Categories
ಸಿನಿ ಸುದ್ದಿ

ದೂರದರ್ಶನ ಟ್ರೇಲರ್ ಬಂತು: ಮಾರ್ಚ್ 3ಕ್ಕೆ ಚಿತ್ರ ದರ್ಶನ…

ಸುಕೇಶ್ ಶೆಟ್ಟಿ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ದೂರದರ್ಶನ’ ಸಿನಿಮಾ ಸ್ಯಾಂಡಲ್ ವುಡ್ ಅಂಗಳದಲ್ಲಿ ನಿರೀಕ್ಷೆ ಹುಟ್ಟಿಸಿದೆ. ಮಾರ್ಚ್ 3ರಂದು ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಚಿತ್ರದಲ್ಲಿ ಪೃಥ್ವಿ ಅಂಬರ್ ಹಾಗೂ ಅಯಾನ ನಾಯಕ, ನಾಯಕಿಯಾಗಿ ನಟಿಸಿದ್ದಾರೆ. ಡ್ರಾಮಾ ಹಾಗೂ ಹ್ಯೂಮರ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.

ನಾಯಕ ಪೃಥ್ವಿ ಅಂಬರ್ ಮಾತನಾಡಿ, ಈ ಸಿನಿಮಾ ಎಲ್ಲರಿಗೂ ತುಂಬಾ ಹತ್ತಿರ ಆಗುತ್ತೆ. ಒಂದು ಕಾದಂಬರಿ ಓದಿದ ಅನುಭವವನ್ನು ಈ ಸಿನಿಮಾ ಎಲ್ಲರಿಗೂ ನೀಡುತ್ತೆ. ನಾನು ಮನು ಎಂಬ ಪಾತ್ರ ಮಾಡಿದ್ದೇನೆ. ಬಾಲ್ಯದಲ್ಲಿ ಮಾಡಿದ ತರಲೆ ಎಲ್ಲವನ್ನು ಈ ಚಿತ್ರದಲ್ಲಿ ಕಟ್ಟಿಕೊಡಲಾಗಿದೆ. ನಿರ್ದೇಶಕರು ತುಂಬಾ ಚೆನ್ನಾಗಿ ಈ ಸಿನಿಮಾವನ್ನು ಕಟ್ಟಿಕೊಟ್ಟಿದ್ದಾರೆ. ದೂರದರ್ಶನ ಒಂದು ಒಳ್ಳೆಯ ಕಟೆಂಟ್ ಸಿನಿಮಾ. ಲವ್ ಸ್ಟೋರಿ, ಕಾಮಿಡಿ, ಎಮೋಷನ್ಸ್ ಎಲ್ಲವೂ ಈ ಚಿತ್ರದಲ್ಲಿದೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡರು.

ನಾಯಕಿ ಅಯಾನ, ಈ ಸಿನಿಮಾ ನಮ್ಮ ನಿರ್ದೇಶಕರ ಡ್ರೀಮ್ ಪ್ರಾಜೆಕ್ಟ್. ಈ ಚಿತ್ರದಲ್ಲಿ ನನಗೆ ಅವಕಾಶ ಕೊಟ್ಟಿದಕ್ಕೆ ತುಂಬಾ ಧನ್ಯವಾದ ತಿಳಿಸುತ್ತೇನೆ. ಚಿತ್ರದಲ್ಲಿ ಮೈತ್ರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಸಿಂಪಲ್ ಹುಡುಗಿ ಪಾತ್ರ. ಲವ್ ಸ್ಟೋರಿ ಕೂಡ ಇದೆ. ಎಲ್ಲಾ ಕಲಾವಿದರೊಂದಿಗೆ ನಟಿಸಿದ್ದು ತುಂಬಾ ಖುಷಿ ಕೊಟ್ಟಿದೆ ಎಂದರು.

ನಿರ್ದೇಶಕ ಸುಕೇಶ್ ಶೆಟ್ಟಿ ಮಾತನಾಡಿ, ಈ ಸಿನಿಮಾ ಈ ಮಟ್ಟಿಗೆ ಬಂದು ನಿಂತಿದೆ ಅಂದರೆ ಕಾರಣ ನಮ್ಮ ನಿರ್ಮಾಪಕರು. ಅವರಿಗೆ ನಾನು ಧನ್ಯವಾದ ತಿಳಿಸುತ್ತೇನೆ. ಸಿನಿಮಾ ಮಾರ್ಚ್ 3ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರ ಒಂದಷ್ಟು ವಿಷಯಗಳಿಗೆ ಸ್ಪೆಷಲ್ ಎನಿಸಿಕೊಳ್ಳುತ್ತೆ. ರೆಗ್ಯೂಲರ್ ಸ್ಟೈಲ್ ಬಿಟ್ಟು ತುಂಬಾ ಆಪ್ತವಾಗೋ ಹಾಗೆ ಸಿನಿಮಾವನ್ನು ನರೇಟ್ ಮಾಡಲಾಗಿದೆ. ಎರಡು ಕಾಲು ಗಂಟೆ ಒಂದು ಊರೊಳಗೆ ಹೋಗಿ ಎಂಜಾಯ್ ಮಾಡಿದ ಅನುಭವವನ್ನು ಈ ಸಿನಿಮಾ ಪ್ರತಿಯೊಬ್ಬರಿಗೂ ನೀಡಲಿದೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡರು.

ನಿರ್ಮಾಪಕ ರಾಜೇಶ್ ಭಟ್ ಮಾತನಾಡಿ, ಈ ಸಿನಿಮಾ ಕೇವಲ ನನ್ನೊಬ್ಬನಿಂದ ಆಗಿಲ್ಲ. ತಾಂತ್ರಿಕ ವರ್ಗ, ಕಲಾವಿದರ ಸಹಕಾರ ಇವರೆಲ್ಲರಿಂದ ಈ ಸಿನಿಮಾ ಆಗಿದೆ. ನಿರ್ದೇಶಕ ಸುಕೇಶ್ ಶೆಟ್ಟಿ ಜೊತೆ ಕೆಲಸ ಮಾಡಿದ್ದು ತುಂಬಾ ಹೆಮ್ಮೆ ಎನಿಸುತ್ತೆ. ಎಲ್ಲರ ಸಪೋರ್ಟ್ ಸಿನಿಮಾ ಮೇಲೆ ಇರಲಿ ಎಂದರು.

ಉಗ್ರಂ ಮಂಜು ಮಾತನಾಡಿ, ಇಡೀ ತಂಡ ಶ್ರಮ ಹಾಗೂ ಪ್ರೀತಿಯಿಂದ ಮಾಡಿರುವ ಸಿನಿಮಾ ‘ದೂರದರ್ಶನ’. ಚಿತ್ರದಲ್ಲಿ ಕಿಟ್ಟಿ ಎಂಬ ಪಾತ್ರ ಮಾಡಿದ್ದೇನೆ. 80.90ರ ದಶಕದಲ್ಲಿ ನೋಡುವ ಸ್ನೇಹ, ದ್ವೇಷ ಜೊತೆಗೆ ಕುಟುಂಬದ ಕನಸನ್ನು ನೆರವೇರಿಸುವ ಹುಡುಗನ ಪಾತ್ರ. ಎಲ್ಲಾ ಕಲಾವಿದರು, ತಾಂತ್ರಿಕ ವರ್ಗದ ಸಹಕಾರದಿಂದ ಈ ಚಿತ್ರ ಈ ಮಟ್ಟಿಗೆ ಬಂದಿದೆ. ನಿರ್ದೇಶಕ ಸುಕೇಶ್ ಶೆಟ್ಟಿ ನನಗೆ ಕಥೆ ಹೇಳುವಾಗ ಏನು ಪ್ರಾಮಿಸ್ ಮಾಡಿದ್ದರೋ ಹಾಗೆಯೇ ಸಿನಿಮಾ ಮೂಡಿ ಬಂದಿದೆ. ಅವರ ಎಫರ್ಟ್ ನೋಡಿ ಹೆಮ್ಮೆ ಎನಿಸುತ್ತೆ. ಮಾರ್ಚ್ 3ರಂದು ಎಲ್ಲರೂ ಸಿನಿಮಾ ನೋಡಿ ನಮ್ಮ ತಂಡವನ್ನು ಪ್ರೋತ್ಸಾಹಿಸಿ ಎಂದರು.

ವಿ ಎಸ್ ಎಂಟರ್ಟೈನ್ಮೆಂಟ್ ಬ್ಯಾನರ್ ನಡಿ ರಾಜೇಶ್ ಭಟ್ ಚಿತ್ರವನ್ನು ನಿರ್ಮಾಣ ಮಾಡಿದ್ದು, ಉಗ್ರಂ ಮಂಜು ಕಾರ್ಯಕಾರಿ ನಿರ್ಮಾಣ ಚಿತ್ರಕ್ಕಿದೆ. ಉಗ್ರಂ ಮಂಜು, ಸುಂದರ್, ಹರಿಣಿ, ದೀಪಕ್ ರೈ ಪಾಣಾಜೆ, ರಘು ರಮಣಕೊಪ್ಪ, ಹುಲಿ ಕಾರ್ತಿಕ್, ಸೂರಜ್ ಮಂಗಳೂರು, ಸೂರ್ಯ ಕುಂದಾಪುರ ಒಳಗೊಂಡ ತಾರಾಗಣ ಚಿತ್ರದಲ್ಲಿದೆ. ಅರುಣ್ ಸುರೇಶ್ ಕ್ಯಾಮೆರಾ ವರ್ಕ್, ಪ್ರದೀಪ್ ಆರ್ ರಾವ್ ಸಂಕಲನ, ನಂದೀಶ್ ಟಿ ಜಿ ಸಂಭಾಷಣೆ, ವಾಸುಕಿ ವೈಭವ ಸಂಗೀತ ಚಿತ್ರಕ್ಕಿದೆ.

Categories
ಸಿನಿ ಸುದ್ದಿ

ಸಿನಿ ಬಜಾರ್ ಎಂಬ ಡಿಜಿಟಲ್ ಥಿಯೇಟರ್! ಇದು ನಿರ್ಮಾಪಕ ಸ್ನೇಹಿ ಓಟಿಟಿ…

ತಂತ್ರಜ್ಞಾನ ಮುಂದುವರಿದ ಹಾಗೆ ಜೀವನ‌ಶೈಲಿ ಕೂಡ ಬದಲಾಗುತ್ತಿದೆ. ಜನರಿಗೆ ಆಧುನಿಕ ತಂತ್ರಜ್ಞಾನದಿಂದ ಸಾಕಷ್ಟು ಅನುಕೂಲವಾಗುತ್ತಿದೆ. ಇಂತಹುದೇ ವಿಶೇಷ ತಂತ್ರಜ್ಞಾನವುಳ್ಳ “ಸಿನಿಬಜಾರ್” ಎಂಬ ಓಟಿಟಿ ಬಿಡುಗಡೆಯಾಗಿದ್ದು, ಈ ಓಟಿಟಿ ಮೂಲಕ ವಿಶ್ವದ ಅನೇಕ ರಾಷ್ಟ್ರಗಳ ಜನರು ತಮ್ಮ ನೆಚ್ಚಿನ ಸಿನಿಮಾಗಳನ್ನು ತಾವು ಇದ್ದಲ್ಲಿಯೇ ನೋಡಬಹುದು. ಇದರಿಂದ ನಿರ್ಮಾಪಕರಿಗೆ ಹೆಚ್ಚು ಅನುಕೂಲವಾಗಲಿದೆ. ಇತ್ತೀಚಿಗೆ “ಸಿನಿಬಜಾರ್” ಓಟಿಟಿ ಅದ್ಧೂರಿಯಾಗಿ ಬಿಡುಗಡೆಯಾಗಿದೆ.

“ಸಿನಿಬಜಾರ್” ಓಟಿಟಿಯಲ್ಲಿ ಪ್ರತಿ ಶುಕ್ರವಾರ ಸಿನಿಮಾಗಳು ವಿಶ್ವದ 177 ದೇಶಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿವೆ. ಹೀಗಾಗಿ ಇದು ಪ್ಯಾನ್ ವರ್ಲ್ಡ್. ಈ ಆಪ್ ಮೂಲಕ ಪ್ರಪಂಚದೆಲ್ಲೆಡೆ ಇರುವ ಸಿನಿ ಪ್ರೇಮಿಗಳು ತಮ್ಮ ನೆಚ್ಚಿನ ಸಿನಿಮಾಗಳನ್ನು ನೋಡಬಹುದು. ಟಿವಿ, ಮೊಬೈಲ್, ಇಂಟರ್ ನೆಟ್ ಹಾಗೂ ವೆಬ್ ಸೈಟ್ ನಲ್ಲಿ ಈ ಆಪ್ ದೊರಕುತ್ತದೆ. No ads & no subscription ಇಲ್ಲದೆ ಕೋಟ್ಯಾಂತರ ಜನರು ಏಕಕಾಲಕ್ಕೆ ಚಿತ್ರಗಳನ್ನು ನೋಡಬಹುದು.


ಟಿಕೆಟ್ ಬೆಲೆ ಕೂಡ 10 ರಿಂದ 25 ರೂಪಾಯಿ ಒಳಗೆ ಇರುತ್ತದೆ. ಈ ಆಪ್ ನಿರ್ಮಾಪಕರುಗಳಿಗೆ ಹೆಚ್ಚಿನ ಆದಾಯದಾಯಕವಾಗಿರುತ್ತದೆ. ಚಿತ್ರಮಂದಿರದಲ್ಲಿ ಬಿಡುಗಡೆಯಾದ ನಂತರ ಈ ಆಪ್ ನಲ್ಲಿ ಚಿತ್ರ ವೀಕ್ಷಣೆಗೆ ಲಭ್ಯವಿರುತ್ತದೆ. ಆಸಕ್ತಿಯಿರುವ ನಿರ್ಮಾಪಕರು ನೇರವಾಗಿ ಕೂಡ ಈ ಆಪ್ ಮೂಲಕ ಚಿತ್ರವನ್ನು ಬಿಡುಗಡೆ ಮಾಡಬಹುದು. ಸ್ಕ್ಯಾನ್ ಮಾಡುವ ಮೂಲಕ ಚಿತ್ರಗಳನ್ನು ವೀಕ್ಷಿಸಬಹುದು ಎಂದು ಮುಖ್ಯಸ್ಥ ಭಾಸ್ಕರ್ ವೆಂಕಟೇಶ್ ಮಾಹಿತಿ ನೀಡಿದರು.

ನನಗೆ ಭಾಸ್ಕರ್ ವೆಂಕಟೇಶ್ ಅವರು ಲಾಕ್ ಡೌನ್ ಸಮಯದಲ್ಲಿ ಈ ಓಟಿಟಿ ಬಗ್ಗೆ ಹೇಳಿದರು. ಅವರು ಹೇಳಿದ ಹಾಗೆ ಇದರಿಂದ ನಿರ್ಮಾಪಕರಿಗೆ ಅನುಕೂಲವಾಗಬಹುದು ಎಂದು ನನಗೂ ಅನಿಸಿತು ಎಂದು ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್ ಹೇಳಿದರು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್ “ಸಿನಿಬಜಾರ್” ಗೆ ಶುಭ ಕೋರಿದರು.
ಆಪ್ ಡೆವಲಪ್ ಮಾಡಿರುವ ತಂತ್ರಜ್ಞರು ಸಹ ಹೆಚ್ಚಿನ ಮಾಹಿತಿ ನೀಡಿದರು.

ಡಾ.ರಾಜಕುಮಾರ್ ಅಭಿನಯದ ಸೂಪರ್ ಹಿಟ್ ಚಿತ್ರ “ಭಾಗ್ಯವಂತರು” ಈ ಓಟಿಟಿಯ ಮೊದಲ ಚಿತ್ರವಾಗಿ ಬರಲಿದೆ. “ಪಂಪ”, ” ಕಾಕ್ಟೈಲ್ “, “ಗುರ್ಬಿ” ಮುಂತಾದ ಚಿತ್ರಗಳ ನಿರ್ಮಾಪಕರು ತಮ್ಮ ಸಿನಿಮಾಗಳನ್ನು ಈ ಆಪ್ ನ ಮೂಲಕ ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದಾರೆ. ಆಯಾ ಸಿನಿಮಾಗೆ ಸಂಬಂಧಿಸಿದ ಪ್ರಮುಖರು ಈ ಆಪ್ ನ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

Categories
ಸಿನಿ ಸುದ್ದಿ

ಮಹಾಶಿವರಾತ್ರಿ ಹಬ್ಬಕ್ಕೆ ಮಹಾಶಿವನಿಗೆ “ಕಬ್ಜ” ಚಿತ್ರದಿಂದ ಗೀತ ನಮನ…

ಗಣ್ಯರ ಸಮ್ಮುಖದಲ್ಲಿ, ಚೆನ್ನೈ ನಗರದಲ್ಲಿ ಅದ್ದೂರಿಯಾಗಿ ಕಬ್ಜ ಸಿನಿಮಾದ “ನಮಾಮಿ ನಮಾಮಿ” ಹಾಡು ರಿಲೀಸ್…

ಇಡೀ ಭಾರತಾದ್ಯಂತ ಬಿಡುಗಡೆಗೂ ಮುಂಚೆಯೇ ಎಲ್ಲರ ಗಮನ ಸೆಳೆದಿರುವ, ಆರ್ ಚಂದ್ರು ನಿರ್ದೇಶನದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ನಾಯಕರಾಗಿ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ವಿಶೇಷಪಾತ್ರದಲ್ಲಿ ಅಭಿನಯಿಸಿರುವ ಕನ್ನಡದ ಹೆಮ್ಮೆಯ ಪ್ಯಾನ್ ಇಂಡಿಯಾ ಸಿನಿಮಾ “ಕಬ್ಜ” ಚಿತ್ರದಿಂದ ಮಹಾಶಿವರಾತ್ರಿಗೆ ಮಹಾಶಿವನನ್ನು ಕೊಂಡಾಡುವ “ನಮಾಮಿ ನಮಾಮಿ” ಎಂಬ ಸುಮಧುರ ಗೀತೆ ಬಿಡುಗಡೆಯಾಗಿದೆ.

ಕಿನಾಲ್ ರಾಜ್ ಬರೆದಿರುವ ಈ ಹಾಡನ್ನು ಖ್ಯಾತ ಗಾಯಕಿ ಐಶ್ವರ್ಯ ರಂಗರಾಜನ್ ಸುಶ್ರಾವ್ಯವಾಗಿ ಹಾಡಿದ್ದಾರೆ. ಖ್ಯಾತ ನಟಿ ಶ್ರೇಯಾ ಶರಣ್ ಈ ಹಾಡಿನಲ್ಲಿ ನಟಿಸಿದ್ದಾರೆ. ರವಿ ಬಸ್ರೂರ್ ಸಂಗೀತ ನೀಡಿರುವ ಈ ಹಾಡು ಐದು ಭಾಷೆಗಳಲ್ಲಿ ಬಿಡುಗಡೆಯಾಗಿದೆ.

ಈ ಹಾಡಿನ ಬಿಡುಗಡೆ ಸಮಾರಂಭ ಇತ್ತೀಚೆಗೆ ಚೆನ್ನೈನಲ್ಲಿ ಅದ್ದೂರಿಯಾಗಿ ನಡೆದಿದೆ. ಸಾಕಷ್ಟು ಗಣ್ಯರು ಈ ಸುಂದರ ಸಮಾರಂಭಕ್ಕೆ ಸಾಕ್ಷಿಯಾದರು.

ಚಿತ್ರ ಸಾಗಿ ಬಂದ ಬಗ್ಗೆ ಹಾಗೂ ಹಾಡಿನ ಕುರಿತು ಮಾಹಿತಿ ನೀಡಿದ ನಿರ್ದೇಶಕ ಆರ್ ಚಂದ್ರು, “ಕಬ್ಜ” ಚಿತ್ರದ ಹಾಡುಗಳನ್ನು ಹೈದರಾಬಾದ್, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಿಡುಗಡೆ ಮಾಡುತ್ತಿದ್ದೇವೆ.

ಹೋದ ಕಡೆ ಚಿತ್ರದ ಕುರಿತು ಕೇಳಿಬರುತ್ತಿರುವ ಪ್ರಶಂಸನೀಯ ಮಾತುಗಳಿಗೆ ಮನ ತುಂಬಿ ಬಂದಿದೆ.
ನನ್ನ ತಂಡಕ್ಕೆ ಹಾಗೂ ಸಹಕಾರ ನೀಡುತ್ತಿರುವ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸಿದರು.

“ಕಬ್ಜ” ಚಿತ್ರದಲ್ಲಿ ನಟಿಸಿರುವುದು ಖುಷಿಯಾಗಿದೆ. ಶಿವನನ್ನು ಆರಾಧಿಸುವ ಈ ಹಾಡು ಬಹಳ ಮಧುರವಾಗಿದೆ. ನನ್ನ ಪಾತ್ರ ಕೂಡ ಚೆನ್ನಾಗಿದೆ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದೆ. ಎಲ್ಲರೂ ಪ್ರೋತ್ಸಾಹ ನೀಡಿ ಎಂದರು ನಟಿ ಶ್ರೇಯಾ ಶರಣ್.

ಶ್ರೀಸಿದ್ದೇಶ್ವರ ಎಂಟರ್ ಪ್ರೈಸಸ್ ಮೂಲಕ ನಿರ್ಮಾಣವಾಗಿರುವ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ “ಕಬ್ಜ” ಚಿತ್ರದ ಟೀಸರ್ ಹಾಗೂ ಹಾಡುಗಳ ಬಗ್ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಫೆಬ್ರವರಿ 26 ರಂದು ಶಿಡ್ಲಘಟ್ಟದಲ್ಲಿ ಲಕ್ಷಾಂತರ ಜನರ ಸಮ್ಮುಖದಲ್ಲಿ ನಡೆಯುವ ಅದ್ದೂರಿ ಸಮಾರಂಭದಲ್ಲಿ ಕಮರ್ಷಿಯಲ್ ಹಾಡೊಂದು ಲೋಕಾರ್ಪಣೆಯಾಗಲಿದೆ.


ಪ್ರಪಂಚದಾದ್ಯಂತ ಅಭಿಮಾನಿಗಳು ಕಾಯುತ್ತಿರುವ “ಕಬ್ಜ” ಚಿತ್ರ ಮಾರ್ಚ್ 17 ರಂದು(ಪನೀತ್ ರಾಜಕುಮಾರ್ ಜನ್ಮದಿನದಂದು) ಅದ್ದೂರಿಯಾಗಿ ಬಿಡುಗಡೆಯಾಗಲಿದೆ.

Categories
ಸಿನಿ ಸುದ್ದಿ

ಕಾಡು-ಮೇಡು ಅಲೆದ ಜೂಲಿಯೆಟ್! ಬೃಂದಾ ಆಚಾರ್ಯ ಚಿತ್ರ ಫೆ.24ಕ್ಕೆ ರಿಲೀಸ್…

ಕನ್ನಡದಲ್ಲಿ ಕಂಟೆಂಟ್ ಓರಿಯಂಟೆಡ್ ಚಿತ್ರಗಳನ್ನು ಜನ ಮೆಚ್ಚಿಕೊಳ್ಳುತ್ತಿದ್ದಾರೆ. ಉತ್ತಮ ಕಂಟೆಂಟ್ ವುಳ್ಳ “ಜೂಲಿಯೆಟ್‌ 2” ಚಿತ್ರ ಸಹ ಫೆಬ್ರವರಿ 24ರಂದು ಬಿಡುಗಡೆಯಾಗುತ್ತಿದೆ. ಬೃಂದಾ ಆಚಾರ್ಯ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ವಿರಾಟ್ ಬಿ ಗೌಡ ನಿರ್ದೇಶಿಸಿದ್ದಾರೆ. ಇತ್ತೀಚೆಗೆ ಚಿತ್ರದ ಟ್ರೇಲರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ.

“ಜೂಲಿಯೆಟ್ 2” ಮಹಿಳಾ ಪ್ರಧಾನ ಚಿತ್ರ. ತೊಂದರೆಗೆ ಸಿಲುಕಿದ ಹೆಣ್ಣು ಮಗಳೊಬ್ಬಳು ಹೇಗೆ ಪ್ರತೀಕಾರ ತೀರಿಸಿಕೊಳ್ಳುತ್ತಾಳೆ ಎಂಬುದು ಕಥೆ. ಸಾಮಾನ್ಯವಾಗಿ “ಜೂಲಿಯೆಟ್‌” ಎಂದಾಕ್ಷಣ ಪ್ರೇಮಕಥೆ ಅಂದುಕೊಳ್ಳುವುದು ವಾಡಿಕೆ. ಆದರೆ ಇದು ಲವ್ ಸ್ಟೋರಿ ಅಲ್ಲ‌. ಇಲ್ಲಿ ರೋಮಿಯೋ ಇರುವುದಿಲ್ಲ.
ಇಲ್ಲಿ ತಪ್ಪು ಮಾಡಿದವರಿಗೆ ಇಲ್ಲೇ ಶಿಕ್ಷೆ. ಎಂಬುದನ್ನು ಸಿನಿಮಾ ಮೂಲಕ ಹೇಳ ಹೊರಟ್ಟಿದ್ದೇವೆ. ಹಾಡುಗಳು ಹಾಗೂ ಟ್ರೇಲರ್ ಮೂಲಕ ನಮ್ಮ ಚಿತ್ರ ಜನರ ಮನ ತಲುಪಿದೆ. ಅಪ್ಪ – ಮಗಳ ಬಾಂಧವ್ಯದ ಸನ್ನಿವೇಶಗಳು ಜನರ ಮನಸ್ಸಿಗೆ ಹತ್ತಿರವಾಗಲಿದೆ. ಬೆಳ್ತಂಗಡಿ ಬಳಿಯ ಪಶ್ಚಿಮಘಟ್ಟದ ಕಾಡೊಂದರಲ್ಲೇ ಹೆಚ್ಚಿನ ಚಿತ್ರೀಕರಣ ಮಾಡಿದ್ದೇವೆ ಇದು ನನ್ನ ಪ್ರಥಮ ಚಿತ್ರ. ನೋಡಿ ಹಾರೈಸಿ ಎಂದರು ನಿರ್ದೇಶಕ ವಿರಾಟ್ ಬಿ ಗೌಡ.

ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ಇದೊಂದು ವಿಭಿನ್ನ ಕಥೆ. ಮಹಿಳೆ ಅಬಲೆಯಲ್ಲ. ಸಬಲೆ. ಎಂದು ನಿರ್ದೇಶಕರು ಹೇಳ ಹೊರಟ್ಟಿದ್ದಾರೆ‌. ತಂದೆ – ಮಗಳ ಬಾಂಧವ್ಯದ ಸನ್ನಿವೇಶಗಳು ಮನ ಮಿಡಿಯುತ್ತದೆ. ಕಾಡಿನಲ್ಲಿ ನಡೆದ ಚಿತ್ರೀಕರಣದ ಅನುಭವ‌ ಮರೆಯಲು ಅಸಾಧ್ಯ. ಎಲ್ಲರೂ ಕಷ್ಟಪಟ್ಟು ಚಿತ್ರ‌ ಮಾಡಿದ್ದೇವೆ ಎಂದು ಲ ಬೃಂದಾ ಆಚಾರ್ಯ ಹೇಳುತ್ತಾರೆ.

ಶ್ರೀಕಾಂತ್ ಹಾಗೂ ರಾಯ್ ಅವರು ತಮ್ಮ ಪಾತ್ರದ ಅನುಭವ ಹಂಚಿಕೊಂಡರು.

ಲಿಖಿತ್ ಆರ್ ಕೋಟ್ಯಾನ್ ನಿರ್ಮಿಸಿರುವ ಈ ಚಿತ್ರಕ್ಕೆ ಸಚಿನ್ ಬಸ್ರೂರ್ ಅವರ ಬಿ.ಜಿ.ಎಂ ಹಾಗೂ shanto v anto ಅವರ ಛಾಯಾಗ್ರಹಣವಿದೆ.

ಬೃಂದಾ ಆಚಾರ್ಯ, ಅನೂಪ್ ಸಾಗರ್, ಖುಷ್ ಆಚಾರ್ಯ, ರವಿ, ರಾಧೇಶ್ ಶೆಣೈ, ಶ್ರೀಕಾಂತ್, ರಾಯ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Categories
ಸಿನಿ ಸುದ್ದಿ

ಫೆಬ್ರವರಿ 24ಕ್ಕೆ ಸೌತ್ ಇಂಡಿಯನ್ ಹೀರೋನ ಸಖತ್ ಎಂಟ್ರಿ! ಹೊಸ ಹೀರೋ ಬರ್ತಾರೆ ದಾರಿ ಬಿಡಿ…

ಕನ್ನಡದಲ್ಲೀಗ ಹೊಸ ಬಗೆಯ ಅದರಲ್ಲೂ ನಿರೀಕ್ಷೆ ಹೆಚ್ಚಿಸುವ ಸಿನಿಮಾಗಳದ್ದೇ ಸುದ್ದಿ. ಕನ್ನಡ ಚಿತ್ರರಂಗ ಈಗ ಭಾರತೀಯ ಚಿತ್ರರಂಗವೇ ತಿರುಗಿ ನೋಡುವಂತೆ ಬೆಳೆದು ನಿಂತಿದೆ. ಇಲ್ಲಿ ತರಹೇವಾರಿ ಸಿನಿಮಾಗಳು ಬರುತ್ತಲೇ ಇವೆ. ಆ ಸಾಲಿಗೆ ‘ಸೌತ್ ಇಂಡಿಯನ್ ಹೀರೋ’ ಸಿನಿಮಾ ಕೂಡ ಸೇರಿದೆ. ಹೌದು, ಈ ಸಿನಿಮಾ ಸದ್ಯ ನಿರೀಕ್ಷೆ ಹುಟ್ಟಿಸಿದೆ. ಅದಕ್ಕೆ ಕಾರಣ ನಿರ್ದೇಶಕ ನರೇಶ್ ಕುಮಾರ್ ಎಚ್.ಎನ್.ಹೊಸಳ್ಳಿ. ಆ ನಿರೀಕ್ಷೆಗೆ ಕಾರಣ, ಈ ಹಿಂದೆ “ಫಸ್ಟ್ ರ‍್ಯಾಂಕ್ ರಾಜು’, ‘ರಾಜು ಕನ್ನಡ ಮೀಡಿಯಂ’ ನಂಥ ಯಶಸ್ವೀ ಚಿತ್ರಗಳನ್ನು ನಿರ್ದೇಶಿಸಿದ್ದ ನರೇಶ್‌ಕುಮಾರ್ ಹೆಚ್.ಎನ್. ಹೊಸಳ್ಳಿ ಈ “ಸೌತ್ ಇಂಡಿಯನ್ ಹೀರೋ’ನನ್ನು ಕರೆತರಲು ಅಣಿಯಾಗಿದ್ದಾರೆ. ಫೆಬ್ರವರಿ 24ಕ್ಕೆ ರಾಜ್ಯಾದ್ಯಂತ ಸೌತ್ ಇಂಡಿಯನ್ ಹೀರೋನ ಹವಾ ಶುರುವಾಗಲಿದೆ.

ಅಂದಹಾಗೆ, ಈ ಬಾರಿ ನರೇಶ್ ಕುಮಾರ್ ಅವರು,
ನಿರ್ದೇಶನದ ಜೊತೆ ಅವರ ಪತ್ನಿ ಶಿಲ್ಪಾ ಅವರ ಜೊತೆ ಸೇರಿ ಚಿತ್ರ ನಿರ್ಮಾಣದಲ್ಲೂ ಕೈ ಜೋಡಿಸಿದ್ದಾರೆ. ಈ ಚಿತ್ರಕ್ಕೆ ಕಿರುತೆರೆ ನಟ ಸಾರ್ಥಕ್ ಹೀರೋ. ಅವರಿಗೆ ಕಾಶಿಮಾ ಹಾಗೂ ಮುಂಬೈ ಮೂಲದ ಊರ್ವಶಿ ನಾಯಕಿಯರು.

ಸಿನಿಮಾ ಈಗಾಗಲೇ ಟ್ರೇಲರ್ ಮೂಲಕ ಸಾಕಷ್ಟು ಜೋರು ಸುದ್ದಿಯಾಗಿದೆ.
ತಮ್ಮ ನಿರ್ಮಾಣ ಹಾಗೂ ನಿರ್ದೇಶನದ ‘ಸೌತ್ ಇಂಡಿಯನ್ ಹೀರೋ’ ಚಿತ್ರದ ಬಗ್ಗೆ ನರೇಶ್ ಕುಮಾರ್ ಅವರಿಗೆ ಸಾಕಷ್ಟು ಭರವಸೆ ಇದೆ. ಆ ಕುರಿತು ಅವರು ಹೇಳುವುದಿಷ್ಟು.

ಇದು ನನ್ನ ನಿರ್ದೇಶನದ 4ನೇ ಚಿತ್ರ. ಪ್ರಾಮಾಣಿಕ ಪ್ರಯತ್ನ ಮೂಲಕ ಈ ಸಿನಿಮಾ ಕಟ್ಟಿದ್ದೇವೆ. ಇಲ್ಲಿ ನಾಯಕ ಭೌತಶಾಸ್ತ್ರದ ಶಿಕ್ಷಕ ಲಾಜಿಕ್ ಲಕ್ಷ್ಮಣರಾವ್. ಚಿತ್ರರಂಗದ ಯಾವುದೇ ಸಂಪರ್ಕವಿಲ್ಲದ ಆತ ಹೇಗೆ ಚಿತ್ರರಂಗಕ್ಕೆ ಬರುತ್ತಾನೆ, ಬಂದಾಗ ಏನೆಲ್ಲ ಸಂಕಷ್ಟಕ್ಕೆ ಸಿಲುಕುತ್ತಾನೆ. ಆಮೇಲೆ ಅದರಿಂದ ಹೊರ ಬರುತ್ತಾನಾ ಇಲ್ಲವಾ ಅನ್ನೋದು ಸಾರಾಂಶ.

ಇಲ್ಲಿ ಹೀರೋಗೆ ಮೂರು ಶೇಡ್ ಇವೆ. ಹಳ್ಳಿ ಬ್ಯಾಕ್‌ಡ್ರಾಪ್, ಸಿಟಿ ಹಿನ್ನೆಲೆ ಕೂಡ ಇಲ್ಲಿದೆ. ಈ ಎರಡರ ನಡುವೆ ವಿಶೇಷ ಗುಣ ಇರುವ ಪಾತ್ರವೂ ಇದೆ. ಇಮೇಜ್ ಇಲ್ಲದ ಒಬ್ಬ ಯುವಕ ಮುಂದೆ ದೊಡ್ಡ ನಾಯಕನಾಗಿ ಏನೆಲ್ಲಾ ಸಮಸ್ಯೆ ಎದುರಿಸುತ್ತಾನೆ ಅಂತ ತೋರಿಸುವ ಪ್ರಯತ್ನ ಇಲ್ಲಿದೆ ಎನ್ನುತ್ತಾರೆ ನರೇಶ್ ಕುಮಾರ್.

ಇನ್ನು, ಹೀರೋ ಸಾರ್ಥಕ್ ‘ಅವನು ಮತ್ತು ಶ್ರಾವಣಿ’ ಸೇರಿದಂತೆ ಕೆಲ ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ. ಅವರು ಹೇಳುವಂತೆ, ‘ ಇದೊಂದು ವಿಭಿನ್ನ ಪಾತ್ರ. ಒಬ್ಬ ಸ್ಟಾರ್ ನಟನ ಪರ್ಸನಲ್ ಲೈಫ್ ಹೇಗಿರುತ್ತೆ, ಎಲ್ಲಾ ವಿಷಯಗಳನ್ನು ಲಾಜಿಕ್‌ನಲ್ಲಿ ನೋಡುವ ಅವನು ಸಿನಿಮಾಗೆ ಬಂದಾಗ ಏನಾಗುತ್ತದೆ ಎನ್ನುವುದು ಕಥೆಯ ತಿರುಳು ಅನ್ನುತ್ತಾರೆ ಅವರು.

ನಾಯಕಿ ಕಾಶಿಮಾ ಅವರಿಗೆ ಇಲ್ಲಿ ಹಳ್ಳಿ ಶಿಕ್ಷಕಿ ಪಾತ್ರವಂತೆ. ಮಾನಸಿ ಎಂಬ ಪಾತ್ರ ಮಾಡುತಗತಿರುವ ಅವರು, ಉತ್ತರ ಕರ್ನಾಟಕ ಭಾಷೆ ಮಾತಾಡಿದ್ದಾರಂತೆ.

ಇನ್ನು ಚಿತ್ರಕ್ಕೆ ಶಿಲ್ಪಾ ನಿರ್ಮಾಪಕಿ. ಅವರು, ‘ ಮನರಂಜನೆ ಉದ್ದೇಶ ಇಟ್ಟುಕೊಂಡು ಈ ಚಿತ್ರ ನಿರ್ಮಾಣ ಮಾಡಿದ್ದಾರಂತೆ.
ಚಿತ್ರದಲ್ಲಿ ನಿರ್ದೇಶಕರಾಗಿ ವಿಜಯ್ ಚೆಂಡೂರು ನಟಿಸಿದ್ದರೆ, ಅಮಿತ್, ಅಶ್ವಿನ್ ಕೊಡಂಗಿ, ಅಶ್ವಿನ್‌ರಾವ್ ಪಲ್ಲಕ್ಕಿ ಇತರರು ಕೂಡ ಚಿತ್ರದ ಭಾಗವಾಗಿದ್ದಾರೆ.

ಸಂಗೀತ ನಿರ್ದೇಶಕ ಹರ್ಷವರ್ಧನ್ ಸಿನಿಮಾಗೆ 5 ಹಾಡುಗಳನ್ನು ಕೊಟ್ಟಿದ್ದಾರಂತೆ. ಇನ್ನು ಘಮ ಘಮ ಎಂಬ ಉತ್ತರ ಕರ್ನಾಟಕ ಶೈಲಿಯ ಹಾಡು ಸೊಗಸಾಗಿದೆಯಂತೆ.

ರಾಜಶೇಖರ್ ಹಾಗೂ ಪ್ರವೀಣ್ ಎಸ್. ಅವರ ಕ್ಯಾಮೆರಾ ಕೈಚಳಕವಿದೆ. ನರೇಶಕುಮಾರ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ.

Categories
ಸಿನಿ ಸುದ್ದಿ

ಮಾರ್ಟಿನ್ ಟೀಸರ್ ಕಾಣಲು ಧ್ರುವ ಫ್ಯಾನ್ಸ್ ಕಾತರ! ಫೆ.23 ರಂದು ಟೀಸರ್ ರಿಲೀಸ್: ಭರ್ಜರಿ ಆಕ್ಷನ್ ಮಾಡಿಸಿದ ಭಲೇ ಅರ್ಜುನ…

ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ ಮಾರ್ಟಿನ್. ಎ.ಪಿ. ಅರ್ಜುನ್‌ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರವನ್ನು ವಾಸವಿ ಎಂಟರ್ ಪ್ರೈಸಸ್ ಅಡಿಯಲ್ಲಿ ಉದಯ್ ಕೆ.ಮೆಹ್ತಾ ಅವರು ನಿರ್ಮಿಸುತ್ತಿರುವ 9ನೇ ಚಿತ್ರವಿದು. ಮಾರ್ಟಿನ್ ಚಿತ್ರದ ಪ್ಯಾನ್ ಇಂಡಿಯಾ ಟೀಸರ್ ಇದೇ ಫೆ.23ರಂದು ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ.

ನಿರ್ಮಾಪಕ ಉದಯ್ ಕೆ.ಮೆಹ್ತಾ ಮಾತನಾಡಿ, ಕಳೆದ ಆಗಸ್ಟ್ 15ಕ್ಕೆ ನಮ್ಮ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡುವುದರೊಂದಿಗೆ ಚಿತ್ರವನ್ನು ಆರಂಭಿಸಿದೆವು. ಈಗಾಗಲೇ ಚಿತ್ರದ ಟಾಕಿ ಪೋರ್ಷನ್ ಮುಗಿದಿದ್ದು, ಹಾಡುಗಳ ಚಿತ್ರೀಕರಣ ಮಾತ್ರ ಬಾಕಿ ಇದೆ. ಫೆ.23ರಂದು ವಿಐಪಿ ಅಭಿಮಾನಿಗಳಿಗೋಸ್ಕರ ಪೇಯ್ಡ್ ಪ್ರೀಮಿಯರ್ ಟೀಸರ್ ಪ್ರದರ್ಶನವನ್ನು ವೀರೇಶ್ ಚಿತ್ರಮಂದಿರದಲ್ಲಿ ಏರ್ಪಡಿಸಿದ್ದೇವೆ. ಹಾಗಂತ ಇದರಿಂದ ಹಣ ಮಾಡುವ ಉದ್ದೇಶವಿಲ್ಲ, ಚಿತ್ರಮಂದಿರದಲ್ಲಿ ಹೆವಿ ಕ್ರೌಡ್ ಆಗಬಾರದೆಂಬ ಉದ್ದೇಶ ನಮ್ಮದು. ಇದರಿಂದ ಬಂದ ಹಣವನ್ನು ಗೋಶಾಲೆಗೆ ಕೊಡುತ್ತಿದ್ದೇವೆ. ಅಲ್ಲದೆ ಅದೇ ದಿನ ಸಂಜೆ ತಮ್ಮ ಮೊಬೈಲ್‌ಗಳಲ್ಲೇ ಅಭಿಮಾನಿಗಳು ಮಾರ್ಟಿನ್ ಟೀಸರ್ ನೋಡಬಹುದು. ಅಲ್ಲದೆ 5 ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ ಚಿತ್ರ ಇದಾಗಿರುವುದರಿಂದ ಬೇರೆ ಭಾಷೆಗಳ ಮಾದ್ಯಮದವರನ್ನು ಆಹ್ವಾನಿಸಿ ಪ್ಯಾನ್ ಇಂಡಿಯಾ ಪ್ರೆಸ್‌ಮೀಟ್ ಮಾಡುತ್ತಿದ್ದೇವೆ. ಆರಂಭದಲ್ಲಿ ನಮ್ಮ ಚಿತ್ರ ಇಷ್ಟು ದೊಡ್ಡ ಮಟ್ಟದಲ್ಲಿ ಆಗುತ್ತೆ ಅಂದುಕೊಂಡಿರಲಿಲ್ಲ, ಬರ ಬರುತ್ತಾ ದೊಡ್ಡದಾಗುತ್ತಾ ಹೋಯಿತು ಎಂದು ಹೇಳಿದರು.


ನಿರ್ದೇಶಕ ಎಪಿ. ಅರ್ಜುನ್ ಮಾತನಾಡಿ, ಮಾರ್ಟಿನ್ ನಮ್ಮ ಕನ್ನಡದ ಸಿನಿಮಾ. ಮೊದಲು ನಮ್ಮವರ ಜೊತೆ ಮಾಹಿತಿ ಹಂಚಿಕೊಂಡು ನಂತರ ಬೇರೆಯವರ ಮುಂದೆ ಹೋಗುತ್ತಿದ್ದೇವೆ. ಇದು ಎಲ್ಲಾ ಕಡೆಗೂ ಸಲ್ಲುವ ಯೂನಿವರ್ಸಲ್ ಕಥೆಯಾಗಿದ್ದರಿಂದ, ಬೇರೆ ಬೇರೆ ಭಾಷೆಗಳಲ್ಲಿ ನಿರ್ಮಿಸಿದ್ದೇವೆ, ಕಳೆದ 2021ರ ಸೆಪ್ಟೆಂಬರ್‌ನಲ್ಲಿ ಚಿತ್ರ ಆರಂಭವಾಯಿತು, ಇಷ್ಟುದಿನ, ಈ ಮಟ್ಟದಲ್ಲಿ ಆಗುತ್ತೆ ಅಂದ್ಕೊಂಡಿರಲಿಲ್ಲ, ಹೈದರಾಬಾದ್‌ ನಲ್ಲಿ ಸೆಟ್ ಹಾಕಿ 45 ದಿನ ಶೂಟ್ ಮಾಡಿದೆವು. ವೈಜಾಕ್‌ನಲ್ಲಿ ಚೇಸ್‌ಸೀನ್ 20ದಿನಗಳವರೆಗೆ ಆಯಿತು, ಜೊತೆಗೆ ಆಗಾಗ ಬರುತ್ತಿದ್ದ ಮಳೆಯಿಂದಲೂ ತಡವಾಯಿತು, ಇನ್ನು ಕಾಶ್ಮೀರದಲ್ಲಿ 25 ದಿನ ಅಲ್ಲದೆ ಮುಂಬೈನಲ್ಲಿ ಚೇಸಿಂಗ್ ಸೀನ್ ಚಿತ್ರೀಕರಣ ಮಾಡಿಕೊಂಡು ಬಂದೆವು. ಒಂದೊಂದು ಕಡೆ ಶೂಟ್ ಮಾಡಿಕೊಂಡು ಬಂದಾಗಲೂ ಒಂದಷ್ಟು ದಿನ ಗ್ಯಾಪ್ ಬೇಕಾಯಿತು.

ಚಿತ್ರದಲ್ಲಿ ದ್ರುವ ಅವರಿಗೆ ತುಂಬಾ ಗೆಟಪ್ ಇದೆ, ನನ್ನ ಕೆರಿಯರ್‌ನಲ್ಲೇ ಅತಿದೊಡ್ಡ ಪವರ್ ಪ್ಯಾಕ್ಡ್ ಚಿತ್ರವಿದು. ವಿಶೇಷವಾದ ಮೋಕೋಬೋಟ್ ಕ್ಯಾಮೆರಾದಲ್ಲಿ 52 ದಿನ ಕ್ಲೈಮ್ಯಾಕ್ಸ್ ಸೀನ್ ಚಿತ್ರೀಕರಿಸಿದ್ದೇವೆ. ರಾಮ್ ಲಕ್ಷ್ಮಣ್ ಆಕ್ಷನ್ ಹಾಗೂ ರವಿವರ್ಮಾ ಚೇಸಿಂಗ್ ಸೀನ್ ಮಾಡಿದ್ದಾರೆ. ಸದ್ಯ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯುತ್ತಿದೆ. ಪರೀಕ್ಷೆಗಳು, ಐಪಿಎಲ್, ಚುನಾವಣೆ ಮುಗಿದ ನಂತರ ಚಿತ್ರವನ್ನು ರಿಲೀಸ್ ಮಾಡುವ ಯೋಜನೆಯಿದೆ ಎಂದು ಹೇಳಿದರು.


ಧ್ರುವ ಮಾತನಾಡಿ, 23ರ ಸಂಜೆ 5.55ಕ್ಕೆ ಲಹರಿ ಯುಟ್ಯೂಬ್ ಚಾನೆಲ್‌ನಲ್ಲಿ ನಮ್ಮ ಚಿತ್ರದ ಟೀಸರ್ ರಿಲೀಸಾಗುತ್ತಿದೆ. ಈ ಚಿತ್ರದಲ್ಲಿ ನನ್ನ ಪಾತ್ರ ಈವರೆಗೆ ಮಾಡಿದ್ದಕ್ಕಿಂತ ಬೇರೆ ಥರನೇ ಇದೆ. ಇಡೀ ಸಿನಿಮಾದಲ್ಲಿ ತುಂಬಾ ಕಡಿಮೆ ಡೈಲಾಗ್ ಇದ್ದು, ಆಕ್ಷನ್ ಸೀನ್ ಜಾಸ್ತಿ ಇರುತ್ತದೆ ಎಂದು ಹೇಳಿದರು. ಛಾಯಾಗ್ರಾಹಕ ಸತ್ಯ ಹೆಗಡೆ ಮಾತನಾಡಿ ಕ್ಯಾಮೆರಾ ವರ್ಕ್ ಬಗ್ಗೆ ಮಾಹಿತಿ ನೀಡಿದರು.


ಬಹುಭಾಷಾ ನಟಿ ವೈಭವಿ ಶಾಂಡಿಲ್ಯ ಚಿತ್ರದ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ತೆಲುಗಿನ ಮಣಿ ಶರ್ಮಾ ಅವರ ಸಂಗೀತ ಸಂಯೋಜನೆ, ಕೆಜಿಎಫ್ ಖ್ಯಾತಿಯ ರವಿ ಬಸ್ರೂರು ಅವರ ಹಿನ್ನೆಲೆ ಸಂಗೀತ ಈ ಚಿತ್ರಕ್ಕಿದೆ. ಕಾಶ್ಮೀರದ ಮೈನಸ್ 7 ಡಿಗ್ರೀ ತಾಪಮಾನ ಇರುವ ಲೊಕೇಶನ್‌ಗಳಲ್ಲಿ ಆಕ್ಷನ್‌ ಸೀನ್ ಚಿತ್ರೀಕರಿಸಲಾಗಿದೆ. ಕಾಶ್ಮೀರದ ಐಸ್‌ವಾರ್ ಸಾಹಸ ದೃಶ್ಯಗಳ ಜೊತೆಗೆ ರೋಮಾಂಚನಕಾರಿ ಸ್ಕೇಟಿಂಗ್ ಆ್ಯಕ್ಷನ್ ಸೀನ್‌ಗಳು ಚಿತ್ರದ ಹೈಲೈಟ್.

Categories
ಸಿನಿ ಸುದ್ದಿ

ಮಳೆ ಹುಡುಗಿಯ ಹಾಲು ಜೇನು ! ಪೂಜಾಗಾಂಧಿ ಧ್ವನಿಯಲ್ಲಿ ಹೊರ ಬಂದ ಸ್ವರ ಮಾಧುರ್ಯ…

ಮುಂಗಾರು ಮಳೆ ಕನ್ನಡ ಚಿತ್ರರಂಗದ ಯಶಸ್ವಿ ಸಿನಿಮಾ. ಆ ಚಿತ್ರದ ಮೂಲಕ ಕನ್ನಡ ಚಿತ್ರರಂಗವನ್ನು ಸ್ಪರ್ಶಿಸಿದ ನಾಯಕಿ ಪೂಜಾಗಾಂಧಿ. ನೋಡ ನೋಡುತ್ತಿದ್ದಂತೆಯೇ ಪೂಜಾಗಾಂಧಿ ಕನ್ನಡದ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುವ ಮೂಲಕ ಅಪ್ಪಟ ಕನ್ನಡದ ಹುಡುಗಿಯಾಗಿ ಗಮನ ಸೆಳೆದರು. ಒಂದಷ್ಟು ಸಿನಿಮಾಗಳ ಬಳಿಕ ಪೂಜಾಗಾಂಧಿ ನಟನೆಗೆ ಬ್ರೇಕ್ ಕೊಟ್ಟಿದ್ದು ನಿಜ.

ನಂತರ, ಪೂಜಾಗಾಂಧಿ ಎಲ್ಲೋ ಕಳೆದು ಹೋದರು ಅಂದುಕೊಳ್ಳುತ್ತಿದ್ದಂತೆಯೇ, ಮಳೆ ಹುಡುಗಿ ಪೂಜಾಗಾಂಧಿ, ನಾನಿಲ್ಲೇ ಇದ್ದೇನೆ. ಈಗ ಕನ್ನಡವನ್ನು ಸ್ಪಷ್ಟವಾಗಿ ಓದಲು, ಬರೆಯಲು ಕಲಿತಿದ್ದೇನೆ ಅಂತ ಹೇಳಿ ನಾನೂ ಕೂಡ ಈಗ ಕನ್ನಡತಿಯೇ ಅಂತ ಬೀಗಿದ್ದರು. ಅವರ ಕನ್ನಡ ಪ್ರೀತಿಗೆ ಬಹಳಷ್ಟು ಕನ್ನಡಿಗರು ಮೆಚ್ಚಿ ಜೈ ಪೂಜಾ ಅಂದಿದ್ದರು.

ಈಗ ಪೂಜಾಗಾಂಧಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಮತ್ತಷ್ಟು ಕನ್ನಡಿಗರಿಗೆ ಇಷ್ಟವಾಗಿದ್ದಾರೆ. ಅದಕ್ಕೆ ಕಾರಣ, ಅವರು ಕನ್ನಡ ಹಾಡೊಂದನ್ನು ಹಾಡಿರುವುದು.
ಹೌದು, ಪೂಜಾಗಾಂಧಿ ಕನ್ನಡ ಓದುವುದು, ಬರೆಯುವುದಷ್ಟೇ ಅಲ್ಲ, ನಾನು ಕೂಡ ಹಾಡ್ತೀನಿ ಅಂತ ಹಾಡುವ ಮೂಲಕ ಸೈ ಎನಿಸಿಕೊಂಡಿದ್ದಾರೆ.

ಅಂದಹಾಗೆ, ಪೂಜಾಗಾಂಧಿ ಧ್ವನಿಯಾಗಿರೋದು ‘ಚಲಿಸುವ ಮೋಡಗಳು’ ಚಿತ್ರದಲ್ಲಿ ಚಿ.ಉದಯಶಂಕರ್ ಬರೆದಿರುವ ಡಾ.ರಾಜಕುಮಾರ್ ಅವರು ಹಾಡಿರುವ ‘ಜೇನಿನ ಹೊಳೆಯೋ’ ಹಾಡನ್ನು ಪೂಜಾಗಾಂಧಿ, ಅನ್ ಪ್ಲಗ್ಗಡ್ ವರ್ಷನ್ ಆಫ್ ಜೇನಿನ ಹೊಳೆಯೋ’ ಹಾಡು ಹಾಡಿದ್ದಾರೆ.

ಅರ್ಜುನ್ ಜನ್ಯ ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಈ ಹಾಡು ಹಾಡಿರುವ ಪೂಜಾಗಾಂಧಿ ತಮ್ಮ ಕಂಠದ ಮೂಲಕ ಮಾಧುರ್ಯವಾಗಿ ಹಾಡುವ ಪ್ರಯತ್ನ ಮಾಡಿದ್ದಾರೆ.
ಅವರು ಹಾಡಿಗೆ ಚಂದನ್ ಗೌಡ ಕ್ಯಾಮೆರಾ ಹಿಡಿದರೆ, ಕಿರಣ್ ಗೌಡ ಸಂಕಲನ ಮಾಡಿದ್ದಾರೆ.

Categories
ಸಿನಿ ಸುದ್ದಿ

ಸುಪ್ರೀಮ್ ಹೀರೋ ಮಗನ ಸುಪರ್ ಚಿತ್ರ: ಫೆ.17ಕ್ಕೆ ಖೆಯೊಸ್ ರಿಲೀಸ್…

‌‌ಮನುಷ್ಯನ ಮನಸ್ಸಿನಲ್ಲಾಗುವ ಗೊಂದಲ, ಮನಸ್ಥಿತಿಯ ಬಗ್ಗೆ ಹೇಳುವ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ ಖೆಯೊಸ್.
ಈ ಚಿತ್ರ ಫೆ.17 ರಂದು ರಾಜ್ಯಾದ್ಯಂತ ತೆರೆಗೆ ಬರುತ್ತಿದೆ. ಅಕ್ಷಿತ್ ಶಶಿಕುಮಾರ್ ಈ ಚಿತ್ರದ ನಾಯಕನಾಗಿ ಅಭಿನಯಿಸಿದ್ದು, ನಾಯಕಿಯಾಗಿ ಅದಿತಿ ಪ್ರಭುದೇವ ಅಭಿನಯಿಸಿದ್ದಾರೆ. ವಿಶೇಷವೆಂದರೆ ಸುಪ್ರೀಂ ಹೀರೋ ಶಶಿಕುಮಾರ್ ಸಹ ಈ ಚಿತ್ರದಲ್ಲಿ ನಟಿಸಿದ್ದಾರೆ. ಅಪ್ಪ – ಮಗ ಮೊದಲ ಬಾರಿಗೆ ಈ ಚಿತ್ರದಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.‌ ಇತ್ತೀಚೆಗೆ ಈ ಚಿತ್ರದ ಪ್ರೀ ರಿಲೀಸ್ ಇವೆಂಟ್ ಅದ್ದೂರಿಯಾಗಿ ನಡೆಯಿತು.


ಮೂಲತಃ ವೈದ್ಯರಾಗಿರುವ ಡಾ.ಜಿ.ವಿ.ಪ್ರಸಾದ್ ಈ ಚಿತ್ರ ನಿರ್ದೇಶನ ಮಾಡಿದ್ದಾರೆ. ‌ ವೈದ್ಯಕೀಯ ಕಾಲೇಜೊಂದರಲ್ಲಿ ನಡೆಯುವ ಕಥೆಯನ್ನೇ ಆಯ್ಕೆ ಮಾಡಿಕೊಂಡಿದ್ದಾರೆ. ಅಕ್ಷಿತ್ ಶಶಿಕುಮಾರ್ ಹಾಗೂ ಅದಿತಿ ಪ್ರಭುದೇವ ಅವರದು ಈ ಚಿತ್ರದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳ ಪಾತ್ರ.
ಅಲ್ಲದೆ ಹಿರಿಯನಟ ಶಶಿಕುಮಾರ್ ಸಹ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದು, ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದರು.

ವಿಶೇಷ ಅತಿಥಿಗಳಾಗಿ ವಿನೋದ್ ಪ್ರಭಾಕರ್, ನಿರಂಜನ್ ಸುಧೀಂದ್ರ ಹಾಗೂ ಮಂಜು ಪಾವಗಡ ಆಗಮಿಸಿದ್ದರು. ನಟ ಶಶಿಕುಮಾರ್ “ಖೆಯೊಸ್” ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿ, ಯಜಮಾನ ಚಿತ್ರದ ಹಾಡೊಂದಕ್ಕೆ ಹೆಜ್ಜೆ ಹಾಕಿದರು. ನಟ ವಿನೋದ್ ಪ್ರಭಾಕರ್ ಚಿತ್ರತಂಡವನ್ನು ಅಭಿನಂದಿಸುವ ಮೂಲಕ ಹೊಸಬರ ಪ್ರಯತ್ನಕ್ಕೆ ಬೆನ್ನು ತಟ್ಟಿದರು.


ಗಾಯಕ ಶಶಾಂಕ್ ಶೇಷಗಿರಿ, ಸಂಗೀತ ನಿರ್ದೇಶಕ ವಿಜಯ್ ಹರಿತ್ಸ, ನಟರಾದ ಶಿವಾನಂದ್, ಆರ್.ಕೆ. ಚಂದನ್, ಡಾ.ಸುಮಿತ್ ತಲ್ವಾರ್, ನಟಿ ಗಗನ, ಛಾಯಾಗ್ರಾಹಕ ಸಂದೀಪ್ ವಲ್ಲೂರಿ ಮುಂತಾದವರು ಚಿತ್ರದ ಕುರಿತಂತೆ ಮಾತನಾಡಿದರು.
ಪಾರುಲ್ ಅಗರವಾಲ್ ಹಾಗೂ ಹೇಮಚಂದ್ರ ರೆಡ್ಡಿ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.
ನಿರ್ಮಾಪಕಿ ಪಾರೂಲ್ ಅಗರ್‌ವಾಲ್ ಚಿತ್ರದ ಆಶಯಗಳನ್ನು ವಿವರಿಸಿದರೆ, ನಿರ್ದೇಶಕ ಜಿ.ವಿ.ಪ್ರಸಾದ್ ಅವರು ಚಿತ್ರದ ಶೀರ್ಷಿಕೆ ಮತ್ತು ಅದನ್ನು ಚಿತ್ರದಲ್ಲಿ ಬಳಸಿಕೊಂಡಿರುವುದರ ಬಗ್ಗೆ ಹೇಳಿದರು.


ನಾಯಕ ಅಕ್ಷಿತ್ ಶಶಿಕುಮಾರ್ ಮಾತನಾಡಿ ಚಿತ್ರಕ್ಕೆ ಪ್ರತಿಯೊಬ್ಬರು ನೀಡಿದ ಸಹಕಾರವನ್ನು ನೆನೆಯುತ್ತಾ, ಇದು ನನ್ನ ಎರಡನೇ ಚಿತ್ರ. ದಯವಿಟ್ಟು ಎಲ್ಲರೂ ಪ್ರೋತ್ಸಾಹಿಸಿ ಎಂದರಲ್ಲದೆ ನಾನು ಅಪ್ಪನ ನೆರಳಿನಲ್ಲಿ ಅರಳಿದರೂ ಬೆಳೆಯಲು ಬೇರೆ ಆಶ್ರಯ ಬೇಕಾಗುತ್ತದೆ. ಈ ವಿಷಯದಲ್ಲಿ ಸ್ನೇಹಿತರು ಅತ್ಯಂತ ಸಹಕಾರ ನೀಡುತ್ತಿದ್ದಾರೆ ಎಂದರು.

Categories
ಸಿನಿ ಸುದ್ದಿ

ಲಂಕಾಸುರನಿಗೆ ಕನಸಿನ ರಾಣಿ ಸಾಥ್: ಮಾರ್ಡನ್ ಮಹಾಲಕ್ಷ್ಮಿ ಹಾಡು ರಿಲೀಸ್…

ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ ಹಾಗೂ ಟೈಗರ್ ಟಾಕೀಸ್ ಮೂಲಕ ನಿಶಾ ವಿನೋದ್ ಪ್ರಭಾಕರ್ ನಿರ್ಮಿಸಿರುವ “ಲಂಕಾಸುರ” ಚಿತ್ರಕ್ಕಾಗಿ “ಬಹದ್ದೂರ್” ಚೇತನ್ ಕುಮಾರ್ ಬರೆದಿರುವ “ಮಾಡರ್ನ್ ಮಹಾಲಕ್ಷ್ಮಿ” ಹಾಡನ್ನು ಖ್ಯಾತ ನಟಿ ಮಾಲಾಶ್ರೀ ಬಿಡುಗಡೆ ಮಾಡಿದ್ದಾರೆ.

A2 ಮ್ಯೂಸಿಕ್ ಮೂಲಕ ಈ ಹಾಡು ಬಿಡುಗಡೆಯಾಗಿದೆ. ಇತ್ತೀಚಿಗೆ ಅದ್ದೂರಿಯಾಗಿ ನಡೆದ ಈ ಹಾಡು ಬಿಡುಗಡೆ ಸಮಾರಂಭದಲ್ಲಿ ಹಿರಿಯ ನಟಿ ಶೃತಿ, ನಟ ಶ್ರೀನಗರ ಕಿಟ್ಟಿ, ನಿರ್ಮಾಪಕ ಎಂ.ಜಿ.ರಾಮಮೂರ್ತಿ, ನಿರ್ದೇಶಕ ಗುರು ದೇಶಪಾಂಡೆ ಸೇರಿದಂತೆ ಅನೇಕ ಚಿತ್ರರಂಗದ ಗಣ್ಯರು ಉಪಸ್ಥಿತರಿದ್ದರು.

ನಾನು ವಿನೋದ್ ಪ್ರಭಾಕರ್ ಅವರ ದೊಡ್ಡ ಅಭಿಮಾನಿ. ಅವರು ಮಾಡುವ ಸಾಹಸ ಸನ್ನಿವೇಶಗಳು ನನಗೆ ತುಂಬಾ ಇಷ್ಟ. ಟೈಗರ್ ಟಾಕೀಸ್ ಮೂಲಕ ವಿನೋದ್ ಪ್ರಭಾಕರ್ ಹಾಗೂ ನಿಶಾ ವಿನೋದ್ ಪ್ರಭಾಕರ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಮಾಲಾಶ್ರೀ ಹಾರೈಸಿದರು.

ನಾನು ಪ್ರಭಾಕರ್ ಅವರ ಜೊತೆ ನಟಿಸಿದ್ದೆ. ಈಗ “ಮಾದೇವ” ಚಿತ್ರದಲ್ಲಿ ವಿನೋದ್ ಪ್ರಭಾಕರ್ ಅವರ ಜೊತೆ ನಟಿಸಿದ್ದೇನೆ.‌ “ಲಂಕಾಸುರ” ಚಿತ್ರದ ಮೂಲಕ ವಿನೋದ್ ಹಾಗೂ ನಿಶಾ ನಿರ್ಮಾಪಕರು ಆಗಿದ್ದಾರೆ ಒಳ್ಳೆಯದಾಗಲಿ ಎಂದರು ನಟಿ ಶೃತಿ.

ನಟ ಶ್ರೀನಗರ ಕಿಟ್ಟಿ‌, ನಿರ್ಮಾಪಕ ಎಂ.ಜಿ.ರಾಮಮೂರ್ತಿ ಸೇರಿದಂತೆ ಅನೇಕ ಗಣ್ಯರು ತಮ್ಮ ಮಾತುಗಳ ಮೂಲಕ ಶುಭ ಕೋರಿದರು.

ಇಡೀ ಚಿತ್ರತಂದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ ನೋಡಿ ಹಾರೈಸಿ ಎಂದರು ನಿರ್ಮಾಪಕಿ ನಿಶಾ ವಿನೋದ್ ಪ್ರಭಾಕರ್.

ಕೊರೋನ ಬರುವ ಮುಂಚೆ ರಾಘವ ಮುನಿಸ್ವಾಮಿ ಅವರು ನನಗೆ ಅಡ್ವಾನ್ಸ್ ನೀಡಿ “ಲಂಕಾಸುರ” ಚಿತ್ರ ಆರಂಭಿಸಿದ್ದರು. ಆನಂತರ ಕಾರಣಾಂತರದಿಂದ ನಾವೇ ಟೈಗರ್ ಟಾಕೀಸ್ ಸಂಸ್ಥೆ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡಿದ್ದೆವು. ಟೀಸರ್ ಬಿಡುಗಡೆ ಮಾಡಿದ ಕ್ರೇಜಿಸ್ಟಾರ್ ರವಿಚಂದ್ರನ್ ಅವರಿಗೆ, ಲೋಗೊ ಅನಾವರಣ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ನಾನು ಆಭಾರಿ. ನನ್ನ ಇಡೀ ಚಿತ್ರತಂಡದ ಸಹಕಾರ ಮರೆಯಲು ಸಾಧ್ಯವಿಲ್ಲ‌. ಎಲ್ಲರೂ ಇಷ್ಟಪಡುವ ಚಿತ್ರ ಮಾಡಿದ್ದೇವೆ‌. ನೋಡಿ ಪ್ರೋತ್ಸಾಹ ನೀಡಿ ಎಂದರು ನಾಯಕ ವಿನೋದ್ ಪ್ರಭಾಕರ್.

ಚಿತ್ರದಲ್ಲಿ ನಾಲ್ಕು ಹಾಡುಗಳಿವೆ. ಎಲ್ಲಾ ಹಾಡುಗಳನ್ನು ಚೇತನ್ ಕುಮಾರ್ ಬರೆದಿದ್ದಾರೆ. “ಮಾರ್ಡನ್ ಮಹಾಲಕ್ಷ್ಮಿ” ಹಾಡನ್ನು ನಾನೇ ಹಾಡಿದ್ದೇನೆ ಎಂದು ಸಂಗೀತ ನಿರ್ದೇಶಕ ವಿಜೇತ್ ಕೃಷ್ಣ ಹೇಳಿದರು.

ನಿರ್ದೇಶಕ ಪ್ರಮೋದ್ ಕುಮಾರ್, ಛಾಯಾಗ್ರಾಹಕ ಸುಜ್ಞಾನ್, ನೃತ್ಯ ನಿರ್ದೇಶಕ ಭಜರಂಗಿ ಮೋಹನ್ ಮುಂತಾದವರು “ಲಂಕಾಸುರ” ಚಿತ್ರದ ಕುರಿತು ಮಾತನಾಡಿದರು.

Categories
ಸಿನಿ ಸುದ್ದಿ

ಫೆಬ್ರವರಿ 24ಕ್ಕೆ ಮೇರಿ ತೆರೆಗೆ: ಟ್ರೇಲರ್ ಹೊರ ಬಂತು…

‘ಆನ’ ಸಿನಿಮಾ ಮೂಲಕ ಗುರುತಿಸಿಕೊಂಡಿರುವ ಮನೋಜ್ ಪಿ ನಡಲುಮನೆ ನಿರ್ದೇಶನದ ಎರಡನೇ ಸಿನಿಮಾ ವೆಂಚರ್ ‘ಮೇರಿ’. ಫಸ್ಟ್ ಲುಕ್ ಮೂಲಕ ಗಮನ ಸೆಳೆದ ಚಿತ್ರದ ಟ್ರೇಲರ್ ಇಂದು ಬಿಡುಗಡೆಯಾಗಿದೆ. ಥ್ರಿಲ್ಲರ್ ಡ್ರಾಮಾ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದ ಇಂಟ್ರಸ್ಟಿಂಗ್ ಟ್ರೇಲರ್ ಹೊತ್ತು ಬಂದ ಚಿತ್ರತಂಡ ಸಿನಿಮಾ ಬಗ್ಗೆ ಒಂದಿಷ್ಟು ಮಾಹಿತಿ ಹಂಚಿಕೊಂಡಿದೆ.

‘ಮೇರಿ’ ಪಶ್ಚಿಮ ಘಟ್ಟದ ಗ್ರಾಮಾಂತರ ಠಾಣೆಯಲ್ಲಿ ನಡೆಯುವ ಕಥೆಯನ್ನು ಒಳಗೊಂಡಿದ್ದು, ವಿಕಾಸ್ ಉತ್ತಯ್ಯ, ಅನೂಷ ಕೃಷ್ಣ, ಚೇತನ್ ವಿಕ್ಕಿ, ತೇಜಸ್ವಿನಿ ಶರ್ಮಾ ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಸಂದೀಪ್ ನೀನಾಸಂ, ಭಾರ್ಗವ್ ವೆಂಕಟೇಶ್, ಸುಶಾಂತ್, ದೀಪಕ್ ಗೌಡ ಒಳಗೊಂಡ ಕಲಾವಿದರ ಬಳಗ ಚಿತ್ರದಲ್ಲಿದೆ.

ನಿರ್ದೇಶಕ ಮನೋಜ್ ಪಿ ನಡುಲುಮನೆ ಮಾತನಾಡಿ, ‘ಮೇರಿ’ ಒಂದು ತಂಡದ ಪರಿಶ್ರಮ. ಥ್ರಿಲ್ಲರ್ ಸಬ್ಜೆಕ್ ಸಿನಿಮಾ. ಪೊಲೀಸ್ ಠಾಣೆಯಲ್ಲಿ ನಡೆಯುವ ಘಟನೆ ಚಿತ್ರದಲ್ಲಿದೆ. ಫೆಬ್ರವರಿ 24ರಂದು ಸಿನಿಮಾ ಬಿಡುಗಡೆಯಾಗುತ್ತಿದೆ. ಚಿಕ್ಕಮಗಳೂರಿನ ಜಿಲ್ಲೆಯ ಕಾಡು ಮಧ್ಯದಲ್ಲಿರುವ ಒಂದು ಗ್ರಾಮದ ಪೊಲೀಸ್ ಠಾಣೆಗೆ ಹೊಸದಾಗಿ ಅಪಾಯಿಂಟ್ ಆದ ಎಸ್ಐ ಮುಂದೆ ಒಂದು ಹುಡುಗಿ ತನ್ನ ಮೇಲೆ ರೇಪ್ ಆಗಿದೆ ಎಂದು ಹೇಳಿದಾಗ ಆ ದಿನ ಏನೇನು ಘಟನೆ ನಡೆಯುತ್ತೆ ಅನ್ನೋದು ಈ ಸಿನಿಮಾದ ಎಳೆ. ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ. ಸಿನಿಮಾ ನೋಡಿ ಚಿತ್ರತಂಡಕ್ಕೆ ಸಪೋರ್ಟ್ ಮಾಡಿ ಎಂದು ತಿಳಿಸಿದರು.

ನಟ ವಿಕಾಶ್ ಉತ್ತಯ್ಯ ಮಾತನಾಡಿ, ಈ ಚಿತ್ರದಲ್ಲಿ ಎಸ್ ಐ ಪಾತ್ರ ಮಾಡಿದ್ದೇನೆ. ರವಿಕುಮಾರ್ ಪಾತ್ರದಲ್ಲಿ ನಟಿಸಿದ್ದೇನೆ. ಆನ ಸಿನಿಮಾದಲ್ಲೂ ಲೀಡ್ ಆಗಿ ಮಾಡಿದ್ದೇನೆ. ಸೆಕೆಂಡ್ ಲಾಕ್ ಡೌನ್ ನಲ್ಲಿ ಮನೋಜ್ ಈ ಚಿತ್ರದ ಸ್ಕ್ರಿಪ್ಟ್ ರೆಡಿ ಮಾಡಿದ್ದರು. ತುಂಬಾ ವಿಭಿನ್ನವಾಗಿ ಸಿನಿಮಾ ಮೂಡಿ ಬಂದಿದೆ. ಎಲ್ಲರೂ ಸಿನಿಮಾ ನೋಡಿ ಸಪೋರ್ಟ್ ಮಾಡಿ ಎಂದರು.

ನಟಿ ತೇಜಸ್ವಿನಿ ಶರ್ಮಾ ಮಾತನಾಡಿ ನನ್ನ ಪಾತ್ರ ಸಿನಿಮಾ ರಿಲೀಸ್ ಆದ ಮೇಲೆ ಮಾತನಾಡುವ ಹಾಗಿದೆ. ತುಂಬಾ ಯೂನೀಕ್ ಆಗಿದೆ ನನ್ನ ಕ್ಯಾರೆಕ್ಟರ್. ಎಲ್ಲರೂ ಚಿತ್ರತಂಡಕ್ಕೆ ಸಪೋರ್ಟ್ ಮಾಡಿ ಎಂದರು.

ನಟಿ ಅನೂಷ ಕೃಷ್ಣ ಮಾತನಾಡಿ ನನ್ನ ಕ್ಯಾರೆಕ್ಟರ್ ತುಂಬಾ ಚೆನ್ನಾಗಿ ನಿರ್ದೇಶಕರು ಬರೆದಿದ್ದಾರೆ. ಈ ಪಾತ್ರ ನಾನೇ ಮಾಡಬೇಕು ಎಂದು ನಿರ್ದೇಶಕರ ಬಳಿ ಹೇಳಿದ್ದೆ ಅಷ್ಟು ಸ್ಟ್ರಾಂಗ್ ಆಗಿದೆ ಪಾತ್ರ. ಎಲ್ಲರೂ ತುಂಬಾ ಪರಿಶ್ರಮದಿಂದ ಈ ಸಿನಿಮಾ ಮಾಡಿದ್ದೇವೆ. ನಿಮ್ಮೆಲ್ಲರ ಸಹಕಾರ ಬೇಕು ಎಂದು ತಿಳಿಸಿದರು.

ನಿರ್ಮಾಪಕ ರನ್ವಿತ್ ಶಿವಕುಮಾರ್ ಮಾತನಾಡಿ ಸಿನಿಮಾ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಚಿತ್ರದ ಟೆಕ್ನಿಶಿಯನ್ ಗಳು ನಿರ್ದೇಶಕ ವಿಷನ್ ಚೆನ್ನಾಗಿ ತೆರೆ ಮೇಲೆ ತಂದಿದ್ದಾರೆ. ಕಲಾವಿದರು ಕೂಡ ತುಂಬಾ ಚೆನ್ನಾಗಿ ಅಭಿನಯಿಸಿದ್ದಾರೆ. ಫೆಬ್ರವರಿ 24ರಂದು ಸಿನಿಮಾ ಬಿಡುಗಡೆಯಾಗುತ್ತಿದೆ. ಸಿನಿಮಾ ನೋಡಿ ತಂಡಕ್ಕೆ ಸಪೋರ್ಟ್ ಮಾಡಿ ಎಂದರು.

ವಿನೋದ್ ಭಾರತಿ ಛಾಯಾಗ್ರಹಣ, ಸೂರಜ್ ಜೋಯ್ಸ್ ಸಂಗೀತ ನಿರ್ದೇಶನ, ನಾಗೇಂದ್ರ ಉಜ್ಜನಿ ಸಂಕಲನ ಚಿತ್ರಕ್ಕಿದೆ. ಡಿಕೆಎಸ್ ಸ್ಟುಡಿಯೋಸ್ ಬ್ಯಾನರ್ ನಡಿ ರನ್ವಿತ್ ಶಿವಕುಮಾರ್, ಹರೀಶ್ ಜಿ.ಬಿ ಮೇರಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

error: Content is protected !!