Categories
ಸಿನಿ ಸುದ್ದಿ

ಕನ್ನಡ ಚಿತ್ರೋದ್ಯಮಕ್ಕೆ ಕೊರೊನಾ ಕಲಿಸಿದ ಮಾನವೀಯತೆಯ ಪಾಠ; ಅಸಹಾಯಕರ ಬೆನ್ನಿಗೆ ನಿಂತ ಸಮಾನ ಮನಸ್ಕ ಗೆಳೆಯರು

ಕಳೆದ ಒಂದು ವರ್ಷದಿಂದಲೂ ಕೊರೊನಾದಿಂದ ಚಿತ್ರರಂಗ ನಿಜಕ್ಕೂ ತತ್ತರಿಸಿ ಹೋಗಿದೆ.
ಎಲ್ಲವೂ ಸ್ಥಗಿತಗೊಂಡ ಹಿನ್ನೆಲೆಯಲ್ಲಿ, ಚಿತ್ರೋದ್ಯಮವನ್ನೇ ನಂಬಿ ಜೀವನ ನಡೆಸುತ್ತಿದ್ದ ಅನೇಕ ಕುಟುಂಬಗಳು ಇಂದು ಅಕ್ಷರಶಃ ನಲುಗಿವೆ. ಕೈಯಲ್ಲಿ ಕೆಲಸವಿಲ್ಲ, ಅತ್ತ ಕೂಲಿಯೂ ಇಲ್ಲ ಬದುಕು ಬೀದಿಪಾಲಾಗುವ ಪರಿಸ್ಥಿತಿ ಇದೆ. ಸ್ವಾಭಿಮಾನದಿಂದ ಬೇರೆಯವರ ಬಳಿ ಸಹಾಯ ಕೇಳೋಕೆ ಸಂಕೋಚ ಪಡುವ ಅದೆಷ್ಟೋ ಮಂದಿ ಸಂಕಷ್ಟದಲ್ಲೇ ದಿನ‌ ಸವೆಸುತ್ತಿದ್ದಾರೆ. ಕೊರೊನಾ ಎರಡನೇ ಅಲೆ ಹೆಚ್ಚಾದ ಬಳಿಕ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ.
ಇಂತಹ ವಿಷಮ ಪರಿಸ್ಥಿತಿಯಲ್ಲಿ ಅಂತಹವರ ನೆರವಿಗೆ ಧಾವಿಸಲು “ಕರ್ನಾಟಕ ಚಿತ್ರೋದ್ಯಮ”ನಿರ್ಮಾಪಕ
ನಾಗೇಶ್ ಕುಮಾರ್ ಯು .ಎಸ್, ನಿರ್ದೇಶಕ
ನಾಗೇಂದ್ರ ಅರಸ್, ಜೆ.ಜೆ.ಶ್ರೀನಿವಾಸ್ ,
“ಕುಮಾರ್ ಎಸ್, ಅವರ ನೇತೃತ್ವದಲ್ಲಿ ಒಂದಷ್ಟು ಸಮಾನ ಮನಸ್ಕ ಗೆಳೆಯರನ್ನ ಒಟ್ಟುಗೂಡಿಸಿ, ಅವರ ಸಹಾಯವನ್ನು ಪಡೆದು ಕಳೆದೊಂದು ವರ್ಷದಿಂದ ಅತಿ ಸಂಕಷ್ಟದಲ್ಲಿರುವ ಚಿತ್ರೋದ್ಯಮದವರಿಗೆ “ಮೆಡಿಸಿನ್ ಕಿಟ್” ಕೊರೊನಾ ಪೀಡಿತರ ಉಸಿರಾಟದ ತೊಂದರೆ ಆದವರಿಗೆ “ಆಕ್ಸಿಜನ್ ಕಿಟ್” “ದಿನಸಿ ಕಿಟ್” ಮತ್ತು ದೂರದ ಊರುಗಳಿಗೆ ಹೋಗಲಾಗದ ಪರಿಸ್ಥಿತಿ ಬಂದಾಗ ಅವರಿಗೆ ಧನಸಹಾಯ ಮಾಡುತ್ತಾ ಬರುತ್ತಿದ್ದಾರೆ.

ಅದರಂತೆ ಈ ಕೊರೊನಾ ಎರಡನೆ ಅಲೆಯಲ್ಲಿಯೂ ಸಹ ಸಂಕಷ್ಟದಲ್ಲಿರುವ ಚಿತ್ರೋದ್ಯಮ ಬಂಧುಗಳಿಗೆ 1000 ( ಒಂದು ಸಾವಿರ ) ದಿನಸಿ ಕಿಟ್ ಗಳನ್ನು ಕೊಡುವ ಗುರಿ ಹೊಂದಿದ್ದಾರೆ. ಈಗಾಗಲೇ ಈ ಕಾರ್ಯ ಶುರುವಾಗಿದ್ದು, ನೇರ ಸಂತ್ರಸ್ಥರಿಗೆ ಕರೆ ಮಾಡಿ ಅವರಿಗೆ ಕಿಟ್ ತಲುಪಿಸುವ ವ್ಯವಸ್ಥೆ ಆಗುತ್ತಿರುವುದು ನಿಜಕ್ಕೂ ಶ್ಲಾಘನೀಯ. ಇಂತಹ ಸಂಕಷ್ಟ ಸಮಯದಲ್ಲಿ ಈ ನಾಲ್ವರ ನಿಸ್ವಾರ್ಥ ಸೇವೆಯನ್ನು ಚಿತ್ರೋದ್ಯಮದ ಮೆಚ್ಚಿದ್ದಾರೆ.


ಆದರೆ, ಇದು ಪ್ರಚಾರದ ಉದ್ದೇಶದಿಂದ ಕೈಗೆತ್ತಿಕೊಂಡ ಕಾರ್ಯವಲ್ಲ, ಮನುಷ್ಯತ್ವ ಇಟ್ಟುಕೊಂಡು ರೂಪಿಸಿದ ಕೆಲಸ‌ ಅನ್ನೋದನ್ನು ಅರಿಯಲೇಬೇಕು. ಅಂದಹಾಗೆ,
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಚಿತ್ರೋದ್ಯಮದ ಮೂಲಕ ಸೇವೆ ಸಲ್ಲಿಸುತ್ತಿರುವವರ ಈ
9845208000 ಸಂಖ್ಯೆ ಮೂಲಕ ಅಗತ್ಯ ಇರುವ ಸಿನಿಮಾ ಮಂದಿ ಸಹಾಯ ಪಡೆಯಬಹುದು.

Categories
ಸಿನಿ ಸುದ್ದಿ

ಸಿನಿಮಾ ಕಾರ್ಮಿಕರ ನೆರವಿಗೆ ಬಂದ ನಟ ಉಪೇಂದ್ರ ; ಮೂರು ಸಾವಿರ ಕುಟುಂಬಕ್ಕೆ ದಿನಸಿ ಕಿಟ್‌ ವಿತರಿಸಲು ನಿರ್ಧಾರ

ಕೊರೊನಾ ಹೆಚ್ಚಳದ ಹಿನ್ನೆಲೆಯಲ್ಲಿ ಜಾರಿಯಾಗಿರುವ ಲಾಕ್‌ ಡೌನ್‌ ಸಿನಿಮಾ ಕಾರ್ಮಿಕರನ್ನು ಮತ್ತೆ ಆತಂಕಕ್ಕೆ ತಳ್ಳಿದೆ. ಸಾವಿರಾರು ಕಾರ್ಮಿಕರು ಕೆಲಸವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಪರಿಸ್ಥಿತಿ ತಿಳಿಯಾಗುವುದು ಯಾವಾಗವೋ, ಅನಿಶ್ವಿತತೆಯ ಆತಂಕ ಸಿನಿಮಾ ಕಾರ್ಮಿಕ ವಲಯವನ್ನು ಕಾಡುತ್ತಿದೆ. ಈ ನಡುವೆಯೇ ನಟ ಉಪೇಂದ್ರ , ಸಂಕಷ್ಟದಲ್ಲಿರುವ ಸಿನಿಮಾ ಕಾರ್ಮಿಕರ ನೆರವಿಗೆ ಧಾವಿಸಿದ್ದಾರೆ.

ಕಾರ್ಮಿಕರ ಒಕ್ಕೂಟದ ಎಲ್ಲಾ ಸಂಘಗಳ ಸುಮಾರು ಮೂರು ಸಾವಿರ ಕುಟುಂಬಕ್ಕೆ ದಿನಸಿ ಕಿಟ್‌ ವಿತರಿಸಲು ಮುಂದಾಗಿದ್ದಾರೆ. ಅಭಿಮಾನಿಗಳ ಆಶೀರ್ವಾದಿಂದಲೇ ಇದನ್ನು ನಡೆಸುವುದಾಗಿ ಅವರು ಹೇಳಿಕೊಂಡಿದ್ದಾರೆ.
“ಕನ್ನಡ ಚಲನಚಿತ್ರ ರಂಗದ ಸಾವಿರಾರು ಕಾರ್ಮಿಕರು, ಕಲಾವಿದರು ಕೆಲಸವಿಲ್ಲದೆ ಕೋವಿಡ್‌ ಹೊಡೆತಕ್ಕೆ ಸಿಲುಕಿ ತತ್ತರಿಸಿ ಹೋಗಿದ್ದಾರೆ. ಆ ಕಾರಣ ಒಕ್ಕೂಟದ ಎಲ್ಲಾ ಸಂಘಗಳ ಸುಮಾರು ಮೂರು ಸಾವಿರ ಕುಟುಂಬಕ್ಕೆ ಅಭಿಮಾನಿಗಳ ಆಶೀರ್ವಾದದಿಂದ ದಿನಸಿ ಕಿಟ್‌ ನೀಡಲು ನಿರ್ಧರಿಸಿದ್ದೇನೆ. ವಿತರಣೆ ಬಗ್ಗೆ ತಮ್ಮ ತಮ್ಮ ಸಂಘದ ಮುಖ್ತಸ್ಥರನ್ನು ಸಂಪರ್ಕಿಸಬಹುದುʼ ಅಂತ ಉಪೇಂದ್ರ ಸೋಶಿಯಲ್‌ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.

ಚಿತ್ರರಂಗದ ಪರವಾಗಿ ಈಗಾಗಲೇ ನಟ ಕಿಚ್ಚ ಸುದೀಪ್‌ ಸೇರಿದಂತೆ ವಸಿಷ್ಟ ಸಿಂಹ, ಭುವನ್‌ ಪೊನ್ನಣ್ಣ, ರಾಗಿಣಿ, ಸಂಜನಾ ಸೇರಿದಂತೆ ಹಲವರು ಅಸಹಾಯಕರ ನೆರವಿಗೆ ಧಾವಿಸಿದ್ದಾರೆ. ಆದರೆ, ಈಗ ನಟ ಉಪೇಂದ್ರ ಚಿತ್ರರಂಗದ ಅಷ್ಟು ಕಾರ್ಮಿಕರ ನೆರವಿಗೆ ಧಾವಿಸಿದ್ದು ವಿಶೇಷ.

Categories
ಸಿನಿ ಸುದ್ದಿ

ಕೊರೊನಾ ಸೋಂಕಿತರ ಸೇವೆಯಲ್ಲಿರೋ ಐದು ಸರ್ಕಾರಿ ಆಸ್ಪತ್ರೆ ಸಿಬ್ಬಂದಿಗೆ ಊಟದ ವ್ಯವಸ್ಥೆ ಮಾಡಿದ ನಟ ಶ್ರೀಮುರಳಿ

ಕೊರೊನಾ ಸಂಕಷ್ಟದ ಸಮಯದಲ್ಲಿ ಹಗಲಿರುಳು ಕೊರೊನಾ ಸೋಂಕಿತರ ಸೇವೆ ಮಾಡುತ್ತಿರುವ ಬೆಂಗಳೂರಿನ 5 ಸರಕಾರಿ ಆಸ್ಪತ್ರೆಯ ಡಾಕ್ಟರ್ಸ್, ನರ್ಸ್ ಹಾಗೂ ಆಸ್ಪತ್ರೆಯ ಸಿಬ್ಬಂದಿಗಳಿಗೆ ನಟ ರೋರಿಂಗ್ ಸ್ಟಾರ್ ಶ್ರೀಮುರಳಿ ಅವರು
ಊಟದ ವ್ಯವಸ್ಥೆ ಮಾಡಿದ್ದಾರೆ.


ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆ, ರಾಜಾಜಿನಗರದ ಇಎಸ್ಐ ಆಸ್ಪತ್ರೆ, ಬೌರಿಂಗ್ ಆಸ್ಪತ್ರೆ, ಜಯನಗರದ ಜನರಲ್ ಆಸ್ಪತ್ರೆ ಮತ್ತು ಸಿವಿ ರಾಮನ್ ಜನರಲ್ ಆಸ್ಪತ್ರೆ ಸಿಬ್ಬಂದಿಗೆ


ಊಟದ ವ್ಯವಸ್ಥೆ ಮಾಡುವ ಮೂಲಕ ಕೊರೊನಾ ವಾರಿಯರ್ಸ್ ಗೆ ಧನ್ಯವಾದ ಅರ್ಪಿಸಿದ್ದಾರೆ.

Categories
ಸಿನಿ ಸುದ್ದಿ

ರಕ್ತದಾನ ಮಾಡಿದ ನಟ‌ ವಸಿಷ್ಠ ಸಿಂಹ ಫ್ಯಾನ್ಸ್; ವ್ಯಾಕ್ಸಿನೇಷನ್ ಪಡೆವ ಮೊದಲು ರಕ್ತದಾನ ಮಾಡಲು ವಸಿಷ್ಠ ಮನವಿ

ಕೊರೊನಾ ಹಾವಳಿ ಹೆಚ್ಚಾದ ದಿನಗಳಿಂದಲೂ ಹಲವು ಮಂದಿ ಟೊಂಕ ಕಟ್ಟಿ ಒಂದಷ್ಟು ಸೇವೆ ಮಾಡಲು ಮುಂದಾಗಿರುವುದು ಗೊತ್ತೇ ಇದೆ. ಕೊರೊನೊದಿಂದ ತಮ್ಮ ಬದುಕನ್ನೇ ಕಳೆದುಕೊಂಡ‌ ಅದೆಷ್ಟೋ ಜನ ಸಾವು-ಬದುಕಿನ ಜೊತೆ ಹೋರಾಡುತ್ತಿದ್ದಾರೆ. ಅಂತಹವರ ನೆರವಿಗೆ ಸಿನಿಮಾ ಮಂದಿ ಕೂಡ ಈಗಾಗಲೇ ನೆರವಿಗೆ ಧಾವಿಸಿದ್ದಾರೆ. ಅಗತ್ಯ ಸೇವೆಗಳ ಜೊತೆಗೆ ರಕ್ತದಾನ ಸೇವೆ ಕಡೆಗೂ ಗಮನ ಹರಿಸಿರುವುದು ನಿಜಕ್ಕೂ ಶ್ಲಾಘನೀಯ.

ಹೌದು, ಈಗ ವಸಿಷ್ಠ ಸಿಂಹ ಅವರ ಅಭಿಮಾನಿ ಬಳಗ ಕೂಡ ರಕ್ತದಾನ ಶಿಬಿರ ನಡೆಸಿದೆ.
ಅಖಿಲ ಕರ್ನಾಟಕ ವಸಿಷ್ಠ ಸಿಂಹ ಅಭಿಮಾನಿಗಳ ವತಿಯಿಂದ ಕೆಪಿಟಿಸಿಎಲ್ ನೌಕರರ ಸಹಯೋಗದೊಂದಿಗೆ ಭಾನುವಾರ ಬೆಂಗಳೂರಿನ ರಾಜಾಜಿನಗರದ ಕೆಇಬಿ ನೌಕರರ‌ ಭವನದಲ್ಲಿ ರಕ್ತದಾನ ಶಿಬಿರ ನಡೆಯಿತು.


ನಟ ವಸಿಷ್ಠ ಸಿಂಹ ಕೂಡ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ರಕ್ತದಾನ ಶಿಬಿರವನ್ನು ಉದ್ಘಾಟಿಸಿದರು.
ಈ‌ ರಕ್ತದಾನ ಶಿಬಿರದಲ್ಲಿ ಒಟ್ಟು 137 ಮಂದಿ ರಕ್ತದಾನ ಮಾಡಿದ್ದಾರೆ.

ಈ ಕುರಿತಂತೆ ಅಖಿಲ ಕರ್ನಾಟಕ ವಸಿಷ್ಠ ಸಿಂಹ ಅಭಿಮಾನಿ ಬಳಗದ ಅಧ್ಯಕ್ಷ ಕುಮಾರ ನಾಯ್ಡು ಮಾತನಾಡಿ, ‘ಕೊರೊನಾ ಹಾವಳಿ ಹೆಚ್ಚಾಗಿದ್ದರಿಂದ ಸರ್ಕಾರ, ವ್ಯಾಕ್ಸಿನೇಷನ್ ಹಾಕಲು ಮುಂದಾಗಿದೆ. ವ್ಯಾಕ್ಸಿನೇಷನ್‌ ಹಾಕಿಸಿಕೊಂಡವರು ಮೂರು ತಿಂಗಳ ಕಾಲ ರಕ್ತದಾನ ಮಾಡುವಂತಿಲ್ಲ. ಹಾಗಾಗಿ ಆ ಜಾಗೃತಿಯ ಜೊತೆಗೇ ರಕ್ತದಾನ ಮಾಡಿ ಒಂದಷ್ಟು ಜನರ ಸಹಾಯಕ್ಕೆ ನಿಲ್ಲುವ ಉದ್ದೇಶ ನಮ್ಮದು.

ಈ ನಿಟ್ಟಿನಲ್ಲಿ ನಮ್ಮ ವಸಿಷ್ಠ ಸಿಂಹ ಅವರು ಕೂಡ ರಕ್ತದಾನ ಮಾಡಿ, ಪ್ರೇರಣೆಯಾಗಿದ್ದಾರೆ. ಈ ಶಿಬಿರದಲ್ಲಿ ಪಾಲ್ಗೊಂಡ ಅಭಿಮಾನಿಗಳಿಗೆ, ಸ್ನೇಹಿತರಿಗೆ, ಮುಖ್ಯವಾಗಿ ಆರೋಗ್ಯ ಸಿಬ್ಬಂದಿಗೆ ಧನ್ಯವಾದ ಅರ್ಪಿಸುತ್ತೇನೆ’ ಎಂದಿದ್ದಾರೆ ಕುಮಾರ್ ನಾಯ್ಡು.

Categories
ಸಿನಿ ಸುದ್ದಿ

ಕಿರುತೆರೆಯಲ್ಲಿ ಇನ್ನುಂದೆ ಸೀರಿಯಲ್‌ಗಳದ್ದು ರಿಪೀಟ್‌ ಕಥೆಯಷ್ಟೇ..! ಇದು ಶೂಟಿಂಗ್ ಸ್ಥಗಿತದ ಎಫೆಕ್ಟ್..!!

ಸಿನಿಮಾ ನಂತರ ಈಗ ಸೀರಿಯಲ್‌ ಜತೆಗೆ ರಿಯಾಲಿಟಿ ಶೋಗಳಿಗೂ ಚಿತ್ರೀಕರಣ ಇಲ್ಲ. ಲಾಕ್‌ಡೌನ್‌ ಮಾರ್ಗಸೂಚಿಯ ಅನ್ವಯ ನಾಳೆಯಿಂದಲೇ ಕನ್ನಡದ ಎಲ್ಲಾ ಕಿರುತೆರೆಯ ಸೀರಿಯಲ್‌ ಹಾಗೂ ರಿಯಾಲಿಟಿ ಶೋಗಳ ಚಿತ್ರೀಕರಣ ಸ್ಥಗಿತಗೊಳ್ಳುತ್ತಿದೆ. ಹಾಗಂತ ಕರ್ನಾಟಕ ಟೆಲಿವಿಷನ್‌ ಅಸೋಸಿಯೇಷನ್‌ ಅನೌನ್ಸ್‌ಮಾಡಿದೆ.

ಅಷ್ಟೇ ಅಲ್ಲ, ಅಸೋಷಿಯೇಷನ್‌ ಕರೆಗೂ ಬೆಲೆ ಕೊಡದೆ ಯಾವುದಾದರೂ ಸೀರಿಯಲ್‌ ಅಥವಾ ರಿಯಾಲಿಟಿ ಶೋ ಗೆ ಚಿತ್ರೀಕರಣ ನಡೆದಿದ್ದಾದಲ್ಲಿ ಅದಕ್ಕೆ ಅದೇ ತಂಡದವರೇ ಹೊಣೆಗಾರರು. ಕೋವಿಡ್‌ಮಾರ್ಗಸೂಚಿ ಅನ್ವಯ ಮುಂದೆ ಪೊಲೀಸರು ಕೈಗೊಳ್ಳುವ ಕ್ರಮಗಳಿಗೆ ತಾವು ಜವಾಬ್ದಾರಿ ಅಲ್ಲ ಅಂತಲೂ ಅಸೋಷಿಯೇಷನ್‌ ಅಧ್ಯಕ್ಷ ಶಿವಕುಮಾರ್‌ ಎಚ್ಚರಿಸಿದ್ದಾರೆ. ಅಲ್ಲಿಗೆ ನಾಳೆಯಿಂದ ಎಲ್ಲಾ ಸೀರಿಯಲ್‌ ಹಾಗೂ ರಿಯಾಲಿಟಿ ಶೋಗಳ ಚಿತ್ರೀಕರಣ ಸ್ಟಾಪ್‌ ಆಗುವುದಂತೂ ಖಚಿತ. ಹಾಗಾದರೆ, ಕನ್ನಡದ ಎಲ್ಲಾ ಸೀರಿಯಲ್‌ಹಾಗೂ ರಿಯಾಲಿಟಿ ಶೋಗಳ ಕಥೆ ಏನು?

ಸದ್ಯಕ್ಕೆ ಇದು ಕನ್ನಡದ ಎಲ್ಲಾ ಕಿರುತೆರೆ ವೀಕ್ಷಕರ ಮುಂದಿರುವ ಪ್ರಶ್ನೆ. ಅದಕ್ಕೆ ಇರುವುದೊಂದೆ ಉತ್ತರ ರಿಪೀಟ್ ಪ್ರಸಾರ. ಅಂದರೆ, ಈಗಾಗಲೇ ಪ್ರಸಾರವಾದ ಎಪಿಸೋಡ್‌ಗಳ ಪುನಾರಾವರ್ತನೆ. ಸದ್ಯಕ್ಕೆ ಕನ್ನಡದ ಅಷ್ಟು ಮಜರಂಜನಾ ವಾಹಿನಿಗಳಲ್ಲೂ ಮುಂದೆ ರಿಪೀಟ್ ಕಥೆಯಂತೂ ಗ್ಯಾರಂಟಿ. ಕನ್ನಡದಲ್ಲೀಗ ಉದಯ, ಸ್ಟಾರ್‌ ಸುವರ್ಣ, ಜೀ ಕನ್ನಡ, ಕಲರ್ಸ್‌ ಕನ್ನಡ, ಕಸ್ತೂರಿ, ದಂಗಲ್‌ ಕನ್ನಡ ವಾಹಿನಿಗಳಲ್ಲಿ ಸೀರಿಯಲ್‌ ಹಾಗೂ ರಿಯಾಲಿಟಿ ಶೋಗಳು ಪ್ರಸಾರವಾಗುತ್ತಿವೆ. ವಿಶೇಷವಾಗಿ ಕಲರ್ಸ್‌ ಕನ್ನಡ, ಸ್ಟಾರ್‌ ಸುವರ್ಣ ಹಾಗೂ ಉದಯ ಚಾನೆಲ್‌ನ ಕೆಲವು ಧಾರಾವಾಹಿಗಳು ಬಹು ಜನಪ್ರಿಯತೆ ಪಡೆದಿರುವುದು ನಿಮಗೂ ಗೊತ್ತು.

ಅದರಲ್ಲೂ ಜೀ ಕನ್ನಡದ ಮಹಾ ನಾಯಕ, ಜೊತೆ ಜೊತೆಯಲಿ, ಸತ್ಯ, ಗಟ್ಟಿಮೇಳ ಧಾರಾವಾಹಿಗಳು ಮನೆ ಮಾತಾಗಿವೆ. ಅದೇ ಕಾರಣಕ್ಕೆ ಸೀರಿಯಲ್‌ ಜಗತ್ತಿನಲ್ಲಿ ಝೀ ಕನ್ನಡ ನಂಬರ್‌ ಒನ್‌ ಟಿಆರ್‌ಪಿ ಪಡೆದಿರುವುದು ಕೂಡ ಹಳೇ ಸುದ್ದಿಯೇ. ಇವಿಷ್ಟು ಧಾರಾವಾಹಿಗಳ ಪೈಕಿ ಮಹಾ ನಾಯಕ ಧಾರವಾಹಿಯೂ ಹಿಂದಿಯಿಂದ ಡಬ್‌ ಆಗಿ ಕನ್ನಡಕ್ಕೆ ಬರುತ್ತಿದೆ. ಚಿತ್ರೀಕರಣ ನಿಲ್ಲುವುದರಿಂದ ಅದಕ್ಕೇನು ತೊಂದರೆ ಆಗದು. ಉಳಿದ ಸೀರಿಯಲ್‌ಗಳೆಲ್ಲ ಇಲ್ಲಿಯೇ ಚಿತ್ರೀಕರಣಗೊಳ್ಳುತ್ತಿವೆ. ಸದ್ಯಕ್ಕೆ ಅವೆಲ್ಲವೂ ಒಂದಷ್ಟು ದಿನಗಳ ಮಟ್ಟಿಗೆ ಫ್ರೆಶ್ ಎಪಿಸೋಡ್ಸ್‌ಗಳ ಮೂಲಕ ವೀಕ್ಷಕರ ಮುಂದೆ ಬರಬಹುದು. ಮುಂದೆ ರಿಪೀಟ್‌ ಎಪಿಸೋಡ್ಸ್‌ಗಳನ್ನೇ ಜನರ ನೋಡಬೇಕಾಗುವುದು ಅನಿವಾರ್ಯ.


ಮತ್ತೊಂದೆಡೆ, ಕಲರ್ಸ್‌ ಕನ್ನಡದ ಸಾಕಷ್ಟು ಧಾರಾವಾಹಿಗಳಿಗೂ ಬಾರೀ ಬೇಡಿಕೆ ಇದೆ. ಸದ್ಯ ಕನ್ನಡತಿ ಮನೆ ಮಾತಾಗಿದೆ. ಹಾಗೆಯೇ ʼನಮ್ಮನೆ ಯುವರಾಣಿ,ʼ ನನ್ನರಸಿ ರಾಧೆʼ, ʼಮಂಗಳ ಗೌರಿʼ ಧಾರಾವಾಹಿಗಳ ಪ್ರಸಾರಕ್ಕಾಗಿಯೇ ದಿನ ನಿತ್ಯ ಸಂಜೆ ವೀಕ್ಷಕರು ಕಾದು ಕುಳಿತಿರುತ್ತಾರೆನ್ನುವುದು ನಿಮಗೂ ಗೊತ್ತು. ಈಗ ಇವೆಲ್ಲ ಧಾರವಾಹಿಗಳಿಗೂ ಟೆಲಿವಿಷನ್‌ ಅಸೋಸಿಯೇಷನ್‌ ನಿರ್ಧಾರ ಪೆಟ್ಟು ನೀಡುವುದು ಖಚಿತವಾಗಿದೆ. ಇವುಗಳಿಗೂ ರಿಪೀಟ್‌ ಎಪಿಸೋಡ್ಸ್‌ ಹಾಕುವುದು ಅನಿವಾರ್ಯ. ಇನ್ನು ಕಲರ್ಸ್‌ ಕನ್ನಡದ ಬಹು ಜನಪ್ರಿಯ ರಿಯಾಲಿಟಿ ಶೋ ಬಿಗ ಬಾಸ್‌ ಇದೇ ಕಾರಣಕ್ಕೆ ನಿಂತು ಹೋಗಿದೆ.
ಸ್ಟಾರ್ ಸುವರ್ಣ ದಲ್ಲೂ ಹಲವು ಜನಪ್ರಿಯ ಧಾರಾವಾಹಿಗಳಿವೆ. ಸದ್ಯಕ್ಕೆ ಅಲ್ಲೂ ಕೆಲವು ಡಬ್ ಆದ ಧಾರಾವಾಹಿಗಳೇ ಬರುತ್ತಿವೆ. ಅವುಗಳಿಗೇನು ಚಿತ್ರೀಕರಣದ ಸ್ಥಗಿತದ ನಿರ್ಧಾರದಿಂದ ಯಾವುದೇ ತೊಂದರೆ ಅಗದು.

ಆದರೆ ಚಿತ್ರೀಕರಣಗೊಳ್ಳುವ ಧಾರಾವಾಹಿಗಳದ್ದು ಇನ್ನೇನು ರಿಪೀಟ್ ಎಪಿಸೋಡ್ ಪ್ರಸಾರ ಮಾಡುವುದಷ್ಟೇ ಅನಿವಾರ್ಯ. ಉಳಿದಂತೆ ರಿಯಾಲಿಟಿ ಶೋಗಳನ್ನು ಇದೇ ಹಣೆಬರಹ.

Categories
ಸಿನಿ ಸುದ್ದಿ

ಶೂಟಿಂಗ್‌ ನಿಂತರೆ ಬಿಗ್‌ ಬಾಸ್‌ ಶೋ ಕಥೆ ಏನು?

ಕಲರ್ಸ್‌ ಕನ್ನಡದ ಬಿಗ್‌ ಬಾಸ್‌ ಸೀಸನ್‌ 8 ರಿಯಾಲಿಟಿ ಶೋ ಗೆ ಕಂಟಕ ಎದುರಾಗಿದೆ. ಈಗಾಗಲೇ ಅಲ್ಲಿನ ಒಬ್ಬ ಕಂಟೆಸ್ಟೆಂಟ್‌ ಅನಾರೋಗ್ಯದ ಹಿನ್ನೆಲೆಯಲ್ಲಿ ಮನೆಯಿಂದ ಹೊರ ಬಂದಾಗಿದೆ. ಬಿಗ್‌ ಬಾಸ್‌ ರಿಯಾಲಿಟಿ ಶೋ ಇತಿಹಾಸದಲ್ಲೇ ಇದೇ ಮೊದಲು ಅಂತಹದೊಂದು ಘಟನೆ ನಡೆದಿದೆ. ಅವರು ಮತ್ತೆ ಮನೆಗೆ ವಾಪಾಸ್‌ ಹೋಗುವ ಬಗ್ಗೆ ಅನುಮಾನ ಇದೆ. ಅದರ ನಡುವೆಯೇ ಬಿಗ್‌ ಬಾಸ್‌ ಚಿತ್ರೀಕರಣದ ಕಥೆ ಏನು ಎನ್ನುವ ಪ್ರಶ್ನೆ ಎದುರಾಗಿದೆ. ಕೋರೋನಾ ಹಿನ್ನೆಲೆಯಲ್ಲಿ ಸರ್ಕಾರ ಜಾರಿಗೆ ತಂದ ಲಾಕ್‌ ಡೌನ್‌ ಮಾರ್ಗಸೂಚಿಗೆ ಬೆಂಬಲಿಸಿ ಕರ್ನಾಟಕ ಟೆಲಿವಿಷನ್‌ ಅಸೋಷಿಯೇಷನ್‌ ಮೇ 10 ರಿಂದ ಮೇ 24ರವರೆಗೂ ಕನ್ನಡ ಕಿರುತೆರೆಯ ಧಾರಾವಾಹಿ ಹಾಗೂ ರಿಯಾಲಿಟಿ ಶೋ ಚಿತ್ರೀಕರಣ ಸ್ಥಗಿತಗೊಳಿಸಲು ತೀರ್ಮಾನಿಸಿದೆ.

ಸಹಜವಾಗಿಯೇ ಈ ನಿಯಮವೂ ಕಲರ್ಸ್‌ ಕನ್ನಡದ ಬಿಗ್‌ ಬಾಸ್‌ ರಿಯಾಲಿಟಿ ಶೋ ಗೂ ಅನ್ವಯಿಸುತ್ತದೆ. ಹಾಗಾಗಿ ಬಿಗ್‌ ಬಾಸ್‌ ಕಥೆ ಮುಂದೆ ಹೇಗೆ ಎನ್ನುವ ಪ್ರಶ್ನೆ ಸಹಜವಾಗಿಯೇ ಶುರುವಾಗಿದೆ. ಧಾರಾವಾಹಿಗಳ ಹಾಗೆ ಬಿಗ್‌ ಬಾಸ್‌ ಎಪಿಸೋಡ್‌ ಗಳನ್ನು ಮೊದಲೇ ಶೂಟ್‌ ಮಾಡಿ ಇಟ್ಟುಕೊಳ್ಳುವಂತಿಲ್ಲ. ಹಿಂದಿನ ದಿನ ಏನೆಲ್ಲ ಅಲ್ಲಿ ಬೆಳವಣಿಗೆ ಆಗುತ್ತವೆಯೋ ಅದನ್ನು ಅವತ್ತೇ ಹಿಡಿದಿಟ್ಟುಕೊಂಡ ಕ್ಯಾಮೆರಾ ಪುಟೇಜ್ ಸಂಗ್ರಹಿಸಿ, ಎಡಿಟ್‌ ಮಾಡಿ ಅದನ್ನು ಮರು ದಿವಸ ಜನರಿಗೆ ತೋರಿಸಲಾಗುತ್ತಿದೆ. ಟಿವಿಗಳಲ್ಲಿ ಅದು ಸಂಜೆ ಬಂದರೆ, ವೂಟ್‌ ಆಪ್‌ ನಲ್ಲಿ ಅದು ಬೆಳಗ್ಗೆಯಿಂದಲೇ ಲಭ್ಯವಿರುತ್ತದೆ. ಆದರೆ ಈಗ ಚಿತ್ರೀಕರಣವೇ ಸ್ಟಾಪ್‌ ಆದರೆ ಎಡಿಟ್‌ ಕಥೆ ಎನ್ನುವ ಪ್ರಶ್ನೆಯೂ ಇದೆ. ಹಾಗೆ ನೋಡಿದರೆ ಬಿಗ್‌ ಬಾಸ್‌ ಗೆ ಇದು ಯಾವುದೇ ತೊಂದರೆ ಆಗದು. ಅಲ್ಲಿ ಫಿಕ್ಸ್‌ ಕ್ಯಾಮೆರಾಗಳೇ ಆಗಿರುವುದರಿಂದ ಪ್ರತಿ ದಿನದ ಪ್ರಸಾರದ ಸರುಕಿಗೆ ಯಾವುದೇ ಅಡಚಣೆ ಇಲ್ಲ. ಆದರೆ ವಾರದ ಕೊನೆಯ ಚಿತ್ರೀಕರಣಕ್ಕೆ ಮಾತ್ರ ಸ್ವಲ್ಪ ತೊಂದರೆ ಆಗಲಿದೆ. ಅದನ್ನು ಕೂಡ ಹ್ಯಾಗೋ ಮ್ಯಾನೇಜ್‌ ಮಾಡಬಹುದು ಎನ್ನುವ ಮಾತುಗಳು ಕೇಳಿ ಬಂದಿವೆ.

Categories
ಸಿನಿ ಸುದ್ದಿ

ಮೇ 10 ರಿಂದ ಸೀರಿಯಲ್‌ ಹಾಗೂ ರಿಯಾಲಿಟಿ ಶೋ ಚಿತ್ರೀಕರಣ ಬಂದ್‌ ಆಗದಿದ್ದರೆ ಕಠಿಣ ಶಿಕ್ಷೆ !

ಲಾಕ್‌ ಡೌನ್‌ ಹಿನ್ನೆಲೆಯಲ್ಲಿ ಮೇ 10 ರಿಂದಲೇ ಕನ್ನಡ ಕಿರುತೆರೆಯ ಎಲ್ಲಾ ಧಾರಾವಾಹಿ ಹಾಗೂ ರಿಯಾಲಿಟಿ ಶೋಗಳ ಚಿತ್ರೀಕರಣವನ್ನು ಸ್ಥಗಿತಗೊಳಿಸಲು ಕರ್ನಾಟಕ ಟೆಲಿವಿಷನ್‌ ಅಸೋಷಿಯೇಷನ್‌ ತೀರ್ಮಾನ ಕೈಗೊಂಡಿದೆ. ಸರ್ಕಾರ ಲಾಕ್‌ ಡೌನ್‌ ಘೋಷಿಸಿರುವ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಮೇ 10 ರಿಂದ ಮೇ 24 ರವರೆಗೂ ಚಿತ್ರೀಕರಣ ಬಂದ್‌ ಆಗಲಿದೆ ಅಂತ ಅಸೋಷಿಯೇಷನ್‌ ಅಧ್ಯಕ್ಷ ಎಸ್.ವಿ. ಶಿವಕುಮಾರ್‌ ತಿಳಿಸಿದ್ದಾರೆ.

ಕೊರೋನಾ ಎರಡನೇ ಅಲೆ ರಾಜ್ಯದಲ್ಲಿ ಹೆಚ್ಚಾಗಿದ್ದು, ಇದನ್ನು ತಡೆಗಟ್ಟುವ ಸಂಬಂಧ ಸರ್ಕಾರ ಲಾಕ್‌ ಡೌನ್‌ ಘೋಷಿಸಿದೆ. ಇದಕ್ಕೆ ಕರ್ನಾಟಕ ಟೆಲಿವಿಷನ್‌ ಅಸೋಸಿಯೇಷನ್‌ ಎಲ್ಲಾ ರೀತಿಯ ಬೆಂಬಲ ನೀಡಲು ಒಮ್ಮತದ ತೀರ್ಮಾನ ತೆಗೆದುಕೊಂಡಿದೆ. ಅಂತೆಯೇ ಮೇ 10 ರಿಂದ ಮೇ 24 ರವರೆಗೆ ಕನ್ನಡದ ಎಲ್ಲಾ ಧಾರಾವಾಹಿ ಹಾಗೂ ರಿಯಾಲಿಟಿ ಶೋ ಗಳ ಚಿತ್ರೀಕರಣ ಸ್ಥಗಿತಗೊಳ್ಳಲಿದೆ. ಸರ್ಕಾರದ ಮಾರ್ಗಸೂಚಿ ಅನುಸಾರ ರೆಸಾರ್ಟ್‌, ಪ್ರವಾಸಿ ತಾಣ, ಬೆಂಗಳೂರಿನ ಹೊರವಲಯ ಅಥವಾ ಮನೆ ಇಲ್ಲೇಯೇ ಚಿತ್ರೀಕರಣ ನಡೆಯುವಂತಿಲ್ಲ ಎಂದು ಶಿವಕುಮಾರ್‌ ತಿಳಿಸಿದ್ದಾರೆ. ಹಾಗೊಂದು ವೇಳೆ ಸರ್ಕಾರದ ಕೋವಿಡ್‌ ನಿಯಮ ಮೀರಿಯೂ ಯಾರಾದರೂ ಚಿತ್ರೀಕರಣ ಮಾಡಿದ್ದಲ್ಲಿ ಅವರ ವಿರುದ್ಧ ಕಠಿಣ ಶಿಕ್ಷೆ ಆಗಲಿದೆ. ಮುಂದೆ ಆಗುವ ಅನಾಹುತಗಳಿಗೆ ತಾವು ಜವಾಬ್ದಾರಿ ಆಗುವುದಿಲ್ಲ ಅಂತಲೂ ಶಿವಕುಮಾರ್‌ ಸ್ಪಷ್ಟಪಡಿಸಿದ್ದಾರೆ.

Categories
ಸಿನಿ ಸುದ್ದಿ

ಸಿನಿಮಾ ಚಟುವಟಿಕೆಗಳಿಗಿರುವ ನಿರ್ಬಂಧ ಇವರಿಗೇಕೆ ಇಲ್ಲ… !! ಮನರಂಜನಾ ವಾಹಿನಿಗಳ ಧೋರಣೆ ವಿರುದ್ಧ ಭುಗಿಲೆದ್ದ ಜನರ ಆಕ್ರೋಶ

ನಿಮಗೆಲ್ಲ ಗೊತ್ತೇ ಇದೆ. ಲಾಕ್‌ಡೌನ್‌ ಎಲ್ಲಾ ಚಟುವಟಿಕೆಗಳಿಗೆ ಬ್ರೇಕ್‌ ಹಾಕಿದೆ. ಚಿತ್ರೋದ್ಯಮವೂ ಅದರಿಂದ ಹೊರತಾಗುಳಿದಿಲ್ಲ. ರಾಜ್ಯದಲ್ಲಿ ಜನತಾ ಕರ್ಪ್ಯೋ ಜಾರಿ ಆದ ದಿನದಿಂದಲೇ ಶೂಟಿಂಗ್‌ ಸೇರಿದಂತೆ ಸಿನಿಮಾ ಚಟುವಟಿಕೆಗಳೆಲ್ಲವೂ ಬಂದ್‌ ಆಗಿವೆ. ಇಷ್ಟಾಗಿಯೂ ಸೀರಿಯಲ್‌ ಹಾಗೂ ರಿಯಾಲಿಟಿ ಶೋ ಗಳ ಚಿತ್ರೀಕರಣ ಮಾತ್ರ ನಿಂತಿಲ್ಲ. ಲಾಕ್‌ ಡೌನ್‌ ಗೂ ತಮಗೂ ಸಂಬಂಧವೇ ಇಲ್ಲ ಎಂಬಂತೆ ಸೀರಿಯಲ್‌ ಚಿತ್ರೀಕರಣಗಳು ಶೂಟಿಂಗ್‌ ಮನೆಗಳಲ್ಲಿ ಸದ್ದಿಲ್ಲದೆ ನಡೆಯುತ್ತಿರುವುದು ಈಗ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಚಿತ್ರೀಕರಣ ನಡೆಯುವ ಬಗ್ಗೆ ಆಕ್ಷೇಪಗಳು ವ್ಯಕ್ತವಾಗಿಲ್ಲವಾದರೂ, ಅಲ್ಲಿ ಚಿತ್ರೀಕರಣದಲ್ಲಿ ಭಾಗಿಯಾದವರಿಗೆ ಕೊರೊನಾ ಪಾಸಿಟಿವ್‌ ಕಾಣಿಸಿಕೊಂಡು ಉಳಿದವರೆಲ್ಲರೂ ಭಯದಲ್ಲಿದ್ದರೂ, ಚಾನೆಲ್‌ ನವರು ಮಾತ್ರ ಇದ್ಯಾವುದನ್ನು ಲೆಕ್ಕಿಸದೇ ಚಿತ್ರೀಕರಣ ಮಾಡುತ್ತಿರುದ್ದಾರೆನ್ನುವ ಆರೋಪಗಳು ಕೇಳಿಬಂದಿವೆ. ಅದಕ್ಕೆ ಕೆಲವು ಕಹಿ ಘಟನೆಗಳು ಸಾಕ್ಷಿ ಆಗಿವೆ.

ಕನ್ನಡದ ಖಾಸಗಿ ಟಿವಿಯೊಂದರಲ್ಲಿ ಪ್ರಸಾರವಾಗುವ “ಸುಂದರಿʼ ಸೀರಿಯಲ್‌ ಚಿತ್ರೀಕರಣ ನಗರದ ರೆಸಾರ್ಟ್‌ ವೊಂದರಲ್ಲಿ ನಡೆಯುತ್ತಿದ್ದು, ಅಲ್ಲಿನ ಕಲಾವಿದರೊಬ್ಬರಿಗೆ ಕೊರೊನಾ ಪಾಸಿಟಿವ್‌ ಬಂದಿದೆ. ಹಾಗಾಗಿ ಕಲಾವಿದರು ಭಯದಿಂದಲೇ ಅದರ ಚಿತ್ರೀಕರಣದಲ್ಲಿ ಪಾಲ್ಗೊಳ್ಳಬೇಕಾಗಿ ಬಂದಿದೆ. ಇದೊಂಥರ ತಮ್ಮಲ್ಲಿ ಭಯ ಹುಟ್ಟಿಸಿದೆ ಅಂತ ಕಲಾವಿದರೊಬ್ಬರು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಹಾಗೆಯೇ ಬಿಗ್‌ ಬಾಸ್‌ ರಿಯಾಲಿಟಿ ಶೋನಲ್ಲಿ ಕಂಟೆಂಸ್ಟ್‌ ವೊಬ್ಬರು ಅನಾರೋಗ್ಯಕ್ಕೆ ಒಳಗಾಗಿರುವುದು ತೀವ್ರ ಆತಂಕಕ್ಕೆ ದೂಡಿದೆ. ಇಷ್ಟಾಗಿಯೂ ಕನ್ನಡದ ಅನೇಕ ಧಾರಾವಾಹಿಗಳಿಗೆ ಈಗಲೂ ಕದ್ದು ಮುಚ್ಚಿ ಚಿತ್ರೀಕರಣ ನಡೆಯುತ್ತಲೇ ಇದ್ದು, ಮನರಂಜನಾ ವಾಹಿನಿಗಳ ಜನರ ಸಾವು-ನೋವುಗಳ ನಡುವೆಯೂ ಹಣ ಮಾಡುವ ದಂಧೆಗೆ ನಿಂತಿವೆ ಅಂತಲೂ ಪ್ರೇಕ್ಷಕರೊಬ್ಬರು ದೂರಿದ್ದಾರೆ.

ಅಷ್ಟೇ ಅಲ್ಲ, ಈ ಮನರಂಜನಾ ವಾಹಿನಿಗಳಿಗೆ ಜನರ ಬಗ್ಗೆ ಕಿಂಚತ್ತು ಕಾಳಜಿಯೇ ಇಲ್ಲ. ಈಗ ನ್ಯೂಸ್‌ ಚಾನೆಲ್‌ ನೋಡುವುದಕ್ಕಿಂತ ಹೆಚ್ಚಾಗಿ ಜನರು ಮನರಂಜನಾ ವಾಹಿನಗಳನ್ನೇ ಹೆಚ್ಚಾಗಿ ನೋಡುತ್ತಿದ್ದಾರೆ. ಸೀರಿಯಲ್‌, ಸಿನಿಮಾ ಹಾಗೂ ರಿಯಾಲಿಟಿ ಶೋಗಳಿಗೆ ಜನರು ಕಾಯುತ್ತಿರುತ್ತಾರೆ. ಇಂತಹ ಸಂದರ್ಭದಲ್ಲಿ ಮನರಂಜನಾ ವಾಹಿನಿಗಳು ತಮ್ಮ ಕಾರ್ಯಕ್ರಮ ಪ್ರಸಾರ ಮಾಡುವ ಸಂದರ್ಭದಲ್ಲೇ ಜನರಿಗೆ ಕೊರೊನಾ ಜಾಗೃತಿ ಮೂಡಿಸುವ ಸಣ್ಣ ಪುಟ್ಟ ಕಿರುಚಿತ್ರಗಳನ್ನು, ಇಲ್ಲವೇ ಸೆಲಿಬ್ರಿಟಿಗಳ ಹೇಳಿಕೆಗಳನ್ನು ಪ್ರಸಾರ ಮಾಡಬಹುದು. ಇಲ್ಲಿ ತನಕ ಒಂದೇ ಒಂದು ಮನರಂಜನೆ ಚಾನೆಲ್‌ ಕೂಡ ಈ ಕೆಲಸ ಮಾಡಿಲ್ಲ.

ಬದಲಿಗೆ ಜನರನ್ನು ಕಿತ್ತುಹೋದ ಅರ್ಥ ಹೀನ ಮನೆಹಾಳು ಕತೆಗಳ ಧಾರಾವಾಹಿಗಳ ಮೂಲಕ ಜನರನ್ನು ಹಾಳು ಮಾಡುವುದರ ಜತೆಗೆ ತಮ್ಮ ಟಿಆರ್‌ ಪಿ ಹೆಚ್ಚಿಸಿಕೊಳ್ಳುವುದಕ್ಕಷ್ಟೇ ತಮ್ಮನ್ನು ತಾವು ಮೀಸಲಿರಿಸಿಕೊಂಡಿದ್ದಾರೆ. ಸರ್ಕಾರ ಇವುಗಳಿಗೂ ಕಡಿವಾಣ ಹಾಕಬೇಕಿದೆ ಅಂತ ವೀಕ್ಷಕರೇ ಆಗ್ರಹಿಸಿದ್ದಾರೆ.

Categories
ಸಿನಿ ಸುದ್ದಿ

ಸುಂದರಿ ಸೀರಿಯಲ್‌ ಕಲಾವಿದನಿಗೆ ಪಾಸಿಟಿವ್‌ – ಆದರೂ ಶೂಟಿಂಗ್‌ ನಡೆಯುತ್ತಿದೆ ಎನ್ನುವ ಆರೋಪ! ಇದು ನಿಜಾನಾ?

ಕನ್ನಡದ ಜನಪ್ರಿಯ ಖಾಸಗಿ ವಾಹಿನಿಯೊಂದರಲ್ಲಿ ಪ್ರಸಾರ ವಾಗುವ “ಸುಂದರಿ” ಸೀರಿಯಲ್‌ ಕಲಾವಿದನಿಗೆ ಕೊರೊನಾ ಪಾಸಿಟಿವ್‌ ದೃಡಪಟ್ಟಿದ್ದು, ಆದರೂ ಶನಿವಾರ ಶಕ್ತಿ ರೆಸಾರ್ಟ್‌ ನಲ್ಲಿ ಶೂಟಿಂಗ್‌ ನಡೆಯುತ್ತಿದೆ ಎನ್ನುವ ಶಂಕೆ ವ್ಯಕ್ತವಾಗಿದೆ. ಧಾರಾವಾಹಿಯ ಮೂಲಗಳೇ ಈ ಬಗ್ಗೆ ಮಾಹಿತಿ ರವಾನಿಸಿದ್ದು, ಕಲಾವಿದರ ಬಗ್ಗೆ ಸೀರಿಯಲ್‌ ನಿರ್ಮಾಣ ಸಂಸ್ಥೆ ಹಾಗೂ ಖಾಸಗಿ ಮನರಂಜನಾ ವಾಹಿನಿಗೆ ಕಾಳಜಿಯೇ ಇಲ್ಲ ಎಂದು ದೂರಿದ್ದಾರೆ.

ಸರ್ಕಾರ ಮಾರ್ಗ ಸೂಚಿ ಅನುಸಾರ ಈಗ ಒಂದು ಶೂಟಿಂಗ್‌ ಅಥವಾ ಡಬ್ಬಿಂಗ್‌ ಕಾರ್ಯಕ್ರಮಗಳಲ್ಲಿ ಹೆಚ್ಚಾಗಿ ಜನರು ಸೇರುವಂತಿಲ್ಲ. ಕೊರೊನಾ ತೀವ್ರ ಸ್ವರೂಪದಲ್ಲಿ ಹರಡುತ್ತಿದ್ದು, ಜನ ಸೇರುವುದರಿಂದ ಹೆಚ್ಚು ಅಪಾಯ ಇದೆ. ಹಾಗಾಗಿ ಎಲ್ಲಿಯೂ ಗುಂಪು ಸೇರುವುದರ ಮೇಲೆ ಸರ್ಕಾರ ನಿರ್ಬಂಧ ಹೇರಿದೆ. ಅದೇ ಕಾರಣಕ್ಕೆ ಈಗ ಸಿನಿಮಾ ಹಾಗೂ ಸೀರಿಯಲ್‌ ಔಡ್‌ ಡೋರ್‌ ಚಿತ್ರೀಕರಣ ಗಳು ಬಂದ್‌ ಆಗಿವೆ. ಆದರೂ ಕನ್ನಡದ ಮನರಂಜನಾ ವಾಹಿನಿಗಳು ಮಾತ್ರ ಕದ್ದು ಮುಚ್ಚಿ ಚಿತ್ರೀಕರಣ ಮಾಡುತ್ತಿದ್ದು, ಈಗ ಅಲ್ಲಿ ಆಪಾಯಗಳು ಘಟಿಸುತ್ತಿಗೆ ಎನ್ನುವುದಕ್ಕೆ ಕೆಲವು ರಿಯಾಲಿಟಿ ಶೋಗಳು ಸಾಕ್ಷಿ ಆಗಿದ್ದವು. ಈಗ ಅಂತಹದೇ ಘಟನೆ ಸೀರಿಯಲ್‌ ಯೂನಿಟ್‌ ನಲ್ಲೂ ಅಗಿದೆ ಎನ್ನುವುದಕ್ಕೆ ಸುಂದರಿ ಸೀರಿಯಲ್‌ ಪ್ರಕರಣ ಸಾಕ್ಷಿ ಆಗಿದೆ. ಚಾನೆಲ್‌ ನ ಪ್ರೋಗ್ರಾಮ್‌ ಹೆಡ್‌ ಶಿಲ್ಪಾ ಎನ್ನುವವರೇ ಮುಂದೆ ನಿಂತು ಈ ಚಿತ್ರೀಕರಣ ಮಾಡಿಸುತ್ತಿದ್ದಾರಂತೆ. ಕಲಾವಿದರು ಭಯ ಪಟ್ಟರೂ ಕೂಡ , ಚಿತ್ರೀಕರಣ ಅನಿವಾರ್ಯ, ಆಗಲೇ ಬೇಕು, ನಿಮಗೆ ಸೂಕ್ತ ರಕ್ಷಣೆ ಕೊಡುತ್ತೇವೆ ಎಂದು ಹೇಳಿ ಕರೆಸಿಕೊಂಡು ಚಿತ್ರೀಕರಣ ಮಾಡುವಾಗ ಇದೆಲ್ಲ ಬೆಳಕಿಗೆ ಬಂದಿದೆ. ಈಗ ಸೀರಿಯಲ್‌ ನಲ್ಲಿರುವ ಎಲ್ಲರಗೂ ಜೀವ ಭಯ ಶುರುವಾಗಿದೆ ಎನ್ನುವ ಮಾತನ್ನು ಧಾರಾವಾಹಿ ಕಡೆಯವರೇ ಬಹಿರಂಗ ಪಡಿಸಿದ್ದಾರೆ ಎನ್ನುವ ಮಾತುಗಳನ್ನು ಮೂಲಗಳು ತಿಳಿಸಿವೆ. ಆದರೆ, ಇದು ನಿಜಾನಾ ಅಥವಾ ಇಲ್ಲವೋ ಎಂಬುದನ್ನು ಸಂಬಂಧಿಸಿದವರು ಸ್ಪಷ್ಟಪಡಿಸಬೇಕಿದೆ.

Categories
ಸಿನಿ ಸುದ್ದಿ

ಬೆಟ್ಟದ ಹೂವು ಖ್ಯಾತಿಯ ನಟ ಶಂಖನಾದ ಅರವಿಂದ್ ನಿಧನ‌; ಜೀವ ಪಡೆದ ಕೊರೊನಾ

“ಬೆಟ್ಟದ ಹೂವು” ಖ್ಯಾತಿಯ ನಟ “ಶಂಖನಾದ” ಅರವಿಂದ್‌ ನಿಧನರಾಗಿದ್ದಾರೆ. ಕೊರೊನಾ ಸೋಂಕು ತಗುಲಿ, ಕಳೆದ ಹತ್ತು ದಿನಗಳಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಇಂದು‌ ( ಮೇ.7) ಉಸಿರಾಟದ ತೊಂದರೆ ಹೆಚ್ಚಾದ ಕಾರಣ ಕೊನೆಯುಸಿರೆಳೆದರೆಂದು ಅವರ ಕುಟುಂಬದ ಮೂಲಗಳು ತಿಳಿಸಿವೆ‌.

ಅವರಿಗೆ 70 ವರ್ಷ ವಯಸ್ಸು ಆಗಿತ್ತು. ಇಬ್ಬರು ಹೆಣ್ಣು ಮಕ್ಕಳು ಹಾಗೂ ಒಬ್ಬ ಮಗನನ್ನು ಆಗಲಿದ್ದಾರೆ. ಸುಮಾರು ಮೂರು ತಿಂಗಳ ಹಿಂದೆ ಇವರ ಮಡದಿ ರಮಾ ಅರವಿಂದ್ ಅವರೂ ಅನಾರೋಗ್ಯದಿಂದ ವಿಧಿವಶರಾಗಿದ್ದರು. ರಮಾ ಕನ್ನಡ ಚಿತ್ರರಂಗದಲ್ಲಿ ಹಿನ್ನಲೆ ಗಾಯಕಿಯಾಗಿ ಗುರುತಿಸಿಕೊಂಡಿದ್ದರು.

ಸುಮಾರು 250ಕ್ಕೂ ಹೆಚ್ಚು ಚಲನಚಿತ್ರ ಮತ್ತು ಧಾರಾವಾಹಿಗಳಲ್ಲಿ “ಶಂಖನಾದ” ಅರವಿಂದ್ ನಟಿಸಿದ್ದರು. 70-80ರ ದಶಕದಲ್ಲಿ ಅರವಿಂದ್ ಬಹು ಬೇಡಿಕೆಯ ಕಲಾವಿದರಾಗಿ ಗುರುತಿಸಿಕೊಂಡಿದ್ದರು ಅವರು, ಕಾಶಿನಾಥ್ ಸಿನಿಮಾಗಳ ಮೂಲಕ ಪ್ರೇಕ್ಷಕರಿಗೆ ಮತ್ತಷ್ಟು ಚಿರಪರಿಚಿತರಾಗಿದ್ದರು. ಇತ್ತೀಚಿಗೆ ಕನ್ನಡದ ಕೆಲವೊಂದು ಧಾರಾವಾಹಿಗಳಲ್ಲಿಯೂ ಅವರು ಅಭಿನಯಿಸಿದ್ದರು. 

“ಶಂಖನಾದ” ಅರವಿಂದ್ ಅವರ ಬಗ್ಗೆ ಬಹುತೇಕ ಗೊತ್ತಿರುವುದು ಒಬ್ಬ ಹಾಸ್ಯ ನಟನಾಗಿ. ಆದರೆ ಅವರು ಚಿತ್ರರಂಗಕ್ಕೆ ಬಂದಿದ್ದು ಒಬ್ಬ ಹೀರೊ ಆಗಿ. ಅದಕ್ಕೆ ಸಾಕ್ಷಿಯೇ “ಶಂಖನಾದ” ಚಿತ್ರ. ಮೊದಲ ಬಾರಿಗೆ ಅರವಿ‌ಂದ್ ಅವರು, ಹೀರೋ ಆಗಿ ಅಭಿನಯಿಸಿದ ಚಿತ್ರವದು.
“ಶಂಖನಾದ” ಚಿತ್ರವನ್ನು ಸಂಪಿಗೆ ಹಳ್ಳಿಯಲ್ಲಿ ಚಿತ್ರೀಕರಣ ಮಾಡಲಾಗಿತ್ತು. ಆ ಚಿತ್ರದಲ್ಲಿ ಅವರೇ ಹೈಲೈಟ್. ಆ ಕಾಲದಲ್ಲಿ ಅದು ಜನಪ್ರಿಯವಾದ ಚಿತ್ರ ವದು. ಆರಂಭದಲ್ಲಿ ಈ ಚಿತ್ರಕ್ಕೆ ಅಷ್ಟಾಗಿ ಜನ ಮನ್ನಣೆ ಸಿಗಲಿಲ್ಲ. ಆನಂತರ ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಸಿಕ್ಕಿತು.‌ಅಲ್ಲಿ‌ಂದ ಅವರ ಹೆಸರಿಗೆ “ಶಂಖನಾದ” ಎಂಬ ಹೆಸರೂ ಸೇರಿಕೊಂಡಿತು.

error: Content is protected !!