರಗಳಿಂದ ಎನ್ನೆಲಾ‌ ಅನುಭವಿಸಬೇಕಾಗುತ್ತದೆ ಎಂಬುದು ಈ ಚಿತ್ರದ ಕಥೆಯ ಒಂದೆಳೆ ಎಂದರು.

ಚಿತ್ರದ ಮಾರ್ಗದರ್ಶಕರಾದ ಹಿರಿಯ ನಿರ್ಮಾಪಕ ಅಣಜಿ ನಾಗರಾಜ್, ನಾಯಕಿ ಸಂಚಿತಾ ಪಡುಕೋಣೆ, ವಿತರಕ ರಮೇಶ್ ಗೌಡ ಹಾಗೂ ಸಂಭಾಷಣೆ ಬರೆದಿರುವ ಸಾಯಿಕೃಷ್ಣ “ಓ ಮನಸೇ” ಬಗ್ಗೆ ಮಾತನಾಡಿದರು.

ರಮೇಶ್ ಅದರಂಗಿ ಕಥೆ ಬರೆದಿರುವ ಈ ಚಿತ್ರಕ್ಕೆ ಎಂ.ಆರ್.ಸೀನು ಛಾಯಾಗ್ರಹಣ, ಶ್ರೀನಿವಾಸ್ ಪಿ‌ ಬಾಬು ಸಂಕಲನ ಹಾಗೂ ಥ್ರಿಲ್ಲರ್ ಮಂಜು, ಡಿಫರೆಂಟ್ ಡ್ಯಾನಿ, ಬಂಡೆ ಚಂದ್ರು ಅವರ ಸಾಹಸ‌ ನಿರ್ದೇಶನವಿದೆ.

ವಿಜಯ ರಾಘವೇಂದ್ರ, ಧರ್ಮ ಕೀರ್ತಿರಾಜ್, ಸಂಚಿತಾ ಪಡುಕೋಣೆ, ಹರೀಶ್ ರಾಯ್, ಸಾಧುಕೋಕಿಲ, ಶೋಭ್ ರಾಜ್, ಕಿಲ್ಲರ್ ವೆಂಕಟೇಶ್, ವಾಣಿಶ್ರೀ, ಜಯರಾಮ್, ರುಶಿಕಾ(ಟಗರು ಸರೋಜ) ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Categories
ಸಿನಿ ಸುದ್ದಿ

ಆಗಸ್ಟ್ 10ಕ್ಕೆ ಜೈಲರ್ ಬಿಡುಗಡೆ: ರಜನಿಕಾಂತ್ ಫ್ಯಾನ್ಸ್ ಖುಷ್ ಹುವಾ

ಸೂಪರ್‌ಸ್ಟಾರ್ ರಜನಿಕಾಂತ್ ನಟನೆಯ ‘ಜೈಲರ್’ ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ತಲೈವ ವೃತ್ತಿ ಬದುಕಿನ ವಿಶೇಷ ಚಿತ್ರ‌ ಇದಾಗಿದ್ದು, ದಕ್ಷಿಣ ಭಾರತ ಹಾಗೂ ಬಾಲಿವುಡ್‌ ದಿಗ್ಗಜರು‌ ಜೈಲರ್ ಸಿನಿಮಾದ ಭಾಗವಾಗಿದ್ದಾರೆ. ಸದ್ಯ ಕಾವಾಲಾಯ್ಯ ಹಾಡಿನ ಮೂಲಕ ಭಾರೀ ಸೆನ್ಸೇಷನ್ ಸೃಷ್ಟಿಸುತ್ತಿರುವ ಈ ಚಿತ್ರ ಆಗಸ್ಟ್ 10ಕ್ಕೆ ಕನ್ನಡ, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಬೆಳ್ಳಿತೆರೆಗೆ ಎಂಟ್ರಿ ಕೊಡುತ್ತಿದೆ.

ಸನ್ ಪಿಕ್ಚರ್ ನಿರ್ಮಾಣ ಮಾಡುತ್ತಿರುವ ಈ ಸಿನಿಮಾವನ್ನು ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನ ನಿರ್ದೇಶಿದ್ದಾರೆ. ಇದೇ ಮೊದಲ ಬಾರಿಗೆ ರಜನಿಕಾಂತ್ ಜೊತೆ ಶಿವರಾಜ್‌ಕುಮಾರ್ ವಿಶೇಷ ಪಾತ್ರದಲ್ಲಿ ನಟಿಸಿರೋದು ಕುತೂಹಲ ಕೆರಳಿಸಿದೆ. ಇನ್ನು ಬಾಲಿವುಡ್‌ ನಟ ಜಾಕಿ ಶ್ರಾಫ್, ಮಲಯಾಳಂ ಸೂಪರ್‌ಸ್ಟಾರ್ ಮೋಹನ್‌ಲಾಲ್, ಟಾಲಿವುಡ್ ನಟ ಸುನಿಲ್, ನಾಗಬಾಬು, ನಟಿ ರಮ್ಯಾ ಕೃಷ್ಣ, ತಮನ್ನಾ ಭಾಟಿಯಾ ನಟಿಸಿದ್ದು, ಸಿನಿಪ್ರಿಯರಿಗೆ ಇವರೆಲ್ಲರನ್ನೂ ಒಂದೇ ಸಿನಿಮಾದಲ್ಲಿ ನೋಡುವ ಭಾಗ್ಯ ಸಿಗಲಿದೆ.

ಅಣ್ಣಾತ್ತೆ ಬಳಿಕ ರಜನಿ ನಟಿಸಿರುವ 169ನೇ ಸಿನಿಮಾ ಜೈಲರ್. ತಲೈವ ಹೊಸ ಸಿನಿಮಾ ಎಂಟ್ರಿಗೆ ಕಾದು‌ ಕುಳಿತಿರುವ ಅಭಿಮಾನಿಗಳು ಹಬ್ಬ ಮಾಡಲು ಸಜ್ಜಾಗಿದ್ದಾರೆ. ರಾಕ್ ಸ್ಟಾರ್ ಅನಿರುದ್ಧ್ ರವಿಚಂದರ್ ಸಂಗೀತ‌ ನಿರ್ದೇಶನದ ಜೈಲರ್ ಸಿನಿಮಾವನ್ನೂ ಚೆನ್ನೈ, ಮಂಗಳೂರು, ಹೈದರಾಬಾದ್, ಕೇರಳ ಸೇರಿದಂತೆ ಹಲವೆಡೆ ಶೂಟಿಂಗ್ ನಡೆಸಲಾಗಿದೆ. ಸ್ಯಾಂಪಲ್ಸ್ ಮೂಲಕ ಭಾರಿ ಕ್ರೇಜ್ ಹೆಚ್ಚಿಸಿರುವ ರಜನಿಕಾಂತ್ ಸಿನಿಮಾ ಆಗಸ್ಟ್ 10ಕ್ಕೆ ಥಿಯೇಟರ್ ಗೆ ಎಂಟ್ರಿ ಕೊಡಲಿದೆ.

Categories
ಸಿನಿ ಸುದ್ದಿ

ಜುಲೈ 21ಕ್ಕೆ ಬರ್ತಾಳೆ ಅಂಬುಜ! ಬೆಚ್ಚಿ ಬೀಳೋ ಕಥೆ ಹೇಳ್ತಾರೆ ಶುಭ-ರಜನಿ

ಮಹಿಳಾ ಪ್ರಧಾನ ಅಂಬುಜಾ ಸಿನಿಮಾ ಟ್ರೇಲರ್ ಬಿಡುಗಡೆಯಾಗಿದೆ. ನೈಜ ಘಟನೆ ಆಧಾರಿತ ಕುತೂಹಲಭರಿತ ಟ್ರೇಲರ್ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಶುಭಾ ಪೂಂಜಾ, ಅಮೃತವರ್ಷಿಣಿ ಧಾರಾವಾಹಿ ಖ್ಯಾತಿಯ ರಜಿನಿ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ.

ನಿರ್ದೇಶಕ ಶ್ರೀನಿ ಹನುಮಂತರಾಜು ಮಾತನಾಡಿ, ನಾನು ಶುಭಾಪೂಂಜಾ ಈ ಮೊದಲು ಒಂದು ಸಿನಿಮಾ ಮಾಡಿದ್ದೆವು. ಆ ಚಿತ್ರ ಯಶಸ್ಸು ಖಂಡಿತ್ತು. ಹಾಗೇ ಎರಡನೇ ಚಿತ್ರದ ಹುಡುಕಾಟದಲ್ಲಿದ್ದಾಗ ಕಾಶೀನಾಥ್ ಸರ್ ಸಿಕ್ಕರು. ನಾನು ಗ್ಯಾರಂಟಿ ನೀಡುತ್ತೇನೆ. ಈ ಕಥೆ ನೀವೆಲ್ಲೂ ನೋಡಿರಲ್ಲ, ಕೇಳಿರಲ್ಲ,ಖಂಡಿತಾ ಚಿತ್ರ ನೋಡುವಾಗ ಬೆಚ್ಚಿ ಬೀಳುತ್ತೀರಾ..
ನಾವೂ ಸುಮ್ಮನೇ ಹೇಳುತ್ತಿಲ್ಲ, ಭರವಸೆ ನೀಡುತ್ತಿದ್ದೇವೆ. ಚಿತ್ರ ನೋಡಿದ‌ ಮೇಲೆ‌ ನೀವೇ ಶಾಕ್ ಆಗ್ತಿರ.


ಇದಕ್ಕೆ ಮೊದಲಿಗೆ ಕಲಾವಿದರಾಗಿ ಬಂದಿದ್ದು, ಶುಭಾ ಪೂಂಜಾ.
ರಜಿನಿ ಆಯ್ಕೆಯಾಗಿದ್ದೇ ವಿಚಿತ್ರ. ಸಿನಿಮಾನ ಒಂದಷ್ಟು ಜನ ಜೆನರಲ್ ಆಡಿಯನ್ಸ್ ನೋಡಿದ್ದಾರೆ.
ಅವರ ಕೈಕಾಲೇ ವೈಬ್ರೇಷನ್ ಆಗಿತ್ತು ಎಂದಿದ್ದಾರೆ.‌ಮತ್ತು ಚಿತ್ರದ ಕಥಾಹಂದರ ನೋಡಿ ಒಂದಷ್ಟು ಚರ್ಚೆ‌ ಮಾಡಿದ್ದಾರೆ.

ನಿರ್ಮಾಪಕ ಕಾಶಿನಾಥ್ ಡಿ ಮಡಿವಾಳರ್ ಮಾತನಾಡಿ, ನಾನು ಕಥೆ ಬರೆದಾಗ ಇಷ್ಟೊಂದು ಚೆನ್ನಾಗಿ ಬರುತ್ತೆ ಅಂತ ಗೊತ್ತಿರಲಿಲ್ಲ. ಎಲ್ಲರೂ ಶ್ರಮ ಹಾಕಿದ್ದಾರೆ. ರಜಿನಿ ಮೇಡಂಗೆ ಕಾಲು ನೋವಿದ್ದರು 25 ಕೆಜಿ ತೂಕದಷ್ಟು ಕಾಸ್ಟ್ಯೂಮ್ ಹಾಕಿಕೊಂಡು ಡ್ಯಾನ್ಸ್ ಮಾಡಿದ್ದಾರೆ. ಶುಭಾ ಮೇಡಂ ಎತ್ತರದ ಭಯ ಇದ್ರು 3km ಬೆಟ್ಟವನ್ನು ಹತ್ತಿ ಹಾಡಿನ ಚಿತ್ರೀಕರಣ ಮಾಡಿದ್ದಾರೆ. ಈ ಸಿನಿಮಾಗಾಗಿ ಎಲ್ಲರೂ ಎಫರ್ಟ್ ಹಾಕಿದ್ದಾರೆ. ವಿಶೇಷವಾಗಿ ನಿರ್ದೇಶಕ ಶ್ರೀನಿ ಅವರು ತುಂಬಾ ಕಷ್ಟಪಟ್ಟು ಇಷ್ಟಪಟ್ಟು ಅಂಬುಜ ಚಿತ್ರವನ್ನು ಎಲ್ಲರಿಗೂ ಇಷ್ಟವಾಗುವಂತೆ ಮಾಡುದ್ದಾರೆ. ನಿಮಗೂ ಸಿನಿಮಾ ಖಂಡಿತ ಇಷ್ಟವಾಗುತ್ತೆ ಎಂದಿದ್ದಾರೆ.

ಶುಭಾ ಪೂಂಜಾ ಮಾತನಾಡಿ, ನನ್ನ ಪಾತ್ರ ಒಂದು ಕ್ರೈಂ ರಿಪೋರ್ಟರ್ ಪಾತ್ರ. ತುಂಬಾ ಶೇಡ್ ಇದೆ. ನನಗೆ ತುಂಬಾ ಇಷ್ಟವಾದ ಪಾತ್ರ. ಸಿನಿಮಾನಾ‌ ನಾನು ನೋಡಿದ್ದೇನೆ. ತುಂಬಾ ಅದ್ಭುತವಾಗಿ ಮೂಡಿಬಂದಿದೆ. ಶ್ರೀನಿ ಜೊತೆಗೆ ಇದು ಎರಡನೇ ಸಿನಿಮಾ. ಕ್ರೈಮ್, ಹಾರರ್, ಸಸ್ಪೆನ್ಸ್ , ಕಾಮಿಡಿ, ಸೆಂಟಿಮೆಂಟ್ ಎಲ್ಲ ಅಂಶವನ್ನು ಸಿನಿಮಾದಲ್ಲಿ ಹಾಕುತ್ತಾರೆ. ಫ್ಯಾಮಿಲಿ ಕುಳಿತು ನೋಡುವಂತಹ ಸಿನಿಮಾ ಎಂದರು.

ರಜಿನಿ ಮಾತನಾಡಿ, ಇದು ನನ್ನ ಮೊದಲನೇ ಚಿತ್ರ, ಮೊದಲನೇ ಚಿತ್ರದಲ್ಲಿ ಅದ್ಭುತವಾದ ಪಾತ್ರ ನೀಡಿದ್ದಕ್ಕೆ ಧನ್ಯವಾದಗಳು
ನನ್ನ ಪಾತ್ರ ಎಲ್ಲರನ್ನೂ ಕಾಡುವಂತೆ ಮೂಡಿ ಬಂದಿದೆ. ನಾನು ಹೇಳೋದಕ್ಕಿಂತ ಜನ ನೋಡಿ, ಮೆಚ್ಚಿಕೊಂಡರೆ ಖುಷಿಯಾಗುತ್ತದೆ ಎಂದು ತಿಳಿಸಿದರು.

ಇನ್ನೂ ಚಿತ್ರದ ನಾಯಕನಾಗಿ ದೀಪಕ್ ಸುಬ್ರಮಣ್ಯ ಮಾತನಾಡಿ ಇದೊಂದು ಪಕ್ಕಾ ಕಮರ್ಷಿಯಲ್ ಸಿನಿಮಾ ನನ್ನ ಪಾತ್ರಕ್ಕೆ ವಿಶೇಷ ಸ್ಕೋಪ್ ಇದೆ ಎಂದರು.
ಪದ್ಮಜಾರಾವ್, ಜಗದೀಶ್ ಹಲ್ಕುಡೆ, ಶರಣಯ್ಯ ,ಕಾಮಿಡಿಕಿಲಾಡಿ ಗೋವಿಂದೇಗೌಡ, ಸಂದೇಶ್ ಶೆಟ್ಟಿ, ನಿಶಾ ಹೆಗಡೆ, ಆಶಾರಾಣಿ, ಗುರುದೇವ ನಾಗಾರಾಜ, ಬೇಬಿ ಆಕಾಂಕ್ಷ,
ಮೋಹನ್ ಮಾಸ್ಟರ್, ಕ್ಯಾಮೆರಾಮನ್ ಮುರಳೀಧರ್ , ಎಡಿಟರ್ ವಿಜಯ್ ಎಂ.ಕುಮಾರ್, ಹಿನ್ನೆಲೆ ಸಂಗೀತ ನಿರ್ಧೇಶಕ ತ್ಯಾಗರಾಜ್ ಎಂ.ಎಸ್, ಎಲ್ಲರೂ ಚಿತ್ರದ ಬಗ್ಗೆ ಉತ್ಸುಕರಾಗಿ ಮಾತನಾಡಿದರು.


ಕ್ರೈಂ ಥ್ರಿಲ್ಲರ್ ಹಾರಾರ್ ಕಥಾಹಂದರ ಒಳಗೊಂಡ ಅಂಬುಜಾ ಸಿನಿಮಾಗೆ ಕಾಶಿನಾಥ್ ಡಿ ಮಡಿವಾಳರ್ ಬಂಡವಾಳ ಹೂಡಿದ್ದಾರೆ. ಮೊದಲ ಬಾರಿಗೆ ನಿರ್ಮಾಣಕ್ಕಿಳಿದಿರುವ ಇವರು, ಚಿತ್ರಕ್ಕೆ ಕಥೆ, ಸಾಹಿತ್ಯ ಕೂಡ ಬರೆದಿದ್ದಾರೆ. ಶ್ರೀನಿ ಹನುಂಮತರಾಜು ಎರಡನೇ ಸಿನಿಮಾ ಇದಾಗಿದೆ. ಪ್ರಸನ್ನ ಕುಮಾರ್ ಎಂ ಎಸ್ ಸಂಗೀತ ನಿರ್ದೇಶನ ಮಾಡಿದ್ದು, ಲಾಲಿ ಹಾಡನ್ನು ನಿರ್ಮಾಪಕ ಕಾಶಿನಾಥ್ ಮಗಳು, ಆಕಾಂಕ್ಷ ಅದ್ಭುತವಾಗಿ ಹಾಡಿದ್ದಾರೆ. ಚಿತ್ರದ ಸಹ ನಿರ್ಮಾಣದಲ್ಲಿ ಲೋಕೇಶ್ ಭೈರವ, ಶಿವಪ್ರಕಾಶ್ ಕೈ ಜೋಡಿಸಿದ್ದಾರೆ.
ಟ್ರೇಲರ್ ಮೂಲಕ ಗಮನಸೆಳೆಯುತ್ತಿರುವ ಅಂಬುಜಾ ಜುಲೈ 21ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

Categories
ಸಿನಿ ಸುದ್ದಿ

ಡೈಮಂಡ್ ಹಿಡಿದು ಕ್ರಾಸ್ ಮಾಡಿದ ಮಿತ್ರ ಅಂಡ್ ಮನೀಶ್! ರಾಮ್ ದೀಪ್ ನಿರ್ದೇಶನದ ಡೈಮಂಡ್ ಕ್ರಾಸ್ ರಿಲೀಸ್ ಗೆ ರೆಡಿ

ನಾಗತಿಹಳ್ಳಿ ಸಿನಿ ಕ್ರಿಯೇಷನ್ಸ್ ಮೂಲಕ ನಿರ್ಮಾಣವಾಗಿರುವ, ರಾಮ್ ದೀಪ್ ನಿರ್ದೇಶನದ ” ಡೈಮಂಡ್‌ ಕ್ರಾಸ್” ಚಿತ್ರ ತೆರೆಗೆ ಬರಲು ಸಿದ್ದವಾಗಿದೆ‌. ಹೊಸಪೇಟೆ ಉದ್ಯಮಿ ಮನೀಶ್ ಹಾಗೂ ನಟ ಮಿತ್ರ ಹಾಗೂ ಅವರ ಸ್ನೇಹಿತರ ಮನೀಶ್ & ಮಿತ್ರ ಎಂಟರ್ಟೈನ್ಮೆಂಟ್ ಮೂಲಕ ಈ ಚಿತ್ರ ಬಿಡುಗಡೆಯಾಗುತ್ತಿದೆ‌. ಇತ್ತೀಚೆಗೆ ಈ ಚಿತ್ರದ ಟೀಸರ್ ಹಾಗೂ ಚಿತ್ರದ ಕೆಲವು ತುಣುಕುಗಳನ್ನು ಬಿಡುಗಡೆ‌ ಮಾಡಲಾಗಿದೆ. ಜೇಡ್ರಳಿ ಕೃಷ್ಣಪ್ಪ ಹಾಗೂ ಜೈಕೃಷ್ಣ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ, ಶುಭ ಕೋರಿದ್ದಾರೆ.

ಹೊಸಪೇಟೆ ಉದ್ಯಮಿ ಮನೀಶ್ ನನ್ನ ಮಿತ್ರರು ಎಂದು ಮಾತು ಶುರು ಮಾಡಿದ ನಟ ಮಿತ್ರ, ಮನೀಶ್ ಅವರಿಗೆ ಸಿನಿಮಾ‌ ನಿರ್ಮಾಣ ಮಾಡುವ ಆಸಕ್ತಿಯಿತ್ತು. ಆದರೆ ನಾನು ಮೊದಲು ಸಿನಿಮಾ ನಿರ್ಮಾಣ ಮಾಡಬೇಡಿ. ಸಾಕಷ್ಟು ಒಳ್ಳೆಯ ಚಿತ್ರಗಳು ನಿರ್ಮಾಣವಾಗಿವೆ. ಅಂತಹ ಚಿತ್ರಗಳನ್ನು ವಿತರಣೆ ಮಾಡುವ ಮೂಲಕ ಚಿತ್ರಮಂದಿರಗಳಿಗೆ ತರುವ ಪ್ರಯತ್ನ ಮಾಡಿ. ಆನಂತರ ಸಿನಿಮಾ ಮಾಡಿ ಎಂದು ಸಲಹೆ ನೀಡಿದೆ‌. ಅದಕ್ಕೆ ಮನೀಶ್ ಒಪ್ಪಿದರು. ನನ್ನ ಕೆಲವು ಸ್ನೇಹಿತರು ಇದಕ್ಕೆ ಜೊತೆಯಾದರು ಈಗ ಮನೀಶ್ & ಮಿತ್ರ ಎಂಟರ್ಟೈನ್ಮೆಂಟ್ ಸಂಸ್ಥೆಯ ಮೂಲಕ ರಾಮ್ ದೀಪ್ ನಿರ್ದೇಶನದ “ಡೈಮಂಡ್ ಕ್ರಾಸ್” ಚಿತ್ರವನ್ನು ಸದ್ಯದಲ್ಲೇ ಬಿಡುಗಡೆ ಮಾಡುತ್ತಿದ್ದೇವೆ ಎಂದರು.

ಮಿತ್ರ ಅವರು ಕೊಟ್ಟ ಸಲಹೆ ಚೆನ್ನಾಗಿದೆ. ರಿವರ್ಸ್ ಪ್ಲೇ ಮೂಲಕ ನಾವು ಕೆಲಸ ಶುರು ಮಾಡಿದ್ದೇವೆ. ಮೊದಲು ಒಳ್ಳೆಯ ಚಿತ್ರಗಳನ್ನು ವಿತರಣೆ ಮಾಡಿ, ಆನಂತರ ನಿರ್ಮಾಣ ಮಾಡುತ್ತೇನೆ. ಈಗ ಮೊದಲ ಹೆಜ್ಜೆಯಾಗಿ ಈ ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದೇವೆ. ಚಿತ್ರ ಚೆನ್ನಾಗಿದೆ. ನಿಮ್ಮೆಲ್ಲರ ಸಹಕಾರವಿರಲಿ ಎಂದು ಮನೀಶ್ ತಿಳಿಸಿದರು.

ಇದೊಂದು ಸೈಬರ್ ಕ್ರೈಮ್ ಕಥಾಹಂದರ ಹೊಂದಿರುವ ಚಿತ್ರ ಎಂದು ಚಿತ್ರದ ಕುರಿತು ಮಾತು ಆರಂಭಿಸಿದ ನಿರ್ದೇಶಕ ರಾಮ್ ದೀಪ್, ಚಿತ್ರವನ್ನು ಸದ್ಯದಲ್ಲೇ ತೆರೆಗೆ ತರುವುದಾಗಿ ತಿಳಿಸಿ ತಮ್ಮ ತಂಡದ ಪರಿಚಯ ಮಾಡಿಕೊಟ್ಟರು.

ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿರುವ ರಾಮಚಂದ್ರ ಬಾಬು, ಮುಖ್ಯಪಾತ್ರಗಳಲ್ಲಿ ನಟಿಸಿರುವ ನಟಿ ರೂಪಿಕಾ, ರಜತ್ ಅಣ್ಣಪ್ಪ, ಮನು ಕೆ.ಎಂ , ಛಾಯಾಗ್ರಹಣ – ಸಂಕಲನ ಮಾಡಿರುವ ಸಂತೋಷ್ ರಾಧಾಕೃಷ್ಣನ್, ಸಂಗೀತ ನಿರ್ದೇಶಕ ಲೇಖನ್ ಹಾಗೂ ಹಿನ್ನೆಲೆ ಸಂಗೀತ ನೀಡಿರುವ ಅನೀಶ್ ಚಿತ್ರದ ಕುರಿತು ಮಾತನಾಡಿದರು.

Categories
ಸಿನಿ ಸುದ್ದಿ

ಕೋರ್ಟ್ ಮೊರೆ ಹೋಗುವ ಕುರಿತು ಚಿತ್ರರಂಗ ಸಂಸ್ಥೆಗಳಿಗೆ ಕಿಚ್ಚ ಸುದೀಪ್ ಬರೆದ ಪತ್ರ ವಿವರಣೆ

ಇತ್ತೀಚಿಗೆ ನಡೆಯುತ್ತಿರುವ ವಿದ್ಯಮಾನಗಳ ಕುರಿತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ನಿರ್ಮಾಪಕರ ಸಂಘ ಮತ್ತು ಕಲಾವಿದರ ಸಂಘಗಳಿಗೆ ಕಿಚ್ಚ ಸುದೀಪ್ ಅವರು ಗೌರವ ಪೂರ್ವಕವಾಗಿ ತಾವು ನ್ಯಾಯಾಲಯಕ್ಕೆ ಹೋಗುತ್ತಿರುವುದರ ಬಗ್ಗೆ ಒಂದು ಆಪ್ತ ವಿವರಣೆ ಸಲ್ಲಿಸಿದ್ದಾರೆ. ಅದರ ಸಂಕ್ಷಿಪ್ತ ವಿವರ ಇಲ್ಲಿದೆ.

ಸುದೀಪ್ ಇತ್ತೀಚೆಗೆ ಚಿತ್ರರಂಗದಲ್ಲಿ ನಡೆದ ಘಟನೆಗಳಿಗೆ ಸಂಬಂಧಿಸಿದಂತೆ ಸಾಕಷ್ಟು ಬೇಸರ ವ್ಯಕ್ತಪಡಿಸಿದ್ದರು.

ನಿರ್ಮಾಪಕ ಎನ್.ಕುಮಾರ್ ಅವರು ಸುದೀಪ್ ಅವರಿಗೆ ಮುಂಗಡ ಹಣ ಕೊಟ್ಟರೂ ಅವರು ಡೇಟ್ ಕೊಟ್ಟಿಲ್ಲ ಅಂತ ಸಾರ್ವಜನಿಕವಾಗಿ ಆರೋಪಿಸಿದ್ದರು.

ಈ ವಿಷಯಕ್ಕೆ ಸಂಬಂಧಿಸಿದಂತೆ ಸಾಕಷ್ಟು ಚರ್ಚೆಗಳು ನಡೆದಿದ್ದವು. ಆದರೆ, ಸುದೀಪ್ ಮಾತ್ರ ಕುಮಾರ್ ಅವರು ಮಾಡಿದ ಆರೋಪಕ್ಕೆ ಉತ್ತರ ನೀಡಿರಲಿಲ್ಲ. ಯಾವುದೇ ಪ್ರತಿಕ್ರಿಯೆ ಕೊಟ್ಟಿರಲಿಲ್ಲ.

ಎಲ್ಲೆಡೆಯಿಂದಲೂ ಒಂದಷ್ಟು ಜೋರು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಸುದೀಪ್ ಅವರ ಆಪ್ತರಾದ ಜಾಕ್ ಮಂಜು ಮತ್ತು ಚಕ್ರವರ್ತಿ ಚಂದ್ರಚೂಡ್ ಅವರು ಪ್ರೆಸ್ ಮೀಟ್ ಮಾಡಿ, ಕುಮಾರ್ ಮಾಡಿದ ಆರೋಪ ಸುಳ್ಳು, ಸುದೀಪ್ ಏನೆಲ್ಲಾ ಒಳಿತು ಮಾಡಿದ್ದಾರೆ ಎಂಬ ಕುರಿತು ಮಾಹಿತಿ ನೀಡಿದ್ದರು.

ಇದರ ಬೆನ್ನಲ್ಲೇ ಈಗ ಸುದೀಪ್ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ನಿರ್ಮಾಪಕರ ಸಂಘ, ಕಲಾವಿದರ ಸಂಘಗಳಿಗೆ ಸುಧೀರ್ಘ ಪತ್ರ ಬರೆದು, ನಾನು ಕೋರ್ಟ್ ಮೊರೆ ಹೋಗುತ್ತಿರುವುದಾಗಿ ವಿವರಿಸಿದ್ದಾರೆ.

Categories
ಸಿನಿ ಸುದ್ದಿ

ಜವಾನ್ ಪ್ರಿವ್ಯೂ ರಿಲೀಸ್: ಸೋಶಿಯಲ್ ಮೀಡಿಯಾದಲ್ಲಿ ಹವಾ ಸೃಷ್ಟಿಸಿದ ಶಾರುಖ್ ಚಿತ್ರ

ಶಾರುಖ್ ಖಾನ್ ಅಭಿನಯದ ಬಹು ನಿರೀಕ್ಷಿತ ಚಿತ್ರವಾದ ‘ಜವಾನ್’ನ ಪ್ರಿವ್ಯೂ ಇಂದು ಬಿಡುಗಡೆಯಾಗಿದ್ದು, ಅಂತರ್ಜಾಲದಲ್ಲಿ ಸಖತ್ ವೈರಲ್ ಆಗಿದೆ. ಇದೊಂದು ಆಕ್ಷನ್ ಥ್ರಿಲ್ಲರ್ ಚಿತ್ರವಾಗಿದ್ದು, ಸಮಾಜದಲ್ಲಾಗುತ್ತಿರುವ ತಪ್ಪುಗಳನ್ನು ತಿದ್ದುವ ಒಬ್ಬ ಜವಾಬ್ದಾರಿಯುತ ಮತ್ತು ಪ್ರಾಮಾಣಿಕ ವ್ಯಕ್ತಿಯ ಕಥೆ.


‘ಜವಾನ್’ ಚಿತ್ರದ ಬಗ್ಗೆ ಪ್ರೇಕ್ಷಕರಲ್ಲಿ ಆರಂಭದಿಂದಲೂ ಬಹಳ ಕುತೂಹಲವಿತ್ತು. ಇಂದು ಬಿಡುಗಡೆಯಾದ ಟೀಸರ್, ಆ ನಿರೀಕ್ಷೆ ಮತ್ತು ಕುತೂಹಲಗಳನ್ನು ಇನ್ನೊಂದು ಹಂತಕ್ಕೆ ತಲುಪಿಸಿದೆ. ದೊಡ್ಡ ಬಜೆಟ್ ನಲ್ಲಿ ಅದ್ದೂರಿಯಾಗಿ ಮೂಡಿ ಬಂದಿರುವ ಈ ಚಿತ್ರ ಆಕ್ಷನ್ ಮತ್ತು
ಎಮೋಷನ್ ಗಳನ್ನು ಹದವಾಗಿ ಹಿಡಿದಿಟ್ಟಿದೆ. ಚಿತ್ರದ ಕೆಲವು ಅದ್ಭುತ ಕ್ಷಣಗಳನ್ನು ಹಿಡಿದಿಡುವುದರ ಜೊತೆಗೆ, ‘ಜವಾನ್ ಪ್ರಪಂಚವನ್ನು ಪ್ರೇಕ್ಷಕರಿಗೆ ಪರಿಚಯಿಸಿದೆ.


‘ಕಿಂಗ್ ಖಾನ್’ ಅವರ ಧ್ವನಿಯಲ್ಲಿ ಪ್ರಾರಂಭವಾಗುವ ಈ ಪ್ರಿವ್ಯೂ, ನಂತರ ಚಿತ್ರ ಏನಿರಬಹುದು ಎಂದು ಪರಿಚಯಿಸಿಕೊಡುತ್ತದೆ. ಈ ಪ್ರಿವ್ಯೂನ ಒಂದು ವಿಶೇಷತೆಯೆಂದರೆ, ಇದುವರೆಗೂ ನೀವು ನೋಡದೆ ಇರುವ ಶಾರುಖ್ ಅವರನ್ನು ಇಲ್ಲಿ ಹಲವು ಅವತಾರಗಳಲ್ಲಿ ನೋಡಬಹುದು.

ಶಾರುಖ್ ಖಾನ್ ಅಲ್ಲದೆ, ಚಿತ್ರದಲ್ಲಿ ನಟಿಸಿರುವ ಹಲವು ಪ್ರತಿಭಾವಂತರ ತುಣುಕುಗಳು ಸಹ ಈ ಪ್ರಿವ್ಯೂನಲ್ಲಿ ಪರಿಚಯಿಸಲಾಗಿದೆ. ರೋಮಾಂಚನಗೊಳಿಸುವ ಆಕ್ಷನ್ ದೃಶ್ಯಗಳು, ಅದ್ದೂರಿ ಹಾಡುಗಳು, ‘ಬೇಕರಾರ್ ಕರಕೇ ಹಮೇ’ ಹಾಡಿಗೆ ಶಾರುಖ್ ಖಾನ್ ಅಭಿನಯ … ಇವೆಲ್ಲವೂ ಈ ಪ್ರಿವ್ಯೂ ಚಿತ್ರದ ಹೈಲೈಟ್ ಗಳಾಗಿದ್ದು, ಚಿತ್ರ ಬಿಡುಗಡೆಗೆ ಕಾಯುವಂತಾಗಿದೆ.


ದಕ್ಷಿಣ ಭಾರತದ ಜನಪ್ರಿಯ ಮತ್ತು ಯಶಸ್ವಿ ನಿರ್ದೇಶಕರ ಅಟ್ಲಿ ಈ ಚಿತ್ರವನ್ನು ನಿರ್ದೇಶಿಸಿದ್ದು, ಅನಿರುದ್ಧ್ ರವಿಚಂದರ್ ಅವರ ಸಂಗೀತ ಮತ್ತು ಹಿನ್ನೆಲೆ ಸಂಗೀತವಿದೆ. ಇತ್ತೀಚಿನ ದಿನಗಳಲ್ಲಿ ಬಹುಬೇಡಿಕೆಯ ಸಂಗೀತ ನಿರ್ದೇಶಕರಾಗಿರುವ ಅನಿರುದ್ಧ್ ಅವರ ಹಿನ್ನೆಲೆ ಸಂಗೀತ ಈ ಪ್ರಿವ್ಯೂನ ಇನ್ನೊಂದು ಹೈಲೈಟ್. ಈ ಪ್ರಿವ್ಯೂನಲ್ಲಿ ಗಮನಸೆಳೆಯುವ ಇನ್ನೊಂದು ಅಂಶವೆಂದರೆ ಅದು ಗ್ರ್ಯಾಮಿ ಪ್ರಶಸ್ತಿಗೆ ನಾಮಿನೇಟ್ ಆಗಿರುವ ರಾಜಕುಮಾರಿ ಅವರು ಹಾಡಿರುವ ‘ದಿ ಕಿಂಗ್ ಖಾನ್ ರಾಪ್’ ಎಂಬ ಹಾಡು.


‘ಜವಾನ್’, ಶಾರುಖ್ ಖಾನ್ ಅವರ ಬಹುನಿರೀಕ್ಷಿತ ಚಿತ್ರವಾಗಿದ್ದು, ಅತ್ಯಂತ ದೊಡ್ಡ ಮಟ್ಟದಲ್ಲಿ ನಿರ್ಮಾಣವಾಗಿದೆ. ಈ ಚಿತ್ರದ ಶಾರುಖ್ ಜೊತೆಗೆ ಭಾರತೀಯ ಚಿತ್ರರಂಗದ ಜನಪ್ರಿಯ ಹಾಗೂ ವಿವಿಧ ಭಾಷೆಯ ನಟ-ನಟಿಯರು ಕಾಣಿಸಿಕೊಂಡಿದ್ದಾರೆ. ನಯನತಾರಾ, ವಿಜಯ ಸೇತುಪತಿ, ಸಾನ್ಯಾ ಮಲ್ಹೋತ್ರಾ, ಗಿರಿಜಾ ಓಕ್, ಸಂಗೀತಾ ಭಟ್ಟಾಚಾರ್ಯ, ಲೆಹರ್ ಖಾನ್, ಆಲಿಯಾ ಖುರೇಷಿ, ರಿಧಿ ದೋಗ್ರಾ, ಸುನಿಲ್ ಗ್ರೋವರ್ ಮತ್ತು ಮುಖೇಶ್ ಛಾಬ್ರಿಯಾ ನಟಿಸಿರುವ ಈ ಚಿತ್ರವು ಎಲ್ಲ ಭಾಷೆಗಳ ಜನರಿಗೂ ತಲುಪವಂತೆ ಚಿತ್ರಿಸಲಾಗಿದೆ.


ಇದಕ್ಕೂ ಮುನ್ನ ಪೋಸ್ಟರ್ ಮತ್ತು ಸಣ್ಣ ಟೀಸರ್ ಮೂಲಕ ಜನರ ಗಮನ ಸೆಳೆದ ಟೀಸರ್, ಈಗ ಪ್ರಿವ್ಯೂ ಮೂಲಕ ಪ್ರೇಕ್ಷಕರಲ್ಲಿ ಇನ್ನಷ್ಟು ನಿರೀಕ್ಷೆಗಳನ್ನು ಹೆಚ್ಚಿಸಿದೆ. ರೆಡ್ ಚಿಲ್ಲೀಸ್ ಎಂಟರ್ಟೈನ್ಮೆಂಟ್ನಡಿ ಗೌರಿ ಖಾನ್ ನಿರ್ಮಾಣ ಮಾಡಿದರೆ, ಗೌರವ್ ವರ್ಮ ಸಹ-ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. ಸೆಪ್ಟೆಂಬರ್ 7ರಂದು ಜಗತ್ತಿನಾದ್ಯಂತ ‘ಜವಾನ್’ ಚಿತ್ರವು ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ.

Categories
ಸಿನಿ ಸುದ್ದಿ

ದೇವರ ಕನಸಿಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಸಾಕ್ಷಿ: ಸಿನಿಮಾ ಟ್ರೇಲರ್ ಹೊರಬಂತು

ಪ್ರತಿಷ್ಠಿತ ಕಾನ್ಸ್ ಸೇರಿದಂತೆ ಮೂವತ್ತಕ್ಕೂ ಅಧಿಕ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನವಾಗಿರುವ ಮಕ್ಕಳದೇವರ ಕನಸು ಚಿತ್ರ ಜುಲೈ 21 ರಂದು ತೆರೆಗೆ ಬರುತ್ತಿದೆ.

ಸುರೇಶ್ ಲಕ್ಕೂರ್ ನಿರ್ದೇಶಿಸಿರುವ “ದೇವರ ಕನಸು” ಚಿತ್ರದ ಟ್ರೇಲರ್ ಅಶ್ವಿನಿ ಪುನೀತ್ ರಾಜಕುಮಾರ್ ಅವರು ರಿಲೀಸ್ ಬಮಾಡಿ ಶುಭ ಹಾರೈಸಿದ್ದಾರೆ. ಇದೇ ಸಂದರ್ಭದಲ್ಲಿ ಚಿತ್ರದ ಮೂರು ಹಾಡುಗಳನ್ನು ಪ್ರದರ್ಶಿಸಲಾಯಿತು. ಪಿ.ಆರ್.ಕೆ ಸಂಸ್ಥೆ ಮೂಲಕ ಹಾಡುಗಳು ಬಿಡುಗಡೆಯಾಗಿದೆ.

ನಾನು ನ್ಯೂಯಾರ್ಕ್ ಫಿಲಂ ಅಕಾಡಮಿಯಲ್ಲಿ ಅಧ್ಯಯನ ‌ಮಾಡಿದ್ದೇನೆ ಎಂದು ಮಾತು ಪ್ರಾರಂಭಿಸಿದ ನಿರ್ದೇಶಕ ಸುರೇಶ್ ಲಕ್ಕೂರ್, “ದೇವರ ಕನಸು” ನನ್ನ ನಿರ್ದೇಶನದ ಮೊದಲ ಚಿತ್ರ. ಈ ಮಕ್ಕಳ ಚಿತ್ರ ಈಗಾಗಲೇ ಪ್ರತಿಷ್ಠಿತ ಕಾನ್ಸ್ ಫಿಲಂ ಫೆಸ್ಟಿವಲ್ ಸೇರಿದಂತೆ ಅನೇಕ ಫಿಲಂ ಫೆಸ್ಟಿವಲ್ ಗಳಲ್ಲಿ ಪ್ರದರ್ಶನವಾಗಿ ಪ್ರಶಂಸೆ ಪಡೆದುಕೊಂಡಿದೆ.

“ದೇವ” ಎನ್ನುವುದು ಈ ಚಿತ್ರದ ಮುಖ್ಯ ಪಾತ್ರಧಾರಿಯ ಹೆಸರು. ಈ ಪಾತ್ರದಲ್ಲಿ ಮಾಸ್ಟರ್ ದೀಪಕ್ ಅಭಿನಯಿಸಿದ್ದಾರೆ. ಈ ಹುಡುಗ ಕಾಣುವ ಕನಸು ಈಡೇರುವುದೊ ಅಥವಾ ಇಲ್ಲವೋ? ಎಂಬುದು ಕಥಾಹಂದರ. ‌ದೀಪಕ್, ಅಮೂಲ್ಯ, ಅಋಷಿ ವೇದಿಕ ಹಾಗೂ ಮಾಕ್ ಮಣಿ ಚಿತ್ರದ ಪ್ರಮುಖಪಾತ್ರಗಳಲ್ಲಿ ನಟಿಸಿದ್ದಾರೆ. ಜುಲೈ 21 ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ. ನೋಡಿ ಹಾರೈಸಿ ಎಂದರು.

ನಿರ್ಮಾಪಕರಾದ ಜಯ್ ಕುಮಾರ್, ಶೇಖರ್, ಕಥೆ ಬರೆದಿರುವ ಸುನೀಲ್ ರಾಮ್, ಹಾಡುಗಳು ಹಾಗೂ ಸಂಭಾಷಣೆ ರಚಿಸಿರುವ ಲಿಂಗರಾಜ್ ಇತಿಹಾಸ, ಸಂಗೀತ ನಿರ್ದೇಶಕ ಸ್ಯಾಂಡಿ ಹಾಗೂ ಚಿತ್ರದಲ್ಲಿ ನಟಿಸಿರುವ ಮಾಸ್ಟರ್ ದೀಪಕ್, ಬೇಬಿ ಅಮೂಲ್ಯ, ಅಋಷಿ ವೇದಿಕ, ಮಾಕ್ ಮಣಿ ಮುಂತಾದವರು ಮಾತನಾಡಿದರು.

.

Categories
ಸಿನಿ ಸುದ್ದಿ

ಸೆಪ್ಟೆಂಬರ್ 7 ಕ್ಕೆ ಜವಾನ್ ಆಗಮನ; ಇಂದು ಪ್ರಿವ್ಯೂ ರಿಲೀಸ್: ಇದು ಶಾರುಖ್ ಖಾನ್ ನಿರ್ಮಾಣದ, ಆಟ್ಲಿ ನಿರ್ದೇಶನದ ‌ಸಿನಿಮಾ

ಶಾರುಖ್ ಖಾನ್ ಅವರ ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. ಶಾರುಖ್ ಅಭಿನಯದ ‘ಜವಾನ್’ ಚಿತ್ರದ ಪ್ರಿವ್ಯೂ ಸೋಮವಾರ (ಜುಲೈ 10)ಇಂದು ಬೆಳಿಗ್ಗೆ 10:30ಕ್ಕೆ ಬಿಡುಗಡೆಯಾಗಲಿದೆ .


ಯಾವಾಗ ‘ಕಿಂಗ್’ ಖಾನ್, ತಮಿಳಿನ ಜನಪ್ರಿಯ ನಿರ್ದೇಶಕ ಅಟ್ಲಿ ಜೊತೆಗೆ ಒಂದು ಚಿತ್ರ ಮಾಡುತ್ತಾರೆ ಎಂಬ ಎರಡು ವರ್ಷಗಳ ಹಿಂದೆ ಸುದ್ದಿಯಾಯಿತೋ, ಆಗಿನಿಂದಲೇ ‘ಜವಾನ್’ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಗಳು ಗರಿಗೆದರಿದ್ದವು. ಒಬ್ಬರು ದೇಶದ ಸೂಪರ್ಸ್ಟಾರ್ ನಟ. ಇನ್ನೊಬ್ಬರು ದಕ್ಷಿಣ ಭಾರತದ ಜನಪ್ರಿಯ ನಿರ್ದೇಶಕರಲ್ಲೊಬ್ಬರು. ಇವರಿಬ್ಬರೂ ಒಂದು ಸಿನಿಮಾಗೆ ಕೈಜೋಡಿಸಿದಾಗ, ಸಹಜವಾಗಿಯೇ ಬೆಟ್ಟದಷ್ಟು ಕುತೂಹಲ ಮತ್ತು ನಿರೀಕ್ಷೆಗಳು ಅಭಿಮಾನಿಗಳ ವಲಯದಲ್ಲಿತ್ತು.


ಆದರೆ, ಚಿತ್ರತಂಡದವರು ಒಂದೆರೆಡು ಪೋಸ್ಟರ್ಸ್ ಬಿಡುಗಡೆ ಮಾಡಿದ್ದು ಬಿಟ್ಟರೆ, ಮಿಕ್ಕಂತೆ ಚಿತ್ರದ ಬಗ್ಗೆ ರಹಸ್ಯ ಕಾಪಾಡಿಕೊಂಡಿದ್ದರು. ಈಗ ಚಿತ್ರದ ಬಿಡುಗಡೆ ಹತ್ತಿರ ಬರುತ್ತಿದ್ದಂತೆಯೇ, ಚಿತ್ರದ ಪ್ರಿವ್ಯೂ ಬಿಡುಗಡೆಯಾಗುವುದಕ್ಕೆ ವೇದಿಕೆ ಸಜ್ಜಾಗಿದೆ. ಈ ಪ್ರಿವ್ಯೂನಲ್ಲಿ ಚಿತ್ರದಲ್ಲಿನ ಶಾರುಖ್ ಅವರ ಫಸ್ಟ್ ಲುಕ್ ಹೊರ ಬೀಳಲಿದೆ.
ಬರೀ ಅಭಿಮಾನಿಗಳ ವಲಯದಲ್ಲಷ್ಟೇ ಅಲ್ಲ, ಇಡೀ ಭಾರತೀಯ ಚಿತ್ರರಂಗದಲ್ಲೇ ಈ ಚಿತ್ರದ ಬಗ್ಗೆ ಕುತೂಹಲ ಮತ್ತು ನಿರೀಕ್ಷೆಗಳು ಹೆಚ್ಚಾಗಿದೆ.

‘ಜವಾನ್’ ಚಿತ್ರವು ಸೆಪ್ಟೆಂಬರ್ 7ರಂದು ಜಗತ್ತಿನಾದ್ಯಂತ ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ

‘ಜವಾನ್’ ಚಿತ್ರವನ್ನು ರೆಡ್ ಚಿಲ್ಲೀಸ್ ಎಂಟರ್ಟೈನ್ಮೆಂಟ್ ಸಂಸ್ಥೆಯಡಿ ಗೌರಿ ಖಾನ್ ನಿರ್ಮಿಸುತ್ತಿದ್ದು, ಅಟ್ಲಿಯವರ ನಿರ್ದೇಶನದಲ್ಲಿ ಮೂಡಿಬಂದಿದೆ

error: Content is protected !!