Categories
ಸಿನಿ ಸುದ್ದಿ

ಕುದ್ರು ಎಂಬ ವಿಶೇಷ ಚಿತ್ರ: ಅಕ್ಟೋಬರ್ 13ಕ್ಕೆ ರಿಲೀಸ್

ಭಾಸ್ಕರ್ ನಾಯ್ಕ್ ಬರೆದು ನಿರ್ದೇಶಿಸಿ, ನಿರ್ಮಿಸಿರುವ, ಕರಾವಳಿ ಭಾಗದ ಕಥಾಹಂದರ ಹೊಂದಿರುವ “ಕುದ್ರು” ಚಿತ್ರ ಅಕ್ಟೋಬರ್ 13 ರಂದು ಬಿಡುಗಡೆಯಾಗುತ್ತಿದೆ.

“ಕುದ್ರು” ಎಂದರೆ ನೀರಿನಿಂದ ಸುತ್ತುವರೆದ ದ್ವೀಪ ಎಂದು ಮಾತು ಆರಂಭಿಸಿದ ನಿರ್ಮಾಪಕ ಕಮ್ ನಿರ್ದೇಶಕ ಭಾಸ್ಕರ್ ನಾಯ್ಕ್, ಈ ದ್ವೀಪದಲ್ಲಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಮೂರು ಕಟುಂಬಗಳು‌ ಸಹಬಾಳ್ವೆಯಿಂದ ಜೀವನ ನಡೆಸುತ್ತಿರುತ್ತಾರೆ. ಆ ಸಮಯದಲ್ಲಿ ವಾಟ್ಸಪ್ ಸಂದೇಶವೊಂದರಿಂದ ಎಲ್ಲರಲ್ಲೂ ಮನಸ್ತಾಪ ಬರುತ್ತದೆ. ಚಿತ್ರದ ಮೊದಲ ಭಾಗದ ಕಥೆ ಕಾಲೇಜಿನಲ್ಲಿ ನಡೆಯುತ್ತದೆ.

ಆನಂತರ ಕುತೂಹಲ ಮೂಡಿಸುವ ಕಥಾಹಂದರವಿದೆ. ಅದನ್ನು ಚಿತ್ರದಲ್ಲೇ ನೋಡಬೇಕು. ಉಡುಪಿ, ಮಲೆನಾಡು, ಗೋವಾ ಹಾಗೂ ಸೌದಿ ಅರೇಬಿಯಾದಲ್ಲಿ(ರಿಗ್) ಚಿತ್ರೀಕರಣವಾಗಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು ಹಾಗೂ ಟೀಸರ್ ಜನಪ್ರಿಯವಾಗಿದೆ ಎಂದರು.

ಈ ಚಿತ್ರದಲ್ಲಿ ಮುಸ್ಲಿಂ ಸಮುದಾಯದ ಹುಡುಗಿಯಾಗಿ ಕಾಣಿಸಿಕೊಂಡಿರುವುದಾಗಿ ನಟಿ ಡೈನ ಡಿಸೋಜ ತಿಳಿಸಿದರು. ನನ್ನದು ಈ ಚಿತ್ರದಲ್ಲಿ ಮುಸ್ಲಿಂ ಹುಡುಗನ ಪಾತ್ರವೆಂದರು ನಟ ಫರ್ಹಾನ್. ಚಿತ್ರೀಕರಣವಾದ ಸ್ಥಳಗಳ ಬಗ್ಗೆ ಛಾಯಾಗ್ರಾಹಕ ಶ್ರೀ ಪುರಾಣಿಕ್ ಮಾಹಿತಿ ನೀಡಿದರು .

“ಕುದ್ರು” ಚಿತ್ರದಲ್ಲಿ ಬ್ರಾಹ್ಮಣ ಹುಡುಗನಾಗಿ ಹರ್ಷಿತ್ ಶೆಟ್ಟಿ ಅಭಿನಯಿಸಿದ್ದಾರೆ. ಕ್ರಿಶ್ಚಿಯನ್ ಹುಡುಗನಾಗಿ ಗಾಡ್ವಿನ್ ಹಾಗೂ ಬ್ರಾಹ್ಮಣ ಹುಡುಗಿ ಪಾತ್ರದಲ್ಲಿ ನಾಯಕಿ ಪ್ರಿಯಾ ಹೆಗ್ಡೆ ನಟಿಸಿದ್ದಾರೆ. ಪ್ರತೀಕ್ ಕುಂದು ಸಂಗೀತ ನಿರ್ದೇಶನ ಹಾಗೂ ಶ್ರೀನಿವಾಸ್ ಕಲಾಲ್ ಅವರ ಸಂಕಲನವಿರುವ “ಕುದ್ರು” ಚಿತ್ರಕ್ಕೆ ಉಡುಪಿ ಕೃಷ್ಣ ಆಚಾರ್ ಸಂಭಾಷಣೆ ಬರೆದಿದ್ದಾರೆ.

Categories
ಸಿನಿ ಸುದ್ದಿ

ವೇಷ ಟ್ರೇಲರ್ ರಿಲೀಸ್

ಹಂಸಿನಿ ಕ್ರಿಯೇಷನ್ಸ್ ಬ್ಯಾನರ್ ನಡಿಯಲ್ಲಿ ರಾಘವೇಂದ್ರ ಡಿ.ಜಿ ನಿರ್ಮಿಸಿ ನಾಯಕನಟನಾಗಿ ಅಭಿನಯಿಸಿರುವ, ಕ್ರಷ್ಣ ನಾಡ್ಪಾಲ್ ನಿರ್ದೇಶನದ “ವೇಷ” ಚಿತ್ರದ ಟ್ರೇಲರ್ ಇತ್ತೀಚೆಗೆ A2 ಮ್ಯೂಸಿಕ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ‌, ಮರಿಟೈಗರ್ ವಿನೋದ್ ಪ್ರಭಾಕರ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್ ಹಾಗೂ ಸಂಭಾಷಣೆಕಾರ ಮಾಸ್ತಿ “ವೇಷ” ಚಿತ್ರದ ಟ್ರೇಲರ್ ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದರು.

ಜೀವನದಲ್ಲಿ ಎಲ್ಲರೂ ಒಂದಲ್ಲಾ ಒಂದು ರೀತಿ ” ವೇಷ” ಹಾಕುತ್ತಾರೆ. ನಮ್ಮ ಚಿತ್ರದಲ್ಲೂ ಹಾಗೆ, ನಾಯಕನಿಗೆ ಯಾವುದೊ ಒಂದು ಸಂದರ್ಭ “ವೇಷ” ಹಾಕುವ ಹಾಗೆ ಮಾಡುತ್ತದೆ. ಟ್ರೇಲರ್ ಮೂಲಕ ಹೊರಬಂದಿರುವ “ವೇಷ” ಸದ್ಯದಲ್ಲೇ ಚಿತ್ರಮಂದಿರಗಳಲ್ಲಿ ಬರಲಿದೆ.


ಈತನಕ ಕೆಲವು ಕಿರುಚಿತ್ರಗಳನ್ನು ನಿರ್ದೇಶಿಸಿರುವ ನನಗೆ ಹಿರಿತೆರೆಯಲ್ಲಿ ಇದು ಮೊದಲ ನಿರ್ದೇಶನದ ಚಿತ್ರ ಎನ್ನುತ್ತಾರೆ ನಿರ್ದೇಶಕ ಕೃಷ್ಣ ನಾಡ್ಪಾಲ್.

ನಾನು ಮೂಲತಃ ರಂಗಭೂಮಿ ಕಲಾವಿದ. ನಟನೆ ನನ್ನ ಹವ್ಯಾಸ. “ವೇಷ” ಚಿತ್ರ ಆರಂಭವಾದಾಗ ನಾಯಕನ ಹುಡುಕಾಟದಲ್ಲಿದ್ದೆವು. ಆನಂತರ ಅನಿರೀಕ್ಷಿತವಾಗಿ ನಾನೇ ಈ ಚಿತ್ರದ ನಾಯಕನಾಗಿ ನಟಿಸಿದ್ದೇನೆ. ನಿರ್ಮಾಣವನ್ನು ಮಾಡಿದ್ದೇನೆ. ವಿನೋದ್ ಪ್ರಭಾಕರ್ ಅವರು ನಮಗೆ ಮೊದಲಿನಿಂದಲೂ ಸಹಕಾರ ನೀಡುತ್ತಾ ಬಂದಿದ್ದಾರೆ. ವಿನೋದ್ ಪ್ರಭಾಕರ್ ಅವರಿಗೆ ಹಾಗೂ ಸಮಾರಂಭಕ್ಕೆ ಆಗಮಿಸಿರುವ ಗಣ್ಯರಿಗೆ ಧನ್ಯವಾದ ಎಂದರು ನಾಯಕ – ನಿರ್ಮಾಪಕ ರಾಘವೇಂದ್ರ,

ನಾಯಕಿ ನಿಧಿ ಮಾರೋಲಿ, ಸೌಖ್ಯ ಗೌಡ, ಚಿತ್ರದಲ್ಲಿ ಖಳನಾಯಕನಾಗಿ ನಟಿಸಿರುವ ಜಯ್ ಶೆಟ್ಟಿ, ರಾಜ ಅಲಿ, ಶಿಲ್ಪ ಕುಮಟಾ, ಸಾಹಸ ನಿರ್ದೇಶಕ ಜಾಗ್ವಾರ್ ಸಣ್ಣಪ್ಪ, ಸಂಗೀತ ನಿರ್ದೇಶಕ ಉತ್ತಮ್ ಸಾರಂಗ್ ಹಾಗೂ ಕ್ರಿಯೇಟಿವ್ ಹೆಡ್ ಕೀರ್ತನ್ ಶೆಟ್ಟಿ ಮುಂತಾದವರು ಮಾತಾಡಿದರು.


ಚಿತ್ರದ ವಿತರಣೆಯನ್ನ ಕೃಷಿ ಸ್ಟುಡಿಯೋಸ್ ಮತ್ತು ಸಚಿತ್ ಫಿಲ್ಮ್ಸ್ ನ ಮಾಲೀಕರಾದ ವೆಂಕಟ್ ಗೌಡ ಅವರು ಮಾಡಲಿದ್ದಾರೆ.

Categories
ಸಿನಿ ಸುದ್ದಿ

ಹೊಸಬರ ಲವ್ ಶುರು ಗುರು: ಅಕ್ಟೋಬರ್ 6ಕ್ಕೆ ಚಿತ್ರ ರಿಲೀಸ್

ಅಪ್ಪಟ ಕನ್ನಡ ಪ್ರತಿಭೆಗಳಿಗೆ ಅವಕಾಶ ನೀಡಿ ತೆಗೆದಿರುವ ಲವ್‌ ಚಿತ್ರ ಬಿಡುಗಡೆಗೆ ಅಣಿಯಾಗಿದೆ. ಚಿತ್ರದ ಟ್ರೇಲರ್‌ ಕೂಡ ಬಿಡುಗಡೆಯಾಗಿದ್ದು, ಪ್ರಾಮಿಸಿಂಗ್‌ ಆಗಿದೆ. ಲವ್‌ ಚಿತ್ರವನ್ನು ಅಕ್ಟೋಬರ್‌ 6ಕ್ಕೆ ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ. ಮಹೇಶ ಸಿ ಅಮ್ಮಳ್ಳಿದೊಡ್ಡಿ ಲವ್ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ಇದು ಇವರ ಎರಡನೇ ಹೆಜ್ಜೆ. ಈ ಹಿಂದೆ ಮಹೇಶ ಓ ಎಂಬ ಹಾರರ್ ಚಿತ್ರ ನಿರ್ದೇಶಿಸಿದ್ದು, ಈಗ ಪ್ರೇಮಕಥೆ ಮೂಲಕ ಪ್ರೇಕ್ಷಕರ ಎದುರು ಬರುತ್ತಿದ್ದಾರೆ.

ನಿರ್ದೇಶಕರಾದ ಮಹೇಶ ಸಿ ಅಮ್ಮಳ್ಳಿದೊಡ್ಡಿ ಮಾತನಾಡಿ, ನಮ್ಮ ಸಿನಿಮಾ ಅಕ್ಟೋಬರ್ 6ಕ್ಕೆ ರಿಲೀಸ್ ಆಗ್ತಿದೆ. ಬಿ ಕೆ ಗಂಗಾಧರ್ ಅವರು ಲವ್ ಸಿನಿಮಾ ವಿತರಣೆ ಮಾಡಿದ್ದು, ಎಲ್ಲಾ ಮಲ್ಟಿಫ್ಲೆಕ್ಸ್ ನಲ್ಲಿ ರಿಲೀಸ್ ಮಾಡಿದ್ದು, 30ಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಚಿತ್ರ ರಿಲೀಸ್ ಆಗ್ತಿದೆ ಎಂದರು.

ನಾಯಕಿ ವೃಷ ಪಾಟೀಲ ಮಾತನಾಡಿ, ಇದೇ ಅಕ್ಟೋಬರ್ 6ಕ್ಕೆ ಸಿನಿಮಾ ರಿಲೀಸ್ ಆಗ್ತಿದೆ. ಸ್ವಲ್ಪ ಭಯ ಇದೆ. ಮೊದಲ ಬಾರಿಗೆ ನಾನು ನಾಯಕಿಯಾಗಿ ನಟಿಸಿದ ಚಿತ್ರ ರಿಲೀಸ್ ಆಗ್ತಿದೆ. ಖುಷಿ ಜೊತೆಗೆ ಭಯನೂ ಇದೆ. ನಾನು ಸಿನಿಮಾ ನೋಡಲು ಕಾತುರಳಾಗಿದ್ದೇನೆ ಎಂದು ತಿಳಿಸಿದರು.

ನಾಯಕ ಪ್ರಜಯ್ ಜಯರಾಮ್ ಮಾತನಾಡಿ, ಸಿನಿಮಾ ಮಾಡಬೇಕು ಎಂದು ಹೊರಟಾಗ ಇಲ್ಲಿ ತನಕ ಬರುತ್ತದೆ ಎಂದು ಗೊತ್ತಿರಲಿಲ್ಲ. ಯಾಕಂದ್ರೆ ಹೊಸಬರ ಸಿನಿಮಾ. ಏನಾಗುತ್ತದೆ ಎಂಬ ಭಯ ಇತ್ತು. ಈಗ ಸಿನಿಮಾ ರಿಲೀಸ್ ಗೆ ರೆಡಿ ಇದೆ. ಹಿಂದೂ ಮುಸ್ಲಿಂ ಪ್ರೇಮಕಥೆ ಜೊತೆಗೆ ಮತ್ತೊಂದು ಪ್ರೇಮಕಥೆ ಸಿನಿಮಾದಲ್ಲಿದೆ ಎಂದರು.

ಪ್ರಜಯ್ ಜಯರಾಮ್ ಹಾಗೂ ವೃಷ ಪಾಟೀಲ ನಾಯಕ ಹಾಗೂ ನಾಯಕಿಯಾಗಿ ಸ್ಯಾಂಡಲ್ ವುಡ್ ಗೆ ಪರಿಚಯವಾಗುತ್ತಿದ್ದಾರೆ. ಕಾಂತಾರ ಸಿನಿಮಾ ಖ್ಯಾತಿಯ ಪ್ರಭಾಕರ್ ಕುಂದರ್ ಬ್ರಹ್ಮಾವರ, ಸತೀಶ್ ಕಾಂತಾರ ಸೇರಿದಂತೆ ಉಮೇಶ್ ಶ್ರೀಕಾಂತ್ ತೇಲಿ, ರಾಧಿಕಾ ಭಟ್, ತಿಲಕ, ಪ್ರಸಾದ್ ಭಟ್, ಹರೀಶ್ ಶೆಟ್ಟಿ, ಸೌರಭ್ ಶಾಸ್ತ್ರೀ, ರಜತ್ ಶೆಟ್ಟಿ ಹಲವರು ಚಿತ್ರದ ಭಾಗವಾಗಿದ್ದಾರೆ.

ಶ್ರೀಕಾಲ ಭೈರವೇಶ್ವರ ಮೂವೀ‌ ಮೇಕರ್ಸ್ ನಡಿ ದಿವಾಕರ್ ಲವ್ ಚಿತ್ರ ನಿರ್ಮಿಸುತ್ತಿದ್ದು, ಸಿದ್ದಾರ್ಥ್ ಹೆಚ್ ಆರ್ ಛಾಯಾಗ್ರಹಣ, ರೋಸಿತ್ ವಿಜಯನ್, ಶ್ರೀ ಸಾಯಿ ಕಿರಣ್ ಸಂಗೀತ, ಶಿವಪ್ರಸಾದ್ ಹಿನ್ನೆಲೆ ಸಂಗೀತ, ಲೋಕೇಶ್ ಪುಟ್ಟೇಗೌಡ ಸಂಕಲನ ಸಿನಿಮಾದ ಶ್ರೀಮಂತಿಕೆ ಹೆಚ್ಚಿಸಿದೆ.

ನೈಜ ಘಟನೆಯ ಪ್ರೇರಿತವಾದ ಕಥೆಯಾಗಿರುವ ಲವ್ ಸಿನಿಮಾವನ್ನು ಉಡುಪಿ, ಕೋಟ, ಕುಂದಾಪುರ, ಬೈಂದೂರ್, ಬಾಗಲಕೋಟೆ ಮತ್ತು ಬೆಂಗಳೂರಿನಲ್ಲಿ ಚಿತ್ರೀಕರಿಸಲಾಗಿದೆ. ಅಕ್ಟೋಬರ್‌ 6ಕ್ಕೆ ಲವ್ ಸಿನಿಮಾ ತೆರೆಗೆ ಬರ್ತಿದ್ದು, ಪೊಗರು ಸಿನಿಮಾ ನಿರ್ಮಿಸಿದ್ದ ಬಿಕೆ ಗಂಗಾಧರ್ ರಾಜ್ಯಾದ್ಯಂತ ಚಿತ್ರ ವಿತರಣೆ ಮಾಡಲಿದ್ದಾರೆ.
.

Categories
ಸಿನಿ ಸುದ್ದಿ

ಕನ್ನಡತಿ ಆದಿ ಈಗ ಹೀರೋ: ರಕ್ಷಿತ್ ಚೊಚ್ಚಲ ಸಿನಿಮಾಗೆ ಮಹೇಶ್ ಬಾಬು ನಿರ್ದೇಶನ

ಕನ್ನಡ ಕಿರುತೆರೆಲೋಕದಲ್ಲಿ ಜನಪ್ರಿಯ ಧಾರಾವಾಹಿ ಕನ್ನಡತಿ ಮೂಲಕ ಕಿರುತೆರೆ ಪ್ರೇಕ್ಷಕರ ಮನೆ ಮನ ಗೆದ್ದವರು ಆದಿ ಊರೂಫ್ ಸ್ಮೈಲ್ ಗುರು ರಕ್ಷಿತ್…ತಕಧಿಮಿತ, ಡ್ಯಾನ್ಸ್ ಡ್ಯಾನ್ಸ್ ರಿಯಾಲಿಟಿ ಶೋಗಳಲ್ಲಿ ಮಿಂಚಿರುವ ರಕ್ಷಿತ್, ಪದ್ಮಾವತಿ ಸೀರಿಯಲ್ ಮೂಲಕ ಕಿರುತೆರೆ ಪಯಣ ಆರಂಭಿಸಿ ಈಗ ಬೆಳ್ಳಿತೆರೆಗೂ ಎಂಟ್ರಿ ಕೊಡುತ್ತಿದ್ದಾರೆ.

ಸ್ಮೈಲ್ ಗುರು ರಕ್ಷಿತ್ ಸ್ಯಾಂಡಲ್ ವುಡ್ ಗೆ ನಾಯಕನಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಇವರ ಚೊಚ್ಚಲ ಕನಸ್ಸಿನ ಅರಸು, ಆಕಾಶನಂತಹ ಬ್ಲಾಕ್ ಬಸ್ಟರ್ ಹಿಟ್ ಸಿನಿಮಾ ಕೊಟ್ಟಿರುವ ಮಹೇಶ್ ಬಾಬು ಜೊತೆಯಾಗಿ ನಿಂತಿದ್ದಾರೆ. ಅರ್ಥಾತ್ ರಕ್ಷಿತ್ ನಾಯಕನಾಗಿ ನಟಿಸುತ್ತಿರುವ ಮೊದಲ ಸಿನಿಮಾಗೆ ಮಹೇಶ್ ಬಾಬು ಆಕ್ಷನ್ ಕಟ್ ಹೇಳುತ್ತಿದ್ದಾರೆ.

ಮಹೇಶ್ ಬಾಬು ಹಾಗೂ ರಕ್ಷಿತ್ ಕಾಂಬಿನೇಷನ್ ನಲ್ಲಿ ಮೂಡಿಬರ್ತಿರುವ ಸಿನಿಮಾ ಕಲ್ಟ್ ಪ್ರೇಮಕಥಾಹಂದರ ಹೊಂದಿದೆ. ಸ್ಕ್ರೀಪ್ಟ್ ಕೆಲಸಗಳು ಭರದಿಂದ ಸಾಗುತ್ತಿದ್ದು, ಜನವರಿ ತಿಂಗಳಿಂದ ಶೂಟಿಂಗ್ ಅಖಾಡಕ್ಕೆ ಧುಮುಕಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ. ಲೀಡಿಂಗ್ ಸ್ಟ್ಯಾಂಡಿಂಗ್ ಮೇಕರ್ಸ್ ಎಂಎಂಎಂ
ಗ್ರೂಫ್ಸ್ ಈ ಸಿನಿಮಾಗೆ ಬಂಡವಾಳ ಹೂಡುತ್ತಿದೆ.

ಕಿರುತೆರೆ ಮೂಲಕ ಪ್ರೇಕ್ಷಕರನ್ನು ರಂಜಿಸಿರುವ ಕನ್ನಡತಿ ಆದಿ ಕನ್ನಡ ಚಿತ್ರರಂಗದಲ್ಲಿ ನಾಯಕನಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ನಟನೆ ಜೊತೆಗೆ ಅದ್ಭುತ ಡ್ಯಾನ್ಸರ್ ಆಗಿರುವ ಸ್ಮೈಲ್ ಗುರು ರಕ್ಷಿತ್ ತಮ್ಮದೇ ಸ್ಮೈಲ್ ಗುರು ಡ್ಯಾನ್ಸ್ ಗ್ಯಾರೇಜ್ ಮೂಲಕ ಡ್ಯಾನ್ಸಿಂಗ್ ಟ್ರೈನಿಂಗ್ ನೀಡುತ್ತಿದ್ದಾರೆ. ಒಂದಷ್ಟು ತಯಾರಿಗಳೊಂದಿಗೆ ರಕ್ಷಿತ್ ಸ್ಯಾಂಡಲ್ ವುಡ್ ಗೆ ಅಡಿ ಇಡುತ್ತಿದ್ದು, ಪ್ರೇಮಕಥೆಗಳ ಸೂತ್ರಧಾರ ಮಹೇಶ್ ಬಾಬು ಈ ಬಾರಿ ಯಾವ ರೀತಿ ಕಥೆಯೊಂದಿಗೆ ಪ್ರೇಕ್ಷಕರ ಎದುರು ಹಾಜರಾಗಲಿದ್ದಾರೆ ನೋಡಬೇಕು..

Categories
ಸಿನಿ ಸುದ್ದಿ

ಗನ್ಸ್ ಅಂಡ್‌ ರೋಸಸ್ ಸಿನಿಮಾಗೆ ವಿಜಯ್ ಪ್ರಕಾಶ್ ಹಾಡು

ಗಾಯಕ ವಿಜಯ್ ಪ್ರಕಾಶ್, “ಗನ್ಸ್ ಅಂಡ್ ರೋಸಸ್” ಚಿತ್ರದ ಹಾಡೊಂದನ್ನು ‌ಹಾಡಿದ್ದಾರೆ. ಶರಣ್ ಕುಮಾರ್ ಅವರು ಬರೆದಿರುವ “108 ಗೆ ಫೋನ್ ಮಾಡೋ ಶಿಷ್ಯ. ಸಾವು ಬದುಕಿನ ಮಧ್ಯೆ ಹೋರಾಡೋ ವಿಷ್ಯ” ಎಂಬ ಹಾಡನ್ನು ವಿಜಯ್ ಪ್ರಕಾಶ್ ಅವರು ಹಾಡಿದ್ದು, ಇತ್ತೀಚೆಗೆ ಹೊಸಕೆರೆಹಳ್ಳಿಯ ದ್ವಾರ ಸ್ಟುಡಿಯೋದಲ್ಲಿ ಧ್ವನಿಮುದ್ರವಾಯಿತು. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರಿನಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ.

ರಾಜಕೀಯದಲ್ಲಿ ಸಕ್ರಿಯರಾಗಿರುವ ಉದ್ಯಮಿ ಹೆಚ್ ಆರ್ ನಟರಾಜ್ ನಿರ್ಮಾಣ ಮಾಡುತ್ತಿರುವ ಈ ಚಿತ್ರವನ್ನು ಹೆಚ್ ಎಸ್ ಶ್ರೀನಿವಾಸ್ ಕುಮಾರ್ ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಶರತ್ ಎಸ್ ಅವರದು. ಶಶಿಕುಮಾರ್ ಸಂಗೀತ ನಿರ್ದೇಶನ, ಆರ್ ಜನಾರ್ದನ್ ಛಾಯಾಗ್ರಹಣ, ಸಂಜೀವ ರೆಡ್ಡಿ ಸಂಕಲನ ಹಾಗೂ ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಕಥೆಗಾರರಾದ ಅಜಯ್ ಕುಮಾರ್ ಅವರ ಪುತ್ರ ಅರ್ಜುನ್ ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ನಾಯಕಿ ಯಶ್ಚಿಕ ನಿಷ್ಕಲ. ಶೋಭ್ ರಾಜ್, ಅವಿನಾಶ್, ಅಶ್ವಥ್ ನೀನಾಸಂ, ಹರೀಶ್, ಜೀವನ್ ರಿಚಿ, ಅರುಣಾ ಬಾಲರಾಜ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ‌.

Categories
ಸಿನಿ ಸುದ್ದಿ

ಭಗೀರಥನಿಗೆ ಬಿರುಸಿನ ಚಿತ್ರೀಕರಣ

ಸಾಯಿ ರಮೇಶ್ ಪ್ರೊಡಕ್ಷನ್ ಲಾಂಛನದಲ್ಲಿ ಕೆ.ರಮೇಶ್ ಹಾಗೂ ಬಿ.ಭೈರಪ್ಪ ಮೈಸೂರು ನಿರ್ಮಿಸುತ್ತಿರುವ ಹಾಗೂ ರಾಮ್ ಜನಾರ್ದನ್ ನಿರ್ದೇಶನದ “ಭಗೀರಥ” ಚಿತ್ರಕ್ಕೆ ಮೈಸೂರು, ಮಡಿಕೇರಿ ಸುತ್ತಮುತ್ತ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ.

ಈವರೆಗೂ ಎರಡು ಹಾಡುಗಳ, ನಾಲ್ಕು ಸಾಹಸ ಸನ್ನಿವೇಶಗಳ ಹಾಗೂ ಮಾತಿನ ಭಾಗದ ಚಿತ್ರೀಕರಣ ನಡೆದಿದೆ. ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನದಲ್ಲಿ ನಾಲ್ಕೂ ಸಾಹಸ ಸನ್ನಿವೇಶಗಳು ಮೂಡಿಬಂದಿದೆ.

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ತಾರಾಬಳಗದಲ್ಲಿ ಜಯಪ್ರಕಾಶ್, ಚಂದನ ರಾಘವೇಂದ್ರ, ಸುಧಾ ಬೆಳವಾಡಿ, ಶಿವರಾಜ್ ಕೆ.ಆರ್ ಪೇಟೆ, ರವಿಕಾಳೆ, ಬಾಲ ರಾಜವಾಡಿ, ನಯನ, ಸುರಭಿ ರವಿ ಮುಂತಾದವರಿದ್ದಾರೆ.

ಪ್ರದೀಪ್ ವರ್ಮ ಸಂಗೀತ ನೀಡಿರುವ ಈ ಚಿತ್ರಕ್ಕೆ ಸೂರಿ ಚಿತ್ತೂರು ಅವರ ಛಾಯಾಗ್ರಹಣವಿದೆ. ರವಿಚಂದ್ರನ್ ಸಂಕಲನ , ಮೋಹನ್ ರಾಸು ಸಹ ನಿರ್ದೇಶನ ಹಾಗೂ ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನ “ಭಗೀರಥ” ಚಿತ್ರಕ್ಕಿದೆ.

Categories
ಸಿನಿ ಸುದ್ದಿ

ವೈಜಾಕ್ ರಾಜು ಪುತ್ರ ಕನ್ನಡಕ್ಕೆ ಬಂದ್ರು: ಅಥರ್ವ ಮೂಲಕ ಕಾರ್ತಿಕ್ ರಾಜು ಎಂಟ್ರಿ

“ಮನೆ ದೇವ್ರು”, ” ಹಾಲುಂಡ ತವರು”, “ಕರುಳಿನ ಕೂಗು” ಮುಂತಾದ ಯಶಸ್ವಿ ಚಿತ್ರಗಳ ನಿರ್ಮಾಪಕ ವೈಜಾಕ್ ರಾಜು ಅವರ ಪುತ್ರ ಕಾರ್ತಿಕ್ ರಾಜು “ಅಥರ್ವ” ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. “ಅಥರ್ವ” ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ನಿರ್ಮಾಣವಾಗಿದೆ.

ನಮ್ಮ ತಂದೆ ವೈಜಾಕ್ ರಾಜು, ಕನ್ನಡದಲ್ಲಿ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ. ನಾನು ತೆಲುಗಿನಲ್ಲಿ ಕೆಲವು ಸಿನಿಮಾಗಳಲ್ಲಿ ನಾಯಕನಾಗಿ ನಟಿಸಿದ್ದೇನೆ. ಕನ್ನಡದಲ್ಲಿ ಇದು ಮೊದಲ ಚಿತ್ರ. ಕನ್ನಡ ಚಿತ್ರದಲ್ಲಿ ನಾಯಕನಾಗಿ ನಟಿಸಬೇಕೆಂಬ ನನ್ನ ಬಹುದಿನ ಕನಸು ಈಗ ಈಡೇರಿದೆ. ಇದಕ್ಕೂ ಮೊದಲು ನಾನು ಪುನೀತ್ ರಾಜಕುಮಾರ್ ಅವರ “ವೀರ ಕನ್ನಡಿಗ” ಚಿತ್ರದಲ್ಲಿ ಸಣ್ಣ ಪಾತ್ರದಲ್ಲಿ ಕಾಣಿಸಿಕೊಂಡಿದ್ದೆ. “ಅಥರ್ವ” ಒಂದು ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ. ಮಹೇಶ್ ರೆಡ್ಡಿ ಈ ಚಿತ್ರದ ನಿರ್ದೇಶಕರು. ನುರಿತ ಕಲಾವಿದರು ಹಾಗೂ ತಂತ್ರಜ್ಞರು ಈ ಚಿತ್ರದಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಚಿತ್ರೀಕರಣ ಮುಕ್ತಾಯವಾಗಿದೆ. ನವೆಂಬರ್ ನಲ್ಲಿ ತೆರೆಗೆ ಬರುವ ಸಾಧ್ಯತೆ ಇದೆ ಎಂದು ಚಿತ್ರದ ನಾಯಕ ಕಾರ್ತಿಕ್ ರಾಜು ತಿಳಿಸಿದರು.

ನಾನು ಮೂಲತಃ ಸಾಫ್ಟ್‌ವೇರ್ ಎಂಜಿನಿಯರ್. ಅನೇಕ ನಿರ್ದೇಶಕರೊಂದಿಗೆ ಕೆಲಸ ಮಾಡಿದ್ದೇನೆ. ನಿರ್ದೇಶಕನಾಗಿ ಇದು ನನ್ನ ಚೊಚ್ಚಲ ಚಿತ್ರ. ಕ್ಲೂಸ್ ಡಿಪಾರ್ಟ್ಮೆಂಟ್ ಎಂಬುದು ಪೊಲೀಸ್ ಡಿಪಾರ್ಟ್ಮೆಂಟ್ ವ್ಯಾಪ್ತಿಗೆ ಬರುತ್ತದೆ. ಈ ಕ್ಲೂಸ್ ಡಿಪಾರ್ಟ್ಮೆಂಟ್ ಬಳಸಿಕೊಂಡು ಹೆಚ್ಚಿನ ಸಿನಿಮಾಗಳು ಬಂದಿಲ್ಲ. ನಮ್ಮ ಚಿತ್ರದಲ್ಲಿ ಒಂದು ಕೊಲೆಯ ಸತ್ಯವನ್ನು ತಿಳಿಯಲು ಕ್ಲೂಸ್ ಡಿಪಾರ್ಟ್ಮೆಂಟ್ ಎಷ್ಟು ಮುಖ್ಯ ಎಂಬುದನ್ನು ತೋರಿಸಿದ್ದೇವೆ.‌ ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ. ನೋಡಿ ಹಾರೈಸಿ ಎನ್ನುತ್ತಾರೆ ನಿರ್ದೇಶಕ ಮಹೇಶ್ ರೆಡ್ಡಿ.

ಚಿತ್ರದಲ್ಲಿ ಪತ್ರಕರ್ತೆಯ ಪಾತ್ರ ನಿರ್ವಹಿಸಿರುವುದಾಗಿ ನಾಯಕಿ ಸಿಮ್ರಾನ್ ಹೇಳಿದರು. ನಿರ್ಮಾಪಕ ಸುಭಾಷ್ ನೂತಲಪಾಟಿ , ಹಿರಿಯ ನಿರ್ಮಾಪಕ ವೈಜಾಕ್ ರಾಜು ಹಾಗೂ ವಿತರಕ ಮಾರ್ಸ್ ಸುರೇಶ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Categories
ಸಿನಿ ಸುದ್ದಿ

ಮಾಫಿಯಾಗೆ ಮಾತು ಮುಗೀತು: ಇದು ಪ್ರಜ್ವಲ್ ಸಿನಿಮಾ

ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸಿರುವ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ, ಅದಿತಿ ಪ್ರಭುದೇವ ನಾಯಕಿಯಾಗಿ ನಟಿಸಿರುವ ಹಾಗೂ ಲೋಹಿತ್ ಹೆಚ್ ನಿರ್ದೇಶಿಸಿರುವ “ಮಾಫಿಯಾ” ಚಿತ್ರಕ್ಕೆ ಸಾಧುಕೋಕಿಲ ಅವರ ಲೂಪ್ ಸ್ಟುಡಿಯೋದಲ್ಲಿ ಡಬ್ಬಿಂಗ್ ಮುಕ್ತಾಯವಾಗಿದೆ. ಅಕ್ಟೋಬರ್ ನಲ್ಲಿ ಟೀಸರ್ ಬರಲಿದ್ದು, ನವೆಂಬರ್ ಅಂತ್ಯದ ವೇಳೆಗೆ ಸಿನಿಮಾ ತೆರೆಗೆ ಬರಲಿದೆ.

ಆಕ್ಷನ್ ಜಾನರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರು, ಮೈಸೂರು ಹಾಗೂ ಹೈದರಾಬಾದ್ ನಲ್ಲಿ ಚಿತ್ರೀಕರಣ ನಡೆದಿದೆ.

ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಮೈನವಿರೇಳಿಸುವ ಐದು ಸಾಹಸ ಸನ್ನಿವೇಶಗಳಿದೆ. ಈ ಚಿತ್ರಕ್ಕಾಗಿ ಪ್ರಜ್ವಲ್ ಅವರು ಸಾಕಷ್ಟು ಶ್ರಮವಹಿಸಿದ್ದಾರೆ.

ಈ ಚಿತ್ರದಲ್ಲಿ ನಾಲ್ಕು ಹಾಡುಗಳಿದೆ. ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ಎಸ್ ಪಾಂಡಿಕುಮಾರ್ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ, ದೇವರಾಜ್ , ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.

Categories
ಸಿನಿ ಸುದ್ದಿ

ತಾರಿಣಿ ಇದು ಗರ್ಭಿಣಿ ಚಿತ್ರ: ಹೆಣ್ಣು ಮಗುವಿನ ಕಥೆ; ಫಸ್ಟ್ ಲುಕ್ ರಿಲೀಸ್

ಮಮತ ರಾಹುತ್ ನಾಯಕಿಯಾಗಿ ನಟಿಸಿರುವ, ಸಿದ್ದು ಪೂರ್ಣಚಂದ್ರ ನಿರ್ದೇಶನದ “ತಾರಿಣಿ” ಚಿತ್ರ ಗರ್ಭಿಣಿಯ ಕುರಿತಾದ ಕಥಾಹಂದರ ಹೊಂದಿದೆ. ಈ ಚಿತ್ರದ ಮೊದಲ ನೋಟ(ಫಸ್ಟ್ ಲುಕ್) ಇತ್ತೀಚೆಗೆ ಬಿಡುಗಡೆಯಾಯಿತು. ಸಾಹಿತಿ, ಹೋರಾಟಗಾರ್ತಿ ಬಿ.ಟಿ.ಲಲಿತ ನಾಯಕ್ ಸೇರಿದಂತೆ ಹಲವು ಗಣ್ಯರು “ತಾರಿಣಿ” ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು.

“ತಾರಿಣಿ” ಗರ್ಭಿಣಿ ಹೆಣ್ಣಿನ ಕಥೆಯನ್ನು ಹೊಂದಿರುವ ಚಿತ್ರ ಎಂದು ಮಾತು ಆರಂಭಿಸಿದ ನಿರ್ದೇಶಕ ಸಿದ್ದು ಪೂರ್ಣಚಂದ್ರ, ಈ ಚಿತ್ರದ ವಿಶೇಷವೆಂದರೆ, ನಾಯಕಿ ಮಮತ ರಾಹುತ್ ಅವರು ಗರ್ಭಿಣಿ ಇರುವಾಗಲೇ ಈ ಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು. ಗರ್ಭಿಣಿ ಕುರಿತಾದ ಚಿತ್ರದಲ್ಲಿ ನಿಜವಾದ ಗರ್ಭಿಣಿಯೇ ನಟಿಸಿದ್ದಾರೆ. ಮಗು ಆದ ನಂತರವೂ ಅಭಿನಯಿಸಿದ್ದಾರೆ. ಅವರಿಗೆ ಅನಂತ ಧನ್ಯವಾದ. ಹೆಣ್ಣು ಭ್ರೂಣ ಹತ್ಯೆ ಮಾಡಬೇಡಿ ಎಂಬ ಉತ್ತಮ ಸಂದೇಶವಿರುವ ಈ ಚಿತ್ರವನ್ನು ಮಮತ ರಾಹುತ್ ಅವರ ಪತಿ ಸುರೇಶ್ ಕೊಟ್ಯಾನ್ ಚಿತ್ರಾಪು ಅವರು ಶ್ರೀಗಜನಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸಿದ್ದಾರೆ. ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ನೋಡಿ ಹಾರೈಸಿ ಎಂದರು.

ನಾನು ಏಳು ತಿಂಗಳ ಗರ್ಭಿಣಿ ಇದ್ದಾಗ ಈ ಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಂಡೆ. ಕೆಲವು ದಿನಗಳ ಚಿತ್ರೀಕರಣ ನಂತರ ನನಗೆ ಅವಧಿಗೂ ಕೆಲವು ದಿನಗಳ ಮುಂಚೆಯೇ ಹೆರಿಗೆ ಆಯಿತು. ಆನಂತರ ಕೂಡ ನಾನು ಚಿತ್ರೀಕರಣದಲ್ಲಿ ಭಾಗಿಯಾದೆ. ನನ್ನ ಮಗು ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದೆ. ಇಂದು ನಾನು ನಿಮ್ಮೆಲ್ಲರಿಗೂ ನನ್ನ ಮಗುವನ್ನು ಪರಿಚಯಿಸುತ್ತಿದ್ದೇನೆ. ನಮ್ಮ ಮೊದಲ ನಿರ್ಮಾಣದ ಚಿತ್ರವಾಗಿರುವುದರಿಂದ ಹೆಚ್ಚಿನ ಜವಾಬ್ದಾರಿ ನನ್ನ ಮೇಲಿತ್ತು. ಚಿತ್ರ ಚೆನ್ನಾಗಿ ಬಂದಿದೆ. ಇಡೀ ತಂಡಕ್ಕೆ ಧನ್ಯವಾದ ಎಂದರು ನಾಯಕಿ ಮಮತಾ ರಾಹುತ್.

ನಮ್ಮ ಮೊದಲ ನಿರ್ಮಾಣದ ಚಿತ್ರವಿದು. ಒಳ್ಳೆಯ ಕಥೆ ನೀಡಿರುವ ನಿರ್ದೇಶಕರಿಗೆ, ಆ ಕಥೆಗೆ ಜೀವ ತುಂಬಿರುವ ಕಲಾವಿದರಿಗೆ ಹಾಗೂ ತಂತ್ರಜ್ಞರಿಗೆ ನನ್ನ ಧನ್ಯವಾದ. ಸಮಾಜಕ್ಕೆ ಈ ಚಿತ್ರ ಉತ್ತಮ ಸಂದೇಶ ಕೊಡಲಿದೆ ಎಂದರು ನಿರ್ಮಾಪಕ ಸುರೇಶ್ ಕೊಟ್ಯಾನ್ ಚಿತ್ರಾಪು.

ಚಿತ್ರದ ನಾಯಕ ರೋಹಿತ್ ಸೇರಿದಂತೆ ಅನೇಕ ಕಲಾವಿದರು ಹಾಗೂ ತಂತ್ರಜ್ಞರು “ತಾರಿಣಿ” ಚಿತ್ರದ ಕುರಿತು ಮಾತನಾಡಿದರು.

“ತಾರಿಣಿ” ಯಾಗಿ ಮಮತ ರಾಹುತ್ ನಟಿಸಿದ್ದು, ನಾಯಕನಾಗಿ ರೋಹಿತ್ ಅಭಿನಯಿಸಿದ್ದಾರೆ. ಭವಾನಿ ಪ್ರಕಾಶ್, ಸುಧಾ ಪ್ರಸನ್ನ, ಡಾ.ಸುರೇಶ್ ಚಿತ್ರಾಪು, ಪ್ರಮಿಳಾ ಸುಬ್ರಹ್ಮಣ್ಯಂ, ವಿಜಯಲಕ್ಷ್ಮಿ, ದೀಪಿಕಾಗೌಡ, ಸನ್ನಿ, ತೇಜಸ್ವಿನಿ, ಕವಿತ ಕಂಬಾರ್, ಬೇಬಿ ನಿಶಿತಾ, ಬೇಬಿ ರಿಧಿ, ಪ್ರಿನ್ಸ್ ಜಿತಿನ್ ಕೋಟ್ಯಾನ್, ಮಟಿಲ್ಡಾ ಡಿಸೋಜ, ಅರ್ಚನ ಗಾಯಕ್ವಾಡ್, ಶೀಬಾ ಮೂರ್ತಿ, ಶ್ವೇತಾ, ಚೈತ್ರ, ಮಂಜು ನಂಜನಗೂಡು, ರಘು ಸಮರ್ಥ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

Categories
ಸಿನಿ ಸುದ್ದಿ

ಅರೆಸ್ಟ್ ಮಿ ಬೇಬಿ… ರಿಲೀಸ್ ಆಯ್ತು ರಕ್ತಾಕ್ಷ ಸಿನಿಮಾದ ಜವಾರಿ ಸಾಂಗ್ : ಹಾಡಿಗೆ ರೋಹಿತ್ ಸ್ಟೆಪ್

ಜವಾರಿ ಹುಡ್ಗನ ಜಬರ್ದಸ್ತ್ ಜವಾರಿ ಸಾಂಗ್ ರಿಲೀಸ್ ಆಗಿದೆ. ಅರೆಸ್ಟ್ ಮಿ ಬೇಬಿ ಎನ್ನುತ್ತಾ ಉತ್ತರ ಕರ್ನಾಟಕದ ಪ್ರತಿಭೆ ರೋಹಿತ್ ರಕ್ತಾಕ್ಷ ಸಾಂಗ್ ಗೆ ಹೆಜ್ಜೆ ಹಾಕಿದ್ದಾರೆ. ರಕ್ತಾಕ್ಷ ಸಿನಿಮಾ ಮೂಲಕ ನಾಯಕನಾಗಿ ಮೊದಲ ಹೆಜ್ಜೆ ಇಡ್ತಿರುವ ರೋಹಿತ್ ನಿರ್ಮಾಪಕನ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಆಕ್ಷನ್ ಟೀಸರ್ ಮೂಲಕ ಜಬರ್ದಸ್ತ್ ಆಕ್ಷನ್ ಪ್ರದರ್ಶಿಸಿದ್ದ ಈ ಹುಡ್ಗ ಈ ಜವಾರಿ ಹಾಡಿನ ಮೂಲಕ ಕಿಕ್ ಏರಿಸಿದ್ದಾರೆ.

ರೋಹಿತ್ ಕುಣಿದಿರುವ ಅರೆಸ್ಟ್ ಮೀ ಬೇಬಿ ಹಾಡಿಗೆ ಸುಜಿತ್ ವೆಂಕಟರಾಮಯ್ಯ ಕ್ಯಾಚಿ ಮ್ಯಾಚಿ ಪದ ಪೊಣಿಸಿದ್ದು, ಸುಪ್ರಿಯಾ ರಾಮ್ ಜೊತೆ ಕಂಠ ಕುಣಿಸುವುದರ ಜೊತೆಗೆ ಡೋಸ್ಮೋಡ್ ಸಂಗೀತ ಒದಗಿಸಿದ್ದಾರೆ. ಪಕ್ಕ ಉತ್ತರ ಕರ್ನಾಟಕದ ಸ್ಟೈಲ್ ನಲ್ಲಿ ಮೂಡಿಬಂದಿರುವ ಸಿಂಗಿಂಗ್ ಮಸ್ತಿಗೆ ಒಳ್ಳೆ ರೆಸ್ಪಾನ್ಸ್ ಸಿಕ್ತಿದೆ.

ರೋಹಿತ್ ಈಗಾಗಲೇ ಮಾಡೆಲಿಂಗ್ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ‘ರಕ್ತಾಕ್ಷ’ ಸಿನಿಮಾ ಮೂಲಕ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲು ಸಜ್ಜಾಗಿದ್ದಾರೆ. ಹೀರೋ ಆಗಿರುವ ಜೊತೆಗೆ ತಮ್ಮದೇ ಸಾಯಿ ಪ್ರೊಡಕ್ಷನ್ ಹೌಸ್ ನಿರ್ಮಾಣ ಸಂಸ್ಥೆಯ ಮೂಲಕ ‘ರಕ್ತಾಕ್ಷ’ ಸಿನಿಮಾವನ್ನು ನಿರ್ಮಾಣ ಸಹ ಮಾಡಿದ್ದಾರೆ.

ವಾಸುದೇವ ಎಸ್.ಎನ್ ‘ರಕ್ತಾಕ್ಷ’ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ರೋಹಿತ್ ರೀತಿಯಲ್ಲಿಯೇ ವಾಸುದೇವ್ ಅವರಿಗೂ ಇದು ಮೊದಲ ಸಿನಿಮಾ. ರೋಹಿತ್, ವಾಸುದೇವ್ ಜೊತೆಗೆ ಇನ್ನೊಂದಿಷ್ಟು ಹೊಸ ಪ್ರತಿಭೆಗಳು ಸೇರಿ ಈ ಸಿನಿಮಾವನ್ನು ಮಾಡಿವೆ. ಧೀರೇಂದ್ರ ಡಾಸ್ ಈ ಸಿನಿಮಾಕ್ಕೆ ಸಂಗೀತ ನೀಡಿದ್ದಾರೆ.

ಚಿತ್ರಕ್ಕೆ ಸುಜಿತ್ ವೆಂಕಟರಾಮಯ್ಯ ಸಾಹಿತ್ಯ ಬರೆದಿದ್ದಾರೆ, ಸಂಗೀತವನ್ನು ಧೀರೇಂದ್ರ ಡಾಸ್ ನೀಡಿದ್ದಾರೆ. ಕೆಜಿಎಫ್ ಸಿನಿಮಾದಲ್ಲಿ ನಟಿಸಿರುವ ರೂಪಾ ರಾಯಪ್ಪ, ಅರ್ಚನಾ ಕೊಟ್ಟಿಗೆ, ರಚನಾ ದಶರತ್, ಗುರುದೇವ್ ನಾಗರಾಜ, ರಾಮಣ್ಣ, ವಿಲಾಸ್, ಪ್ರಭು, ವಿಶ್ವ, ಭದ್ರಿ, ನಾರಾಯಣ, ಬಸವರಾಜ ಆದಾಪುರ್, ಭರತ್ ನಟಿಸಿದ್ದಾರೆ. ಖಳನಾಯಕ ಪಾತ್ರದಲ್ಲಿ ನಟ ಪ್ರಮೋದ್ ಶೆಟ್ಟಿ ನಟಿಸಿದ್ದಾರೆ. ‘ರಕ್ತಾಕ್ಷ’ ಸಿನಿಮಾದ ಟೈಟಲ್ ಟ್ರ್ಯಾಕ್ ಅನ್ನು ವಸಿಷ್ಠ ಸಿಂಹ ಹಾಡಿದ್ದು ಹಾಡು ಬಿಡುಗಡೆ ಆಗಿ ಒಳ್ಳೆಯ ಪ್ರತಿಕ್ರಿಯೆ ಪಡೆದಿದೆ.

error: Content is protected !!