Categories
ಸಿನಿ ಸುದ್ದಿ

ಟೈಗರ್ ನಾಗೇಶ್ವರ್ ಸಿನಿಮಾದ ಮೊದಲ ಹಾಡು ರಿಲೀಸ್: ನೂಪುರ್ ಸನೋನ್ ಜೊತೆ ಹೆಜ್ಜೆ ಹಾಕಿದ ಮಾಸ್ ಮಹಾರಾಜ ರವಿತೇಜ

ತೆಲುಗಿನ ಮಾಸ್ ಮಹಾರಾಜ ರವಿತೇಜ ನಟನೆಯ ಬಹುನಿರೀಕ್ಷಿತ ಟೈಗರ್ ನಾಗೇಶ್ವರ್ ರಾವ್ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ. ಏಕ್ ದಮ್ ಏಕ್ ದಮ್ ಎಂಬ ಸಿಂಗಿಂಗ್ ಮಸ್ತಿ 5 ಭಾಷೆಯಲ್ಲಿ ಅನಾವರಣಗೊಂಡಿದ್ದು, ಕನ್ನಡದಲ್ಲಿ ಸಂತೋಷ್ ವಿಶ್ವರತ್ನ ಸಾಹಿತ್ಯ ಬರೆದಿದ್ದು, ಅನಿರುದ್ಧ್ ಶಾಸ್ತ್ರೀ ಹಾಡಿಗೆ ಧ್ವನಿಯಾಗಿದ್ದಾರೆ. ರವಿತೇಜ ಮತ್ತು ನೂಪುರ್ ಸನೋನ್ ಏಕ್ ದಮ್ ಏಕ್ ದಮ್ ಪೆಪ್ಪಿಯೆಸ್ಟ್ ಸಾಂಗ್ ಗೆ ಹೆಜ್ಜೆ ಹಾಕಿದ್ದು, ಜಿವಿ ಪ್ರಕಾಶ್ ಟ್ಯೂನ್ ಹಾಕಿದ್ದಾರೆ.

70ರ ಕಾಲಘಟ್ಟದ ಹೈದ್ರಾಬಾದ್ ದ ಸ್ಟುವರ್ಟ್ ಪುರಂ ಹಳ್ಳಿಯೊಂದರ ಕುಖ್ಯಾತ ಕಳ್ಳನ ಜೀವನಾಧಾರಿತ ಸಿನಿಮಾ ಇದಾಗಿದ್ದು, ಈ ಹಿಂದಿನ ಎಲ್ಲಾ ಚಿತ್ರಕ್ಕಾಗಿ ರವಿತೇಜ ಗೆಟಪ್, ಬಾಡಿ ಲಾಗ್ವೇಜ್ ಸಂಪೂರ್ಣವಾಗಿ ಬದಲಿಸಿಕೊಂಡಿದ್ದಾರೆ. ನೂಪುರ್ ಸನೋನ್ ಮತ್ತು ಗಾಯತ್ರಿ ಭಾರದ್ವಾಜ್ ನಾಯಕಿಯರಾಗಿ ಮಾಸ್ ಮಹಾರಾಜನಿಗೆ ಸಾಥ್ ಕೊಟ್ಟಿದ್ದಾರೆ. ಆರ್ ಮಧಿ ಛಾಯಾಗ್ರಹಣ, ಶ್ರೀಕಾಂತ್ ವೀಸಾ ಸಂಭಾಷಣೆ, ವಿ ಪ್ರಕಾಶ್ ಕುಮಾರ್ ಸಂಗೀತ ಸಿನಿಮಾಕ್ಕಿದೆ. ಅವಿನಾಶ್ ಕೊಲ್ಲಾ ಕಾರ್ಯಕಾರಿ ನಿರ್ಮಾಪಕರಾಗಿದ್ದು, ಮಯಾಂಕ್ ಸಿಂಘಾನಿಯಾ ಸಹ ನಿರ್ಮಾಣದ ಜವಾಬ್ದಾರಿ ನಿಭಾಯಿಸಿದ್ದಾರೆ.

ಟೈಗರ್ ನಾಗೇಶ್ವರ್ ರಾವ್ ಅಕ್ಟೋಬರ್ 20ರಂದು ವಿಶ್ವಾದ್ಯಂತ ಬಾಕ್ಸಾಫೀಸ್ ಭೇಟೆಗಿಳಿಯಲಿದೆ. ದಸರಾ ಹಬ್ಬದ ಸುಸಂದರ್ಭ ಹಾಗೂ ದಸರಾ ರಜೆ ಹಿನ್ನೆಲೆ ಪ್ಲಾನ್ ಮಾಡಿಕೊಂಡು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಚಿತ್ರ ರಿಲೀಸ್ ಮಾಡಲಾಗ್ತಿದೆ. ಕಾರ್ತಿಕೇಯ-2, ಕಾಶ್ಮೀರಿ ಫೈಲ್ಸ್ ಸಿನಿಮಾ ನಿರ್ಮಿಸಿರುವ ಅಭಿಷೇಕ್ ಅಗರ್ವಾಲ್ ತಮ್ಮದೇ ಅಭಿಷೇಜ್ ಅಗರ್ವಾಲ್ ಆರ್ಟ್ಸ್ ಬ್ಯಾನರ್ ನಡಿ ಟೈಗರ್ ನಾಗೇಶ್ವರ್ ರಾವ್ ಚಿತ್ರ ನಿರ್ಮಿಸಿದ್ದಾರೆ. ವಂಶಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.

Categories
ಸಿನಿ ಸುದ್ದಿ

13 ಎಂಬ ಭಾವೈಕ್ಯತೆ ಚಿತ್ರ: ಇದು ಮೋಹನ್ ಕುಮಾರ್ , ಸಾಹಿರಾಭಾನು ಕಥೆ; ಸೆಪ್ಟೆಂಬರ್ 15ಕ್ಕೆ ರಿಲೀಸ್- ಅಲ್ಲಾ ಕಾಪಾಡು, ಕೃಷ್ಣ ಕಾಪಾಡು!!

ಹಿರಿಯ ನಟ ರಾಘವೇದ್ರ ರಾಜ್‌ಕುಮಾರ್, ಶೃತಿ ಹಾಗು ಪ್ರಮೋದ್ ಶೆಟ್ಟಿ ‌ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಭಾವೈಕ್ಯತೆಯ ಸಂದೇಶ ಸಾರುವ, ಕುತೂಹಲಕಾರಿ ಕಥಾಹಂದರ ಹೊಂದಿರುವ ಚಿತ್ರ “13”. ಇದೇ ತಿಂಗಳ 15ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ತೆರೆ ಕಾಣುತ್ತಿರುವ ಈ ಚಿತ್ರದಲ್ಲಿ ರಾಘಣ್ಣ ಅವರು ಮೋಹನ್‌ ಕುಮಾರ್ ಎಂಬ ಹಿಂದೂ ವ್ಯಕ್ತಿಯಾಗಿ ಕಾಣಿಸಿಕೊಂಡಿದ್ದರೆ, ನಟಿ ಶೃತಿ ಅವರು ಸಾಹಿರಾಭಾನು ಎಂಬ ಮುಸ್ಲಿಂ ಮಹಿಳೆಯ ಪಾತ್ರ ನಿರ್ವಹಿಸಿದ್ದಾರೆ.

ನಟ ರಾಗಣ್ಣ ಮಾತನಾಡಿ, ನಾನು ಈ ಕಥೆ ಕೇಳಬೇಕಾದರೆ ಅಲ್ಲಿ ನನಗೆ ನಾಯಕನ ಪಾತ್ರ ಕಾಣಲಿಲ್ಲ, ಒಂದು ಪಾತ್ರ ಕೊನೆ ವರೆಗೆ ಪ್ರೇಕ್ಷಕರನ್ನು ಕರೆದುಕೊಂಡು ಹೋಗುತ್ತೆ ಅದೇ ನನ್ನ ಪಾತ್ರ ಅನಿಸಿತು. ಈ ಚಿತ್ರದ ನಿಜವಾದ ಹೀರೋ ಅಂದರೆ ಕಂಟೆಂಟ್, ಈಗ ಜನರನ್ನು ಥೇಟರ್ ವರೆಗೂ ಕರೆದುಕೊಂಡು ಬರುವ ಜವಾಬ್ದಾರಿ ನಿಮ್ಮ ಮೇಲಿದೆ. ಈ ಚಿತ್ರದಲ್ಲಿ ನಾನೊಬ್ಬ ಹಿಂದೂ, ಶೃತಿ ಅವರು ಮುಸ್ಲಿಂ ಮಹಿಳೆ, ಈತ ಅಲ್ಲಾ ಕಾಪಾಡು ಅಂದರೆ, ಆಕೆ ಕೃಷ್ಣಾ ಕಾಪಾಡು ಅನ್ನುತ್ತಾಳೆ. ಚಿತ್ರದಲ್ಲಿ ಇಬ್ಬರೂ ತಮ್ಮ ಜಾತಿ, ಧರ್ಮವನ್ನು ಬಿಟ್ಟು ಒಂದಾಗಿಬಿಡ್ತಾರೆ. ಅದೇ ನನಗೆ ಇಷ್ಟವಾಗಿದ್ದು ಎಂದು ಹೇಳಿದರು.

ನಿರ್ದೇಶಕ ನರೇಂದ್ರಬಾಬು ಮಾತನಾಡಿ, ಚಿಕ್ಕವನಿದ್ದಾಗ ಅಣ್ಣಾವ್ರ ಸಿನಿಮಾ ನೋಡಲು ಕ್ಯೂನಲ್ಲಿ ನಿಲ್ತಿದ್ದ ನಾನು ಈಗ ಅವರ ಪಕ್ಕದಲ್ಕಿ ಕುಳಿತಿರುವುದು ನನ್ನ ಅದೃಷ್ಟ. ನಮ್ಮ ಚಿತ್ರ 6 ದಿನಗಳ ಹಬ್ಬ, ಇದು 5ನೇ ಹಬ್ಬ, ಸಿನಿಮಾ ನಾವಂದುಕೊಂಡಿದ್ದಕ್ಕಿಂತಲೂ ಅದ್ಭುತವಾಗಿ ಮೂಡಿ ಬಂದಿದೆ. 13 ಕೋಟಿ ಹಣದ ಸುತ್ತ ನಡೆಯುವ ಕಥೆಯಿದು. ನಿಜವಾಗಿಯೂ ಈ ಚಿತ್ರವನ್ನು ನಾನು ಮಾಡಿದ್ದಲ್ಲ. ಆ ದೇವರೇ ನನ್ನಿಂದ ಮಾಡಿಸಿದ್ದು, ಇವತ್ತಿನವರೆಗೂ ಚಿತ್ರದ ಕೊನೆಗೆ ಏನಾಗುತ್ತೆ ಅಂತ ಯಾರಿಗೂ ಗೊತ್ತಿಲ್ಲ, ಎಲ್ಲರಿಗೂ ಅವರವರ ಪಾತ್ರ ಮಾತ್ರವೇ ಗೊತ್ತು. ಪಾರ್ಟ್ 2ಗೆ ಕಥೆ ರೆಡಿ ಇದೆ. ಹಾಡು, ಟೀಸರನ್ನು ನೋಡಿದವರೆಲ್ಲರೂ ಇಷ್ಟಪಟ್ಟಿದ್ದಾರೆ. ಚಿತ್ರದ ಬಗ್ಗೆ ಈವರೆಗೂ ಯಾರಿಂದಲೂ ಒಂದಾದರೂ ನೆಗೆಟಿವ್ ಮೆಸೇಜ್ ಬಂದಿಲ್ಲ.

ಎಲ್ಲರೂ ಯಾವಾಗ ಸಿನಿಮಾ ಬರುತ್ತೆ ಅಂತಾನೇ ಕೇಳ್ತಿದಾರೆ. ಇದು ನನ್ನ ನಿರ್ದೇಶನದ ಎಂಟನೇ ಸಿನಿಮಾ, ಆದರೂ ಒಂದು ಕಡೆ ಭಯ ಅನ್ನೋದು ಇರುತ್ತೆ. ಐಟಂ ಸಾಂಗ್, ಡ್ರಿಂಕ್ಸ್ ಸೀನ್ ಇರೋದ್ರಿಂದ ಯಾವುದೇ ಕಟ್ ಹೇಳದೆ ಚಿತ್ರಕ್ಕೆ ಯು/ಎ ಕೊಟ್ಟಿದ್ದಾರೆ. ನಿರ್ಮಾಪಕರೂ ತುಂಬಾ ಸಪೋರ್ಟ್ ಮಾಡುತ್ತಿದ್ದಾರೆ. ಕೊನೆ ಹಂತಕ್ಕೆ ಕಥೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಾಗ ಪಾರ್ಟ್ -1, ಪಾರ್ಟ್- 2 ಆಯ್ತು. ಆ ಥಾಟ್ ಮಾತ್ರ ಕಂಟಿನ್ಯೂ ಆಗುತ್ತೆ. ಮುಖ್ಯ ಪಾತ್ರಗಳು ಹಾಗೇ ಇರುತ್ತೆ. ನಿರ್ಮಾಪಕರಿಗೆ ಹೇಳಿದ ಮೇಲೇನೇ ಪಾರ್ಟ್ -1 ಅಂತ ಪೋಸ್ಟರ್‌ನಲ್ಲಿ ಹಾಕ್ಕೊಂಡಿರುವುದು.


ಚಿತ್ರದಲ್ಲಿ ಆಕ್ಷನ್ ಇಲ್ಲ, 3 ಕಮರ್ಷಿಯಲ್ ಸಾಂಗ್ ಇದ್ದು, ಸಂಗೀತ ನಿರ್ದೇಶಕ ಶೋಗನ್‌ಬಾಬು 19 ವರ್ಷದ ಹುಡುಗ, ಅದ್ಭುತವಾದ ಮ್ಯೂಸಿಕ್ ಕೊಟ್ಟಿದ್ದಾರೆ. ಪ್ರಮೋದ್ ಶೆಟ್ಟಿ ಅವರು ಬ್ಯುಸಿ ಇದ್ದರೂ ನಮಗೋಸ್ಕರ ಬಂದಿದ್ದಾರೆ. ನಾನು ಮುಸ್ತಫಾ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಒಂದು ಡೈಲಾಗ್‌ನಿಂದಲೇ ಸಿನಿಮಾ ಎಂಡ್ ಆಗುತ್ತೆ. ಜಯಸಿಂಹ ಅದ್ಭುತವಾದ ಸಂಭಾಷಣೆ ಬರೆದಿದ್ದಾರೆ. ರಾಗಣ್ಣ ಅವರನ್ನು ರಾತ್ರಿ 12 ಗಂಟೆಗೆಲ್ಲಾ ಉಳಿಸಿಕೊಂಡು ಶೂಟಿಂಗ್ ಮಾಡಿದ್ದೇವೆ ಎಂದು ಹೇಳಿದರು. ನಿರ್ಮಾಪಕರಲ್ಲೊಬ್ಬರಾದ ಸಂಪತ್ ಮಾತನಾಡಿ, ಕಾತುರದಿಂದ ಕಾದಂಥ ಸಿನಿಮಾ. ಚೆನ್ನಾಗಿ ಬಂದಿದೆ. ದೊಡ್ಡಮಟ್ಟದಲ್ಲಿ ರಿಲೀಸ್ ಮಾಡುತ್ತಿದ್ದೇವೆ. ಜಾಕ್ ಮಂಜು ಅವರು ಡಿಸ್ಟ್ರಿಬ್ಯೂಷನ್ ಮಾಡುತ್ತಿದ್ದಾರೆ. ವರಮಹಾಲಕ್ಷ್ಮಿ ಹಬ್ಬದಿಂದ ಟ್ಯಾಬುಲೋ ಎಲ್ಲಾ ಕಡೆ ಹೋಗ್ತಿದೆ ಎಂದರು. ಉಳಿದಂತೆ ಮಂಜುನಾಥ ಗೌಡ, ಮಂಜುನಾಥ್ ಹೆಚ್.ಎಸ್. ಕೇಶವಮೂರ್ತಿ ಸಿ. ಚಿತ್ರದ ಕುರಿತಂತೆ ಮಾತನಾಡಿದರು.

ನಂತರ ನಟ ಪ್ರಮೋದ್ ಶೆಟ್ಟಿ ಮಾತನಾಡಿ, ನಿರ್ಮಾಪಕರು ಚಿತ್ರದ ಜೊತೆಗೆ ಸೋಷಿಯಲ್ ವರ್ಕ್ ಮಾಡುತ್ತಿರುವುದು ಕೇಳಿ ತುಂಬಾ ಖುಷಿಯಾಯ್ತು. ರಾಗಣ್ಣ, ಶೃತಿ ಅವರ ಸಿನಿಮಾದಲ್ಲಿ ನಾನಿರುವುದೇ ಖುಷಿಯ ವಿಚಾರ, ನಾನು ನಿಮ್ಮ ಮುಖಕ್ಕೆ ಹೊಗೆ ಬಿಡುವ ಸೀನ್ ಮಾಡಲ್ಲ ಆಂದಾಗ ರಾಗಣ್ಣ ಅವರೇ ಯಾಕೆ ಮಾಡಲ್ಲ ಅಂತ ನನ್ನನ್ನು ಹುರಿದುಂಬಿಸಿದರು. ಅವರು ತಮ್ಮ ಜೊತೆಯಲ್ಲಿ ಆಕ್ಟ್ ಮಾಡುವವರನ್ನು ಮೋಟಿವೇಟ್ ಮಾಡುತ್ತಾರೆ ಎಂದು ಹೊಗಳಿದರು. ಉಳಿದಂತೆ ಲೋಕೇಶ್, ದಿಲೀಪ್ ಪೈ, ವಿನಯ ಸೂರ್ಯ ಮಾತನಾಡಿದರು.

Categories
ಸಿನಿ ಸುದ್ದಿ

ಸುಮಂತ್ ಶೈಲೇಂದ್ರ ಹುಟ್ದಬ್ಬಕ್ಕೆ ಚೇಸರ್ ಫಸ್ಟ್ ಲುಕ್ ರಿಲೀಸ್

ಮಾಲತಿ ಶೇಖರ್ ಶಿವಮೊಗ್ಗ ನಿರ್ಮಾಣದ, ಎಂ ಜೈರಾಮ್ ನಿರ್ದೇಶನದಲ್ಲಿ ಸುಮಂತ್ ಶೈಲೇಂದ್ರ ನಾಯಕನಾಗಿ ನಟಿಸುತ್ತಿರುವ “ಚೇಸರ್” ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದ್ದು, ಕೆಲವು ದಿನಗಳ ಚಿತ್ರೀಕರಣ ಮಾತ್ರ ಬಾಕಿಯಿದೆ.

ಸೆಪ್ಟೆಂಬರ್ 7 ನಾಯಕ , ಶೈಲೇಂದ್ರ ಹುಟ್ಟುಹಬ್ಬ. ಅದೇ ದಿನ “ಚೇಸರ್” ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡುವ ಮೂಲಕ ಸುಮಂತ್ ಅವರಿಗೆ ಹುಟ್ಟುಹಬ್ಬದ ಉಡುಗೊರೆ ನೀಡಲು ಚಿತ್ರತಂಡ ಮುಂದಾಗಿದೆ‌.

ಸಸ್ಪೆನ್ಸ್ ವಿತ್ ಆಕ್ಷನ್ ಜಾನರ್ ನ ಈ ಚಿತ್ರಕ್ಕೆ ನಿರ್ದೇಶಕ ಎಂ.ಜೈರಾಮ್ ಅವರೆ ಕಥೆ, ಚಿತ್ರಕಥೆ ಬರೆದಿದ್ದಾರೆ. ‌ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಕೆ.ಎಸ್ ಚಂದ್ರಶೇಖರ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ ಈ ಚಿತ್ರಕ್ಕಿದೆ.

ಸುಮಂತ್ ಶೈಲೇಂದ್ರ ಅವರಿಗೆ ನಾಯಕಿಯಾಗಿ ರಕ್ಷ ಮೆನನ್ ನಟಿಸುತ್ತಿದ್ದಾರೆ. ರವಿಶಂಕರ್, ರಂಗಾಯಣ ರಘು, ಸಾಧುಕೋಕಿಲ, ಚಿಕ್ಕಣ್ಣ, ಕುರಿ ಪ್ರತಾಪ್, ಸುಚೇಂದ್ರ ಪ್ರಸಾದ್, ಕಡಿಪುಡಿ ಚಂದ್ರು, ಸಂಗೀತ ಮುಂತಾದವರು “ಚೇಸರ್” ಚಿತ್ರದ ತಾರಾಬಳಗದಲ್ಲಿದ್ದಾರೆ.

Categories
ಸಿನಿ ಸುದ್ದಿ

ಉಸಿರಿಗೆ ದನಿ ಕೊಟ್ಟ ಸುದೀಪ್!

ಉಸಿರೇ ಉಸಿರೇ ಚಿತ್ರದ ಪ್ರಮುಖಪಾತ್ರದಲ್ಲಿ ಅಭಿನಯಿಸಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್. ತಮ್ಮ ಹುಟ್ಟು ಹಬ್ಬದ ಹಿಂದಿನ ದಿನ ಈ ಚಿತ್ರದ ಡಬ್ಬಿಂಗ್ ಮುಗಿಸಿಕೊಟ್ಟಿದ್ದಾರೆ

ಇದೊಂದು ನವಿರಾದ ಪ್ರೇಮಕಥೆ ಎನ್ನುವ ನಿರ್ಮಾಪಕ ಪ್ರದೀಪ್ ಯಾದವ್, ಇದು ನನ್ನ ಮೊದಲ ನಿರ್ಮಾಣದ ಚಿತ್ರ.‌ ನಾನು ಚಿತ್ರ ನಿರ್ಮಾಣ ಮಾಡಲು ಕಿಚ್ಚ ಸುದೀಪ್ ಅವರೆ ಸ್ಪೂರ್ತಿ. ಅವರು ನನ್ನ ಬೆನ್ನೆಲುಬಾಗಿ ನಿಂತರು ಹಾಗೂ ಪ್ರಮುಖ ಪಾತ್ರದಲ್ಲಿ ಅಭಿನಯ ಕೂಡ ಮಾಡಿದ್ದಾರೆ. ಸುದೀಪ್ ಅವರಿಗೆ ಹಾಗೂ ನನ್ನ ಇಡೀ ತಂಡಕ್ಕೆ ಧನ್ಯವಾದ ಎಂದಿದ್ದಾರೆ.

ಚಿತ್ರದ ಚಿತ್ರೀಕರಣ ಮುಕ್ತಾಯವಾಗಿ, ಪೋಸ್ಟ್ ಪ್ರೊಡಕ್ಷನ್ ವರ್ಕ್ ನಡೆಯುತ್ತಿದೆ. ಎಲ್ಲಾ ಅಂದುಕೊಂಡಂತೆ ಆದರೆ ಆಕ್ಟೋಬರ್ ನಲ್ಲಿ ತೆರೆಗೆ ಬರುವ ಸಾಧ್ಯತೆಗಳಿವೆ. “ಉಸಿರೇ ಉಸಿರೇ” ಚಿತ್ರದಲ್ಲಿ ಕಲಾವಿದರ ದಂಡೇ ಇದೆ. ರಾಜೀವ್ ಅವರಿಗೆ ನಾಯಕಿಯಾಗಿ ಶ್ರೀಜಿತ ನಟಿಸಿದ್ದಾರೆ. ಕಿಚ್ಚ ಸುದೀಪ್ ವಿಶೇಷಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ತೆಲುಗಿನ ಖ್ಯಾತ ನಟರಾದ ಆಲಿ ಹಾಗೂ ಪದ್ಮಭೂಷಣ ಪ್ರಶಸ್ತಿ ವಿಜೇತರು, ಅತೀ ಹೆಚ್ಚು ಸಿನಿಮಾಗಳಲ್ಲಿ ನಟಿಸಿ ಗಿನ್ನಿಸ್ ರೆಕಾರ್ಡ್ ಮಾಡಿರುವ ಬ್ರಹ್ಮಾನಂದಂ ಮೊದಲ ಬಾರಿಗೆ ನಮ್ಮ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಡೈನಾಮಿಕ್ ಸ್ಟಾರ್ ದೇವರಾಜ್, ಸಾಧುಕೋಕಿಲ, ಮಂಜು ಪಾವಗಡ, ತಾರಾ, ಸುಚೇಂದ್ರ ಪ್ರಸಾದ್, ರಾಜೇಶ್ ನಟರಂಗ, ಶೈನಿಂಗ್ ಸೀತಾರಾಮು,ಜಗಪ್ಪ, ಸುಶ್ಮಿತಾ ಮುಂತಾದವರ ತಾರಾಬಳಗವಿದೆ ಎನ್ನುತ್ತಾರೆ ನಿರ್ದೇಶಕ ಸಿ.ಎಂ.ವಿಜಯ್.

ಮನು ಛಾಯಾಗ್ರಹಣ, ಕೆ ಎಂ ಪ್ರಕಾಶ್ ಸಂಕಲನ, ಟೈಗರ್ ಶಿವು ಸಾಹಸ ನಿರ್ದೇಶನ ಹಾಗೂ ಮೋಹನ್ ಮತ್ತು ಹೈಟ್ ಮಂಜು ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದ್ದು, ವಿವೇಕ್ ಚಕ್ರವರ್ತಿ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.

Categories
ಸಿನಿ ಸುದ್ದಿ

ಜಲಂಧರ ಶೂಟಿಂಗ್ ಮುಕ್ತಾಯ: ಪ್ರಮೋದ್ ಶೆಟ್ಟಿ ಇಲ್ಲಿ ಹೀರೋ!

ಪ್ರಮೋದ್ ಶೆಟ್ಟಿ ನಾಯಕನಾಗಿ ನಟಿಸಿರುವ ” ಜಲಂಧರ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ ಪ್ರೊಡಕ್ಷನ್ ಕಾರ್ಯ ಬಿರುಸಿನಿಂದ ಸಾಗಿದೆ. ಈಗಾಗಲೇ ಈ ಚಿತ್ರದ ಪೋಸ್ಟರ್ ಸಹ ಬಿಡುಗಡೆಯಾಗಿದ್ದು, ಜನಪ್ರಿಯವಾಗಿದೆ.

ವಿಷ್ಣು ವಿ ಪ್ರಸನ್ನ ಚೊಚ್ಚಲ ನಿರ್ದೇಶನದ ಈ ಚಿತ್ರ ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿದೆ. ಕಾವೇರಿ ನದಿದಡದ ಮಧುವತ್ತಿ ಎಂಬ ಊರಿನಲ್ಲಿ ಈ ಚಿತ್ರದ ಕಥೆ ತೆರೆದುಕೊಳ್ಳುತ್ತದೆ. ಲೋಕೇಶ್ ಈ ಚಿತ್ರಕ್ಕೆ ಕಥೆ ಬರೆದಿದ್ದಾರೆ.

ಸ್ಟೆಪ್ ಅಪ್ ಪಿಕ್ಚರ್ಸ್ ಲಾಂಛನದಲ್ಲಿ ಮದನ್ ಎಸ್ ನಿರ್ಮಾಣ ಮಾಡುತ್ತಿದ್ದಾರೆ. ಚಂದ್ರ ಮೋಹನ್, ರಾಮಚಂದ್ರ ಹಾಗೂ ಪದ್ಮನಾಭನ್ ಸಹ ನಿರ್ಮಾಪಕರಾಗಿದ್ದಾರೆ. ಮುತ್ತತ್ತಿ, ಬೆಂಗಳೂರಿನ ಸುತ್ತಮುತ್ತ ಚಿತ್ರೀಕರಣ ನಡೆದಿದೆ.

ಪ್ರಮೋದ್ ಶೆಟ್ಟಿ, ಲೋಕೇಶ್ ಗೌಡ, ರಘು ರಮಣಕೊಪ್ಪ, ಬಾಲ ರಾಜವಾಡಿ, ರಿಶಿಕಾ ರಾಜ್, ಆರೋಹಿತ ಗೌಡ, ನವೀನ್ ಸಾಗರ್, ಪ್ರತಾಪ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಸರಿನ್ ರವೀಂದ್ರನ್ ಹಾಗೂ ವಿದ್ಯಾಶಂಕರ್ ಛಾಯಾಗ್ರಹಣ, ಜತಿನ್ ದರ್ಶನ್ ಸಂಗೀತ ನಿರ್ದೇಶನ ಹಾಗೂ ವೆಂಕಿ ಯು ಡಿ ವಿ ಸಂಕಲನ “ಜಲಂಧರ” ಚಿತ್ರಕ್ಕಿದೆ.

Categories
ಸಿನಿ ಸುದ್ದಿ

ನಾರಾಯಣ್ ಶ್ರೇಯಸ್ ನ ಮೀಟ್ ಮಾಡ್ತಾರೆ! ಚಿಕ್ಕಮಗಳೂರಲ್ಲಿ ಒಂದ್ಸಲ ಮೀಟ್ ಮಾಡೋಣ ಶುರು

ಕನ್ನಡದ ಮೇರು ಪ್ರತಿಭೆಗಳಾದ ಡಾ. ರಾಜಕುಮಾರ್, ಡಾ.ವಿಷ್ಣುವರ್ಧನ್, ಡಾ.ಅಂಬರೀಶ್ ಸೇರಿದಂತೆ ಅನೇಕ ಖ್ಯಾತ ನಟರ ಚಿತ್ರಗಳನ್ನು ನಿರ್ದೇಶಿಸಿರುವ ಹೆಸರಾಂತ ನಿರ್ದೇಶಕ ಡಾ.ಎಸ್ ನಾರಾಯಣ್ ನಿರ್ದೇಶನದಲ್ಲಿ ಶ್ರೇಯಸ್ ಮಂಜು ನಾಯಕನಾಗಿ ನಟಿಸುತ್ತಿರುವ “ಒಂದ್ಸಲ ಮೀಟ್ ಮಾಡೋಣ” ಚಿತ್ರ ಆರಂಭವಾಗಿದೆ.

ಚಿಕ್ಕಮಗಳೂರಿನ ಶ್ರೀದೇವಿರಮ್ಮ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ಸಮಾರಂಭ ನೆರವೇರಿದೆ. ಶ್ರೇಯಸ್ ಮಂಜು ಹಾಗೂ ತಾರಾ ಅನುರಾಧ ಅವರ ಮೇಲೆ ಸೆರೆಹಿಡಿಯಲಾದ ಮೊದಲ ಸನ್ನಿವೇಶಕ್ಕೆ ಸ್ಥಳೀಯ ಶಾಸಕರಾದ ಹೆಚ್ ಡಿ ತಮ್ಮಯ್ಯ ಆರಂಭ ಫಲಕ ತೋರಿದರು. ನಿರ್ಮಾಣ ಸಹಾಯಕ ಮಹದೇವ ಕ್ಯಾಮೆರಾ ಚಾಲನೆ ಮಾಡಿದರು.

“ಒಂದ್ಸಲ ಮೀಟ್ ಮಾಡೋಣ” ಪ್ರೀತಿಯ ಜರ್ನಿ ಎಂದು ಹೇಳುವ ನಿರ್ದೇಶಕರು, ಚಿಕ್ಕಮಗಳೂರಿನಿಂದ ಚಿತ್ರೀಕರಣ ಪ್ರಾರಂಭವಾಗಿ, ಸಕಲೇಶಪುರ, ವಿರಾಜಪೇಟೆ, ಕಣ್ಣೂರು, ಮೈಸೂರು, ಬೆಂಗಳೂರು, ಬೆಳಗಾವಿ ಹಾಗೂ ಗೋವಾ ಮುಂತಾದ ಕಡೆ ನಡೆಯಲಿದೆ. ಇದೊಂದು ಟ್ರಾವೆಲಿಂಗ್ ಲವ್ ಸ್ಟೋರಿ ಎಂದು ತಿಳಿಸಿದ್ದಾರೆ.

ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ಬಿ.ಪಿ.ತ್ಯಾಗರಾಜ್ ಅವರು ಅರ್ಪಿಸುತ್ತಿರುವ ಈ ಚಿತ್ರವನ್ನು ಕೆ.ಮಂಜು ಹಾಗೂ ರಮೇಶ್ ಯಾದವ್ ನಿರ್ಮಾಣ‌ ಮಾಡುತ್ತಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡಿರುವ ಕೆ.ಮಂಜು ಹಾಗೂ ರಮೇಶ್ ಯಾದವ್ ಅವರು ಜಂಟಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಮುಂದೆ ಇವರ ಕಾಂಬಿನೇಶನ್ ನಲ್ಲಿ ಸಾಕಷ್ಟು ಚಿತ್ರಗಳು ನಿರ್ಮಾಣವಾಗಲಿದೆ.

ನಿರ್ದೇಶಕ ಎಸ್ ನಾರಾಯಣ್ ಚಿತ್ರಕಥೆ, ಸಂಭಾಷಣೆ ಬರೆದು ಗೀತರಚನೆ ಮಾಡಿರುವ ಈ ಚಿತ್ರಕ್ಕೆ ಜಸ್ಸಿ ಗಿಫ್ಟ್ ಸಂಗೀತ ನೀಡುತ್ತಿದ್ದಾರೆ. ಕುಮಾರ್ ಗೌಡ ಛಾಯಾಗ್ರಹಣ, ಶಿವಪ್ರಸಾದ್ ಯಾದವ್ ಸಂಕಲನ, ಅರ್ಜುನ್ ಸಾಹಸ ನಿರ್ದೇಶನ, ಸಂತು ನೃತ್ಯ ನಿರ್ದೇಶನ ಹಾಗೂ ಆನಂದ್ ಅವರ ಕಲಾ ನಿರ್ದೇಶನ “ಒಂದ್ಸಲ ಮೀಟ್ ಮಾಡೋಣ” ಚಿತ್ರಕ್ಕಿದೆ‌.

ಶ್ರೇಯಸ್ ಮಂಜು ಅವರಿಗೆ ನಾಯಕಿಯಾಗಿ ಬೃಂದಾ ಆಚಾರ್ ನಟಿಸುತ್ತಿದ್ದಾರೆ. ತಾರಾ ಅನುರಾಧ, ಶರತ್ ಲೋಹಿತಾಶ್ವ, ಸಾಧುಕೋಕಿಲ, ಪ್ರಮೋದ್ ಶೆಟ್ಟಿ, ಕಲ್ಯಾಣಿ, ರಂಗಾಯಣ ರಘು, ಪಾವಗಡ ಮಂಜು, ಜಯರಾಮ್, ಸುಜಯ್ ಶಾಸ್ತ್ರಿ, ಗಿರಿ ಮುಂತಾದವರು ತಾರಾಬಳಗದಲ್ಲಿದ್ದಾರೆ.

Categories
ಸಿನಿ ಸುದ್ದಿ

ಸಮುದ್ರಂ ಛಾಯಾಗ್ರಾಹಕರ ವಿರುದ್ಧ ನಿರ್ಮಾಪಕರು ದೂರು: ಅಸಲಿ ವಿಷಯ ಬೇರೇನೆ ಇದೆ ಅಂದ್ರು ನಾಯಕಿ ಅನಿತಾ ಭಟ್

ಕನ್ನಡದ ಸಮುದ್ರಂ ಸಿನಿಮಾ ನಿರ್ಮಾಪಕರು ಛಾಯಾಗ್ರಾಹಕರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಹೌದು, ಚನ್ನಮ್ಮನ ಅಚ್ಚುಕಟ್ಟು ಪ್ರದೇಶದ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ, ತಮ್ಮ ನಿರ್ಮಾಣದ ‘ಸಮುದ್ರಂ’ ಚಿತ್ರದ ಚಿತ್ರೀಕರಣ ಮಾಡಿರುವ ಹಾರ್ಡ್ ಡಿಸ್ಕ್ ಕೊಡದೆ ಮತ್ತು ಹಾಡ್ಸ್ ಡಿಸ್ಕ್ ಕೊಡುವಂತೆ ಕೇಳಿದರೆ ಛಾಯಾಗ್ರಾಹಕ ರಿಶಿಕೇಷ್ ಜೀವ ಬೆದರಿಕೆ ಹಾಕಿದ್ದಾರೆ ಎಂದು ನಿರ್ಮಾಪಕಿಬ ನ ರಾಜಲಕ್ಷ್ಮಿ ದೂರು ನೀಡಿದ್ದಾರೆ.

ಈ ಪ್ರಕರಣ ಕುರಿತಂತೆ ಸಿನಿಮಾ ನಾಯಕಿ ಅನಿತಾಭಟ್ ಸ್ಪಷ್ಟನೆ ನೀಡಿದ್ದಾರೆ.
‘ಆರಂಭದಲ್ಲಿ ನಾವೆಲ್ಲ ಸೇರಿ ಈ ಸಿನಿಮಾ ಶುರು ಮಾಡಿದ್ದೆವು. ಮೊದಲು ನಿರ್ಮಾಣಕ್ಕೆ ಕೈ ಹಾಕಿದ್ದೆವು. ನಂತರ ಸ್ವಲ್ಪ ಹಣದ ಸಮಸ್ಯೆ ಎದುರಾಯ್ತು. ಹಾಗಾಗಿ ನಿರ್ದೇಶಕ ರಾಘವ ಮಹರ್ಷಿ ಅವರು ರಾಜಲಕ್ಷ್ಮಿ ಎಂಬುವರನ್ನು ಪರಿಚಯಿಸಿದರು. ಆಗ ಎಲ್ಲರೂ ಒಟ್ಟಿಗೆ ಕೆಲಸ ಮಾಡುತ್ತಿದ್ದೆವು. ಆದರೆ, ರಾಜಲಕ್ಷ್ಮಿ ನಾನೇ ನಿರ್ಮಾಣ ಮಾಡುತ್ತೇನೆ ಎಂದರು. ಅದಕ್ಕೂ ನಾವು ಒಪ್ಪಿ, ಹಾಗಾದರೆ ನಾವು ಈವರೆಗೆ ಶೂಟಿಂಗ್ ಗೆ ಮಾಡಿರುವಶ ಖರ್ಚನ್ನು ಕೊಡಿ ಅಂದಾಗ ಅವರು ಈವರೆಗೂ ಹಣ ಹಿಂದಿರುಗಿಸಿಲ್ಲ.

ಸಿನಿಮಾದಲ್ಲಿ ಕೆಲಸ ಮಾಡಿದ ‘ಟೆಕ್ನಿಷನ್ ಗೆ ಕೊಡಬೇಕಾದ ಹಣ ಇನ್ನೂ ಬಾಕಿ ಉಳಿಸಿಕೊಂಡಿದ್ದಾರೆ. ಕ್ಯಾಮೆರಾಮೆನ್ ರಿಶಿಕೇಷ್ ಅವರಿಗೂ ದುಡ್ಡು ಕೊಡಬೇಕು. ಹಾಗಾಗಿ ಇಬ್ಬರ ಮಧ್ಯೆ ಸ್ವಲ್ಪ ಮನಸ್ತಾಪವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಈ ಹಿಂದೆ ಕೂಡ ತೊಂದರೆ ಮಾಡಿದ್ದಾರೆ. ಈ ವಿಚಾರದಲ್ಲಿ ಕ್ಯಾಮೆರಾಮೆನ್ ಅವರದು ತೊಂದರೆಯಿಲ್ಲ.

ನಿರ್ಮಾಪಕಿ ರಾಜಲಕ್ಷ್ಮಿ ಅವರ ವಿರುದ್ಧ ನಾವೂ ಕೂಡ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ನೀಡಿದ್ದೆವು. ಸಿನಿಮಾ ರಿಲೀಸ್ ಆದ ನಂತರ ಹಣ ಕೊಡುವುದಾಗಿ ಅವರು ಹೇಳಿದರು. ಆದರೆ, ಈಗ ನೋಡಿದರೆ ಹೀಗೆ ದೂರು ನೀಡಿದ್ದಾರೆ. ಇದು ಎಷ್ಟು ಸರಿ? ಎಂದಿದ್ದಾರೆ ಅನಿತಾ ಭಟ್.

ಸಿನಿಮಾ ನಿರ್ದೇಶಕರನ್ನು‌ ಬಿಟ್ಟು, ಸಿನಿಮಾಟೋಗ್ರಾಫರ್ ಹೇಗೆ ಹಾರ್ಡ್ ಡಿಸ್ಕ್ ಇಟ್ಟುಕೊಳ್ಳಲು ಆಗುತ್ತೆ ? ಹಣಕಾಸಿನ ವಿಷಯದಲ್ಲಿ ಮನಸ್ತಾಪ ಆಗಿದೆ. ನಾನ ಇಲ್ಲಿ ನಟಿಸಿದ್ದೇನೆ. ನಿರ್ಮಾಪಕಿಯೂ ಆಗಿದ್ದೇನೆ. ಆ ಸಿನಿಮಾದ ಬಿಡುಗಡೆಗೆ ಬೇಕಾದ ಎಲ್ಲ ಸಹಾಯವನ್ನು ಈಗಲೂ ನಾನು ಮಾಡಲು ಸಿದ್ದಳಿದ್ದೇನೆ. ಆದರೆ, ತಂಡದ ಮಧ್ಯೆ ಹೀಗೆಲ್ಲ ಒಡಕು ತರುವುದು ಎಷ್ಟು ಸರಿ ಎಂಬುದು ಅನಿತಾ ಭಟ್ ಮಾತು.

Categories
ಸಿನಿ ಸುದ್ದಿ

ಪಿ.ಲಂಕೇಶ್ ಮೊಮ್ಮಗನ ಸಿನಿಮಾ ಎಂಟ್ರಿ: ಮಗನಿಗೆ ಇಂದ್ರಜಿತ್ ನಿರ್ದೇಶನ; ಗೌರಿಯಾಗಿ ಸಮರ್ಜಿತ್ ಲಂಕೇಶ್ ಪಾದಾರ್ಪಣೆ

ಹಿರಿಯ ಸಾಹಿತಿ ಪಿ.ಲಂಕೇಶ್ ಅವರ ಮೊಮ್ಮಗ, ಇಂದ್ರಜಿತ್‍ ಲಂಕೇಶ್‍ ಅವರ ಮಗ ಸಮರ್ಜಿತ್ ಲಂಕೇಶ್‍ ನಾಯಕರಾಗಿ ನಟಿಸುತ್ತಿರುವ “ಗೌರಿ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನಡೆದಿದೆ. ಈ ಚಿತ್ರದ ಮೂಲಕ ಸಮರ್ಜಿತ್ ನಾಯಕರಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ.

ಬಸವನಗುಡಿ ರಸ್ತೆಯಲ್ಲಿರುವ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮುಹೂರ್ತ ಸಮಾರಂಭ ನೆರವೇರಿದ್ದು,. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಚಿತ್ರದ ಮೊದಲ ಸನ್ನಿವೇಶಕ್ಕೆ ಕ್ಲಾಪ್‍ ಮಾಡುವ ಮೂಲಕ ಚಾಲನೆ ನೀಡಿದ್ದಾರೆ.

ಈ ಚಿತ್ರದ ಕುರಿತು ಮಾತನಾಡಿದ ಇಂದ್ರಜಿತ್ ಲಂಕೇಶ್, “ಗೌರಿ” ಶೀರ್ಷಿಕೆ ಇಡಲು ಕಾರಣವಿದೆ. ನಮ್ಮ ಅಕ್ಕನ ನೆನಪಿನಲ್ಲಿ ಈ ಶೀರ್ಷಿಕೆಯಿಟ್ಟಿದ್ದೇನೆ. ಈ ಚಿತ್ರ ಯುವಕರಿಗೊಂದು ಸ್ಫೂರ್ತಿದಾಯಕ ಸಿನಿಮಾ‌ ಆಗುವುದಂತು ನಿಜ. ಚಿತ್ರದಲ್ಲೊಂದು ಅದ್ಭುತವಾದ ಸಂದೇಶವಿದೆ. ಏನೇ ಹೆಚ್ಚು ಹೇಳಿದರೂ ಈ ಚಿತ್ರದ ಕಥೆ ಏನಿರಬಹುದು? ಎಂಬುದು ಎಲ್ಲರಿಗೂ ತಿಳಿಯುತ್ತದೆ.

ಇದು ನಮ್ಮ ರಾಜ್ಯದ ಕಥೆ. ಇಡೀ ದೇಶಕ್ಕೇ ಇಷ್ಟವಾಗುತ್ತದೆ ಎಂಬ ನಂಬಿಕೆ ನನಗಿದೆ. ಇದೊಂದು ನೈಜ ಘಟನೆಯನ್ನಾಧರಿಸಿದ ಚಿತ್ರ. ಚಿತ್ರದಲ್ಲಿ ಬಹುದೊಡ್ಡ ತಾರಾಗಣವಿದೆ. ಮುಂದಿನ ದಿನಗಳಲ್ಲಿ ಒಂದೊಂದೇ ವಿಷಯಗಳನ್ನು ಹಂಚಿಕೊಳ್ಳುತ್ತಾ ಹೋಗುತ್ತೇ ಎನ್ನುತ್ತಾರೆ ಇಂದ್ರಜಿತ್‍.

‘ಗೌರಿ’ ಚಿತ್ರದಲ್ಲಿ ನಾಯಕ ಸಮರ್ಜಿತ್ ಲಂಕೇಶ್ ಮತ್ತು ನಾಯಕಿ ಸಾನಿಯಾ ಅಯ್ಯರ್ ಸಹ ಈ ಚಿತ್ರದಲ್ಲಿ ನಟಿಸುತ್ತಿರುವುದಕ್ಕೆ ಸಂತಸಪಟ್ಟರು. ‘ಕಾಂತಾರ’ ಚಿತ್ರದ ಖ್ಯಾತಿಯ ಮಾನಸಿ ಸುಧೀರ್ ಸಹ ಈ ಚಿತ್ರದ ಪ್ರಮುಖಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇಂದ್ರಜಿತ್‍ ಅವರ ಪತ್ನಿ ಅರ್ಪಿತಾ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಜೆಸ್ಸಿ ಗಿಫ್ಟ್ ಮತ್ತು ಚಂದನ್‍ ಶೆಟ್ಟಿ ಸಂಗೀತ ಸಂಯೋಜಿಸುತ್ತಿದ್ದಾರೆ. ಎ.ಜೆ. ಶೆಟ್ಟಿ ಅವರ ಛಾಯಾಗ್ರಹಣವಿದ್ದು, ಮಾಸ್ತಿ ಮಂಜು ಮತ್ತು ಬಿ.ಎ. ಮಧು ಸಂಭಾಷಣೆ ಬರೆಯುತ್ತಿದ್ದಾರೆ.

‘ಗೌರಿ’ ಚಿತ್ರವನ್ನು 2024 ರ ಮಾರ್ಚ್ ನಲ್ಲಿ ತೆರೆಗೆ ತರುವ ಯೋಜನೆ ಹಾಕಿಕೊಂಡಿದ್ದಾರೆ ಇಂದ್ರಜಿತ್ ಲಂಕೇಶ್.

ಈ ಸಂದರ್ಭದಲ್ಲಿ ಸಂಭಾಷಣೆಕಾರರಾದ ಬಿ.ಎ. ಮಧು ಮತ್ತು ಮಾಸ್ತಿ ಮಂಜು, ಗೀತರಚನೆಕಾರ ಕವಿರಾಜ್, ಆನಂದ್ ಆಡಿಯೋ ಶ್ಯಾಮ್, ಹಿರಿಯ ನಿರ್ಮಾಪಕ ಕೆ. ಮಂಜು ಮುಂತಾದವರು ಹಾಜರಿದ್ದು ‘ಗೌರಿ’ ಚಿತ್ರತಂಡಕ್ಕೆ ಶುಭಕೋರಿದರು.

Categories
ಸಿನಿ ಸುದ್ದಿ

ಹುಲಿನಾಯಕನಿಗೆ ಸುದೀಪ್ ಸಾಥ್: ಇದು ಚಕ್ರವರ್ತಿ ಕನಸಿನ ಚಿತ್ರ

ನಟ ಸುದೀಪ್ ಅವರರ 50ನೇ ಹುಟ್ಟುಹಬ್ಬದಂದು ಪತ್ರಕರ್ತ, ನಟ ಹಾಗೂ ನಿರ್ದೇಶಕ ಡಿ.ಜೆ ಚಕ್ರವರ್ತಿ(ಚಂದ್ರಚೂಡ್), “ವೃಕ್ಷದೀಪ” ಎಂಬ ಹೆಸರಿನಲ್ಲಿ ಒಂದು ಲಕ್ಷ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಕೃಷಿ ಸಚಿವ ಚಲುವರಾಯಸ್ವಾಮಿ ವೃಕ್ಷದೀಪ ಅಭಿಯಾನಕ್ಕೆ ಚಾಲನೆ ನೀಡಿ ಶುಭ ಕೋರಿದ್ದಾರೆ. “ಅಭಿನಯ ತಿಲಕ” ಎಂಬ ಅಭಿಮಾನದ ಹಾಡನ್ನು ಚಲವಾದಿ ಮಹಾಸಭಾದ ಜ್ಞಾನಪ್ರಕಾಶ ಸ್ವಾಮೀಜಿ ಬಿಡುಗಡೆ ಮಾಡಿ ಹಾರೈಸಿದ್ದು, ಕಾರ್ಯಕ್ರಮದಲ್ಲಿ ಶಾಸಕ ರಾಜು ಗೌಡ ನಾಯಕ, ವೀರಕಪುತ್ರ ಶ್ರೀನಿವಾಸ್ ಇತರರು ಇದ್ದರು.

ಇದೇ ಸಂದರ್ಭದಲ್ಲಿ ಮಯೂರ ಮೋಷನ್ ಪಿಕ್ಚರ್ಸ್ ಲಾಂಛನದಲ್ಲಿ ಮಂಜುನಾಥ್ ಡಿ ನಿರ್ಮಿಸುತ್ತಿರುವ, ಡಿ.ಜೆ.ಚಕ್ರವರ್ತಿ ನಿರ್ದೇಶನದ ಹಾಗೂ ಮಿಲಿಂದ್ ಗೌತಮ್ ನಾಯಕರಾಗಿ ನಟಿಸುತ್ತಿರುವ “ಹುಲಿ ನಾಯಕ” ಚಿತ್ರದ ಮೋಷನ್ ಪೋಸ್ಟರನ್ನು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಬಿಡುಗಡೆ ಮಾಡಿದರು.

ಮೋಷನ್ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಸುದೀಒ್, ಚಕ್ರವರ್ತಿ ಬಿಗ್ ಬಾಸ್ ನಿಂದ ನನಗೆ ಹತ್ತಿರವಾದರು. ಆತ ಅದ್ಭುತ ರೈಟರ್. ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ “ಹುಲಿನಾಯಕ” ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು.

“ವೃಕ್ಷದೀಪ” ಅಭಿಯಾನಕ್ಕೆ ಚಾಲನೆ ನೀಡಿದ ಎಲ್ಲಾ ಗಣ್ಯರಿಗೆ, ಹಾಡು ಬಿಡುಗಡೆ ಮಾಡಿಕೊಟ್ಟ ಸ್ವಾಮೀಜಿ ಅವರಿಗೆ ಹಾಗೂ ಹುಟ್ಟುಹಬ್ಬದ ಸಡಗರದಲ್ಲಿದ್ದರೂ ನಮ್ಮ ಕಾರ್ಯಕ್ರಮಕ್ಕೆ ಆಗಮಿಸಿ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿಕೊಟ್ಟ ಕಿಚ್ಚ ಸುದೀಪ್ ಅವರಿಗೆ ನನ್ನ ಧನ್ಯವಾದ.

ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸಿಂಧೂರ ವೀರ ಲಕ್ಷ್ಮಣ ನಾಯಕ ಅವರ ಕುರಿತಾದ ಈ ಚಿತ್ರವನ್ನು ಮಂಜುನಾಥ್ ಅವರು ನಿರ್ಮಿಸುತ್ತಿದ್ದಾರೆ‌. ಮಿಲಿಂದ್ ಗೌತಮ್ ನಾಯಕರಾಗಿ ನಟಿಸುತ್ತಿದ್ದಾರೆ‌. ನಾನು ನಿರ್ದೇಶನ ಮಾಡುತ್ತಿದ್ದೇನೆ‌. ಇಂದು ಫಸ್ಟ್ ಲುಕ್ ಹಾಗೂ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಮುಂದಿನ ದಿನಗಳಲ್ಲಿ ಚಿತ್ರದ ಬಗ್ಗೆ ಹೆಚ್ಚು ಮಾಹಿತಿ ನೀಡುತ್ತೇನೆ ಎಂದರು ಡಿ.ಜೆ ಚಕ್ರವರ್ತಿ.

ಚಕ್ರವರ್ತಿ ಅವರು ಒಳ್ಳೆಯ ಕಥೆ ಆಯ್ಕೆ ಮಾಡಿಕೊಂಡಿದ್ದಾರೆ. ಸುದೀಪ್ ಅವರು ನಮ್ಮ ಚಿತ್ರಕ್ಕೆ ಶುಭ ಹಾರೈಸಿದ್ದಾರೆ. ನನ್ನ ಮಗ ಮಿಲಿಂದ್ ಗೌತಮ್ ನಾಯಕನಾಗಿ ನಟಿಸುತ್ತಿದ್ದಾನೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಮಂಜುನಾಥ್.

ನಮ್ಮ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿಕೊಟ್ಟ ಸುದೀಪ್ ಸರ್ ಅವರಿಗೆ ನಾನು ಆಭಾರಿ. ಉತ್ತಮ ಕಥೆ ಆಯ್ಕೆ ಮಾಡಿಕೊಂಡಿರುವ ಚಕ್ರವರ್ತಿ ಅವರಿಗೆ ಧನ್ಯವಾದ ಎಂದರು ನಾಯಕ ಮಿಲಿಂದ್ ಗೌತಮ್.

ಇದೇ ಸಂದರ್ಭದಲ್ಲಿ ಡಾಲಿ ಧನಂಜಯ, ನೆನಪಿರಲಿ ಪ್ರೇಮ್, ವಸಿಷ್ಠ ಸಿಂಹ, ಪೂಜಾಗಾಂಧಿ, ಸಂಜನಾ ಗಲ್ರಾನಿ ಮುಂತಾದ ಕಲಾವಿದರು ಸೇರಿ ಸಿಂಧೂರ ಲಕ್ಷ್ಮಣ್ ನಾಯಕ ಅವರ ಕುಟುಂಬದವರನ್ನು ಹಾಗೂ ನಿರ್ದೇಶಕ ಪಲ್ಲಕ್ಕಿ ರಾಧಾಕೃಷ್ಣ ಅವರನ್ನು ಸನ್ಮಾನಿಸಿದರು.

Categories
ಸಿನಿ ಸುದ್ದಿ

ಕಾನೂನು ಹಾಡು ಕೇಳಿ: ಇದು ಕಾನೂನು ಅಸ್ತ್ರ ಸಿನಿಮಾ ಸಾಂಗ್ ; ಮೋಷನ್‌ ಪೋಸ್ಟರ್ ಬಂತು

ಸಮಾಜದಲ್ಲಿ ಕಾನೂನಿನ ಬಗ್ಗೆ ಅರಿವಿಲ್ಲದವರು ಹೇಗೆಲ್ಲ ತೊಂದರೆ ಅನುಭವಿಸುತ್ತಿದ್ದಾರೆ. ಕಾನೂನು ಎಂಬ ಅಸ್ತ್ರ ಇಟ್ಟುಕೊಂಡು ಅದರಿಂದ ಹೇಗೆ ಪಾರಾಗಬಹುದು ಎಂಬುದನ್ನು ನಾಗರಾಜ್ ಎಂ.ಜಿ.ಗೌಡ ಅವರು ಕಾನೂನು ಅಸ್ತ್ರ ಚಿತ್ರದ ಮೂಲಕ ಹೇಳ ಹೊರಟಿದ್ದಾರೆ. ಪುಟ್ಟೇಗೌಡ. ಎನ್. ಪ್ರೊಡಕ್ಷನ್ ಅಡಿಯಲ್ಲಿ ಪುಟ್ಟೇಗೌಡ ಎನ್. ಅವರೇ ಕಥೆ, ಸಂಭಾಷಣೆ ಬರೆದು ಚಿತ್ರ ನಿರ್ಮಾಣ ಮಾಡುವ ಜೊತೆಗೆ ಚಿತ್ರದ ಮುಖ್ಯ ಪಾತ್ರದಲ್ಲಿಯೂ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಆಡಿಯೋ ಹಾಗೂ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ರಾಜೇಶ್‌ಗೌಡ ಹಾಗೂ ನಟಿ ಅಪೂರ್ವ ಮುಖ್ಯ ಅತಿಥಿಗಳಾಗಿ ಆಗಮಿಸಿ ತಂಡಕ್ಕೆ ಶುಭ ಹಾರೈಸಿದರು.


ಜನರು ವಾಹನ ಸಾಲ ಪಡೆದು, ಕಂತು ಕಟ್ಟಲು ಸ್ವಲ್ಪ ತಡವಾದರೂ ಅವರ ಮೇಲೆ ಸೀಜಿಂಗ್ ನವರ ನಡೆಸುವ ದೌರ್ಜನ್ಯ, ಗೃಹ ಸಾಲ ಪಡೆದವರ ಮೇಲೆ ಬ್ಯಾಂಕ್ ಗಳು ಬೇಕಾಬಿಟ್ಟಿ ಬಡ್ಡಿ ವಿಧಿಸುವಿಕೆ, ಸಾಲ ಪಡೆಯುವಾಗ ಖಾಲಿ ಚೆಕ್ ನೀಡಿದರೆ ಆಗುವ ಪರಿಣಾಮಗಳು, ಗಂಡ ಹೆಂಡತಿ ಡೈವೊರ್ಸ್ ಗೆ ಕಾರಣಗಳು, ನಿರಪರಾಧಿಯ ಮೇಲೆ ಕೊಲೆ ಅಪರಾಧ ಬಂದಾಗ ಕಾನೂನು ಅಂತಹವರನ್ನು ಹೇಗೆ ಸಂರಕ್ಷಿಸುತ್ತದೆ ಎಂದು ಈ ಚಿತ್ರ ಹೇಳಲಿದೆ.

ಕಾನೂನಿನಲ್ಲಿ ಶ್ರೀಮಂತ, ಬಡವ ಎನ್ನುವ ಬೇಧಭಾವ ಇರುವುದಿಲ್ಲ. ಸಮಾಜದಲ್ಲಿ ನಡೆಯುವ ಅನ್ಯಾಯಗಳಿಂದ ಪಾರಾಗುವುದಕ್ಕೆ ಇರೋದು ಒಂದೇ ಆಯುಧ ಎಂದರೆ ಅದು ’ಕಾನೂನು ಅಸ್ತ್ರ . ಸಕಲೇಶಪುರ, ಚಿಕ್ಕಮಗಳೂರು, ಬೆಂಗಳೂರು, ಕುಶಾಲನಗರ, ಮಡಕೇರಿ ಹಾಗೂ ಹೊರದೇಶಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ.


ವೆಂಕಿ ಯು.ಡಿ.ವಿ. ಅವರ ಸಂಕಲನ, ವಿನಯ್ ಗೌಡ ಅವರ ಛಾಯಾಗ್ರಹಣ, ವಿನಯ್‌ಪಾಂಡವಪುರ ಸಾಹಿತ್ಯದ ನಾಲ್ಕು ಹಾಡುಗಳಿಗೆ ಮಂಜು ಮಹದೇವ್ ಅವರ ಸಂಗೀತ, ಬಾಲು ಮಾಸ್ಟರ್ ಅವರ ಕೊರಿಯೋಗ್ರಫಿ ಚಿತ್ರಕ್ಮಿದೆ.
ಪುಟ್ಟೇಗೌಡ. ಎನ್, ಜಗದೀಶ್. ಹೆಚ್.ಜಿ. ದೊಡ್ಡಿ,
ಬಂಡೆಬಾಬು., ಲಕ್ಷ್ಮಿನಾರಾಯಣ್, ಸೌಮ್ಯರಾಜ್, ಯೋಗೇಶ್‌ಶೆಟ್ಟಿ ಇದ್ದಾರೆ.

ಇವರೊಂದಿಗೆ ಬೇಬಿ ಸಾನ್ವಿ ಗೌಡ, ಯೋಗೇಶ್, ಅಂಜನ್, ಚಂದನ,, ಸೌಂದರ್ಯ, ಗಿರೀಶ್, ಮಂಜುನಾಥ್ ಹಿರಿಯೂರು, ಸೌಮ್ಯ ರಾಜ್, ಆನಂದ್, ಮಾನ್ಯ ಗೌಡ, ಇನ್ನೂ ಮುಂತಾದವರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸುಸಿದ್ದಾರೆ‌.
ಸದ್ಯ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು, ನವೆಂಬರ್ ವೇಳೆಗೆ ಚಿತ್ರಮಂದಿರಕ್ಕೆ ಬರುವ ಸಾಧ್ಯತೆ ಇದೆ.

error: Content is protected !!