Categories
ಸಿನಿ ಸುದ್ದಿ

ಫೈಟ್ ಗೆ ರೆಡಿಯಾದ ಫೈಟರ್: ವಿನೋದ್ ಪ್ರಭಾಕರ್ ಸಿನಿಮಾ ಟೀಸರ್ ರಿಲೀಸ್

ಮರಿ ಟೈಗರ್ ವಿನೋದ್ ಪ್ರಭಾಕರ್ ನಟಿಸಿ, ನೂತನ್ ಉಮೇಶ್ ನಿರ್ದೇಶನದ ಹಾಗೂ ಸೋಮಶೇಖರ್ ಕಟ್ಟಿಗೇನಹಳ್ಳಿ ನಿರ್ಮಿಸಿರುವ “ಫೈಟರ್” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ನಿರ್ಮಾಪಕ ಸೋಮಶೇಖರ್ ಅವರ ತಂದೆ ಕೃಷ್ಣಪ್ಪ ಟೀಸರ್ ಬಿಡುಗಡೆ ಮಾಡಿ ಚಿತ್ರಕ್ಕೆ ಶುಭ ಕೋರಿದ್ದಾರೆ.

ನಿರ್ದೇಶಕ ನೂತನ್ ಉಮೇಶ್ ಮಾತನಾಡಿ, ಈ ಚಿತ್ರದ ಶೀರ್ಷಿಕೆಯನ್ನು ವಿನೋದ್ ಪ್ರಭಾಕರ್ ಅವರ ಅಭಿಮಾನಿಗಳೇ ಅನಾವರಣ ಮಾಡಿದ್ದರು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುಹೂರ್ತಕ್ಕೆ ಆಗಮಿಸಿ ಚಿತ್ರಕ್ಕೆ ಚಾಲನೆ ನೀಡಿದ್ದರು. ಈಗ ಟೀಸರನ್ನು ನಿರ್ಮಾಪಕರ ತಂದೆ ಬಿಡುಗಡೆ ಮಾಡಿದ್ದಾರೆ. ಸದ್ಯದಲ್ಲೇ ಹಾಡುಗಳು ಹಾಗೂ ಟ್ರೇಲರ್ ಹೊರ ಬರಲಿದ್ದು, ಅಕ್ಟೋಬರ್ ನಲ್ಲಿ ಚಿತ್ರವನ್ನು ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ.

“ಫೈಟರ್” ಎಂದರೆ ಹೊಡೆದಾಡುವವನು ಎಂದು ತಿಳಿದುಕೊಳ್ಳುತ್ತಾರೆ. ಆದರೆ ನಮ್ಮ “ಫೈಟರ್” ಅನ್ಯಾಯದ ವಿರುದ್ಧ ಹಾಗೂ ತನ್ನ ಕುಟುಂಬಕ್ಕಾಗಿ ಹೋರಾಡುವವನು.‌ ಈ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಹೊಸ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ನಿರ್ಮಾಪಕ ಸೋಮಶೇಖರ್ ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಗುರುಕಿರಣ್ ಸಂಗೀತ ನೀಡಿದ್ದಾರೆ‌. ಪಾವನ ಹಾಗೂ ಲೇಖ ಚಂದ್ರ ನಾಯಕಿಯರಾಗಿ ನಟಿಸಿದ್ದಾರೆ . ಸುಮಾರು ವರ್ಷಗಳ ನಂತರ ನಟಿ ನಿರೋಷ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ ಎಂದರು.

“ಫೈಟರ್” ನಲ್ಲಿ ಬರೀ ಹೋರಾಟ ಹಾಗೂ ಹೊಡೆದಾಟವಿಲ್ಲ. ತಂದೆ- ತಾಯಿ ಹಾಗೂ ಮಗನ ಬಾಂಧವ್ಯದ ಸನ್ನಿವೇಶಗಳು ಎಲ್ಲರ ಮನ ಮುಟ್ಟಲಿದೆ. ಜೊತೆಗೆ ಥ್ರಿಲ್ಲರ್ ಅಂಶಗಳನ್ನ ಒಳಗೊಂಡ ಕೌಟುಂಬಿಕ ಮನರಂಜನೆಯ ಚಿತ್ರ ಇದಾಗಿದೆ. ನನ್ನನ್ನು ನಿರ್ದೇಶಕರು ನನ್ನ ಹಿಂದಿನ ಚಿತ್ರಗಳಿಗಿಂತ ತುಂಬಾನೇ ಸ್ಟೈಲಿಷ್ ಆಗಿ ತೋರಿಸಿದ್ದಾರೆ. ನಿರ್ಮಾಪಕರು ಯಾವುದಕ್ಕೂ ಕೊರತೆ ಬಾರದ ಹಾಗೆ ನಿರ್ಮಾಣ ಮಾಡಿದ್ದಾರೆ. ಈ ಚಿತ್ರದಲ್ಲಿ ಸಮಾಜದ ವ್ಯವಸ್ಥೆಯ ವಿರುದ್ಧ ಹೋರಾಡುವ “ಫೈಟರ್” ನಾನು ಎಂದು ವಿನೋದ್ ಪ್ರಭಾಕರ್ ತಿಳಿಸಿದರು.

ನಾಯಕಿಯರಾದ ಲೇಖಾ ಚಂದ್ರ ಹಾಗೂ ಪಾವನ ತಮ್ಮ ಪಾತ್ರದ ಕುರಿತು ಮಾತನಾಡಿದರು. ಬಹಳ ದಿನಗಳ ನಂತರ ಕನ್ನಡ ಚಿತ್ರದಲ್ಲಿ ನಟಿಸುತ್ತಿರುವುದಕ್ಕೆ ನಿರೋಷ ಸಂತಸಪಟ್ಟರು. ಚಿತ್ರದಲ್ಲಿ ಹಾಡುಗಳಿದ್ದು ಎರಡೂ ವಿಭಿನ್ನವಾಗಿವೆ ಎಂದು ಸಂಗೀತ ನಿರ್ದೇಶಕ ಗುರುಕಿರಣ್ ತಿಳಿಸಿದರು. ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು “ಫೈಟರ್” ಚಿತ್ರದ ಸಾಹಸ ದೃಶ್ಯಗಳ ಕುರಿತು ಮಾಹಿತಿ ನೀಡಿದರು.

Categories
ಸಿನಿ ಸುದ್ದಿ

ಕಂಗನಾ ಕರಿಯರ್ ನಲ್ಲೇ ಇದು ಬೆಸ್ಟ್ ಸಿನಿಮಾವಂತೆ! ಚಂದ್ರಮುಖಿ2 ಸಿನಿಮಾ ಬಗ್ಗೆ ಬಾಲಿವುಡ್ ನಟಿ ಖುಷಿಯ ಮಾತು

ರಾಘವ ಲಾರೆನ್ಸ್ ಹಾಗೂ ಕಂಗನಾ ರಣಾವತ್ ನಟನೆಯ ‘ಚಂದ್ರಮುಖಿ-2’ ಸಿನಿಮಾ ಬಿಡುಗಡೆಯ ಹೊಸ್ತಿಲಿನಲ್ಲಿ ನಿಂತಿದೆ. ಗಣೇಶ್ ಚತುರ್ಥಿಗೆ ಬೆಳ್ಳಿತೆರೆಗೆ ಎಂಟ್ರಿ ಕೊಡುತ್ತಿರುವ ಈ ಚಿತ್ರದ ಟ್ರೇಲರ್, ಟೀಸರ್ ಭಾರೀ ಸದ್ದು ಮಾಡುತ್ತಿದೆ. ಪಿ.ವಾಸು ನಿರ್ದೇಶನದಲ್ಲಿ ಮೂಡಿಬಂದಿರುವ ಚಂದ್ರಮುಖಿ-2 ಸಿನಿಮಾದ ಆಡಿಯೋ ಲಾಂಚ್ ಇವೆಂಟ್ ಚೆನ್ನೈನಲ್ಲಿ ಅದ್ಧೂರಿಯಾಗಿ ‌ನೆರವೇರಿದೆ. ಈ ಕಾರ್ಯಕ್ರಮದಲ್ಲಿ ಇಡೀ ಚಿತ್ರತಂಡ ಭಾಗಿ ತಮ್ಮ ಅನುಭವ ಹಂಚಿಕೊಂಡಿದೆ.

ನಾಯಕ ರಾಘವ್ ಲಾರೆನ್ಸ್, ಹಲವು ಕುತೂಹಲಕಾರಿ ಅಂಶಗಳನ್ನು ಹಂಚಿಕೊಂಡರು. “ದೊಡ್ಡ ಸ್ಟಾರ್‌ಗಳ ಜೊತೆ ಸಿನಿಮಾ ಮಾಡುವ ಸುಭಾಸ್ಕ್ ಕರಣ್ ನನ್ನ ಜೊತೆ ಸಿನಿಮಾ ಮಾಡ್ತಾರಾ ಅಂತ ಆಶ್ಚರ್ಯ ಪಡ್ತಿದ್ದೆ? ಆದರೆ, ‘ಚಂದ್ರಮುಖಿ 2’ ಅಂತ ದೊಡ್ಡ ಸಿನಿಮಾ ಮಾಡಿದ್ರು. ಅವರ ಬ್ಯಾನರ್‌ನ ಭಾಗವಾಗಿರುವುದಕ್ಕೆ ಹೆಮ್ಮೆ ಪಡುತ್ತೇವೆ. ನಮ್ಮ ನಿರ್ದೇಶಕ ವಾಸು ಸರ್ ಗೆ ನಾಲ್ಕು ದಶಕಗಳ ಅನುಭವವಿದೆ.ನಾನು ಸೈಡ್ ಡ್ಯಾನ್ಸರ್ ಆಗಿ ಕೆಲಸ ಮಾಡಿದ ಕಾಲದಿಂದಲೂ ಅವರು ನಿರ್ದೇಶಕರಾಗಿ ಉತ್ತಮ ಚಿತ್ರಗಳನ್ನು ಮಾಡಿದ್ದಾರೆ.‌


ಕಂಗನಾ ರಣಾವತ್ ಅವರು ಈ ಸಿನಿಮಾ ಮಾಡುತ್ತಿದ್ದಾರೆ ಎಂದು ತಿಳಿದಾಗ ನನಗೆ ಆಶ್ಚರ್ಯವಾಯಿತು. ಕೀರವಾಣಿ ಬಗ್ಗೆ ಮಾತನಾಡಲು ಪದಗಳು ಸಾಕಾಗುವುದಿಲ್ಲ, ಅವರು ಎಂದಿಗೂ ಕೆಲಸದ ಬಗ್ಗೆ ಟೆನ್ಷನ್ ಆಗುವುದಿಲ್ಲ. ಅದಕ್ಕಾಗಿಯೇ ಅವರು ನಮ್ಮ ಚಿತ್ರಕ್ಕೆ ಉತ್ತಮ ಸಂಗೀತವನ್ನು ನೀಡಿದ್ದಾರೆ. ಛಾಯಾಗ್ರಾಹಕ ರಾಜಶೇಖರ್, ಕಲಾ ನಿರ್ದೇಶಕ ತೊಟ್ಟ ಥರಣಿ ಗಾರು, ಸಂಕಲನಕಾರ ಆಂಟನಿ ಅವರು ಇಡೀ ಚಿತ್ರತಂಡದೊಂದಿಗೆ ‘ಚಂದ್ರಮುಖಿ 2′ ನಂತಹ ಅದ್ಭುತ ಚಿತ್ರವನ್ನು ಮಾಡಿದ್ದಾರೆ. ಖಂಡಿತ ಪ್ರೇಕ್ಷಕರಿಗೆ ಮನರಂಜನೆ ನೀಡಲಿದೆ’ ಎಂದರು.

ಬಾಲಿವುಡ್ ಕ್ವೀನ್ ಕಂಗನಾ ರಣಾವತ್, “ನನ್ನ ನಟನಾ ವೃತ್ತಿ ಜೀವನದಲ್ಲಿ ನಾನು ‘ಚಂದ್ರಮುಖಿ 2’ ಚಿತ್ರ ಮಾಡಿಲ್ಲ. ಅಸಲಿ ವಿಷಯವೆಂದರೆ, ನಾನು ಯಾರನ್ನೂ ಆಫರ್ ಕೇಳಿಲ್ಲ. ಮೊದಲ ಬಾರಿಗೆ ನಾನು ನಿರ್ದೇಶಕ ಪಿ. ವಾಸು ಅವರನ್ನು ಕೇಳಿದೆ. ಈ ಚಿತ್ರದಲ್ಲಿ ವಾಸು ಅವರು ನನ್ನ ಪಾತ್ರದ ಜೊತೆಗೆ ಪ್ರತಿ ಪಾತ್ರಕ್ಕೂ ಸಮಾನ ಪ್ರಾಮುಖ್ಯತೆ ನೀಡಿದ್ದಾರೆ.ಇಡೀ ಕ್ರೆಡಿಟ್ ಅವರಿಗೆ ಸಲ್ಲುತ್ತದೆ.ಲಾರೆನ್ಸ್ ಮಾಸ್ಟರ್ ಅನೇಕರಿಗೆ ಸ್ಫೂರ್ತಿ ಎಂದರು.

ಆಸ್ಕರ್ ಪ್ರಶಸ್ತಿ ವಿಜೇತ ಎಂ.ಎಂ.ಕೀರವಾಣಿ ಮಾತನಾಡಿ, “ಚಂದ್ರಮುಖಿ 2′ ಆಸ್ಕರ್ ಪ್ರಶಸ್ತಿ ಪಡೆದ ನಂತರ ನಾನು ಸಂಗೀತ ಸಂಯೋಜನೆ ಮಾಡಿರುವ ಚಿತ್ರ. ಇಂತಹ ಒಳ್ಳೆಯ ಅವಕಾಶ ನೀಡಿದ ನಿರ್ದೇಶಕ ಪಿ.ವಾಸು ಅವರಿಗೆ ಧನ್ಯವಾದಗಳು. ವಾಸು ಅವರು ಉತ್ತಮ ನಿರ್ದೇಶಕ ಮಾತ್ರವಲ್ಲದೆ. ಒಬ್ಬ ಒಳ್ಳೆಯ ಗಾಯಕ.
ನನ್ನ ಮುಂದಿನ ಚಿತ್ರಕ್ಕೆ ಅವರು ಗಾಯಕನಾಗಲು ನಾನು ಬಯಸುತ್ತೇನೆ. ರಾಘವ ಲಾರೆನ್ಸ್ ಅವರ ಬೆಂಬಲದಿಂದ ಹಾಡುಗಳು ಚೆನ್ನಾಗಿ ಬಂದಿವೆ ಎಂದರು.

ಲೈಕಾ ಸಂಸ್ಥೆಯ ಒಡೆಯ ಸುಭಾಸ್ಕರಣ್ ಬಹಳ ಅದ್ಧೂರಿಯಾಗಿ ಚಿತ್ರ ನಿರ್ಮಿಸಿದ್ದು, ‘RRR’ ಸಿನಿಮಾದ ನಾಟು ನಾಟು ಹಾಡಿಗೆ ಆಸ್ಕರ್ ಅವಾರ್ಡ್ ಪಡೆದ ಎಂ.ಎಂ ಕೀರವಾಣಿ ಸಂಗೀತ ನಿರ್ದೇಶನ, ಆರ್ ಡಿ ರಾಜಶೇಖರ್ ಛಾಯಾಗ್ರಹಣ, ಅಂಥೋನಿ ಸಂಕಲನ ಚಿತ್ರಕ್ಕಿದೆ. ವಡಿವೇಲು, ಲಕ್ಷ್ಮೀ ಮೆನನ್, ಮಹಿಮಾ ನಂಬಿಯಾರ್, ರಾಧಿಕಾ ಶರತ್ ಕುಮಾರ್, ಸುರೇಶ್ ಮೆನನ್ ತಾರಾಬಳಗದಲ್ಲಿದ್ದಾರೆ. ರಾಧಾ ಕೃಷ್ಣ ಎಂಟರ್ಟೈನ್ಮೆಂಟ್ ತೆಲುಗಿನಲ್ಲಿ ಚಂದ್ರಮುಖಿ-2 ಸಿನಿಮಾವನ್ನು ರಿಲೀಸ್ ಮಾಡಲಾಗಿದೆ.

Categories
ಸಿನಿ ಸುದ್ದಿ

ತಾಯಿ ಕಳಕೊಂಡ ಮಗನ ನೋವಿನ ಹಾಡಿದು; ಸಪ್ಲೈಯರ್ ಶಂಕರನ ಹಾಡು ಪಾಡು

‘ಗಂಟುಮೂಟೆ’, ‘ಟಾಮ್ ಆ್ಯಂಡ್‌ ಜೆರ್ರಿ’ ಸಿನಿಮಾ ಖ್ಯಾತಿಯ ನಾಯಕ ನಿಶ್ಚಿತ್ ಕೊರೋಡಿ ಅಭಿನಯದ ‘ಸಪ್ಲೈಯರ್‌ ಶಂಕರ’ ಸಿನಿಮಾದ ಮೊದಲ ಹಾಡು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ತಾಯಿ ಕಳೆದುಕೊಂಡ ಮಗನ ಆಕ್ರಂದನ, ತುಂಬಾ ಪ್ರೀತಿಸುವ ಜೀವ ದೂರವಾದಾಗ ಆಗುವ‌ ನೋವಿನ ಗೀತೆಯಾಗಿರುವ ಅಯ್ಯೋ ದೈವವೇ ಹಾಡಿಗೆ ನಿರ್ದೇಶಕ ರಂಜಿತ್ ಸಿಂಗ್ ರಜಪೂತ್ ಸಾಹಿತ್ಯ ಬರೆದಿದ್ದು, ಸುನಿಲ್ ಕಶ್ಯಪ್ ಧ್ವನಿಯಾಗಿದ್ದು, ಆರ್ ಬಿ ಭರತ್ ಟ್ಯೂನ್ ಹಾಕಿದ್ದಾರೆ. ಕೇಳುಗರಿಗೆ ಬಹಳ ಕನೆಕ್ಟ್ ಆಗುವ ಸೆಂಟಿಮೆಂಟ್ ಹಾಡು ಇದಾಗಿದ್ದು, ಸಾಹಿತ್ಯ, ಸಂಗೀತ ಎಲ್ಲಾ ವಿಚಾರದಲ್ಲೂ ಗಮನಸೆಳೆಯುತ್ತಿದೆ.

ಇತ್ತೀಚಿಗೆ ರಿಲೀಸ್ ಆದ ಮೋಷನ್ ಪೋಸ್ಟರ್ ಗೆ ಒಳ್ಳೆ ರೆಸ್ಪಾನ್ಸ್ ಸಿಕ್ತಿತ್ತು. ಯುವ ಪ್ರತಿಭೆ ರಂಜಿತ್ ಸಿಂಗ್ ರಜಪೂತ್ ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್ ಹೇಳಿದ್ದಾರೆ. ತ್ರಿನೇತ್ರ ಫಿಲ್ಮಂಸ್ ಸಂಸ್ಥೆಯಡಿ ಎಂ.ಚಂದ್ರಶೇಖರ್ ಹಾಗೂ ನಾಗೇಂದ್ರ ಸಿಂಗ್ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದ್ದು, ಬಾರ್ ಸಪ್ಲೈಯರ್‌ ಸುತ್ತ ಇಡೀ ಸಿನಿಮಾ ಸಾಗುತ್ತದೆ. ಗೋಪಾಲ ಕೃಷ್ಣ ದೇಶಪಾಂಡೆ, ಜ್ಯೋತಿ ರೈ, ನವೀನ್ ಡಿ ಪಡಿಲ್ ಸೇರಿದಂತೆ ಒಂದಷ್ಟು ಹೊಸಬರು ಚಿತ್ರದಲ್ಲಿದ್ದಾರೆ.

ಸತೀಶ್ ಕುಮಾರ್.ಎ ಛಾಯಾಗ್ರಹಣ, ಆರ್.ಬಿ.ಭರತ್ ಸಂಗೀತ, ಸತೀಶ್ ಚಂದ್ರಯ್ಯ ಸಂಕಲನ ಚಿತ್ರಕ್ಕಿದೆ. ಸದ್ದಿಲ್ಲದೇ ಶೂಟಿಂಗ್ ಮುಗಿಸಿರುವ ಸಪ್ಲೈಯರ್ ಶಂಕರ ಬಿಡುಗಡೆಗೆ ಸಜ್ಜಾಗಿದ್ದಾನೆ.

Categories
ಸಿನಿ ಸುದ್ದಿ

ಟ್ರೆಂಡ್ ಆಗೋಕೆ ಏನ್ ಮಾಡ್ಬೇಕು ಗೊತ್ತಾ? ಸೂತ್ರಧಾರಿಯ ಹೊಸ ಸೂತ್ರವಿದು…

ಗಾಯಕ, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ನಾಯಕನಾಗಿ ನಟಿಸುತ್ತಿರುವ ” ಸೂತ್ರಧಾರಿ” ಚಿತ್ರದ “ಡ್ಯಾಶ್” ಸಾಂಗ್ ಈಗಾಗಲೇ ಹದಿನೇಳು ಮಿಲಿಯನ್ ವೀಕ್ಷಣೆಯಾಗಿ ಜನರ ಮನ ಗೆದ್ದಿದೆ. ಈಗ “ಸೂತ್ರಧಾರಿ” ಚಿತ್ರಕ್ಕಾಗಿ ವಿಜಯ್ ಈಶ್ವರ್ ಬರೆದಿರುವ “ಟ್ರೆಂಡಿಂಗಲ್ ಬರ್ಬೇಕಂದ್ರೆ ಏನ್ ಮಾಡ್ಬೇಕು” ಎಂಬ ಹಾಡು ಇತ್ತೀಚೆಗೆ A2 music ಮೂಲಕ ಬಿಡುಗಡೆಯಾಗಿದೆ‌. ಚಂದನ್ ಶೆಟ್ಟಿ ಈ ಹಾಡಿಗೆ ಸಂಗೀತ ನೀಡಿ, ಹಾಡಿದ್ದಾರೆ. ಮೋಹನ್ ಮಾಸ್ಟರ್ ನೃತ್ಯ ನಿರ್ದೇಶಿಸಿರುವ ಈ ಹಾಡಿಗೆ ಚಂದನ್ ಶೆಟ್ಟಿ ಹಾಗೂ ಅಪೂರ್ವ ಹೆಜ್ಜೆ ಹಾಕಿದ್ದಾರೆ.

ಕಳೆದ ಡಿಸೆಂಬರ್ ನಲ್ಲಿ ಬಿಡುಗಡೆಯಾದ ನಮ್ಮ ಚಿತ್ರದ “ಡ್ಯಾಶ್” ಸಾಂಗ್ ಭರ್ಜರಿ ಯಶಸ್ಸು ಕಂಡಿದೆ. ಈಗ ಈ ಹಾಡು ಬಿಡುಗಡೆಯಾಗಿದೆ. ಹಾಡು ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಒಂದು ಮಿಲಿಯನ್ ವೀಕ್ಷಣೆಯಾಗಿದೆ. ಇಂತಹ ಜನಪ್ರಿಯ ಹಾಡು ಬರೆದುಕೊಟ್ಟ ವಿಜಯ್ ಈಶ್ವರ್ ಅವರಿಗೆ, ಸಂಗೀತ ನೀಡಿ, ಹಾಡಿ, ಅಭಿನಯಿಸಿರುವ ಚಂದನ್ ಶೆಟ್ಟಿ ಸೇರಿದಂತೆ ಇಡೀ ತಂಡಕ್ಕೆ ಧನ್ಯವಾದ ತಿಳಿಸುತ್ತೇನೆ. ಇನ್ನೊಂದು ಹಾಡು ಮುಗಿದರೆ, ಚಿತ್ರೀಕರಣ ಮುಕ್ತಾಯವಾಗುತ್ತದೆ. ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುತ್ತೇನೆ ಎಂದು ನಿರ್ಮಾಪಕ ನವರಸನ್ ತಿಳಿಸಿದರು‌.

“ಸೂತ್ರಧಾರಿ” ಸಿನಿಮಾದ “ಡ್ಯಾಶ್” ಹಾಡು ಭರ್ಜರಿ ಹಿಟ್ ಆಗಿರುವ ಹಿನ್ನೆಲೆಯಲ್ಲಿ ಅದನ್ನು ಮೀರಿಸುವ ಮತ್ತೊಂದು ಹಾಡು ಕೊಡುವ ಜವಾಬ್ದಾರಿ ನನ್ನಗಿತ್ತು. ಈಗ ವಿಜಯ್ ಈಶ್ವರ್ ಬರೆದಿರುವ “ಏನ್ ಮಾಡ್ಬೇಕು” ಹಾಡನ್ನು ಬಿಡುಗಡೆ ಮಾಡಿದ್ದೇವೆ. ಈ ಹಾಡು ಕೂಡ ಎಲ್ಲರ ಮನ ಗೆಲ್ಲುತ್ತದೆ ಎನ್ನುತ್ತಾರೆ ಚಿತ್ರದ ನಾಯಕ, ಸಂಗೀತ ನಿರ್ದೇಶಕ ಹಾಗೂ ಗಾಯಕ ಚಂದನ್ ಶೆಟ್ಟಿ.

“ಸೂತ್ರಧಾರಿ ಬಗ್ಗೆ ಸಂಪೂರ್ಣ ವಿವರವನ್ನು ನಿರ್ದೇಶಕ ಕಿರಣ್ ಕುಮಾರ್ ನೀಡಿದರು. ನಾಯಕಿ ಅಪೂರ್ವ, ನಟರಾದ ಪ್ರಶಾಂತ್ ನಟನ, ಗಿರೀಶ್, ಗಣೇಶ್ ನಾರಾಯಣ್ ಮುಂತಾದವರು ತಮ್ಮ ಪಾತ್ರದ ಕುರಿತು ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿವೇದಿತಾ ಚಂದನ್ ಶೆಟ್ಟಿ, ನಿರ್ಮಾಪಕರಾದ ಸಂಜಯ್ ಗೌಡ, ಚೇತನ್ ಗೌಡ, ರಾಜೇಶ್, ಗೋವಿಂದರಾಜು ಹಾಗೂ ನಿರ್ದೇಶಕ ಮಹೇಶ್ ಕುಮಾರ್ “ಸೂತ್ರಧಾರಿ” ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು.

Categories
ಸಿನಿ ಸುದ್ದಿ

ನಿರ್ಭಯ 2 ಇದು ಹೆಣ್ಣಿನ ಮೇಲಿನ ಶೋಷಣೆ ಕುರಿತ ಚಿತ್ರ: ಮೋಷನ್ ಪೋಸ್ಟರ್ ರಿಲೀಸ್

ರೆತಿಕ್ಷ ಫಿಲಂಸ್ ಬ್ಯಾನರ್ ಅಡಿಯಲ್ಲಿ ಬಾಲಕೃಷ್ಣ ಕೆ.ಆರ್ ನಿರ್ಮಿಸಿರುವ, ರಾಜು ಕುಣಿಗಲ್ ನಿರ್ದೇಶನದ ಹಾಗೂ ಶ್ರಾವ್ಯ ರಾವ್ ಪ್ರಮುಖಪಾತ್ರದಲ್ಲಿ ನಟಿಸಿರುವ “ನಿರ್ಭಯ 2” ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ‌.|ವಿ.ನಾಗೇಂದ್ರಪ್ರಸಾದ್ಮೋ ಷನ್ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ.

ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದ ವಿ ನಾಗೇಂದ್ರ ಪ್ರಸಾದ್ ಮಾತನಾಡಿ, ಸಮಾಜದಲ್ಲಿ ನಡೆಯುತ್ತಿರುವ ಹೆಣ್ಣಿನ ಮೇಲಿನ ದೌರ್ಜನ್ಯ ಪ್ರಮುಖವಾಗಿ ಅತ್ಯಾಚಾರ ಈ ಎಲ್ಲಾ ಶೋಷಣೆಗಳು ಕಡಿಮೆಯಾಗಲಿ ಅಂತ್ಯವಾಗಲಿ ಎಂದು ಹರಸಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ಚಿತ್ರದಲ್ಲಿ ಶ್ರಾವ್ಯ ರಾವ್ , ಅರ್ಜುನ್ ಕೃಷ್ಣ, ಕುಸುಮ, ಹರೀಶ್ ಜಲೀಲ ಮುಂತಾದವರಿದ್ದಾರೆ. ತುಮಕೂರು, ಬೆಂಗಳೂರು ಚಿಕ್ಕಮಗಳೂರಿನಲ್ಲಿ ಚಿತ್ರೀಕರಣ ನಡೆದಿದೆ‌.

ಹೆಣ್ಣಿನ ಮೇಲಿನ ಶೋಷಣೆಗಳನ್ನು ತಡೆಯುವಂತ ಕಥಾಹಂದರವನ್ನು ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ರಾಜು ಕುಣಿಗಲ್ ಅವರೆ ಕಥೆ ಚಿತ್ರಕಥೆ ಬರೆದಿದ್ದಾರೆ. ಆಕಾಶ್ ಪರ್ವ ಸಂಗೀತ ನೀಡಿದ್ದಾರೆ. ಅಕ್ಟೋಬರ್ ತಿಂಗಳಲ್ಲಿ ಚಿತ್ರ ತೆರೆಗೆ ಬರಲಿದೆ

Categories
ಸಿನಿ ಸುದ್ದಿ

ಇದು ರೈತರ ಮಕ್ಕಳ ಸಿನಿಮಾ: ಅವರೂ ಬೆಳೀಬೇಕು! ಜವಾರಿ ಹುಡುಗರ ಒಂಥರಾ ಲೈಲಾ, ಮಜ್ನು ಸ್ಟೋರಿ!!

ಯಲ್ಲು ಪುಣ್ಯಕೋಟಿ ಅವರ ನಿರ್ದೇಶನದ ಅವಳು ಲೈಲಾ ಅಲ್ಲ ನಾನು ಮಜ್ನು ಅಲ್ಲ ಚಿತ್ರದ ಡ್ಯುಯೆಟ್ ಹಾಡು ಬಿಡುಗಡೆಯಾಗಿದೆ. ಫಿಲಂ ಚೇಂಬರ್ ಅಧ್ಯಕ್ಷ ಭಾ.ಮ. ಹರೀಶ್ ಸಾಂಗ್ ರಿಲೀಸ್ ಮಾಡಿ ಶುಭ ಹಾರೈಸಿದ್ದಾರೆ. ಅಜಯ್ ಈ ಚಿತ್ರದ ನಾಯಕನಾಗಿದ್ದು, ನಿಹಾರಿಕಾ, ಅಶ್ವಿನಿ ನಾಯಕಿಯರಾಗಿ ಅಭಿನಯಿಸಿದ್ದಾರೆ. ಡಿಂಗ್ರಿ ನರೇಶ್ ನಾಯಕನ ಸ್ನೇಹಿತನಾಗಿ ಕಾಣಿಸಿಕೊಂಡಿದ್ದಾರೆ.

ಚಿತ್ರದ ನಾಯಕ ಹಾಗು ನಿರ್ಮಾಪಕ ಅಜಯ್ ಮಾತನಾಡಿ, ನನ್ನ ತಂದೆಯೂ ಒಬ್ಬ ರಂಗಭೂಮಿ ಕಲಾವಿದರು, ಅವರನ್ನು ನೋಡಿ ಬೆಳೆದ ನನಗೆ ನಟನೆ ಅಂದರೆ ಮೊದಲಿಂದಲೂ ಬಹಳ ಇಷ್ಟ, ರಾಯಚೂರಿನಲ್ಲಿ ಕಾಲೇಜ್ ಮುಗಿಸಿ ಕೆಎಎಸ್ ತರಬೇತಿಗಾಗಿ ಬೆಂಗಳೂರಿಗೆ ಬಂದಿದ್ದೆ, ಆಗಲೇ ನೀನಾಸಂ ಆಫರ್ ಬಂತು. ನಂತರ ನೀನಾಸಂನಲ್ಲಿ ಆಕ್ಟಿಂಗ್ ತರಬೇತಿ ಪಡೆದು, ಸಾಕಷ್ಟು ಆಡಿಷನ್ ಅಟೆಂಡ್ ಮಾಡಿದೆ, ನಂತರ ನಾವೇ ಬಂಡವಾಳ ಹೂಡಿ ಸಿನಿಮಾ ಆರಂಭಿಸಿದೆವು.

ಚಿತ್ರವನ್ನು ಕೋವಿಡ್‌ಗೂ ಮುಂಚೆಯೇ ಶುರು ಮಾಡಿದ್ದೆವು. 16ರಿಂದ 24 ವರ್ಷದ ಹುಡುಗ, ಹುಡುಗಿಯರ ಕುರಿತಾದ ಚಿತ್ರ. ಯಲ್ಲು ಅವರು ಒಳ್ಳೇ ಕಥೆ ಮಾಡಿಕೊಂಡು, ನಿರ್ದೇಶನ ಮಾಡಿದ್ದಾರೆ, ಸಂತು ಎಂಬ ಸಾಫ್ಟ್ ಹಾಗೂ ರಫ್ ಕ್ಯಾರೆಕ್ಟರ್ ಹುಡುಗನಾಗಿ ಎರಡು ಶೇಡ್ ಇರುವ ಪಾತ್ರಗಳಲ್ಲಿ ನಾನು ಕಾಣಿಸಿಕೊಂಡಿದ್ದೇನೆ, ಆತ ಹೈಸ್ಕೂಲಿನಲ್ಲಿದ್ದಾಗ, ನಂತರ ಕಾಲೇಜಿಗೆ ಹೋದ ಮೇಲೆ, ಆತನ ಜೀವನದಲ್ಲಿ ಪ್ರೀತಿ ಪ್ರೇಮದ ವಿಷಯದಲ್ಲಿ ಏನೇನೆಲ್ಲ ಘಟನೆಗಳು ನಡೆದವು ಎನ್ನುವುದೇ ಚಿತ್ರದ ಕಥೆ.

ಲವ್, ಸೆಂಟಿಮೆಂಟ್ ಜೊತೆಗೆ ಒಂದಷ್ಟು ಸಸ್ಪೆನ್ಸ್ ಕೂಡ ಚಿತ್ರದಲ್ಲಿದೆ, ಜೊತೆಗೆ 4 ಹಾಡುಗಳಿದ್ದು, ಕೌಶಿಕ್ ಸಂಗೀತ ಸಂಯೋಜನೆ ಮಾಡಿದ್ದಾರೆ. ನಾವು ಆಕಸ್ಮಿಕವಾಗಿ ಏನಾದರೂ ಮಾತನ್ನು ಹೇಳಿದರೆ, ಅದು ಆತನ ಲೈಫ್‌ನಲ್ಲಿ ಹೇಗೆ ರಿಫ್ಲೆಕ್ಟ್ ಆಗುತ್ತದೆಂದು ನಮ್ಮ ಚಿತ್ರ ಹೇಳುತ್ತದೆ ಎಂದು ವಿವರಿಸಿದರು.

ನಿರ್ದೇಶಕ ಯಲ್ಲು ಪುಣ್ಯಕೋಟಿ ಮಾತನಾಡಿ, ನಾನೂ ಸಹ ಕೊಪ್ಪಳದವನು, ನ‌ನಗೆ ಕಥೆ ಬರೆಯೋ ಹವ್ಯಾಸ ಮೊದಲಿಂದಲೂ ಇತ್ತು. ನಿರ್ದೇಶನದ ಬಗ್ಗೆ ಹೈದರಾಬಾದ್ ಕಡೆ ಹೋಗಿ ಒಂದಷ್ಟು ಕಲಿತೆ, ನಂತರ ಟಿವಿಯಲ್ಲಿ ವರ್ಕ್ ಮಾಡುವಾಗ ಅಜಯ್ ಸಿಕ್ಕರು, ನಾನು ಮಾಡಿಕೊಂಡಿದ್ದ ಕಥೆಯನ್ನು ಹೇಳಿದಾಗ ಅವರೂ ಒಪ್ಪಿದರು.

ಹಳ್ಳಿ ಮತ್ತು ನಗರದಲ್ಲಿ ನಡೆಯುವ ಕಥೆ, ಚಿತ್ರದುರ್ಗ, ಹೊಸಪೇಟೆ, ಬೆಂಗಳೂರು, ಹಿರಿಯೂರು, ಬಳ್ಳಾರಿ, ರಾಯಚೂರು ಕೊಪ್ಪಳ ಸುತ್ತಮುತ್ತ ಚಿತ್ರೀಕರಣ ಮಾಡಿದ್ದೇವೆ, ಹೈಸ್ಕೂಲ್ ಎಪಿಸೋಡನ್ನು ಚಿಕ್ಕಮಗಳೂರಲ್ಲಿ ಶೂಟ್ ಮಾಡಿದ್ದೇವೆ, ಚಿತ್ರವೀಗ ಬಿಡುಗಡೆಗೆ ಸಿದ್ದವಾಗಿದ್ದು ಸೆ.8ಕ್ಕೆ ಬಿಡುಗಡೆಯಾಗುತ್ತಿದೆ ಎಂದರು.

Categories
ಸಿನಿ ಸುದ್ದಿ

ಯಥಾಭವ ಎಂಬ ಕೋರ್ಟ್ ರೂಮ್ ಜಾನರ್ ಸಿನಿಮಾ: ಟೀಸರ್ ರಿಲೀಸ್ ಆಯ್ತು

ಗೌತಮ್ ಬಸವರಾಜು ನಿರ್ಮಿಸಿ, ನಿರ್ದೇಶಿಸಿರುವ “ಯಥಾಭವ” ಚಿತ್ರದ ಟೀಸರ್ ವರಮಹಾಲಕ್ಷ್ಮೀ ಹಬ್ಬದಂದು ಬಿಡುಗಡೆಯಾಗಿದೆ

ಈ ಚಿತ್ರದ ಕಥೆ ಹೈದರಾಬಾದ್ ಸಿದ್ದವಾಗಿದೆ. ಆ ಬಳಿಕ ಶೂಟಿಂಗ್ ಚಟುವಟಿಕೆ ಶುರುವಾಗಿದೆ. ಮಾಡಿದೆ. ಈ ಕುರಿತು ಹೇಳುವ ನಿರ್ದೇಶಕ ರು, ಇಪ್ಪತ್ತೊಂದು ದಿನಗಳಲ್ಲಿ ಚಿತ್ರೀಕರಣ ಪೂರ್ಣ ಮಾಡಿದ್ದೇವೆ‌. “ಯಥಾಭವ” ಕೋರ್ಟ್ ರೂಮ್ ಜಾನರ್ ನ ಚಿತ್ರವಾಗಿದ್ದು, ಶೇಕಡಾ 70 ರಷ್ಟು ಭಾಗದ ಚಿತ್ರೀಕರಣ ಕೋರ್ಟ್ ನಲ್ಲೇ ನಡೆಯುತ್ತದೆ. ನ್ಯಾಯಾಧೀಶರಾಗಿ ಹಿರಿಯ ನಟ ದತ್ತಣ್ಣ ಅಭಿನಯಿಸಿದ್ದಾರೆ ‌. ಗೋಪಾಲಕೃಷ್ಣ ದೇಶಪಾಂಡೆ ವಕೀಲರಾಗಿ ಹಾಗೂ ಬಾಲ ರಾಜವಾಡಿ ಅವರು ಗೃಹ ಮಂತ್ರಿಗಳ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಪವನ್ ಶಂಕರ್, ಸಹನ ಸುಧಾಕರ ಈ ಚಿತ್ರದ ನಾಯಕ, ನಾಯಕಿಯಾಗಿ ನಟಿಸಿದ್ದು, ನಟ ರಾಕ್ ಲೈನ್ ಸುಧಾಕರ್ ಅವರ ಪುತ್ರ ಗೌತಮ್ ಸುಧಾಕರ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ನಾಲ್ಕು ಹಾಡುಗಳಿದೆ. ಎ2 ಮ್ಯೂಸಿಕ್ ಮೂಲಕ ಟೀಸರ್ ಬಿಡುಗಡೆಯಾಗಿ, ಎಲ್ಲರ ಮನಸೂರೆಗೊಳ್ಳುತ್ತಿದೆ. ಹೈದರಾಬಾದ್ ಹಾಗೂ ಮುಂಬೈನಲ್ಲಿ ಪೋಸ್ಟ್ ಪ್ರೊಡಕ್ಷನ್ ವರ್ಕ್ ನಡೆಯುತ್ತಿದೆ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದೆ ಎಂದರು ನಿರ್ಮಾಪಕ ಹಾಗೂ ನಿರ್ದೇಶಕ ಗೌತಮ್ ಬಸವರಾಜು.

ಕನ್ನಡದಲ್ಲಿ ಈಗ ಹೊಸ ಹೊಸ ಪ್ರತಿಭೆಗಳ ಅನಾವರಣವಾಗುತ್ತಿದೆ. ಹೊಸ ಚಿತ್ರಗಳು ಗೆಲ್ಲುತ್ತಿದೆ. ನಾನು ಈ ಚಿತ್ರದಲ್ಲಿ ಜಡ್ಜ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ‌. ಈ ಚಿತ್ರದ ಬಹುತೇಕರು ಸಿನಿಮಾ ಕುರಿತು ಓದಿಕೊಂಡಿರುವವರು. ಈ ಚಿತ್ರತಂಡದೊಂದಿಗೆ ಕೆಲಸ ಮಾಡಿದ್ದು ಸಂತೋಷವಾಗಿದೆ ಎಂದು ಹಿರಿಯನಟ ದತ್ತಣ್ಣ ತಿಳಿಸಿದರು.

ಗೃಹ ಸಚಿವನ ಪಾತ್ರ ನನ್ನದು. ಚಿತ್ರದಲ್ಲಿ ನಾಯಕಿಯ ತಂದೆಯೂ ಹೌದು ಎಂದರು ನಟ ಬಾಲ ರಾಜವಾಡಿ.

ಇದು ನನ್ನ ಮೊದಲ ಚಿತ್ರ . ಎಲ್ಲರೂ ಪ್ರೋತ್ಸಾಹ ನೀಡಿ ಎಂದು ನಾಯಕ ಪವನ್ ಶಂಕರ್ ಹೇಳಿದರು. ಈ ಚಿತ್ರದಲ್ಲಿ ಪತ್ರಕರ್ತೆಯಾಗಿ ಕಾಣಿಸಿಕೊಂಡಿದ್ದೇನೆ ಎಂದು ನಾಯಕಿ ಸಹನ ಸುಧಾಕರ್ ತಿಳಿಸಿದರು. ನಾನು ಹಾಗೂ ನಿರ್ದೇಶಕ ಗೌತಮ್ ಬಸವರಾಜು ಬಾಲ್ಯ ಸ್ನೇಹಿತರು. ಸ್ನೇಹಿತನಿಗಾಗಿ ಈ ಚಿತ್ರದಲ್ಲಿ ಅಭಿನಯಿಸಿದ್ದೇನೆ ಎನ್ನುತ್ತಾರೆ ಪ್ರಮುಖ ಪಾತ್ರಧಾರಿ ಗೌತಮ್ ಸುಧಾಕರ್.

ಕಲಾವಿದರಾದ ನೀನಾಸಂ ಆನಂದ್, ಮಹೇಶ್ ಕಲಿ, ಯಶಸ್ವಿನಿ ರವೀಂದ್ರ, ಮಾಸ್ಟರ್ ಶಮಂತ್ ತಮ್ಮ ಪಾತ್ರ ಕುರಿತು ಮಾತನಾಡಿದರು.

.

Categories
ಸಿನಿ ಸುದ್ದಿ

ಅವರೆಲ್ರೂ ದೇವರ ಹೆಸರಲ್ಲಿ ಪ್ರಮಾಣ ಮಾಡ್ತಾರೆ! ಹೊಸಬರ ಸಿನಿಮಾ ಪೋಸ್ಟರ್ ರಿಲೀಸ್

ಕನ್ನಡಚಿತ್ರರಂಗದಲ್ಲೀಗ ಹೊಸಬರ ಆಗಮನದಿಂದ ಹೊಸತನವೆದ್ದಿದೆ. ಅದರ ಮುಂದುವರೆದ ಭಾಗವಾಗಿ ರೂಪಗೊಂಡಿರುವ ಸಿನಿಮಾ ‘ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ.

ಒಂದಷ್ಟು ಕಿರುಚಿತ್ರಗಳನ್ನು ನಿರ್ದೇಶಿಸಿರುವ, ಸೆಕೆಂಡ್ ಹಾಫ್ ಹಾಗೂ ಗಾಂಧಿ ಮತ್ತು ನೋಟು ಸಿನಿಮಾದ ಬರಹಗಾರರಾಗಿ ಹಾಗೂ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ಅನುಭವವಿರುವ ಗುರುಪ್ರಸಾದ್ ಚಂದ್ರಶೇಖರ್ ‘ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ’ ಚಿತ್ರದ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟು ನಿರ್ದೇಶನಕ್ಕಿಳಿದಿದ್ದಾರೆ. ಈ ಚಿತ್ರದ ಹೊಸ ಪೋಸ್ಟರ್ ವರಮಹಾಲಕ್ಷ್ಮೀ ಹಬ್ಬಕ್ಕೆ ಅನಾವರಣಗೊಂಡಿದೆ.

ಸೋಷಿಯೋ ಪೊಲಿಟಿಕಲ್ ಲಿಗ್ವಿಸ್ಟಿಕ್ ಡ್ರಾಮಾ ಕಥಾಹಂದರ ಹೊಂದಿರುವ ‘ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ’ ಸಿನಿಮಾ ಶೂಟಿಂಗ್ ಹಂತದಲ್ಲಿದ್ದು, ಕವಿರತ್ನ ವಿ.ನಾಗೇಂದ್ರ ಪ್ರಸಾದ್, ಬಾಲ ರಾಜವಾಡಿ, ವೈಜನಾಥ್ ಬಿರಾದಾರ್, ಅಶ್ವಿತಾ ಹೆಗ್ಡೆ, ಡಿಂಪನ ಜೀವನ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಭಾಷೆ ವಿಚಾರದ ಸುತ್ತ ಸಾಗುವ ಈ ಚಿತ್ರಕ್ಕೆ ಬಿ.ಶಿವಶಂಕರ್, ದತ್ತಾತ್ರೇಯ ವಿ ಜಮಾದಾರ್ ಬಂಡವಾಳ ಹೂಡಿದ್ದಾರೆ. ಶಿವಶಂಕರ್ ನೂರಬಂಡ ಛಾಯಾಗ್ರಹಣ, ಚರಣ್ ಅರ್ಜುನ್ ಸಂಗೀತ, ಡಾ.ವಿ. ನಾಗೇಂದ್ರ ಪ್ರಸಾದ್ ಸಾಹಿತ್ಯ, ಮಧು ತುಂಬಕೆರೆ ಸಂಕಲನ ಚಿತ್ರಕ್ಕಿದೆ.

ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ ಸಿನಿಮಾ ಕನ್ನಡದ ಜೊತೆಗೆ ತೆಲುಗು ಭಾಷೆಯಲ್ಲಿಯೂ ತಯಾರಾಗುತ್ತಿದೆ. ಕನ್ನಡ ಹಾಗೂ ತೆಲುಗು ಭಾಷೆಯಲ್ಲಿಯೂ ಹೊಸ ಪೋಸ್ಟರ್ ಹಬ್ಬದ ವಿಶೇಷವಾಗಿ ರಿಲೀಸ್ ಆಗಿದೆ.

Categories
ಸಿನಿ ಸುದ್ದಿ

ಇವರೇ ಹುಲಿ ನಾಯಕ! ಡಿ.ಜೆ.ಚಕ್ರವರ್ತಿ ಸಿನಿಮಾ ಶೀರ್ಷಿಕೆ ರಿಲೀಸ್ ಮಾಡಿದ ಉಪೇಂದ್ರ

ಪತ್ರಕರ್ತ, ನಟ.ಚಕ್ರವರ್ತಿ ನಿರ್ದೇಶನದ ಹಾಗೂ ಮಿಲಿಂದ್ ಗೌತಮ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ಹೆಸರು “ಹುಲಿ ನಾಯಕ”

ನಟ ಉಪೇಂದ್ರ ಅವರು ತುಂಬು ಪ್ರೀತಿಯಿಂದ ಮಯೂರ ಮೋಶನ್ ಪಿಕ್ಚರ್ಸ್ ಬ್ಯಾನರ್ ನಲ್ಲಿ ಮಂಜುನಾಥ್ ನಿರ್ಮಿಸುತ್ತಿರುವ, ಡಿ.ಜೆ ಚಕ್ರವರ್ತಿ ನಿರ್ದೇಶನದ ಹಾಗೂ ಮಿಲಿಂದ್ ಗೌತಮ್ ನಾಯಕರಾಗಿ ನಟಿಸಲಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣಗೊಳಿಸಿದ್ದಾರೆ.

ಚಿತ್ರದ ಹೆಸರು “ಹುಲಿ ನಾಯಕ” ಎಂದು ಘೋಷಣೆ ಮಾಡಿದ ಉಪೇಂದ್ರ ಅವರು, ಈ ಐತಿಹಾಸಿಕ ಚಿತ್ರ ಯಶಸ್ವಿಯಾಗಲಿ‌. ನಿರ್ದೇಶಕ ಡಿ.ಜೆ.ಚಕ್ರವರ್ತಿ, ನಿರ್ಮಾಪಕ ಮಂಜುನಾಥ್ ಹಾಗೂ ನಾಯಕ ಮಿಲಿಂದ್ ಗೌತಮ್ ಅವರಿಗೆ ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ.

Categories
ಸಿನಿ ಸುದ್ದಿ

ಪೌಡರ್ ಹಚ್ಚಿಕೊಂಡ‌ ದಿಗಂತ್! ಶರ್ಮಿಳಾ, ಧನ್ಯಾ ಕೈಯಲ್ಲೂ ಪೌಡರ್!! ಕಾಮಿಡಿ ಸಿನಿಮಾಗೆ ಕಿಚ್ಚ ಕ್ಲಾಪ್

ಕೆ ಆರ್ ಜಿ ಸ್ಟುಡಿಯೋಸ್, ಟಿವಿಎಫ್ ಮೋಷನ್ ಪಿಕ್ಚರ್ಸ್ ಸಂಸ್ಥೆಯ ಜೊತೆಗೆ ಕೈಜೋಡಿಸಿ ಜಂಟಿಯಾಗಿ ಚಿತ್ರ ನಿರ್ಮಾಣ ಮಾಡುವುದಾಗಿ ಘೋಷಿಸಿತ್ತು. ಅದರ ಮೊದಲ ಹಂತವಾಗಿ ಇಂದು ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಈ ಎರಡೂ ಸಂಸ್ಥೆಗಳು ಜಂಟಿಯಾಗಿ ನಿರ್ಮಿಸುತ್ತಿರುವ ಮೊದಲ ಚಿತ್ರ ಪ್ರಾರಂಭವಾಗಿದೆ. ಅದೇ “ಪೌಡರ್”.

ಕಿಚ್ಚ ಸುದೀಪ್ ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡುವ ಮೂಲಕ ಚಾಲನೆ ನೀಡಿದ್ದಾರೆ. ನಿರ್ಮಾಪಕ ಕಾರ್ತಿಕ್
ಗೌಡ ಅವರ ತಂದೆ ರಾಮಕೃಷ್ಣೇಗೌಡ ಕ್ಯಾಮೆರಾ ಸ್ವಿಚ್ ಆನ್ ಮಾಡಿದ್ದಾರೆ. ಈ ಸಂದರ್ಭದಲ್ಲಿ ಧನಂಜಯ್, ಸಂತೋಷ್ ಆನಂದರಾಮ್, ರೋಹಿತ್ ಪದಕಿ, ಧೀರೇನ್ ರಾಮಕುಮಾರ್, ನವೀನ್ ಶಂಕರ್, ಕೆ.ಮಂಜು, ಭೂಮಿ ಶೆಟ್ಟಿ, ನಾಗಭೂಷಣ್, ಟಿವಿಎಫ್ ಸಂಸ್ಥಾಪಕರಾದ ಅರುಣಭ್ ಕುಮಾರ್, ವಿಜಯ್ ಕೋಶಿ, ಚೈತನ್ಯ ಕುಂಬಕೋಣಂ ಮುಂತಾದವರು ಹಾಜರಿದ್ದರು.

“ಪೌಡರ್” ಒಂದು ಹಾಸ್ಯಮಯ ಚಿತ್ರವಾಗಿದ್ದು, ಒಂದು ಸಣ್ಣ ಊರಿನ ಯುವಕರಿಗೆ ದೊಡ್ಡ ಪ್ರಮಾಣದ ಕೊಕೇನ್ ಸಿಗುತ್ತದೆ. ಒಂದು ಕಡೆ ಆ ಕೊಕೇನ್ ಗಾಗಿ ಹುಡುಕಾಟದಲ್ಲಿರುವ ದುಷ್ಟರ ಗುಂಪು. ಇನ್ನೊಂದು ಕಡೆ ಆ ಕೊಕೇನ್ ಮಾರಿ ದಿಢೀರ್ ಶ್ರೀಮಂತರಾಗಬೇಕೆಂಬ ಯುವಕರ ಗುಂಪು. ಮತ್ತೊಂದು ಕಡೆ ತಮ್ಮ ಅಧಿಪತ್ಯ ಸ್ಥಾಪಿಸುವುದಕ್ಕೆ ಪ್ರಯತ್ನಿಸುತ್ತಿರುವ ಒಬ್ಬ ಮಾಸ್ಟರ್ ಮೈಂಡ್. ಈ ಹಾವು-ಏಣಿ ಆಟದಲ್ಲಿ ಗೆಲ್ಲುವವರು ಯಾರು? ಎಂದು ಮನರಂಜನಾತ್ಮಕವಾಗಿ ಹೇಳುವ ಪ್ರಯತ್ನವನ್ನು ಈ ಚಿತ್ರದಲ್ಲಿ ಮಾಡಲಾಗುತ್ತಿದೆ.

ಜನಾರ್ದನ್ ಚಿಕ್ಕಣ್ಣ ನಿರ್ದೇಶನದ ಈ ಬಹುತಾರಾಗಣದ ಚಿತ್ರದಲ್ಲಿ ದಿಗಂತ್, ಧನ್ಯ ರಾಮಕುಮಾರ್, ಶರ್ಮಿಳಾ ಮಾಂಡ್ರೆ, ಅನಿರುದ್ಧ್ ಆಚಾರ್ಯ, ರಂಗಾಯಣ ರಘು, ಅಚ್ಯುತ್ ಕುಮಾರ್, ರವಿಶಂಕರ್ ಗೌಡ ಮುಂತಾದವರು ನಟಿಸಿರುವ ಈ ಚಿತ್ರಕ್ಕೆ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಸೀನ್ ರೋಲ್ಡನ್ ಸಂಗೀತ ಸಂಯೋಜಿಸುತ್ತಿದ್ದಾರೆ. ದೀಪಕ್ ವೆಂಕಟೇಶನ್ ಕಥೆ-ಚಿತ್ರಕಥೆ ಬರೆದಿರುವ ಈ ಚಿತ್ರಕ್ಕೆ ಶಾಂತಿ ಸಾಗರ್ ಅವರ ಛಾಯಾಗ್ರಹಣವಿದೆ.

ನಮ್ಮ ಕೆ.ಆರ್.ಜಿ ಸ್ಟುಡಿಯೋಸ್ ಹಾಗೂ ಟಿವಿಎಫ್ ಜಂಟಿಯಾಗಿ ನಿರ್ಮಾಣ ಮಾಡುತ್ತಿರುವ ಮೊದಲ ಚಿತ್ರ “ಪೌಡರ್”. ಬಹು ತಾರಾಗಣವಿರುವ ಈ ಚಿತ್ರದ ಚಿತ್ರೀಕರಣ ಸೆಪ್ಟೆಂಬರ್ ನಲ್ಲಿ ಆರಂಭವಾಗಲಿದೆ. 2024ರ ಏಪ್ರಿಲ್ 5 ಚಿತ್ರ‌ ಬಿಡುಗಡೆಯಾಗಲಿದೆ ಎಂದು ಕೆ ಆರ್ ಜಿ ಸ್ಟುಡಿಯೋಸ್ ನ ಕಾರ್ತಿಕ್ ಗೌಡ ತಿಳಿಸಿದರು.

ಕೆ.ಆರ್‌.ಜಿ ಸ್ಟುಡಿಯೋಸ್ ಜೊತೆಗೂಡಿ ಈ ಚಿತ್ರ ನಿರ್ಮಾಣ ಮಾಡುತ್ತಿರುವುದಕ್ಕೆ ಟಿವಿಎಫ್ ಸಂಸ್ಥೆಯ ಅರುಣಭ್ ಕುಮಾರ್ ಸಂತಸ ವ್ಯಕ್ತಪಡಿಸಿದರು.

ಕಾಮಿಡಿ ಜಾನರ್ ನ ಈ ಕಥೆ ಎಲ್ಲರಿಗೂ ಹಿಡಿಸಲಿದೆ ಎಂದರು ನಿರ್ದೇಶಕ ಜನಾರ್ದನ್ ಚಿಕ್ಕಣ್ಣ.

ಕೆ.ಆರ್.ಜಿ ಸ್ಟುಡಿಯೋಸ್ ಹಾಗೂ ಟಿವಿಎಫ್ ಎರಡು ದೊಡ್ಡ ಸಂಸ್ಥೆಗಳು ಸೇರಿ ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ನಟಿಸುತ್ತಿರುವುದು ಖುಷಿಯ ವಿಚಾರ ಎನ್ನುತ್ತಾರೆ ನಾಯಕ ದಿಗಂತ್.

ಶರ್ಮಿಳಾ ಮಾಂಡ್ರೆ, ಧನ್ಯ, ಅನಿರುದ್ಧ್ ಆಚಾರ್ಯ, ಅಚ್ಯುತ ಕುಮಾರ್, ರವಿಶಂಕರ್ ಗೌಡ ಮುಂತಾದ ಕಲಾವಿದರು “ಪೌಡರ್” ಬಗ್ಗೆ ಮಾತನಾಡಿದರು.

error: Content is protected !!