Categories
ಸಿನಿ ಸುದ್ದಿ

ಉಪಾಧ್ಯಕ್ಷ ಜನವರಿ 26ಕ್ಕೆ ಆಗಮನ: ಟ್ರೇಲರ್ ರಿಲೀಸ್ ಮಾಡಿದ ಶಿವಣ್ಣ

ಸ್ಮಿತಾ ಉಮಾಪತಿ ಅವರು ನಿರ್ಮಿಸಿರುವ, ಅನಿಲ್ ಕುಮಾರ್ ನಿರ್ದೇಶನದ ಹಾಗೂ ಚಿಕ್ಕಣ್ಣ ಮೊದಲ ಬಾರಿಗೆ ನಾಯಕರಾಗಿ ನಟಿಸಿರುವ “ಉಪಾಧ್ಯಕ್ಷ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಶಿವರಾಜಕುಮಾರ್ ಟ್ರೇಲರ್ ಬಿಡುಗಡೆ ಮಾಡಿ ಶುಭ ಹಾರೈಸಿದರು.

ನಾನು ಚಿಕ್ಕಣ್ಣ ಅವರನ್ನು ಬಹಳ ಇಷ್ಟಪಡುತ್ತೇನೆ ಎಂದು ಮಾತು ಶುರುಮಾಡಿದ ಶಿವರಾಜಕುಮಾರ್, ಚಿಕ್ಕಣ್ಣ ನನ್ನ ಜೊತೆ ಎರಡು ಸಿನಿಮಾಗಳಲ್ಲಿ ನಟಿಸಿದ್ದಾರೆ. ಈ ಚಿತ್ರದ ಮೂಲಕ ನಾಯಕನಾಗುತ್ತಿದ್ದಾರೆ.

ಹಾಡುಗಳನ್ನು ನೋಡಿದ್ದೇನೆ. ಚಿಕ್ಕಣ್ಣ ನಿಜಕ್ಕೂ ಚೆನ್ನಾಗಿ ಡ್ಯಾನ್ಸ್ ಮಾಡಿದ್ದಾರೆ. ಉಮಾಪತಿ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಅನಿಲ್ ಕುಮಾರ್ ನಿರ್ದೇಶಿಸಿದ್ದಾರೆ. ನಾನು ಕೂಡ ಈ ಚಿತ್ರವನ್ನು ಮೈಸೂರಿನಲ್ಲಿ ನೋಡುತ್ತೇನೆ ಎಂದರು.

ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಶಿವರಾಜಕುಮಾರ್ ಅವರಿಗೆ ಅನಂತ ಧನ್ಯವಾದ. ನಾವು “ಉಪಾಧ್ಯಕ್ಷ” ಚಿತ್ರದ ಟ್ರೇಲರ್ ಬಿಡುಗಡೆ ಮಾಡಿಕೊಡಬೇಕೆಂದು ಕೇಳಿದಾಗ ಒಪ್ಪಿ ಬಂದಿದ್ದಾರೆ. ಅವರ ಸರಳತೆ ಬಗ್ಗೆ ಎಷ್ಟು ಹೇಳಿದರು ಕಡಿಮೆ. ನನಗೆ ಅವರ ಸಿನಿಮಾ ನಿರ್ಮಾಣ ಮಾಡುವ ಆಸೆಯಿದೆ. ಇನ್ನು “ಉಪಾಧ್ಯಕ್ಷ” ಚಿತ್ರವನ್ನು ನನ್ನ ಪತ್ನಿ ಸ್ಮಿತಾ ನಿರ್ಮಾಣ ಮಾಡಿದ್ದಾರೆ. ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ. ನೋಡಿ ಹಾರೈಸಿ ಎಂದರು ನಿರ್ಮಾಪಕ ಉಮಾಪತಿ.

“ಉಪಾಧ್ಯಕ್ಷ”, ” ಅಧ್ಯಕ್ಷ” ಚಿತ್ರದ ಮುಂದುವರೆದ ಭಾಗ ಎಂದು ಮಾತು ಆರಂಭಿಸಿದ ನಿರ್ದೇಶಕ ಅನಿಲ್ ಕುಮಾರ್, “ಅಧ್ಯಕ್ಷ” ಚಿತ್ರದ ಕಥೆ ಎಲ್ಲಿಗೆ ನಿಂತಿತ್ತೊ “ಉಪಾಧ್ಯಕ್ಷ” ಚಿತ್ರದ ಕಥೆ ಅಲ್ಲಿಂದ ಆರಂಭವಾಗುತ್ತದೆ. ಇದೊಂದು ಪಕ್ಕಾ ಮನೋರಂಜನಾ ಚಿತ್ರ. ಲಾಕ್ ಡೌನ್ ಸಮಯದಲ್ಲಿ ಚಂದ್ರ ಮೋಹನ್ ಅವರು ಈ ಚಿತ್ರದ ಕಥೆ ಹೇಳಿದರು. ಆನಂತರ ಸ್ನೇಹಿತರೆಲ್ಲಾ ಸೇರಿ ಈ ಚಿತ್ರದ ಕುರಿತು ಚರ್ಚಿಸಿ, ನಿರ್ಮಾಪಕ ಉಮಾಪತಿ ಅವರಿಗೆ ಕಥೆ ಹೇಳಿದೆವು.

ಅವರು ಕಥೆ ಇಷ್ಟಪಟ್ಟು ನಿರ್ಮಾಣಕ್ಕೆ ಮುಂದಾದರು. ಚಿತ್ರ ಚೆನ್ನಾಗಿ ಮೂಡಿಬರಲು ಸಹಕರಿಸಿದ ಚಿಕ್ಕಣ್ಣ ಸೇರಿದಂತೆ ಎಲ್ಲಾ ಕಲಾವಿದರಿಗೆ ಹಾಗೂ ಅರ್ಜುನ್ ಜನ್ಯ ಅವರು ಸೇರಿದಂತೆ ಪ್ರತಿಯೊಬ್ಬ ತಂತ್ರಜ್ಞರಿಗೆ ನನ್ನ ಧನ್ಯವಾದ. ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಶಿವಣ್ಣ ಅವರಿಗೆ ವಿಶೇಷ ಧನ್ಯವಾದ ಎಂದರು.

ಈವರೆಗೂ ಸುಮಾರು 250 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದೇನೆ. ನಾಯಕನಾಗಿ ಇದು ಮೊದಲ ಚಿತ್ರ. “ಉಪಾಧ್ಯಕ್ಷ” ಕುಟುಂಬ ಸಮೇತ ನೋಡಬಹುದಾದ ಚಿತ್ರ. ಈ ಚಿತ್ರಕ್ಕಾಗಿ ಸಾಕಷ್ಟು ಶ್ರಮವಹಿಸಿದ್ದೇನೆ. “ಅಧ್ಯಕ್ಷ” ಚಿತ್ರದ ಸೀಕ್ವೆಲ್ ಆಗಿರುವ ಈ ಚಿತ್ರ ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಜನರ ಗೆದ್ದಿದೆ. ಇಂದು ಶಿವರಾಜಕುಮಾರ್ ಅವರು ಟ್ರೇಲರ್ ಬಿಡುಗಡೆ ಮಾಡಿ ಹಾರೈಸಿದ್ದಾರೆ. ಚಿತ್ರ ನೋಡಿ. ಎಲ್ಲರೂ ಪ್ರೋತ್ಸಾಹ ನೀಡಿ ಎಂದು ನಾಯಕ ಚಿಕ್ಕಣ್ಣ ತಿಳಿಸಿದರು.

ನಾಯಕಿ ಮಲೈಕ ಹಾಗೂ ನಟ ರವಿಶಂಕರ್ ಸೇರಿದಂತೆ ಅನೇಕ ಕಲಾವಿದರು “ಉಪಾಧ್ಯಕ್ಷ” ಚಿತ್ರದ ಕುರಿತು ಮಾತನಾಡಿದರು.

Categories
ಸಿನಿ ಸುದ್ದಿ

ಅವಧಿ ಮೀರಿದ ಪಾರ್ಟಿ! ವಿಚಾರಣೆಗೆ ಪೊಲೀಸ್ ಮೆಟ್ಟಿಲೇರಿದ ಕಾಟೇರ: ಇದು ದರ್ಶನ್ ಮೇಲಿನ ಟಾರ್ಗೆಟ್ ಅಂದ್ರು ರಾಕ್ ಲೈನ್

ಒಂದು ಕಡೆ ಕಾಟೇರ ರಾಜ್ಯ ಮಾತ್ರವಲ್ಲ ವಿದೇಶದಲ್ಲೂ ಭರ್ಜರಿ ಯಶಸ್ಸು ಕಾಣ್ತಾ ಇದ್ದರೆ, ಇನ್ನೊಂದು ಕಡೆ ಆ ಕಾಟೇರನಿಗೆ ಸಂಕಷ್ಟ ಎದುರಾಗಿದೆ. ಇಷ್ಟಕ್ಕೂ ಆಗಿದ್ದೇನು? ಇಲ್ಲಿದೆ ಡೀಟೈಲ್ಸ್.


ಹೌದು, ಕೆಲ ದಿನಗಳ ಹಿಂದೆ ಕಾಟೇರ ಚಿತ್ರ ಭರ್ಜರಿ ಯಶಸ್ಸು ಕಂಡ ಹಿನ್ನಲೆಯಲ್ಲಿ, ಜೆಟ್ ಲ್ಯಾಗ್ ಪಬ್ ನಲ್ಲಿ ಚಿತ್ರ ತಂಡ ಪಾರ್ಟಿ ನಡೆಸಿತ್ತು. ಆದರೆ, ಅಂದು ಲೇಟ್ ನೈಟ್ ಪಾರ್ಟಿ ಮಾಡಿದ ಸಂಬಂಧ ದೂರು ಪ್ರಕರಣವಾಗಿತ್ತು. ಹಾಗಾಗಿ ಚಿತ್ರ ತಂಡಕ್ಕೆ ಠಾಣೆಗೆ ಬರುವಂತೆ ಪೋಲೀಸ್ ನೋಟಿಸ್ ಕೂಡ ನೀಡಿತ್ತು.

ಆದರೆ, ದರ್ಶನ್ ಕಾಟೇರ ಸಕ್ಸಸ್ ಹಿನ್ನೆಲೆಯಲ್ಲಿ ದುಬೈನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮಕ್ಕೆ ಹೋಗಿದ್ದರು. ಹಾಗಾಗಿ ಠಾಣೆಯ ವಿಚಾರಣೆಗೆ ದರ್ಶನ್ ಹಾಜರಾಗಿರಲಿಲ್ಲ.

ದುಬೈ ನಿಂದ ಮರಳಿದ ದರ್ಶನ್ ಇಂದು ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಗೆ ನಟ ದರ್ಶನ್ ಸೇರಿದಂತೆ ಕಾಟೇರ ಚಿತ್ರತಂಡ ವಿಚಾರಣೆಗೆ ಹಾಜರಾಗಿದೆ.

ನೈಟ್ ಲೇಟ್ ಪಾರ್ಟಿ ನಡೆದಿದ್ದರಿಂದ ಅಲ್ಲಿ ಮಧ್ಯರಾತ್ರಿ ಕೂಡ ಮದ್ಯಪಾನ ಸರಬರಾಜು ಮಾಡಲಾಗಿತ್ತು. ಈ ವೇಳೆ ಕನ್ನಡದ ಹಲವು ಸೆಲೆಬ್ರಿಟಿಗಳು ಭಾಗಿಯಾಗಿದ್ದರು. ಅಲ್ಲಿ ಸೆಲೆಬ್ರಿಟಿಗಳು ಅವಧಿ ಮೀರಿ ಪಾರ್ಟಿ ನಡೆಸಿದ್ದರು. ಹೀಗಾಗಿ ಪೊಲೀಸರುವಿದನ್ನ ಪ್ರಶ್ನಿಸಿ ಪ್ರಕರಣ ದಾಖಲಿಸಿದ್ದರು.

ಸದ್ಯ ಸೆಲಬ್ರಿಟಿಗಳು ನೈಟ್ ಲೇಟ್ ಪಾರ್ಟಿ ಮಾಡಿದ್ದರ ಹಿನ್ನೆಲೆಯಲ್ಲಿ ಪೋಲೀಸರು ವಿಚಾರಣೆಗೆ ಬರುವಂತೆ ನೋಟೀಸ್ ನೀಡಿದ್ದರು.

ಈ ಹಿನ್ನೆಲೆಯಲ್ಲಿ ನಟ ದರ್ಶನ್ ಜೊತೆ ನಟರಾದ ಡಾಲಿ ಧನಂಜಯ್, ನೀನಾಸಂ ಸತೀಶ್, ಅಭಿಷೇಕ್ ಅಂಬರೀಶ್, ನಿರ್ಮಾಪಕ ರಾಕ್ ಲೈನ್ ವೆಂಟಕಟೇಶ್, ಸಂಗೀತ ನಿರ್ದೇಶಕ ಹರಿಕೃಷ್ಣ, ನಿರ್ದೇಶಕ ತರುಣ್ ಸುಧೀರ್, ನಟ ಚಿಕ್ಕಣ್ಣ ಸೇರಿದಂತೆ ಇತರರು ಠಾಣೆಗೆ ಹಾಜರಾಗಿದ್ದಾರೆ.

ಈ ವೇಳೆ ಸುಬ್ರಹ್ಮಣ್ಯ ನಗರ ಪೋಲೀಸರು ಸೆಲೆಬ್ರಿಟಿಗಳಿಗೆ ಒಂದಷ್ಟು ಪ್ರಶ್ನೆಗಳನ್ನು ಕೇಳಿದ್ದಾರೆ ಎನ್ನಲಾಗಿದೆ.

ನಿಮ್ಮ ಹೆಸರೇನು ನಿಮ್ಮ ತಂದೆ ಹೆಸರೇನು,

ಜೆಟ್ ಲ್ಯಾಗ್ ಪಬ್ ಗೆ ನಿಮ್ಮನ್ನು ಆಹ್ವಾನಿಸಿದ್ದು ಯಾರು,

ಎಷ್ಟೊತ್ತಿಗೆ ಪಬ್ ಗೆ ಬಂದ್ರಿ.

ಅವಧಿ ಮೀರಿದ್ದರೂ ಅಲ್ಲೇ ಪಾರ್ಟಿ ಮಾಡಲು ಅನುಮತಿ ಕೊಟ್ಟವರು ಯಾರು

ಹೀಗೆ ಸುಮಾರು ಹದಿನೈದು ಪ್ರಶ್ನೆಗಳನ್ನು ಪೊಲೀಸರು ವಿಚಾರಣೆ ವೇಳೆ ಕೇಳಿದ್ದಾರೆ ಎನ್ನಲಾಗಿದೆ.

ಅದೇನೆ ಇರಲಿ ತಡರಾತ್ರಿವರೆಗೂ ಪಾರ್ಟಿ ಮಾಡಿದ್ದರ ಹಿನ್ನೆಲೆಯಲ್ಲಿ ಕಾಟೇರ ಚಿತ್ರತಂಡ ಈಗ ಸಂಕಷ್ಟ ಎದುರಿಸುವಂತಾಗಿದೆ.

ವಿಚಾರಣೆ ಬಳಿಕ ಹೊರಬಂದ ಸೆಲಿಬ್ರಿಟಿಗಳ ಪರವಾಗಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಹೇಳಿದ್ದಿಷ್ಟು.

ಕಾಟೇರ ಸಕ್ಸಸ್ ಆಗಿದ್ದರಿಂದ ನಾನೇ ಪಾರ್ಟಿ ಅರೇಂಜ್ ಮಾಡಿದ್ದೆ. ಎಲ್ಲರೂ ಬರೋದು ತಡವಾಗಿತ್ತು. ಹಾಗಾಗಿ ಪಬ್ ಮಾಲೀಕರಿಗೆ ನಾನು ಊಟ ವ್ಯವಸ್ಥೆ ಮಾಡುವಂತೆ ಮನವಿ ಮಾಡಿದ್ದೆ . ಹಾಗಾಗಿ ತಡವಾಗಿತ್ತು.

ಇದು ದರ್ಶನ್ ವಿರುದ್ಧ ಮಾಡಿದ ಪಿತೂರಿ. ಇದರ ಹಿಂದೆ ಯಾರಿದ್ದಾರೆ ಎಂಬುದು ನನಗೂ ಗೊತ್ತು ರಾಜ್ಯದ ಜನರಿಗೂ ಗೊತ್ತು ಎಂಬುದು ಅವರ ಮಾತು.

ಒಟ್ಟಾರೆ ಇಂದು ಡಾ.ರಾಜಕುಮಾರ್ ರಸ್ತೆ ಟ್ರಾಫಿಕ್ ಜಾಮ್ ಆಗಿದ್ದಂತೂ ಸುಳ್ಳಲ್ಲ.

Categories
ಸಿನಿ ಸುದ್ದಿ

ಇದು ದೇವದಾಸ್ ಕಾಪಿಕಾಡ್ ಪ್ರೇಮ ಪ್ರಸಂಗ: ಪುರುಷೋತ್ತಮನ ಪ್ರೇಮ ಪ್ರಸಂಗ ಫ್ರೆಬ್ರವರಿಗೆ ರಿಲೀಸ್

ರಾಷ್ಟ್ರಕೂಟ ಪಿಕ್ಚರ್ಸ್ ಲಾಂಛನದಲ್ಲಿ ವಿ ರವಿ ಕುಮಾರ್ ನಿರ್ಮಾಣದಲ್ಲಿ ಖ್ಯಾತ ನಟ, ನಿರ್ದೇಶಕ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ನಿರ್ದೇಶನದಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ “ಪುರುಷೋತ್ತಮನ‌ ಪ್ರಸಂಗ” ಚಿತ್ರ ಬಿಡುಗಡೆಗೆ ಸಿದ್ದವಾಗಿದ್ದು, ಫೆಬ್ರವರಿಯಲ್ಲಿ ತೆರೆಗೆ ಬರಲಿದೆ.

ತುಳುವಿನಲ್ಲಿ ಒಂಭತ್ತು ಸಿನಿಮಾಗಳನ್ನು ನಿರ್ದೇಶಿಸಿರುವ ನನಗೆ ಕನ್ನಡದಲ್ಲಿ ಇದು ಮೊದಲ ಚಿತ್ರ ಎಂದು ಮಾತನಾಡಿದ ನಿರ್ದೇಶಕ ದೇವದಾಸ್ ಕಾಪಿಕಾಡ್, ಕನ್ನಡದಲ್ಲಿ ನನಗೆ ಮೊದಲ ಚಿತ್ರವನ್ನು ನಿರ್ದೇಶಿಸಲು ಅವಕಾಶ ನೀಡಿದ ನಿರ್ಮಾಪಕರಿಗೆ ಧನ್ಯವಾದ. “ಪುರುಷೋತ್ತಮನ ಪ್ರಸಂಗ” ಕೌಟುಂಬಿಕ ಕಥಾಹಂದರ ಹೊಂದಿರುವ ನೈಜಘಟನೆ ಆಧಾರಿತ ಚಿತ್ರ. “ಪುರುಷೋತ್ತಮ” ನ ಪಾತ್ರದಲ್ಲಿ ನಿರ್ಮಾಪಕ ರವಿಕುಮಾರ್ ಅವರ ಪುತ್ರ ಅಜಯ್ ಅಭಿನಯಿಸಿದ್ದಾರೆ.

ಈ ಪಾತ್ರಕ್ಕೆ ಹೇಳಿಮಾಡಿಸಿದ ನಟ ಅಜಯ್. ಹೊರದೇಶದಲ್ಲಿ ಸಿನಿಮಾ ಕುರಿತು ಅಧ್ಯಯನ ಮಾಡಿ ಬಂದಿದ್ದಾರೆ. ರಿಷಿಕಾ ನಾಯ್ಕ್ ಈ ಚಿತ್ರದ ನಾಯಕಿ. ನವೀನ್ ಡಿ ಪಡೀಲ್, ಅರವಿಂದ್ ಬೋಳಾರ್, ಭೋಜರಾಜ್ ವಾಮಂಜೂರು ಮುಂತಾದ ಕಲಾವಿದರು ಅಭಿನಯಿಸಿದ್ದಾರೆ. ನಾನು ಕೂಡ ನಟಿಸಿದ್ದೇನೆ. ನನ್ನ ಮಗ ಅರ್ಜುನ್ ಸಹ ನಿರ್ದೇಶನ ಮಾಡಿದ್ದಾರೆ.

ನಕುಲ್ ಅಭಯಂಕರ್ ಅವರ ಸಂಗೀತ ನಿರ್ದೇಶನದಲ್ಲಿ ನಾಲ್ಕು ಹಾಡುಗಳು ಮೂಡಿಬಂದಿದೆ. ಜಯಂತ ಕಾಯ್ಕಿಣಿ, ದೊಡ್ಡರಂಗೇ ಗೌಡ, ವಿ.ನಾಗೇಂದ್ರ ಪ್ರಸಾದ್ ಹಾಗೂ ನಾನು ಹಾಡುಗಳನ್ನು ಬರೆದಿದ್ದೇವೆ. ವಿಷ್ಣು ಈ ಚಿತ್ರದ ಛಾಯಾಗ್ರಾಹಕರು. ಮಂಗಳೂರು ಹಾಗೂ ದುಬೈನಲ್ಲಿ ಚಿತ್ರೀಕರಣ ಮಾಡಿದ್ದೇವೆ. ಫೆಬ್ರವರಿ ಮಧ್ಯದಲ್ಲಿ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ತಿಳಿಸಿದರು.

ನಾನು ಈ ಹಿಂದೆ “ಕಿಸ್”, ” ಮೆಹಬೂಬ “, “ನಾಟ್ ಔಟ್” ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ನಾಯಕನಾಗಿ ನಟಿಸಿರುವ ಮೊದಲ. ಚಿತ್ರವಿದು. ತುಳು ರಂಗಭೂಮಿ ಹಾಗೂ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿರುವ ನಿರ್ದೇಶಕ ದೇವದಾಸ್ ಕಾಪಿಕಾಡ್ ಅವರ ನಿರ್ದೇಶನದಲ್ಲಿ ಚಿತ್ರ ಚೆನ್ನಾಗಿ ಮೂಡಿಬಂದಿದೆ. ನನ್ನ ಪಾತ್ರವೂ ಚೆನ್ನಾಗಿದೆ ಎಂದರು ನಾಯಕ ಅಜಯ್.

ನಾಯಕಿ ರಿಷಿಕಾ ನಾಯ್ಕ್ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ನಿರ್ಮಾಪಕರಾದ ವಿ.ರವಿಕುಮಾರ್, ಶಂಶುದ್ದೀನ್ ಚಿತ್ರದ ಕುರಿತು ಮಾತನಾಡಿದರು. ಶರ್ಮಿಳಾ ಕಾಪಿಕಾಡ್ ಚಿತ್ರಕ್ಕೆ ಶುಭ ಹಾರೈಸಿದರು.

Categories
ಸಿನಿ ಸುದ್ದಿ

ಚಿತ್ರ ಸಂತೆಯಲ್ಲಿ 31 ಡೇಸ್: ನಿರಂಜನ್ ಶೆಟ್ಟಿ ನಟನೆಯ 31 DAYS ಚಿತ್ರದ ಫಸ್ಟ್ ಲುಕ್ ರಿಲೀಸ್

“ಜಾಲಿಡೇಸ್” ಚಿತ್ರದ ಖ್ಯಾತಿಯ ನಿರಂಜನ್ ಶೆಟ್ಟಿ ನಾಯಕನಾಗಿ ನಟಿಸುತ್ತಿರುವ “31 DAYS” ಚಿತ್ರದ ಫಸ್ಟ್ ಲುಕ್ ಇತ್ತೀಚಿಗೆ ಬೆಂಗಳೂರಿನ ಚಿತ್ರಕಲಾ ಪರಿಷತ್ ಆವರಣದಲ್ಲಿ ನಡೆಯುವ ಚಿತ್ರಸಂತೆಯಲ್ಲಿ ಅನಾವರಣಗೊಂಡಿದೆ.

“31 DAYS” ಚಿತ್ರಕ್ಕೆ “ಹೈ ವೋಲ್ಟೇಜ್ ಲವ್ ಸ್ಟೋರಿ” ಎಂಬ ಅಡಿಬರಹವಿದೆ. ಇದೊಂದು ಪ್ರೇಮ ಕಥಾನಕವಾಗಿದ್ದು, ಚಿತ್ರಸಂತೆಗೆ ಆಗಮಿಸಿದ್ದ 46 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿರುವ ದಂಪತಿ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದು ವಿಶೇಷ. ಶೀರ್ಷಿಕೆಯನ್ನು ಯುವ ಪ್ರೇಮಿಗಳು ಬಿಡುಗಡೆ ಮಾಡಿದರು. ಅಲ್ಲಿ ನೆರದಿದ್ದ ಸಹಸ್ರಾರು ಕಲಾಸಕ್ತರು “31 DAYS” ಚಿತ್ರದ ವಿನೂತನ ಫಸ್ಟ್ ಲುಕ್ ಗೆ ಫಿದಾ ಆದರು.

“ನಾನು ಸಹ ಚಿತ್ರಕಲಾ ಪರಿಷತ್ ನ ವಿದ್ಯಾರ್ಥಿಯಾಗಿದ್ದು, ಚಿತ್ರಸಂತೆಯಲ್ಲಿ ನಮ್ಮ ಚಿತ್ರದ ಫಸ್ಟ್ ಲುಕ್ ಹಾಗೂ ಶೀರ್ಷಿಕೆ ಬಿಡುಗಡೆಯಾಗಿದ್ದು ಖುಷಿಯಾಗಿದೆ ಎನ್ನುತ್ತಾರೆ ನಾಯಕ ನಿರಂಜನ್ ಶೆಟ್ಟಿ.

Nstar ಬ್ಯಾನರ್ ನಲ್ಲಿ ನಾಗವೇಣಿ. N. ಶೆಟ್ಟಿ ಅವರು ನಿರ್ಮಿಸುತ್ತಿರುವ “31DAYS” ಚಿತ್ರವನ್ನು ರಾಜ ರವಿಕುಮಾರ್ ನಿರ್ದೇಶಿಸುತ್ತಿದ್ದಾರೆ. “31 DAYS” ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಹೆಬ್ರಿ, ಆಗುಂಬೆ, ತೀರ್ಥಹಳ್ಳಿ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ.

ನಿರಂಜನ್ ಶೆಟ್ಟಿ ಅವರು ನಾಯಕನಾಗಿ ಈ ಚಿತ್ರದ ನಾಯಕನಾಗಿ ಅಭಿನಯಿಸುತ್ತಿದ್ದು ಅವರಿಗೆ ನಾಯಕಿಯಾಗಿ ಪ್ರಜ್ವಲಿ ಸುವರ್ಣ ನಟಿಸುತ್ತಿದ್ದಾರೆ.

“31 DAYS” ಚಿತ್ರ ಪ್ರಸ್ತುತ ಜನರೇಷನ್ ನಲ್ಲಿ ನಡೆಯುವ ಒಂದು ಸುಂದರ love story ಆಗಿದ್ದು 31 ದಿನಗಳಲ್ಲಿ ನಡೆಯುವ high voltage love story ಇದಾಗಿದೆ.

4 ಹಾಡುಗಳಿರುವ ಈ ಚಿತ್ರಕ್ಕೆ ವಿ. ಮನೋಹರ್ ರವರ ಸಂಗೀತ ನಿರ್ದೇಶನವಿದೆ. ಇದು ವಿ.ಮನೋಹರ್ ಅವರ ಸಂಗೀತ ನಿರ್ದೇಶನದ 150 ನೇ ಚಿತ್ರವೂ ಹೌದು. ವಿನುತ್. K ಛಾಯಾಗ್ರಹಣ, ಧನು ಕುಮಾರ್ ನೃತ್ಯ ನಿರ್ದೇಶನ ಹಾಗೂ ಸನತ್ ರವರ ಸಂಕಲನ ಈ ಚಿತ್ರಕ್ಕಿದೆ.

Categories
ಸಿನಿ ಸುದ್ದಿ

ಅನೀಶ್ ಬರ್ತ್ ಡೇಗೆ ’ಆರಾಮ್’ ಟೈಟಲ್ ಟ್ರ್ಯಾಕ್ ಗಿಫ್ಟ್: ಸೆಲ್ಫ್ ಮೇಡ್ ಸ್ಟಾರ್ ನ ಬಿಂದಾಸ್ ಸ್ಟೆಪ್

‘ನಮ್‌ ಏರಿಯಾಲಿ ಒಂದ್ ದಿನ’, ‘ಪೊಲೀಸ್‌ ಕ್ವಾಟ್ರಸ್‌’, ‘ಅಕಿರ’, ‘ವಾಸು ನಾನ್ ಪಕ್ಕಾ ಕಮರ್ಷಿಯಲ್’, ‘ರಾಮಾರ್ಜುನ’ ಹೀಗೆ ಪ್ರತಿ ಸಿನಿಮಾದಲ್ಲೂ ವಿಭಿನ್ನ ಕಥಾಹಂದರದ‌ ಮೂಲಕ ಕನ್ನಡ ಚಿತ್ರರಂಗದಲ್ಲಿ ತನ್ನದೇ ಐಡೆಂಟಿಟಿ ಕ್ರಿಯೇಟ್ ಮಾಡಿಕೊಂಡಿರುವ ನಟ ಅನೀಶ್ ತೇಜೇಶ್ವರ್. ಅವರಿಗಿಂದು ಜನ್ಮದಿನದ ಸಂಭ್ರಮ. ಅನೀಶ್ ಬರ್ತಡೇ ಸ್ಪೆಷಲ್ ಆಗಿ ಆರಾಮ್ ಅರವಿಂದ ಸ್ವಾಮಿ ಸಿನಿಮಾದ ಮೊದಲ ಹಾಡನ್ನು ವಿಂಕ್ ವಿಶಲ್ ಪ್ರೊಡಕ್ಷನ್ ಯೂಟ್ಯೂಬ್ ನಲ್ಲಿ ಅನಾವರಣ ಮಾಡಲಾಗಿದೆ.

ಆರಾಮ್ ಅರವಿಂದ ಸ್ವಾಮಿ ಟೈಟಲ್ ಟ್ರ್ಯಾಕ್ ಗೆ ನಾಗಾರ್ಜುನ್ ಶರ್ಮಾ ಪದಪುಂಜ ಪೊಣಿಸಿದ್ದು, ನಿಶಾನ್ ರೈ ಕಂಠ ಕುಣಿಸಿದ್ದಾರೆ. ಅರ್ಜುನ್ ಜನ್ಯ ಮ್ಯೂಸಿಕ್ ಹಾಡಿನ ಕಿಕ್ ಏರಿಸಿದೆ. ನಾಯಕನ ಗುಣವನ್ನು ವರ್ಣಿಸುವ ಈ ಟೈಟಲ್ ಟ್ರ್ಯಾಕ್ ಅನೀಶ್ ಜಬರ್ದಸ್ತ್ ಆಗಿ ಕುಣಿದು ಕುಪ್ಪಳಿಸಿದ್ದಾರೆ. ಬಾಬಾ ಭಾಸ್ಕರ್ ಮಾಸ್ಟರ್ ಕೊರಿಯೋಗ್ರಫಿಯಲ್ಲಿ ಈ ಸಿಂಗಿಂಗ್ ಮಸ್ತಿ ಮೂಡಿಬಂದಿದೆ.

ತನ್ನ ಪ್ರಮೋಷನ್ ಕಂಟೆಂಟ್ ನಿಂದಲೇ ಈಗಾಗಲೇ ಸದ್ದು ಮಾಡುತ್ತಿರುವ ’ಆರಾಮ ಅರವಿಂದ ಸ್ವಾಮಿ’ ಸಿನಿಮಾಗೆ ಅಭಿಷೇಕ್ ಶೆಟ್ಟಿ ಆಕ್ಷನ್ ಕಟ್ ಹೇಳಿದ್ದಾರೆ. ನಮ್ ಗಣಿ ಬಿಕಾಂ ಪಾಸ್, ಗಜಾನನ ಅಂಡ್ ಗ್ಯಾಂಗ್ ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ಅಭಿಷೇಕ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಮೂರನೇ ಸಿನಿಮಾವಿದು. ರೊಮ್ಯಾಂಟಿಕ್ ಕಾಮಿಡಿ ಸಬ್ಜೆಕ್ಟ್ ಒಳಗೊಂಡ ’ಆರಾಮ ಅರವಿಂದ ಸ್ವಾಮಿ’ ಶೂಟಿಂಗ್ ಮುಗಿಸಿ ಬಿಡುಗಡೆಗೆ ಸಜ್ಜಾಗಿದ್ದಾನೆ.

ಅನೀಶ್ ತೇಜೇಶ್ವರ್ ಗೆ ಜೋಡಿಯಾಗಿ ಮಿಲನ ನಾಗರಾಜ್ ಹಾಗೂ ಹೃತಿಕ ಶ್ರೀನಿವಾಸ್ ನಟಿಸುತ್ತಿದ್ದಾರೆ. ಅಕಿರ ಸಿನಿಮಾ ಖ್ಯಾತಿಯ ಶ್ರೀಕಾಂತ್ ಪ್ರಸನ್ನ, ‘ಗುಳ್ಟು’ ಸಿನಿಮಾ ಖ್ಯಾತಿಯ ಪ್ರಶಾಂತ್ ರೆಡ್ಡಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಮ್ಯೂಸಿಕ್ ಮಾಂತ್ರಿಕ ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ವೈವಿಬಿ ಶಿವಸಾಗರ್ ಛಾಯಾಗ್ರಹಣ, ಉಮೇಶ್ ಆರ್ ಬಿ ಸಂಕಲನ ಚಿತ್ರಕ್ಕಿದೆ.

Categories
ಸಿನಿ ಸುದ್ದಿ

ಗುಂಡನಿಗೆ ರಾಕೇಶ್ ಸಾಥ್ ನಾನು ಮತ್ತು ಗುಂಡ 2 ಸಿನಿಮಾಗೆ ಅಡಿಗ ಬಂದ್ರು…

‘ನಾನು ಮತ್ತು ಗುಂಡ’ ಚಿತ್ರದ ಸೀಕ್ವೇಲ್ ನಲ್ಲಿ ನಾಯಕ ಯಾರಾಗಿರಬಹುದು ಎಂಬ ಕುತೂಹಲಕ್ಕೆ ಇದೀಗ ತೆರೆಬಿದ್ದಿದೆ. ನಟ ರಾಕೇಶ್ ಅಡಿಗ ಅವರು ಈ ಭಾಗದಲ್ಲಿ ನಾಯಕನಾಗಿ ನಟಿಸಲಿದ್ದಾರೆ. ಈ ಚಿತ್ರಕ್ಕೆ ರಘುಹಾಸನ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ನಾನು ಮತ್ತು ಗುಂಡ ಚಿತ್ರದ ಮುಂದುವರೆದ ಭಾಗವಾಗಿ “ನಾನು ಮತ್ತು ಗುಂಡ -2” ತಯಾರಾಗುತ್ತಿದ್ದು, ಚಿತ್ರದಲ್ಲಿ ಬಹುತೇಕ ಹಳೆಯ ತಂಡವೇ ಕೆಲಸ ಮಾಡುತ್ತಿದೆ.

ಮೊದಲ ಭಾಗದಲ್ಲಿ ಮರಣ ಹೊಂದಿದ್ದ ಮಾಲೀಕನಿಗೆ ಇಲ್ಲಿ ಪುನರ್ಜನ್ಮವಾಗಿರುತ್ತದೆ.
ಕನ್ನಡ, ತೆಲುಗು, ಹಿಂದಿ ಸೇರಿ ಐದು ಭಾಷೆಗಳಲ್ಲಿ ಈ ಚಿತ್ರ ತೆರೆಗೆ ಬರುತ್ತಿದೆ. ಸಿನಿಮಾ ನಿರ್ದೇಶನದ ಜೊತೆಗೆ ನಿರ್ಮಾಣದ ಜವಾಬ್ದಾರಿಯನ್ನೂ ಸಹ ರಘು ಹಾಸನ್ ಅವರೇ ಹೊತ್ತಿದ್ದಾರೆ. ಗೋವಿಂದೇಗೌಡ ಹಾಗೂ ನಾಯಿಯ ಪಾತ್ರದ ಮೂಲಕ ಚಿತ್ರಕಥೆ ಮುಂದುವರೆಯಲಿದೆ. ಸೋಷಿಯಲ್ ಕನ್ ಸರ್ನ್ ಜೊತೆಗೆ ಡಿವೈನ್ ಕಂಟೆಂಟ್ ಕೂಡ ಈ ಚಿತ್ರದಲ್ಲಿದೆ. ಚಿತ್ರದ
ಸಂಭಾಷಣೆ ಹಾಗೂ ಸಾಹಿತ್ಯವನ್ನು ರೋಹಿತ್ ರಮನ್ ರಚಿಸಿದ್ದಾರೆ. ಈ ಚಿತ್ರಕ್ಕಿದೆ.

ಪೊಯೆಮ್ ಪಿಕ್ಚರ್ಸ್ ಲಾಂಛನದಲ್ಲಿ ತಯಾರಾಗುತ್ತಿರುವ ನಾನು ಮತ್ತು ಗುಂಡ-2 ಚಿತ್ರಕ್ಕೆ ಆರ್.ಪಿ.ಪಟ್ನಾಯಕ್ ಅವರ ಸಂಗೀತ, ರುತ್ವಿಕ್ ಮುರಳೀಧರ್ ಅವರ ಹಿನ್ನೆಲೆ ಸಂಗೀತ, ತನ್ವಿಕ್ ಅವರ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಅವರ ಸಂಕಲನ, ವಿ.ನಾಗೇಂದ್ರ ಪ್ರಸಾದ್ ಅವರ ಸಾಹಿತ್ಯ, ರಾಘು ಅವರ ನೃತ್ಯ ನಿರ್ದೇಶನವಿದೆ.

Categories
ಸಿನಿ ಸುದ್ದಿ

ಉಸಿರು ಶೀರ್ಷಿಕೆ ರಿಲೀಸ್: ಇದು ಸೈಕೋ ಥ್ರಿಲ್ಲರ್ ಸ್ಟೋರಿ

ಆರ್‌.ಎಸ್‌.ಪಿ. ಪ್ರೊಡಕ್ಷನ್ಸ್ ಮೂಲಕ ಲಕ್ಷ್ಮಿ ಹರೀಶ್ ಅವರು ನಿರ್ಮಿಸುತ್ತಿರುವ ಉಸಿರು ಚಿತ್ರದ ಶೀರ್ಷಿಕೆ ಅನಾವರಣಗೊಂಡಿದೆ. ನಟ ತಿಲಕ್, ಪ್ರಿಯಾ ಹೆಗ್ಡೆ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಈ ಚಿತ್ರಕ್ಕೆ ಪ್ರಭಾಕರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ಆರ್‌ಎಸ್‌ಪಿ ಗ್ರೂಪ್ ಆಫ್ ಕಂಪನೀಸ್ ನಡೆಸುತ್ತಿರುವ, ಲಕ್ಷ್ಮಿ ಹರೀಶ್ ಅವರು ನೂತನ ಪ್ರೊಡಕ್ಷನ್ ಹೌಸ್ ಆರಂಭಿಸಿ ಆ ಮೂಲಕ ಉಸಿರು ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಸದ್ಯದಲ್ಲೇ ಚಿತ್ರೀಕರಣ ಆರಂಭಿಸುತ್ತಿರುವ ಈ ಚಿತ್ರದ ಪೋಸ್ಟರ್ ಅನಾವರಣವಾಗಿದೆ. ಒಬ್ಬ ಬೇಜವಾಬ್ದಾರಿ ಪೊಲೀಸ್ ಅಧಿಕಾರಿ, ತನ್ನ ಹೆಂಡತಿಗೆ ಅನಾಮಿಕ ವ್ಯಕ್ತಿಯಿಂದ ಪ್ರಾಣಕ್ಕೆ ಆಪತ್ತು ಬಂದಾಗ ಆತ ಪತ್ನಿಯನ್ನು ಹೇಗೆ ಕಾಪಾಡಿಕೊಳ್ಳುತ್ತಾನೆ, ತನ್ನ ತಾಯಿಯನ್ನು ಕೊಂದವರ ಮೇಲೆ ಹೇಗೆ ಪ್ರತೀಕಾರ ತೀರಿಸಿಕೊಳ್ಳುತ್ತಾನೆ ಎಂಬುದನ್ನು ಉಸಿರು ಚಿತ್ರದ ಮೂಲಕ ನಿರ್ದೇಶಕ ಪ್ರಭಾಕರ್ ಅವರು ಹೇಳಹೊರಟಿದ್ದಾರೆ, ಸುಮಾರು 6 ತಿಂಗಳವರೆಗೆ ವರ್ಕ್ ಶಾಪ್ ನಡೆಸಿ ತಯಾರಾಗಿರುವ ಚಿತ್ರತಂಡ ಇದೇ ತಿಂಗಳ 17ರಿಂದ ಮಡಿಕೇರಿಯಲ್ಲಿ ಚಿತ್ರದ ಮುಹೂರ್ತ ನಡೆಸಿ ಶೂಟಿಂಗ್ ಆರಂಭಿಸಲಿದೆ.

ನಿರ್ಮಾಪಕಿ ಲಕ್ಷ್ಮೀ ಹರೀಶ್ ಮಾತನಾಡಿ, ನಮ್ಮ ಸಂಸ್ಥೆ ಮೂಲಕ ನಿರ್ಮಾಣವಾಗುತ್ತಿರುವ ಪ್ರಥಮ ಚಿತ್ರವಿದು. ನಿರ್ದೇಶಕ ಪ್ರಭಾಕರ್ ನಮಗೆ ಬಹಳ ದಿನಗಳ ಪರಿಚಯ. ಅವರು ಈ ಥರ ಒಂದು ಕಥೆಯಿದೆ ಎಂದು ಹೇಳಿದ ಸ್ಟೋರಿ ಲೈನ್ ನಮಗೆ ಇಷ್ಟವಾಯ್ತು, ಹಾಗಾಗಿ ಚಿತ್ರ ನಿರ್ಮಾಣಕ್ಕೆ ಮುಂದಾದೆವು. ತಿಲಕ್ ಚಿತ್ರದ ನಾಯಕನಾಗಿ ನಟಿಸುತ್ತಿದ್ದು, ಬೇರೆ ಶೂಟಿಂಗ್‌ನಲ್ಲಿರುವ ಕಾರಣ ಇವತ್ತು ಬಂದಿಲ್ಲ ಎಂದರು.

ನಿರ್ದೇಶಕ ಪ್ರಭಾಕರ್ ಮಾತನಾಡಿ, ನನ್ನ 12 ವರ್ಷಗಳ ಕನಸೀಗ ನನಸಾಗುತ್ತಿದೆ. ಈಗಾಗಲೇ ಒಂದೆರಡು ತಮಿಳು ಸಿನಿಮಾಗಳಿಗೆ ಸಹನಿರ್ದೇಶಕನಾಗಿ ಕೆಲಸ ಮಾಡಿದ್ದು, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕನಾಗುತ್ತಿದ್ದೇನೆ. ಇದೊಂದು ಸೈಕೋ ಥ್ರಿಲ್ಲರ್ ಕಥಾಹಂದರ ಇರುವ ಚಿತ್ರವಾಗಿದ್ದು, “ಉಸಿರು” ಟೈಟಲ್ ನಮ್ಮ ಕಥೆಗೆ ಸೂಕ್ತವಾಗುತ್ತೆ ಅಂತ ಇಡಲಾಗಿದೆ. ಒಂದೊಳ್ಳೇ ಟೀಮ್ ಕಟ್ಟಿಕೊಂಡು ಈ ಸಿನಿಮಾ ಮಾಡುತ್ತಿದ್ದೇವೆ ತಿಲಕ್ ಒಬ್ಬ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ, ನಾಯಕಿಯಾಗಿ ಪ್ರಿಯಾ ಹೆಗ್ಡೆ ಉಳಿದಂತೆ ರಘು ರಮಣಕೊಪ್ಪ, ರಂಗಾಯಣ ರಘು ನಟಿಸುತ್ತಿದ್ದಾರೆ, ಮುಖ್ಯವಾಗಿ 9 ಪಾತ್ರಗಳ ಮೇಲೆ ಚಿತ್ರದ ಕಥೆ ಸಾಗುತ್ತದೆ. ಮೊದಲ ಹಂತದಲ್ಲಿ ಮಡಿಕೇರಿ ಸುತ್ತಮುತ್ತ 15 ದಿನಗಳ ಚಿತ್ರೀಕರಣ ನಡೆಸಿ, ನಂತರ ಬೆಂಗಳೂರಲ್ಲಿ ಮುಂದುವೆಸುತ್ತೇವೆ ಎಂದು ಹೇಳಿದರು.

ಸಂಗೀತ ನಿರ್ದೇಶಕ ಆರ್‌ಎಸ್‌ಜಿ ನಾರಾಯಣ ಮಾತನಾಡಿ, ಸಿನಿ ಜರ್ನಿಯ 25ನೇ ವರ್ಷವಿದು, ಕಥೆಯಲ್ಲಿರುವ ಸನ್ನಿವೇಶಗಳು ನನಗೆ ತುಂಬಾ ಇಷ್ಟವಾಯ್ತು. ಬೇರೆ ಬೇರೆ ಜಾನರ್‌ನ ೪ ಹಾಡುಗಳನ್ನು ಕಂಪೋಜ್ ಮಾಡಿದ್ದು, ತುಂಬಾ ಚೆನ್ನಾಗಿ ಮೂಡಿಬಂದಿವೆ, ಅಭಿ ಅರ್ಥಗರ್ಭಿತವಾದ ಲಿರಿಕ್ ಬರೆದಿದ್ದಾರೆ ಎಂದರು.

ಚಿತ್ರದ ನಾಯಕಿ ಪ್ರಿಯಾ ಹೆಗ್ಡೆ ಮಾತನಾಡಿ, ಚಿತ್ರದ ಕಾನ್ಸೆಪ್ಟ್, ಟೈಟಲ್ ಎರಡೂ ಚೆನ್ನಾಗಿದೆ, ಸಿನಿಮಾದಲ್ಲಿ ನನ್ನ ಪಾತ್ರಕ್ಕೆ ಎರಡು ಶೇಡ್ಸ್ ಇದೆ. ಈಗಾಗಲೇ ಕನ್ನಡದ ಜಿಲ್ಕಾ, ಕುದ್ರು ಅಲ್ಲದೆ ಒಂದು ತೆಲುಗು ಚಿತ್ರದಲ್ಲೂ ಸಹ ಅಭಿನಯಿಸಿದ್ದೇನೆ ಎಂದು ಹೇಳಿದರು.

ನಟ ಸಂತೋಷ್ ಮಾತನಾಡಿ ನಾನು ರಂಗಭೂಮಿಯಿಂದ ಬಂದವನು, ಇದು ನನ್ನ ಮೊದಲ ಚಿತ್ರವಾಗಿದ್ದು, ಪಾತ್ರ ತುಂಬಾ ಎಮೋಷನಲ್ ಪಾತ್ರವಿದೆ ಎಂದರು. ನಟಿ ಅಪೂರ್ವ ಮಾತನಾಡಿ ನಾನು ಭರತನಾಟ್ಯ ಕಲಾವಿದೆ, ರಂಗಭೂಮಿ ನಟಿ, ನಿರ್ದೇಶಕಿ ಕೂಡ ಎಂದು ಹೇಳಿದರು, ಮತ್ತೊಬ್ಬನಟ ಅರುಣ್, ಸಾಹಿತಿ, ಡೈಲಾಗ್ ರೈಟರ್ ಭೈರವರಾಮ(ಅಭಿ), ಸಂಕಲನಕಾರ ಹರೀಶ್ ಕೊಮ್ಮೆ ಎಲ್ಲರೂ ಚಿತ್ರದ ಕುರಿತಂತೆ ಮಾತನಾಡಿದರು.

Categories
ಸಿನಿ ಸುದ್ದಿ

ಕಾಂಗರೂ ಮೋಷನ್ ಪೋಸ್ಟರ್ ರಿಲೀಸ್ ಗೆ ದಿನಗಣನೆ: ಇದು ಆದಿತ್ಯ ಚಿತ್ರ

ಆದಿತ್ಯ ನಾಯಕರಾಗಿ ನಟಿಸಿರುವ ಹಾಗೂ ಕಿಶೋರ್ ಮೇಗಳಮನೆ ನಿರ್ದೇಶನದ “ಕಾಂಗರೂ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿ, ಮಾತಿನ ಜೋಡಣೆ(ಡಬ್ಬಿಂಗ್) ಸಹ ಪೂರ್ಣವಾಗಿದೆ. ಬೆಂಗಳೂರು, ಚಿಕ್ಕಮಗಳೂರು, ಹೊರನಾಡು ಮುಂತಾದ ಕಡೆ ಚಿತ್ರೀಕರಣ ನಡೆದಿದೆ. “ಕಾಂಗರೂ” ಚಿತ್ರ ಕನ್ನಡ, ತೆಲುಗು, ತಮಿಳು ಹಾಗೂ ಮಲೆಯಾಳಂ ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ.

ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಮೋಷನ್ ಪೋಸ್ಟರ್ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಕನ್ನಡ ಚಿತ್ರರಂಗದ ಸೂಪರ್ ಸ್ಟಾರ್ ಒಬ್ಬರು ನಮ್ಮ ಚಿತ್ರದ ಮೋಷನ್ ಪೋಸ್ಟರ್ ಅನಾವರಣ ಮಾಡಲಿದ್ದಾರೆ. “ಕಾಂಗರೂ” ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಿರುವ ಸೂಪರ್ ಸ್ಟಾರ್ ಯಾರು ಎಂಬುದನ್ನು ಸದ್ಯದಲ್ಲೇ ತಿಳಿಸುವುದಾಗಿ ನಿರ್ದೇಶಕ ಕಿಶೋರ್ ಮೇಗಳಮನೆ ಹೇಳಿದ್ದಾರೆ.

ಆದಿತ್ಯ ಅವರು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ನಾಯಕಿಯಾಗಿ ರಂಜನಿ ರಾಘವನ್ ಅಭಿನಯಿಸಿದ್ದು, ಸೈಕಿಯಾಟ್ರಿಸ್ಟ್ ಡಾಕ್ಟರ್ ಪಾತ್ರ ನಿರ್ವಹಿಸಿದ್ದಾರೆ. ಶಿವಮಣಿ, ಕರಿಸುಬ್ಬು, ನಾಗೇಂದ್ರ ಅರಸ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಆರೋಹ ಪ್ರೊಡಕ್ಷನ್ಸ್ ಲಾಂಛನದಲ್ಲಿ ಚನ್ನಕೇಶವ ಬಿ.ಸಿ, ನರಸಿಂಹಮೂರ್ತಿ ಚಕ್ರಭಾವಿ, ರಮೇಶ್ ಬಂಡೆ, ಸ್ವಾಮಿ ಚಕ್ರಭಾವಿ, ರವಿ ಕೀಲರ ಮಂಡ್ಯ ಹಾಗೂ ಕೆ ಜಿ ರಾಮಚಂದ್ರಯ್ಯ ಈ ಚಿತ್ರವನ್ನು ನಿರ್ಮಾಣ‌ ಮಾಡುತ್ತಿದ್ದಾರೆ.

ನಿರ್ದೇಶಕ ಕಿಶೋರ್ ಮೇಗಳಮನೆ ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಬರೆದಿದ್ದಾರೆ, ಸಾಧುಕೋಕಿಲ ಸಂಗೀತ ನೀಡಿದ್ದಾರೆ. ಉದಯ್ ಲೀಲ ಛಾಯಾಗ್ರಹಣ ಹಾಗೂ ಅರ್ಜುನ್ ಕಿಟ್ಟು ಸಂಕಲನ ಈ ಚಿತ್ರಕ್ಕಿದೆ.

Categories
ಸಿನಿ ಸುದ್ದಿ

ಕ್ಲಾಂತಗೆ ಅಜೇಯ್ ರಾವ್ ಸಾಥ್: ಇದು ಕಾಡೊಳಗಿನ ಕಥೆ: ಟ್ರೇಲರ್ ಬಂತು- ಜ.19ಕ್ಕೆ ರಿಲೀಸ್

ತುಳುನಾಡಿನವರೇ ಸೇರಿ ನಿರ್ಮಾಣ ಮಾಡಿರೋ ಕ್ಲಾಂತ ಸಿನಿಮಾ ಪ್ರೇಕ್ಷಕರ ಮುಂದೆ ಬರಲು ದಿನಾಂಕ ನಿಗದಿಯಾಗಿದೆ. ಜನವರಿ 19ರಂದು ರಾಜ್ಯಾದ್ಯಂತ ಚಿತ್ರ ತೆರೆ ಕಾಣಲಿದೆ. ಟೀಸರ್ ಹಾಗೂ ಹಾಡಿನ ಮೂಲಕ ಸದ್ದು ಮಾಡಿದ್ದ ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ SRV ಥಿಯೇಟರ್ ನಲ್ಲಿಂದು ನಟ ಅಜಯ್ ರಾವ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಾಶಯ ಕೋರಿದ್ದಾರೆ.

ಅಜಯ್ ರಾವ್ ಮಾತನಾಡಿ, ಟ್ರೇಲರ್ ತುಂಬಾ ಆಕ್ಷನ್ ನಿಂದ ಕೂಡಿದೆ. ಹೀರೋ, ಹೀರೋಯಿನ್ ಎಲ್ಲರೂ ಚೆನ್ನಾಗಿ ಕಾಣಿಸುತ್ತಿದ್ದಾರೆ. ಒಂದೊಳ್ಳೆ ಪ್ರಯತ್ನ. ಯಾವುದೇ ಆಗಲಿ ಎಲ್ಲದಕ್ಕೂ ಒಂದು ಪ್ರಾರಂಭ ಅಂತಾ ಇರುತ್ತದೆ. ಪ್ರಯತ್ನ ಇರುತ್ತದೆ. ಪ್ರಯತ್ನಕ್ಕೂ, ಪ್ರಾರಂಭಕ್ಕೂ ಒಳ್ಳೆ ಉದ್ದೇಶ ಇದ್ದಾಗ ಗೆಲುವು ಸಿಗಬೇಕು ಎಂದು ಆಶಿಸಬೇಕು. ನಿರ್ದೇಶಕರು ಹಾಗೂ ಅವರ ಸಹೋದರರು ನನ್ನ ಸ್ನೇಹಿತರು. ಹೊಸಬರಿಗೆ ಆದಷ್ಟು ಪ್ರೋತ್ಸಾಹಿ ಎಂದರು.

ನಿರ್ದೇಶಕ ವೈಭವ ಪ್ರಶಾಂತ್ ಮಾತನಾಡಿ, ಕ್ಲಾಂತ ಒಂದೂವರೆ ವರ್ಷದ ಜರ್ನಿ ನನ್ನದು. ಟ್ರೇಲರ್ ಈಗ ರಿಲೀಸ್ ಮಾಡಿದ್ದೇವೆ. ಶೂಟಿಂಗ್ ಗಾಗಿ 34 ರಿಂದ 40 ದಿನ ಕಾಡಲ್ಲೇ ಇದ್ದೇವು. ಸುಬ್ರಹ್ಮಣ್ಯ, ಕುದುರೆಮುಖ ಕಾಡುಗಳಲ್ಲಿ ಚಿತ್ರೀಕರಣ ಮಾಡಿದ್ದೇವೆ. ಲಾಕ್ ಡೌನ್ ಟೈಮ್ ನಲ್ಲಿಯೇ ಸ್ಕ್ರೀಪ್ಟ್ ಮಾಡಿದ್ದೇವೆ. ಕ್ಲಾಂತ ದಣಿವು, ಆಯಾಸ ಎಂದರ್ಥ. ಇದು ಸಂಸ್ಕೃತ ಶಬ್ಧ. ಈ ಮೊದಲು ವೀಕೆಂಡ್ ವಿತ್ ಲವರ್ ಎಂದು ಟೈಟಲ್ ಇಟ್ಟಿದ್ದೇವು. ಆ ಬಳಿಕ ಕ್ಲಾಂತ ಎಂದು ಬದಲಾಯಿಸಿದೆವು. ಸಿನಿಮಾದಲ್ಲಿ ಒಟ್ಟು ಮೂರು ಹಾಡುಗಳಿದ್ದು, ಜನವರಿ 19ಕ್ಕೆ ಚಿತ್ರ ತೆರೆಗೆ ಬರಲಿದೆ ಎಂದು ತಿಳಿಸಿದರು.

ನಟ ವಿಘ್ನೇಶ್‌ ಮಾತನಾಡಿ, ಕನ್ನಡದಲ್ಲಿ ನನ್ನದು ಮೊದಲ ಸಿನಿಮಾ. ಜ.19ರಂದು ರಾಜ್ಯಾದ್ಯಂತ ಸಿನಿಮಾ ರಿಲೀಸ್ ಆಗುತ್ತಿದೆ. ಪ್ರಶಾಂತ್ ಸರ್ ಮತ್ತು ನನ್ನದು ಇದು ಎರಡನೇ ಕಾಂಬಿನೇಷನ್. ‘ದಗಲ್ ಬಾಜಿಲು’ ಎಂಬ ತುಳು ಚಿತ್ರ ಮಾಡಿದ್ದೇವು. ಅದಕ್ಕೆ ಅದ್ಭುತ ರೆಸ್ಪಾನ್ಸ್ ಸಿಕ್ಕಿತ್ತು. ಕ್ಲಾಂತ ಸಿನಿಮಾ ಒಳ್ಳೆ ಸಕ್ಸಸ್ ಸಿಗುತ್ತದೆ ಎಂಬ ಹೋಪ್ ಇದೆ. ತಂದೆ ತಾಯಿ, ಅಪ್ಪ ಅಮ್ಮ ಪ್ರತಿಯೊಬ್ಬರು ಸಿನಿಮಾ ನೋಡ್ಬೇಕು.

‘ಅನುಗ್ರಹ ಪವರ್‌ ಮೀಡಿಯಾ’ ಬ್ಯಾನರಿನಲ್ಲಿ ಉದಯ್‌ ಅಮ್ಮಣ್ಣಾಯ ಕೆ. ನಿರ್ಮಿಸಿರುವ “ಕ್ಲಾಂತ’ ಸಿನಿಮಾಕ್ಕೆ ವೈಭವ ಪ್ರಶಾಂತ್‌ ಕಥೆ, ಚಿತ್ರಕಥೆ, ಸಾಹಿತ್ಯ ಬರೆದು ನಿರ್ದೇಶನ ಮಾಡಿದ್ದಾರೆ. ತುಳು ಮತ್ತು ಕೊಂಕಣಿ ಸಿನಿಮಾಗಳಲ್ಲಿ ನಾಯಕನಾಗಿ ಅಭಿನಯಿಸಿರುವ ನಟ ವಿಘ್ನೇಶ್‌, “ಕ್ಲಾಂತ’ ಸಿನಿಮಾದ ಮೂಲಕ ಮೊದಲ ಬಾರಿಗೆ ಕನ್ನಡ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. ನಾಯಕಿ ಸಂಗೀತಾ ಭಟ್‌ ಅವರೊಂದಿಗೆ ಶೋಭರಾಜ್‌, ವೀಣಾ ಸುಂದರ್‌, ಸಂಗೀತಾ, ದೀಪಿಕಾ, ಪ್ರವೀಣ್‌ ಜೈನ್‌, ಸ್ವಪ್ನಾ ಶೆಟ್ಟಿಗಾರ್‌ ಮೊದಲಾದವರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಸುಮಾರು ಹನ್ನೆರಡು ವರ್ಷಗಳಿಂದ ಸಕ್ರಿಯರಾಗಿರುವ ವೈಭವ್ ಪ್ರಶಾಂತ್ “ಕ್ಲಾಂತ’ ಸಿನಿಮಾವನ್ನು ನಿರ್ದೇಶಿಸಿದ್ದು, ಸಿನಿಮಾಕ್ಕೆ ಮೋಹನ್‌ ಲೋಕನಾಥನ್‌ ಛಾಯಾಗ್ರಹಣ, ಪಿ. ಆರ್‌. ಸೌಂದರ ರಾಜ್‌ ಸಂಕಲನವಿದೆ. ಈ ಹಿಂದೆ ತೆರೆಕಂಡಿದ್ದ “ದಗಲ್ ಬಾಜಿಲು” ತುಳು ಚಿತ್ರದ ಜೋಡಿ ಆದ ನಿರ್ದೇಶಕ ವೈಭವ್ ಪ್ರಶಾಂತ್ ಹಾಗೂ ನಾಯಕ ವಿಘ್ನೇಶ್ ಮತ್ತೊಮ್ಮೆ ಜೊತೆಯಾಗಿ ಕ್ಲಾಂತ ಚಿತ್ರದ ಮೂಲಕ ಮತ್ತೊಂದು ಮೈಲಿಗಲ್ಲು ಸಾಧಿಸಲು ಸಜ್ಜಾಗಿದ್ದಾರೆ.

ಸಿನಿಮಾದ ಮೂರು ಹಾಡುಗಳಿಗೆ ಎಸ್‌. ಪಿ ಚಂದ್ರಕಾಂತ್‌ ಸಂಗೀತ ಸಂಯೋಜಿಸಿದ್ದಾರೆ. ವಿಜಯ ಪ್ರಕಾಶ್‌, ನಯನಾ ನಾಗರಾಜ್‌, ರಾಜೇಶ್‌ ಕೃಷ್ಣನ್‌, ಚೇತನ್‌, ಐರಾ ಆಚಾರ್ಯ ಮೊದಲಾದವರು ಗೀತೆಗಳಿಗೆ ಧ್ವನಿಯಾಗಿದ್ದಾರೆ. ಗುಂಡ್ಯಾ, ಕುಕ್ಕೆ ಸುಬ್ರಮಣ್ಯ, ಕಳಸ, ಮಂಗಳೂರು, ಬೆಂಗಳೂರು ಮೊದಲಾದ ಕಡೆಗಳಲ್ಲಿ “ಕ್ಲಾಂತ’ ಸಿನಿಮಾದ ಚಿತ್ರೀಕರಣ ಮಾಡಲಾಗಿದೆ. ಮುಖ್ಯ ಅಂಶ ಎಂದರೆ ಕೊರಗಜ್ಜ ದೇವರ ಪವಾಡವನ್ನು ಈ ಚಿತ್ರದಲ್ಲಿ ವಿಶೇಷವಾಗಿ ತೋರಿಸಲಾಗಿದೆ .

ಈಗಾಗಲೇ ಇದರ ಹಾಡು ಕೂಡ ತುಳುನಾಡಿನಲ್ಲಿ ಬಿಡುಗಡೆ ಆಗಿ ಬಹಳ ಜನಪ್ರಿಯಗೊಂಡಿದೆ. ‘ದಗಲ್ ಬಾಜಿಲು’ ಎಂಬ ತುಳು ಚಿತ್ರ ಮಾಡಿ ಗೆದ್ದಿರುವ ವೈಭವ್ ಪ್ರಶಾಂತ್ ಹಾಗೂ ವಿಘ್ನೇಶ್ ಕ್ಲಾಂತ ಸಿನಿಮಾ ಮೂಲಕ ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

Categories
ಸಿನಿ ಸುದ್ದಿ

ಸ್ಯಾಂಡಲ್ ವುಡ್ ಗೆ ಸೂಟ್ ಆದ ಕಲೀಂ ಪಾಷ: ದಿ ಸೂಟ್ ಮೂಲಕ ಸಿನಿಮಾ ರಂಗಕ್ಕೆ ಬಂದ ಪ್ರತಿಭೆ

ನಟರಾಗಿ, ಗಾಯಕರಾಗಿ, ಕವಿಯಾಗಿ, ಬರಹಗಾರರಾಗಿ ಗುರುತಿಸಿಕೊಂಡಿರುವ ಬಹುಮುಖ ಪ್ರತಿಭೆಯ ಕಲೀಮ್‍ ಪಾಷ, ಈಗ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುವುದಕ್ಕೆ ಸಜ್ಜಾಗಿದ್ದಾರೆ. ಅವರು ‘ದಿ ಸೂಟ್‍’ ಎನ್ನುವ ಚಿತ್ರದಲ್ಲಿ ನಟಿಸಿದ್ದು, ಮಾಲತಿ ಗೌಡ ನಿರ್ಮಿಸಿರುವ ಈ ಚಿತ್ರವನ್ನು ಭಗತ್‍ ರಾಜ್‍ ನಿರ್ದೇಶನ ಮಾಡಿದ್ದಾರೆ.


ಜೀವನದ ಹಲವು ಮುಖಗಳನ್ನು ಮತ್ತು ಭಾವನೆಗಳನ್ನು ಹಿಡಿದಿಡುವ ‘ದಿ ಸೂಟ್‍’ ಚಿತ್ರದಲ್ಲಿ ಕಲೀಮ್‍ ಪಾಷ ಅವರು ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ಕಲೀಮ್‍ ಅವರು ತಮ್ಮ ಪಾತ್ರವನ್ನು ಸಮರ್ಥವಾಗಿ ನಿರ್ವಹಿಸಿದ್ದು, ಮುಂದಿನ ದಿನಗಳಲ್ಲಿ ಉದಯೋನ್ಮುಖ ನಟರಿಗೆ ಮಾದರಿಯಾಗಲಿದ್ದಾರೆ ಎಂದು ಚಿತ್ರತಂಡದವರು ಅಭಿಪ್ರಾಯಪಟ್ಟಿದ್ದಾರೆ.


ಚಿತ್ರರಂಗಕ್ಕೆ ಹಲವು ನಟರು ಬಂದು ಹೋಗಿದ್ದಾರೆ. ಆದರೆ, ಕೆಲವರು ಮಾತ್ರ ಇಲ್ಲಿ ನೆಲೆಯೂರುವುದಕ್ಕೆ ಸಾಧ್ಯವಾಗಿದೆ. ಅದಕ್ಕೆ ಕಾರಣ ಅಭಿನಯ. ಕಲೀಂ ಪಾಷ ಅವರ ಪಾತ್ರ ಸಹ ಚಿತ್ರದ ಒಂದು ಹೈಲೈಟ್‍ ಆಗಿದ್ದು,

ಚಿತ್ರ ನೋಡುವ ಪ್ರೇಕ್ಷಕರಿಗೆ ಅವರು ಹಲವು ದಿಗ್ಗಜ ನಟರನ್ನು ತಮ್ಮ ಅಭಿನಯದಿಂದ ನೆನಪಿಸುತ್ತಾರೆ ಎಂದು ಚಿತ್ರತಂಡದವರು ಹೇಳುತ್ತಾರೆ.
‘ದಿ ಸೂಟ್‍’ ಚಿತ್ರವು 2024ರ ಜನವರಿಯಲ್ಲಿ ಬಿಡುಗಡೆ ಆಗುತ್ತಿದೆ.

error: Content is protected !!