Categories
ಸಿನಿ ಸುದ್ದಿ

ಹೊಟ್ಟೆಪಾಡಿನ ಹಾಡು! ನಾಯಕನಾಗೋ ಆಸೆ ಹೊಟ್ಟೆಪಾಡು ಮೂಲಕ ನನಸು…

ವಂದನ ಎಂಟರ್ ಪ್ರೈಸಸ್ ಬ್ಯಾನರ್ ನಲ್ಲಿ ಡಿ.ವಿ.ರಾಧ ಅವರು ನಿರ್ಮಿಸಿರುವ, ವಸಂತ್ ಸಂಗೀತ ನಿರ್ದೇಶನ, ನಿರ್ದೇಶನದ ಜೊತೆಗೆ ನಾಯಕನಾಗೂ ನಟಿಸಿರುವ “ಹೊಟ್ಟೆಪಾಡು” ಚಿತ್ರದ ಹಾಡುಗಳು ಇತ್ತೀಚೆಗೆ ಬಿಡುಗಡೆಯಾಗಿವೆ. ಹಿರಿಯ ನಿರ್ದೇಶಕರಾದ ಓಂ ಸಾಯಿಪ್ರಕಾಶ್, ಬಾಲಾಜಿ ಸಿಂಗ್, ಅಡಕಮಾರನಹಳ್ಳಿ ರಾಜಕೀಯ ಮುಖಂಡರಾದ ರಾಜಣ್ಣ ಹಾಗೂ ಸಿರಿ ಮ್ಯೂಸಿಕ್ ಸುರೇಶ್ ಚಿಕ್ಕಣ್ಣ ಸೇರಿದಂತೆ ಅನೇಕ ಗಣ್ಯರು, ಚಿತ್ರತಂಡಕ್ಕೆ ಶುಭ ಕೋರಿದರು. ಸಿರಿ ಮ್ಯೂಸಿಕ್ ಮೂಲಕ ಈ ಚಿತ್ರದ ಹಾಡುಗಳು ಬಿಡುಗಡೆಯಾಗಿವೆ. ಟ್ರೇಲರ್ ಸಹ ಬಿಡುಗಡೆಯಾಗಿದ್ದು, ಜನಮನ ಗೆದ್ದಿದೆ.

ನಾನು ಇಪ್ಪತ್ತು ವರ್ಷಗಳಿಂದ ಚಿತ್ರರಂಗದಲ್ಲಿದ್ದೇನೆ. ಆಗಿನಿಂದಲೂ ನಾಯಕನಾಗುವ ಆಸೆ. ಆದರೆ ಆಗಿರಲಿಲ್ಲ. ಕೆಲವು ವರ್ಷ ಬೇರೆ ವ್ಯಾಪಾರ ಮಾಡುತ್ತಿದೆ. ಈಗ “ಹೊಟ್ಟೆಪಾಡು” ಚಿತ್ರ ನಿರ್ಮಾಣ ಮಾಡಿದ್ದೇವೆ. ನನ್ನ ಶ್ರೀಮತಿ ರಾಧ ಈ ಚಿತ್ರದ ನಿರ್ಮಾಪಕಿ. ನಾನೇ ಸಂಗೀತ ನಿರ್ದೇಶನ ಹಾಗೂ ನಿರ್ದೇಶನ ಮಾಡಿದ್ದೇನೆ. “ಹೊಟ್ಟೆಪಾಡು” ವಿಭಿನ್ನ ಕಥೆ ಹೊಂದಿರುವ ಸಾಹಸಮಯ ಹಾಗೂ ಸಾಂಸಾರಿಕ ಚಿತ್ರ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗುತ್ತಿದೆ. ನೋಡಿ ಹಾರೈಸಿ. ಈ ಚಿತ್ರ ಇಲ್ಲಿಯ ತನಕ ಬರಲು ನನ್ನ ಸ್ನೇಹಿತ ಆನಂದ್ ಕಾರಣ. ನನ್ನ ತಂಡದ ಸಹಕಾರವನ್ನು ಮರೆಯುವ ಹಾಗಿಲ್ಲ. ಇಂದು ನಮ್ಮ ಸಮಾರಂಭಕ್ಕೆ ಆಗಮಿಸಿದ್ದ ಎಲ್ಲಾ ಗಣ್ಯರಿಗೆ ನನ್ನ ಧನ್ಯವಾದ ಎಂದರು ನಾಯಕ, ನಿರ್ದೇಶಕ ವಸಂತ್.

ನಿರ್ಮಾಪಕಿ ಡಿ.ವಿ.ರಾಧ, ಸಾಹಸ ನಿರ್ದೇಶಕ ಕೌರವ ವೆಂಕಟೇಶ್, ನಾಯಕಿ ಜಾಹ್ನವಿ ವಿಶ್ವನಾಥ್ ಸೇರಿದಂತೆ ಚಿತ್ರದಲ್ಲಿ ನಟಿಸಿರುವ ಅನೇಕ ಕಲಾವಿದರು ಹಾಗೂ ತಂತ್ರಜ್ಞರು “ಹೊಟ್ಟೆಪಾಡು” ಚಿತ್ರದ ಕುರಿತು ಮಾತನಾಡಿದರು.

ತನ್ಮಯ್ ಎಸ್ ಆನಂದಕುಮಾರ್ ಚಿತ್ರಕಥೆ, ಸಂಭಾಷಣೆ, ನೃತ್ಯ ಹಾಗೂ ಸಹಕಾರ ನಿರ್ದೇಶನವಿರುವ ಈ ಚಿತ್ರಕ್ಕೆ ರವಿ ಬೆಳಗುಂದಿ ಛಾಯಾಗ್ರಹಣ ಹಾಗೂ ಅಮಿತ್ ಜವಳಪುರ ಸಂಕಲನವಿದೆ.

ವಸಂತ್, ಜಾಹ್ನವಿ ವಿಶ್ವನಾಥ್, ವಿನಯಪ್ರಸಾದ್, ಶೋಭ್ ರಾಜ್, ಅಪೂರ್ವ, ಶೈಲೇಶ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
.

Categories
ಸಿನಿ ಸುದ್ದಿ

ಬಿಕಿನಿ ಹಾಕಿದ್ರೆ ಬೋಲ್ಡ್​ ಆಗಲ್ಲ! ನಾವು ಮಾಡೋ ರೋಲ್ ಬೋಲ್ಡ್ ಆಗಿರಬೇಕು: ಟೀಕಿಸಿದವರಿಗೆ ಉತ್ತರ ಕೊಡ್ತೀನಿ ಅಂದ್ರು ಹಾಟ್ ಬೆಡಗಿ ಅನಿತಾ…

ಸೈಕೋ ಮೂಲಕ ಪಡ್ಡೆ ಹುಡುಗರನ್ನ ಹುಚ್ಚೆದ್ದು ಕುಣಿಸಿದ್ದ ಅಪ್ಪಟ ಕನ್ನಡತಿ ಅನಿತಾಭಟ್ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ನಟನೆ, ಯೋಗ, ಜರ್ನಿ ಹೀಗೆ ಸದಾ ಉತ್ಸಾಹದಿಂದಲೇ ಇರುವ ಅನಿತಾಭಟ್, ತಮ್ಮ ನಿರ್ಮಾಣದ ಇಂದಿರಾ ಮೂಲಕ ಸೈ ಎನಿಸಿಕೊಂಡಿದ್ದು ಗೊತ್ತೇ ಇದೆ. ಈಗ ಹೊಸ ಸುದ್ದಿ ಅಂದರೆ, ಅವರು ಪ್ರಮುಖ ಆಕರ್ಷಣೆಯಲ್ಲಿ ನಟಿಸಿರುವ ‘ಬೆಂಗಳೂರು 69’ ಸಿನಿಮಾ ಫೆಬ್ರವರಿ 10 ರಂದು ರಾಜ್ಯಾದ್ಯಂತ ತೆರೆಗೆ ಅಪ್ಪಳಿಸುತ್ತಿದೆ. ತಮ್ಮ ಸಿನಿಮಾ ಕುರಿತು ಭಟ್ರು ಹೇಳೋದಿಷ್ಟು

ಇದೊಂದು ಸ್ಪೆಷಲ್ ಸಿನಿಮಾ. ಶೀರ್ಷಿಕೆ ಹೇಳುವಂತೆ ಇಲ್ಲಿ ಬೆಂಗಳೂರಿನ ಸ್ಪೆಷಲ್ ಸ್ಟೋರಿ ಇದೆ. ಅದು ಏನು ಅನ್ನೋದನ್ನು ಸಿನಿಮಾದಲ್ಲೇ ನೋಡಬೇಕು. ಈ
ಚಿತ್ರದಲ್ಲಿ ಬರುವ ಒಂದು ಹಾಡಿನಲ್ಲಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದೇನೆ. ಹಾಗಾಗಿಯೋ ಏನೋ ಅದೇ ರೀತಿಯ ಪಾತ್ರಗಳು ಹುಡುಕಿ ಬರುತ್ತಿವೆ ಅನ್ನೋದು ಭಟ್ಟರ ಮಾತು.

ಬೆಂಗಳೂರು 69’ ಸಿನಿಮಾದಲ್ಲಿ ಮೂರು ಪಾತ್ರಗಳು ಮುಖ್ಯವಾಗಿವೆ. ಕ್ರೈಂ ಥ್ರಿಲ್ಲರ್ ಸಿನಿಮಾ ಇದಾಗಿದ್ದು, ಅಲ್ಲಲ್ಲಿ ಹಲವು ಟ್ವಿಸ್ಟ್​ಗಳು ಎದುರಾಗುತ್ತವೆ. ‘ಇಬ್ಬರು ಹುಡುಗರು ಮತ್ತು ಒಂದು ಹುಡುಗಿ ನಡುವೆ ನಡೆಯುವ ಇಂಟ್ರೆಸ್ಟಿಂಗ್ ಸ್ಟೋರಿ ಇಲ್ಲಿದೆ.

ಹಾಗಂತ ಇಲ್ಲಿ ತ್ರಿಕೋನ ಪ್ರೇಮಕಥೆ ಇದೆ ಅಂದುಕೊಳ್ಳುವಂತಿಲ್ಲ. ಚಿತ್ರದಲ್ಲಿ ಅಪಹರಣವಾಗುತ್ತೆ ಯಾಕೆ ಆಗುತ್ತೆ ಅನ್ನೋದು ಸಿನಿಮಾದ ಕಥೆ. ಸಿನಿಮಾಗೆ ಶೀರ್ಷಿಕೆ ಇಡಲು ಒಂದು ಕಾರಣ ಇದೆ. ಅದನ್ನು ಸಿನಿಮಾದಲ್ಲಿ ನೋಡಬೇಕು ಎಂಬುದು ಭಟ್ಟರ ಮಾತು.

‘ಸಿನಿಮಾದಲ್ಲಿ ನಟಿಸಿರುವ ಶಫಿ ಹಾಗೂ ಪವನ್ ಶೆಟ್ಟಿ ಇಬ್ಬರೂ ನನಗೆ ಕ್ಲೋಸ್ ಫ್ರೆಂಡ್ಸ್. ಗೆಳೆಯರ ಜತೆ ನಟಿಸಿದ ಖುಷಿ ಇದೆ. ನನ್ನ ಮೇಲೆಯೇ ಕಥೆ ಸಾಗುತ್ತದೆ. ಸಿನಿಮಾದಲ್ಲಿ ಭಯಾನಕ ದೃಶ್ಯಗಳಿವೆ. ಆ ದೃಶ್ಯಗಳಲ್ಲಿ ನಟಿಸಿದ್ದು ಚಾಲೆಂಜ್ ಆಗಿತ್ತು.

ಈ ಚಿತ್ರದ ಹಾಡೊಂದರಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದೇನೆ. ‘ಚಿತ್ರದ ಒಂದು ಹಾಡು ರಿಲೀಸ್ ಆಗಿದೆ. ಈ ಹಾಡು ರಿಲೀಸ್ ಆದ ಬಳಿಕ ಬೋಲ್ಡ್ ಪಾತ್ರಗಳೇ ಹುಡುಕಿ ಬಂದಿವೆ. ಬಟ್ಟೆ ಕಡಿಮೆ ಹಾಕಿ ಬೋಲ್ಡ್ ಎನ್ನಿಸಿಕೊಳ್ಳಬಾರದು. ಪಾತ್ರವೇ ಬೋಲ್ಡ್ ಆಗಿರಬೇಕು ಎಂಬುದು ಅನಿತಾ ಮಾತು.

Categories
ಸಿನಿ ಸುದ್ದಿ

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಲಾಂಛನ ಅನಾವರಣ: ಮಾರ್ಚ್ 23ರಿಂದ 30ರವರೆಗೆ ಚಿತ್ರೋತ್ಸವ

14ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಲಾಂಛನವಙ್ಉ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನಾವರಣ ಮಾಡಿದರು.


ನಗರದ ಪದ್ಮನಾಭನಗರದಲ್ಲಿ ನಡೆದ ಸಮಾರಂಭದಲ್ಲಿ 14ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಲಾಂಛನ ಬಿಡುಗಡೆಗೊಂಡಿದ್ದು, 2023 ಮಾರ್ಚ್ 23ರಿಂದ 30ರವರೆಗೆ ಚಿತ್ರೋತ್ಸವ ನಡೆಯಲಿದೆ.


ಸಮಾರಂಭದಲ್ಲಿ ಚಿತ್ರೋತ್ಸವದ ಸಂಘಟನಾ ಸಮಿತಿ ಅಧ್ಯಕ್ಷರೂ ಆದ ಕಂದಾಯ ಸಚಿವ ಆರ್.ಅಶೋಕ್, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಅಶೋಕ್ ಕಶ್ಯಪ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಡಾ.ಪಿ.ಎಸ್.ಹರ್ಷ ಸೇರಿದಂತೆ ಸಂಸದರು, ಶಾಸಕರು, ಹಿರಿಯ ಅಧಿಕಾರಿಗಳು, ಚಲನಚಿತ್ರರಂಗದ ಗಣ್ಯರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Categories
ಸಿನಿ ಸುದ್ದಿ

ಫೆಬ್ರವರಿ 10ಕ್ಕೆ ರುಪಾಯಿ ನೋಡಬಹುದು! ಹೊಸಬರ ಹೊಸ ಬಗೆಯ ಸಿನಿಮಾ ರೆಡಿ…


ವಿಜಯ್​ ಜಗದಾಲ್​ ಮೊದಲ ಬಾರಿಗೆ ನಟಿಸಿ-ನಿರ್ದೇಶಿಸಿರುವ ‘ರೂಪಾಯಿ’ ಚಿತ್ರವು ಫೆ.10ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕಳೆದ ವಾರವಷ್ಟೇ ಚಿತ್ರದ ಟ್ರೇಲರ್ ಬಿಡುಗಡೆಯಾಗಿ ಜನರ ಮೆಚ್ಚುಗೆ ಪಡೆಯುತ್ತಿದೆ. ಈಗ ‘ಉಸಿರಾಟ’ ಎಂಬ ಹೊಸ ಹಾಡು ಬಿಡುಗಡೆಯಾಗಿದ್ದು. ಈ ಹಾಡಿಗೂ ಕೇಳುಗರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆನಂದ್​ ಆಡಿಯೋ ಚಾನಲ್​ನಲ್ಲಿ ಬಿಡುಗಡೆಯಾಗಿರುವ ‘ಉಸಿರಾಟ’ ಹಾಡನ್ನು ವ್ಯಾಸರಾಜ ಸೋಸಲೆ ಹಾಡಿದ್ದು, ಆನಂದ್​ ರಾಜಾವಿಕ್ರಮ್​ ಸಂಗೀತ ಸಂಯೋಜಿಸಿದ್ದಾರೆ. ಇನ್ನು, ನಟ-ನಿರ್ದೇಶಕ ವಿಜಯ್​ ಜಗದಾಲ್​ ಅವರೇ ಈ ಚಿತ್ರಕ್ಕೆ ಸಾಹಿತ್ಯ ರಚಿಸಿದ್ದಾರೆ.


‘ರೂಪಾಯಿ’ ಒಂದು ಪಕ್ಕಾ ಮನರಂಜನಾತ್ಮಕ ಚಿತ್ರವಾಗಿದ್ದು, ಒಂದು ಕಮರ್ಷಿಯಲ್​ ಚಿತ್ರಕ್ಕೆ ಬೇಕಾದ ಎಲ್ಲಾ ಅಂಶಗಳೂ ಈ ಚಿತ್ರದಲ್ಲಿದೆಯಂತೆ. ‘ಪ್ರೇಕ್ಷಕರಿಗೆ ಎಲ್ಲೂ ಬೋರ್ ಆಗದ ಹಾಗೆ ಚಿತ್ರಕಥೆ ಮಾಡಿದ್ದು, ಹಣದ ಮೌಲ್ಯದ ಕುರಿತು ನಗುವಿನ ಮೂಲಕ ಹೇಳುವ ಪ್ರಯತ್ನ ಮಾಡಿದ್ದೇವೆ. ಇಲ್ಲಿ ನಗಿಸುವುದಕ್ಕೆ ಯಾವುದೇ ಪ್ರತ್ಯೇಕ ಪಾತ್ರಗಳಿಲ್ಲ. ಸನ್ನಿವೇಶಗಳೇ ನಗು ಉಕ್ಕಿಸುವಂತಿದೆ’ ಎನ್ನುತ್ತಾರೆ ವಿಜಯ್​ ಜಗದಾಲ್​. ಈ ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯನ್ನೂ ಅವರೇ ರಚಿಸಿದ್ದಾರೆ.


ಈ ಚಿತ್ರದ ಕುರಿತು ಮಾತನಾಡುವ ವಿಜಯ್​ ಜಗದಾಲ್​, ‘ಇದೊಂದು ರೆಗ್ಯುಲರ್​ ಚಿತ್ರ ಅಲ್ಲ. ಐದು ಜನರ ಸುತ್ತ ಸುತ್ತುವ ಕಥೆ ಇಲ್ಲಿದೆ. ಅವರಿಗೆ ಆಕಸ್ಮಿಕವಾಗಿ ಒಂದಿಷ್ಟು ಹಣ ಸಿಗುತ್ತದೆ. ಒಂದು ದೊಡ್ಡ ಹಗರಣಕ್ಕೆ ಸಂಬಂಧಿಸಿದ ಹಣ, ಮಧ್ಯಮ ವರ್ಗದ ಜನರಿಗೆ ಸಿಕ್ಕಾಗ ಅವರ ಜೀವನದಲ್ಲಿ ಏನೆಲ್ಲ ಬದಲಾವಣೆ ಆಗುತ್ತದೆ ಎಂಬುದರ ಕುರಿತು ಹೇಳುವುದಕ್ಕೆ ಹೊರಟಿದ್ದೇವೆ. ದುಡ್ಡಿಗಿಂತ ಸಂಬಂಧಗಳ ಕುರಿತಾದ ಚಿತ್ರ ಇದು. ಆ ದುಡ್ಡು ಸಂಬಂಧಗಳನ್ನು ಹೇಗೆ ಹಾಳು ಮಾಡುತ್ತದೆ ಎಂದು ಹೇಳುವ ಚಿತ್ರ ಇದು’ ಎಂದು ಹೇಳುತ್ತಾರೆ.


ವಿವಿಧ್​ ಸಿನಿಮಾಸ್​ ಬ್ಯಾನರ್​ನಡಿ ಮಂಜುನಾಥ್​ ಎಂ, ಹರೀಶ್​ ಬಿ.ಕೆ ಮತ್ತು ವಿನೋದ ಎನ್​ ಜಂಟಿಯಾನಿ ನಿರ್ಮಿಸಿರುವ ಈ ಚಿತ್ರದಲ್ಲಿ ವಿಜಯ್ ಜಗದಾಲ್​ ಜೊತೆಗೆ ಕೃಷಿ ತಾಪಂಡ, ಯಶ್ವಿಕ್​, ‘ಮೈತ್ರಿ’ ಜಗದೀಶ್​, ಶಂಕರ್​ ಮೂರ್ತಿ, ರಾಮ್​ ಚಂದನ್​, ಚಂದನಾ ರಾಘವೇಂದ್ರ, ಪ್ರಮೋದ್​ ಶೆಟ್ಟಿ, ರಾಕ್​ಲೈನ್​ ಸುಧಾಕರ್​, ಮೋಹನ್​ ಜನೇಜ ಮುಂತಾದವರು ನಟಿಸಿದ್ದಾರೆ.

ಚಿತ್ರಕ್ಕೆ ಆನಂದ್ ರಾಜವಿಕ್ರಮ್​ ಅವರ ಸಂಗೀತ, ಆರ್​.ಡಿ. ನಾಗಾರ್ಜುನ್​ ಅವರ ಛಾಯಾಗ್ರಹಣ ಮತ್ತು ಶಿವರಾಜ್​ ಮೇಹು ಅವರ ಸಂಕಲನವಿದೆ.

Categories
ಸಿನಿ ಸುದ್ದಿ

ಶರಣ್ ಹುಟ್ಟು ಹಬ್ಬಕ್ಕೆ ಛೂ ಮಂತರ್ ಸ್ಪೆಷಲ್ ಗ್ಲಿಂಪ್ಸ್

ತಮ್ಮ ಅಭಿನಯದ ಮೂಲಕ ಜನಮನ ಗೆದ್ದಿರುವ ನಟ ಶರಣ್ ಅವರಿಗೆ ಹುಟ್ಟುಹಬ್ಬದ ಸಡಗರ. ಪ್ರಸ್ತುತ ಶರಣ್ ನಾಯಕರಾಗಿ ನಟಿಸಿರುವ “ಛೂ ಮಂತರ್” ಚಿತ್ರತಂಡದಿಂದ ನಾಯಕ ಶರಣ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಸ್ಪೆಷಲ್ ಗ್ಲಿಂಪ್ಸ್(ಟೀಸರ್) ಬಿಡುಗಡೆಯಾಗಿದೆ. ಶರಣ್ ಮೊದಲ ಬಾರಿಗೆ ಸಂಪೂರ್ಣ ಹಾರರ್ ಕಥಾಹಂದರ ಹೊಂದಿರುವ ಚಿತ್ರದಲ್ಲಿ ನಟಿಸಿದ್ದಾರೆ. ಚಿತ್ರದ ವಿಷ್ಯುವಲ್ಸ್ ನೋಡಿದರೆ, ಹಾಲಿವುಡ್ ಚಿತ್ರಗಳು ನೆನಪಾಗುತ್ತದೆ.

ಟೀಸರ್ ನಲ್ಲೇ ಉತ್ತರ ಕಾಂಡವನ್ನು ಅನುಪ್ ಕಟ್ಟುಕರನ್ ಅದ್ಭುತವಾಗಿ ತೋರಿದ್ದಾರೆ. ಶರಣ್ ಹುಟ್ಟುಹಬ್ಬಕ್ಕೆ ಬಿಡುಗಡೆಯಾಗಿರುವ ಟೀಸರ್ ಎಲ್ಲರ ಗಮನ ಸೆಳೆಯುತ್ತಿದೆ. ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ.

ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ಈ ಚಿತ್ರವನ್ನು ನಿರ್ಮಿಸಿದ್ದಾರೆ. “ಕರ್ವ” ಖ್ಯಾತಿಯ ನವನೀತ್ ನಿರ್ದೇಶಿಸಿದ್ದಾರೆ.

ಶರಣ್, ಮೇಘನಾ ಗಾಂವ್ಕರ್, ಚಿಕ್ಕಣ್ಣ, ಅದಿತಿ ಪ್ರಭುದೇವ ಹಾಗೂ ಪ್ರಭು ಮುಂಡ್ಕರ್ ಚಿತ್ರದ ಪ್ರಮುಖಪಾತ್ರದಲ್ಲಿದ್ದಾರೆ.

.

Categories
ಸಿನಿ ಸುದ್ದಿ

ವಿನಾಯಕ ಮೆಸ್ ನಲ್ಲಿ ಲಿಖಿತ್ ಶೆಟ್ಟಿ ಫುಲ್ ಮೀಲ್ಸ್…

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಿರ್ಮಾಣದ “ಫ್ಯಾಮಿಲಿ ಪ್ಯಾಕ್” ಚಿತ್ರದಲ್ಲಿ ನಟಿಸಿ ಜನಪ್ರಿಯರಾಗಿರುವ ಲಿಖಿತ್ ಶೆಟ್ಟಿ ನಾಯಕರಾಗಿ ಅಭಿನಯಿಸುತ್ತಿರುವ “ಫುಲ್ ಮೀಲ್ಸ್” ಚಿತ್ರದ ಚಿತ್ರೀಕರಣ ಬೆಂಗಳೂರಿನ ಅರಮನೆಯಲ್ಲಿ ನಡೆಯುತ್ತಿದೆ. ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.

ಇದೊಂದು ಸಂಪೂರ್ಣ ಮನೋರಂಜನಾತ್ಮಕ ಚಿತ್ರ. ನನ್ನ ಮೊದಲ ನಿರ್ದೇಶನದ ಚಿತ್ರ ಕೂಡ. ಲಿಖಿತ್ ಶೆಟ್ಟಿ ನಾಯಕರಾಗಿ, ಖುಷಿ ರವಿ, ತೇಜಸ್ವಿನಿ ಶರ್ಮ ನಾಯಕಿಯರಾಗಿ ನಟಿಸುತ್ತಿದ್ದಾರೆ. ರಂಗಾಯಣ ರಘು, ಸಾಧುಕೋಕಿಲ ಸೇರಿದಂತೆ ಅನೇಕ ಅನುಭವಿ ಕಲಾವಿದರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಮನೋಹರ್ ಜೋಷಿ ಛಾಯಾಗ್ರಹಣ ಹಾಗೂ ಗುರುಕಿರಣ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಬೆಂಗಳೂರು, ರಾಮನಗರ ಹಾಗೂ ಮಂಗಳೂರಿನಲ್ಲಿ ಚಿತ್ರೀಕರಣ ನಡೆಯಲಿದೆ ಎಂದು ನಿರ್ದೇಶಕ ಎನ್.ವಿನಾಯಕ ಚಿತ್ರದ ಕುರಿತು ಮಾಹಿತಿ ನೀಡಿದರು.

ನಾನು ಈ ಚಿತ್ರದಲ್ಲಿ ಫೋಟೋಗ್ರಾಫರ್. ಮದುವೆ ಮನೆಗೆ ಫೋಟೋ ತೆಗೆಯಲು ಹೋದಾಗ ಮದುಮಗಳ ಮೇಲೆ ಪ್ರೀತಿಯಾಗುತ್ತದೆ. ಆನಂತರ ಏನಾಗುತ್ತದೆ? ಎಂಬುದನ್ನು ಚಿತ್ತದಲ್ಲೇ ನೋಡಬೇಕು. ಒಟ್ಟಿನಲ್ಲಿ ನಾವು ಇಡೀ ತಂಡ ಸೇರಿ ಪ್ರೇಕ್ಷಕರಿಗೆ ಮನೋರಂಜನೆಯ “ಫುಲ್ ಮೀಲ್ಸ್” ನೀಡಲಿದ್ದೇವೆ ಎಂದರು ನಾಯಕ ಲಿಖಿತ್ ಶೆಟ್ಟಿ.

ನಾಯಕಿಯರಾದ ಖುಷಿ ರವಿ, ತೇಜಸ್ವಿನಿ ಶರ್ಮ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು.

ಕಲಾವಿದರಾದ ರಂಗಾಯಣ ರಘು, ಚಂದ್ರಕಲಾ ಮೋಹನ್, ರಮೇಶ್ ಪಂಡಿತ್, ಗಣೇಶ್ ರಾವ್, ವಿಜಯ್ ಚೆಂಡೂರ್, ಛಾಯಾಗ್ರಾಹಕ ಮನೋಹರ್ ಜೋಶಿ ಹಾಗೂ ಸಂಭಾಷಣೆ ಬರೆಯುತ್ತಿರುವ ಹರೀಶ್ ರಾಜಣ್ಣ “ಫುಲ್ ಮೀಲ್ಸ್” ಬಗ್ಗೆ ಮಾತನಾಡಿದರು.

Categories
ಸಿನಿ ಸುದ್ದಿ

ಸಿರಿ ಲಂಬೋದರ ವಿವಾಹ ಫೆಬ್ರವರಿ 17ಕ್ಕೆ ಶುರು…

ಸಾಮಾನ್ಯವಾಗಿ ಫೆಬ್ರವರಿ ಶುರುವಾಯಿತೆಂದರೆ, ಮುಹೂರ್ತಗಳು ಶುರುವಾಗುತ್ತದೆ. ಇದೇ ಫೆಬ್ರವರಿ 17 ರ ಶುಭದಿವಸ ನಡೆಯಲಿರುವ “ಸಿರಿ ಲಂಬೋದರ ವಿವಾಹ” ಕ್ಕೆ ತಾವು ಕುಟುಂಬ ಸಮೇತ ಆಗಮಿಸಬೇಕೆಂದು ವಿನಂತಿ.

ಹೌದು. ಸೌರಭ್ ಕುಲಕರ್ಣಿ ನಿರ್ದೇಶನದಲ್ಲಿ ಮೂಡಿಬಂದಿರುವ ಸಂಪೂರ್ಣ ಮನೋರಂಜನಾತ್ಮಕ ಚಿತ್ರ “ಸಿರಿ ಲಂಬೋದರ ವಿವಾಹ” (ಎಸ್ ಎಲ್ ವಿ) ಚಿತ್ರ ಇದೇ ಹದಿನೇಳರಂದು ಬಿಡುಗಡೆಯಾಗುತ್ತಿದೆ. ಈ ಕುರಿತು ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.

ಎರಡು ತಿಂಗಳ ಹಿಂದೆ ರಮೇಶ್ ಅರವಿಂದ್ ಅವರು ಟೀಸರ್ ಬಿಡುಗಡೆ ಮಾಡಿ, ಶುಭ ಕೋರಿದ್ದರು. ಆನಂತರ ನಮ್ಮ ಚಿತ್ರದ ಪ್ರೀಮಿಯರ್ ಹೊರದೇಶಗಳಲ್ಲಿ ನಡೆಯಿತು. ಅಲ್ಲಿನ ಜನ ನಮ್ಮ ಚಿತ್ರವನ್ನು ಮನಸಾರೆ ಮೆಚ್ಚಿ ಕೊಂಡರು. ಈಗ ಟ್ರೇಲರ್ ಬಿಡುಗಡೆಯಾಗಿದೆ. ಸಿಹಿಕಹಿ ಚಂದ್ರು, ಶಾಲಿನಿ, ಬೇಬಿ ವಂಶಿಕಾ ಸೇರಿದಂತೆ ಅನೇಕ ಗಣ್ಯರು ನಮ್ಮ ಚಿತ್ರಕ್ಕೆ ನೀಡಿರುವ ಪ್ರೋತ್ಸಾಹಕ್ಕೆ ನಾನು ಆಭಾರಿ. ಫೆಬ್ರವರಿ ಹದಿನೇಳು ಚಿತ್ರ ತೆರೆಗೆ ಬರಲಿದೆ. ನೋಡಿ ಹಾರೈಸಿ ಎಂದ ನಿರ್ದೇಶಕ ಸೌರಭ್ ಕುಲಕರ್ಣಿ, ತಮ್ಮ ತಂಡಕ್ಕೆ ಧನ್ಯವಾದ ತಿಳಿಸಿದರು.

ವಿದೇಶದಲ್ಲಿ ನಮ್ಮ ಚಿತ್ರಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಮನ ತುಂಬಿ‌ ಬಂದಿದೆ. ಇಲ್ಲೂ ಕೂಡ ಗೆಲ್ಲುವ ವಿಶ್ವಾಸವಿದೆ ಎನ್ನುತ್ತಾರೆ ನಾಯಕ ಅಂಜನ್ ಎ ಭಾರದ್ವಾಜ್.

ಚಿತ್ರ ಸಾಗಿ ಬಂದ ದಾರಿ ವಿವರಿಸಿದ ನಾಯಕಿ ದಿಶಾ ರಮೇಶ್, ಇದು ಉತ್ತಮ ಕಂಟೆಂಟ್ ವುಳ್ಳ ಚಿತ್ರ ಎಲ್ಲರೂ ನೋಡಿ ಎಂದರು.

ಇತ್ತೀಚೆಗೆ ಹೊಸಬರ ಚಿತ್ರ ಚೆನ್ನಾಗಿದ್ದರೂ ಜನ ಥಿಯೇಟರ್ ಹತ್ತಿರ ಬರುತ್ತಿಲ್ಲ. ಕೆಲವು ಚಿತ್ರತಂಡದವರು ಲೈವ್ ಮೂಲಕ ಜನರನ್ನು ಥಿಯೇಟರ್ ಗೆ ಬನ್ನಿ ಎಂದು ಕಣ್ಣೀರು ಹಾಕುತ್ತಾ ಕರೆಯುತ್ತಿದ್ದುದ್ದನ್ನು ಕಂಡು ಬೇಸರವಾಯಿತು. ಅ ಪರಿಸ್ಥಿತಿ ಈ ಚಿತ್ರಕ್ಕೆ ಬಾರದಿರಲಿ ಎಂದು ನಟ ರಾಜೇಶ್ ನಟರಂಗ ಹೇಳಿದರು. ನಟ ಸುಂದರ್ ವೀಣಾ ಸಹ ಇದೇ ಮಾತನ್ನು ಪುನರುಚ್ಚರಿಸಿದರು. ರೋಹಿತ್ ನಾಗೇಶ್ ಸಹ ಇದೊಂದು ಉತ್ತಮ ಚಿತ್ರ ಕುಟುಂಬ ಸಮೇತ ನೋಡಿ ಎಂದರು.

ಸಂಗೀತ ನಿರ್ದೇಶಕ ಸಂಘರ್ಷ್ ಕುಮಾರ್ ಹಾಗೂ ನಿರ್ಮಾಪಕಿ ನಮ್ರತ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

Categories
ಸಿನಿ ಸುದ್ದಿ

ಫೆಬ್ರವರಿ 10 ರಿಂದ ರಂಗಿನ ರಾಟೆ ಆಟ ಶುರು…

ಕಮಲ್ ಪ್ರೊಡಕ್ಷನ್ಸ್ ಬ್ಯಾನರ್ ನಲ್ಲಿ ಕವಿತಾ ಅರುಣ್ ಕುಮಾರ್ ನಿರ್ಮಿಸಿರುವ ” ರಂಗಿನ ರಾಟೆ” ಚಿತ್ರ ಫೆಬ್ರವರಿ 10 ರಂದು ಬಿಡುಗಡೆಯಾಗುತ್ತಿದೆ.

ಇದೇ ಹತ್ತರಂದು ನಮ್ಮ ಚಿತ್ರ ತೆರೆಗೆ ಬರುತ್ತಿದೆ. ರಿಲಯನ್ಸ್ ಎಂಟರ್ ಟೈನ್ ಮೆಂಟ್ ಮೂಲಕ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ನಾನು ಮೂರು ವಿಭಿನ್ನ ಶೇಡ್ ಗಳಲ್ಲಿ ಕಾಣಿಸಿಕೊಂಡಿದ್ದೇನೆ. ಜೀವನ ಕೂಡ ರಾಟೆಯ ತರಹ ಸುತ್ತಿಸುತ್ತಿ ಮತ್ತೇ ಅಲ್ಲೇ ಬಂದು ನಿಲ್ಲುತ್ತದೆ. ಹಾಗಾಗಿ ಚಿತ್ರಕ್ಕೆ “ರಂಗಿನ ರಾಟೆ” ಎಂದು ಶೀರ್ಷಿಕೆ ಇಡಲಾಗಿದೆ ಎಂದರು ನಾಯಕ ರಾಜೀವ್ ರಾಥೋಡ್.

ನಾನು ಸಹ ಮೂರು ಶೇಡ್ ಗಳಲ್ಲಿ ಕಾಣಿಸಿಕೊಂಡಿರುವುದಾಗಿ ಭವ್ಯ ತಿಳಿಸಿದರು.

ಇದೊಂದು ಉತ್ತಮ ಕಂಟೆಂಟ್ ವುಳ್ಳ ಚಿತ್ರ. ಜನ ಮುಚ್ಚಿಕೊಳ್ಳುವ ಭರವಸೆಯಿದೆ. ಸಹಕಾರ ನೀಡಿದ ನನ್ನ ತಂಡಕ್ಕೆ ಧನ್ಯವಾದ ತಿಳಿಸಿದರು ನಿರ್ದೇಶಕ ಆರ್ಮುಗಂ.

ಚಿತ್ರದ ಕಥೆ ಇಷ್ಟವಾಗಿ ನಿರ್ಮಾಣಕ್ಕೆ ಮುಂದಾದೆ. ಈಗ ಚಿತ್ರ ಬಿಡುಗಡೆ ಹಂತ ತಲುಪಿದೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕಿ ಕವಿತಾ ಅರುಣ್ ಕುಮಾರ್.

ಸಂತೋಷ್ ಮಳವಳ್ಳಿ ಗೀತರಚನೆ, ಚಂದ್ರು ಓಬ್ಬಯ್ಯ ಸಂಗೀತ ನಿರ್ದೇಶನ, ರವಿ ಸುವರ್ಣ ಛಾಯಾಗ್ರಹಣ ಮತ್ತು ದಾಮೋದರ್ ನಾಯಕ್ ಸಂಕಲನ ಈ ಚಿತ್ರಕ್ಕಿದೆ.

ರಾಜೀವ್ ರಾಥೋಡ್, ದುನಿಯಾ ರಶ್ಮಿ, ಸಂತೋಷ್ ಮಳವಳ್ಳಿ, ಭವ್ಯ, ರಾಂಗ್ ಕಾಲ್ ಚಂದ್ರು, ಮುರಳಿ ಮೋಹನ್, ಸ್ವಪ್ನ ಮುಂತಾದವರು “ರಂಗಿನ ರಾಟೆ” ಚಿತ್ರದಲ್ಲಿ ಅಭಿನಯಿಸಿದ್ದಾರೆ.

Categories
ಸಿನಿ ಸುದ್ದಿ

ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾದ ರಾಮ್ ಚರಣ್ : ಹೆಚ್ಚುತ್ತಿದೆ ಮೆಗಾ ಪವರ್ ಸ್ಟಾರ್ ಕ್ರೇಜ್…

ಲಾಸ್ ಏಂಜಲೀಸ್ ನಿಂದ ವಾರಂಗಲ್ ವರೆಗೆ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಕ್ರೇಜ್ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಎಸ್. ಎಸ್ ರಾಜಮೌಳಿ ನಿರ್ದೇಶನದ ‘ಆರ್ ಆರ್ ಆರ್’ ಚಿತ್ರದ ಅಮೋಘ ಅಭಿನಯದ ಮೂಲಕ ರಾಮ್ ಚರಣ್ ಭಾರತವನ್ನು ಜಾಗತಿಕ ಮಟ್ಟದಲ್ಲಿ ಹೆಮ್ಮೆ ಪಡುವಂತೆ ಮಾಡಿದ್ದಾರೆ. ಆರ್ ಆರ್ ಆರ್ ನಂತರ ರಾಮ್ ಚರಣ್ ಕ್ರೇಜ್ ಹಾಗೂ ಅಭಿಮಾನಿ ಬಳಗ ಕೂಡ ದೊಡ್ಡದಾಗಿದ್ದು, ಅವರ ಮುಂದಿನ ಸಿನಿಮಾಗಳಿಗಾಗಿ ಎದುರು ನೋಡುತ್ತಿದ್ದಾರೆ.

ಮೆಗಾ ಪವರ್ ಸ್ಟಾರ್ ಮುಂದಿನ ಸಿನಿಮಾ ಬಗ್ಗೆ ಎಲ್ಲರಲ್ಲೂ ಕುತೂಹಲ ಮೂಡಿದೆ. ಖ್ಯಾತ ನಿರ್ದೇಶಕ ಶಂಕರ್ ನಿರ್ದೇಶನದ ಸಿನಿಮಾದಲ್ಲಿ ರಾಮ್ ಚರಣ್ ನಟಿಸುತ್ತಿದ್ದಾರೆ. ಇಬ್ಬರ ಕಾಂಬಿನೇಶನ್ ಮೇಲೆ ಮೆಗಾ ಫ್ಯಾಮಿಲಿ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಬಿಗ್ ಬಜೆಟ್ ನಲ್ಲಿ ಆಕ್ಷನ್ ಎಂಟರ್ಟೈನರ್ ಸಬ್ಜೆಕ್ಟ್ ಸಿನಿಮಾ ನಿರ್ಮಾಣವಾಗುತ್ತಿದ್ದು, ಬಾಲಿವುಡ್ ಬೆಡಗಿ ಕಿಯಾರ ಅಡ್ವಾಣಿ ರಾಮ್ ಚರಣ್ ಜೊತೆ ಸ್ಕ್ರೀನ್ ಶೇರ್ ಮಾಡುತ್ತಿದ್ದಾರೆ.

ಇದೇ ವರ್ಷ ಸಿನಿಮಾ ಬಿಡುಗಡೆಯಾಗುವ ಸಾದ್ಯತೆಯೂ ಇದೆ. ಸದ್ಯದ್ಲಲೇ ಈ ಚಿತ್ರದ ಟೈಟಲ್ ಕೂಡ ರಿವೀಲ್ ಆಗಲಿದೆ. ಖ್ಯಾತ ನಿರ್ಮಾಪಕ ದಿಲ್ ರಾಜು ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ನಡಿ ಈ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ.

ಈ ಸಿನಿಮಾ ನಂತರ ಬುಚ್ಚಿ ಬಾಬು ಸನಾ ನಿರ್ದೇಶನದಲ್ಲಿ ವೆಂಕಟ ಸತೀಶ್ ಕಿಲಾರು ನಿರ್ಮಾಣದ ಚಿತ್ರದಲ್ಲಿ ರಾಮ್ ಚರಣ್ ನಟಿಸುತ್ತಿದ್ದಾರೆ. ಜೆರ್ಸಿ ಸಿನಿಮಾ ಖ್ಯಾತಿಯ ಗೌತಮ್ ತಿನ್ನನೂರಿ ಸಿನಿಮಾಗೂ ಮೆಗಾ ಪವರ್ ಸ್ಟಾರ್ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಒಟ್ನಲ್ಲಿ, ಆರ್ ಆರ್ ಆರ್ ಬಾಕ್ಸ್ ಆಫೀಸ್ ನಲ್ಲೂ ದಾಖಲೆ ಬರೆಯೋದ್ರ ಜೊತೆಗೆ ಮೆಗಾ ಪವರ್ ಸ್ಟಾರ್ ಕೆರಿಯರ್ ಗೂ ಹೊಸ ಮೆರಗು ನೀಡಿದೆ.

Categories
ಸಿನಿ ಸುದ್ದಿ

ಅಖಿಲ್ ಅಕ್ಕಿನೇನಿ ‘ಏಜೆಂಟ್’ ಸಿನಿಮಾ ಬಿಡುಗಡೆಗೆ ಡೇಟ್ ಫಿಕ್ಸ್: ಏಪ್ರಿಲ್ 28ಕ್ಕೆ ಪ್ಯಾನ್ ಇಂಡಿಯಾ ಸಿನಿಮಾ ರಿಲೀಸ್…

ಯಂಗ್ ಅಂಡ್ ಡೈನಾಮಿಕ್ ಹೀರೋ ಅಖಿಲ್ ಅಕ್ಕಿನೇನಿ, ಸ್ಟೈಲಿಶ್ ಮೇಕರ್ ಸುರೇಂದರ್ ರೆಡ್ಡಿ ಕಾಂಬಿನೇಶನ್ ಹೈ ವೋಲ್ಟೇಜ್ ಸಿನಿಮಾ ‘ಏಜೆಂಟ್’. ಟಾಲಿವುಡ್ ಅಂಗಳದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾಗಳಲ್ಲೊಂದಾದ ‘ಏಜೆಂಟ್’ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಏಪ್ರಿಲ್ 28ಕ್ಕೆ ಸಿನಿಮಾ ತೆರೆ ಮೇಲೆ ಬರುತ್ತಿದೆ. ಹೊಸ ವರ್ಷದ ಆರಂಭದಲ್ಲಿ ಮೇಕಿಂಗ್ ವೀಡಿಯೋ ಬಿಡುಗಡೆ ಮಾಡಿ ಬೇಸಿಗೆಯಲ್ಲಿ ಸಿನಿಮಾ ರಿಲೀಸ್ ಎಂದು ತಿಳಿಸಿದ್ದ ಚಿತ್ರತಂಡ ಇದೀಗ ಬಿಡುಗಡೆಯ ದಿನಾಂಕವನ್ನು ರಿವೀಲ್ ಮಾಡಿದೆ.

ವೈಲ್ಡ್ ಆಕ್ಷನ್ ಗ್ಲಿಂಪ್ಸ್ ಬಿಡುಗಡೆ ಮಾಡುವ ಮೂಲಕ ‘ಏಜೆಂಟ್’ ಚಿತ್ರದ ರಿಲೀಸ್ ಡೇಟ್ ರಿವೀಲ್ ಮಾಡಿದೆ ಚಿತ್ರತಂಡ. ಚಿತ್ರದಲ್ಲಿ ಅಖಿಲ್ ಅಕ್ಕಿನೇನಿ ಸಖತ್ ಸ್ಟೈಲಿಶ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದು, ಸಿಕ್ಸ್ ಪ್ಯಾಕ್ ನಲ್ಲಿ ತೆರೆ ಮೇಲೆ ಮಿಂಚಲು ಸಜ್ಜಾಗಿದ್ದಾರೆ. ನಿರ್ದೇಶಕ ಸುರೇಂದರ್ ರೆಡ್ಡಿ ಈ ಚಿತ್ರವನ್ನು ಇತರೆ ಸ್ಪೈ ಥ್ರಿಲ್ಲರ್ ಸಿನಿಮಾಗಳಿಗಿಂತಲೂ ಡಿಫ್ರೆಂಟ್ ಆಗಿ ತೆರೆ ಮೇಲೆ ತರುತ್ತಿದ್ದು ಇಬ್ಬರ ಕಾಂಬಿನೇಶನ್ ಮೇಲೆ ಸಿನಿ ಪ್ರೇಮಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಚಿತ್ರದಲ್ಲಿ ಸಾಕ್ಷಿ ವೈದ್ಯ ಅಖಿಲ್ ಅಕ್ಕಿನೇನಿಗೆ ನಾಯಕಿಯಾಗಿ ನಟಿಸಿದ್ದು, ಮಮ್ಮುಟ್ಟಿ ಚಿತ್ರದ ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ.

ರಾಮಬ್ರಹ್ಮಂ ಸುಂಕರ AK ಎಂಟರ್ಟೈನ್ಮೆಂಟ್ಸ್ ಹಾಗೂ ಸುರೇಂದ್ರ 2 ಸಿನಿಮಾ ಬ್ಯಾನರ್ ನಡಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಚಿತ್ರಕ್ಕೆ ವಕ್ಕನಾಥಂ ವಂಶಿ ಕಥೆ ಬರೆದಿದ್ದು, ರಾಷ್ಟ್ರ ಪ್ರಶಸ್ತಿ ವಿಜೇತ ನವೀನ್ ನೂಲಿ ಸಂಕಲನ, ಅವಿನಾಶ ಕೊಲ್ಲ ಕಲಾ ನಿರ್ದೇಶನ, ಅಜೇಯ್ ಸುಂಕರ, ಪಾತಿ ದೀಪ ರೆಡ್ಡಿ ಸಹ ನಿರ್ಮಾಣ ಚಿತ್ರಕ್ಕಿದೆ. ಹಿಪ್ ಹಾಪ್ ಥಮೀಜಾ ಸಂಗೀತ ನಿರ್ದೇಶನದಲ್ಲಿ ಮೂಡಿ ಬಂದ ಏಜೆಂಟ್ ಚಿತ್ರ ರಸೂಲ್ ಎಲ್ಲೋರೆ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ. ಸಾಕಷ್ಟು ಹೈಪ್ ಕ್ರಿಯೇಟ್ ಮಾಡಿರುವ ಏಜೆಂಟ್ ಸಿನಿಮಾ ಏಪ್ರಿಲ್ 28ಕ್ಕೆ ಬಿಡುಗಡೆಯಾಗುತ್ತಿದೆ.

error: Content is protected !!