Categories
ಸಿನಿ ಸುದ್ದಿ

ಭೀಮನ ಹಿಂದೆ ನಿಂತ ನಿರ್ದೇಶಕ ಹರ್ಷ: ಗೋಪಿಚಂದ್ ಫಸ್ಟ್ ಲುಕ್ ಇದು…

ತೆಲುಗಿನ ಸ್ಟಾರ್ ಖ್ಯಾತಿಯ ಗೋಪಿಚಂದ್ ಹಾಗೂ ಕನ್ನಡ ಎ.ಹರ್ಷ ಕಾಂಬೋದ ಸಿನಿಮಾಗೆ ಟೈಟಲ್ ಫಿಕ್ಸ್ ಆಗಿದೆ. ಗೋಪಿಚಂದ್ ಜನ್ಮದಿನದ ಪ್ರಯುಕ್ತ ಫಸ್ಟ್ ಹಾಗೂ ಟೈಟಲ್ ನ್ನು ಚಿತ್ರತಂಡ ರಿವೀಲ್ ಮಾಡಿದೆ. ಭೀಮನಾಗಿ ಮ್ಯಾಚೋ ಸ್ಟಾರ್ ಎಂಟ್ರಿ ಕೊಟ್ಟಿದ್ದು, ಪೊಲೀಸ್ ಖದರ್‌ನಲ್ಲಿ ಪ್ರತ್ಯಕ್ಷರಾಗಿದ್ದಾರೆ. ಮುಖದ ಮೇಲೆ ಗಾಯದ ಗುರುತು, ಉಗ್ರ ರೂಪಿಯಾಗಿ ತೀಕ್ಷ ನೋಟದ ಗೋಪಿಚಂದ್ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.

ಭಜರಂಗಿ, ವಜ್ರಕಾಯ, ವೇದ ಸೇರಿದಂತೆ ಹಲವು ಸೂಪರ್ ಹಿಟ್ ಚಿತ್ರ ನಿರ್ದೇಶಿಸಿರುವ ಎ.ಹರ್ಷಗೆ ಇದು ಮೊದಲ ಸಿನಿಮಾ. ಭೀಮ ಕೌಟುಂಬಿಕ ಹಾಗೂ ಆಕ್ಷನ್ ಎಂಟರ್ ಟೈನರ್ ಕಥಾಹಂದರ ಹೊಂದಿದೆ.‌ ಕೆ.ಕೆ.ರಾಧಾ ಮೋಹನ್ ಶ್ರೀ ಸತ್ಯ ಸಾಯಿ ಆರ್ಟ್ಸ್ ಪ್ರೊಡಕ್ಷನ್ ನಡಿ ಬಹಳ ಅದ್ಧೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಅಂದಹಾಗೆ, ಭೀಮ ಶ್ರೀ ಸತ್ಯ ಸಾಯಿ ಆರ್ಟ್ಸ್ ಬ್ಯಾನರ್ ನಡಿ ನಿರ್ಮಾಣವಾಗುತ್ತಿರುವ 14ನೇ ಸಿನಿಮಾ.

ಸ್ವಾಮಿ.ಜೆ ಛಾಯಾಗ್ರಹಣ, ಕೆಜಿಎಫ್ ಖ್ಯಾತಿಯ ರವಿ ಬಸ್ರೂರ್ ಸಂಗೀತ, ಅಜ್ಜು ಮಹಂಕಾಳಿ ಸಂಭಾಷಣೆ, ವೆಂಕಟ್ ಹಾಗೂ ಡಾ.ರವಿವರ್ಮಾ ಸ್ಟಂಟ್ ಚಿತ್ರಕ್ಕಿದೆ.

ಹೈದ್ರಾಬಾದ್ ನ ಅಲ್ಯೂಮಿನಿಯಂ ಫ್ಯಾಕ್ಟರ್ ಯಲ್ಲಿ ಹೈವೋಲ್ಟೇಜ್ ಆಕ್ಷನ್ ದೃಶ್ಯಗಳ ಚಿತ್ರೀಕರಣ ಭರದಿಂದ ಸಾಗುತ್ತಿದೆ. ನಾಯಕಿ ಹಾಗೂ ಉಳಿದ ತಾರಾಬಳಗ ಅಪ್ ಡೇಟ್ ಶೀಘ್ರದಲ್ಲೇ ರಿವೀಲ್ ಮಾಡಿದೆ ಭೀಮ ಚಿತ್ರತಂಡ.

Categories
ಸಿನಿ ಸುದ್ದಿ

ಅಣ್ಣ ತಂಗಿಯ ಅನುಬಂಧ! ವಿನೋದ್-ಸೌಂದರ್ಯ ಜಯಮಾಲ ಅಪರೂಪದ ಭೇಟಿ: ಬಾಲ್ಯದ ನೆನಪಿಗೆ ಜಾರಿದ ಬ್ರದರ್-ಸಿಸ್ಟರ್

ಅಭಿಷೇಕ್ ಮದುವೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ಮರಿ ಟೈಗರ್ ವಿನೋದ್ ಪ್ರಭಾಕರ್ ಹಾಗೂ ಸೌಂದರ್ಯ ಜಯಮಾಲಾ.. ಹೇಗಿತ್ತು ಗೊತ್ತಾ ಅಣ್ಣ ತಂಗಿಯ ಮಾತುಕತೆ?

ಮರಿ ಟೈಗರ್ ವಿನೋದ್ ಪ್ರಭಾಕರ್ ಹಾಗೂ ಸೌಂದರ್ಯ ಜಯಮಾಲಾ. ಈ ಇಬ್ಬರು ಚಿತ್ರರಂಗದ ತಾರೆಯರು. ಎಲ್ಲದಕ್ಕಿಂತ ಹೆಚ್ಚಾಗಿ ಅಣ್ಣ-ತಂಗಿ. ಆದರೆ ಇಲ್ಲಿವರೆಯೂ ವಿನೋದ್ ಆಗಲಿ, ಸೌಂದರ್ಯ ಆಗಲಿ ಒಟ್ಟಿಗೆಕಾಣಿಸಿಕೊಂಡಿರಲಿಲ್ಲ. ಒಬ್ಬರಿಗೊಬ್ಬರು ಭೇಟಿಯಾಗಿಲ್ಲ. ಅಂತಹ ಸನ್ನಿವೇಶ ನಿರ್ಮಾಣವಾಗಿಲ್ಲ ಅಂತೇನಲ್ಲ. ಒಟ್ಟಿಗೆ ಆಡುತ್ತಾ ಬೆಳೆದ ಇವರಿಬ್ಬರು ಈ ಅಣ್ಣ ತಂಗಿ ಬದಲಾದ ಸನ್ನಿವೇಶದಲ್ಲಿ ದೂರ ಉಳಿದಿದ್ದೂ ಬಿಟ್ರೆ, ಅವರ ನಡುವೆ ಗಾಂಧಿನಗರ ಮಾತಾಡಿಕೊಳ್ಳುವ ರೀತಿ ಸಂಬಂಧವೇನು ಅಳಸಿಲ್ಲ.

ವಿನೋದ್ ಹಾಗೂ ಸೌಂದರ್ಯ ಇಂದಿಗೂ, ಎಂದೆಂದಿಗೂ ಅಣ್ಣ ತಂಗಿಯೇ. ಆದ್ರೆ ಅವರಿಬ್ಬರನ್ನು ಅವರ ಅಕ್ಕ-ಪಕ್ಕದವರು ಭೇಟಿ ಮಾಡಲಾಗದಂತೆ ನೋಡಿಕೊಂಡಿದ್ದರು ಅನ್ನೋದೇ ವಿಪರ್ಯಾಸ. ಆದ್ರೆ ಸಮಯ-ಸಂದರ್ಭ ಇದೆಲ್ಲಾ ಸಂಬಂಧಗಳನ್ನು ಮತ್ತೆ ಬೆಸೆಯುವಂತೆ ಮಾಡಿದೆ. ಮೊನ್ನೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿ ಅದ್ಧೂರಿಯಾಗಿ ನಡೆದ ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿದಪ ಆರತಕ್ಷಣೆಯಲ್ಲಿ ವಿನೋದ್ ಪ್ರಭಾಕರ್ ಹಾಗೂ ಸೌಂದರ್ಯ ಜಯಮಾಲಾ ಮುಖಾಮುಖಿಯಾಗಿದ್ದಾರೆ. ಬಹಳ ವರ್ಷದ ಬಳಿಕ ತಂಗಿ ನೋಡಿದ ಖುಷಿ ವಿನೋದ್ ಅವರದ್ದು, ಅಣ್ಣನನ್ನೂ ನೋಡಿದ ಖುಷಿ ಸೌಂದರ್ಯಗೆ..ಭೇಟಿ ಕ್ಷಣದಲ್ಲಿ ಅಣ್ಣ ತಂಗಿ ಮತ್ತೆ ಬಾಲ್ಯದ ದಿನಗಳಿಗೆ ಜಾರಿದ್ದಾರೆ.

ಬಾಲ್ಯದ ಆಟ-ತುಂಟಾಟ ನೆನಪುಕೊಂಡು ಒಂದಷ್ಟು ಸಮಯ ಚರ್ಚೆ ನಡೆಸಿದ್ದಾರೆ. ಅಣ್ಣನ ಪತ್ನಿ ನಿಶಾ ವಿನೋದ್ ಪ್ರಭಾಕರ್ ಜೊತೆಯಲ್ಲಿಯೂ ಸೌಂದರ್ಯ ಖುಷಿ ಖುಷಿಯಿಂದ ಕಾಲ ಕಳೆದು ಮೂವರು ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಮರಿಟೈಗರ್ ವಿನೋದ್ ಪ್ರಭಾಕರ್ ಹಾಗೂ ಸೌಂದರ್ಯ ಜಯಮಾಲಾ ನಡುವೆ ಅಣ್ಣ ತಂಗಿಯ ಬಾಂಧವ್ಯವಿದೆ. ಅದು ಬಿಟ್ರೆ ಅವ್ರು ದೂರವಾಗಿದ್ದರೆ ,ಅವ್ರ ನಡುವೆ ಎಲ್ಲವೂ ಸರಿ ಇಲ್ಲ ಅನ್ನೋ ಮಾತುಗಳು ಸತ್ಯಕ್ಕೆ ದೂರವಾದುದ್ದು.

Categories
ಸಿನಿ ಸುದ್ದಿ

ಆದಿಪುರುಷನ ಹಿಂದೆ ಬಿದ್ದ ಕೆ ಆರ್ ಜಿ ಸ್ಟುಡಿಯೋಸ್! ಪ್ರಭಾಸ್ ಸಿನಿಮಾ ವಿತರಣೆಗೆ ಮುಂದಾದ ಕನ್ನಡ ನಿರ್ಮಾಣ ಸಂಸ್ಥೆ

ಬಹಳ ಯಶಸ್ಸು ಕಂಡ ಕೆ.ಜಿ.ಎಫ್ 1, ಕೆ.ಜಿ.ಎಫ್ 2, ಕಾಂತಾರ, ಚಾರ್ಲಿ 777, ಗಂಧದಗುಡಿ, ವಕೀಲ್ ಸಾಬ್ ಮತ್ತು ದಸರಾ ಮುಂತಾದ ಚಿತ್ರಗಳನ್ನು ಬಿಡುಗಡೆ ಮಾಡಿದ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆ ಇದೀಗ ಆದಿಪುರುಷ್ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಮುಂದಾಗಿದೆ. .

ಕರ್ನಾಟಕದಲ್ಲಿ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆ ಇದುವರೆಗೂ ಬಹಳ ಶ್ರದ್ದೆಯಿಂದ ಚಿತ್ರಗಳನ್ನು ಬಿಡುಗಡೆ ಮಾಡಿಕೊಂಡು ಬರುತ್ತಿರುವುದು ಕರ್ನಾಟಕದ ಜನತೆಗೆ ತಿಳಿದುರುವ ವಿಷಯ. ಸದಭಿರುಚಿಯ ಚಿತ್ರಗಳನ್ನು ಸಿನಿಮಾ ಪ್ರೇಕ್ಷರಿಗೆ ತಲುಪಿಸುವ ಕೈಕಂರ್ಯದಲ್ಲಿ ಕೆ.ಆರ್.ಜಿ.ಸ್ಟುಡಿಯೋಸ್ ಸಂಸ್ಥೆ ತೊಡಗಿದೆ. ಈ ಸಂಸ್ಥೆಯ ಕಿರೀಟಕ್ಕೆ ಮತ್ತೊಂದು ಗರಿ ಆದಿಪುರುಷ್ ಆಗಲಿದೆ ಅನ್ನುವುದು ಸಂಸ್ಥೆಯ ನಂಬಿಕೆ.

ನಮ್ಮ ಹಿಂದೂ ಸಂಸ್ಕೃತಿಯ ಮಹಾಕಾವ್ಯ ಎಂದೇ ಹೇಳಲ್ಪಡುವ ಪವಿತ್ರ ಗ್ರಂಥ ರಾಮಾಯಣದ ಎಳೆಯನ್ನು ಆಧಿರಿಸಿ ತಯಾರಿಸಿರುವ ಚಿತ್ರ ಆದಿಪುರುಷ್.
ಟಿ. ಸೀರೀಸ್ ಮತ್ತು ರೆಟ್ರೋಫಿಲ್ಸ್ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಕಥೆ ಹೆಣೆದು ನಿರ್ದೇಶನ ಮಾಡುತ್ತಿರುವುದು ಓಂ ರಾವತ್ ಅವರು. ಆದಿಪುರುಷ್ ಚಿತ್ರವು ಏಕಕಾಲಕ್ಕೆ ಹಿಂದಿ ಮತ್ತು ತೆಲುಗು ಭಾಷೆಗಳಲ್ಲಿ ತಯಾರಾಗಿದೆ. ಚಿತ್ರದ ತಾರಾಗಣದಲ್ಲಿ ಪ್ರಭಾಸ್, ಕ್ರಿತಿ ಸನೋನ್ , ಸೈಫ್ ಅಲಿ ಖಾನ್, ಸನ್ನಿ ಸಿಂಗ್, ದೇವದತ್ತ ನಾಗೇ ಮುಂತಾದವರು ಕಾಣಿಸಿಕೊಳ್ಳಲಿದ್ದಾರೆ.

“ಆದಿಪುರುಷ್ ಚಿತ್ರದ ಕರ್ನಾಟಕದ ವಿತರಣೆ ನಮಗೆ ಸಿಕ್ಕಿರುವುದು ಬಹಳ ಹೆಮ್ಮೆಯ ಸಂಗತಿ” ಎಂದು ಹೊಂಬಾಳೆ ಸಂಸ್ಥೆಯ ಕಾರ್ಯಕಾರಿ ನಿರ್ಮಾಪಕರು ಮತ್ತು ಕೆ.ಆರ್.ಜಿ. ಸ್ಟುಡಿಯೋಸ್ ಸಂಸ್ಥೆಯ ಸಂಸ್ಥಾಪಕರು ಆಗಿರುವ ಕಾರ್ತಿಕ್ ಗೌಡ ಸಂತಸ ವ್ಯಕ್ತ ಪಡಿಸಿದ್ದಾರೆ. ನಮ್ಮ ಪೌರಾಣಿಕ ಮಹಾಕಾವ್ಯವಾದ ರಾಮಾಯಣದಲ್ಲಿರುವ ಸಾರವನ್ನು ಇಂದಿನ ಕಾಲಘಟ್ಟಕ್ಕೆ ಮತ್ತು ಇಂದಿನ ಪೀಳಿಗೆಗೆ ಅನುಗುಣವಾಗಿ ಆದಿಪುರುಷ್ ಚಿತ್ರ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಚಿತ್ರವು ಪ್ರಭಾಸ್ ಮತ್ತು ಯು. ವಿ ಕ್ರಿಯೇಷನ್ಸ್ ಜೊತೆಗಿನ ಕೆ.ಆರ್.ಜಿ ಸ್ಟುಡಿಯೋಸ್ ಒಡನಾಟಕ್ಕೂ ಸಾಕ್ಷಿಯಾಗಲಿದೆ.

ಆದಿಪುರುಷ್ ಚಿತ್ರ ಜೂನ್ 16 ರಂದು ತೆಲುಗು, ಹಿಂದಿ, ಕನ್ನಡ, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಪ್ರಪಂಚದಾದ್ಯಂತ ಬಿಡುಗಡೆ ಆಗಲಿದೆ.

Categories
ಸಿನಿ ಸುದ್ದಿ

ಆಗಸ್ಟ್‌ನಲ್ಲಿ ರೇವ್ ಪಾರ್ಟಿ!

ರಾಜು ಬೋನಗಾನಿ ನಿರ್ದೇಶನದ ವಿಭಿನ್ನ ಕಥಾಹಂದರದ ‘ರೇವ್ ಪಾರ್ಟಿ’ ಚಿತ್ರದ ಚಿತ್ರೀಕರಣವು ಯಶಸ್ವಿಯಾಗಿ ಮುಗಿದಿದ್ದು, ಚಿತ್ರವು ಇದೀಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಈ ಚಿತ್ರವನ್ನು ಆಗಸ್ಟ್ ತಿಂಗಳಲ್ಲಿ ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ತೀರ್ಮಾನಿಸಿದೆ.


ಬೋನಗಾನಿ ಎಂಟರ್ ಟೈನ್ ಮೆಂಟ್ ಅಡಿಯಲ್ಲಿ ರಾಜು ಬೋನಗಾನಿ ನಿರ್ಮಿಸುತ್ತಿರುವ ‘ರೇವ್ ಪಾರ್ಟಿ’ ಚಿತ್ರದಲ್ಲಿ ಕ್ರಿಶ್ ಸಿದ್ದಿಪಲ್ಲಿ, ರಿತಿಕಾ ಚರ್ಕವರ್ತಿ, ಐಶ್ವರ್ಯಾ ಗೌಡ, ಸುಚೇಂದ್ರ ಪ್ರಸಾದ್, ತಾರಕ್ ಪೊನ್ನಪ್ಪ ಮುಂತಾದವರು ನಟಿಸಿದ್ದಾರೆ. ಬೆಂಗಳೂರು, ಮಂಗಳೂರು, ಮೈಸೂರು ಮತ್ತು ಉಡುಪಿಯಲ್ಲಿ 35 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ.
ಈ ಚಿತ್ರಕ್ಕೆ ರಾಜು ಬೋನಗಾನಿ ಅವರೇ ಕಥೆ-ಚಿತ್ರಕಥೆ ರಚಿಸಿದ್ದಾರೆ.


ಯಶಸ್ವಿಯಾಗಿ ಚಿತ್ರೀಕರಣ ಮುಕ್ತಾಯವಾಗಲು ಸಹಕರಿಸಿದ ಕಲಾವಿದರಿಗೆ ಹಾಗೂ ತಂತ್ರಜ್ಞರಿಗೆ
ರಾಜು ಬೋನಗಾನಿ ಧನ್ಯವಾದ ತಿಳಿಸಿದ್ದಾರೆ.

ಸಾಮಾನ್ಯವಾಗಿ ರೇವ್ ಪಾರ್ಟಿಗಳು ಬೆಂಗಳೂರು, ಉಡುಪಿ ಮತ್ತು ಗೋವಾದಲ್ಲಿ ನಡೆಯುತ್ತವೆ. ಈ ಪಾರ್ಟಿಗಳು ಹೇಗೆ ನಡೆಯುತ್ತವೆ? ಅದರ ಹಿಂದೆ ಯಾರೆಲ್ಲಾ ಇರುತ್ತಾರೆ? ಈ ಪಾರ್ಟಿಗಳು ಯುವ ಜನತೆಯ ಮೇಲೆ ಏನೆಲ್ಲಾ ದುಷ್ಪರಿಣಾಮಗಳು ಬೀರುತ್ತವೆ ಎಂಬ ಅಂಶಗಳನ್ನು ಈ ಚಿತ್ರದ ಮೂಲಕ ತೋರಿಸುವ ಪ್ರಯತ್ನ ಮಾಡಿದ್ದೇವೆ.

‘ರೇವ್ ಪಾರ್ಟಿ’ ಚಿತ್ರವು ಇಂದಿನ ಯುವ ಜನತೆಗೆ ಬಹಳ ಇಷ್ಟವಾಗುತ್ತದೆ ಎಂಬ ನಂಬಿಕೆ ನನಗಿದೆ ಎನ್ನುತ್ತಾರೆ ನಿರ್ದೇಶಕ ರಾಜು ಬೋನಗಾನಿ.

‘ರೇವ್ ಪಾರ್ಟಿ’ ಚಿತ್ರಕ್ಕೆ ದಿಲೀಪ್ ಭಂಡಾರಿ ಸಂಗೀತ ಸಂಯೋಜಿಸಿದ್ದು, ವೆಂಕಟ್ ಮನ್ನಂ ಛಾಯಾಗ್ರಹಣ ಮಾಡಿದ್ದಾರೆ. ರವಿಕುಮಾರ್ ಅವರ ಸಂಕಲನ, ವೆಂಕಟ್ ಆರೆ ಅವರ ಕಲಾನಿರ್ದೇಶನ ಈ ಚಿತ್ರಕ್ಕಿದೆ.

ಇದೊಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು ಕನ್ನಡ, ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ.

Categories
ಸಿನಿ ಸುದ್ದಿ

ರೋಡ್ ಕಿಂಗ್ ಹಾಡಿದಾಗ: ಜೂನ್ 23ಕ್ಕೆ ಚಿತ್ರ ರಿಲೀಸ್

ಮತೀನ್ ಹುಸೇನ್ ನಾಯಕರಾಗಿ ನಟಿಸಿರುವ `ರೋಡ್ ಕಿಂಗ್’ ಚಿತ್ರದ ಮೂರು ಹಾಡುಗಳು trendsetter productions ಯೂಟ್ಯೂಬ್ ಚಾನಲ್ ನಲ್ಲಿ ಈಗಾಗಲೇ ಬಿಡುಗಡೆಯಾಗಿದ್ದು, ಕಲಾರಸಿಕರ ಮನ ಗೆದ್ದಿದೆ. ಪ್ರಭು ಎಸ್ ಆರ್ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳನ್ನು ಚಂದನ್ ಶೆಟ್ಟಿ ಮಾಧುರಿ ಹಾಗೂ ವಿಶಾಲ್ ಹಾಡಿದ್ದಾರೆ. ಡಾ||ವಿ.ನಾಗೇಂದ್ರ ಪ್ರಸಾದ್, ಮತೀನ್ ಹುಸೇನ್ ಹಾಗೂ ಸಾಯಿ ನವೀನ್ ಹಾಡುಗಳನ್ನು ಬರೆದಿದ್ದಾರೆ. ಟ್ರೇಲರ್ ಗೂ ಅಪಾರ ಮೆಚ್ಚುಗೆ ವ್ಯಕ್ತವಾಗಿದ್ದು, ಜೂನ್ 23 ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ದಿಲೀಪ್ ಕುಮಾರ್ ನಿರ್ಮಾಣದ ಈ ಚಿತ್ರಕ್ಕೆ ಮತೀನ್ ಹುಸೇನ್ ಕಥೆ ಬರೆದಿದ್ದು, ರಾಂಡಿ ಕೆಂಟ್ ನಿರ್ದೇಶನ ಮಾಡಿದ್ದಾರೆ. ಮತೀನ್ ಹುಸೇನ್, ಮಹೇಶ್ ಅವರ ಜೊತೆಗೂಡಿ ಸಂಭಾಷಣೆ ಬರೆದಿದ್ದಾರೆ.

ರಾಂಡಿ ಕೆಂಟ್ ಹಾಗೂ ಮತೀನ್ ಹುಸೇನ್ ಸ್ನೇಹಿತರು. ಅಮೇರಿಕಾದಲ್ಲಿರುವ ರಾಂಡಿ ಅವರು ಅಲ್ಲಿಂದಲೇ ಸ್ಕೈಪ್ ಮೂಲಕ ನಿರ್ದೇಶನ ಮಾಡಿರುವುದು ವಿಶೇಷ.

ನಾಯಕಿಯಾಗಿ `ರನ್ ಆಂಟೋನಿ’ ಖ್ಯಾತಿಯ ರುಕ್ಸರ್ ನಟಿಸಿದ್ದಾರೆ. ಲೀಲಾ ಮೋಹನ್, ಹರೀಶ್ ಕುಮಾರ್, ಸುಮಾ ರಾವ್, ನಯನಾ ಶೆಟ್ಟಿ, ಭುವನ್ ರಾಜ್, ರಿಜ್ವಾನ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಆರಿಫ್ ಲಲಾನಿ ಛಾಯಾಗ್ರಹಣ ಹಾಗೂ ಶ್ರೀ ಕ್ರೇಜಿ ಮೈಂಡ್ಸ್ ಸಂಕಲನ ಈ ಚಿತ್ರಕ್ಕಿದೆ.

Categories
ಸಿನಿ ಸುದ್ದಿ

ಹಳ್ಳಿ ಕಥೆ ಹೇಳ್ತಾರೆ ವಿನಯ್ ರಾಜಕುಮಾರ್! ಗ್ರಾಮಾಯಣ ಸಿನಿಮಾಗೆ ಪೂಜೆ

ಜಿ.ಮನೋಹರನ್ ಹಾಗೂ ಕೆ.ಪಿ ಶ್ರೀಕಾಂತ್ ನಿರ್ಮಾಣದ, ದೇವನೂರು ಚಂದ್ರು ನಿರ್ದೇಶನದ ಹಾಗೂ ವಿನಯ್ ರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ
“ಗ್ರಾಮಾಯಣ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಆರಂಭ ಫಲಕ ತೋರಿದರು. ಅಶ್ವಿನಿ ಪುನೀತ್ ರಾಜಕುಮಾರ್ ಕ್ಯಾಮೆರಾ ಚಾಲನೆ ಮಾಡಿದರು. ರಾಘವೇಂದ್ರ ರಾಜಕುಮಾರ್, ಮಂಗಳ ರಾಘವೇಂದ್ರ ರಾಜಕುಮಾರ್, ದುನಿಯಾ ವಿಜಯ್, ಧ್ರುವ ಸರ್ಜಾ, ರಾಜ್ ಬಿ ಶೆಟ್ಟಿ, ಆರ್ ಚಂದ್ರು, ಪವನ್ ಒಡೆಯರ್, ಸಿಂಪಲ್ ಸುನಿ ಸೇರಿದಂತೆ ಅನೇಕ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.

“ಗ್ರಾಮಾಯಣ” ಇದು ಗ್ರಾಮದಲ್ಲೇ ನಡೆಯುವ ಕಥೆ. ಸಿಂಪಲ್ ಸುನಿ ಅವರ ಮದುವೆ ಸಂದರ್ಭದಲ್ಲಿ ವಿನಯ್ ರಾಜಕುಮಾರ್ ಅವರನ್ನು ಭೇಟಿ ಮಾಡಿದ್ದೆ. ಅವರನ್ನು ನೋಡಿದ ಕೂಡಲೆ ಈ ಕಥೆಗೆ ಇವರೆ ಸೂಕ್ತ ನಾಯಕ ಅಂದುಕೊಂಡೆ. ಅವರು ಕಥೆ ಒಪ್ಪಿದರು. ನೀವು ಈವರೆಗೂ ನೋಡಿರದ ವಿನಯ್ ರಾಜಕುಮಾರ್ ಅವರನ್ನು ಈ ಚಿತ್ರದಲ್ಲಿ ನೋಡಬಹುದು. ಚಿಕ್ಕಮಗಳೂರು, ದೇವರಾಯಸಮುದ್ರ, ಅರಸಿಕೆರೆ, ಕಡೂರು ಸುತ್ತಮುತ್ತ ಚಿತ್ರೀಕರಣ ಮಾಡಲಿದ್ದೇವೆ. ಯಶಸ್ವಿನಿ ಅಂಚಲ್ ಛಾಯಾಗ್ರಹಣ ಹಾಗೂ ಪೂರ್ಣಚಂದ್ರ ತೇಜಸ್ವಿ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಅಚ್ಯುತಕುಮಾರ್, ಗೋಪಾಲಕೃಷ್ಣ ದೇಶಪಾಂಡೆ, ಅರುಣ್ ಸಾಗರ್, ಅಪರ್ಣ(ನಿರೂಪಕಿ), ಸೀತಾ ಕೋಟೆ, ಶ್ರೀನಿವಾಸ ಪ್ರಭು, ಮಂಜುನಾಥ್ ಹೆಗೆಡೆ ಮುಂತಾದವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ನಿರ್ಮಾಪಕರಾದ ಮನೋಹರನ್ ಹಾಗೂ ಕೆ.ಪಿ. ಶ್ರೀಕಾಂತ್ ಅವರಿಗೆ ಧನ್ಯವಾದ ಎಂದರು ನಿರ್ದೇಶಕ ದೇವನೂರು ಚಂದ್ರು.

ಈಗಿನ ಯುವಕರ ದೃಷ್ಟಿಕೋನದಲ್ಲಿ ಹಳ್ಳಿ ಹೇಗೆ ಕಾಣಿಸುತ್ತದೆ ಎನ್ನುವುದೇ “ಗ್ರಾಮಾಯಣ. ನಾನು ಈವರೆಗೂ ಮಾಡಿರದ ಪಾತ್ರವಿದು. ಚಂದ್ರು ಅವರು ಕಥೆ ಚೆನ್ನಾಗಿ ಮಾಡಿಕೊಂಡಿದ್ದಾರೆ. ನಿರ್ಮಾಪಕರಿಗೆ ನನ್ನ ಧನ್ಯವಾದಗಳು ಎಂದರು ವಿನಯ್ ರಾಜಕುಮಾರ್.

“U I” ಚಿತ್ರದ ಸೆಟ್ ನಲ್ಲಿ “ಗ್ರಾಮಾಯಣ” ಚಿತ್ರದ ಟೀಸರ್ ನೋಡಿದೆ. ಟೀಸರ್ ಗೆ ತುಂಬಾ ಪಾಸಿಟಿವ್ ಕಾಮೆಂಟ್ಸ್ ಗಳು ಬಂದಿದ್ದವು. ಇಂತಹ ಒಳ್ಳೆಯ ಚಿತ್ರ ನಿಲ್ಲಬಾರದು ಎಂದು ಲಹರಿ ಫಿಲಂಸ್ ಜೊತೆ ಸೇರಿ ನಿರ್ಮಾಣ ಮಾಡುತ್ತಿದ್ದೇನೆ ಎನ್ನುತ್ತಾರೆ ಕೆ.ಪಿ.ಶ್ರೀಕಾಂತ್.

ನಾನು “ಗ್ರಾಮಾಯಣ”ದ ಹಾಡೊಂದು ಕೇಳಿ ತುಂಬಾ ಖುಷಿಪಟ್ಟಿದೆ. ಈಗ ನಮ್ಮ ಅಣ್ಣ ಮನೋಹರನ್ ಹಾಗೂ ಕೆ.ಪಿ.ಶ್ರೀಕಾಂತ್ ಸೇರಿ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರ ಚೆನ್ನಾಗಿ ಬರಲಿದೆ. ನಿಮ್ಮೆಲ್ಲರ ಪ್ರೋತ್ಸಾವಿರಲಿ ಎಂದರು ಲಹರಿ ವೇಲು.

ಸಹ ನಿರ್ಮಾಪಕ ನವೀನ್ ಮನೋಹರನ್, ಕಲಾವಿದರಾದ ಅರುಣ್ ಸಾಗರ್, ಗೋಪಾಲಕೃಷ್ಣ ದೇಶಪಾಂಡೆ “ಗ್ರಾಮಾಯಣ” ದ ಕುರಿತು ಮಾತನಾಡಿದರು. ಮುಹೂರ್ತ ಸಮಾರಂಭಕ್ಕೆ ಆಗಮಿಸಿದ್ದ ಅಷ್ಟು ಗಣ್ಯರು “ಗ್ರಾಮಾಯಣ”, ” ರಾಮಾಯಣ” ದಷ್ಟೇ ಕೀರ್ತಿ ಪಡೆಯಲಿ ಎಂದು ಹಾರೈಸಿದರು.

Categories
ಸಿನಿ ಸುದ್ದಿ

ಎ2 ಮ್ಯೂಸಿಕ್ ಹೊಸ ಹೆಜ್ಜೆ: ಎ2 ಒರಿಜಿನಲ್ಸ್ ಮೂಲಕ ನಿನಗಾಗಿ ಮ್ಯೂಸಿಕಲ್ ಆಲ್ಬಂ: ರಿಲೀಸ್ ಮಾಡಿ ಶುಭ ಕೋರಿದ ಅಜೇಯ್ ರಾವ್

ಕನ್ನಡ ಸಿನಿಮಾ ಪ್ರಪಂಚದ ಸಂಗೀತ ಪ್ರೇಮಿಗಳು ಸದಾ ಗುನುಗುವ ಹಾಡುಗಳನ್ನು ಕೊಡುಗೆಯಾಗಿ ನೀಡಿರುವ ಪ್ರತಿಷ್ಠಿತ ಸಂಸ್ಥೆಗಳಲ್ಲೊಂದು ಎ2 ಮ್ಯೂಸಿಕ್. ಜೋಗಿ, ಪ್ರೀತಿ ಏಕೆ ಭೂಮಿ ಮೇಲಿದೆ, ಅಲೆಮಾರಿ ಸಿನಿಮಾ ಸೇರಿದಂತೆ ಹಲವು ಚಿತ್ರಗಳ ಮೂಲಕ ಸಂಚಲನ ಸೃಷ್ಟಿಸಿರುವ ಅಶ್ವಿನಿ ಮೀಡಿಯಾ ನೆಟ್ವರ್ಕ್‌ 2020ರಲ್ಲಿ ಹೊಸ ಆಯಾಮದಲ್ಲಿ A2 ಮ್ಯೂಸಿಕ್ ಹೆಸರಿನಲ್ಲಿ ಮರು ನಾಮಕರಣವಾಯಿತು. ಸಲಗ ಸಿನಿಮಾ ಮೂಲಕ ಗಾಂಧಿ ನಗರದಲ್ಲಿ ಹೊಸ ಹೆಜ್ಜೆ ಇಟ್ಟು ವಿಜಯೋತ್ಸವನ್ನು ಸಂಭ್ರಮಿಸಿತು. ಬಳಿಕ A2 ಸಂಸ್ಥೆ ಭತ್ತಳಿಕೆಯಿಂದ ಬಂದ ಹಾಡುಗಳೆಲ್ಲವೂ ದಾಖಲೆ ಬರೆದಿವೆ.

ಇತ್ತೀಚೆಗೆ ಸೂತ್ರಧಾರ, ಹಂಟರ್, ಕೆಟಿಎಂ, ಯುದ್ಧಕಾಂಡ, ಹಾಸ್ಟೆಲ್ ಹುಡುಗರು ಸೇರಿದಂತೆ ನೂರಕ್ಕೂ ಹೆಚ್ಚು ಹೊಸ ಸಿನಿಮಾಗಳ ಆಡಿಯೋ ಖರೀದಿ ಮಾಡುವ ಮೂಲಕ ಸಂಚಲನ ಸೃಷ್ಟಿಸಿರುವ A2 ಮ್ಯೂಸಿಕ್, A2 originals, A2 entertainment, A2 ಭಕ್ತಿಸಾಗರ, A2 ಫ್ಲೋಕ್ಲೋರ್, A2 ಕ್ಲಾಸಿಕಲ್ ಸೇರಿದಂತೆ ಬೇರೆ ಬೇರೆ ಆಯಾಮಗಳಲ್ಲೂ ಹೊರಹೊಮ್ಮಿದೆ. ಇದೇ A2 ಒರಿಜಿನಲ್ಸ್ ಫ್ಲಾಟ್ ಫಾರ್ಮ್ ಮೂಲಕ ಮತ್ತೊಂದು ಸಾಹಸಕ್ಕಿಳಿದಿದೆ. ಹೊಸ ಪ್ರತಿಭೆಗಳಿವೆ ವೇದಿಕೆ ಕಲ್ಪಿಸಿ ಕೊಡುವ ಮೂಲಕ ಮ್ಯೂಸಿಕಲ್ ಸೀರೀಸ್ ನಿರ್ಮಾಣಕ್ಕೂ ಕೈ ಹಾಕಿದೆ.

A2 ಸಂಸ್ಥೆಯ ಈ ಸಾಹಸಕ್ಕೆ ಕೃಷ್ಣ ಅಜಯ್ ರಾವ್ ಸಾಥ್ ಕೊಟ್ಟಿದ್ದಾರೆ. ‌ನಾಲ್ಕು ಭಾಷೆಯಲ್ಲಿ, ನಾಲ್ಕು ಚಾಪ್ಟರ್ ಗಳಲ್ಲಿ ಬರ್ತಿರುವ ಭಾರತದ ಪ್ರಪ್ರಥಮ ನಾನ್ ಫಿಲ್ಮಂ ಪ್ಯಾನ್ ಇಂಡಿಯಾ ನಿನಗಾಗಿ ಆಲ್ಬಂ ಇದಾಗಿದೆ. ಎ2 ಮ್ಯೂಸಿಕ್ ಡಿಜಿಟಲ್ ವೇದಿಕೆಯಲ್ಲಿ ನಾಲ್ಕು ಹಂತಗಳಲ್ಲಿ ಬಿಡುಗಡೆಯಾಗಿದ್ದು, ಮೊದಲ ಹಾಡನ್ನು ನಟ ಅಜಯ್ ರಾವ್ ಬಿಡುಗಡೆ ಮಾಡಿ ನಾಯಕಿಯೊಂದಿಗೆ ಹೆಜ್ಜೆ ಹಾಕಿದರು. ಇದೇ ವೇಳೆ ಮಾತನಾಡಿದೆ ಅಜಯ್ ರಾವ್, ಎಕ್ಸ್ ಕ್ಯೂಸ್ ಮಿ ಸಿನಿಮಾದಿಂದಲೇ ನನ್ನ ಹಾಗೂ ಎ2 ಮ್ಯೂಸಿಕ್ ಸಂಸ್ಥೆಯ ಒಡನಾಟವಿದೆ. ವ್ಯಕ್ತಿಗಳು, ಸಂಪರ್ಕ, ಸಂಬಂಧ ಎಲ್ಲಾ ಅವರೇ. ಆ ಅಭಿಮಾನ, ಪ್ರೀತಿ ಅಲ್ಲಿಂದ ಬೆಳವಣಿಗೆ ಆಗಿದೆ. ಎಕ್ಸ್ ಕ್ಯೂಸ್ ಮಿ‌ ಸಮಯದಲ್ಲಿಯೂ ನಾನು ಹೊಸಬ. ನನಗೂ ಯಾರು ಪರಿಚಯ ಇರಲಿಲ್ಲ. ಯಾರೋ ಒಬ್ಬರು ಅವಕಾಶ ಕೊಟ್ಟರು. ಇವತ್ತು ಈ ಹೊಸ ಪ್ರತಿಭೆಗಳ ಪ್ರಯತ್ನಕ್ಕೆ ಸಾಥ್ ಕೊಟ್ಟಿದ್ದೇನೆ. ಆರ್ಟಿಸ್ಟ್ ಪ್ರಸೆಂಟ್ ಮಾಡಿರುವ ರೀತಿ ಚೆನ್ನಾಗಿದೆ. ನೈಜತೆಯಾಗಿ ಹಾಡು ಮೂಡಿದೆ. ನನ್ನ ಹೊಸ ಸಿನಿಮಾ ಯುದ್ಧಕಾಂಡ ಆಡಿಯೋ ಎ2 ಮ್ಯೂಸಿಕ್ ಭಾರೀ ಮೊತ್ತಕ್ಕೆ ಖರೀದಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು.

A2 ಮ್ಯೂಸಿಕ್ ಸಂಸ್ಥೆಯ ಪ್ರವೀಣ್ ಮಾತನಾಡಿ, ಕಾನ್ಸೆಪ್ಟ್ ಚೆನ್ನಾಗಿದೆ ಎಂದು‌ ಮಾಡಿದ್ದೇವೆ. ಹೊಸಪ್ರತಿಭೆಗಳಿಗೆ ಅವಕಾಶ ಕೊಟ್ಟಿದ್ದೇವೆ‌ ಎಂದು ತಿಳಿಸಿದರು.

ನಿರ್ದೇಶಕ ಅಕ್ಷ, ಇದೊಂದು ಮ್ಯೂಸಿಕಲ್ ಸೀರೀಸ್.‌ ಕನ್ನಡದಲ್ಲಿ ನಿನಗಾಗಿ ಎಂಬ ಟೈಟಲ್ ನಡಿ ರಿಲೀಸ್ ಆಗುತ್ತಿದೆ. ಬೇರೆ ಭಾಷೆಯಲ್ಲಿಯೂ ಬರುತ್ತಿದೆ. ಕನ್ನಡ ವರ್ಷನ್ ಆಲ್ಬಂನ್ನು ಲಾಕ್ ಡೌನ್ ಗೂ‌ ಮೊದಲು ಶುರು ಮಾಡಿದ್ದೆವು. ನಾನು ಮತ್ತು ಡಾರ್ಕ್ ಕಾಲೇಜ್ ದಿನಗಳಲ್ಲಿ ಚರ್ಚೆ ಮಾಡಿದ್ದೇವು. ಇಷ್ಡು ದೊಡ್ಡ ಪ್ರಮಾಣದಲ್ಲಿ ಆಗುತ್ತದೆ ಅಂದುಕೊಂಡಿರಲಿಲ್ಲ. ಒಂದು ವರ್ಷ ಆದಮೇಲೆ‌ ನಾಲ್ಕು ಹಾಡುಗಳನ್ನು ಒಂದು ಕಥೆಯಲ್ಲಿ ನರೇಟ್ ಮಾಡಬೇಕು ಎಂಬ ಐಡಿಯಾ ಬಂತು ಎಂದರು.

ನಿನಗಾಗಿ ಆಲ್ಬಂ ಸೀರೀಸ್ ಗೆ ಸಂಗೀತ ನಿರ್ದೇಶನ ಜೊತೆಗೆ ಪದಪುಂಜ ಪೊಣಿಸಿರುವುದು ಯುವ ಪ್ರತಿಭೆ ಟಾರ್ಕ್( ಆದರ್ಶ್). ಅಕ್ಷ್ ನಿರ್ದೇಶನದ ಜೊತೆಗೆ ಹಾಡಿಗೆ ಧ್ವನಿಯಾಗಿದ್ದಾರೆ. ನಿರೀಕ್ಷಿತ್ ಹಾಗೂ ಯಾನ್ವಿ ಮುಖ್ಯಭೂಮಿಕೆಯಲ್ಲಿ ನಟಿಸಿರೋ ಈ ಆಲ್ಬಂ ಕನ್ನಡದಲ್ಲಿ ವಿಭಿನ್ನ ಹಾಗೂ ಹೊಚ್ಚ ಹೊಸ ಪ್ರಯತ್ನವಾಗಿದೆ.
ಚಿಕ್ಕಮಗಳೂರು, ಹಾಸನ್, ಸಕಲೇಶಪುರ ಸುತ್ತಮುತ್ತಲಿನ ರಮಣೀಯ ಪ್ರದೇಶದಲ್ಲಿ ಈ ಆಲ್ಬಂನ ಚಿತ್ರೀಕರಣ ಮಾಡಲಾಗಿದೆ.

. ಶಶಾಂಕ್, ಜಂಗಮ್, ವಿಕ್ಕಿ ಮತ್ತು ದೀಪು ನಾರಾಯಣ್ ಛಾಯಾಗ್ರಹಣ ಜವಾಬ್ದಾರಿ ನಿರ್ವಹಿಸಿದ್ದಾರೆ. ಮುಂಬರುವ ದಿನಗಳಲ್ಲಿ ಇಂಥ ಹೊಸ ಪ್ರಯತ್ನಗಳಿಗೆ ಎ2 ಒರಿಜಿನಲ್ಸ್ ಮುಂದಾಗಲಿದ್ದು, ಈ ಹೊಸತನದಿಂದ ಕೂಡಿರುವ ಮ್ಯೂಸಿಕಲ್ ಆಲ್ಬಂ ಅನ್ನು ಕನ್ನಡಿಗರು ಮೆಚ್ಚಿ ಹಂಚಿ ಹಾರೈಸಬೇಕಿದೆ.

Categories
ಸಿನಿ ಸುದ್ದಿ

ಹಿಮಾಲಯ ತಪ್ಪಲಲ್ಲಿ ಜೋಗಪ್ಪ! ಕೊರೆವ ಚಳಿಯಲ್ಲಿ ಮುಗಿದ ಎಲ್ಲೋ ಜೋಗಪ್ಪ ನಿನ್ನರಮನೆ ಚಿತ್ರೀಕರಣ

‘ಕಂಬ್ಳಿಹುಳ’ ಖ್ಯಾತಿಯ ಅಂಜನ್ ನಾಗೇಂದ್ರ ನಾಯಕ ನಟನಾಗಿ ನಟಿಸುತ್ತಿರುವ, ಶುಭ ಮಂಗಳ, ನಾಗಿಣಿ, ಕಮಲಿ, ಅಗ್ನಿಸಾಕ್ಷಿ, ಮಧುಬಾಲ ಸೇರಿದಂತೆ ಹಲವು ಸೂಪರ್ ಹಿಟ್ ಧಾರಾವಾಹಿಗಳನ್ನು ನಿರ್ದೇಶಿಸುವ ಹಯವದನ ಸಾರಥ್ಯದಲ್ಲಿ ಮೂಡಿಬರ್ತಿರುವ ಚೊಚ್ಚಲ ಸಿನಿಮಾ ‘ಎಲ್ಲೋ ಜೋಗಪ್ಪ ನಿನ್ನರಮನೆ’. ಈಗಾಗಲೇ ಬಹುತೇಕ ಶೂಟಿಂಗ್ ಮುಗಿಸಿ, ಒಂದು ಹಾಡಿನ ಚಿತ್ರೀಕರಣವನ್ನು ಚಿತ್ರತಂಡ ಬಾಕಿ ಉಳಿಸಿಕೊಂಡಿದೆ.

ನಿರ್ದೇಶಕ ಹಯವದನ ಯಾರು ಸಲೀಸಾಗಿ ಚಿತ್ರೀಕರಣ ಮಾಡಲಾಗದ ಜಾಗದಲ್ಲಿ ಸಿನಿಮಾವನ್ನು ಚಿತ್ರೀಕರಿಸಬೇಕೆಂಬ ಕನಸು ಇಟ್ಟುಕೊಂಡಿದ್ದರು. ಅದರಂತೆ ಮಹಾರಾಷ್ಟ್ರ, ಉತ್ತರಖಂಡ, ದೆಹಲಿ, ಹಿಮಾಚಲ ಪ್ರದೇಶ, ಉತ್ತರ ಪ್ರದೇಶ ಸೇರಿದಂತೆ ಹಿಮಾಲಯದ ಕೊರೆಯುವ ಚಳಿಯಲ್ಲಿಯೂ ಎಲ್ಲೋ ಜೋಗಪ್ಪ ನಿನ್ನರಮನೆ’ವನ್ನು ಶೂಟಿಂಗ್ ನಡೆಸಿದ್ದಾರೆ. ಸುಂದರ ಸ್ಥಳಗಳಲ್ಲಿ ಸಿನಿಮಾ ಶೂಟ್ ಮಾಡಿರುವ ಖುಷಿ ಚಿತ್ರತಂಡದಲ್ಲಿದೆ. ಶೂಟಿಂಗ್ ಮುಗಿಸಿ ಈಗ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಸಿನಿಬಳಗ ಮಾತಿನ ಜೋಡಣೆ ಕೆಲಸದಲ್ಲಿ ನಿರತರಾಗಿದ್ದಾರೆ.

ಎಲ್ಲೋ ಜೋಗಪ್ಪ ನಿನ್ನರಮನೆ ಒಂದು ಜರ್ನಿಯ ಕಥೆ. ತಂದೆ-ಮಗನ ನಡುವಿನ ಭಾವನಾತ್ಮಕ ಸಂಬಂಧ ಈ ಸಿನಿಮಾ ಹೈಲೈಟ್ಸ್‌. ತಂದೆಯ ಮಾತಿಗೆ ಮುನಿಸಿಕೊಂಡು ಮನೆ ಬಿಟ್ಟು ಹೋಗುವ ಹುಡುಗನ ಕಥೆ ಸಿನಿಮಾದಲ್ಲಿದೆ. ಲವ್‌, ಸೆಂಟಿಮೆಂಟ್‌, ಕಾಮಿಡಿ ಎಲ್ಲವನ್ನೂ ಒಳಗೊಂಡಿರುವ ಈ ಚಿತ್ರದಲ್ಲಿ ಅಂಜನ್ ನಾಗೇಂದ್ರಗೆ ಜೋಡಿಯಾಗಿ ಯುವ ನಟಿ ವೆನ್ಯ ರೈ ನಟಿಸ್ತಿದ್ದು, ‘ಕೆಟಿಎಂ’, ‘ಮೂನ್ ವಾಕ್’ ಹಾಗೂ ಮಲಯಾಳಂನಲ್ಲಿ ‘ಮನಸ್ಮಿತ’ ಸಿನಿಮಾದಲ್ಲಿ ನಟಿಸಿರುವ ಸಂಜನಾ ದಾಸ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಉಳಿದಂತೆ ಶರತ್ ಲೋಹಿತಾಶ್ವ, ಸ್ವಾತಿ, ದಾನಪ್ಪ, ಲಕ್ಷ್ಮೀ ನಾಡಗೌಡ, ದಿನೇಶ್ ಮಂಗಳೂರು,ಬಿರಾದರ್ ತಾರಾಬಳಗದಲ್ಲಿದ್ದಾರೆ.. ಪೆಂಡೋರಾಸ್ ಬಾಕ್ಸ್ ಪ್ರೊಡಕ್ಷನ್ ಹಾಗೂ ಕೃಷ್ಣಛಾಯ ಚಿತ್ರ ಬ್ಯಾನರ್ ನಡಿ ಪವನ್ ಸಿಮಿಕೇರಿ ಮತ್ತು ಸಿಂಧು ಹಯವದನ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಶಿವ ಪ್ರಸಾದ್ ಸಂಗೀತ ಸಂಯೋಜನೆ, ನಟರಾಜ್ ಮದ್ದಾಲ ಕ್ಯಾಮೆರಾ ವರ್ಕ್, ರವಿಚಂದ್ರನ್ ಸಂಕಲನದಲ್ಲಿ ಸಿನಿಮಾ ಮೂಡಿ ಬರಲಿದೆ.

ರವಿ ಮುದ್ದಿ, ವಿಕ್ರಮ ಹಾತ್ವಾರ್, ಪ್ರಮೋದ್ ಮರವಂತೆ ಸಾಹಿತ್ಯ, ಭಜರಂಗಿ ಮೋಹನ್ ನೃತ್ಯ ನಿರ್ದೇಶನ, ನರಸಿಂಹ ಮಾಸ್ಟರ್ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಡಬ್ಬಿಂಗ್ ನಲ್ಲಿ ಬ್ಯುಸಿಯಾಗಿರುವ ಚಿತ್ರತಂಡ ಆದಷ್ಟು ಬೇಗ ಎಲ್ಲಾ ಕೆಲಸವನ್ನು ಮುಗಿಸಿ ಸೆಪ್ಟಂಬರ್ ಗೆ ಸಿನಿಮಾವನ್ನು ತೆರೆಗೆ ತರುವ ಯೋಜನೆ ಹಾಕಿಕೊಂಡಿದೆ.

Categories
ಸಿನಿ ಸುದ್ದಿ

ಧೂಮಂ ಟ್ರೇಲರ್ ರಿಲೀಸ್: ಇದು ಹೊಂಬಾಳೆ ಫಿಲಂಸ್ ಚಿತ್ರ

ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲಂಸ್, ‘ಧೂಮಂ’ ಎಂಬ ಚಿತ್ರವನ್ನು ನಿರ್ಮಿಸುವ ಮೂಲಕ ಮಲಯಾಳಂ ಚಿತ್ರರಂಗಕ್ಕೆ ಕಾಲಿಟ್ಟಿರುವುದು ಗೊತ್ತೇ ಇದೆ. ಈ ಚಿತ್ರವು ಜೂನ್ 23ಕ್ಕೆ ಬಿಡುಗಡೆಯಾಗುತ್ತಿದ್ದು, ಇತ್ತೀಚೆಗೆ ಟ್ರೇಲರ್ ಬಿಡುಗಡೆಯಾಗಿದೆ.


ವಿಜಯ್ ಕಿರಗಂದೂರು ನಿರ್ಮಾಣದ, ‘ಲೂಸಿಯಾ’ ಮತ್ತು ‘ಯೂ ಟರ್ನ್’ ಖ್ಯಾತಿಯ ಪವನ್ ಕುಮಾರ್ ನಿರ್ದೇಶನ ಈ ಚಿತ್ರದಲ್ಲಿ ಫಹಾದ್ ಫಾಸಿಲ್, ಅಪರ್ಣ ಬಾಲಮುರಳಿ, ಅಚ್ಯುತ್ ಕುಮಾರ್, ರೋಶನ್ ಮ್ಯಾಥ್ಯೂ, ವಿನೀತ್ ರಾಧಾಕೃಷ್ಣನ್, ಅನು ಮೋಹನ್, ಜಾಯ್ ಮ್ಯಾಥ್ಯೂ, ನಂದು ಮುಂತಾದವರು ನಟಿಸಿದ್ದಾರೆ. ಪೂರ್ಣಚಂದ್ರ ತೇಜಸ್ವಿ ಅವರ ಸಂಗೀತ, ಸುರೇಶ್ ಅವರ ಸಂಕಲನ ಮತ್ತು ಪ್ರೀತಾ ಜಯರಾಮನ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.
ಸಮಯದ ವಿರುದ್ಧದ ಓಟದಲ್ಲಿ ಸಿಕ್ಕಿರುವ ಅವಿ (ಫಹಾದ್ ಫಾಸಿಲ್) ಮತ್ತು ದಿಯಾ (ಅಪರ್ಣ) ಸುತ್ತ ಈ ಚಿತ್ರ ಸುತ್ತುತ್ತದೆ. ಸುತ್ತ ಅಪಾಯ ಮತ್ತು ಮನಸ್ಸೊಳಗಿನ ಭಯವನ್ನು ಮೆಟ್ಟಿ ನಿಲ್ಲುವುದಕ್ಕೆ ಅವರಿಬ್ಬರೂ ಏನೆಲ್ಲಾ ತ್ಯಾಗಗಳನ್ನು ಮಾಡುತ್ತಾರೆ ಎಂಬುದೇ ಈ ಚಿತ್ರದ ಕಥೆ. ನಿರ್ದೇಶನದ ಜೊತೆಗೆ ಕಥೆ ಮತ್ತು ಚಿತ್ರಕಥೆಯನ್ನು ಪವನ್ ಅವರೇ ರಚಿಸಿದ್ದಾರೆ.


ಈ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ಪವನ್ ಕುಮಾರ್, ‘ಕಳೆದ ಒಂದು ದಶಕದಿಂದ ಈ ಚಿತ್ರವನ್ನು ಮಾಡಬೇಕು ಎಂಬ ಪ್ರಯತ್ನದಲ್ಲಿದ್ದೆ ಹಾಗೂ ಒಂದು ಅದ್ಭುತ ಚಿತ್ರ ಮಾಡುವ ನಿಟ್ಟಿನಲ್ಲಿ ಚಿತ್ರಕಥೆಯನ್ನು ಹಲವು ಬಾರಿ ತಿದ್ದಿದ್ದೆ. ಒಂದು ದಶಕದ ನನ್ನ ಕನಸನ್ನು ಇದೀಗ ಹೊಂಬಾಳೆ ಪ್ರೊಡಕ್ಷನ್ಸ್ ಸಂಸ್ಥೆಯು ನನಸು ಮಾಡಿದೆ. ಒಂದು ವಿಭಿನ್ನವಾದ ಕಥೆಯನ್ನು ತೆರೆಯ ಮೇಲೆ ತರುವುದಕ್ಕೆ ಕೈ ಜೋಡಿಸಿದೆ. ಹಲವು ಪ್ರತಿಭಾವಂತರ ತಂಡವನ್ನು ನೀಡಿ ಒಂದೊಳ್ಳೆಯ ಚಿತ್ರ ನೀಡುವುದಕ್ಕೆ ಸಂಪೂರ್ಣ ಸಹಕಾರ ನೀಡಿದೆ. ಈ ಚಿತ್ರ ಮತ್ತು ಕಥೆಯನ್ನು ಪ್ರೇಕ್ಷಕರು ಹೇಗೆ ಸ್ವೀಕರಿಸುತ್ತಾರೆ ಎಂಬ ಕುತೂಹಲ ನನಗಿದೆ’ ಎನ್ನುತ್ತಾರೆ.


‘ಧೂಮಂ’ ಚಿತ್ರದ ಟ್ರೇಲರ್ ಈಗಾಗಲೇ ಬಿಡಗುಡೆಯಾಗಿದ್ದು, ವೀಕ್ಷಕರಿಂದ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಚಿತ್ರವನ್ನು ಇದೇ ಜೂನ್ 23ರಂದು ಕೇರಳ ರಾಜ್ಯಾದ್ಯಂತ 300ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವುದಕ್ಕೆ ಉದ್ದೇಶಿಸಲಾಗಿದೆ.

Categories
ಸಿನಿ ಸುದ್ದಿ

ಗುಜರಾತಿ ಚಿತ್ರ ಕನ್ನಡ‌ ಸಿನಿಮಾರಂಗದ ಮನೆಗೆ! ಜುಲೈ7ಕ್ಕೆ ರಾಯರು ಬಂದರು ಮಾವನ ಮನೆಗೆ ಆಗಮನ: ಇದು ಜಾಕ್ ಚಿತ್ರ

‘ರಾಯರು ಬಂದರು ಮಾವನ ಮನೆಗೆ’..ಇದು ಕನ್ನಡದ ಎವರ್ ಗ್ರೀನ್ ಹಾಡುಗಳಲ್ಲೊಂದು. ಸುಧಾರಾಣಿ ಹಾಗೂ ಆನಂದ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದ ರಾಷ್ಟ್ರಪ್ರಶಸ್ತಿಗೆ ಭಾಜನವಾಗಿದ್ದ ಮೈಸೂರು ಮಲ್ಲಿಗೆ ಸಿನಿಮಾದ ಅತ್ಯುತ್ತಮ ಗೀತೆ. ಇದೇ ರಾಯರು ಬಂದರು ಮಾವನ ಮನೆಗೆ ಎಂಬ ಶೀರ್ಷಿಕೆಯಡಿ ಸಿನಿಮಾವೊಂದು ತೆರೆಗೆ ಬರಲು ಸಜ್ಜಾಗಿದೆ. ವಿಶೇಷ ಏನಂದರೆ ಇದು ಗುಜರಾತಿ ಸಿನಿಮಾ. ವರ ಪಧಾರವೋ ಸಾವಧಾನ ಎಂಬ ಟೈಟಲ್ ನಡಿ ಬಿಡುಗಡೆಯಾಗಲಿರುವ ಈ ಚಿತ್ರ ಕನ್ನಡದಲ್ಲಿಯೂ ಮೂಡಿ ಬಂದಿದೆ. ಇದೇ ಮೊದಲ ಬಾರಿಗೆ ಗುಜರಾತಿ ಸಿನಿಮಾವೊಂದನ್ನು ಕನ್ನಡದಲ್ಲಿಯೂ ರಿಲೀಸ್ ಮಾಡುವ ಪ್ರಯತ್ನಕ್ಕೆ ಕೈ ಹಾಕಿರೋದು ವಿಕ್ರಾಂತ್ ರೋಣ ಚಿತ್ರ ನಿರ್ಮಿಸಿದ್ದ ಜಾಕ್ ಮಂಜು.

ಸುದೀಪ್ ಆಪ್ತರಾಗಿರುವ ಜಾಕ್ ಮಂಜು ತಮ್ಮದೇ ಶಾಲಿನಿ ಆರ್ಟ್ ಬ್ಯಾನರ್ ನಡಿ ರಾಯರು ಬಂದರು ಮಾವನ ಮನೆಗೆ ಸಿನಿಮಾವನ್ನು ಸಿರಿಗನ್ನಡಂ ಪ್ರೇಕ್ಷಕರ ಮಡಿಲಿಗೆ ಹಾಕುತ್ತಿದ್ದಾರೆ.

ರತ್ನಪುರ, ಜಿತಿ ಲೇ ಜಿಂದಗಿ ಎಂಬ ಎರಡು ಹಿಟ್ ಚಿತ್ರ ಕೊಟ್ಟಿರುವ ವಿಫುಲ್ ಶರ್ಮಾ ನಿರ್ದೇಶನದಲ್ಲಿ ಈ ಚಿತ್ರ ತಯಾರಾಗಿದ್ದು, ಶೈಲೇಶ್ ಧಮೇಲಿಯಾ, ಅನಿಲ್ ಸಂಘವಿ, ಭರತ್ ಮಿಸ್ತ್ರೀ ಬಂಡವಾಳ ಹೂಡಿದ್ದಾರೆ.

ಸಾಧುತುಷಾರ್, ಕಿಂಜಲ್ ರಾಜಪ್ರಿಯಾ, ರಾಗಿ ಜಾನಿ ಮತ್ತು ಕಾಮಿನಿ ಪಾಂಚಾಲ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದು, ಪ್ರಶಾಂತ್ ಬರೋಟ್, ಜಯ್ ಪಾಂಡ್ಯ ಮತ್ತು ಜೈಮಿನಿ ತ್ರಿವೇದಿ ಇತರರು ತಾರಾಬಳಗದಲ್ಲಿದ್ದಾರೆ. ಜುಲೈ 7ಕ್ಕೆ ಕನ್ನಡದಲ್ಲಿ ರಾಯರು ಬಂದರು ಮಾವನ ಮನೆಗೆ ಸಿನಿಮಾ ಬಿಡುಗಡೆಯಾಗುತ್ತಿದ್ದು, ಈ ನಿಟ್ಟಿಯಲ್ಲಿ ಇಡೀ ಚಿತ್ರತಂಡ ಬೆಂಗಳೂರಿನಲ್ಲಿಯೂ ಪ್ರಚಾರ ಕಾರ್ಯ ನಡೆಸಲಿದೆ.

ಇದೇ 9ರಂದು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿದ್ದು, ಇಡೀ ತಂಡ ಭಾಗಿಯಾಗಲಿದೆ. ಅಂದಹಾಗೇ ರಾಯರು ಬಂದರು ಮಾವನ ಮನೆಗೆ ಸಿನಿಮಾ ಫ್ಯಾಮಿಲಿ ಡ್ರಾಮಾ ಕಥಾಹಂದರ ಹೊಂದಿದೆ. ಮದುವೆ. ಕುಟುಂಬ, ಸಂಬಂಧಗಳ ಸುತ್ತಾ ಇಡೀ ಸಿನಿಮಾ ಸಾಗಲಿದೆ. ಗುಜರಾತಿ ಸಿನಿಮಾವೊಂದು ಕನ್ನಡದಲ್ಲಿ ಬಿಡುಗಡೆಯಾಗುತ್ತಿರುವುದು ಖುಷಿ ವಿಚಾರವೇ. ಎಲ್ಲಾ ಚಿತ್ರಗಳನ್ನ ಅಪ್ಪಿಕೊಳ್ಳುವ ಪ್ರೇಕ್ಷಕರ ರಾಯರು ಬಂದರು ಮಾವನ ಮನೆಗೆ ಸಿನಿಮಾವನ್ನು ಮೆಚ್ಚಿಕೊಂಡು ಹರಸಿ ಹಾರೈಸಬೇಕಷ್ಟೆ.

error: Content is protected !!