Categories
ಸಿನಿ ಸುದ್ದಿ

ರೂಪೇಶ್ ಶೆಟ್ಟಿ – ಜಾಹ್ನವಿ ಹೊರಡಿಸಿದ ಅಧಿಪತ್ರ: ಹೊಸ ಸಿನಿಮಾಗೆ ಪೂಜೆ

ಬಿಗ್ ಬಾಸ್ ಖ್ಯಾತಿಯ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ನಟನೆಯ ಅಧಿಪತ್ರ ಸಿನಿಮಾ ಇಂದು ಸೆಟ್ಟೇರಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ಸನ್ನಿಧಿಯಲ್ಲಿ ಮುಹೂರ್ತ ನೆರವೇರಿದೆ. ಈಗಾಗಲೇ ತುಳು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ರೂಪೇಶ್ ಸ್ಯಾಂಡಲ್ವುಡ್ನಲ್ಲಿ ಹೊಸ ಹೆಜ್ಜೆ ಇಟ್ಟಿದ್ದಾರೆ.

ನಟ ರೂಪೇಶ್ ಶೆಟ್ಟಿ ಮಾತನಾಡಿ, ಬಿಗ್ ಬಾಸ್ ಆದ್ಮೇಲೆ ಕನ್ನಡ ಸಿನಿಮಾ ಯಾವಾಗ ಎಂದು ಎಲ್ಲರೂ ಕೇಳುತ್ತಿದ್ದರು. ಬಿಗ್ ಬಾಸ್ ಗೂ ಮುಂಚೆ ಸರ್ಕಸ್ ಎಂಬ ತುಳು ಸಿನಿಮಾ ನಿರ್ದೇಶನ ಮಾಡಿ ನಟಿಸಿದ್ದೆ. ಆ ಚಿತ್ರದ ಕೆಲಸ ತುಂಬಾ ಇತ್ತು. ಈ ಚಿತ್ರದ ಕೆಲಸ ಮುಗಿಸಿ ಬೇರೆ ಸಿನಿಮಾದ ಒಪ್ಪಿಕೊಳ್ಳುವುದು ಎಂದು ತೀರ್ಮಾನ ಮಾಡಿದ್ದೆ. ದೇವರ ದಯೆಯಿಂದ ಆ ಚಿತ್ರ ಹಿಟ್ ಆಗಿದೆ. 150 ಥಿಯೇಟರ್ ಗಳಲ್ಲಿ ಓಡಿದೆ. ಅಧಿಪತ್ರ ಸಿನಿಮಾ ನಿರ್ದೇಶಕರು ಕಥೆ ಹೇಳಿದಾಗ ಇಂಟ್ರೆಸ್ಟ್ ಎನಿಸಿತು. ಅವರ ಮೊದಲ ಸಿನಿಮಾವಾದರೂ ಸ್ಕ್ರೀನ್ ಪ್ಲೇ ವಿವರಿಸಿದಾಗ ಎಷ್ಟು ತಯಾರಾಗಿದ್ದರೂ ಎಂದರೆ ಪ್ರತಿ ಸೀನ್ ಡ್ರಾಯಿಂಗ್ ಮಾಡಿಕೊಂಡಿದ್ದರು. ನನಗೆ ಅದನ್ನು ನೋಡಿ ತುಂಬಾ ಧೈರ್ಯ ಬಂತು. ಅವರಿಗೆ ಒಂದು ವಿಷನ್ ಇದೆ. ಈ ಕಾರಣದಿಂದ ಅಧಿಪತ್ರ ಸಿನಿಮಾ ಒಪ್ಪಿಕೊಂಡಿದ್ದೇನೆ. ಸದ್ಯದಲ್ಲಿ ಈ ಚಿತ್ರಕ್ಕಾಗಿ ನನ್ನ ಗೆಟಪ್ ಬದಲಾಗಲಿದೆ ಎಂದರು.

ನಟಿ ಜಾಹ್ನವಿ ಮಾತನಾಡಿ, ಅಧಿಪತ್ರ ಸಿನಿಮಾ ಈಗ ಶುರುವಾಗಿದೆ. ಇವತ್ತು ಮುಹೂರ್ತ ಆಗಿದೆ. ಈ ರೀತಿ ಒಂದು ಸಿನಿಮಾ ಬರ್ತಿದೆ ಅಂದಾಗಲೇ ತುಂಬಾ ಚೆನ್ನಾಗಿ ಪ್ರಮೋಷನ್ ಸಿಕ್ತಿದೆ. ಟೈಟಲ್ ತುಂಬಾ ಕ್ಯಾಚಿಯಾಗಿದೆ. ನನ್ನ ಪಾತ್ರದ ಹೆಸರು ಬೃಹತಿ. ನನ್ನ ಪಾತ್ರದ ರೀತಿ ಲ್ಲಾ ಪಾತ್ರದ ಹೆಸರು ಕೂಡ ವಿಭಿನ್ನವಾಗಿದೆ. ಈ ಸಿನಿಮಾ ತುಂಬಾ ಪಾಸಿಟಿವ್ ಆಗಿದೆ ಎಂದರು.

ನಿರ್ದೇಶಕ ಚಹನ್ ಶೆಟ್ಟಿ ಮಾತನಾಡಿ, ರೂಪೇಶ್ ಶೆಟ್ಟಿ ಹುಟ್ಟಹಬ್ಬಕ್ಕೆ ಟೈಟಲ್ ಅನೌನ್ಸ್ ಮಾಡಿದ್ದೆವು. ಆ ದಿನವೇ ನಮಗೆ ಒಳ್ಳೆ ಪ್ರೋತ್ಸಾಹ ಸಿಕ್ಕಿದೆ. ರೂಪೇಶ್ ಶೆಟ್ಟಿ ಅವರ ಹಿಂದಿನ ಸಿನಿಮಾಗಳಿಗಿಂತ ಈ ಚಿತ್ರದಲ್ಲಿ ವಿಭಿನ್ನ ಪಾತ್ರ ನಿರ್ವಹಿಸಲಿದ್ದಾರೆ. ಗಣೇಶ್ ಹಬ್ಬದ ಬಳಿಕ ಶೂಟಿಂಗ್ ಶುರುವಾಗಲಿದೆ. ಚಿತ್ರದಲ್ಲಿ ಎರಡು ಹಾಡುಗಳಿವೆ.

ತುಳು ಸಿನಿಮಾರಂಗದಲ್ಲಿ ರೂಪೇಶ್ ಶೆಟ್ಟಿಗೆ ಸಾಕಷ್ಟು ಅನುಭವ ಇದೆ. ಸಿನಿಮಾದ ನಾನಾ ವಿಭಾಗಳಲ್ಲಿ ಕೆಲಸ ಮಾಡಿದ್ದಾರೆ. ನಟನಾಗಿ ಮತ್ತು ನಿರ್ದೇಶಕನಾಗಿ ಅವರು ಅಲ್ಲಿ ನೆಲೆ ಕಂಡುಕೊಂಡಿದ್ದಾರೆ. ಬಿಗ್ ಬಾಸ್ಗೆ ಕಾಲಿಟ್ಟ ಬಳಿಕ ಅವರಿಗೆ ಜನಪ್ರಿಯತೆ ಹೆಚ್ಚಾಯಿತು. ಬಿಗ್ ಬಾಸ್ ವಿನ್ ಆದ ಬಳಿಕ ಅವರು ತುಳು ಭಾಷೆಯ ‘ಸರ್ಕಸ್’ ಸಿನಿಮಾವನ್ನು ನಿರ್ದೇಶಿಸಿ, ನಿರ್ಮಾಣ ಮಾಡಿದರು. ಆ ಸಿನಿಮಾದಿಂದ ಅವರಿಗೆ ದೊಡ್ಡ ಯಶಸ್ಸು ಸಿಕ್ಕಿತು. ಕನ್ನಡದಲ್ಲಿ ಸ್ವಲ್ಪ ತಡವಾಗಿ ಆದರೂ ಪರವಾಗಿಲ್ಲ, ಒಂದು ಒಳ್ಳೆಯ ಕಥೆಯ ಮೂಲಕ, ಡಿಫರೆಂಟ್ ಆದಂತಹ ಪಾತ್ರದ ಮೂಲಕ ಪ್ರೇಕ್ಷಕರ ಎದುರು ಬರಬೇಕು ಎಂಬುದು ರೂಪೇಶ್ ಶೆಟ್ಟಿ ಅವರ ಉದ್ದೇಶ ಆಗಿತ್ತು. ಅದೆಲ್ಲವನ್ನೂ ಗಮನದಲ್ಲಿ ಇಟ್ಟುಕೊಂಡು ಅವರು ‘ಅಧಿಪತ್ರ’ ಸಿನಿಮಾ ಒಪ್ಪಿಕೊಂಡಿದ್ದಾರೆ.

ಸುದ್ದಿವಾಹಿನಿಯಲ್ಲಿ ನಿರೂಪಕಿಯಾಗಿ ಗುರುತಿಸಿಕೊಂಡಿರುವ ಜಾಹ್ನವಿ, ಅಲ್ಲಿಂದ ಕಿರುತೆರೆ ರಿಯಾಲಿಟಿ ಶೋಗಳಲ್ಲಿಯೂ ಕಣಕ್ಕಿಳಿದು ಇದೀಗ ನೇರವಾಗಿ ಸಿನಿಮಾ ನಾಯಕಿಯಾಗಿ ಹೊಸ ಇನ್ನಿಂಗ್ಸ್‌ ಆರಂಭಿಸಿದ್ದಾರೆ. ರೂಪೇಶ್‌ ಶೆಟ್ಟಿ ಅಧಿಪತ್ರ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ.

ಈ ಹಿಂದೆ ಕೆಲವು ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ಹಾಗೂ ಇವರು ನಿರ್ದೇಶನ ಮಾಡಿದ ಶಾರ್ಟ್ ಫಿಲಂ ಸಾಮಾಜಿಕ ಜಾಲತಾಣಗಳಲ್ಲಿ ಉತ್ತಮ ಪ್ರಶಂಸೆ ಪಡೆದಿತ್ತು ಹಾಗೂ ಕೆಲವು ಜಾಹಿರಾತು ಗಳಿಗೆ ನಿರ್ದೇಶನ ಮಾಡಿರುವ ಅನುಭವ ಹೊಂದಿರುವ ಚಯನ್ ಶೆಟ್ಟಿ, ಅಧಿಪತ್ರ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈ ಸಿನಿಮಾಕ್ಕೆ
ಕೆ ಆರ್ ಸಿನಿಕಂಬೈನ್ಸ್ ಬ್ಯಾನರ್ ಬಂಡವಾಳ ಹೂಡುತ್ತಿದ್ದು, ನೈಜ ಘಟನೆಯಿಂದ ಸ್ಫೂರ್ತಿ ಪಡೆದು ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯಲ್ಲಿ ಸಿನಿಮಾ ಮೂಡಿಬರಲಿದೆ.

Categories
ಸಿನಿ ಸುದ್ದಿ

ನಿಖಿಲ್‌ ಕುಮಾರ್ ಹೊಸ ಸಿನಿಮಾಗೆ ಅದ್ಧೂರಿ ಮುಹೂರ್ತ: ಪ್ರತಿಷ್ಠಿತ ಲೈಕಾ ಪ್ರೊಡಕ್ಷನ್ಸ್ ನಿರ್ಮಾಣ

ನಿಖಿಲ್ ಕುಮಾರ್ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಅದ್ಧೂರಿಯಾಗಿ ನೆರವೇರಿದೆ.
ಮಾಜಿ ಪ್ರಧಾನ ಮಂತ್ರಿಗಳಾದ ಹೆಚ್ ಡಿ ದೇವೇಗೌಡ ಅವರು ಕಾರ್ಯಕ್ರಮಕ್ಕೆ ಆಗಮಿಸಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ಮಾಜಿ ಮುಖ್ಯಮಂತ್ರಿಗಳಾದ ಹೆಚ್. ಡಿ. ಕುಮಾರಸ್ವಾಮಿ ನೂತನ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು.

ದಕ್ಷಿಣ ಭಾರತದ ಹೆಸರಾಂತ ಚಿತ್ರ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ಸಂಸ್ಥೆ ಈಗ ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದೆ. ಈ ಚಿತ್ರದ ನಾಯಕನಾಗಿ ನಾನು ನಟಿಸುತ್ತಿದ್ದೇನೆ. ಲಕ್ಷ್ಮಣ್ ಅವರು ಈ ಚಿತ್ರದ ನಿರ್ದೇಶಕರು. ಈ ಹಿಂದೆ “ಸೀತಾರಾಮ ಕಲ್ಯಾಣ” ಚಿತ್ರದ ಆಡಿಯೋ ಬಿಡುಗಡೆ ಸಮಾರಂಭಕ್ಕೆ ಲೈಕಾ ಸಂಸ್ಥೆಯ ಸುಭಾಸ್ಕರನ್ ಅವರು ಆಗಮಿಸಿದ್ದರು.

“ನಮ್ಮ ಸಂಸ್ಥೆಯ ನಿರ್ಮಾಣದ ಚಿತ್ರದಲ್ಲಿ ನೀವು ನಾಯಕರಾಗಿ ನಟಿಸಬೇಕು” ಎಂದು ಸುಭಾಸ್ಕರನ್ ಅವರು ಹೇಳಿದ್ದರು. ಈಗ ಚಿತ್ರ ಆರಂಭವಾಗುತ್ತಿದೆ. ಈ ಚಿತ್ರಕ್ಕಾಗಿ ನಿರ್ದೇಶಕರು ಒಂದು ವರ್ಷದಿಂದ ಬೆಂಗಳೂರಿನಲ್ಲೇ ಇದ್ದು ಕೆಲಸ ಮಾಡುತ್ತಿದ್ದಾರೆ. ಸದ್ಯದಲ್ಲೇ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡುವುದಾಗಿ ನಿಖಿಲ್ ಕುಮಾರ್ ತಿಳಿಸಿದರು.

ತಮ್ಮ‌ ತಂಡವನ್ನು ಪರಿಚಯಿಸುತ್ತಾ ಮಾತು ಪ್ರಾರಂಭಿಸಿದ ನಿರ್ದೇಶಕ ಲಕ್ಷ್ಮಣ್, ಕನ್ನಡದಲ್ಲಿ ಇದು ನನ್ನ ಮೊದಲ ಚಿತ್ರ. ನಾನು ಬರೆದ ಕಥೆಯನ್ನು ಒಪ್ಪಿ ಚಿತ್ರ ನಿರ್ಮಾಣಕ್ಕೆ ಮುಂದಾಗಿರುವ ನಿರ್ಮಾಪಕರಿಗೆ ಹಾಗೂ ನಾಯಕ ನಿಖಿಲ್ ಕುಮಾರ್ ಅವರಿಗೆ ಧನ್ಯವಾದ. ಒಳ್ಳೆಯ ತಂಡದೊಂದಿಗೆ ಒಳ್ಳೆಯ ಚಿತ್ರ ನೀಡುವ ನಂಬಿಕೆ ಇದೆ. ಮುಂದಿನ ದಿನಗಳಲ್ಲಿ ಚಿತ್ರದ ಕುರಿತು ಹೆಚ್ಚಿನ ವಿವರಣೆ ನೀಡುತ್ತೇನೆ. ನಿಮ್ಮೆಲ್ಲರ ಹಾರೈಕೆ ಇರಲಿ ಎಂದರು.

ಈ ಚಿತ್ರದಲ್ಲಿ ನಟಿಸುವಂತೆ ನಿಖಿಲ್ ಅವರು ಹೇಳಿದರು. ನಾನು ಕಥೆ ಕೇಳಿ ಒಪ್ಪಿಕೊಂಡೆ. ಕಥೆ ಚೆನ್ನಾಗಿದೆ ಎಂದರು ನಟ ಕೋಮಲ್.

ಲೈಕಾ ಪ್ರೊಡಕ್ಷನ್ಸ್ ಸಂಸ್ಥೆಯ ಮೂಲಕ ನಿರ್ಮಾಣವಾಗುತ್ತಿರುವ ಮೊದಲ ಕನ್ನಡ ಚಿತ್ರವಿದು. ಚಿತ್ರ ಯಶಸ್ವಿಯಾಗಲಿ ಎಂದು ಲೈಕಾ ಪ್ರೊಡಕ್ಷನ್ಸ್ ಮುಖ್ಯಸ್ಥರಾದ ಸುಭಾಸ್ಕರನ್ ಅವರು ಹಾರೈಸಿದರು.

ನಾಯಕಿ ಯುಕ್ತಿ ತರೇಜ ಸಹ ನೂತನ ಚಿತ್ರದ ಕುರಿತು ಮಾತನಾಡಿದರು. ಹಲವಾರು ತಂತ್ರಜ್ಞರು ಹಾಗೂ ಗಣ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು.

Categories
ಸಿನಿ ಸುದ್ದಿ

ಅವ್ರು ಕರಟಕ ಇವ್ರು ದಮನಕ! ಮುಕ್ತಾಯ ಹಂತದಲ್ಲಿ ಶಿವಣ್ಣ-ಪ್ರಭುದೇವ ಸಿನಿಮಾ

ಕರುನಾಡ ಚಕ್ರವರ್ತಿ ಶಿವರಾಜಕುಮಾರ್ , ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ಅಭಿನಯದ, ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಹಾಗೂ ಯೋಗರಾಜ್ ಭಟ್ ನಿರ್ದೇಶನದ “ಕರಟಕ ದಮನಕ” ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ.

ಚಿತ್ರ ಪ್ರಾರಂಭವಾಗಿ ಒಂದು ವರ್ಷಗಳಾಗಿದೆ ಎಂದು ಮಾತು ಆರಂಭಿಸಿದ ನಿರ್ದೇಶಕ ಯೋಗರಾಜ್ ಭಟ್, “ಕರಟಕ ದಮನಕ” ಎಂದರೆ ಎರಡು ಕುತಂತ್ರಿ ನರಿಗಳ ಹೆಸರು. ಸಾಮಾನ್ಯವಾಗಿ ಇಬ್ಬರನ್ನು ಹೆಚ್ಚು ಸಲ ಒಟ್ಟಾಗಿ ನೋಡಿದಾಗ “ಕರಟಕ ದಮನಕ” ಎನ್ನುವುದು ಉಂಟು. ನಮ್ಮ ಚಿತ್ರದಲ್ಲಿ ಈ ಪಾತ್ರಗಳನ್ನು ಶಿವಣ್ಣ ಹಾಗೂ ಪ್ರಭುದೇವ ಮಾಡಿದ್ದಾರೆ.

ಅವರಿಬ್ಬರ ಎನರ್ಜಿ ನೋಡಿದರೆ ನಿಜಕ್ಕೂ ಖುಷಿಯಾಗುತ್ತದೆ. ರಾಕ್ ಲೈನ್ ವೆಂಕಟೇಶ್ ಅವರು ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ವಿ.ಹರಿಕೃಷ್ಣ ಸಂಗೀತ ಸಂಯೋಜನೆಯ ಏಳು ಹಾಡುಗಳು ಚಿತ್ರದಲ್ಲಿವೆ. ಸಂತೋಷ್ ರೈ ಪಾತಾಜೆ ಈ ಚಿತ್ರದ ಛಾಯಾಗ್ರಾಹಕರು. ನಿಶ್ವಿಕಾ ನಾಯ್ಡು, ಪ್ರಿಯಾ ಆನಂದ್ ನಾಯಕಿಯರು. ಮುಖ್ಯ ಮಂತ್ರಿ ಚಂದ್ರು ಹಾಗೂ ತನಿಕೆಲ್ಲ ಭರಣಿ ಇದ್ದಾರೆ.
ನಾನು ಹಾಗೂ ರಾಕ್ ಲೈನ್ ವೆಂಕಟೇಶ್ ಅವರು ಸಹ ನಟಿಸಿದ್ದೇವೆ. ತೊಂಭತ್ತು ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಹಾಡಿನ ಚಿತ್ರೀಕರಣ ಬಾಕಿ ಇದೆ ಎಂದರು.

ನಮ್ಮ ಸಂಸ್ಥೆಯಿಂದ ಶಿವರಾಜಕುಮಾರ್ ಅವರ ಚಿತ್ರ ಬಂದು ಬಹಳ ವರ್ಷಗಳಾಗಿತ್ತು. ಪ್ರಭುದೇವ ಅವರ ಚಿತ್ರ ನಿರ್ಮಾಣ ಮಾಡುವುದು ನನ್ನ ಕನಸಾಗಿತ್ತು. ಈ ಇಬ್ಬರು ನಟರು ಈ ಚಿತ್ರದಲ್ಲಿ ಅಭಿನಯಿಸುತ್ತಿರುವುದು ನಿಜಕ್ಕೂ ಖುಷಿಯ ವಿಚಾರ. ಯೋಗರಾಜ್ ಭಟ್ ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. ಹರಿಕೃಷ್ಣ ಸುಮಧುರ ಹಾಡುಗಳನ್ನು ನೀಡುತ್ತಿದ್ದಾರೆ ಎಂದರು ನಿರ್ಮಾಪಕ ರಾಕ್ ಲೈನ್ ವೆಂಕಟೇಶ್.

ರಾಕ್ ಲೈನ್ ಪ್ರೊಡಕ್ಷನ್ಸ್ ನನ್ನ ಕುಟುಂಬವಿದಂತೆ. ಇನ್ನು ಯೋಗರಾಜ್ ಭಟ್ ಅವರ ಚಿತ್ರಗಳು ನನಗೆ ಇಷ್ಟ. ಅವರ ಎಷ್ಟೋ ಚಿತ್ರಗಳನ್ನು ಚಿತ್ರಮಂದಿರಕ್ಕೆ ಹೋಗಿ ನೋಡಿದ್ದೇನೆ. ಅವರ ನಿರ್ದೇಶನದಲ್ಲಿ ನಟಿಸುತ್ತಿರುವುದು ಸಂತೋಷ. ಗೆಳೆಯ ಪ್ರಭುದೇವ ಹಾಗೂ ನಾನು ಈ ಚಿತ್ರದಲ್ಲಿ ಒಟ್ಟಿಗೆ ಅಭಿನಯಿಸುತ್ತಿದ್ದೇವೆ. ಈ ಚಿತ್ರದಲ್ಲೂ ನಾವಿಬ್ಬರು ಸ್ನೇಹಿತರಾಗಿಯೇ ನಟಿಸುತ್ತಿದ್ದೇವೆ ಎಂದು ಶಿವರಾಜಕುಮಾರ್ ತಿಳಿಸಿದರು.

ಶಿವರಾಜಕುಮಾರ್ ಅವರ ಎನರ್ಜಿ ನೋಡಿದರೆ ಖುಷಿಯಾಗುತ್ತದೆ. ಅವರ ಜೊತೆ ನಟಿಸುತ್ತಿರುವುದು ಹೆಚ್ಚಿನ ಸಂತಸ ತಂದಿದೆ. ಯೋಗರಾಜ್ ಭಟ್ ಅವರ ನಿರ್ದೇಶನ ಹಾಗೂ ಎಲ್ಲಾ ಕಲಾವಿದರ ಅಭಿನಯ ಚೆನ್ನಾಗಿದೆ ಎಂದರು ಪ್ರಭುದೇವ.

ನಾಯಕಿಯರಾದ ನಿಶ್ವಿಕಾ ನಾಯ್ಡು, ಪ್ರಿಯ ಆನಂದ್, ಹಿರಿಯ ಕಲಾವಿದರಾದ ಮುಖ್ಯ ಮಂತ್ರಿ ಚಂದ್ರು, ತನಿಕೆಲ್ಲ ಭರಣಿ
ತಮ್ಮ ಪಾತ್ರಗಳ ಬಗ್ಗೆ ಮಾತನಾಡಿದರು. ‌ಛಾಯಾಗ್ರಹಣದ ಬಗ್ಗೆ ಸಂತೋಷ್ ರೈ ಪಾತಾಜೆ ಮಾತನಾಡಿದರು.

Categories
ಸಿನಿ ಸುದ್ದಿ

ಅನಿರುದ್ಧ್ ಅಡುಗೆ ಹೇಗೆ ಮಾಡ್ತಾರೆ ಗೊತ್ತಾ? ಶೆಫ್ ಚಿದಂಬರನಿಗೆ ಬಾಣಸಿಗರ ತರಬೇತಿ!

ನಟ ಅನಿರುದ್ದ್ ನಾಯಕರಾಗಿ ನಟಿಸುತ್ತಿರುವ ಶೆಫ್ ಚಿದಂಬರ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನಡೆದಿತ್ತು. ಈಗ ಮೊದಲ ಹಂತದ ಚಿತ್ರೀಕರಣ ಯಶಸ್ವಿಯಾಗಿ ಮುಕ್ತಾಯವಾಗಿದೆ.

ಅನಿರುದ್ದ್ ಈ ಚಿತ್ರದಲ್ಲಿ ಶೆಫ್” ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಪಾತ್ರಕ್ಕಾಗಿ ಅನಿರುದ್ದ್ ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಅನಿರುದ್ದ್ ಅವರಿಗೆ ಹೆಸರಾಂತ ಬಾಣಸಿಗರು ತರಬೇತಿ ನೀಡುತ್ತಿದ್ದಾರೆ. ಈ ಟ್ರೈನಿಂಗ್ ವಿಡಿಯೋವನ್ನು ಚಿತ್ರತಂಡ ಬಿಡುಗಡೆ ಮಾಡಿದೆ.

ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ರೂಪ ಡಿ.ಎನ್ ನಿರ್ಮಿಸುತ್ತಿರುವ ಈ ಚಿತ್ರವನ್ನು ಎಂ.ಆನಂದರಾಜ್ ನಿರ್ದೇಶಿಸುತ್ತಿದ್ದಾರೆ. ರೆಚೆಲ್ ಡೇವಿಡ್ ಹಾಗೂ ನಿಧಿ ಸುಬ್ಬಯ್ಯ ಈ ಚಿತ್ರದ ನಾಯಕಿಯರು.

Categories
ಸಿನಿ ಸುದ್ದಿ

ಹೊಸ ಬಾಳಿಗೆ ಜೊತೆಯಾದ ನಟಿ ಹರ್ಷಿಕಾ, ಭುವನ್: ಕೊಡವ ಸಂಪ್ರದಾಯದ ಮದುವೆ

ಕೊಡಗಿನ ವಿರಾಜಪೇಟೆಯ ಅಮ್ಮಾತಿ ಕೊಡವ ಸಮಾಜದಲ್ಲಿ ಆಗಸ್ಟ್ 24ರಂದು ನಟಿ ಹರ್ಷಿಕಾ ಹಾಗು ನಟ‌ ಭುವನ್ ಅವರ ನಡೆದ ವಿವಾಹ ವಿಜೃಂಭಣೆಯಿಂದ ನೆರವೇರಿತು. ಎರಡು ದಿನಗಳ ಕಾಲ ನಡೆದ ಕೊಡವ ಶೈಲಿಯ ಅದ್ದೂರಿ ವಿವಾಹಕ್ಕೆ ಅನೇಕ ಸಿನಿಮಾ ತಾರೆಯರು‌ ಸಾಕ್ಷಿಯಾದರು. ಮೊದಲ ದಿನ ಊರು ಕೂಡುವ ಶಾಸ್ತ್ರ ನಡೆಯಿತು. ಊರು ಕೂಡವ ಶಾಸ್ತ್ರದ ದಿನವೇ ತಾಯಿಯಿಂದ ಹರ್ಷಿಕಾಗೆ ಮಾಂಗಲ್ಯಧಾರಣೆ ಆಯಿತು.

ನಂತರ ವಧು ಮತ್ತು ವರ ಇಬ್ಬರೂ ಪರಸ್ಪರ ನೋಡುವ ಆಗಿಲ್ಲ. ಎರಡನೇ ದಿನ ಇಬ್ಬರಿಗೂ ಹಿರಿಯರಿಂದ ಪ್ರತ್ಯೇಕವಾಗಿ ಮೆಹಂದಿ ಶಾಸ್ತ್ರ ನೆರವೇರಿತು.

ಬೆಳಗ್ಗೆ ಬಳೆ ಶಾಸ್ತ್ರನಂತರ ಪೊಂಬಣ ಪೂಜೆ, ಅಂದರೆ ವರ ಪೂಜೆ ರೀತಿಯ ಪೂಜೆ.ಹುಡುಗ ಮಂಟಪಕ್ಕೆ ಬಂದು ಬಾಳೆ ಕಟ್ ಮಾಡಲು ಹೊರಟು ಬಾಳೆ ಕಡೆದು ಬರುವ ಪದ್ಧತಿ ನಡೆಯಿತು. ಆಗ ಅವನನ್ನ ಹುಡುಗಿ ಮನೆಯವರು ಕರೆದುಕೊಂಡು ಹೋಗುವುದು ವಾಡಿಕೆ. ಅದೂ ಕೂಡ ವಿಶೇಷವಾಗಿ‌ ನೆರವೇರಿತು.

ನಂತರ ಬಂದ ಹುಡುಗನಿಗೆ ಹುಡುಗಿ ಅಮ್ಮ ಹಾಲು ಬಾಳೆ ಹಣ್ಣು ಅನ್ನ ತಿನ್ನಿಸುವ ಶಾಸ್ತ್ರ ನಡೆಯಿತು.
ಅದಾದ ಮೇಲೆ ಹುಡುಗ ಹುಡುಗಿಯನ್ನ ವೇದಿಕೆ ಮೇಲೆ ಕೂರಿಸಿ ಮಹೂರ್ತಕ್ಕೆ ಅಣಿಯಾಗುತ್ತಾರೆ.

ಮದುವೆಗೆ ಬಂದ ಅತಿಥಿಗಳೆಲ್ಲ ಹುಡುಗ ಹುಡುಗಿಗೆ ಅಕ್ಷತೆ ಕಾಳು ಹಾಕಿ ಆಶೀರ್ವಾದ ಮಾಡುತ್ತಾರೆ.
ಕೊನೆಯಲ್ಲಿ ಹುಡುಗ ಹುಡುಗಿ ಕೈ ಹಿಡಿದು ಎದ್ದು ನಿಲ್ಲುತ್ತಾರೆ.

ಬಗೆ ಬಗೆಯ ಭೋಜನ

ಕೊಡವ ಜೋಡಿಯ ಮದ್ವೆಯಲ್ಲಿ ಬಗೆ ಬಗೆಯ ಭೋಜನ ಸಿದ್ಧವಾಗಿತ್ತು.
ನಾನ್ ವೆಜ್, ವೆಜ್ ಎರಡು ಶೈಲಿಯ ಊಟದ‌ ವ್ಯವಸ್ಥೆ ಆಯೋಜಿಸಲಾಗಿತ್ತು. ಕೊಡವ ಶೈಲಿಯ , ನೂಪಟ್ಟು, ಪೋರ್ಕ್ ಪ್ರೈ, ಪೋರ್ಕ್ ಕರಿ, ಮಟನ್ ಬಿರ್ಯಾನಿ, ಮಟನ್ ಪ್ರೈ, ಚಿಕನ್ ಪ್ರೈ ಇತ್ಯಾದಿ ರೆಡಿಯಾಗಿತ್ತು.

ವೆಜ್ ಪ್ರಿಯರಿಗೆ ವೆಜಿಟೇಬಲ್ ಪಲಾವ್ , ಅಲಸಂದೆ ಪಲ್ಯ,ಬೆಂಡೆ ಪ್ರೈ, ಅನಾನಸ್ ಕರಿ, ಈರುಳ್ಳಿ ಕರಿ, ಮೊಸರು ವಡೆ, ತೆಂಗಿನ ಹಾಲು ,ವೆಜ್ ಕುರ್ಮಾ ಇತ್ಯಾದಿ ಖಾದ್ಯ ತಯಾರಾಗಿತ್ತು.

Categories
ಸಿನಿ ಸುದ್ದಿ

ಡಾಲಿ ಈಗ ಜೀಬ್ರಾ! ಹುಟ್ದಬ್ಬಕ್ಕೆ ಜೀಬ್ರಾ ಪೋಸ್ಟರ್ ರಿಲೀಸ್

ಡಾಲಿ ಧನಂಜಯ್ ಹುಟ್ಟು ಹಬ್ಬಕ್ಕೆ ಒಂದಷ್ಟು ಹೊಸ ಸಿನಿಮಾಗಳು ಅನೌನ್ಸ್ ಆಗಿವೆ. ಆ ಸಾಲಿಗೆ ಈಗ ‘ಜೀಬ್ರಾ’ ಸಿನಿಮಾ ಕೂಡ ಸೇರಿದೆ. ವಿಶೇಷ ಅಂದರೆ ಈ ಸಿನಿಮಾ ಸದ್ದಿಲ್ಲದೆ ಚಿತ್ರೀಕರಣ ವಕೂಡ ನಡೆದಿದೆ.

ಮಲ್ಟಿ ಸ್ಟಾರರ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಡಾಲಿ ಎಂಟ್ರಿ ಕೊಡುತ್ತಿದ್ದಾರೆ.
ಜೀಬ್ರಾ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಲಿದ್ದಾರೆ ಡಾಲಿ ಧನಂಜಯ.

ಅಂದಹಾಗೆ ಈ ಸಿನಿಮಾಗೆ ಈ ಶ್ವರ್ ಕಾರ್ತಿಕ್ ನಿರ್ದೇಶಕರು.
ತಮಿಳು ನಿರ್ಮಾಣ ಸಂಸ್ಥೆಯಲ್ಲಿ ಈ ಸಿನಿಮಾ ಮೂಡಿ ಬರುತ್ತಿದೆ. ಜೀಬ್ರಾ ಸಿನಿಮಾಗೆ ಎಸ್ ಎನ್ ರೆಡ್ಡಿ,ಬಾಲ ಸುಂದರಂ, ದಿನೇಶ್ ಸುಂದರಂ ನಿರ್ಮಾಪಕರು.
ಚಿತ್ರಕ್ಕೆ ರವಿ ಬಸರೂರು ಸಂಗೀತವಿದೆ.


ಡಾಲಿ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಜೀಬ್ರಾ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮೂಡಿ ಜೀಬ್ರಾ ತಯಾರಾಗುತ್ತಿದೆ.
ಈಗಾಗಲೇ ಶೇ. 90ರಷ್ಟು ಚಿತ್ರೀಕರಣ ಮುಗಿಸಿರುವ ಸಿನಿಮಾ ತಂಡ, ರಿಲೀಸ್ ಗೆ ಸಿದ್ದವಾಗಿರುವ ಈ ಸಿನಿಮಾವನ್ನು ಸದ್ಯದಲ್ಲೆ ಅಭಿಮಾನಿಗಳ ಮುಂದೆ ತರಲು ತಯಾರಿ ನಡೆಸುತ್ತಿದೆ.

Categories
ಸಿನಿ ಸುದ್ದಿ

ಗಬ್ರು ಸತ್ಯನ ಪರಿಚಯವಿದು! ಉತ್ತರಕಾಂಡದಲ್ಲಿ ಡಾಲಿ ಹೇಗಿದ್ದಾರೆ ಗೊತ್ತಾ? ಟೀಸರ್ ರಿಲೀಸ್ ಆಯ್ತು

ನಟ-ನಿರ್ಮಾಪಕ ಡಾಲಿ ಧನಂಜಯ್ ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ “ಉತ್ತರಕಾಂಡ” ಚಿತ್ರತಂಡದವರು ಚಿತ್ರದಲ್ಲಿನ ಧನಂಜಯ್ ಅವರ ಪಾತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ.

ಹುಟ್ಟುಹಬ್ಬದ ಪೂರ್ವಭಾವಿಯಾಗಿ ಬೆಂಗಳೂರಿನ ಸಂತೋಷ್ ಚಿತ್ರಮಂದಿರದಲ್ಲಿ ನಡೆದ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದವರು ಮತ್ತು ಅಪಾರ ಸಂಖ್ಯೆಯ ಅಭಿಮಾನಿಗಳು ಪಾಲ್ಗೊಂಡಿದ್ದರು.

ಧನಂಜಯ್ ಅವರ ಪಾತ್ರವಾದ “ಗಬ್ರು ಸತ್ಯ”ನ ಪರಿಚಯಿಸುವ ಟೀಸರ್ ಬಿಡುಗಡೆ ಮಾಡಲಾಯಿತು. ಈ ಟೀಸರ್ ಈಗಾಗಲೇ ಹಿಟ್ ಆಗಿದ್ದು, ಅಭಿಮಾನಿಗಳ ವಲಯದಲ್ಲಿ ಸಾಕಷ್ಟು ನಿರೀಕ್ಷೆ ಮತ್ತು ಕುತೂಹಲವನ್ನು ಹುಟ್ಟುಹಾಕಿದೆ.

“ಉತ್ತರಕಾಂಡ” ಚಿತ್ರವು ಉತ್ತರ ಕರ್ನಾಟಕದ ಪ್ರದೇಶದಲ್ಲಿ ನಡೆಯುವ ಕಥೆಯಾಗಿದ್ದು, ಗಬ್ರು ಸತ್ಯ ಎಂಬ ಗ್ಯಾಂಗ್ ಸ್ಟರ್ ಪಾತ್ರದಲ್ಲಿ ಧನಂಜಯ್ ಕಾಣಿಸಿಕೊಂಡಿದ್ದಾರೆ. ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಮತ್ತು ದಿಗಂತ್ ಸಹ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

ಕೆ ಆರ್ ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ಈ ಚಿತ್ರವನ್ನು ರೋಹಿತ್ ಪದಕಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಅದ್ವೈತ ಗುರುಮೂರ್ತಿ ಅವರ ಛಾಯಾಗ್ರಹಣ ಮತ್ತು ಚರಣ್ ರಾಜ್ ಅವರ ಸಂಗೀತ ಈ ಚಿತ್ರಕ್ಕಿದೆ.

“ಉತ್ತರಕಾಂಡ” , ಕೆ ಅರ್ ಜಿ ಸ್ಟುಡಿಯೋಸ್ ಮತ್ತು ಧನಂಜಯ್ ಅವರ ಕಾಂಬಿನೇಷನ್ ನಲ್ಲಿ ಮೂಡಿ ಬರುತ್ತಿರುವ ಮೂರನೇ ಚಿತ್ರವಾಗಿದ್ದು, ಕನ್ನಡ ಚಿತ್ರರಂಗದ ಅತೀ ನಿರೀಕ್ಷಿತ ಚಿತ್ರವಾಗಿದೆ.

Categories
ಸಿನಿ ಸುದ್ದಿ

ತಾರಿಣಿ ಎಂಬ ಗರ್ಭಿಣಿಯ ಕಥೆ: ಮಮತಾ ರಾವತ್ ಹೈಲೆಟ್

ಇತ್ತೀಚಿಗೆ ಚಿತ್ರೀಕರಣ ಮುಗಿಸಿಕೊಂಡ ತಾರಿಣಿ ಚಿತ್ರ ಈಗ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿದೆ. “ಶ್ರೀ ಗಜನಿ ಪ್ರೊಡಕ್ಷನ್ಸ್‌” ಲಾಂಛನದಲ್ಲಿ ಮೂಡಿಬಂದಿರುವ ಚಿತ್ರಕ್ಕೆ ಡಾ.ಸುರೇಶ್ ಕೋಟ್ಯಾನ್ ಚಿತ್ರಾಪು ರವರು ಬಂಡವಾಳ ಹೂಡಿದ್ದಾರೆ. ಸಿದ್ದು ಪೂರ್ಣಚಂದ್ರ ರವರು ಕಥೆ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

ಮಮತಾ ರಾವತ್ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಇವರು ಈ ಕಥೆಗಾಗಿಯೇ ಮಾನಸಿಕ ಪೂರ್ವತಯಾರಿ ಮಾಡಿಕೊಂಡು ಉತ್ತಮವಾಗಿ ನಟಿಸಿದ್ದಾರೆ. ಇದೊಂದು “ಗರ್ಭಿಣಿ” ಹೆಂಗಸಿನ ಕಥೆಯಾಧಾರಿತ ಚಿತ್ರವಾಗಿರುವುದರಿಂದ ಈ ಚಿತ್ರದಲ್ಲಿ “ಮಮತಾ ರಾಹುತ್” ರವರು ನಿಜ ಜೀವನದಲ್ಲು ಸ್ವತಃ ಗರ್ಭಿಣಿಯಾಗಿಯೇ ಮನೋಜ್ಞವಾಗಿ ನಟಿಸಿದ್ದಾರೆಂದು ಚಿತ್ರದ ನಿರ್ದೇಶಕರು ಹೇಳಿದ್ದಾರೆ. ಅವರದೇ ಮಗುವಿನ ದೃಶ್ಯವನ್ನು ಹುಟ್ಟಿದ ಕೂಡಲೇ ಸೆರೆಹಿಡಿಯಲಾಗಿದೆಯಂತೆ.

ಒಟ್ಟಾರೆ ನೈಜವಾಗಿ ಸಹಜವಾಗಿ ಎಲ್ಲಾ ಕಲಾವಿದರೂ ಕೂಡ ಅಭಿನಯಿಸಿದ್ದಾರೆ. ಉಳಿದಂತೆ ರೋಹಿತ್, ಭವಾನಿ ಪ್ರಕಾಶ್, ವಿಜಯ ಲಕ್ಷ್ಮಿ, ಡಾ. ಸುರೇಶ್ ಕೋಟ್ಯಾನ್ ಚಿತ್ರಾಪು, ಸುಧಾ ಪ್ರಸನ್ನ, ಪ್ರಮಿಳಾ ಸುಬ್ರಹ್ಮಣ್ಯಂ, ಮಟಿಲ್ಡಾ ಡಿಸೋಜಾ, ದೀಪಿಕಾ ಗೌಡ, ತೇಜಸ್ವಿನಿ, ಶ್ವೇತಾ, ಮಂಜು, ಇನ್ನೂ ಮುಂತಾದ ನುರಿತ ಕಲಾವಿದರು ಅಭಿನಯಿಸಿದ್ದಾರೆ.

ನಾಗರತ್ನ ಕೆ.ಹೆಚ್ ವಸ್ತ್ರ ವಿನ್ಯಾಸ, ಅನಂತ್ ಆರ್ಯನ್ ಸಂಗೀತ, ದೀಪಕ್ ಸಿ ಎಸ್ ಸಂಕಲನ,
ರಾಜು ಹೆಮ್ಮಿಗೇಪುರ ಛಾಯಾಗ್ರಹಣ, ಬಸವರಾಜ್ ಆಚಾರ್ ಕೆ ಆರ್ ಕಲೆ, ಕಲರಿಂಗ್ ನಿಖಿಲ್ ಕಾರ್ಯಪ್ಪ, ಶ್ರೀ ರಾಮ್ ಶಬ್ದ ವಿನ್ಯಾಸ, ಪ್ರದೀಪ್ ಜಿ ಎಫೆಕ್ಟ್ಸ್, ಮುಂತಾದವರ ತಾಂತ್ರಿಕ ಬಳಗವಿದೆ.

Categories
ಸಿನಿ ಸುದ್ದಿ

ಮತ್ತೆ ಜೊತೆಯಾದ ಬಡವ ರಾಸ್ಕಲ್ ಟೀಮ್: ಡಾಲಿ ಬರ್ತ್ ಡೇಗೆ ಅಣ್ಣ From Mexico ಸಿನಿಮಾ ಅನೌನ್ಸ್

ನಟರಾಕ್ಷಸ ಡಾಲಿ ಧನಂಜಯ್ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಧನು ಜನ್ಮದಿನದ ಅಂಗವಾಗಿ ಹೊಸ ಸಿನಿಮಾಗಳ ಪೋಸ್ಟರ್, ಟೀಸರ್ ಉಡುಗೊರೆಯಾಗಿ ಸಿಕ್ಕಿದೆ. ಅದರಂತೆ ಬಡವ ರಾಸ್ಕಲ್ ಚಿತ್ರತಂಡದಿಂದ ಡಾಲಿ ಬರ್ತ್ ಡೇ ಸ್ಪೆಷಲ್ ಗಿಫ್ಟ್ ಸಿಕ್ಕಿದೆ. ಮಧ್ಯರಾತ್ರಿ 12 ಗಂಟೆಗೆ ಟೈಟಲ್ ಹಾಗೂ ಫಸ್ಟ್ ಲುಕ್ motion ಪೋಸ್ಟರ್ ಅನೌನ್ಸ್ ಮಾಡಲಾಗಿದೆ. ಈ ಚಿತ್ರಕ್ಕೆ ’ಅಣ್ಣ From Mexico’ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ.

2021ರಲ್ಲಿ ತೆರೆಗೆ ಬಂದ ಬಡವ ರಾಸ್ಕಲ್ ಸೂಪರ್ ಡೂಪರ್ ಹಿಟ್ ಆಗಿತ್ತು. ಈ ಚಿತ್ರದ ಮೂಲಕ ಧನಂಜಯ್ ನಿರ್ಮಾಪಕರಾಗಿದ್ದರು. ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ನಿರ್ಮಿಸಿ ನಟಿಸಿದ್ದ ಬಡವ ರಾಸ್ಕಲ್ ಚಿತ್ರವನ್ನು ಶಂಕರ್ ಗುರು ನಿರ್ದೇಶಿಸಿದ್ದರು. ಮೊದಲ ಹೆಜ್ಜೆಯಲ್ಲಿಯೇ ಗೆದ್ದಿದ್ದ ಶಂಕರ್ ಗುರು, ಈಗ ಮತ್ತೊಂದು ಚೆಂದದ ಕಥೆ ಮಾಡಿ ಡಾಲಿ ಫ್ಯಾನ್ಸ್ ರಂಜಿಸಲು ಅಣಿಯಾಗಿದ್ದಾರೆ. ಅದರ ಮೊದಲ ಭಾಗವೆಂಬಂತೆ ಇಂದು ’ಅಣ್ಣ From Mexico’ ಟೈಟಲ್ ಹಾಗೂ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಕೊರಳಿಗೆ ಕರ್ನಾಟಕ ಮ್ಯಾಪ್ ಇರುವ ಪೆಂಡೆಂಟ್ ಆಭರಣ ಧರಿಸಿ, suite ತೊಟ್ಟಿರುವ ಧನಂಜಯ್ ಲುಕ್ ರಿವೀಲ್ ಮಾಡದೇ ಚಿತ್ರತಂಡ ನಿರೀಕ್ಷೆ ಹೆಚ್ಚಿಸಿದೆ.

’ಅಣ್ಣ From Mexico’ ಶಂಕರ್ ಗುರು ನಿರ್ದೇಶನದ ಎರಡನೇ ಸಿನಿಮಾ. ಪಕ್ಕ ಆಕ್ಷನ್ ಎಂಟರ್ ಟೈನರ್ ಚಿತ್ರವಾಗಿದ್ದು, ಅಜ್ಜಿ ಮೊಮ್ಮಗನ ಬಾಂಧವ್ಯದ ಕಥೆಯೂ ಸಿನಿಮಾದಲ್ಲಿರಲಿದೆ. ಸತ್ಯ ರಾಯಲ್ ನಿರ್ಮಾಣದಲ್ಲಿ ತಯಾರಾಗಲಿರುವ ಈ ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ನಿರ್ದೇಶನ ಮಾಡಲಿದ್ದಾರೆ.

ನವೆಂಬರ್ ತಿಂಗಳಿನಿಂದ ಶೂಟಿಂಗ್ ಶುರುವಾಗಲಿದ್ದು, ಮೆಕ್ಸಿಕೋ ಸೇರಿದಂತೆ ಹಲವೆಡೆ ಚಿತ್ರೀಕರಣ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

Categories
ಸಿನಿ ಸುದ್ದಿ

ವಸಂತ ಕಾಲಕ್ಕೆ ಹೊರಟ ಸಚಿನ್ ಶೆಟ್ಟಿ: ಟೀನೇಜ್ ಲವ್ ಸ್ಟೋರಿ ಹಿಂದೆ ಶಿಕಾರಿ ನಿರ್ದೇಶಕ

ಈ ಹಿಂದೆ ಒಂದು ಶಿಕಾರಿಯ ಕಥೆ ನಿರ್ದೇಶಿಸಿದ್ದ ಸಚಿನ್ ಶೆಟ್ಟಿ, ಈಗ ಹೊಸ ಚಿತ್ರ ಅನೌನ್ಸ್ ಮಾಡಿದ್ದಾರೆ. ಸಂಪೂರ್ಣವಾಗಿ ಬೇರೆಯದೇ ಜಾನರ್ ಗೆ ಹೊರಳಿರುವ ನಿರ್ದೇಶಕ ಸಚಿನ್ ಶೆಟ್ಟಿ, ಈ ಬಾರಿ ಟೀನೇಜ್ ಲವ್ ಸ್ಟೋರಿಯೊಂದನ್ನು ಕ್ಲಾಸ್ ಸ್ಟೈಲ್ ನಲ್ಲಿ ನಿರೂಪಿಸಲು ಹೊರಟಿದ್ದಾರೆ.

ಚಿತ್ರದ ನಾಯಕ ಸಚಿನ್ ರಾಠೋಡ್, ನಾಯಕಿ ರಾಧಾ ಭಗವತಿ ಮತ್ತು ನಿರ್ಮಾಪಕರೆಲ್ಲರೂ ಬಿಜಾಪುರದವರಾಗಿದ್ದು, ಅದೇ ಜಿಲ್ಲೆಯ ಕನಮಡಿ ಎಂಬ ಗ್ರಾಮದಲ್ಲಿ ಸಂಪೂರ್ಣವಾಗಿ ಚಿತ್ರೀಕರಣ ನಡೆಸಲಾಗಿದೆ.

ಕನ್ನಡ ಚಿತ್ರರಂಗದಲ್ಲಿ ಉತ್ತರ ಕರ್ನಾಟಕದ ಪ್ರತಿಭೆಗಳು, ಆ ಭಾಗದ ಕಥೆಗಳು ಮುನ್ನೆಲೆಗೆ ಬರಬೇಕು ಎಂಬ ಈಗಿನ ಕೂಗಿಗೆ ಈ ಚಿತ್ರ ಒಂದು ಸಣ್ಣ ಉತ್ತರವಾಗಬಹುದು. ಕರಾವಳಿಯ ನಿರ್ದೇಶಕರು ತಮ್ಮ ಕಥೆಯನ್ನು ಉತ್ತರ ಕರ್ನಾಟಕದ ಪರಿಸರದ ಹಿನ್ನೆಲೆಯ ಜೊತೆ ಹೇಳಲು ಹೊರಟಿರುವುದು ವಿಶೇಷವಾಗಿದೆ. ಇನ್ನು ಚಿತ್ರದ ಪೋಸ್ಟ್ ಪ್ರೊಡಕ್ಷನ್ ನಲ್ಲಿ ನಿರತವಾಗಿರುವ ಚಿತ್ರತಂಡ ಇನ್ನು ಮುಂದೆ ಚಿತ್ರದ ಒಂದೊಂದೇ ವಿವರಗಳನ್ನು ಬಿಡುಗಡೆ ಮಾಡಲಿದೆ.

ವಸಂತ ಕಾಲದ ಹೂಗಳು ಚಿತ್ರದಲ್ಲಿ ಗುರುರಾಜ್ ಶೆಟ್ಟಿ, ಪವನ್, ನಂದೀಶ್ ಇತರರು ನಟಿಸಲಿದ್ದಾರೆ. ಅಶೋಕ್ ರಾಠೋಡ್, ಸಿದ್ದು ರಾಸುರೆ ನಿರ್ಮಾಣವಿದೆ. ಶಿವಶಂಕರ ನೂರಂಬಡ ಕ್ಯಾಮೆರಾ ಹಿಡಿದರೆ, ಬಿ.ಎಸ್.ಕೆಂಪರಾಜ್ ಅಂಕಲನವಿದೆ. ಭರತ್ ಜನಾರ್ಧನ್ ಸಂಗೀತವಿದೆ.

error: Content is protected !!