Categories
ಸಿನಿ ಸುದ್ದಿ

ಹೀಗೊಂದು ರವಿಕೆ ಪ್ರಸಂಗ! ಟೀಸರ್ ರಿಲೀಸ್ ಆಯ್ತು

ಹೆಣ್ಣು ಮಕ್ಕಳು ಮನೆಯಲ್ಲಿ ಯಾವುದೇ ಸಮಾರಂಭವಾದರೂ ಸೀರೆಗೆ ತಕ್ಕಂತೆ ರವಿಕೆ ಹೊಲಿಸಿಕೊಳ್ಳುವುದು ರೂಡಿ.
ಅಂತಹ ರವಿಕೆಯ ಕುರಿತಾದ ” ರವಿಕೆ ಪ್ರಸಂಗ” ಎಂಬ ಸಿನಿಮಾ ತೆರೆಗೆ ಬರಲು ಸಿದ್ದವಾಗಿದೆ. ಪ್ರಚಾರದ ಮೊದಲ ಹೆಜ್ಜೆಯಾಗಿ ಚಿತ್ರದ ಟೀಸರ್ ಬಿಡುಗಡೆಯಾಗಿದೆ.


ನಮ್ಮ ದೃಷ್ಟಿ ಮೀಡಿಯಾ & ಪ್ರೊಡಕ್ಷನ್ ವತಿಯಿಂದ ನಿರ್ಮಾಣವಾಗಿರುವ ಎರಡನೇ ಚಿತ್ರವಿದು. ಶಂತನು ಮಹರ್ಷಿ, ಗಿರೀಶ್ ಗೌಡ, ನಿರಂಜನ್ ಗೌಡ ಹಾಗೂ ಶಿವರುದ್ರಯ್ಯ ಅವರು ನಿರ್ಮಾಣಕ್ಕೆ ಸಾಥ್ ನೀಡಿದ್ದಾರೆ. ನನ್ನ ಪತ್ನಿ ಪಾವನ ಸಂತೋಷ್ ಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. “ಬ್ರಹ್ಮ ಗಂಟು” ಧಾರಾವಾಹಿ ಖ್ಯಾತಿಯ ಗೀತಾಭಾರತಿ ಭಟ್, ಸಂಪತ್ ಮೈತ್ರೇಯ, ರಾಕೇಶ್ ಮಯ್ಯ, ಸುನನ್ ರಂಗನಾಥ್, ಪದ್ಮಜಾರಾವ್, ರಘು ಪಾಂಡೇಶ್ವರ್ ಹೀಗೆ ಸಾಕಷ್ಟು ಅನುಭವಿ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

ವಿನಯ್ ಶರ್ಮ ಸಂಗೀತ ನಿರ್ದೇಶನ, ಮುರಳಿಧರ್ ಎನ್ ಛಾಯಾಗ್ರಹಣ ಹಾಗೂ ರಘು ಶಿವರಾಮ್ ಸಂಕಲನವಿರುವ “ರವಿಕೆ ಪ್ರಸಂಗ” ಚಿತ್ರದ ಮೊದಲ ಪ್ರತಿ ಸದ್ಯದಲ್ಲೇ ಬರಲಿದೆ. ವಿಭಿನ್ನ ಕಥೆಯ ಈ ಚಿತ್ರ ಎಲ್ಲರಿಗೂ ಹಿಡಿಸಲಿದೆ ಎಂದು ಚಿತ್ರದ ಕುರಿತು ನಿರ್ದೇಶಕ ಸಂತೋಷ್ ಕೊಡೆಂಕೆರಿ ಮಾಹಿತಿ ನೀಡಿದರು.

ಈ ಚಿತ್ರದ ಕಥೆ ಬಹಳ ಇಷ್ಟವಾಯಿತು. ಪ್ರತಿಯೊಬ್ಬ ಹೆಣ್ಣುಮಕ್ಕಳಿಗೆ ರವಿಕೆ ಮೇಲೆ ಪ್ರೀತಿ. ಅದರ ಅಳತೆ ಸರಿಯಾಗಿರಬೇಕು ಎಂದು ಸಾಕಷ್ಟು ಸಲ ಟೈಲರ್ ಜೊತೆ ಚರ್ಚಿಸುತ್ತಾರೆ. ಈ ರೀತಿ ಮಹಿಳೆ ಹಾಗೂ ಟೈಲರ್ ನಡುವೆ ರವಿಕೆಗಾಗಿ ನಡಯುವ ಮುಖ್ಯ ವಿಷಯವೇ “ರವಿಕೆ ಪ್ರಸಂಗ” .

ಸಂಭಾಷಣೆ ಮಂಗಳೂರು ಕನ್ನಡದಲ್ಲಿರುತ್ತದೆ. ಎಲ್ಲರ ಮನಸ್ಸಿಗೆ, ವಿಶೇಷವಾಗಿ ಹೆಣ್ಣುಮಕ್ಕಳಿಗೆ ಈ ಚಿತ್ರ ಪ್ರಿಯವಾಗಲಿದೆ ಎಂದರು ನಾಯಕಿ ಗೀತಾಭಾರತಿ ಭಟ್.

ನಾನು ಇಪ್ಪತ್ತೈದು ವರ್ಷಗಳ ನನ್ನ ಸಿನಿಮಾ ಜರ್ನಿಯಲ್ಲಿ ನೂರಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದೇನೆ. ಅದರಲ್ಲಿ ನನ್ನ ಮನಸ್ಸಿಗೆ ಹತ್ತಿತವಾದ ಚಿತ್ರಗಳು ಕೆಲವು ಮಾತ್ರ ಅದರಲ್ಲಿ ಈ ಚಿತ್ರ ಕೂಡ ಒಂದು ಎಂದರು ನಟಿ ಪದ್ಮಜಾರಾವ್.

ಕಥೆ ಹಾಗೂ ಸಂಭಾಷಣೆ ಬರೆದಿರುವ ಪಾವನ ಸಂತೋಷ್, ಛಾಯಾಗ್ರಹಕ ಮುರಳಿಧರ್ ಎನ್, ಸಂಗೀತ ನಿರ್ದೇಶಕ ವಿನಯ್ ಶರ್ಮ ಹಾಗೂ ಚಿತ್ರದಲ್ಲಿ ನಟಿಸಿರುವ ರಾಕೇಶ್ ಮಯ್ಯ, ಪ್ರವೀಣ್ ಅಥರ್ವ, ರಘು ಪಾಂಡೇಶ್ವರ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

Categories
ಸಿನಿ ಸುದ್ದಿ

ಸ್ಕ್ಯಾಮ್ ಹಿಂದೆ ದತ್ತಣ್ಣ! ಬಂತು ಟೀಸರ್

ಈಗಿನ ಶಿಕ್ಷಣ ವ್ಯವಸ್ಥೆ ಹಾಗೂ ವಿದ್ಯಾರ್ಥಿಗಳನ್ನು ಕುರಿತಾದ “SCAM (1770)” ಚಿತ್ರದ ಟೀಸರ್ ಬಿಡುಗಡೆಯಾಗಿ ಜನಪ್ರಿಯವಾಗುತ್ತಿದೆ. ಹಿರಿಯ ನಟ ದತ್ತಣ್ಣ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು.

ನಮ್ಮ‌ ಕಾಲದ ಶಿಕ್ಷಣ ವ್ಯವಸ್ಥೆಗೂ ಈಗಿನ ಶಿಕ್ಷಣ ವ್ಯವಸ್ಥೆಗೂ ಸಾಕಷ್ಟು ವ್ಯತ್ಯಾಸವಿದೆ. ಆಗ 92 ಅಂಕ ಪಡೆದರೆ ಅವರೆ ಮೊದಲು. ಈಗ 99 ಬಂದರೂ ಸಾಕಾಗುವುದಿಲ್ಲ ಎನ್ನುತ್ತಾರೆ. ಶಿಕ್ಷಣದ ವ್ಯವಸ್ಥೆಯಲ್ಲಿ ನಡೆಯುತ್ತಿರುವ “scam” ಬಗ್ಗೆ ಈ ಚಿತ್ರ ಬರುತ್ತಿದೆ‌ . ಚಿತ್ರ ಯಶಸ್ವಿಯಾಗಲಿ ಎಂದು ದತ್ತಣ್ಣ ಹಾರೈಸಿದರು.

ಲಾಕ್ ಡೌನ್ ಸಮಯದಲ್ಲಿ ಹುಟ್ಟಿದ ಕಥೆಯಿದು. ನಾನು ಕೂಡ ಶಿಕ್ಷಣ ವ್ಯವಸ್ಥೆ ಕುರಿತಾದ ಎಷ್ಟೋ ಕೇಸ್ ಗಳನ್ನು ತೆಗೆದುಕೊಂಡಿದ್ದೇನೆ. ನಾವಿಬ್ಬರು ಸೇರಿ ಬರೆದ ಕಥೆ ನಿರ್ಮಾಪಕರಿಗೆ ಇಷ್ಟವಾಯಿತು ಎಂದು ಇಂದು ನಟೇಶ್(ವೈದ್ಯೆ) ಹಾಗೂ ನೇತ್ರಾವತಿ (ಅಡ್ವೊಕೇಟ್)ತಿಳಿಸಿದರು.

ಇದೊಂದು ಪ್ರಸ್ತುತ ಶಿಕ್ಷಣ ವ್ಯವಸ್ಥೆ ಆಧಾರಿತ ಚಿತ್ರ SCAM (1770). ಯಾವ ಅಭ್ಯಾಸ ತಪ್ಪಿದರೂ ಬದುಕಬಹುದು. ಆದರೆ ವಿದ್ಯಾಭ್ಯಾಸ ತಪ್ಪಿದ್ದರೆ ಬದುಕುವುದು ಕಷ್ಟ. ವಿದ್ಯಾರ್ಥಿಗಳು, ಪೋಷಕರು ಸೇರಿದಂತೆ ಶಿಕ್ಷಣಕ್ಕೆ ಸಂಬಂಧಪಟ್ಟ ಪ್ರತಿಯೊಬ್ಬರು ನೋಡಲೇಬೇಕಾದ ಚಿತ್ರವಿದು. ಟೀಸರ್ ಬಿಡುಗಡೆ ಮಾಡಿಕೊಟ್ಟ ದತ್ತಣ್ಣ ಅವರಿಗೆ ಹಾಗೂ ಇಡೀ ತಂಡಕ್ಕೆ ಧನ್ಯವಾದ ಎಂದರು ನಿರ್ದೇಶಕ ವಿಕಾಸ್ ಪುಷ್ಪಗಿರಿ.

ಡಿ.ಕ್ರಿಯೇಷನ್ಸ್ ಮೂಲಕ ಈ ಚಿತ್ರ ನಿರ್ಮಾಣ ಮಾಡಿರುವ ದೇವರಾಜ್ ಅವರು ಚಿತ್ರದ ಮಾತನಾಡಿದರು.

ನಾಯಕ ರಂಜನ್(“ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ” ಚಿತ್ರದ ಖ್ಯಾತಿ), ನಿಶ್ಚಿತ, ಹರಿಣಿ, ನಾರಾಯಣಸ್ವಾಮಿ, ಸಂಗೀತ ನಿರ್ದೇಶಕ ಸತೀಶ್ ಆರ್ಯನ್, ನಿರ್ದೇಶಕರ ಜೊತೆಗೂಡಿ ಚಿತ್ರಕಥೆ ಬರೆಯುತ್ತಿರುವ ಶಂಕರ್ ರಾಮನ್ ಮುಂತಾದ ಚಿತ್ರತಂಡದ ಸದಸ್ಯರು “SCAM (1770)” ಚಿತ್ರದ ಕುರಿತು ಮಾಹಿತಿ ನೀಡಿದರು.

Categories
ಸಿನಿ ಸುದ್ದಿ

ಬಿಸಿಲು ಕುದುರೆ ಏರಿ ಬರುವ ಹೃದಯ ಶಿವ! ಏಪ್ರಿಲ್ 21ಕ್ಕೆ ರಿಲೀಸ್

” ಮಂಡ್ಯ”, “ಮುಂಗಾರು ಮಳೆ”,
“ಗಾಳಿಪಟ” ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳಿಗೆ ಹಾಡು‌ ಬರೆದಿರುವ ಸಾಹಿತಿ ಹೃದಯಶಿವ ನಿರ್ದೇಶನದ “ಬಿಸಿಲು ಕುದುರೆ” ಚಿತ್ರ ಇದೇ ಏಪ್ರಿಲ್ 21 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಕನ್ನಡ ಚಿತ್ರರಂಗದೊಂದಿಗೆ ನನಗೆ ಎರಡು ದಶಕಗಳ ನಂಟು. ಕನ್ನಡದ ಹಲವು ಚಿತ್ರಗಳಿಗೆ ಹಾಡು ಬರೆದಿದ್ದೇನೆ. ಕನ್ನಡದಲ್ಲಿ ಇದು ನನ್ನ ಮೊದಲ ನಿರ್ದೇಶನದ ಚಿತ್ರ. ಅರಣ್ಯದಂಚಿನಲ್ಲಿ ತುಂಡುಭೂಮಿ ಹೊಂದಿರುವ ರೈತನ ಬವಣೆಯ ಕುರಿತಾದ ಚಿತ್ರವಿದು. ಒಂದೇ ಸರಕಾರದಡಿ ಕಾರ್ಯ ನಿರ್ವಹಿಸುವ ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆಗಳ ನಡುವೆ ಸಮನ್ವಯತೆ ಇಲ್ಲದೆ ಹೋದಾಗ ಕಾಡಂಚಿನ ರೈತನ ಪಾಡು ಏನಾಗುತ್ತದೆ ಎಂಬುದೇ ಕಥಾಹಂದರ. ಇಮ್ತಿಯಾಜ್ ಸುಲ್ತಾನ್ ಸಂಗೀತ ನಿರ್ದೇಶನದಲ್ಲಿ ಮೂರು ಹಾಡುಗಳು ಹಾಗೂ ಮೂರು ಬಿಟ್ಸ್ ಗಳು ಸುಮಧುರವಾಗಿ ಮೂಡಿಬಂದಿವೆ. ಅನೂಪ್ ಸೀಳಿನ್, ರವೀಂದ್ರ ಸೊರಗಾವಿ, ಇಮ್ತಿಯಾಜ್ ಸುಲ್ತಾನ್ ಹಾಡಿದ್ದಾರೆ.


ಸಂಪತ್ ಮೈತ್ರೇಯ, ಸುನೀತಾ, ಕರಿಸುಬ್ಬು, ಮಳವಳ್ಳಿ ಸಾಯಿಕೃಷ್ಣ, ವಿಕ್ಟರಿ ವಾಸು, ಜೊಸೈಮನ್ ಮುಂತಾದವರು ನಮ್ಮ ಚಿತ್ರದಲ್ಲಿ ನಟಿಸಿದ್ದಾರೆ. ಚಿತ್ರ ಇದೇ ಏಪ್ರಿಲ್ 21 ರಂದು ಬಿಡುಗಡೆಯಾಗಲಿದೆ ನೋಡಿ ಹಾರೈಸಿ ಎಂದು ನಿರ್ದೇಶಕ ಹಾಗೂ ನಿರ್ಮಾಪಕ ಹೃದಯಶಿವ ತಿಳಿಸಿದರು.

ತುಂಬಾ ಒಳ್ಳೆಯ ಪಾತ್ರ ನಿರ್ವಹಿಸಿರುವ ತೃಪ್ತಿ ಇದೆ ಎಂದರು ನಟ ಸಂಪತ್ ಮೈತ್ರೇಯ.

ಚಿತ್ರದಲ್ಲಿ ನಟಿಸಿರುವ ಸುನೀತಾ, ಕರಿಸುಬ್ಬು, ಜೊಸೈಮನ್, ವಿಕ್ಟರಿ ವಾಸು, ವೆಂಕಟೇಶ್, ಭಾಸ್ಕರ್ ಸೂರ್ಯ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ಛಾಯಾಗ್ರಹಕ ನಾಗಾರ್ಜುನ್. ಡಿ ಹಾಗೂ ಸಂಕಲನಕಾರ ಬಿ.ಎಸ್ ಕೆಂಪರಾಜು “ಬಿಸಿಲು ಕುದುರೆ” ಬಗ್ಗೆ ಮಾತನಾಡಿದರು.

Categories
ಸಿನಿ ಸುದ್ದಿ

ಸೈಂಧವ್ ಸಿನಿಮಾಗೆ ಕನ್ನಡ ಬೆಡಗಿ ನಾಯಕಿ : ದಗ್ಗುಭಾಟಿ ನಟನೆಯ ‘ಸೈಂಧವ್’ಗೆ ಶ್ರದ್ದಾ ಶ್ರೀನಾಥ್ ನಾಯಕಿ

ಯೂಟರ್ನ್ ಸಿನಿಮಾ ಮೂಲಕ ಕನ್ನಡ ಸಿನಿಪ್ರೇಕ್ಷಕರನ್ನು ರಂಜಿಸಿದ್ದ ಮೂಗುತಿ ಸುಂದರಿ ಶ್ರದ್ದಾ ಶ್ರೀನಾಥ್ ಸದ್ಯ ಬಹುಭಾಷಾ ನಟಿಯಾಗಿ ಮಿಂಚುತ್ತಿದ್ದಾರೆ. ಕನ್ನಡದ ಜೊತೆಗೆ ತಮಿಳು, ತೆಲುಗು, ಮಾಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿಯೂ ಸಕ್ರಿಯರಾಗಿರುವ ಶ್ರದ್ದಾ ಕೈ ತುಂಬಾ ಅವಕಾಶಗಳಿವೆ. ಇದೀಗ ಅವರು ಪ್ಯಾನ್ ಇಂಡಿಯಾ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

ವಿಕ್ಟರಿ ವೆಂಕಟೇಶ್ ಗೆ ಶ್ರದ್ದಾ ನಾಯಕಿ
ಟಾಲಿವುಡ್ ನಟ ವಿಕ್ಟರಿ ವೆಂಕಟೇಶ್ ನಟನೆಯ 75ನೇ ಪ್ಯಾನ್ ಇಂಡಿಯಾ ಸಿನಿಮಾ ‘ಸೈಂಧವ್’ ಭಾರೀ ನಿರೀಕ್ಷೆ ಹೆಚ್ಚಿಸಿದೆ. ಶೈಲೇಶ್ ಕೋಲನು ಸಾರಥ್ಯದಲ್ಲಿ ಮೂಡಿ ಬರ್ತಿರುವ ಈ ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯಗೊಂಡಿದ್ದು, ಸದ್ಯ ವೈಜಾಗ್ ನಲ್ಲಿ ಎರಡನೇ ಹಂತದ ಶೂಟಿಂಗ್ ನಡೆಯುತ್ತಿದೆ. ನಿಹಾರಿಕಾ ಎಂಟರ್ ಟೈನ್ಮೆಂಟ್ ನಡಿ ವೆಂಕಟ್ ಬೋಯನಪಲ್ಲಿ ನಿರ್ಮಿಸುತ್ತಿರುವ ಸೈಂಧವ್ ಗೆ ಕನ್ನಡತಿ ಶ್ರದ್ದಾ ಶ್ರೀನಾಥ್ ಎಂಟ್ರಿ ಕೊಟ್ಟಿದ್ದಾರೆ. ವಿಕ್ಟರಿಗೆ ವೆಂಕಟೇಶ್ ಗೆ ಜೋಡಿಯಾಗಿ ನಟಿಸ್ತಿರುವ ಮೂಗುತಿ ಸುಂದರಿಯ ಫಸ್ಟ್ ಲುಕ್ ಅನಾವರಣ ಮಾಡಲಾಗಿದೆ.

ಸೈಂಧವ್ ಸಿನಿಮಾದಲ್ಲಿ ಶ್ರದ್ದಾ ಮನೋಜ್ಞಾ ಎಂಬ ಪಾತ್ರದಲ್ಲಿ ಬಣ್ಣ ಹಚ್ಚಿದ್ದು, ಅವರ ಫಸ್ಟ್ ಲುಕ್ ನೋಡುಗರ ಗಮನಸೆಳೆಯುತ್ತಿದೆ. ಸೀರೆಯುಟ್ಟು ಹೋಮ್ಲಿ ಲುಕ್ ಕಾಣಿಸಿಕೊಂಡಿರುವ ಶ್ರದ್ದಾ, ಕೈಯಲ್ಲಿ ಟಿಫನ್ ಬಾಕ್ಸ್ ಹಿಡಿದು ಗಂಭೀರ ಆಲೋಚನೆಯಲ್ಲಿ ತೊಡಗಿದ್ದಾರೆ. ಜೆರ್ಸಿ ಸಿನಿಮಾದಲ್ಲಿ ಅದ್ಭುತ ಅಭಿಯನದ ಪ್ರದರ್ಶಿಸಿದ್ದ ಶ್ರದ್ದಾ ಶ್ರೀನಾಥ್, ಸೈಂಧವ್ ಸಿನಿಮಾದಲ್ಲಿ ಮತ್ತೊಮ್ಮೆ ಎಲ್ಲರ ಗಮನಸೆಳೆಯಲಿದ್ದಾರೆ.

ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ಈ ಚಿತ್ರದ ಮೂಲಕ ಸೌತ್ ಸಿನಿರಂಗ ಪ್ರವೇಶಿಸಿದ್ದಾರೆ. ತಾಂತ್ರಿಕವಾಗಿಯೂ ಶ್ರೀಮಂತಿಕೆಯಿಂದ ಕೂಡಿರುವ ಸೈಂಧವ್ ಸಿನಿಮಾಗೆ ಸಂತೋಷ್ ನಾರಾಯಣನ್ ಸಂಗೀತ ನಿರ್ದೇಶನ, ಎಸ್ ಮಣಿಕಂದನ್ ಛಾಯಾಗ್ರಹಣ, ಗ್ಯಾರಿ ಬಿಎಚ್ ಸಂಕಲನ ಮತ್ತು ಅವಿನಾಶ್ ಕೊಲ್ಲ ನಿರ್ಮಾಣ ವಿನ್ಯಾಸ ಮಾಡಿದ್ದು, ಕಿಶೋರ್ ತಲ್ಲೂರ್ ಸಹ ನಿರ್ಮಾಪಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಶೀಘ್ರದಲ್ಲೇ ಇತರ ಪಾತ್ರವರ್ಗ ರಿವೀಲ್ ಮಾಡಲಿರುವ ಚಿತ್ರತಂಡ, ಸೈಂಧವ್ ಸಿನಿಮಾವನ್ನು ಡಿಸೆಂಬರ್ 22 ರಂದು ಕ್ರಿಸ್ಮಸ್ ಬಿಡುಗಡೆ ಮಾಡುವುದಾಗಿ ಘೋಷಿಸಿದೆ.

Categories
ಸಿನಿ ಸುದ್ದಿ

ಜಾಕ್ ರಗಳೆ! ಇದು ಹೊಸಬರ ರಂಗು

ಕನ್ನಡ ಚಿತ್ರರಂಗದಲ್ಲೀಗ ಹೊಸ ಪ್ರಯೋಗಗಳ ಪರ್ವ ಕಾಲ. ಹೊಸಬರು ವಿಭಿನ್ನ ಪ್ರಯತ್ನದೊಂದಿಗೆ ಚಿತ್ರರಂಗಕ್ಕೆ ಅಡಿ ಇಡ್ತಿದ್ದಾರೆ. ಅದರ ಮುಂದುವರೆದ ಭಾಗವಾಗಿ ರೂಪಗೊಂಡಿರುವ ಸಿನಿಮಾ ರಂಗು ರಗಳೆ. ಅತೀವ ಕಲಾ ಪ್ರೇಮದಿಂದ ಯುವ ಪ್ರತಿಭೆ ಜಾಕ್ ನಿರ್ದೇಶಿಸುತ್ತಿರುವ ಈ ಚಿತ್ರದ ಮುಹೂರ್ತ ಬೆಂಗಳೂರಿನ ಪಂಚಮುಖಿ ಗಣಪತಿ ದೇಗುಲದಲ್ಲಿಂದು ನೆರವೇರಿದೆ.

ತಮಿಳು ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಜಾಕ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುವ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ. ರೋಮ್ಯಾಂಟಿಕ್ ಕಾಮಿಡಿ ಕಥಾಹಂದರದ ಈ ಚಿತ್ರದಲ್ಲಿ ಲವ್ ಮಾಕ್ಟೇಲ್ ಖ್ಯಾತಿಯ ಅಭಿಲಾಷ್ ದಳಪತಿ, ಗಟ್ಟಿಮೇಳ ಧಾರಾವಾಹಿ ಖ್ಯಾತಿಯ ಅಭಿದಾಸ್ ಹಾಗೂ ಮೆಟ್ರೋ ಸಾಗಾ ಮೂಲಕ ಮನೆ ಮಾತಾಗಿರುವ ಸುಘೋಷ್ ನಾಯಕರಾಗಿ ನಟಿಸುತ್ತಿದ್ದಾರೆ. ಈ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

ನಿರ್ದೇಶಕ ಜಾಕ್‌ ಮಾತನಾಡಿ, ನಮ್ಮದು ಬಿಗ್ ಟೀಂ ಇದೆ. ಈ ಪಯಣ ಶುರುವಾಗಿ ಆರೇಳು ತಿಂಗಳಾಯ್ತು. ಎಲ್ಲರೂ ಡೇ ನೈಟ್ ವರ್ಕ್ ಮಾಡ್ತಾ ಇದ್ದಾರೆ. ಎಲ್ಲರಿಗೂ ಧನ್ಯವಾದ ಎಂದರು.

ಸಂಗೀತ ನಿರ್ದೇಶಕ ಪೂರ್ಣಚಂದ್ರ, ಜಾಕ್, ಎಲ್ ವಿ ಪ್ರಸಾದ್ ಅಕಾಡೆಮಿಯಲ್ಲಿ ಟ್ರೈನಿಂಗ್ ತೆಗೆದುಕೊಂಡು, ತಮಿಳು ಸಿನಿಮಾಗಳಿಗೆ ಅಸಿಸ್ಟೆಂಟ್ ಮಾಡಿಕೊಂಡು ಒಳ್ಳೆ ಅನುಭವದ ಜೊತೆಗೆ ಸಿನಿಮಾ ಇಂಡಸ್ಟ್ರಿಗೆ ಎಂಟ್ರಿ ಕೊಡುತ್ತಿದ್ದಾರೆ. ಒಂದು ವರ್ಷದಿಂದ ತಂಡ ಕಟ್ಟಿಕೊಂಡು ಕೆಲಸ ಮಾಡುತ್ತಿದ್ದಾನೆ. ಇಡೀ ಸಿನಿಮಾ ಪಾತ್ರಗಳು ಎಂಟರ್ ಟೈನ್ ಮಾಡುತ್ತವೆ ಎಂದರು.

ಅಭಿಲಾಷ್ ಮಾತಾನಾಡಿ, ಕಂಪ್ಲೀಟ್ ಎಂಟರ್ ಟೈನ್ಮೆಂಟ್ ಪ್ಯಾಕೇಜ್ ಮೂಲಕ ನಾನು ಬರ್ತಿದ್ದೇವು. ಜಾಕ್ ನನಗೂ 12 ವರ್ಷದ ಪರಿಚಯ. ಪೂರ್ಣ ಅಣ್ಣನ ಬಗ್ಗೆ ಮಾತಾಡುವಷ್ಟು ದೊಡ್ಡವರಲ್ಲ. ಜಾಕ್ ನಂಬಿ ನಿರ್ಮಾಪಕರು ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಲವ್ ಮಾಕ್ಟೇಲ್ ನನಗೆ ದೊಡ್ಡ ಸಕ್ಸಸ್ ತಂದುಕೊಟ್ಟಿದೆ. ರಂಗು ರಗಳೆ ಮೂಲಕ ಲೀಡ್ ಆಗಿ ನಟಿಸುತ್ತಿದ್ದೇವೆ. ನಿಮ್ಮ ಬೆಂಬಲ ಇಡೀ ತಂಡದ ಮೇಲೆ ಇರಲಿ ಎಂದು ಹೇಳಿದರು.

ಅಭಿದಾಸ್ ಮಾತಾನಾಡಿ, ಸ್ಕ್ರೀಪ್ಟ್ ಕೇಳಿ ತುಂಬಾ ಇಷ್ಟವಾಯ್ತು. ಮೇ ಮೊದಲ ವಾರವೇ ಚಿತ್ರೀಕರಣ ಶುರು ಮಾಡುವ ಯೋಜನೆ ಹಾಕಿಕೊಂಡಿದ್ದೇವೆ. ಈ ಟೀಂ ಜೊತೆ ಕೆಲಸ ಮಾಡಲು ಎಕ್ಸೈಟ್ ಆಗಿದ್ದೇನೆ. ಗಟ್ಟಿಮೇಳ ಸೀರಿಯಲ್ ನಲ್ಲಿ‌ ನೀವೆಲ್ಲಾ ನೋಡಿ ಇರ್ತಿರಾ. ಈಗ ರಂಗು ರಗಳೆ ಸಿನಿಮಾ ಮೂಲಕ ಹೀರೋ ಆಗಿ ನಟಿಸುತ್ತಿದ್ದೇನೆ ಎಂದರು.

ಸುಘೋಷ್ ಮಾತನಾಡಿ, ಜಾಕ್ ಅಣ್ಣ ನನಗೆ ಫಿಲ್ಮಂ ಇನ್ಸ್ಟಿಟ್ಯೂಟ್ ನಲ್ಲಿ ಸೀನಿಯರ್. ಒಂದು ವರ್ಷದ ಹಿಂದೆಯೇ‌ ನಾನು ಸಿನಿಮಾ ಮಾಡುತ್ತಿದ್ದೇನೆ. ನಿನಗೊಂದು ರೋಲ್ ಇದೆ ಎಂದಿದ್ದರು. ಅದು ಇವತ್ತು‌ ಮುಹೂರ್ತದವರೆಗೂ ಬಂದಿದೆ‌. ನಿಮ್ಮ ಬೆಂಬಲ ನನ್ನ ಮೇಲೆ ನನ್ನ ತಂಡದ ಮೇಲೆ ಇರಲಿ ಎಂದರು.

ಶ್ರೀ ವಿಶ್ವಂ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಶಶಿಕಲಾ ಉಮೇಶ್ ರಂಗು ರಗಳೆ ಸಿನಿಮಾಗೆ ಬಂಡವಾಳ ಹೂಡಿದ್ದು, ಪೂರ್ಣಚಂದ್ರ ತೇಜಸ್ವಿ ಸಂಗೀತ, ಸಾಗರ್ ಎಂಬಿ ಸಂಕಲನ, ಶೇಖರ್ ಛಾಯಾಗ್ರಹಣವಿದೆ. ರಂಗಾಯಣ ರಘು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು, ಶೀಘ್ರದಲ್ಲಿಯೇ ಉಳಿದ ತಾರಾಬಳಗದ ಬಗ್ಗೆ ಚಿತ್ರತಂಡ ಮಾಹಿತಿ ನೀಡಲಿದೆ.

Categories
ಸಿನಿ ಸುದ್ದಿ

ರಾಘು ಟ್ರೇಲರ್ ಬಂತು: ಚಿನ್ನಾರಿ ಮುತ್ತನಿಗೆ ಶಿವಣ್ಣ ಸಾಥ್

ಕನ್ನಡ ಚಿತ್ರರಂಗದಲ್ಲೀಗ ಪ್ಯಾನ್ ಇಂಡಿಯಾ ಸಿನಿಮಾಗಳ ಜೊತೆ ಜೊತೆಯಲಿ ಭಿನ್ನ-ವಿಭಿನ್ನ ಹಾಗೂ ಪ್ರಯೋಗಾತ್ಮಕ ಚಿತ್ರಗಳು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗುತ್ತಿದೆ. ಇದೇ ಸಾಲಿಗೆ ಒಂದಿಷ್ಟು ಕೌತುಕಗಳನ್ನು ತನ್ನ ಒಡಲಿನಲ್ಲಿಟ್ಟುಕೊಂಡಿರುವ ರಾಘು ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಇದೇ 28ಕ್ಕೆ ರಾಜ್ಯಾದ್ಯಂತ ರಿಲೀಸ್ ಆಗುತ್ತಿರುವ ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ ಹೊಸ ಬಗೆಯ ರಾಘು ಚಿತ್ರದ ಟ್ರೇಲರ್ ಅನಾವರಣಗೊಂಡಿದೆ.

‘ರಾಘು’ಗೆ ಶಿವಣ್ಣ ಸಾಥ್

ಯುವ ನಿರ್ದೇಶಕ ಎಂ ಆನಂದ್ ರಾಜ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ರಾಘು ಸಿನಿಮಾ ಕನ್ನಡದ ಮಟ್ಟಿಗೆ ಪ್ರಯೋಗಾತ್ಮಕ ಚಿತ್ರವಾಗಿದೆ. ಹೊಸ ಬಗೆ ಥ್ರಿಲ್ ನೀಡುವ ಈ ಸಿನಿಮಾ ಪೂರ್ತಿ ವಿಜಯ್ ರಾಘವೇಂದ್ರ ಒಬ್ಬರೇ ಇರಲಿದ್ದಾರೆ. ಇದನ್ನು ಸೋಲೋ ಆಕ್ಟಿಂಗ್ ಸಿನಿಮಾ ಎನ್ನಬಹುದು. ಸೋಲೋ ಆಗಿ ಬರ್ತಿರುವ ಚಿನ್ನಾರಿ ಮುತ್ತನಿಗೆ ಶಿವಣ್ಣ ಸಾಥ್ ಕೊಟ್ಟಿದ್ದಾರೆ. ರಾಘು ಟ್ರೇಲರ್ ಗೆ ಶಿವಣ್ಣನ ಪವರ್ ಫುಲ್ ವಾಯ್ಸ್ ಸಿಕ್ಕಿದ್ದು, ಚಿತ್ರದ ಖದರ್ ಮತ್ತಷ್ಟು ಹೆಚ್ಚಿದೆ. ಜೀವನದ ದಾರಿಯಲ್ಲಿ ಕಷ್ಟ ಎಂಬ ಗುಡಿಗಳಿರುತ್ತದೆ. ಆದರೆ ಇವನ ದಾರಿಯಲ್ಲಿ ಆಪತ್ತು ಎಂಬ ಅಡ್ಡ ದೊಡ್ಡ ಗೋಡೆ ನಿಂತಿತ್ತು ಎಂಬ ಪಂಚಿಂಗ್ ಡೈಲಾಗ್ ಮೂಲಕ ರಾಘು ಟ್ರೇಲರ್ ತೆರೆದುಕೊಳ್ಳಲಿದೆ. ಶಿವಣ್ಣನ ವಾಯ್ಸ್, ವಿಜಯ್ ರಾಘವೇಂದ್ರ ಆಕ್ಟಿಂಗ್, ಉದಯ್ ಲೀಲಾ ಛಾಯಾಗ್ರಹಣ, ಸೂರಜ್ ಜೋಯಿಸ್ ಸಂಗೀತ ನೋಡುಗರ ಗಮನಸೆಳೆಯುತ್ತಿದೆ.

ಟ್ರೇಲರ್ ರಿಲೀಸ್ ಬಳಿಕ ಮಾತನಾಡಿದ ವಿಜಯ್ ರಾಘವೇಂದ್ರ, ರಾಘು ಸಿನಿಮಾ ಬಗ್ಗೆ ಮಾತಾನಾಡಲು ತುಂಬಾ ಅಂಶವಿದೆ. ಸಿನಿಮಾ ಹಿಂದೆ ಪಟ್ಟಿರುವ ಶ್ರಮ, ಟೆನ್ನಿಕಾಲಿಟಿಸ್ ಸೇರಿದಂತೆ ತುಂಬಾ ವಿಚಾರಗಳ ಬಗ್ಗೆ ಮಾತಾಡಬೇಕು. 28ಕ್ಕೆ ಸಿನಿಮಾ ರಿಲೀಸ್ ಆಗುತ್ತಿದೆ. ಸಿನಿಮಾದ ಟ್ರೇಲರ್ , ಸಾಂಗ್ ನೋಡಿ ಖುಷಿಪಡುತ್ತಿದ್ದೇವೋ ಅವೆಲ್ಲರದ ಬಗ್ಗೆ ಮಾತನಾಡಲು 28 ಆಗಬೇಕು. ಜನ ಸಿನಿಮಾ ನೋಡಬೇಕು. ಈಗ ಒಂದು ಹಿತವಾದ ಗೊಂದಲವಿದೆ. ಅದು ನಮ್ಮ ರಾಘು ಸಿನಿಮಾದ ಬಲ. ಸೋಲೋ ಆಕ್ಟರ್ ಚಿತ್ರವಾಗಿದ್ದು, ಒಬ್ಬನೇ ಕಲಾವಿದ ಇಡೀ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಾರೆ. 28ಕ್ಕೆ ಥಿಯೇಟರ್ ಗೆ ಬಂದು ಸಿನಿಮಾ ನೋಡಿ ಬೆಂಬಲಿಸಿ ಎಂದರು.

ನಿರ್ದೇಶಕ ಎಂ.ಆನಂದ್ ರಾಜ್ ಮಾತನಾಡಿ, ರಾಘು ಪಯಣಕ್ಕೆ ಬೆಂಬಲ ಕೊಟ್ಟ ನಿರ್ಮಾಪಕರಿಗೆ ಧನ್ಯವಾದ. ಎಲ್ಲಾ ಆಕ್ಟರ್ಸ್ಸ್ ಹಾಕಿಕೊಂಡು ಸಿನಿಮಾ ಮಾಡಿದಾಗ ನಿರ್ಮಾಪಕರು ಸಿಗುವುದು ಕಷ್ಟ. ಇನ್ನೂ ಸೋಲೋ ಆಕ್ಟರ್ ಇಟ್ಟುಕೊಂಡು ಕಥೆ ಎಣೆದು ಸಿನಿಮಾ ಮಾಡುವುದು ತುಸು ಕಷ್ಟವೇ. ಇದು ಸಂಪೂರ್ಣ ಟೆಕ್ನಿಕಲ್ ಚಿತ್ರವಾಗಿದ್ದು, ಸೋಲೋ ಆಕ್ಟರ್ ಕಥೆಯಾಗಿದ್ರೂ ಸಾಂಗ್ಸ್, ಫೈಟ್ಸ್, ಟ್ವಿಸ್ಟ್ ಎಲ್ಲವೂ ಇದೆ. ಇದೇ 28ಕ್ಕೆ ಥಿಯೇಟರ್ ನಲ್ಲಿ ಸಿನಿಮಾ ನೋಡಿ ಎಂಜಾಯ್ ಮಾಡಿ ಎಂದರು.

ನಿರ್ಮಾಪಕ ರನ್ವಿತ್ ಶಿವಕುಮಾರ್, ರಾಘು ಬರೀ ಸಿನಿಮಾವಲ್ಲ. ನಮ್ಮ ತಂಡಕ್ಕೆ ಒಂದು ಎಮೋಷನ್. ಹೊಸ ತಂಡ ಹೊಸ ಪ್ರೊಡಕ್ಷನ್ ಜೊತೆ ಬಂದಾಗ ಜನರಿಗೆ ತಲುಪಿಸಲು ಇರುವ ಸೇತುವ ಮಾಧ್ಯಮ. ಆರಂಭದಿಂದ ಇಲ್ಲಿವರೆಗೂ ಅದೇ ಪ್ರೀತಿ ತೋರಿಸುತ್ತಿದ್ದೀರ. ಅಂದುಕೊಂಡತೆ ಅಚ್ಚುಕಟ್ಟಾಗಿ ಸಿನಿಮಾ ಮುಗಿಸಿಕೊಂಡಿದ್ದೇವೆ. ದೊಡ್ಮನೆಯಿಂದ ಬೆಂಬಲ ಸಿಕ್ಕಿದೆ. ಶಿವಣ್ಣ ಸಿನಿಮಾ ನೋಡಿ ಖುಷಿಪಟ್ಟರು. ಕನ್ನಡಕ್ಕೆ ನಮ್ಮ ತಂಡದಿಂದ ಒಳ್ಳೆ ಸಿನಿಮಾ ಕೊಟ್ಟಿದ್ದೇವೆ. ಎಲ್ಲರೂ ಸಿನಿಮಾ ನೋಡಿ ಹಾರೈಸಿ ಎಂದರು.

ನಿರ್ಮಾಪಕ ಅಭಿಷೇಕ್ ಕೋಟ ಮಾತನಾಡಿ, ರಾಘು ಸರ್ ಅದ್ಭುತ ಕಲಾವಿದರು. ಆನಂದ್ ಗೆ ಧನ್ಯವಾದ. ಮುಂದಿನ ದಿನಗಳಲ್ಲಿ ಮತ್ತಷ್ಟು ಒಳ್ಳೆ ಸಿನಿಮಾ ಮಾಡಿ. ಇದೇ 28ಕ್ಕೆ ಥಿಯೇಟರ್ ನಲ್ಲಿ ಸಿನಿಮಾ ನೋಡಿ ಎಂದರು.

ಡಿಕೆ ಎಸ್ ಸ್ಟುಡಿಯೋ, ಕೋಟಾ ಫಿಲಂ ಫ್ಯಾಕ್ಟರಿ ಪ್ರೊಡಕ್ಷನ್ ನಡಿ ರಾಘು ಸಿನಿಮಾವನ್ನು ರನ್ವಿತ್ ಶಿವಕುಮಾರ್ ಹಾಗೂ ಅಭಿಷೇಕ ಕೋಟ ನಿರ್ಮಾಣ ಮಾಡಿದ್ದಾರೆ. ತಾಂತ್ರಿಕವಾಗಿ ಶ್ರೀಮಂತಿಕೆಯಿಂದ ಕೂಡಿದ್ದು, ಉದಯ್ ಲೀಲಾ ಛಾಯಾಗ್ರಹಣ, ವಿಜತೇತ್ ಚಂದ್ರ ಸಂಕಲನ, ರಿತ್ವಿಕ್ ಮುರುಳಿದರ್ ಹಿನ್ನೆಲೆ ಸಂಗೀತ ಚಿತ್ರಕ್ಕಿದೆ. ಸೂರಜ್ ಜೋಯಿಸಿ ಸಂಗೀತ ನಿರ್ದೇಶನ ಮಾಡಿರುವ ಚಿತ್ರದ ಎರಡು ಹಾಡುಗಳಿಗೆ ವಾಸುಕಿ ವೈಭವ್ ಹಾಗೂ all ok ಧ್ವನಿಯಾಗಿದ್ದಾರೆ.

Categories
ಸಿನಿ ಸುದ್ದಿ

ಜನಪದ ಸಂತ ಹಂಸಲೇಖ! ಎಸ್ ಪಿ ಬಿ ಹಾಡು ಶ್ರೀಮಂತ: ಇದು ಶ್ರೀಮಂತ ರೈತನ ವಿಷಯ…

ಹಂಸಲೇಖ ಹಾಗು ಎಸ್ ಪಿ ಬಿ ಕಾಂಬಿನೇಷನ್ ಹಾಡುಗಳು ಯಾರಿಗೆ ಗೊತ್ತಿಲ್ಲ ಹೇಳಿ? ಇವರಿಬ್ಬರ ಕಾಂಬಿನೇಷನ್ ನಲ್ಲಿ ಮೂಡಿಬಂದ ಹಾಡುಗಳು ಎವರ್ ಗ್ರೀನ್ ಅನ್ನೋದನ್ನ ಪ್ರತ್ಯೇಕವಾಗಿ ಹೇಳಬೇಕಿಲ್ಲ. ಸದಾ ಗುನುಗುವಂತಹ ಸುಪರ್ ಹಿಟ್ ಹಾಡು ಕೊಟ್ಟ ಈ ಜೋಡಿ ಮತ್ತೊಂದು ಅದ್ಬುತ ಗೀತೆಗೆ ಸಾಕ್ಷಿಯಾಗಿದೆ. ಅದುವೇ ಶ್ರೀಮಂತ ಸಿನಿಮಾ ಹಾಡು. ಎಸ್ ಪಿ ಬಿ ಕೊನೆಯದಾಗಿ ಹಾಡಿದ ಕನ್ನಡದ ಶ್ರೀಮಂತ ಸಿನಿಮಾ ಗೀತೆ ಎಂಬುದು ವಿಶೇಷ.

ಹೌದು, ಎಸ್ ಪಿ ಬಿ ಈಗ ನಮ್ಮೊಂದಿಗಿಲ್ಲ. ಆದರೂ ಅವರು ಬಿಟ್ಟು ಹೋದ ಸಾವಿರಾರು ಹಾಡುಗಳು ರಿಂಗಣಿಸುತ್ತಲೇ ಇವೆ. ಅದರಲ್ಲೂ ಹಂಸಲೇಖ ಜೊತೆಗಿನ ಕಾಂಬಿನೇಷನ್ ಹಾಡುಗಳನ್ನು ಮರೆಯೋಕೆ ಸಾಧ್ಯವಿಲ್ಲ. ಈಗ ಈ ಜೋಡಿ ಅಂಥದ್ದೇ ಮರೆಯದ ಹಾಡೊಂದನ್ನು‌ ನೀಡಿದೆ. ಎಸ್ ಪಿ ಬಿ ಹಾಡಿದ ಕೊನೆಯ ಗೀತೆ ಶ್ರೀಮಂತ ಸಿನಿಮಾದಲ್ಲಿದೆ.

ರೈತನೇ ಜಗತ್ತಿನ ಅತಿದೊಡ್ಡ ಶ್ರೀಮಂತ. ಅಂತ ಎಲ್ಲರೂ ಹೇಳುವುದು ಗೊತ್ತು. ಅದು ಹೇಗೆ ಎಂಬುದನ್ನು ನಿರ್ದೇಶಕ ಹಾಸನ ರಮೇಶ್ ತಮ್ಮ ‘ಶ್ರೀಮಂತ’ ಸಿನಿಮಾ ಮೂಲಕ ತೋರಿಸಿದ್ದಾರೆ. ರೈತನೇ ನಿಜವಾದ ಶ್ರೀಮಂತ ಎಂಬ ಸತ್ಯವನ್ನು ಈ ಅದ್ದೂರಿ ಸಿನಿಮಾ ಮೂಲಕ ಜನರಿಗೆ ಹೇಳೋಕೆ ತಂಡ ಸಜ್ಜಾಗಿದೆ.

ಈ ಸಿನಿಮಾಗೆ ಹಂಸಲೇಖ ಸಂಗಿತ ನೀಡಿದ್ದಾರೆ. ಇಲ್ಲಿನ ವಿಶೇಷ ಅಂದರೆ, ಎಸ್ ಪಿ ಬಿ ವಿಶೇಷ ಗೀತೆಯೊಂದಕ್ಕೆ ಧ್ವನಿಯಾಗಿದ್ದಾರೆ. ಚಿತ್ರದ ‘ಜನಪದ ಸಂತ’ ಎಂಬ ಗೀತೆ ಹಾಡುವ ಮೂಲಕ ಸಿನಿಮಾದ ಶ್ರೀಂಮತಿಕೆ ಹೆಚ್ಚಿಸಿದ್ದಾರೆ.

ಈಗಾಗಲೇ ಸಿನಿಮಾ ತಂಡ ಬಿಡುಗಡೆಗೂ ಮುನ್ನ ಭರ್ಜರಿ ಪ್ರಚಾರ ಮಾಡುತ್ತಿದೆ. ಇಲ್ಲಿ ಇನ್ನೊಂದು ವಿಶೇಷ ಅಂದರೆ, ರಿಯಲ್ ಹೀರೋ ಸೋನುಸೂದ್ ಅವರು ರೈತರಾಗಿಯೇ ಇಲ್ಲಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಹೊಸ ಕಲಾವಿದರ ಸಮ್ಮಿಲನ ಚಿತ್ರದಲ್ಲಿದೆ.

ಹಂಸಲೇಖ ಅವರ ಸಂಗೀತದ ಹಾಡುಗಳು ಬಿಡುಗಡೆ ಆಗಿದ್ದು ಕೇಳುಗರ ಮನಗೆದ್ದಿವೆ. ಸದ್ಯ ಮೇ ನಲ್ಲಿ ಸಿನಿಮಾ ತೆರೆಗೆ ಅಪ್ಪಳಿಸಲಿದೆ. ರಾಜ್ಯದ ರೈತರು ಕೂಡ ಈ ಶ್ರೀಮಂತನಿಗಾಗಿ ಎದುರು ನೋಡುತ್ತಿದ್ದಾರೆ. ಅಂದಹಾಗೆ ಮೇ 19 ಕ್ಕೆ ಶ್ರೀಮಂತ ರಿಲೀಸ್ ಆಗಲಿದೆ.

Categories
ಸಿನಿ ಸುದ್ದಿ

ಇಂಟ್ರೆಸ್ಟಿಂಗ್ ಮಾಯಾವಿ ಹಿಂದೆ ಶಿವಾಜಿ ! ಕೊಲೆಗಳ ರೋಚ’ಕತೆ’ಯ ಕುತೂಹಲ

ಚಿತ್ರ ವಿಮರ್ಶೆ

ಚಿತ್ರ : ಶಿವಾಜಿ ಸುರತ್ಕಲ್ 2

ನಿರ್ದೇಶನ : ಆಕಾಶ್ ಶ್ರೀವತ್ಸ

ನಿರ್ಮಾಣ: ರೇಖಾ, ಅನೂಪ್ ಗೌಡ
ತಾರಾಗಣ : ರಮೇಶ್ ಅರವಿಂದ್, ರಾಧಿಕಾ ನಾರಾಯಣ್, ಮೇಘನಾ ಗಾಂವ್ಕರ್, ಸಂಗೀತ ಶೃಂಗೇರಿ
ಬೇಬಿ ಅರಾಧ್ಯ, ರಾಘು ರಾಮನಕೊಪ್ಪ, ವಿನಾಯಕ ಜೋಷಿ,
ವಿದ್ಯಾಮೂರ್ತಿ ಇತರರು.

ರೇಟಿಂಗ್ : 3.5/5


ವಿಜಯ್ ಭರಮಸಾಗರ

ಯಾರವನು…?
ಪೊಲೀಸ್ ಅಧಿಕಾರಿಯಾಗಿರುವ ಆ ನಾಯಕ ಈ ಡೈಲಾಗ್ ಹೇಳುವ ಹೊತ್ತಿಗೆ, ಒಂದಲ್ಲ, ಎರಡಲ್ಲ, ಮೂರಲ್ಲ ನಾಲ್ಕು ನಿಗೂಢ ಕೊಲೆಗಳು ನಡೆದು ಹೋಗಿರುತ್ತವೆ! ಕೊಲೆಗಾರನನ್ನು ಬೆನ್ನತ್ತಿ ಹೋಗುವ ಆ ಪೊಲೀಸ್ ಅಧಿಕಾರಿ ಮತ್ತು ತಂಡಕ್ಕೆ ಐದನೇ ಕೊಲೆ ಮಾಡುವುದಾಗಿ ಚಾಲೆಂಜ್ ಹಾಕುವ ಆ ಕೊಲೆಗಾರ ಯಾರು ಅನ್ನೋದೇ ಈ ಚಿತ್ರದೊಳಗಿನ ಗುಟ್ಟು.

ಸಾಮಾನ್ಯವಾಗಿ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾಗಳಲ್ಲಿ ತಿರುವುಗಳೇ ಜೀವಾಳ. ಅಂತಹ ಅನೇಕ ಟ್ವಿಸ್ಟು-ಟೆಸ್ಟುಗಳ ನಡುವೆ ಸಾಗುವ ‘ಶಿವಾಜಿ ಸುರತ್ಕಲ್ 2’, ನಿಜಕ್ಕೂ ಕುತೂಹಲದಲ್ಲೇ ನೋಡುಗರನ್ನು ಹಿಡಿದಿಟ್ಟುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾನೆ.

ಇಂತಹ ಥ್ರಿಲ್ಲರ್ ಜಾನರ್ ಸಿನಿಮಾಗಳಿಗೆ ಕಥೆಯಲ್ಲಿ ಪಕ್ವತೆ ಇರಬೇಕು. ಅಷ್ಟೇ ಅಲ್ಲ, ಅಷ್ಟೇ ಸೂಕ್ಷ್ಮವಾಗಿ ನಿರೂಪಿಸುವ ಜಾಣ್ಮೆ ಇರಬೇಕು. ಆಗ ಮಾತ್ರ ಸಸ್ಪೆನ್ಸ್ ಥ್ರಿಲ್ಲರ್ ಜಾನರ್ ಸಿನಿಮಾಗಳು ನೋಡುಗನ ಮನ ಗೆಲ್ಲೋಕೆ ಸಾಧ್ಯ. ಅದನ್ನಿಲ್ಲಿ ನಿರ್ದೇಶಕರು ಪರಿಪೂರ್ಣವಾಗಿ ಸಾಧ್ಯವಾಗಿಸಿದ್ದಾರೆ ಅನ್ನೋದು ಸಮಾಧಾನ.

ಇದೊಂದು ಮಿಸ್ಟರಿ, ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ. ಆರಂಭದಿಂದ ಕೊನೆವರೆಗೂ ಕುತೂಹಲದಲ್ಲೇ ಸಿನಿಮಾ ಸಾಗುತ್ತದೆ. ಚಿತ್ರ ನೋಡಿ ಹೊರಬಂದ ಬಳಿಕವೂ ಕೊಂಚ ಎದೆ ಭಾರವಾಗಿಸುತ್ತದೆ. ಅಲ್ಲಲ್ಲಿ ಒಂದಷ್ಟು ದೃಶ್ಯಗಳು ಕಾಡುವುದು ಸುಳ್ಳಲ್ಲ. ಹಾಗಾದರೆ ಆ ಕಾಡುವಿಕೆಯ ವಿಶೇಷ ತಿಳಿಯುವ ಕುತೂಹಲವಿದ್ದರೆ ಒಮ್ಮೆ ಶಿವಾಜಿಯ ಇಂಟ್ರೆಸ್ಟಿಂಗ್ ಗೇಮ್ ನೋಡಿಬರಲು ಯಾವುದೇ ಅಡ್ಡಿಯಿಲ್ಲ.

ಕಥೆ ಹೇಳುವ ಮತ್ತು ತೋರಿಸುವ ವಿಧಾನ ಮತ್ತು ಜಾಣತನ ನಿರ್ದೇಶಕರಿಗಿದೆ. ಆ ಕಾರಣಕ್ಕೆ ಸಿನಿಮಾ ಶುರುವಿನಿಂದ ಹಿಡಿದು ಅಂತ್ಯದವರೆಗೂ ನೋಡಿಸಿಕೊಂಡು ಹೋಗುತ್ತೆ. ನೋಡುಗನ ಗಮನ ಆಚೀಚೆ ಹೋಗದ ರೀತಿ ಶಿವಾಜಿ ತನ್ನ ಚಾಕಚಕ್ಯತೆ ಮೂಲಕ ಹಿಡಿದಿಟ್ಟುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾನೆ. ಕೊಲೆ, ಕೊಲೆಗಾರ ಮತ್ತು ಪೊಲೀಸ್ ಆಟದಲ್ಲಿ ಸಾಗುವ ಸಿನಿಮಾದ ಮೊದಲರ್ಧ ಮುಗಿಯೋದೇ ಗೊತ್ತಾಗಲ್ಲ. ದ್ವಿತಿಯಾರ್ಧ ಕೂಡ ಇದಕ್ಕಿಂತಲೂ ಭಿನ್ನ‌ ನಿರೂಪಣೆ ಹಾಗು ಚಿತ್ರಕಥೆಯ ಬಿಗಿಯಾದ ಹಿಡಿತಕ್ಕೆ‌ ಸಾಕ್ಷಿಯಾಗಿದೆ.

ಮುಖ್ಯವಾಗಿ ಇಂತಹ ಕಥೆಗಳಲ್ಲಿ ಚಾಲೆಂಜ್ ಎನಿಸುವ ಸನ್ನಿವೇಶ ಸಹಜ. ಅದನ್ನಿಲ್ಲಿ ತುಂಬಾನೇ ಸಲೀಸಾಗಿ ನಿರ್ವಹಿಸಿರುವ ನಿರ್ದೇಶಕರ ಜಾಣತನ ಕಾಣುತ್ತದೆ. ಒಂದೇ ಕಡೆ ಸುತ್ತದ ಕಥೆಯಲ್ಲಿ ಸಾಕಷ್ಟು ಎಲಿಮೆಂಟ್ಸ್ ಇರುವುದರಿಂದ ಶಿವಾಜಿಗೆ ಒಳ್ಳೆಯ ಮಾರ್ಕ್ಸ್ ಕೊಡಬಹುದು.

ಒಂದು ಪರಿಪೂರ್ಣ ಸಿನಿಮಾಗೆ ಬೇಕಿರೋದು ಕಥೆ, ಚಿತ್ರಕಥೆ, ಮಾತುಕತೆ, ಪಾತ್ರಾಭಿನಯ ಅದಕ್ಕೆ ಪೂರಕವಾಗಿರುವ ಛಾಯಾಗ್ರಹಣ, ಸಂಕಲನ ಮತ್ತು ಸಂಗೀತ. ಇಲ್ಲಿ ಎಲ್ಲವೂ ಸರಿಯಾಗಿ ಹೆಗಲು ಕೊಟ್ಟಿರುವುದರಿಂದ ಶಿವಾಜಿ ತನ್ನ ಫೋಕಸ್ ಜೊತೆ ವೇಗ ಕಳೆದುಕೊಂಡಿಲ್ಲ.

ಸಿನಿಮಾ ನೋಡುವಾಗ ಎಲ್ಲೋ ಒಂದು ಕಡೆ ಗೊಂದಲ ಆಗೋದು ದಿಟ. ಅ ಎಲ್ಲಾ ಗೊಂದಲಗಳಿಗೂ ನಿರ್ದೇಶಕರು ಉತ್ತರಿಸುತ್ತ ಹೋಗುತ್ತಾರೆ. ಒಮ್ಮೊಮ್ಮೆ ಅದು ಹಾರರ್ ಕಥೆನಾ ಎನಿಸಿದರೂ ಒಂದೊಂದು‌ ತಿರುವು ಹೊಸ ಬಗೆಯ ರೂಪ ಪಡೆದುಕೊಳ್ಳುತ್ತ ಹೋಗುತ್ತೆ. ಇನ್ನು, ಕತ್ತಲು ಬೆಳಕಿನಾಟದ ಕಳ್ಳ ಪೊಲೀಸ್ ಆಟ ನೋಡೋಕೆ ಚಂದವಾದರೂ, ಅಲ್ಲಲ್ಲಿ ಕೇಳಿ ಬರುವ ಹಿನ್ನೆಲೆ ಸಂಗೀತ ಸಿನಿಮಾವೊಂದನ್ನು ನೆನಪಿಸುತ್ತದೆ. ಉಳಿದಂತೆ ಶಿವಾಜಿ ನೋಡುಗನ ಎರಡು ಗಂಟೆ ಸಮಯ ವ್ಯರ್ಥ ಮಾಡಲ್ಲ.

ಕಥೆ ಏನು?

ಆರಂಭದಲ್ಲೇ ನಾಯಕ ಪೊಲೀಸ್ ಅಧಿಕಾರಿ ಎದುರು ಒಂದು ಕೊಲೆ ನಡೆದು ಹೋಗುತ್ತೆ. ನಂತರ ಹುಡುಗಿಯೊಬ್ಬಳ ಹತ್ಯೆ. ಬಳಿಕ‌ಮತ್ತೊಂದು ಹುಡುಗಿಯ ಕೊಲೆ, ನೋಡುತ್ತಿದ್ದಂತೆ ಒಬ್ಬ ಅಧಿಕಾರಿ ಕೊಲೆ… ಆ ಕೊಲೆಗಾರನ ಬೆನ್ನು ಹತ್ತಿ ಹೋಗುವ ನಾಯಕನಿಗೆ
ಆ ಮಾಯಾವಿ ಯಾರು ಎಂಬ ಪ್ರಶ್ನೆ. ಕೊಲೆಗಾರ ಇನ್ನೂ ಒಂದು ಕೊಲೆ ಆಗುತ್ತೆ ಸಾಧ್ಯವಾದರೆ ತಪ್ಪಿಸು ಎಂಬ ಸವಾಲು ಹಾಕುತ್ತಾನೆ. ಆಮೇಲೆ ನಡೆಯೋದೇ ರೋಚಕ. ಈ ನಡುವೆ ಅಪ್ಪ ಮಗನ ಬಾಂಧವ್ಯ, ಹೆಂಡತಿಯ ಕಾಳಜಿ, ಮಗಳ ಮೇಲಿರುವ ಅಪ್ಪನ ಪ್ರೀತಿ… ಇತ್ಯಾದಿ ಕಥೆಯ ತಿರುಳು.

ಆ ಮಾಯಾವಿ ಯಾರು ಎಂಬ ಪ್ರಶ್ನೆ ನೋಡುಗರಲ್ಲೂ ಹುಟ್ಟಿಸಿ, ಕೊನೆಗೊಂದು ಅಂತ್ಯ ಕಾಣಿಸೋದೆ ಶಿವಾಜಿಯ ಗೇಮ್‌ ಪ್ಲಾನ್. ಕೊನೆಗೆ ಕೊಲೆಗಾರ ಯಾರು? ಯಾಕಾಗಿ ಕೊಲೆ ಮಾಡ್ತಾನೆ ಎಂಬುದು ತಿಳಿಯಬೇಕಾದರೆ ಮಿಸ್ ಮಾಡದೆ ಒಳ್ಳೇ ಥ್ರಿಲ್ ಪಡೆಯಬಹುದು.

ಯಾರು ಹೇಗೆ?


ರಮೇಶ್ ಅರವಿಂದ್ ಇಲ್ಲಿ ಪೊಲೀಸ್ ಅಧಿಕಾರಿಯಾಗಿ ಇಷ್ಟವಾಗುತ್ತಾರೆ. ತ್ಯಾಗಮಯಿ ನಟ ಎಂಬ ಟ್ಯಾಗ್ ಲೈನ್ ಇರುವ ರಮೇಶ್ ನಿಜಕ್ಕೂ ಇಲ್ಲಿ ಅದನ್ನು ಮರೆಸುವಂತಹ ನಟನೆ ಮಾಡಿದ್ದಾರೆ. ಒಬ್ಬ ಪಕ್ಕಾ ಪೊಲೀಸ್ ಅಧಿಕಾರಿಯಾಗಿ, ಮಗಳಿಗೆ ಪ್ರೀತಿಯ ಅಪ್ಪನಾಗಿ ಎಂದಿಗಿಂತ ಇಷ್ಟವಾಗುತ್ತಾರೆ.
ರಾಧಿಕಾ ನಾರಾಯಣ್, ಕಾಳಜಿ ತೋರುವ ಹೆಂಡತಿಯಾಗಿ ಗಮನ ಸೆಳೆದಿದ್ದಾರೆ.
ಪೊಲೀಸ್ ಅಧಿಕಾರಿಯಾಗಿ ಮೇಘನಾ ಗಾಂವ್ಕರ್ ಸಾಥ್ ನೀಡಿದರೆ, ಬೇಬಿ ಅರಾಧ್ಯ, ರಾಘು ರಾಮನಕೊಪ್ಪ ಸಿನಿಮಾದ ಭಾಗವಾಗಿದ್ದಾರೆ. ವಿನಾಯಕ ಜೋಷಿ, ವಿದ್ಯಾಮೂರ್ತಿ ಇತರರು ಪಾತ್ರಕ್ಕೆ ಮೋಸ ಮಾಡಿಲ್ಲ.

ಜೂಡಾ ಸ್ಯಾಂಡಿ ಸಂಗೀತ ಹೇಳಿಕೊಳ್ಳುವಂತಿಲ್ಲ. ಇರುವ ಯಾವ ಹಾಡು ಗುನುಗುವಂತಿಲ್ಲ. ಗುರು ಪ್ರಸಾದ್, ಮಧು ಅಂಬಟ್ ಅವರ ಕ್ಯಾಮೆರಾ ಕೈಚಳಕ ಶಿವಾಜಿಯ ಅಂದ ಹೆಚ್ಚಿಸಿದೆ.

Categories
ಸಿನಿ ಸುದ್ದಿ

ಕೋಮಲ್ ಮಾಡಿದ ಸಿಹಿ ಉಂಡೆ: ಹಾಸ್ಯವೇ ನಾಮಬಲದ ತಾಕತ್ತು; ಭರ್ಜರಿ ಇನ್ನಿಂಗ್ಸ್ ಗೆಲ್ಲಲು ಜೋರು ತಯಾರಿ

ಕೋಮಲ್ ಅಂದಾಕ್ಷಣ ನೆನಪಾಗೋದೇ ನಗು ಮತ್ತು‌ ನಗು. ಕನನ್ಡ ಸಿನಿಮಾರಂಗದಲ್ಲಿ ಬಿಡುವಿಲ್ಲದಂತಹ ಹಾಸ್ಯ ನಟರೆಂದೇ ಕರೆಸಿಕೊಳ್ಳುವ ಕೋಮಲ್, ತೆರೆಮೇಲೆ ನೋಡುಗರಲ್ಲಿ ಕಚಗುಳಿ ಇಟ್ಟು, ಅಪ್ಪಟ ಮನದುಂಬಿ ನಗಿಸೋ ನಟರು. ಅವರ ಡೈಲಾಗ್ ಹರಿಬಿಡುವುದಿರಲಿ, ಮ್ಯಾನರಿಸಂ ಆಗಲಿ, ಟೈಮಿಂಗ್ ಆಗಲಿ ಎಲ್ಲವೂ ಅಲ್ಟಿಮೇಟ್. ಯಾವುದೇ ಪಾತ್ರವಿರಲಿ ಸಲೀಸಲಾಗಿ ನಿರ್ವಹಿಸಿ ಆ. ಸನ್ನಿವೇಶವನ್ನು ಅಷ್ಟೇ ಸುಲಭಗೊಳಿಸುವ ಜಾಣತನ ಅವರದು.

ಕೋಮಲ್ ಹಾಸ್ಯ ನಟರಾಗಿಯೇ ಸದ್ದು ಮಾಡಿದವರು. ನಂತರ ಅವರು ಹೀರೋ ಆಗಿಯೂ ಸುದ್ದಿ ಆಗಿದ್ದುಂಟು. ಬಹು‌ಬೇಡಿಕೆಯ ನಟರಾಗಿದ್ದ ಕೋಮಲ್, ಒಂದಷ್ಟು ಸೋಲು ಒಪ್ಪಿಕೊಂಡರು. ಅವರ ಫ್ಯಾನ್ಸ್ ಕೂಡ ಕೋಮಲ್ ಅವರ ನಿರ್ಧಾರಕ್ಕೆ ಜೈ ಎಂದರು. ಅಭಿಮಾನಿಗಳಿಗೆ ಖುಷಿಪಡಿಸಬೇಕು ಅಂತಾನೇ ತರಹೇವಾರಿ ಸಿನಿಮಾ ಮಾಡಿಕೊಂಡು‌ ಬಂದ ಕೋಮಲ್, ಒಂದಷ್ಟು ಗ್ಯಾಪ್ ಪಡೆದರು. ಅಭಿಮಾನಿಗಳ ಒತ್ತಡ ಹೆಚ್ಚಾದಂತೆ ಪುನಃ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುವ ನಿರ್ಧಾರ ಮಾಡಿದರು.

ಕೋಮಲ್ ಈಗ ಬಹು ನಿರೀಕ್ಷೆಯ ಸಿನಿಮಾ ಕೊಡುತ್ತಿದ್ದಾರೆ. ಈಗಾಗಲೇ ಟ್ರೇಲರ್ ಮೂಲಕ ಕುತೂಹಲ ಮೂಡಿಸಿರುವ ಅವರ ‘ ಉಂಡೆನಾಮ’ ಏಪ್ರಿಲ್14ರಂದು ರಾಜ್ಯಾದ್ಯಂತ ತೆರೆಗೆ ಅಪ್ಪಳಿಸುತ್ತಿದೆ.

‘ಉಂಡೆನಾಮ’ ಹೆಸರೇ ಹೇಳುವಂತೆ ಪಕ್ಕಾ ಹಾಸ್ಯಮಯ ಕಥೆಯ ಹೂರಣ ಇರುವ ಸಿನಿಮಾ ಅಂತ ಪ್ರತ್ಯೇಕವಾಗಿ ಹೇಳಬೇಕಿಲ್ಲ. ಹೌದು, ಉಂಡೆನಾಮ, ಒಂದೊಳ್ಳೆಯ ಕಥಾಹಂದರದೊಂದಿಗೆ ನೋಡುಗರನ್ನು ನಗಿಸೋಕೆ ಬರುತ್ತಿದೆ.

ಕೋಮಲ್ ಈ ಸಿನಿಮಾ ಮೂಲಕ ಭರ್ಜರಿ ಇನ್ನಿಂಗ್ಸ್ ಶುರು ಮಾಡಲು ಅಣಿಯಾಗಿದ್ದಾರೆ. ತಮ್ಮ ಅಭಿಮಾನಿಗಳಿಗೆ ಬಹುದಿನಗಳ ಬಳಿಕ ಕಚಗುಳಿ ಇಡಲು ಬರುತ್ತಿದ್ದಾರೆ. ಆ ದಿನಗಳಿಗೆ ನೋಡುಗರನ್ನು ಕರೆದೊಯ್ಯಲು ಸಜ್ಜಾಗಿರುವ ಕೋಮಲ್, ಉಂಡೆನಾಮ ಮೂಲಕ ಮತ್ತೆ ಅದೇ ಜಯದ ಟ್ರ್ಯಾಕ್ ಗೆ ಮರಳುವ ಉತ್ಸಾಹದಲ್ಲಿದ್ದಾರೆ.

ಡಾ.ಟಿ ಆರ್ ಚಂದ್ರಶೇಖರ್ ಅರ್ಪಿಸುವ ಈ ಚಿತ್ರವನ್ನು ಎನ್. ಕೆ. ಸ್ಟುಡಿಯೋಸ್ ಬ್ಯಾನರ್ ನಲ್ಲಿ ನಂದಕಿಶೋರ್ ಸಿ. ನಿರ್ಮಿಸಿದ್ದಾರೆ. ಕೆ.ಎಲ್. ರಾಜಶೇಖರ್ ನಿರ್ದೇಶನವಿದೆ. ನವೀನ್ ಕುಮಾರ್ ಎಸ್ ಛಾಯಾಗ್ರಹಣವಿದೆ. ಶ್ರೀಧರ್ ವಿ ಸಂಭ್ರಮ್ ಸಂಗೀತ ನಿರ್ದೇಶನ ಹಾಗೂ ಕೆ.ಎಂ.ಪ್ರಕಾಶ್ ಅವರ ಸಂಕಲನವಿದೆ.

ಕೋಮಲ್ ಜೊತೆ ಧನ್ಯ ಬಾಲಕೃಷ್ಣ, ಹರೀಶ್ ರಾಜ್, ತಬಲ ನಾಣಿ, ಕೆಜಿಎಫ್ ಸಂಪತ್, ತನಿಷಾ, ವೈಷ್ಣವಿ, ಅಪೂರ್ವ ಮುಂತಾದವರು “ಉಂಡೆನಾಮ” ಚಿತ್ರದಲ್ಲಿದ್ದಾರೆ.

Categories
ಸಿನಿ ಸುದ್ದಿ

ಶಿವಾಜಿ ಜಾಣತನಕ್ಕೆ ಆಕಾಶ್ ಶ್ರೀವತ್ಸ ಕಾರಣ! ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾಗೆ ಹೆಚ್ಚಿದ ಕುತೂಹಲ

ರಮೇಶ್ ಅರವಿಂದ್ ಅಭಿನಯದ ‘ಶಿವಾಜಿ ಸುರತ್ಕಲ್ 2’ ಚಿತ್ರ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ. ಈಗಾಗಲೇ ಟ್ರೇಲರ್ ಎಲ್ಲರಲ್ಲೂ ಕುತೂಹಲ ಮೂಡಿಸಿದ್ದು, ಸಿನಿಮಾ ಕೂಡ ನೋಡುವ ಕಾತುರ ಹೆಚ್ಚಿಸಿದೆ ಏಪ್ರಿಲ್ 14ರಂದು ರಾಜ್ಯಾದ್ಯಂತ ರಿಲೀಸ್ ಆಗುತ್ತಿದೆ.

ಇಂತಹ ಥ್ರಿಲ್ಲರ್ ಜಾನರ್ ಸಿನಿಮಾಗಳಿಗೆ ಮುಖ್ಯವಾಗಿ ಬೇಕಿರೋದು. ನಿರೂಪಣೆ. ನಿರ್ದೇಶಕ ಆಕಾಶ್ ಶ್ರಿವತ್ಸ ವಿಶೇಷ ಎನ್ನುವಂತೆ ಈ ಸಿನಿಮಾದ ನಿರೂಪಣೆಯ ಜವಾಬ್ದಾರಿ ಹೊತ್ತು ನೋಡುಗರ ಮೊಗದಲ್ಲಿ ಒಂದಷ್ಟು ಮಂದಹಾಸ ಮೂಡಿಸುವ ಹುಮ್ಮಸ್ಸಿನಲ್ಲಿದ್ದಾರೆ.

ಅಂದಹಾಗೆ, ಕೋವಿಡ್ ಸಮಯದಲ್ಲಿ ಅವರಿಗೆ ಈ ಕಥೆ ಹೊಳೆದಿದೆ. ಕಥೆ ಲೈನ್ ಹೊಳೆದಿದ್ದೇ ತಡ,. ಪ್ರತಿ ದಿನವೂ ರಮೇಶ್ ಅರವಿಂದ್ ಅವರ ಜೊತೆ ಫೋನ್ ನಲ್ಲಿ ಕಥೆ ಬಗ್ಗೆ ಚರ್ಚಿಸಿ ಅದಕ್ಕೊಂದು ರೂಪ ಕೊಡಲು ಸಾಧ್ಯವಾದ ಬಗ್ಗೆ ಹೇಳುತ್ತಾರೆ ಅವರು.

ಅಂದಹಾಗೆ, ಇದೊಂದು ಮಿಸ್ಟರಿ, ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ. ಆರಂಭದಿಂದ ಕೊನೆಯವರೆಗೂ ಕುತೂಹಲ ಕಾದಿರಿಸಿಯೇ ಸಿನಿಮಾ ಸಾಗುತ್ತದೆ. ಸಿನಿಮಾ ಮುಗಿದ ಬಳಿಕವೂ ಒಂದಷ್ಟು ಕಾಡುತ್ತದೆ. ಅಲ್ಲೊಂದು ಮಾಯಾವಿ ಜಗತ್ತು.ಲ ಇದೆ. ಆ ಮಾಯಾವಿ ಯಾರು ಎಂಬುದೇ ನಿಗೂಢ.‌ಅದನ್ನು ಅರಿಯಬೇಕಾದರೆ ಸಿನಿಮಾ‌ ನೋಡಬೇಕು ಎಂಬುದು ನಿರ್ದೇಶಕ ಆಕಾಶ್ ಶ್ರೀವತ್ಸ ಅವರ ಮಾತು.

ನಟ ರಮೇಶ್ ಅರವಿಂದ್ ಈ ಚಿತ್ರದ ಮೇಲೆ ಸಾಕಷ್ಟು ನಂಬಿಕೆ ಇಟ್ಟಿದ್ದಾರೆ. ಕಾರಣ, ಸಿನಿಮಾದ ಕಥೆ ಹಾಗು ನಿರೂಪಣೆ. ನಿರ್ದೇಶಕ ಆಕಾಶ್ ಶ್ರೀವತ್ಸ ಅವರ ಉತ್ಸಾಹ ದೊಡ್ಡದು ಎಂಬುದು ರಮೇಶ್ ಅರವಿಂದ್ ಮಾತು

ರೇಖಾ ಕೆ.ಎನ್ ಹಾಗೂ ಅನೂಪ್ ಗೌಡ ಚಿತ್ರದ ನಿರ್ಮಾಪಕರು. ಪಾಸಿಟಿವ್ ಟೀಂ ಜೊತೆಗೂಡಿ ಮಾಡಿರುವ ಸಿನಿಮಾ ಇದಾಗಿರುವುದರಿಂದ ಯಶಸ್ಸು ಗ್ಯಾರಂಟಿ ಎಂಬ ನಂಬಿಕೆ ಆವರದು.

ಮೇಘನಾ ಗಾಂವ್ಕರ್, ರಾಧಿಕಾ ನಾರಾಯಣ್ ಹಾಗೂ ಸಂಗೀತ ಶೃಂಗೇರಿ ಪ್ರಮುಖ ಆಕರ್ಷಣೆ.
ಬೇಬಿ ಅರಾಧ್ಯ, ರಾಘು ರಾಮನಕೊಪ್ಪ, ವಿನಾಯಕ ಜೋಷಿ,
ವಿದ್ಯಾಮೂರ್ತಿ, ನಿಧಿ ಹೆಗಡೆ,
ಪುನೀತ್ ಬಿ.ಎ ಮೊದಲಾದ ಕಲಾವಿದರು ಚಿತ್ರದಲ್ಲಿದ್ದಾರೆ.

ಏಪ್ರಿಲ್ 14 ರಂದು ಗ್ರ್ಯಾಂಡ್ ಆಗಿ ರಿಲೀಸ್ ಆಗುತ್ತಿರುವ ಸಿನಿಮಾ, ಸದ್ಯ ನಿರೀಕ್ಷೆ ಹೆಚ್ಚಿಸಿರುವುದಂತೂ ಗ್ಯಾರಂಟಿ.

error: Content is protected !!