Categories
ಆಡಿಯೋ ಕಾರ್ನರ್ ಸಿನಿ ಸುದ್ದಿ

ಲಹರಿ ವೇಲು ಅವರ ಬರ್ತ್ ಡೇಗೆ ಹೊಸ ಹಾಡು: ಇದು ಅವರೇ ಬರೆದು ಹಾಡಿದ ಗೀತೆ…

ಲಹರಿ ವೇಲು ಗಾಯನ ಮಾಡಿದ್ದು ಗೊತ್ತೇ ಇದೆ. ಈಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದಾರೆ. ಅವರೀಗ ಹಾಡೊಂದಕ್ಕೆ ಸಾಹಿತ್ಯ ಬರೆದು, ಅವರೇ ಹಾಡಿದ್ದಾರೆ. ಅಭಿಮನ್ ರಾಯ್ ಆ ಹಾಡಿಗೆ ರಾಗ ಸಂಯೋಜನೆ ಮಾಡಿದ್ದಾರೆ. ಜೂನ್ 11ರಂದು ವೇಲು ಅವರ ಹುಟ್ಟು ಹಬ್ಬ. ಅಂದು ‘ಹುಟ್ಗುಣ ಸುಟ್ರು ಹೋಗಲ್ಲ’ ಶೀರ್ಷಿಕೆಯ ಹಾಡು ಲಹರಿ‌ ಮ್ಯೂಸಿಕ್ ನಲ್ಲಿ ರಿಲೀಸ್ ಆಗಲಿದೆ…

ಕನ್ನಡ ಚಿತ್ರರಂಗದಲ್ಲಿ ಲಹರಿ ಸಂಸ್ಥೆ ದೊಡ್ಡ ಛಾಪು ಮೂಡಿಸಿದೆ. ಇದು ಎಲ್ಲರಿಗೂ ಗೊತ್ತಿರುವ ವಿಷಯ. ಇಂದು ಪ್ಯಾನ್ ಇಂಡಿಯಾ ಮ್ಯೂಸಿಕ್ ಸಂಸ್ಥೆಯಾಗಿ ಬೆಳೆದಿರುವ ಲಹರಿ ಮ್ಯೂಸಿಕ್ ಸಂಸ್ಥೆ, ಯುಟ್ಯೂಬ್ ಕೊಡ ಮಾಡುವ ಹತ್ತು ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಅಷ್ಟೇ ಅಲ್ಲ, ಲಹರಿ ಮ್ಯೂಸಿಕ್ ಸಂಸ್ಥೆ ನಿರ್ಮಿಸಿದ ಆಲ್ಬಂ ಸಾಂಗ್ ಗೆ ಗ್ರ್ಯಾಮಿ ಅವಾರ್ಡ್ ಕೂಡ ಲಭಿಸಿರುವುದು ಕನ್ನಡಕ್ಕೆ ಮತ್ತು ಭಾರತೀಯ ಚಿತ್ರರಂಗಕ್ಕೆ ಸಂತಸದ ವಿಷಯ. ಹಲವು ಸದಭಿರುಚಿಯ ಸಿನಿಮಾಗಳನ್ನು ನಿರ್ಮಿಸಿರುವ ಲಹರಿ ಸಂಸ್ಥೆ, ನಿರಂತರವಾಗಿ ಸಿನಿಮಾ ನಿರ್ಮಾಣ ಚಟುವಟಿಕೆಯಲ್ಲಿ ತೊಡಗಿದೆ. ಈಗ ಲಹರಿ‌ ಸಂಸ್ಥೆ ಕುರಿತು ಇಷ್ಟೊಂದು ಪೀಠಿಕೆ ಯಾಕೆ ಗೊತ್ತಾ?

ಲಹರಿ ಮ್ಯೂಸಿಕ್ ಅಂದಾಕ್ಷಣ, ಥಟ್ಟನೆ ನೆನಪಾಗೋದೇ ಲಹರಿ ವೇಲು ಮತ್ತು ಅವರ ಪ್ರೀತಿಯ ಸಹೋದರ ಮನೋಹರ ನಾಯ್ಡು. ಸರಿಸುಮಾರು ನಾಲ್ಕು ದಶಕಗಳಿಂದಲೂ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಸಂಸ್ಥಗೆ ಈ ಇಬ್ಬರು ಸಹೋದರರು ಭದ್ರ ಬುನಾದಿ ಹಾಕಿದ್ದಾರೆ. ಲಹರಿ ವೇಲು ಅದ್ಬುತ ಮಾತುಗಾರರು. ಯಾವುದೇ ವಿಷಯವಿರಲಿ, ಅದನ್ನು ನಿರರ್ಗಳವಾಗಿ ಗಂಟೆಗಟ್ಟಲೆ ಮಾತಾಡುವ ವಾಕ್ಚಾತುರ್ಯ ಅವರಲ್ಲಿದೆ. ಬಹಳಷ್ಟು ಮಂದಿಗೆ ವೇಲು ಒಬ್ಬ ಒಳ್ಳೆಯ ವ್ಯಕ್ತಿ, ಎಲ್ಲರನ್ನೂ ಆತ್ಮೀಯವಾಗಿ ಮಾತಾಡಿಸುವ ವ್ಯಕ್ತಿತ್ವ ಅವರದು ಅನ್ನುವುದಷ್ಟೇ ಗೊತ್ತು. ಅದರಾಚೆಗೆ ಅವರೊಬ್ಬ ಗಾಯಕರು ಅನ್ನೋದು ಗೊತ್ತಿಲ್ಲ. ಬರೀ ಗಾಯಕರಷ್ಟೇ ಅಲ್ಲ, ಅವರೊಬ್ಬ ಗೀತರಚನೆಕಾರರೂ ಹೌದು.

ಗಾಯಕ ಕಮ್ ಗೀತ ಸಾಹಿತಿ

ನಿಜ, ಲಹರಿ ವೇಲು ಅವರೊಳಗೊಬ್ಬ ಗಾಯಕ‌ ಕಮ್ ಬರಹಗಾರನಿದ್ದಾನೆ. ಅದು ಈಗಾಗಲೇ ಸಾಬೀತಾಗಿದೆ ಕೂಡ. ಕಳೆದ ಕೊರೊನೊ ವೇಳೆ ಲಹರಿ ಸಂಸ್ಥೆ ಸಂಕಷ್ಟಕ್ಕೆ ಸಿಲುಕಿದವರನ್ನು‌ ಗುರುತಿಸಿ ಆ ಮೂಲಕ ಒಂದಷ್ಟು ಸಹಾಯ ಹಸ್ತ ಚಾಚಿದ್ದು ಗೊತ್ತೇ ಇದೆ. ಅದೇ ಸಮಯದಲ್ಲಿ ಹಾಗೆ ಸುಮ್ಮನೆ ಹಾಡನ್ನು ಗುನುಗುವಾಗ ಸಂಗೀತ ನಿರ್ದೇಶಕ ಅಭಿಮನ್ ರಾಯ್ ಅವರು, ಲಹರಿ ವೇಲು ಅವರ ಹಾಡುವ ಧ್ವನಿ ಗಮನಿಸಿ, ನೀವೊಂದು ಹಾಡು ಹಾಡಬಾರದೇಕೆ ಎಂದು ಪ್ರಶ್ನಿಸಿದ್ದಾರೆ. ಅದರ ಬೆನ್ನಲ್ಲೇ ಲಹರಿ ವೇಲು ಕೂಡ ಪ್ರಯತ್ನಕ್ಕೆ‌ ಮುಂದಾಗಿದ್ದಾರೆ. ‘ ಒಳಿತು ಮಾಡು‌ ಮನುಸ ನೀ ಇರೋದು ಮೂರು ದಿವಸ’ ಗೀತೆ ಬರೆದ ನಮ್‌ ರಿಷಿ ಬರೆದ ‘ಇರುವುದೊಂದೆ ಜನ್ಮ ನೀ ಸಹಾಯ ಮಾಡು ತಮ್ಮ’ ಎಂಬ ಮಾನವೀಯ ಮೌಲ್ಯ ಸಾರುವ ಗೀತೆಗೆ ವೇಲು ಅವರು ಧ್ವನಿಯಾಗಿದ್ದಾರೆ. ಆ ಹಾಡು ಲಹರಿ ಮ್ಯೂಸಿಕ್ ನಲ್ಲಿ ರಿಲೀಸ್ ಆಗಿದ್ದೇ ತಡ ಎಲ್ಲೆಡೆ ಒಳ್ಳೆಯ ಮೆಚ್ಚುಗೆ ಸಿಕ್ಕಿದೆ. ಈಗ ಒಂದು ಮಿಲಿಯನ್ (ಹತ್ತು ಲಕ್ಷ) ವೀಕ್ಷಣೆ ಪಡೆದು ಮುನ್ನುಗ್ಗುತ್ತಿದೆ.

ಇದರ ಬೆನ್ನ ಹಿಂದೆಯೇ ಇದೀಗ ಲಹರಿ ವೇಲು ಅವರು ಮತ್ತೊಂದು ಅದ್ಭುತ ಗೀತೆಗೆ ಧ್ವನಿಯಾಗಿದ್ದಾರೆ. ಹಾಡುವುದರ ಜೊತೆಗೆ ಅವರು ತಾನೊಬ್ಬ ಗೀತ ಸಾಹಿತಿಯೂ ಆಗಿದ್ದಾರೆ. ಹೌದು, ಮತ್ತದೇ ಟೀಮ್ ಜೊತೆ ಸೇರಿಕೊಂಡು‌ ಲಹರಿ ವೇಲು ಒಂದೊಳ್ಳೆಯ ಗೀತೆ ಬರೆದು ಹಾಡಿದ್ದಾರೆ. ‘ ಹುಟ್ಗುಣ ಸುಟ್ರು ಹೋಗಲ್ಲ’ ಎಂಬ ಹಾಡನ್ನು ಸ್ವತಃ ರಚಿಸಿದ ವೇಲು, ಅದನ್ನು ಸಂಗೀತ ನಿರ್ದೇಶಕ ಅಭಿಮನ್ ರಾಯ್ ಅವರ ಬಳಿ ಹೇಳಿದ್ದಾರೆ. ಆ ಸಾಲುಗಳನ್ನು ಗಮನಿಸಿದ ಅಭಿಮನ್ ರಾಯ್, ವೇಲು ಅವರಿಂದ ಆ ಹಾಡನ್ನು ಸಂಪೂರ್ಣ ಬರೆಸಿ, ಅರ್ಥಪೂರ್ಣವಾದ ಹಾಡಿಗೆ ರಾಗ ಸಂಯೋಜನೆ ಮಾಡಿದ್ದಾರೆ. ವೇಲು ಬರೆದ ಹಾಡಿಗೆ ಅವರಿಂದಲೇ ಹಾಡಿಸಿದ್ದಾರೆ. ವೇಲು‌ ಅವರ ಜೊತೆ ಈ ಹಾಡಿಗೆ ವೇದಾ ವೆಂಕಟೇಶ್ ಭಟ್ ಕೂಡ ಧ್ವನಿಯಾಗಿದ್ದಾರೆ. ಆ ಹಾಡು ಜೂನ್ 11ರಂದು ಲಹರಿ ಮ್ಯೂಸಿಕ್ ನಲ್ಲಿ ರಿಲೀಸ್ ಆಗುತ್ತಿದೆ. ವಿಶೇಷವಾಗಿ ಈ ಹಾಡನ್ನು ಬಿಡುಗಡೆ ಮಾಡುತ್ತಿರುವ ಉದ್ದೇಶ, ಜೂನ್ 11 ಲಹರಿ ವೇಲು ಅವರ ಹುಟ್ಟು ಹಬ್ಬ. ತಮ್ಮ 57 ನೇ ವಸಂತಕ್ಕೆ ಕಾಲಿಡುತ್ತಿರುವ ವೇಲು ಅವರಿಗಾಗಿ ಅಭಿಮನ್ ರಾಯ್ ಈ ಹಾಡನ್ನು ಅಂದೇ ರಿಲೀಸ್ ಮಾಡುತ್ತಿದ್ದಾರೆ.

ಅದೇನೆ ಇರಲಿ, ತಮ್ಮ ಮತ್ತೊಂದು ಗೀತೆ ಕುರಿತು ಲಹರಿ ವೇಲು ಅವರು ಹೇಳುವುದಿಷ್ಟು. ‘ಅಭಿಮನ್ ರಾಯ್ ಅವರ ರಾಗ ಸಂಯೋಜನೆಯಲ್ಲಿ ಒಂದು‌ ಹಾಡು ಹಾಡಿದ್ದೆ. ಅದಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ಸಿಕ್ಕಿತ್ತು. ಇತ್ತೀಚೆಗೆ ಅಭಿಮನ್ ರಾಯ್ ಲಹರಿ ಸಂಸ್ಥೆ ಕಚೇರಿಗೆ ಬಂದಾಗ, ನಾನು ಒಂದಷ್ಟು ಸ್ಪೂರ್ತಿದಾಯಕ ಎನಿಸುವ ಪದಗಳನ್ನು ಬರೆದಿದ್ದೆ. ಅದನ್ನು ಅಭಿಮನ್ ಗಮನಿಸಿ, ಪದಗಳಲ್ಲಿ ಸಾಕಷ್ಟು ಅರ್ಥವಿದೆ. ಇನ್ನಷ್ಟು ಬರೆದು ಪೂರ್ಣಗೊಳಿಸಿ ಇದಕ್ಕೆ ರಾಗ ಸಂಯೋಜಿಸುತ್ತೇನೆ ಅಂದರು. ನಾನು ಅನುಭವಿಸಿದ, ನೋಡಿದ ಸಂದರ್ಭ ನೆನೆದು ಒಂದಷ್ಟು ಸಾಲು ಬರೆದೆ. ಅದೀಗ ಹಾಡಿನ ರೂಪದಲ್ಲಿ ಹೊರ ಬರಲಿದೆ. ಎಲ್ಲರೂ ತೋರಿದ ಪ್ರೀತಿಯಿಂದ ಹಾಡು ಬರೆಯೋಕೆ ಸಾಧ್ಯವಾಗಿದೆ’ ಎನ್ನುತ್ತಾರೆ ವೇಲು.

ಅಂದಹಾಗೆ, ‘ಹುಟ್ಗುಣ ಸುಟ್ರು ಹೋಗಲ್ಲ’ ಗೀತೆ ಮತ್ತೊಂದು ಮೆಚ್ಚುಗೆಯ ಹಾಡಾಗಲಿ, ಎಲ್ಲರೂ ಗುನುಗುವಂತಾಗಲಿ ಎಂಬುದು ಆಶಯ.

Categories
ಆಡಿಯೋ ಕಾರ್ನರ್ ಸಿನಿ ಸುದ್ದಿ

ಲಹರಿ ಮ್ಯೂಸಿಕ್ ಸಂಸ್ಥೆಗೆ ಗ್ರ್ಯಾಮಿ ಅವಾರ್ಡ್;‌ ರಿಕ್ಕಿಕೇಜ್‌ ಆಲ್ಬಂಗೆ ಸಂದ ಗೌರವ

ಸಂಗೀತ ಕ್ಷೇತ್ರದಲ್ಲಿ ತನ್ನದೇ ಆದ ಹೆಸರು ಮಾಡಿರುವ “ಲಹರಿ” ಸಂಸ್ಥೆ ಆರಂಭವಾಗಿ ನಲವತ್ತೆಂಟು ವರ್ಷಗಳು ಗತಿಸಿವೆ. “ಲಹರಿ ಮ್ಯೂಸಿಕ್” ಮೂಲಕ ರಿಕ್ಕಿಕೇಜ್ ಸಂಗೀತ ನಿರ್ದೇಶನದಲ್ಲಿ ಮೂಡಿಬಂದಿದ್ದ ಡಿವೈನ್ ಟೈಡ್ಸ್ ಆಲ್ಬಂ ಗೆ ಸಂಗೀತ ಕ್ಷೇತ್ರದ ಮೇರು ಪ್ರಶಸ್ತಿಯಾದ ಗ್ರ್ಯಾಮಿ ಅವಾರ್ಡ್ ಬಂದಿದೆ. ರಿಕ್ಕಿ ಕೇಜ್ ಅವರ ಸಂಗೀತ ಸಂಯೋಜನೆಗೆ ಈ ಪ್ರಶಸ್ತಿ ಸಂದಿದೆ.

ಕೇವಲ ಐನೂರು ರೂಪಾಯಿ ಬಂಡವಾಳದಿಂದ ನಮ್ಮ ಅಣ್ಣ ಮನೋಹರ ನಾಯ್ಡು ಅವರು ಈ ಸಂಸ್ಥೆಯನ್ನು ಆರಂಭಿಸಿದರು. ಈಗ ನಮ್ಮ ಸಂಸ್ಥೆ ಈ ಮಟ್ಟಕ್ಕೆ ಬರಲು ನಿಮ್ಮೆಲ್ಲರ ಹಾರೈಕೆ ಕಾರಣ. ಇದೇ ಮೊದಲ ಬಾರಿಗೆ ನಮ್ಮ ಸಂಸ್ಥೆ ಮೂಲಕ ಬಿಡುಗಡೆಯಾದ “ಡಿವೈನ್ ಟೈಡ್ಸ್ ” ಆಲ್ಬಂ ಗೆ ಸಂಗೀತ ನೀಡಿದ್ದಕ್ಕಾಗಿ ರಿಕ್ಕಿಕೇಜ್ ಅವರಿಗೆ ಗ್ರ್ಯಾಮಿ ಪ್ರಶಸ್ತಿ ಬಂದಿದೆ. ಈ ಗೌರವಕ್ಕೆ ಪಾತ್ರರಾದ ರಿಕ್ಕಿಕೇಜ್ ಅವರನ್ನು ಅಭಿನಂದಿಸುತ್ತೇನೆ. ಈ ಪ್ರಶಸ್ತಿ ಸಮಾರಂಭಕ್ಕೆ ನಾನು ವೀಸಾ ಸಿಗದ ಕಾರಣದಿಂದ ಹೋಗಿರಲಿಲ್ಲ. ನನ್ನ ಅಣ್ಣನ ಮಗ ಚಂದ್ರು , ರಿಕ್ಕಿಕೇಜ್ ಅವರ ಜೊತೆಗೆ ಹೋಗಿದ್ದರು. ನಾವೆಲ್ಲರೂ ಮನೆಯಿಂದಲೇ ನೋಡಿ ಸಂತಸಪಟ್ಟೆವು. ಸದ್ಯದಲ್ಲೇ ರಿಕ್ಕಿಕೇಜ್ ಅವರ ಸಂಗೀತ ನಿರ್ದೇಶನದಲ್ಲಿ ಉತ್ತಮ ಚಿತ್ರವೊಂದನ್ನು ನಮ್ಮ ಸಂಸ್ಥೆ ಮೂಲಕ ನಿರ್ಮಿಸುವ ತಯಾರಿ ನಡೆಯುತ್ತಿದೆ ಎಂದು ಲಹರಿ ವೇಲು ತಿಳಿಸಿದರು.

ನನಗೆ ಎರಡನೇ ಬಾರಿ ಈ ಪ್ರಶಸ್ತಿ ಬಂದಿರುವುದು ಸಂತೋಷ ತಂದಿದೆ. ಪ್ಯಾಂಡಮಿಕ್ ಸಮಯದಲ್ಲಿ ಈ ಆಲ್ಬಂ ನಿರ್ಮಾಣವಾಯಿತು. ಅನೇಕ ಕಲಾವಿದರನ್ನು ಜೂಮ್ ಕಾಲ್ ಹಾಗೂ ಮೆಸೇಜ್ ಗಳ ಮೂಲಕ ಸಂಪರ್ಕ ಮಾಡಿದ್ದೆ. ನೂರೈವತ್ತಕ್ಕೂ ಅಧಿಕ ಕಲಾವಿದರು ಹಾಗೂ ತಂತ್ರಜ್ಞರು ಈ ಹಾಡಿಗೆ ಕೆಲಸ ಮಾಡಿದ್ದಾರೆ. ಅದರಲ್ಲಿ ‌ಅರವತ್ತಕ್ಕೂ ಅಧಿಕರು ಭಾರತದವರು. ಮಿಕ್ಕವರು ಹೊರ ದೇಶದವರು. ಇಲ್ಲಿನ ವಾರಿಜಾಶ್ರೀ, ಅರುಣ್ ಕುಮಾರ್, ಸುಮಾ ರಾಣಿ, ಚೈತ್ರ ಮುಂತಾದ ಕಲಾವಿದರು ಈ ಆಲ್ಬಂ ನಲ್ಲಿದ್ದಾರೆ. ನಾನು ಕನ್ನಡದಲ್ಲಿ “ಆಕ್ಸಿಡೆಂಟ್”, ” ವೆಂಕಟ ಇನ್ ಸಂಕಟ” ಹಾಗೂ “ಕ್ರೇಜಿ ಕುಟುಂಬ” ಚಿತ್ರಗಳಿಗೆ ಸಂಗೀತ ನೀಡಿದ್ದೇನೆ. ಆ ಮೂರು ಸಿನಿಮಾಗಳ ನಾಯಕ ರಮೇಶ್ ಅರವಿಂದ್. ರಮೇಶ್ ನನ್ನ ಆತ್ಮೀಯ ಸ್ನೇಹಿತರು. ನನಗೆ ಸಿನಿಮಾಗಿಂತ ವಿಭಿನ್ನ ಆಲ್ಬಂಗಳನ್ನು ಮಾಡುವುದರಲ್ಲೇ ಆಸಕ್ತಿ ಹೆಚ್ಚು ಎಂದ ರಿಕ್ಕಿಕೇಜ್, ಪ್ರಶಸ್ತಿ ಪಡೆಯಲು ಲಹರಿ ಸಂಸ್ಥೆಯ ಚಂದ್ರು ಅವರೊಂದಿಗೆ ಹೋದ ಸಂದರ್ಭವನ್ನು ನೆನಪಿಸಿಕೊಂಡರು. ಹಾಗೂ ಮುಂದೆ ಸಹ ಲಹರಿ ಸಂಸ್ಥೆಯವರೊಂದಿಗೆ ಇರುವುದಾಗಿ ಹೇಳಿದರು.

ಇಷ್ಟು ಎತ್ತರಕ್ಕೆ ಬೆಳೆದಿದ್ದರೂ ರಿಕ್ಕಿಕೇಜ್, ನಮ್ಮ ಸಂಸ್ಥೆಯ ಕಾರ್ಯಗಳಿಗೆ ಕೈ ಜೋಡಿಸಿರುವುದು ನಿಜಕ್ಕೂ ಹೆಮ್ಮೆ. ಅವರು ನಮ್ಮೊಂದಿಗೆ ಯಾವುದೇ ಅಗ್ರಿಮೆಂಟ್ ಸಹ ಮಾಡಿಕೊಂಡಿಲ್ಲ. ಇದೇ ಅವರ ಪ್ರೀತಿಗೆ ಸಾಕ್ಷಿ ಎಂದರು ಲಹರಿ ಸಂಸ್ಥೆಯ ಚಂದ್ರು. ರಿಕ್ಕಿಕೇಜ್ ಅವರೊಂದಿಗೆ ಹದಿನೈದು ವರ್ಷಗಳಿಂದ ಜೊತೆಗಿರುವ ವಾಡಿಯಲ್ ಈ ವೇಳೆ ಇದ್ದರು.

Categories
ಆಡಿಯೋ ಕಾರ್ನರ್ ಸಿನಿ ಸುದ್ದಿ

ಹೊರ ಬಂತು ಪ್ರೀತ್ಸು ಸಾಂಗ್ಸ್! ಇದು ಇಳಯರಾಜ ಮ್ಯೂಸಿಕಲ್‌ ಸಿನಿಮಾ…

ಸಂಗೀತ ಕ್ಷೇತ್ರದ ಮೇರು ಪ್ರತಿಭೆ ಇಳಯರಾಜ ಅವರು ಸಂಗೀತ ನೀಡಿರುವ ಹಾಗೂ ಕೆ.ಗಣೇಶನ್ ನಿರ್ದೇಶಿಸಿರುವ
“ಪ್ರೀತ್ಸು” ಚಿತ್ರದ ಹಾಡುಗಳು ಇತ್ತೀಚೆಗೆ ಬಿಡುಗಡೆಯಾಗಿವೆ. ಭಾ.ಮ.ಹರೀಶ್, ಟೇ.ಶಿ.ವೆಂಕಟೇಶ್ ಹಾಗೂ ರವಿ ವಿಠಲ್ ಇತರರು ಹಾಡುಗಳ ಬಿಡುಗಡೆಗೆ ಸಾಕ್ಷಿಯಾದರು.

ಕಳೆದ ಮೂರು ದಶಕಗಳಿಂದ ಕನ್ನಡ ಚಿತ್ರರಂಗಲ್ಲಿದ್ದೀನಿ. ನವಭಾರತ ಸೇರಿದಂತೆ ಕನ್ನಡದಲ್ಲಿ ಸಾಕಷ್ಟು ಚಿತ್ರಗಳನ್ನು ನಿರ್ದೇಶಿಸಿದ್ದೇನೆ. ಈಗ ವಿಭಿನ್ನ ಕಥೆಯುಳ್ಳ “ಪ್ರೀತ್ಸು” ಚಿತ್ರವನ್ನು ನಿರ್ದೇಶನ ಮಾಡಿದ್ದೀನಿ. ನನಗೆ ನಿರ್ಮಾಣದಲ್ಲಿ ಮಲೇಷಿಯಾದ ಗಾನ ವಿನೋದನ್ ಸಾಥ್ ನೀಡಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರು ಈ ಚಿತ್ರಕ್ಕೆ ಸಂಗೀತ ನೀಡಿರುವುದು ನಿಜಕ್ಕೂ ಸಂತಸ ತಂದಿದೆ. ನನಗೆ ಇಳಯರಾಜ ಅವರು ಬಹುದಿನಗಳ ಪರಿಚಯ. ಅವರು ಈ ಕಾರ್ಯಕ್ರಮಕ್ಕೆ ಬರಬೇಕಿತ್ತು. ಆದರೆ ವೈದ್ಯರ ಸಲಹೆ ಮೇರೆಗೆ ಕೊನೆಯಲ್ಲಿ ಅವರು ಬರುವುದು ರದ್ದಾಯಿತು. ವಿಡಿಯೋ ಮೂಲಕ ಅವರು ಸಂದೇಶ ಕಳುಹಿಸಿದ್ದಾರೆ. ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ. ನೋಡಿ ಹರಸಿ ಎಂದರು ನಿರ್ದೇಶಕ ಕೆ.ಗಣೇಶನ್.

ಮಲೇಷಿಯಾ ಗೆ ಬಂದಾಗ ಗಣೇಶನ್ ಈ ಕಥೆ ಹೇಳಿದ್ದರು. ಇಷ್ಟವಾಯಿತು ನಿರ್ಮಾಣಕ್ಕೆ ಮುಂದಾದೆವು. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಗಾನ ವಿನೋದನ್.

ನಾಯಕ ಸುಭಾಷ್ ಸಹ ತಮ್ಮ ಪಾತ್ರ ಪರಿಚಯ ಮಾಡಿಕೊಂಡು, ಅತಿಥಿಗಳಿಗೆ ಧನ್ಯವಾದ ಅರ್ಪಿಸಿದರು. ಮುಖ್ಯ ಅತಿಥಿಗಳು ಚತ್ರಕ್ಕೆ ಶುಭ ಕೋರಿದರು. ಚಿತ್ರತಂಡದ ಸದಸ್ಯರು ತಮ್ಮ ಅಭಿಪ್ರಾಯ ಹಂಚಿಕೊಂಡರು. ಸುಭಾಷ್ ಅವರಿಗೆ ನಾಯಕಿಯಾಗಿ ನೇಹ ಅಭಿನಯಿಸಿದ್ದಾರೆ. ಗಣೇಶನ್, ಮನೋಬಲ, ಸ್ವಾಮಿನಾಥ, ಮನೋಹರ್ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಎ.ಸಿ.ಮಹೇಂದ್ರನ್ ಛಾಯಾಗ್ರಹಣ, ಸಂಜೀವ ಸಂಕಲನ ಹಾಗೂ ಜಾನ್ ಪೀಟರ್ ಅವರ ಕಲಾ ನಿರ್ದೇಶನ “ಪ್ರೀತ್ಸು” ಚಿತ್ರಕ್ಕಿದೆ.

Categories
ಆಡಿಯೋ ಕಾರ್ನರ್ ಸಿನಿ ಸುದ್ದಿ

ಶೂಟಿಂಗ್‌ ಮೊದಲೇ ಭೀಮನಿಗೆ ಭರ್ಜರಿ ಬ್ಯುಜಿನೆಸ್!‌ ದುನಿಯಾ ವಿಜಯ್‌ ಚಿತ್ರದ ಆಡಿಯೋ ದಾಖಲೆ ಮೊತ್ತಕ್ಕೆ ಖರೀದಿಸಿದ ಆನಂದ್‌ ಆಡಿಯೊ…

ಚಿತ್ರೀಕರಣಕ್ಕೂ‌ ಮೊದಲೇ ದುನಿಯಾ ವಿಜಯ್‌ ಅಭಿನಯದ ಭೀಮ ಚಿತ್ರಕ್ಕೆ ಭರ್ಜರಿ ಬ್ಯುಜಿನೆಸ್‌ ಆಗಿದೆ. ಹೌದು, ರಿಲೀಸ್‌ ಮೊದಲೇ ದುನಿಯಾ ವಿಜಯ್ ಅವರ ಭೀಮ ಚಿತ್ರದ ಆಡಿಯೋ ಹಕ್ಕನ್ನು ಆನಂದ್‌ ಆಡಿಯೋ ದಾಖಲೆ ಮೊತ್ತ ಕೊಟ್ಟು ಖರೀದಿ ಮಾಡಿದೆ. ಇದು ಚಿತ್ರತಂಡಕ್ಕೆ ಸಿಕ್ಕ ಮೊದಲ ಜಯ.

ಹೌದು, 1.50ಕೋಟಿ ದಾಖಲೆಯ ಮೊತ್ತಕ್ಕೆ ಭೀಮ ಚಿತ್ರದ ಆಡಿಯೋ ಸೋಲ್ಡೌಟ್ ಆಗಿರುವುದು ನಿಜಕ್ಕೂ ಖುಷಿಯ ವಿಷಯವೇ. ಆನಂದ್ ಆಡಿಯೋ ಸಂಸ್ಥೆಯ ಶ್ಯಾಮ್‌ ಹಾಗು ಆನಂದ್‌ ಅವರು ಭೀಮ ಚಿತ್ರದ ಆಡಿಯೋ ರೈಟ್ಸ್‌ ಅನ್ನು ದಾಖಲೆಯ ಮೊತ್ತಕ್ಕೆ ಖರೀದಿ ಮಾಡಿದ್ದಾರೆ.

ಸಲಗ ಚಿತ್ರ ಆಡಿಯೋ ಸಕ್ಸಸ್ ನ ಎಫೆಕ್ಟ್ ಇದಾಗಿದ್ದು, ಅಲ್ಲದೆ ದುನಿಯಾ ವಿಜಯ್ ಹಾಗೂ ಚರಣ್ ಕಾಂಬಿನೇಷನ್‌ ಸಿನಿಮಾ ಮತ್ತೆ ಮೂಡಿ ಬರುತ್ತಿರುವ ಹಿನ್ನಲೆಯಲ್ಲಿ ಈ ಭರ್ಜರಿ ಬ್ಯುಜಿನೆಸ್‌ ಆಗಿದೆ.

ಆನಂದ್ ಆಡಿಯೋದಿಂದ ಅಡ್ವಾನ್ಸ್ ಚೆಕ್ ಹಾಗೂ ಅಗ್ರಿಮೆಂಟ್ ಸ್ವೀಕರಿಸಿರುವ ಭೀಮ ನಿರ್ಮಾಪಕರಾದ ಕೃಷ್ಣ ಸಾರ್ಥಕ್ ಹಾಗೂ ಜಗದೀಶ್ ಅವರು ಇದೇ ಏಪ್ರಿಲ್ 18ಕ್ಕೆ ಭೀಮ ಚಿತ್ರ ಅದ್ಧೂರಿ ಮುಹೂರ್ತ ನಡೆಸಲು ತೀರ್ಮಾನಿಸಿದ್ದಾರೆ. ದುನಿಯಾ ವಿಜಯ್ ಅವರ ಇಷ್ಟ ದೇವತೆ ಶ್ರೀ ಬಂಡೆ ಮಾಹಾಂಕಾಳಿ ದೇವಸ್ಥಾನದಲ್ಲಿ ಮುಹೂರ್ತ ನಡೆಯಲಿದೆ.

Categories
ಆಡಿಯೋ ಕಾರ್ನರ್ ಸಿನಿ ಸುದ್ದಿ

ವಸಿಷ್ಠ ವಿಶಿಷ್ಠ ಹೆಜ್ಜೆ! ಸಿಂಹ ಆಡಿಯೋ ಶುರು ಮಾಡಿದ ಕಂಚಿನ ಕಂಠದ ನಟ!!

ವಿಲನ್ ಹೀರೋನೂ ಆಗಬಹುದು.. ಹೀರೋ ಸಿಂಗರ್ ಆಗಬಹುದು ಅನ್ನೋದು ಸಾಬೀತು ಮಾಡಿದವರು ಕಂಚಿನ ಕಂಠದ ಗಾಯಕ, ಖಡಕ್ ಖಳನಟ, ಹ್ಯಾಂಡ್ಸಮ್ ಹೀರೋ ವಸಿಷ್ಠ ಸಿಂಹ. ಇಂದು ವಸಿಷ್ಠ ಸಿಂಹ ಕನ್ನಡ ಚಿತ್ರರಂಗದ ಬಹುಬೇಡಿಕೆ ನಟ ಮತ್ತು ಗಾಯಕ ಕೂಡ. ಟಾಲಿವುಡ್ ನಲ್ಲಿಯೂ ಮಿಂಚುತ್ತಿರುವ ಪ್ರತಿಭಾನ್ವಿತ ನಾಯಕ ನಟ ಅನ್ನೋದು ವಿಶೇಷ. ಗಾಯಕನಾಗಿ ಸಾಧನೆ ಮಾಡಬೇಕೆಂಬ ಕನಸು ಹೊತ್ತು ಬಂದ ವಸಿಷ್ಠ ಅವರಿಗೆ ನಾಯಕನಟ, ಖಳ‌ನಟನಾಗಿಯೂ ಕಮಾಲ್ ಮಾಡುವ ಅವಕಾಶ ಸಿಕ್ತು. ಈ ಅವಕಾಶ ಸದುಪಯೋಗಪಡಸಿಕೊಂಡು ಸಕ್ಸಸ್‌ ಕಾಣುತ್ತಲೇ ಈಗ ಮತ್ತೊಂದು ಹೊಸ ಹೆಜ್ಜೆ ಇಟ್ಟಿದ್ದಾರೆ. ಹೊಸ ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ತಮ್ಮದೇ ಆಡಿಯೋ ಸಂಸ್ಥೆಯನ್ನು ಅನಾವರಣ ಮಾಡಿದ್ದಾರೆ….

ಸಿಂಹಾ ಆಡಿಯೋ ಲೋಗೋ‌ ಲಾಂಚ್

ಅಪ್ಪನ ಮುದ್ದಿನ ಮಗನಾಗಿರುವ ವಸಿಷ್ಠ ತಂದೆಯ ಹೆಸರಿನಡಿ, ತನ್ನ ನೆಚ್ಚಿನ ಆರಾಧ್ಯ ತಾಯಿ ಚಾಮುಂಡೇಶ್ವರಿ ನೆನೆಪಿನಾರ್ಥವಾಗಿ ಸಿಂಹಾ ಎಂಬ ಹೆಸರಿನಡಿ ಆಡಿಯೋ ಕಂಪನಿ ಶುರು ಮಾಡಿದ್ದಾರೆ. ನೆಚ್ಚಿನ ಗೆಳೆಯನ ಹಾಗೂ ಅಚ್ಚುಮೆಚ್ಚಿನ ಗುರು ಸ್ವರಬ್ರಹ್ಮ ಹಂಸಲೇಖ ಸಾಥ್ ನಲ್ಲಿ ಆಡಿಯೋ‌ ಲೋಗೋ ಅನಾವರಣಗೊಂಡಿದೆ.

ಕಾಲಚಕ್ರ ಹಾಡು ಬಿಡುಗಡೆ

ಸುಮನ್ ಕ್ರಾಂತಿ ನಿರ್ದೇಶನ ಹಾಗೂ ನಿರ್ಮಾಣದಲ್ಲಿ ಮೂಡಿ ಬಂದಿರುವ, ವಿಭಿನ್ನ ಗೆಟಪ್ ನಲ್ಲಿ ವಸಿಷ್ಠ ಬಣ್ಣ ಹಚ್ಚಿರುವ ಕಾಲಚಕ್ರ ಸಿನಿಮಾದ ನೀನೇ ಬೇಕು ಎಂಬ ಹಾಡು ವಸಿಷ್ಠ ಸಿಂಹ ಸಾರಥ್ಯದ ಸಿಂಹಾ ಆಡಿಯೋ ಕಂಪನಿಯಲ್ಲಿ ಬಿಡುಗಡೆಯಾಗಿದೆ. ತಮ್ಮದೆ ಸಿನಿಮಾದ ಮೊದಲ ಹಾಡು ತಮ್ಮದೇ ಆಡಿಯೋ ಕಂಪನಿ ಪಾಲಾಗಿರೋದು ವಸಿಷ್ಠಗೆ ಡಬ್ಬಲ್ ಖುಷಿಕೊಟ್ಟಿದೆ.

ಅಂದಹಾಗೆ ವಸಿಷ್ಠ ಸಿಂಹ ಕಿರಿಕ್ ಪಾರ್ಟಿ’ ಸಿನಿಮಾದ ‘ನೀಚ ಸುಳ್ಳು ಸುತ್ತೋ ನಾಲಿಗೆ..’, ‘ದಯವಿಟ್ಟು ಗಮನಿಸಿ..’ ಸಿನಿಮಾದ ‘ಮರೆತೇ ಹೋದೆನು..’ ಸೇರಿ ಹಲವು ಹಾಡುಗಳನ್ನು ಅವರು ಹಾಡಿದ್ದಾರೆ. ಅವರಿಗೆ ಸಂಗೀತದ ಮೇಲೂ ಆಸಕ್ತಿ ಹಾಗೂ ಹೊಸ ಪ್ರತಿಭೆಗಳನ್ನು ಬೆಳೆಸುವ ನಿಟ್ಟಿನಲ್ಲಿ ಸಿಂಹಾ ಆಡಿಯೋ ಸಂಸ್ಥೆ ಕಣ್ತೆರೆದಿದ್ದು, ದೊಡ್ಡ ಎತ್ತರಕ್ಕೆ ಬೆಳೆಯಲಿ ಅನ್ನೋದು ಅಭಿಮಾನಿಗಳ ಹಾರೈಕೆ.

Categories
ಆಡಿಯೋ ಕಾರ್ನರ್ ಸಿನಿ ಸುದ್ದಿ

ಭಯಂಕರ ನಟನಿಗೆ ಮದಗಜ ಸಾಥ್!‌ ಪ್ರಥಮ್‌ ಸಿನಿಮಾ ಹಾಡು ರಿಲೀಸ್‌ ಮಾಡಿ ಶುಭ ಹಾರೈಸಿದ ಶ್ರೀಮುರಳಿ

ನಟ ಪ್ರಥಮ್ ಪ್ರಥಮ ಬಾರಿಗೆ ನಿರ್ದೇಶಿಸಿರುವ ಚಿತ್ರ ” ನಟ ಭಯಂಕರ”. ಈ ಚಿತ್ರದ ನಾಯಕ ಕೂಡ ಅವರೇ. ಇತ್ತೀಚೆಗೆ ಈ ಚಿತ್ರದ ಹಾಡುಗಳು ಬಿಡುಗಡೆಯಾದವು. ರೋರಿಂಗ್ ಸ್ಟಾರ್ ಶ್ರೀಮುರಳಿ ಹಾಡುಗಳನ್ನು ಬಿಡುಗಡೆ ಮಾಡಿ ಶುಭ ಕೋರಿದರು.‌ ಲಹರಿ ಸಂಸ್ಥೆಯ ವೇಲು, ಜಿಲ್ಲಾಧಿಕಾರಿ ದಯಾನಂದ್, ಗೀತರಚನೆಕಾರ ಡಾ. ವಿ.ನಾಗೇಂದ್ರಪ್ರಸಾದ್, ಗಿರೀಶ್, ಅರ್ಜುನ್ ಕುಮಾರ್ ಬಂಗಾರಪ್ಪ ಸೇರಿದಂತೆ ಅನೇಕರು ಆಡಿಯೋ ರಿಲೀಸ್ ಗೆ ಸಾಕ್ಷಿಯಾದರು.

ಪ್ರಥಮ್ ಕಾನ್ಫಿಡೆನ್ಸ್ ಇರುವ ಹುಡುಗ. ಬಿಗ ಬಾಸ್ ನ ಆರಂಭದಲ್ಲಿ ಇವರನ್ನು ನೋಡಿ, ಏನಪ್ಪಾ, ಹೀಗೆ ಮಾತಾಡುತ್ತಾರೆ? ಅಂದು ಕೊಂಡೆ. ನಂತರ ನಾನೇ ಅವರ ಅಭಿಮಾನಿಯಾದೆ. ಈಗ ನಟನೆ ಜೊತೆಗೆ ನಿರ್ದೇಶನ ಕೂಡ ಮಾಡಿದ್ದಾರೆ. ರಘು ದೀಕ್ಷಿತ್ ಹಾಗೂ ನಾನು ಇಷ್ಟಪಡುವ ಉಪ್ಪಿ ಸರ್ ಹಾಡಿರುವ ಹಾಡುಗಳು ನನಗೆ ಇಷ್ಟವಾಯಿತು. ಸಿನಿಮಾ ಕೂಡ ಉತ್ತಮವಾಗಿ ಮೂಡಿಬಂದಿರುತ್ತದೆ ಎಂಬ ನಂಬಿಕೆಯಿದೆ ಎಂದ ಶ್ರೀಮುರಳಿ, ಪ್ರಥಮ್ ಸೇರಿದಂತೆ ಇಡೀ ಚಿತ್ರತಂಡಕ್ಕೆ ಹಾರೈಸಿದರು.

ಜಿಲ್ಲಾಧಿಕಾರಿ ದಯಾನಂದ್, ಲಹರಿ ವೇಲು ಹಾಗೂ ವಿ.ನಾಗೇಂದ್ರಪ್ರಸಾದ್ ಸಹ ಪ್ರಥಮ್ ಬಗ್ಗೆ ಮೆಚ್ಚುಗೆಯ ಮಾತನಾಡಿ ಚಿತ್ರಕ್ಕೆ ಶುಭ ಕೋರಿದರು.

ಮಾತಿಗಿಳಿದ ಪ್ರಥಮ್‌, ಇದು ನನ್ನ ಮೊದಲ ನಿರ್ದೇಶನದ ಚಿತ್ರ.
ಬಾರಿ ಅಹಂಕಾರವಿರುವ ಮನುಷ್ಯ ಒಬ್ಬರಿಗೆ ಮಾತು ಕೊಟ್ಟಾಗ ಹೇಗೆ ಬದಲಾಗುತ್ತಾನೆ ಎಂಬುದೇ ಚಿತ್ರದ ಮುಖ್ಯ ಕಥಾವಸ್ತು.

ಇನ್ನೊಂದು ಕಡೆ ಸ್ಟುಪಿಡ್ ಸೂಪರ್ ಸ್ಟಾರ್ ಹಾಗೂ ಕುರುಡಿ ದೆವ್ವದ ನಡುವೆ ನಡೆಯುವ ಕಥೆ ಕೂಡ ಅನ್ನಬಹುದು. ಇಂದು ಆಡಿಯೋ ಬಿಡುಗಡೆ ಮಾಡಿದ್ದೇವೆ. ಸದ್ಯದಲ್ಲೇ ಟ್ರೇಲರ್ ಅನಾವರಣಗೊಳಿಸುತ್ತೇವೆ. ಮೇ ಹದಿಮೂರರಂದು ಚಿತ್ರವನ್ನು ತೆರೆಗೆ ತರುತ್ತೇವೆ ಎಂದರು. ನಾಯಕಿ ಫ್ರಾನ್ಸ್ ನಿವಾಸಿ ನಿಹಾರಿಕ, ಪ್ರಮುಖ ಪಾತ್ರಧಾರಿ ಚಂದನ, ಸಂಗೀತ ನೀಡಿರುವ ಪ್ರದ್ಯೋತನ್ ಚಿತ್ರದ ಕುರಿತು ಮಾತನಾಡಿದರು.

Categories
ಆಡಿಯೋ ಕಾರ್ನರ್ ಸಿನಿ ಸುದ್ದಿ

ಹಾಡಿ ಕುಣಿದ್ರು ಶಂಭೋ ಶಿವ ಶಂಕರ; ಹೊಸಬರ ಸಿನಿಮಾ ರಿಲೀಸ್‌ಗೆ ರೆಡಿ

ವರ್ತೂರು ಮಂಜು ನಿರ್ಮಾಣದ, ಶಂಕರ್ ಕೋನಮಾನಹಳ್ಳಿ ನಿರ್ದೇಶನದಲ್ಲಿ ಮೂಡಿಬಂದಿರುವ “ಶಂಭೋ ಶಿವ ಶಂಕರ” ಚಿತ್ರದ ಹಾಡುಗಳು ಈಗ ಬಿಡುಗಡೆಯಾಗಿವೆ. ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ಹಾಗು ನಟ ವಸಿಷ್ಠ ಸಿಂಹ ಹಾಡುಗಳನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಹಿತನ್‌ ಸಂಗೀತದ ಗೌಸ್‌ಪೀರ್‌ ಸಾಹಿತ್ಯ ಇರುವ ನವೀನ್ ಸಜ್ಜು ಹಾಡಿರುವ “ನಾಟಿಕೋಳಿ” ಹಾಡು ಸಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡತ್ತಿದೆ.

ನಾನು ಕಿರುತೆರೆಯಲ್ಲಿ ಧಾರಾವಾಹಿಗಳನ್ನು ನಿರ್ದೇಶಿಸಿ ಅನುಭವವಿದ್ದವನು. ಹಿರಿತೆರೆಯಲ್ಲಿ ಇದು ಚೊಚ್ಚಲ ಚಿತ್ರ. ನನ್ನ ಕನಸಿಗೆ ಜೀವ ತುಂಬಿದ ನಿರ್ಮಾಪಕ‌, ತಂತ್ರಜ್ಞರಿಗೆ ಹಾಗೂ‌ ಕಲಾವಿದರಿಗೆ ಧನ್ಯವಾದ. ಹಾಡುಗಳನ್ನು ಬಿಡುಗಡೆ ಮಾಡಿಕೊಟ್ಟ ಬಹುದಿನಗಳ ಗೆಳೆಯ ವಸಿಷ್ಠ ಸಿಂಹ ಹಾಗೂ‌ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ಅವರಿಗೆ ವಿಶೇಷ ಧನ್ಯವಾದ ಎಂದರು ನಿರ್ದೇಶಕ ಶಂಕರ್ ಕೋನಮಾನಹಳ್ಳಿ.

ಸಿನಿಮಾ ನಿರ್ಮಾಣದ ಬಗ್ಗೆ ವರ್ತೂರು ಮಂಜು, ಗೀತರಚನೆ ಕುರಿತು ಗೌಸ್ ಫಿರ್ ಹಾಗೂ ಸಂಗೀತದ ಬಗ್ಗೆ ಹಿತನ್ ಹಾಸನ್ ಮಾಹಿತಿ ನೀಡಿದರು. ಛಾಯಾಗ್ರಾಹಕ ನಟರಾಜು ಮದ್ದಾಲ, ನೃತ್ಯ ನಿರ್ದೇಶಕ ಕಲೈ ತಮ್ಮ ಕಾರ್ಯಗಳ ಬಗ್ಗೆ ಮಾತನಾಡಿದರು.

ನನಗೆ ಅಭಿನಯ ಅಂದರೆ ಏನೆಂದು ಗೊತ್ತಿರಲಿಲ್ಲ. ನನಗೆ ಅಭಿನಯ ಕಲಿಸಿದ ನಿರ್ದೇಶಕರಿಗೆ ನಾನು ಆಭಾರಿ ಎಂದರು ನಾಯಕ ಅಭಯ್.

ನಾಯಕಿ ಸೋನಾಲ್ ಮಾಂಟೆರೊ, ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ರೋಹಿತ್ ಹಾಗೂ ರಕ್ಷಕ್ ತಮ್ಮ ಪಾತ್ರ ಪರಿಚಯ ಮಾಡಿಕೊಂಡರು.ಆನಂದ್ ಆಡಿಯೋ ಮೂಲಕ ಈ ಚಿತ್ರದ ಹಾಡುಗಳು ಬಿಡುಗಡೆಯಾಗಿದೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ.

Categories
ಆಡಿಯೋ ಕಾರ್ನರ್ ಸಿನಿ ಸುದ್ದಿ

ಕೆಜಿಎಫ್‌ 2 ತೂಫಾನ್‌ ಸಾಂಗ್‌ಗೆ ಭರ್ಜರಿ ರೆಸ್ಪಾನ್ಸ್! ತೊಡ್ಡೆ ತಟ್ಟಿ ನಿಂತ ಬಡಿ ಗಟ್ಟಿಗ ಇವನು!

ಸದ್ಯ ಕನ್ನಡದಲ್ಲಿ ಬಹುನಿರೀಕ್ಷೆಯ ಸಿನಿಮಾ ಅಂದರೆ ಅದು ಕೆಜಿಎಫ್‌ ೨. ಹೌದು, ಯಶ್‌ ಅಭಿನಯದ ಈ ಸಿನಿಮಾ ಏಪ್ರಿಲ್‌ 14ರಂದು ವಿಶ್ವಾದ್ಯಂತ ರಿಲೀಸ್‌ ಆಗಲಿದೆ. ಅದಕ್ಕೂ ಮೊದಲೇ ಸಿನಿಮಾ ದೊಡ್ಡ ಮಟ್ಟದ ಕುತೂಹಲವನ್ನು ಮೂಡಿಸಿದೆ. ಈಗ ಹೊಸ ಸುದ್ದಿ ಅಂದರೆ, ಸೋಮವಾರ ಚಿತ್ರದ “ತೂಫಾನ್‌” ಎಂಬ ಹಾಡೊಂದು ಹೊರಹೊಮ್ಮಿದೆ. ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಲಕ್ಷ ಲಕ್ಷ ವೀಕ್ಷಣೆ ಪಡೆದುಕೊಂಡಿದೆ. ಮೊದಲೇ “ತೂಫಾನ್‌” ಸಾಂಗ್‌ ರಿಲೀಸ್‌ ಆಗುತ್ತೆ ಅಂತ ಅನೌನ್ಸ್‌ ಮಾಡಿದ್ದರಿಂದ ಎಲ್ಲೆಡೆಯಿಂದಲೂ ಕುತೂಹಲ ಹೆಚ್ಚಾಗಿತ್ತು. ಆ ಕುತೂಹಲಕ್ಕೆ ಇಂದು ತೆರೆ ಬಿದ್ದಿದೆ. ಪಕ್ಕಾ ಮಾಸ್‌ ಎನಿಸಿರುವ ಹಾಡಿಗೆ ಯಶ್‌ ಫ್ಯಾನ್ಸ್‌ ಫಿದಾ ಆಗಿದ್ದಾರೆ. “ತೂಫಾನ್‌ ತೂಫಾನ್‌ ತೊಡೆ ತಟ್ಟಿ ನಿಂತ ಬಡಿ ಗಟ್ಟಿಗನೆ… ತೂಫಾನ್‌ ತೂಫಾನ್‌ ಮುನ್ನುಗ್ಗೋ ಸಿಡಿಲ ಕಿಡಿ ಕಿಚ್ಚಿವನೇ…” ಎಂದ ಸಾಗುವ ಹಾಡು ಸಿಕ್ಕಾಪಟ್ಟೆ ವೈರಲ್‌ ಆಗಿದೆ.


ಹೌದು, ಈ ಹಾಡಿಗಾಗಿ ಯಶ್‌ ಫ್ಯಾನ್ಸ್‌ ಎದುರು ನೋಡುತ್ತಿದ್ದರು. ಬಿಡುಗಡೆಯಾಗಿದ್ದೇ ತಡ, ಎಲ್ಲೆಡೆಯಿಂದಲೂ ಸಾಕಷ್ಟು ಮೆಚ್ಚುಗೆಯ ಸುರಿಮಳೆಯಾಗಿದೆ. ಇನ್ನು, ಲಹರಿ ಮ್ಯೂಸಿಕ್‌ ಮತ್ತು ಟೀ ಸೀರಿಸ್‌ ಆಡಿಯೋ ಯುಟ್ಯೂಬ್ ಚಾನೆಲ್‌ ನಲ್ಲಿ ಈ ಹಾಡು ರಿಲೀಸ್‌ ಆಗಿದೆ.

ರವಿಬಸ್ರೂರು ಅವರೇ ಸಂಗೀತ ಮತ್ತು ಸಾಹಿತ್ಯ ನೀಡಿದ್ದಾರೆ. ಜೊತೆಗೆ ಧ್ವನಿಯನ್ನೂ ನೀಡಿದ್ದಾರೆ. ಅವರೊಂದಿಗೆ ದೊಡ್ಡ ಗಾಯಕರ ತಂಡವೇ ಇದೆ. ಈ ಹಾಡಿಗೆ ಸಂತೋಷ್‌ ವೆಂಕಿ, ಮೋಹನ್‌ ಕೃಷ್ಣ, ಸಚಿನ್‌ ಬಸ್ರೂರು, ಪುನೀತ್‌ ರುದ್ರರಂಗ, ರವಿಬಸ್ರೂರು, ವರ್ಷ ಆಚಾರ್ಯ ಸೇರಿದಂತೆ ಇತರೆ ಗಾಯಕರ ಧ್ವನಿಯೂ ಈ ಹಾಡಿಗೆ. ಅಂದಹಾಗೆ, ಈ ಲಿರಿಕಲ್‌ ವಿಡಿಯೋ ಹಾಡು ಸದ್ಯಕ್ಕೆ ಸಾಕಷ್ಟು ಸೌಂಡು ಮಾಡುತ್ತಿದೆ. ಕೆಜಿಎಫ್‌ ೨ ಸಿನಿಮಾ ಏಪ್ರಿಲ್‌ 14ಕ್ಕೆ ರಾಜ್ಯ, ದೇಶ ವಿದೇಶಗಳಲ್ಲೂ ತೆರೆಗೆ ಅಪ್ಪಳಿಸಲಿದೆ.

Categories
ಆಡಿಯೋ ಕಾರ್ನರ್ ಸಿನಿ ಸುದ್ದಿ

ರಾಕಿಭಾಯ್‌ ಫ್ಯಾನ್ಸ್‌ಗೆ ಗುಡ್‌ ನ್ಯೂಸ್!‌ ಮಾರ್ಚ್ 21ಕ್ಕೆ ತೂಫಾನ್‌ ಸಾಂಗ್‌ ರಿಲೀಸ್…

ಕನ್ನಡ ಚಿತ್ರರಂಗದ ಬಹುನಿರೀಕ್ಷಿತ ಚಿತ್ರ ಅಂದಾಕ್ಷಣ ಸದ್ಯ ನೆನಪಾಗೋದೇ ಯಶ್‌ ಅಭಿನಯದ, ಪ್ರಶಾಂತ್‌ ನೀಲ್‌ ನಿರ್ದೇಶನದ ಮತ್ತು ವಿಜಯ್‌ ಕಿರಗಂದೂರು ನಿರ್ಮಾಣದ ಚಿತ್ರ ‘ಕೆಜಿಎಫ್ 2’. ಈ ಚಿತ್ರದ ಅಬ್ಬರ ಇನ್ನೇನು ಶುರುವಾಗಲಿದೆ. ಏಪ್ರಿಲ್ 14ಕ್ಕೆ ಬಹು ನಿರೀಕ್ಷಿತ “ಕೆಜಿಎಫ್‌ 2” ರಿಲೀಸ್ ಆಗಲಿದೆ. ಯಶ್‌ ಫ್ಯಾನ್ಸ್‌ ‌ ಚಿತ್ರ ಬಿಡುಗಡೆಯ ಎದುರು ನೋಡುತ್ತಿದ್ದಾರೆ. ಸಿನಿಮಾ ಬಿಡುಗಡೆ ಹತ್ತಿರವಾಗುತ್ತಿರುವಂತೆ, ಸಿನಿಮಾದ ಪ್ರಚಾರ ಕೆಲಸ ಕೂಡ ಜೋರಾಗಿಯೇ ನಡೆಯುತ್ತಿದೆ. ಈ ಚಿತ್ರದ ಬಿಡುಗಡೆ ಇನ್ನೂ ಒಂದು ತಿಂಗಳು ಬಾಕಿ ಇದೆ. ಈಗಾಗಲೇ ಚಿತ್ರತಂಡ ಪ್ರಚಾರಕ್ಕೆ ಅಣಿಯಾಗಿದೆ. ಈವರೆಗೆ ಚಿತ್ರದ ಟೀಸರ್ ನೋಡಿ ಖುಷಿಗೊಂಡಿದ್ದ ಫ್ಯಾನ್ಸ್‌, ಸಿನಿಮಾದ ಟ್ರೇಲರ್‌ ಮತ್ತು ಹಾಡುಗಳಿಗೆ ಕಾಯುತ್ತಿದ್ದರು. ಅಂತಹ ಫ್ಯಾನ್ಸ್‌ಗೆ ಒಂದು ಗುಡ್‌ ನ್ಯೂಸ್‌ ಕೊಟ್ಟಿದೆ ಹೊಂಬಾಳೆ ಫಿಲಂಸ್.‌‌

ಹೌದು, ‘ಕೆಜಿಎಫ್ 2’ನ ಒಂದೊಂದೇ ಕಂಟೆಂಟ್ ಬಿಡಲು ತಂಡ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಚಿತ್ರದ ಮೊದಲ ಹಾಡನ್ನು ಬಿಡುಗಡೆ ಮಾಡಲು ತಂಡ ತಯಾರಿ ನಡೆಸಿದೆ. ಈ ಕುರಿತು ಟ್ವೀಟ್‌ ಮಾಡಿರುವ ಹೊಂಬಾಳೆ ಫಿಲಂಸ್‌, ಚಿತ್ರದ ಮೊದಲ ಹಾಡು ಮಾರ್ಚ್ 21ಕ್ಕೆ ರಿಲೀಸ್‌ ಆಗಲಿದೆ ಎಂದು ಹೇಳಿಕೊಂಡಿದೆ. ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್‌ ಈ ಕುರಿತಂತೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿವೆ. ಈ ಬಗ್ಗೆ ಪೋಸ್ಟರ್ ಹಂಚಿಕೊಂಡು ಟ್ವೀಟ್ ಮಾಡಿರುವ ಪ್ರಶಾಂತ್ ನೀಲ್, ‘ಸಿದ್ಧರಾಗಿ ತೂಫಾನ್ ಬರ್ತಿದೆ. ಮಾರ್ಚ್‌ 21, 11.07ಕ್ಕೆ ತೂಫಾನ್ ಲಿರಿಕಲ್ ವಿಡಿಯೋ ರಿಲೀಸ್ ಆಗುತ್ತಿದೆ’ ಎಂದು ತಮ್ಮ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಕೆಜಿಎಫ್‌ 5 ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಹಾಗಾಗಿ ಚಿತ್ರದ ಮೊದಲ ಹಾಡು ಕೂಡ ಐದು ಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ. ಹಾಡಿನ ಪೋಸ್ಟರ್ ಕೂಡ 5 ಭಾಷೆಯಲ್ಲಿ ರಿಲೀಸ್ ಮಾಡಲಾಗಿದ್ದು, ಎಲ್ಲೆಡೆ ಮೆಚ್ಚುಗೆ ಪಡೆದುಕೊಂಡಿದೆ. ಹಾಡಿನ ಶೀರ್ಷಿಕೆ ತೂಫಾನ್, ಅಂದರೆ ಬಿರುಗಾಳಿ ಎಂದರ್ಥ. ಈ ಹಾಡು ನಾಯಕನ ಕುರಿತಾಗಿರಬಹುದೇ ಎಂಬ ಪ್ರಶ್ನೆಗಳಿವೆ. ಅದೇನೆ ಇರಲಿ, ಒಟ್ಟಲ್ಲಿ ಮೊದಲ ಹಾಡು ರಿಲೀಸ್‌ ಮಾಡುತ್ತಿದೆ. ಈ ಹಾಡಿನ ಬಿಡುಗಡೆ ಬಳಿಕ ಚಿತ್ರತಂಡ ಟ್ರೇಲರ್ ಕೂಡ ರಿಲೀಸ್ ಮಾಡಲಿದೆ. ಈಗಾಗಲೇ ಟ್ರೇಲರ್ ರಿಲೀಸ್ ದಿನಾಂಕವನ್ನು ಚಿತ್ರತಂಡ ಪ್ರಕಟಿಸಿದ್ದು, ಮಾರ್ಚ್ 27ಕ್ಕೆ ಟ್ರೇಲರ್ ರಿಲೀಸ್ ಆಗಲಿದೆ. ಸದ್ಯ ಈ ಚಿತ್ರದ ಮೇಲೆ ಸಾಕಷ್ಟು ಕುತೂಹಲವಿದೆ.

Categories
ಆಡಿಯೋ ಕಾರ್ನರ್ ಸಿನಿ ಸುದ್ದಿ

ತಾಜ್‌ಮಹಲ್‌ ಹಾಡಿಗೆ ಶ್ರೀಮುರಳಿ ಜೈ; ರೋರಿಂಗ್‌ ಸ್ಟಾರ್ ಸಾಂಗ್‌ ರಿಲೀಸ್‌

ದೇವರಾಜ್ ಕುಮಾರ್ ನಾಯಕನಾಗಿ ನಟಿಸಿ, ನಿರ್ದೇಶಿಸಿರುವ “ತಾಜ್ ಮಹಲ್ 2” ಚಿತ್ರದ ಹಾಡುಗಳನ್ನು ರೋರಿಂಗ್ ಸ್ಟಾರ್ ಶ್ರೀಮುರಳಿ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

“ನೀನು ಎಷ್ಟು ಕಷ್ಟಪಟ್ಟೆ ಎಂಬುದು ಮುಖ್ಯವಲ್ಲ. ತೆರೆ ಮೇಲೆ ನೀನು ಪ್ರೇಕ್ಷಕರಿಗೆ ಏನು ತೋರಿಸಿ, ಅವರ ಮನ ಗೆಲ್ಲುತ್ತೀಯಾ ಎನ್ನುವುದು ಮುಖ್ಯ ಎಂದು ಶ್ರೀಮುರಳಿ ಅವರು ಹಿಂದೊಮ್ಮೆ ಹೇಳಿದ್ದರು. ಆ ಮಾತೇ ನನಗೆ ಸ್ಪೂರ್ತಿ. ನಾಯಕಿಯಾಗಿ ಸಮೃದ್ಧಿ ಶುಕ್ಲ ಅಭಿನಯಿಸಿದ್ದಾರೆ. ವೀನಸ್ ಮೂರ್ತಿ ಅವರ ಛಾಯಾಗ್ರಹಣವಿದೆ. ಮನ್ವರ್ಷಿ ನವಲಗುಂದ ಹಾಡುಗಳನ್ನು ಬರೆದಿದ್ದಾರೆ ಹಾಗೂ ತಮ್ಮದೇ ಹೊಸ ಸಂಸ್ಥೆಯ ಮೂಲಕ ಹಾಡುಗಳನ್ನು ಬಿಡುಗಡೆ ಮಾಡಲಾಗಿದೆ. ವಿಕ್ರಮ್ ಸೆಲ್ವ ಸಂಗೀತವಿದೆ. ಜೂನ್ ನಲ್ಲಿ ಚಿತ್ರ ಬಿಡುಗಡೆ ಮಾಡು ವುದಾಗಿ ನಿರ್ದೇಶಕ ಕಮ್ ನಾಯಕ ದೇವರಾಜ್ ಕುಮಾರ್ ಹೇಳಿದರು.

ಹಿರಿಯ ನಿರ್ಮಾಪಕ ಎಸ್.ಎ.ಚಿನ್ನೇಗೌಡ, ಭಾ.ಮ.ಹರೀಶ್ , ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷ ಉಮೇಶ್ ಬಣಕಾರ್, ವಿಜಯ್ ಸಿಂಹ, ವಿಕ್ಟರಿ ವಾಸು, ಭಾ.ಮ.ಗಿರೀಶ್, ಸುನೀಲ್ ಇತರರು ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು.

ಹಾಡುಗಳನ್ನು ಬರೆದಿರುವ ಮನ್ವರ್ಷಿ ನವಲಗುಂದ ಹಾಡುಗಳ ಹಾಗೂ ಹಾಡಿದವರ ಬಗ್ಗೆ ಮಾಹಿತಿ ನೀಡಿದರು.

error: Content is protected !!