Categories
ಸಿನಿ ಸುದ್ದಿ

ನ್ಯಾನೋ ನಾರಾಯಣಪ್ಪ ಜುಲೈ 7ಕ್ಕೆ ರಿಲೀಸ್: ಇದು ಕೆಜಿಎಫ್ ತಾತನ ಕೊನೆ ಚಿತ್ರ

ಕೆಮಿಸ್ಟ್ರೀ ಆಫ್ ಕರಿಯಪ್ಪ, ಕ್ರಿಟಿಕಲ್ ಕೀರ್ತನೆಗಳು ಸಿನಿಮಾ ಮೂಲಕ ಕನ್ನಡ ಚಿತ್ರರಂಗದಲ್ಲೊಂದು ಹೊಸ ಭರವಸೆ ಮೂಡಿಸಿದವರು ನಿರ್ದೇಶಕ ಕುಮಾರ್. ಇವರ ಸಾರಥ್ಯದ ಮಗದೊಂದು ಪ್ರಯತ್ನ ನ್ಯಾನೋ ನಾರಾಯಣಪ್ಪ. ಕೆಜಿಎಫ್ ತಾತಾ ಖ್ಯಾತಿಯ ನಟ ದಿವಂಗತ ಕೃಷ್ಣೋಜಿ ರಾವ್ ನಾಯಕನಾಗಿ ನಟಿಸಿರುವ ಈ ಸಿನಿಮಾ ಜುಲೈ 7ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಹಾಸ್ಯದ ಜೊತೆಗೆ ಭಾವಾನತ್ಮಕ ಅಂಶವನ್ನು ಹದವಾಗಿ ಬೆರೆಸಿ ಕುಮಾರ್ ನ್ಯಾನೋ ನಾರಾಯಣಪ್ಪ ಕಥೆ ಹೆಣೆದಿದ್ದಾರೆ.

ಮನಿ ಹಂಟರ್’ ಹಾಡು ಸೂಪರ್
ಬಿಡುಗಡೆ ಹೊಸ್ತಿಲಿನಲ್ಲಿರುವ ‘ನ್ಯಾನೋ ನಾರಾಯಣಪ್ಪ’ ಸಿನಿಮಾದ ಮನಿ ಹಂಟರ್ ಹಾಡು ಬಿಡುಗಡೆಯಾಗಿದೆ. ನಿರ್ದೇಶಕ ಕುಮಾರ್ ಸಾಹಿತ್ಯದ ಸಿಂಗಿಂಗ್ ಗೆ ಅಂಕಿತಾ ಕುಂಡು ಧ್ವನಿಯಾಗಿದ್ದು, ಆಕಾಶ್ ಪರ್ವ ಟ್ಯೂನ್ ಹಾಕಿದ್ದಾರೆ. ಹಾಟ್ ಅಂಡ್ ಸ್ಪೈ ನಂಬರ್ ಗೆ ಗಿರಿ ಶಿವಣ್ಣ, ಕಾಕ್ರೋಚ್ ಸುಧಿ ಸೇರಿದಂತೆ ಹಲವರು ಹೆಜ್ಜೆ ಹಾಕಿದ್ದಾರೆ.

ಕೇಸರಿ ಫಿಲ್ಮಂ ಕ್ಯಾಪ್ಚರ್ ಬ್ಯಾನರ್ ನಡಿ ಕುಮಾರ್ ಚಿತ್ರ ನಿರ್ಮಾಣ ಮಾಡಿದ್ದಾರೆ. ಕಾಕ್ರೋಚ್ ಸುಧಿ, ಗಿರೀಶ್ ಶಿವಣ್ಣ, ಪ್ರಶಾಂತ್ ಸಿದ್ದಿ, ಅನಂತು, ಅಪೂರ್ವಾ ಮುಂತಾದವರು ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಶಿವಶಂಕರ ಛಾಯಾಗ್ರಾಹಣ, ಆಕಾಶ್ ಪರ್ವ ಸಂಗೀತ, ದೀಪು ಮತ್ತು ಸಿದ್ದಾರ್ಥ್ ನಾಯಕ ಸಂಕಲನ ಚಿತ್ರಕ್ಕಿದೆ. ಕಾಮಿಡಿ, ಕಾಡುವ ಕಥೆ, ಮನೆ ಮಂದಿಯೆಲ್ಲಾ ಕುಳಿತು ಕಣ್ತುಂಬಿಕೊಳ್ಳುವ ನ್ಯಾನೋ ನಾರಾಯಣಪ್ಪ ಜುಲೈ 7ಕ್ಕೆ ಥಿಯೇಟರ್ ಪ್ರವೇಶಿಸಲಿದೆ.

Categories
ಸಿನಿ ಸುದ್ದಿ

ರಾಘವ್ ಲಾರೆನ್ಸ್-ಕಂಗನಾ ಮುಖಾಮುಖಿ! ಗಣೇಶ ಹಬ್ಬಕ್ಕೆ ಚಂದ್ರಮುಖಿ 2 ಚಿತ್ರ: ಇದು ಪಿ. ವಾಸು ನಿರ್ದೇಶನದ ಸಿನಿಮಾ

ಸೌತ್ ಸಿನಿ ದುನಿಯಾದ ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಸಂಸ್ಥೆ ಯಿಂದ ಪ್ಯಾನ್ ಇಂಡಿಯಾ ಸಿನಿಮಾ ಚಂದ್ರಮುಖಿ-2 ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಖ್ಯಾತ ನಿರ್ದೇಶಕ, ನಟ ಹಾಗೂ ಸ್ಟಾರ್ ಕೊರಿಯೋಗ್ರಾಫರ್ ರಾಘವ್ ಲಾರೆನ್ಸ್ ಹಾಗೂ ಬಾಲಿವುಡ್ ಬ್ಯೂಟಿ ಕಂಗನಾ ನಟನೆಯ ಈ ಚಿತ್ರ ಸೆಪ್ಟಂಬರ್ 19ರ ಗಣೇಶ್ ಚತುರ್ಥಿಗೆ ಸ್ಪೆಷಲ್ ಆಗಿ ವಿಶ್ವಾದ್ಯಂತ ತೆರೆಗಪ್ಪಳಿಸಲಿದೆ. ಇದು ಖ್ಯಾತ ಹಿರಿಯ ನಿರ್ದೇಶಕ ಪಿ.ವಾಸು ನಿರ್ದೇಶನದ 65ನೇ ಚಿತ್ರ.

2005ರಲ್ಲಿ ಬಿಡುಗಡೆಯಾಗಿದ್ದ ಕ್ಲಾಸಿಕ್ ಸಿನಿಮಾ ಚಂದ್ರಮುಖಿ ಬಾಕ್ಸಾಫೀಸ್ ನಲ್ಲಿ ಹೊಸ ದಾಖಲೆ ಸೃಷ್ಟಿಸಿತ್ತು. ಸೂಪರ್ ಸ್ಟಾರ್ ರಜನಿಕಾಂತ್ ನಾಯಕನಾಗಿ ನಟಿಸಿದ್ದ ಹಿಟ್ ಲೀಸ್ಟ್ ಸೇರಿತ್ತು. 18 ವರ್ಷದ ಬಳಿಕ ಚಂದ್ರಮುಖಿ ಸೀಕ್ವೆಲ್ ಬರುತ್ತಿದ್ದು, ನಿರೀಕ್ಷೆಯನ್ನು ಹೆಚ್ಚಿಸಿದೆ. ಲೈಕಾ ಸಂಸ್ಥೆಯ ಒಡೆಯ ಸುಭಾಷ್ ಕರಣ್ ಬಹಳ ಅದ್ಧೂರಿಯಾಗಿ ಚಿತ್ರ ನಿರ್ಮಿಸಿದ್ದು, ಆಸ್ಕರ್ ಅವಾರ್ಡ್ ವಿನ್ನರ್ ಎಂ.ಎಂ ಕೀರವಾಣಿ ಸಂಗೀತ ನಿರ್ದೇಶನವಿದೆ.

ಆರ್ ಡಿ ರಾಜಶೇಖರ್ ಛಾಯಾಗ್ರಹಣ, ಅಂಥೋನಿ ಸಂಕಲನ ಚಿತ್ರಕ್ಕಿದೆ. ವಡಿವೇಲು, ಲಕ್ಷ್ಮೀ ಮೆನನ್, ಮಹಿಮಾ ನಂಬಿಯಾರ್, ರಾಧಿಕಾ ಶರತ್ ಕುಮಾರ್, ಸುರೇಶ್ ಮೆನನ್ ತಾರಾಬಳಗದಲ್ಲಿದ್ದಾರೆ. 18 ವರ್ಷದ ಬಳಿಕ ಗಣೇಶ ಹಬ್ಬಕ್ಕೆ ಚಂದ್ರಮುಖಿ-2 ಸೀಕ್ವೆಲ್ ತೆಲುಗು, ತಮಿಳು, ಹಿಂದಿ, ಕನ್ನಡ ಹಾಗೂ ಮಲಯಾಳಂ ಭಾಷೆಯಲ್ಲಿ ಬಿಗ್ ಸ್ಕ್ರೀನ್ ಗೆ ಲಗ್ಗೆ ಇಡಲಿದೆ.

Categories
ಸಿನಿ ಸುದ್ದಿ

ಅಪರೂಪ ಸಿನಿಮಾ ಹಿಂದೆ ಬಂದ ಮಹೇಶ್ ಬಾಬು! ಜುಲೈ 14ಕ್ಕೆ ಹೊಸ ಲವ್ ಸ್ಟೋರಿ ಹೇಳ್ತಾರೆ

ಅರಸು, ಆಕಾಶ್‌, ಅಜಿತ್‌, ಅತಿರಥ, ಅಭಯ್‌ ಸೇರಿದಂತೆ ಹಲವರು ವಿಭಿನ್ನ ಹಾಗೂ ವಿಶಿಷ್ಟ ಪ್ರೇಮಕಥೆಗಳ ನಿರ್ದೇಶಿಸಿ ಸೈ‌ ಎನಿಸಿಕೊಂಡಿರುವ ಮಹೇಶ್ ಬಾಬು ಸಾರಥ್ಯದ ಅಪರೂಪ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಜುಲೈ 14ರಂದು ರಾಜ್ಯಾದ್ಯಂತ ಚಿತ್ರ ತೆರೆಗೆ ಬರುತ್ತಿದೆ. ಅಪರೂಪ ಸಿನಿಮಾ ಮೂಲಕ ಸುಘೋಷ್‌ ಮತ್ತು ಹೃತಿಕಾ ಕನ್ನಡ ಸಿನಿಮಾ ಲೋಕಕ್ಕೆ ನಾಯಕ ಹಾಗೂ ನಾಯಕಿಯಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ.

ಹೊಸ ರೀತಿಯ ಪ್ರೇಮಕಥೆಯಾಗಿರುವ ಅಪರೂಪ ಸಿನಿಮಾದಲ್ಲಿ ನಾಯಕ ನಾಯಕಿಯ ನಡುವೆ ಬರುವ ಅಹಂ ವಿಲನ್‌ ಆಗುತ್ತದೆ. ಅದರಿಂದ ಏನೇನು ತೊಂದರೆ ಉಂಟಾಗುತ್ತದೆ ಅನ್ನೋದು ಚಿತ್ರದಲ್ಲಿ ಕಟ್ಟಿಕೊಡಲಾಗಿದೆ. ನಾಯಕ ಸುಘೋಷ್ ಮೂಲತಃ ಮಂಡ್ಯದವರು.

ಚಿಕ್ಕಂದಿನಿಂದಲೇ ಸಿನಿಮಾ‌ ಕನಸು ಕಟ್ಟಿಕೊಂಡವರು. ಮಹೇಶ್ ನಿರ್ದೇಶನದ ಅತಿರಥ ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರದಲ್ಲಿ ಅವರ ನಟನೆ ನೋಡಿ ಅಪರೂಪ ಸಿನಿಮಾಗೆ ನಾಯಕರನಾಗಿ ನಟಿಸುವ ಅವಕಾಶ ನೀಡಿದ್ದಾರೆ.

ನೃತ್ಯದಲ್ಲಿಯೂ ಪರಿಣಿತರಾಗಿರುವ ಸುಘೋಷ್, ಕಷ್ಟಕರವಾದ ಸ್ಟೆಪ್ಸ್ ಗಳನ್ನು ಸರಾಗವಾಗಿ ಮಾಡಬಲ್ಲರು. ಅವರು ಹೆಜ್ಜೆ ಹಾಕಿರುವ ‘ಲವ್ ಗೆ ನೋ ನೋ’ ಎಂಬ ಹಾಡು ಈಗಾಗಲೇ ಸಖತ್ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ನಾಯಕಿ ಹೃತಿಕಾ ತೆಲುಗಿನ ಖ್ಯಾತ ನಟಿ ಅಮನಿ ಸಹೋದರನ ಪುತ್ರಿ. ವಿಷ್ಣುವರ್ಧನ್ ನಟನೆಯ ಅಪ್ಪಾಜಿ ಚಿತ್ರದಲ್ಲಿ ಅಮನಿ ನಾಯಕಿಯಾಗಿ ಬಣ್ಣ ಹಚ್ಚಿದ್ದರು.

ಅಶೋಕ್ , ಅರುಣಾ ಬಲರಾಜ್, ಅವಿನಾಶ್, ಕುರಿಪ್ರತಾಪ್ , ದಿನೇಶ್ ಮಂಗಳೂರು, ವಿಜಯ್ ಚೆಂಡೂರು, ಕಡ್ಡಿಪುಡಿ‌ ಚಂದ್ರು, ಮೋಹನ್ ಜುನೇಜಾ ಅಪರೂಪ ಸಿನಿಮಾದ ಭಾಗವಾಗಿದ್ದಾರೆ. ಪ್ರಜ್ವಲ್‌ ಪೈ ಸಂಗೀತ ಹಾಡುಗಳಿಗೆ ಅರ್ಮನ್ ಮಲ್ಲಿಕ್, ಅನಿರುದ್ಧ್ ಶಾಸ್ತ್ರೀ, ಸಂಗೀತ ರವೀಂದ್ರನಾಥ್, ಪ್ರಜ್ವಲ್ ಪೈ ಹಾಗೂ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಒಂದು ಹಾಡಿಗೆ ಧ್ವನಿಯಾಗಿರುವುದು ವಿಶೇಷ.

ಬೆಂಗಳೂರು, ಮೈಸೂರು, ಚಿಕ್ಕಮಗಳೂರು, ಕಾಶ್ಮೀರದಲ್ಲಿ ಶೂಟಿಂಗ್ ನಡೆಸಲಾಗಿದ್ದು, ಸೂರ್ಯಕಾಂತ್‌ ಕ್ಯಾಮೆರಾ ಕೈಚಳಕ ಚಿತ್ರಕ್ಕಿದೆ. ಸುಗ್ಗಿ ಸಿನಿಮಾಸ್ ಬ್ಯಾನರ್ ನಡಿ ತಯಾರಾಗಿರುವ ಅಪರೂಪ ಸಿನಿಮಾವನ್ನು ಕೆಆರ್ ಜಿ ಸ್ಟುಡಿಯೋಸ್ ರಾಜ್ಯಾದ್ಯಂತ ವಿತರಣೆ ಮಾಡಲಿದೆ.

Categories
ಸಿನಿ ಸುದ್ದಿ

ಕೋಟೆಯೊಳು ಸುತ್ತಾಡಿದ ಮಾರ್ಗರೇಟ್ ಮತ್ತು ರಾಮಾಚಾರಿ! ಮೊದಲ ಹಂತದ ಶೂಟಿಂಗ್ ಫಿನಿಷ್: ಹೀರೋ ಅಭಿಲಾಶ್ ಖುಷ್…

ಯುವ ಪ್ರತಿಭೆ ಅಭಿಲಾಷ್ ಹಾಗೂ ಸೋನಲ್ ಮೊಂಥೆರೋ ಜೋಡಿಯಾಗಿ ನಟಿಸಿರುತ್ತಿರುವ ‘ಮಾರ್ಗರೇಟ್ ಲವರ್ ಆಫ್ ರಾಮಾಚಾರಿ’ ಸಿನಿಮಾದ ಮೊದಲ ಹಂತದ ಚಿತ್ರೀಕರಣ ಯಶಸ್ವಿಯಾಗಿ ಮುಗಿಸಿದೆ. ಚಿತ್ರದುರ್ಗ ಸುತ್ತಮುತ್ತ ಕೋಟೆಯಲ್ಲಿ 21 ದಿನಗಳ ಕಾಲ ಶೂಟಿಂಗ್ ನಡೆಸಲಾಗಿದೆ. ಹೊಸತಂಡ ಎಂಬುದನ್ನು ಪರಿಗಣಿಸದೇ ನಿರ್ಮಾಪಕರಾದ ವನಿತಾ ಎಚ್.ಎನ್ ಸಾಕಷ್ಟು ಖರ್ಚು ಮಾಡಿದ್ದಾರೆ. ಚಿತ್ರೀಕರಣ ಸರಾಗವಾಗಿ ಸಾಗಲು, ಗ್ರಾಮಸ್ಥರೇ ಕಾರಣ. ಇಡೀ ಊರಿಗೆ ಊರೇ ಚಿತ್ರೀಕರಣಕ್ಕೆ ಸಹಕಾರ ನೀಡಿದೆ. ಬಹಳ ನೈಜ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ.

ರಂಗಭೂಮಿ ಹಿನ್ನೆಲೆ ಹೊಂದಿರುವ ನಟ ಅಭಿಲಾಷ್, ‘ಮಾರ್ಗರೇಟ್ ಲವರ್ ಆಫ್ ರಾಮಾಚಾರಿ’ ಸಿನಿಮಾ ಮೂಲಕ ಹೀರೋ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ‘ಕೆಜಿಎಫ್’, ‘ಲವ್ ಮಾಕ್ಟೇಲ್’, ‘ಬಡವ ರಾಸ್ಕಲ್’, ‘ಗುರುದೇವ್ ಹೊಯ್ಸಳ’ ಮುಂತಾದ ಸಿನಿಮಾಗಳಲ್ಲಿ ಅಭಿಲಾಶ್ ಗುರುತಿಸಿಕೊಂಡಿದ್ದಾರೆ. ನಾಗರಹಾವು ಸಿನಿಮಾದಲ್ಲಿ ಪಾತ್ರಗಳನ್ನು ಹೋಲುವ ರೀತಿಯ ಹೆಸರುಗಳನ್ನೇ ‘ಮಾರ್ಗರೇಟ್ ಲವರ್ ಆಫ್ ರಾಮಾಚಾರಿ’ ಸಿನಿಮಾದಲ್ಲಿಯೂ ಇಡಲಾಗಿದೆ.

ಅಭಿಲಾಷ್ ರಾಮಾಚಾರಿ ಅಲಿಯಾಸ್ ರಾಮು ಎಂಬ ಪಾತ್ರ ಮಾಡಲಿದ್ದಾರೆ. ನಟಿ ಸೋನಲ್ ಮೊಂಥೆರೋ ಮೀರಾ ರಾಘವ್ ರಾಮ್ ಅಲಿಯಾಸ್ ಮ್ಯಾಗಿ ಎಂಬ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಯಶ್ ಶೆಟ್ಟಿ ಜಯಂತ್ ಅಲಿಯಾಸ್ ಜಲೀಲಾಗಿ ಕಾಣಿಸಿಕೊಳ್ಳಲಿದ್ದಾರೆ. ಅನುಭವಿ ನಟರಾದ ಜಹಾಂಗೀರ್, ಸುಮನ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ವನಿತಾ ಎಚ್.ಎನ್. ಹಾಗೂ ಹರೀಶ್ ‘ನಿಹಾಂತ್ ಪ್ರೊಡಕ್ಷನ್ಸ್’ ಮೂಲಕ ‘ಮಾರ್ಗರೇಟ್ ಲವರ್ ಆಫ್ ರಾಮಾಚಾರಿ’ ಸಿನಿಮಾ ನಿರ್ಮಾಣ ಮಾಡಲಾಗುತ್ತಿದೆ. ಮೊದಲ ಹಂತದ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಎರಡನೆ ಹಂತದ ಚಿತ್ರೀಕರಣಕ್ಕೆ ತಯಾರಾಗುತ್ತಿದೆ.

Categories
ಸಿನಿ ಸುದ್ದಿ

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ, ಗೀತ ಸಾಹಿತಿ ಸಿ.ವಿ.ಶಿವಶಂಕರ್ ವಿಧಿವಶ

ಹಿರಿಯ ನಿರ್ದೇಶಕ ಹಾಗು ಗೀತ ಸಾಹಿತಿ ಸಿ.ವಿ. ಶಿವಶಂಮಕರ್ ನಿಧನರಾಗಿದ್ದಾರೆ. ಕನ್ನಡ ಸಿನಿಮಾರಂಗಕ್ಕೆ ತಮ್ಮದೇ ಕೊಡುಗೆ ನೀಡಿದ್ದ ಶಿವಶಂಕರ್ ಅವರು, ಇಂದಿಗೂ ನೆನಪಿಸುವ ಗೀತೆಗಳನ್ನು ರಚಿಸಿದ್ದಾರೆ.

ಬಾಲನಟರಾಗಿ ರಂಗಭೂಮಿ ಪ್ರವೇಶಿಸಿದ ಇವರು, ಸ್ಕೂಲ್ ಮಾಸ್ಟರ್, ರತ್ನಗಿರಿ ರಹಸ್ಯ, ಕೃಷ್ಣ ಗಾರುಡಿ, ಧರ್ಮ ವಿಜಯ, ಭಕ್ತ ವಿಜಯ, ರತ್ನ ಮಂಜರಿ, ವೀರ ಸಂಕಲ್ಪ, ಆಶಾ ಸುಂದರಿ, ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಶಿವಶಂಕರ್ ನಟಿಸುವುದರ ಜೊತೆಗೆ ಸಾಹಿತ್ಯವನ್ನೂ ರಚಿಸಿದ್ದಾರೆ. ‘ಮನೆ ಕಟ್ಟಿ ನೋಡು’ , ಪದವೀಧರ, ನಮ್ಮ ಊರು, , ಮಹಡಿಯ ಮನೆ,ಹೊಯ್ಸಳ, ಮಹಾತಪಸ್ವಿ, ವೀರಮಹಾದೇವ , ಕನ್ನಡ ಕುವರ ಚಿತ್ರ ಗಳನ್ನು ನಿರ್ದೇಶಿಸಿದ್ದಾರೆ ಶಿವಶಂಕರ್.


1991 ರಲ್ಲಿ ಕರ್ನಾಟಕ ರಾಜ್ಯ ಪ್ರಶಸ್ತಿ, 1994 ರಲ್ಲಿ ರಾಜ್ಯೋತ್ಸವ ಪ್ರಶ್ತಿ, ಸಿಂಗನಲ್ಲೂರು ಪುಟ್ಟಸ್ವಾಮಯ್ಯ ರಾಜಕುಮಾರ್ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಇವರಿಗೆ ಸಂದಿವೆ.

ಶಿವಶಂಕರ್ ಅವರು ಬರೆದ ಗೀತೆಗಳಲ್ಲಿ ಅಪಾರ ಮೆಚ್ಚುಗೆ ಪಡೆದ ಗೀತೆಗಳಿವು.

  • ಕನ್ನಡದಾ ರವಿಮೂಡಿ ಬಂದಾ, ಮುನ್ನಡೆಯ ಬೆಳಕನ್ನು ತಂದಾ
  • ನಾಡಚರಿತೆ ನೆನಪಿಸುವ ವೀರ ಗೀತೆಯಾ, ಹಾಡು ನೀನು ಕನ್ನಡಿಗಾ ದೇಶಗೀತೆಯ
  • ಸಿರಿವಂತನಾದರೂ ಕನ್ನಡ ನಾಡಲ್ಲಿ ಮೆರೆವೇ, ಭಿಕ್ಷುಕನಾದರೂ ಕನ್ನಡ ಮನ್ನಲ್ಲೇ ಮಡಿವೇ
Categories
ಸಿನಿ ಸುದ್ದಿ

ಬಕ್ರೀದ್ ಕುರುಬಾನಿ 7 ಸ್ಟಾರ್ ಸುಲ್ತಾನ ಕ್ಯಾನ್ಸಲ್: ಟಗರುಪಲ್ಯ ತಂಡ ಹಾಗು ಫ್ಯಾನ್ಸ್ ಒತ್ತಾಯಕ್ಕೆ ಮಣಿದ ಮಾಲೀಕ

ಡಾಲಿ ಧನಂಜಯ್ ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ನಿರ್ಮಿಸುತ್ತಿರುವ, ನಾಗಭೂಷಣ್ ಹಾಗೂ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ಪ್ರೇಮ್ ನಟಿಸುತ್ತಿರುವ ಸಿನಿಮಾ ಟಗರು ಪಲ್ಯ. ಉಮೇಶ್ ಕೆ ಕೃಪ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರದಲ್ಲಿ ಅನೇಕ ಟಗರು ಕಾಳಗದಲ್ಲಿ ಗೆದ್ದಿ ಬೀಗಿರುವ 7 ಸ್ಟಾರ್ ಸುಲ್ತಾನ ಹೆಸರಿನ ಟಗರನ್ನು ಬಕ್ರೀದ್ ಹಬ್ಬಕ್ಕೆ ಕುರುಬಾನಿ ಕೊಡಲು ಮಾಲೀಕ ತೀರ್ಮಾನ ನಡೆಸಿದ್ದರು.

ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು. ಯಾವುದೇ ಕಾರಣಕ್ಕೂ 7 ಸ್ಟಾರ್ ಸುಲ್ತಾನನ್ನು ಕುರುಬಾನಿ ಕೊಡಬಾರದು ಎಂಬ ದೊಡ್ಡ ಅಭಿಯಾನವೇ ಶುರುವಾಗಿತ್ತು. ಈ ಬಗ್ಗೆ ಟಗರು ಪಲ್ಯ ಚಿತ್ರತಂಡ ಮಾಲೀಕರಿಗೆ ಕುರುಬಾನಿ ಕೊಡದಂತೆ ಸಲಹೆ ನೀಡಿತ್ತು. ಅಭಿಮಾನಿಗಳು ಹಾಗೂ ಚಿತ್ರತಂಡದ ಮನವಿಗೆ ಪ್ರತಿಫಲ ಸಿಕ್ಕಿದ್ದು, 7 ಸ್ಟಾರ್ ಸುಲ್ತಾನನ್ನು ಕುರುಬಾನಿ ಕೊಡದಿರಲು ಮಾಲೀಕರು ತೀರ್ಮಾನ ನಡೆಸಿದ್ದಾರೆ.

ಬಾಗಲಕೋಟೆ ತಾಲೂಕಿನ ಸುತಗುಂಡಾರ ಗ್ರಾಮದ‌ ಮಾಲೀಕ ಯುನೀಸ್ ಗಡೇದ್ ಬಕ್ರೀದ್ ಹಬ್ಬಕ್ಕೆ ಕುರ್ಬಾನಿ ಕೊಡಲೆಂದೇ ಎರಡೂವರೆ ವರ್ಷದ ಹಿಂದೆ 7 ಸ್ಟಾರ್ ಸುಲ್ತಾನ್ ಟಗರನ್ನು 1 ಲಕ್ಷ 88 ಸಾವಿರದ ಐನೂರು ರೂ ಗೆ ಖರೀದಿಸಿದ್ದರು. ಆದರೆ ಕುರ್ಬಾನಿಗೂ ಮುನ್ನ ಟಗರನ್ನು ಕಾಳಗಕ್ಕೆ ಇಳಿಸಲಾಗಿದ್ದು ಟಗರು ಅನೇಕ ಬಹುಮಾನಗಳನ್ನು ತನ್ನದಾಗಿಸಿಕೊಂಡಿದೆ. ಇಲ್ಲಿಯ ವರೆಗೆ 34 ಕಣಗಳಲ್ಲಿ ಪ್ರಥಮ ಬಹುಮಾನ ಗಳಿಸಿದ್ದು ಸುಮಾರು 20 ಲಕ್ಷದಷ್ಟು ಹಣ, ಬೆಳ್ಳಿ, ಬಂಗಾರ, ಬೈಕ್ಗಳನ್ನ ಗೆದ್ದು ಬೀಗಿದೆ.

ಹೀಗಾಗಿ ಮಾಲೀಕ ಯುನೀಸ್ ಈ ಟಗರಿಗೆ 7 ಸ್ಟಾರ್ ಸುಲ್ತಾನ್ ಎಂದು ಹೆಸರಿಟ್ಟರು. ಆದ್ರೆ ಅಂದುಕೊಂಡಂತೆ ಈ ಬಾರಿಯ ಬಕ್ರೀದ್ ಹಬ್ಬಕ್ಕೆ ಈ ಟಗರನ್ನ ಕುರ್ಬಾನಿ ನೀಡಲು ನಿರ್ಧರಿಸಿದ್ದರು. ಸಾಧಕ ಟಗರನ್ನು ಕುರ್ಬಾನಿ‌ ಮಾಡದಂತೆ ಅಭಿಮಾನಿಗಳಿಂದ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಶುರುವಾಗಿತ್ತು. ಹೀಗಾಗಿ ಅಭಿಮಾನಿಗಳ ಒತ್ತಾಸೆಗೆ‌ ಮಣಿದು 7 ಸ್ಟಾರ್ ಸುಲ್ತಾನನ ಕುರ್ಬಾನಿ ಕೊಡದಿರಲು ಯುನೀಸ್ ನಿರ್ಧರಿಸಿದ್ದಾರೆ.

ಯಾವಾಗ ರಿಲೀಸ್ ‘ಟಗರು ಪಲ್ಯ’?

ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲೆಂದು ಹಾಗೂ ಕಂಟೆಂಟ್ ಆಧಾರಿತ ಚಿತ್ರ ನಿರ್ಮಿಸಲು ಧನಂಜಯ್ ಪ್ರಾರಂಭಿಸುವ ಡಾಲಿ ಪಿಕ್ಚರ್ಸ್ ನಿರ್ಮಾಣ ಸಂಸ್ಥೆಯ‌ ಮೂರನೇ ಕೊಡುಗೆ ಟಗರು ಪಲ್ಯ. ಇಕ್ಕಟ್, ಬಡವ ರಾಸ್ಕಲ್ ಸಿನಿಮಾಗಳ ಖ್ಯಾತಿಯ ನಾಗಭೂಷಣ್ ನಾಯಕನಾಗಿ ನಟಿಸುತ್ತಿದ್ದು, ಇವರಿಗೆ ಜೋಡಿ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ನಾಯಕಿಯಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ.

ಮಂಡ್ಯ ಹಳ್ಳಿಗಳಲ್ಲಿ ನಡೆಯುವ ಆಚರಣೆ ಸುತ್ತಾ ಇಡೀ ಸಿನಿಮಾವನ್ನು ಕಟ್ಟಿಕೊಡಲಾಗಿದೆ. ತಾರಾ, ಶರತ್ ಲೋಹಿತಾಶ್ವ, ರಂಗಾಯಣ ರಘು ಸೇರಿದಂತೆ ದೊಡ್ಡತಾರಾಬಳಗವಿರುವ ಟಗರು ಪಲ್ಯ ಸಿನಿಮಾಗೆ ವಾಸುಕಿ ವೈಭವ್ ಟ್ಯೂನ್ ಹಾಕಿದ್ದು, ಎಸ್ ಕೆ ರಾವ್ ಕ್ಯಾಮೆರಾ ಹಿಡಿದಿದ್ದಾರೆ. ಸದ್ಯ ಶೂಟಿಂಗ್ ಮುಗಿಸಿರುವ ಚಿತ್ರ‌ತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ.

Categories
ಸಿನಿ ಸುದ್ದಿ

ಇವಳು ಕೃಷ್ಣೇಗೌಡರ ಪ್ರೀತಿಯ ಕುಸುಮ! ಜೂನ್ 30ಕ್ಕೆ ನಾನು ಕುಸುಮ ರಿಲೀಸ್…

ನಟ, ನಿರ್ಮಾಪಕ ಕಮ್ ನಿರ್ದೇಶಕ ಕೃಷ್ಣೇಗೌಡ ಅವರು ಕನ್ನಡ ಸಿನಿರಂಗದಲ್ಲಿ ಒಂದಷ್ಟು ಸದ್ದು ಮಾಡಿದವರು. ಕನ್ನಡ ಸಿನಿಮಾರಂಗದ ಒಳಿತಿಗೆ ಹೋರಾಡುತ್ತಲೇ ತಮ್ಮ ನೇರ ಮಾತುಗಳ ಮೂಲಕ ಒಂದಷ್ಟು ಗೆಳೆಯರಿಗೆ ಹತ್ತಿರವಾದವರು.
ಸಿನಿಮಾರಂಗವನ್ನು ಆಳವಾಗಿ ಪ್ರೀತಿಸುವ, ಯೋಚಿಸುವ ಕೃಷ್ಣೇಗೌಡರು ಈಗಾಗಲೇ ಸದಭಿರುಚಿಯ ಮತ್ತು ಸೂಕ್ಷ್ಮತೆಯ ಅಂಶಗಳಿರುವ ಕಥೆ ಆಯ್ಕೆ ಮಾಡಿಕೊಂಡು ಸಿನಿಮಾ ನಿರ್ಮಿಸಿ, ನಿರ್ದೇಶಿಸಿದ್ದಾರೆ. ಆ ಸಾಲಿಗೆ ನಾನು ಕುಸುಮ ಸಿನಿಮಾ ಕೂಡ ಸೇರಿದೆ ಎಂಬುದು ವಿಶೇಷ.

ಕನ್ನಡ ಮಾತ್ರವಲ್ಲ, ಸಾಗರದಾಚೆಗೂ ಅವರ ಸಿನೀಮಾಗಳು ಸುದ್ದಿ ಮಾಡಿವೆ. ಹಲವು ರಾಷ್ಟ್ರ ಪ್ರಶಸ್ತಿಗಳನ್ನೂ ಪಡೆದುಕೊಂಡಿವೆ. ಇತ್ತೀಚೆಗೆ ಅವರ ಪಿಂಕಿ ಎಲ್ಲಿ ? ಶಿನಿಮಾ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿ, ನೋಡುಗರ ಗಮನ ಸೆಳೆದಿತ್ತು. ಈಗ ಮತ್ತೊಂದು ಕಾಡುವ ಹೊಸ ಕಥೆಯೊಂದಿಗೆ ಪ್ರೇಕ್ಷಕರ ಎದುರು ಬರಲು ತಯಾರಿ ನಡೆಸುತ್ತಿದ್ದಾರೆ.


ಹೌದು, ಅವರ ನಿರ್ಮಾಣ ನಿರ್ದೇಶನದ ‘ನಾನು ಕುಸುಮ’ ಸಿನಿಮಾ ಜೂನ್ 30 ರಂದು ತೆರೆ ಕಾಣುತ್ತಿದೆ. ಹಿರಿಯ ಲೇಖಕ ಬೆಸಗರಹಳ್ಳಿ ರಾಮಣ್ಣ ಅವರ ಕಥೆ ಆಧರಿಸಿ ತಯಾರಾಗಿರುವ ‘ನಾನು ಕುಸುಮ’ ಚಿತ್ರಕ್ಕೆ ಕೃಷ್ಣೇಗೌಡ ನಿರ್ಮಾಪಕರು. ಅಷ್ಟೇ ಅಲ್ಲ, ನಿರ್ದೇಶಕರೂ ಹೌದು.

ಕುಸುಮಳ ಕಥೆ ಏನು?

ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುವ ಹುಡುಗಿಯೊಬ್ಬಳು ಅಲ್ಲಿ ಏನೆಲ್ಲ ಸಮಸ್ಯೆಗಳಿಗೆ ಸಿಲುಕುತ್ತಾಳೆ, ಯಾವೆಲ್ಲ ಶೋಷಣೆ ಅನುಭವಿಸುತ್ತಾಳೆ ಎನ್ನುವುದರ ಸುತ್ತ ‘ನಾನು ಕುಸುಮ’ ಸಿನಿಮಾದ ಕಥೆ ಸಾಗುತ್ತದೆ. ಭಾವುಕ ಮತ್ತು ಭಾವನಾತ್ಮಕ ಅಂಶಗಳು ಇಲ್ಲಿ ಹೈಲೆಟ್. ಗ್ರೀಷ್ಮಾ ಶ್ರೀಧರ್, ಸನಾತನಿ ಜೋಶಿ, ಕಾವ್ಯಾ ಶ್ರೀಧರ್, ಕೃಷ್ಣೇಗೌಡ, ಸೌಮ್ಯ ಭಾಗವತ್, ಪ್ರತಿಭಾ ಸಂಶಿಮಠ್, ವಿಜಯ್ ಇತರರು ಸಿನಿಮಾದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಇತ್ತೀಚೆಗೆ ನಡೆದ ‘14ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ದಲ್ಲಿ ಪ್ರದರ್ಶನಗೊಂಡ ಈ ಸಿನಿಮಾ, ಪ್ರಥಮ ಅತ್ಯುತ್ತಮ ಕನ್ನಡ ಚಿತ್ರ ಪ್ರಶಸ್ತಿ ಪಡೆದುಕೊಂಡಿದೆ.

‘ನಾನು ಕುಸುಮ’ ಈಗಾಗಲೇ ‘ಇಂಡಿಯನ್ ಪನೋರಮಾ’, ‘ರಾಜಸ್ಥಾನ್ ಫಿಲಂ ಫೆಸ್ಟಿವಲ್’, ‘ತ್ರಿಶೂರ್ ಫಿಲಂ ಫೆಸ್ಟಿವಲ್’ ಸೇರಿದಂತೆ ಹಲವು ಪ್ರತಿಷ್ಠಿತ ಚಲನ ಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿದೆ.

ನಾನು ಕುಸುಮ’ ಸಿನಿಮಾಗೆ ಅರ್ಜುನ್ ರಾಜಾ ಕ್ಯಾಮೆರಾ ಹಿಡಿದಿದ್ದಾರೆ. ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಆಸ್ಪತ್ರೆ, ವಾರ್ಡ್, ಗಲ್ಲಿ, ಮನೆ… ಹೀಗೆ ಸಿನಿಮಾದಲ್ಲಿ ಬರುವ ಎಲ್ಲ ಸ್ಥಳಗಳನ್ನು ನೈಜ ಲೊಕೇಶನ್ ಗಳಲ್ಲೇ ಚಿತ್ರೀಕರಿಸಲಾಗಿದೆ.

ಸಿಂಕ್ ಸೌಂಡ್ ನಲ್ಲಿ ಹಿನ್ನೆಲೆ ಧ್ವನಿಗ್ರಹಣ ಮಾಡಿರುವುದು ಸಿನಿಮಾದ ವಿಶೇಷ. ಈಗಾಗಲೇ ಚಿತ್ರೋತ್ಸವಗಳ ಮೂಲಕ ಚಿತ್ರರಂಗದಲ್ಲಿ ಅನೇಕ ಖ್ಯಾತನಾಮರ ಗಮನ ಸೆಳೆದಿರುವ ‘ನಾನು ಕುಸುಮ’ ಜೂನ್ 30 ರಂದು ರಾಜ್ಯಾದ್ಯಂತ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ.

Categories
ಸಿನಿ ಸುದ್ದಿ

ಸಂಚಿತ್ ಸಂಜೀವ್ ಎಂಬ ಹುಡುಗನಾದ ನಾನು ಜಿಮ್ಮಿ ಚಿತ್ರದ ಹೀರೋ: ಸುದೀಪ್ ಅಳಿಯನ ಸಿನಿಮಾ ಎಂಟ್ರಿ

ಖ್ಯಾತ ನಟ ಕಿಚ್ಚ ಸುದೀಪ್ ಅವರ ಅಕ್ಕನ ಮಗ ಸಂಚಿತ್ ಸಂಜೀವ್ ನಾಯಕರಾಗಿ ನಟಿಸಿ, ನಿರ್ದೇಶಿಸುತ್ತಿರುವ ಚಿತ್ರ “ಜಿಮ್ಮಿ”. ಚಿತ್ರದ ಕ್ಯಾರೆಕ್ಟರ್ ಟೀಸರ್ ಬಿಡುಗಡೆಯಾಗಿದೆ.
ಸುದೀಪ್ ಅವರ ತಂದೆ ಸಂಜೀವ್ ಹಾಗೂ ತಾಯಿ ಸರೋಜ ಸಂಜೀವ್(ಸಂಚಿತ್ ಅಜ್ಜಿ-ತಾತಾ) ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ.


ಕ್ರೇಜಿಸ್ಟಾರ್ ರವಿಚಂದ್ರನ್, ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ಶಾಸಕ, ಮುನಿರತ್ನ, ಸಂಗೀತ ನಿರ್ದೇಶಕ ಗುರುಕಿರಣ್, ನಿರ್ದೇಶಕರ ಆದ ಆರ್ ಚಂದ್ರು, ಅನೂಪ್ ಭಂಡಾರಿ ಸೇರಿದಂತೆ ಸ್ಯಾಂಡಲ್ ವುಡ್ ನ ಅನೇಕ ಗಣ್ಯರು ಈ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. ಕ್ಯಾರೆಕ್ಟರ್ ಟೀಸರ್ ಗೆ ವಾಸುಕಿ ವೈಭವ್ ಸಂಗೀತ ನೀಡಿದ್ದಾರೆ. ಸುದೀಪ್ ಪುತ್ರಿ ಸಾನ್ವಿ ಹಾಡಿದ್ದು ವಿಶೇಷ.

ವೆಲ್ಕಮ್ ಟು ಎಸ್ ಗ್ರೂಪ್ ಎಂದು ಮಾತು ಆರಂಭಿಸಿದ ಶಿವರಾಜಕುಮಾರ್, ಎಸ್ ಅಂದರೆ ಸುಪೀರಿಯರ್ ಮತ್ತು ಸೂಪರ್ಬ್ ಅಂತ. ನಿಮ್ಮಲ್ಲಿ ನಿಮ್ಮ ತಾಯಿ ಮುಖ ಇದೆ. ಸಂಜೀವ್ ಅವರ ಗಾಂಭೀರ್ಯ ಮತ್ತು ಸುದೀಪ್ ಅವರ ಧ್ವನಿ ಇದೆ. ತಾಯಿ ಮುಖ ಬಂದರೆ ಲಕ್ ಜಾಸ್ತಿ. ತುಂಬಾ ಚೆನ್ನಾಗಿ ಕಾಣುತ್ತೀರಾ. ಮೇಕಿಂಗ್ ಚೆನ್ನಾಗಿದೆ. ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿದ್ದೀರಿ ಒಳ್ಳೆಯದಾಗಲಿ ಎಂದು ಶುಭ ಕೋರಿದರು ‌

ಈ ಸಂದರ್ಭದಲ್ಲಿ ಮಾತನಾಡಿದ ಕ್ರೇಜಿಸ್ಟಾರ್ ರವಿಚಂದ್ರನ್, ಸಂಚಿತ್ ನಾಯಕನಾಗಿ ನಟಿಸುತ್ತಿದ್ದಾರೆ ಅಂದುಕೊಂಡಿದ್ದೆ. ನಿರ್ದೇಶನ ಮಾಡುತ್ತಿರುವುದು ಗೊತ್ತಿರಲಿಲ್ಲ. ಇಲ್ಲಿ ಬಂದ ಮೇಲೆ ಗೊತ್ತಾಯಿತು. ಮೊದಲು ಖುಷಿಯಾಗಿದ್ದು ಅವರ (ಸಂಚಿತ್) ಅಜ್ಜಿ ಮುಖದ ಮೇಲಿರುವ ನಗು. ಅವರಿಗಾಗುತ್ತಿರುವ ಸಂತೋಷ ನೋಡಿ ಖುಷಿ ಆಯ್ತು. ಸುದೀಪ್ ಎಲ್ಲದಕ್ಕೂ ಕರೆಯುತ್ತಾರೆ. ಬರುವುದಿಲ್ಲ ಅಂದರೂ ಬಿಡುವುದಿಲ್ಲ. ಅದು ಹೇಗೆ ಬರುವುದಿಲ್ಲ ಎನ್ನುತ್ತಾರೆ? ಆ ರೀತಿ ನನ್ನ ಅವರ ಸಂಬಂಧ. ಸುದೀಪ್ ಅವರ ತಂದೆಯವರದು ನಮ್ಮದು ಕೂಡ ಹಳೆಯ ಸಂಬಂಧ. ಟ್ರೇಲರ್ ನೋಡಿದ ತಕ್ಷಣ ವೈಬ್ರೇಷನ್ ಇದೆ. ನೀವು ತೆರೆಯ ಮೇಲೆ ಚೆನ್ನಾಗಿ ಕಾಣುತ್ತೀರಿ. ಸುದೀಪ್ ನೋಡಿದ ಹಾಗೆ ಅನಿಸುತ್ತದೆ. ವಾಸುಕಿ ವೈಭವ್ ತಮ್ಮ ಜಾನರ್ ಬದಲಾಯಿಸಿದ್ದಾರೆ. ಈ ಬಾರಿ ಬೇರೆ ತರಹ ಸಂಗೀತ ಮಾಡಿದ್ದಾರೆ. ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು.

ನನಗೆ ಶಿವರಾಜಕುಮಾರ್ ಹಾಗೂ ರವಿಚಂದ್ರನ್ ಅವರು ಸ್ಪೂರ್ತಿ. ಅವರಿಂದಲೇ ನಮ್ಮ ಸಂಚಿತ್ ನನ್ನು ಚಿತ್ರರಂಗಕ್ಕೆ ಪರಿಚಯಿಸುವ ಆಸೆಯಿತ್ತು. ಅದು ಇಂದು ಈಡೇರಿದೆ. ಹಾಗಾಗಿ ಅವರಿಬ್ಬರಿಗೂ ವಿಶೇಷ ಧನ್ಯವಾದ. ಅನೇಕ ಹಿರಿಯರು ಕನ್ನಡ ಚಿತ್ರರಂಗದಲ್ಲಿ ಭದ್ರಕೋಟೆ ಕಟ್ಟಿದ್ದಾರೆ. ಅದನ್ನು ಕಾಪಾಡಿಕೊಂಡು ಹೋಗುವ ಜವಾಬ್ದಾರಿ ಸಂಚಿತ್ ನಂತಹ ಯುವಕರದು ಎಂದು ಕಿಚ್ಚ ಸುದೀಪ್ ಹೇಳಿದರು.

ರವಿಚಂದ್ರನ್ ಹಾಗೂ ಶಿವರಾಜಕುಮಾರ್ ಅವರಿಗೆ ನನ್ನ ಧನ್ಯವಾದ. ಸುದೀಪ್ ಮಾವ ಹಾಗೂ ಪ್ರಿಯ ಅತ್ತೆ ಅವರ ಪ್ರೋತ್ಸಾಹಕ್ಕೆ ನಾನು ಚಿರ ಋಣಿ. ನಿರ್ಮಾಪಕರಾದ ಜಿ.ಮನೋಹರನ್, ಕೆ.ಪಿ.ಶ್ರೀಕಾಂತ್ ಹಾಗೂ ಪ್ರಿಯಾ ಸುದೀಪ್ ಅವರು ನನ್ನ‌ ಮೇಲೆ ಭರವಸೆಯಿಟ್ಟು ನಿರ್ಮಾಣ ಮಾಡುತ್ತಿದ್ದಾರೆ. ಅವರಿಗೂ ವಿಶೇಷ ಧನ್ಯವಾದ. ಆಗಸ್ಟ್ ನಲ್ಲಿ ಚಿತ್ರೀಕರಣ ಆರಂಭಿಸುತ್ತಿದ್ದೇವೆ‌. ಮುಂದಿನ ದಿನಗಳಲ್ಲಿ ಚಿತ್ರದ ಕುರಿತು ಹೆಚ್ಚು ಮಾಹಿತಿ ನೀಡುವುದಾಗಿ ನಾಯಕ ಹಾಗೂ ನಿರ್ದೇಶಕ ಸಂಚಿತ್ ಸಂಜೀವ್ ತಿಳಿಸಿದರು.

ಲಹರಿ ವೇಲು, ಕೆ.ಪಿ.ಶ್ರೀಕಾಂತ್, ಪ್ರಿಯಾ ಸುದೀಪ್, ಸಂಗೀತ ನಿರ್ದೇಶಕ ವಾಸುಕಿ ವೈಭವ್ ಚಿತ್ರದ ಕುರಿತು ಮಾತನಾಡಿದರು. ಸಾನ್ವಿ ಸುದೀಪ್ “ಜಿಮ್ಮಿ” ಚಿತ್ರದ ಹಾಡು ಹಾಡಿದರು.

Categories
ಸಿನಿ ಸುದ್ದಿ

ಬೆಂಗಳೂರಲ್ಲಿ ‘ಸ್ಪೈ’ ಅದ್ಧೂರಿ ಪ್ರಚಾರ: ಜೂನ್ 29ಕ್ಕೆ ನಿಖಿಲ್ ಸಿದ್ಧಾರ್ಥ್ ಸಿನಿಮಾ ರಿಲೀಸ್

ಕಾರ್ತಿಕೇಯ, ಕಾರ್ತಿಕೇಯ-2 ಬ್ಲಾಕ್ ಬಸ್ಟರ್ ಹಿಟ್ ಬಳಿಕ ನಿಖಿಲ್ ಸಿದ್ಧಾರ್ಥ್ ನಟಿಸುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾ ಸ್ಪೈ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಇದೇ 29ಕ್ಕೆ ವಿಶ್ವಾದ್ಯಂತ ರಿಲೀಸ್ ಆಗ್ತಿರುವ ಚಿತ್ರದ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದೆ. ಮುಂಬೈನಲ್ಲಿ ಪ್ರಮೋಷನ್ ಮುಗಿಸಿ ನೇರವಾಗಿ ಬೆಂಗಳೂರಿಗೆ ಬಂದಿಳಿದ ಚಿತ್ರತಂಡವನ್ನು ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಭಾ.ಮಾ,ಹರೀಶ್ ಸ್ವಾಗತಿಸಿ ಶುಭಕೋರಿದರು. ಬಳಿಕ ಚಿತ್ರತಂಡ ಮಾಧ್ಯಮದವರೊಂದಿಗೆ ತಮ್ಮ ಬಹುನಿರೀಕ್ಷಿತ ಸ್ಪೈ ಬಗ್ಗೆ ಸಾಕಷ್ಟು ವಿಷಯವನ್ನು ಹಂಚಿಕೊಂಡರು.

ನಟ ನಿಖಿಲ್ ಸಿದ್ಧಾರ್ಥ್ ಮಾತನಾಡಿ, ಕಾರ್ತಿಕೇಯ ಸಿನಿಮಾಗೆ ಕರ್ನಾಟದಲ್ಲಿ ಒಳ್ಳೆ ರೆಸ್ಪಾನ್ಸ್ ಸಿಕ್ಕಿದೆ. ಕನ್ನಡ ಪ್ರೆಕ್ಷಕರಿಗೆ ನನ್ನ ಧನ್ಯವಾದ. ಅದೇ ರೀತಿ ಜೂನ್ 29ಕ್ಕೆ ಬರ್ತಿರುವ ಸ್ಪೈ ಚಿತ್ರಕ್ಕೆ ನಿಮ್ಮ ಬೆಂಬಲ ಇರಲಿ. ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಸಿನಿಮಾ ಮಾಡಿರೋದು ನನಗೆ ಹೆಮ್ಮೆ ಇದೆ. ಅವರ ಸಾವಿನ ಬಗ್ಗೆ ಈ ಚಿತ್ರದ ಮೂಲಕ ಒಂದು ಕ್ಲಾರಿಟಿ ಸಿಗಲಿದೆ. ಆಕ್ಷನ್, ಎಂಟರ್ ಟೈನರ್ ಎಲ್ಲವೂ ಚಿತ್ರದಲ್ಲಿದೆ. ಪ್ರತಿಯೊಬ್ಬ ಭಾರತೀಯ ಈ ಸಿನಿಮಾ ನೋಡಲೇಬೇಕು.

ನಟಿ ಐಶ್ವರ್ಯ ಮೆನನ್ ಮಾತನಾಡಿ, ಇದೇ 29ಕ್ಕೆ ಸ್ಪೈ ಸಿನಿಮಾ ರಿಲೀಸ್ ಆಗ್ತಿದೆ. ಪ್ರತಿಯೊಬ್ಬರೂ ಚಿತ್ರಕ್ಕೆ ಬೆಂಬಲ ನೀಡಿ. ನಾನು ವೈಷ್ಣವಿ ಎಂಬ ಪಾತ್ರದಲ್ಲಿ ನಟಿಸಿದ್ದು, ರಾ ಏಜೆಂಟ್ ಆಗಿ ಕಾಣಿಸಿಕೊಂಡಿದ್ದೇನೆ. ದಾಸವಾಳ ಹಾಗೂ ನಮೋ ಭೂತಾತ್ಮ ಕನ್ನಡ ಸಿನಿಮಾಗಳಲ್ಲಿ ನನ್ನ ಜರ್ನಿ ಶುರುವಾಗಿದೆ. ಕನ್ನಡ ಇಂಡಸ್ಟ್ರೀ ನನಗೆ ಬಹಳ ವಿಶೇಷ. ಸ್ಪೈ ಕನ್ನಡದಲ್ಲಿಯೂ ಬಿಡುಗಡೆಯಾಗುತ್ತಿದೆ. ಪ್ರತಿಯೊಬ್ಬರಿಗೂ ಈ ಚಿತ್ರ ಇಷ್ಟವಾಗಲಿದೆ ಎಂದರು.

CTR ದೋಸೆ ಚಪ್ಪರಿಸಿ ತಿಂದ ನಿಖಿಲ್
ಬೆಂಗಳೂರಿ ಸಿಟಿಆರ್ ಹೋಟೆಲ್ ದೋಸೆ ಇಂಡಿಯಾಗೆ ಫೇಮಸ್. ಈ ಹೋಟೆಲ್ ನಲ್ಲಿ ಬಂದ ಸೆಲೆಬ್ರಿಟಿಗಳೆಲ್ಲಾ ದೋಸೆ ರುಚಿ ಸವಿಯುತ್ತಾರೆ. ಅದರಂತೆ ನಿಖಿಲ್ ಸಿದ್ಧಾರ್ಥ್ ಸಿಟಿಆರ್ ಹೋಟೆಲ್ ನಲ್ಲಿ ದೋಸೆಯನ್ನು ಚಪ್ಪರಿಸಿ ತಿಂದಿದ್ದಾರೆ. ಇದೇ ವೇಳೆ ಅಭಿಮಾನಿಗಳು ನಿಖಿಲ್ ಜೊತೆ ಫೋಟೋಗೆ ಮುಗಿಬಿದ್ದರು. ಬಳಿಕ ರಾಮೇಶ್ವರಂ ಕೆಫೆಯಲ್ಲಿ ಕಾಫಿ ಕುಡಿದರು.

ಸುಭಾಷ್ ಚಂದ್ರ ಬೋಸ್ ಸಾವಿನ ರಹಸ್ಯ ಕಥಾಹಂದರ ಹೊಂದಿರುವ ಸ್ಪೈ ಸಿನಿಮಾಗೆ ಖ್ಯಾತ ನಿರ್ದೇಶಕ ಹಾಗೂ ಸಂಕಲನಕಾರರು ಆಗಿರುವ ಗ್ಯಾರಿ ಬಿ ಹೆಚ್‌ ಸ್ಪೈ ಸಿನಿಮಾಗೆ ಆಕ್ಷನ್‌ ಕಟ್‌ ಹೇಳಿದ್ದಾರೆ. ಎವರು ಮತ್ತು ಹಿಟ್‌ ಸಿನಿಮಾಗಳ ನಿರ್ಮಾಪಕ ಕೆ.ರಾಜಶೇಖರ್‌ ರೆಡ್ಡಿ, ಚರಣ್‌ ರಾಜ್‌ ಉಪ್ಪಲಪತಿ ಚಿತ್ರ ನಿರ್ಮಿಸಿದ್ದಾರೆ. ಸನ್ಯಾ ಠಾಕೂರ್‌ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಸ್ಪೆಷಲ್‌ ರೋಲ್‌ ನಲ್ಲಿ ಬಾಹುಬಲಿ ಬಲ್ಲಾಳದೇವ ರಾಣಾ ದಗ್ಗುಭಾಟಿ ಕೂಡ ಕಾಣಿಸಿಕೊಂಡಿದ್ದಾರೆ. ಅಭಿನವ್‌ ಗೋಮತಮ್, ಮಕರಂದ್‌ ದೇಶಪಾಂಡೆ, ನಿತಿನ್‌ ಮೆಹ್ತಾ, ರವಿವರ್ಮ, ಕೃಷ್ಣ ತೇಜ, ಪ್ರಿಶಾ ಸಿಂಗ್‌, ಸೋನಿಯಾ ನರೇಶ್‌ ಮತ್ತು ಇತರರು ತಾರಾಬಳಗದಲ್ಲಿದ್ದಾರೆ. ಬ್ಯಾಕ್ ಟು ಬ್ಯಾಕ್ ಹಿಟ್ ಕೊಟ್ಟಿರುವ ನಿಖಿಲ್ ಸಿದ್ಧಾರ್ಥ್ ಪ್ಯಾನ್ ಇಂಡಿಯಾ ಸ್ಪೈ 29ಕ್ಕೆ ಬಿಡುಗಡೆಯಾಗಲಿದೆ.

Categories
ಸಿನಿ ಸುದ್ದಿ

ಕೆ ಆರ್ ಜಿ ಸ್ಟುಡಿಯೋಸ್ ಮಾಡಿಕೊಂಡ ಕಿರಿಕ್! ಇದು ಕ್ರಿಕೆಟ್ ಗೇಮ್ ಪ್ಲಾನಾ? ಬ್ಯಾಟ್ ಹಿಡಿತಾರೆ ದಾನಿಶ್ ಸೇಠ್

ಕನ್ನಡದಲ್ಲಿ ಕೆ ಆರ್ ಜಿ ಸ್ಟುಡಿಯೋಸ್ ಸಾಕಷ್ಟು ಉತ್ತಮ ಚಿತ್ರಗಳನ್ನು ಕೊಡುವ ನಿಟ್ಟಿನಲ್ಲಿ ಹುಟ್ಟಿಕೊಂಡ ಸಂಸ್ಥೆ. ಈ ನಿರ್ಮಾಣ ಸಂಸ್ಥೆಯ ಮೂಲಕ ಈಗಾಗಲೇ ಒಂದಷ್ಟು ಯಶಸ್ವಿ ಸಿನಿಮಾಗಳು ಮೂಡಿಬಂದಿವೆ. ಆ ಸಾಲಿಗೆ ಈಗ ಕಿರಿಕ್ et 11 ಸಿನಿಮಾ ಕೂಡ ಸೇರಿದೆ. ಶೀರ್ಷಿಕೆಯೇ ವಿಭಿನ್ನವಾಗಿದೆ. ಕಥೆ ಕೂಡ ವಿಶೇಷವಾಗಿದೆ ಎಂಬುದು ಸಿನಿಮಾ ನಿರ್ಮಾಣ ಸಂಸ್ಥೆಯ ಮಾತು.

ಬಹಳ ದಿನಗಳ ಬಳಿಕ ನಟ ದಾನಿಶ್ ಸೇಠ್ ಅವರು ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನವೀನ್ ಶಂಕರ್ ಕೂಡ ಇದ್ದಾರೆ.

ಕಿರಿಕ್ ‘et’ 11 ಚಿತ್ರ ಒಂದು ನಗೆ ಹಬ್ಬವಾಗಿ ತಯಾರಾಗಲಿದೆ. ಒಂದಷ್ಟು ಯುವಕರು ಯಾವುದೇ ರೀತಿಯಲ್ಲೂ ಅದೃಷ್ಟ ದೇವತೆ ಒಲಿಯದೆ ಇದ್ದಾಗ ಇಡೀ ದೇಶ ಅತ್ಯಂತ ಹುಮ್ಮಸ್ಸಿನಿಂದ ಆಡುವ, ನೋಡುವ ಕ್ರಿಕೆಟ್ ನಲ್ಲಿ ಭವಿಷ್ಯ ರೂಪಿಸಿಕೊಳ್ಳಲು ಮುಂದಾಗುತ್ತಾರೆ.


ನವೀನ್ ಶಂಕರ್ ಮತ್ತು ದಾನಿಶ್ ಸೇಠ್ ನಟನೆಯ ಈ ಚಿತ್ರವನ್ನು ಮನೋಜ್ ಕುಮಾರ್ ಕಾಲಾವನನ್ ಕಥೆ ಹೆಣೆದಿದ್ದರೆ , ಸುಮನ್ ಕುಮಾರ್ ಅವರು ನಿರ್ದೇಶಿಸಲಿದ್ದಾರೆ.
ಸುಮನ್ ಕುಮಾರ್ ಅವರು ಈ ಹಿಂದೆ ರಘುತಾತ ಚಿತ್ರವನ್ನು ನಿರ್ದೇಶಿಸಿದ್ದು , ವೆಬ್ ಸೀರಿಸ್ ಲೋಕದಲ್ಲಿ ಬಹಳ ಜನಪ್ರಿಯ ಆಗಿರುವ The Family Man ಮತ್ತು Farzi ಯ ಕಥೆಯನ್ನು ಹೆಣೆದಿದ್ದಾರೆ.


ಈ ಚಿತ್ರಕ್ಕೆ ಸಂಗೀತವನ್ನು ಬಡವ ರಾಸ್ಕಲ್ ಚಿತ್ರಕ್ಕೆ ಸಂಗೀತ ನೀಡಿದ್ದ ವಾಸುಕಿ ವೈಭವ್ ಅವರು ನೀಡಲಿದ್ದಾರೆ.
ಈ ಚಿತ್ರವನ್ನು ಕಾರ್ತಿಕ್ , ವಿಜಯ್ ಸುಬ್ರಮಣ್ಯಂ ಮತ್ತು ಯೋಗಿ ಜಿ ರಾಜ್ ಅವರು ನಿರ್ಮಿಸಲಿದ್ದಾರೆ.


ಕೆ ಆರ್ ಜಿ ಸ್ಟುಡಿಯೋಸ್ ನ 6 ವರ್ಷಗಳ ಚಿತ್ರರಂಗದ ಪಯಣದಲ್ಲಿ ಇದು 4 ನೇ ಚಿತ್ರ ನಿರ್ಮಾಣವಾಗಲಿದೆ.
ಕಿರಿಕ್ et 11 ಚಿತ್ರದ ಚಿತ್ರೀಕರಣ ಈ ವರ್ಷ ನಡೆಯಲಿರುವ ಕ್ರಿಕೆಟ್ ವಿಶ್ವಕಪ್ ಸಮಯದಲ್ಲೇ ಶುರುವಾಗಲಿದೆ.

error: Content is protected !!