Categories
ಸಿನಿ ಸುದ್ದಿ

ಲೋಹಿತ್‌ಗೆ ಸಿಕ್ಕ ನಿಧಿ! ನಾಯಕಿ ಪ್ರಧಾನ ಚಿತ್ರದಲ್ಲಿ ಪಂಚರಂಗಿ ಬೆಡಗಿ

ಜನವರಿಯಲ್ಲಿ ಚಿತ್ರಕ್ಕೆ ಚಾಲನೆ…

 

ಕೊಡಗಿನ ಬೆಡಗಿ ನಿಧಿ ಸುಬ್ಬಯ್ಯ ಅಂದಾಕ್ಷಣ ನೆನಪಾಗೋದೇ ಒಂದೇ ಉಸಿರಲ್ಲಿ ಪಟಪಟ ಮಾತಾಡುವ “ಪಂಚರಂಗಿ”ಯ ಮಾತಿನ ಮಲ್ಲಿಯ ಪಾತ್ರ. ಕನ್ನಡ ಚಿತ್ರರಂಗದಲ್ಲಿ ಒಂದಷ್ಟು ಸಿನಿಮಾಗಳ ಮೂಲಕ ತನ್ನದೇ ಛಾಪು ಮೂಡಿಸಿರುವ ನಿಧಿ ಸುಬ್ಬಯ್ಯ, ಬಾಲಿವುಡ್‌ ಅಂಗಳಕ್ಕೂ ಜಿಗಿದಿದ್ದೂ ಗೊತ್ತೇ ಇದೆ. ಅಲ್ಲಿ ಬೆರಳೆಣಿಕೆ ಸಿನಿಮಾಗಳಲ್ಲಿ ನಟಿಸುವ ಮೂಲಕ ತಮ್ಮದ್ದೊಂದು ಠಸ್ಸೇ ಹೊತ್ತಿದ ನಿಧಿ ಸುಬ್ಬಯ್ಯ ಬಹಳ ವರ್ಷಗಳ ಬಳಿಕ ಪುನಃ ಕನ್ನಡಕ್ಕೆ ವಾಪಾಸ್ಸಾಗಿದ್ದು ಗೊತ್ತೇ ಇದೆ. ಈಗ ಮತ್ತೊಂದು ವಿಭಿನ್ನ ಕಥಾಹಂದರ ಇರುವ ಚಿತ್ರದಲ್ಲಿ ನಿಧಿ ಸುಬ್ಬಯ್ಯ ಕಾಣಿಸಿಕೊಳ್ಳುತ್ತಿದ್ದಾರೆ.

ವಿಶೇಷವೆಂದರೆ, ಈ ಚಿತ್ರ ನಾಯಕಿ ಪ್ರಧಾನವಾದದ್ದು. ಈ ಸಿನಿಮಾ ಮೂಲಕ ಪವನ್‌ ಮತ್ತು ಪ್ರಸಾದ್‌ ನಿರ್ದೇಶನದ ಪಟ್‌ ಅಲಂಕರಿಸುತ್ತಿದ್ದಾರೆ. ಇನ್ನು, ಕಿಶೋರ್‌ ನರಸಿಂಹಯ್ಯ, ಚೇತನ್‌ ಕೃಷ್ಣ ಮತ್ತು ಬಿ.ಜಿ. ಅರುಣ್ ಅವರು ಜೊತೆಗೂಡಿ ಈ ಚಿತ್ರವನನು ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರವನ್ನು “ಮಮ್ಮಿ” ಖ್ಯಾತಿಯ ಲೋಹಿತ್‌ ಎಚ್.‌ ಅರ್ಪಿಸುತ್ತಿದ್ದಾರೆ. ಅವರ ಫ್ರೈಡೇ ಫಿಲ್ಮ್ಸ್‌ ಸಹಯೋಗದೊಂದಿಗೆ ಸಿಲ್ವರ್‌ ಟ್ರೈನ್‌ ಇಂಟರ್ನ್ಯಾಷನಲ್‌ ಮತ್ತು ಸಿ.ಕೆ.ಸಿನಿ ಕ್ರಿಯೇಷನ್‌ ಜೊತೆಯಲ್ಲಿ ತಯಾರಾಗುತ್ತಿರುವುದು ವಿಶೇಷ.


ಈ ನಾಯಕಿ ಪ್ರಧಾನ ಚಿತ್ರಕ್ಕಿನ್ನೂ ಯಾವುದೇ ನಾಮಕರಣ ಮಾಡಿಲ್ಲ. ತಮ್ಮ ಹೊಸ ಚಿತ್ರದ ಬಗ್ಗೆ ನಾಯಕಿ ನಿಧಿ ಸುಬ್ಬಯ್ಯ ಸಾಕಷ್ಟು ಥ್ರಿಲ್‌ ಆಗಿದ್ದಾರೆ. ಆ ಬಗ್ಗೆ ನಿಧಿ ಸುಬ್ಬಯ್ಯ ಹೇಳುವುದಿಷ್ಟು. “ಸಿನಿಮಾದ ಕಥೆ ಕೇಳಿದಾಕ್ಷಣ, ನಾನು ನಿಜಕ್ಕೂ ಥ್ರಿಲ್ ಆದೆ. ಅದರಲ್ಲೂ ನಾನು ಇದೇ ಮೊದಲ ಬಾರಿಗೆ ನಾಯಕಿ ಪ್ರಧಾನ ಚಿತ್ರದಲ್ಲಿ ನಟಿಸುತ್ತಿದ್ದೇನೆ. ಇದೊಂದು ಹೊಸ ಕತೆ, ಪಾತ್ರ ಇರುವಂತಹ ಸಿನಿಮಾ ಆಗಲಿದೆ. ಅಷ್ಟೇ ಅಲ್ಲ, ಎಲ್ಲಾ ವರ್ಗದ ಪ್ರೇಕ್ಷಕರಿಗೂ ಈ ಚಿತ್ರದ ಕಥೆ ಇಷ್ಟವಾಗುತ್ತೆ ಎಂಬ ನಂಬಿಕೆ ನನಗಿದೆ. ನಾನು ಈವರೆಗೆ ಎಲ್ಲಾ ರೀತಿಯ ಪಾತ್ರಗಳಲ್ಲೂ ನಟಿಸಿದ್ದೇನೆ. ಇದು ನನಗೆ ಹೊಸ ರೀತಿಯ ಪಾತ್ರ ಕೊಡುತ್ತಿರುವ ಚಿತ್ರ. ಒಳ್ಳೆಯ ತಂಡದ ಜೊತೆ ಕೆಲಸ ಮಾಡುವ ಖುಷಿ ಇದೆ” ಎಂಬುದು ನಿಧಿ ಮಾತು.


ಸದ್ಯಕ್ಕೆ ಈ ಚಿತ್ರಕ್ಕೆ ತಾಂತ್ರಿಕ ವರ್ಗ, ಕಲಾವಿದರು, ಎಲ್ಲೆಲ್ಲಿ ಚಿತ್ರೀಕರಣ ನಡೆಯಲಿದೆ, ಯಾರೆಲ್ಲಾ ಇದರ ಹಿಂದೆ ಕೆಲಸ ಮಾಡುತ್ತಿದ್ದಾರೆ ಎಂಬುದು ಗೊತ್ತಿಲ್ಲ. ಹೊಸ ವರ್ಷಕ್ಕೆ ಹೊಸತನದೊಂದಿಗೆ ಈ ಚಿತ್ರ ಶುರುವಾಗಲಿದೆ ಎಂಬುದು ಲೋಹಿತ್‌ ಅವರ ಮಾತು. ಲೋಹಿತ್‌ ಅವರು ಈ ಹಿಂದೆ “ಮಮ್ಮಿ” ಮೂಲಕ ಜೋರು ಸುದ್ದಿಯಾಗಿದ್ದರು.

ಆ ಬಳಿಕ ಅವರು “ದೇವಕಿ” ಚಿತ್ರ ಮಾಡಿಯೂ ಗೆಲುವು ಕಂಡರು. ಆ ಬಳಿಕ ಅವರು ಸಮಾನ ಮನಸ್ಕರ ಜೊತೆ ಸೇರಿ ತಮ್ಮದ್ದೊಂದು ನಿರ್ಮಾಣ ಸಂಸ್ಥೆಯನ್ನು ಹುಟ್ಟು ಹಾಕಿ “ಲೈಫ್‌ ಈಸ್‌ ಬ್ಯೂಟಿಫುಲ್‌” ಚಿತ್ರ ಶುರು ಮಾಡಿ, ಅದನ್ನೂ ಮುಗಿಸಿದ್ದಾರೆ. ಆ ಚಿತ್ರ ಈಗ ಡಬ್ಬಿಂಗ್‌ ಹಂತದಲ್ಲಿದೆ. ಈಗ ನಾಯಕಿ ಪ್ರಧಾನ ಚಿತ್ರಕ್ಕೆ ಕೈ ಹಾಕಿದ್ದಾರೆ. ಅವರ ಈ ಹೊಸ ಪ್ರಯತ್ನಕ್ಕೆ “ಸಿನಿಲಹರಿ” ಶುಭ ಹಾರೈಸಲಿದೆ.

Categories
ಸಿನಿ ಸುದ್ದಿ

ಮಹಾಕರ್ಮ‌ಕ್ಕೆ ಹೀರೋ ಆದ ‘ಮಗಳು ಜಾನಕಿ‌ ‘ ಖ್ಯಾತಿಯ ನಟ, ಕಿರುತೆರೆಯಿಂದ ಹಿರಿತೆರೆಗೆ ಜಿಗಿದ ಅಭಿಲಾಷ್‌

ಹೊಸಬರಾದರೂ, ಚಿತ್ರದ ಕತೆ ಮೇಲಿದೆ ಅಪಾರ ನಂಬಿಕೆ 


ಕಿರುತೆರೆಯಲ್ಲಿ ಫೇಮಸ್ ‌ಆದ ನಟ-ನಟಿಯರು ಹಿರಿತೆರೆಗೆ ಬರುವುದೇನು ಹೊಸದಲ್ಲ. ಸದ್ಯದ ಅನೇಕ ಜನಪ್ರಿಯ ತಾರೆಯರು ಅಲ್ಲಿಂದಲೇ ಬಂದವರು ಎನ್ನುವುದು ನಿಮಗೂ ಗೊತ್ತು. ಅ ಸಾಲಿಗೆ ಈಗ ಹೊಸ ಸೇರ್ಪಡೆ ಯುವ ನಟ ಅಭಿಲಾಷ್ ಅಲಿಯಾಸ್ ಮಧುಕರ್.


ಅಭಿಲಾಷ್ ಎನ್ನುವುದು ಅವರ ಒರಿಜಿನಲ್ ಹೆಸರು. ಆದರೆ ಮಧುಕರ್ ಎನ್ನುವ ಪಾತ್ರದ ಮೂಲಕವೇ
ಜನಪ್ರಿಯತೆ ಪಡೆದ ನಟ ಅವರು. ಅಂದ ಹಾಗೆ, ಮಧುಕರ್ ಎನ್ನುವುದು ‘ ಮಗಳು ಜಾನಕಿ‌’ ಧಾರಾವಾಹಿ ಯಲ್ಲಿ ಅವರು ನಿರ್ವಹಿಸುತ್ತಿರುವ ಪಾತ್ರ. ಆ ಪಾತ್ರದೊಂದಿಗೆ ಮನೆ‌ಮಾತಾದ ಅಭಿಲಾಷ್ ಈಗ ‘ಮಹಾ ಕರ್ಮ‌’ ಹೆಸರಿನ ಚಿತ್ರದೊಂದಿಗೆ ಹೀರೋ ಆಗಿ ಬೆಳ್ಳಿತೆರೆಗೆ ಜಿಗಿಯುತ್ತಿರುವುದು ವಿಶೇಷ.

‘ಮಹಾಕರ್ಮ‌’. ಶುದ್ದ ಹೊಸಬರ ಚಿತ್ರ.‌ ಯಶಸ್ವಿ ಬಾಲಾಧಿತ್ಯ ಇದರ ನಿರ್ದೇಶಕ. ಈ ಹಿಂದೆ ಇವರು ಒಂದು ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದರು. ಅದು ಅಷ್ಟೇನು ಸಕ್ಸಸ್ ಕಾಣಲಿಲ್ಲ .ಆದರೆ ಮತ್ತೊಂದು ಸಿನಿಮಾ ಮಾಡಿ ಗೆಲ್ಲಲೇ ಬೇಕೆನ್ನುವ ಛಲದೊಂದಿಗೆ ಮಹಾ ಕರ್ಮಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರಂತೆ. ಇನ್ನು ಈ ಚಿತ್ರಕ್ಕೆ ವಿದ್ಯಾಶ್ರೀ ಕ್ರಿಯೇಷನ್ಸ್ ಮೂಲಕ ವಿ.ಮಂಜುನಾಥ್ ಬಂಡವಾಳ ಹಾಕುತ್ತಿದ್ದು, ಕಿರಣ್ ಛಾಯಾಗ್ರಹಣ, ಮಧು ತುಂಬೆಕೆರೆ ಸಂಕಲನ ಚಿತ್ರಕ್ಕಿದೆ.

ಸದ್ದಿಲ್ಲದೆ ಸುದ್ದಿ ಮಾಡದೆ ‘ ಮಹಾ ಕರ್ಮ‌ ‘ ಚಿತ್ರಕ್ಕೆ ಮುಹೂರ್ತವು ಮುಗಿದಿದೆ. ಇತ್ತೀಚೆಗಷ್ಟೇ ನಗರದಲ್ಲಿ ಮುಹೂರ್ತ ಮುಗಿಸಿಕೊಂಡ ಚಿತ್ರ ತಂಡವೀಗ ಚಿತ್ರೀಕರಣಕ್ಕೆ ಸಿದ್ದತೆ ನಡೆಸಿದೆ. ನಟ ಅಭಿಲಾಷ್ ಪ್ರಕಾರ ಮಹಾಕರ್ಮ ಒಂದು ವಿಶೇಷವಾದ ಸಿನಿಮಾ. ಇದೊಂದು ಕ್ರೇಮ್ ಥ್ಲಿಲ್ಕರ್ ಕತೆ. ಹಾಗೆಯೇ ಕ್ಯೂಟ್ ಲವ್ ಸ್ಟೋರಿ ಸಿನಿಮಾವೂ ಹೌದು. ಸಾಕಷ್ಟು ಕಮರ್ಷಿಯಲ್ ಅಂಶಗಳು ಚಿತ್ರದಲ್ಲಿವೆ. ಹೊಸಬರಾದರೂ, ಚಿತ್ರದ ಕತೆ ಪ್ರೇಕ್ಷಕ ರಿಗೆ ಹೆಚ್ಚು ಇಷ್ಟವಾಗಲಿದೆ. ಅದರ ಜತೆಗೆ ನಿರ್ಮಾಪಕ ಮಂಜುನಾಥ್ ಅವರು ಕೂಡ ಚಿತ್ರವನ್ನು ಅದ್ದೂರಿಯಾಗಿಯೇ ತೆರೆಗೆ ತರಲು ಮುಂದಾಗಿದ್ದಾರೆ. ‌ಸಿನಿಮಾ ಚೆನ್ನಾಗಿ ಮೂಡಿ ಬರುವ ನಂಬಿಕೆಯಿದೆ ಎನ್ನುತ್ತಾರೆ ಯುವನಟ ಅಭಿಲಾಷ್.

Categories
ಸಿನಿ ಸುದ್ದಿ

ಸೂಪರ್​ಸ್ಟಾರ್​ಗೆ ಅದ್ಧೂರಿ ಮುಹೂರ್ತ ಸೋಮವಾರದಿಂದ ಶೂಟಿಂಗ್​ ಶುರು

ಅಣ್ಣನ ಮಗನ ಸಿನಿ ಜರ್ನಿಗೆ ಮನದುಂಬಿ ಹಾರೈಸಿದ ರಿಯಲ್ ಸ್ಟಾರ್ ಉಪೇಂದ್ರ 

 

” ‘ಲೇ ಮಚಾ.. ತೆಳ್ಳಗೆ ಬೆಳ್ಳಗೆ  ಇದಾನೆ ಅಂತ ಲಿಟಲ್ ಸ್ಟಾರ್ ಅಂದ್ಕೊಂಡ್ಬಿಟ್ಟೇನೋ ಮಗನೇ, ನಾನು ರಿಯಲ್ ಸ್ಟಾರ್ ಗರಡಿಯಲ್ಲಿ ಪಳಗಿರೋ ಸೂಪರ್ಸ್ಟಾರ್ ಕಣೋ….” 

– ಜನ ಜಾತ್ರೆ ನಡುವೆ ಹೀಗೆ ಖಡಕ್ ಡೈಲಾಗ್ ಹೊಡೆದು ಕುತೂಹಲ‌ ಮೂಡಿಸಿದರು ನಟ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ಸುಧೀಂದ್ರ. ಇದು ನಡೆದಿದ್ದು ಸೂಪರ್ ಸ್ಟಾರ್ ಚಿತ್ರದ ಮುಹೂರ್ತ ಸಂದರ್ಭ.

ಅಂದ ಹಾಗೆ, ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ಸುಧೀಂದ್ರ ನಾಯಕ ನಟನಾಗಿ ಬೆಳ್ಳಿ ತೆರೆಗೆ ಕಾಲಿಡುತ್ತಿರುವುದು ಹಳೇ ಸುದ್ದಿ. ಅದಕ್ಕಾಗಿಯೇ ನಿರಂಜನ್ ತುಂಬಾ ದಿನಗಳಿಂದ ಬಾಡಿ ವರ್ಕೌಟ್ ಮಾಡಿದ್ದು, ಆ ನಂತರ ಸೂಪರ್ ಸ್ಟಾರ್ ಅವರ ಚೊಚ್ಚಲ ಚಿತ್ರಕ್ಕೆ ಹೆಸರಿಟ್ಟು, ಅದರ ಟೀಸರ್ ಲಾಂಚ್ ಅನ್ನು ಅದ್ದೂರಿಯಾಗಿ ಬಿಡುಗಡೆ ಮಾಡಿದ್ದು , ಸಾಕಷ್ಟು ಕುತೂಹಲ ಮೂಡಿಸಿದ್ದೆಲ್ಲ ನಿಮಗೆ ಗೊತ್ತೇ ಇದೆ‌. ಅದಾದ ನಂತರವೀಗ ಡಿಸೆಂಬರ್ 4 ರಂದು ಶುಕ್ರವಾರ ಬೆಂಗಳೂರಿನ ಅಂಜನ ನಗರ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸೂಪರ್ ಸ್ಟಾರ್‌ ಚಿತ್ರಕ್ಕೆ ಅದ್ದೂರಿ ಮುಹೂರ್ತ ಕಾರ್ಯಕ್ರಮ ನೆಡೆಯಿತು.

ಚಿತ್ರದ ನಿರ್ದೇಶಕ ರಮೇಶ್ ವೆಂಕಟೇಶ್​ ಬಾಬು ಅವರ ತಾಯಿ ಶ್ರೀಮತಿ ಗೌರಮ್ಮ ಮುನಿಯಪ್ಪ, ಚಿತ್ರಕ್ಕೆ ಕ್ಲಾಪ್ ಮಾಡಿದರೆ, ಶ್ರೀಮತಿ ಲಕ್ಷ್ಮೀ ಕ್ಯಾಮರಾಕ್ಕೆ ಚಾಲನೆ ನೀಡಿದರು. ಬಳಿಕ ಚಿತ್ರ ತಂಡ ಸುದ್ದಿಗೋಷ್ಠಿಯಲ್ಲಿ ಮಾತನಾಡಿತು. ‘ ಕಳೆದ ಎರಡು ವರ್ಷಗಳಿಂದ ಈ ಸಿನಿಮಾ ಬಗ್ಗೆ ಇಡೀ ತಂಡ ತಲೆ ಕೆಡಿಸಿಕೊಂಡಿದೆ. ನಿರ್ದೇಶಕರು, ನಿರ್ಮಾಪಕರು ಮತ್ತು ಹೀರೋ ಶಕ್ತಿ ಮೀರಿ ಶ್ರಮ ಹಾಕುತ್ತಿದ್ದಾರೆ. ನಮ್ಮ ಮನೆಮಂದಿಯೆಲ್ಲ ನಿರಂಜನ್​ನನ್ನು ನೋಡಿ ಜಿಮ್​ ಸೇರಿದ್ದಾರೆ. 19ನೇ ವರ್ಷಕ್ಕೆ ಜಿಮಿನಾಸ್ಟಿಕ್ ಶುರುಮಾಡಿದ ಅದಾದ ಬಳಿಕ ಡಾನ್ಸ್​, ಜಿಮ್, ಡ್ರಾಮಾ ಹೀಗೆ ಸಿನಿಮಾಕ್ಕಾಗಿ ತುಂಬ ಶ್ರಮ ಹಾಕುತ್ತಿದ್ದಾನೆ. ಪರಿಶ್ರಮ ಇದ್ದರೆ ಯಶಸ್ಸು
ಗ್ಯಾರಂಟಿ‌ ಸಿಗಲಿದೆ ‘ ಅಂತ ಮುಹೂರ್ತಕ್ಕೆ ಮುಖ್ಯ ಅತಿಥಿಯಾಗಿ ಬಂದಿದ್ದ ನಟ ಉಪೇಂದ್ರ ಶುಭ ಹಾರೈಸಿದರು.

ನಿರ್ಮಾಪಕ ಮೈಲಾರಿ ಚಿತ್ರ‌ನಿರ್ಮಾಣದ ವಿಶೇಷತೆ ಕುರಿತು‌ಮಾತನಾಡಿದರು. ‘ ಸಿನಿಮಾ ನಿರ್ಮಾಣ ಮಾಡುತ್ತಿರುವುದಕ್ಕೆ ಸಂತೋಷವಾಗುತ್ತಿದೆ. ಉಪೇಂದ್ರ ಮತ್ತವರ ಇಡೀ ಕುಟುಂಬ ಮತ್ತು ಚಿತ್ರರಂಗದ ಸಾಕಷ್ಟು ಸ್ಟಾರ್ ನಟರು ನಮ್ಮ ಸಿನಿಮಾಕ್ಕೆ ಬೆಂಬಲ ನೀಡುತ್ತಿದ್ದಾರೆ. ಆ ನಿರೀಕ್ಷೆಗೆ ತಕ್ಕಂತೆ ಸಿನಿಮಾ ಮೂಡಿಬರಲಿದೆ’ ಎಂದರು.

ನಿರ್ದೇಶಕ ರಮೇಶ್ ವೆಂಕಟೇಶ್​ ಬಾಬು ಮಾತನಾಡಿ, ಚಿತ್ರಕ್ಕೆ ಮೂಗೂರು ಸುಂದರಂ ಅವರನ್ನು ಕರೆತರುವುದಕ್ಕೆ ನಾಲ್ಕು ತಿಂಗಳ ಕಾಲ ವ್ಯಯ ಮಾಡಿದ್ದೇವೆ. ಪೋನ್ ಮಾಡಿದರೂ ಅವರು ಸಿಕ್ಕಿರಲಿಲ್ಲ. ಕೊನೆಗೆ ಅವರ ಮನೆಗೆ ಹೋಗಿ ಕಥೆ ಹೇಳಿ ಅವರ ಒಪ್ಪಿಗೆ ಪಡೆದುಕೊಂಡು ಬಂದಿದ್ದೇವೆ. ಈ ಸಿನಿಮಾದಲ್ಲಿ ಅವರು ಡಾನ್ಸ್ ಮಾಸ್ಟರ್ ಪಾತ್ರ ಮಾಡಲಿದ್ದಾರೆ. ಸೋಮವಾರ ದಿಂದ ಶೂಟಿಂಗ್​ ಶುರುವಾಗಲಿದೆ‘ ಎಂದರು ನಿರ್ದೇಶಕರು. ಇನ್ನು ನಾಯಕ ನಿರಂಜನ್ ಮಾತಿಗೆ ಮುನ್ನ ಖಡಕ್ ಡೈಲಾಗ್ ಹೊಡೆದು ಕುತೂಹಲ ಮೂಡಿಸಿದರು.

ನನಗೆ ಸಿನಿಮಾವೊಂದೆ ಗೊತ್ತಿರುವುದು. ಅದರಲ್ಲಿಯೇ ಏನಾದರು ಮಾಡಬೇಕೆಂಬ ತುಡಿತ ಇದೆ. ತುಂಬ ವರ್ಷಗಳಿಂದ ಒಳ್ಳೇ ಸ್ಕ್ರಿಪ್ಟ್ ಸಲುವಾಗಿ ಕಾಯುತ್ತಿದ್ದೆ. ಅದು ಸೂಪರ್​ಸ್ಟಾರ್ ಮೂಲಕ ಸಿಕ್ಕಿತು. ಡಾನ್ಸಿಂಗ್​ ಸಿನಿಮಾ ಆಗಿರುವುದರಿಂದ ನನಗೂ ಡಾನ್ಸ್ ಇಷ್ಟ. ಒಂದೊಳ್ಳೆ ಮೆಸೆಜ್ ಸಹ ಇದರಲ್ಲಿದೆ ” 

ನಿರಂಜನ್ ಸುಧೀಂದ್ರ, ನಟ

ಮುಹೂರ್ತಕ್ಕೆ ಅತಿಥಿಯಾಗಿ ಬಂದಿದ್ದ ನಟ ನೆನಪಿರಲಿ ಪ್ರೇಮ್, ಚಿತ್ರದ ಲಿರಿಕಲ್ ವಿಡಿಯೋ ಬಿಡುಗಡೆ ಮಾಡಿದರು. ಚಿತ್ರಕ್ಕೆ ವಿಜಯ್ ಮಾಸ್ಟರ್ ಸಾಹಸ ನಿರ್ದೇಶನ, ಯೋಗಿ ಕ್ಯಾಮರ್, ರಾಘವೇಂದ್ರ ವಿ ಸಂಗೀತ, ವಿಜಯ್ ಕುಮಾರ್ ಸಂಕಲನ, ಮೋಹನ್ ಅವರು ಈ ಚಿತ್ರಕ್ಕೆ ಕಲಾ ನಿರ್ದೇಶನ ಮಾಡಲಿದ್ದಾರೆ. ಇನ್ನುಳಿದ ತಾರಾಗಣದ ಆಯ್ಕೆಯೂ ನಡೆಯುತ್ತಿದ್ದು, ಶೀಘ್ರದಲ್ಲಿ ಚಿತ್ರ ತಂಡ ಅದನ್ನು ಬಹಿರಂಗ ಪಡಿಸಲಿದೆಯಂತೆ.

Categories
ಸಿನಿ ಸುದ್ದಿ

ಹೊಸಬರ ಕನಸಿಗೆ ಪೂಜೆ – ಕನಸು ಬೆನ್ನತ್ತಿ ಹೊರಟವರು…

 

ಮತ್ತೊಂದು ಸ್ಪಸ್ಪೆನ್ಸ್- ಥ್ರಿಲ್ಲರ್‌ ಚಿತ್ರ

ಕನ್ನಡ ಚಿತ್ರರಂಗ ಗರಿಗೆದರಿರುವುದಂತೂ ಹೌದು. ದಿನ ಕಳೆದಂತೆ ಹೊಸಬರ ಚಿತ್ರಗಳು ಮುಹೂರ್ತ ಆಚರಿಸಿಕೊಳ್ಳುತ್ತಿವೆ. ಆ ಸಾಲಿಗೆ “ಆ ಒಂದು ಕನಸು” ಚಿತ್ರವೂ ಸೇರಿದೆ. ಹೌದು, ರಂಗು ಕ್ರಿಯೇಷನ್ಸ್ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ “ಆ ಒಂದು ಕನಸು” ಚಿತ್ರಕ್ಕೆ ಇತ್ತೀಚೆಗೆ ರಾಜರಾಜೇಶ್ವರಿ ನಗರದ ನಿಮಿಷಾಂಭಾ ದೇವಸ್ಥಾನದಲ್ಲಿ ಮುಹೂರ್ತ ನೆರವೇರಿದೆ. ರಾಜಕುಮಾರ್ ಕ್ಲಾಪ್ ಮಾಡಿ, ಬಾಲಕೃಷ್ಣ ಎಚ್​. ಎಂ. ಕ್ಯಾಮರಾಗೆ ಚಾಲನೆ ನೀಡುವ ಮೂಲಕ ಚಿತ್ರತಂಡಕ್ಕೆ ಶುಭಕೋರಿದ್ದಾರೆ. ಈ ಚಿತ್ರದ ಮೂಲಕ ವಿಷ್ಣು ನಾಚನೇಕರ್‌ ನಿರ್ದೇಶಕರಾಗುತ್ತಿದ್ದಾರೆ. ಈ ಹಿಂದೆ ಹಲವು ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ದುಡಿದಿರುವ ವಿಷ್ಣು ನಾಚನೇಕರ್‌, ಈಗ ಚೊಚ್ಚಲ ನಿರ್ದೇಶನಕ್ಕೆ ಮುಂದಾಗಿದ್ದಾರೆ.

ತಮ್ಮ ಸಿನಿಮಾ ಕುರಿತು ಹೇಳಿಕೊಳ್ಳುವ ಅವರು, ” ಈವರೆಗೆ ನಾನು ಸುಮಾರು 22 ಚಿತ್ರಗಳಿಗೆ ಅಸೋಸಿಯೇಟ್ ಕೆಲಸ ಮಾಡಿದ್ದೇನೆ. ಸಾಕಷ್ಟು ಧಾರಾವಾಹಿಗಳಿಗೆ ನಿರ್ದೇಶಕನಾಗಿ, ಸಂಚಿಕೆ ನಿರ್ದೇಶಕನಾಗಿಯೂ ಕಾರ್ಯನಿರ್ವಹಿಸಿದ್ದೇನೆ. ಇದೀಗ ಪೂರ್ಣ ಪ್ರಮಾಣದ ಸಿನಿಮಾ ನಿರ್ದೇಶನ ಮಾಡುವ ಅವಕಾಶ “ಆ ಒಂದು ಕನಸು” ಚಿತ್ರದ ಮೂಲಕ ಸಿಕ್ಕಿದೆ ಎಂದು ಹೇಳಿಕೊಂಡರು ನಿರ್ದೇಶಕ ವಿಷ್ಣು ನಾಚನಕೇರ್‌.


ಇನ್ನು, ಈ ಚಿತ್ರದ ಹೀರೋ ವಿಶ್ವಾಸ್.‌ ನಾವಿಬ್ಬರೂ ಬಹಳ ದಿನಗಳ ಗೆಳೆಯರು. ಒಟ್ಟಿಗೆ ಒಂದು ಸಿನಿಮಾ ಮಾಡಬೇಕು ಎಂದು ಚರ್ಚೆ ಮಾಡುತ್ತಿದ್ದೆವು. ಆದರೆ, ಕೆಲವು ಕಾರಣಗಳಿಂದ ಅದು ಸಾಧ್ಯವಾಗಿರಲಿಲ್ಲ. ಈಗ ಆ ಕನಸು ನಮ್ಮ “ಆ ಒಂದು ಕನಸು” ಈಡೇರುತ್ತಿದೆ. ನಿರ್ಮಾಪಕ ದಿಲೀಪ್ ಅವರ ಉತ್ಸಾಹ ಮತ್ತು ಪ್ರೋತ್ಸಾಹದಿಂದ ಈ ಚಿತ್ರಕ್ಕೆ ನಾನು ನಿರ್ದೇಶಕನಾಗುತ್ತಿದ್ದೇನೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯ ಚಿತ್ರ. ಕಮರ್ಷಿಯಲ್ ಅಂಶಗಳೊಂದಿಗೆ ಸಿನಿಮಾ ಸಾಗಲಿದೆ. ಬಹುತೇಕ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯಲಿದೆ. ಇನ್ನುಳಿದಂತೆ ಸಾಗರ ಹಾಗು ಶಿವಮೊಗ್ಗದಲ್ಲಿ ನಡೆಯಲಿದೆ ಎಂದು ವಿವರ ಕೊಟ್ಟರು ನಿರ್ದೇಶಕರು.


ಹೀರೋ ವಿಶ್ವಾಸ್‌ ಅವರಿಗೆ ಈ ಚಿತ್ರದ ಮೇಲೆ ತುಂಬಾನೇ ನಂಬಿಕೆ ಇದೆಯಂತೆ. ಒಂದಷ್ಟು ಕಾರಣಗಳಿಂದಾಗಿ ನಾನು ಕಳೆದ ಐದಾರು ವರ್ಷಗಳಿಂದ ಸಿನಿಮಾ, ಧಾರಾವಾಹಿಗಳಿಂದ ದೂರವಿದ್ದೆ. ಇದೀಗ ಪುನಃ ಎಂಟ್ರಿಯಾಗುತ್ತಿದ್ದೇನೆ. ತಮಿಳಿನ ಉದಯಂ ಅವರು ಈ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಕಥೆಯೇ ಈ ಚಿತ್ರದಲ್ಲಿ ಹೀರೋ. ಇದರಲ್ಲಿ ತುಂಬ ಸಾಫ್ಟ್ ಪಾತ್ರ ನನ್ನದು. ಹಲ್ಲಿ ಕಂಡರೂ ಹೆದರುವಂಥ ಪಾತ್ರವದು ಎಂದು ಹೇಳಿಕೊಂಡರು ವಿಶ್ವಾಸ್.
ನಿರ್ಮಾಪಕ ದಿಲೀಪ್ ಅವರು ಒಬ್ಬ ಉದ್ಯಮಿ. ಅವರಿಗೆ ಸಿನಿಮಾ ಮೇಲೆ ಪ್ರೀತಿ ಇತ್ತು. ಆಸಕ್ತಿಯೂ ಇದ್ದುದರಿಂದ ಒಳ್ಳೆಯ ಕಥೆಯೊಂದಿಗೆ ಸಿನಿಮಾ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಒಳ್ಳೆಯ ತಂಡ ಸಿಕ್ಕ ಖುಷಿ ಅವರದು.


ಮಳವಳ್ಳಿ ಸಾಯಿಕೃಷ್ಣ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ. “ಕನಸು ಕಾಣುವುದು ಮತ್ತು ಕಂಡ ಕನಸನ್ನು ನನಸು ಮಾಡಿಕೊಳ್ಳುವ ಹಾದಿಯಲ್ಲಿ ಈ ಸಿನಿಮಾ ಸಾಗುತ್ತದೆ. ಇಲ್ಲಿ ಕನಸು ಕಾಣುವವರಾರು ಎಂಬುದನ್ನು ಸಿನಿಮಾದಲ್ಲಿಯೇ ನೋಡಿ” ಎಂದರು ಸಾಯಿಕೃಷ್ಣ. ಧನ್ಯಶ್ರೀ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದು, ಅಮಿತ್ ಹಾಸ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರದಲ್ಲಿ ಬಲ ರಾಜವಾಡಿ, ಮಾ. ಚಿರಾಯು ಚಕ್ರವರ್ತಿ, ಅಮಿತ್, ಗಿರೀಶ್ ಶಿವಣ್ಣ, ರಮೇಶ್ ಭಟ್, ಗಿರಿಜಾ ಲೋಕೇಶ್ಮ ಕುರಿ ಬಾಂಡ್ ರಂಗ, ಹರ್ಷವರ್ಧನ್, ಶ್ವೇತಾ ರಾವ್ ಮತ್ತು ಜಯಶ್ರೀ ನಟಿಸುತ್ತಿದ್ದಾರೆ. ಅಭಿಷೇಕ್ ಜಿ. ರಾಯ್ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ವೀನಸ್ ಮೂರ್ತಿ ಛಾಯಾಗ್ರಹಣವಿದೆ. ಸುಜನ್ ಸಂಕಲನ, ಅಲ್ಟಿಮೇಟ್ ಶಿವು ಸಾಹಸ, ಹೈಟ್ ಮಂಜು ಮತ್ತು ಸ್ಟಾರ್ ಗಿರಿ ನೃತ್ಯ ನಿರ್ದೇಶನವಿದೆ.

Categories
ಸಿನಿ ಸುದ್ದಿ

ಡಿಸೆಂಬರ್ 18 ಕ್ಕೆ ನಾನೊಂಥರ

ನಾನೊಂಥರ ಅಂದ್ರೆ ನಾಯಕನೇ ಒಂಥರ!

ಕನ್ನಡ  ಚಿತ್ರರಂಗ ಮತ್ತೆ ಟ್ರ್ಯಾಕ್ ಗೆ ಮರಳುತ್ತಿದೆ. ಮುಹೂರ್ತ, ಚಿತ್ರೀಕರಣ, ಟೀಸರ್ ಲಾಂಚ್ ನಂತಹ ಸಿನಿಮಾ ಚಟುವಟಿಕೆಗಳ ನಡುವೆಯೇ ಈಗ ಚಿತ್ರಗಳ ಬಿಡುಗಡೆಗೂ ಚಾಲನೆ‌ ಸಿಕ್ಕಿದೆ. ಈಗಾಗಲೇ ಬಿಡುಗಡೆಗೊಂಡ ಚಿತ್ರಗಳಿಗೆ ಸಿಕ್ಕಅಭೂತ ಪೂರ್ವ ಬೆಂಬಲದ ಬೆನ್ನಲೇ ಈ ವಾರದಿಂದ ಮತ್ತಷ್ಟು ಚಿತ್ರಗಳು ತೆರೆಗೆ ಬರಲು ರೆಡಿ ಆಗಿವೆ. ಈ ಪೈಕಿ ‘ನಾನೊಂಥರ’ ಚಿತ್ರವೂ ಒಂದು.

ಇದೊಂದು  ಹೊಸಬರ ಚಿತ್ರ. ಜೆಜೆ ಮೂವೀಸ್ ಮೂಲಕ ಈ ಚಿತ್ರ ನಿರ್ಮಾಣವಾಗಿದೆ. ವೃತ್ತಿಯಲ್ಲಿ ವೈದ್ಯೆಯಾಗಿ ಅಪಾರ ಜನ ಮನ್ನಣೆ ಪಡೆದಿರುವ ಡಾ. ಜಾಕ್ಲಿನ್ ಫ್ರಾನ್ಸಿಸ್  ಇದರ ನಿರ್ಮಾಪಕರು. ಇವರ ಪುತ್ರ ತಾರಕ್ಇದರ ನಾಯಕ‌ ನಟ. ಇದು ಅವರ ಚೊಚ್ಚಲ ಚಿತ್ರ.ಹಾಗೆಯೇ ನವ ಪ್ರತಿಭೆ ಯು. ರಮೇಶ್ ಇದರ ನಿರ್ದೇಶಕ. ಒಟ್ಟಾರೆ ಒಂದು ಹೊಸ ತಂಡವು, ತುಂಬಾ ಕನಸು ಹೊತ್ತು, ಈ ಚಿತ್ರ ನಿರ್ಮಾಣ ಮಾಡಿದೆ. ಎಲ್ಲವೂ ಅಂದುಕೊಂಡಂ ತಾಗಿದ್ದರೆ ಈ ಚಿತ್ರ ಲಾಕ್ ಡೌನ್ ಮುಂಚೆಯೇ ತೆರೆಗೆ ಬರಬೇಕಿತ್ತು. ಆದರೆ ಕೊರೋನಾ ಬಂತು. ಸಿನಿಮಾ ಟಾಕೀಸ್ ಬಂದ್ ಆದವು.ಹಾಗಾಗಿ ‘ನಾನೊಂಥರ’ ಚಿತ್ರ ತಂಡವು ಸುಮ್ಮನಾಗಿತ್ತು. ಈಗ  ಚಿತ್ರ ರಿಲೀಸ್ ಗೆ ಮತ್ತೆ ಚಾಲನೆ ಸಿಕ್ಕ ಬೆನ್ನಲೇ ನಾನೊಂಥರ ಕೂಡ ಚಿತ್ರಮಂದಿರಕ್ಕೆ ಬರುತ್ತಿದೆ.

ಚಿತ್ರ ತಂಡವೀಗ ರಿಲೀಸ್ ಗೆ ಸಿದ್ದತೆ ನಡೆಸಿರುವ ಬೆನ್ನಲೇ ಶುಕ್ರವಾರ( ಡಿಸೆಂಬರ್‌ 4) ದಂದು ಚಿತ್ರದ ಟ್ರೇಲರ್ ಲಾಂಚ್ ಮಾಡುವ ಮೂಲಕ ಚಿತ್ರದ ವಿಶೇಷತೆ ಕುರಿತು ಮಾತನಾಡಿತು‌. ಹೊಸಬರ ಚಿತ್ರವಾದರೂ ಟ್ರೇಲರ್ ಭರವಸೆ ಮೂಡಿಸುತ್ತದೆ. ಮೇಕಿಂಗ್ ಅದ್ಬುತವಾಗಿದೆ. ಪಕ್ಕಾ ಕಮರ್ಷಿಯಲ್ ಸಿನಿಮಾ ಎನ್ನುವುದಕ್ಕೆಟ್ರೇಲರ್ ಸಾಕ್ಷಿಯಾಗಿದೆ. ಆ ಕುರಿತೇ ಮಾತು ಆರಂಭಿಸಿದರು ನಿರ್ಮಾಪಕಿ ಡಾ. ಜಾಕ್ಲಿನ್ ಫ್ರಾನ್ಸಿಸ್.

ಟ್ರೇಲರ್ ಚೆನ್ನಾಗಿದೆ ಎನ್ನುವ ನಂಬಿಕೆಯಿದೆ. ಹಾಗೆಯೇ ಸಿನಿಮಾ ಅದ್ಬುತ ವಾಗಿ ಮೂಡಿ ಬಂದಿದೆ. ಅದೊಂದೆ ಕಾನ್ಪಿಡೆನ್ಸ್ ಮೇಲೆ ಚಿತ್ರ ಮಂದಿರಕ್ಕೆ ಬರುತ್ತಿದ್ದೇವೆ ಎಂದರು. ಚಿತ್ರದ ನಾಯಕ‌ನಟ ತಾರಕ್ , ನಿರ್ದೇಶಕ ಯು. ರಮೇಶ್ ಕೂಡ ಅದೇ  ವಿಶ್ವಾಸ ವ್ಯಕ್ತಪಡಿಸಿದರು. ನಾಯಕಿ ರಕ್ಷಿಕಾ , ಯುವ ನಟ ಜೈಸನ್, ಖಳ ನಟ ಪ್ರಶಾಂತ್ ರೈ ಮಾತನಾಡಿ, ಚಿತ್ರ ಚೆನ್ನಾಗಿ ಬಂದಿದೆ ಎಂದರು. ವಿಜಯ್ ಫಿಲಂಸ್ ಮೂಲಕ ಈ ಚಿತ್ರ ಬಿಡುಗಡೆ ಆಗುತ್ತಿದೆ. ಸದ್ಯಕ್ಕೆ ಎಷ್ಟು ಚಿತ್ರಮಂದಿರಗಳಲ್ಲಿ ಈ ಚಿತ್ರ ಬಿಡುಗಡೆ ಆಗುತ್ತಿದೆ ಎನ್ನುವುದು ಕನ್ ಫರ್ಮ್ ಆಗಿಲ್ಲ. ಆದರೆ ಬೆಂಗಳೂರಿನ ಮೆಜೆಸ್ಟಿಕ್ ಪ್ರದೇಶದಲ್ಲಿ ಭೂಮಿಕಾ ಚಿತ್ರ ಮಂದಿರವನ್ನು ಪ್ರಧಾನವಾಗಿ ಟ್ಟುಕೊಂಡಯ ರಾಜ್ಯಾದ್ಯಂತ 80 ರಿಂದ 100  ಚಿತ್ರ ಮಂದಿರಗಳಲ್ಲಿ ಈ ಚಿತ್ರವನ್ನು ರಿಲೀಸ್ ಮಾಡುವ ಪ್ಲಾನ್ ಇದೆ ಅಂದ್ರು ವಿತರಕ ವಿಜಯ್.

Categories
ಸಿನಿ ಸುದ್ದಿ

ಪದವಿಪೂರ್ವ ಶೂಟಿಂಗ್‌ ಸೆಟ್‌ಗೆ ಜಗ್ಗೇಶ್‌ ಭೇಟಿ – ಉತ್ಸಾಹದಲ್ಲಿ ಚಿತ್ರತಂಡ

ಕಲಾವಿದರಿಗೆ ಪ್ರಮುಖ ಸಲಹೆ ನೀಡಿದ ನವರಸನಾಯಕ

ಕನ್ನಡ ಸಿನಿಮಾಗಳ ಚಿತ್ರೀಕರಣ ಸಂದರ್ಭದಲ್ಲಿ ಒಂದಷ್ಟು ಸ್ಟಾರ್‌ ನಟರು ಆಕಸ್ಮಿಕ ಭೇಟಿ ನೀಡಿ, ಆ ಚಿತ್ರತಂಡಕ್ಕೆ ಅಚ್ಚರಿ ನೀಡುವುದು ಹೊಸದೇನಲ್ಲ. ದರ್ಶನ್‌, ಸುದೀಪ್‌, ಪುನೀತ್‌ ಸೇರಿದಂತೆ ಒಂದಷ್ಟು ನಟರು ತಮ್ಮ ಪ್ರೀತಿಗೆ ಪಾತ್ರರಾದ ಸಿನಿಮಾ ನಿರ್ಮಾಪಕರು, ನಿರ್ದೇಶಕರ ಸಿನಿಮಾ ಸೆಟ್‌ಗೆ ಭೇಟಿ ನೀಡಿದ್ದುಂಟು. ಈಗ ನಟ ಜಗ್ಗೇಶ್ ಕೂಡ ಹೊಸಬರ ಚಿತ್ರದ ಚಿತ್ರೀಕರಣ ನಡೆಯುವ ಸಂದರ್ಭದಲ್ಲಿ ಭೇಟಿ ನೀಡಿ, ಚಿತ್ರತಂಡಕ್ಕೆ ಶುಭಹಾರೈಸಿದ್ದಾರೆ.


ಹೌದು, ಜಗ್ಗೇಶ್‌ ಹಾಗೆ ಭೇಟಿ ನೀಡಿದ್ದು, “ಪದವಿಪೂರ್ವ” ಚಿತ್ರದ ಸೆಟ್‌ಗೆ. ಹರಿಪ್ರಸಾದ್ ಜಯಣ್ಣ ನಿರ್ದೇಶಿಸುತ್ತಿರುವ ಈ ಚಿತ್ರ, ಯೋಗರಾಜ್ ಭಟ್ ಹಾಗು ರವಿ ಶಾಮನೂರ್ ನಿರ್ಮಿಸುತ್ತಿರುವ “ಪದವಿಪೂರ್ವ” ಚಿತ್ರದ ಶೂಟಿಂಗ್ ಜೋರಾಗಿಯೇ ನಡೆಯುತ್ತಿದೆ. ಈ ಚಿತ್ರದ ಸೆಟ್‌ಗೆ ಸರ್ಪ್ರೈಸ್ ಭೇಟಿ ನೀಡಿದ ಜಗ್ಗೇಶ್‌ ಅವರು, ಕೆಲ ಕಾಲ ಅವರೊಂದಿಗೆ ಚರ್ಚಿಸಿ, ಅಲ್ಲಿಯೇ ಇದ್ದು, ಕೆಲ ಸೀನ್‌ಗಳನ್ನೂ ವೀಕ್ಷಿಸಿ, ಸಂತಸಪಟ್ಟಿದ್ದಾರೆ.

ನಿರ್ದೇಶಕ ಹರಿಪ್ರಸಾದ್ ಜಯಣ್ಣ ಹಾಗು ಛಾಯಾಗ್ರಾಹಕ ಸಂತೋಷ್ ರೈ ಪಾತಾಜೆ ಅವರ ಕೆಲಸದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಜಗ್ಗೇಶ್‌ ಅವರು, ಸೆಟ್‌ನಲ್ಲಿದ್ದ ಕೆಲವು ಕಲಾವಿದರೊಂದಿಗೂ ಮಾತನಾಡಿ, ಅವರಿಗೆ ಸಲಹೆಗಳನ್ನೂ ನೀಡಿದ್ದಾರೆ. ಸಹಜವಾಗಿಯೇ ಚಿತ್ರತಂಡಕ್ಕೆ ಜಗ್ಗೇಶ್‌ ಅವರ ಈ ಭೇಟಿ ಖುಷಿ ಕೊಟ್ಟಿದ್ದಲ್ಲದೆ, ಮತ್ತಷ್ಟು ಉತ್ಸಾಹ ತುಂಬಿದೆ. ಕಳೆದ ವಾರವಷ್ಟೇ ಚಿತ್ರಕ್ಕೆ ಚಾಲನೆ ನೀಡಲಾಗಿತ್ತು. ಬೆಂಗಳೂರಿನ ಸುತ್ತಮುತ್ತಲ ಸ್ಥಳಗಳಲ್ಲಿ ಚಿತ್ರೀಕರಣ ನಡೆಯುತ್ತಿದ. ಚಿತ್ರಕ್ಕೆ ಪೃಥ್ವಿ ಶಾಮನೂರ್ ನಾಯಕಿ. ಅಂಜಲಿ ಅನೀಶ್‌ ಮತ್ತು ಯಶಾ ಶಿವಕುಮಾರ್ ನಾಯಕಿಯಾಗಿ ನಟಿಸುತ್ತಿದ್ದಾರೆ.

Categories
ಎಡಿಟೋರಿಯಲ್ ಸಿನಿ ಸುದ್ದಿ

ಫಿಲ್ಮ್‌ ಚೇಂಬರ್‌ ಚುನಾವಣಾಧಿಕಾರಿಯಾಗಿ ಥಾಮಸ್‌ ಡಿಸೋಜಾ ಆಯ್ಕೆ-ಮಂಡಳಿ ಚುನಾವಣೆಗೆ ಕ್ಷಣಗಣನೆ…

ಸಾ.ರಾ.ಗೋವಿಂದು, ಬಾ.ಮ.ಹರೀಶ್‌ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ

ಥಾಮಸ್‌ ಡಿಸೋಜ

ಕನ್ನಡ ಚಿತ್ರರಂಗಕ್ಕೆ ಸುಮಾರು ಎಂಟು ದಶಕಕ್ಕೂ ಹೆಚ್ಚು ಕಾಲ ಇತಿಹಾಸವಿದೆ. ಹಾಗೆಯೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೂ ಐದು ದಶಕಕ್ಕೂ ಹೆಚ್ಚು ಕಾಲದ ಇತಿಹಾಸವಿದೆ. ಕನ್ನಡ ಚಿತ್ರರಂಗಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಹೃದಯವಿದ್ದಂತೆ. ಈ ಫಿಲ್ಮ್‌ ಚೇಂಬರ್‌ ಕನ್ನಡ ಚಿತ್ರರಂಗದ ಪ್ರಗತಿಗೆ ಬೆನ್ನೆಲುಬು. ಈವರೆಗೆ ಈ ಫಿಲ್ಮ್‌ ಚೇಂಬರ್‌ನಲ್ಲಿ ಸಾಕಷ್ಟು ಹಿರಿಯರು ಚುಕ್ಕಾಣಿ ಹಿಡಿದು, ಕನ್ನಡ ಚಿತ್ರರಂಗದ ಏಳಿಗೆಗೆ ದುಡಿದಿದ್ದಾರೆ. ಇನ್ನೂ ಕೆಲವರು ದುಡಿಯುತ್ತಿದ್ದಾರೆ. ಇಷ್ಟಕ್ಕೂ ಈ ಫಿಲ್ಮ್‌ ಚೇಂಬರ್‌ ಕುರಿತ ಸುದ್ದಿ ಯಾಕೆಂದರೆ, ಪ್ರತಿ ವರ್ಷವೂ ಫಿಲ್ಮ್‌ ಚೇಂಬರ್‌ ಚುನಾವಣೆ ನಡೆಯುತ್ತದೆ. ಕೆಲವೊಮ್ಮೆ ಈ ಫಿಲ್ಮ್‌ ಚೇಂಬರ್‌ನಲ್ಲಿ ಅವಿರೋಧ ಆಯ್ಕೆಯಾಗಿರುವುದೂ ಉಂಟು. ಬಹುತೇಕ ಚುನಾವಣೆ ಮೂಲಕ ಚುಕ್ಕಾಣಿ ಹಿಡಿದವರೇ ಹೆಚ್ಚು. ಈಗ ಸದ್ಯಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಚುನಾವಣೆ ನಡೆಯಲಿದೆ. ಅದಕ್ಕೀಗ ಕ್ಷಣಗಣನೆ ಕೂಡ ಶುರುವಾಗಿದೆ. ಈಗಾಗಲೇ ಫಿಲ್ಮ್‌ ಚೇಂಬರ್‌ನಲ್ಲಿ ನಡೆದ ಸಭೆಯಲ್ಲಿ ಚೇಂಬರ್‌ನ ಮಾಜಿ ಅಧ್ಯಕ್ಷರಾದ ಥಾಮಸ್‌ ಡಿಸೋಜ ಅವರನ್ನು ಚುನಾವಣಾಧಿಕಾರಿಯನ್ನಾಗಿ ಆಯ್ಕೆ ಮಾಡಲಾಗಿದೆ. ಥಾಮಸ್‌ ಡಿಸೋಜ ಅವರು, ಇಷ್ಟರಲ್ಲೇ ಸಭೆ ಕರೆದು, ಫಿಲ್ಮ್‌ ಚೇಂಬರ್‌ಗೆ ಯಾವಾಗ ಚುನಾವಣೆ ನಡೆಸಬೇಕು ಎಂಬುದರ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಅಷ್ಟೇ ಅಲ್ಲ, ದಿನಾಂಕವನ್ನೂ ನಿಗದಿಗೊಳಿಸಲಿದ್ದಾರೆ.

ಸಾ.ರಾ.ಗೋವಿಂದು

ಇನ್ನು, ಈಗ ಹಾಲಿ ಜೈ ರಾಜ್‌ ಅವರು ಫಿಲ್ಮ್‌ ಚೇಂಬರ್‌ ಅಧ್ಯಕ್ಷರಾಗಿದ್ದಾರೆ. ಅವರ ಅವಧಿ ಜೂನ್‌ನಲ್ಲೇ ಪೂರ್ಣಗೊಂಡಿದೆ. ಆದರೆ, ಕೊರೊನೊ ಹಾವಳಿ ಇದ್ದುದರಿಂದ, ಸದ್ಯಕ್ಕೆ ಅವರೇ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆದಿದ್ದರು. ಈಗಷ್ಟೇ ಸಮಿತಿ ಸಭೆಯಲ್ಲಿ ಚುನಾವಣಾಧಿಕಾರಿಯನ್ನು ನೇಮಿಸಲಾಗಿದೆ. ನಂತರದ ದಿನಗಳಲ್ಲಿ ದಿನಾಂಕ ನಿಗಧಿಗೊಳಿಸಿ, ಚುನಾವಣೆ ನಡೆಸುವ ತಯಾರಿ ನಡೆಯಬೇಕಿದೆ.
ಅಂದಹಾಗೆ, ಈ ಬಾರಿ ಅ‍ಧ್ಯಕ್ಷ ಸ್ಥಾನ ಬಯಸಿದವರ ಸಂಖ್ಯೆ ಬಹಳಷ್ಟು ಇದೆಯಾದರೂ, ಬಾ.ಮ.ಹರೀಶ್‌ ಅವರು ಅಧ್ಯಕ್ಷ ಸ್ಥಾನ ಬಯಸಿ ಸ್ಪರ್ಧೆ ಮಾಡುವುದಾಗಿ ಹೇಳಿಕೊಂಡಿದ್ದಾರೆ. ಇನ್ನುಳಿದಂತೆ, ಮೂಲಗಳ ಪ್ರಕಾರ ಸಾ.ರಾ.ಗೋವಿಂದು ಅವರೂ ಕೂಡ ಮತ್ತೊಮ್ಮೆ ಅ‍ಧ್ಯಕ್ಷ ಸ್ಥಾನ ಬಯಸಿ ಸ್ಪರ್ಧೆಗಿಳಿಯಲಿದ್ದಾರೆ ಎನ್ನಲಾಗಿದೆ.

ಬಾ.ಮ.ಹರೀಶ್

ಹಾಗೆ ನೋಡಿದರೆ, ಫಿಲ್ಮ್‌ ಚೇಂಬರ್‌ನಲ್ಲಿ ಸಾ.ರಾ.ಗೋವಿಂದು ಮತ್ತು ಬಾ.ಮ.ಹರೀಶ್‌ ಅವರು ಅಧಿಕಾರ ನಡೆಸಿದವರು. ಮೂರು ಬಾರಿ ಸಾ.ರಾ.ಗೋವಿಂದು ಅವರು ಫಿಲ್ಮ್‌ ಚೇಂಬರ್‌ಗೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ಅಂತೆಯೇ, ಈ ಬಾರಿಯೂ ಸ್ಥಾನಕ್ಕೆ ಸ್ಪರ್ಧೆಗಳಿಯಲಿದ್ದಾರೆ ಎನ್ನಲಾಗಿದೆ. ಇನ್ನು, ಬಾ.ಮ.ಹರೀಶ್‌ ಅವರು ಕೂಡ ಈ ಹಿಂದೆ ತಲ್ಲಂ ನಂಜುಂಡಶೆಟ್ಟಿ ಅವರ ಅವಧಿಯಲ್ಲಿ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾಗಿ ಕೆಲಸ ಮಾಡಿದ್ದರು. ಆ ನಂತರದ ದಿನಗಳಲ್ಲಿ ಥಾಮಸ್‌ ಡಿಸೋಜ ಅವರು ಅಧ್ಯಕ್ಷರಾದ ಸಂದರ್ಭದಲ್ಲೂ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ಚಿನ್ನೇಗೌಡ ಅವರು ಅಧ್ಯಕ್ಷರಾಗಿದ್ದಾಗಲೂ ಬಾ.ಮ.ಹರೀಶ್‌ ಅವರು ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ. ಕಳೆದ ಬಾರಿ ಅಧ್ಯಕ್ಷ ಸ್ಥಾನ ಬಯಸಿ ಸ್ಪರ್ಧೆ ನಡೆಸಿದ್ದರಾದರೂ, ಸಾ.ರಾ.ಗೋವಿಂದು ಅವರ ವಿರುದ್ಧ ಕಡಿಮೆ ಅಂತರದಲ್ಲೇ ಅವರು ಸೋಲು ಕಂಡಿದ್ದರು. ಈ ಸಲ ಗೆಲ್ಲುವ ವಿಶ್ವಾಸದೊಂದಿಗೆ ಸ್ಪರ್ಧೆಗಿಳಿಯುತ್ತಿರುವುದಾಗಿ ಹೇಳುತ್ತಾರೆ.

Categories
ಸಿನಿ ಸುದ್ದಿ

ಅಬ್ಬಕ್ಕ ನ ಮೇಲೆ ಮಂಸೋರೆ ಮನಸು !

ಆಕ್ಟ್ 1978′ ಸಕ್ಸಸ್ ಬೆನ್ನಲೇ ಹೊಸ ಪ್ರಾಜೆಕ್ಟ್ ಅನೌನ್ಸ್ ಮಾಡಿದ ಕ್ರಿಯೇಟಿವ್ ಡೈರೆಕ್ಟರ್, ನಾಲ್ಕನೇ ಸಿನಿಮಾಕ್ಕೆ ಮಂಸೋರೆ ಅವರದ್ದು ಹೊಸ ವರಸೆ

‘ಆಕ್ಟ್ 1978 ‘ಚಿತ್ರಕ್ಕೆ ಸಿಕ್ಕ ಅಭೂತ ಪೂರ್ವ ಬೆಂಬಲದ ಬೆನ್ನಲೇ ನಿರ್ದೇಶಕ ಮಂಸೋರೆ ಮತ್ತೊಂದು ಹೊಸ ಸಾಹಸಕ್ಕೆ ಮುಂದಾಗಿದ್ದಾರೆ. ಶುಕ್ರವಾರ ಬೆಳ್ಳಂಬೆಳಗ್ಗೆಯೇ ಐತಿಹಾಸಿಕ ಸಿನಿಮಾದ ಹೊಸ ಪ್ರಾಜೆಕ್ಟ್ ಅನೌನ್ಸ್ ಮಾಡಿ, ಸಿನಿಮಾ‌ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಈ ಹಿಂದಿನ ಮೂರು ಚಿತ್ರಗಳ ಕತೆಗಳಿಗೆ ಹೋಲಿಸಿದರೆ ಇದು ತೀರಾ ಭಿನ್ನ. ಅವಗಳದ್ದೇ ಒಂದು ಕತೆಯಾದರೆ ಇದು ಅದಕ್ಕೆ ತದ್ವಿರುದ್ಧ. ಇದೇ ಮೊದಲ ಬಾರಿಗೆ ಐತಿಹಾಸಿಕ ಕತೆಗೆ ಆ್ಯಕ್ಷನ್ ಕಟ್ ಹೇಳಲು ಹೊರಟಿದ್ದಾರೆ ಮಂಸೋರೆ. ನಿನ್ನೆಯೇ ಘೋಷಣೆ ಮಾಡಿದ್ದ ಹಾಗೆಯೇ ಶುಕ್ರವಾರ ಬೆಳಗ್ಗೆ 8 ಗಂಟೆಗೆ ಅವರ ಹೊಸ ಪ್ರಾಜೆಕ್ಟ್ ಪ್ರಕಟಿಸಿದ್ದು, ಕರಾವಳಿ ನಾಡಿನ ಚರಿತಾರ್ಹ ನಾಯಕಿ ರಾಣಿ ಅಬ್ಬಕ್ಕ ಕುರಿತು ಸಿನಿಮಾ ಮಾಡುವುದಾಗಿ ಹೇಳಿದ್ದಾರೆ. ಚಿತ್ರಕ್ಕೆ ಅಬ್ಬಕ್ಕ ಅಂತಲೇ ಹೆಸರಿಟ್ಟಿದ್ದಾರೆ. ಅದರ ಮೊದಲ ಪೋಸ್ಟರ್ ಕೂಡ ಇಂದೇ ರಿವೀಲ್ ಆಗಿದೆ.

ಅಬ್ಬಕ್ಕ ಎನ್ನುವ ಚಿತ್ರದ ಟೈಟಲ್ ಗೆ ‘ ಅರಬೀ ಸಮುದ್ರದ ಅಭಯರಾಣಿ ‘ ಅಂತ ಸಬ್ ಟೈಟಲ್ ಇಟ್ಟಿದ್ದಾರೆ ಮಂಸೋರೆ. ವಿಶೇಷ ಅಂದ್ರೆ ಈ ಚಿತ್ರವು ಕನ್ನಡದ ಜತೆಗೆ ತುಳು, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿಯಲ್ಲೂ ನಿರ್ಮಾಣ ವಾಗಲಿದೆ ಎನ್ನುವುದು ಮಂಸೋರೆ ಪಾಲಿಗೆ ಭಾರೀ ವಿಶೇಷ. ಇನ್ನು ಚಿತ್ರದ ಕತೆಯಂತೂ ಭಾರೀ ಕುತೂಹಲವೇ. ಯಾಕಂದ್ರೆ, ರಾಣಿ ಅಬ್ಬಕ್ಕ ಕನ್ನಡ ನಾಡಿನ ವಿರೋಚಿತ ಹೋರಾಟದ ನಾಯಕಿ. ಅದರಲ್ಲೂ ಕರಾವಳಿ ತೀರದಲ್ಲಿ ಅಬ್ಬಕ್ಕ ಮನೆ ಮಾತಾದ ಹೆಸರು. ಆಕೆಯ ಹೆಸರಲ್ಲಿ ಚಿತ್ರ ಮಾಡಲು ಹೊರಟ ಮಂಸೋರೆ ಅವರ ಪ್ರಯತ್ನವೇ ಈಗ ಕುತೂಹಲ ಮೂಡಿಸಿದೆ. ಯಾಕಂದ್ರೆ ಈ ಹಿಂದಿನ ಅವರ ಮೂರು ಸಿನಿಮಾ ನೋಡಿದವರಿಗೆ ಅವೆಲ್ಲ ವಿಭಿನ್ನ ಕಥಾ ಹಂದರ ಪ್ರಯೋಗಾತ್ಮಕ ಚಿತ್ರಗಳು ಅನ್ನೋದು ಎಲ್ಲರಿಗೂ ಗೊತ್ತೇ ಇದೆ.

ಅದು ಬಿಟ್ಟು ಐತಿಹಾಸಿಕ ಕತೆಗೆ ಅವರು ಆ್ಯಕ್ಷನ್ ಕಟ್ ಹೇಳುತ್ತಿರುವುದು ಇದೇ ಮೊದಲು. ಹಾಗಾಗಿ ಹೇಗಿರುತ್ತೆ ಅವರ ಕೈ ಚಳಕ ಅನ್ನೋದು ಅವರ ನಿರ್ದೇಶನದ ಬಗೆಗಿರುವ ಮತ್ತೊಂದು ಕುತೂಹಲ. ಸದ್ಯಕ್ಕೆ‌ಇದರ ಕಲಾವಿದರ ವಿವರ ನಿಗೂಢವಾಗಿದೆ. ಅದು ಬಿಟ್ಟರೆ, ಸತ್ಯ ಹೆಗಡೆ ಛಾಯಾಗ್ರಹಣ, ಅಜನೀಶ್ ಲೋಕನಾಥ್ ಸಂಗೀತ ಈ ಚಿತ್ರಕ್ಕಿದೆ. ಹಾಗೆಯೇ ಮಹಾವೀರ್ ಸಾಬಣ್ಣರ್, ಸಂತೋಷ್ ಪಾಂಜಾಲ್ ಹಾಗೂ ವಿರೇಂದ್ರ ಮಲ್ಲಣ್ಣ ಸೇರಿದಂತೆ ಮಂಸೋರೆ ಅವರ ಟೀಮ್ ಇಲ್ಲೂ ಮುಂದುವರೆದಿದೆ. ಇದೆಲ್ಲ ಓಕೆ, ಮಂಸೋರೆ ಅವರ ಇಷ್ಟು ದೊಡ್ಡ ಪ್ರಾಜೆಕ್ಟ್ ಗೆ ಬಂಡವಾಳ ಹಾಕುತ್ತಿರುವ ನಿರ್ಮಾಪಕ ಯಾರು ? ಸದ್ಯಕ್ಕೆ ಅದು ನಿಗೂಢ. ಆ‌ಬಗ್ಗೆ ನಿರ್ದೇಶಕ ಮಂಸೋರೆ ಅವರನ್ನು ಕೇಳಿದರೆ, ಎರಡು ದೊಡ್ಡ ನಿರ್ಮಾಣ ಸಂಸ್ಥೆಗಳೇ ಆಸಕ್ತಿ ವಹಿಸಿವೆ. ಇಷ್ಟರಲ್ಲಿಯೇ ಅದು ರಿವೀಲ್ ಆಗಲಿದೆ ಎನ್ನುತ್ತಾರೆ. ಹಾಗೆಯೇ ಕಲಾವಿದರ ಬಗೆಗಿನ ಕುತೂಹಲಕ್ಕೂ ಅವರು ಹಾಗೆಯೇ ಹೇಳುತ್ತಾರೆ. ಏನೇ ಆಗಲಿ ಮಂಸೋರೆ ಅವರ ಇಷ್ಟು ದೊಡ್ಡ ಪ್ರಯತ್ನಕ್ಕೆ ಸಿನಿ‌ಲಹರಿ‌ಕಡೆಯಿಂದ ಆಲ್ ದಿ ಬೆಸ್ಟ್.

ಮೋಡಗಳೆಲ್ಲಾ ರಕ್ತವರ್ಣ.. ಸಮುದ್ರವೆಲ್ಲ ಅಗ್ನಿಕುಂಡ.. ಭೂಭಾಗದ ತುಂಬೆಲ್ಲಾ ಅಧಿಕಾರದ ದಾಹ, ಸ್ವಾರ್ಥದ ವಿಷದುಸಿರು.. ಬೆನ್ನ ಹಿಂದೆ ಇರಿಯುವ, ಕಣ್ಣ ಮುಂದೆಯೂ ಗುಂಡಿಕ್ಕುವ ಶತ್ರುಗಳು…! ತಾಯಿನಾಡು, ತಮ್ಮತನ, ತನ್ನವರಿಗಾಗಿ ಉಪ್ಪಿನ ಹಬೆಯಲ್ಲಿ ಬಿಸಿನೆತ್ತರ ಹರಿಸಿ ಹೋರಾಡಿ ಇತಿಹಾಸದ ಪುಟಗಳಲ್ಲಿ ಕಂಡು ಕಾಣದಂತೆ ಉಳಿದುಹೋದ ವೀರಚರಿತ್ರೆ – ಅರಬ್ಬೀ ಸಮುದ್ರದ ಅಭಯರಾಣಿ ಅಬ್ಬಕ್ಕ..!!” ನಿಮ್ಮೆಲ್ಲರ ಪ್ರೀತಿ, ಬೆಂಬಲ, ಪ್ರೋತ್ಸಾಹ ಈ ಹೊಸ ಸಾಹಸಕ್ಕೆ ಪ್ರೇರೇಪಿಸಿದೆ. ಎಂದಿನಂತೆ ನಿಮ್ಮ ಆಶೀರ್ವಾದ ಬೆಂಬಲ ನಮ್ಮ ತಂಡದ ಮೇಲಿರಲಿ 

– ಮಂಸೋರೆ, ನಿರ್ದೇಶಕ

Categories
ಸಿನಿ ಸುದ್ದಿ

ಕನ್ನಡದ ನಟರಂದ್ರೆ ಬರೀ ‌ಲೋಕಲ್ ಸ್ಟಾರಾ?

ಯಶ್ ಅವರನ್ನೇ ಹಾಕಿ ಕೊಂಡು ಪ್ಯಾನ್ ಇಂಡಿಯಾ ಸಿನಿಮಾ‌ ಮಾಡಿ‌ಗೆದ್ದವರು ಈಗ ತೆಲುಗು ನಟ ಪ್ರಭಾಸ್ ಮೊರೆ ಹೋಗಿದ್ದೇಕೆ? ಅದರ ಅಸಲಿ ಕತೆ ಏನು?

ನಿರ್ಮಾಪಕ ವಿಜಯ್ ಕಿರಗಂದೂರು ಹೀಗೇಕೆ ಮಾಡಿದ್ರು? ‘ಕೆಜಿಎಫ್’ ನೋಡಿ ಖುಷಿ ಪಟ್ಟ ಕನ್ನಡದ ಸಿನಿ ಪ್ರೇಕ್ಷಕನಿಗೆ ಹಿಗೊಂದು ಪ್ರಶ್ನೆ ಶುರುವಾಗದೆ ಉಳಿದಿಲ್ಲ. ಅದಕ್ಕೆ ಕಾರಣ ಅವರೀಗ ಅನೌನ್ಸ್ ಮಾಡಿರುವ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ., ಮತ್ತದಕ್ಕೆ ಅವರು ಆಯ್ಕೆ ಮಾಡಿಕೊಂಡಿರುವ ನಾಯಕ ನಟ.

ಡಿಸೆಂಬರ್ 2 ಕ್ಕೆ ಹೊಂಬಾಳೆ ಫಿಲಂಸ್ ಕನ್ನಡದ ಸಿನಿ ಪ್ರೇಕ್ಷಕ ರಿಗೆ ದೊಡ್ಡದೊಂದು ಸಿಹಿ ಸುದ್ದಿ ಕೊಡಲಿದೆ ಎನ್ನುವ ಮಾಹಿತಿ ರಿವೀಲ್ ಆದಾಗ, ನಿರ್ಮಾಪಕ ವಿಜಯ್ ಕಿರಗಂದೂರು ಈ ಬಾರಿ ಕನ್ನಡದ ಯಾವ ಸ್ಟಾರ್ ನಟನ ಜತೆಗೆ ಸಿನಿಮಾ ಮಾಡಲಿದ್ದಾರೆನ್ನುವ ಕುತೂಹಲ ಬೆಟ್ಟದಷ್ಟಿತ್ತು. ಕನ್ನಡದ ಸಿನಿ ಪ್ರೇಕ್ಷಕರ ಮನಸ್ಸಲ್ಲಿ ಅರೆ ಘಳಿಗೆ ಶಿವರಾಜ್ ಕುಮಾರ್, ಸುದೀಪ್, ದರ್ಶನ್, ಪುನೀತ್ ಸೇರಿದಂತೆ ಒಂದಷ್ಟು ಬಹು ಬೇಡಿಕೆ ನಟರ ಹೆಸರು ಹಾದು ಹೋಗಿದ್ದು ಸುಳ್ಳಲ್ಲ.

ಬಹಳಷ್ಟು ಜನರಿಗೆ ದರ್ಶನ್ ಹಾಗೂ ಸುದೀಪ್ ಟಾರ್ಗೆಟ್ ಆಗಿದ್ದರು.ಆದರೆ ಡಿಸೆಂಬರ್ 2 ಕ್ಕೆ ಹೊಂಬಾಳೆ ಹೊರಗೆಡವಿದ ಸುದ್ದಿಯೇ ಬೇರೆ. ಕನ್ನಡದ ಸಿನಿ ಪ್ರೇಕ್ಷಕರು ಖುಷಿ ಪಡುವ ಬದಲಿಗೆ ಶಾಕ್ ಆಗುವಂತಹ ಸುದ್ದಿಯೇ ಹೊರ ಬಿತ್ತು. ಹೊಂಬಾಳೆ ಫಿಲಂಸ್ ನಿರ್ಮಾಣದ ಮತ್ತೊಂದು ಅದ್ದೂರಿ ವೆಚ್ಚದ ಪ್ಯಾನ್ ಇಂಡಿಯಾ ಸಿನಿಮಾಕ್ಕೆ ಪ್ರಶಾಂತ್ ನೀಲ್ ಆ್ಯಕ್ಷನ್ ಕಟ್ ಹೇಳುತ್ತಿದ್ದರೂ, ಈ ಬಾರಿ ಅವರು ಸೆಲೆಕ್ಟ್ ಮಾಡಿಕೊಂಡ ನಟ ಬಾಹುಬಲಿ ಖ್ಯಾತಿಯ ಪ್ರಭಾಸ್. ಪ್ಯಾನ್ ಇಂಡಿಯಾ ಮಾತ್ರವಲ್ಲ, ಅಂತಾರಾಷ್ಟ್ರೀಯ ಮಾರುಕಟ್ಟೆ ದೃಷ್ಟಿಯಿಂದ ಹೊಂಬಾಳೆ ಫಿಲಂಸ್ ನ ಆಯ್ಕೆ ಸರಿ ಇತ್ತೇನೋ ಆದರೆ, ಕನ್ನಡದ ಸಿನಿ ಪ್ರೇಕ್ಷಕರಿಗೆ ಅದೇ ಆಕ್ರೋಶಕ್ಕೆ ಕಾರಣವಾಯ್ತು.‌ ಸುದ್ದಿ ಹೊರ ಬೀಳುತ್ತಿದ್ದಂತೆ ಸೋಷಲ್ ಮೀಡಿಯಾದಲ್ಲಿ ಪ್ರಶಾಂತ್ ನೀಲ್ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾದ್ರು.


ಪ್ಯಾನ್ ಇಂಡಿಯಾ ಕ್ಕೆ ನಟನಾಗಬಲ್ಲ ನಟ ಕನ್ನಡದಲ್ಲಿ ಇಲ್ಲವೇ? ಪ್ರಶಾಂತ್ ನೀಲ್ ಯಾವ ಭಾಷೆ ಸಿನಿಮಾ ಮಾಡಲು ಹೊರಟಿದ್ದಾರೆ? ಇತ್ಯಾದಿ ರೀತಿಯಲ್ಲಿ ನೆಟ್ಟಿಗರು ಕಿಡಿಕಾರಿದರು. ಅಂತಹ ಸಿಟ್ಟು ಸ್ಪೋಟವಾಗುವುದಕ್ಕೆ ಪ್ರಭಾಸ್ ಹಾಗೂ ಪ್ರಶಾಂತ್ ನೀಲ್ ಜೋಡಿಯ ಸಿನಿಮಾದ ಟೈಟಲ್ ಕೂಡ ಕಾರಣವಾಯಿತು. ಸಾಲಾರ್ ಅನ್ನೋದು ಆ ಚಿತ್ರದ ಹೆಸರು. ಸಾಲಾರ್ ಅಂದ್ರೆ ಕನ್ನಡದ ಪದವೇ? ಇದು ನೆಟ್ಟಿಗರ ಪ್ರಶ್ನೆ . ಅಸಲಿಗೆ ಸಾಲಾರ್ ಅನ್ನುವ ಪದವೇ ಕನ್ನಡದಲ್ಲಿ ಇಲ್ಲ. ಇದೊಂದು ಅರೇಬಿಯಾ ಪದ. ಇದು ಕೂಡ ಪ್ಯಾನ್ ಇಂಡಿಯಾ ಜತೆಗೆ ಅಂತಾರಾಷ್ಟ್ರೀಯ ಮಾರುಕಟ್ಟೆ ಯ ತಂತ್ರ. ಜಾಗತಿಕವಾಗಿ ಸಿನಿಮಾ ಮಾಡಲು ಹೊರಟ ಪ್ರಶಾಂತ್ ನೀಲ್ ಗೆ ಒಂದು ಯುನಿವರ್ಷಲ್ ಟೈಟಲ್ ಬೇಕಿತ್ತು. ಅದಕ್ಕಾಗಿ ಅವರು ಆ ಪದ ಆಯ್ಕೆ ಮಾಡಿಕೊಂಡ್ರು.ಆದರೆ ಅದನ್ನು ಕನ್ನಡಿಗರು ಒಪ್ಪಿಕೊಳ್ಳುತ್ತಾರಾ?


ಪ್ರಶಾಂತ್ ನೀಲ್ ಹಾಗೂ ಪ್ರಭಾಸ್ ಜೋಡಿಯ ಸಿನಿಮಾ ಚಿತ್ರದ ಕತೆ ಏನು ಅನ್ನೊದು ಇನ್ನು ಗೊತ್ತಾಗಿಲ್ಲ. ಟೈಟಲ್ ಮಾತ್ರ ಈ ರಿವೀಲ್ ಆಗಿದೆ. ಅದೇ ಸಾಲಾರ್. ಸಾಲಾರ್ ಅಂದ್ರೆ ಅರೇಬಿಯಾದಲ್ಲಿ ಲೀಡರ್. ಅರೇಬಿಯಾಕ್ಕೂ ಕತೆಗೂ ಒಂದು ನಂಟಿರುವ ಹಾಗೆ ಕಾಣಿಸುತ್ತೆ. ಅದು ಟೆರರಿಸ್ಟ್ ಲಿಂಕೇ ಆಗಿರುತ್ತೆ. ಅದೀಗ ಯುನಿವರ್ಷಲ್ ವಿಷಯವೂ ಹೌದು. ಅದರ ವಿರುದ್ಧ ಒಬ್ಬ ನಾಯಕನನ್ನು ಸೃಷ್ಟಿಸಿರುವ ಪ್ರಶಾಂತ್ ನೀಲ್ ಅದಕ್ಕೆ ಪ್ರಭಾಸ್ ಅವರನ್ನು ಸೆಲೆಕ್ಟ್ ಮಾಡಿಕೊಂಡು ಸಾಲಾರ್ ಅಂತ ಹೆಸರಿಟ್ಟಿದ್ದಾರೆ. ಆದರೆ ಅದು ಕನ್ನಡಕ್ಕೆ ಒಗ್ಗಿತಾ? ಸದ್ಯದ ವಿರೋಧ ನೋಡಿದರೆ ಪ್ರಶಾಂತ್‌ನೀಲ್ ಈಗ ಎಡವಿದ್ರಾ ಎನ್ನುವ ಅನುಮಾನ ಶುರುವಾಗಿದೆ. ಅದರ ವಾಸ್ತವ ಮುಂದೆ ಗೊತ್ತಾಗಲಿದೆ. ಸದ್ಯಕ್ಕೆ ಫಿಚ್ಚರ್ ಬಾಕಿ ಇದೆ.

Categories
ಸಿನಿ ಸುದ್ದಿ

ಮರಿ ಟೈಗರ್ ಗೆ ಸಿಗ್ತು ಭರ್ಜರಿ ಗಿಫ್ಟ್!

ನಟ  ವಿನೋದ್ ಪ್ರಭಾಕರ್ ಗೆ ಇಂದು ಹುಟ್ಟು ಹಬ್ಬ

ಮರಿ ಟೈಗರ್ ವಿನೋದ್ ಪ್ರಭಾಕರ್ ಅವರಿಗೆ ಇಂದು ಹುಟ್ಟು ಹಬ್ಬ. ಸದ್ಯ ಅವರೀಗ ಕನ್ನಡದ ಬಹು ಬೇಡಿಕೆಯ ನಟ. ಅವರು ನಾಯಕರಾಗಿ ಅಭಿನಯಿಸಿರುವ ‘ಫೈಟರ್’ ಮತ್ತು ‘ಶ್ಯಾಡೋ’ ಸಿನಿಮಾಗಳು ರಿಲೀಸ್ ಗೆ ರೆಡಿಯಾಗಿದೆ. ಎರಡು ಚಿತ್ರಗಳು ಚಿತ್ರೀಕರಣ ಮುಗಿಸಿ ತೆರೆಗೆ ಬರಲು ಕಾಯುತ್ತಿದೆ. ಇನ್ನು ಹೆಸರಿಡದ ಚಿತ್ರವೊಂದು ಕೂಡ ಚಿತ್ರೀಕರಣ ಮುಗಿಸಿದೆ.ಈ ಮಧ್ಯೆ ಹೊಸ ಸಿನಿಮಾವೊಂದಕ್ಕೂ ಕಾಲ್ ಶೀಟ್ ನೀಡಿದ್ದು , ಇತ್ತೀಚೆಗಷ್ಟೆ ರಿವೀಲ್ ಆಗಿದೆ. ಹಾಗೆಯೇ ದರ್ಶನ್ ಅಭಿನಯದ ಬಹು ನಿರೀಕ್ಷಿತ ಚಿತ್ರ ರಾಬರ್ಟ್ ನಲ್ಲೂ ವಿನೋದ್ ಪ್ರಭಾಕರ್ ಕಾಣಿಸಿಕೊಂಡಿದ್ದು, ಈಗ ಅವರ ಹುಟ್ಟು ಹಬ್ಬಕ್ಕೆ ರಾಬರ್ಟ್ ಚಿತ್ರ ತಂಡ ವಿನೋದ್ ಪ್ರಭಾಕರ್ ಅವರ ಪಾತ್ರದ ಫಸ್ಟ್ ಲುಕ್ ಲಾಂಚ್ ಮಾಡಿದೆ.


ನಟ ದರ್ಶನ್ ಬಳಗದಲ್ಲಿ ವಿನೋದ್ ಪ್ರಭಾಕರ್ ತುಂಬಾನೆ‌ ಆಪ್ತರು. ವಿನೋದ್ ಪ್ರಭಾಕರ್ ಅಭಿನಯದ ಸಿನಿಮಾಗಳಿಗೆ ದರ್ಶನ್ ಆರಂಭದಿಂದಲೂ ಸಾಥ್ ನೀಡುತ್ತಾ ಬಂದಿದ್ದು, ಈಗ ರಾಬರ್ಟ್ ನಲ್ಲೂ ಒಟ್ಟಾಗಿ ಕಾಣಿಸಿಕೊಂಡು ಅಭಿಮಾನಿಗಳಿಗೆ ಭರ್ಜರಿ ಮನರಂಜನೆ‌ ನೀಡಲು ಮುಂದಾಗಿದ್ದಾರೆ.

ಈ ನಡುವೆಯೇ ಹುಟ್ಟು ಆಚರಿಸಿಕೊಳ್ಳುತ್ತಿರುವ ವಿನೋದ್ ಪ್ರಭಾಕರ್ ಅವರಿಗೆ ದರ್ಶನ್ ಆ್ಯಂಡ್ ಟೀಮ್ ಫಸ್ಟ್ ಲುಕ್ ಕೊಡುಗೆ ನೀಡಿರುವುದು ವಿಶೇಷ. ಇದೇ ರೀತಿ ಶ್ಯಾಡೋ ಹಾಗೂ ಪೈಟರ್ ಚಿತ್ರ ತಂಡಗಳು ಕೂಡ ನಟ ವಿನೋದ್ ಪ್ರಭಾಕರ್ ಅವರಿಗೆ ತಮ್ಮ ಚಿತ್ರಗಳ ಸ್ಪೆಷಲ್ ಪೋಸ್ಟರ್ ಕೊಡುಗೆನೀಡಿವೆ.

error: Content is protected !!