Categories
ಸಿನಿ ಸುದ್ದಿ

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ, ಗೀತ ಸಾಹಿತಿ ಸಿ.ವಿ.ಶಿವಶಂಕರ್ ವಿಧಿವಶ

ಹಿರಿಯ ನಿರ್ದೇಶಕ ಹಾಗು ಗೀತ ಸಾಹಿತಿ ಸಿ.ವಿ. ಶಿವಶಂಮಕರ್ ನಿಧನರಾಗಿದ್ದಾರೆ. ಕನ್ನಡ ಸಿನಿಮಾರಂಗಕ್ಕೆ ತಮ್ಮದೇ ಕೊಡುಗೆ ನೀಡಿದ್ದ ಶಿವಶಂಕರ್ ಅವರು, ಇಂದಿಗೂ ನೆನಪಿಸುವ ಗೀತೆಗಳನ್ನು ರಚಿಸಿದ್ದಾರೆ.

ಬಾಲನಟರಾಗಿ ರಂಗಭೂಮಿ ಪ್ರವೇಶಿಸಿದ ಇವರು, ಸ್ಕೂಲ್ ಮಾಸ್ಟರ್, ರತ್ನಗಿರಿ ರಹಸ್ಯ, ಕೃಷ್ಣ ಗಾರುಡಿ, ಧರ್ಮ ವಿಜಯ, ಭಕ್ತ ವಿಜಯ, ರತ್ನ ಮಂಜರಿ, ವೀರ ಸಂಕಲ್ಪ, ಆಶಾ ಸುಂದರಿ, ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಶಿವಶಂಕರ್ ನಟಿಸುವುದರ ಜೊತೆಗೆ ಸಾಹಿತ್ಯವನ್ನೂ ರಚಿಸಿದ್ದಾರೆ. ‘ಮನೆ ಕಟ್ಟಿ ನೋಡು’ , ಪದವೀಧರ, ನಮ್ಮ ಊರು, , ಮಹಡಿಯ ಮನೆ,ಹೊಯ್ಸಳ, ಮಹಾತಪಸ್ವಿ, ವೀರಮಹಾದೇವ , ಕನ್ನಡ ಕುವರ ಚಿತ್ರ ಗಳನ್ನು ನಿರ್ದೇಶಿಸಿದ್ದಾರೆ ಶಿವಶಂಕರ್.


1991 ರಲ್ಲಿ ಕರ್ನಾಟಕ ರಾಜ್ಯ ಪ್ರಶಸ್ತಿ, 1994 ರಲ್ಲಿ ರಾಜ್ಯೋತ್ಸವ ಪ್ರಶ್ತಿ, ಸಿಂಗನಲ್ಲೂರು ಪುಟ್ಟಸ್ವಾಮಯ್ಯ ರಾಜಕುಮಾರ್ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಇವರಿಗೆ ಸಂದಿವೆ.

ಶಿವಶಂಕರ್ ಅವರು ಬರೆದ ಗೀತೆಗಳಲ್ಲಿ ಅಪಾರ ಮೆಚ್ಚುಗೆ ಪಡೆದ ಗೀತೆಗಳಿವು.

  • ಕನ್ನಡದಾ ರವಿಮೂಡಿ ಬಂದಾ, ಮುನ್ನಡೆಯ ಬೆಳಕನ್ನು ತಂದಾ
  • ನಾಡಚರಿತೆ ನೆನಪಿಸುವ ವೀರ ಗೀತೆಯಾ, ಹಾಡು ನೀನು ಕನ್ನಡಿಗಾ ದೇಶಗೀತೆಯ
  • ಸಿರಿವಂತನಾದರೂ ಕನ್ನಡ ನಾಡಲ್ಲಿ ಮೆರೆವೇ, ಭಿಕ್ಷುಕನಾದರೂ ಕನ್ನಡ ಮನ್ನಲ್ಲೇ ಮಡಿವೇ
Categories
ಸಿನಿ ಸುದ್ದಿ

ಬಕ್ರೀದ್ ಕುರುಬಾನಿ 7 ಸ್ಟಾರ್ ಸುಲ್ತಾನ ಕ್ಯಾನ್ಸಲ್: ಟಗರುಪಲ್ಯ ತಂಡ ಹಾಗು ಫ್ಯಾನ್ಸ್ ಒತ್ತಾಯಕ್ಕೆ ಮಣಿದ ಮಾಲೀಕ

ಡಾಲಿ ಧನಂಜಯ್ ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ನಿರ್ಮಿಸುತ್ತಿರುವ, ನಾಗಭೂಷಣ್ ಹಾಗೂ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ಪ್ರೇಮ್ ನಟಿಸುತ್ತಿರುವ ಸಿನಿಮಾ ಟಗರು ಪಲ್ಯ. ಉಮೇಶ್ ಕೆ ಕೃಪ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರದಲ್ಲಿ ಅನೇಕ ಟಗರು ಕಾಳಗದಲ್ಲಿ ಗೆದ್ದಿ ಬೀಗಿರುವ 7 ಸ್ಟಾರ್ ಸುಲ್ತಾನ ಹೆಸರಿನ ಟಗರನ್ನು ಬಕ್ರೀದ್ ಹಬ್ಬಕ್ಕೆ ಕುರುಬಾನಿ ಕೊಡಲು ಮಾಲೀಕ ತೀರ್ಮಾನ ನಡೆಸಿದ್ದರು.

ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು. ಯಾವುದೇ ಕಾರಣಕ್ಕೂ 7 ಸ್ಟಾರ್ ಸುಲ್ತಾನನ್ನು ಕುರುಬಾನಿ ಕೊಡಬಾರದು ಎಂಬ ದೊಡ್ಡ ಅಭಿಯಾನವೇ ಶುರುವಾಗಿತ್ತು. ಈ ಬಗ್ಗೆ ಟಗರು ಪಲ್ಯ ಚಿತ್ರತಂಡ ಮಾಲೀಕರಿಗೆ ಕುರುಬಾನಿ ಕೊಡದಂತೆ ಸಲಹೆ ನೀಡಿತ್ತು. ಅಭಿಮಾನಿಗಳು ಹಾಗೂ ಚಿತ್ರತಂಡದ ಮನವಿಗೆ ಪ್ರತಿಫಲ ಸಿಕ್ಕಿದ್ದು, 7 ಸ್ಟಾರ್ ಸುಲ್ತಾನನ್ನು ಕುರುಬಾನಿ ಕೊಡದಿರಲು ಮಾಲೀಕರು ತೀರ್ಮಾನ ನಡೆಸಿದ್ದಾರೆ.

ಬಾಗಲಕೋಟೆ ತಾಲೂಕಿನ ಸುತಗುಂಡಾರ ಗ್ರಾಮದ‌ ಮಾಲೀಕ ಯುನೀಸ್ ಗಡೇದ್ ಬಕ್ರೀದ್ ಹಬ್ಬಕ್ಕೆ ಕುರ್ಬಾನಿ ಕೊಡಲೆಂದೇ ಎರಡೂವರೆ ವರ್ಷದ ಹಿಂದೆ 7 ಸ್ಟಾರ್ ಸುಲ್ತಾನ್ ಟಗರನ್ನು 1 ಲಕ್ಷ 88 ಸಾವಿರದ ಐನೂರು ರೂ ಗೆ ಖರೀದಿಸಿದ್ದರು. ಆದರೆ ಕುರ್ಬಾನಿಗೂ ಮುನ್ನ ಟಗರನ್ನು ಕಾಳಗಕ್ಕೆ ಇಳಿಸಲಾಗಿದ್ದು ಟಗರು ಅನೇಕ ಬಹುಮಾನಗಳನ್ನು ತನ್ನದಾಗಿಸಿಕೊಂಡಿದೆ. ಇಲ್ಲಿಯ ವರೆಗೆ 34 ಕಣಗಳಲ್ಲಿ ಪ್ರಥಮ ಬಹುಮಾನ ಗಳಿಸಿದ್ದು ಸುಮಾರು 20 ಲಕ್ಷದಷ್ಟು ಹಣ, ಬೆಳ್ಳಿ, ಬಂಗಾರ, ಬೈಕ್ಗಳನ್ನ ಗೆದ್ದು ಬೀಗಿದೆ.

ಹೀಗಾಗಿ ಮಾಲೀಕ ಯುನೀಸ್ ಈ ಟಗರಿಗೆ 7 ಸ್ಟಾರ್ ಸುಲ್ತಾನ್ ಎಂದು ಹೆಸರಿಟ್ಟರು. ಆದ್ರೆ ಅಂದುಕೊಂಡಂತೆ ಈ ಬಾರಿಯ ಬಕ್ರೀದ್ ಹಬ್ಬಕ್ಕೆ ಈ ಟಗರನ್ನ ಕುರ್ಬಾನಿ ನೀಡಲು ನಿರ್ಧರಿಸಿದ್ದರು. ಸಾಧಕ ಟಗರನ್ನು ಕುರ್ಬಾನಿ‌ ಮಾಡದಂತೆ ಅಭಿಮಾನಿಗಳಿಂದ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಶುರುವಾಗಿತ್ತು. ಹೀಗಾಗಿ ಅಭಿಮಾನಿಗಳ ಒತ್ತಾಸೆಗೆ‌ ಮಣಿದು 7 ಸ್ಟಾರ್ ಸುಲ್ತಾನನ ಕುರ್ಬಾನಿ ಕೊಡದಿರಲು ಯುನೀಸ್ ನಿರ್ಧರಿಸಿದ್ದಾರೆ.

ಯಾವಾಗ ರಿಲೀಸ್ ‘ಟಗರು ಪಲ್ಯ’?

ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲೆಂದು ಹಾಗೂ ಕಂಟೆಂಟ್ ಆಧಾರಿತ ಚಿತ್ರ ನಿರ್ಮಿಸಲು ಧನಂಜಯ್ ಪ್ರಾರಂಭಿಸುವ ಡಾಲಿ ಪಿಕ್ಚರ್ಸ್ ನಿರ್ಮಾಣ ಸಂಸ್ಥೆಯ‌ ಮೂರನೇ ಕೊಡುಗೆ ಟಗರು ಪಲ್ಯ. ಇಕ್ಕಟ್, ಬಡವ ರಾಸ್ಕಲ್ ಸಿನಿಮಾಗಳ ಖ್ಯಾತಿಯ ನಾಗಭೂಷಣ್ ನಾಯಕನಾಗಿ ನಟಿಸುತ್ತಿದ್ದು, ಇವರಿಗೆ ಜೋಡಿ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ನಾಯಕಿಯಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ.

ಮಂಡ್ಯ ಹಳ್ಳಿಗಳಲ್ಲಿ ನಡೆಯುವ ಆಚರಣೆ ಸುತ್ತಾ ಇಡೀ ಸಿನಿಮಾವನ್ನು ಕಟ್ಟಿಕೊಡಲಾಗಿದೆ. ತಾರಾ, ಶರತ್ ಲೋಹಿತಾಶ್ವ, ರಂಗಾಯಣ ರಘು ಸೇರಿದಂತೆ ದೊಡ್ಡತಾರಾಬಳಗವಿರುವ ಟಗರು ಪಲ್ಯ ಸಿನಿಮಾಗೆ ವಾಸುಕಿ ವೈಭವ್ ಟ್ಯೂನ್ ಹಾಕಿದ್ದು, ಎಸ್ ಕೆ ರಾವ್ ಕ್ಯಾಮೆರಾ ಹಿಡಿದಿದ್ದಾರೆ. ಸದ್ಯ ಶೂಟಿಂಗ್ ಮುಗಿಸಿರುವ ಚಿತ್ರ‌ತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ.

Categories
ಸಿನಿ ಸುದ್ದಿ

ಇವಳು ಕೃಷ್ಣೇಗೌಡರ ಪ್ರೀತಿಯ ಕುಸುಮ! ಜೂನ್ 30ಕ್ಕೆ ನಾನು ಕುಸುಮ ರಿಲೀಸ್…

ನಟ, ನಿರ್ಮಾಪಕ ಕಮ್ ನಿರ್ದೇಶಕ ಕೃಷ್ಣೇಗೌಡ ಅವರು ಕನ್ನಡ ಸಿನಿರಂಗದಲ್ಲಿ ಒಂದಷ್ಟು ಸದ್ದು ಮಾಡಿದವರು. ಕನ್ನಡ ಸಿನಿಮಾರಂಗದ ಒಳಿತಿಗೆ ಹೋರಾಡುತ್ತಲೇ ತಮ್ಮ ನೇರ ಮಾತುಗಳ ಮೂಲಕ ಒಂದಷ್ಟು ಗೆಳೆಯರಿಗೆ ಹತ್ತಿರವಾದವರು.
ಸಿನಿಮಾರಂಗವನ್ನು ಆಳವಾಗಿ ಪ್ರೀತಿಸುವ, ಯೋಚಿಸುವ ಕೃಷ್ಣೇಗೌಡರು ಈಗಾಗಲೇ ಸದಭಿರುಚಿಯ ಮತ್ತು ಸೂಕ್ಷ್ಮತೆಯ ಅಂಶಗಳಿರುವ ಕಥೆ ಆಯ್ಕೆ ಮಾಡಿಕೊಂಡು ಸಿನಿಮಾ ನಿರ್ಮಿಸಿ, ನಿರ್ದೇಶಿಸಿದ್ದಾರೆ. ಆ ಸಾಲಿಗೆ ನಾನು ಕುಸುಮ ಸಿನಿಮಾ ಕೂಡ ಸೇರಿದೆ ಎಂಬುದು ವಿಶೇಷ.

ಕನ್ನಡ ಮಾತ್ರವಲ್ಲ, ಸಾಗರದಾಚೆಗೂ ಅವರ ಸಿನೀಮಾಗಳು ಸುದ್ದಿ ಮಾಡಿವೆ. ಹಲವು ರಾಷ್ಟ್ರ ಪ್ರಶಸ್ತಿಗಳನ್ನೂ ಪಡೆದುಕೊಂಡಿವೆ. ಇತ್ತೀಚೆಗೆ ಅವರ ಪಿಂಕಿ ಎಲ್ಲಿ ? ಶಿನಿಮಾ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿ, ನೋಡುಗರ ಗಮನ ಸೆಳೆದಿತ್ತು. ಈಗ ಮತ್ತೊಂದು ಕಾಡುವ ಹೊಸ ಕಥೆಯೊಂದಿಗೆ ಪ್ರೇಕ್ಷಕರ ಎದುರು ಬರಲು ತಯಾರಿ ನಡೆಸುತ್ತಿದ್ದಾರೆ.


ಹೌದು, ಅವರ ನಿರ್ಮಾಣ ನಿರ್ದೇಶನದ ‘ನಾನು ಕುಸುಮ’ ಸಿನಿಮಾ ಜೂನ್ 30 ರಂದು ತೆರೆ ಕಾಣುತ್ತಿದೆ. ಹಿರಿಯ ಲೇಖಕ ಬೆಸಗರಹಳ್ಳಿ ರಾಮಣ್ಣ ಅವರ ಕಥೆ ಆಧರಿಸಿ ತಯಾರಾಗಿರುವ ‘ನಾನು ಕುಸುಮ’ ಚಿತ್ರಕ್ಕೆ ಕೃಷ್ಣೇಗೌಡ ನಿರ್ಮಾಪಕರು. ಅಷ್ಟೇ ಅಲ್ಲ, ನಿರ್ದೇಶಕರೂ ಹೌದು.

ಕುಸುಮಳ ಕಥೆ ಏನು?

ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುವ ಹುಡುಗಿಯೊಬ್ಬಳು ಅಲ್ಲಿ ಏನೆಲ್ಲ ಸಮಸ್ಯೆಗಳಿಗೆ ಸಿಲುಕುತ್ತಾಳೆ, ಯಾವೆಲ್ಲ ಶೋಷಣೆ ಅನುಭವಿಸುತ್ತಾಳೆ ಎನ್ನುವುದರ ಸುತ್ತ ‘ನಾನು ಕುಸುಮ’ ಸಿನಿಮಾದ ಕಥೆ ಸಾಗುತ್ತದೆ. ಭಾವುಕ ಮತ್ತು ಭಾವನಾತ್ಮಕ ಅಂಶಗಳು ಇಲ್ಲಿ ಹೈಲೆಟ್. ಗ್ರೀಷ್ಮಾ ಶ್ರೀಧರ್, ಸನಾತನಿ ಜೋಶಿ, ಕಾವ್ಯಾ ಶ್ರೀಧರ್, ಕೃಷ್ಣೇಗೌಡ, ಸೌಮ್ಯ ಭಾಗವತ್, ಪ್ರತಿಭಾ ಸಂಶಿಮಠ್, ವಿಜಯ್ ಇತರರು ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಇತ್ತೀಚೆಗೆ ನಡೆದ ‘14ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ದಲ್ಲಿ ಪ್ರದರ್ಶನಗೊಂಡ ಈ ಸಿನಿಮಾ, ಪ್ರಥಮ ಅತ್ಯುತ್ತಮ ಕನ್ನಡ ಚಿತ್ರ ಪ್ರಶಸ್ತಿ ಪಡೆದುಕೊಂಡಿದೆ.

‘ನಾನು ಕುಸುಮ’ ಈಗಾಗಲೇ ‘ಇಂಡಿಯನ್ ಪನೋರಮಾ’, ‘ರಾಜಸ್ಥಾನ್ ಫಿಲಂ ಫೆಸ್ಟಿವಲ್’, ‘ತ್ರಿಶೂರ್ ಫಿಲಂ ಫೆಸ್ಟಿವಲ್’ ಸೇರಿದಂತೆ ಹಲವು ಪ್ರತಿಷ್ಠಿತ ಚಲನ ಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿದೆ.

ನಾನು ಕುಸುಮ’ ಸಿನಿಮಾಗೆ ಅರ್ಜುನ್ ರಾಜಾ ಕ್ಯಾಮೆರಾ ಹಿಡಿದಿದ್ದಾರೆ. ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಆಸ್ಪತ್ರೆ, ವಾರ್ಡ್, ಗಲ್ಲಿ, ಮನೆ… ಹೀಗೆ ಸಿನಿಮಾದಲ್ಲಿ ಬರುವ ಎಲ್ಲ ಸ್ಥಳಗಳನ್ನು ನೈಜ ಲೊಕೇಶನ್ ಗಳಲ್ಲೇ ಚಿತ್ರೀಕರಿಸಲಾಗಿದೆ.

ಸಿಂಕ್ ಸೌಂಡ್ ನಲ್ಲಿ ಹಿನ್ನೆಲೆ ಧ್ವನಿಗ್ರಹಣ ಮಾಡಿರುವುದು ಸಿನಿಮಾದ ವಿಶೇಷ. ಈಗಾಗಲೇ ಚಿತ್ರೋತ್ಸವಗಳ ಮೂಲಕ ಚಿತ್ರರಂಗದಲ್ಲಿ ಅನೇಕ ಖ್ಯಾತನಾಮರ ಗಮನ ಸೆಳೆದಿರುವ ‘ನಾನು ಕುಸುಮ’ ಜೂನ್ 30 ರಂದು ರಾಜ್ಯಾದ್ಯಂತ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ.

Categories
ಸಿನಿ ಸುದ್ದಿ

ಸಂಚಿತ್ ಸಂಜೀವ್ ಎಂಬ ಹುಡುಗನಾದ ನಾನು ಜಿಮ್ಮಿ ಚಿತ್ರದ ಹೀರೋ: ಸುದೀಪ್ ಅಳಿಯನ ಸಿನಿಮಾ ಎಂಟ್ರಿ

ಖ್ಯಾತ ನಟ ಕಿಚ್ಚ ಸುದೀಪ್ ಅವರ ಅಕ್ಕನ ಮಗ ಸಂಚಿತ್ ಸಂಜೀವ್ ನಾಯಕರಾಗಿ ನಟಿಸಿ, ನಿರ್ದೇಶಿಸುತ್ತಿರುವ ಚಿತ್ರ “ಜಿಮ್ಮಿ”. ಚಿತ್ರದ ಕ್ಯಾರೆಕ್ಟರ್ ಟೀಸರ್ ಬಿಡುಗಡೆಯಾಗಿದೆ.
ಸುದೀಪ್ ಅವರ ತಂದೆ ಸಂಜೀವ್ ಹಾಗೂ ತಾಯಿ ಸರೋಜ ಸಂಜೀವ್(ಸಂಚಿತ್ ಅಜ್ಜಿ-ತಾತಾ) ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ.


ಕ್ರೇಜಿಸ್ಟಾರ್ ರವಿಚಂದ್ರನ್, ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ಶಾಸಕ, ಮುನಿರತ್ನ, ಸಂಗೀತ ನಿರ್ದೇಶಕ ಗುರುಕಿರಣ್, ನಿರ್ದೇಶಕರ ಆದ ಆರ್ ಚಂದ್ರು, ಅನೂಪ್ ಭಂಡಾರಿ ಸೇರಿದಂತೆ ಸ್ಯಾಂಡಲ್ ವುಡ್ ನ ಅನೇಕ ಗಣ್ಯರು ಈ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. ಕ್ಯಾರೆಕ್ಟರ್ ಟೀಸರ್ ಗೆ ವಾಸುಕಿ ವೈಭವ್ ಸಂಗೀತ ನೀಡಿದ್ದಾರೆ. ಸುದೀಪ್ ಪುತ್ರಿ ಸಾನ್ವಿ ಹಾಡಿದ್ದು ವಿಶೇಷ.

ವೆಲ್ಕಮ್ ಟು ಎಸ್ ಗ್ರೂಪ್ ಎಂದು ಮಾತು ಆರಂಭಿಸಿದ ಶಿವರಾಜಕುಮಾರ್, ಎಸ್ ಅಂದರೆ ಸುಪೀರಿಯರ್ ಮತ್ತು ಸೂಪರ್ಬ್ ಅಂತ. ನಿಮ್ಮಲ್ಲಿ ನಿಮ್ಮ ತಾಯಿ ಮುಖ ಇದೆ. ಸಂಜೀವ್ ಅವರ ಗಾಂಭೀರ್ಯ ಮತ್ತು ಸುದೀಪ್ ಅವರ ಧ್ವನಿ ಇದೆ. ತಾಯಿ ಮುಖ ಬಂದರೆ ಲಕ್ ಜಾಸ್ತಿ. ತುಂಬಾ ಚೆನ್ನಾಗಿ ಕಾಣುತ್ತೀರಾ. ಮೇಕಿಂಗ್ ಚೆನ್ನಾಗಿದೆ. ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿದ್ದೀರಿ ಒಳ್ಳೆಯದಾಗಲಿ ಎಂದು ಶುಭ ಕೋರಿದರು ‌

ಈ ಸಂದರ್ಭದಲ್ಲಿ ಮಾತನಾಡಿದ ಕ್ರೇಜಿಸ್ಟಾರ್ ರವಿಚಂದ್ರನ್, ಸಂಚಿತ್ ನಾಯಕನಾಗಿ ನಟಿಸುತ್ತಿದ್ದಾರೆ ಅಂದುಕೊಂಡಿದ್ದೆ. ನಿರ್ದೇಶನ ಮಾಡುತ್ತಿರುವುದು ಗೊತ್ತಿರಲಿಲ್ಲ. ಇಲ್ಲಿ ಬಂದ ಮೇಲೆ ಗೊತ್ತಾಯಿತು. ಮೊದಲು ಖುಷಿಯಾಗಿದ್ದು ಅವರ (ಸಂಚಿತ್) ಅಜ್ಜಿ ಮುಖದ ಮೇಲಿರುವ ನಗು. ಅವರಿಗಾಗುತ್ತಿರುವ ಸಂತೋಷ ನೋಡಿ ಖುಷಿ ಆಯ್ತು. ಸುದೀಪ್ ಎಲ್ಲದಕ್ಕೂ ಕರೆಯುತ್ತಾರೆ. ಬರುವುದಿಲ್ಲ ಅಂದರೂ ಬಿಡುವುದಿಲ್ಲ. ಅದು ಹೇಗೆ ಬರುವುದಿಲ್ಲ ಎನ್ನುತ್ತಾರೆ? ಆ ರೀತಿ ನನ್ನ ಅವರ ಸಂಬಂಧ. ಸುದೀಪ್ ಅವರ ತಂದೆಯವರದು ನಮ್ಮದು ಕೂಡ ಹಳೆಯ ಸಂಬಂಧ. ಟ್ರೇಲರ್ ನೋಡಿದ ತಕ್ಷಣ ವೈಬ್ರೇಷನ್ ಇದೆ. ನೀವು ತೆರೆಯ ಮೇಲೆ ಚೆನ್ನಾಗಿ ಕಾಣುತ್ತೀರಿ. ಸುದೀಪ್ ನೋಡಿದ ಹಾಗೆ ಅನಿಸುತ್ತದೆ. ವಾಸುಕಿ ವೈಭವ್ ತಮ್ಮ ಜಾನರ್ ಬದಲಾಯಿಸಿದ್ದಾರೆ. ಈ ಬಾರಿ ಬೇರೆ ತರಹ ಸಂಗೀತ ಮಾಡಿದ್ದಾರೆ. ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು.

ನನಗೆ ಶಿವರಾಜಕುಮಾರ್ ಹಾಗೂ ರವಿಚಂದ್ರನ್ ಅವರು ಸ್ಪೂರ್ತಿ. ಅವರಿಂದಲೇ ನಮ್ಮ ಸಂಚಿತ್ ನನ್ನು ಚಿತ್ರರಂಗಕ್ಕೆ ಪರಿಚಯಿಸುವ ಆಸೆಯಿತ್ತು. ಅದು ಇಂದು ಈಡೇರಿದೆ. ಹಾಗಾಗಿ ಅವರಿಬ್ಬರಿಗೂ ವಿಶೇಷ ಧನ್ಯವಾದ. ಅನೇಕ ಹಿರಿಯರು ಕನ್ನಡ ಚಿತ್ರರಂಗದಲ್ಲಿ ಭದ್ರಕೋಟೆ ಕಟ್ಟಿದ್ದಾರೆ. ಅದನ್ನು ಕಾಪಾಡಿಕೊಂಡು ಹೋಗುವ ಜವಾಬ್ದಾರಿ ಸಂಚಿತ್ ನಂತಹ ಯುವಕರದು ಎಂದು ಕಿಚ್ಚ ಸುದೀಪ್ ಹೇಳಿದರು.

ರವಿಚಂದ್ರನ್ ಹಾಗೂ ಶಿವರಾಜಕುಮಾರ್ ಅವರಿಗೆ ನನ್ನ ಧನ್ಯವಾದ. ಸುದೀಪ್ ಮಾವ ಹಾಗೂ ಪ್ರಿಯ ಅತ್ತೆ ಅವರ ಪ್ರೋತ್ಸಾಹಕ್ಕೆ ನಾನು ಚಿರ ಋಣಿ. ನಿರ್ಮಾಪಕರಾದ ಜಿ.ಮನೋಹರನ್, ಕೆ.ಪಿ.ಶ್ರೀಕಾಂತ್ ಹಾಗೂ ಪ್ರಿಯಾ ಸುದೀಪ್ ಅವರು ನನ್ನ‌ ಮೇಲೆ ಭರವಸೆಯಿಟ್ಟು ನಿರ್ಮಾಣ ಮಾಡುತ್ತಿದ್ದಾರೆ. ಅವರಿಗೂ ವಿಶೇಷ ಧನ್ಯವಾದ. ಆಗಸ್ಟ್ ನಲ್ಲಿ ಚಿತ್ರೀಕರಣ ಆರಂಭಿಸುತ್ತಿದ್ದೇವೆ‌. ಮುಂದಿನ ದಿನಗಳಲ್ಲಿ ಚಿತ್ರದ ಕುರಿತು ಹೆಚ್ಚು ಮಾಹಿತಿ ನೀಡುವುದಾಗಿ ನಾಯಕ ಹಾಗೂ ನಿರ್ದೇಶಕ ಸಂಚಿತ್ ಸಂಜೀವ್ ತಿಳಿಸಿದರು.

ಲಹರಿ ವೇಲು, ಕೆ.ಪಿ.ಶ್ರೀಕಾಂತ್, ಪ್ರಿಯಾ ಸುದೀಪ್, ಸಂಗೀತ ನಿರ್ದೇಶಕ ವಾಸುಕಿ ವೈಭವ್ ಚಿತ್ರದ ಕುರಿತು ಮಾತನಾಡಿದರು. ಸಾನ್ವಿ ಸುದೀಪ್ “ಜಿಮ್ಮಿ” ಚಿತ್ರದ ಹಾಡು ಹಾಡಿದರು.

Categories
ಸಿನಿ ಸುದ್ದಿ

ಬೆಂಗಳೂರಲ್ಲಿ ‘ಸ್ಪೈ’ ಅದ್ಧೂರಿ ಪ್ರಚಾರ: ಜೂನ್ 29ಕ್ಕೆ ನಿಖಿಲ್ ಸಿದ್ಧಾರ್ಥ್ ಸಿನಿಮಾ ರಿಲೀಸ್

ಕಾರ್ತಿಕೇಯ, ಕಾರ್ತಿಕೇಯ-2 ಬ್ಲಾಕ್ ಬಸ್ಟರ್ ಹಿಟ್ ಬಳಿಕ ನಿಖಿಲ್ ಸಿದ್ಧಾರ್ಥ್ ನಟಿಸುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ ಸ್ಪೈ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಇದೇ 29ಕ್ಕೆ ವಿಶ್ವಾದ್ಯಂತ ರಿಲೀಸ್ ಆಗ್ತಿರುವ ಚಿತ್ರದ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದೆ. ಮುಂಬೈನಲ್ಲಿ ಪ್ರಮೋಷನ್ ಮುಗಿಸಿ ನೇರವಾಗಿ ಬೆಂಗಳೂರಿಗೆ ಬಂದಿಳಿದ ಚಿತ್ರತಂಡವನ್ನು ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಭಾ.ಮಾ,ಹರೀಶ್ ಸ್ವಾಗತಿಸಿ ಶುಭಕೋರಿದರು. ಬಳಿಕ ಚಿತ್ರತಂಡ ಮಾಧ್ಯಮದವರೊಂದಿಗೆ ತಮ್ಮ ಬಹುನಿರೀಕ್ಷಿತ ಸ್ಪೈ ಬಗ್ಗೆ ಸಾಕಷ್ಟು ವಿಷಯವನ್ನು ಹಂಚಿಕೊಂಡರು.

ನಟ ನಿಖಿಲ್ ಸಿದ್ಧಾರ್ಥ್ ಮಾತನಾಡಿ, ಕಾರ್ತಿಕೇಯ ಸಿನಿಮಾಗೆ ಕರ್ನಾಟದಲ್ಲಿ ಒಳ್ಳೆ ರೆಸ್ಪಾನ್ಸ್ ಸಿಕ್ಕಿದೆ. ಕನ್ನಡ ಪ್ರೆಕ್ಷಕರಿಗೆ ನನ್ನ ಧನ್ಯವಾದ. ಅದೇ ರೀತಿ ಜೂನ್ 29ಕ್ಕೆ ಬರ್ತಿರುವ ಸ್ಪೈ ಚಿತ್ರಕ್ಕೆ ನಿಮ್ಮ ಬೆಂಬಲ ಇರಲಿ. ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಸಿನಿಮಾ ಮಾಡಿರೋದು ನನಗೆ ಹೆಮ್ಮೆ ಇದೆ. ಅವರ ಸಾವಿನ ಬಗ್ಗೆ ಈ ಚಿತ್ರದ ಮೂಲಕ ಒಂದು ಕ್ಲಾರಿಟಿ ಸಿಗಲಿದೆ. ಆಕ್ಷನ್, ಎಂಟರ್ ಟೈನರ್ ಎಲ್ಲವೂ ಚಿತ್ರದಲ್ಲಿದೆ. ಪ್ರತಿಯೊಬ್ಬ ಭಾರತೀಯ ಈ ಸಿನಿಮಾ ನೋಡಲೇಬೇಕು.

ನಟಿ ಐಶ್ವರ್ಯ ಮೆನನ್ ಮಾತನಾಡಿ, ಇದೇ 29ಕ್ಕೆ ಸ್ಪೈ ಸಿನಿಮಾ ರಿಲೀಸ್ ಆಗ್ತಿದೆ. ಪ್ರತಿಯೊಬ್ಬರೂ ಚಿತ್ರಕ್ಕೆ ಬೆಂಬಲ ನೀಡಿ. ನಾನು ವೈಷ್ಣವಿ ಎಂಬ ಪಾತ್ರದಲ್ಲಿ ನಟಿಸಿದ್ದು, ರಾ ಏಜೆಂಟ್ ಆಗಿ ಕಾಣಿಸಿಕೊಂಡಿದ್ದೇನೆ. ದಾಸವಾಳ ಹಾಗೂ ನಮೋ ಭೂತಾತ್ಮ ಕನ್ನಡ ಸಿನಿಮಾಗಳಲ್ಲಿ ನನ್ನ ಜರ್ನಿ ಶುರುವಾಗಿದೆ. ಕನ್ನಡ ಇಂಡಸ್ಟ್ರೀ ನನಗೆ ಬಹಳ ವಿಶೇಷ. ಸ್ಪೈ ಕನ್ನಡದಲ್ಲಿಯೂ ಬಿಡುಗಡೆಯಾಗುತ್ತಿದೆ. ಪ್ರತಿಯೊಬ್ಬರಿಗೂ ಈ ಚಿತ್ರ ಇಷ್ಟವಾಗಲಿದೆ ಎಂದರು.

CTR ದೋಸೆ ಚಪ್ಪರಿಸಿ ತಿಂದ ನಿಖಿಲ್
ಬೆಂಗಳೂರಿ ಸಿಟಿಆರ್ ಹೋಟೆಲ್ ದೋಸೆ ಇಂಡಿಯಾಗೆ ಫೇಮಸ್. ಈ ಹೋಟೆಲ್ ನಲ್ಲಿ ಬಂದ ಸೆಲೆಬ್ರಿಟಿಗಳೆಲ್ಲಾ ದೋಸೆ ರುಚಿ ಸವಿಯುತ್ತಾರೆ. ಅದರಂತೆ ನಿಖಿಲ್ ಸಿದ್ಧಾರ್ಥ್ ಸಿಟಿಆರ್ ಹೋಟೆಲ್ ನಲ್ಲಿ ದೋಸೆಯನ್ನು ಚಪ್ಪರಿಸಿ ತಿಂದಿದ್ದಾರೆ. ಇದೇ ವೇಳೆ ಅಭಿಮಾನಿಗಳು ನಿಖಿಲ್ ಜೊತೆ ಫೋಟೋಗೆ ಮುಗಿಬಿದ್ದರು. ಬಳಿಕ ರಾಮೇಶ್ವರಂ ಕೆಫೆಯಲ್ಲಿ ಕಾಫಿ ಕುಡಿದರು.

ಸುಭಾಷ್ ಚಂದ್ರ ಬೋಸ್ ಸಾವಿನ ರಹಸ್ಯ ಕಥಾಹಂದರ ಹೊಂದಿರುವ ಸ್ಪೈ ಸಿನಿಮಾಗೆ ಖ್ಯಾತ ನಿರ್ದೇಶಕ ಹಾಗೂ ಸಂಕಲನಕಾರರು ಆಗಿರುವ ಗ್ಯಾರಿ ಬಿ ಹೆಚ್‌ ಸ್ಪೈ ಸಿನಿಮಾಗೆ ಆಕ್ಷನ್‌ ಕಟ್‌ ಹೇಳಿದ್ದಾರೆ. ಎವರು ಮತ್ತು ಹಿಟ್‌ ಸಿನಿಮಾಗಳ ನಿರ್ಮಾಪಕ ಕೆ.ರಾಜಶೇಖರ್‌ ರೆಡ್ಡಿ, ಚರಣ್‌ ರಾಜ್‌ ಉಪ್ಪಲಪತಿ ಚಿತ್ರ ನಿರ್ಮಿಸಿದ್ದಾರೆ. ಸನ್ಯಾ ಠಾಕೂರ್‌ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಸ್ಪೆಷಲ್‌ ರೋಲ್‌ ನಲ್ಲಿ ಬಾಹುಬಲಿ ಬಲ್ಲಾಳದೇವ ರಾಣಾ ದಗ್ಗುಭಾಟಿ ಕೂಡ ಕಾಣಿಸಿಕೊಂಡಿದ್ದಾರೆ. ಅಭಿನವ್‌ ಗೋಮತಮ್, ಮಕರಂದ್‌ ದೇಶಪಾಂಡೆ, ನಿತಿನ್‌ ಮೆಹ್ತಾ, ರವಿವರ್ಮ, ಕೃಷ್ಣ ತೇಜ, ಪ್ರಿಶಾ ಸಿಂಗ್‌, ಸೋನಿಯಾ ನರೇಶ್‌ ಮತ್ತು ಇತರರು ತಾರಾಬಳಗದಲ್ಲಿದ್ದಾರೆ. ಬ್ಯಾಕ್ ಟು ಬ್ಯಾಕ್ ಹಿಟ್ ಕೊಟ್ಟಿರುವ ನಿಖಿಲ್ ಸಿದ್ಧಾರ್ಥ್ ಪ್ಯಾನ್ ಇಂಡಿಯಾ ಸ್ಪೈ 29ಕ್ಕೆ ಬಿಡುಗಡೆಯಾಗಲಿದೆ.

Categories
ಸಿನಿ ಸುದ್ದಿ

ಕೆ ಆರ್ ಜಿ ಸ್ಟುಡಿಯೋಸ್ ಮಾಡಿಕೊಂಡ ಕಿರಿಕ್! ಇದು ಕ್ರಿಕೆಟ್ ಗೇಮ್ ಪ್ಲಾನಾ? ಬ್ಯಾಟ್ ಹಿಡಿತಾರೆ ದಾನಿಶ್ ಸೇಠ್

ಕನ್ನಡದಲ್ಲಿ ಕೆ ಆರ್ ಜಿ ಸ್ಟುಡಿಯೋಸ್ ಸಾಕಷ್ಟು ಉತ್ತಮ ಚಿತ್ರಗಳನ್ನು ಕೊಡುವ ನಿಟ್ಟಿನಲ್ಲಿ ಹುಟ್ಟಿಕೊಂಡ ಸಂಸ್ಥೆ. ಈ ನಿರ್ಮಾಣ ಸಂಸ್ಥೆಯ ಮೂಲಕ ಈಗಾಗಲೇ ಒಂದಷ್ಟು ಯಶಸ್ವಿ ಸಿನಿಮಾಗಳು ಮೂಡಿಬಂದಿವೆ. ಆ ಸಾಲಿಗೆ ಈಗ ಕಿರಿಕ್ et 11 ಸಿನಿಮಾ ಕೂಡ ಸೇರಿದೆ. ಶೀರ್ಷಿಕೆಯೇ ವಿಭಿನ್ನವಾಗಿದೆ. ಕಥೆ ಕೂಡ ವಿಶೇಷವಾಗಿದೆ ಎಂಬುದು ಸಿನಿಮಾ ನಿರ್ಮಾಣ ಸಂಸ್ಥೆಯ ಮಾತು.

ಬಹಳ ದಿನಗಳ ಬಳಿಕ ನಟ ದಾನಿಶ್ ಸೇಠ್ ಅವರು ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನವೀನ್ ಶಂಕರ್ ಕೂಡ ಇದ್ದಾರೆ.

ಕಿರಿಕ್ ‘et’ 11 ಚಿತ್ರ ಒಂದು ನಗೆ ಹಬ್ಬವಾಗಿ ತಯಾರಾಗಲಿದೆ. ಒಂದಷ್ಟು ಯುವಕರು ಯಾವುದೇ ರೀತಿಯಲ್ಲೂ ಅದೃಷ್ಟ ದೇವತೆ ಒಲಿಯದೆ ಇದ್ದಾಗ ಇಡೀ ದೇಶ ಅತ್ಯಂತ ಹುಮ್ಮಸ್ಸಿನಿಂದ ಆಡುವ, ನೋಡುವ ಕ್ರಿಕೆಟ್ ನಲ್ಲಿ ಭವಿಷ್ಯ ರೂಪಿಸಿಕೊಳ್ಳಲು ಮುಂದಾಗುತ್ತಾರೆ.


ನವೀನ್ ಶಂಕರ್ ಮತ್ತು ದಾನಿಶ್ ಸೇಠ್ ನಟನೆಯ ಈ ಚಿತ್ರವನ್ನು ಮನೋಜ್ ಕುಮಾರ್ ಕಾಲಾವನನ್ ಕಥೆ ಹೆಣೆದಿದ್ದರೆ , ಸುಮನ್ ಕುಮಾರ್ ಅವರು ನಿರ್ದೇಶಿಸಲಿದ್ದಾರೆ.
ಸುಮನ್ ಕುಮಾರ್ ಅವರು ಈ ಹಿಂದೆ ರಘುತಾತ ಚಿತ್ರವನ್ನು ನಿರ್ದೇಶಿಸಿದ್ದು , ವೆಬ್ ಸೀರಿಸ್ ಲೋಕದಲ್ಲಿ ಬಹಳ ಜನಪ್ರಿಯ ಆಗಿರುವ The Family Man ಮತ್ತು Farzi ಯ ಕಥೆಯನ್ನು ಹೆಣೆದಿದ್ದಾರೆ.


ಈ ಚಿತ್ರಕ್ಕೆ ಸಂಗೀತವನ್ನು ಬಡವ ರಾಸ್ಕಲ್ ಚಿತ್ರಕ್ಕೆ ಸಂಗೀತ ನೀಡಿದ್ದ ವಾಸುಕಿ ವೈಭವ್ ಅವರು ನೀಡಲಿದ್ದಾರೆ.
ಈ ಚಿತ್ರವನ್ನು ಕಾರ್ತಿಕ್ , ವಿಜಯ್ ಸುಬ್ರಮಣ್ಯಂ ಮತ್ತು ಯೋಗಿ ಜಿ ರಾಜ್ ಅವರು ನಿರ್ಮಿಸಲಿದ್ದಾರೆ.


ಕೆ ಆರ್ ಜಿ ಸ್ಟುಡಿಯೋಸ್ ನ 6 ವರ್ಷಗಳ ಚಿತ್ರರಂಗದ ಪಯಣದಲ್ಲಿ ಇದು 4 ನೇ ಚಿತ್ರ ನಿರ್ಮಾಣವಾಗಲಿದೆ.
ಕಿರಿಕ್ et 11 ಚಿತ್ರದ ಚಿತ್ರೀಕರಣ ಈ ವರ್ಷ ನಡೆಯಲಿರುವ ಕ್ರಿಕೆಟ್ ವಿಶ್ವಕಪ್ ಸಮಯದಲ್ಲೇ ಶುರುವಾಗಲಿದೆ.

Categories
ಸಿನಿ ಸುದ್ದಿ

ಗರಡಿ ಹಾಡು ಹಿಟ್ ಆಯ್ತು! ಹೊಡಿರೆಲೆ ಹಲಗಿ…

ಕೌರವ ಪ್ರೊಡಕ್ಷನ್ ಹೌಸ್ ಲಾಂಛನದಲ್ಲಿ ವನಜಾ ಪಾಟೀಲ್ ನಿರ್ಮಿಸಿರುವ, ಯೋಗರಾಜ್ ಭಟ್ ನಿರ್ದೇಶನದ “ಗರಡಿ” ಚಿತ್ರದ ಮೊದಲ ಹಾಡು “ಹೊಡಿರೆಲೆ ಹಲಗಿ” ಇತ್ತೀಚೆಗಷ್ಟೆ ಬಿಡುಗಡೆಯಾಗಿತ್ತು.

ಈ ಹಾಡಿನ ಮಾಧುರ್ಯಕ್ಕೆ ಕನ್ನಡಿಗರು ಮನ ಸೋತ್ತಿದ್ದಾರೆ. ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಈ ಹಾಡನ್ನು 16ಲಕ್ಷ ಜನ ವೀಕ್ಷಿಸಿದ್ದಾರೆ.

ಪ್ರಶಂಸೆಯ ಮಳೆಯನ್ನೇ ಸುರಿಸುತ್ತಿದ್ದಾರೆ. ಮುಂದಿನ ಹಾಡು ಯಾವಾಗ ಬಿಡುಗಡೆಯಾಗುವುದೊ? ಎಂಬ ನಿರೀಕ್ಷೆಯಲ್ಲಿದ್ದಾರೆ. ಮೊದಲ ಹಾಡಿಗೆ ಸಿಗುತ್ತಿರುವ ಉತ್ತಮ ಪ್ರತಿಕ್ರಿಯೆಗೆ “ಗರಡಿ” ತಂಡ ಸಂತಸ ವ್ಯಕ್ತಪಡಿಸಿದೆ.

ಯೋಗರಾಜ್ ಭಟ್ ಅವರು ಬರೆದಿರುವ ಈ ಹಾಡನ್ನು ಉತ್ತರ ಕರ್ನಾಟಕದ ಪ್ರತಿಭೆ ಮೇಘನಾ ಹಳಿಯಾಳ್ ಹಾಡಿದ್ದಾರೆ. ವಿ ಹರಿಕೃಷ್ಣ ಸಂಗೀತ ನೀಡಿದ್ದಾರೆ. ನಿಶ್ವಿಕಾ ನಾಯ್ಡು ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ.

ಸೂರ್ಯ, ಸೋನಾಲ್ ಮಾಂಟೆರೊ, ಬಿ.ಸಿ.ಪಾಟೀಲ್, ಸುಜಯ್, ರಾಘವೇಂದ್ರ, ಧರ್ಮಣ್ಣ ಮುಂತಾದವರು “ಗರಡಿ” ಚಿತ್ರದಲ್ಲಿ ಅಭಿನಯಿಸಿದ್ದಾರೆ.

Categories
ಸಿನಿ ಸುದ್ದಿ

ನಕುಲ್ ಗೌಡನ ‘ಬ್ಯಾಡ್’ ಬಾಯ್ ಮಾಡಿದ ನಿರ್ದೇಶಕ ಪಿ.ಸಿ.ಶೇಖರ್

“ರೋಮಿಯೋ” ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನಿರ್ದೇಶಿರುವ ಪಿ.ಸಿ ಶೇಖರ್ ನಿರ್ದೇಶನದಲ್ಲಿ ನಕುಲ್ ಗೌಡ(ಪ್ರೀತಿಯ ರಾಯಭಾರಿ ಖ್ಯಾತಿ) ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ಚಿತ್ರ “BAD”. ಎಸ್.ಆರ್.ವೆಂಕಟೇಶ್ ಗೌಡ ನಿರ್ಮಾಣದ ಈ ಚಿತ್ರ ಕನ್ನಡದಲ್ಲಿ ವಿಭಿನ್ನ ಪ್ರಯತ್ನ ಎನ್ನಬಹುದು.

ಈ ಚಿತ್ರಕ್ಕೆ ” BAD” ಅಂತ ಹೆಸರಿಡಲು ಕಾರಣವಿದೆ. ಏಕೆಂದರೆ ಇದರಲ್ಲಿ ನಾಯಕ ಹಾಗೂ ನಾಯಕಿ ಅಂತ ಇಲ್ಲ. ಎಲ್ಲಾ ವಿಲನ್ ಪಾತ್ರಗಳೆ. ಅದರಲ್ಲಿ ಮುಖ್ಯ ವಿಲನ್ ಗಳಿರುತ್ತಾರಷ್ಟೆ. “ರೋಷಮಾನ್ ಎಫೆಕ್ಟ್” ಎಂಬ ವಿಧಾನವನ್ನು ಈ ಚಿತ್ರದಲ್ಲಿ ಬಳಸಿಕೊಳ್ಳಲಾಗುತ್ತಿದೆ‌. ಜಪಾನ್ ನಿರ್ದೇಶರೊಬ್ಬರು ಈ ವಿಧಾನವನ್ನು ತಮ್ಮ ಚಿತ್ರದ ಮೂಲಕ ಪರಿಚಯಿಸಿದ್ದರು. ಕನ್ನಡದಲ್ಲಿ ಇದರ ಬಳಕೆಯಾಗಿರುವುದು ವಿರಳ ಎನ್ನಬಹುದು. ಒಂದೇ ಕಥೆಯನ್ನೇ ಬೇರೆಬೇರೆಯವರು ಹೇಳುವ ವಿಧಾನ ಬೇರೆ ರೀತಿ ಆಗಿರುತ್ತದೆ. ಪ್ರಸ್ತುತ ಈ ಚಿತ್ರದ ಚಿತ್ರೀಕರಣ ಮುಕ್ಕಾಲು ಭಾಗ ಮುಕ್ತಾಯವಾಗಿದೆ. ಕೆಲವು ದಿನಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಇದು ನನ್ನ ನಿರ್ದೇಶನದ ಹತ್ತನೇ ಚಿತ್ರ.

ಅರ್ಜುನ್ ಜನ್ಯ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ನನ್ನ ನಿರ್ದೇಶನದ ಹತ್ತು ಚಿತ್ರಗಳಲ್ಲಿ ಒಂಭತ್ತು ಚಿತ್ರಗಳಿಗೆ ಅರ್ಜುನ್ ಜನ್ಯ ಅವರೆ ಸಂಗೀತ ನೀಡಿದ್ದಾರೆ. ನಾನೇ ಕಥೆ, ಚಿತ್ರಕಥೆ ರಚಿಸಿದ್ದೇನೆ. ಸಂಕಲನವನ್ನು ಮಾಡುತ್ತಿದ್ದೇನೆ. ನನ್ನ ಹಿಂದಿನ “ರಾಗ ಹಾಗೂ “ದಿ ಟೆರರಿಸ್ಟ್” ಚಿತ್ರಗಳಿಗೆ ಸಂಭಾಷಣೆ ಬರೆದಿದ್ದ ಸಚಿನ್ ಬಿ ಹೊಳಗುಂಡಿ ಈ ಚಿತ್ರಕ್ಕೂ ಸಂಭಾಷಣೆ ಬರೆದಿದ್ದಾರೆ. ಜಿ.ರಾಜಶೇಖರ್ ಅವರ ಕಲಾ ನಿರ್ದೇಶನವಿದೆ.
ಇದೊಂದು ಪ್ರಯೋಗಾತ್ಮಕ ಚಿತ್ರವಾಗಿದ್ದು, ಬರುವ ಪಾತ್ರಗಳ ಅಭಿನಯ ನೋಡುಗರಿಗೆ ಸಹಜ ರೀತಿಯಲ್ಲಿ ಕಾಣಬೇಕು ಹಾಗೂ ಅವರ ಪಾತ್ರವನ್ನು ನೋಡಿದ ಕೂಡಲೆ, ಇವರದು ಇಂತಹುದೇ ಪಾತ್ರ ಎಂದು ಪ್ರೇಕ್ಷಕರು ಅಂದುಕೊಳ್ಳಬಾರದು. ಹಾಗಾಗಿ ಈ ಚಿತ್ರದಲ್ಲಿ ಹೆಚ್ಚು ಹೊಸ ಕಲಾವಿದರೆ ಅಭಿನಯಿಸುತ್ತಿದ್ದಾರೆ.


“ಪ್ರೀತಿಯ ರಾಯಭಾರಿ” ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದ ನಕುಲ್ ಗೌಡ, ಮಾನ್ವಿತ ಹರೀಶ್, ಸಾಯಿ ಕೃಷ್ಣ, ಅಪೂರ್ವ ಭಾರದ್ವಾಜ್, ಮಂಜುನಾಥ್ , ಅಶ್ವಿನಿ ಹಾಗೂ ಅನೇಕ ರಂಗಭೂಮಿ ಪ್ರತಿಭೆಗಳು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ‌. ಶಕ್ತಿ ಶೇಖರ್ ಈ ಚಿತ್ರದ ಛಾಯಾಗ್ರಾಹಕರು ಎಂದು ನಿರ್ದೇಶಕ ಪಿ.ಸಿ.ಶೇಖರ್ ಚಿತ್ರದ ಕುರಿತು ಮಾಹಿತಿ ನೀಡಿದ್ದಾರೆ.

Categories
ಸಿನಿ ಸುದ್ದಿ

ಕಿರಣ್ ರಾಜ್ ಹುಟ್ದಬ್ಬಕ್ಕೆ ರಾನಿ ಟೀಸರ್ ರಿಲೀಸ್

ಟೈಟಲ್ ಹಾಗೂ ಪೋಸ್ಟರ್ ನಿಂದ ಸಿನಿ ಪ್ರೇಕ್ಷರಲ್ಲಿ ಕುತೂಹಲ ಹುಟ್ಟಿಸಿದ “ರಾನಿ” ಸಿನಿಮಾದ ಟೀಸರ್ ನಾಯಕ ನಟ ಕಿರಣ್ ರಾಜ್ ಹುಟ್ಟುಹಬ್ಬದ ದಿನ ಜುಲೈ 5 ರಂದು ಬಿಡುಗಡೆಯಾಗುತ್ತಿದೆ. “ರಾನಿ” ಚಿತ್ರದ​ ನಾಯಕ ಕಿರಣ್ ರಾಜ್ ದುಬೈಗೆ ಹೋಗಿ 13 ಸಾವಿರ ಅಡಿ ಎತ್ತರದಿಂದ ಸ್ಕೈ ಡೈವ್ ಮಾಡಿ “ರಾನಿ” ಚಿತ್ರದ ಟೈಟಲ್ ಅನಾವರಣಗೊಳಿಸಿದ್ದರು, ಅವರ ಈ ಸಾಹಸಕ್ಕೆ ಇಡೀ ಚಿತ್ರರಂಗವೆ ಮೆಚ್ಚುಗೆ ವ್ಯಕ್ತಪಡುಸಿತ್ತು. ನಂತರ ಬಿಡುಗಡೆಯಾದ ಪೋಸ್ಟರ್ ಚಿತ್ರದ ಮೇಲಿನ ಕುತೂಹಲ ಇನ್ನಷ್ಟು ಹೆಚ್ಚಿಸಿತ್ತು.

ಈ ಬಾರಿ ಗಟ್ಟಿ ಕಥೆಯೊಂದಿಗೆ ಆಕ್ಷನ್-ಕಮರ್ಷಿಯಲ್ ಸಿನಿಮಾ ಮಾಡಿದ್ದೇನೆ ಎನ್ನುವ ನಿರ್ದೇಶಕ ಗುರುತೇಜ್ ಶೆಟ್ಟಿ, ಇದೊಂದು ಗ್ಯಾಂಗ್ ಸ್ಟರ್ ಸಿನಿಮಾ ಆದರೂ ಕುಟುಂಬ ಸಮೇತ ನೋಡುವಂತಹ ಭಾವನಾತ್ಮಕ ವಿಷಯಗಳು ಚಿತ್ರದಲ್ಲಿದೆ ಎನ್ನುತ್ತಾರೆ.

ರವಿಶಂಕರ್ ಮೈಕೋ ನಾಗರಾಜ್ ,ಉಗ್ರಂ ರವಿ , ಉಗ್ರಂ ಮಂಜು, B ಸುರೇಶ , ಮಂಡ್ಯ ರಮೇಶ್ , ಸುಜಯ್ ಶಾಸ್ತ್ರಿ, ಸೂರ್ಯ ಕುಂದಾಪುರ, ಧರ್ಮಣ್ಣ ಕಡೂರು, ಗಿರೀಶ್ ಹೆಗ್ಡೆ ಹೀಗೆ ಮುಂತಾದ ದೊಡ್ಡ ಕಲಾವಿದರ ದಂಡೇ ಈ ಚಿತ್ರದಲ್ಲಿದೆ. ಸಮೀಕ್ಷಾ, ಅಪೂರ್ವ, ರಾದ್ಯಾ ಮೂವರು ಈ ಚಿತ್ರದ ನಾಯಕಿಯರು. ಮೂವರು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಾಘವೇಂದ್ರ B.ಕೋಲಾರ್ ಛಾಯಾಗ್ರಹಣ, ಮಣಿಕಾಂತ್ ಕದ್ರಿ ಸಂಗೀತ ನಿರ್ದೆಶನ​​ವಿರುವ ಈ ಚಿತ್ರಕ್ಕೆ ಸಚಿನ್ ಬಸ್ರೂರ್ ಹಿನ್ನಲೆ ಸಂಗೀತ ನೀಡುತ್ತಿದ್ದಾರೆ.

ಸ್ಟಾರ್ ಕ್ರಿಯೇಷನ್ ಬ್ಯಾನರ್ ಅಡಿಯಲ್ಲಿ ಚಂದ್ರಕಾಂತ್ ಪೂಜಾರಿ ,ಉಮೇಶ್ ಹೆಗ್ಡೆ ನಿರ್ಮಿಸುತ್ತಿರುವ ಚೊಚ್ಚಲ ಚಿತ್ರವಿದು. ಇದೆ ವರ್ಷ ಡಿಸೆಂಬರ್ ನಲ್ಲಿ ಚಿತ್ರ ಬಿಡುಗಡೆ ಮಾಡುವ​ ಯೋಜನೆಯಲ್ಲಿದ್ದಾರೆ ನಿರ್ಮಾಪಕರು.

Categories
ಸಿನಿ ಸುದ್ದಿ

ಭವಾನಿ ಹಿಂದೆ ಆರ್ಯನ್! ಹೊಸ ಸಿನಿಮಾ ಅನೌನ್ಸ್ ಮಾಡಿದ ಬಿಗ್ ಬಾಸ್ ಹುಡುಗ: ಶೀರ್ಷಿಕೆ ಬಿಡುಗಡೆ ಮಾಡಿದ ಅಶ್ವಿನಿ ಪುನೀತ್ ರಾಜಕುಮಾರ್

ನೂರು ಜನ್ಮಕ್ಕೂ, ಡಿಯರ್ ಸತ್ಯ ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ಪ್ರತಿಭಾನ್ವಿತ ನಾಯಕ ಆರ್ಯನ್. ಇದೀಗ ಅವರು ದಿ ಭವಾನಿ ಫೈಲ್ಸ್ ಎಂಬ ಹೊಸ ಸಿನಿಮಾ ಘೋಷಿಸಿದ್ದಾರೆ. ಈ ಚಿತ್ರದಲ್ಲಿ ನಟನೆ ಜೊತೆಗೆ ಕ್ರಿಯೇಟಿವ್ ಡೈರೆಕ್ಟರ್ ಆಗಿಯೂ ಜವಾಬ್ದಾರಿ ಹೊತ್ತುಕೊಂಡಿರುವ ಆರ್ಯನ್ ಚಿತ್ರಕ್ಕೆ ದೊಡ್ಮನೆ ಸೊಸೆ ಸಾಥ್ ಕೊಟ್ಟಿದ್ದಾರೆ. ದಿ ಭವಾನಿ ಫೈಲ್ಸ್ ಸಿನಿಮಾದ ಟೈಟಲ್ ಲಾಂಚ್ ಮಾಡಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಶುಭ ಹಾರೈಸಿದ್ದಾರೆ.

ಸದ್ಯ ಸಿನಿಮಾದ ಪ್ರೀ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿದ್ದು, ಮುಂದಿನ ತಿಂಗಳು ಫಸ್ಟ್ ಲುಕ್ ಲಾಂಚ್ ಮಾಡಲು ಚಿತ್ರತಂಡ ಪ್ಲಾನ್ ಮಾಡಿಕೊಂಡಿದೆ. 14ನೇ ಶತಮಾನ ‘ದಿ ಭವಾನಿ ಫೈಲ್ಸ್’ ಕಥೆಯನ್ನು ಆರ್ಯನ್ ತಮ್ಮ ಸ್ನೇಹಿತರ ಜೊತೆಗೂಡಿ ನಿರ್ದೇಶಿಸುತ್ತಿದ್ದಾರೆ.

ಮೋಹನ್ ಮೆನನ್, ಜೇಕಬ್ ವರ್ಗೀಸ್ ಹಾಗೂ ಆರ್ಯನ್ ಸಿನಿಮಾಗೆ ಚಿತ್ರಕಥೆ ಬರೆದಿದ್ದು, ಚೇತನ್ ಡಿಕ್ರೋಸ್ ಸ್ಟಂಟ್, ಜೋ ಕೋಸ್ಟ್ ಟ್ಯೂನ್ ಹಾಕಿದ್ದಾರೆ. ವೈಟ್ ಹಾರ್ಸ್ ಪ್ರೊಡಕ್ಷನ್ ಬ್ಯಾನರ್ ನಡಿ ನಿರ್ಮಾಣವಾಗುತ್ತಿರುವ ದಿ ಭವಾನಿ ಫೈಲ್ಸ್ ಸಿನಿಮಾವನ್ನು ವಿಂಟರ್ ಬ್ರಿಡ್ಜ್ ಸ್ಟುಡಿಯೋಸ್ ನಿರ್ಮಾಣದಲ್ಲಿ ಸಾಥ್ ಕೊಡಲಿದೆ. ಕಲ್ಟ್ ಜಾನರ್ ಈ ಸಿನಿಮಾದ ಉಳಿದ ಸ್ಟಾರ್ ಕಾಸ್ಟ್ ಹಾಗೂ ತಾಂತ್ರಿಕ ವರ್ಗದ ಬಗ್ಗೆ ಶೀಘ್ರದಲ್ಲೇ ಚಿತ್ರತಂಡ ಮಾಹಿತಿ ನೀಡಲಿದೆ.

error: Content is protected !!