Categories
ಸಿನಿ ಸುದ್ದಿ

ರಾಘು ಎಂಬ ಸೋಲೋ ಆಕ್ಟರ್! ಚಿನ್ನಾರಿ ಮುತ್ತನ ಚಿತ್ರ ಏ.28ಕ್ಕೆ ರಿಲೀಸ್

ಕನ್ನಡ ಚಿತ್ರರಂಗದಲ್ಲಿ ಪ್ರಯೋಗಾತ್ಮಕ ಸಿನಿಮಾಗಳ ಪರ್ವ ಕಾಲ ಶುರುವಾಗಿದೆ. ಅದರ ಮುಂದುವರೆದ ಭಾಗವಾಗಿ ರೂಪಗೊಂಡಿರುವ ಬಹುನಿರೀಕ್ಷಿತ ಸಿನಿಮಾ ರಾಘು. ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ ನಾಯಕನಾಗಿ ನಟಿಸಿರುವ ರಾಘು ಏಕವ್ಯಕ್ತಿ ಚಿತ್ರ. ಅಂದರೆ ಸಿನಿಮಾದ ಆರಂಭದಿಂದ ಅಂತ್ಯದವರೆಗೆ ನಿಮಗೆ ಕಾಣಿಸೋದು ನಾಯಕ ಮಾತ್ರ. ರಾಘು ಸಿನಿಮಾ ಮೂಲಕ ವಿಜಯ್ ರಾಘವೇಂದ್ರ ಇಂತಹದೊಂದು ಪ್ರಯೋಗಕ್ಕೆ ತಮ್ಮನ್ನು ತಾವು ಒಡ್ಡಿಕೊಂಡಿದ್ದಾರೆ. ಇಡೀ ಸಿನಿಮಾದಲ್ಲಿ ವಿಜಯ್ ರಾಘವೇಂದ್ರ ಒಬ್ಬರೇ ಇರುತ್ತಾರೆ.

ಸ್ಯಾಂಡಲ್ ವುಡ್ ನ ಬಹು ನಿರೀಕ್ಷಿತ ಸಿನಿಮಾ ಎನಿಸಿಕೊಂಡಿರುವ ರಾಘು ಚಿತ್ರದ ಶೂಟಿಂಗ್ ಕಂಪ್ಲೀಟ್ ಆಗಿದ್ದು, ಪ್ರೇಕ್ಷಕರ ಎದುರು ಬರಲು ಸಜ್ಜಾಗಿದೆ. ಏಪ್ರಿಲ್ 28ಕ್ಕೆ ರಾಜ್ಯಾದ್ಯಂತ ರಿಲೀಸ್ ಆಗಲಿದೆ. ಮೊದಲ‌ ಹೆಜ್ಜೆಯಲ್ಲಿ ಹೊಸ ಜಾನರ್ ಹಾಗೂ ಹೊಸ ಪ್ರಯೋಗದೊಂದಿಗೆ ಎಂ ಆನಂದ್ ರಾಜ್ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ.

ಆನ ಹಾಗೂ ಬ್ಯಾಂಗ್ ಸಿನಿಮಾಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಅನುಭವವಿರುವ ಎಂ ಆನಂದ್ ರಾಜ್ ಸ್ವತಂತ್ರ ನಿರ್ದೇಶಕರಾಗಿ ರಾಘು ಮೂಲಕ ಬಡ್ತಿ ಪಡೆದಿದ್ದಾರೆ.

ಡಿಕೆ ಎಸ್ ಸ್ಟುಡಿಯೋ, ಕೋಟಾ ಫಿಲಂ ಫ್ಯಾಕ್ಟರಿ ಪ್ರೊಡಕ್ಷನ್ ಹೌಸ್ ನಡಿ ರಾಘು ಸಿನಿಮಾವನ್ನು ರನ್ವಿತ್ ಶಿವಕುಮಾರ್ ಹಾಗೂ ಅಭಿಷೇಕ್ ಕೋಟ ನಿರ್ಮಾಣ ಮಾಡಿದ್ದಾರೆ. ತಾಂತ್ರಿಕವಾಗಿ ಶ್ರೀಮಂತಿಕೆಯಿಂದ ಚಿತ್ರ ಕೂಡಿದ್ದು, ಉದಯ್ ಲೀಲಾ ಛಾಯಾಗ್ರಹಣ, ವಿಜೇತ್ ಚಂದ್ರ ಸಂಕಲನ, ರಿತ್ವಿಕ್ ಮುರುಳಿಧರ್ ಹಿನ್ನೆಲೆ ಸಂಗೀತ ಚಿತ್ರಕ್ಕಿದೆ.

ಸೂರಜ್ ಜೋಯಿಸ್ ಸಂಗೀತ ನಿರ್ದೇಶನ ಮಾಡಿರುವ ಈ ಚಿತ್ರದ ಎರಡು ಹಾಡುಗಳಿಗೆ ವಾಸುಕಿ ವೈಭವ್ ಹಾಗೂ all ok ಕಂಠ ದಾನ ಮಾಡಿದ್ದಾರೆ… ಹಾಡುಗಳು ಸದ್ಯದಲ್ಲೇ ಬಿಡುಗಡೆಯಾಗಲಿವೆ.

Categories
ಸಿನಿ ಸುದ್ದಿ

ಸ್ಮಶಾನದೊಳ್ ಅಡವಿ ಮಂದಿ! ಪೋಸ್ಟರ್ ರಿಲೀಸ್ ಮಾಡಿದ ಪೌರಕಾರ್ಮಿಕರು

ಅಡವಿ ಇದು ಅರಂಭದಿಂದಲೂ ಸದ್ದು ಮಾಡುತ್ತಲೇ ಬಂದ ಚಿತ್ರ. ಪರಿಸರ ಸಂರಕ್ಷಣೆ ಹಾಗೂ ಆದಿವಾಸಿಗಳ ಜೀವನ ಆಧಾರಿತ ಸ್ಥಳೀಯ ಹೊಸ ಪ್ರತಿಭೆಗಳಿಂದ ಮೂಡಿಬಂದ ಈ ಚಿತ್ರದ ಪೋಸ್ಟರ್ ಅನ್ನು ರುದ್ರಭೂಮಿಯಲ್ಲಿ ಪೌರಕಾರ್ಮಿರಿಂದ ಬಿಡುಗಡೆ ಮಾಡಿಸುವ ಮೂಲಕ ನಿರ್ದೇಶಕ ಟೈಗರ್ ನಾಗ್ ವಿಶೇಷ ಮೆರೆದಿದ್ದಾರೆ.

ಪತ್ರಕರ್ತ, ಸಾಮಾಜಿಕ ಹೋರಾಟಗಾರ ಟೈಗರ್ ನಾಗ್ ಕಾದಂಬರಿ ಆಧರಿಸಿ, ಅವರೇ ಕಥೆ ಚಿತ್ರಕಥೆ ಬರೆದು ನಿರ್ದೇಶನ ಮತ್ತು ನಿರ್ಮಾಣ ಮಾಡಿದ್ದು, ಅಡವಿ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅನ್ನು ಕೊರಟಗೆರೆಯ ಪಟ್ಟಣದಲ್ಲಿ ವಿಶೇಷವಾಗಿ ರುದ್ರಭೂಮಿಯಲ್ಲಿ ಪೌರಕರ್ಮಿಕರು ಬಿಡುಗಡೆ ಮಾಡಿದ್ದು ವಿಶೇಷ.

ಅತಿಥಿಯಾಗಿ ಸ್ಮಶಾನಕ್ಕೆ ಬಂದು ಪೋಸ್ಟರ್ ಬಿಡುಗಡೆ ಮಾಡಿಕೊಟ್ಟ ಪೌರಕಾರ್ಮಿಕೆ ಮಂಜಮ್ಮ ಮಾತನಾಡಿ, ನಗರದ ಸ್ವಚ್ಛತೆಗೆ ದುಡಿಯುವ ನಮ್ಮಂತಹ ಕಾರ್ಮಿಕರನ್ನು ಗಮನಿಸದೆ ಇರುವ ಇಂದಿನ ಪರಿಸ್ಥಿತಿಯಲ್ಲಿ ಇಂತಹ ಕಾರ‍್ಯಕ್ರಮಕ್ಕೆ ಆಹ್ವಾನಿಸಿ ಪೋಸ್ಟರ್ ಅನ್ನು ನನ್ನಂಥ ಪೌರ ಕಾರ್ಮಿಕರ ಕೈಯಿಂದ ಬಿಡುಗಡೆ ಮಾಡಿಸುವ ಮೂಲಕ ಪೌರಕಾರ್ಮಿಕರ ಮಹತ್ವವನ್ನು ಸ್ವಚ್ಛತೆಯ ಅಗತ್ಯತೆಯ ಸಂದೇಶವನ್ನು ನಾಡಿಗೆ ಚಿತ್ರತಂಡ ನೀಡಿದೆ. ನಗರ ಪಾಲಿಕೆ, ನಗರಸಭ ಪುರಸಭೆ ಪಟ್ಟಣ ಪಂಚಾಯಿತಿಗಳಲ್ಲಿ
ಸೇವೆ ಸಲ್ಲಿಸುತ್ತಿರುವ ನಮ್ಮಂತಹ ಸಾಮಾನ್ಯ ಪೌರಕಾರ್ಮಿಕರಿಂದ ಅಡವಿ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅನ್ನು ಬಿಡುಗಡೆ ಮಾಡಿಸಿದ್ದು ಸ್ವಚ್ಛತಾ ರಾಯಭಾರಿ ಗಳಾಗಿ ಕೆಲಸ ಮಾಡುತ್ತಿರುವ ನಮಗೆ ಸಲ್ಲಿಸಿದ ಗೌರವವಾಗಿದೆ ಈ ಚಿತ್ರವು ಯಶಸ್ಸಾಗಲಿ ಎಂದು ಶುಭಹಾರೈಸಿದರು.

ಸಂವಿಧಾನ ಸಿನಿ ಕಂಬೈನ್ಸ್ ಅಡಿಯಲ್ಲಿ ನಿರ್ಮಿಸಲಾಗಿರುವ ಅಡವಿ ಚಿತ್ರವು ನನಗೆ ಮುಖ್ಯ ಭೂಮಿಯಲ್ಲಿ ಅಭಿನಯಿಸಲು ಅವಕಾಶ ಮಾಡಿಕೊಟ್ಟಿದ್ದಾರೆ ಚಿತ್ರೀಕರಣದ ಆರಂಭದಲ್ಲೆ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿದ್ದು. ಅರಣ್ಯ ಸಂರಕ್ಷಣೆ. ಅರಣ್ಯದೊಂದಿಗೆ ಬೆಸೆದುಕೊಂಡಿರುವ ಮೂಲ ನಿವಾಸಿಗಳ ಬದುಕಿನ ಹೋರಾಟದ ವಾಸ್ತವದ ನೈಜ ಚಿತ್ರಣವನ್ನು ತೆರೆದಿಡಲಿದೆ. ಈ ಚಿತ್ರದಲ್ಲಿ ಸಾಮಾಜಿಕ ಹೋರಾಟಗಾರರು ಪ್ರಗತಿಪರ ಚಿಂತಕರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿರುವುದು ಗಾಂಧಿನಗರದಲ್ಲಿ ಈ ಚಿತ್ರದ ಬಗ್ಗೆ ಈಗಾಗಲೇ ಟಾಕ್ ಶುರುವಾಗಿದೆ ಎಂದು ಅರ್ಜುನ್ ಪಾಳೇಗಾರ್ ಹೇಳಿದ್ದಾರೆ.

ಚಿತ್ರದ ನಾಯಕ ಮೋಹನ್ ಮೌರ್ಯ ಮಾತನಾಡಿ ನನಗೆ ಮೊದಲ ಬಾರಿ ಪೂರ್ಣ ಪ್ರಮಾಣದ ನಾಯಕನಾಗಿ ನಟಿಸಲು ಅವಕಾಶ ಮಾಡಿಕೊಟ್ಟ ಟೈಗರ್ ನಾಗ್ ಮತ್ತು ಸಂವಿಧಾನ ಸಿನಿ ಕಂಬೈನ್ಸ್ ಸಂಸ್ಥೆಗೆ ಥ್ಯಾಂಕ್ಯು ಹೇಳ್ತೀನಿ.
ಈ ಚಿತ್ರ ಎಪ್ರಿಲ್ 14ರ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ದಿನ ತೆರೆಗೆ ಬರಲು ತಯಾರಿ ನಡೆಸಿದೆ. ಸಮಾಜ ಕಟ್ಟಕಡೆಯ ಸಮುದಾಯಕ್ಕೆ ನ್ಯಾಯಒದಗಿಸುವ ನೈಜ್ಯ ಕಾದಂಬರಿ ಆಧಾರಿತ ಚಿತ್ರ ಇದ್ದಾಗಿದ್ದು, ರಾಜ್ಯದ ಜನತೆ ನವ ಪ್ರತಿಭೆಗಳಿಗೆ ಪ್ರೋತ್ಸಾಹಿಸಬೇಕು. ಪ್ರತಿಯೊಬ್ಬರು ನೋಡಲೇ ಬೇಕಾದ ಚಿತ್ರ ನಮ್ಮ ಅಡವಿ ಚಿತ್ರವನ್ನು ಚಿತ್ರ ಮಂದಿರಗಳಿಗೆ ಆಗಮಿಸಿ ವೀಕ್ಷಣೆ ಮಾಡಬೇಕೆಂದು ಮನವಿ ಮಾಡುತ್ತೇವೆ. ಎಂಬುದು ಮೋಹನ್ ಆರ್ಯ ಮಾತು.

ನಾಯಕಿ ಶಿಲ್ಪಾ ಮಾತನಾಡಿ, ಸಂವಿಧಾನ ಸಿನಿ ಕಂಬೈನ್ಸ್ ಬ್ಯಾನರ್ ಅವರ ಪ್ರಥಮ ಚಿತ್ರವನ್ನು ಟೈಗರ್ ನಾಗ್ ನಿರ್ದೇಶಿಸಿದ್ದಾರೆ ಕಾಡನ್ನೇ ಸರ್ವಸ್ವ ಎಂದು ನಂಬಿ ಬದುಕುವ ದ್ರಾವಿಡ ಜನರ ಬದುಕು ಬವಣೆ ಬಿಂಬಿಸುವ ಈ ಚಿತ್ರದಲ್ಲಿ ನಾಯಕಿಯಾಗಿ ಅಭಿನಯಿಸಲು ಅವಕಾಶ ಕೊಟ್ಟ ಟೈಗರ್ ನಾಗ್ ಅವರಿಗೆ ಧನ್ಯವಾದ ಎಂದರು.

ಬುದ್ಧ ಬಸವ ಅಂಬೇಡ್ಕರ್ ಪೆರಿಯಾರ್ ಫುಲೆ ಕುವೆಂಪುರವರ ಆದರ್ಶ ದಂತೆ ಮೌಡ್ಯತೆ ವಿರೋಧಿಸಿ ಸ್ಮಶಾನದಲ್ಲಿ ಅಡವಿ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿದ್ದೇವೆ. ಆದಿವಾಸಿಗಳ ಕುರಿತು ಪರಿಸರ ಹಾಗೂ ಸಂವಿಧಾನ ಜಾಗೃತಿ ಕಾದಂಬರಿ ಆಧಾರಿತ ಅಡವಿ ಚಿತ್ರದ ಪೋಸ್ಟರ್ ಅನ್ನು ಕೊರಟಗೆರೆ ಪಟ್ಟಣದ ಸ್ಮಶಾನದಲ್ಲಿ ಪೌರಕಾರ್ಮಿಕರಿಂದ ವಿಶೇಷವಾಗಿ ಬಿಡುಗಡೆ ಮಾಡಿದ್ದು ಹೆಮ್ಮೆ ಎನಿಸುತ್ತೆ . ಶೀಘ್ರದಲ್ಲೇ ತೆರೆಗೆ ಬರಲು ಸಿದ್ದರಾಗುತ್ತಿದ್ದೇವೆ.
ಈ ಚಿತ್ರಕ್ಕಾಗಿ ಸಿದ್ದರಬೆಟ್ಟದಲ್ಲಿ ಆದಿವಾಸಿಗಳು ವಾಸಿಸುವ ಗುಡಿಸಲಹಟ್ಟಿ ಸೆಟ್ಟನ್ನು ಹಿರಿಯ ಕಲಾ ನಿರ್ದೇಶಕ ಬಾಬು ಖಾನ್ ರವರ ಕಲಾ ನಿರ್ದೇಶನದಲ್ಲಿ ನಿರ್ಮಾಣ ಮಾಡಲಾಗಿತ್ತು.

ಕಲಾ ಸಹಾಯಕರ ತಂಡ ಹಗಲಿರುಳನ್ನದೆ ಶ್ರಮಿಸಿ ಗುಡಿಸಲಹಟ್ಟಿ ಸೆಟ್ ಜೊತೆಗೆ ಪೊಲೀಸ್ ಸ್ಟೇಷನ್ ಹಾಗೂ ಕೋರ್ಟ್ ಸೆಟ್ ನಿರ್ಮಾಣ ಮಾಡಲಾಗಿತ್ತು. ಸಿದ್ದರಬೆಟ್ಟ. ಚಿಕ್ಕಮಗಳೂರು. ಸಕಲೇಶಪುರ. ಮತ್ತಿತರ ತಾಣಗಳಲ್ಲಿ ಚಿತ್ರೀಕರಣವಾಗಿದೆ. ಅರಣ್ಯ ರಕ್ಷಣೆಯ ಜಾಗೃತಿಯ ಜೊತೆಗೆ ಆದಿವಾಸಿ ದ್ರಾವಿಡ ಜನರು ತಮ್ಮ ಬದುಕಿಗಾಗಿ ಏನೆಲ್ಲಾ ಹೋರಾಟ ಮಾಡಬೇಕಾಗುತ್ತದೆ ಎಂಬ ಆದಿವಾಸಿ ಜನ ವ್ಯವಸ್ಥೆಯ ಹಾಗೂ ಪರಿಸರ ಸಂರಕ್ಷಣೆಯ ಕಥೆಯನ್ನು ತೆರೆದಿಡುವ ಈ ಚಿತ್ರ ಕನ್ನಡ ಚಿತ್ರರಂಗಕ್ಕೆ ಹೊಸ ಅಲೆಯ ಚಿತ್ರವಾಗುವ ನಿರೀಕ್ಷೆ ಇದೆ ಎಂದಿದ್ದಾರೆ ನಿರ್ದೇಶಕ ಟೈಗರ್ ನಾಗ್ ಹೇಳಿದ್ದಾರೆ.

ಛಾಯಾಗ್ರಾಹಕ ರವಿಕುಮಾರ್ ಸನಾ, ಆರ್ ಅನಂತರಾಜ್. ರಥವಾರಂ ದೇವು. ಶಿಲ್ಪಾ ನಾಗ್. ವಾಲೆ ಚಂದ್ರು . ರಾಮನಾಯಕ್ . ವೃಶ್ಚಿಕ. ಮಂಜೀವ. ಸರಸ್ವತಿ. ಬಾಲ ನಟಿ ಬೇಬಿ ಸಿಂಚನ, ಶಿವಾನಂದ್. ಕೆ. ಆರ್. ಓಬಳರಾಜು ನವೀನ್ ಕಲ್ಪತರು ಆನಂದ್ ದಿನೇಶ್ ರಾಜ್ ಹರ್ಷಿತ್. ಅರುಣ್,ದಾಸೇಗೌಡ ಸೇರಿದಂತೆ ಇತರರು ಇದ್ದಾರೆ.

ಈ ಚಿತ್ರಕ್ಕೆ ಸಹ ನಿರ್ಮಾಪಕರಾಗಿ ಮಧುಗಿರಿ ಸಾಧಿಕ್ ಸಾಬ್, ಛಾಯಾಗ್ರಹಣ ವಿಪಿನ್ ರಾಜ್. ಸಂಗೀತ ನಿರ್ದೇಶಕ ಮಂಜು ಮಹಾದೇವ್. ಸಂಕಲನ ಸಂಜೀವ್ ರೆಡ್ಡಿ. ಸಾಹಿತ್ಯ ಕವಿರಾಜ್ ವಿ ಮನೋಹರ್. ಸಂಭಾಷಣೆ ಸಾಹಸ ನೃತ್ಯ ಎ.ಆರ್ ಸಾಯಿರಾಮ್. ಸಹ ನಿರ್ದೇಶಕ ಕೆ.ಮಂಜುನಾಥ್ ಕೋಟೆ ಕೆರೆ. ವಸ್ತ್ರಾಲಂಕಾರ ಪುಟ್ಟರಾಜ. ಮೇಕಪ್ ದಯಾನಂದ್ ಕೆಲಸ‌ ಮಾಡಿದ್ದಾರೆ.

ಪೋಸ್ಟರ್ ಬಿಡುಗಡೆ ವೇಳೆ ಪ.ಪಂ ಸದಸ್ಯ ನಟರಾಜು, ಯುವಮುಖಂಡ ರಮೇಶ್, ಪತ್ರಕರ್ತ ಸಂಘದ ಅಧ್ಯಕ್ಷ ಕೆ.ವಿ ಪುರುಷೋತ್ತಮ್ ಪವನ್ ಡಾಲಿ ರಾಖಿ ಪ್ರಭು ಇದ್ದರು.

Categories
ಸಿನಿ ಸುದ್ದಿ

ಪೊನ್ನಿಯಿನ್ ಸೆಲ್ವನ್-2 ಹಾಡು, ಟ್ರೇಲರ್ ಹೊರ ಬಂತು: ಕಮಲ್ ಹಾಸನ್ ಆಕರ್ಷಣೆ- ಅಭಿಮಾನಿಗಳ ಸಂಭ್ರಮ ಹೆಚ್ಚಿಸಿದ ತಾರೆಯರು…

ಖ್ಯಾತ ನಿರ್ದೇಶಕ ಮಣಿರತ್ನಂ ಕನಸಿನ ಕೂಸು ಐತಿಹಾಸಿಕ ದೃಶ್ಯಕಾವ್ಯ ಪೊನ್ನಿಯೆನ್ ಸೆಲ್ವನ್-2 ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಚೆನ್ನೈನ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಕಲರ್ ಫುಲ್ ಕಾರ್ಯಕ್ರಮದಲ್ಲಿ ಅದ್ಧೂರಿಯಾಗಿ ಟ್ರೇಲರ್ ಹಾಗೂ ಆಡಿಯೋ ಬಿಡುಗಡೆಯಾಗಿದೆ.

ವಿಶೇಷ ಅತಿಥಿಯಾಗಿ ಆಗಮಿಸಿದ್ದ ಉಳಗನಾಯಗನ್ ಕಮಲ್ ಹಾಸನ್ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರಗು ನೀಡಿದರು.. ಟ್ರೇಲರ್ ಲಾಂಚ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು. ಮಣಿರತ್ನಂ, ಕಾರ್ತಿ, ಐಶ್ವರ್ಯ ರೈ, ವಿಕ್ರಮ್, ತ್ರಿಯ, ಜಯಂರವಿ, ಪ್ರಕಾಶ್ ರೈ, ಶರತ್ ಕುಮಾರ್ ಸೇರಿದಂತೆ ಹಲವು ಸೂಪರ್ ಸ್ಟಾರ್ಸ್ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ವಿಶೇಷ.

ಕಲ್ಕಿ ಕೃಷ್ಣಮೂರ್ತಿ ಬರೆದ ಪೊನ್ನಿಯಿನ್ ಸೆಲ್ವನ್ ಕಾದಂಬರಿ ಆಧರಿಸಿ ನಿರ್ದೇಶಕ ಮಣಿರತ್ನಂ ಎರಡು ಭಾಗದಲ್ಲಿ ಚಿತ್ರ ತಯಾರಿಸಿದ್ದರು. ಕಳೆದ ವರ್ಷ ಮೊದಲ ಭಾಗ ರಿಲೀಸ್ ಆಗಿತ್ತು.

ಪೊನ್ನಿಯಿನ್ ಸೆಲ್ವನ್ 500 ಕೋಟಿ ಬಾಚಿತ್ತು. ಲೈಕಾ ಪ್ರೊಡಕ್ಷನ್ ಜೊತೆಗೂಡಿ ಮಣಿರತ್ನಂ ನಿರ್ಮಿಸಿ, ನಿರ್ದೇಶಿಸಿರುವ ಪೊನ್ನಿಯಿನ್ ಸೆಲ್ವನ್-2 ಸೀಕ್ವೆಲ್ ಟ್ರೇಲರ್ ರಿಲೀಸ್ ಆಗಿದ್ದು, ನಿರೀಕ್ಷೆ ಹೆಚ್ಚಿಸಿದೆ.

ಚೋಳ ಸಾಮ್ರಾಜ್ಯದ ಗದ್ದುಗೆಗಾಗಿ ನಡೆಯುವ ಹೋರಾಟ, ಪಾಂಡ್ಯ ರಾಜರ ಕುತಂತ್ರ, ಚೋಳ ಸಾಮ್ರಾಜ್ಯ ನಾಶಪಡಿಸಲು ನಂದಿನಿ ಮಾಡುವ ಶಪಥ, ಕರಿಕಾಲನ್ ವೀರಾವೇಶದ ಹೋರಾಟ, ನಂದಿನಿ ಕರಿಕಾಲನ್ ಮುಖಾಮುಖಿಯಾಗುವ ಸನ್ನಿವೇಶ..ಅದ್ಧೂರಿ ಮೇಕಿಂಗ್, ಬೃಹತ್ ಸೆಟ್ ಗಳು ಟ್ರೇಲರ್ ನಲ್ಲಿ ಝಗಮಗಿಸಿವೆ.

ಕನ್ನಡ ಸೇರಿದಂತೆ ಐದು ಭಾಷೆಯಲ್ಲಿಯೂ ಪೊನ್ನಿಯಿನ್ ಸೆಲ್ವನ್-2 ಮೊದಲ ನೋಟ ರಿಲೀಸ್ ಆಗಿದ್ದು, ಭಾರೀ ಮೆಚ್ಚುಗೆಗೆ ಪಡೆದುಕೊಂಡಿದೆ. ಆಸ್ಕರ್ ವಿಜೇತ ಎ. ಆರ್ ರೆಹಮಾನ್ ಸಂಗೀತ ಸಿನಿಮಾಗಿದೆ.

ಟ್ರೇಲರ್ ಮೂಲಕ ಪ್ರಚಾರ ಕಾರ್ಯಕ್ಕೆ ಕಿಕ್ ಸ್ಟಾರ್ಟ್ ಕೊಟ್ಟಿರುವ ಮಣಿರತ್ನಂ ತಂಡ ಕಟ್ಟಿಕೊಂಡು ಹೊರ ರಾಜ್ಯಗಳಲ್ಲಿಯೂ ಪ್ರಮೋಷನ್ ಶುರು ಮಾಡಲು ಸಜ್ಜಾಗಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾವಾಗಿರುವ ಪೊನ್ನಿಯಿನ್ ಸೆಲ್ವನ್-2 ಏಪ್ರಿಲ್ 28ಕ್ಕೆ ವರ್ಲ್ಡ್ ವೈಡ್ ತೆರೆಗೆ ಬರುತ್ತಿದೆ.

ಐಶ್ವರ್ಯ ರೈ, ತ್ರಿಷಾ, ಕಾರ್ತಿ, ವಿಕ್ರಂ, ಪ್ರಕಾಶ್ ರೈ, ಶರತ್ ಕುಮಾರ್, ಜಯಂರವಿ, ಐಶ್ವರ್ಯ ಲಕ್ಷ್ಮೀ, ಶೋಭಿತಾ ಧುಲಿಪಾಲ, ಪ್ರಭು ಸೇರಿದಂತೆ ದೊಡ್ಡ ಕ್ಯಾನ್ವಸ್ ಚಿತ್ರದಲ್ಲಿದೆ.

Categories
ಸಿನಿ ಸುದ್ದಿ

ಟೈಗರ್ ಪ್ರಭಾಕರ್ ಬರ್ತ್ ಡೇಗೆ ಲಂಕಾಸುರ ಟೀಸರ್

ಮಾರ್ಚ್ 30 ರಂದು ಟೈಗರ್ ಪ್ರಭಾಕರ್ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಟೈಗರ್ ಟಾಕೀಸ್ ಮೂಲಕ ನಿರ್ಮಾಣವಾಗಿರುವ ಮೊದಲ ಚಿತ್ರ “ಲಂಕಾಸುರ”ದ ವಿಶೇಷ ಟೀಸರ್ ಬಿಡುಗಡೆಯಾಗಲಿದೆ.ಈ ಕುರಿತು ನಿರ್ಮಾಪಕಿ ನಿಶಾ ಹಾಗು ನಟ ವಿನೋದ್ ಪ್ರಭಾಕರ್ ಹೇಳೋದಿಷ್ಟು.


ನಾವು ಈ ಚಿತ್ರ ಪ್ರಾರಂಭಿಸಿದ ದಿನದಿಂದಲೂ ನಮಗೆ ನೀವು ನೀಡುತ್ತಿರುವ ಪ್ರೋತ್ಸಾಹಕ್ಕೆ ನಾವು ಚಿರ ಖುಣಿ. ನಮಗೆ ನಿಮ್ಮ ಬೆಂಬಲ ಸದಾ ಹೀಗೆ ಇರಲಿ ಎನ್ನುತ್ತಾರೆ ವಿನೋದ್ ಪ್ರಭಾಕರ್ ಹಾಗೂ ನಿಶಾ ವಿನೋದ್ ಪ್ರಭಾಕರ್.

ಈಗಾಗಲೇ ” ಲಂಕಾಸುರ ” ಚಿತ್ರದ ಟೀಸರ್, ಟ್ರೇಲರ್ ಹಾಗೂ ಹಾಡುಗಳು ಕನ್ನಡ ಸಿನಿರಸಿಕರ ಮನ ಗೆದ್ದಿದೆ. ಚಿತ್ರ ಯಾವಾಗ ಬಿಡುಗಡೆಯಾಗುತ್ತದೆ?

ಎಂಬ ಕಾತುರ ಅಭಿಮಾನಿಗಳಿಗಿದೆ. ಅನುಭವಿ ಕಲಾವಿದರ ಅಭಿನಯ ಹಾಗೂ ಉತ್ತಮ ತಂತ್ರಜ್ಞರ ಕಾರ್ಯವೈಖರಿಯಲ್ಲಿ “ಲಂಕಾಸುರ” ಚಿತ್ರ ಅದ್ದೂರಿಯಾಗಿ ಮೂಡಿಬಂದಿದೆ.

Categories
ಸಿನಿ ಸುದ್ದಿ

ಬನ್ ಟೀ ಸವಿದ ನಾಗತಿಹಳ್ಳಿ! ಹೊಸಬರ ಸಿನಿಮಾ ಟ್ರೇಲರ್ ರಿಲೀಸ್

ಯುವ ಸಿನಿಮೋತ್ಸಾಹಿ ತಂಡವೊಂದು ಸೇರಿ ಮಾಡಿರುವ ಬನ್ ಟೀ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಟ್ರೇಲರ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭಶಯ ಕೋರಿದ್ದಾರೆ. ಆನ್ ಲೈನ್ ಎಡಿಟರ್ ಆಗಿ ಗುರುತಿಸಿಕೊಂಡಿರುವ ಖಾಕಿ ಸಿನಿಮಾ ಬರಹಗಾರದಲ್ಲಿ ಕೆಲಸ ನಿರ್ವಹಿಸಿರುವ ಉದಯ್ ಕುಮಾರ್ ಪಿಎಸ್ ಎರಡನೇ ಹೆಜ್ಜೆ ಇದು. ಕಾರ್ಮೋಡ ಸರಿದು ಎಂಬ ಚಿತ್ರದ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದ ಉದಯ್ ಬನ್ ಟೀ ಎಂಬ ವಿಭಿನ್ನ ಶೀರ್ಷಿಕೆ ಮೂಲಕ ಮತ್ತೊಮ್ಮೆ ಚಿತ್ರರಸಿಕರನ್ನು ರಂಜಿಸಲು ಸಜ್ಜಾಗಿದ್ದಾರೆ.

ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಮಾತನಾಡಿ, ಉದಯ್ ಹೇಳಿದ ಕಥೆ ಇಷ್ಟವಾಯ್ತು. ಹಂಚಿ ತಿನ್ನುವ ಅಗತ್ಯವಿರುವ ಈ ದಿನಗಳಲ್ಲಿ ಹಂಚಿ ಉಣ್ಣದೇ ಬರೀ ಬಾಚಿಕೊಳ್ಳುವ ಮನಸ್ಥಿತಿ, ಅದರಿಂದ ಉಂಟಾಗುವ ಸಾಮಾಜಿಕ ತೊಂದರೆಗಳ ಸುತ್ತ ಕಥೆ ಸಾಗುತ್ತದೆ. ಉದಯ್ ನಿರ್ಮಾಪಕರು ಸಿಕ್ತಾರೆ ಅಂತಾ ಫ್ಯಾಷನ್ ಗೋಸ್ಕರ್ ಸಿನಿಮಾ ಮಾಡಿಲ್ಲ. ಆಳವಾಗಿ ತಾಂತ್ರಿಕವಾಗಿ ಚಿತ್ರ ಮಾಡಿದ್ದಾರೆ. ತಮ್ಮದೇ ಟೆಂಟ್ ಸಿನಿಮಾ ಸೂಲ್ಕ್ ಪ್ರತಿಭೆಗಳು ಸೇರಿ ಬನ್ ಟೀ ಚಿತ್ರ ಮಾಡಿದ್ದು, ಇಡೀ ತಂಡಕ್ಕೆ ಒಳ್ಳೆದಾಗಲಿ ಎಂದರು.

ನಿರ್ದೇಶಕ ಉದಯ್ ಮಾತನಾಡಿ, ಬನ್ ಟೀ ನಿರ್ದೇಶಕನಾಗಿ ನನ್ನ ಎರಡನೇ ಸಿನಿಮಾ. ಆನ್ ಲೈನ್ ಎಡಿಟರ್ ಆಗಿ ಎಡಿಟರ್ ಆಗಿ ಕೆಲಸ ಮಾಡ್ತಿದ್ದು, ಬನ್ ಟೀ ಏಳು ವರ್ಷದ ಕನಸು. ಸಿನಿಮಾ ಅವಕಾಶಕ್ಕಾಗಿ ಗಾಂಧಿನಗರ ಸುತ್ತುವಾಗ ಬನ್ ಟೀ ನಮ್ಮ ಊಟ.. ಟೈಟಲ್ ಡಿಫರೆಂಟಾಗಿದೆ. ಶೀರ್ಷಿಕೆ ವಿಭಿನ್ನವಾಗಿ ಇದ್ದರೇ ಕುತೂಹಲ ಮೂಡುತ್ತದೆ. ಟೈಟಲ್ ಬಗ್ಗೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿದೆ. ಕಷ್ಟಪಟ್ಟು ಓದು ಅನ್ನುವ ಬದಲು ಇಟ್ಟಪಟ್ಟು ಓದು ಅನ್ನೋದನ್ನು ಯಾಕೆ ಹೇಳುವುದಿಲ್ಲ ಅನ್ನೋದೇ ಚಿತ್ರದ ಒಟ್ಟಾರೆ ಸಾರಾಂಶ ಎಂದು ತಿಳಿಸಿದರು.

ನೈಜ ಘಟನೆಯಿಂದ ಸ್ಫೂರ್ತಿ ಪಡೆದು ರೂಪಿಸಿರುವ ಬನ್ ಟೀ ಸಿನಿಮಾಗೆ ಉದಯ್ ಕಥೆ ಬರೆದು ನಿರ್ದೇಶನದ ಜೊತೆಗೆ ಸಂಕಲನ ಜವಾಬ್ದಾರಿ ಕೂಡ ನಿಭಾಯಿಸಿದ್ದಾರೆ. ಮೌರ್ಯ, ತನ್ಮಯ್, ಉಮೇಶ್ ಸಕ್ಕರೆನಾಡು, ಶ್ರೀದೇವಿ, ನಿಶಾ, ಗುಂಡಣ್ಣ, ಸುನಿಲ್ ನಟಿಸಿರುವ ಈ ಚಿತ್ರಕ್ಕೆ ರಾಧಾಕೃಷ್ಣ ಬ್ಯಾನರ್ ಆರ್ ಕೇಶವ ನಿರ್ಮಾಣ ಮಾಡಿದ್ದು, ರಾಜರಾವ್ ಅಂಚಲ್ಕರ್ ಕ್ಯಾಮೆರಾ, ಪ್ರದ್ಯೋತನ್ ಸಂಗೀತ ಸಿನಿಮಾಕ್ಕಿದೆ. ಪ್ರಾಮಿಸಿಂಗ್ ಟ್ರೇಲರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಬನ್ ಟೀ ಸಿನಿಮಾವನ್ನು ಏಪ್ರಿಲ್ ತಿಂಗಳಾಂತ್ಯಕ್ಕೆ ತೆರೆಗೆ ತರುವ ಪ್ರಯತ್ನದಲ್ಲಿದೆ ಚಿತ್ರತಂಡ.

Categories
ಸಿನಿ ಸುದ್ದಿ

ನಿರ್ದೇಶಕ ಹೇಮಂತ್ ಹೆಗಡೆ ಅವರ ನೆಟ್ ವರ್ಕ್ ಸಿಕ್ತು!

ಪ್ರಭಂಜನ ಅವರು ನಿರ್ಮಿಸುತ್ತಿರುವ, ಹೇಮಂತ್ ಹೆಗಡೆ ನಿರ್ದೇಶಿಸುತ್ತಿರುವ “ನೆಟ್ ವರ್ಕ್” ಚಿತ್ರಕ್ಕೆ ಚಾಲನೆ ದೊರಕಿದೆ.

“ನೆಟ್ ವರ್ಕ್” ಒಂದು ಕುಟುಂಬದ ಕಥೆಯಲ್ಲ. ಸಾಕಷ್ಟು ಜನರು ಎದುರಿಸುತ್ತಿರುವ ಸಮಸ್ಯೆ. ಮೊಬೈಲ್ ನಿಂದ ಉಪಯೋಗ ಇರುವ ಹಾಗೆ, ದುಷ್ಪರಿಣಾಮಗಳು ಹೆಚ್ಚಿದೆ. ಮೊಬೈಲ್ ಬಂದ ಮೇಲೆ ಮಕ್ಕಳು ಆಟವಾಡುವುದನ್ನು ಮರೆತಿದ್ದಾರೆ. ಮನೆಯಲ್ಲೂ ಅಷ್ಟೇ . ಮೂರು ಜನ ಇದ್ದರೆ, ಮೂರು ಕಡೆ ಮೊಬೈಲ್ ನೋಡುವುದರಲ್ಲಿ ತಲೀನರಾಗಿರುತ್ತಾರೆ.

ಹೀಗೆ ಈ ಸಮಸ್ಯೆಗಳ ಸುತ್ತ “ನೆಟ್ ವರ್ಕ್” ಚಿತ್ರದ ಕಥೆ ಸಾಗುತ್ತದೆ. ಮೂವತ್ತು ವರ್ಷಗಳ ಹಿಂದೆ ನಾವು ಗೆಳೆಯರು ಸೇರಿ “ದೃಷ್ಟಿ” ಎಂಬ ಸಂಸ್ಥೆ ಕಟ್ಟಿದ್ದೆವು. ಆ ತಂಡದಲ್ಲಿದ್ದ ಬಹುತೇಕರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಸಾಫ್ಟ್ ವೇರ್ ಕಂಪನಿ ಮಾಲೀಕರಾಗಿರುವ ಪ್ರಭಂಜನ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಮೇ 15 ರಿಂದ ಬೆಂಗಳೂರಿನಲ್ಲೇ ಚಿತ್ರೀಕರಣ ಆರಂಭವಾಗಲಿದೆ ಎಂದು ನಟ ಹಾಗೂ ನಿರ್ದೇಶಕ ಹೇಮಂತ್ ಹೆಗಡೆ ಹೇಳಿದರು.

ಹೇಮಂತ್ ಹೆಗಡೆ ಅವರು ಹೇಳಿದ ಕಥೆ ಇಷ್ಟವಾಗಿ ನಿರ್ಮಾಣಕ್ಕೆ ಮುಂದಾದೆ ಎಂದರು ನಿರ್ಮಾಪಕ ಪ್ರಭಂಜನ.

ಚಿತ್ರದಲ್ಲಿ ನಟಿಸುತ್ತಿರುವ ರಾಜೇಶ್ ನಟರಂಗ, ಸುಚೀಂದ್ರ ಪ್ರಸಾದ್, ಕೆ.ಎಂ.ಚೈತನ್ಯ, ಸಾಕ್ಷಿ ಮೇಘನ, ರಕ್ಷಿಕಾ ಮುಂತಾದವರು ತಮ್ಮ ಪಾತ್ರದ ಕುರಿತು ಮಾತನಾಡಿದರು.

Categories
ಸಿನಿ ಸುದ್ದಿ

ಕನ್ನಡ ಸಿನಿರಂಗಕ್ಕೆ ವಜ್ರಮುನಿ ಮೊಮ್ಮಗನ ಆಗಮನ: ಯಲಾಕುನ್ನಿ ಸಿನಿಮಾಗೆ ಕೋಮಲ್ ಹೀರೋ

ಸೆನ್ಸೇಷನಲ್ ಸ್ಟಾರ್ ಕೋಮಲ್ ಕುಮಾರ್ ಮೊಟ್ಟ ಮೊದಲ ಬಾರಿಗೆ ದ್ವಿಪಾತ್ರದಲ್ಲಿ ನಟಿಸುತ್ತಿರುವ “ಯಲಾ ಕುನ್ನಿ” ಚಿತ್ರದ ಮುಹೂರ್ತ ಸಮಾರಂಭ ವಿಜಯನಗರದ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿದೆ. ಚಿತ್ರಕ್ಕೆ ಕನ್ನಡ ಚಿತ್ರರಂಗದ ದಂತಕಥೆ ವಜ್ರಮುನಿ ಅವರ ಕುಟುಂಬದ ಎಲ್ಲ ಸದಸ್ಯರು ಆಗಮಿಸಿ ಚಿತ್ರಕ್ಕೆ ಶುಭ ಕೋರಿದ್ದು ವಿಶೇಷವಾಗಿತ್ತು. ವಜ್ರಮುನಿ ಅವರ ಧರ್ಮಪತ್ನಿ ಶ್ರೀಮತಿ ಲಕ್ಷ್ಮೀ ವಜ್ರಮುನಿ ಕ್ಯಾಮರಾ ಚಾಲನೆ ಮಾಡಿದರೆ, ಮೊದಲ ಸನ್ನಿವೇಶಕ್ಕೆ ವಜ್ರಮುನಿ ಅವರ ಹಿರಿಯ ಪುತ್ರ ವಿಶ್ವನಾಥ್ ಆರಂಭಫಲಕ ತೋರಿದರು, ವಜ್ರಮುನಿ ಯವರ ಕಿರಿಯ ಪುತ್ರ ಜಗದೀಶ್ ವಜ್ರಮುನಿ ಮತ್ತು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಆನಂತರ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು.

“ಯಲಾಕುನ್ನಿ” ಖ್ಯಾತ ನಟ ವಜ್ರಮುನಿ ಅವರ ಚಿತ್ರಗಳಲ್ಲಿ ಹೆಚ್ಚಾಗಿ ಬಳಸುತ್ತಿದ್ದ ಪದ. ಈಗ ಆ ಪದವೇ ಚಿತ್ರದ ಶೀರ್ಷಿಕೆಯಾಗಿದೆ. “ಮೇರಾ ನಾಮ್ ವಜ್ರಮುನಿ..!” ಎಂಬ ಅಡಿಬರಹ ಕೂಡ ಇದೆ.

ನಾನು ಮೊದಲ ಬಾರಿಗೆ ದ್ವಿಪಾತ್ರದಲ್ಲಿ ಅಭಿನಯಿಸುತ್ತಿದ್ದೇನೆ. ನಿರ್ದೇಶಕ ಪ್ರದೀಪ್ ಬಹಳ ಚೆನ್ನಾಗಿ ಕಥೆ , ಚಿತ್ರಕಥೆ , ಸಂಭಾಷಣೆ ಬರೆದಿದ್ದಾರೆ. ಚಿತ್ರದ ಮುಕ್ಕಾಲು ಭಾಗ 1981 ರ ಕಾಲಘಟ್ಟದಲ್ಲಿ ನಡೆಯುವ ಕಥೆ. ಶ್ರೀರಂಗಪಟ್ಟಣ, ಮೈಸೂರು ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ. ಗಂಜಾಂ ಬಳಿ ಪುರಾತನ ದೇವಾಲಯವಿದ್ದು, ಆ ದೇವಾಲಯದಲ್ಲೇ ಹೆಚ್ಚಿನ ಚಿತ್ರೀಕರಣವಾಗಲಿದೆ. ಚಿತ್ರಕ್ಕಾಗಿ ವಿಶೇಷ ಸೆಟ್ ಸಹ ಹಾಕಲಾಗುವುದು ನಮ್ಮ ಈ ಪ್ರಯತ್ನಕ್ಕೆ ನಿಮ್ಮ ಬೆಂಬಲವಿರಲಿ ಎಂದು ನಾಯಕ ಕೋಮಲ್ ಕುಮಾರ್ ತಿಳಿಸಿದರು.

ನಾನು ಕನ್ನಡದ ಹಿರಿಯ ನಿರ್ದೇಶಕರ ಬಳಿ ಕೆಲಸ ಮಾಡಿದ್ದೀನಿ . ಇದು ನನ್ನ ನಿರ್ದೇಶನದ ಮೊದಲ ಚಿತ್ರ. ಈ ಹಿಂದೆ “ಸಡಗರ” ಚಿತ್ರ ನಿರ್ಮಿಸಿದ್ದ ಮಹೇಶ್ ಗೌಡ್ರು ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಮತ್ತೊಂದು ವಿಶೇಷವೆಂದರೆ ವಜ್ರಮುನಿ ಯವರ ಮೊಮ್ಮಗ ಆಕರ್ಶ್ ಈ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಹೊಸ ಪ್ರತಿಭೆ ನಿಸರ್ಗ ಈ ಚಿತ್ರದ ನಾಯಕಿ.‌ ಯತಿರಾಜ್ ಜಗ್ಗೇಶ್, ಫ್ರೆಂಚ್ ಬಿರಿಯಾನಿ ಮಹಾಂತೇಶ್ , ಜಯಸಿಂಹ ಮುಸುರಿ, ಅರವಿಂದ್ ರಾವ್, ಮಂಜು ಪಾವಗಡ, ರಾಜು ತಾಳಿಕೋಟೆ, ಶಿವರಾಜ್, ಬಿರಾದರ್, ವೆಂಕಟೇಶ್ ಪ್ರಸಾದ್ ,ಉಮೇಶ್ ಸಕ್ಕರೆನಾಡು, ಅನಿಲ್ ಯಾದವ್ ಇನ್ನು ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.

ಧರ್ಮವಿಶ್ ಸಂಗೀತ ‌ನಿರ್ದೇಶನ ಹಾಗೂ ಉದಯ್ ಲೀಲಾ ಅವರ ಛಾಯಾಗ್ರಹಣ, ದೀಪು ಎಸ್. ಕುಮಾರ್ ಸಂಕಲನ , ವಿನೋದ್ ರವರ ಸಾಹಸ ಈ ಚಿತ್ರಕ್ಕಿದೆ. ಈ ಚಿತ್ರದಲ್ಲಿ ಕೋಮಲ್ ಕುಮಾರ್ ವಜ್ರಮುನಿಯಾದರೆ, ಅವರ ಬಲಗೈ ಬಂಟನಾಗಿ ಜಯಸಿಂಹ ಮುಸುರಿ “ಕನೆಕ್ಷನ್ ಕಾಳಪ್ಪ” ನಾಗಿ ಕಾಣಿಸಿ ಕೊಳ್ಳಲಿದ್ದಾರೆ. ಚಿತ್ರದ ಹಿನ್ನಲೆ ಗೋವಿನ ಹಾಡಿನಲ್ಲಿ ಬರುವ ವ್ಯಾಘ್ರ ಹುಲಿ ಅರ್ಭುತ ಮತ್ತು ಸತ್ಯವೇ ಭಗವಂತನೆಂದ ಪುಣ್ಯಕೋಟಿಯ ಕಥೆಯಿಂದ ಪ್ರೇರಿತವಾಗಿದೆ. ಏಪ್ರಿಲ್ ನಲ್ಲಿ ಚಿತ್ರೀಕರಣ ಆರಂಭವಾಗಲಿದೆ ಎಂದು ನಿರ್ದೇಶಕ ಪ್ರದೀಪ್ ತಿಳಿಸಿದರು.

ಇದು ನನ್ನ ಎರಡನೇ ನಿರ್ಮಾಣದ ಚಿತ್ರ . ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಮಹೇಶ್ ಗೌಡ್ರು.

ನಾಯಕಿ ನಿಸರ್ಗ ಹಾಗೂ ಚಿತ್ರದಲ್ಲಿ ನಟಿಸುತ್ತಿರುವ ಯತಿರಾಜ್, ಮಾಹಂತೇಶ್, ಆಕರ್ಶ್,‌ ಅರವಿಂದ್ ರಾವ್, ಮಂಜು ಪಾವಗಡ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಛಾಯಾಗ್ರಾಹಕ ಉದಯ್ ಲೀಲಾ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ನನ್ನ ಮೊಮ್ಮಗ ಆಕರ್ಶ್ ಈ ಚಿತ್ರದಲ್ಲಿ ಕೋಮಲ್ ಅವರ ಮಗನ ಪಾತ್ರದಲ್ಲಿ ಅಭಿನಯಿಸುತ್ತಿದ್ದಾನೆ. ಅವನಿಗೆ ಹಾಗೂ ಇಡೀ ತಂಡಕ್ಕೆ ಒಳ್ಳೆಯದಾಗಲಿ ಎಂದರು ಶ್ರೀಮತಿ ಲಕ್ಷ್ಮೀ ವಜ್ರಮುನಿ.

Categories
ಸಿನಿ ಸುದ್ದಿ

ಫುಲ್ ಮೀಲ್ಸ್ ಫಸ್ಟ್ ಲುಕ್ ಪೋಸ್ಟರ್ ಈಸ್ ಬ್ಯೂಟಿಫುಲ್! ಸಖತ್ ಉಂಟು ಲಿಖಿತ್…

“ಸಂಕಷ್ಟಕರ ಗಣಪತಿ” ಹಾಗೂ “ಫ್ಯಾಮಿಲಿ ಪ್ಯಾಕ್” ಚಿತ್ರಗಳ ಮೂಲಕ ಜನಮನ ಗೆದ್ದಿರುವ ಲಿಖಿತ್ ಶೆಟ್ಟಿ, ನಿರ್ಮಿಸಿ ಜೊತೆಗೆ ನಾಯಕರಾಗೂ ನಟಿಸುತ್ತಿರುವ ಚಿತ್ರ “ಫುಲ್ ಮೀಲ್ಸ್”. ಸದ್ಯ ” ಫುಲ್ ಮೀಲ್ಸ್” ಚಿತ್ರದ ನೂತನ ಪೋಸ್ಟರ್ ಬಿಡುಗಡೆಯಾಗಿದೆ.

ಪೋಸ್ಟರ್ ಗೆ ಎಲ್ಲಾ ಕಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈಗಾಗಲೇ ಈ ಚಿತ್ರದ ಅರ್ಧದಷ್ಟು ಭಾಗದ ಚಿತ್ರೀಕರಣ ಮುಗಿದಿದೆ.

ಎನ್ ವಿನಾಯಕ ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಗುರುಕಿರಣ್ ಸಂಗೀತ ನಿರ್ದೇಶನ ಹಾಗೂ ಮನೋಹರ್ ಜೋಶಿ ಅವರ ಛಾಯಾಗ್ರಹಣವಿದೆ.

ಲಿಖಿತ್ ಶೆಟ್ಟಿ, ಖುಷಿ ರವಿ, ತೇಜಸ್ವಿನಿ ಶರ್ಮ, ರಂಗಾಯಣ ರಘು, ಸಾಧುಕೋಕಿಲ, ವಿಜಯ್ ಚೆಂಡೂರ್, ರಾಜೇಶ್ ನಟರಂಗ ಹಾಗು

ರಮೇಶ್ ಪಂಡಿತ್, ಹೊನ್ನವಳ್ಳಿ ಕೃಷ್ಣ, ಚಂದ್ರಕಲಾ ಮೋಹನ್, ಸುಜಯ್ ಶಾಸ್ತ್ರಿ, ಗಣೇಶ್ ರಾವ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Categories
ಸಿನಿ ಸುದ್ದಿ

ಅಪ್ಪು ಎಕ್ಸ್ ಪ್ರೆಸ್ ಆಂಬುಲೆನ್ಸ್ ಕೊಡುಗೆ: ಪ್ರಕಾಶ್ ರಾಜ್ ಫೌಂಡೇಶನ್ ಆಶಯ ಈಡೇರಿಕೆ

ಡಾ.ಪುನೀತ್ ರಾಜಕುಮಾರ್ ಅವರ ಹೆಸರಲ್ಲಿ ಆಂಬುಲೆನ್ಸ್ ಕೊಡಬೇಕೆಂಬ ನಟ ಪ್ರಕಾಶ್ ರಾಜ್ ಮತ್ತು ಅವರ ಗೆಳೆಯರ ಬಯಕೆ ಈಡೇರಿದೆ. ಈ ಕುರಿತು ಸ್ವತಃ ಪ್ರಕಾಶ್ ರಾಜ್ ಪತ್ರವೊಂದನ್ನು ಬರೆದಿದ್ದಾರೆ…

ನಮಸ್ಕಾರ!

ತಮ್ಮ ಸಜ್ಜನಿಕೆಯಿಂದ, ಧಾರಾಳ ಮನಸ್ಸಿನಿಂದ ಹಾಗೂ ಉತ್ತಮ ವ್ಯಕ್ತಿತ್ವದಿಂದಾಗಿ ನಮ್ಮೆಲ್ಲರ ನಡುವೆ ಎಂದೆಂದೂ ಮಾಸದ ನೆನಪಾಗಿ ಉಳಿದಿರುವವರು ಡಾ ಪುನೀತ್ ರಾಜಕುಮಾರ್ — ನಮ್ಮೆಲ್ಲರ ಪ್ರೀತಿಯ ಅಪ್ಪು. ಅವರು ಯಾವಾಗಲೂ ನಮ್ಮ ಜೊತೆ ಇರಬೇಕು ಅಂದರೆ ಅವರು ಮಾಡುತ್ತಿದ್ದ ಒಳ್ಳೆಯ ಕೆಲಸಗಳನ್ನು ಮುಂದುವರೆಸಿದರೆ ಮಾತ್ರ ಸಾಧ್ಯ ಆಗುತ್ತದೆ.


ಈ ಒಂದು ಆಶಯದಿಂದ ಶುರುವಾಗಿದ್ದು ಅಪ್ಪು ಎಕ್ಸ್ ಪ್ರೆಸ್ ಆಂಬುಲೆನ್ಸ್. ಕರ್ನಾಟಕದ ಪ್ರತೀ ಜಿಲ್ಲೆಯಲ್ಲೂ ಅಪ್ಪು ಹೆಸರಿನ ಆಂಬುಲೆನ್ಸ್ ಇರಬೇಕು ಎನ್ನುವುದು ನನ್ನ ಹಾಗೂ ನಮ್ಮ ಪ್ರಕಾಶ್ ರಾಜ್ ಫೌಂಡೇಶನ್ನಿನ ಕನಸು.
ಮೊದಲನೇ ಆಂಬುಲೆನ್ಸ್ ಅನ್ನು ನಮ್ಮ ಹೆಮ್ಮೆಯ ಸಾಂಸ್ಕೃತಿಕ ನಗರವಾದ ಮೈಸೂರಿಗೆ ಕೊಡುಗೆ ನೀಡಿದೆವು. ಈಗ ಅದರ ಮುಂದುವರೆದ ಭಾಗವಾಗಿ ಇನ್ನೂ 5 ಆಂಬುಲೆನ್ಸ್ ನಮ್ಮ ರಾಜ್ಯದ ಐದು ಜಿಲ್ಲೆಗಳಿಗೆ ಜೀವ ಉಳಿಸುವಂಥ ಗುರುತರ ಹೊಣೆ ಹೊತ್ತು ಸಾಗುತ್ತಿವೆ.

ಈ ಬಾರಿ ಬೀದರಿನ ಗುರು ನಾನಕ್ ಆಸ್ಪತ್ರೆ, ಕಲಬುರ್ಗಿಯ ಡಾ ಓಮ್ ಇಂಡೋ ಜರ್ಮನ್ ಆಸ್ಪತ್ರೆ ಚಿತ್ತಾಪುರ, ಉಡುಪಿಯ ಲೊಂಬಾರ್ಡ್ ಮೆಮೋರಿಯಲ್ ಆಸ್ಪತ್ರೆ, ಕೊಳ್ಳೇಗಾಲದ ‘ಹೋಲಿ ಕ್ರಾಸ್ ಕಾನ್ವೆಂಟ್ ಆಸ್ಪತ್ರೆ’. ಮತ್ತು ಕೊಪ್ಪಳದ ಗವಿಸಿದ್ಧೇಶ್ವರ ಆಯುರ್ವೇದಿಕ್ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ – ಈ ಸಂಸ್ಥೆಗಳಿಗೆ ಆಂಬುಲೆನ್ಸ್ ಹಸ್ತಾಂತರಿಸಿದ್ದೇವೆ,
ಈ ಬಾರಿ ಈ ಕನಸು ನನಸಾಗುವಲ್ಲಿ ನನ್ನನ್ನು ಮೀರಿ ಇನ್ನೂ ಹಲವರ ಪಾತ್ರ ಇದೆ. ನಮ್ಮ ಪ್ರಕಾಶ್ ರಾಜ್ ಫೌಂಡೇಶನ್ ನ ಈ ಕನಸಿಗೆ ಜೊತೆಯಾಗಿ ನಿಂತಿರುವವರು ತಮ್ಮ ಚಿರಂಜೀವಿ ಚಾರಿಟೇಬಲ್ ಟ್ರಸ್ಟ್ ಮೂಲಕ ನಮ್ಮ ತೆಲುಗಿನ ಮೆಗಾ ಸ್ಟಾರ್ ಚಿರಂಜೀವಿ ಅವರಿದ್ದಾರೆ, ಜೊತೆಗೆ ತಮಿಳಿನ ಸೋದರ ನಟ ಸೂರ್ಯ ಅವರು ತಮ್ಮ 2 ಡಿ ಎಂಟರ್ಟೈನ್ಮೆಂಟ್ ಮೂಲಕ ನೀಡಿದರೆ, ನಮ್ಮ ಕನ್ನಡದ ಹೆಮ್ಮೆಯ ನಾಯಕ ನಟ ಯಶ್ ಅವರು ತಮ್ಮ ಸಂಸ್ಥೆ ‘ಯಶೋಮಾರ್ಗ’ ದ ಮೂಲಕ ಬಹಳ ದೊಡ್ಡ ಸಹಾಯವಾಗಿ ನಿಂತಿದ್ದಾರೆ.

ಜೊತೆಗೆ ಅವರ ಸ್ನೇಹಿತ ನಿರ್ಮಾಪಕರಾದ ವೆಂಕಟ್ ಅವರು ತಮ್ಮ ಕೆವಿಎನ್ ಫೌಂಡೇಶನ್ ಮೂಲಕ ಬೆಂಬಲ ನೀಡಿದ್ದಾರೆ.
“ಪ್ರಕಾಶ್ ಸಾರ್, ಇದು ಬರೀ ನಿಮ್ಮ ಕನಸಲ್ಲ ನಮ್ಮದೂ ಕೂಡ” ಅಂತ ಅವರ ಸಂಸ್ಥೆ ‘ಯಶೋಮಾರ್ಗ’ದ ಮೂಲಕ ಇದರಲ್ಲಿ ಧಾರಾಳ ಸಹಾಯ ಹಸ್ತ ಚಾಚಿರುವ ಯಶ್ ಅವರಿಗೆ ಮತ್ತೆ ನನ್ನ ಎಲ್ಲಾ ಸ್ನೇಹಿತರಿಗೂ ಧನ್ಯವಾದಗಳು.
ಈಗ ಈ ಆಂಬುಲೆನ್ಸ್ ಗಳು ಅವುಗಳು ಸೇರಬೇಕಾದ ಆಸ್ಪತ್ರೆಗಳತ್ತ ಹೊರಟು ಬಿಟ್ಟಿವೆ. ಇದನ್ನು ದೊಡ್ಡ ಕಾರ್ಯಕ್ರಮ ಮಾಡಿ ಹಸ್ತಾಂತರ ಮಾಡಬಹುದಿತ್ತು. ಆದರೆ ಆ ಕಾರ್ಯಕ್ರಮಕ್ಕೆ ಆಗುವ ಖರ್ಚಿನಲ್ಲೇ ಇನ್ನೊಂದು ಆಂಬುಲೆನ್ಸ್ ವ್ಯವಸ್ಥೆ ಮಾಡಿಬಿಡಬಹುದು ಎನ್ನುವುದು ನನ್ನ ಹಾಗೂ ಯಶ್ ಅವರ ಅನಿಸಿಕೆ. ಹಾಗಾಗಿ ಈ ಪತ್ರಿಕಾ ಪ್ರಕಟಣೆ ನೀಡುತ್ತಾ ನಿಮ್ಮೊಂದಿಗೆ ನಮ್ಮ ಈ ಕೈಂಕರ್ಯದ ಮಾಹಿತಿಯನ್ನ ಹಂಚಿಕೊಳ್ಳುತ್ತಾ ಇದೀವಿ.

ವಿಶ್ವಾಸದಿಂದ,
ನಿಮ್ಮ ಪ್ರಕಾಶ್ ರಾಜ್

Categories
ಸಿನಿ ಸುದ್ದಿ

ಏಕಾಂಗಿ ಸಂಚಾರಿಯ ಭಾವುಕ ಪಯಣ! ನಿರ್ದೇಶಕ ಕಿರಣ್ ಗೋವಿ ಹೃದಯಾಘಾತದಿಂದ ನಿಧನ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದ ಕಿರಣ್ ಗೋವಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ನಾಗರಭಾವಿಯಲ್ಲಿದ್ದ ಸಿನಿಮಾ ಕಚೇರಿಯಲ್ಲಿ ಅವರು ಕೆಲಸ‌ ಮಾಡುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಆರಂಭದಲ್ಲಿ ಆರ್ಕೇಸ್ಟ್ರಾದಲ್ಲಿ ನಟ‌ ರವಿಶಂಕರ್ ಗೌಡ ಅವರು ಗಾಯಕರಾಗಿದ್ದ ಸಂದರ್ಭದಲ್ಲಿ ನಿರೂಪಕರಾಗಿದ್ದ ಕಿರಣ್ ಗೋವಿ, ಅವರು ತಮ್ಮ ಆತ್ಮೀಯ ಗೆಳೆಯ ರವಿಶಂಕರ್ ಗೌಡ ಅವರಿಗೆ ‘ಪಯಣ’ ಎಂಬ ಸದಭಿರುಚಿಯ ಸಿನಿಮಾ ನಿರ್ದೇಶಿಸುವ ಮೂಲಕ ನಿರ್ದೇಶಕರಾಗಿ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು. ಆ ಸಿನಿಮಾಗೆ ವಿ. ಹರಿಕೃಷ್ಣ ಸಂಗೀತ ನಿರ್ದೇಶನ ಮಾಡಿದ್ದರು. ಅ ಚಿತ್ರದ ಹಾಡುಗಳು ಸುಪರ್ ಹಿಟ್ ಆಗುವುದರ ಜೊತೆಗೆ ಸಿನಿಮಾ ಕೂಡ ಸುದ್ದಿಯಾಗಿತ್ತು.

ಆ ಸಿನಿಮಾ‌ ಬಳಿಕ ಅವರು ‘ಸಂಚಾರಿ’ ಸಿನಿಮಾ ನಿರ್ದೇಶಿಸಿದ್ದರು. ಆ ಚಿತ್ರದ ಹಾಡುಗಳು ಸಹ ಎಲ್ಲೆಡೆ ಗಮನ ಸೆಳೆದಿದ್ದವು. ನಂತರದ ದಿನಗಳಲ್ಲಿ ಕಿರಣ್ ಗೋವಿ ಅವರು ಶ್ರೀನಗರ ಕಿಟ್ಟಿ ಅವರಿಗೆ ‘ಪಾರು ವೈಫ್ ಆಫ್ ದೇವದಾಸ್’ ಎಂಬ ಸಿನಿಮಾ ಮಾಡಿದ್ದರು. ಆಮೇಲೆ ‘ಯಾರಿಗುಂಟು ಯಾರಿಗಿಲ್ಲ’ ಸಿನಿಮಾ‌ ನಿರ್ದೇಶನ ಮಾಡಿದ್ದರು. ಸದ್ಯ ಹೊಸ ಸಿನಿಮಾ ನಿರ್ದೇಶನ ಮಾಡುವ ತಯಾರಿಯಲ್ಲಿದ್ದರು.

ಕಿರಣ್ ಗೋವಿ ಪ್ರತಿಭಾವಂತ ನಿರ್ದೇಶಕ. ಅವರಿಗೆ ಕಥೆ ಹಾಗು, ಸಂಗೀತ ಜ್ಞಾನವಿತ್ತು. ಕನ್ಮಡ‌ಸಿನಿಮಾ ರಂಗದಲ್ಲಿ ಒಳ್ಳೆಯ ಸಿನಿಮಾ ಕೊಡಬೇಕು ಎಂಬ ಉತ್ಸಾಹದಲ್ಲಿದ್ದರು. ಇಂದು ಹೃದಯಾಘಾತದಿಂದ ತನ್ನ ಬದುಕಿನ ಪಯಣ ಮುಗಿಸಿ ಬಾರದೂರಿಗೆ ತೆರಳಿದ್ದಾರೆ.

ಅವರ ಆತ್ಮಕ್ಕೆ ಕನ್ನಡ ನಿರ್ದೇಶಕರು, ನಟರು, ನಿರ್ಮಾಪಕರು ಶಾಂತಿ ಕೋರಿದ್ದಾರೆ.

error: Content is protected !!