Categories
ಸಿನಿ ಸುದ್ದಿ

ಕೆರೆಬೇಟೆ ಟ್ರೇಲರ್ ರಿಲೀಸ್: ಮಲೆನಾಡ ಪದ್ಧತಿ ಸಿನಿಮಾಗೆ ಪ್ರೇಕ್ಷಕರ ಕಾತರ

‘ಕೆರೆಬೇಟೆ’ ಫಸ್ಟ್ ಲುಕ್ ಮತ್ತು ಟೀಸರ್ ಮೂಲಕವೇ ಸ್ಯಾಂಡಲ್‌ವುಡ್‌ನಲ್ಲಿ ಭಾರಿ ಕುತೂಹಲ ಮೂಡಿಸಿರುವ ಸಿನಿಮಾ. ಇದೀಗ ಸಿನಿಮಾತಂಡ ಟ್ರೇಲರ್ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ಭಾರಿ ನಿರೀಕ್ಷೆಯ ಟ್ರೇಲರ್ ರಿಲೀಸ್ ಆಗಿದೆ. ‘ಕೆರೆಬೇಟೆ’ ಮಲೆನಾಡು ಭಾಗದ ಮೀನು ಬೇಟೆಯಾಗುವ ಒಂದು ಪದ್ಧತಿ. ಮಲೆನಾಡಿನ ಈ ವಿಭಿನ್ನ ಸಂಸ್ಕೃತಿಯನ್ನು ಮೊದಲ ಬಾರಿಗೆ ತೆರೆಮೇಲೆ ತರುತ್ತಿದ್ದಾರೆ ನಿರ್ದೇಶಕ ರಾಜ್‌ಗುರು. ನಾಯಕನಾಗಿ ಗೌರಿಶಂಕರ್ ಎಸ್‌ಆರ್‌ಜಿ ಕಾಣಿಸಿಕೊಂಡಿದ್ದಾರೆ. ವಿಭಿನ್ನವಾದ ಒಂದೊಳ್ಳೆ ಹಳ್ಳಿ ಸೊಗಡಿನ ಸಿನಿಮಾ ಮೂಲಕ ಗೌರಿಶಂಕರ್ ತೆರೆಮೇಲೆ ಮಿಂಚಲು ಸಜ್ಜಾಗಿದ್ದಾರೆ.

ಸದ್ಯ ರಿಲೀಸ್ ಆಗಿರುವ ಟ್ರೇಲರ್ ಗಮನ ಸೆಳೆಯುತ್ತಿದೆ. ಅಂಟಿಗೆ ಪಿಂಟಿಗೆ ಶೈಲಿಯಲ್ಲೇ ಟ್ರೇಲರ್ ರಿಲೀಸ್ ಮಾಡಿದ್ದು ವಿಶೇಷವಾಗಿತ್ತು. ರಿಲೀಸ್ ಗೂ ಮೊದಲು ಬೆಂಗಳೂರಿನ ಮನೆ ಮನೆಗೆ ಹೋಗಿ ತಮ್ಮ ಸಿನಿಮಾ ರಿಲೀಸ್ ಆಗುತ್ತಿದೆ ಹಾರೈಸಿ ಎಂದು ದೀಪ ಹಿಡಿದು ಕೇಳಿಕೊಂಡಿದ್ದಾರೆ. ಬಳಿಕ ನಾಯಕ ಗೌರಿ ಶಂಕರ್ ಅವರ ಪುತ್ರಿ ಪುಟ್ಟ ಕಂದ ಈಶ್ವರಿ ಮನ ಟ್ರೈಲರ್ ಮಾಡಿದಳು. ಟ್ರೇಲರ್‌ನಲ್ಲಿ ಮಲೆನಾಡಿ ಕೆರೆಬೇಟೆ ಜೊತೆಗೆ ‘ಅಂಟಿಕೆ ಪೆಂಟಿಗೆ..’ ಸಂಸ್ಕೃತಿ ಕೂಡ ಹೈಲೆಟ್ ಆಗಿದೆ.

ಅಂಟಿಕೆ ಪಿಂಟಿಗೆಯಿಂದನೆ ಟ್ರೈಲರ್ ಪ್ರಾರಂಭವಾಗಿದ್ದು ಅದ್ಭುತವಾಗಿ ಮೂಡಿ ಬಂದಿದೆ. ಮಲೆನಾಡಿನ ಹಳ್ಳಿಯಲ್ಲೇ ನಡೆಯುವ ಸಿನಿಮಾ ಇದಾಗಿದೆ. ಕೆರೆಬೇಟೆ ಜೊತೆಗೆ ಹಳ್ಳಿ ಜನರ ಕಿತ್ತಾಟ, ಹೊಡೆದಾಟ ಸೇರಿದಂತೆ ಈ ಪುಟ್ಟ ಟ್ರೈಲರ್‌ನಲ್ಲೇ ಮಲೆನಾಡಿನ ಸಂಪೂರ್ಣ ಚಿತ್ರಣ ನೋಡಬಹುದು. ಇನ್ನು ಸಿನಿಮಾ ಹೇಗಿರಲಿದೆ ಎನ್ನುವ ಕುತೂಹಲ ಮತ್ತು ನಿರೀಕ್ಷೆ ದುಪ್ಪಟ್ಟು ಮಾಡಿದೆ.

ನಾಯಕ ಗೌರಿ ಶಂಕರ್ ಅದ್ಭುತವಾಗಿ ನಟಿಸಿದ್ದಾರೆ. ಟ್ರೈಲರ್‌ನಲ್ಲಿ ತನ್ನ ನಟನೆಯ ಝಲಕ್ ತೋರಿಸಿದ್ದಾರೆ. ನಾಯಕಿ ಬಿಂಧು ಶಿವರಾಮ್ ಕೂಡ ತನ್ನ ಪಾತ್ರಕ್ಕೆ ಜೀವತುಂಬಿದ್ದಾರೆ. ಬಿಂಧು ಅವರಿಗೆ ಇದು ಮೊದಲ ಸಿನಿಮಾ. ಹಾಗಾಗಿ ತನ್ನ ಚೊಚ್ಚಲ ಸಿನಿಮಾದ ಬಗ್ಗೆ ಸಿಕ್ಕಾಪಟ್ಟೆ ಎಕ್ಸಾಯಿಟ್ ಆಗಿದ್ದಾರೆ. ಇನ್ನೂ ಮಲೆನಾಡಿನ ಸುಂದರ ಸಂಸ್ಕೃತಿಯನ್ನು ಅಷ್ಟೇ ಸುಂದರವಾಗಿ ಕಟ್ಟಿಕೊಟ್ಟಿದ್ದಾರೆ ನಿರ್ದೇಶಕ ರಾಜ್‌ಗುರು.

ಅಂದಹಾಗೆ ನಿರ್ದೇಶಕ ರಾಜ್‌ಗುರು ಅವರಿಗೂ ಇದು ಚೊಚ್ಚಲ ಸಿನಿಮಾ. ಹಾಗಂತ ಅವರಿಗೆ ಸಿನಿಮಾರಂಗ ಹೊಸದೇನಲ್ಲ. ಈ ಮೊದಲು ನಿರ್ದೇಶಕ ಪವನ್ ಒಡೆಯರ್ ಜೊತೆ ಗೂಗ್ಲಿ, ರಣವಿಕ್ರಮ, ನಟಸಾರ್ವಭೌಮ, ಜೆಸ್ಸಿ, ರೆಮೋ ಸೇರಿದಂತೆ ಇನ್ನು ಅನೇಕ ಸಿನಿಮಾಗಳಲ್ಲಿ ಸಹ ನಿರ್ದೇಶಕರಾಗಿ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. ಇದೀಗ ಕೆರೆಬೇಟೆ ಮೂಲಕ ಮೊದಲ ಬಾರಿಗೆ ಸ್ವತಂತ್ರ ನಿರ್ದೇಶಕರಾಗಿ ಹೊರಹೊಮ್ಮುತ್ತಿದ್ದಾರೆ .

ಮಲೆನಾಡಿನವರೇ ಆಗಿರುವುದರಿಂದ ಕೆರೆಬೇಟೆ ನೋಡುತ್ತಾ, ಆಡುತ್ತಾ ಬೆಳೆದವರು. ಹಾಗಾಗಿ ಮಲೆನಾಡಿನ ಜೀವನ ಶೈಲಿಯನ್ನು ಅಷ್ಟೆ ನೈಜ್ಯವಾಗಿ ಕಟ್ಟಿಕೊಡುವ ಪ್ರಯತ್ನ ಈ ಸಿನಿಮಾದಲ್ಲಿ ಮಾಡಲಾಗಿದೆ. ಬ್ಯಾಗ್‌ಗ್ರೌಂಡ್ ಮ್ಯೂಸಿಕ್ ಕೂಡ ಸುಂದರವಾಗಿ ಮೂಡಿಬಂದಿದೆ.

ಇನ್ನೂ ಉಳಿದಂತೆ ಸಿನಿಮಾದಲ್ಲಿ ಗೋಪಾಲ್ ದೇಶಪಾಂಡೆ, ಸಂಪತ್ ಕುಮಾರ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಚಿತ್ರಕ್ಕೆ ಗಗನ್ ಬದೇರಿಯಾ ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಸಿನಿಮಾಗೆ ನಾಯಕ ಗೌರಿಶಕಂಕರ್ ಅವರ ಜನಮನ ಸಿನಿಮಾಸ್ ಬ್ಯಾನರ್‌ನಲ್ಲಿ ಅವರ ಸಹೋದರ ಜೈಶಂಕರ್ ಪಟೇಲ್ ಬಂಡವಾಳ ಹೂಡಿದ್ದಾರೆ. ಸದ್ಯ ಟ್ರೈಲರ್ ಮೂಲಕ ಅಭಿಮಾನಿಗಳ ಮುಂದೆ ಬಂದಿರುವ ಕೆರೆಬೇಟಿ ಮುಂದಿನ ತಿಂಗಳು ಮಾರ್ಚ್ 15ಕ್ಕೆ ಅದ್ದೂರಿಯಾಗಿ ತೆರೆಗೆ ಬರುತ್ತಿದೆ.

Categories
ಸಿನಿ ಸುದ್ದಿ

ರಿಲೀಸ್ ಮೊದಲೇ ’ಫಾರ್ ರಿಜಿಸ್ಟ್ರೇಷನ್’ಗೆ ಡಿಮ್ಯಾಂಡ್: ತೆಲುಗಿಗೆ ಭಾರೀ ಮೊತ್ತಕ್ಕೆ ಡಬ್ಬಿಂಗ್ ರೈಟ್ಸ್ ಸೇಲ್

ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆ ಎದ್ದಿದೆ. ಪ್ರತಿಭಾವಂತ ಹೊಸಬರು ಮಾಡುತ್ತಿರುವ ಹೊಸ ಹೊಸ ಪ್ರಯೋಗಗಳಿಗೆ ಕನ್ನಡ ಪ್ರೇಕ್ಷಕರು ಮಾತ್ರ ಅಲ್ಲ, ಪಕ್ಕದ ರಾಜ್ಯದವರೂ ಫಿದಾ ಆಗುತ್ತಿದ್ದಾರೆ. ಬಾಲಿವುಡ್ ಮಂದಿ ಕೂಡ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತಾಗಿದೆ. ನಾವು ಇಷ್ಟೆಲ್ಲಾ ಪೀಠಿಕೆ ಹಾಕುತ್ತಿರುವುದಕ್ಕೆ ಕಾರಣ ಫಾರ್ ರಿಜಿಸ್ಟ್ರೇಷನ್ ಸಿನಿಮಾ.

ಯುವ ಪ್ರತಿಭೆ ನವೀನ್ ದ್ವಾರಕಾನಾಥ್ ನಿರ್ದೇಶನದ, ನವೀನ್ ರಾವ್ ನಿರ್ಮಾಣದ, ಪೃಥ್ವಿ ಅಂಬಾರ್ ಹಾಗೂ ಮಿಲನಾ ನಾಗರಾಜ್ ಅಭಿನಯದ, ಫಾರ್ ರಿಜಿಸ್ಟ್ರೇಷನ್ ಚಿತ್ರವನ್ನು ತೆಲುಗಿನ ಖ್ಯಾತ ನಿರ್ಮಾಪಕರೊಬ್ಬರು ಭಾರೀ ಮೊತ್ತಕ್ಕೆ ಡಬ್ಬಿಂಗ್ ರೈಟ್ಸ್ ಪಡೆದುಕೊಂಡಿದ್ದಾರೆ.

ಶಿವಣ್ಣ ನಟನೆಯ 125ನೇ ಸಿನಿಮಾದ ವೇದವನ್ನು ಅಖಂಡ ತೆಲುಗು ಪ್ರೇಕ್ಷಕರ ಎದುರು ಪ್ರಸ್ತುತಪಡಿಸಿದ್ದ ಎಂವಿಆರ್ ಕೃಷ್ಣ ಫಾರ್ ರಿಜಿಸ್ಟ್ರೇಷನ್ ಚಿತ್ರದ ಡಬ್ಬಿಂಗ್ ಹಕ್ಕು ಖರೀದಿ ಮಾಡಿದ್ದಾರೆ. ಸಿನಿಮಾ ಬಿಡುಗಡೆಗೂ ಮುನ್ನವೇ ಡಬ್ಬಿಂಗ್ ರೈಟ್ಸ್ ಸೇಲ್ ಆಗಿರುವುದು ಚಿತ್ರತಂಡ ಖುಷಿಯನ್ನು ದುಪ್ಪಟ್ಟು ಮಾಡಿದೆ.

ಟ್ರೇಲರ್ ಹಾಗೂ ಹಾಡಿನ ಮೂಲಕ ಆಮಂತ್ರಣ ಕೊಟ್ಟಿರುವ ಫಾರ್ ರಿಜಿಸ್ಟ್ರೇಷನ್ ಸಿನಿಮಾ ನಾಳೆ ತೆರೆಗೆ ಬರ್ತಿದೆ. ಸಂಬಂಧ ಮಹತ್ವ ಸಾರುವ ಈ ಚಿತ್ರದಲ್ಲಿ ರವಿಶಂಕರ್, ತಬಲಾ ನಾಣಿ, ಸುಧಾ ಬೆಳವಾಡಿ, ಬಾಬು ಹಿರಣಯ್ಯ, ಸ್ವಾತಿ, ರಮೇಶ್ ಭಟ್, ಉಮೇಶ್ ಸೇರಿದಂತೆ ಹಲವರು ತಾರಾ ಬಳಗದಲ್ಲಿದ್ದಾರೆ.

ಚಿತ್ರಕಥೆ, ನಿರ್ದೇಶನ ನವೀನ್ ದ್ವಾರಕನಾಥ್ ನಿರ್ವಹಿಸಿದ್ದು, ಸಂಗೀತ ಸಂಯೋಜನೆ ಆರ್.ಕೆ ಹರೀಶ್, ಅಭಿಲಾಷ್ ಕಲಾತಿ, ಅಭಿಷೇಕ್ ಜಿ.ಕಾಸರಗೋಡು ಛಾಯಾಗ್ರಹಣ, ಮನು ಶೇಡ್ಗರ್ ಸಂಕಲನ ಚಿತ್ರಕ್ಕಿದೆ. ನಿಶ್ಚಲ್ ಫಿಲಂಸ್ ಬ್ಯಾನರ್ನಲ್ಲಿ ನವೀನ್ ರಾವ್ ಬಂಡವಾಳ ಹೂಡಿದ್ದಾರೆ. ಬಹಳ ದಿನಗಳ ನಂತರ ಮತ್ತೆ ವಿತರಣೆ ಅಖಾಡಕ್ಕೆ ಇಳಿದಿರುವ ದೀಪಕ್ ಗಂಗಾಧರ್ ಫಿಲಂಸ್ ಫಾರ್ ರಿಜಿಸ್ಟ್ರೇಷನ್ ಸಿನಿಮಾವನ್ನು ಫೆಬ್ರವರಿ 23ರಂದು ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದೆ.

Categories
ಸಿನಿ ಸುದ್ದಿ

4 ಎನ್ 6 ಫಸ್ಟ್ ಗ್ಲಿಂಪ್ಸ್ ಟೀಸರ್ ಬಿಡುಗಡೆ: ಇದು ಪ್ರತಿಭಾವಂತರ ಚಿತ್ರ

ಪರ್ಪಲ್ ಪ್ಯಾಚ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಸಾಯಿಪ್ರೀತಿ ಎನ್. ಅವರು ನಿರ್ಮಿಸಿರುವ, ಮರ್ಡರ್‌ ಮಿಸ್ಟ್ರಿ ಜೊತೆಗೆ ಇನ್ ವೆಸ್ಟಿಗೇಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ 4 ಎನ್ 6. ಬಿಡುಗಡೆಗೆ ಸಿದ್ದವಾಗಿರುವ ಈ ಚಿತ್ರದ ಫಸ್ಟ್ ಗ್ಲಿಂಪ್ಸ್ ಟೀಸರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಲವ್ ಮಾಕ್ಟೇಲ್ ಹಾಗೂ ಲವ್ 360 ಖ್ಯಾತಿಯ ರಚನಾ ಇಂದರ್ ಭವಾನಿಪ್ರಕಾಶ್ ಹಾಗೂ ನವೀನ್ ಕುಮಾರ್, ಆದ್ಯಶೇಖರ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ “4 ಎನ್ 6” ಚಿತ್ರಕ್ಕೆ ದರ್ಶನ್ ಶ್ರೀನಿವಾಸ್ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಕೊಲೆಯೊಂದರ ತನಿಖೆಯ ಸುತ್ತ ನಡೆಯುವ ಕಥೆ ಈ ಚಿತ್ರದಲ್ಲಿದ್ದು, ರಚನಾ ಇಂದರ್ ಇದೇ ಮೊದಲ ಬಾರಿಗೆ ಫಾರೆನ್ಸಿಕ್ ಡಿಟೆಕ್ಟಿವ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ವೇದಿಕೆಯಲ್ಲಿ ಮಾತನಾಡಿದ ನಿರ್ದೇಶಕ ದರ್ಶನ್ ಈ ಹಿಂದೆ ೨ ಕಿರುಚಿತ್ರಗಳನ್ನು ನಿರ್ದೇಶಿಸಿದ್ದೆ. ನನ್ನ ಪ್ರಥಮ ನಿರ್ದೇಶನದ ಚಿತ್ರ ಇದಾಗಿದ್ದು ಕೊಲೆ ಪ್ರಕರಣ ಪತ್ತೆ ಹಚ್ಚುವಲ್ಲಿ ಫೋರೆನ್ಸಿಕ್ ರಿಪೋರ್ಟ್ ಇಂಪಾರ್ಟೆಂಟ್ ಆಗಿರುತ್ತದೆ. ೪ ಪ್ರಮುಖ ಪಾತ್ರಗಳ ಸುತ್ತ ಕಥೆ ನಡೆಯುತ್ತದೆ. ಕಥೆ ಮಾಡುವಾಗ ಫೋರೆನ್ಸಿಕ್ ತಜ್ಞರ ಸಲಹೆ ತೆಗೆದುಕೊಂಡೆ. ಚಿತ್ರಕ್ಕೆ ಬೆಂಗಳೂರು ಸುತ್ತಮುತ್ತ 30 ದಿನ ಚಿತ್ರೀಕರಿಸಲಾಗಿದ್ದು ಈಗಾಗಲೇ ಸೆನ್ಸಾರ್ ನಿಂದ ಯು/ಎ ಸರ್ಟಿಫಿಕೇಟ್ ಸಿಕ್ಕಿದೆ ಎಂದು ಹೇಳಿದರು.

ನಂತರ ನಿರ್ಮಾಪಕಿ ಸಾಯಿಪ್ರೀತಿ ಮಾತನಾಡಿ ತುಂಬಾ ಟ್ಯಾಲೆಂಟ್ ಇರೋ ತಂಡವಿದು. ಸಿನಿಮಾ ತುಂಬಾ ಚೆನ್ನಾಗಿ ಬಂದಿದೆ. ಏಪ್ರಿಲ್ ಗೆ ರಿಲೀಸ್ ಮಾಡೋ ಪ್ಲಾನಿದೆ ಎಂದರು. ಕಾರ್ಯಕಾರಿ ನಿರ್ಮಾಪಕರಾದ ಕರಣ್ ಸಿಂಗ್ ಮಾತನಾಡಿ ದರ್ಶನ್ ಶಾರ್ಟ್ ಫಿಲಂ ಮಾಡುವಾಗ ನನಗೆ ಪರಿಚಯವಾದರು. ಅವರಲ್ಲಿ ಓಳ್ಳೊಳ್ಳೆ ಕಥೆಗಳಿದ್ದವು. ಕೋವಿಡ್ ನಂತರ ಜನ ಸಿನಿಮಾನೋಡುವ ದೃಷ್ಟಿಕೋನ ಬದಲಾಗಿದೆ. ಕ್ರೈಂ‌ ಕಥೆಗಳನ್ನು ಹೆಚ್ಚು ಇಷ್ಟಪಡುತ್ತಿದ್ದಾರೆ ಅಂತ ಈ ಕಾನ್ಸೆಪ್ಟ್ ಕೈಗೆತ್ತಿಕೊಂಡೆವು ಎಂದರು.

ನಾಯಕಿ ರಚನಾ ಇಂದರ್ ಮಾತನಾಡಿ ಮೊದಲಬಾರಿಗೆ ಇಂಥ ಪಾತ್ರ ಮಾಡಿದ್ದೇನೆ. ಚಿತ್ರದಲ್ಲಿ ನನ್ನ ಪಾತ್ರಕ್ಕೆ ಹೆಚ್ಚು ಮಾತಿಲ್ಲ. ಮುಖದಲ್ಲೇ ಎಕ್ಸ್ ಪ್ರೆಶನ್ಸ್ ತೋರಿಸಬೇಕಿತ್ತು ಎಂದರು.

ಭವಾನಿ ಪ್ರಕಾಶ್ ಮಾತನಾಡಿ ಬೇರೊಬ್ಬರು ಮಾಡಬೇಕಿದ್ದ ಪಾತ್ರ ನನಗೆ ಬಂತು. ಇದು ಬರೀ ಮರ್ಡರ್ ಇನ್ವೆಸ್ಟಿಗೇಶನ್ ಸುತ್ತ ನಡೆವ ಕಥೆಯಲ್ಲ, ಸೈಕಲಾಜಿಕಲ್ ಚಿತ್ರವೂ ಹೌದು, ಶೂಟಿಂಗ್ ಅನುಭವ ತುಂಬಾ ಚೆನ್ನಾಗಿತ್ತು. ಸ್ಲಂನಲ್ಲೂ ಓಡಾಡಿದ್ದೇವೆ ಎಂದರು.

ನಾಯಕ ನವೀನ್ ಕುಮಾರ್ ಮಾತನಾಡಿ ನಾನು ಚಿತ್ರರಂಗಕ್ಕೆ ಹೊಸಬ. ಈ ಸಿನಿಮಾದಿಂದ ಸಾಕಷ್ಟು ಕಲಿತಿದ್ದೇನೆ.
ಎಲ್ಲಾ ಪಾತ್ರಗಳು ತುಂಬಾ ಪ್ರಾಮಿಸಿಂಗ್ ಆಗಿವೆ ಎಂದರು.
ಇನ್ನು‌ ಈ ಚಿತ್ರಕ್ಕೆ ನಿರ್ದೇಶಕರೇ ಎಡಿಟರ್ ಆಗಿದ್ದು ಮುತ್ತುರಾಜ್ ಸಾಥ್ ನೀಡಿದ್ದಾರೆ. ಚರಣ್ ತೇಜ್ ಅವರ ಛಾಯಾಗ್ರಹಣ, ಸತ್ಯಕಹಿ ಅವರ ಸಂಭಾಷಣೆ ಹಾಗೂ ಸಾಯಿ ಸೋಮೇಶ್ ಅವರ ಸಂಗೀತ ನಿರ್ದೇಶನವಿದೆ. ಅರ್ಜುನ್, ಆಶಿತಾ ಅಲ್ವಾ, ಮುಕ್ತಿ ಅಲ್ವಾ, ಆರ್ ನಿಕ್ಸಾನ್, ಪ್ರಶಾಂತ್, ಸಂಜಯ್ ನಾಯಕ್, ಸೌರವ್, ಸತ್ಯ ಕಹಿ, ಬೇಬಿ ವಂಶಿಕಾ, ಬೇಬಿ ರೇಯನ್ಸ್ ಇತರರು ಚಿತ್ರದಲ್ಲಿ‌ ಅಭಿನಯಿಸಿದ್ದಾರೆ.

Categories
ಸಿನಿ ಸುದ್ದಿ

ಕಾಂಗರೂ ಇದು ಆದಿತ್ಯ ಚಿತ್ರ: ಪೋಸ್ಟರ್ ರಿಲೀಸ್ ಮಾಡಿದ ಶಿವರಾಜ ಕುಮಾರ್


.
ಆದಿತ್ಯ ನಾಯಕರಾಗಿ ನಟಿಸಿರುವ ಹಾಗೂ ಕಿಶೋರ್ ಮೇಗಳಮನೆ ನಿರ್ದೇಶನದ “ಕಾಂಗರೂ” ಚಿತ್ರದ ಮೋಷನ್ ಪೋಸ್ಟರ್ A2 music ಮೂಲಕ ಬಿಡುಗಡೆಯಾಗಿದೆ. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ. ಆದಿತ್ಯ ಅವರ ಅಭಿಮಾನಿಗಳು ಮೋಷನ್ ಪೋಸ್ಟರ್ ಗೆ ಫಿದಾ ಆಗಿದ್ದಾರೆ. ಚಿತ್ರದ ಬಿಡುಗಡೆಗೆ ಕಾತುರದಿಂದ ಕಾಯುತ್ತಿದ್ದಾರೆ.

” ಮೋಷನ್ ಪೋಸ್ಟರ್ ತುಂಬಾ ಚೆನ್ನಾಗಿದೆ. ನೋಡಿದಾಗ ಸಸ್ಪೆನ್ಸ್ ಥ್ರಿಲ್ಲರ್ ಕಥೆ ಎಂದಿನಿಸುತ್ತದೆ. ಆದಿತ್ಯ ಅವರಿಗೆ ಹಾಗೂ ಇಡೀ ಚಿತ್ರತಂಡಕ್ಕೆ ಒಳ್ಳೆಯದಾಗಲಿ” ಎಂದು ಶಿವಣ್ಣ ಹಾರೈಸಿದ್ದಾರೆ.

ಕನ್ನಡ, ತೆಲುಗು, ತಮಿಳು ಹಾಗೂ ಮಲೆಯಾಳಂ ಭಾಷೆಗಳಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ನಿರ್ಮಾಣವಾಗುತ್ತಿದೆ.

ಆದಿತ್ಯ ಅವರು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ನಾಯಕಿಯಾಗಿ ರಂಜನಿ ರಾಘವನ್ ಅಭಿನಯಿಸಿದ್ದು, ಸೈಕಿಯಾಟ್ರಿಸ್ಟ್ ಡಾಕ್ಟರ್ ಪಾತ್ರ ನಿರ್ವಹಿಸಿದ್ದಾರೆ. ಶಿವಮಣಿ, ಕರಿಸುಬ್ಬು, ನಾಗೇಂದ್ರ ಅರಸ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಆರೋಹ ಪ್ರೊಡಕ್ಷನ್ಸ್ ಲಾಂಛನದಲ್ಲಿ ಚನ್ನಕೇಶವ ಬಿ.ಸಿ, ಕುಣಿಗಲ್, ನರಸಿಂಹಮೂರ್ತಿ ಚಕ್ರಭಾವಿ, ರಮೇಶ್ ಬಂಡೆ, ಸ್ವಾಮಿ ಚಕ್ರಭಾವಿ, ರವಿ ಕೀಲರ ಮಂಡ್ಯ ಹಾಗೂ ಕೆ ಜಿ ಆರ್ ಗೌಡ ಈ ಚಿತ್ರವನ್ನು ನಿರ್ಮಾಣ‌ ಮಾಡುತ್ತಿದ್ದಾರೆ.

ನಿರ್ದೇಶಕ ಕಿಶೋರ್ ಮೇಗಳಮನೆ ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಬರೆದಿದ್ದಾರೆ, ಸಾಧುಕೋಕಿಲ ಸಂಗೀತ ನೀಡಿದ್ದಾರೆ. ಉದಯ್ ಲೀಲ ಛಾಯಾಗ್ರಹಣ ಹಾಗೂ ಅರ್ಜುನ್ ಕಿಟ್ಟು ಸಂಕಲನ ಈ ಚಿತ್ರಕ್ಕಿದೆ.

Categories
ಸಿನಿ ಸುದ್ದಿ

ಮಿಸ್ಟರ್ ನಟ್ವರ್ ಲಾಲ್: ಫೆಬ್ರವರಿ 23ಕ್ಕೆ ಬಿಡುಗಡೆ; ಇದು ತಾಜ್ ಮಹಲ್ ಮಾರಿದವನ ಕಥೆ!

ತನುಷ್ ಸಿನಿಮಾಸ್ ಲಾಂಛನದಲ್ಲಿ ತನುಷ್ ಶಿವಣ್ಣ ನಿರ್ಮಿಸಿರುವ, ವಿ.ಲವ ನಿರ್ದೇಶನದ ಹಾಗೂ ತನುಷ್ ಶಿವಣ್ಣ – ಸೋನಾಲ್ ಮೊಂತೆರೊ ಜೋಡಿಯ “Mr ನಟ್ವರ್ ಲಾಲ್” ಚಿತ್ರ ಫೆಬ್ರವರಿ 23 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈಗಾಗಲೇ ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಚಿತ್ರ ಜನರ ಮನ ಗೆದ್ದಿದೆ.

ವಿಲಿಯಂ ಡೇವಿಡ್ ಛಾಯಾಗ್ರಹಣ, ಧರ್ಮವಿಶ್ ಸಂಗೀತ ನಿರ್ದೇಶನ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ಡಿಫರೆಂಟ್ ಡ್ಯಾನಿ, ಥ್ರಿಲ್ಲರ್ ಮಂಜು, ರಾ ಪುಷ್ಪರಾಜು ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ತನುಷ್ ಶಿವಣ್ಣ, ಸೋನಾಲ್ ಮೊಂತೆರೊ, ನಾಗಭೂಷಣ, ಕಾಕ್ರೋಜ್ ಸುಧಿ, ಯಶ್ ಶೆಟ್ಟಿ, ರಾಜೇಶ್ ನಟರಂಗ, ರಘು ರಾಮನಕೊಪ್ಪ, ಹರಿಣಿ ಶ್ರೀಕಾಂತ್, ಸುಂದರರಾಜ್, ಕಾಂತರಾಜು ಕಡ್ಡಿಪುಡಿ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Categories
ಸಿನಿ ಸುದ್ದಿ

ನಿರ್ದೇಶಕಿ ಅಂಜಲಿ‌ ಮೆನನ್ ಜತೆ ಕೆ ಆರ್ ಜಿ ಸ್ಟುಡಿಯೋಸ್ ಸಾಥ್

ಚಿರಪರಿಚಿತ ಚಿತ್ರ ನಿರ್ಮಾಣ ಹಾಗೂ ವಿತರಣಾ ಸಂಸ್ಥೆಯಾದ ಕೆ ಆರ್ ಜಿ ಸ್ಟುಡಿಯೋಸ್ ಇದೀಗ ಖ್ಯಾತ ಮಲಯಾಳಂ ನಿರ್ದೇಶಕಿ ಅಂಜಲಿ‌ ಮೆನನ್ ಅವರೊಂದಿಗೆ ಹೊಸ ತಮಿಳು ಚಿತ್ರಕ್ಕಾಗಿ ಕೈ ಜೋಡಿಸಿದೆ. “ಬ್ಯಾಂಗ್ಲೂರ್ ಡೇಸ್”, “ಉಸ್ತಾದ್ ಹೊಟೇಲ್”, “ಮಂಜಡಿಕುರು”, “ಕೂಡೆ” ಮತ್ತು ಇತ್ತೀಚಿನ “ವಂಡರ್ ವುಮನ್” ಅಂತಹಾ ಹೆಸರಾಂತ ಚಿತ್ರಗಳನ್ನು ಕೊಡುಗೆಯಾಗಿ ನೀಡಿರುವ ನಿರ್ದೇಶಕಿ ಅಂಜಲಿ‌ ಮೆನನ್ ಇದೀಗ ತಮಿಳು‌ ಚಿತ್ರವನ್ನು ನಿರ್ದೇಶಿಸಲು ಸಜ್ಜಾಗಿದ್ದಾರೆ.

ಕೆ ಆರ್ ಜಿ ಸ್ಟುಡಿಯೋಸ್ ಈ ಸಹಯೋಗದ‌ ಮೂಲಕ ಕನ್ನಡ ಚಿತ್ರರಂಗಕ್ಕೂ ಹಾಗೂ ಇನ್ನಿತರ ಚಿತ್ರರಂಗಕ್ಕೂ ಇರುವ ಅಂತರವನ್ನು ಕಡಿಮೆ ಮಾಡಿ, ಸಮಗ್ರ ನಿರ್ಮಾಣದ ಮೂಲಕ ಹೊಸ ಮೈಲಿಗಲ್ಲನ್ನು ಸಾಧಿಸುತ್ತಿದೆ ಎಂದರೆ ತಪ್ಪಾಗಲಾರದು.
ಕೆ ಆರ್ ಜಿ ಸ್ಟುಡಿಯೋಸ್ ತನ್ನ ಸಿನಿಮಾ ವಿತರಣೆಯನ್ನು 2017ರಲ್ಲಿ‌ ಆರಂಭಿಸಿ, ಇಲ್ಲಿಯ ವರೆಗೂ ಸರಿಸುಮಾರು 100 ಚಿತ್ರಗಳನ್ನು ವಿತರಿಸಿದೆ. 2020ರಲ್ಲಿ, “ರತ್ನನ್ ಪ್ರಪಂಚ” ಚಿತ್ರದ ಮೂಲಕ ಚಿತ್ರ ನಿರ್ಮಾಣವನ್ನು ಆರಂಭಿಸಿತು. ರೋಹಿತ್ ಪದಕಿಯವರ ನಿರ್ದೇಶನದಲ್ಲಿ, ಡಾಲಿ‌ ಧನಂಜಯ್ ಅಭಿನಯದಲ್ಲಿ ಮೂಡಿ‌ಬಂದ ಈ‌ ಚಿತ್ರ Amazon primeನಲ್ಲಿ ಬಿಡುಗಡೆಗೊಂಡು ಎಲ್ಲರ ಮನೆ ಮಾತಾಗಿತ್ತು‌. ನಂತರದಲ್ಲಿ , ಮಾರ್ಚ್ 2023ರಲ್ಲಿ ತೆರೆ ಕಂಡ “ಗುರುದೇವ್ ಹೊಯ್ಸಳ” ಬಹಳ ದೊಡ್ಡ ಮಟ್ಟದಲ್ಲಿ ಮೆಚ್ಚುಗೆಯನ್ನು ಗಳಿಸಿತ್ತು.
ಕೆ ಆರ್ ಜಿ ಸ್ಟುಡಿಯೋಸ್ ನ‌ ಈ ಸಹಯೋಗ ವಿಭಿನ್ನ ಕಥಾ ವಸ್ತುವನ್ನು ಒಳಗೊಂಡಿರುವ ಚಿತ್ರಗಳನ್ನು ಸಿನಿ ಪ್ರೇಮಿಗಳಿಗೆ ಉಣಬಡಿಸುವ ಮುಖ್ಯ ಉದ್ದೇಶವನ್ನು ಹೊಂದಿದೆ. ಅಷ್ಟೇ ಅಲ್ಲದೆ, ದಕ್ಷಿಣ ಭಾರತದ 4 ಭಾಷೆಗಳನ್ನು ಗಮನದಲ್ಲಿಟ್ಟುಕೊಂಡು ಹೊಸ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಗುರಿಯನ್ನು ಹೊಂದಿದೆ.

ಈ ಕುರಿತು ನಿರ್ದೇಶಕಿ ಅಂಜಲಿ‌ ಮೆನನ್ ಮಾತನಾಡಿ, ಸಿನಿಮಾಗಳು ಭಾಷೆ ಎಂಬ ಗೋಡೆಯನ್ನು ದಾಟಿ ಎಲ್ಲರನ್ನು ತಲುಪುತ್ತಿರುವ‌ ಈ ಕಾಲದಲ್ಲಿ ಕೆ ಆರ್ ಜಿ ಸ್ಟುಡಿಯೋಸ್ ಅಂತಹ ಸಂಸ್ಥೆಯೊಡನೆ ನಾನು ಕೈ ಜೋಡಿಸಿರುವುದು ಸಮಂಜಸವೇ ಎನಿಸುತ್ತಿದೆ. ನಮ್ಮ ಈ ಸಹಯೋಗದಲ್ಲಿ ಉನ್ನತ ಮಟ್ಟದ ಚಿತ್ರ ನಿರ್ಮಾಣ ಹಾಗೂ ನಿರ್ದೇಶನವನ್ನು ಎದುರು ನೋಡುತ್ತಿದ್ದೇನೆ ಎಂದರು‌.

ಕೆ ಆರ್ ಜಿ ಸ್ಟುಡಿಯೋಸ್ ಸಂಸ್ಥಾಪಕರು ಮತ್ತು ನಿರ್ಮಾಪಕರು ಆದ ಕಾರ್ತಿಕ್ ಗೌಡ ಮಾತನಾಡಿ, ಅಂಜಲಿ ಮೆನನ್ ಮತ್ತು ನಮ್ಮ ಸಹಯೋಗ ಕೆ ಆರ್ ಜಿ ಸ್ಟುಡಿಯೋಸ್ ನಲ್ಲಿ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿದೆ ಎಂದರೆ ಉತ್ಪ್ರೇಕ್ಷೆಯಲ್ಲ. “ಸಿನಿಮಾ”ಗೆ ಇರುವ‌ ಶಕ್ತಿಯನ್ನು ನಾವು ನಂಬುತ್ತೇವೆ. ಅದು ತೆರೆಯ ಮೇಲೆ ಯಾವ ರೀತಿಯ “ಜಾದುವನ್ನಾದರೂ” ಸೃಷ್ಟಿಸಬಲ್ಲದು. ಈ ನಿಟ್ಟಿನಲ್ಲಿ ನಮ್ಮ ಸಹಯೋಗ ಬಹಳ ಅರ್ಥಪೂರ್ಣವಾಗಲಿದೆ ಎಂದು ನಂಬಿದ್ದೇನೆ. ಈ ಕುರಿತು ನಮ್ಮ ಪಯಣ ಶುರು ಆಗಲು ಕಾರಣ ನನ್ನ ಸ್ನೇಹಿತ ಹಾಗೂ Entertainment Executive ವಿಜಯ್ ಸುಬ್ರಹ್ಮಣ್ಯಂ. ಚಿತ್ರದ ಕಥಾವಸ್ತುವಿಗೆ, ಅದರ ನಿರೂಪಣೆಗೆ ಇರುವ ಶಕ್ತಿಯನ್ನು ಕುರಿತು ಹಾಗೂ ಉನ್ನತ ಮಟ್ಟದ ನಿರ್ಮಾಣವು ಪ್ರೇಕ್ಷಕರ ಮೇಲೆ ಯಾವ ರೀತಿಯ ಪ್ರಭಾವ ಬೀರಲಿದೆ ಎಂದೆಲ್ಲಾ ನಾವು ಚರ್ಚಿಸಿದ್ದೇವೆ. ನಮ್ಮಲ್ಲಿರುವ ಸಾಮರ್ಥ್ಯವನ್ನು ಆತ ಗಮನಿಸಿ,ನಮಗೆ ಮಾರ್ಗದರ್ಶಕನಾಗಿ ಹಾಗೂ ನಮ್ಮೊಡನೆ ಸಹ-ನಿರ್ಮಾಪಕನಾಗಿ ಕೈ ಜೋಡಿಸಿದಕ್ಕಾಗಿ ನಾನು ಆಭಾರಿಯಾಗಿರುತ್ತೇನೆ. “ತುಲ್ಸಿಯಾ” ಸಂಸ್ಥೆಯ ಸ್ಥಾಪಕರಾದ ಚೈತನ್ಯ ಹೆಗಡೆ ಅಂತಹ ಸಮಾನ ಮನಸ್ಕರ ಸಹಕಾರದಿಂದ ಅತ್ಯುನ್ನತ ಗುಣಮಟ್ಟದ ಚಿತ್ರಗಳನ್ನು ನೀಡುವ ಭರವಸೆ ನಮ್ಮ ಸಂಸ್ಥೆ ನೀಡಲಿದೆ.

ಕೆ ಆರ್ ಜಿ ಸ್ಟುಡಿಯೋಸ್ ಸಂಸ್ಥೆಯ ಈ‌ ಸಹಯೋಗ ಕೇವಲ ಚಿತ್ರರಂಗದಲ್ಲಿ ಹೊಸ ಅಲೆ ಸೃಷ್ಟಿಸುವುದಷ್ಟೇ ಅಲ್ಲದೆ, ಕಥಾ ನಿರೂಪಣೆಯಲ್ಲಿ‌ ಹೊಸ ಆವಿಷ್ಕಾರಗಳನ್ನು ಸ್ಥಳೀಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ತರಲಿದೆ ಎಂಬ ಭರವಸೆಯನ್ನು ನಾವು ಹೊಂದಿದ್ದೇವೆ. ದಕ್ಷಿಣ ಭಾರತೀಯ ಸಿನಿಮಾದ ಭವಿಷ್ಯವನ್ನು ರೂಪಿಸಲು ಸಜ್ಜಾಗಿರುವ‌ ಕೆ ಆರ್ ಜಿ ಸ್ಟುಡಿಯೋಸ್ ಸಂಸ್ಥೆಗೆ ಗುಣಮಟ್ಟದ ಕಥಾ ವಸ್ತು ಹಾಗೂ ನವೀನ ಕಥಾ ನಿರೂಪಣೆಗೆ ಅಂಜಲಿ ಮೆನನ್ ಜೊತೆಗಿನ ಸಹಯೋಗ ಬಲು ದೊಡ್ಡ ಉದಾಹರಣೆ ಮತ್ತು ಮಾದರಿಯಾಗಲಿದೆ ಎಂದು ನಂಬಿದ್ದೇನೆ.
“ತುಲ್ಸಿಯಾ” ದೇಶದ ಅತ್ಯುನ್ನತ ಬರಹಗಾರರನ್ನು, ನಿರ್ದೇಶಕರನ್ನು, ನಟರನ್ನು ಒಳಗೊಂಡಿರುವಂತಹ “content management” ಸಂಸ್ಥೆಯಾಗಿದೆ. ಈ ಸಂಸ್ಥೆಯನ್ನು ಪ್ರತಿನಿಧಿಸುವ ಅಂಜಲಿ ಮೆನನ್ ಅವರೊಂದಿಗೆ ಕೈ ಜೋಡಿಸಿರುವುದು ನಿಜಕ್ಕೂ ಹೆಮ್ಮೆಯ ವಿಷಯ.

Categories
ಸಿನಿ ಸುದ್ದಿ

ಗುರು ದೇಶಪಾಂಡೆ ನಿರ್ಮಾಣದ ಹೊಸ ಸಿನಿಮಾಗೆ ಚಾಲನೆ: ಗಿರಿರಾಜ್ ನಿರ್ದೇಶನದ ಚಿತ್ರಕ್ಕೆ ಹಾಡುಗಳ ಧ್ವನಿಮುದ್ರಣ ಶುರು

ನಿರ್ದೇಶಕ ಹಾಗೂ ನಿರ್ಮಾಪಕ ಗುರು ದೇಶಪಾಂಡೆ ತಮ್ಮ ಜಿ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣ ಮಾಡುತ್ತಿರುವ “ಪ್ರೊಡಕ್ಷನ್ ನಂ 4” ಚಿತ್ರದ ಹಾಡುಗಳ ಧ್ವನಿಮುದ್ರಣ (ಸಾಂಗ್ ರೆಕಾರ್ಡಿಂಗ್) ಪೂಜೆ ನಾಗರಭಾವಿಯ ಲೂಪ್ ಸ್ಟುಡಿಯೋಸ್ ನಲ್ಲಿ ನೆರವೇರಿದೆ. “ಜಟ್ಟ”, “ಮೈತ್ರಿ” ಚಿತ್ರಗಳ ಖ್ಯಾತಿಯ ಬಿ.ಎಂ ಗಿರಿರಾಜ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.‌ ಕನ್ನಡದ ಹೆಸರಾಂತ ನಿರ್ದೇಶಕ ಬಿ.ಜೆ.ಭರತ್ ಸಂಗೀತ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ.

ಹಿಂದೆ ಸಾಂಗ್ ರೆಕಾರ್ಡಿಂಗ್ ಪೂಜೆ ಎಂದರೆ ಒಂದು ಸಡಗರ ಎಂದು ಮಾತು ಆರಂಭಿಸಿದ ನಿರ್ದೇಶಕ ಗಿರಿರಾಜ್, ಈಗ ಕೆಲವು ವರ್ಷಗಳಿಂದ ಆ ಸಂಸ್ಕೃತಿ ಮರೆತು ಹೋಗಿದೆ. ಗುರು ದೇಶಪಾಂಡೆ ಮತ್ತೆ ಸಾಂಗ್ ರೆಕಾರ್ಡಿಂಗ್ ಪೂಜೆ ಮೂಲಕ ತಮ್ಮ ನೂತನ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಇಂದು ಒಳ್ಳೆಯ ದಿವಸ ಎಂದು ಪೂಜೆ ಆರಂಭಿಸಿದ್ದೇವೆ. ಈ ಸಿನಿಮಾ ಈ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿರುತ್ತದೆ. ಮರೆಯಾಗುತ್ತಿರುವ ಸಂಸ್ಕೃತಿಯ ಮತ್ತೆ ತರುವ ಪ್ರಯತ್ನವನ್ನು ಈ ಚಿತ್ರದಲ್ಲಿ ಮಾಡುತ್ತಿದ್ದೇವೆ. ಭರತ್ ಅವರ ಸಂಗೀತ ನಿರ್ದೇಶನದಲ್ಲಿ ಇಂದಿನಿಂದ ಸಾಂಗ್ ರೆಕಾರ್ಡಿಂಗ್ ಆರಂಭವಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ನೀಡುತ್ತೇವೆ ಎಂದರು.

ಇದು ಜಿ ಸಿನಿಮಾಸ್ ಮೂಲಕ ನಿರ್ಮಾಣವಾಗುತ್ತಿರುವ ನಾಲ್ಕನೇಯ ಚಿತ್ರ. ನಮ್ಮ ಜಿ ಅಕಾಡೆಮಿ ಮೂಲಕ ಸಾಕಷ್ಟು ಮಕ್ಕಳಿಗೆ ನಟನಾ ತರಬೇತಿ ನೀಡಲಾಗುತ್ತಿದೆ. ಈಗಾಗಲೇ ಹತ್ತು ಬ್ಯಾಚ್ ಗಳು ಯಶಸ್ವಿಯಾಗಿ ಪೂರ್ಣವಾಗಿದೆ. ಮಕ್ಕಳಿಗೆ ಬರೀ ನಟನೆ ಕಲಿಸಿಕೊಟ್ಟು ಕಳುಹಿಸಿದರೆ ಸಾಲದು. ಅವರಿಗೆ ಸೂಕ್ತ ವೇದಿಕೆ ಕೂಡ ಕಲ್ಪಿಸಿಕೊಡಬೇಕು. ಅದರಲ್ಲೂ ವಿಶೇಷವಾಗಿ ಮಧ್ಯಮವರ್ಗದ ಮಕ್ಕಳಿಗೆ. ಆ ಸಲುವಾಗಿ ನಮ್ಮ ಈ ಚಿತ್ರದಲ್ಲಿ ನಮ್ಮ ಜಿ ಅಕಾಡೆಮಿಯ 15ಕ್ಕೂ ಅಧಿಕ ಮಕ್ಕಳು ನಟಿಸಲಿದ್ದಾರೆ. ಕನ್ನಡದ ಹೆಸರಾಂತ ನಟರು ಈ ಚಿತ್ರದ ನಾಯಕರಾಗಿ ಅಭಿನಯಿಸಲಿದ್ದಾರೆ.

ಈ ಕುರಿತು ಹೆಚ್ಚಿನ ವಿಷಯಗಳನ್ನು ಮುಂದಿನ ದಿನಗಳಲ್ಲಿ ಹಂಚಿಕೊಳ್ಳುತ್ತೇವೆ. ಕನ್ನಡದಲ್ಲಿ ಕಮರ್ಷಿಯಲ್ ಹಾಗೂ ಪ್ರಶಸ್ತಿ ಚಿತ್ರಗಳು ಎಂಬ ಎರಡು ವಿಭಾಗಗಳಿದೆ. ಬೇರೆ ಕಡೆ ಆ ರೀತಿ ಇಲ್ಲ. ಒಳ್ಳೆಯ ಕಂಟೆಂಟ್ ಇರುವ ಚಿತ್ರಗಳನ್ನು ಜನರು ನೋಡುತ್ತಾರೆ. ಆಗ ಅದು ಎರಡು ವಿಭಾಗಗಳನ್ನೊಳಗೊಂಡ ಒಂದೇ ಚಿತ್ರವಾಗುತ್ತದೆ. ನಮ್ಮ ಚಿತ್ರ ಕೂಡ ಅದೇ ರೀತಿ ಇರಲಿದೆ ಎಂದು ನಿರ್ಮಾಪಕ ಗುರು ದೇಶಪಾಂಡೆ ತಿಳಿಸಿದರು.

ಇಂದಿನಿಂದ ಹಾಡುಗಳ ಧ್ವನಿಮುದ್ರಣ ಆರಂಭವಾಗಿದೆ. ಚಿತ್ರದಲ್ಲಿ ನಾಲ್ಕು ಹಾಡುಗಳಿದೆ ಎಂದರು ಸಂಗೀತ ನಿರ್ದೇಶಕ ಬಿ.ಜೆ.ಭರತ್. ಗೀತರಚನೆಕಾರ ಪುನೀತ್ ಆರ್ಯ ಹಾಗೂ ವಿತರಕ ವೆಂಕಟ್ ಗೌಡ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Categories
ಸಿನಿ ಸುದ್ದಿ

ಇದು ಹಸಿದವರ ಕಥೆ! ಮಾರ್ಚ್ 1 ಕ್ಕೆ ಜುಗಲ್ ಬಂದಿ ಮೋಡಿ: ನೋಡುವ ಡಿಂಡಿಮ ಸಿನಿಮಾನ…

ಕಾಂತಾರ ಸಿನಿಮಾದಲ್ಲಿ ಕಮಲಕ್ಕ ಪಾತ್ರ ಮಾಡಿ ಪ್ರೇಕ್ಷಕರ ಮೆಚ್ಚುಗೆ ಗಳಿಸಿದ ಮಾನಸಿ ಸುಧೀರ್ ಜುಗಲ್ ಬಂದಿ” ಸಿನಿಮಾ ಮೂಲಕ ಸಿನಿ ಪ್ರಿಯರನ್ನು ರಂಜಿಸಲು ಸಜ್ಜಾಗಿದ್ದಾರೆ. ಟ್ರೇಲರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರದ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಮಾರ್ಚ್ 1ರಂದು ಹಲವು ಕಥೆಗಳ ‘ಜುಗಲ್ ಬಂದಿ’ ತೆರೆಗೆ ಬರುತ್ತಿದೆ.

ನಾಲ್ಕು ಡಿಫರೆಂಟ್ ಪ್ಲಾಟ್ ಒಳಗೊಂಡ ಸಿನಿಮಾ ‘ಜುಗಲ್ ಬಂದಿ’.ಭಗವದ್ಗೀತೆ, ಕುರಾನ್, ಬೈಬಲ್ನಲ್ಲೂ ಬರ್ದಿಲ್ಲ ದುಡ್ಮಾಡದೆಂಗತ!
ಟ್ಯಾಗ್ ಲೈನ್ ಮೂಲಕ ಕುತೂಹಲ ಕ್ರಿಯೇಟ್ ಮಾಡಿರುವ ಈ ಚಿತ್ರಕ್ಕೆ ದಿವಾಕರ್ ಡಿಂಡಿಮ ಆಕ್ಷನ್ ಕಟ್ ಹೇಳಿದ್ದಾರೆ. ಕಥೆ, ಚಿತ್ರಕಥೆ, ಸಾಹಿತ್ಯ, ನಿರ್ದೇಶನದ ಜೊತೆಗೆ ತಮ್ಮ ಮೊದಲ ಸಿನಿಮಾಗೆ ತಾವೇ ಬಂಡವಾಳ ಕೂಡಾ ಹೂಡಿರುವುದು ವಿಶೇಷ.

ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಒಳಗೊಂಡ ಚಿತ್ರದಲ್ಲಿ ಅರ್ಚನಾ ಕೊಟ್ಟಿಗೆ, ಅಶ್ವಿನ್ ರಾವ್, ಸಂತೋಷ್ ಆಶ್ರಯ್, ಯಶ್ ಶೆಟ್ಟಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಪ್ರಕಾಶ್ ಬೆಳಗಲ್, ಚಂದ್ರಪ್ರಭಾ ಜಿ ಯುವಕ, ರಂಜನ್, ಯುಕ್ತ ಅಲ್ಲು ಸುಶ್ ಒಳಗೊಂಡ ತಾರಾಬಳಗವಿದೆ. ಪ್ರದ್ಯೋತ್ತನ್ ಸಂಗೀತ ನಿರ್ದೇಶನ, ಪ್ರಸಾದ್ ಹೆಚ್ ಎಂ ಸಂಕಲನ ಈ ಚಿತ್ರಕ್ಕಿದೆ. ಸದ್ಯ ಚಿತ್ರದ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದೆ. ರಿಷಿಕಾ ಫಿಲ್ಮ್ಸ್ ರಾಜ್ಯಾದ್ಯಂತ ಸಿನಿಮಾ ವಿತರಣೆ ಜವಾಬ್ದಾರಿ ಹೊತ್ತಿದ್ದು, ಅವರದ್ದೇ ಪ್ರೆಸೆಂಟ್ಸ್ ಮೂಲಕ ತೆರೆಗೆ ಬರಲಿದೆ.

Categories
ಸಿನಿ ಸುದ್ದಿ

ಈ ನೆಲದ ಕಥೆ, ನೊಂದು ಬೆಂದವರ ವ್ಯಥೆ ಇದು: ಧೈರ್ಯಂ ಸರ್ವತ್ರ ಸಾಧನಂ ಫೆ.23ಕ್ಕೆ ರಿಲೀಸ್

ಕಾಂತರ – ಕಾಟೇರ ಚಿತ್ರಗಳ ಮೊದಲೇ ಚಿತ್ರೀಕರಣ ಮುಗಿಸಿದ್ದ ಧೈರ್ಯಂ ಸರ್ವತ್ರ ಸಾಧನಂ. ಕಾಂತಾರ ಚಿತ್ರದಲ್ಲಿ ಬಂದೂಕು ಹಂದಿ ಬೇಟೆ , ಬುಡಕಟ್ಟು ಜನಾಂಗ ಅಸ್ಪೃಶ್ಯತೆ ಎಂಬ ಕೆಲವೊಂದು ಅಂಶಗಳು ಗಮನ ಸೆಳೆದಿತ್ತು.
ಕಾಟೇರ ಕೂಡ ಇದೇ ಸಾಲಿನಲ್ಲಿ ಸಾಗಿದ ಚಿತ್ರ.

ಈಗ ಧೈರ್ಯಂ ಸರ್ವತ್ರ ಸಾಧನಂ ಚಿತ್ರದಲ್ಲೂ ಸಮಾಜದಲ್ಲಿ ನೊಂದವರ, ಬೆಂದವರ ಕಥೆ ಇದೆ. ಇಲ್ಲೂ ಬಂದೂಕು, ಹಂದಿ ಬೇಟೆ ಎಂಬ ಅಂಶಗಳಿವೆ.
ನಿರ್ದೇಶಕ ಎ. ಆರ್. ಸಾಯಿರಾಮ್ ಸಿನಿಮಾ ಬಗ್ಗೆ ಹೇಳುವುದಿಷ್ಟು.


2021 ಡಿಸೆಂಬರ್ 6 ರಂದು ಚಿತ್ರೀಕರಣ ಶುರು ಆಗಿ,
ಜನವರಿ 14ರಂದು ಚಿತ್ರೀಕರಣ ಮುಗಿಯಿತು.
ಒಂದೇ ಹಂತದಲ್ಲಿ ಚಿತ್ರೀಕರಣ ಮುಗಿಸಲಾಗಿತ್ತು. ಇದೊಂದು ನೆಲದ ಕಥೆ. ನೊಂದವರ ಬದುಕು ಇಲ್ಲಿದೆ. ಆ ಕಾಲಘಟ್ಟದಲ್ಲಿನ ಅಂಶಗಳು ಇಲ್ಲಿವೆ ಎಂದರು.

ನಿರ್ಮಾಪಕರ ಆನಂದ್ ಬಾಬು ಮಾತನಾಡಿ, ಇದೊಂದು ಕಾಡುವ ಹಾಗು ನೋಡುವ ಚಿತ್ರ. ಇಲ್ಲಿ ಗ್ರಾಫಿಕ್ಸ್ ಹೆಚ್ಚಾಗಿದೆ.
4 ರೀತಿಯ ಹಂದಿ 2 ಮೊಲ ಹಾಗೂ ಖಳನಾಯಕನ ಮನೆಯನ್ನು ಸಿಜಿ ಮೂಲಕ ಮಾಡಿರುವುದು ವಿಶೇಷ.
ತುಂಬಾ ನೈಜವಾಗಿ ಕಾಣುವಂತೆ ನಿರ್ದೇಶಕರು ಸಿಜಿ ಕೆಲಸ ಮಾಡಿಸಿದ್ದಾರೆ.
ಪ್ರತಿಯೊಂದು ವಿಭಾಗದಲ್ಲಿ ನಿರ್ದೇಶಕರು ಸೂಕ್ಷ್ಮವಾಗಿ ಕೆಲಸ ಮಾಡಿದ್ದಾರೆ. ಗುಣಮಟ್ಟಕ್ಕಾಗಿ ಸಮಯವಾಗಿದೆ. ಫೆಬ್ರವರಿ 23ಕ್ಕೆ ಚಿತ್ರ ರಿಲೀಸ್ ಆಗುತ್ತಿದೆ.

ಜನರಿಗೆ ತುಂಬಾ ಇಷ್ಟ ಆಗುವ ಸಿನಿಮಾ ಧೈರ್ಯಂ ಸರ್ವತ್ರ ಸಾಧನಂ, ಪ್ರತಿಯೊಬ್ಬರ ಮನೆಯಲ್ಲೂ ಈ ರೀತಿಯ ಕಥೆಗಳು ಇರುತ್ತವೆ ಪ್ರೇಕ್ಷಕರ ನಾಡಿ ಮಿಡಿತಕ್ಕೆ ನಿರ್ದೇಶಕರು ಸಿನಿಮಾ ಮಾಡಿದ್ದಾರೆ ಎಂಬುದು ನಿರ್ಮಾಪಕ ಆನಂದ್ ಬಾಬು ಮಾತು.

ಎ.ಪಿ ಪ್ರೊಡಕ್ಷನ್ಸ್‌ ಸಂಸ್ಥೆ ನಿರ್ಮಾಣದಲ್ಲಿ ಚಿತ್ರ ತಯಾರಾಗಿದೆ.
ಈಗಾಗಲೇ ಹೆಂಡವೇ ನಮ್ಮ ಮನೆಯ ದೇವರು ಹಾಡು
ಬಿಡುಗಡೆಯಾಗಿ ಮೆಚ್ಚುಗೆ ಪಡೆಯುತ್ತಿದೆ. ಹೃದಯ ಶಿವ ಅವರ ಸಾಹಿತ್ಯವಿದು. ಸಮಾಜದಲ್ಲಿ ನಮ್ಮ ಸುತ್ತ ಮುತ್ತಲೇ ನಮಗೆ ಅರಿವಿಗೆ ಬಾರದ ರೀತಿ ನಮ್ಮ ಮುತ್ತಲು ಬೆಂಕಿ ಹಾಕೋ ಕ್ರೂರ ಮನಸ್ಥಿತಿಗಳ ಅನಾವರಣ ಮಾಡುವ ಹಾಡಿದು.

ಸದ್ಯ ಬೇಡಿಕೆ ಹೆಚ್ಚಾಗುತ್ತಿದೆ. ಅಂದಹಾಗೆ ಇದು ಎ.ಆರ್. ಸಾಯಿರಾಮ್ ಅವರ ಮೊದಲ ನಿರ್ದೇಶನದ ಚಿತ್ರ. ಎ.ಪಿ ಪ್ರೊಡಕ್ಷನ್ಸ್‌ ಸಂಸ್ಥೆಯ ಆನಂದ್ ಬಾಬು ನಿರ್ಮಾಣದ ನಾಲ್ಕನೆ ಚಿತ್ರ (ಕಮರೊಟ್ಟು ಚೆಕ್‌ ಪೋಸ್ಟ್. ಗುಬ್ಬಿಮರಿ.) ರವಿಕುಮಾರ್ ಸನಾ ಛಾಯಾಗ್ರಹಣವಿದೆ. ಜ್ಯೂಡ ಸ್ಯಾಂಡಿ ಸಂಗೀತ ಮಾಡಿದರೆ, ಶ್ರೀಕಾಂತ್ ಅವರ ಸಂಕಲನವಿದೆ.

Categories
ಸಿನಿ ಸುದ್ದಿ

ಗೂಢಾಚಾರಿ-2′ ಟೀಂ ಸೇರಿದ ಬಾಲಿವುಡ್ ಸ್ಟಾರ್; ಅಡಿವಿ ಶೇಷ್ ಜೊತೆ ಇಮ್ರಾನ್ ಹಶ್ಮಿ

ಟಾಲಿವುಡ್ನಲ್ಲಿ ನೂತನ ದಾಖಲೆ ಮಾಡಿದ ಸೂಪರ್ ಹಿಟ್ ಚಿತ್ರ ‘ಗೂಢಚಾರಿ’ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಅಡಿವಿ ಶೇಷ್ ಅವರ ಅಭಿನಯದಲ್ಲಿ ಮೂಡಿಬಂದ ಆ್ಯಕ್ಷನ್-ಥ್ರಿಲ್ಲರ್ ಶೈಲಿಯ ಆ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಉತ್ತಮವಾಗಿ ಕಲೆಕ್ಷನ್ ಮಾಡಿತ್ತು. ಈಗ ಈ ಸಿನಿಮಾಗೆ ಸೀಕ್ವೆಲ್ ಸಿದ್ಧವಾಗುತ್ತಿರುವುದು ಕೂಡ ಗೊತ್ತಿದೆ. ‘ಗೂಢಚಾರಿ 2’ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಈಗಾಗಲೇ ರಿಲೀಸ್ ಆಗಿ ಸಖತ್ ಸದ್ದು ಮಾಡಿದೆ. ಇದೀಗ ಗೂಢಚಾರಿ ಸೀಕ್ವೆಲ್ ಗೆ ಬಾಲಿವುಡ್ ಸ್ಟಾರ್ ಎಂಟ್ರಿಯಾಗಿದ್ದಾರೆ.

ಗೂಢಚಾರಿ 2 ಸಿನಿಮಾದಲ್ಲಿ ಬಾಲಿವುಡ್ ಖ್ಯಾತ ನಟ ಇಮ್ರಾನ್ ಹಶ್ಮಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಟೈಗರ್ 3 ಸಿನಿಮಾ ಮೂಲಕ ಪ್ರೇಕ್ಷಕರಿಂದ ಚಪ್ಪಾಳೆ ಪಡೆದಿರುವ ಅವರೀಗ ಟಾಲಿವುಡ್ ನತ್ತ ಹೆಜ್ಜೆ ಇಟ್ಟಿದ್ದಾರೆ. ಗೂಢಚಾರಿ ಬಳಗ ಇಮ್ರಾನ್ ಫಸ್ಟ್ ಲುಕ್ ರಿಲೀಸ್ ಮಾಡಿ ಅವರನ್ನು ಸ್ವಾಗತಿಸಿದೆ. ಆದ್ರೆ ಯಾವ ಪಾತ್ರದಲ್ಲಿ ಇಮ್ರಾನ್ ನಟಿಸುತ್ತಿದ್ದಾರೆ ಎಂಬ ಕುತೂಹಲವನ್ನು ಹಾಗೇ ಉಳಿಸಿಕೊಂಡಿದೆ. ಇಮ್ರಾನ್ ಹಶ್ಮಿ ಎಂಟ್ರಿಗೆ ಇಡೀ ಚಿತ್ರತಂಡ ಖುಷಿಯಾಗಿದೆ. ‘ಗೂಢಚಾರಿ 2’ ಸಿನಿಮಾ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಆಗಿದ್ದು, ದೊಡ್ಡ ಬಜೆಟ್ನಲ್ಲಿ ನಿರ್ಮಾಣ ಆಗುತ್ತಿದೆ. ಅಡಿವಿ ಶೇಷ್ ಅಭಿನಯಿಸಿದ್ದ ‘ಮೇಜರ್’ ಚಿತ್ರಕ್ಕೆ ಸಂಕಲನಕಾರ ಆಗಿದ್ದ ವಿನಯ್ ಕುಮಾರ್ ಸಿರಿಗಿನೀದಿ ಅವರು ‘ಗೂಢಚಾರಿ 2’ ಮೂಲಕ ನಿರ್ದೇಶಕನಾಗಿ ಬಡ್ತಿ ಪಡೆಯುತ್ತಿದ್ದಾರೆ.

‘ಗೂಢಚಾರಿ 2’ ಚಿತ್ರಕ್ಕೆ ಅಡಿವಿ ಶೇಷ್ ಅವರೇ ಕಥೆ ಬರೆದಿದ್ದಾರೆ. ‘ಕಾರ್ತೀಕೇಯ 2’, ‘ಮೇಜರ್’ ಮತ್ತು ‘ದಿ ಕಾಶ್ಮೀರ್ ಫೈಲ್ಸ್’ ರೀತಿಯ ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಾಣ ಮಾಡಿರುವ ನಿರ್ಮಾಣ ಸಂಸ್ಥೆಗಳು ‘ಗೂಢಚಾರಿ 2’ ಚಿತ್ರಕ್ಕೆ ಬಂಡವಾಳ ಹೂಡುತ್ತಿವೆ. ‘ಪೀಪಲ್ ಮೀಡಿಯಾ ಫ್ಯಾಕ್ಟರಿ’, ‘

ಅಭಿಷೇಕ್ ಅಗರ್ವಾಲ್ ಆರ್ಟ್ಸ್’ ಹಾಗೂ ‘ಎ.ಕೆ. ಎಂಟರ್ಟೇನ್ಮೆಂಟ್ ಇಂಡಿಯಾ ಪ್ರೈವೆಟ್ ಲಿಮಿಟೆಡ್’ ಬ್ಯಾನರ್ ಮೂಲಕ ಟಿ.ಜಿ. ವಿಶ್ವಪ್ರಸಾದ್ ಹಾಗೂ ಅಭಿಷೇಕ್ ಅಗರ್ವಾಲ್ ಅವರು ಜೊತೆಯಾಗಿ ‘ಗೂಢಚಾರಿ 2’ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಬನಿತಾ ಸಂಧು ಅಡಿವಿ ಶೇಷ್ ಗೆ ಜೋಡಿಯಾಗಿ ನಟಿಸುತ್ತಿದ್ದಾರೆ.

error: Content is protected !!