Categories
ಸಿನಿ ಸುದ್ದಿ

ಸ್ಪೂಕಿ ಕಾಲೇಜ್ ಟೀಸರ್ ಗೆ ಭರಪೂರ ಮೆಚ್ಚುಗೆ…

ಉತ್ಸಾಹಿ ಯುವ ನಿರ್ದೇಶಕ ಭರತ್ ಜಿ ನಿರ್ದೇಶಿಸಿರುವ “ಸ್ಪೂಕಿ ಕಾಲೇಜ್” ಚಿತ್ರದ ಟೀಸರ್ ಶ್ರೀದೇವಿ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ. ಬಿ.ಜಿ.ಎಸ್ ಮತ್ತು ಎಸ್ ಜೆ ಬಿ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ ಪರಮಪೂಜ್ಯ ಶ್ರೀ ಡಾ.ಪ್ರಕಾಶನಾಥಸ್ವಾಮೀಜಿ ಬಿಡುಗಡೆ ಮಾಡಿ ಆಶೀರ್ವದಿಸಿದ್ದಾರೆ.

ಚಿತ್ರ ಆರಂಭದ ದಿನದಿಂದಲೂ ಪೋಸ್ಟರ್, ಫಸ್ಟ್ ಲುಕ್ ಸಾಕಷ್ಟು ಕುತೂಹಲ ಹುಟ್ಟಿಸಿತ್ತು. ಈಗ ಟೀಸರ್ ಬಿಡುಗಡೆಯಾಗಿದ್ದು, ಚಿತ್ರದ ಕುರಿತಾದ ಕುತೂಹಲ ಮತ್ತಷ್ಟು ಹೆಚ್ಚಿದೆ. ಈಗಾಗಲೇ ಅಧಿಕ ಸಂಖ್ಯೆಯಲ್ಲಿ ಟೀಸರ್ ವೀಕ್ಷಣೆಯಾಗುತ್ತಿದೆ. ನಟ ಡಾಲಿ ಧನಂಜಯ್ ಸೇರಿದಂತೆ ಅನೇಕ ಗಣ್ಯರು ಟೀಸರ್ ಬಗ್ಗೆ ಟ್ವೀಟ್ ಮಾಡಿ ಶುಭ ಕೋರಿದ್ದಾರೆ. “ಸ್ಪೂಕಿ” ಎಂದರೆ ಭಯ. ಟೀಸರ್ ನೋಡಿದವರಿಗೆ “ಸ್ಪೂಕಿ” ಪದದ ವಿಶ್ಲೇಷಣೆಯನ್ನು ನಿರ್ದೇಶಕರು ತಿಳಿಸುವ ಪ್ರಯತ್ನ ಮಾಡಿದ್ದಾರೆ.

ಹಿಂದೆ ಕನ್ನಡ ಚಿತ್ರರಂಗದ ಬ್ಲಾಕ್ ಬಾಸ್ಟರ್ ಹಿಟ್ ಸಿನಿಮಾಗಳಾದ “ನಾ ನಿನ್ನ ಬಿಡಲಾರೆ”, ” ಆಪ್ತಮಿತ್ರ ” ಸಿನಿಮಾಗಳ ರೀತಿ ಈ ಚಿತ್ರಕೂಡ ಪ್ರೇಕ್ಷಕರ ಮನಗೆಲುವುದರಲ್ಲಿ ಯಾವ ಸಂದೇಹವಿಲ್ಲ ಎಂಬ ಮಾತುಗಳು ಟೀಸರ್ ನೋಡಿದವರಿಂದ ಕೇಳಿ ಬರುತ್ತಿದೆ. ಕಾಲೇಜ್ ನಲ್ಲಿ ದೆವ್ವ ಇದೆ ಎನ್ನುವುದು ಈ ಚಿತ್ರದ ಹೈಲೆಟ್.

ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಧಾರಾವಾಡದ ನೂರಕ್ಕೂ ಹೆಚ್ಚಿನ ವರ್ಷ ಹಳೆಯದಾದ
ಕಾಲೇಜು ಹಾಗೂ ದಾಂಡೇಲಿ ಅರಣ್ಯ ಪ್ರದೇಶದಲ್ಲಿ ಹೆಚ್ಚಿನ ಭಾಗದ ಚಿತ್ರೀಕರಣ ನಡೆದಿದೆ. ಪೋಸ್ಟ್ ಪ್ರೊಡಕ್ಷನ್ಸ್ ಕೆಲಸ‌ ಬಿರುಸಿನಿಂದ ಸಾಗಿದೆ. ಸದ್ಯದಲ್ಲೇ ನಿಮ್ಮ ಮುಂದೆ “ಸ್ಪೂಕಿ ಕಾಲೇಜ್” ಬರಲಿದೆ.

“ರಂಗಿತರಂಗ” , “ಅವನೇ ಶ್ರೀಮನ್ನಾರಾಯಣ” ಚಿತ್ರಗಳ ನಿರ್ಮಾಪಕ ಹೆಚ್.ಕೆ.ಪ್ರಕಾಶ್ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಕಥೆ, ಚಿತ್ರಕಥೆ ಹಾಗು ಸಂಭಾಷಣೆಯನ್ನು ನಿರ್ದೇಶಕ
ಭರತ್ ಅವರೆ ಬರೆದಿದ್ದಾರೆ.

ಮನೋಹರ್ ಜೋಶಿ ಛಾಯಾಗ್ರಹಣ, ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ವಿಶ್ವಾಸ್ ಕಶ್ಯಪ್ ಕಲಾ ನಿರ್ದೇಶನ ಹಾಗೂ ಶ್ರೀಕಾಂತ್ (ಕೆ ಜಿ ಎಫ್) ಅವರ ಸಂಕಲನ ಈ ಚಿತ್ರಕ್ಕಿದೆ.

“ಪ್ರೀಮಿಯರ್ ಪದ್ಮಿನಿ” ಖ್ಯಾತಿಯ ವಿವೇಕ್ ಸಿಂಹ “ಸ್ಪೂಕಿ ಕಾಲೇಜ್” ನ ನಾಯಕ. “ದಿಯಾ” ಮೂಲಕ ಹೆಸರಾಗಿರುವ ಖುಷಿ ರವಿ ನಾಯಕಿ. ಅಜಯ್ ಪೃಥ್ವಿ, ಹನುಮಂತೇ ಗೌಡ, ಕೆ.ಎಸ್.ಶ್ರೀಧರ್, ವಿಜಯ್ ಚೆಂಡೂರ್, ಶರಣ್ಯ ಶೆಟ್ಟಿ, ರಘು ರಮಣಕೊಪ್ಪ ಹಾಗೂ “ಕಾಮಿಡಿ ಕಿಲಾಡಿಗಳು” ಶೋನ‌ ಜನಪ್ರಿಯ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

Categories
ಸಿನಿ ಸುದ್ದಿ

ಫಾರೆವರ್ ಸುಮಧರ ತ್ರಿಕೋನ ಪ್ರೇಮಕಾವ್ಯ

ಇತ್ತೀಚಿನ ದಿನಗಳಲ್ಲಿ ತಮ್ಮ ಅದ್ಭುತ ಪ್ರತಿಭೆಗಳನ್ನು ಪ್ರದರ್ಶಿಸಲು ಉತ್ತಮ ವೇದಿಕೆಗಳಿದೆ. ಅದರಲ್ಲಿ ವಿಡಿಯೋ ಸಾಂಗ್ ಕೂಡ ಒಂದು. ಎಷ್ಟೊಂದು ವಿಡಿಯೋ ಸಾಂಗ್ಸ್‌ ಚಿತ್ರಗೀತೆಗಳನ್ನು ಮೀರಿಸುವಷ್ಟು ಅದ್ದೂರಿಯಾಗಿರುತ್ತದೆ.

ಯು.ಎಸ್ ನಿವಾಸಿ ಆದರ್ಶ್ ಅಯ್ಯಂಗಾರ್ ಅವರು “ಫಾರೆವರ್” ಎಂಬ ಅದ್ದೂರಿ ವಿಡಿಯೋ ಸಾಂಗ್ ನಿರ್ಮಾಣ ಮಾಡಿದ್ದಾರೆ. ತ್ರಿಕೋನ ಪ್ರೇಮಕಥೆಯ ಈ ಸುಂದರ ಪ್ರೇಮಕಾವ್ಯವನ್ನು ರಕ್ಷಿತ್ ತೀರ್ಥಹಳ್ಳಿ ನಿರ್ದೇಶಿಸಿದ್ದಾರೆ.
ಆದರ್ಶ್ ಅಯ್ಯಂಗಾರ್, ಸಿರಿ ಪ್ರಹ್ಲಾದ್, ಸುಮನ್, ರಾಜ್, ದರ್ಶನ್ ಕುಮಾರ್ ಇದರಲ್ಲಿ ನಟಿಸಿದ್ದಾರೆ.

ಕಾಲೇಜು ಜೀವನದಲ್ಲಿ ಪ್ರೀತಿ, ಪ್ರೇಮ ಸಾಮಾನ್ಯ. “ಫಾರೆವರ್” ಸಹ ಕಾಲೇಜ್ ವೊಂದರಲ್ಲಿ ನಡೆಯುವ ತ್ರಿಕೋನ ಪ್ರೇಮಕಥೆಯನ್ನಾಧರಿಸಿದೆ‌. ಕೆಲವು
ಪ್ರೇಮ ಪ್ರಕರಣಗಳು ಮನೆಯವರಿಂದ ದೂರವಾಗುತ್ತದೆ. ಆದರೆ “ಫಾರೆವರ್” ನಲ್ಲಿ ಇದು ಯಾವುದೇ ಅಡೆತಡೆಗಳು ಇಲ್ಲದಿದ್ದರೂ, ವಿಧಿಯಿಂದ ಪ್ರೇಮಕಥೆ ತಿರುವು ಪಡೆದುಕೊಳ್ಳುತ್ತದೆ. ಹಾಗಾಗಿ “ಫಾರೆವರ್” ಗೆ “ಪ್ರೀತಿಯಂಬ ರಹದಾರಿಯಲ್ಲಿ ವಿಧಿಯೆಂಬ ಅನಿರೀಕ್ಷಿತ ನಿಲ್ದಾಣ” ಎಂಬ ಅಡಿಬರಹವಿದೆ. ಪ್ರೇಮಿಗಳ ಭಾವನೆ ಮತ್ತು ಹಾಡಿನ ಅಂತ್ಯ ಪ್ರೀತಿಯ ನಿರೀಕ್ಷೆಯನ್ನು ಪ್ರೇಮಿಗಳಲ್ಲಿ ಸದಾ ಇರುವಂತೆ ಮಾಡುವುದು ಈ ಹಾಡಿನ ವಿಶೇಷ.

ಮೂಲತಃ ಇಲ್ಲಿಯವರಾಗಿದ್ದರೂ ಯು.ಎಸ್ ನಲ್ಲಿ ನೆಲೆಸಿರುವ ಆದರ್ಶ್ ಅಯ್ಯಂಗಾರ್ ಈ ಹಿಂದೆ ಕೂಡ ಕೆಲವು ವಿಡಿಯೋ ಸಾಂಗ್ ಗಳನ್ನು ನಿರ್ಮಿಸಿ, ನಟಿಸಿದ್ದಾರೆ. “ಫಾರೆವರ್” ಇತ್ತೀಚೆಗೆ ಬಿಡುಗಡೆಯಾಗಿದ್ದು, ನೋಡುಗರ ಹಾಗೂ ಕೇಳುಗರ ಮನ ಗೆದ್ದಿದೆ.

ಹಿಂದೆ “ಹೊಂಬಣ್ಣ” ಎಂಬ ಚಿತ್ರ ನಿರ್ದೇಶಿಸಿದ್ದ ರಕ್ಷಿತ್ ತೀರ್ಥಹಳ್ಳಿ ಈ ಹಾಡನ್ನು ನಿರ್ದೇಶಿಸಿದ್ದಾರೆ. ದರ್ಶನ್ ಕುಮಾರ್ ಸಂಗೀತ ಹಾಗೂ ಗೀತರಚನೆ, ಗುರುಪ್ರಸಾದ್ ನರ್ನಾಡ್ ಛಾಯಾಗ್ರಹಣ ಹಾಗೂ
ಸುಧೀರ್ ಎಸ್ ಜೆ ಅವರ ಸಂಕಲನ “ಫಾರೆವರ್” ಗಿದೆ.

ಈ ವಿಡಿಯೋ ಸಾಂಗ್ ವೀಕ್ಷಿಸಿರುವ ನಟಿ ರುಕ್ಮಿಣಿ ವಸಂತ್, ನಿರ್ದೇಶಕ ಪ್ರೀತಂ ಗುಬ್ಬಿ ಸೇರಿದಂತೆ ಕನ್ನಡ ಚಿತ್ರರಂಗದ ಅನೇಕ ಗಣ್ಯರು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಆದರ್ಶ್ ಅಯ್ಯಂಗಾರ್ ತಮ್ಮ ಶ್ರೀಕೃಷ್ಣ ಪ್ರೊಡಕ್ಷನ್ಸ್ ಮೂಲಕ ನೂತನ ಪ್ರತಿಭೆಗಳಿಗೆ ಅವಕಾಶ ನೀಡುವ ಯೋಜನೆ ಹಾಕಿಕೊಂಡಿದ್ದಾರೆ.

Categories
ಸಿನಿ ಸುದ್ದಿ

777 ಚಾರ್ಲಿ ಸಿನಿಮಾಗೆ ತೆರೆಗೆ ವಿನಾಯಿತಿ ಘೋಷಿಸಿದ ರಾಜ್ಯ ಸರ್ಕಾರ

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಹಾಗೂ ಕಿರಣ್ ರಾಜ್ ಕಾಂಬಿನೇಷನ್ ನಲ್ಲಿ ಮೂಡಿ ಬಂದಿದ್ದ 777 ಚಾರ್ಲಿ ಸಿನಿಮಾ ವರ್ಲ್ಡ್ ವೈಡ್ ಅದ್ಧೂರಿ ಪ್ರದರ್ಶನ ಕಾಣ್ತಿದೆ. ಇದೇ ತಿಂಗಳ 10ರಂದು ರಿಲೀಸ್ ಆಗಿದ್ದ ಚಿತ್ರಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗ್ತಿದೆ. ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ
ಸಿನಿಮಾ ನೋಡಿ ಕಣ್ಣೀರಾಗಿದ್ದರು. ಮನುಷ್ಯ ಹಾಗೂ ಶ್ವಾನದ ಭಾವುಕ ಜರ್ನಿಗೆ ನಾಡದೊರೆ ಬಿಕ್ಕಿಬಿಕ್ಕಿ ಅತ್ತಿದ್ದರು. ಇದೀಗ ಈ ಸಿನಿಮಾಗೆ ರಾಜ್ಯ ಸರ್ಕಾರ ತೆರಿಗೆ ವಿನಾಯಿತಿ ಘೋಷಿಸಿದೆ.

ರಕ್ಷಿತ್ ಶೆಟ್ಟಿ ತಮ್ಮದೇ ಪರಃವಃ ಸ್ಟುಡಿಯೋದಡಿ ನಿರ್ಮಾಣ ಮಾಡಿದ್ದ 777 ಚಾರ್ಲಿ ಸಿನಿಮಾದಲ್ಲಿ ಶ್ವಾನಗಳ ಸ್ವಾಸ್ಥ್ಯದ ಮೇಲಾಗುವ ಪರಿಣಾಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗಿದೆ‌. ಜೊತೆಗೆ ಪ್ರಾಣಿಗಳ ಸೂಕ್ಷ್ಮತೆಗಳನ್ನು ಎತ್ತಿಹಿಡಿಯುವ ಕಥಾವಸ್ತುವಿದೆ ಎಂಬ ಕಾರಣಕ್ಕಾಗಿ ತೆರೆಗೆ ವಿನಾಯಿತಿಗೆ ಸಾಕಷ್ಟು ಬೇಡಿಕೆ ಹೆಚ್ಚಿತ್ತು. ಇದರ ಬೆನ್ನಲ್ಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆಯಿಂದ ಆರು ತಿಂಗಳ ಕಾಲ ಜಿಎಸ್ ಟಿ ವಿಧಿಸದೇ ಸಿನಿಮಾಗೆ ವೀಕ್ಷಣೆಗೆ ಅವಕಾಶ ಕಲ್ಪಿಸಿದ್ದಾರೆ.

ಅಂದಹಾಗೇ ರಾಜ್ಯ ಸರ್ಕಾರ ಕಾಶ್ಮೀರಿ ಫೈಲ್ಸ್ ಬಳಿಕ ತೆರೆಗೆ ವಿನಾಯಿತಿ ನೀಡಿರುವ ಎರಡನೇ ಹಾಗೂ ಮೊದಲ ಕನ್ನಡ ಸಿನಿಮಾ 777 ಚಾರ್ಲಿ ಎಂಬ ಹೆಗ್ಗಳಿಕೆ ಇದೆ. ಕಿರಣ್ ರಾಜ್ ಚೊಚ್ಚಲ ಬಾರಿಗೆ ನಿರ್ದೇಶನ ಮಾಡಿರುವ ಈ ಚಿತ್ರದಲ್ಲಿ ಸಂಗೀತ ಶೃಂಗೇರಿ, ರಾಜ್ ಬಿ ಶೆಟ್ಟಿ, ಬಾಬಿ ಸಿಂಹ, ಬೇಬಿ ಶರ್ವರಿ ಸೇರಿದಂತೆ ಹಲವರು ನಟಿಸಿದ್ದಾರೆ.

Categories
ಸಿನಿ ಸುದ್ದಿ

ಅಬ್ಬಬ್ಬ ಟ್ರೇಲರ್ ಸಖತ್!

“ಆ ದಿನಗಳು” ಖ್ಯಾತಿಯ ಕೆ.ಎಂ.ಚೈತನ್ಯ ನಿರ್ದೇಶಿಸಿರುವ ಸಂಪೂರ್ಣ ಮನೋರಂಜನೆಯ “ಅಬ್ಬಬ್ಬ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.

“ಫ್ಯಾಮಿಲಿ ಪ್ಯಾಕ್” ಖ್ಯಾತಿಯ ಲಿಖಿತ್ ಶೆಟ್ಟಿ ಹಾಗೂ ಅಮೃತ ಅಯ್ಯಂಗಾರ್ ಜೋಡಿಯ ಈ ಚಿತ್ರವನ್ನು ಮೀರಾಮಾರ್ ಸಂಸ್ಥೆ ಮೂಲಕ ಆನ್ ಆಗಸ್ಟೇನ್ ಹಾಗೂ ವಿವೇಕ್ ಥಾಮಸ್ ನಿರ್ಮಿಸಿದ್ದಾರೆ.

ಆನ್ ಆಗಸ್ಟೇನ್ ಅವರು ಈ ಕಥೆ ತಂದಾಗ, ನಾನು ಒಪ್ಪಿಕೊಳ್ಳಲು‌ ಕಾರಣವಿದೆ. ನನಗೆ ಹದಿನೈದು ವರ್ಷದ ಮಗಳಿದ್ದಾಳೆ. ಕೊರೋನದಿಂದಾಗಿ ಅವಳ ಜೀವನದ ಪ್ರಮುಖ ಘಟ್ಟವಾದ ಎಸ್ ಎಸ್ ಎಲ್ ಸಿ ಯನ್ನು ಶಾಲೆಗೆ ಹೋಗದೆ ಮನೆಯಲ್ಲೇ ಕಲಿತಳು. ಆನಂತರ ಕಾಲೇಜು ದಿನಗಳನ್ನು ಮಿಸ್ ಮಾಡಿಕೊಂಡಳು. ನನ್ನ ಮಗಳು ಸೇರಿದಂತೆ ಅನೇಕ ವಿದ್ಯಾರ್ಥಿಗಳು ಎರಡು ವರ್ಷ ಶಾಲೆ ಹಾಗೂ‌ ಕಾಲೇಜು ಜೀವನದಿಂದ ದೂರಾಗಿದ್ದರು. ಇದೆಲ್ಲಾ ನನ್ನನ್ನು ಕಾಡುತ್ತಿತ್ತು. ಆ ಸಮಯಕ್ಕೆ ಈ ಕಥೆ ಸೂಕ್ತವೆನಿಸಿ, ಚಿತ್ರ ಆರಂಭ ಮಾಡಿದ್ದೆವು. ಇದೊಂದು ಪಕ್ಕಾ ಎಂಟರ್ ಟೈನ್ ಮೆಂಟ್ ಚಿತ್ರ. ಕೊರೋನ ಮುಗಿದ ನಂತರದ ವೃತ್ತಿ ಜೀವನವನ್ನು ನಗುವಿನೊಂದಿಗೆ ಆರಂಭಿಸೋಣ ಎಂದು ಈ ಚಿತ್ರ‌ ನಿರ್ದೇಶಿಸಿದ್ದೇನೆ. ಇದು ನೂರು ವರ್ಷ ತುಂಬಲಿರುವ ಬಾಲಕರ ಹಾಸ್ಟೆಲ್ ನಲ್ಲಿ ನಡೆಯುವ ಕಥೆ‌.

ಬೆಂಗಳೂರು ಹಾಗೂ ತುಮಕೂರಿನಲ್ಲಿ ಚಿತ್ರೀಕರಣ ಮಾಡಿದ್ದೇವೆ. ಇತ್ತೀಚೆಗೆ ಟ್ರೇಲರ್ ಬುಡುಗಡೆ ಮಾಡಿದ್ದೇವೆ. ಸಾಕಷ್ಟು ಮೆಚ್ಚುಗೆ ಸಿಕ್ಕಿದೆ. ಇಂದು ದೀಪಕ್ ಅಲೆಕ್ಸಾಂಡರ್ ಸಂಗೀತ ನೀಡಿ, ALL OK ಹಾಡಿರುವ ಟೈಟಲ್ ಸಾಂಗ್ ಬಿಡುಗಡೆ ಮಾಡಿದ್ದೇವೆ. ಚಿತ್ರದಲ್ಲಿ ಮೂರು ಹಾಡುಗಳಿದೆ. ಡಾಲಿ ಧನಂಜಯ, ಯೋಗರಾಜ್ ಭಟ್ ಹಾಗೂ ಕವಿರಾಜ್ ಹಾಡುಗಳನ್ನು ಬರೆದಿದ್ದಾರೆ. ಡಾಲಿ ಬರೆದಿರುವ ಹಾಡನ್ನು ವಸಿಷ್ಠ ಸಿಂಹ ಹಾಡಿದ್ದಾರೆ. ಜುಲೈ ಒಂದರಂದು ಚಿತ್ರ ಬಿಡುಗಡೆಯಾಗಲಿದೆ ನೋಡಿ. ಪ್ರೋತ್ಸಾಹ ನೀಡಿ ಎಂದರು ನಿರ್ದೇಶಕ ಕೆ.ಎಂ .ಚೈತನ್ಯ.

ಉತ್ತಮ ಕಥೆಯುಳ್ಳ ಈ ಚಿತ್ರವನ್ನು ಕನ್ನಡದಲ್ಲಿ ನಿರ್ಮಾಣ ಮಾಡುತ್ತಿರುವುದಕ್ಕೆ ನಿರ್ಮಾಪಕರಾದ ಆನ್ ಆಗಸ್ಟೇನ್ ಹಾಗೂ ವಿವೇಕ್ ಥಾಮಸ್ ಸಂತಸಪಟ್ಟರು.

ನಾನು ಕೆ.ಎಂ.ಚೈತನ್ಯ ಅವರು ಕಥೆ ಹೇಳಿದ ತಕ್ಷಣ ನಟಿಸಲು ಒಪ್ಪಿಕೊಂಡೆ. ಏಕೆಂದರೆ ನನಗೆ ಚೈತನ್ಯ ಅವರ ನಿರ್ದೇಶನದಲ್ಲಿ ನಟಿಸಲು ಆಸೆಯಿತ್ತು. ಚಿತ್ರದಲ್ಲಿ ಅಭಿನಯಿಸಿರುವ ಎಲ್ಲಾ ಕಲಾವಿದರೊಂದಿಗೆ ಕಳೆದ ಚಿತ್ರೀಕರಣದ ಸಮಯವನ್ನು ಮರೆಯಲಾಗುತ್ತಿಲ್ಲ. ಸಂಪೂರ್ಣ ಮನೋರಂಜನೆಯ ಚಿತ್ರ ನಮ್ಮದು ಎನ್ನುತ್ತಾರೆ ನಾಯಕ ಲಿಖಿತ್ ಶೆಟ್ಟಿ.

ಬೇರೆ ಭಾಷೆಯವರಾಗಿದ್ದರೂ, ಕನ್ನಡದಲ್ಲಿ ಮೊದಲ ಸಿನಿಮಾ ನಿರ್ಮಾಣ ಮಾಡುತ್ತಿರುವ ನಿರ್ಮಾಪಕರಿಗೆ ಧನ್ಯವಾದ. ನಾನು ಯಾವತ್ತೂ ಹಾಸ್ಟೆಲ್ ನಲ್ಲಿ ವಾಸ್ತವ್ಯ ಮಾಡಿಲ್ಲ. ಆದರೆ ನನ್ನನ್ನು ಬಾಯ್ಸ್ ಹಾಸ್ಟೆಲ್ ಗೆ ಕಳುಹಿಸಬಿಟ್ಟರು ಕೆ.ಎಂ.ಚೈತನ್ಯ. ಅನಿವಾರ್ಯ ಕಾರಣದಿಂದ ಆ ಹಾಸ್ಟೆಲ್ ನಲ್ಲಿ ಸಿಕ್ಕಿಹಾಕಿಕೊಂಡ ನಾನು ಹೇಗೆ ಆಚೆ ಬರುತ್ತೇನೆ ಎನ್ನವುದೇ ಕಥೆ ಎನ್ನುತ್ತಾರೆ ನಾಯಕಿ ಅಮೃತ ಅಯ್ಯಂಗಾರ್.

ನಾನು ಹಾಸ್ಟೆಲ್ ವಾರ್ಡನ್. ಫಾದರ್ ಪಾತ್ರದಲ್ಲಿ ಅಭಿನಯಿಸಿದ್ದೇನೆ. ಚಿತ್ರೀಕರಣ ಸಮಯದಲ್ಲಿ ಹುಡಗರ ಜೊತೆ ಹುಡುಗನಾಗಿಬಿಟ್ಟಿದೆ. ವಿಭಿನ್ನ ಕಾಮಿಡಿ ಜಾನರ್ ನ ಈ ಚಿತ್ರವನ್ನು ನೋಡಿ ಆನಂದಿಸಿ ಎಂದರು ಹಿರಿಯ ನಟ ಶರತ್ ಲೋಹಿತಾಶ್ವ.

ಸಂಗೀತದ ಬಗ್ಗೆ ದೀಪಕ್ ಅಲೆಕ್ಸಾಂಡರ್ ಹಾಗೂ ಛಾಯಾಗ್ರಹಣದ ಕುರಿತು ಮನೋಹರ ಜೋಶಿ ಮಾತನಾಡಿದರು. ಚಿತ್ರದಲ್ಲಿ ನಟಿಸಿರುವ ಅಜಯ್ ರಾಜ್, ಧನರಾಜ್ ಹಾಗೂ ತಾಂಡವರಾಮ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಹರಿದಾಸ್ ಕೆ ಜಿ ಎಫ್ ಅವರ ಸಂಕಲನವಿರುವ ಈ ಚಿತ ಕೆ ಆರ್ ಜಿ ಸ್ಟುಡಿಯೋಸ್ ಮೂಲಕ ಜುಲೈ ಒಂದರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

Categories
ಸಿನಿ ಸುದ್ದಿ

ಗಿರ್ಕಿ ಲವ್ ಹಾಡಿಗೆ ಲವ್ ಬರ್ಡ್ಸ್ ಸಾಥ್…

ಎದಿತ್ ಫಿಲಂ ಫ್ಯಾಕ್ಟರಿ ಮತ್ತು ವಾಸುಕಿ ಮೂವೀಸ್
ಸಹಯೋಗದೊಂದಿಗೆ ತರಂಗ ವಿಶ್ವ ನಿರ್ಮಿಸಿರುವ “ಗಿರ್ಕಿ” ಚಿತ್ರವನ್ನು ಯೋಗರಾಜ್ ಭಟ್ ಅವರ ಶಿಷ್ಯ
ವೀರೇಶ್ ಪಿ.ಎಂ ನಿರ್ದೇಶಿಸಿದ್ದಾರೆ‌.
ವೀರೇಶ್ ಅವರಿಗೆ ಇದು ಮೊದಲ ಚಿತ್ರ.

ಈ ಚಿತ್ರಕ್ಕಾಗಿ ಜಯಂತ ಕಾಯ್ಕಿಣಿ ಅವರು ಬರೆದಿರುವ “ಕದಿಯಲೇನು” ಎಂಬ ಹಾಡನ್ನು ಕನ್ನಡ ಚಿತ್ರರಂಗದ ತಾರಾ ಜೋಡಿ, “ಲವ್ ಬರ್ಡ್ಸ್” ಡಾರ್ಲಿಂಗ್ ಕೃಷ್ಣ ಹಾಗೂ ಮಿಲನ ನಾಗರಾಜ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಎ2 ಮ್ಯೂಸಿಕ್ ಮೂಲಕ ಹಾಡು ಬಿಡುಗಡೆಯಾಗಿದೆ. ತೀರ್ಥಹಳ್ಳಿಯ ಸುಂದರ ಪರಿಸರದಲ್ಲಿ ಚಿತ್ರೀಕರಣವಾಗಿರುವ ಈ ಹಾಡಿಗೆ ಮೋಹನ್ ನೃತ್ಯ ಸಂಯೋಜನೆ ಮಾಡಿದ್ದಾರೆ. ಚಿನ್ಮಯ್ ಶ್ರೀಪಾದ ಹಾಡಿದ್ದಾರೆ. ವಿಲೋಕ್ ರಾಜ್ ಹಾಗೂ ದಿವ್ಯ ಉರುಡುಗಅಭಿನಯಿಸಿದ್ದಾರೆ. ವೀರ್ ಸಮರ್ಥ್ ಸಂಗೀತ ನೀಡಿದ್ದಾರೆ.

ಈ ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಛಾಯಾಗ್ರಾಹಕ ನವೀನ್ ಕುಮಾರ್ ಛಲ್ಲ ಅವರ ಛಾಯಾಗ್ರಹಣಕ್ಕೆ ಮೆಚ್ಚುಗೆ ಮಾತುಗಳು ಕೇಳಿ ಬರುತ್ತಿದೆ. ಮೋಹನ್ ಅವರ ನೃತ್ಯ ನಿರ್ದೇಶನ ಕೂಡ ನೋಡುಗರ ಗಮನ ಸೆಳೆಯುತ್ತಿದೆ. ವೀರ್ ಸಮರ್ಥ್ ಅವರ ಸುಮಧುರ ಸಂಗೀತ ಕೇಳುಗರ ಮನಗೆದ್ದಿದೆ.

ಈ ಹಿಂದೆ ಯೋಗರಾಜ್ ಭಟ್ ಅವರು ಬರೆದಿರುವ ಎಣ್ಣೆ ಸಾಂಗ್ ಕೂಡ ಬಿಡುಗಡೆಯಾಗಿ ಯಶಸ್ವಿಯಾಗಿದೆ. ಈಗ ಚಿತ್ರದ ಲವ್ ಸಾಂಗ್ ಬಿಡುಗಡೆಯಾಗಿದ್ದು, ಜುಲೈ 8 ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ನಿರ್ದೇಶಕರೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ.
ವಾಸುಕಿ ಭುವನ್ ಅವರ ಸಹ ನಿರ್ಮಾಣವಿದೆ. ಯೋಗರಾಜ್ ಭಟ್, ಜಯಂತ ಕಾಯ್ಕಿಣಿ, ವೀರೇಶ್.ಪಿ.ಎಂ ಹಾಡುಗಳನ್ನು ಬರೆದಿದ್ದಾರೆ. ಮಧು ತುಂಬಕೆರೆ ಅವರ ಸಂಕಲನವಿರುವ ಈ ಚಿತ್ರಕ್ಕೆ ವಿನೋದ್ ಮಾಸ್ಟರ್ ಸಾಹಸ ನಿರ್ದೇಶನ ಹಾಗೂ ರಾಮು, ಮೋಹನ್ ಅವರ ನೃತ್ಯ ನಿರ್ದೇಶನವಿದೆ.

ಹಾಸ್ಯ ಕಲಾವಿದರಾಗಿ ಮನೆಮಾತಾಗಿರುವ ತರಂಗ ವಿಶ್ವ ಹಾಗೂ ವಿಲೋಕ್ ರಾಜ್ ನಾಯಕರಾಗಿ ನಟಿಸಿದ್ದು, ದಿವ್ಯ ಉರುಡುಗ ಹಾಗೂ ರಾಶಿ ಮಹದೇವ್ ನಾಯಕಿಯಾಗಿ ನಟಿಸಿದ್ದಾರೆ.

ಈ ಚಿತ್ರದ ಮೂಲಕ ವಿಲೋಕ್ ರಾಜ್ ನಾಯಕರಾಗಿ ಚಿತ್ರರಂಗ ಪ್ರವೇಶ ಮಾಡಿದ್ದಾರೆ. ಈಗಾಗಲೇ ಚಿತ್ರದ ಹಾಡುಗಳು ಹಾಗೂ ತುಣುಕನ್ನು ವೀಕ್ಷಿಸಿರುವ ಸಿನಿರಸಿಕರು ವಿಲೋಕ್ ರಾಜ್ ಅವರ ಅಭಿನಯವನ್ನು ಶ್ಲಾಘಿಸಿದ್ದಾರೆ.

Categories
ಸಿನಿ ಸುದ್ದಿ

ಏಳುಕೋಟಿ ಮೈಲಾರನ ಗಾನಲಹರಿ ಬಿಡುಗಡೆ: ಭಕ್ತಿ ಭಾವದಿಂದ ಕುಣಿದಿದ್ದರು ಸಂಚಾರಿ ವಿಜಯ್- ನೀವೊಮ್ಮೆ ಕಣ್ತುಂಬಿಕೊಳ್ಳಿ ಮೈಲಾರ ಜಾತ್ರೆ…

ಕನ್ನಡ ಚಿತ್ರರಂಗದಲ್ಲಿ ಭಕ್ತಿಗೀತೆಗಳು, ಜನಪದ ಗೀತೆಗಳು ಸಾಕಷ್ಟು ಬಂದಿವೆ. ಈಗ ಹೊಸತನ ಹಾಗೂ ವಿಶೇಷಗಳಿಂದ ಕೂಡಿರುವ ಮೈಲಾರ ಲಿಂಗೇಶ್ವರ ಸ್ವಾಮಿಯ ಭಕ್ತಿ ಪೂರ್ಣ ಗೀತೆ ಮೈಲಾರ ಆಲ್ಬಂ ಹಾಡು ಹೊರಹೊಮ್ಮಿದ್ದು, ನೋಡಿದವರೆಲ್ಲರೂ ನಿಂತಲ್ಲೇ ಉಘೇ ಉಘೇ ಮೈಲಾರ ಸ್ವಾಮಿ ಎನ್ನುತ್ತಿದ್ದಾರೆ.

ಜನಪದ ಹಿನ್ನಲೆ ಹಾಡುಗಳನ್ನು ಮಾಡಬೇಕೆಂಬ ಆತೀವ ಆಸಕ್ತಿ, ಶ್ರದ್ಧೆಯಿಂದ ಗಾಯಕ, ಸಂಗೀತ ನಿರ್ದೇಶಕ ಪ್ರದೀಪ್ ಚಂದ್ರ ಮೈಲಾರ ಆಲ್ಬಂ ಹಾಡು ತಯಾರಿಸಿದ್ದಾರೆ. ಮೈಸೂರು ಭಾಗದಲ್ಲಿ ಮಲೆ ಮಹದೇಶ್ವರ ಸ್ವಾಮಿ ಎಷ್ಟು ಪ್ರಸಿದ್ಧಿಯೂ ಅದೇ ರೀತಿ ಹಾವೇರಿ ಭಾಗದಲ್ಲಿ ಮೈಲಾರ ಲಿಂಗೇಶ್ವರ ಖ್ಯಾತಿ ಪಡೆದಿದೆ. ಹೀಗಾಗಿ ಮೈಲಾರ ಸ್ವಾಮಿಯ ಜಾತ್ರೆ ಸೊಬಗನ್ನು, ಅಲ್ಲಿ ಸಂಪ್ರದಾಯ, ಭವಿಷ್ಯ ನುಡಿಯುವ ಕಾರ್ಣಿಕ, ಅಲ್ಲಿನ ಪವಾಡಗಳನ್ನು ಮುಖ್ಯವಸ್ತುವನ್ನಾಗಿರಿಸಿಕೊಂಡು ಚೆಂದದ ಆಲ್ಬಂ ಸಾಂಗ್ ರೂಪಿಸಿದ್ದಾರೆ. ಇತ್ತೀಚೆಗೆ ನಟ ರಮೇಶ್ ಅರವಿಂದ್ ಸಾಂಗ್ ವೀಕ್ಷಿಸಿ ಮೆಚ್ಚುಗೆ ಪಟ್ಟು ಬಿಡುಗಡೆ ಮಾಡಿದ್ದಾರೆ.

ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಇಷ್ಟಪಟ್ಟು ನಟಿಸಿರುವ ಮೈಲಾರ ಹಾಡಿಗೆ ಸಂಜಯ್ ಕುಲಕರ್ಣಿ ನಿರ್ದೇಶನ ಮಾಡಿದ್ದು, ವಿಜಯ್ ಪ್ರಕಾಶ್ ಧ್ವನಿ ಕುಣಿಸಿರುವ, ಪ್ರದೀಪ್ ಚಂದ್ರ ಮ್ಯೂಸಿಕ್ ಹಾಗೂ ಸಾಹಿತ್ಯದ ಇಂಪು, ಚಂದ್ರು ಹಾಗೂ ರಾಜಶೇಖರ್ ಛಾಯಾಗ್ರಹಣ ತಂಪು ಹಾಡಿನ ಸೊಬಗನ್ನು ಮತ್ತಷ್ಟು ಶ್ರೀಮಂತಗೊಳಿಸಿದೆ.

ಕಮರ್ಷಿಯಲ್ ಹಾಡುಗಳಿಗಿಂತ ಅದ್ಧೂರಿಯಾಗಿ ಮೂಡಿ ಬಂದಿರುವ ಈ ಆಲ್ಬಂ ಗೀತೆ ಸೃಷ್ಟಿಯ ಹಿಂದೆ ನೂರಾರು ಜನರ ಪರಿಶ್ರಮವಿದೆ. ಸರ್ಕಾರದಿಂದ ಅನುಮತಿ ಪಡೆದು ಇಡೀ ಹಾಡನ್ನು ಮೈಲಾರ ಲಿಂಗೇಶ್ವರ ಜಾತ್ರೆಯಲ್ಲಿಯೇ ಚಿತ್ರೀಕರಣ ಮಾಡಲಾಗಿದೆ. ಅತ್ಯಂತ ವೈಭವದಿಂದ ನಡೆಯುವ ಜಾತ್ರೆಯನ್ನು ಇಡೀ ನಾಡಿಗೆ ಪರಿಚಯಿಸಲು ರೂಪಗೊಂಡಿರುವ ಮೈಲಾರ ಹಾಡಿನ ಹಿಂದಿನ ಸಾರಥಿ ನಿರ್ಮಾಪಕ ರಾಜಶೇಖರ್ ಮೇತ್ರಿ. ವೃತ್ತಿಯಲ್ಲಿ ವೈದ್ಯರಾಗಿರುವ ರಾಜಶೇಖರ್ ಹೊಸ ಪ್ರತಿಭೆ ಪ್ರದೀಪ್ ಚಂದ್ರ ಅವರನ್ನು ಪ್ರೋತ್ಸಾಹಿಸಿ ಕನ್ನಡ ಇಂಡಸ್ಟ್ರಿಗೆ ಪರಿಚಯಿಸಿದ್ದಾರೆ.

ಸಾಕಷ್ಟು ಲೈವ್ ವಾದ್ಯಗಳಿಂದ, ಲಕ್ಷಾಂತರ ಜನರ ನಡುವೆ ಚಿತ್ರೀಕರಣವಾಗಿರುವ ಹಾಡಿನಲ್ಲಿ ಸಂಚಾರಿ ವಿಜಯ್ ಜೊತೆಗೆ ಪ್ರದೀಪ್ ಚಂದ್ರ ಹಾಗೂ ಯಶಸ್ವಿನಿ ನಟಿಸಿದ್ದಾರೆ. ಇಂತಹ ಅದ್ಬುತ ಆಲ್ಬಂ ಹಾಡು ನಿರ್ಮಾಣ ಮಾಡಲು ಸಾಹಸ ಮಾಡಿದ ನಿರ್ಮಾಪಕ ರಾಜಶೇಖರ್ ಹಾಗೂ ಇಡೀ ತಂಡಕ್ಕೊಂದು ಸಲಾಂ ಎಂಬುದು ನಿರ್ದೇಶಕ ಹಾಗು ಸಂಗೀತ ನಿರ್ದೇಶಕರ ಮಾತು.

Categories
ಸಿನಿ ಸುದ್ದಿ

ಚಿಕ್ಕಣ್ಣ ಈಗ ಉಪಾಧ್ಯಕ್ಷ! ಹೊಸ ಚಿತ್ರಕ್ಕೆ ಅವರೇ ಹೀರೋ…

ಕೆಲವು ವರ್ಷಗಳ ಹಿಂದೆ ಬಿಡುಗಡೆಯಾಗಿ ಅದ್ಧೂರಿ ಯಶಸ್ಸು ಕಂಡ ” ಅಧ್ಯಕ್ಷ ” ಚಿತ್ರದಲ್ಲಿ “ಉಪಾಧ್ಯಕ್ಷ” ನಾಗಿ ಜನಮನಸೂರೆಗೊಂಡಿದ್ದವರು ಚಿಕ್ಕಣ್ಣ. ಈಗ “ಉಪಾಧ್ಯಕ್ಷ” ಎಂಬ ಹೆಸರಿನಿಂದಲೇ ಸಿನಿಮಾ ಆರಂಭವಾಗಿದ್ದು, ಚಿಕ್ಕಣ್ಣ ನಾಯಕರಾಗಿ ನಟಿಸುತ್ತಿದ್ದಾರೆ. ಸ್ಮಿತಾ ಉಮಾಪತಿ ಹಾಗೂ ನಿರ್ಮಲ ಶ್ರೀನಿವಾಸ ನಿರ್ಮಿಸುತ್ತಿರುವ ಈ ಚಿತ್ರವನ್ನು ಅನಿಲ್ ಕುಮಾರ್ ನಿರ್ದೇಶಿಸುತ್ತಿದ್ದಾರೆ.

ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ಬೆಂಗಳೂರಿನ ಪ್ರಸಿದ್ದ ಬನಶಂಕರಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ನಿರ್ಮಾಪಕಿ ಸ್ಮಿತಾ ಉಮಾಪತಿ ಹಾಗೂ ನಾಯಕ ಚಿಕ್ಕಣ್ಣ ಅವರ ತಾಯಿ ಆರಂಭ ಫಲಕ ತೋರಿದರು. ಸಾಧುಕೋಕಿಲ ಕ್ಯಾಮರಾ ಚಾಲನೆ ಮಾಡಿದರು. ಚಿತ್ರರಂಗದ ಸಾಕಷ್ಟು ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.

ಒಳ್ಳೆಯ ದಿನ ಬೆಳಗ್ಗಿನ ಸುಮುಹೂರ್ತದಲ್ಲಿ
ಬನಶಂಕರಿ ದೇವಸ್ಥಾನದಲ್ಲಿ ಚಿತ್ರ ಆರಂಭಿಸಿದ್ದೇವೆ. “ಉಪಾಧ್ಯಕ್ಷ”, “ಅಧ್ಯಕ್ಷ” ಚಿತ್ರದ ಮುಂದುವರಿದ ಭಾಗ ಎನ್ನಬಹುದು. ಆ ಚಿತ್ರದಲ್ಲಿ ಎಲ್ಲಿ ಕಥೆ ನಿಂತಿತ್ತೋ, ಅಲ್ಲಿಂದ ಈ ಚಿತ್ರದ ಕಥೆ ಆರಂಭವಾಗುತ್ತದೆ. ಮೊದಲ ಸನ್ನಿವೇಶದಿಂದ ಕ್ಲೈಮ್ಯಾಕ್ಸ್ ತನಕ‌ ಜನರನ್ನು ನಕ್ಕುನಲಿಸುವ ಸಿನಿಮಾ ಇದು. ಜೊತೆಗೆ ಭಾವನಾತ್ಮಕ ಸನ್ನಿವೇಶಗಳು ಸಹ ಇದೆ. ಸಾಕಷ್ಟು ಹಿಟ್ ಚಿತ್ರಗಳ ನಿರ್ಮಾಪಕರಾದ ಉಮಾಪತಿ ಶ್ರೀನಿವಾಸ್ ಈ ಚಿತ್ರದ ನಿರ್ಮಾಪಕರು. ಚಿಕ್ಕಣ್ಣ ಈ ಚಿತ್ರದ ಮೂಲಕ ಪೂರ್ಣಪ್ರಮಾಣದ ನಾಯಕರಾಗಿದ್ದಾರೆ. ಮಲೈಕ ಈ ಚಿತ್ರದ ನಾಯಕಿ. ನಾಳೆಯಿಂದ ಮೈಸೂರಿನಲ್ಲಿ ನಿರ್ಮಿಸಲಾಗಿರುವ ಮನೆಯ ಸೆಟ್ ನಲ್ಲಿ ಮೂವತ್ತೆರಡು ದಿನಗಳ ಕಾಲ ಮೊದಲ ಹಂತದ ಚಿತ್ರೀಕರಣ ನಡೆಯಲಿದೆ.

ಆನಂತರ ಬೆಂಗಳೂರು, ಮುಂತಾದ ಕಡೆ ಚಿತ್ರೀಕರಣ ಸಾಗಲಿದೆ. ಆಗಸ್ಟ್ ಕೊನೆಯಲ್ಲಿ ಚಿತ್ರೀಕರಣ ಮುಕ್ತಾಯವಾಗಲಿದೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಶೇಖರ್ ಚಂದ್ರ ಅವರ ಛಾಯಾಗ್ರಹಣ ಈ ಚಿತ್ರಕ್ಕಿರಲಿದೆ. “ಅಧ್ಯಕ್ಷ” ಚಿತ್ರದಲ್ಲಿ ಅಭಿನಯಿಸಿದ್ದ ಬಹುತೇಕ ಕಲಾವಿದರು ಈ ಚಿತ್ರದಲ್ಲಿರುತ್ತಾರೆ. ಸಾಧುಕೋಕಿಲ ಅವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ ಎಂದರು ನಿರ್ದೇಶಕ ಅನಿಲ್ ಕುಮಾರ್.

ನಾನು “ಹೆಬ್ಬುಲಿ”, ” ರಾಬರ್ಟ್ ” ಹಾಗೂ “ಮದಗಜ” ದಂತಹ ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಾಣ ಮಾಡಿದ್ದೆ. ಆದರೆ ನನ್ನ ಹೆಂಡತಿ ಹೆಸರಿನಲ್ಲಿ “ಒಂದಲ್ಲಾ ಎರಡಲ್ಲಾ” ಚಿತ್ರ ನಿರ್ಮಾಣ ಮಾಡಿದೆ. ಆ ಚಿತ್ರಕ್ಕೆ ಸಾಕಷ್ಟು ಪ್ರಶಸ್ತಿಗಳು ಬಂತು. “ಉಪಾಧ್ಯಕ್ಷ” ಚಿತ್ರಕ್ಕೂ ನನ್ನ ಹೆಂಡತಿ ಸ್ಮಿತ ಅವರೆ ನಿರ್ಮಾಪಕರು. “ಉಪಾಧ್ಯಕ್ಷ” ಚಿತ್ರದ ಕಥೆ ಚೆನ್ನಾಗಿದೆ. ಗೆಲುತ್ತದೆ ಎಂಬ ವಿಶ್ವಾಸವಿದೆ. ನಿಮ್ಮೆಲ್ಲರ ಬೆಂಬಲವಿರಲಿ ಎನ್ನುತ್ತಾರೆ ನಿರ್ಮಾಪಕ ಉಮಾಪತಿ ಶ್ರೀನಿವಾಸ್.

ನನಗೆ “ರಾಜಹುಲಿ”, ” ಅಧ್ಯಕ್ಷ ” ಚಿತ್ರಗಳ ನಂತರ ಹೀರೋ ಆಗಲು ಸಾಕಷ್ಟು ಅವಕಾಶಗಳು ಬಂತು. ಆದರೆ ನಾನು ಒಪ್ಪಿರಲಿಲ್ಲ. ಈ ಚಿತ್ರದ ಕೇಳಿ ಒಪ್ಪಿಕೊಂಡೆ. ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದೀನಿ. ಒಬ್ಬ ಹಾಸ್ಯ ಕಲಾವಿದ ನಾಯಕನಾಗಿ ನಟಿಸುತ್ತಾನೆ ಎಂದರೆ, ಚಿಕ್ಕ ಬಜೆಟ್ ನಲ್ಲಿ ಮುಗಿಸುತ್ತಾರೆ. ಆದರೆ ನಮ್ಮ ನಿರ್ಮಾಪಕರು ಅದ್ದೂರಿಯಾಗಿ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಅವರಿಗೆ ಧನ್ಯವಾದ. ಅನಿಲ್ ಕುಮಾರ್ ಬಹಳ‌ ದಿನಗಳ ಪರಿಚಯ. ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. ಚಿತ್ರ ಗೆಲುವುದು ಖಂಡಿತಾ. ‌ಇಷ್ಟು ದಿನ ಬೇಕಾದಷ್ಟು ಪ್ರೋತ್ಸಾಹ ನೀಡಿದ್ದೀರಿ. ಮುಂದೆ ಇನ್ನೂ ಹೆಚ್ಚಿನ ಪ್ರೋತ್ಸಾಹ ನೀಡಿ ಎಂದರು ಚಿಕ್ಜಣ್ಣ.

ಧಾರಾವಾಹಿಯಲ್ಲಿ ಅಭಿನಯಿಸುತ್ತಿರುವ ನನಗೆ ಇದು ಮೊದಲ ಚಿತ್ರ. ಕಥೆ ಚೆನ್ನಾಗಿದೆ. ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದು ನಾಯಕಿ ಮಲೈಕ ತಿಳಿಸಿದರು.

ನಟ ಧರ್ಮಣ್ಣ ಹಾಗೂ ಛಾಯಾಗ್ರಾಹಕ ಶೇಖರ್ ಚಂದ್ರ “ಉಪಾಧ್ಯಕ್ಷ” ಚಿತ್ರದ ಬಗ್ಗೆ ಮಾತನಾಡಿದರು.

Categories
ಸಿನಿ ಸುದ್ದಿ

ಜುಲೈ 8ಕ್ಕೆ ವೆಡ್ಡಿಂಗ್ ಗಿಫ್ಟ್!

ಗಂಡ-ಹೆಂಡತಿ ಸಂಬಂಧ ಜನುಮ ಜನುಮಗಳ ಅನುಬಂಧ ಎಂಬ ನಂಬಿಕೆ ನಮ್ಮ ದೇಶದಲ್ಲಿದೆ. ಮದುವೆಯಾದ ಹೊಸತರಲ್ಲೇ ಈ ಸಂಬಂಧದಲ್ಲಿ ಬಿರುಕು ಬಂದರೆ ಏನಾಗುತ್ತದೆ? ಎಂಬ ಕಥಾವಸ್ತುವಿನೊಂದಿಗೆ ಈ ಚಿತ್ರವನ್ನು ತೆರೆಗೆ ತರುತ್ತಿದ್ದಾರೆ. ನಿರ್ದೇಶಕ ವಿಕ್ರಂಪ್ರಭು.‌

ನಿಶಾಂತ್ – ಸೋನುಗೌಡ ನಾಯಕ, ನಾಯಕಿಯಾಗಿ ನಟಿಸಿರುವ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿ ಪ್ರೇಮ ನಟಿಸಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.

ನಾನು ಹಿಂದೆ ರಾಜೇಂದ್ರ ಸಿಂಗ್ ಬಾಬು ಅವರ “ಲವ್” ಚಿತ್ರದಲ್ಲಿ ಕೆಲಸ ಮಾಡಿದ್ದೆ. ನಂತರ ಪುಣೆಯಲ್ಲಿ ವಾಸ. ಕೆಲವು ವರ್ಷಗಳ ನಂತರ “ವೆಡ್ಡಿಂಗ್ ಗಿಫ್ಟ್” ಚಿತ್ರವನ್ನು ನಿರ್ಮಿಸಿ, ನಿರ್ದೇಶನ ಕೂಡ ಮಾಡಿದ್ದೇನೆ. ಕಳೆದ ವರ್ಷ ಜುಲೈನಲ್ಲಿ ನಮ್ಮ ಸಿನಿಮಾ ಮುಹೂರ್ತ ನೆರವೇರಿತ್ತು. ಈ ಜುಲೈನಲ್ಲಿ ತೆರೆ ಕಾಣುತ್ತಿದೆ. ನಿಗದಿಯಂತೆ ನಡೆಯಲು ಚಿತ್ರತಂಡದ ಸಹಕಾರ ಅಪಾರ. ಸಮಾಜಕ್ಕೆ ಉತ್ತಮ ಸಂದೇಶವುಳ್ಳ ಚಿತ್ರ ನೀಡುತ್ತಿದ್ದೇನೆ. ನೋಡಿ ಹಾರೈಸಿ ಎಂದರು ವಿಕ್ರಂಪ್ರಭು.

ನಾನು ಸಾಮಾನ್ಯವಾಗಿ ಎಲ್ಲಾ ಚಿತ್ರಗಳನ್ನು ಒಪ್ಪಿಕೊಳ್ಳುವುದಿಲ್ಲ. ಆದರೆ ವಿಕ್ರಂಪ್ರಭು ಅವರು ಕಥೆ ಹೇಳಿದ ತಕ್ಷಣ ಈ ಚಿತ್ರದಲ್ಲಿ ನಟಿಸಲು ಒಪ್ಪಿಕೊಂಡೆ. ಅಂತಹ ಕಥೆ ಆಯ್ಕೆ ಮಾಡಿಕೊಂಡಿದ್ದಾರೆ ನಿರ್ದೇಶಕರು. ನಾನು ಈ ಚಿತ್ರದಲ್ಲಿ ಲಾಯರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ ಎಂದರು ನಟಿ ಪ್ರೇಮ.

ಇದೊಂದು ಭಾವನಾತ್ಮಕ ಚಿತ್ರ. ಯಾರು ಈ ಕಷ್ಟಗಳನೆಲ್ಲಾ ಅನುಭವಿಸಿರುತ್ತಾರೊ, ಅವರಿಗೆ ಈ ಚಿತ್ರ ಹತ್ತಿರವಾಗಲಿದೆ. ಈ ಪಾತ್ರ ಮಾಡುವಾಗ ನನಗಂತು‌ ನಿಜವಾಗಲೂ ಕಷ್ಟವಾಯಿತು. ಇಂತಹವರು ಇರುತ್ತಾರಾ? ಎಂಬ ಪ್ರಶ್ನೆ ನನ್ನನ್ನು ಕಾಡುತ್ತಿತ್ತು. ಒಬ್ಬ ನಟಿಯಾಗಿ ಎಲ್ಲಾ ಪಾತ್ರಗಳನ್ನು ಮಾಡಬೇಕು. ಪಾಸಿಟಿವ್ ಹಾಗೂ ನೆಗಟಿವ್ ಎರಡು ಪಾತ್ರಗಳಲ್ಲೂ ಅಭಿನಯಿಸಿದ್ದೇನೆ. ಹಾಗೊಂದು ವೇಳೆ ನೆಗಟಿವ್ ಪಾತ್ರ ನೋಡುಗರಿಗೆ ಹಿಡಿಸಿತೆಂದರೆ, ಅದು ನನ್ನ ನಿಜವಾದ ಗೆಲುವು ಎನ್ನುತ್ತಾರೆ ನಟಿ ಸೋನು ಗೌಡ.

ಜುಲೈ 8 ರಂದು ಸುಮಾರು 50ರಿಂದ 75ಚಿತ್ರಮಂದಿರಗಳಲ್ಲಿ ಈ ಚಿತ್ರ ಬಿಡುಗಡೆ ಮಾಡಲಿದ್ದೇವೆ. ಹೆಚ್ಚಾಗಿ ಮಲ್ಟಿಪ್ಲೆಕ್ಸ್ ಗಳಲ್ಲಿ ಚಿತ್ರ ತೆರೆ ಕಾಣಲಿದೆ ಎಂದರು ವಿತರಕ ಶ್ರೀಧರ್.

ಛಾಯಾಗ್ರಾಹಕ ಉದಯಲೀಲ ಹಾಗೂ ಸಂಕಲನಕಾರ ವಿಜೇತ್ ಚಂದ್ರ ಸಹ “ವೆಡ್ಡಿಂಗ್ ಗಿಫ್ಟ್” ಮಾತನಾಡಿದರು.

ನಿಶಾಂತ್, ಸೋನು ಗೌಡ, ಪ್ರೇಮ, ಅಚ್ಯುತಕುಮಾರ್, ಪವಿತ್ರಲೋಕೇಶ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Categories
ಸಿನಿ ಸುದ್ದಿ

ಜುಲೈನಲ್ಲಿ ಡೊಳ್ಳು ಕುಣಿತ!

ಕನ್ನಡದಲ್ಲಿ ಕಮರ್ಷಿಯಲ್, ಹೊಡಿಬಡಿ, ಪ್ರೀತಿ-ಪ್ರೇಮ ಸಿನಿಮಾಗಳ ಮಧ್ಯೆ ಪ್ರಯೋಗಾತ್ಮಕ ಸಿನಿಮಾಗಳು ಪ್ರೇಕ್ಷಕರನ್ನು ಗಮನ ಸೆಳೆಯುತ್ತಿದೆ. ಇದರ ಮುಂದುವರೆದ ಭಾಗವಾಗಿ ತಯಾರಾಗಿರವ ಸಿನಿಮಾ ಡೊಳ್ಳು. ಗ್ರಾಮೀಣ ಭಾಗದಲ್ಲಿ ಹಾಸು ಹೊಕ್ಕಾಗಿರುವ ಜನಪದ ಕಲೆ ಡೊಳ್ಳಿನ ಮಹತ್ವ ಸಾರುವ ಕಥಾ ಹೂರಣ ಡೊಳ್ಳು ಚಿತ್ರದ ಮೊದಲ ಝಲಕ್ ಚಿತ್ರ ಪ್ರೇಮಿಗಳ ಮಡಿಲು ಸೇರಿದೆ.

ಜನಪದ ಕಲೆ ಮತ್ತು ಕಲಾವಿದರು ಗ್ರಾಮೀಣ ಭಾರತದ ತಾಯಿ ಬೇರುಗಳಿದ್ದಂತೆ. ಜನ ಜೀವನ ಮತ್ತು ಉನ್ನತ ಸಾಂಸ್ಕೃತಿಕ ಪರಂಪರೆ ಬಿಂಬಿಸುವ ಜನಪದ ಕಲೆಗಳು ಗ್ರಾಮೀಣ ಭಾರತದ ಜೀವಾಳ ಎಂಬ ಸಾರಂಶದೊಂದಿಗೆ ಹಳ್ಳಿಯಲ್ಲಿ ತೆರೆದುಕೊಳ್ಳುವ ಟೀಸರ್ ನಲ್ಲಿ ಡೊಳ್ಳಿನ ಮಹತ್ವದ ಬಗ್ಗೆ ತಿಳಿಸಲಾಗಿದೆ. ಕೈಲಾಸದಲ್ಲಿ ಕುಳಿತಿರುವ ಶಿವಪ್ಪನನ್ನು ಒಲಿಸಿಕೊಳ್ಳುವ ಭಕ್ತಿ ಮಾರ್ಗ ಕೂಡ ಡೊಳ್ಳು ಅಂತಾ ನಂಬಿರುವ ಹಳ್ಳಿ ಮಂದಿ ಸುತ್ತಾ, ಜನಪದ ಕಲೆ ಡೊಳ್ಳಿನ ಸುತ್ತಾ ಟೀಸರ್ ನ್ನು ಕಟ್ಟಿಕೊಡಲಾಗಿದೆ.

ಡೊಳ್ಳು ಕುಣಿತ ಕಂಟೆಂಟ್ ಹೊಂದಿರುವ ಈ ಸಿನ್ಮಾ ಈಗಾಗಲೇ ಹಲವು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಅಲ್ಲದೇ ಹಲವು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿಯೂ ಪ್ರದರ್ಶನಗೊಂಡಿದೆ. ಗೋವಿಂದಾಯ ನಮಃ, ಗೂಗ್ಲಿ, ರಣ ವಿಕ್ರಮ, ಜೆಸ್ಸಿ, ನಟರಾಜ ಸರ್ವೀಸ್ ಮತ್ತು ನಟ ಸಾರ್ವಭೌಮ ಸಿನಿಮಾಗಳನ್ನು ನಿರ್ದೇಶಿಸಿರುವ ಪವನ್ ಒಡೆಯರ್, ತಮ್ಮದೇ ಒಡೆಯರ್ ಮೂವಿಸ್’ ನಿರ್ಮಾಣ ಸಂಸ್ಥೆಯಡಿ ಡೊಳ್ಳು ಚಿತ್ರ ನಿರ್ಮಾಣ ಮಾಡಿದ್ದಾರೆ.

ಮಹಾನ್ ಹುತಾತ್ಮ ಕಿರುಚಿತ್ರದ ಸಾರಥಿ ರಾಷ್ಟ್ರ ಪ್ರಶಸ್ತಿ ವಿಜೇತ ಸಾಗರ್ ಪುರಾಣಿಕ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಡೊಳ್ಳು ಸಿನಿಮಾದಲ್ಲಿ . ಕಿರುತೆರೆ ನಟ ಕಾರ್ತಿಕ್ ಮಹೇಶ್ ನಾಯಕನಾಗಿ, ನಿಧಿ ಹೆಗ್ಡೆ ನಾಯಕಿ ಪಾತ್ರ ನಿರ್ವಹಿಸಲಿದ್ದಾರೆ. ಉಳಿದಂತೆ ಬಾಬು ಹಿರಣ್ಣಯ್ಯ, ಚಂದ್ರ ಮಯೂರ್ ಮತ್ತು ಶರಣ್ ಸುರೇಶ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಶ್ರೀನಿಧಿ ಡಿಎಸ್ ಚಿತ್ರಕಥೆ ಬರೆದಿದ್ದು, ಅನಂತ್ ಕಾಮತ್ ಸಂಗೀತ ಸಂಯೋಜಿಸಿದ್ದಾರೆ. ಅಭಿಲಾಸ್ ಕಲಾಥಿ ಛಾಯಾಗ್ರಹಣ, ಬಿಎಸ್ ಕೆಂಪರಾಜು ಸಂಕಲನವಿರುವ ಡೊಳ್ಳು ಸಿನಿಮಾ ಜುಲೈನಲ್ಲಿ ಥಿಯೇಟರ್ ಗೆ ಆಗಮನವಾಗಲಿದೆ.

Categories
ಸಿನಿ ಸುದ್ದಿ

ಧರಣಿಯಲ್ಲೊಂದು ರೋಚಕ ಟೀಸರ್: ಹಲವು ತಿರುವುಗಳ ಮಧ್ಯೆ ಕೆಂಡ ಮಂಡಲ ಕಥೆ…!

ಗುಳ್ಟು ಸಿನಿಮಾ ಖ್ಯಾತಿಯ ನವೀನ್ ಹಾಗೂ ಮುದ್ದು ಮುಖದ ಚೆಲುವೆ ಐಶಾನಿ ಶೆಟ್ಟಿ ಜೋಡಿಯಾಗಿ ನಟಿಸಿರುವ ಧರಣಿ ಮಂಡಲ ಮಧ್ಯದೊಳಗೆ ಸಿನಿಮಾದ ಟೀಸರ್ ಸ್ಯಾಂಡಲ್ ವುಡ್ ದಶ ದಿಕ್ಕುಗಳಲ್ಲಿ ಚರ್ಚೆ ಹುಟ್ಟು ಹಾಕಿದೆ. ತನ್ನೊಳಗೆ ಬಚ್ಚಿಟ್ಟುಗೊಂಡಿರುವ ಹರಿತವಾದ ಹಾಗೂ ವಿಭಿನ್ನ ಕಥಾನಕ ಸುಳಿವು ಟೀಸರ್ ಮೂಲಕ ಅನಾವರಣಗೊಂಡಿದೆ.

ಡ್ರಗ್ಸ್, ಕೊಲೆ, ಪ್ರೀತಿ, ಪ್ರೇಮ, ಕುಟುಂಬದ ಸುತ್ತ ಹೆಣೆದಿರುವ ಟೀಸರ್ ನೋಡುಗರ ನಿರೀಕ್ಷೆ ಹೆಚ್ಚಿಸಿದೆ. ಇದೊಂದು ಡಿಫರೆಂಟ್ ಕಥೆ ಎಂಬುದನ್ನು ನಿರ್ದೇಶಕರು ಅಚ್ಚುಕಟ್ಟಾಗಿ ರೂಪಿಸಿದ್ದಾರೆ. ಅತ್ಯಂತ ಪರಿಣಾಮಕಾರಿಯಾಗಿ ಮೂಡಿ ಬಂದಿರುವ ‘ಧರಣಿ ಮಂಡಲ ಮಧ್ಯದೊಳಗೆ’ ಟೀಸರ್ ಯೂಟ್ಯೂಬ್ ಲೋಕದಲ್ಲಿ ಸಂಚಲನ ಸೃಷ್ಟಿಸುತ್ತಿದೆ.

ಬೋಲ್ಡ್ ಲುಕ್ ನಲ್ಲಿ ಐಶಾನಿ ಶೆಟ್ಟಿ ಗಮನ ಸೆಳೆದರೆ, ನವೀನ್ ಹೀರೋ. ಇವರೊಂದಿಗೆ ಯಶ್ ಶೆಟ್ಟಿ , ಸಿದ್ದು ಮೂಲಿಮನಿ, ಪ್ರಕಾಶ್ ತುಮ್ಮಿನಾಡ್ ಓಂಕಾರ್, ನಿತೇಶ್ ಮಹಾನ್, ಜಯಶ್ರೀ ಆರಾಧ್ಯ, ಶಾಂಭಾವಿ ತಮ್ಮ ಪಾತ್ರಗಳ ಮೂಲಕ ಜೀವಿಸಿದ್ದಾರೆ.

ಟಾಲಿವುಡ್ ಸ್ಟಾರ್ ನಿರ್ದೇಶಕ ಪುರಿ ಜಗನ್ನಾಥ್ ಅವರೊಂದಿಗೆ ಕೆಲಸ ಮಾಡಿರುವ ಅನುಭವ ಶ್ರೀಧರ್ ಶಿಕಾರಿಪುರ ‘ಧರಣಿ ಮಂಡಲ ಮಧ್ಯದೊಳಗೆ’ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾ.

ಹೈಪರ್ ಲಿಂಕ್ ಶೈಲಿಯ ಕ್ರೈಂ ಡ್ರಾಮಾ ಈ ಚಿತ್ರವನ್ನು ಓಂಕಾರ್‌ ನಿರ್ಮಿಸಿದ್ದಾರೆ. ವೀರೇಂದ್ರ ಕಾಂಚನ್‌, ಕೆ ಗೌತಮಿ ರೆಡ್ಡಿ ನಿರ್ಮಾಣಕ್ಕೆ ಸಾಥ್‌ ನೀಡಿದ್ದಾರೆ. ಕೀರ್ತನ್‌ ಪೂಜಾರಿ ಕ್ಯಾಮೆರಾ, ರೋಣದ ಬಕ್ಕೇಶ್‌, ಕಾರ್ತಿಕ್‌ ಚೆನ್ನೋಜಿರಾವ್‌ ಅವರ ಸಂಗೀತ ಉಜ್ವಲ್ ಚಂದ್ರ ಸಂಕಲನವಿದೆ.

error: Content is protected !!