Categories
ಸಿನಿ ಸುದ್ದಿ

ಬ್ಲಿಂಕ್ ಸಿನಿಮಾಗೆ ಹಿನ್ನೆಲೆ ಸಂಗೀತ ಕಂಪ್ಲೀಟ್; ರ್ಟಕಿ, ಅರೇಬಿಕ್ , ಪಾಕಿಸ್ತಾನದ ರಬಾಬ್ ಉಪಕರಣ ಬಳಕೆ

ಜನನಿ ಪಿಕ್ಚರ್ಸ್ ಅಡಿಯಲ್ಲಿ ರವಿಚಂದ್ರ ಎ.ಜೆ ನಿರ್ಮಾಣದಲ್ಲಿ ತಯಾರಾಗುತ್ತಿರುವ ಬ್ಲಿಂಕ್ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಚಿತ್ರದ ಆರ್ಕೆಸ್ಟ್ರಾ ಸೆಷನ್ ಭಾಗದ ರೀ-ರೆಕಾರ್ಡಿಂಗ್ ಕೊಚ್ಚಿ ಸ್ಟುಡಿಯೋದಲ್ಲಿ ಪೂರ್ಣಗೊಂಡಿದೆ. ಟರ್ಕಿ, ಅರೇಬಿಕ್, ಪಾಕಿಸ್ತಾನದ ರಬಾಬ್ ಇನ್ಸ್ಟ್ರುಮೆಂಟ್ ಬಳಸಿ ರೀ-ರೆಕಾರ್ಡಿಂಗ್ ಮಾಡಿರೋದು ವಿಶೇಷ. ನೋಡುಗರಿಗೆ ಹೊಸ ಅನುಭವ ನೀಡುವ ಉದ್ದೇಶದಿಂದ ಬ್ಲಿಂಕ್ ಸಿನಿಮಾ ಬಳಗ ಕಂಸಾಳೆ, ಜನಪದ ಗೀತೆ ಕಂಪನ್ನು ಸಿನಿಮಾದಲ್ಲಿ ಅಳವಡಿಸಿದೆ. ಇದು ಪ್ರೇಕ್ಷಕರಿಗೆ ಹೊಸ ಫ್ಲೇವರ್ ಕೊಡಲಿದೆ ಅನ್ನೋದು ಚಿತ್ರತಂಡ ಮಾತು.

ಶ್ರೀನಿಧಿ ಬೆಂಗಳೂರು ನಿರ್ದೇಶಿಸುತ್ತಿರುವ ಚೊಚ್ಚಲ ಚಿತ್ರ ಬ್ಲಿಂಕ್. ಮಿಡಲ್ ಕ್ಲಾಸ್ ಹುಡುಗನ ಜೀವನದಲ್ಲಿ ನಡೆಯುವ unexpected ಘಟನೆಗಳು ಹೇಗೆ ಆವನ ಸುತ್ತ- ಮುತ್ತಲಿನ ವಾತಾವರಣ ಬದಲಿಸುತ್ತದೆ ಎಂಬುದು ಈ ಕಥೆಯ ಸಾರಾಂಶ. Sci-Fi ಶೈಲಿಯಲ್ಲಿ ಮೂಡಿಬರುತ್ತಿರುವ ಬ್ಲಿಂಕ್ ಚಿತ್ರಕ್ಕೆ ನಾಯಕ ನಟರಾಗಿ ದಿಯಾ ಹಾಗೂ ದಸರಾ ಖ್ಯಾತಿಯ ದೀಕ್ಷಿತ್ ಶೆಟ್ಟಿ ಅಭಿನಯಿಸಿದ್ದಾರೆ. ನಾಯಕಿಯಾರಾಗಿ ಮಂದಾರ ಬಟ್ಟಲಹಳ್ಳಿ ಹಾಗೂ ಚೈತ್ರ ಜೆ ಆಚಾರ್ ನಟಿಸುತ್ತಿದ್ದು ಮುಖ್ಯಪಾತ್ರಗಳಲ್ಲಿ ವಜ್ರಧೀರ್ ಜೈನ್ , ಗೋಪಾಲಕೃಷ್ಣ ದೇಶಪಾಂಡೆ, ಸುರೇಶ್ ಅನಗಳ್ಳಿ ಕಾಣಿಸಿಕೊಂಡಿದ್ದಾರೆ.

ಅವಿನಾಶ್ ಶಾಸ್ತ್ರೀ ಛಾಯಾಗ್ರಹಣ, ಪ್ರಸನ್ನ ಕುಮಾರ್ ಸಂಗೀತ, ಸಂಜೀವ್ ಜಗೀರ್ದಾರ್ ಸಂಕಲನ ಚಿತ್ರಕ್ಕಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಬ್ಲಿಂಕ್ ಸಿನಿಮಾವನ್ನು ಆಗಸ್ಟ್ ತಿಂಗಳಲ್ಲಿ ರಿಲೀಸ್ ಮಾಡಲು ಚಿತ್ರತಂಡ ತಯಾರಿ ನಡೆಸುತ್ತಿದೆ. ಶೀಘ್ರದಲ್ಲಿಯೇ ವಿಶೇಷ ಹಾಡು ಬಿಡುಗಡೆ ಮಾಡಲು ಪ್ಲಾನ್ ಹಾಕಿಕೊಂಡಿದೆ.

Categories
ಸಿನಿ ಸುದ್ದಿ

ಮಾಲಾಶ್ರೀ ಮಾತೇ ಕೆಂಡ! ಕೆಂಡದ ಸೆರಗು ಸಿನಿಮಾಗೆ ಕನಸಿನ ರಾಣಿಯ ಕೆಂಡದಂತ ಮಾತು

ಕೆಂಡದ ಸೆರಗು ಎನ್ನುವ ಕುಸ್ತಿ ಆಧಾರಿತ ಕಾದಂಬರಿ ಸಿನಿಮಾದಲ್ಲಿ ಮುಖ್ಯ ಪಾತ್ರದಲ್ಲಿ ನಟಿಸಿರುವ ಮಾಲಾಶ್ರೀ ಅವರು ತಾವೇ ಸ್ವತಃ ಡಬ್ಬಿಂಗ್ ಮಾಡಿ ಮುಗಿಸಿದ್ದಾರೆ. ಮಾಲಾಶ್ರೀ ಅವರು ನಟಿಸಿರುವ ಸಿನಿಮಾಗಳಲ್ಲಿ ಕೆಲವೇ ಕೆಲವು ಸಿನಿಮಾಗಳಿಗೆ ಮಾತ್ರ ತಮ್ಮ ಧ್ವನಿ ಕೊಡುತ್ತಾರೆ ತುಂಬ ವರ್ಷಗಳ ನಂತರ ಕೆಂಡದ ಸೆರಗು ಸಿನಿಮಾಗೆ ಮಾಲಾಶ್ರೀ ಅವರು ಧ್ವನಿ ಕೊಟ್ಟಿದ್ದು ಚಿತ್ರತಂಡಕ್ಕೆ ಮತ್ತೊಂದು ಶಕ್ತಿ ಇದ್ದಂತೆ ಎಂದು ತಿಳಿಸಿದ್ದಾರೆ ನಿರ್ದೇಶಕ ರಾಕಿ‌ ಸೋಮ್ಲಿ ಅವರು.

ಈ ಹಿಂದೆ ಕೆಂಡದ ಸೆರಗು ಸಿನಿಮಾ ಬಗ್ಗೆ ಹೇಳಿದ್ದ ಮಾಲಾಶ್ರೀ ಅವರು, “ಕೆಂಡದ ಸೆರಗು” ದೇಸಿ ಕುಸ್ತಿ ಕಥೆಯ ಜೊತೆಗೆ ಹೃದಯ ಅಂಟುವ ಭಾವನಾತ್ಮಕ ಸಮಾಜಕ್ಕೆ ಒಳ್ಳೆಯ ಸಂದೇಶ ಕೊಡುವ ಸಿನಿಮಾ, ಒಂದೊಂದು ಪಾತ್ರವೂ ಸಹ ತುಂಬ ವಿಶೇಷವಾದ ಪಾತ್ರಗಳು.
ತಂಡದ ಪ್ರತಿ ಒಬ್ಬರು ಸಹ ಸಿನಿಮಾವನ್ನು ಆರಾಧಿಸುವ ತಂತ್ರಜ್ಞಾನರ ತಂಡ, ನಾನು ತುಂಬ ಖುಷಿಯಿಂದ ಸೆಟ್ ನಲ್ಲಿ ಪ್ರೀತಿಯಿಂದ ಕೆಲಸ ಮಾಡಿದ್ದೇನೆ, ತಂಡದ ಪ್ರತಿ ಒಬ್ಬರು ಸಹ ತುಂಬಾನೇ ಶ್ರಮವಹಿಸಿ ಈ ಸಿನಿಮಾದ ಕೆಲಸ ಮಾಡುತ್ತಿದ್ದಾರೆ. ಖಂಡಿತವಾಗಿ ಇದು ಗೆಲ್ಲುವ ಸಿನಿಮಾ, ಈ ವರ್ಷದ ಸಾಲಿನಲ್ಲಿ ನಿಲ್ಲುವ ಸಿನಿಮಾ, ಈ ತಂಡದ ಜೊತೆಗೆ ನಾ ಸದ ಇರುತ್ತೇನೆ ಎಂದು ಹೇಳಿದ್ದಾರೆ.

ಚಿತ್ರಿಕರಣ ಮುಗಿಸಿ ಪೊಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಕೆಂಡದ ಸೆರಗು ಇನ್ನೆರಡು ತಿಂಗಳಲ್ಲಿ ಬಿಡುಗಡೆಗೆ ನೀರಿಕ್ಷೆಯಲ್ಲಿದೆ.
ಸಿನಿಮಾದಲ್ಲಿ ಒಟ್ಟು ನಾಲ್ಕು ಫೈಟ್, ಆರು ಹಾಡುಗಳಲ್ಲಿದ್ದು ಈಗಾಗಲೇ ಒಂದು ಹಾಡು ಮತ್ತು ಸಿನಿಮಾದ ಟೀಸರ್ ಬಿಡುಗಡೆ ಆಗಿದೆ.

ಇನ್ನೂ ಉಳಿದ ತಾರಾಗಣದಲ್ಲಿ ಯಶ್ ಶೆಟ್ಟಿ, ವರ್ಧನ್, ಬಾಲುರಾಜ್ ವಾಡಿ, ಶೋಭಿತ, ಹರೀಶ್ ಅರಸು, ಪ್ರತಿಮಾ, ಮೋಹನ್, ಸಿಂಧನೂರು ಉಮೇಶ್, ಸಿಂದೂಲೋಕನಾಥ್ ಅಭಿನಯಿಸಿದ್ದಾರೆ.

ಈ ಚಿತ್ರಕ್ಕೆ ವಿಪಿನ್ ರಾಜ್ ಅವರ ಛಾಯಾಗ್ರಹಣ, ವೀರೇಶ್ ಕಬ್ಳಿ ಯವರ ಸಂಗೀತ, ಶ್ರೀಕಾಂತ್ ರವರ ಸಂಕಲನ, ಶ್ರೀಮುತ್ತು ಟಾಕೀಸ್ ಅಡಿಯಲ್ಲಿ , ಕೊಟ್ರೇಶ್ ಗೌಡ ಅವರು ಬಂಡವಾಳ ಹೂಡಿದ್ದು ಗೆಲ್ಲುವ ಎಲ್ಲಾ ಸಿದ್ದತೆ ಮಾಡಿಕೊಂಡಿದೆ ಚಿತ್ರತಂಡ

Categories
ಸಿನಿ ಸುದ್ದಿ

ವಿಜಯ್ ಹುಟ್ದಬ್ಬಕ್ಕೆ ‘ಲಿಯೋ’ ಚಿತ್ರದ ಫಸ್ಟ್ ಲುಕ್ ಹಾಗು “ನಾ ರೆಡಿ” ಹಾಡಿನ ಪ್ರೋಮೋ ಬಿಡುಗಡೆ

ತಮಿಳಿನ ಸ್ಟಾರ್ ನಟ ವಿಜಯ್ ಹುಟ್ಟು ಹಬ್ಬದ ಸಂಭ್ರಮವನ್ನು ದ್ವಿಗುಣಗೊಳಿಸುವುದಕ್ಕೆ ‘ಲಿಯೋ’ ಚಿತ್ರತಂಡವು “ನಾ ರೆಡಿ” ಎಂಬ ಹಾಡಿನ ಪ್ರೋಮೋ ಜೊತೆಗೆ ಚಿತ್ರದಲ್ಲಿನ ವಿಜಯ್ ಅವರ ಫಸ್ಟ್ ಲುಕ್ ಪೋಸ್ಟರ್ ಸಹ ಬಿಡುಗಡೆ ಮಾಡಿದೆ.
‘ಮಾಸ್ಟರ್’ ನಂತರ ನಿರ್ದೇಶಕ ಲೋಕೇಶ್ ಕನಕರಾಜ್ ಮತ್ತು ವಿಜಯ್, ‘ಲಿಯೋ’ ಎಂಬ ಇನ್ನೊಂದು ಚಿತ್ರದಲ್ಲಿ ಜೊತೆಯಾಗಿ ಕೆಲಸ ಮಾಡುತ್ತಿದ್ದಾರೆ. ಈ ಚಿತ್ರವು ಕೆಲವ ತಿಂಗಳ ಹಿಂದೆ ಚೆನ್ನೈನಲ್ಲಿ ಶುರುವಾಗಿತ್ತು. ಆದರೆ, ಇದುವರೆಗೂ ಚಿತ್ರತಂಡದವರು ಚಿತ್ರದಲ್ಲಿ ವಿಜಯ್ ಅವರ ಪಾತ್ರವೇನು? ಅಥವಾ ಅವರು ಹೇಗೆ ಕಾಣುತ್ತಾರೆ ಎಂಬ ವಿಷಯವನ್ನು ಬಹಿರಂಗಗೊಳಿಸಿರಲಿಲ್ಲ. ಈಗ ಪೋಸ್ಟರ್ ಮತ್ತು ಪ್ರೋಮೋ ಮೂಲಕ ವಿಜಯ್ ಅಭಿಮಾನಿಗಳಿಗೆ ಭರ್ಜರಿ ಉಡುಗೊರೆ ನೀಡಿದ್ದಾರೆ.


‘ನಾ ರೆಡಿದಾ ವರವಾ’ ಎಂಬ ಹಾಡನ್ನು ಸ್ವತಃ ವಿಜಯ್ ಹಾಡಿದ್ದು, ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜಿಸಿದ್ದಾರೆ. ವಿಷ್ಣು ಎಡವನ್ ಬರೆದಿರುವ ಈ ಹಾಡಿನ ಪ್ರೋಮೊ ಸೋನಿ ಮ್ಯೂಸಿಕ್ ಸೌಥ್ ಚಾನಲ್ ನಲ್ಲಿ ಬಿಡುಗಡೆಯಾಗಿದ್ದು, ಸದ್ಯದಲ್ಲೇ ಪೂರ್ತಿ ಹಾಡು ಕೂಡ ಬಿಡುಗಡೆಯಾಗಲಿದೆ.
ಸೆವೆನ್ ಸ್ಕ್ರೀನ್ ಸ್ಟುಡಿಯೋಸ್ ಬ್ಯಾನರ್ ನಲ್ಲಿ ಲಲಿತ್ ಕುಮಾರ್ ನಿರ್ಮಿಸುತ್ತಿರುವ ‘ಲಿಯೋ’ ಚಿತ್ರವನ್ನು ಲೋಕೇಶ್ ಕನಕರಾಜ್ ನಿರ್ದೇಶಿಸುವುದರ ಜೊತೆಗೆ ಕಥೆ ಮತ್ತು ಚಿತ್ರಕಥೆಯನ್ನು ಸಹ ರಚಿಸಿದ್ದಾರೆ.


ಈ ಚಿತ್ರದಲ್ಲಿ ವಿಜಯ್ ಅವರಿಗೆ ನಾಯಕಿಯಾಗಿ ತ್ರಿಷಾ ಕೃಷ್ಣನ್ ಅಭಿನಯಿಸುತ್ತಿದ್ದು, ಬಾಲಿವುಡ್ ನಟ ಸಂಜಯ್ ದತ್, ಅರ್ಜುನ್ ಸರ್ಜಾ, ಪ್ರಿಯಾ ಆನಂದ್, ಮನ್ಸೂರ್ ಅಲಿ ಖಾನ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಸಂಗೀತ ನಿರ್ದೇಶನ ಮತ್ತು ಮನೋಜ್ ಪರಮಹಂಸ ಅವರ ಛಾಯಾಗ್ರಹಣವಿದೆ.

‘ಲಿಯೋ’ ಚಿತ್ರವು ಅಕ್ಟೋಬರ್ 19ರಂದು ಐದು ಭಾಷೆಗಳಲ್ಲಿ ಏಕಕಾಲಕ್ಕೆ ಪ್ಯಾನ್ ಇಂಡಿಯಾ ಚಿತ್ರವಾಗಿ ಬಿಡುಗಡೆಯಾಗುತ್ತಿದೆ.

Categories
ಸಿನಿ ಸುದ್ದಿ

ಮೈ ನೇಮ್ ಈಸ್ ಶೀಲ! ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ರಾಗಿಣಿ

ರಾಗಿಣಿ ಕನ್ನಡ ಹಾಗೂ ಮಲೆಯಾಳಂ ಸೇರಿದಂತೆ ಬಹುಭಾಷೆಗಳಲ್ಲಿ ಬರುತ್ತಿರುವ ಈ ಪ್ಯಾನ್ ಇಂಡಿಯಾ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರದ ಫಸ್ಟ್ ಲುಕ್ ಬಿಡುಗಡೆ‌ಯಾಗಿದೆ. ರಾಗಿಣಿ ಇಲ್ಲಿ ವಿಶೇಷ ಪಾತ್ರದ ಮೂಲಕ ಗಮನ ಸೆಳೆಯಲಿದ್ದಾರೆ.

ಕನ್ನಡದ ಖ್ಯಾತ ನಟಿ ರಾಗಿಣಿ ದ್ವಿವೇದಿ “ಶೀಲ” ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರ ಕನ್ನಡ ಹಾಗೂ ಮಲೆಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

“ಶೀಲ” ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಮಹಿಳಾ ಪ್ರಧಾನ ಚಿತ್ರವಾಗಿದೆ. ನನ್ನ ಪಾತ್ರ ಚೆನ್ನಾಗಿದೆ. ಸಮಾಜದಲ್ಲಿ ಎದುರಾಗುವ ಸಾಕಷ್ಟು ಸವಾಲುಗಳನ್ನು ಹೆಣ್ಣು ಮಗಳೊಬ್ಬಳು ಹೇಗೆ ನಿಭಾಯಿಸುತ್ತಾಳೆ ಎಂಬುದು ಕಥಾಸಾರಾಂಶ‌.

ಈ ಪ್ಯಾನ್ ಇಂಡಿಯಾ ಸಿನಿಮಾದ ಚಿತ್ರೀಕರಣ ಮುಕ್ತಾಯವಾಗಿದೆ. ಕೇರಳ ಹಾಗೂ ಕರ್ನಾಟಕದಲ್ಲಿ ಚಿತ್ರೀಕರಣ ನಡೆದಿದೆ. ಪ್ರಸ್ತುತ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಸದ್ಯದಲ್ಲೇ ಟ್ರೇಲರ್ ಬರಲಿದೆ ಎಂದು ರಾಗಿಣಿ ದ್ವಿವೇದಿ ತಿಳಿಸಿದ್ದಾರೆ.

ಡಿ.ಎಂ.ಪಿಳ್ಳೆ ನಿರ್ಮಾಣ ಮಾಡಿರುವ ಈ ಚಿತ್ರವನ್ನು ಬಾಲು ನಾರಾಯಣನ್ ನಿರ್ದೇಶಿಸಿದ್ದಾರೆ.

ರಾಗಿಣಿ ದ್ವಿವೇದಿ, ಅವಿನಾಶ್, ಶೋಭ್ ರಾಜ್, ಚಿತ್ರಾ ಶೆಣೈ, ಮಹೇಶ್ ನಾಯರ್, ಶ್ರೀಪತಿ, ರಿಯಾಜ್ ಖಾನ್, ಅಬೆ ಡೇವಿಡ್, ಆರತಿ ಗೋಪಾಲ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Categories
ಸಿನಿ ಸುದ್ದಿ

ವಾರೆವ್ಹಾ ಪರಂವಃ! ಹಾಡು ಬಿಡುಗಡೆ: ಲವ್ಲಿ ಸಾಂಗ್ ಎಂದ ಪ್ರೇಮ್

ಪ್ರಸಿದ್ದ ದೇಸಿ ಕಲೆ ವೀರಗಾಸೆ ಮತ್ತು ತಂದೆ-ಮಗನ ನಡುವಿನ ಭಾಂದವ್ಯದ ಬಗ್ಗೆಗಿನ ಕಥಾಹಂದರ ಹೊಂದಿರುವ ಚಿತ್ರ ‘ಪರಂವಃ’. ಈಗಾಗಲೇ ಬಿಡುಗಡೆಯಾಗಿರುವ ಈ ಚಿತ್ರದ ಹಾಡು ಹಾಗೂ ಟ್ರೇಲರ್ ಮೂಲಕ ಜನರ ಮನ ಗೆದ್ದಿದೆ‌.

ಇತ್ತೀಚೆಗೆ “ಪರಂವಃ” ಚಿತ್ರಕ್ಕಾಗಿ ನಾಗೇಶ್ ಕುಂದಾಪುರ ಬರೆದಿರುವ “ನೂರಾರೂ ರಂಗಿರೊ” ಎಂಬ ಹಾಡನ್ನು ಜನಪ್ರಿಯ ನಟ ಲವ್ಲೀ ಸ್ಟಾರ್ ಪ್ರೇಮ್ ಬಿಡುಗಡೆ ಮಾಡಿದರು. ನಿರ್ದೇಶಕ ಜಡೇಶ್ ಕುಮಾರ್ ಸಹ ಅತಿಥಿಗಳಾಗಿ ಆಗಮಿಸಿದ್ದರು.

ಈ ಸಿನಿಮಾ ತಂಡದ ಬಗ್ಗೆ ತಿಳಿದು ಖುಷಿಯಾಯಿತು. ಸುಮಾರು 200 ಜನ ಬಂಡವಾಳ ಹಾಕಿ ನಿರ್ಮಾಣ ಮಾಡಿರುವ ಸಿನಿಮಾವಿದು. ಇದು ನಿಜಕ್ಕೂ ಖುಷಿಯ ವಿಚಾರ. ನನಗೆ ಸಿನಿಮಾ ಬಗ್ಗೆ ಆಸಕ್ತಿಯಿರುವ ಪ್ರೇಕ್ಷಕರೆ ನಿರ್ಮಾಣ ಮಾಡಿದ್ದಾರೆ ಅನಿಸುತ್ತದೆ. ಈಗ ಹೊಸತಂಡದ ಹೊಸಪ್ರಯತ್ನವನ್ನು ಜನ ಮೆಚ್ಚಿಕೊಳ್ಳುತ್ತಿದ್ದಾರೆ. ಆ ಸಾಲಿಗೆ “ಪರಂವಃ” ಚಿತ್ರ ಸಹ ಸೇರಲಿ ಎಂದು ನಟ ಪ್ರೇಮ್ ಹಾರೈಸಿದರು.

ಪ್ರೇಮ್ ಸಿಡ್ಗಲ್ ನಾಯಕನಾಗಿ ಮತ್ತು ಮೈತ್ರಿ ಜೆ. ಕಶ್ಯಪ್ ನಾಯಕಿಯಾಗಿ ಅಭಿನಯಿಸಿದ್ದಾರೆ‌. ‘ ಗಣೇಶ್ ಹೆಗ್ಗೋಡು, ನಾಜರ್, ಶ್ರುತಿ ಮೊದಲಾದವರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಸಂತೋಷ್ ಕೈದಾಳ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ‌.

‘ಶಿವನ ಢಮರುಗದಿಂದ ಹೊಮ್ಮುವ ನಾದಕ್ಕೆ ‘ಪರಂವಃ’ ಎನ್ನುತ್ತಾರೆ. ನಮ್ಮ ಸಿನಿಮಾದ ಕಥೆಗೆ ಈ ಪದ ಸೂಕ್ತವೆಂಬ ಕಾರಣಕ್ಕೆ ಇದೇ ಹೆಸರಿಟ್ಟಿದ್ದೇವೆ. ಸಿನಿಮಾದಲ್ಲಿ ವೀರಗಾಸೆ ಕಲೆಯ ಬಗ್ಗೆ ಮತ್ತು ತಂದೆ-ಮಗನ ಸಂಬಂಧದ ಬಗ್ಗೆ ಪ್ರಧಾನವಾಗಿ ಹೇಳಲಾಗಿದೆ. ಅಷ್ಟೇ ಅಲ್ಲದೆ, ಪ್ರೀತಿ, ಸ್ನೇಹ, ಸೆಂಟಿಮೆಂಟ್, ಥ್ರಿಲ್ಲರ್, ಆ್ಯಕ್ಷನ್ ಹೀಗೆ ಎಲ್ಲ ಥರದ ವಿಷಯಗಳು “ಪರಂವಃ” ಚಿತ್ರದಲ್ಲಿದೆ.

ಪೀಪಲ್ಸ್ ವಲ್ಡ್ ಫಿಲಂಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ನಟ ಪ್ರೇಮ್, ನಿರ್ದೇಶಕ ಗುರು ದೇಶಪಾಂಡೆ ಅವರು ಸೇರಿದಂತೆ ಸ್ಯಾಂಡಲ್ ವಡ್ ನ ಗಣ್ಯರು ಹಾಗೂ ದಕ್ಷಿಣ ಭಾರತದ ಅನೇಕ ಸೆಲೆಬ್ರಿಟಿಗಳು ನಮ್ಮ ಚಿತ್ರಕ್ಕೆ ನೀಡುತ್ತಿರುವ ಪ್ರೋತ್ಸಾಹಕ್ಕೆ ಮನತುಂಬಿ ಬಂದಿದೆ. ಸದ್ಯದಲ್ಲೇ ನಮ್ಮ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ.ಎಂದರು ನಿರ್ದೇಶಕ ಸಂತೋಷ್ ಕೈದಾಳ.

ಚಿತ್ರದ ನಾಯಕ ಪ್ರೇಮ್ ಸಿಡ್ಗಲ್, ನಾಯಕಿ ಮೈತ್ರಿ ಸೇರಿದಂತೆ ಚಿತ್ರದ ಕಲಾವಿದರು ಮತ್ತು ತಂತ್ರಜ್ಞರು ಪತ್ರಿಕಾಗೋಷ್ಠಿಯಲ್ಲಿ ‘ಪರಂವಃ’ ಸಿನಿಮಾ ಕುರಿತು ಮಾತನಾಡಿದರು.

Categories
ಸಿನಿ ಸುದ್ದಿ

ಆದಿತ್ಯ ನಟನೆಯ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ ಶುರು: ಇದು ಕಿಶೋರ್ ಮೇಗಳಮನೆ ನಿರ್ದೇಶನದ ಮೊದಲ ಸಿನಿಮಾ

ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ “ಡೆಡ್ಲಿ ಸೋಮ” ಖ್ಯಾತಿಯ ಆದಿತ್ಯ ನಾಯಕರಾಗಿ ನಟಿಸುತ್ತಿರುವ ಚಿತ್ರವೊಂದು ಸದ್ದಿಲ್ಲದೆ ಆರಂಭವಾಗಿದೆ.

ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಕಿಶೋರ್ ಮೇಗಳಮನೆ ನಿರ್ದೇಶಿಸುತ್ತಿದ್ದಾರೆ‌‌. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಕಿಶೋರ್ ಮೇಗಳಮನೆ ಅವರೆ ಬರದಿದ್ದಾರೆ. ಕಿಶೋರ್ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ.

ಈಗಾಗಲೇ ಚಿತ್ರೀಕರಣ ಪ್ರಾರಂಭವಾಗಿದ್ದು, ಚಿಕ್ಕಮಗಳೂರು ಹಾಗೂ ಬೆಂಗಳೂರು ಸುತ್ತಮುತ್ತ ಹದಿನೇಳು ದಿನಗಳ ಚಿತ್ರೀಕರಣ ನಡೆದಿದೆ.

ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಫ್ಯಾಕ್ಟರಿ ಮಾಲೀಕರಾದ ಚನ್ನಕೇಶವ ಬಿ.ಸಿ, ನರಸಿಂಹಮೂರ್ತಿ ಚಕ್ರಭಾವಿ, ರಮೇಶ್ ಬಂಡೆ, ಸ್ವಾಮಿ ಚಕ್ರಭಾವಿ, ರವಿ ಕೀಲರ ಮಂಡ್ಯ ಹಾಗೂ ರಾಮಚಂದ್ರಯ್ಯ ಕೆ.ಜಿ ಈ ಚಿತ್ರವನ್ನು ನಿರ್ಮಾಣ‌ ಮಾಡುತ್ತಿದ್ದಾರೆ.

ಗಾಯಕರಾಗಿ ಹೆಸರು ಮಾಡಿರುವ ಶಶಾಂಕ್ ಶೇಷಗಿರಿ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಉದಯ್ ಲೀಲಾ ಛಾಯಾಗ್ರಹಣ ಹಾಗೂ ಅರ್ಜುನ್ ಕಿಟ್ಟು ಸಂಕಲನ ಈ ನೂತನ ಚಿತ್ರಕ್ಕಿದೆ.

ಆದಿತ್ಯ ಅವರಿಗೆ ನಾಯಕಿಯಾಗಿ ರಂಜನಿ ರಾಘವನ್ ನಟಿಸುತ್ತಿದ್ದಾರೆ. ಶಿವಮಣಿ(ನಿರ್ದೇಶಕ), ಅಶ್ವಿನ್ ಹಾಸನ್, ಕರಿಸುಬ್ಬು ಮುಂತಾದವರು ತಾರಾಬಳಗದಲ್ಲಿದ್ದಾರೆ. ಸದ್ಯದಲ್ಲೇ ಕನ್ನಡದ ಚಿತ್ರರಂಗದ ಖ್ಯಾತ ನಟರೊಬ್ಬರು ಚಿತ್ರದ ಶೀರ್ಷಿಕೆ ಅನಾವರಣ ಮಾಡಲಿದ್ದಾರೆ ಎಂದು ನಿರ್ದೇಶಕರು ತಿಳಿಸಿದ್ದಾರೆ.

Categories
ಸಿನಿ ಸುದ್ದಿ

ಜೂನ್ 23ಕ್ಕೆ ಧೂಮಂ ಸಿನಿಮಾ ರಿಲೀಸ್: ಏಕಕಾಲಕ್ಕೆ ಕನ್ನಡ ಹಾಗು ಮಲಯಾಳಂ ಭಾಷೆಯಲ್ಲಿ ಬಿಡುಗಡೆ

ಕೆ.ಜಿ.ಎಫ್, ಕಾಂತಾರ ದಂತಹ ಯಶಸ್ವಿ ಚಿತ್ರಗಳ ನಿರ್ಮಾಣದ ಮೂಲಕ ವಿಶ್ವದಾದ್ಯಂತ ಜನಪ್ರಿಯವಾಗಿರುವ ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ವಿಜಯ್ ಕಿರಗಂದೂರ್ ನಿರ್ಮಿಸಿರುವ ಚಿತ್ರ “ಧೂಮಂ. ಈ ಚಿತ್ರದ ಮೂಲಕ ಹೊಂಬಾಳೆ ಫಿಲಂಸ್ ಮಲೆಯಾಳಂ ಚಿತ್ರರಂಗಕ್ಕೂ ಅಡಿಯಿಟ್ಟಿದೆ. ಲೂಸಿಯಾ”, “ಯೂಟರ್ನ್” ಮಂತಾದ ಜನಪ್ರಿಯ ಚಿತ್ರಗಳ ನಿರ್ದೇಶಕ ಪವನ್ ಕುಮಾರ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

ಕನ್ನಡ ಹಾಗೂ ಮಲೆಯಾಳಂನಲ್ಲಿ ಇದೇ ಜೂನ್ 23 ರಂದು “ಧೂಮಂ” ಚಿತ್ರ ಬಿಡುಗಡೆಯಾಗಲಿದೆ.
“ಧೂಮಂ” ಚಿತ್ರದ ಕನ್ನಡ ಅವತರಣಿಕೆಯನ್ನು ಹೆಚ್ಚಿನ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ‌. ಕೇರಳದಲ್ಲೂ ಸುಮಾರು 300 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಚಿತ್ರ ತೆರೆ‌ಕಾಣುತ್ತಿದೆ.
ಜೂನ್ 29ರಂದು ತೆಲುಗು ಹಾಗೂ ತಮಿಳಿನಲ್ಲಿ ತೆರೆಗೆ ಬರಲಿದೆ.

ಫಹಾದ್ ಫಾಸಿಲ್, ಅಪರ್ಣ ಬಾಲಮುರಳಿ, ಅಚ್ಯುತ್ ಕುಮಾರ್, ರೋಶನ್ ಮ್ಯಾಥ್ಯೂ, ವಿನೀತ್ ರಾಧಾಕೃಷ್ಣನ್, ಅನು ಮೋಹನ್, ಜಾಯ್ ಮ್ಯಾಥ್ಯೂ, ನಂದು ಮುಂತಾದವರು ನಟಿಸಿದ್ದಾರೆ. ಪೂರ್ಣಚಂದ್ರ ತೇಜಸ್ವಿ ಅವರ ಸಂಗೀತ, ಸುರೇಶ್ ಅವರ ಸಂಕಲನ ಮತ್ತು ಪ್ರೀತಾ ಜಯರಾಮನ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.

ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಕಥೆ ಮತ್ತು ಚಿತ್ರಕಥೆಯನ್ನು ಪವನ್ ಕುಮಾರ್ ಅವರೇ ಬರೆದಿದ್ದಾರೆ. ಈ ಚಿತ್ರದ ಟ್ರೇಲರ್ ಈಗಾಗಲೇ ಸಾಕಷ್ಟು ಪ್ರಶಂಸೆ ಪಡೆದಿದೆ. ಚಿತ್ರದ ಬಗ್ಗೆ ನಿರೀಕ್ಷೆ ಇದೆ.

Categories
ಸಿನಿ ಸುದ್ದಿ

ಜೂನ್ 23ಕ್ಕೆ ಮೊದಲ ಮಳೆ!

ಯಾವುದೇ ಹುಡುಗಿಯೂ ಇಷ್ಟಪಡದಂಥ (ವಿ)ರೂಪವಂತ ಹುಡುಗನೊಬ್ಬ ಮದುವೆಯಾಗಲು ಹೊರಟಾಗ ಏನೇನಾಯಿತು ಎಂಬುದನ್ನು ಹಾಸ್ಯಮಯ ವಾಗಿ ಹೇಳುವಂಥ ಕಥಾಹಂದರ ಹೊಂದಿರುವ ಚಿತ್ರ ಮೊದಲಮಳೆ ಜೂನ್ 23ರಂದು ಬಿಡುಗಡೆಯಾಗಲಿದೆ. ಮರ್ಡರ್ ಮಿಸ್ಟ್ರಿ, ಕಾಮಿಡಿ, ಹಾರರ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ರಾಜಾನರಸಿಂಹ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಅಲ್ಲದೆ ಚಿತ್ರಕ್ಕೆ ಬಂಡವಾಳವನ್ನೂ ಹಾಕಿದ್ದಾರೆ.

ಮಮತಾಗೌಡ, ಸಾಹಿತ್ಯ, ಉಷಾ, ಪ್ರಿಯಾಶೆಟ್ಟಿ, ಸೇರಿದಂತೆ ಒಂಭತ್ತು ಜನ ನಾಯಕಿಯರಾಗಿ ಅಭಿನಸಿರುವ ಈ ಚಿತ್ರಕ್ಕೆ ರಾಜಶರಣ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಪ್ರಸನ್ನ ಭೋಜಶೆಟ್ಟರ್ ಅವರ ಸಂಗೀತ ಸಂಯೋಜನೆ, ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.
ಚಿತ್ರದ ಕುರಿತಂತೆ ಮಾತನಾಡಿದ ನಾಯಕ ರಾಜಾನರಸಿಂಹ ನಾನು ರೈತನ ಮಗ, ಕಲಾವಿದನಾಗಬೇಕು ಎನ್ನುವುದು ನನ್ನ ಬಹುದಿನಗಳ ಕನಸು. ಈ ಚಿತ್ರವನ್ನು ನಾನೇ ನಿರ್ಮಾಣ ಮಾಡಿದ್ದು, ಜೊತೆಗೆ ನಾಯಕನಾಗಿಯೂ ನಟಿಸಿದ್ದೇನೆ.

ಜೀವನದಲ್ಲಿ ಏನಾದರೂ ಸಾಧನೆ ಮಾಡಲೆಂದು ಹಳ್ಳಿಯಿಂದ ಸಿಟಿಗೆ ಬಂದ ನಾಯಕ ಜವರಾಯ ಕೊನೆಗೆ ಏನಾಗುತ್ತಾನೆ ಎನ್ನುವುದೇ ಈ ಚಿತ್ರದ ಕಥೆ ಎಂದು ಹೇಳಿದರು. ನಿರ್ದೇಶಕ ರಾಜಶರಣ್ ಈ ಹಿಂದೆ ಎಮ್ಮೆತಮ್ಮ ಎಂಬ ಚಿತ್ರ ನಿರ್ದೇಶಿಸಿದ್ದರು. ರಾಜಾನರಸಿಂಹ ಅವರ ಸ್ನೇಹಿತರು, ಆತನಿಗಾಗಿಯೇ ಒಂದು ಕಥೆ ಮಾಡಿದೆ, ಆ ಚಿತ್ರ ಆಗಲಿಲ್ಲ, ಇವರುಗೇನು ೧೦ ಜನ ಹೀರೋಯಿನ್ ಇಟ್ಕೊಂಡು ಸಿನ್ಮಾ ಮಾಡಕ್ಕಾಗುತ್ತಾ ಎನ್ನುವ ಮಾತು ಬಂತು. ಯಾಕಾಗಲ್ಲ ಅಂತ ಚಾಲೆಂಜ್ ತಗೊಂಡು ಈ ಚಿತ್ರ ಮಾಡಿದ್ದೇನೆ, ವ್ಯಕ್ತಿಯ ಜೀವನದಲ್ಲಿ ಮದುವೆ ಎನ್ನುವುದು ಮೊದಲಮಳೆ ಇದ್ದಹಾಗೆ, ನಾಯಕನ ಲೈಫ್ ನಲ್ಲೂ ಮೊದಲಮಳೆ ಆಗುತ್ತಾ ಇಲ್ವಾ ಅನ್ನೋದೇ ಈ ಚಿತ್ರ.

ಮಡಿಕೇರಿ, ಸಕಲೇಶಪುರ, ಮೈಸೂರು, ಬೆಂಗಳೂರು ಸುತ್ತಮುತ್ತ ೪೦ ದಿನ ಚಿತ್ರೀಕರಣ ನಡೆಸಿದ್ದೇವೆ. ಹಾರರ್ ಕಂಟೆಂಟ್ ಇರುವ ಕಾರಣ ಚಿತ್ರಕ್ಕೆ ಯು/ಎ ಸಿಕ್ಕಿದೆ ಎಂದರು. ಗಣೇಶರಾವ್, ಜೋತಿ ಮರೂರು ಉಳಿದ ಪಾತ್ರಗಳಲ್ಲಿದ್ದಾರೆ.

Categories
ಸಿನಿ ಸುದ್ದಿ

ಕನ್ನಡದಲ್ಲೂ ರಿಲೀಸ್ ಆಗಲಿದೆ ಧೋನಿ ನಿರ್ಮಾಣದ ಚಿತ್ರ: ಲೆಟ್ಸ್ ಗೆಟ್ ಮ್ಯಾರೀಡ್ ಟೀಸರ್ ಗೆ ಭರಪೂರ ಮೆಚ್ಚುಗೆ

ಕ್ಯಾಪ್ಟನ್ ಕೂಲ್ ಎಂ.ಎಸ್ ಧೋನಿ ಪತ್ನಿ‌ ಸಾಕ್ಷಿ ಜೊತೆಗೂಡಿ ತಮ್ಮದೇ ಧೋನಿ ಎಂಟರ್ಟೇನ್ಮೆಂಟ್‌ ಮೂಲಕ ನಿರ್ಮಿಸುತ್ತಿರುವ ಚೊಚ್ಚಲ ಸಿನಿಮಾ ‘ಲೆಟ್ಸ್ ಗೆಟ್ ಮ್ಯಾರೀಡ್’.
ಟೀಸರ್ ಮೂಲಕ ನಗುವಿನ ಕಿಕ್ ಕೊಟ್ಟಿರುವ ಈ ಚಿತ್ರವನ್ನು ರಾಜ್ಯದಲ್ಲಿಯೂ ಬಿಡುಗಡೆ ಮಾಡಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ. ಇತ್ತೀಚಿಗೆ ಪರಭಾಷೆ ಸಿನಿಮಾಗಳಿಗೆ ಕರುನಾಡಿನಲ್ಲಿ ಭರಪೂರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹೀಗಾಗಿ ಲೆಟ್ಸ್ ಗೆಟ್ ಮ್ಯಾರೀಡ್ ಸಿನಿಮಾ ಕೂಡ ಕರ್ನಾಟಕದಲ್ಲಿ ತೆರೆಕಾಣಲಿದೆ ಎಂದು ಚಿತ್ರತಂಡ ತಿಳಿಸಿದೆ.

ಫ್ಯಾಮಿಲಿ ಎಂಟರ್​ಟೇನರ್ ಕಥಾಹಂದರ ಹೊಂದಿರುವ ಸಿನಿಮಾವನ್ನು ರಮೇಶ್ ತಮಿಳ್​ಮಣಿ ನಿರ್ದೇಶನ ಮಾಡಿದ್ದಾರೆ. ನಾಯಕ ಹರೀಶ್ ಕಲ್ಯಾಣ್, ನಾಯಕಿ ಇವಾನಾ ನಟಿಸಿದ್ದು, ಹಿರಿಯ ನಟಿ ನದಿಯಾ, ಯೋಗಿ ಬಾಬು ಮತ್ತು ಆರ್‌ಜೆ ವಿಜಯ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಲೆಟ್ಸ್ ಗೆಟ್ ಮ್ಯಾರೀಡ್ ಸಿನಿಮಾವನ್ನು ಆದಷ್ಟು ಬೇಗ ತೆರೆಗೆ ತರಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ.

ರಮೇಶ್ ತಮಿಳ್ಮಣಿ ಸಿನಿಮಾಗೆ ಆಕ್ಷನ್ ಕಟ್ ಹೇಳುವುದರ ಜೊತೆಗೆ ಸಂಗೀತ ನಿರ್ದೇಶನದ ಜವಾಬ್ದಾರಿ ಕೂಡ ನಿಭಾಯಿಸಿದ್ದಾರೆ. ಟೀಸರ್ ಗೆ ಅದ್ಭುತ ರೆಸ್ಪಾನ್ಸ್ ಸಿಕ್ಕಿದ್ದು, ಶೀಘ್ರದಲ್ಲೇ ಆಡಿಯೋ ಹಾಗೂ ಟ್ರೇಲರ್‌ನ್ನು ಚಿತ್ರತಂಡ ಬಿಡುಗಡೆ ಮಾಡಲಿದೆ.

Categories
ಸಿನಿ ಸುದ್ದಿ

90 ಬಿಡಿ ಮನೀಗ್ ನಡಿ: ಇದು ಬಿರಾದರ್ ನಟನೆಯ 500ನೇ ಚಿತ್ರ- ತೆರೆಗೆ ರೆಡಿ

ರಾಷ್ಟ್ರಪ್ರಶಸ್ತಿ ವಿಜೇತ ನಟ ವೈಜನಾಥ್ ಅಭಿನಯದ 500ನೇ ಚಿತ್ರ “90 ಬಿಡಿ ಮನೀಗ್ ನಡಿ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.

ಮೊದಲು ನಮ್ಮ ಚಿತ್ರದ ಟೈಟಲ್ “90 ಹೊಡಿ ಮನೀಗ್ ನಡಿ” ಎಂದು ಇಡಲಾಗಿತ್ತು. ಆದರೆ ಸೆನ್ಸಾರ್ ಮಂಡಳಿ ಈ ಟೈಟಲ್ ಗೆ ಒಪ್ಪಲಿಲ್ಲ. ಹಾಗಾಗಿ, ಚಿತ್ರದ ಶೀರ್ಷಿಕೆಯನ್ನು “90 ಬಿಡಿ ಮನೀಗ್ ನಡಿ” ಎಂದು ಬದಲಿಸಲಾಯಿತು. ಚಿತ್ರದ ಟ್ರೇಲರ್ ಹಾಗೂ ಹಾಡು ಈಗಾಗಲೇ ಜನರ ಮನ ಗೆದ್ದಿದೆ.‌ ರಾಷ್ಟ್ರಪ್ರಶಸ್ತಿ ವಿಜೇತ ನಟ ಬಿರಾದಾರ್ ಈ ಚಿತ್ರದಲ್ಲಿ ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ‌ರತ್ನಮಾಲ ಬಾದರದಿನ್ನಿ ಈ ಚಿತ್ರವನ್ನು ನಿರ್ಮಾಣ‌ ಮಾಡಿದ್ದಾರೆ. ತಿಂಗಳ ಕೊನೆಗೆ ಅಥಾವಾ ಜುಲೈ ತಿಂಗಳಲ್ಲಿ ಚಿತ್ರವನ್ನು ತೆರೆಗೆ ತರುವುದಾಗಿ ಜಂಟಿ ನಿರ್ದೇಶಕರಾದ ಉಮೇಶ್ ಬಾದರದಿನ್ನಿ ಹಾಗೂ ನಾಗರಾಜ್ ಅರೆಹೊಳೆ ತಿಳಿಸಿದರು.

ನನ್ನ ರಂಗಭೂಮಿ ಹಾಗೂ ಸಿನಿಪಯಣಕ್ಕೆ 50 ವರ್ಷ ತುಂಬಿದೆ. ಇದು ನನ್ನ 500ನೇ ಚಿತ್ರ. ಡಿಫರೆಂಟ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದೇನೆ. ಹಾಡೊಂದಕ್ಕೆ ಭರ್ಜರಿ ಸ್ಟೆಪ್ ಹಾಕಿದ್ದೇನೆ. ಕುಡಿತದಿಂದ ಏನೆಲ್ಲಾ ದುಷ್ಪರಿಣಾಮ ಆಗುತ್ತದೆ ಎಂಬುದನ್ನು ‌ನಿರ್ದೇಶಕರು ಈ ಚಿತ್ರದಲ್ಲಿ ತೋರಿಸಿದ್ದಾರೆ ಎಂದರು ನಟ ಬಿರಾದಾರ್.

ಬ್ಯಾಂಕ್ ಉದ್ಯೋಗಿಯ ಪಾತ್ರ ನನ್ನದು ಎಂದು ಕರಿಸುಬ್ಬು ಹೇಳಿದರು. ಅಭಯ್ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಪ್ರೀತು ಪೂಜಾ‌, ನೀತಾ, ಆರ್ ಡಿ ಬಾಬು, ವಿವೇಕ್, ಹೊಸಕೋಟೆ ಮುರುಳಿ ಮುಂತಾದವರು ತಮ್ಮ ಪಾತ್ರಗಳ ಬಗ್ಗೆ ಮಾಹಿತಿ ನೀಡಿದರು. ಬಿರಾದಾರ್ ಜೊತೆ ಕರಿಸುಬ್ಬು, ಧರ್ಮ, ಪ್ರಶಾಂತ್ ಸಿದ್ಧಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಅಂದಹಾಗೆ “90 ಬಿಡಿ ಮನೀಗ್ ನಡಿ” ಚಿತ್ರಕ್ಕೆ “ಇವತ್ತೆ ಲಾಸ್ಟು ಗುರು, ನಾಳೆಯಿಂದ ನಾನ್ ಎಣ್ಣೆ ಹೊಡಿಯಲ್ಲ” ಎಂಬ ಪಾನಪ್ರೀಯರ ಜನಪ್ರಿಯ ಸ್ಲೋಗನ್ ಇಡಲಾಗಿದ್ದು, ಚಿತ್ರ ಸದ್ದು ಮಾಡುತ್ತಿದೆ. ಒಟ್ಟಿನಲ್ಲಿ ಕಾಮಿಡಿ, ಕ್ರೈಮ್ ಥ್ರಿಲ್ಲರ್ ರೂಪದಲ್ಲಿ ಟ್ರೈಲರ್ ಕಟ್ಟಿಕೊಟ್ಟಿದ್ದು ಚಿತ್ರದ ಮೇಲೊಂದು ನಿರೀಕ್ಷೆ ಹುಟ್ಟಿಕೊಂಡಿದೆ.


ಚಿತ್ರಕ್ಕೆ ಕೃಷ್ಣ ನಾಯ್ಕರ್ ಛಾಯಾಗ್ರಹಣ, ವೆಂಕಟೇಶ್ ಯುಡಿವಿ ಸಂಕಲನ, ರಾಕಿ ರಮೇಶ್ ಸಾಹಸ ನಿರ್ದೇಶನ, ವೀರ್ ಸಮರ್ಥ್ ಅವರ ಹಿನ್ನೆಲೆ ಸಂಗೀತವಿದ್ದು, ಕಿರಣ್ ಶಂಕರ್ ಮತ್ತು ಶಿವು ಭೇರಗಿ ಅವರ ಸಂಗೀತ ನಿರ್ದೇಶನವಿದೆ.

error: Content is protected !!