ಕನ್ನಡ ಚಿತ್ರರಂಗದ ಭರವಸೆ ನಾಯಕ ನಟ.. ದೊಡ್ಮೆನೆ ಮೊಮ್ಮಗ.. ರಾಘವೇಂದ್ರ ರಾಜ್ ಕುಮಾರ್ ಜೇಷ್ಠ ಸುಪುತ್ರ ವಿನಯ್ ರಾಜ್ ಕುಮಾರ್ ಗಿಂದು ಹುಟ್ಟುಹಬ್ಬದ ಸಂಭ್ರಮ.. ವಿನಯ್ ಬರ್ತ್ ಡೇ ಸ್ಪೆಷಲ್ ಆಗಿ ಅವರು ನಟಿಸುತ್ತಿರುವ ಬಹುನಿರೀಕ್ಷಿತ ಸಿನಿಮಾ ಪೆಪೆ ಚಿತ್ರ ಬಳಗದಿಂದ ಸ್ಪೆಷಲ್ ಗಿಫ್ಟ್ ವೊಂದು ಅಭಿಮಾನಿಗಳ ಮಡಿಲು ಸೇರಿದೆ.
ಹೇಗಿದೆ ಸೋಲ್ ಆಫ್ ಪೆಪೆ?
ಪೆಪೆ ಸಿನಿಮಾ ಅಂಗಳದಿಂದ ಹೊರ ಬಂದಿರುವ ಪ್ರತಿ ಝಲಕ್ ಗಳು ವಿಭಿನ್ನತೆಯಿಂದ ಕೂಡಿವೆ. ಈಗಷ್ಟೇ ವಿನಯ್ ಬರ್ತ್ ಡೇ ಗೆ ರಿಲೀಸ್ ಆಗಿರುವ ಸೋಲ್ ಆಫ್ ಪೆಪೆ ಸಿನಿಮಾ ತೂಕವನ್ನು ಮತ್ತಷ್ಟು ಹೆಚ್ಚಿಸಿದೆ. ಮಾಸ್ ಡೈಲಾಗ್ ನಿಂದ ಶುರುವಾಗುವ ಝಲಕ್ ನಲ್ಲಿ ಹಲವು ಪಾತ್ರಗಳನ್ನು ಪರಿಚಯಿಸಲಾಗಿದ್ದು, ವಿನಯ್ ರಗಡ್ ಲುಕ್ ನಲ್ಲಿ ರಕ್ತಸಿಕ್ತ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಹಿನ್ನೆಲೆ ಸಂಗೀತ, ಪಾತ್ರವರ್ಗದ ಅಭಿನಯದ ಅಮೋಘವಾಗಿ ಮೂಡಿ ಬಂದಿದೆ.
ಮಲೆನಾಡಿನಲ್ಲಿ ನಡೆಯುವ ಗ್ಯಾಂಗ್ ಸ್ಟರ್ ಕಥೆಯಾಗಿರುವ ಪೆಪೆ ಸಿನಿಮಾ ಸಂಪೂರ್ಣವಾಗಿ ಹಳ್ಳಿ ಸೊಗಡಿನ ಆಕ್ಷನ್ ಸಿನಿಮಾವಾಗಿದ್ದು, ಶ್ರೀಲೇಶ್ ಎಸ್. ನಾಯರ್ ನಿರ್ದೇಶನದ ಈ ಸಿನಿಮಾವನ್ನು ಉದಯ್ ಶಂಕರ್ ಎಸ್. ನಿರ್ಮಾಣ ಮಾಡಿದ್ದಾರೆ. ಚಿತ್ರಕ್ಕೆ ಪೂರ್ಣಚಂದ್ರ ತೇಜಸ್ವಿ ಸಂಗೀತ, ನವೀನ್ ಕುಮಾರ್ ಛಾಯಾಗ್ರಹಣ ಸಿನಿಮಾಕ್ಕಿದೆ. ಈ ಹಿಂದಿನ ಸಿದ್ದಾರ್ಥ್, ರನ್ ಆಂಟನಿ ಸಿನಿಮಾಗಳಲ್ಲಿ ಕ್ಯೂಟ್ ಲವರ್ ಬಾಯ್ ಆಗಿದ್ದ ವಿನಯ್ ರಾಜ್ ಕುಮಾರ್ ಗ್ಯಾಂಗ್ ಸ್ಟಾರ್ ಅವತಾರದಲ್ಲಿ ಕಾಣಿಸಿಕೊಂಡಿದ್ದಕ್ಕೆ ಅಭಿಮಾನಿಗಳಿಗೆ ಕುತೂಹಲ ಹೆಚ್ಚಾಗಿದೆ.
“ಟಗರು” ಮೂಲಕ ಡಾಲಿ ಎಂಬ ಹೆಸರಿನಿಂದ ಜನಪ್ರಿಯರಾದ ಧನಂಜಯ್, “ಪಷ್ಪ” ಮೂಲಕ ದಕ್ಷಿಣ ಭಾರತದಾದ್ಯಂತ ಚಿರಪರಿಚಿತರಾದರು. “ಬಡವ ರಾಸ್ಕಲ್” ಚಿತ್ರದಿಂದ ನಿರ್ಮಾಪಕರೂ ಆದರು. ಇಷ್ಟು ಕಾರ್ಯದೊತ್ತಡದ ನಡುವೆ ಧನಂಜಯ್ “ಟ್ವೆಂಟಿ ಒನ್ ಅವರ್ಸ್” ಎಂಬ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಜೈಶಂಕರ್ ಪಂಡಿತ್ ನಿರ್ದೇಶಿಸಿರುವ ಈ ಚಿತ್ರ ಇದೇ ಇಪ್ಪತ್ತರಂದು ಬರುತ್ತಿದೆ. ಕೆ.ಆರ್.ಜಿ ಸ್ಟೂಡಿಯೋಸ್ ಮೂಲಕ ಈ ಚಿತ್ರ ಬಿಡುಗಡೆಯಾಗುತ್ತಿದೆ. ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.
ಈ ಚಿತ್ರದ ಕುರಿತು ಪೋಸ್ಟ್ ಹಾಕಿದಾಗ, ಯಾವ ಗ್ಯಾಪ್ ನಲ್ಲಿ ಈ ಸಿನಿಮಾ ಮಾಡಿದ್ದೀರಾ? ಅಂತ ಗೆಳೆಯರು ಕೇಳಿದರು. ಮೊದಲ ಲಾಕ್ ಡೌನ್ ನಂತರ ಮಾಡಿರುವ ಸಿನಿಮಾ ಇದು. ಮಲೆಯಾಳಿ ಹುಡುಗಿಯೊಬ್ಬಳು ಬೆಂಗಳೂರಿಗೆ ಬಂದು ಕಾಣೆಯಾಗುತ್ತಾಳೆ. ಆಕೆಯ ಹುಡುಕಾಟದ ಸುತ್ತ ನಡೆಯುವ ಕಥೆಯಿದು. ನಾನು ತನಿಖಾಧಿಕಾರಿ ಪಾತ್ರದಲ್ಲಿ ಅಭಿನಯಿಸಿದ್ದೇನೆ. ಕರ್ನಾಟಕ ಹಾಗೂ ಕೇರಳದಲ್ಲಿ ನಡೆಯುವ ಕಥೆಯಾಗಿರುವುದರಿಂದ ಕನ್ನಡ ಹಾಗೂ ಮಲೆಯಾಳಂನಲ್ಲಿ ಸಂಭಾಷಣೆ ಇರುತ್ತದೆ. ಆದರೆ ಕರ್ನಾಟಕದಲ್ಲಿ ಈ ಚಿತ್ರ ಪೂರ್ತಿ ಕನ್ನಡದ ಸಂಭಾಷಣೆಯಲ್ಲಿ ಬಿಡುಗಡೆಯಾಗುತ್ತದೆ. ಇಲ್ಲಿ ಬಿಡುಗಡೆಯಾದ ನಂತರ ಕೇರಳದಲ್ಲಿ ತೆರೆ ಕಾಣುತ್ತದೆ. ಒಳ್ಳೆಯ ನಿರ್ದೇಶಕರು, ನಿರ್ಮಾಪಕರು ಹಾಗೂ ತಂತ್ರಜ್ಞರ ತಂಡ. ಬಹಳ ದಿನಗಳ ನಂತರ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರವೊಂದರಲ್ಲಿ ನಟಿಸಿದ್ದೇನೆ. ನಿಮ್ಮ ಪ್ರೋತ್ಸಾಹವಿರಲಿ ಎಂದರು ಡಾಲಿ ಧನಂಜಯ್.
ನಾನು ಮೂಲತಃ ಕರ್ನಾಟದವನು. ಆದರೆ ಕೇರಳದಲ್ಲಿದ್ದೀನಿ. ಅಮಿತಾಬ್ ಬಚ್ಚನ್, ಐಶ್ವರ್ಯ ರೈ ಸೇರಿದಂತೆ ಖ್ಯಾತ ನಟರು ಅಭಿನಯಿಸಿರುವ ಜಾಹೀರಾತುಗಳನ್ನು ನಿರ್ದೇಶಿಸಿದ್ದೇನೆ. ಹಿರಿತೆರೆಯಲ್ಲಿ ಇದು ಮೊದಲ ಚಿತ್ರ. ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ. ಇಪ್ಪತ್ತೊಂದು ಗಂಟೆಗಳಲ್ಲಿ ನಡೆಯುವ ವಿಶೇಷ ಕಥೆ ಹೊಂದಿರುವ ಚಿತ್ರವಿದು. ಧನಂಜಯ್ ನಿರ್ದೇಶಕರ ನಟ. ಅವರ ಜೊತೆ ಕೆಲಸ ಮಾಡಿದ್ದು ಸಂತೋಷ ತಂದಿದೆ. ದುರ್ಗಾ ಕೃಷ್ಣ, ಸುದೇವ್ ನಾಯರ್, ರಾಹುಲ್ ಮಾಧವ್ ಮುಖ್ಯಭೂಮಿಕೆಯಲ್ಲಿ ದ್ದಾರೆ. ಇಡೀ ತಂಡದ ಶ್ರಮದಿಂದ ಚಿತ್ರ ಚೆನ್ನಾಗಿ ಬಂದಿದೆ. ನೋಡಿ ಹಾರೈಸಿ ಎಂದರು ನಿರ್ದೇಶಕ ಜೈಶಂಕರ್ ಪಂಡಿತ್.
ನಾನು ಈ ಹಿಂದೆ “ಓಲ್ಡ್ ಮಾಂಕ್” ಚಿತ್ರದಲ್ಲಿ ನಟಿಸಿದ್ದೆ. ಈ ಚಿತ್ರದಲ್ಲಿ ಉತ್ತಮ ಪಾತ್ರದಲ್ಲಿ ಅಭಿನಯಿಸಿದ್ದೇನೆ. ಧನಂಜಯ್ ಜೊತೆಗೆ ಅಭಿನಯಿಸಿದ್ದು ಖುಷಿಯ ವಿಚಾರವೆಂದರು ನಟ ಸುದೇವ್ ನಾಯರ್.
ನಾನು ಉಡುಪಿಯವನು. ಆದರೆ ಕೇರಳದಲ್ಲಿ ಬೆಳದಿದ್ದು. ಹಿಂದೆ ಟ.ಎನ್.ಸೀತಾರಾಮ್ ಅವರ “ಕಾಫಿತೋಟ” ದಲ್ಲಿ ಅಭಿನಯಿಸಿದ್ದೆ. ಈಗ ಈ ಚಿತ್ರದಲ್ಲಿ ನಟಿಸಿದ್ದೇನೆ. ನಿಮ್ಮ ಪ್ರೋತ್ಸಾಹವಿರಲಿ ಎನ್ನುತ್ತಾರೆ ನಟ ರಾಹುಲ್ ಮಾಧವ್.
ನಿರ್ಮಾಪಕರಾದ ಬಾಲಕೃಷ್ಣ ಎನ್.ಎಸ್, ಅಭಿಷೇಕ್ ರುದ್ರಮೂರ್ತಿ, ಸುನೀಲ್ ಗೌಡ, ಹಾಗೂ ಪ್ರವೀಣ್ ಮಹದೇವ್ ಸಹ ನಿರ್ಮಾಣದ ಬಗ್ಗೆ ಮಾತನಾಡಿದರು.
ರುಪರ್ಟ್ ಫರ್ನಾಂಡಿಸ್ ಸಂಗೀತ ನಿರ್ದೇಶನ, ತಿರುನವುಕ್ಕರಸು ಛಾಯಾಗ್ರಹಣ, ರಿಚರ್ಡ್ ಕೆವಿನ್ ಸಂಕಲನ ಹಾಗೂ ಪ್ರತಾಪ್ ಆರ್ ಮೆಂಡನ್ ಅವರ ಕಲಾ ನಿರ್ದೇಶನವಿರುವ ಈ ಚಿತ್ರಕ್ಕೆ ಸುಕೃತ್ ವಿ ಹಾಗೂ ಡಿ.ವಿ.ಬಾಲಸುಬ್ರಹ್ಮಣ್ಯ ಸಂಭಾಷಣೆ ಬರೆದಿದ್ದಾರೆ. ಶೋಭ ಅಂಜನಪ್ಪ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.
ಚಿತ್ರ: ಪುರುಷೋತ್ತಮ ನಿರ್ದೇಶನ: ಅಮರ್ ನಾಥ್ ನಿರ್ಮಾಣ: ರವಿ ಜಿಮ್ ಪ್ರೊಡಕ್ಷನ್ಸ್ ತಾರಾಗಣ: ರವಿ, ಅಪೂರ್ವ ಇತರರು.
ಇದು ಕೋರ್ಟ್ ಗೆ ಹೋಗಬೇಕಾಗಿರೋ ಕೇಸ್ ಅಲ್ಲ ಮೇಡಮ್… ನಾನು ಮುಗಿಸಬೇಕಾಗಿರೋ ಕೇಸ್…
ವಾಸುಕಿ ಪುರುಷೋತ್ತಮ್ ಈ ಮಾತು ಹೇಳುವ ಹೊತ್ತಿಗೆ, ಅವಳ ಲೈಫಲ್ಲಿ ಮರೆಯಲಾರದ ಕೆಟ್ಟ ಘಟನೆಯೊಂದು ನಡೆದು ಹೋಗಿರುತ್ತೆ. ತನ್ನ ಬದುಕಿಗೆ ಮಸಿ ಬಳಿದವರ ವಿರುದ್ಧ ಆಕೆ ಸಿಡಿದೆದ್ದು ನಿಲ್ಲಬೇಕು ಅಂತ ಹೋರಾಟಕ್ಕೆ ಟೊಂಕ ಕಟ್ಟಿ ನಿಲ್ಲುತ್ತಾಳೆ. ಅಲ್ಲಿ ಆಕೆ ಹೇಗೆಲ್ಲಾ ಹೋರಾಟ ಮಾಡ್ತಾಳೆ ಅನ್ನೋದೇ ಈ ಚಿತ್ರದ ಕಥಾವಸ್ತು.
ಭಾವುಕ ಪಯಣ…
ಪುರುಷೋತ್ತಮ ಈ ವಾರ ತೆರೆ ಕಂಡ ಸಿನಿಮಾ. ಒಂದೇ ಮಾತಲ್ಲಿ ಹೇಳುವುದಾದರೆ, ಹೆಸರಿಗೆ ತಕ್ಕಂತಹ ಉತ್ತಮ ಸಿನಿಮಾವಿದು. ಹಾಗಂತ, ಇಲ್ಲಿರೋದೆಲ್ಲವೂ ಸರಿ ಅಂತ ಹೇಳುತ್ತಿಲ್ಲ. ಸಣ್ಣಪುಟ್ಟ ದೋಷಗಳಿದ್ದರೂ ಅಲ್ಲಲ್ಲಿ ಕಾಣು ಹಾಡು, ಕಚಗುಳಿ ಇಡುವ ಮಾತುಗಳು ಆ ದೋಷಗಳನ್ನು ಬದಿಗೊತ್ತಿವೆ. ಇಲ್ಲೊಂದು ಭಾವ ಸ್ಪರ್ಷವೆನಿಸೋ ಕಥೆ ಇದೆ. ಅದಕ್ಕೊಂದು ಚಂದದ ನಿರೂಪಣೆಯೂ ಇದೆ. ಅಲ್ಲಲ್ಲಿ ಕುತೂಹಲಕ್ಕೆ ಕರೆದೊಯ್ಯುವ ಕಥೆ ಚಿತ್ರದ ವೇಗಕ್ಕೆ ಸಾಕ್ಷಿ. ಒಂದೊಳ್ಳೆಯ ಸಿನಿಮಾಗೆ ಏನೆಲ್ಲಾ ಇರಬೇಕೋ ಅದೆಲ್ಲವೂ ಪುರುಷೋತ್ತಮ ಚಿತ್ರದಲ್ಲಿದೆ. ಒಳ್ಳೇ ಕಥೆಗೆ ಪೂರಕವಾಗಿ ಚಿತ್ರಕಥೆ ಸಾಗಿದೆ. ವಿನಾಕಾರಣ ಎನಿಸುವ ದೃಶ್ಯಗಳಿಲ್ಲ. ಸುಮ್ಮನೆ ತೂರಿಬರುವ ಹಾಡುಗಳೂ ಇಲ್ಲ. ಹೀರೋಯಿಸಂ ತೋರಿಸೋಕೆ ಫೈಟೂ ಇಲ್ಲ. ಇಂತಹ ಕಥೆಗಳಿಗೆ ಅದು ಬೇಕಾಗಿಯೂ ಇಲ್ಲ. ಊಟಕ್ಕೆ ಉಪ್ಪಿನಕಾಯಿ ರುಚಿ ಎಷ್ಟಿರಬೇಕೋ ಅಷ್ಟೇ ಹಾಸ್ಯ ಇಲ್ಲಿದೆ. ಉಳಿದಂತೆ ಇಲ್ಲಿ ಗಟ್ಟಿತನದ ಕಥೆಯೇ ಮೇಳೈಸಿದೆ. ಒಂದರ್ಥದಲ್ಲಿ ಇದು ಫುಲ್ ಫ್ಯಾಮಿಲಿ ಪ್ಯಾಕ್ಡ್ ಸಿನಿಮಾ.
ಒಮ್ಮೆ ನೋಡಿ..
ಒಂದು ಸಿನಿಮಾ ಮೊದಲು ಕಣ್ಣಿಗೆ ತಂಪೆನಿಸುವಂತಿರಬೇಕು, ಕಿವಿಗೆ ಇಂಪೆನಿಸುವಂತಿರಬೇಕು ಜೊತೆಗೆ ಹೃದಯಕ್ಕೆ ನಾಟುವಂತಿರಬೇಕು ಈ ಮೂರು ಅಂಶಗಳು ಇಲ್ಲಿವೆ ಅನ್ನೋದೇ ಸಮಾಧಾನ. ಇವೆಲ್ಲವನ್ನು ಅನುಭವಿಸುವ ಯೋಚನೆ ಇದ್ದರೆ ಒಮ್ಮೆ ಪುರುಷೋತ್ತಮನ ಪೌರುಷವನ್ನು ನೋಡಲೇಬೇಕು.
ಏನೇನಿದೆ…
ಇಲ್ಲಿ ಗಂಡ, ಹೆಂಡತಿ ಮತ್ತು ಮುದ್ದಾದ ಮಗಳಿರುವ ಸುಂದರ ಕುಟುಂಬವಿದೆ. ಅಲ್ಲಿ ನಗುವಿದೆ, ಅಳುವಿದೆ, ಭಾವನೆಗಳಿವೆ, ದುಗುಡ, ದುಮ್ಮಾನವೂ ಹೆಚ್ಚಿದೆ. ಆ ಕುಟುಂಬದ ಅಕ್ಕಪಕ್ಕ ಜನರಿಂದ ಆಗಾಗ ಅಡಚಣೆ ಆಗುವ ವಿಷಯಗಳೂ ಇವೆ. ಒಮ್ಮೊಮ್ಮೆ ಭಾವುಕತೆಯೂ ಇಣುಕು ಹಾಕುತ್ತದೆ. ಅಲ್ಲಲ್ಲಿ ಮನಸ್ಸು ಭಾರವಾಗುವಂತಹ ಅಂಶಗಳು ನೋಡುಗರನ್ನು ಹಿಡಿದಿಟ್ಟುಕೊಳ್ಳುತ್ತವೆ. ಈಗಿನ ಹೊಡಿ, ಬಡಿ, ಕೊಲ್ಲು ಎನ್ನುವ ಚಿತ್ರಗಳ ಸಾಲಿಗೆ ಬೇರೇನೆ ವಿಷಯ ಕಟ್ಟಿಕೊಟ್ಟಿರುವ ನಿರ್ದೇಶಕರ ಪ್ರಯತ್ನ ಒಂದರ್ಥದಲ್ಲಿ ಸಾರ್ಥಕವೆನಿಸಿದೆ. ಒಟ್ಟಾರೆ ಇದು ಎಲ್ಲಾ ವರ್ಗಕ್ಕೂ ಇಷ್ಟ ಎನಿಸುವ ಹೊಸತರಹದ ಸಿನಿಮಾ ಎಂಬುದೇ ಸಮಾಧಾನ.
ಕಥೆ ಇಷ್ಟು…
ಕಥೆ ಬಗ್ಗೆ ಹೇಳೋದಾದರೆ, ಪುರುಷೋತ್ತಮ ಒಬ್ಬ ಲಾಯರ್ ಕಮ್ ಆಂಕರ್. ಹೆಂಡತಿ, ಮಗಳು ಅವನಿಗೆ ಪ್ರಪಂಚ. ಅವರಿಬ್ಬರನ್ನು ಪ್ರಾಣಕ್ಕಿಂತಲೂ ಪ್ರೀತಿಸೋ ಗುಣ ಅವನದು. ಲಾಯರ್ ಆದ ಅವನಿಗೆ ಬರೀ ಡೈವರ್ಸ್ ಕೇಸ್ ಗಳೇ ಹೆಚ್ಚು. ಒಂದು ಡೈವರ್ಸ್ ಅನ್ನು ಕೊಡಿಸದೆ ಕಾಂಪ್ರಮೈಸ್ ಮಾಡಿ ಕಳಿಸೋ ವ್ಯಕ್ತಿತ್ವ. ಹೀಗಿರುವಾಗ ಅವನ ಹೆಂಡತಿಯೊಬ್ಬಳ ಲೈಫಲ್ಲಿ ಒಂದು ದುರ್ಘಟನೆ ನಡೆಯುತ್ತೆ. ಅದನ್ನು ಅತ್ತ ಗಂಡನಿಗೆ, ನೆರೆಹೊರೆಯದವರಿಗೆ ಹೇಳಲಾಗದ ಪರಿಸ್ಥಿತಿ. ಅದರಿಂದ ಆಕೆ ಹೇಗೆ ಹೊರ ಬರುತ್ತಾಳೆ ಅನ್ನೋದು ಕ್ಲೈಮ್ಯಾಕ್ಸ್. ಆ ಘಟನೆಯೇ ಇಲ್ಲಿ ಇಂಟ್ರೆಸ್ಟಿಂಗ್. ಅಲ್ಲೊಂದು ತನಿಖೆಯ ಜಾಡು ಕೂಡ ಅಷ್ಟೇ ಮಜ ಕೊಡುತ್ತೆ. ಆಮೇಲೆ ಏನಾಗುತ್ತೆ ಅಂತ ತಿಳಿಯೋಕೆ ಸಿನಿಮಾ ನೋಡಿ.
ಪುರುಷೋತ್ತಮನಾಗಿ ರವಿ ಜಿಮ್ ಇಲ್ಲಿ ಪರಿಪೂರ್ಣ ಇಷ್ಟ ಆಗುತ್ತಾರೆ. ಇಡೀ ಸಿನಿಮಾ ತನ್ನ ಹೆಗಲ ಮೇಲೆ ಕೂರಿಸಿಕೊಂಡು ಎಲ್ಲೂ ಎಡವದೆ ನಡೆದಿದ್ದಾರೆ. ಮಾತಿನ ನಗೆಚಟಾಕಿ ಜೊತೆ ಹಾಡಲ್ಲೂ ಸ್ಟೆಪ್ ಹಾಕಿ ಸೈ ಎನಿಸಿಕೊಂಡಿದ್ದಾರೆ. ಡೀಸೆಂಟ್ ಪಾತ್ರಕ್ಕೆ ಜೀವ ತುಂಬಿದ್ದಾರೆ. ಅಪೂರ್ವ ಕೂಡ ಇಲ್ಲಿ ಪಾತ್ರಕ್ಕೆ ನ್ಯಾಯ ಸಲ್ಲಿಸಿದ್ದಾರೆ. ಉಳಿದಂತೆ ಬರುವ ಪಾತ್ರಗಳೂ ಇಲ್ಲಿ ಗಮನ ಸೆಳೆಯುತ್ತವೆ.
ಮುಖ್ಯವಾಗಿ ಇಲ್ಲಿ ಕ್ಯಾಮೆರಾ ಕೈಚಳಕ ಖುಷಿ ಕೊಡುತ್ತದೆ. ಶ್ರೀಧರ್ ವಿ. ಸಂಭ್ರಮ್ ಅವರ ಹಾಡಲ್ಲಿ ಸಂಭ್ರಮವಿದೆ. ಕತ್ತರಿ ಕೆಲಸವೂ ಚಿತ್ರದ ವೇಗ ಹೆಚ್ಚಿಸಿದೆ.
ಈಗ ಎಲ್ಲೆಲ್ಲೂ IPL ಫೀವರ್. ಈ ಐಪಿಎಲ್ ಹಂಗಾಮದ ನಡುವೆ YPL ಟೂರ್ನಿ ಶುರುವಾಗುತ್ತಿದೆ. ನಾವು ಕೆಪಿಎಲ್(ಕರ್ನಾಟಕ ಪ್ರೀಮಿಯರ್ ಲೀಗ್) ಸಿಸಿಎಲ್ ಸೆಲೆಬ್ರಿಟಿ ಪ್ರೀಮಿಯರ್ ಲೀಗ್) ಕೇಳಿದ್ದೇವೆ ಇದು ಯಾವುದು YPL ಅನ್ನೋ ಪ್ರಶ್ನೆಗೆ ಉತ್ತರವೇ ಯಜಮಾನ ಪ್ರೀಮಿಯರ್ ಲೀಗ್
ವಿಷ್ಣುಸೇನಾ ಸಮಿತಿಯಿಂದ ಆಯೋಜಿಸಲಾಗಿರುವ ಈ ಟೂರ್ನಿಯ ಸಂಪೂರ್ಣ ಜವಾಬ್ದಾರಿಯನ್ನು ವಿಷ್ಣುಸೇನಾ ಸಮಿತಿ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ವಹಿಸಿಕೊಂಡಿದ್ದಾರೆ. ಇದೇ 7 ಮತ್ತು 8ರಂದು ನಡೆಯಲಿರುವ YPL ಟೂರ್ನಿಮೆಂಟ್ ಗಾಗಿ ವಿಷ್ಣುಸೇನಾ ಸಮಿತಿ ಥೀಮ್ ಸಾಂಗ್ ಬಿಡುಗಡೆ ಮಾಡಿದೆ. ಥೀಮ್ ಸಾಂಗ್ ಗೆ ಪ್ರಮೋದ್ ಮರವಂತೆ ಸಾಹಿತ್ಯ ನೀಡಿದ್ದು, ಹೇಮಂತ್ ಜೋಯಿಸ್ ಮ್ಯೂಸಿಕ್ ಮಾಡಿದ್ದಾರೆ. ಚೇತನ್ ನಾಯ್ಕ್ ಹಾಡಿದ್ದಾರೆ.
ಈ ಲೀಗ್ ಕುರಿತಿ ವೀರಕಪುತ್ರ ಶ್ರೀನಿವಾಸ್ ಹೇಳಿದ್ದಿಷ್ಟು., ಈ ಪ್ರೀಮಿಯರ್ ಲೀಗ್ ಜವಾಬ್ದಾರಿಯನ್ನು ಬೆಂಗಳೂರು ವಿಷ್ಣುಸೇನಾ ಸಮಿತಿಯ ಅಧ್ಯಕ್ಷ ಯದುನಂದನ್ ಗೌಡ , ರಾಜ್ಯ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್, ಆನಂದ್ ವಹಿಸಿಕೊಂಡಿದ್ದಾರೆ. ಕ್ರಿಕೆಟ್ ಅನ್ನೋದನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯ ಮಾಡಿಸಿದ್ದು ಯಜಮಾನ್ರು.
ಅವರಿಗೆ ಕ್ರಿಕೆಟ್ ಅಂದ್ರೆ ಪ್ರೀತಿ. ಕ್ರಿಕೆಟ್ ದಂತಕಥೆಯ ಅನೇಕರ ಜೊತೆ ಸಂಪರ್ಕವಿತ್ತು. ನಾಗರಹಾವು ಕ್ರಿಕೆಟ್ ಟೂರ್ನಮೆಂಟ್ ಮಾಡಿದಾಗ ಕಪಿಲ್ ದೇವ್ ಭಾಗಿಯಾಗಿದ್ರು. ಅನೇಕ ಸಂಬಂಧಗಳನ್ನು ಬೆಸೆಯುವ ನಿಟ್ಟಿನಲ್ಲಿ ಯಜಮಾನ ಪ್ರೀಮಿಯರ್ ಲೀಗ್ ನಡೆಸಲಾಗ್ತಿದೆ ಎಂದರು.
ಬರೋಬ್ಬರಿ 12 ಟೀಂಗಳು YPLನಲ್ಲಿ ಭಾಗಿಯಾಗಲಿದ್ದು, ಸಿನಿಮಾ ಇಂಡಸ್ಟ್ರೀಯ ಕುಟುಂಬ ಜೊತೆಗೆ ಅಭಿಮಾನಿಗಳು ಈ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅಷ್ಟಕ್ಕೂ ವಿಷ್ಣುಸೇನಾ ಸಮಿತಿ ಈ ರೀತಿ ಟೂರ್ನಿಮೆಂಟ್ ಆಯೋಜನೆಗೆ ಕಾರಣ ಸಾಹಸಸಿಂಹನ ಕ್ರಿಕೆಟ್ ಮೇಲಿನ ಪ್ರೀತಿ.
ಈ ಹಿಂದೆ ವಿಷ್ಣುವರ್ಧನ್ ಅವರು ಸ್ನೇಹಲೋಕ ಎಂಬ ಸಂಘ ಕಟ್ಟಿ ಕ್ರಿಕೆಟ್ ಆಡುತ್ತಿದ್ದರು. ಇದೀಗ ವಿಷ್ಣುಸೇನಾ ಸಮಿತಿ ಕೂಡ ಸಿಂಹ ನಡೆದ ದಾರಿಯಲ್ಲಿ ಸಾಗಿದೆ.
ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನುರಂಜನ್ ರವಿಚಂದ್ರನ್ ನಾಯಕರಾಗಿ ನಟಿಸಿರುವ “ಪ್ರಾರಂಭ” ಚಿತ್ರ ಮೇ 13 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಚಿತ್ರಮಂದಿರಕ್ಕೆ ಪ್ರೇಕ್ಷಕರನ್ನು ಆಹ್ವಾನಿಸುವ ವಿಶೇಷ ಆಹ್ವಾನ ಪತ್ರಿಕೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಮದುವೆಯ ಆಮಂತ್ರಣ ಪತ್ರಿಕೆ ಶೈಲಿಯಲ್ಲಿ ಇದು ತಯಾರಾಗಿದೆ. ಈ ಆಹ್ವಾನ ಪತ್ರಿಕೆ ನೋಡಿ ಮನುರಂಜನ್ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರ ಬಿಡುಗಡೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಮನುರಂಜನ್ ಅವರಿಗೆ ನಾಯಕಿಯಾಗಿ ಕೀರ್ತಿ ಕಲ್ಕೇರಿ ಅಭಿನಯಿಸಿದ್ದಾರೆ.
ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಮನು ಕಲ್ಯಾಡಿ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಯನ್ನು ಮನು ಕಲ್ಯಾಡಿ ಅವರೆ ಬರೆದಿದ್ದಾರೆ.
ಜೇನುಶ್ರೀ ತನುಷ ಪ್ರೊಡಕ್ಷನ್ಸ್ ಲಾಂಛನದಲ್ಲಿ ಜಗದೀಶ್ ಕಲ್ಯಾಡಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ರವಿ ವಡ್ಡೇರಹಳ್ಳಿ ಈ ಚಿತ್ರದ ಸಹ ನಿರ್ಮಾಪಕರು.
ಪ್ರಜ್ವಲ್ ಪೈ ಸಂಗೀತ ನಿರ್ದೇಶನ, ಸುರೇಶ್ ಬಾಬು ಛಾಯಾಗ್ರಹಣ, ವಿಜಯ್ ಸಂಕಲನ ಹಾಗೂ ಥ್ರಿಲ್ಲರ್ ಮಂಜು, ವಿಕ್ರಮ್ ಮೋರ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.
ಖ್ಯಾತ ನಿರ್ದೇಶಕ, ನಟ ಓಂಪ್ರಕಾಶ್ ರಾವ್ ನಿರ್ದೇಶನದಲ್ಲಿ ಹೆಸರಾಂತ ನಟ ಆದಿತ್ಯ ನಾಯಕರಾಗಿ ನಟಿಸುತ್ತಿರುವ ಚಿತ್ರಕ್ಕೆ ಇಲಾಖೆ ಎಂದು ಹೆಸರಿಡಲಾಗಿದೆ.
ಇವರಿಬ್ಬರ ಕಾಂಬಿನೇಶನಲ್ಲಿ ಮೂಡಿಬರುತ್ತಿರುವ ಈ ಚತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಯಿದೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಉಳಿದ ಭಾಗದ ಚಿತ್ರೀಕರಣ ಜೂನ್ ನಲ್ಲಿ ನಡೆಯಲಿದೆ.
“ಲಾಕಪ್ ಡೆತ್”, “ಎ ಕೆ 47 ” ಚಿತ್ರಗಳ ತರಹದ ಕಥೆಯಿದು. ನಾನು ಬಹಳ ವರ್ಷಗಳ ನಂತರ ನಾನೇ ಕಥೆ ಬರೆದು ನಿರ್ದೇಶಿಸುತ್ತಿರುವ ಚಿತ್ರವಿದು ಎನ್ನುತ್ತಾರೆ ನಿರ್ದೇಶಕ ಓಂಪ್ರಕಾಶ್ ರಾವ್.
ಶ್ರೀರೇಣುಕಾ ಮೂವೀ ಮೇಕರ್ಸ್ ಲಾಂಛನದಲ್ಲಿನಿರ್ಮಾಣವಾಗುತ್ತಿರುರುವ ಈ ಚಿತ್ರಕ್ಕೆ ಎಂ.ಎಸ್. ರಮೇಶ್ ಸಂಭಾಷಣೆ ಬರೆದಿದ್ದಾರೆ. ಅನೂಪ್ ಸೀಳಿನ್ ಸಂಗೀತ ನಿರ್ದೇಶನ , ರವಿಕುಮಾರ್ ಛಾಯಾಗ್ರಹಣ, ರವಿವರ್ಮ ಸಾಹಸ ನಿರ್ದೇಶನ ಹಾಗೂ ಲಕ್ಷ್ಮಣ್ ರೆಡ್ಡಿ ಸಂಕಲನ ಈ ಚಿತ್ರಕ್ಕಿದೆ.
ಹೊಸ ಯುವ ಉತ್ಸಾಹಿ ತಂಡದ ಸಮಾಗಮದಲ್ಲಿ “ಹುಲಿಬೇಟೆ ಚಿತ್ರ ತಯಾರಾಗಿದೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಭಾರೀ ಮೆಚ್ಚುಗೆ ಪಡೆದಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರಾದ ಎಸ್ ಎ ಚಿನ್ನೇಗೌಡ, ಸಾ.ರಾ.ಗೋವಿಂದು, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್, ಕೆ.ಎಂ.ವೀರೇಶ್, ಗೌರೀಶ್ ಅಕ್ಕಿ ಇತರರು ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದರು.
ನಾನು ಚಿತ್ರ ಆರಂಭಿಸಿದಾಗ ಕೆಲವು ಅಡೆತಡೆಗಳು ಎದುರಾದವು. ಮಕ್ಕಳಿಗೆ ಕಷ್ಟ ಬಂದಾಗ ಮೊದಲು ನೆನಪಾಗುವುದು ತಾಯಿ. ನನಗೆ ತಾಯಿಯ ತರಹ ವಾಣಿಜ್ಯ ಮಂಡಳಿ ಹಾಗೂ ತಂದೆಯ ಸ್ಥಾನದಲ್ಲಿ ನಿರ್ಮಾಪಕರ ಸಂಘ. ಈ ಎರಡು ಸಂಸ್ಥೆಗಳ ಸಹಕಾರದಿಂದ ನನಗೆ ಎದುರಾದ ಕಷ್ಟ ದೂರವಾಗಿದೆ. ಆ ಎರಡೂ ಸಂಸ್ಥೆಗಳಿಗೆ ಧನ್ಯವಾದ. ಚಿತ್ರದ ಬಗ್ಗೆ ಹೇಳುವುದಾದರೆ ಭೂಗತಲೋಕದ ಒಂದಿಷ್ಟು ಕಥೆ ಜೊತೆಗೆ ನವಿರಾದ ಪ್ರೇಮಕಾವ್ಯ ಸಹ ಇದರಲ್ಲಿದೆ. ಕಲ್ಯಾಣ ಕರ್ನಾಟಕದ ಭಾಗದಲ್ಲೇ ಚಿತ್ರೀಕರಣ ನಡೆದಿದೆ . ಮೇ ಅಂತ್ಯಕ್ಕೆ ಚಿತ್ರ ತೆರೆಗೆ ಬರಲಿದೆ. ಸಹಕಾರ ನೀಡಿದ ಎಲ್ಲರಿಗೂ ವಂದನೆ ಅಂದರು ನಿರ್ದೇಶಕ ರಾಜ್ ಬಹದ್ದೂರ್.
ಕೇವಲ ಒಂದುವರೆ ಸಾವಿರ ರೂಪಾಯಿಯಿಂದ ಆರಂಭವಾದ ಸಿನಿಮಾವಿದು. ಕ್ಯಾಮೆರಾ ಅಸಿಸ್ಟೆಂಟ್ ಹಾಗೂ ಇನ್ನಿತರ ಕೆಲಸ ಮಾಡಿರುವ ನನಗೆ ನಟನೆಯಲ್ಲಿ ಆಸಕ್ತಿ. ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ನನ್ನ ತಂದೆ-ತಾಯಿಯ ಬೆಂಬಲ ದೊರಕಿತು. ಈ ಸಿನಿಮಾ ಆರಂಭವಾಯಿತು. ಚಿತ್ರೀಕರಣ ನಡೆಯುತ್ತಿದ್ದ ಸಮಯದಲ್ಲಿ ಅನಿರೀಕ್ಷಿತವಾಗಿ ನಮ್ಮ ತಂದೆ ನನ್ನಿಂದ ದೂರಾದರು. ಆದರೂ ಧೃತಿಗೆಡದೆ ನನ್ನ ತಾಯಿ, ನೀನು ಈ ಸಿನಿಮಾ ಪೂರ್ಣಮಾಡು ಎಂದು ನನ್ನ ಜೊತೆಗೆ ನಿಂತರು ಎಂದು ಹೇಳುತ್ತಾ ನಾಯಕ ವಿಶ್ವ ಭಾವುಕರಾದರು.
ನಾಯಕಿ ರೋಹಿಣಿ ಹಾಗೂ ಛಾಯಾಗ್ರಾಹಕ ಧನಪಾಲ್ “ಹುಲಿ ಬೇಟೆ” ಬಗ್ಗೆ ತಮ್ಮ ಅನುಭವ ಹಂಚಿಕೊಂಡರು.
ಧಾನುಬಾಯಿ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಹರ್ಷವರ್ಧನ್ ರಾಜ್ ಸಂಗೀತ ನಿರ್ದೇಶನ, ಅರವಿಂದ ರಾಜ್ ಸಂಕಲನ ಹಾಗೂ ಮಂಜು ನಾಗಪ್ಪ ಅವರ ಸಾಹಸ ನಿರ್ದೇಶನವಿದೆ.
ಶಿವರಾಜ್ಕುಮಾರ್ ನಟನೆಯ 123ನೇ ಸಿನಿಮಾ ‘ಬೈರಾಗಿ’ ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಈ ಚಿತ್ರದ ಮೊದಲ ಹಾಡನ್ನು ಸ್ಯಾಂಡಲ್’ವುಡ್ ‘ಭೀಮ’ನಿಂದ ಅನಾವರಣಗೊಳಿಸಿದೆ ಚಿತ್ರತಂಡ. ಸಿನಿಮಾದಲ್ಲಿ ಈ ಹಾಡು ಶಿವಣ್ಣನ ಎಂಟ್ರಿ ಸಾಂಗ್ ಆಗಿದ್ದು ಸಖತ್ ಮಾಸ್ ಆಗಿ ಮೂಡಿಬಂದಿದೆ. ಡಾ. ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ, ಅನೂಪ್ ಸೀಳಿನ್ ಬ್ಯಾಂಡು ಬಜಾಯಿಸಿರುವ ಈ ಹಾಡಿಗೆ ಆ್ಯಂಥೋನಿ ದಾಸನ್ ದನಿಗೂಡಿಸಿದ್ದಾರೆ.
‘ನಕ್ಕರನಖ ನಕ್ಕರನಖ ನುಗ್ಗಿಬಂತೋ ನಾಡಹುಲಿ…’ ‘ಟಕರಟಕ ಟಕರಟಕ ಎಗರಿಬಂತೋ ಕಾಡಹುಲಿ…’ ಎಂಬ ಹಾಡು ಅಕ್ಷಯ ತೃತೀಯ ವಿಶೇಷ ದಿನದಂದು ವಿಜಯ್ ಕುಮಾರ್ ಬಿಡುಗಡೆ ಮಾಡಿ ಇಡೀ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ‘ಮಾಸ್ ಬೀಟ್, ಕೇಳಿದಾಕ್ಷಣ ಕುಣಿಸುವ ಸಂಗೀತ ಈ ಹಾಡಿನಲ್ಲಿದೆ. ಆ್ಯಂಥೋನಿ ದಾಸ್ ವಾಯ್ಸ್ ಕೇಳಿದಾಕ್ಷಣ ಥ್ರಿಲ್ ಆಗಿಹೋದೆ. ಶಿವಣ್ಣನ ಎನರ್ಜಿಗೆ ಸರಿದೂಗುವಂಥ ಹಾಡಿದು. ನಾನಂತೂ ಸಖತ್ ಎಂಜಾಯ್ ಮಾಡಿದೆ. ಈ ಹಾಡನ್ನು ಕೇಳಿದವರೂ ಇಷ್ಟಪಡುತ್ತಾರೆ ಎಂಬ ಭರವಸೆಯಿದೆ’ ಅನ್ನೋದು ವಿಜಿ ಮಾತು.
‘ನೂರಾರು ಡಾನ್ಸರ್ಸ್, ಬೃಹತ್ ಸೆಟ್, ಕಲರ್’ಫುಲ್ ಕಾಸ್ಟ್ಯೂಮ್’ನಲ್ಲಿ ಶಿವಣ್ಣಈ ಹಾಡಿಗೆ ಭರ್ಜರಿ ಸ್ಟೆಪ್ಸ್ ಹಾಕಿದ್ದಾರೆ. ಬನ್ನೇರುಘಟ್ಟ ಸಮೀಪದ ದೇವಸ್ಥಾನವೊಂದರ ಬಳಿ ಜಾತ್ರೆ ಸೆಟ್ ಹಾಕಲಾಗಿತ್ತು. ದೊಡ್ಡ ಮಟ್ಟದಲ್ಲಿ ಈ ಹಾಡು ಮೂಡಿಬಂದಿದೆ’ ಎನ್ನುತ್ತಾರೆ ನಿರ್ಮಾಪಕ ಕೃಷ್ಣ ಸಾರ್ಥಕ್.
ವಿಜಯ್ ಮಿಲ್ಟನ್ ನಿರ್ದೇಶನ ಹಾಗೂ ಛಾಯಾಗ್ರಹಣವಿರುವ ಈ ಸಿನಿಮಾಕ್ಕೆ ಅವರೇ ಕಥೆ, ಚಿತ್ರಕಥೆ ಒದಗಿಸಿದ್ದಾರೆ. ಗುರು ಕಶ್ಯಪ್ ಸಂಭಾಷಣೆ ಈ ಚಿತ್ರಕ್ಕಿದೆ.
ಕೃಷ್ಣ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಕೃಷ್ಣ ಸಾರ್ಥಕ್ ‘ಬೈರಾಗಿ’ ನಿರ್ಮಿಸಿದ್ದಾರೆ. ರಾಜ್ಯಾದ್ಯಂತ ಜಗದೀಶ್ ಗೌಡ ಈ ಸಿನಿಮಾವನ್ನು ವಿತರಣೆ ಮಾಡಲಿದ್ದಾರೆ.
ಚಿರಂಜೀವಿ ಅಗಲಿ ಎರಡುವರ್ಷಗಳಾಗುತ್ತಿದೆ. ಅವರ ಅಭಿನಯದ ಕೊನೆಯ ಚಿತ್ರ “ರಾಜ ಮಾರ್ತಾಂಡ” ಚಿತ್ರ ಜೂನ್ ನಲ್ಲಿ ಬಿಡುಗಡೆಯಾಗಲಿದೆ. ಧ್ರುವ ಸರ್ಜಾ ಧ್ವನಿ ನೀಡಿರುವ ಈ ಚಿತ್ರದ ಟ್ರೇಲರ್ ಗೆ ಬಾರಿ ಮೆಚ್ಚುಗೆ ವ್ಯಕ್ತವಾಗಿದೆ.
ಚಿರು ಸರ್ ನಮ್ಮ ಚಿತ್ರದ ಬಹುತೇಕ ಚಿತ್ರೀಕರಣ ಪೂರ್ಣಗೊಳಿಸಿದ್ದರು. ಡಬ್ಬಿಂಗ್ ಮಾಡುವುದು ಮಾತ್ರ ಬಾಕಿಯಿತ್ತು. ಆನಂತರ ನಡೆಯ ಬಾರದ ನಟನೆ ನಡೆದದ್ದು ಎಲ್ಲರಿಗೂ ಗೊತ್ತೇ ಇದೆ. ನಾನು ಚಿರು ಅವರ ಪಾರ್ಥಿವ ಶರೀರ ನೋಡಲು ಹೋದಾಗ, ಧ್ರುವ ಸರ್ಜಾ ಕೇಳಿದ ಮೊದಲ ಮಾತು, ಅಣ್ಣ ಡಬ್ಬಿಂಗ್ ಮುಗಿಸಿದ್ದಾರಾ? ನಾನು ಇಲ್ಲ ಅಂದೆ. ನಾನು ಮಾಡಿಕೊಡುತ್ತೀನಿ ಅಂದರು. ಹಾಗೆ ಟ್ರೇಲರ್ ಗೆ ಧ್ರುವ ಧ್ವನಿ ನೀಡಿದ್ದಾರೆ. ಸದ್ಯದಲ್ಲೇ ಡಬ್ಬಿಂಗ್ ಪೂರ್ಣಗೊಳಿಸಲಿದ್ದಾರೆ. ದರ್ಶನ್ ಸರ್ ಸಹ ವಾಯ್ಸ್ ಓವರ್ ಕೊಡುವುದಾಗಿ ಹೇಳಿದ್ದಾರೆ. ಮೇಘನಾರಾಜ್ ಹಾಗೂ ಸುಂದರರಾಜ್ ಅವರಂತೂ ನಮ್ಮ ಬೆಂಬಲಕ್ಕೆ ಸದಾ ಇದ್ದಾರೆ. ರಾಯನ್ ರಾಜ್ ಸರ್ಜಾ ಸಹ ನಮ್ಮ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇವರೆಲ್ಲರಿಗೂ ಧನ್ಯವಾದ. ಜೂನ್ ನಲ್ಲಿ ಚಿತ್ರ ತೆರೆಗೆ ಬರಲಿದೆ. ದಿನಾಂಕ ನಿಗದಿಯಾಗಿದೆ. ಆದರೆ ಕೊರೋನ ನಾಲ್ಕನೇ ಅಲೆಯ ಪರಿಸ್ಥಿತಿ ನೋಡಿಕೊಂಡು ದಿನಾಂಕ ಘೋಷಣೆ ಮಾಡುತ್ತೇವೆ ಎಂದರು ನಿರ್ದೇಶಕ ರಾಮ್ ನಾರಾಯಣ್.
ಚಿತ್ರವನ್ನು ಅದ್ದೂರಿಯಾಗಿ ಬಿಡುಗಡೆ ಮಾಡಬೇಕೆಂದು ಕೊಂಡಿದ್ದೇವೆ. ಚಿರು ಅವರ 111 ಅಡಿ ಎತ್ತರದ ಕಟೌಟ್ ನಿಲ್ಲಿಸಲಿದ್ದೇವೆ ಹಾಗೂ ರಾಯನ್ ರಾಜ್ ಸರ್ಜಾ ಅವರ 51 ಎತ್ತರದ ಕಟೌಟ್ ಸಹ ನಿಲಿಸಲಿದ್ದೀವಿ. ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಶಿವಕುಮಾರ್.
ಅದೇನೊ ಗೊತ್ತಿಲ್ಲ. ಅವರು ನಟಿಸುವ ಬೇರೆ ಚಿತ್ರಗಳ ಸಂಭಾಷಣೆನ್ನು ಅಲ್ಲೇ ಹೇಳಿ, ಹತ್ತು ನಿಮಿಷಕ್ಕೆ ಮರೆತು ಹೋಗತ್ತಿದ್ದರು. ಆದರೆ ಈ ಚಿತ್ರದ ಸಂಭಾಷಣೆ ಮಾತ್ರ ಯಾವಾಗಲೂ ಹೇಳುತ್ತಿದ್ದರು. ಕೊನೆಗೆ ಚಿರು ಬಂದರೆ ನಾವೆಲ್ಲಾ ಆ ಡೈಲಾಗ್ ಹೇಳುತ್ತಿದ್ದೆವು. ಅಷ್ಟು ಈ ಚಿತ್ರವನ್ನು ಹಚ್ಚಿಕೊಂಡಿದ್ದರು. ಅವರಿಲ್ಲದ ಈ ಸಮಯದಲ್ಲಿ ಚಿತ್ರತಂಡಕ್ಕೆ ಬೆಂಬಲ ನೀಡಬೇಕಾಗಿರುವುದು ನಮ್ಮ ಕರ್ತವ್ಯ. ನಮ್ಮ ಎರಡು ಕುಟುಂಬಗಳ ಸಹಕಾರ ಸದಾ ನಿಮಗೆ ಇರುತ್ತದೆ ಎಂದರು ಮೇಘನಾರಾಜ್.
ನಟ ಸುಂದರರಾಜ್, ನಾಯಕಿ ದೀಪ್ತಿ ಸಾಥಿ, ಮತ್ತೊಬ್ಬ ನಾಯಕಿ ಟಗರು ಖ್ಯಾತಿಯ ಋಶಿಕಾ ರಾಜ್ (ತ್ರಿವೇಣಿ ಈಗ ಋಶಿಕಾ ರಾಜ್ ಎಂದು ಹೆಸರು ಬದಲಾವಣೆ ಮಾಡಿಕೊಂಡಿದ್ದಾರೆ), ಚಿರು ಮಿತ್ರರಾದ ಮನೀಷ್, ಸಚಿನ್ ಮುಂತಾದವರು “ರಾಜ ಮಾರ್ತಾಂಡ” ಚಿತ್ರದ ಬಗ್ಗೆ ಮಾತನಾಡಿದರು.
ಗೀತರಚನೆಕಾರರಾಗಿ ಜನಪ್ರಿಯರಾಗಿರುವ ಕೆ.ರಾಮನಾರಾಯಣ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರವನ್ನು ಪ್ರಣವ್ ಗೌಡ.ಎನ್, ನಿವೇದಿತಾ ಹಾಗೂ ಶಿವಕುಮಾರ್ ನಿರ್ಮಿಸಿದ್ದಾರೆ.
ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಧರ್ಮವಿಶ್ ಹಿನ್ನೆಲೆ ಸಂಗೀತ, ಕೆ.ಗಣೇಶ್ ಛಾಯಾಗ್ರಹಣ, ವೆಂಕಟೇಶ್ ಯು ಡಿ ವಿ ಸಂಕಲನ, ವಿನೋದ್, ಪಳನಿರಾಜ್ ಸಾಹಸ ನಿರ್ದೇಶನ ಹಾಗೂ ಭೂಷಣ್, ಹರ್ಷ ಅವರ ನೃತ್ಯ ನಿರ್ದೇಶನ ಈ ಚತ್ರಕ್ಕಿದೆ.
ಚಿರಂಜೀವಿ ಸರ್ಜಾ ಅವರಿಗೆ ನಾಯಕಿಯರಾಗಿ ದೀಪ್ತಿ ಸಾತಿ, ಮೇಘಶ್ರೀ, ತ್ರಿವೇಣಿ (ಟಗರು) ಅಭಿನಯಿದ್ದಾರೆ. ಭಜರಂಗಿ ಲೋಕಿ, ಚಿಕ್ಕಣ್ಣ, ದೇವರಾಜ್, ಸುಮಿತ್ರ, ಶಂಕರ್ ಅಶ್ವಥ್, ವಿನೀತ್ ಕುಮಾರ್ (ಬಾಂಬೆ) ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಇದು ಆಧುನಿಕ ಯುಗ. ಹೊಸ ತಂತ್ರಜ್ಞಾನ ದಿನದಿನಕ್ಕೂ ಅಭಿವೃದ್ಧಿಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ವಿಶೇಷ ಸೌಲಭ್ಯವುಳ್ಳ ” ಸಿನಿಬಜಾರ್ ” ಆಪ್ ಬಿಡುಗಡೆಯಾಗಿದೆ. ಇದು ಕನ್ನಡ ಸಿನಿ ಪ್ರಿಯರಿಗೆ ಹಾಗು ನಿರ್ಮಾಪಕರಿಗೆ ಸ್ನೇಹ ಸೇತು
ಹಲವು ವರ್ಷಗಳಿಂದ ಆನ್ ಲೈನ್ ನಲ್ಲಿ ಪರಿಣಿತಿ ಪಡೆದಿರುವ ಆನ್ ಲೈನ್ ಭಾಸ್ಕರ್ ಎಂದೇ ಖ್ಯಾತರಾಗಿರುವ ಭಾಸ್ಕರ್ ವೆಂಕಟೇಶ್ ಹಾಗು ನಿರ್ಮಾಪಕ, ಕರ್ನಾಟಕ ವಾಣಿಜ್ಯ ಮಂಡಳಿ ಉಪಾಧ್ಯಕ್ಷ ಉಮೇಶ್ ಬಣಕಾರ್ ಅವರ ಸಾರಥ್ಯದಲ್ಲಿ ಈ ಆಪ್ ಹೊರ ಬಂದಿದೆ.
ಈ ಆಪ್ ನಲ್ಲಿ ಸಿನಿಮಾ ವೀಕ್ಷಣೆಗೆ ತಗಲುವ ವೆಚ್ಚ ಕೇವಲ ಇಪ್ಪತ್ತೈದರಿಂದ ಮೂವತ್ತು ರೂಪಾಯಿ. 24 ಗಂಟೆಗಳ ಅವಧಿಯಿರುತ್ತದೆ. ಅಷ್ಟರೊಳಗೆ ಎಷ್ಟು ಸಿನಿಮಾ ಬೇಕಾದರೂ ನೋಡಬಹುದು. ಈ ಸಿನಿಮಾವನ್ನು ಎಷ್ಟು ಜನ ವೀಕ್ಷಿಸಿದ್ದಾರೆ ಎಂಬ ಮಾಹಿತಿ ಕೂಡ ನಿರ್ಮಾಪಕರಿಗೆ ತಿಳಿಯಲಿದೆ. ಪೈರಸಿ ತಡೆಗಟ್ಟುವ ಕಡೆಗೂ ಗಮನ ಹರಸಲಾಗಿದೆ. ಧ್ವನಿಯಿಂದ ಹಿಡಿದು, ಸ್ಕ್ರೀನಿಂಗ್ ತನಕ ಎಲ್ಲಾ ಉತ್ತಮ ಗುಣಮಟ್ಟದಾಗಿರುತ್ತದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರಗಳು ಈಗಾಗಲೇ ಈ ಆಪ್ ನಲ್ಲಿದೆ. ಈ ಆಪ್ ಮೂಲಕವೇ ಚಿತ್ರವನ್ನು ಬಿಡುಗಡೆ ಮಾಡಲು ಇಚ್ಛಿಸುವವರು ನಮ್ಮ ತಂಡವನ್ನು ಸಂಪರ್ಕಿಸಬಹುದು. ಒಟ್ಟಿನಲ್ಲಿ ಕನ್ನಡ ನಿರ್ಮಾಪಕರಿಗೆ ಒಳಿತಾಗಲಿ ಎಂಬುದೇ ನಮ್ಮ ಆಶಯ ಎಂದರು ಭಾಸ್ಕರ್ ವೆಂಕಟೇಶ್.
ಭಾಸ್ಕರ್ ನನ್ನನ್ನು ಸಂಪರ್ಕಿಸಿ ಈ ಬಗ್ಗೆ ಮಾಹಿತಿ ನೀಡಿದಾಗ ಇದರಿಂದ ನಿರ್ಮಾಪಕರಿಗೆ ಹಾಗೂ ನೋಡುಗರಿಗೆ ಅನುಕೂಲವಿದೆ ಎಂದು ತಿಳಿಯಿತು. ನಾನು ಭಾಸ್ಕರ್ ಅವರ ಜೊತೆ ಈ ಪ್ರಯತ್ನಕ್ಕೆ ಕೈ ಜೋಡಿಸಿದ್ದೇನೆ ಎಂದರು ಉಮೇಶ್ ಬಣಕಾರ್.
ಆಪ್ ಹೇಗೆ ಬಳಸಿಕೊಳ್ಳುವುದು? ಎಂಬುದರ ಮಾಹಿತಿಯನ್ನು ಆಪ್ ಡೆವಲಪರ್ ಸುಧಾಕರ್ ನೀಡಿದರು.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಜೈರಾಜ್, ಉಪಾಧ್ಯಕ್ಷ ನಾಗಣ್ಣ, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್, ನಟ ಶ್ರೀನಗರ ಕಿಟ್ಟಿ, ನಿರ್ದೇಶಕರಾದ ರವಿಶ್ರೀವತ್ಸ, ಗಿರಿರಾಜ್ “ಸಿನಿಬಜಾರ್” ಓಟಿಟಿಯನ್ನು ಬಿಡುಗಡೆ ಮಾಡಿ , ತಂಡಕ್ಕೆ ತಮ್ಮ ಪ್ರೋತ್ಸಾಹಭರಿತ ಮಾತುಗಳ ಮೂಲಕ ಶುಭ ಕೋರಿದರು.