Categories
ಸಿನಿ ಸುದ್ದಿ

ತನುಜಾ ಮೋಷನ್ ಪೋಸ್ಟರ್ ರಿಲೀಸ್…

2020 ಇಡೀ ದೇಶವೇ ಕೊರೋನ ಹಾವಳಿಯಿಂದ ತತ್ತರಿಸಿ ಹೋಗಿದ್ದ ಸಮಯ. ಅಂತಹ ಸಮಯದಲ್ಲಿ ಆಗಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ.ಸುಧಾಕರ್, ವಿಶ್ವೇಶ್ವರ್ ಭಟ್ ಹಾಗೂ ಪ್ರದೀಪ್ ಈಶ್ವರ್ ಅವರ ಸಹಾಯದಿಂದ ಶಿವಮೊಗ್ಗ ಜಿಲ್ಲೆಯ ಕುಗ್ರಾಮದ ಹುಡುಗಿ ತನುಜಾ ಬೆಂಗಳೂರಿಗೆ ಬಂದು ನೀಟ್ ಪರೀಕ್ಷೆ ಬರೆದಿದ್ದು ಎಲ್ಲರಿಗೂ ತಿಳಿದ ಸಂಗತಿ. ಈ ಘಟನೆಯನ್ನು ಪತ್ರಕರ್ತ ವಿಶ್ವೇಶ್ವರ ಭಟ್ ತಮ್ಮ ಅಂಕಣದಲ್ಲಿ ಬರೆದುಕೊಂಡಿದ್ದರು. ವಿಶ್ವೇಶ್ವರ ಭಟ್ ಅವರಿಂದ ಅನುಮತಿ ಪಡೆದ ಹರೀಶ್ ಎಂ.ಡಿ ಹಳ್ಳಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

“ತನುಜಾ” ಚಿತ್ರದ ಮೋಷನ್ ಪೋಸ್ಟರ್ ಇತ್ತೀಚೆಗೆ ಬಿಡುಗಡೆಯಾಯಿತು. ಪತ್ರಕರ್ತ ವಿಶ್ವೇಶ್ವರ ಭಟ್ ಬಿಡುಗಡೆ ಮಾಡಿ ಶುಭ ಹಾರೈಸಿದರು.

ನಾನು ಮೊದಲು ಪರಿಶ್ರಮ ನೀಟ್ ಅಕಾಡೆಮಿಯ ಪ್ರದೀಪ್ ಈಶ್ವರ್ ಅವರನ್ನು ಅಭಿನಂದಿಸುತ್ತೇನೆ. ಅವರಿಂದಲೇ ತನುಜಾ ಪರೀಕ್ಷೆ ಬರೆಯಲು ಸಾಧ್ಯವಾಗಿದ್ದು‌. ನನ್ನ ಅಂಕಣ ಓದಿ‌ ಕೆಲವರು ಚಿತ್ರ ಮಾಡುವುದಾಗಿ ಹೇಳಿದರು. ಅದರಲ್ಲಿ ಹರೀಶ್ ಕೂಡ ಒಬ್ಬರು. ಅವರ ಸಿನಿಮಾ ಮೇಲಿನ ಆಸಕ್ತಿ ಹಾಗೂ ಶ್ರದ್ದೆ ನಿಜಕ್ಕೂ ನನಗೆ ಆಶ್ಚರ್ಯ ಉಂಟು ಮಾಡಿತು ಚಿತ್ರ ಮಾಡುವಲ್ಲಿ ಹರೀಶ್ ರವರು ಸಾಕಷ್ಟು ಪರಿಶ್ರಮವನ್ನ ಪಟ್ಟಿದ್ದಾರೆ ಬಹಳ ಕನಸುಗಳನ್ನು ಭರವಸೆ ಇಟ್ಟುಕೊಂಡಿರುವ ನಿರ್ದೇಶಕ ತನುಜಾ ಚಿತ್ರವನ್ನು ಅವರು ಚೆನ್ನಾಗಿ ನಿರ್ದೇಶಿಸಿದ್ದಾರೆ. ನಾನು ಕೂಡ ಅಭಿನಯಿಸಿದ್ದೇನೆ. ಆಗಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹಾಗೂ ಸಚಿವ ಸುಧಾಕರ್ ಅವರು ಸಹ ತನುಜಾ ಪರೀಕ್ಷೆ ಬರೆಯಲು ಮಾಡಿದ್ದ ಉಪಕಾರ ಸ್ಮರಣೀಯ. ಈ ಚಿತ್ರದ ಬಗ್ಗೆ ಪ್ರಧಾನಿ ಮೋದಿಯವರ ಗಮನಕ್ಕೆ ತಂದಿದ್ದು, ಚಿತ್ರದ ಕೊನೆಯಲ್ಲಿ ಅವರು ಕೆಲವು ಸೆಕೆಂಡ್ ಗಳ ಕಾಲ ಅವರು ಮಾತನಾಡುವ ಸಾಧ್ಯತೆ ಇದೆ ಎಂದು ಪತ್ರಕರ್ತ ವಿಶ್ವೇಶ್ವರ ಭಟ್ ತಿಳಿಸಿದರು.

ವಿಶ್ವೇಶ್ವರ ಭಟ್ ಅವರ ಅಂಕಣದಿಂದ ಪ್ರೇರಿತನಾದ ನಾನು, ಈ ಚಿತ್ರದ ನಿರ್ದೇಶನಕ್ಕೆ ಮುಂದಾದೆ. ನನ್ನ ಹಲವು ಸ್ನೇಹಿತರು ಬಂಡವಾಳ ಹೂಡಿದರು. ಒಂದು ದಿನದಲ್ಲಿ ನಡೆಯುವ ಕಥೆಯಿದು. ಶಿವಮೊಗ್ಗ, ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಸುಧಾಕರ್, ಪತ್ರಕರ್ತ ವಿಶ್ವೇಶ್ವರ ಭಟ್ ಮುಂತಾದ ಗಣ್ಯರು ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಸೆಪ್ಟೆಂಬರ್ ಅಥವಾ ಅಕ್ಟೋಬರ್ ತಿಂಗಳಲ್ಲಿ ಚಿತ್ರ ತೆರೆಗೆ ಬರಲಿದೆ ಎಂದರು ನಿರ್ದೇಶಕ ಹರೀಶ್ ಎಂ.ಡಿ ಹಳ್ಳಿ.

ನಾನು ಈ ಸಿನಿಮಾ ಮಾಡದೆ ಹೋಗಿದ್ದರೆ, ನನಗೆ ತುಂಬಾ ನಷ್ಟವಾಗುತ್ತಿತ್ತು. ಈ ಪಾತ್ರದಲ್ಲಿ ಕಾಣಿಸಿಕೊಂಡಿರುವುದು ನನಗೆ ಖುಷಿಯಾಗಿದೆ ಎಂದರು “ತನುಜಾ” ಪಾತ್ರಧಾರಿ ಸಪ್ತ ಪಾವೂರ್.

ನೀಟ್ ಅಕಾಡೆಮಿಯ ಪ್ರದೀಪ್ ಈಶ್ವರ್. ಆಗಿನ ಮುಖ್ಯಮಂತ್ರಿಗಳಿಗೆ ವಿಶೇಷಾಧಿಕಾರಿಯಾಗಿದ್ದ ಡಾ ಕೆ.ಆರ್ ಕಾರ್ತಿಕ್ ತಮ್ಮ ಅನುಭವ ಹಂಚಿಕೊಂಡರು.

ಚಿತ್ರದಲ್ಲಿ ನಿರ್ದೇಶಕರ ಕೆಲವು ಗೆಳೆಯರು ನಿರ್ಮಾಪಕರಾಗಿದ್ದು ಚಂದ್ರಶೇಖರ್ ಗೌಡ ಹಾಗೂ ಪ್ರಕಾಶ್ ಮದ್ದೂರು ನಿರ್ಮಾಪಕರ ಪರವಾಗಿ ಮಾತನಾಡಿದರು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ ಹರೀಶ್ ಹಾಗೂ ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಇಂತಹ ಒಳ್ಳೆಯ ಪ್ರಯತ್ನ ಮಾಡಿರುವ ಚಿತ್ರತಂಡಕ್ಕೆ ಶುಭಾಶಯ ಹೇಳಿದರು.

ಹರೀಶ್ ಎಂ.ಡಿ ಹಳ್ಳಿ ನಿರ್ದೇಶನವಿರುವ ಈ ಚಿತ್ರದ
ನಿರ್ಮಾಪಕರು ಚಂದ್ರಶೇಖರ ಗೌಡ ಹಾಗೂ ಮನೋಜ್ ಬಿ ಜಿ. ಪ್ರಕಾಶ್ ಮದ್ದೂರು, ಅನಿಲ್ ಷಡಾಕ್ಷರಿ, ಗಿರೀಶ .ಕೆ – ಗೋವರ್ಧನ ಬಿ, ಅವಿನಾಶ್ ಗೌಡ ಈ ಚಿತ್ರದ ಸಹ ನಿರ್ಮಾಪಕರು. ಪ್ರದ್ಯೋತನ್ ಸಂಗೀತ ನಿರ್ದೇಶನ, ರವೀಂದ್ರನಾಥ ಛಾಯಾಗ್ರಹಣ ಹಾಗೂ
ಉಮೇಶ್ ಆರ್ ಬಿ ಸಂಕಲನವಿರುವ ಈ ಚಿತ್ರದ
ಕಾರ್ಯಕಾರಿ ನಿರ್ಮಾಪಕರು ರಘುನಂದನ್ ಎಸ್ ಕೆ‌.

Categories
ಸಿನಿ ಸುದ್ದಿ

ಮಾಫಿಯಾದಲ್ಲಿ ಪ್ರಜ್ವಲ್ ಭರ್ಜರಿ ಫೈಟ್! ಹೈದರಾಬಾದ್ ನಲ್ಲಿ ಬಿಡುವಿಲ್ಲದ ಶೂಟಿಂಗ್…

ಬೆಂಗಳೂರು ಕುಮಾರ್ ಫಿಲಂಸ್ ಬ್ಯಾನರ್ ನಲ್ಲಿ ಕುಮಾರ್ ಬಿ ನಿರ್ಮಿಸುತ್ತಿರುವ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ ಚಿತ್ರ “ಮಾಫಿಯಾ”.

ಲೋಹಿತ್ ಹೆಚ್ ನಿರ್ದೇಶನದ ಈ ಚಿತ್ರದ ಸಾಹಸ ಸನ್ನಿವೇಶವೊಂದರ ಚಿತ್ರೀಕರಣ ಹೈದರಾಬಾದ್ ನ ರಾಮೋಜಿ ಫಿಲಂಸಿಟಿಯಲ್ಲಿ ಅದ್ಧೂರಿ ವೆಚ್ಚದಲ್ಲಿ, ನಡೆಯುತ್ತಿದೆ. ವಿನೋದ್ ಅವರ ಸಾಹಸ ಸಂಯೋಜನೆಯಲ್ಲಿ ಮೂಡಿಬರುತ್ತಿರುವ ಈ ಸಾಹಸ ಸನ್ನಿವೇಶದಲ್ಲಿ ಪ್ರಜ್ವಲ್ ದೇವರಾಜ್ ಹಾಗೂ ಸಹ ಕಲಾವಿದರು ಪಾಲ್ಗೊಂಡಿದ್ದಾರೆ. ಚಿತ್ರದಲ್ಲಿ ನಾಲ್ಕು ಸಾಹಸ ಸನ್ನಿವೇಶಗಳಿದೆ. ಇದು ಕ್ಲೈಮ್ಯಾಕ್ಸ್ ಭಾಗದ ಸಾಹಸ ದೃಶ್ಯ.

“ಮಾಫಿಯಾ” ಚಿತ್ರ ತುಂಬಾ ಚೆನ್ನಾಗಿ ಮೂಡಿ ಬರುತ್ತಿದ್ದು, ಪ್ರಜ್ವಲ್ ಅವರ ಈವರೆಗಿನ ಸಿನಿಪಯಣದ ಅತ್ಯುತ್ತಮ ಚಿತ್ರವಾಗಲಿದೆ ಎಂಬ ಭರವಸೆಯಿದೆ. ಈ ಚಿತ್ರಕ್ಕಾಗಿ ಪ್ರಜ್ವಲ್ ಅವರು ಸಹ ಸಾಕಷ್ಟು ಶ್ರಮ ವಹಿಸುತ್ತಿದ್ದಾರೆ. ಅವರ ಸಹಕಾರಕ್ಕೆ ಧನ್ಯವಾದ ಎಂದರು ನಿರ್ಮಾಪಕ ಕುಮಾರ್.

ಈ ಸಾಹಸ ಸನ್ನಿವೇಶದ ನಂತರ ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿರುತ್ತದೆ. ಆ ಹಾಡಿನ ಚಿತ್ರೀಕರಣವಾದರೆ ಚಿತ್ರೀಕರಣ ಮುಕ್ತಾಯವಾಗಲಿದೆ.

ಎಸ್ ಪಾಂಡಿಕುಮಾರ್ ಛಾಯಾಗ್ರಹಣ ಹಾಗೂ ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ, ದೇವರಾಜ್ , ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.

Categories
ಸಿನಿ ಸುದ್ದಿ

ಭಾವಪೂರ್ಣ ಎಂಬ ಅರ್ಥಪೂರ್ಣ ಸಿನಿಮಾ; ಇಲ್ಲಿ ಭಾವನೆಗಳದ್ದೇ ಮಾತು…

“ಮದಿಪು” ಚಿತ್ರಕ್ಕಾಗಿ ರಾಷ್ಟ್ರಪ್ರಶಸ್ತಿ ಪಡೆದ ನಿರ್ದೇಶಕ ಚೇತನ್ ಮುಂಡಾಡಿ. ಪ್ರಸ್ತುತ ಇವರು ನಿರ್ದೇಶಿಸುತ್ತಿರುವ “ಭಾವಪೂರ್ಣ” ಚಿತ್ರದ ಚಿತ್ರೀಕರಣ ಸೆಪ್ಟೆಂಬರ್ 8 ರಿಂದ ಆರಂಭವಾಗಲಿದೆ.

ಈವರೆಗೂ ಕಲಾತ್ಮಕ ಚಿತ್ರಗಳನ್ನು ನಿರ್ದೇಶಿಸಿರುವ ನನಗೆ ಇದು ಮೊದಲ ಕಮರ್ಷಿಯಲ್ ಚಿತ್ರ.
ಇದು ತೊಂಬತ್ತರ ಕಾಲಘಟ್ಟದಲ್ಲಿ ನಡೆಯುವ ಕಥೆ. ಭಾವನೆಗಳೇ ಇಲ್ಲಿನ ಪಾತ್ರಗಳು. ಪುಟ್ಟಗ್ರಾಮವೊಂದರಲ್ಲಿ 50ರ ವಯಸ್ಸಿನ ವ್ಯಕ್ತಿಯಲ್ಲಿ ಚಿಗುರುವ ಅನಿವಾರ್ಯ ಬಯಕೆಯನ್ನು ಈಡೇರಿಸಿಕೊಳ್ಳಲು ಆತ ಪಡುವ ಪರಿಪಾಟಗಳೇ ಚಿತ್ರದ ಮುಖ್ಯ ಕಥಾಹಂದರ.

ಧರ್ಮಣ್ಣ ಎಂಬ ಮುಖ್ಯಪಾತ್ರದಲ್ಲಿ ಹಿರಿಯ ನಟ ರಮೇಶ್ ಪಂಡಿತ್ ಅಭಿನಯಿಸುತ್ತಿದ್ದಾರೆ. ಮಂಜುನಾಥ್ ಹೆಗಡೆ ಮತ್ತೊಂದು ಪ್ರಮುಖಪಾತ್ರದಲ್ಲಿ ನಟಿಸುತ್ತಿದ್ದಾರೆ. ಶೈಲಶ್ರೀ, ಮಂಗಳಾ, ನಾಗೇಂದ್ರ ಶಾ, ಅಥರ್ವ ಪ್ರಕಾಶ್, ವಿ.ಮನೋಹರ್, ಸುಜಯ್ ಶಾಸ್ತ್ರಿ, ಎಂ.ಕೆ.ಮಠ, ವಿನ್ಯಾ, ಉಗ್ರಂ ಮಂಜು, ಜೆಜಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಸೆಪ್ಟೆಂಬರ್ 8 ರಿಂದ ಸೌತಡ್ಕ, ಸಾಗರ, ಜೋಗ, ಮುರುಡೇಶ್ವರದಲ್ಲಿ ಚಿತ್ರೀಕರಣ ನಡೆಯಲಿದೆ ಎಂದು ನಿರ್ದೇಶಕ ಚೇತನ್ ಮುಂಡಾಡಿ ಚಿತ್ರದ ಕುರಿತು ಮಾಹಿತಿ ನೀಡಿದರು.

ಈ ಚಿತ್ರದಲ್ಲಿ ಧರ್ಮಣ್ಣ ಎನ್ನುವ ಮುಖ್ಯಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಅನ್ವೇಷಣೆಯ ಮೇಲೆ ಕಥೆ ಸಾಗುತ್ತದೆ ಎಂದು ರಮೇಶ್ ಪಂಡಿತ್ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು.

ನನಗೆ ಅಳುವ ಹಾಗೂ ಸಂದೇಶ ನೀಡುವ ಚಿತ್ರಗಳಲ್ಲಿ ಆಸಕ್ತಿ ಇಲ್ಲ. ಜನ ಸಿನಿಮಾ ನೋಡಲು ಬರುವುದು ತಮ್ಮ ನಿತ್ಯದ ಕಷ್ಟಗಳನ್ನು ಮರೆಯುವುದಕ್ಕಾಗಿ. ಚಿತ್ರದಲ್ಲೂ ದುಖದ ಸಂಗತಿ ಇದ್ದರೆ ಯಾರು ಇಷ್ಟ ಪಡುವುದಿಲ್ಲ. ಹಾಗಾಗಿ ಚೇತನ್ ಮುಂಡಾಡಿ ಒಳ್ಳೆಯ ಮನೋರಂಜನೆಯಿರುವ ಕಥೆ ಮಾಡಿಕೊಂಡಿದ್ದಾರೆ. ಅವರಿಗೆ ಬೇಕಾದನ್ನು ಒದಗಿಸುವುದನ್ನು ನಾನು ಮಾಡುತ್ತೇನೆ ಎಂದರು ನಿರ್ಮಾಪಕ ಪ್ರಶಾಂತ್ ಅಂಜನಪ್ಪ.

ವಿ.ಮನೋಹರ್ ಸಂಗೀತ ನಿರ್ದೇಶನ, ಪ್ರಸನ್ನ ಛಾಯಾಗ್ರಹಣ, ಕೀರ್ತಿ ಸಂಕಲನ, ಸುಂದರ್ ಸಂಭಾಷಣೆ ಹಾಗೂ ಅನಂತರಾಜ್ ಸಹ ನಿರ್ದೇಶನವಿರುವ ಈ ಚಿತ್ರಕ್ಕೆ ಸುಂದರ್ ವೀಣಾ ಸಂಭಾಷಣೆ ಬರೆದಿದ್ದಾರೆ.

Categories
ಸಿನಿ ಸುದ್ದಿ

ರಿದಂ ಎಂಬ ಸಂಗೀತಮಯ ಸಿನಿಮಾ: ಎ ಸ್ಪೆಷಲ್ ಲವ್ ಸ್ಟೋರಿ ಚಿತ್ರ…

ಕನ್ನಡ ಚಿತ್ರರಂಗದಲ್ಲಿ ಬಹಳ ದಿನಗಳ ನಂತರ ಮ್ಯೂಸಿಕಲ್ ಲವ್‌ಸ್ಟೋರಿ ಹೊಂದಿರುವ ಚಿತ್ರವೊಂದು ತೆರೆಗೆ ಬರಲು ಅಣಿಯಾಗಿದೆ. ಪ್ರೇಮಲೋಕ, ಎಕ್ಸ್ ಕ್ಯೂಸ್ ಮಿ ಚಿತ್ರಗಳ ನಂತರ ಅದೇ ಜಾನರ್‌ನಲ್ಲಿ ತಯಾರಾಗಿರುವ ಮತ್ತೊಂದು ಚಿತ್ರದ ಹೆಸರು ರಿದಂ. ಚಿತ್ರೋದ್ಯಮದಲ್ಲಿ ಎರಡು ದಶಕಗಳಿಗೂ ಹೆಚ್ಚು ಕಾಲ ಅನುಭವ ಇರುವ ಮಂಜು ಮಿಲನ್ ಅವರ ನಿರ್ಮಾಣ ಹಾಗೂ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಚಿತ್ರವಿದು.

ಈಗಾಗಲೇ ಬಿಡುಗಡೆಯ ಹಂತ ತಲುಪಿರುವ ರಿದಂ, ಸದ್ಯದಲ್ಲೇ ಸೆನ್ಸಾರ್ ಗೆ ಹೋಗಲಿದೆ. ಚಿತ್ರದಲ್ಲಿ ನಾಯಕನಾಗೂ ನಟಿಸಿರುವ ಮಂಜುಮಿಲನ್ ಈಗಾಗಲೇ ತಮ್ಮ ಬ್ಯಾನರ್ ಮೂಲಕ 2 ಚಿತ್ರಗಳನ್ನು ಕನ್ನಡಿಗರಿಗೆ ನೀಡಿದ್ದು, ಇದು ಅವರ ಮೂರನೇ ಚಿತ್ರ. ಜೋಗಿ ಪ್ರೇಮ್, ಕಾಶೀನಾಥ್, ವಾಸು ಅವರಂಥ ನಿರ್ದೇಶಕರ ಬಳಿ ಕೆಲಸ ಮಾಡಿರುವ ಇವರು, ಒಬ್ಬ ಸಿಂಗರ್ ಹಾಗೂ ವಯಲಿನ್ ನುಡಿಸೋ ಯುವತಿಯ ನಡುವೆ ನಡೆಯುವ ಲವ್‌ಸ್ಟೋರಿಯನ್ನು ಈ ಚಿತ್ರದ ಮೂಲಕ ಹೇಳ ಹೊರಟಿದ್ದಾರೆ. ಚಿತ್ರದ ನಾಯಕಿಯಾಗಿ ಕೃಷ್ಣತುಳಸಿ ಖ್ಯಾತಿಯ ಮೇಘಶ್ರೀ ಅವರು ಕಾಣಿಸಿಕೊಂಡಿದ್ದಾರೆ.

ಈಗಾಗಲೇ ಬೆಂಗಳೂರು, ಮೈಸೂರು, ಮೇಲುಕೋಟೆ ಅಲ್ಲದೆ ಸಾಗರದಾಚೆಯ ಸಿಂಗಪೂರ್‌ನಲ್ಲಿ ಸುಮಾರು 62 ದಿನಗಳ ಕಾಲ ಈ ಚಿತ್ರದ ಚಿತ್ರೀಕರಣ ನಡೆಸಿಕೊಂಡು ಬಂದಿದ್ದಾರೆ. ಚಿತ್ರದಲ್ಲಿ ಸಪ್ತಸ್ವರಗಳನ್ನು ಪ್ರತಿನಿಧಿಸುವಂತೆ ಏಳು ಸುಂದರವಾದ. ಹಾಡುಗಳಿದ್ದು, ಎ.ಟಿ. ರವೀಶ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಮಂಜುನಾಥ್ ಹಾಗೂ ಮಲ್ಲಿಕಾರ್ಜುನ್ ಚಿತ್ರಕ್ಕೆ ಕ್ಯಾಮೆರಾ ವರ್ಕ್ ನಿಭಾಯಿಸಿದ್ದಾರೆ. ಹಿರಿಯ ಕಲಾವಿದರಾದ ಸುಮನ್, ಪದ್ಮಾವಾಸಂತಿ, ವಿನಯಾಪ್ರಸಾದ್, ಗಿರಿಜಾ ಲೋಕೇಶ್ ಈ ಚಿತ್ರದಲ್ಲಿ ನಟಿಸಿದ್ದಾರೆ.


ಫ್ಯಾಮಿಲಿ ಸೆಂಟಿಮೆಂಟ್ ಜೊತೆಗೆ ಒಂದು ಎಮೋಷನಲ್ ಲವ್‌ಸ್ಟೋರಿಯನ್ನು ರಿದಂ ಚಿತ್ರದ ಮೂಲಕ ಕನ್ನಡ ಪ್ರೇಕ್ಷಕರಿಗೆ ಹೇಳಹೊರಟಿರುವ ನಿರ್ದೇಶಕ ಕಮ್ ನಾಯಕ ಮಂಜು ಮಿಲನ್ ಅವರು ಮುಂದಿನ ತಿಂಗಳು ಚಿತ್ರದ ಟ್ರೇಲರ್ ಬಿಡುಗಡೆ ಮಾಡಲಿದ್ದಾರೆ.

Categories
ಸಿನಿ ಸುದ್ದಿ

ಸೆಪ್ಟೆಂಬರ್ 9 ಕ್ಕೆ ದೇವರ ದರ್ಶನ! ಅಪ್ಪು ನಟನೆಯ ಲಕ್ಕಿಮ್ಯಾನ್ ಬಿಡುಗಡೆಗೆ ರೆಡಿ…

ಕನ್ನಡ ಚಿತ್ರರಂಗದಲ್ಲೀಗ ಹೊಸ ಬಗೆಯ ಸಿನಿಮಾ ಬಿಡುಗಡೆಯ ಪರ್ವ. ಹೌದು, ಸ್ಯಾಂಡಲ್ ವುಡ್ ಈಗ ಭಾರತೀಯ ಚಿತ್ರರಂಗದಲ್ಲೇ ನ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ರಿಲೀಸ್ ಆದ ಒಂದಷ್ಟು ಸಿನಿಮಾಗಳು ದೊಡ್ಡ ಮಟ್ಟದ ಯಸಸ್ಸು ಕಾಣಿಸಿಕೊಂಡಿವೆ. ಈಗಲೂ ಬಿಡುಗಡೆಗೆ ನಿರೀಕ್ಷೆ ಸಿನಿಮಾಗಳು ಸೇರಿವೆ. ಅ ಸಾಲಿಗೆ “ಲಕ್ಕಿ ಮ್ಯಾನ್” ಕೂಡ ಸೇರಿದೆ. ಈ ನಿರೀಕ್ಷೆಗೆ ಕಾರಣ ಈ ಚಿತ್ರದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕಾಣಿಸಿಕೊಂಡಿರುವುದು. ಇಡೀ ಚಿತ್ರದ ಹೈಲೆಟ್ ಅವರ ಪಾತ್ರ ಈ ಚಿತ್ರದಲ್ಲಿ ಅವರದು ವಿಶೇಷ ಪಾತ್ರ. ಅದನ್ನು ತೆರೆಯ ಮೇಲೆ ನೋಡಬೇಕು. ಈಗಾಗಲೇ “ಲಕ್ಕಿ ಮ್ಯಾನ್” ಚಿತ್ರವನ್ನ ಅದ್ದೂರಿಯಾಗಿ ತೆರೆಮೇಲೆ ತರಲು ಚಿತ್ರತಂಡ ಜೋರು ತಯಾರಿ ನಡೆಸಿದೆ.

ನಿರ್ದೇಶಕ ನಾಗೇಂದ್ರ ಪ್ರಸಾದ್ ಹೇಳುವಂತೆ, ನಾನು ನನ್ನ ಮಾತೃಭಾಷೆಯಲ್ಲಿ ನಿರ್ದೇಶನ ಮಾಡುತ್ತಿರುವ ಮೊದಲ ಚಿತ್ರವಿದು. ಈ ಚಿತ್ರದ ಕಥೆಯೇ ನಾನು ಸಿನಿಮಾ ಮಾಡಲು ಕಾರಣ. ಚಿತ್ರದಲ್ಲಿ ಸೆಂಟಿಮೆಂಟ್ , ಲವ್ ಮತ್ತು ಎಮೋಷನಲ್ ಇದೆ. ಭರಪೂರ ಮನೋರಂಜನೆಯೂ ಇದೆ. ಈ ಚಿತ್ರಕ್ಕೆ ಭಗವಂತ, ಭಾಗ್ಯವಂತ ಹಾಗೂ ಲಕ್ಕಿ ಮ್ಯಾನ್ ಎಂಬ ಶೀರ್ಷಿಕೆ ಆಯ್ಕೆ ಮಾಡಿದ್ದೆವು. ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ಅಭಿನಯಿಸಬೇಕು ಎಂಬ ಉದ್ದೇಶದಿಂದ ಅವರನ್ನು ಭೇಟಿ ಮಾಡಲು ಹೋದಾಗ ಅವರೇ ಕಥೆ ಕೇಳಿ ತ ಲಕ್ಕಿ ಮ್ಯಾನ್ ಟೈಟಲ್ ತುಂಬಾ ಸೂಕ್ತ ಎಂದು ಸೂಚಿಸಿದರು. ಈಗ ನಾನೊಬ್ಬ ನಿರ್ದೇಶಕನಾಗಿ ಇಲ್ಲಿ ಮಾತನಾಡಲು ಅಪ್ಪು ಅವರೇ ಕಾರಣ. ನನ್ನ ಮೊದಲ ನಿರ್ದೇಶನದ ಚಿತ್ರವನ್ನು ಕನ್ನಡದಲ್ಲಿ ಮಾಡಿದ್ದು, ಅದರಲ್ಲಿ ಅಪ್ಪು ಅವರ ಜೊತೆ ಕೆಲಸ ಮಾಡಿದ್ದು ಜೀವನದಲ್ಲಿ ಮರೆಯಲು ಸಾಧ್ಯವಿಲ್ಲ.

ಅವರು ತೋರಿಸಿದ ಪ್ರೀತಿ, ಕಾನ್ಫಿಡೆಂಟ್, ಸ್ಟ್ರೆಂಥ್ ಇವತ್ತು ನಾನಿಲ್ಲಿ ನಿಲ್ಲಲು ಕಾರಣ. ಅಪ್ಪು ಅವರು ತುಂಬಾ ಅರ್ಥಗರ್ಭಿತವಾದ ಪಾತ್ರವನ್ನು ಮಾಡಿದ್ದು, ಅವರು ಚಿತ್ರದಲ್ಲಿ 45 ನಿಮಿಷಕ್ಕೂ ಹೆಚ್ಚು ಇರಲಿದ್ದಾರೆ. ಅಲ್ಲದೆ ವರನಟ ಡಾ.ರಾಜ್‌ಕುಮಾರ್ ಅವರ ಮೇಲೆ ರಚಿಸಲಾಗಿರುವ ಹಾಡೊಂದರಲ್ಲಿ ಪುನೀತ್ ಜೊತೆ ನಮ್ಮ ಸೋದರ ಪ್ರಭುದೇವಾ ಕೂಡ ಹೆಜ್ಜೆ ಹಾಕಿದ್ದಾರೆ. ಒಂದು ಫ್ಯಾಂಟಸಿ ಡ್ರಾಮಾವನ್ನು ಲಕ್ಕಿಮ್ಯಾನ್ ಚಿತ್ರದಲ್ಲಿ ತರುತ್ತಿದೇವೆ. ಲಕ್ಕಿ ಮ್ಯಾನ್ ಚಿತ್ರವನ್ನ ಎಲ್ಲರೂ ಬೆಂಬಲಿಸಿ ಎಂದರು.

ಹೀರೋ ಕೃಷ್ಣ, ಪುನೀತ್ ಅವರ ಜೊತೆಗಿನ ಅನುಭವ ಹಂಚಿಕಕೊಂಡು, ನಾನು ಅಪ್ಪು ಸರ್ ಚಿತ್ರಗಳಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಅವರೊಟ್ಟಿಗೆ ಅಭಿನಯಿಸಿದ್ದೀನಿ ಕೂಡ. ಈ ಚಿತ್ರ ನನಗೆ ಬಹಳ ವಿಶೇಷ. ನಾನು ಹಾಗೂ ನನ್ನ ನಾಯಕ ನಟಿಯರು ಅಪ್ಪು ಸರ್ ಹಾಗೂ ಪ್ರಭುದೇವ ಸಾರ್ ಜೊತೆ ಡ್ಯಾನ್ಸ್ ನಲ್ಲಿ ಕುಣಿಯಬೇಕಿತ್ತು. ನನಗೆ ಡ್ಯಾನ್ಸ್ ಅಷ್ಟಾಗಿ ಬರದ ಕಾರಣ ನಾನು ನಿರ್ದೇಶಕರ ಬಳಿ ರಿಕ್ವೆಸ್ಟ್ ಮಾಡಿ ಹೊರ ಉಳಿದೆ. ಒಟ್ಟಾರೆ ಈ ಚಿತ್ರ ಬಹಳ ಉತ್ತಮವಾಗಿ ಮೂಡಿಬಂದೆ ಎಂದರು.

ನಾಯಕಿ ಸಂಗೀತಾ ಶೃಂಗೇರಿ, ಚಿತ್ರದಲ್ಲಿ ಅನು ಎಂಬ ಬೋಲ್ಡ್ ಹುಡುಗಿಯ ಪಾತ್ರ ಮಾಡಿದ್ದಾರಂತೆ. ಮಿಡಲ್‌ಕ್ಲಾಸ್ ಹುಡುಗಿ, ಮ್ಯಾರೇಜ್ ಬಗ್ಗೆ ಕನ್‌ಪ್ಯೂಸ್ ಇರುವ ಪಾತ್ರವಂತೆ.
ಮತ್ತೊಬ್ಬ ನಾಯಕಿ ರೋಷನಿ ಪ್ರಕಾಶ್ ಅವರಿಲ್ಲಿ ಮೀರಾ ಎನ್ನುವ ಪಾತ್ರದಲ್ಲಿ ನಟಿಸಿದ್ದೇನೆ. ಕವಲುದಾರಿ ಚಿತ್ರದ ನಂತರ ಇಲ್ಲಿ ನಟಿಸಿದ್ದಾರೆ.

ಚಿತ್ರದಲ್ಲಿ ರಂಗಾಯಣ ರಘ, ಸಾಧುಕೋಕಿಲ ಮುಂತಾದವರು ಅಭಿನಯಿಸಿದ್ದಾರೆ. ಧನಂಜಯ ಅವರು ಈ ಚಿತ್ರದಲ್ಲಿ ಅಪ್ಪು, ಪ್ರಭುದೇವಾ ಅಭಿನಯದ ಬಾರೋ ರಾಜಾ ಹಾಡೋಣ ಬಾರೋ ಎನ್ನುವ ಹಾಡೂ ಸೇರಿದಂತೆ 6 ಹಾಡುಗಳನ್ನೂ ರಚಿಸಿದ್ದಾರೆ. ಜೀವಾಶಂಕರ್ ಛಾಯಾಗ್ರಹಣವಿದೆ. ಪರ್ಸಾ ಪಿಕ್ಚರ್ಸ್ ಲಾಂಛನದಲ್ಲಿ ಪಿ.ಆರ್. ಮೀನಾಕ್ಷಿ ಸುಂದರಂ ಹಾಗೂ ಸುಂದರ ಕಾಮರಾಜ್ ನಿರ್ಮಾಣ ಮಾಡಿದ್ದಾರೆ. ಈ ಚಿತ್ರದ ಹಾಡುಗಳಿಗೆ ವಿ2 ವಿಜಯ್ ಮತ್ತು ವಿಕ್ಕಿ ಅವರ ಸಂಗೀತವಿದೆ

.

Categories
ಸಿನಿ ಸುದ್ದಿ

ಡಾಲಿ ಧನಂಜಯ ಹೊಸ ಸಿನಿಮಾ: ಉತ್ತರ ಕಾಂಡ ಇದು ಕೆ ಆರ್ ಜಿ ಸ್ಟುಡಿಯೋಸ್ ನಿರ್ಮಾಣದ ಚಿತ್ರ…

ವಿಜಯ್ ಕಿರಗಂದೂರು ಅರ್ಪಿಸುತ್ತಿರುವ ಹೊಸ ಚಿತ್ರಕ್ಕೆ ಡಾಲಿ ಧನಂಜಯ ಹೀರೋ ಆಗಿದ್ದಾರೆ. ಹೌದು, ಕೆ.ಆರ್.ಜಿ. ಸ್ಟುಡಿಯೋಸ್ ಬ್ಯಾನರ್ ನಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ.

ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಯಶಸ್ಸು ಕಂಡಿತ್ತು. ಇದೇ ಕಾಂಬಿನೇಶನ್ ನಲ್ಲಿ “ಹೊಯ್ಸಳ” ಚಿತ್ರ ಸಹ ಬರುತ್ತಿದ್ದು, ಮೂರನೇ ಚಿತ್ರವಾಗಿ “ಉತ್ತರಕಾಂಡ” ನಿರ್ಮಾಣವಾಗಲಿದೆ.

“ದಯವಿಟ್ಟು ಗಮನಿಸಿ”, ” ರತ್ನನ ಪ್ರಪಂಚ” ದಂತಹ ವಿಭಿನ್ನ ಚಿತ್ರಗಳ ನಿರ್ದೇಶಕ ರೋಹಿತ್ ಪದಕಿ ನಿರ್ದೇಶನದಲ್ಲಿ ಈ ಚಿತ್ರ ಮೂಡಿಬರುತ್ತಿದೆ. ಕೆಲವು ದಿನಗಳ ಹಿಂದೆ ಈ ಚಿತ್ರದ ಪೋಸ್ಟರ್ ಬಿಡುಗಡೆಯಾಗಿತ್ತು. ಆದರೆ ನಾಯಕ ಯಾರು ? ಎಂಬ ಕುತೂಹಲವಿತ್ತು‌. ಆ ಕುತೂಹಲಕ್ಕೆ ಈಗ ತೆರೆ ಬಿದ್ದಿದೆ. ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಧನಂಜಯ ಅವರ ಹುಟ್ಟುಹಬ್ಬದ ದಿನದಂದೇ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆ ಈ ಸುದ್ದಿಯನ್ನು ಹಂಚಿಕೊಂಡು, ನಾಯಕನಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.

“ಉತ್ತರ ಕಾಂಡ” ಉತ್ತರ ಕರ್ನಾಟಕದ ಗ್ಯಾಂಗ್ ಸ್ಟರ್ ಕಥೆ ಆಧರಿಸಿದೆ.‌ ಉತ್ತರ ಕರ್ನಾಟಕದಲ್ಲೇ ಹೆಚ್ಚಿನ ಭಾಗದ ಚಿತ್ರೀಕರಣ ನಡೆಯುತ್ತದೆ. “ಹೊಯ್ಸಳ” ಚಿತ್ರದ ನಂತರ, ಜನವರಿಯಲ್ಲಿ ಈ ಚಿತ್ರದ ಚಿತ್ರೀಕರಣ ಆರಂಭವಾಗುತ್ತದೆ ಎಂದು ನಿರ್ದೇಶಕ ರೋಹಿತ್ ತಿಳಿಸಿದ್ದಾರೆ.

ಚರಣ್ ರಾಜ್ “ಉತ್ತರ ಕಾಂಡ” ಚಿತ್ರಕ್ಕೆ ಸಂಗೀತ ನೀಡುತ್ತಿದ್ದು, ಸ್ವಾಮಿ ಛಾಯಾಗ್ರಹಣ ಹಾಗೂ ದೀಪು ಎಸ್ ಕುಮಾರ್ ಸಂಕಲನ ಹಾಗೂ ವಿಶ್ವಾಸ್ ಅವರ ಕಲಾ ನಿರ್ದೇಶನವಿದೆ.

Categories
ಸಿನಿ ಸುದ್ದಿ

ಸೆಪ್ಟೆಂಬರ್ 13: ಶೂಟಿಂಗ್ ಕಂಪ್ಲೀಟ್…

ರುಬಿ ಫಿಲ್ಮಂಸ್ ನಡಿ ಮಾಜಿ ಶಾಸಕ ಇವಾನ್ ನಿಗ್ಲಿ ಕಥೆ ಬರೆದು ನಿರ್ಮಾಣ ಮಾಡಿರುವ ‘ಸೆಪ್ಟಂಬರ್ 13 ಸಿನಿಮಾ’ ಸದ್ದಿಲ್ಲದೇ ಶೂಟಿಂಗ್ ಮುಗಿಸಿ ಬಿಡುಗಡೆಗೆ ಸಜ್ಜಾಗಿದೆ. ಹೆಸರಾಂತ ನಿರ್ಮಾಪಕ ಡಾ.ರಾಜಾ ಬಾಲಕೃಷ್ಣನ್ ಈ ಸಿನಿಮಾಗೆ ಚಿತ್ರಕಥೆ ಬರೆದು ನಿರ್ದೇಶನ ಮಾಡುವುದರ ಜೊತೆಗೆ ಸಂಕಲನ, ಛಾಯಾಗ್ರಾಹಣ ಜವಾಬ್ದಾರಿಯನ್ನೂ ನಿಭಾಯಿಸಿ ಸಿನಿಮಾದಲ್ಲಿ ಖಳನಾಯಕನಾಗಿಯೂ ಬಣ್ಣ ಹಚ್ಚಿದ್ದಾರೆ. ಇತ್ತೀಚೆಗಷ್ಟೇ ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಳ್ಳು ಚಿತ್ರತಂಡ ಮಾಧ್ಯಮದವರ ಮುಂದೆ ಹಾಜರಾಗಿತ್ತು. ಈ ವೇಳೆ ಸಿನಿಮಾ ಬಗ್ಗೆ ಸಾಕಷ್ಟು ವಿಚಾರಗಳನ್ನು ಹಂಚಿಕೊಂಡಿದೆ.

ಚಿತ್ರದ ನಿರ್ಮಾಪಕ ಇವಾನ್ ನಿಗ್ಲಿ ಮಾತನಾಡಿ, ಈ ಕಥೆ ಬರೆಯೋದಿಕ್ಕೆ ಕಾರಣ ಇದೆ. ನನಗೆ ಮೊದಲು ಕೊರೋನಾ ಬಂತು. ಆ ನಂತ್ರ ನನ್ನ ಪತ್ನಿ.. ಆ ಬಳಿಕ ನನ್ನ ಮಗನಿಗೆ ಬಂತು. ತುಂಬಾ ಸೀರೀಯಸ್ ಆಗಿಬಿಡ್ತು. ಈ‌ ಸ್ಫೂರ್ತಿಯಿಂದ ಕಥೆ ಬರೆದಿದ್ದೇನೆ. ನಾನು ಕಿರುಚಿತ್ರಗಳು, ಧಾರಾವಾಹಿ ಮಾಡಿದ್ದೇನೆ. ನಾನು ಈ ಮೊದಲ ಮಲಯಾಳಂ, ತಮಿಳು ಸಿನಿಮಾದಲ್ಲಿ ನಟಿಸಿದ್ದೇನೆ. ಇದು ನನ್ನ ಮೂರನೇ ಚಿತ್ರ. ಈ ಸಿನಿಮಾಗೆ ಕಥೆ ಬರೆದು ನಿರ್ಮಾಣ ಮಾಡಿರುವುದರ ಜೊತೆಗೆ ನಟನೆ ಕೂಡ ಮಾಡಿದ್ದೇನೆ ಎಂದು ತಿಳಿಸಿದರು.

ವಿನಯ ಪ್ರಸಾದ್ ಮಾತನಾಡಿ, ನರ್ಸ್ ಜೀವನ ಬಹಳ ಚಾಲೆಂಜಿಂಗ್. ಪ್ರತಿಯೊಬ್ಬರು ನರ್ಸ್ ಗಳನ್ನು ನಾವು ಭೇಟಿ ಮಾಡೇ ಇರ್ತಿವಿ. ಎಂತಹ ಚಾಲೆಂಜಿಂಗ್ ಅಂದ್ರೆ ಅವರು. ಪ್ರತಿ ನಿಮಿಷ, ರೋಗ ರುಜಿನ ಕೋಪ ಆತಂಕ ಇದರ ಜೊತೆಯಲಿ ಜೀವನ ಮಾಡ್ತಾರೆ. ಇದರ ಪ್ರಮುಖ ಭಾಗವೇ ರೋಗ ರುಜಿನ. ಅಂತಹವರು ತಮ್ಮ ಮನೆಗೆ ಹೋಗಿ ಹೇಗೆ ಜೀವನ ಮಾಡ್ತಾರೆ? ಹೇಗೆಲ್ಲಾ ಸಮಸ್ಯೆಗಳನ್ನು ಎದುರಿಸ್ತಾರೆ? ಅನ್ನೋದು ಚಿತ್ರದ ತಿರುಳು ಅಂತಾ ಹೇಳಿದರು.

ನಿರ್ದೇಶಕ ಡಾ.ರಾಜಾ ಬಾಲಕೃಷ್ಣನ್ ಮಾತನಾಡಿ, ಒಂದಷ್ಟು ಹಿರಿಯರು ಜೊತೆಗೆ ಒಂದಷ್ಟು ಹೊಸಬರು ಸೇರಿ ಸಿನಿಮಾ ಮಾಡಿದ್ದೇವೆ. ನಾನು ಕನ್ನಡ ಇಂಡಸ್ಟ್ರೀಗೆ ಹೊಸಬ. ಹೊಸಬರು ನನಗೆ ಪ್ರತಿ ಹಂತದಲ್ಲೂ ಬೆಂಬಲವಾಗಿ ನಿಂತರು, ಇಡೀ ತಂಡಕ್ಕೆ ಧನ್ಯವಾದ ಎಂದರು.

ಕೋವಿಡ್ ಸಮಯದಲ್ಲಿ ಜಗತ್ತು ನಲುಗಿ ಹೋಗಿತ್ತು. ಈ ಸಮಯದಲ್ಲಿ ಸಮರ್ಪಣಾ ಭಾವದಿಂದ ದುಡಿದವರು ವೈದ್ಯರು. ಅದ್ರಲ್ಲಿಯೂ ನರ್ಸಿಂಗ್ ಸಮುದಾಯದ ಸೇವೆ ಗಣನೀಯ. ಇಂತಹ ನರ್ಸಿಂಗ್ ಜೀವನದ ಕಥೆಯನ್ನೊಳಗೊಂಡ ‘ಸೆಪ್ಟಂಬರ್ 13 ಸಿನಿಮಾ’ ಸಿನಿಮಾದಲ್ಲಿ ಹಿರಿಯ ಕಲಾವಿದರಾದ ವಿನಯ ಪ್ರಸಾದ್, ಜೈ ಜಗದೀಶ್, ಯಮುನಾ ಶ್ರೀನಿಧಿ ನಟಿಸಿದ್ದು, ಶ್ರೀಯಾರಿಧಿಬನ್ ನಾಯಕಿಯಾಗಿ ಈ ಚಿತ್ರದ ಮೂಲಕ ಕನ್ನಡ ಇಂಡಸ್ಟ್ರೀಗೆ ಪಾದಾರ್ಪಣೆ ಮಾಡುತ್ತಿದ್ದಾರೆ.

ಉಳಿದಂತೆ ಒಂದಷ್ಟು ಯುವ ಪ್ರತಿಭೆಗಳು ಸಿನಿಮಾದಲ್ಲಿ ನಟಿಸಿದ್ದಾರೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ ಚಿತ್ರತಂಡ ಶೀರ್ಘದಲ್ಲಿ ಸಿನಿಮಾವನ್ನು ತೆರೆಗೆ ತರಲು ಸಜ್ಜಾಗಿದೆ.

Categories
ಸಿನಿ ಸುದ್ದಿ

ಬಿರಾದಾರ್ ಈಗ ಹೀರೋ!90 ಬಿಡಿ ಮನೀಗ್ ನಡಿ ಇದು ಅವರ 500 ನೇ ಚಿತ್ರ…

ಎಪ್ಪತ್ತರ ವಯಸ್ಸಿನಲ್ಲೂ ಇಪ್ತತ್ತರ ಯುವಕನ ಉತ್ಸಾಹ ಹೊಂದಿರುವ, ತಮ್ಮ ಕಾಮಿಡಿ ಪಾತ್ರಗಳ ಮೂಲಕ ಕನ್ನಡಿಗರ ಮನ ಗೆದ್ದಿರುವ ಬಿರಾದಾರ್ ನಾಯಕನಾಗಿ ಅಭಿನಯಿಸಿರುವ ಚಿತ್ರ “90 ಬಿಡಿ ಮನೀಗ್ ನಡಿ”. ಇದು ಅವರ ನಟನೆಯ 500ನೇ ಚಿತ್ರವೂ ಹೌದು.‌

ಉಮೇಶ್ ಬಾದರದಿನ್ನಿ ಹಾಗೂ ನಾಗರಾಜ ಅರೆಹೊಳೆ ಕಥೆ ಬರೆದು, ಜಂಟಿಯಾಗಿ ನಿರ್ದೇಶಿಸಿರುವ ಈ ಚಿತ್ರಕ್ಕೆ ರತ್ನಮಾಲ ಬಾದರದಿನ್ನಿ ನಿರ್ಮಾಪಕರು.

ಉತ್ತಮ ಸಂದೇಶ ಹೇಳುವಂತ ಕಥಾಹಂದರವನ್ನಿಟ್ಟುಕೊಂಡು ಉತ್ತರ ಕರ್ನಾಟಕ ಶೈಲಿಯಲ್ಲಿ ಕಥೆ ಹೇಳಲು ಹೊರಟ್ಟಿದ್ದೇವೆ. 80 ಭಾಗದಷ್ಟು ಸಂಭಾಷಣೆ ಉತ್ತರ ಕರ್ನಾಟಕ ಶೈಲಿಯಲ್ಲಿರುತ್ತದೆ. ಹಾಗಾಗಿ ನಮಗೆ ಉತ್ತರ ಕರ್ನಾಟಕದ ಕಲಾವಿದನೇ ಬೇಕಾಗಿತ್ತು. ಆಗ ಬಿರಾದಾರ್ ಅವರನ್ನು ಆಯ್ಕೆ ಮಾಡಿಕೊಂಡೆವು.‌ ಅವರ 500 ನೇ ಚಿತ್ರವನ್ನು ನಿರ್ದೇಶಿಸುತ್ತಿರುವುದು ಸಂತೋಷವಾಗಿದೆ ಎನ್ನುತ್ತಾರೆ ನಿರ್ದೇಶಕರಾದ ಉಮೇಶ್ ಬಾದರದಿನ್ನಿ ಹಾಗೂ ನಾಗರಾಜ ಅರೆಹೊಳೆ.

500ಚಿತ್ರಗಳಲ್ಲಿ ಅಭಿನಯಿಸಿದ್ದಿನೆಂದರೆ ಅದಕ್ಕೆ ರಂಗಭೂಮಿ ಹಾಗೂ ಚಿತ್ರರಂಗದವರ ಪ್ರೋತ್ಸಾಹವೇ ಕಾರಣ. ಈ ಚಿತ್ರದಲ್ಲಿ
ಊದಿನ ಕಡ್ಡಿ ಮಾರುವವನ ಪಾತ್ರ ನನ್ನದು. ನನಗೆ ಕುಡಿತದ ಚಟ ಇರುತ್ತದೆ. ಒಬ್ಬ ಹೆಂಗಸಿನ ಪರಿಚಯವಾಗುತ್ತದೆ. ಆನಂತರ ಸಾಕಷ್ಟು ತಿರುವುಗಳಿರುತ್ತದೆ. ಅದನ್ನು ಸಿನಿಮಾದಲ್ಲೇ ನೋಡಬೇಕು. ನಾಟಕದಲ್ಲಿ ಹಾಗೋಹೀಗೋ ಕುಣಿಯುತ್ತಿದ್ದೆ. ಈ ಚಿತ್ರದಲ್ಲಿ ಹಾಡೊಂದಕ್ಕೆ ಪೂರ್ಣಪ್ರಮಾಣದಲ್ಲಿ ನೃತ್ಯ ಮಾಡಿದ್ದೇನೆ. ಭೂಷಣ್ ಮಾಸ್ಟರ್ ಮಾಡಿಸಿದ್ದಾರೆ. ಈ ಹಾಡನ್ನು ನಟ ಶರಣ್ ಮೆಚ್ಚಿಕೊಂಡಿದ್ದಾರೆ ಎಂದು ತಮ್ಮ ಪಾತ್ರ ಹಾಗೂ ಚಿತ್ರದ ಬಗ್ಗೆ ವೈಜನಾಥ್ ಬಿರಾದಾರ್ ವಿವರಿಸಿದರು.

ವೃತ್ತಿ ರಂಗಭೂಮಿಯಲ್ಲಿ ಚಿಕ್ಕ ವಯಸ್ಸಿನಿಂದ ನಾಟಕ ಮಾಡಿಕೊಂಡು ಬಂದಿದ್ದೀನಿ. ಮೊದಲ ಬಾರಿಗೆ ಬಿರಾದಾರ್‌ ಅವರಿಗೆ ನಾಯಕಿಯಾಗಿ ಕಾಣಿಸಿಕೊಂಡಿದ್ದೀನಿ. ಈ ಚಿತ್ರದಲ್ಲಿ ವೇಶ್ಯೆ ಪಾತ್ರ ಮಾಡಿದ್ದೇನೆ. ನಾಯಕನನ್ನು ದುಶ್ಚಟಗಳಿಂದ ದೂರ ಮಾಡುತ್ತೇನೆ ಎಂದು ನಾಯಕಿ ನೀತಾ ಪಾತ್ರದ ಬಗ್ಗೆ
ಹೇಳಿದರು.

ಬಿರಾದಾರ್ ಅವರಲ್ಲಿ ವಿಶೇಷ ಶಕ್ತಿ ಇದೆ.ಈ ವಯಸ್ಸಿನಲ್ಲಿ ಅವರು ಈ ರೀತಿ ನೃತ್ಯ ಮಾಡಿದ್ದು ನೋಡಿ ಕಣ್ಣೀರು ಬಂತು. ನನ್ನದು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿ ಪಾತ್ರ ಎಂದರು ನಟ ಧರ್ಮ.

500ನೇ ಸಿನಿಮಾ ಆದರೂ ಮೊದಲ ಚಿತ್ರದ ಹುಮ್ಮಸಿನಲ್ಲಿ ಬಿರಾದಾರ್ ಅಭಿನಯಿಸಿದ್ದಾರೆ. ಉತ್ತರ ಕರ್ನಾಟಕ ಸೊಗಡಿನ ಚಿತ್ರ. ನಾನು ಈ ಚಿತ್ರದಲ್ಲಿ ಅಭಿನಯಿಸಿರುವುದು ಖುಷಿಯಾಗಿದೆ ಎಂದು ಕರಿಸುಬ್ಬು ತಿಳಿಸಿದರು.

ಹಾಡನ್ನು ಬರೆದು ಸಂಗೀತ ನೀಡಿರುವ ಶಿವು ಭೇರಗಿ, ಗಾಯಕ ರವೀಂದ್ರ ಸೊರಗಾವಿ ಹಾಗೂ ಹಿನ್ನೆಲೆ ಸಂಗೀತ ನೀಡಿರುವ ವೀರ ಸಮರ್ಥ್ ಚಿತ್ರದ ಕುರಿತು ಮಾತನಾಡಿದರು.

Categories
ಸಿನಿ ಸುದ್ದಿ

ಸೂಪರ್ ಸ್ಟಾರ್ : ಇದು ರಮಾಸ್ ಮೀಡಿಯಾ ಕ್ರಿಯೇಷನ್ಸ್ ಸಿನಿಮಾ- ನಿರಂಜನ್ ಸುಧೀಂದ್ರ ಹೀರೋ…

ಕನ್ನಡ ಚಿತ್ರಗಳು ಈಗ ವಿಶ್ವದಾದ್ಯಂತ ಜನಪ್ರಿಯ. ಕನ್ನಡ ಚಿತ್ರಗಳ ಮೇಲೆ ಅಪಾರ ಅಭಿಮಾನವಿರುವ ನೆರೆ ರಾಜ್ಯಗಳ ನಿರ್ಮಾಣ ಸಂಸ್ಥೆಗಳು ಕನ್ನಡ ಚಿತ್ರ ನಿರ್ಮಾಣಕ್ಕೆ ಮುಂದಾಗುತ್ತಿದೆ. ಆಂದ್ರಪ್ರದೇಶದಲ್ಲಿ ಕೆಲವು ತೆಲುಗು ಚಿತ್ರಗಳನ್ನು ನಿರ್ಮಾಣ ಮಾಡಿರುವ ರಮಾ ಅವರು ತಮ್ಮ “ರಮಾಸ್ ಮೀಡಿಯಾ ಕ್ರಿಯೇಷನ್ಸ್” ಎಂಬ ನೂತನ ನಿರ್ಮಾಣ ಸಂಸ್ಥೆಯನ್ನು ಕರ್ನಾಟಕದಲ್ಲೂ ಆರಂಭಿಸಿದ್ದಾರೆ. ಸಂಸ್ಥೆಯ ಲೋಗೊ ರಿಯಲ್ ಸ್ಟಾರ್ ಉಪೇಂದ್ರ ಅವರಿಂದ ಬಿಡುಗಡೆಯಾಯಿತು. ಈ ಸಂಸ್ಥೆಯ ಮೊದಲ ಚಿತ್ರವಾಗಿ ನಿರಂಜನ್ ಸುಧೀಂದ್ರ ಅಭಿನಯದ “ಸೂಪರ್ ಸ್ಟಾರ್” ಪ್ಯಾನ್ ಇಂಡಿಯಾ ಚಿತ್ರ ನಿರ್ಮಾಣವಾಗುತ್ತಿದೆ.
ನಿವೃತ್ತ ಪೊಲೀಸ್ ಅಧಿಕಾರಿ ಸತ್ಯನಾರಾಯಣ ಹಾಗೂ ಅವರ ಮಗಳು ರಮಾ ಈ ಸಂಸ್ಥೆಯ ರುವಾರಿಗಳು.

ನಾವು ತೆಲುಗಿನಲ್ಲಿ “ರಮಾಸ್ ಮೀಡಿಯಾ ಕ್ರಿಯೇಷನ್ಸ್” ಮೂಲಕ ಕೆಲವು ಚಿತ್ರಗಳನ್ನು ನಿರ್ಮಾಣ ಮಾಡಿದ್ದೇವೆ. “ಸೂಪರ್ ಸ್ಟಾರ್” ಚಿತ್ರದ ಮೂಲಕ ನಾನು ಕನ್ನಡ ಚಿತ್ರರಂಗ ಪ್ರವೇಶಿಸಿದ್ದೇನೆ. ನಮ್ಮದು ಸಿನಿಮಾ ನಿರ್ಮಾಣವಲ್ಲದೆ ಸಾಕಷ್ಟು ಬೇರೆಬೇರೆ ಉದ್ಯಮಗಳು ಇವೆ. ಕೆಲಸದ ನಿಮಿತ್ತ ಬೆಂಗಳೂರಿಗೆ ಬಂದಾಗ ನಿರ್ದೇಶಕ ರಮೇಶ್ ವೆಂಕಟೇಶ್ ಬಾಬು ಈ ಚಿತ್ರದ ಬಗ್ಗೆ ಹೇಳಿದರು. ಕೆಲವು ಸಮಯ ತೆಗೆದುಕೊಂಡು ನಂತರ ನಿರ್ಮಾಣ ಮಾಡೋಣ ಅಂದೆ. ನಿರ್ದೇಶಕರು ಹೆಣೆದಿರುವ ಕಥೆ ನನ್ನನ್ನು ಆಕರ್ಷಿಸಿತ್ತು. ‌ ನಿರಂಜನ್ ಸುರದ್ರೂಪಿ ನಟ. ಚೆನ್ನಾಗಿ ಅಭಿನಯಿಸುತ್ತಿದ್ದಾರೆ. ನಿರ್ದೇಶಕ ಹಾಗೂ ನಾಯಕ, ಇವರಿಬ್ಬರ ಕಾಂಬಿನೇಷನ್ ನಲ್ಲಿ ಉತ್ತಮ ಚಿತ್ರ ಬರುವುದಂತೂ ಖಚಿತ. ಈ ಚಿತ್ರದ ನಂತರ ಇವರಿಬ್ಬರ ಜೋಡಿಯಲ್ಲೇ ಮತ್ತೊಂದು ಚಿತ್ರ ನಿರ್ಮಾಣ ಮಾಡುತ್ತೇನೆ. ನಮ್ಮ ಸಂಸ್ಥೆಗೆ ನಿಮ್ಮ ಬೆಂಬಲವಿರಲಿ ಎಂದರು ನಿರ್ಮಾಪಕಿ ರಮಾ. ನಿರ್ಮಾಪಕ ಸತ್ಯನಾರಾಯಣ ಅವರು ಸಹ ಚಿತ್ರ ನಿರ್ಮಾಣ ಆರಂಭವಾದ ಬಗ್ಗೆ ಮಾಹಿತಿ ನೀಡಿದರು.

ನಾನು ಹಾಗೂ ನಿರಂಜನ್ ಈ ಚಿತ್ರದ ಕುರಿತು ಮಾತನಾಡುತ್ತಿದ್ದಾಗ, ನಮಗೆ ರಮಾ ಮೇಡಮ್ ಅವರ ಪರಿಚಯವಾಯಿತು. ಅವರಿಗೆ ಕಥೆ ಹೇಳಿದಾಗ, ಕಥೆಯನ್ನು ಮೆಚ್ಚಿಕೊಂಡು ನಿರ್ಮಾಣಕ್ಕೆ ಮುಂದಾಗಿದ್ದಾರೆ. ಯಾವುದೇ ಕೊರೆತೆ ಇಲ್ಲದಂತೆ ಚಿತ್ರವನ್ನು ‌ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ ಅವರಿಗೆ, ನನ್ನ ತಂಡಕ್ಕೆ ಹಾಗೂ ಚಿತ್ರ ಆರಂಭದಿಂದ ಪ್ರೋತ್ಸಾಹ ನೀಡುತ್ತಿರುವ ರಿಯಲ್ ಸ್ಟಾರ್ ಉಪೇಂದ್ರ ಅವರಿಗೆ ಧನ್ಯವಾದ . ಚಿತ್ರೀಕರಣ ಬಹುತೇಕ ಪೂರ್ಣವಾಗಿದೆ. ಚಿತ್ರ ಅಂತಿಮಹಂತದಲ್ಲಿದೆ ಎಂದು ನಿರ್ದೇಶಕ ರಮೇಶ್ ವೆಂಕಟೇಶ್ ಬಾಬು ಮಾಹಿತಿ ನೀಡಿದರು.

ನಾನು ಈ ಚಿತ್ರಕ್ಕಾಗಿ ಸಾಕಷ್ಟು ಶ್ರಮವಹಿಸುತ್ತಿದ್ದೇನೆ. ಏಕೆಂದರೆ “ಸೂಪರ್ ಸ್ಟಾರ್” ನನ್ನ ಚಿಕ್ಕಪ್ಪನ ಟೈಟಲ್. ಅವರಿಂದ ಅನುಮತಿ ಪಡೆದು ಶೀರ್ಷಿಕೆಯಿಟ್ಟಿದ್ದೇನೆ. ಆ ಹೆಸರಿಗೆ ಧಕ್ಕೆ ಬಾರದ ಹಾಗೆ ನೋಡಿಕೊಳ್ಳುವುದೇ ನನ್ನ ಮೊದಲ ಆದ್ಯತೆ. ನಮ್ಮ ಮೇಲೆ ನಂಬಿಕೆಯಿಟ್ಟು ಚಿತ್ರ ನಿರ್ಮಾಣಕ್ಕೆ ಮುಂದಾಗಿರುವ “ರಮಾಸ್ ಮೀಡಿಯಾ ಕ್ರಿಯೇಷನ್ಸ್” ಅವರಿಗೆ, ನಿರ್ದೇಶಕರಿಗೆ ,ಆಗಮಿಸಿರುವ ಗಣ್ಯರಿಗೆ ಹಾಗೂ ಕುಟುಂಬದವರಿಗೆ ನಿರಂಜನ್ ಸುಧೀಂದ್ರ ಧನ್ಯವಾದಗಳನ್ನು ತಿಳಿಸಿದರು.

ಪಕ್ಕದ ರಾಜ್ಯದಿಂದ ಕನ್ನಡ ಚಿತ್ರವೊಂದರ ನಿರ್ಮಾಣಕ್ಕೆ ಆಗಮಿಸಿರುವ ಒಳ್ಳೆಯದಾಗಲಿ. ಇನ್ನೂ ನಮ್ಮ ನಿರಂಜನ್ ಸುಧೀಂದ್ರ ಬಹಳ ಶ್ರಮ ಜೀವಿ. ಇತ್ತೀಚೆಗೆ “ಸೂಪರ್ ಸ್ಟಾರ್” ಚಿತ್ರದ ಸಾಹಸ ಸನ್ನಿವೇಶವೊಂದನ್ನು ನಾನು ಹಾಗೂ ಸುದೀಪ್ ನೋಡಿ ಸಂತೋಷಪಟ್ಟೆವು. ಸುದೀಪ್ ಅಂತೂ ನಿರಂಜನ್ ಅಭಿನಯದ ಬಗ್ಗೆ ಉತ್ತಮ ಮಾತುಗಳಾಡಿದರು. ಇವತ್ತು ನಮ್ಮ ನಿರಂಜನ್ ಹುಟ್ಟುಹಬ್ಬ . ಅವನಿಗೆ ಹಾಗೂ ಈ ಚಿತ್ರಕ್ಕೆ ಒಳ್ಳೆಯದಾಗಲಿ ಎಂದು ಉಪೇಂದ್ರ ಹಾರೈಸಿದರು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಅಧ್ಯಕ್ಷರಾದ ಭಾ.ಮ.ಹರೀಶ್, ಉಪಾಧ್ಯಕ್ಷರಾದ ಶಿಲ್ಪ ಶ್ರೀನಿವಾಸ್ ಮುಂತಾದ ಗಣ್ಯರು ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. ಇದೇ ಸಂದರ್ಭದಲ್ಲಿ ನಿರಂಜನ್ ಸುಧೀಂದ್ರ ಅವರ ಹುಟ್ಟುಹಬ್ಬ ಆಚರಣೆ ಸಹ ನಡೆಯಿತು .

Categories
ಸಿನಿ ಸುದ್ದಿ

ಕಾಲಕ್ಕೆ ತಕ್ಕಂತೆ ಬದಲಾಗದೇ ಹೋದ್ರೆ ಕಲೆ ಸಾಯುತ್ತೆ! ಡೊಳ್ಳು ಟ್ರೇಲರ್ ರಿಲೀಸ್ ಮಾಡಿ ಮಾತಾಡಿದ ನಟ‌ ಗಣೇಶ್…

ಪವನ್ ಒಡೆಯರ್ ನಿರ್ಮಾಣದ ಡೊಳ್ಳು ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು, ಆಗಸ್ಟ್ 26ರಿಂದ ಮಾಯಾನಗರಿಯಲ್ಲಿ ಡೊಳ್ಳಿನ ನಾದ ಶುರುವಾಗಲಿದೆ. ಅದರ ಮೊದಲ ಭಾಗವಾಗಿ ಇತ್ತೀಚೆಗಷ್ಟೇ ಮಯಾನಗರಿ ಎಂಬ ಹಾಡು ಬಿಡುಗಡೆ ಮಾಡಿ ಗಮನಸೆಳೆದಿದ್ದ ಚಿತ್ರತಂಡ ಈಗ ಡೊಳ್ಳು ಸಿನಿಮಾದ ಟ್ರೇಲರ್ ನ್ನು ಪ್ರೇಕ್ಷಕರಿಗೆ ಉಣಬಡಿಸಿದೆ.

ಡೊಳ್ಳು ಕಲೆಯನ್ನು ಯಾರು ಬೇಕಾದರೂ ಕಲಿಯಬಹುದು. ಆದರೆ ಮನಸ್ಸಿನಲ್ಲಿ ಇಳಿಸಿಕೊಳ್ಳಲು ಆಗುವುದಿಲ್ಲ ಎಂಬ ಅರ್ಥಪೂರ್ಣವಾದ ಮಾತಿನಿಂದ ಶುರುವಾಗುವ ಟ್ರೇಲರ್ ನಲ್ಲಿ ಜನಪದ ಕಲೆ ಡೊಳ್ಳು ಪ್ರಾಮುಖ್ಯತೆ ಜೊತೆಗೆ ಪ್ರೀತಿ, ಕಣ್ಣೀರು, ಕೋಪ ಎಲ್ಲವನ್ನೂ ಅಚ್ಚುಕಟ್ಟಾಗಿ ಕಟ್ಟಿಕೊಡಲಾಗಿದೆ. ನೋಡುಗರ ಹೃದಯಕ್ಕೆ ಹಾಗೇ ಇಳಿದು ಬಿಡುವ ಈ ಟ್ರೇಲರ್ ಬಿಡುಗಡೆ ಮಾಡಿದ ಗೋಲ್ಡನ್ ಸ್ಟಾರ್ ಗಣೇಶ್ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ. ನಮ್ ಸಿನಿಮಾ. ತಮ್ಮ ತನದ ಸಿನಿಮಾ..ನಮ್ಮ ಮಣ್ಣಿನ ಸೊಗಡಿನ ಸಿನಿಮಾ. ಕಲೆ ಮತ್ತು ಕಮರ್ಷಿಯಲ್ ನಡುವಿನ ಮಧ್ಯೆ ತೆಗೆದಿರುವ ಸಿನಿಮಾ. ಟ್ರೇಲರ್ ಬಹಳ ಚೆನ್ನಾಗಿದೆ. ಇದೇ 26ರಂದು ಚಿತ್ರ ಬಿಡುಗಡೆಯಾಗ್ತಿದೆ ಪ್ರತಿಯೊಂದು ನೋಡಿ ಎಂದರು.

ರಾಷ್ಟ್ರಪ್ರಶಸ್ತಿ ವಿಜೇತ ಸಾಗರ್ ಪುರಾಣಿಕ್ ನಿರ್ದೇಶನದಲ್ಲಿ ಮೂಡಿಬಂದಿರುವ ಸಿನಿಮಾದಲ್ಲಿ ಜನಪದ ಕಲೆ ಡೊಳ್ಳಿನ ಮಹತ್ವವನ್ನು ಕಟ್ಟಿಕೊಡಲಾಗಿದ್ದು, ಕಾರ್ತಿಕ್ ಮಹೇಶ್ ನಾಯಕನಾಗಿ ಅಮೋಘವಾಗಿ ನಟಿಸಿದ್ದು. ಇವರಿಗೆ ಜೋಡಿಯಾಗಿ ನಿಧಿ ಹೆಗ್ಡೆ ಕಾಣಿಸಿಕೊಂಡಿದ್ದಾರೆ. ಬಾಬು ಹಿರಣಯ್ಯ, ಚಂದ್ರ ಮಯೂರ್, ಶರತ್ ಮುಂತಾದ ಕಲಾ ಬಳಗ ಚಿತ್ರದಲ್ಲಿದ್ದು, ಶ್ರೀನಿಧಿ ಸಂಭಾಷಣೆ-ಚಿತ್ರಕಥೆ, ಅನಂತ್ ಸಂಗೀತ, ಅಭಿಲಾಸ್ ಕಲಾಥಿ ಕ್ಯಾಮೆರಾ ಕೈಚಳಕ ಸಿನಿಮಾದಲ್ಲಿದೆ.

ಹಲವು ಅಂತರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಡೊಳ್ಳು ಸಿನಿಮಾ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೂ ಭಜನವಾಗಿದೆ. ಪವನ್ ಒಡೆಯರ್ ಮೂವೀವ್ ಬ್ಯಾನರ್ ನಡಿ ಪವನ್ ಒಡೆಯರ್ ಪತ್ನಿ ಅಪೇಕ್ಷಾ ಜೊತೆಗೂಡಿ ಸಿನಿಮಾ ನಿರ್ಮಾಣ ಮಾಡಿದ್ದು, ಇದೇ 26ಕ್ಕೆ ಚಿತ್ರ ರಾಜ್ಯಾದ್ಯಂತ ರಿಲೀಸ್ ಆಗುತ್ತಿದೆ.

error: Content is protected !!