Categories
ಸಿನಿ ಸುದ್ದಿ

ಅಧ್ಯಕ್ಷರ ನೈಂಟಿ ಮಾತು! ನಟ ಬಿರಾದರ್ ಸಿನಿಮಾಗೆ ಶರಣ್ ಸಾಥ್…

ಹಾಸ್ಯ ನಟ ವೈಜನಾಥ ಬಿರಾದಾರ್ ಅಭಿನಯದ “ಐನೂರ”ನೇ ಚಿತ್ರ ಎಂದು ಸದ್ದಾಗಿದ್ದ “ಅಮ್ಮಾ ಟಾಕೀಸ್ ಬಾಗಲಕೋಟೆ” ಸಂಸ್ಥೆಯ ನಿರ್ಮಾಣದ “ನೈಂಟಿ ಬಿಡಿ ಮನೀಗ್ ನಡಿ” ಚಿತ್ರ ರಿಲೀಸಿಗೆ ತಯಾರಾಗುತ್ತಿದ್ದು, ಮೊದಲ ಹಂತವಾಗಿ ಚಿತ್ರದ ಟೀಸರ್ ಬಿಡುಗಡೆಗೊಳಿಸಿದೆ.

“A2” ಮ್ಯೂಸಿಕ್ ಚಾನೆಲ್ಲಿಗೆ ಭರ್ಜರಿ ಡಿಮಾಂಡಿನೊಂದಿಗೆ ಆಡಿಯೋ ಮಾರಿಕೊಂಡ ತಂಡ ಆ ಆಡಿಯೋ ಕಂಪೆನಿಯ ಯೂಟ್ಯೂಬ್(A2 Music ) ವಾಹಿನಿಯ ಮೂಲಕ ಟೀಸರ್ ಬಿಟ್ಟುಕೊಂಡಿದೆ.

ವಿಶೇಷವಾಗಿ ಹೆಸರಾಂತ ನಾಯಕನಟ “ಶರಣ್” ಅವರು ಈ ಚಿತ್ರದ ಟೀಸರ್ ಮೆಚ್ಚಿಕೊಂಡು ಬಿಡುಗಡೆಗೆ ಸಾಥ್ ನೀಡಿದ್ದಾರೆ. ಬಿರಾದಾರ್ ರವರು ಶರಣ್ ರವರ ತಂದೆಯ ಒಡನಾಡಿಯಾಗಿದ್ದು ಅದೇ ಅಭಿಮಾನದೊಂದಿಗೆ ” ನೈಂಟಿಗೆ” ಜೊತೆಯಾಗಿದ್ದಾರೆ.

“ನಾವು ಸಾಕಷ್ಟು ಸಿನಿಮಾಗಳಲ್ಲಿ ಒಟ್ಟಾಗಿ ಅಭಿನಯಿಸಿದವರು, ಮಿಗಿಲಾಗಿ ಇವರೊಬ್ಬ ಅಂತರಾಷ್ಟ್ರೀಯ ಪ್ರಶಸ್ತಿ ವಿಜೇತರು, ಇಂಥವರ ನಟನೆಯ ಐನೂರನೇ ಸಿನಿಮಾ ಎಂಬುದೇ ನಮ್ಮೆಲ್ಲರ ಹೆಮ್ಮೆ” ಎನ್ನುತ್ತಲೇ ಟೀಸರ್ ಬಿಡುಗಡೆಗೊಳಿಸಿದ ಶರಣ್ ಚಿತ್ರದ ಯಶಸ್ಸಿಗೆ ಶುಭ ಹಾರೈಸಿದರು.

Categories
ಸಿನಿ ಸುದ್ದಿ

ಧನ್ವೀರ್ ಗೌಡಗೆ ಜೋಡಿಯಾದ ರೀಷ್ಮಾ : ಶೂಟಿಂಗ್ ಗೆ ಎಂಟ್ರಿಯಾದ ಕೊಡಗು ಬೆಡಗಿ…

ಶೋಕ್ದಾರ್ ಖ್ಯಾತಿಯ ಧ್ವನೀರ್ ಗೌಡ ನಟಿಸುತ್ತಿರುವ ವಾಮನ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದ್ದು, ಇದೀಗ ವಾಮನಿಗೆ ನಾಯಕಿ ಸಿಕ್ಕಿದ್ದಾಳೆ. ಏಕ್ ಲವ್ ಯಾ ಸಿನಿಮಾ ಮೂಲಕ ಚಂದನವನ ಪ್ರವೇಶಿಸಿದ್ದ ರೀಷ್ಮಾ ನಾಣಯ್ಯ ಧ್ವನೀರ್ ಗೆ ಜೋಡಿಯಾಗಿ ಅಭಿನಯಿಸ್ತಿದ್ದು, ಈಗಾಗಲೇ ರೀಷ್ಮಾ ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ.

ರೀಷ್ಮಾ, ಸದಾ ಹಸನ್ಮುಖಿಯಾಗಿರುವ ಪಾತ್ರದಲ್ಲಿ ನಟಿಸುತ್ತಿದ್ದು, ನಾಯಕನ ಪಯಣದಲ್ಲಿ ನಾಯಕಿ ಹೇಗೆ ಬೆಂಬಲವಾಗಿ ನಿಲ್ಲುತ್ತಾಳೆ ಅನ್ನೋದನ್ನು ಸಿನಿಮಾದಲ್ಲಿ ನೋಡಬಹುದು. ಪಕ್ಕ ಔಟ್ ಅಂಡ್ ಟ್ ಕಮರ್ಷಿಯಲ್ ಆಕ್ಷನ್ ಸಿನಿಮಾ

ವಾಗಿರುವ ವಾಮನದಲ್ಲಿ ಒಂದೊಳ್ಳೆ ಲವ್ ಸ್ಟೋರಿ ಕೂಡ ಇದೆ. ಶಂಕರ್ ರಾಮನ್ ಸಾರಥ್ಯದಲ್ಲಿ ಮೂಡಿಬರ್ತಿರುವ ಸಿನಿಮಾವನ್ನು ಚೇತನ್ ಕುಮಾರ್ ರ್ಈಕ್ವಿನಾಕ್ಸ್ ಗ್ಲೋಬಲ್ ಎಂಟರ್‌ಟೈನ್‌ಮೆಂಟ್‌ ನಡಿ ನಿರ್ಮಾಣ ಮಾಡಿದ್ದಾರೆ.

ಈಗಾಗ್ಲೇ ರಿಲೀಸ್ ಆಗಿರುವ ಧನ್ವೀರ್ ಫಸ್ಟ್ ಲುಕ್ ಹಾಗೂ ಮೇಕಿಂಗ್ ಝಲಕ್ ಸಿನಿಮಾ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ. ಸಖತ್ ಮಾಸ್ ಅವತಾರದಲ್ಲಿ ಶೋಕ್ದಾರ್ ಮಿಂಚಿದ್ದು, ಶೀರ್ಘದಲ್ಲಿ ಚಿತ್ರತಂಡ ಮತ್ತೊಂದು ಅಪ್ ಡೇಟ್ ಗೆ ಸಜ್ಜಾಗುತ್ತಿದೆ.

Categories
ಸಿನಿ ಸುದ್ದಿ

ಇದು ಲೈನ್ ಮ್ಯಾನ್ ಸಿನಿಮಾ: ಕನ್ನಡದಲ್ಲೊಂದು ಬೆಳಕು ನೀಡೋ ಸ್ಪೆಷಲ್ ಲೈನ್ ಮ್ಯಾನ್ ಸ್ಟೋರಿ…

“ಭಿನ್ನ” ದಂತಹ ವಿಭಿನ್ನ ಚಿತ್ರ ನಿರ್ಮಾಣ ಮಾಡಿದ್ದ ಪರ್ಪಲ್ ರಾಕ್ ಸಂಸ್ಥೆಯಿಂದ ಇತ್ತೀಚೆಗೆ “ಡಿಯರ್ ಸತ್ಯ” ಚಿತ್ರ ಸಹ ನಿರ್ಮಾಣವಾಗಿತ್ತು. ಈಗ ಸಂಸ್ಥೆಯ ಮೂರನೇ ಕಾಣಿಕೆಯಾಗಿ “ಲೈನ್ ಮ್ಯಾನ್” ಚಿತ್ರ ಆರಂಭವಾಗಿದೆ.
ಚಾಮರಾಜನಗರದ ಚಂದಕವಾಡಿಯಲ್ಲಿರುವ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನದಲ್ಲಿ ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ನಡೆಯಿತು. ಚಾಮರಾಜನಗರ ಜಿಲ್ಲಾ ಪೊಲೀಸ್ ಅಧೀಕ್ಷಕ ಶಿವಕುಮಾರ್ ಆರಂಭ ಫಲಕ ತೋರುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು.

ಯತೀಶ್ ವೆಂಕಟೇಶ್, ಗಣೇಶ್ ಪಾಪಣ್ಣ, ಶ್ರೀನಿವಾಸ್ ಬಿಂಡಿಗನವಿಲೆ ಹಾಗೂ ಅಜಯ್ ಅಪರೂಪ್ ನಿರ್ಮಿಸುತ್ತಿರುವ ಈ ಚಿತ್ರವನ್ನು ರಘು ಶಾಸ್ತ್ರಿ ನಿರ್ದೇಶಿಸುತ್ತಿದ್ದಾರೆ. ಈ ಹಿಂದೆ
“ರನ್ ಆಂಟೊನಿ” ಹಾಗೂ “ಟಕ್ಕರ್” ಚಿತ್ರಗಳನ್ನು ರಘು ಶಾಸ್ತ್ರಿ ನಿರ್ದೇಶಿಸಿದ್ದರು.

ತ್ರಿಗುಣ್ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ಆರ್.ಜಿ.ವಿ ನಿರ್ದೇಶನದ “ಕೊಂಡ” ಚಿತ್ರ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿರುವ ತ್ರಿಗುಣ್ ಅವರಿಗೆ ಕನ್ನಡದಲ್ಲಿ ಇದು ಮೊದಲ ಚಿತ್ರ.
ಹಿರಿಯ ನಟಿ ಬಿ.ಜಯಶ್ರೀ, ಮೈಕೋ ನಾಗರಾಜ್, ಹರಿಣಿ ಹಾಗೂ “ತರ್ಲೆನನ್ಮಗ” ಖ್ಯಾತಿಯ ಅಂಜಲಿ‌ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಹಳ್ಳಿ ಕಡೆ ದಿನ ಬೀದಿ ದೀಪ ಹಾಕುವ, ಅರಿಸುವ ಹಾಗೂ ವಿದ್ಯುತ್ ನಿಂದಾಗುವ ತೊಂದರೆ ಸರಿಪಡಿಸುವ “ಲೈನ್ ಮ್ಯಾನ್” ಸುತ್ತ ಈ ಕಥೆ ನಡೆಯಲಿದೆ. ತ್ರಿಗುಣ್ “ಲೈನ್ ಮ್ಯಾನ್” ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಮೂರು ಹಾಡುಗಳಿರುವ ಈ ಚಿತ್ರಕ್ಕೆ ಮಣಿಕಾಂತ್ ಕದ್ರಿ ಸಂಗೀತ ನೀಡುತ್ತಿದ್ದಾರೆ. ಶಾಂತಿ ಸಾಗರ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ
ಪ್ರಚುರ ಪಿ ಪಿ , ಜೋತಿ ರಘು ಶಾಸ್ತ್ರೀ ಹಾಗೂ ಮಣಿಕಾಂತ್ ಕದ್ರಿ ಅವರ ಸಹ ನಿರ್ಮಾಣವಿದೆ.

Categories
ಸಿನಿ ಸುದ್ದಿ

ಇದು ಧಮ್ ಇರೋ ಸಿನಿಮಾ! ತಮಿಳು ನಿರ್ದೇಶಕರ ಕನ್ನಡ‌ ಚಿತ್ರ…

ಕಳೆದ ಕೆಲವು ವರ್ಷಗಳ ಹಿಂದೆ ಕಿಚ್ಚ ಸುದೀಪ್ ಅಭಿನಯದಲ್ಲಿ “ಧಮ್” ಎನ್ನುವ ಚಿತ್ರ ಬಂದಿತ್ತು. ಈಗ ಮತ್ತೆ ಅದೇ ಹೆಸರಿನ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಕನ್ನಡದ ಹುಡುಗ ಶ್ರೀಜಿತ್ ನಾಯಕನಾಗಿ ನಟಿಸಿರುವ ಈ ಚಿತ್ರವನ್ನು ವಿ ಆರ್ ಆರ್ ನಿರ್ದೇಶಿಸಿದ್ದಾರೆ.

ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ನೆರವೇರಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ಕಾರ್ಯದರ್ಶಿ ಕುಶಾಲ್ ಚಂದ್ರಶೇಖರ್ ಹಾಗೂ ನಟ, ನಿರ್ದೇಶಕ ರವಿಕಿರಣ್ ಇದ್ದರು.

ನಾನು ಬಾಲನಟನಾಗಿ “ಹಾತಿ ಮೇರೆ ಸಾತಿ” ಸೇರಿದಂತೆ ಸುಮಾರು ನೂರೈವತ್ತಕ್ಕೂ ಅಧಿಕ ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ಹದಿನಾರು ಚಿತ್ರಗಳನ್ನು ನಿರ್ದೇಶಿಸಿದ್ದೇನೆ. ನನ್ನ ತಾಯಿ ಮೈಸೂರಿನವರು‌. ಅವರಿಗೆ ನಾನು ಕನ್ನಡ ಚಿತ್ರವೊಂದನ್ನು ನಿರ್ದೇಶಿಸಬೇಕೆಂಬ ಆಸೆಯಿತ್ತು. ಅದು ಈಗ ಈಡೇರಿದೆ. ಈ ಚಿತ್ರ ಕನ್ನಡ ಹಾಗೂ ತಮಿಳಿನಲ್ಲಿ ನಿರ್ಮಾಣವಾಗಿದೆ. ಈ ಚಿತ್ರದ ನಾಯಕರಾಗಿ ಸಂಚಾರಿ ವಿಜಯ್ ಮಾಡಬೇಕಿತ್ತು. ಕಾರಣಾಂತರದಿಂದ ಅದು ಆಗಲಿಲ್ಲ. ನಂತರ ಶ್ರೀಜಿತ್ ಆಯ್ಕೆಯಾದರು. ಎರೀನ್ ಅಧಿಕಾರಿ ಈ ಚಿತ್ರದ ನಾಯಕಿ. ಶಯ್ಯಾಜಿ ಶಿಂಧೆ, ರವಿಕಾಳೆ, ನಾಗೇಶ್ವರ ರಾವ್, ಗುರುಚಂದ್ರನ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ರಿಹಾನ್ ಅಹಮದ್‌ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಇಳಯರಾಜ ಅವರ ಬಳಿ ಕಾರ್ಯ ನಿರ್ವಹಿಸಿರುವ ಜೀವ ವರ್ಷಿಣಿ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಸದ್ಯದಲ್ಲೇ ಚಿತ್ರವನ್ನು ಬಿಡುಗಡೆ ಮಾಡುತ್ತೇವೆ ಎಂದರು ನಿರ್ದೇಶಕ ವಿ.ಆರ್.ಆರ್.

ನನ್ನ ಸ್ನೇಹಿತನ ಮೂಲಕ ನಿರ್ದೇಶಕರ ಪರಿಚಯವಾಯಿತು. ವಿ.ಆರ್.ಆರ್ ಅವರಂತಹ ನಿರ್ದೇಶಕರ ಚಿತ್ರದಲ್ಲಿ ಅಭಿನಯಿಸಿದ್ದು ಸಂತೋಷವಾಗಿದೆ. ನಾನು ಈ ಹಿಂದೆ “ರಂಗ್ ಬಿ ರಂಗಿ” ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದೆ. ಇದು ಎರಡನೇ ಚಿತ್ರ. ಆಕ್ಷನ್, ಥ್ರಿಲ್ಲರ್, ಸೆಂಟಿಮೆಂಟ್ ಎಲ್ಲಾ ಅಂಶಗಳು ನಮ್ಮ ಚಿತ್ರದಲ್ಲಿದೆ. ಸದ್ಯದಲ್ಲೇ ಬಿಡುಗಡೆಯಾಗಲಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎನ್ನುತ್ತಾರೆ ನಾಯಕ ಶ್ರೀಜಿತ್.

ನಾನು ಮೂಲತಃ ಬಂಗಾಲಿಯವಳು. ಬಂಗಾಳಿ, ತೆಲುಗು, ಹಿಂದಿ ಚಿತ್ರಗಳಲ್ಲಿ ನಟಿಸಿದ್ದೇನೆ. ಕನ್ನಡದಲ್ಲಿ ಮೊದಲ ಚಿತ್ರ. ಒಳ್ಳೆಯ ಪಾತ್ರ ನೀಡಿರುವ ನಿರ್ದೇಶಕರಿಗೆ ವಂದನೆಗಳು ಎಂದರು ನಾಯಕಿ ಎರೀನ್ ಅಧಿಕಾರಿ.

ಚಿತ್ರದಲ್ಲಿ ನಟಿಸಿರುವ ನಾಗೇಶ್ವರರಾವ್, ಸಂಗೀತ ನೀಡಿರುವ ಜೀವವರ್ಷಿಣಿ “ಧಮ್” ಚಿತ್ರದ ಬಗ್ಗೆ ಮಾತನಾಡಿದರು.

Categories
ಸಿನಿ ಸುದ್ದಿ

ಮಿಥ್ಯ ಎಂಬ ಬಾಲಕನ ಕಥೆ: ಪರಂವಃ ಸ್ಟುಡಿಯೋಸ್ ಸಿನಿಮಾ

ಚಿತ್ರರಂಗ ಎಂದರೆ ಎಲ್ಲ ರೀತಿಯ ಸಿನಿಮಾಗಳನ್ನೂ ಮಾಡಬೇಕು. ಹೊಸ ಶೈಲಿಯ ಕಥೆಗಳನ್ನು, ಹೊಸ ಆಲೋಚನೆಗಳನ್ನು ಬರಮಾಡಿಕೊಳ್ಳಬೇಕು. ಹೊಸ ಯೋಚನೆಗಳಿರುವ ಕಥೆಗಾರರನ್ನು ಚಿತ್ರರಂಗದಲ್ಲಿ ತೊಡಗಿಸಿಕೊಳ್ಳುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ಪರಂವಃ ಸ್ಟುಡಿಯೋಸ್​ ಹೆಜ್ಜೆ ಇಟ್ಟಿದ್ದು, ‘ಮಿಥ್ಯ’ ಅಂಥದ್ದೊಂದು ವಿನೂತನ ಪ್ರಯತ್ನವಾಗಲಿದೆ.


‘ಮಿಥ್ಯ’, ರಕ್ಷಿತ್​ ಶೆಟ್ಟಿ ನಿರ್ಮಾಣದ ಹೊಸ ಚಿತ್ರ. ಈ ಚಿತ್ರದ ಮೂಲಕ ಸುಮಂತ್​ ಭಟ್​ ಸ್ವತಂತ್ರ ನಿರ್ದೇಶಕರಾಗಿ ಕಾಲಿಡುತ್ತಿದ್ದಾರೆ. ತಮ್ಮ ಮೊದಲ ಪ್ರಯತ್ನದಲ್ಲೇ 11 ವರ್ಷದ ಬಾಲಕನ ಕಥೆಯನ್ನು ಹೇಳುವುದಕ್ಕೆ ಹೊರಟಿದ್ದಾರೆ. ಅವನ ನೋವು ಮತ್ತು ವಿಮೋಚನೆಯ ಕಥೆಯನ್ನು ಹೇಳವ ಪ್ರಯತ್ನ ಮಾಡುತ್ತಿದ್ದಾರೆ.
ತಂದೆ-ತಾಯಿಯ ನಿಧನದ ನಂತರ, ಅವರ ನೆನಪುಗಳಿಂದ ಹೊರಬರಲಾರದ ಪುಟ್ಟ ಬಾಲಕನೊಬ್ಬ ಹೊಸ ಪ್ರಪಂಚವನ್ನು ಹುಡುಕಿಕೊಂಡು ಹೊರಡುತ್ತಾನೆ. ಹಳೆಯ ಸಂಬಂಧಗಳಲ್ಲಿ ಹೊಸತನ ಕಾಣುವ ಹಾಗೂ ಹೊಸ ಸ್ನೇಹಿತರಲ್ಲಿ ಹಳೆಯ ಗೆಳೆತನ ಹುಡುಕುವ ಪಯಣವೇ ಈ ‘ಮಿಥ್ಯ’.

ಮೂಲತಃ ಸಾಫ್ಟ್​ವೇರ್​ ಇಂಜಿನಿಯರ್​ ಆಗಿದ್ದ ಸುಮಂತ್​ ಭಟ್​ಗೆ ಸಿನಿಮಾ ಎನ್ನುವುದು ಪ್ಯಾಶನ್​. ಇದಕ್ಕೂ ಮುನ್ನ ಪರಂವಃ ಸ್ಟುಡಿಯೋಸ್​ ನಿರ್ಮಾಣದ ‘ಏಕಂ’ ಎಂಬ ವೆಬ್​ಸೀರೀಸ್​ನ ಏಳು ಕಂತುಗಳಲ್ಲಿ, ನಾಲ್ಕು ಕಂತುಗಳನ್ನು ಬರೆದು ನಿರ್ದೇಶಿಸಿದವರು ಅವರು. ಜತೆಗೆ ಪರಂವಃ ಕಥಾತಂಡದ ಸಕ್ರಿಯರಾಗಿ ಗುರುತಿಸಿಕೊಂಡವರು. ಈಗ ಅವರು ಸ್ವತಂತ್ರ ನಿರ್ದೇಶಕರಾಗಿ ‘ಮಿಥ್ಯ’ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈ ಹಿಂದೆ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಸರಗೋಡು’ ಮತ್ತು ‘ವಿಕ್ರಾಂತ್​ ರೋಣ’ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಬಾಲನಟ ಆತಿಶ್​ ಶೆಟ್ಟಿ, ಇಲ್ಲಿ ಮಿಥುನ್​ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾನೆ. ಅವನೊಂದಿಗೆ ಪ್ರಕಾಶ್​ ತುಮ್ಮಿನಾಡು, ರೂಪಾ ವರ್ಕಾಡಿ ಮುಂತಾದವರು ನಟಿಸುತ್ತಿದ್ದಾರೆ.

‘ಮಿಥ್ಯ’ ಚಿತ್ರಕ್ಕೆ ಉದಿತ್​ ಖುರಾನ ಅವರ ಛಾಯಾಗ್ರಹಣವಿದ್ದು, ಮಿಥುನ್​ ಮುಕುಂದನ್​ ಅವರ ಸಂಗೀತವಿದೆ. ಭುವನೇಶ್​ ಮಣಿವಣ್ಣನ್​ ಸಂಕಲನಕಾರರಾಗಿ, ಶ್ರೇಯಾಂಕ್​ ನಂಜಪ್ಪ ಸೌಂಡ್​ ಡಿಸೈನರ್​ ಆಗಿ ಕಾರ್ಯನಿರ್ವಹಿಸಲಿರುವ ಈ ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಪ್ರಾರಂಭವಾಗಲಿದೆ.

Categories
ಸಿನಿ ಸುದ್ದಿ

ಇದು ಮೇಡ್ ಇನ್ ಬೆಂಗಳೂರು ಸಾಂಗ್



ನಾನಾ ಊರುಗಳಿಂದ ನಾನಾ ಭಾಷೆಗಳನ್ನಾಡುವ ಜನ ಹಲವು ಕಾಲಗಳಿಂದ ಬೆಂಗಳೂರಿನಲ್ಲಿದ್ದಾರೆ. ಅಂತಹ ಬೆಂಗಳೂರಿನ ಕುರಿತಾಗಿ ಬರುತ್ತಿರುವ ಚಿತ್ರ “ಮೇಡ್ ಇನ್ ಬೆಂಗಳೂರು”.

ಈ ಚಿತ್ರದ ” ಬನ್ನಿರೆ ಬೆಂಗಳೂರಿಗೆ” ಎಂಬ ಹಾಡನ್ನು ಖ್ಯಾತ ನಿರ್ದೇಶಕ ಭಗವಾನ್ ಬಿಡುಗಡೆ ಮಾಡಿದರು. ಚಿತ್ರದ ಪೋಸ್ಟರ್ ಗೆ ಪಿ ಆರ್ ಓ ಸುಧೀಂದ್ರ ವೆಂಕಟೇಶ್ ಚಾಲನೆ ನೀಡಿದರು.

ಈ ಹಾಡನ್ನು ಹನ್ನೊಂದು ಭಾಷೆಗಳನ್ನು ಬಳಸಿ ರಚಿಸಲಾಗಿದೆ. ಜನಪ್ರಿಯ ಗಾಯಕರಾದ ಶ್ರೀಹರ್ಷ ಎಂ.ಆರ್, ಕಂಬದ ರಂಗಯ್ಯ, ರೋಹಿತ್ ಭಟ್, ಮದ್ವೇಶ್ ಭಾರದ್ವಾಜ್, ಮೇಘ ಕುಲಕರ್ಣಿ, ಪೂಜಾ ರಾವ್, ನಾರಾಯಣ ಶರ್ಮ, ಅದಮ್ಯ ರಮಾನಂದ್, ನಿಹಾಲ್ ವಿಜೇತ್, ಆದರ್ಶ ಶೆಣೈ, ಪ್ರವೀಣ್ ಶಣ್ಮುಗ, ಅಥರ್ವ ರಾವ್, ಅಪ್ಪಣ್ಣ, ಅಶ್ವಿನ್ ಪ್ರಭಾತ್, ರಾಕೇಶ್ ಪೂಜಾರಿ ಮುಂತಾದವರು ಈ ಹಾಡನ್ನು ಹಾಡಿದ್ದಾರೆ ಎಂದು ಸಂಗೀತ ನಿರ್ದೇಶಕ ಅಶ್ವಿನ್ ಪಿ ಕುಮಾರ್ ಹಾಡಿನ ಬಗ್ಗೆ ವಿವರಣೆ ನೀಡಿದರು. ಅಶ್ವಿನ್ ಪಿ ಕುಮಾರ್ ಸಹ ಈ ಗೀತೆಗೆ ಧ್ವನಿಯಾಗಿದ್ದಾರೆ.

ನಾನು ರಾಘವೇಂದ್ರಸ್ವಾಮಿಗಳ ಪರಮಭಕ್ತ. ರಾಯರ ಭಕ್ತರಿಂದಲೇ ಈ ಹಾಡನ್ನು ಬಿಡುಗಡೆ ಮಾಡಿಸುವ ಆಸೆಯಿತ್ತು. ಹಾಗಾಗಿ “ಮಂತ್ರಾಲಯ ಮಹಾತ್ಮೆ” ಯಂತಹ ಅದ್ಭುತ ಚಿತ್ರದ ನಿರ್ಮಾಪಕರು ಹಾಗೂ ಖ್ಯಾತ ನಿರ್ದೇಶಕರೂ ಆಗಿರುವ ಭಗವಾನ್ ಅವರಿಂದ ಹಾಡು ಬಿಡುಗಡೆ ಮಾಡಿಸಿದ್ದೇವೆ. ನಲವತ್ತೆಂಟು ವರ್ಷಗಳ ಹಿಂದೆ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯನ್ನು ರಾಯರ ಭಕ್ತರಾದ ಸುಧೀಂದ್ರ ಅವರು ಆರಂಭಿಸಿದ್ದರು. ಈಗ ಆ ಸಂಸ್ಥೆಯನ್ನು ಮುನ್ನಡೆಸುತ್ತಿರುವ ಖ್ಯಾತ ಪಿ.ಆರ್.ಓ ಸುಧೀಂದ್ರ ವೆಂಕಟೇಶ್ ಅವರಿಂದ ಪೋಸ್ಟರ್ ಬಿಡುಗಡೆ ಮಾಡಿಸಿದ್ದು ಖುಷಿಯಾಗಿದೆ. ಚಿತ್ರ‌ ತೆರೆಗೆ ಬರಲು ಸಿದ್ದವಾಗಿದೆ. ಸೆಪ್ಟೆಂಬರ್ ನಲ್ಲಿ ಬಿಡುಗಡೆಯಾಗಲಿದೆ ಎಂದರು ನಿರ್ಮಾಪಕ ಬಾಲಕೃಷ್ಣ.

ಮಧ್ಯಮವರ್ಗದ ಹುಡುಗನೊಬ್ಬ ಐಟಿ ಕಂಪನಿ ಕೆಲಸ ಬಿಟ್ಟು, ಹೊಸ ಕಂಪನಿ ಆರಂಭಿಸುತ್ತಾನೆ. ಅದಕ್ಕಾಗಿ ಹೂಡಿಕೆದಾರರನ್ನು ಹುಡುಕುತ್ತಾನೆ. ಸಿಗದಿದ್ದಾಗ ಗ್ಯಾಂಗ್ ಸ್ಟರ್ ಬಳಿ ಹಣ ಪಡೆಯುತ್ತಾನೆ. ಮುಂದೇನಾಗುತ್ತದೆ ಎಂಬುದೆ ಚಿತ್ರದ ಕಥೆ ಎಂದು ನಿರ್ದೇಶಕ ಪ್ರದೀಪ್ ಶಾಸ್ತ್ರಿ ವಿವರಣೆ ನೀಡಿದರು.

ಚಿತ್ರದ ನಾಯಕ ಮಧುಸೂದನ್ ಗೋವಿಂದ್, ನಟರಾದ ಪುನೀತ್ ಮಾಂಜ ಹಾಗೂ ವಂಶಿಧರ್ ಸಹ ಈ ಚಿತ್ರದ ಕುರಿತು ಮಾತನಾಡಿದರು.

ನಾವು ಚಿತ್ರ ನಿರ್ಮಾಣ ಮಾಡಬೇಕಾದರೆ ಇಷ್ಟು ಸುಲಭವಿರಲಿಲ್ಲ. ಈಗ ತಂತ್ರಜ್ಞಾನ ತುಂಬಾ ಮುಂದುವರೆದಿದೆ. ಹೊಸಬರ ತಂಡದಿಂದ ಹೊಸಚಿತ್ರವೊಂದು ನಿರ್ಮಾಣವಾಗಿದೆ. ರಾಯರ ಭಕ್ತರು ನಿರ್ಮಾಣ ಮಾಡಿದ್ದಾರೆ. ಇಡೀ ತಂಡಕ್ಕೆ ರಾಯರ ಕೃಪೆಯಿರಲಿ ಎಂದು ಹಿರಿಯ ನಿರ್ದೇಶಕ ಭಗವಾನ್ ಹಾರೈಸಿದರು.

ಹಿರಿಯ ನಟರಾದ ಅನಂತನಾಗ್, ಸಾಯಿಕುಮಾರ್, ಪ್ರಕಾಶ್ ಬೆಳವಾಡಿ ಮುಂತಾದ ಕಲಾವಿದರು “ಮೇಡ್ ಇನ್ ಬೆಂಗಳೂರು” ಚಿತ್ರದಲ್ಲಿ ನಟಿಸಿದ್ದಾರೆ.

Categories
ಸಿನಿ ಸುದ್ದಿ

ರಾಜ ರಾಣಿ ರೋರರ್ ರಾಕೆಟ್ ಹಾರಲು ರೆಡಿ: ಡ್ಯಾನ್ಸ್ ಮಾಸ್ಟರ್ ಈಗ ಹೀರೋ…

ಜನಪ್ರಿಯ “ಚುಟು ಚುಟು ಅಂತೈತಿ” ಹಾಡಿಗೆ ನೃತ್ಯ ನಿರ್ದೇಶನ ಮಾಡಿ, ಖ್ಯಾತರಾಗಿರುವ ನೃತ್ಯ ನಿರ್ದೇಶಕ ಭೂಷಣ್, ಆನಂತರ “ನಟಸಾರ್ವಭೌಮ”, ” ಬೆಲ್ ಬಾಟಮ್”, “ರಾಬರ್ಟ್” ಮುಂತಾದ ಸೂಪರ್ ಹಿಟ್ ಚಿತ್ರಗಳಿಗೂ‌ ನೃತ್ಯ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.

“ರಾಜ ರಾಣಿ ರೋರರ್ ರಾಕೆಟ್” ಚಿತ್ರದ ಮೂಲಕ ಭೂಷಣ್ ನಾಯಕರಾಗಿ ಮತ್ತೊಂದು ಮೆಟ್ಟಿಲು ಏರುವ ಉತ್ಸಾಹದಲ್ಲಿದ್ದಾರೆ . ಪ್ರಸ್ತುತ ಈ ಚಿತ್ರ ತೆರೆಗೆ ಬರಲು ಸಿದ್ದವಾಗಿದ್ದು, ಸೆಪ್ಟೆಂಬರ್ ನಲ್ಲಿ ತೆರೆ ಕಾಣಲಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಕೆಂಪೇಗೌಡ ಮಾಗಡಿ ನಿರ್ದೇಶಿಸಿದ್ದಾರೆ. ನಾಗರಾಜ್ ವಿ ಅಜ್ಜಂಪುರ ನಿರ್ಮಾಣ ಮಾಡಿದ್ದಾರೆ. ಹುಲಿಯೂರು ದುರ್ಗದಲ್ಲೇ ಬಹುತೇಕ ಚಿತ್ರೀಕರಣ ನಡೆದಿದೆ.

ಮುಂದಿನ ತಿಂಗಳು ಚಿತ್ರ ತೆರೆಗೆ ಬರುತ್ತಿದ್ದು, ಚಿತ್ರತಂಡ ವಿನೂತನ ಪ್ರಚಾರಕ್ಕೆ ಮುಂದಾಗಿದೆ. ಇತ್ತೀಚೆಗೆ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪ್ರಚಾರಕಾರ್ಯಕ್ಕೆ ಚಾಲನೆ ನೀಡಲಾಯಿತು. ಚಿತ್ರದ ಪಾಸ್(ಟಿಕೆಟ್) ಗಳನ್ನು ಈಗಲೇ ನೃತ್ಯಗಾರರಿಗೆ ವಿತರಿಸಲಾಗುತ್ತಿದೆ, ಆ ಕಾರ್ಯಕ್ಕೆ ಕೆಜಿಎಫ್ ಖ್ಯಾತಿಯ ನೃತ್ಯ ನಿರ್ದೇಶಕ ಮೋಹನ್ , ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಖ್ಯಾತಿಯ ರುದ್ರ, ಹಾಗೂ ಮತ್ತಿತರ ನೃತ್ಯಗಾರರು ಪ್ರೋತ್ಸಾಹ ನೀಡುತ್ತಿದ್ದಾರೆ ಎನ್ನುತ್ತಾರೆ ನಾಯಕ ಭೂಷಣ್.

ಇತ್ತೀಚೆಗೆ ಸಂಚಿತ್ ಹೆಗಡೆ ಹಾಡಿರುವ ಈ ಚಿತ್ರದ ಹಾಡೊಂದು ಬಿಡುಗಡೆಯಾಗಿದ್ದು, ಒಂದು ಮಿಲಿಯನ್ ಗೂ ಅಧಿಕ ವೀಕ್ಷಣೆಯಾಗಿದೆ. ‌ಪ್ರಭು ಎಸ್ ಆರ್, ಸಂಗೀತ ನೀಡಿದ್ದಾರೆ.

ಭೂಷಣ್ ಅವರಿಗೆ ನಾಯಕಿಯಾಗಿ ಮಾನ್ಯ ಅಭಿನಯಿಸಿದ್ದಾರೆ. ರಣಧೀರ್, ಸಂತೋಷ್ ಇದ್ದಾರೆ. ಹಿರಿಯ ನೃತ್ಯ ನಿರ್ದೇಶಕ ಮೂಗೂರು ಸುಂದರಂ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ.

Categories
ಸಿನಿ ಸುದ್ದಿ

ಸೆಪ್ಟೆಂಬರ್ ವೇಳೆಗೆ ಕಾಟನ್ ಪೇಟೆ ಗೇಟ್ ಓಪನ್! ಹೊಸಬರ ಚಿತ್ರ ರಿಲೀಸ್ ಗೆ ರೆಡಿ…

ಕನ್ನಡ ಚಿತ್ರರಂಗಕ್ಕೆ “ಯುವರಾಜ” ಸೇರಿದಂತೆ ಅನೇಕ ಅದ್ದೂರಿ ಚಿತ್ರಗಳನ್ನು ನೀಡಿರುವ ಆರ್.ಎಸ್ ಶ್ರೀನಿವಾಸ್ ನಿರ್ಮಾಣದ “ಕಾಟನ್ ಪೇಟೆ ಗೇಟ್” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಚಿತ್ರ ಸೆಪ್ಟೆಂಬರ್ 9 ರಂದು ತೆರೆಗೆ ಬರುವ ಸಾಧ್ಯತೆಯಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ – ಹಾಡುಗಳು ಬಿಡುಗಡೆಯಾಗಿವೆ.

ನಮ್ಮ ಆರ್ ಎಸ್ ಪ್ರೊಡಕ್ಷನ್ಸ್ ಮೂಲಕ ಶಿವರಾಜಕುಮಾರ್ ಅಭಿನಯದ “ಯುವರಾಜ” ಚಿತ್ರ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಾಣ ಮಾಡಿದ್ದೇವೆ‌. ಖ್ಯಾತ ನಿರ್ದೇಶಕ ಪೂರಿ ಜಗನ್ನಾಥ್ “ಯುವರಾಜ” ಚಿತ್ರ ನಿರ್ದೇಶನ ಮಾಡಿದ್ದರು. ಈಗ ಅವರ ಬಳಿ ಕೆಲಸ ಮಾಡಿರುವ ವೈ ರಾಜಕುಮಾರ್ ನಿರ್ದೇಶನದಲ್ಲಿ “ಕಾಟನ್ ಪೇಟೆ ಗೇಟ್” ಚಿತ್ರ ನಿರ್ಮಾಣ ಮಾಡಿದ್ದೇನೆ. ಕನ್ನಡ ಸೇರಿದಂತೆ ಮೂರು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಸೆಪ್ಟೆಂಬರ್ 9 ರಂದು ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಆರ್ ಎಸ್ ಶ್ರೀನಿವಾಸ್.

ಅವಕಾಶ ನೀಡಿರುವ ನಿರ್ಮಾಪಕರಿಗೆ ಧನ್ಯವಾದ. “ಕಾಟನ್ ಪೇಟೆ ಗೇಟ್” ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ. ಈ ಚಿತ್ರ ಚೆನ್ನಾಗಿ ಮೂಡಿಬಂದಿದೆ ಅಂದರೆ ಅದಕ್ಕೆ ನಾನೊಬ್ಬ ಕಾರಣ ಅಲ್ಲ ನನ್ನ ಇಡೀ ಚಿತ್ರತಂಡದ ಶ್ರಮ ಎಂದರು ನಿರ್ದೇಶಕ ವೈ ರಾಜಕುಮಾರ್.

ಈ ಚಿತ್ರ ಮೂರು ಭಾಷೆಗಳಲ್ಲಿ ನಿರ್ಮಾಣವಾಗಿದೆ. ಆದರೆ ಮೊದಲು ಆರಂಭವಾಗಿದ್ದು ಕನ್ನಡದಲ್ಲಿ . ಇಲ್ಲಿನ ಅರಣ್ಯ ಪ್ರದೇಶ, ಸುಂದರವಾದ ಪರಿಸರದಲ್ಲಿ ಚಿತ್ರೀಕರಣ ನಡೆದಿದೆ. ಇದೊಂದು ಆಕ್ಷನ್, ಕಾಮಿಡಿ, ಸಸ್ಪೆನ್ಸ್, ಸೆಂಟಿಮೆಂಟ್ ಎಲ್ಲಾ ಅಂಶಗಳಿರುವ ಕಮರ್ಷಿಯಲ್ ಚಿತ್ರ. ರಾಜಕುಮಾರ್ ಬಹಳ ಚೆನ್ನಾಗಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ನಟಿಸಲು ನನಗೆ ತುಂಬಾ ಖುಷಿಯಾಗಿದೆ ಎನ್ನುತ್ತಾರೆ ನಾಯಕ ವೇಣುಗೋಪಾಲ್.

ಸಂಗೀತ ನಿರ್ದೇಶಕ ಪ್ರಸು, ಛಾಯಾಗ್ರಹಕ ಯೋಗಿ ರೆಡ್ಡಿ, ಚಿತ್ರದಲ್ಲಿ ನಟಿಸಿರುವ 8pm ಸಾಯಿಕುಮಾರ್, ಕಟ್ಟಪ್ಪ, ರಘು ಮುಂತಾದ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ಉಪಾಧ್ಯಕ್ಷರಾದ ಶಿಲ್ಪ ಶ್ರೀನಿವಾಸ್, ಗೌರವ ಕಾರ್ಯದರ್ಶಿ ಸುಂದರರಾಜ್, ಮಮತಾ ದೇವರಾಜ್, ನಿರ್ದೇಶಕ ವಿ.ಸಮುದ್ರ ಹಾಗೂ ನಟ ಜೈ ಸಿದ್ಧಾರ್ಥ್ ಸೇರಿದಂತೆ ಅನೇಕ ಗಣ್ಯರು ಈ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.

Categories
ಸಿನಿ ಸುದ್ದಿ

ಡಿ56 ಇದು ದಚ್ಚು ಚಿತ್ರ! ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಸಿನಿಮಾಗೆ ಚಾಲನೆ: ಮಾಲಾಶ್ರೀ ಮಗಳು ಎಅಧನಾ ರಾಮ್ ನಾಯಕಿ…

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದಲ್ಲಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ನಿರ್ಮಿಸುತ್ತಿರುವ “ಡಿ56” ಚಿತ್ರಕ್ಕೆ ವರಮಹಾಲಕ್ಷ್ಮೀ ಹಬ್ಬದಂದು ಅಧಿಕೃತವಾಗಿ ಚಾಲನೆ ಸಿಕ್ಕಿದೆ. ಕನಕಪುರ ರಸ್ತೆಯ ರವಿಶಂಕರ್ ಗುರೂಜಿ ಆಶ್ರಮದಲ್ಲಿ ನಡೆದ ಮುಹೂರ್ತ ಸಮಾರಂಭದಲ್ಲಿ ಚಿತ್ರ ಪ್ರಾರಂಭವಾಗಿದೆ. ದೇವರ ಮೇಲೆ ಸೆರೆಹಿಡಿದ ಮೊದಲ ದೃಶ್ಯಕ್ಕೆ ರಾಕ್ ಲೈನ್ ವೆಂಕಟೇಶ್ ಪತ್ನಿ ಪುಷ್ಪ ಕುಮಾರಿ ಕ್ಲಾಪ್ ಮಾಡಿದರೆ, ಶ್ರೀ ರವಿಶಂಕರ್ ಗುರೂಜಿ ಕ್ಯಾಮೆರಾ ಸ್ವಿಚ್ ಆನ್ ಮಾಡಿದರು.
ಡಿ56 ಚಿತ್ರವನ್ನು ‘ರಾಬರ್ಟ್’ ಖ್ಯಾತಿಯ ತರುಣ್ ಸುಧೀರ್ ನಿರ್ದೇಶಿಸುತ್ತಿದ್ದಾರೆ. ಕಥೆ-ಚಿತ್ರಕಥೆ ಸಹ ಅವರದ್ದೇ. ‘ರಾಬರ್ಟ್’ ಚಿತ್ರದಲ್ಲಿ ಕೆಲಸ ಮಾಡಿದ್ದ ಬಹುತೇಕರು ಇಲ್ಲೂ ಮುಂದುವರೆಯುತ್ತಿರುವುದು ವಿಶೇಷ. ಈ ಚಿತ್ರದಲ್ಲಿ ದರ್ಶನ್ ಅವರಿಗೆ ನಾಯಕಿಯಾಗಿ ರಾಮು ಮತ್ತು ಮಾಲಾಶ್ರೀ ದಂಪತಿಯ ಮಗಳು ರಾಧನಾ ರಾಮ್ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ.


ಈ ಚಿತ್ರದ ಕುರಿತು ಮಾತನಾಡುವ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ‘ಒಳ್ಳೆಯ ಕಥೆ ಸಿಗುವವರೆಗೂ ಯಾರಿಗೂ ಚಿತ್ರ ಮಾಡುವುದಿಲ್ಲ. ತರುಣ್ ಒಂದೊಳ್ಳೆಯ ಕಥೆ ಹೇಳಿದರು. ದರ್ಶನ್ ಅವರಿಗೆ ಇಷ್ಟು ಚಿತ್ರಗಳಲ್ಲಿ ಈ ತರಹದ ಚಿತ್ರ ಮತ್ತು ಪಾತ್ರ ಎರಡೂ ಹೊಸದು. ಆಗಸ್ಟ್ 16ರಂದು ಚಿತ್ರೀಕರಣ ಪ್ರಾರಂಭವಾಗಲಿದೆ’ ಎಂದರು.

ವರಮಹಾಲಕ್ಷ್ಮೀಯ ಹಬ್ಬದ ಶುಭಾಶಯಗಳನ್ನು ಕೋರುತ್ತಲೇ ಮಾತು ಪ್ರಾರಂಭಿಸಿದ ದರ್ಶನ್. ‘ಇವತ್ತಿನಿಂದ ಡಿ56 ಚಿತ್ರದ ಚಿತ್ರೀಕರಣ ಪ್ರಾರಂಭವಾಗುತ್ತಿದೆ. ಚಿತ್ರದ ಶೀರ್ಷಿಕೆ ಸದ್ಯದಲ್ಲೇ ಘೋಷಿಸಲಾಗುತ್ತಿದೆ. ರಾಬರ್ಟ್ ತಂಡದ ಬಹಳಷ್ಟು ಜನ ಇಲ್ಲಿ ಮುಂದುವರೆಯುತ್ತಿದ್ದಾರೆ. ಈ ಚಿತ್ರದ ಹೆಚ್ಚಿನ ವಿಷಯವನ್ನು ಸದ್ಯದಲ್ಲೇ ತಿಳಿಸುತ್ತೇವೆ’ ಎಂದರು.

ಈ ಚಿತ್ರ ನೋಡಿದವರಿಗೆ ಹೆಮ್ಮೆ ಆಗುವುದು ಖಂಡಿತಾ ಎನ್ನುವ ನಿರ್ದೇಶಕ ತರುಣ್ ಸುಧೀರ್, ‘ಚಿಕ್ಕವಯಸ್ಸಿನಲ್ಲಿ ಪೋಸ್ಟರ್ ಗಳಲ್ಲಿ ರಾಕ್ ಲೈನ್ ಪ್ರೊಡಕ್ಷನ್ಸ್ ಅಂತ ನೋಡಿಯೇ ಎಷ್ಟೋ ಚಿತ್ರಗಳಿಗೆ ಹೋಗಿದ್ದೇನೆ. ಆ ಬ್ಯಾನರ್ನ ಚಿತ್ರಗಳು ಚೆನ್ನಾಗಿರುತ್ತದೆ ಎಂಬ ನಂಬಿಕೆಯ ಮೇಲೆ ಚಿತ್ರಗಳಿಗೆ ಹೋಗುತ್ತಿದ್ದೆವು. ಈಗ ಅದೇ ಸಂಸ್ಥೆಯಲ್ಲಿ ಚಿತ್ರ ನಿರ್ದೇಶಿಸುತ್ತಿರುವುದು ದೊಡ್ಡ ಜವಾಬ್ದಾರಿ. ಹಾಗಾಗಿ, ತುಂಬಾ ಮುತುವರ್ಜಿ ವಹಿಸಿ, ಬೇರೆ ತರಹದ ಸಿನಿಮಾ ಮಾಡುವ ಪ್ರಯತ್ನ ಮಾಡುತ್ತಿದ್ದೇನೆ. ದರ್ಶನ್ ಅವರ ಪಾತ್ರ, ಚಿತ್ರದ ಹಿನ್ನೆಲೆ ಎಲ್ಲವೂ ವಿಭಿನ್ನವಾಗಿರುತ್ತದೆ. ಚಿತ್ರ ನೋಡಿದವರಿಗೆ ಹೆಮ್ಮೆ ಆಗುವುದು ಖಂಡಿತಾ’ ಎಂದರು.

ಮೊದಲ ಚಿತ್ರದಲ್ಲೇ ದರ್ಶನ್ ರಂತಹ ಸ್ಟಾರ್ ನಟರ ಜೊತೆಗೆ ನಟಿಸುತ್ತಿರುವ ಬಗ್ಗೆ ಖುಷಿ ವ್ಯಕ್ತಪಡಿಸುವ ರಾಧನಾ, ‘ನನಗೆ ಈ ಚಿತ್ರದಲ್ಲಿ ನಟಿಸುವುದಕ್ಕೆ ಬಹಳ ಅನಿರೀಕ್ಷಿತವಾಗಿ ಅವಕಾಶ ಸಿಕ್ಕಿತು. ಈ ಚಿತ್ರದಲ್ಲಿ ನಟಿಸುತ್ತಿರುವ ವಿಷಯವನ್ನು ಇನ್ನೂ ಅರಗಿಸಿಕೊಳ್ಳುವುದಕ್ಕೆ ನನ್ನಿಂದ ಸಾಧ್ಯವಾಗುತ್ತಿಲ್ಲ. ನನಗೆ ನಟಿಸುವ ಆಸೆ ಚಿಕ್ಕಂದಿನಿಂದಲೂ ಇತ್ತು. ಎರಡು ವರ್ಷಗಳ ಕಾಲ ಸಾಕಷ್ಟು ತರಬೇತಿ ಪಡೆದು ಕ್ಯಾಮೆರಾ ಮುಂದೆ ನಿಲ್ಲುತ್ತಿದ್ದೇನೆ. ಚಿತ್ರಕ್ಕೆ ಸಂಬಂಧಿಸಿದ ವರ್ಕ್ ಶಾಪ್ ನಲ್ಲೂ ಭಾಗವಹಿಸುತ್ತಿದ್ದೇನೆ’ ಎಂದರು.

ರಾಧಾನಾ ಎಂಟ್ರಿ ಕುರಿತು ಮಾತನಾಡುವ ಅವರ ತಾಯಿ ಮಾಲಾಶ್ರೀ, ‘ನನಗೆ ಬದುಕು ಕೊಟ್ಟ ಚಿತ್ರರಂಗಕ್ಕೆ ಈಗ ನನ್ನ ಮಗಳು ಸಹ ಕಾಲಿಡುತ್ತಿದ್ದಾಳೆ. ನನಗೆ ಎಷ್ಟು ಪ್ರೀತಿ ತೋರಿಸಿದ್ದೀರೋ, ನನ್ನ ಮಗಳಿಗೆ ಅದಕ್ಕಿಂತ ಹೆಚ್ಚು ಪ್ರೀತಿ ತೋರಿಸಿ ಎಂದು ಕೇಳಿಕೊಳ್ಳುತ್ತೇನೆ. ರಾಕ್ ಲೈನ್ ವೆಂಕಟೇಶ್ ಅವರು ನನ್ನ ಸಿನಿಮಾ ಮೂಲಕ ಚಿತ್ರ ನಿರ್ಮಾಣ ಶುರು ಮಾಡಿದರು. ಈಗ ನನ್ನ ಮಗಳು ಅವರ ನಿರ್ಮಾಣದ ಚಿತ್ರದ ಮೂಲಕ ಚಿತ್ರರಂಗಕ್ಕೆ ಚಿತ್ರ ಜೀವನ ಪ್ರಾರಂಭಿಸುತ್ತಿದ್ದಾಳೆ. ಒಂದೊಳ್ಳೆಯ ತಂಡದಿಂದ ಅವಳು ಚಿತ್ರರಂಗಕ್ಕೆ ಬರುತ್ತಿದ್ದಾಳೆ ಎಂಬ ಖುಷಿ ಇದೆ. ಅವಳು 14ನೇ ವಯಸ್ಸಿನಲ್ಲಿದ್ದಾಗಲೇ ಚಿತ್ರರಂಗಕ್ಕೆ ಬರಬೇಕು, ಅಭಿನಯಿಸಬೇಕು ಎಂದು ಆಸೆ ಪಟ್ಟಿದ್ದಳು. ಮುಂಬೈನಲ್ಲಿ ನಟನೆ, ಡ್ಯಾನ್ಸ್ ತರಬೇತಿ ಪಡೆದಿದ್ದಾಳೆ. ನಾಳೆ ಸ್ಕ್ರೀನ್ ಮೇಲೆ ಕಾಣಿಸಿಕೊಂಡಾಗ, ಪ್ರೇಕ್ಷಕರು ನನ್ನ ಮತ್ತು ಅವಳ ನಡುವೆ ಹೋಲಿಕೆ ಮಾಡುವುದು ಸಹಜ. ಆದರೆ, ಅವಳು ತನ್ನ ಹೆಸರಿನಿಂದ ಗುರುತಿಸಿಕೊಳ್ಳಬೇಕೇ ಹೊರತು, ನನ್ನ ಹೆಸರಿನಿಂದ ಗುರುತಿಸಿಕೊಳ್ಳಬಾರದು ಎಂಬುದು ನನ್ನ ಆಸೆ’ ಎಂದರು ಮಾಲಾಶ್ರೀ.

ಡಿ56 ಚಿತ್ರಕ್ಕೆ ಸುಧಾಕರ್ ರಾಜ್ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಅವರ ಸಂಕಲನ, ಮಾಸ್ತಿ ಅವರ ಸಂಭಾಷಣೆ ಇದೆ. ಚಿತ್ರದ ಬಹುತೇಕ ಚಿತ್ರೀಕರಣ ಸೆಟ್ ನಲ್ಲೇ ನಡೆಯಲಿದ್ದು, ಬೆಂಗಳೂರಿನಲ್ಲೇ ಚಿತ್ರೀಕರಣ ಮುಂದುವರೆಯಲಿದೆ.

Categories
ಸಿನಿ ಸುದ್ದಿ

ಎಲ್ರ ಕಾಲೆಳೆಯುತ್ತೆ ಕಾಲ ಫಸ್ಟ್ ಸಾಂಗ್ ರಿಲೀಸ್…

ಉಷಾ ಗೋವಿಂದರಾಜು ನಿರ್ಮಾಣದ “ಎಲ್ರ ಕಾಲೆಳೆಯತ್ತೆ ಕಾಲ” ಚಿತ್ರದ ಹಾಡು ಹೊರಬಂದಿದೆ. ನಟ, ನಿರ್ದೇಶಕ ಸುಜಯ್ ಶಾಸ್ತ್ರಿ, ನಾಯಕ ಚಂದನ್ ಶೆಟಿ, ನಾಯಕಿ ಅರ್ಚನಾ ಕೊಟ್ಟಿಗೆ, ಕಥೆ-ಚಿತ್ರಕಥೆ ಮತ್ತು ಸಂಭಾಷಣೆ ಬರೆದಿರುವ ರಾಜಗುರು ಹೊಸಕೋಟೆ, ಸಂಗೀತ ನಿರ್ದೇಶಕರಾದ ಪ್ರವೀಣ್-ಪ್ರದೀಪ್, ಬಿಗ್ ಬಾಸ್ ವಿಜೇತ ಮಂಜು ಪಾವಗಡ ಮುಂತಾದವರ‌ ಸಮ್ಮುಖದಲ್ಲಿ ಹಾಡು ಹೊರ ಬಂದಿದೆ.

ಶೂಟಿಂಗ್ ಸಂಪೂರ್ಣವಾಗಿದೆ. ಸದ್ಯದಲ್ಲೇ ಮೊದಲ ಪ್ರತಿ ಬರಲಿದೆ. ಚಿತ್ರದ ಮೊದಲ ಹಾಡು (ಗೋಲ್ಡ್ ಫ್ಯಾಕ್ಟರಿ)
ಬಿಡುಗಡೆಯಾಗಿದೆ. ಅದೊಂದು ಮದುವೆಯ ಆರತಕ್ಷತೆಯ ಹಾಡು. ಇದೇ ಕಲ್ಯಾಣ ಮಂಟಪದಲ್ಲಿ ಆ ಹಾಡಿನ ಚಿತ್ರೀಕರಣ ನಡೆದಿದ್ದರಿಂದ, ಅದರ ನೆನಪಿನಲ್ಲಿ ಇಲ್ಲೇ ರಿಲೀಸ್ ಮಾಡುತ್ತಿದ್ದೇವೆ. ರಾಜಗುರು ಹೊಸಕೋಟೆ ಬರೆದಿರುವ ಈ ಹಾಡನ್ನು ಗುರುರಾಜ ಹೊಸಕೋಟೆ, ಪ್ರವೀಣ್ – ಪ್ರದೀಪ್ ಹಾಡಿದ್ದಾರೆ. ಇಂದಿನಿಂದ ಐದು ಅಥವಾ 10 ದಿನಗಳಿಗೊಮ್ಮೆ ಚಿತ್ರದ ಹಾಡು ಅಥವಾ ಕಂಟೆಂಟ್ ಬಿಡುಗಡೆ ಮಾಡುವ ಮೂಲಕ ಚಿತ್ರದ ಪ್ರಚಾರವನ್ನು ಮುಂದುವರೆಸುತ್ತೇವೆ.

ಇದೊಂದು 80ರ ದಶಕದ ಕಥೆ. ಒಂದು ಘಟನೆ ಒಬ್ಬ ವ್ಯಕ್ತಿಯ ಜೀವನದಲ್ಲಿ ಯಾವ ತರಹದ ಪಾತ್ರ ವಹಿಸುತ್ತದೆ ಎಂದು ಹೇಳುವ ಪ್ರಯತ್ನ ಮಾಡಿದ್ದೇವೆ. ಕಾಲ ಯಾರನ್ನೂ ಬಿಡುವುದಿಲ್ಲ, ಎಲ್ಲರ ಕಾಲನ್ನೂ ಎಳೆಯುತ್ತದೆ ಎಂದು ಈ ಚಿತ್ರದ ಮೂಲಕ ತೋರಿಸುವುದಕ್ಕೆ ಹೊರಟಿದ್ದೇವೆ. ಇಲ್ಲಿ ಚಂದನ್ ಮತ್ತು ಅರ್ಚನಾ ಅವರ ಕೆಮಿಸ್ಟ್ರಿ ಚೆನ್ನಾಗಿ ವರ್ಕೌಟ್ ಆಗಿದೆ. ಅವರು ನಟಿಸಬಾರದು. ಸಹಜವಾಗಿ ವರ್ತಿಸಬೇಕು ಎಂಬುದು ನನ್ನ ಆಸೆ ಆಗಿತ್ತು. ಹಾಗಾಗಿ, ವರ್ಕ್ ಶಾಪ್ ಮಾಡಿದೆ. ಇಬ್ಬರೂ ಬಹಳ ಸಹಜವಾಗಿ ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇಡೀ ಚಿತ್ರ ವಿಭಿನ್ನವಾಗಿ ಮತ್ತು ನಾವು ಅಂದುಕೊಂಡಿದ್ದಕ್ಕಿಂತ ಚೆನ್ನಾಗಿ ಮೂಡಿಬಂದಿದೆ. ನಿರ್ಮಾಪಕರು ಮತ್ತು ಚಿತ್ರತಂಡದವರ ಸಹಕಾರವಿಲ್ಲದಿದ್ದರೆ, ಈ ಸಿನಿಮಾ ಸಾಧ್ಯವಾಗುತ್ತಿರಲಿಲ್ಲ. ಪ್ರತಿಯೊಬ್ಬರಿಗೂ ನಾನು ಚಿರ ಋಣಿ ಎಂದರು ನಿರ್ದೇಶಕ ಸುಜಯ್ ಶಾಸ್ತ್ರಿ.

ಇಂದು ನಮ್ಮ ಚಿತ್ರದ ಗೋಲ್ಡ್ ಫ್ಯಾಕ್ಟರಿ ಎಂಬ ಮೊದಲ ಹಾಡು ಬಿಡುಗಡೆಯಾಗಿದೆ. ಈ ಹಾಡಿನಲ್ಲಿ ನಾನು ತುಂಬಾ ಸಿಟ್ಟಾಗಿರುತ್ತೇನೆ. ಅದಕ್ಕೊಂದು ಕಾರಣವೂ ಇರುತ್ತದೆ. ಹಾಡು, ಚಿತ್ರ ಎರಡೂ ಬಹಳ ಚೆನ್ನಾಗಿ ಮೂಡಿ ಬಂದಿದೆ. ಇದೊಂದು ವಿಭಿನ್ನವಾದ ಚಿತ್ರ. ಸುಜಯ್ ಶಾಸ್ತ್ರಿ ಅವರಿಂದ ತುಂಬಾ ಕಲಿತೆ. ಅವರು ನನ್ನನ್ನು ಚೆನ್ನಾಗಿ ಮೌಲ್ಡ್ ಮಾಡಿದ್ದಾರೆ ಎಂದರು ನಾಯಕ ಚಂದನ್ ಶೆಟ್ಟಿ.

ನಟಿಯಾಗಿ ಒಂದು ಕಾಮಿಡಿ ಚಿತ್ರದಲ್ಲಿ ಕಾಣಿಸಿಕೊಳ್ಳಬೇಕು ಎಂದು ಬಹಳ ಆಸೆ ಇತ್ತು. ಆ ಆಸೆ ಈ ಚಿತ್ರದ ಮೂಲಕ ಈಡೇರಿದೆ. ಚಿತ್ರದಲ್ಲಿ ಅದ್ಭುತವಾದ ತಾರಾಗಣವಿದೆ. ತಾರಾ, ದತ್ತಣ್ಣ, ಮಂಡ್ಯ ರಮೇಶ್, ಮಂಜು ಪಾವಗಡ, ರಜನಿಕಾಂತ್ ಮುಂತಾದವರು ಅಭಿನಯಿಸಿದ್ದಾರೆ.

error: Content is protected !!