Categories
ಸಿನಿ ಸುದ್ದಿ

ನಿಗೂಢ ಸೆಟ್ ನಲ್ಲಿ ಸಾಂಗ್ ಶೂಟಿಂಗ್: ಎಲ್ಲೋ ಜೋಗಪ್ಪ ನಿನ್ನರಮನೆ ಚಿತ್ರೀಕರಣ ಮುಕ್ತಾಯ

ಹಯವದನ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಚೊಚ್ಚಲ ಸಿನಿಮಾ ಎಲ್ಲೋ ಜೋಗಪ್ಪ ನಿನ್ನರಮನೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿದ್ದ ಚಿತ್ರತಂಡ ಒಂದು ಹಾಡಿನ ಚಿತ್ರೀಕರಣವನ್ನಷ್ಟೇ ಬಾಕಿ ಉಳಿಸಿಕೊಂಡಿತ್ತು. ಈಗ ಆ ಹಾಡಿನ ಶೂಟಿಂಗ್ ಕೂಡ‌ ಕಂಪ್ಲೀಟ್ ಮಾಡಲಾಗಿದೆ. ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ಕಲಾ ನಿರ್ದೇಶಕ ಹೊಸಮನೆ ಮೂರ್ತಿ ಹಾಕಿದ್ದ ಅದ್ಧೂರಿ ಸೆಟ್ ಹಾಕಿ ಮಾಸ್ ಸಾಂಗ್ ಚಿತ್ರೀಕರಿಸಿದೆ. ಹೌದ ಹುಲಿಯಾ ಹೌದೌದು ಎಂಬ ಹಾಡಿಗೆ ಮೋಹನ್ ಮಾಸ್ಟರ್ ಕೋರಿಯೋಗ್ರಫಿ ನೃತ್ಯ ಸಂಯೋಜನೆಯಲ್ಲಿ ನಾಯಕ ಅಂಜನ್ ಭರ್ಜರಿಯಾಗಿ ಹೆಜ್ಜೆ ಹಾಕಿದ್ದಾರೆ.

ನಿರ್ದೇಶಕ ಹಯವದನ ಮಾತನಾಡಿ, ಹೌದ ಹುಲಿಯಾ ಎಂಬ ಮಾಸ್ ಸಾಂಗ್ ಚಿತ್ರೀಕರಣ ನಡೆಸಲಾಗಿದೆ. ಸಿನಿಮಾದ ಕೊನೆಯ ದಿನದ ಚಿತ್ರೀಕರಣ. ಎಲ್ಲೋ ಜೋಗಪ್ಪ ನಿನ್ನ ಅರಮನೆ ಸಿನಿಮಾ ಬೆಂಗಳೂರಿನಿಂದ ಶುರುವಾಗಿ ಉತ್ತರದ ಕಡೆ ಹೋಗುತ್ತದೆ. ಬಹಳಷ್ಟು ಜಾಗ. ಬಹಳಷ್ಟು ರಾಜ್ಯಗಳಲ್ಲಿ ಶೂಟ್ ಆಗಿದೆ. ಕಥೆಯ ಮೂಲ ಪಾತ್ರ ಹೋಗಿ ತಲುಪುವುದು ಹಿಮಾಲಯದಲ್ಲಿ. ಅದಕ್ಕೊಂದು ಉದ್ದೇಶ-ಕಾರಣವಿದೆ. ಈ ಚಿತ್ರ ಎಲ್ಲರಿಗೂ‌ ಕನೆಕ್ಟ್ ಆಗುತ್ತದೆ. ಎಲ್ಲೋ‌ ಜೋಗಪ್ಪ ನಿನ್ನ ಅರಮನೆ ಜನಪದ ಹಾಡಿಗೆ, ಶಿವಣ್ಣ ಜೋಗಿ ಸಿನಿಮಾದ ಹಾಡಿನ ಮೂಲಕ ಖ್ಯಾತಿ ಪಡೆದಿದೆ. ಎರಡನ್ನು ಜಸ್ಟಿಫೈ ಮಾಡಿಕೊಂಡು, ಆ ಟೈಟಲ್ ಗೆ ನಮ್ಮ ಕಥೆ ನ್ಯಾಯ ಸಲ್ಲಿಸುತ್ತದೆ ಎಂಬ ನಂಬಿಕೆ‌ ನನಗೆ ಇದೆ ಎಂದರು.

ನಾಯಕ ಅಂಜನ್ ನಾಗೇಂದ್ರ ಮಾತನಾಡಿ, ಎಲ್ಲೋ‌ ಜೋಗಪ್ಪ ನಿನ್ನ ಅರಮನೆ ಸಿನಿಮಾಗಾಗಿ‌ ಇಡೀ ಇಂಡಿಯಾ ಸುತ್ತಿದ್ದೇನೆ. ಇದೊಂದು ಜರ್ನಿ ಕಥೆ. ಅಪ್ಪ-ಮಗನ ಬಾಂಧವ್ಯ ಹೇಳುವ ಕಥೆ. ಬೆಂಗಳೂರಿನಿಂದ ಶುರುವಾದ ಜರ್ನಿ ಹಿಮಾಲಯ ತನಕ ಹೋಗುತ್ತದೆ. ಒಂದೊಳ್ಳೆ ಎಮೋಷನಲ್ ಸಿನಿಮಾ. ಯೂತ್ ಫುಲ್ ಎಂಟರ್ ಟೈನರ್ ಎಂದರು.

ಎಲ್ಲೋ ಜೋಗಪ್ಪ ನಿನ್ನರಮನೆ ಒಂದು ಜರ್ನಿಯ ಕಥೆ. ತಂದೆ-ಮಗನ ನಡುವಿನ ಭಾವನಾತ್ಮಕ ಸಂಬಂಧ ಈ ಸಿನಿಮಾ ಹೈಲೈಟ್ಸ್‌. ತಂದೆಯ ಮಾತಿಗೆ ಮುನಿಸಿಕೊಂಡು ಮನೆ ಬಿಟ್ಟು ಹೋಗುವ ಹುಡುಗನ ಕಥೆ ಸಿನಿಮಾದಲ್ಲಿದೆ. ಲವ್‌, ಸೆಂಟಿಮೆಂಟ್‌, ಕಾಮಿಡಿ ಎಲ್ಲವನ್ನೂ ಒಳಗೊಂಡಿರುವ ಈ ಚಿತ್ರದಲ್ಲಿ ಅಂಜನ್ ನಾಗೇಂದ್ರಗೆ ಜೋಡಿಯಾಗಿ ಯುವ ನಟಿ ವೆನ್ಯ ರೈ ನಟಿಸ್ತಿದ್ದು, ‘ಕೆಟಿಎಂ’, ‘ಮೂನ್ ವಾಕ್’ ಹಾಗೂ ಮಲಯಾಳಂನಲ್ಲಿ ‘ಮನಸ್ಮಿತ’ ಸಿನಿಮಾದಲ್ಲಿ ನಟಿಸಿರುವ ಸಂಜನಾ ದಾಸ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಶರತ್ ಲೋಹಿತಾಶ್ವ, ಸ್ವಾತಿ, ದಾನಪ್ಪ, ಲಕ್ಷ್ಮೀ ನಾಡಗೌಡ, ದಿನೇಶ್ ಮಂಗಳೂರು,ಬಿರಾದರ್ ತಾರಾಬಳಗದಲ್ಲಿದ್ದಾರೆ.

ಪೆಂಡೋರಾಸ್ ಬಾಕ್ಸ್ ಪ್ರೊಡಕ್ಷನ್ ಹಾಗೂ ಕೃಷ್ಣಛಾಯಾ ಚಿತ್ರ ಬ್ಯಾನರ್ ನಡಿ ಪವನ್ ಸಿಮಿಕೇರಿ ಮತ್ತು ಸಿಂಧು ಹಯವದನ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಶಿವ ಪ್ರಸಾದ್ ಸಂಗೀತ ಸಂಯೋಜನೆ, ನಟರಾಜ್ ಮದ್ದಾಲ ಕ್ಯಾಮೆರಾ ವರ್ಕ್, ಹೊಸಮನೆ‌ ಮೂರ್ತಿ‌ ಕಲಾ ನಿರ್ದೇಶನ, ರವಿಚಂದ್ರನ್ ಸಂಕಲನದಲ್ಲಿ ಸಿನಿಮಾ ಮೂಡಿ ಬರಲಿದೆ. ರವೀಂದ್ರ ಮುದ್ದಿ, ಪ್ರಮೋದ್ ಮರವಂತೆ ಸಾಹಿತ್ಯ, ಭಜರಂಗಿ ಮೋಹನ್ ನೃತ್ಯ ನಿರ್ದೇಶನ, ನರಸಿಂಹ ಮಾಸ್ಟರ್ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಡಬ್ಬಿಂಗ್ ನಲ್ಲಿ ಬ್ಯುಸಿಯಾಗಿರುವ ಚಿತ್ರತಂಡ ಎಲ್ಲಾ ಕೆಲಸ ಮುಗಿಸಿ ಆದಷ್ಟು ಬೇಗ ಸಿನಿಮಾವನ್ನು ತೆರೆಗೆ ತರುವ ಯೋಜನೆ ಹಾಕಿಕೊಂಡಿದೆ.

Categories
ಸಿನಿ ಸುದ್ದಿ

ಹೀರೋ ಆಗಿದ್ದ ಡ್ಯಾನ್ಸ್ ಮಾಸ್ಟರ್ ಭೂಷಣ್ ಈಗ ಡೈರೆಕ್ಟರ್

ಚುಟು ಚುಟು ಅಂತೈತಿ, ಸಿಂಗಾರ ಸಿರಿಯೇ, ಕಣ್ಣು ಹೊಡಿಯಾಕ ಹೀಗೆ ಸಾಕಷ್ಟು ಹಾಡಿನ ಮೂಲಕ ನೃತ್ಯ ಸಂಯೋಜನೆ ಮಾಡಿ ಖ್ಯಾತಿ ಗಳಿಸಿದವರು ಭೂಷಣ್ ಮಾಸ್ಟರ್. ನಟಸಾರ್ವಭೌಮ, ಬೆಲ್ ಬಾಟಂ, ರಾಬರ್ಟ್ ಸೇರಿದಂತೆ 50ಕ್ಕೂ ಅಧಿಕ ಹಾಡುಗಳಿಗೆ ಕೋರಿಯೋಗ್ರಾಫರ್ ಆಗಿ ದುಡಿದಿರುವ ಭೂಷಣ್, ರಾಜ ರಾಣಿ ರೋರರ್ ರಾಕೆಟ್ ಸಿನಿಮಾ ಮೂಲಕ ಹೀರೋ ಆಗಿ ಭರವಸೆ ಮೂಡಿಸಿದ್ದಾರೆ.

ಈಗ ಭೂಷಣ್ ಮಾಸ್ಟರ್ ಮತ್ತೊಂದು ಹೊಸ ಹೆಜ್ಜೆ ಇಟ್ಟಿದ್ದಾರೆ. ನೃತ್ಯ‌ ನಿರ್ದೇಶನ, ನಾಯಕನಾಗಿ ಸಿನಿಮಾ ಪ್ರೇಮಿಗಳಿಗೆ ಪರಿಚಿತರಾಗಿರುವ ಅವರೀಗ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಅಂದರೆ ಭೂಷಣ್ ಮಾಸ್ಟರ್ ಸಿನಿಮಾ ನಿರ್ದೇಶನಕ್ಕಿಳಿದಿದ್ದಾರೆ. ಇಂದು ಅವರ ಹುಟ್ಟುಹಬ್ಬ. ಜನ್ಮದಿನದ ವಿಶೇಷವಾಗಿ ತಮ್ಮ ಮುಂದಿನ ನಡೆ ಬಗ್ಗೆ ಸಣ್ಣ ವಿಡಿಯೋ ತುಣುಕಿನ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಸಖತ್ ಫನ್ ಆಗಿ, ಕ್ರಿಯೇಟಿವ್ ಆಗಿ‌ ನಿರ್ದೇಶನದ ಅಖಾಡಕ್ಕಿಳಿಯುವ ಬಗ್ಗೆ ತಿಳಿಸಿದ್ದಾರೆ.

ಆದರೆ ಸಿನಿಮಾ ಯಾವುದು? ಯಾವ ಜಾನರ್? ಹೀರೋ? ಮತ್ತಿತರ ಮಾಹಿತಿ ಬಗ್ಗೆ ಗುಟ್ಟುಬಿಟ್ಟುಕೊಟ್ಟಿಲ್ಲ. ಸದ್ಯ ಭೂಷಣ್ ಮಾಸ್ಟರ್ ಕಥೆ ಬರೆಯುವುದರಲ್ಲಿ ಬ್ಯುಸಿಯಾಗಿದ್ದಾರೆ. ಡಾಕ್ಟರ್, ಇಂಜಿನಿಯರ್ ಆಗಲು ಕೋರ್ಸ್ ಬೇಕು. ಆದರೆ ಡೈರೆಕ್ಟರ್ ಆಗಲು ಫೋರ್ಸ್ ಎಂಬ ವಿಡಿಯೋ ಝಲಕ್ ಮೂಲಕ‌ ಕಿಕ್ ಕೊಟ್ಟಿರುವ ಅವರು, ಶೀಘ್ರದಲ್ಲೇ ತಮ್ಮ ಚೊಚ್ಚಲ ನಿರ್ದೇಶನದ ಸಿನಿಮಾ ಬಗ್ಗೆ ಇಂಟ್ರೆಸ್ಟಿಂಗ್ ಸಮಾಚಾರ ಹಂಚಿಕೊಳ್ಳಲಿದ್ದಾರೆ.

ಈಗಾಗಲೇ ಭಾರತೀಯ ಚಿತ್ರರಂಗದ ಮೈಕಲ್ ಜಾಕ್ಸನ್, ನೃತ್ಯ ನಿರ್ದೇಶನ, ನಟನೆ,‌ ನಿರ್ಮಾಣದ ಜೊತೆಗೆ ನಿರ್ದೇಶಕರಾಗಿಯೂ ಗೆದ್ದಿದ್ದಾರೆ. ಈಗ ಅವರ ಹಾದಿಯಲ್ಲೇ ಹೆಜ್ಜೆ ಇಡುತ್ತಿರುವ ಭೂಷಣ್ ಮಾಸ್ಟರ್ ಮೇಲೆ ನಿಮ್ಮದೊಂದು ಆಶೀರ್ವಾದ ಇರಲಿ.

Categories
ಸಿನಿ ಸುದ್ದಿ

ಡ್ಯಾನ್ಸ್ ಮಾಸ್ಟರ್ ಕಲೈ ಈಗ ಡೈರೆಕ್ಟರ್: ಪ್ರಜ್ವಲ್ ದೇವರಾಜ್ ಹೀರೋ

ರಾಜಲಕ್ಷ್ಮೀ ಎಂಟರ್ಟೈನ್ಮೆಂಟ್ ಬ್ಯಾನರ್ ನಲ್ಲಿ ಪ್ರತಿಭಾ ಅವರು ನಿರ್ಮಾಣ ಮಾಡುತ್ತಿರುವ ಹಾಗೂ ಕಲೈ ನಿರ್ದೇಶಿಸುತ್ತಿರುವ ನೂತನ ಚಿತ್ರದ ನಾಯಕರಾಗಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯಿಸುತ್ತಿದ್ದಾರೆ. ಸಾಮಾಜಿಕ ಕಳಕಳಿ ಹೊಂದಿರುವ ಕಥಾಹಂದರವನ್ನು ಈ ಚಿತ್ರ ಹೊಂದಿದೆ. ಅಕ್ಟೋಬರ್ ತಿಂಗಳಲ್ಲಿ ಚಿತ್ರೀಕರಣ ಆರಂಭವಾಗಲಿದೆ.

ನಿರ್ಮಾಪಕಿ ಪ್ರತಿಭಾ ಮಂಗಳೂರಿನ ಮೂಲದವರು. ಇಪ್ಪತ್ತುವರ್ಷಗಳಿಂದ ರಾಜಲಕ್ಷ್ಮೀ ಟ್ರಾವಲ್ಸ್ ನಡೆಸುತ್ತಿರುವ ಇವರು ನಿರ್ಮಿಸುತ್ತಿರುವ ಮೂರನೇ ಚಿತ್ರವಿದು.

23 ವರ್ಷಗಳಿಂದ ಕನ್ನಡ ಚಿತ್ರರಂಗದೊಂದಿಗೆ ನಂಟಿರುವ ನಿರ್ದೇಶಕ ಕಲೈ , ನೃತ್ಯ ನಿರ್ದೇಶಕರಾಗೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಮದನ್ – ಹರಿಣಿ, ಚಿನ್ನಿಪ್ರಕಾಶ್, ತ್ರಿಭುವನ್, ಫೈವ್ ಸ್ಟಾರ್ ಗಣೇಶ್ ಮುಂತಾದ ಹಿರಿಯ ನೃತ್ಯ ನಿರ್ದೇಶಕರೊಂದಿಗೆ ಕೆಲಸ‌ ಮಾಡಿರುವ ಕಲೈ, ಜನಪ್ರಿಯ ನಾಯಕರ 300ಕ್ಕೂ ಹೆಚ್ಚು ಹಾಡುಗಳಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. ಇದು ಕಲೈ ಅವರು ನಿರ್ದೇಶಿಸುತ್ತಿರುವ ಮೊದಲ ಚಿತ್ರವಿದು.

ಅಕ್ಟೋಬರ್ ತಿಂಗಳಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದ್ದು, ಹೆಚ್ಚಿನ ಭಾಗದ ‌ಚಿತ್ರೀಕರಣ ಅದ್ದೂರಿ ಸೆಟ್ ಗಳಲೇ 80 ದಿನಗಳ ಕಾಲ ನಡೆಯಲಿದೆ. ಅರು ಭರ್ಜರಿ ಫೈಟ್ ಗಳು ಹಾಗೂ ಆರು ಹಾಡುಗಳು ಈ ಚಿತ್ರದಲ್ಲಿರುತ್ತದೆ ಎಂದು ನಿರ್ದೇಶಕರು ತಿಳಿಸಿದ್ದಾರೆ. ಶಂಕರ್ ಹಾಗೂ ಚಂದ್ರಮೌಳಿ(ಕೆ.ಜಿ.ಎಫ್ ಖ್ಯಾತಿ) ಈ ಚಿತ್ರಕ್ಕೆ ಸಂಭಾಷಣೆ ಬರೆಯುತ್ತಿದ್ದಾರೆ.

Categories
ಸಿನಿ ಸುದ್ದಿ

ಅನಿರುದ್ಧ ಹೊಸ ಸಿನಿಮಾಗೆ ಚಾಲನೆ: ಇದು ಡಾರ್ಕ್ ಕಾಮಿಡಿ ಥ್ರಿಲ್ಲರ್ ಸ್ಟೋರಿ

ತಮ್ಮ ಸಹಜ ಅಭಿನಯದ ಮೂಲಕ ಹಿರಿತೆರೆ ಹಾಗೂ ಕಿರುತೆರೆಯಲ್ಲಿ ಅಪಾರ ಅಭಿಮಾನಿಗಳನ್ನು ಗಳಿಸಿರುವ ನಟ ಅನಿರುದ್ಧ್ ಜತ್ಕರ್ ನೂತನ ಚಿತ್ರವೊಂದರ ನಾಯಕನಾಗಿ ನಟಿಸುತ್ತಿದ್ದಾರೆ. ಎಂ.ಆನಂದರಾಜ್ ನಿರ್ದೇಶಿಸುತ್ತಿರುವ ಈ ಚಿತ್ರದ ಸ್ಕ್ರಿಪ್ಟ್ ಪೂಜೆಯನ್ನು ಇತ್ತೀಚೆಗೆ ಮೈಸೂರಿನ ಡಾ.ವಿಷ್ಣುವರ್ಧನ್ ಸ್ಮಾರಕದಲ್ಲಿ ನೆರವೇರಿದೆ.

ಭಾರತಿ ವಿಷ್ಣುವರ್ಧನ್ ಅವರು ಈ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. ಚಿತ್ರತಂಡದ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಆಗಸ್ಟ್ 10 ರಿಂದ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ. ಬೆಂಗಳೂರು, ತುಮಕೂರು ಹಾಗೂ ಮಂಗಳೂರಿನಲ್ಲಿ ಚಿತ್ರೀಕರಣ ನಡೆಯಲಿದೆ.‌

ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ರೂಪ ಡಿ.ಎನ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಇದು ಅವರ ನಿರ್ಮಾಣದ ಮೊದಲ ಚಿತ್ರ.

ಇದೇ ವರ್ಷ ತೆರೆಕಂಡಿದ್ದ ವಿಜಯ ರಾಘವೇಂದ್ರ ಅಭಿನಯದ “ರಾಘು” ಚಿತ್ರವನ್ನು ‌ನಿರ್ದೇಶಿಸಿದ್ದ ಆನಂದ್ ರಾಜ್ ಈ ನೂತನ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ನಿರ್ದೇಶಕರೆ ಕಥೆ ರಚಿಸಿದ್ದು, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಗಣೇಶ್ ಪರಶುರಾಮ್ ಬರೆಯುತ್ತಿದ್ದಾರೆ.

ಉಳಿದಂತೆ ಉದಯಲೀಲಾ ಛಾಯಾಗ್ರಹಣ, ವಿಜೇತ್ ಚಂದ್ರ ಸಂಕಲನ, ರಿತ್ವಿಕ್ ಮುರಳಿಧರ್ ಸಂಗೀತ ನಿರ್ದೇಶನ, ಆಶಿಕ್ ಕುಸುಗೊಳ್ಳಿ ಡಿ.ಐ(ವಿಕ್ರಾಂತ್ ರೋಣ ಖ್ಯಾತಿ), ನರಸಿಂಹಮೂರ್ತಿ ಸಾಹಸ ನಿರ್ದೇಶನ ಹಾಗೂ ಮಾಧುರಿ ಪರಶುರಾಮ್ ಅವರ ನೃತ್ಯ ನಿರ್ದೇಶನವಿರುವ ಈ ಚಿತ್ರದ ಸೌಂಡ್ ಡಿಸೈನರ್ ಆಗಿ ಬಿ.ಆರ್ ನವೀನ್ ಕುಮಾರ್ ಕಾರ್ಯ ನಿರ್ವಹಿಸುತ್ತಿದ್ದಾರೆ.

ಅನಿರುದ್ಧ್ ಅವರಿಗೆ ನಾಯಕಿಯರಾಗಿ ನಿಧಿ ಸುಬ್ಬಯ್ಯ ಹಾಗೂ ರೆಚೆಲ್ ಡೇವಿಡ್‌(ಲವ್ ಮಾಕ್ಟೇಲ್ 2 ಖ್ಯಾತಿ) ಅಭಿನಯಿಸುತ್ತಿದ್ದಾರೆ.
ಶರತ್ ಲೋಹಿತಾಶ್ವ, ಕೆ.ಎಸ್ ಶ್ರೀಧರ್, ಶಿವಮಣಿ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಡಾರ್ಕ್ ಕಾಮಿಡಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಶೀರ್ಷಿಕೆ ಸದ್ಯದಲ್ಲೇ ಅನಾವರಣವಾಗಲಿದೆ.

Categories
ಸಿನಿ ಸುದ್ದಿ

ರಾಮನ ಮೆಲೋಡಿ ಅವತಾರ! ರಿಷಿ ಸಿನಿಮಾದ ಹಿಸ ಹಾಡು ಬಂತು

ವಿಭಿನ್ನ ಹಾಗೂ ಹೊಸತನ ಸಿನಿಮಾಗಳ ಮೂಲಕ ಸಿನಿಮಾ ಪ್ರೇಮಿಗಳನ್ನು ರಂಜಿಸುತ್ತಿರುವ ಕನ್ನಡದ ಪ್ರತಿಭಾನ್ವಿತ ನಟ ರಿಷಿ. ಕಾಮಿಡಿ, ಸಸ್ಪೆನ್ಸ್ ಹಾಗೂ ಪ್ರೇಮಕಥೆ ಯಾವುದೇ ಇರಲಿ ಅದಕ್ಕೆ ರಿಷಿ ಸರಿಹೊಂದುತ್ತಾರೆ. ಬರೀ ಸಿನಿಮಾ ಮಾತ್ರವಲ್ಲ ವೆಬ್ ಸೀರಿಸ್ ಮೂಲಕವೂ ತಮ್ಮ ಖ್ಯಾತಿಯನ್ನು ಹೆಚ್ಚಿಸಿಕೊಂಡಿದ್ದಾರೆ. ತೆಲುಗಿನ ಜನಪ್ರಿಯ ನಿರ್ದೇಶಕ ಮಹಿ ರಾಘವ್ ಆಕ್ಷನ್ ಕಟ್ ಹೇಳಿರುವ ಕ್ರೈಮ್ ಡ್ರಾಮಾ ‘ಶೈತಾನ್’ನಲ್ಲಿ ರಿಷಿ ರಗಡ್ ಆಗಿ ಮಾಸ್ ಅವತಾರದಲ್ಲಿ ಅಮೋಘವಾಗಿ ಅಭಿನಯಿಸಿ ಮೆಚ್ಚುಗೆ ಪಡೆದಿದ್ದಾರೆ. ಈಗ ರಾಮನ ಅವತಾರ ಸಿನಿಮಾ ಮೂಲಕ ಲವರ್ ಬಾಯ್ ಆಗಿ ಪ್ರತ್ಯಕ್ಷರಾಗಿದ್ದಾರೆ.

ರಿಷಿ ನಟನೆಯ ಬಹು ನಿರೀಕ್ಷಿತ ಸಿನಿಮಾ ರಾಮನ ಅವತಾರ. ಇತ್ತೀಚೆಗೆಷ್ಟೇ ರಾಮ ಈಸ್ ಜೆಂಟಲ್ ಮೆನ್ ಅಂತಾ ಹೆಜ್ಜೆ ಹಾಕಿದ್ದ ರಿಷಿ ಮನಸ್ಸು ಬೇರೆಯ ದಿಕ್ಕಿಗೆ ಸಾಗಲು ಎಂದು ಗುನುಗುತ್ತಿದ್ದಾರೆ. ಅಂದರೆ ರಾಮನ ಅವತಾರ ಸಿನಿಮಾದ ಎರಡನೇ ಹಾಡು ಬಿಡುಗಡೆಯಾಗಿದೆ.

ಸಿಂಪಲ್ ಸುನಿ ಸಾಹಿತ್ಯದ ಮನಸ್ಸು ಬೇರೆ ದಿಕ್ಕಿಗೆ ಸಾಗಲು ಹಾಡಿಗೆ ಸಂಚಿತ್ ಹೆಗ್ಡೆ ಧ್ವನಿಯಾಗಿದ್ದು, ಜೂಡಾ ಸ್ಯಾಂಡಿ ಟ್ಯೂನ್ ಹಾಕಿದ್ದಾರೆ. ಉಡುಪಿ ಬೀಚ್ ನಲ್ಲಿ ಇಡೀ ಹಾಡನ್ನು ಚಿತ್ರೀಕರಿಸಲಾಗಿದೆ. ಸೊಗಸಾದ ಈ ಪ್ರೇಮಗೀತೆಯಲ್ಲಿ ರಿಷಿ ಹಾಗೂ ಪ್ರಣೀತಾ ಜೋಡಿ ನೋಡುಗರ ಗಮನಸೆಳೆಯುತ್ತಿದೆ.

ರಾಮನ ಅವತಾರ ಸಿನಿಮಾದಲ್ಲಿ ಪ್ರಣೀತಾ ಸುಭಾಷ್ ಹಾಗೂ ಶುಭ್ರ ಅಯ್ಯಪ್ಪ ನಾಯಕಿಯರಾಗಿ ನಟಿಸಿದ್ದು, ಅರುಣ್ ಸಾಗರ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ತಮ್ಮದೇ ನಾಟಿ ಫ್ಯಾಕ್ಟರಿ ಯೂಟ್ಯೂಬ್ ಚಾನೆಲ್ ಮೂಲಕ ಹೆಸರು ಪಡೆದಿರುವ ವಿಕಾಸ್ ಪಂಪಾಪತಿ ರಾಮನ ಅವತಾರ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ. ಈ ಚಿತ್ರದ ಮೂಲಕ ವಿಕಾಸ್ ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ.

ಸ್ಟಾರ್ ಫ್ಯಾಬ್ ಪ್ರೊಡಕ್ಷನ್ ನಡಿ ಆಪರೇಷನ್ ಅಲಮೇಲಮ್ಮ ಸಿನಿಮಾ ನಿರ್ಮಾಣ ಮಾಡಿದ್ದ ಅಮರೇಜ್ ಸೂರ್ಯವಂಶಿ ಚಿತ್ರ ನಿರ್ಮಾಣ ಮಾಡಿದ್ದಾರೆ. ರೋಮ್ಯಾಂಟಿಕ್ ಕಾಮಿಡಿ ಜಾನರ್ ಈ ಸಿನಿಮಾಗೆ ವಿಷ್ಣುಪ್ರಸಾದ್ ಹಾಗೂ ಸಮೀರ್ ದೇಶ್ ಪಾಂಡೇ ಕ್ಯಾಮೆರಾ ಕೈಚಳಕವಿದ್ದು, ಜೂಡಾ ಸ್ಯಾಂಡಿ ಟ್ಯೂನ್ ಹಾಕಿದ್ದು, ಅಮರನಾಥ್ ಸಂಲಕನವಿದೆ. ಉಡುಪಿ, ಬೆಂಗಳೂರು ಸುತ್ತುಮುತ್ತ ಶೂಟಿಂಗ್ ನಡೆಸಲಾಗಿದೆ. ರಾಮನ ಅವತಾರ ಸಿನಿಮಾ ತೆರೆಗೆ ಬರಲು ಸಜ್ಜಾಗಿದ್ದು, ಸದ್ಯ ಸೆನ್ಸಾರ್ ಅಂಗಳಕ್ಕೆ ಹೊರಡಲು ಸಜ್ಜಾಗಿದೆ.

Categories
ಸಿನಿ ಸುದ್ದಿ

ಹಾಸ್ಟೆಲ್ ಹುಡುಗರ ಸಕ್ಸಸ್ ನೋಡಿ ಶಿವಣ್ಣ ಏನಂದ್ರು ಗೊತ್ತಾ?

ಯುವ ಪ್ರತಿಭೆಗಳ ಹೊಸತನ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾಗೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ಎರಡನೇ ದಿನವೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ಚಿತ್ರಕ್ಕೆ ಕರುನಾಡ ಚಕ್ರವರ್ತಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬೆನ್ನು ತಟ್ಟಿದ್ದಾರೆ. ಆರಂಭದಿಂದಲೂ ನಾನಾ ಬಗೆಯಲ್ಲಿ ಪ್ರಚಾರ ಮಾಡಿ, ಇಡೀ ಸ್ಯಾಂಡಲ್ ವುಡ್ ಸಾಥ್ ಕೊಟ್ಟಿರುವ ನಿತಿನ್ ಕೃಷ್ಣಮೂರ್ತಿ ಚೊಚ್ಚಲ ಕನಸ್ಸಿನ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಎಲ್ಲ ವರ್ಗದ ಪ್ರೇಕ್ಷಕರಿಗೂ ಇಷ್ಟವಾಗಿದೆ. ಹಾಸ್ಟೆಲ್ ಹುಡುಗರ ಫನ್ ರೈಡ್ ಕಥೆಯನ್ನು ನಿನ್ನೆ ಗೀತಾ ಶಿವರಾಜ್ ಕುಮಾರ್ ಮಗಳು ನಿವೇದಿತಾ ಒಟ್ಟಿಗೆ ನರ್ತಕಿ ಚಿತ್ರಮಂದಿರದಲ್ಲಿ ವೀಕ್ಷಿಸಿ ಎಂಜಾಯ್ ಮಾಡಿದ್ದರು. ಇಂದು ಶಿವಣ್ಣನ ನಾಗವರ ನಿವಾಸದಲ್ಲಿ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾದ ಸಕ್ಸಸ್ ಮೀಟ್ ಹಮ್ಮಿಕೊಳ್ಳಲಾಗಿತ್ತು. ಹೊಸಬರ ಹೊಸ ಪ್ರಯತ್ನಕ್ಕೆ ಶಿವಣ್ಣ, ಗೀತಕ್ಕೆ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ.

ಶಿವಣ್ಣ ಮಾತನಾಡಿ, ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಇಡೀ ತಂಡಕ್ಕೆ ಗುಡ್ ಲಕ್. ನಿನ್ನೆ ನಾನು ಸಿನಿಮಾ ನೋಡಬೇಕಿತ್ತು. ವರುಣ್ ಗೆ ಹೇಳಿದ್ದೇ ನಾನು ಫಸ್ಟ್ ಡೇ ನೋಡುತ್ತೇನೆ ಎಂದು. ಆದರೆ ಜಾಹೀರಾತು ಶೂಟ್ ಇದ್ದಿದ್ದರಿಂದ ಆಗಲಿಲ್ಲ. ಅದಕ್ಕೆ ಗೀತಾ ಬಂದಿದ್ದರು. ಮೋರಲ್ ಸಪೋರ್ಟ್ ಆಗಿರುತ್ತದೆ ಎಂದಿದ್ದೆ. ಸಿನಿಮಾ ಚೆನ್ನಾಗಿದ್ದರೆ ಮೋರಲ್ ಸಪೋರ್ಟ್ ಗಿಂತ ನಾವು ನೋಡಿ ತೃಪ್ತಿಪಡಬಹುದು. ನನ್ನ ಪರವಾಗಿ, ನನ್ನ ಚಿಕ್ಕ ಮಗಳು ನಿವೇದಿತಾ ಎಲ್ಲರೂ ಸಿನಿಮಾ ನೋಡಿದರು. ವರುಣ್ ನನಗೆ 15 ವರ್ಷದಿಂದ ಗೊತ್ತು. ಆ ಸಮಯದಿಂದ ನೋಡುತ್ತಿದ್ದೇನೆ. ತುಂಬ ಕಷ್ಟಪಟ್ಟು ಮೇಲೆ ಬಂದವರು.

ಯಾವುದೇ ಮಾಡಿದರು ಬಹಳ ಶಿಸ್ತಿನಿಂದ ಮಾಡುತ್ತಾನೆ. ಅವರ ಬಳಿಕ ಸಿನ್ಸಿಯಾರಿಟಿ ಇದೆ. ನನಗೆ ಅದು ತುಂಬಾ ಇಷ್ಟ. ಸಾಂಗ್ಸ್ ಎಲ್ಲಾ ನೋಡಿದಾಗ ತುಂಬಾ ಇಂಟ್ರೆಸ್ಟಿಂಗ್ ಅನಿಸಿತು. ಒನ್ಸ್ ನೋಡಿದಾಗ ಒಂದು ಸ್ಟೈಕ್ ಆಯ್ತು. ಜನ ಥಿಯೇಟರ್ ಗೆ ಬರದ ಸಮಯದಲ್ಲಿ ಜನ ಥಿಯೇಟರ್ ಗೆ ಬಂದು ಸಪೋರ್ಟ್ ಮಾಡಿದ್ದಾರೆ. ಇಡೀ ಸ್ಯಾಂಡಲ್ ವುಡ್ ಸಿನಿಮಾಗೆ ಸಾಥ್ ಕೊಟ್ಟಿದೆ. ಇಂಡಸ್ಟ್ರೀ ಅಂದರೆ ಒಂದು ಫ್ಯಾಮಿಲಿ. ಫ್ಯಾಮಿಲಿ ಅಂದಾಗ ಯಾರದ್ದೇ ಸಿನಿಮಾವಾಗಲಿ ಪ್ರೋತ್ಸಾಹ ಮಾಡಬೇಕು ಎಂದರು.

ರಮ್ಯಾ ವಿವಾದದ ಬಗ್ಗೆಯೂ ಮಾತನಾಡಿದ ಶಿವಣ್ಣ, ಯಾರ ಬಗ್ಗೆ ಏನು ಕಮೆಂಟ್ ಮಾಡುವುದು ಬೇಡ. ಎಲ್ಲದಕ್ಕಿಂತ ಕೊನೆಗೆ ಗೆಲುವು ಮುಖ್ಯ. ಸಿನಿಮಾ ಬರೋಕು ಮೊದಲು ಒಳ್ಳೆ ರಿಪೋರ್ಟ್ ಇತ್ತು. ಒಳ್ಳೆ ಮನಸ್ಸಿನಿಂದ ಮಾಡಿದರೆ ಅದಕ್ಕೆ ಯಾವುದೇ ತಡೆ ಬರಲ್ಲ. ಅದಕ್ಕೆ ಇದೇ ಉತ್ತಮ ಉದಾಹರಣೆ. ಅಭಿಮಾನಿ ದೇವರುಗಳು ಒಳ್ಳೆ ಸಿನಿಮಾ ಕೈಬಿಡಲ್ಲ. ಸತ್ಯ ಇದ್ದರೆ ಜಯ ಇದ್ದೇ ಇರುತ್ತೆ. ಅವರವರು ತಿಳಿದುಕೊಳ್ಳಬೇಕು. ಯಾಕೆ ಹೀಗಾಯ್ತು ಅನ್ನೋದು ಗೊತ್ತಾಗ್ತಿಲ್ಲ. ನಮ್ಮ ಇಂಡಸ್ಟ್ರಿ ಬೆಳೀಬೇಕು ಅಷ್ಟೆ. ಅದನ್ನು ದುರ್ಬಳಕೆ ಮಾಡಿಕೊಳ್ಳಬಾರದು. ಹೊಸಬರು ಬಂದಾಗ ಎಲ್ಲರೂ ಸಪೋರ್ಟ್ ಮಾಡಬೇಕು. ಆ ವಿಚಾರವನ್ನು ಈಗ ದೊಡ್ಡದು ಮಾಡುವುದು ಬೇಡ ಎಂದರು.

ಗೀತಾ ಶಿವರಾಜ್ ಕುಮಾರ್ ಮಾತನಾಡಿ, ಈ ತರ ಸಿನಿಮಾ ನೋಡಿ ಬಹಳ ವರ್ಷವಾಗಿತ್ತು. ವರುಣ್ ನಮ್ಮ ಕುಟುಂಬ. ನಿರ್ದೇಶಕರಿಂದ ಹಿಡಿದು ಎಲ್ಲರು ಹೊಸಬರೇ. ಎಲ್ಲವೂ ಹೊಸತನದಿಂದ ಕೂಡಿದೆ. ಹಾಸ್ಟೆಲ್ ಲೈಫ್ ಹೀಗೆ ಇತ್ತೇನೋ ಅನಿಸುವಷ್ಟು ಬಹಳ ಸ್ವಾಭಾವಿಕವಾಗಿತ್ತು. ಎಲ್ಲಾ ಫ್ಯಾಮಿಲಿ ಕುಳಿತು ನೋಡಬಹುದು. ಈ ತರ ಸಿನಿಮಾಗಳು ಮತ್ತಷ್ಟು ಬರಬೇಕು. ಆರಂಭದಿಂದ ಕೊನೆತನಕ ಎಲ್ಲಿಯೂ ಬೋರ್ ಆಗುವುದಿಲ್ಲ. ನಾನು ಸಿನಿಮಾ ಎಂಜಾಯ್ ಮಾಡಿದೆ. ಇಡೀ ತಂಡಕ್ಕೆ ಎಲ್ಲರಿಗೂ ಒಳ್ಳೆದಾಗಲಿ ಎಂದರು.

ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾದಲ್ಲಿ ದಿಗಂತ್, ರಿಷಬ್ ಶೆಟ್ಟಿ, ಶೈನಿ ಶೆಟ್ಟಿ, ಪವನ್ ಕುಮಾರ್, ರಮ್ಯಾ ಸಾಥ್ ಕೊಟ್ಟಿದ್ದಾರೆ. ರಕ್ಷಿತ್ ಶೆಟ್ಟಿ ತಮ್ಮದೇ ಪರವಃ ಬ್ಯಾನರ್ ನಡಿ ಈ ಚಿತ್ರವನ್ನು ಅರ್ಪಿಸಿದ್ದಾರೆ. ಬಹುತೇಕ ಹೊಸ ಪ್ರತಿಭೆಗಳು ನಟಿಸಿ ಸೈ ಎನಿಸಿಕೊಂಡಿರುವ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಚಿತ್ರವನ್ನು ವರುಣ್ ಗೌಡ ಹಾಗೂ ಪ್ರಜ್ವಲ್ ನಿರ್ಮಿಸಿದ್ದಾರೆ. ಅರವಿಂದ್ ಕಶ್ಯಪ್ ಛಾಯಾಗ್ರಹಣ, ಅಜನೀಶ್ ಲೋಕನಾಥ್ ಸಂಗೀತ ಸಿನಿಮಾಗಿದೆ.

Categories
ಸಿನಿ ಸುದ್ದಿ

ಋತು ಎಂಬ ಮನಮುಟ್ಟುವ ಕಿರುಚಿತ್ರ

ಕಾಲ ಎಷ್ಟೇ ಮುಂದುವರೆದರೂ ಇನ್ನೂ ಕೆಲವು ಆಚರಣೆ ಬಗ್ಗೆ ಜನರಲ್ಲಿ ತಪ್ಪು ಕಲ್ಪನೆಯಿದೆ. ಅದರಲ್ಲಿ ಸ್ತ್ರೀಯರ ದೇಹದಲ್ಲಿ ತಿಂಗಳಿಗೊಮ್ಮೆ ಆಗುವ ಪಕೃತಿ ಸಹಜವಾದ ಮುಟ್ಟು ಕೂಡ ಒಂದು.
ಈ ಮುಟ್ಟಿನ ಸಮಸ್ಯೆ ಬಗ್ಗೆ ಟೆಂಟ್ ಸಿನಿಮಾದ ಸಮರ್ಥ್ ನಾಗರಾಜ್ ಮನಮುಟ್ಟುವ “ಖುತು” ಎಂಬ 22 ನಿಮಿಷಗಳ ಕಿರುಚಿತ್ರ ಮಾಡಿದ್ದಾರೆ. “” ಋತು” ವಿಗೆ ಬದಲಾಗಬೇಕು ಎಂಬ ಅಡಿಬರಹ ಕೂಡಯಿದೆ. ಇತ್ತೀಚೆಗೆ ಈ ಕಿರುಚಿತ್ರದ ಪ್ರದರ್ಶನ ವೇಳೆ ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್, ನಟಿ ಮಯೂರಿ ಖ್ಯಾತರಿ ಹಾಗೂ ನಿರ್ದೇಶಕ ಶೂನ್ಯ ಈ ವೇಳೆ ಇದ್ದರು.

ಮೊದಲು “ಋತು” ಕಿರುಚಿತ್ರದ ಬಗ್ಗೆ ಮಾತನಾಡಿದ ನಾಗತಿಹಳ್ಳಿ ಚಂದ್ರಶೇಖರ್, ನಾವು ಒಂದು ಕಡೆ ಚಂದ್ರಯಾನಕ್ಕೆ ಸಜ್ಜಾಗಿದ್ದೇವೆ. ಮತ್ತೊಂದು ಕಡೆ ಇಂತಹ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ‌. ಹೆಚ್ಚಾಗಿ ಹಳ್ಳಿ ಹಾಗೂ ನಗರದ ಕೆಲವು ಬಡಾವಣೆಗಳಲ್ಲಿ ಇದರ ಬಗ್ಗೆ ಅರಿವಿಲ್ಲದ ಜನ ಹೆಚ್ಚಿದ್ದಾರೆ. ಇಂದು ಹಳ್ಳಿಗಳಲ್ಲಿ ಮೂರು ವೈನ್ ಸ್ಟೋರ್ ಗಳಿರುತ್ತದೆ. ಅಜ್ಜ ಅಜ್ಜಿಯರ ಕೈಯಲ್ಲೂ ಮೊಬೈಲ್ ಇರುತ್ತದೆ. ಆದರೆ ಸರಿಯಾದ ಶೌಚಾಲಯ ಇರುವುದಿಲ್ಲ. ನಾವು ಇನ್ನೂ ಸಾಕಷ್ಟು ಬದಲಾಗಬೇಕು ಎಂಬುದನ್ನು ಸಮರ್ಥ್ ಈ ಕಿರುಚಿತ್ರದ ಮೂಲಕ ಸಮರ್ಥವಾಗಿ ತೋರಿಸಿದ್ದಾರೆ. ಇಡೀ ತಂಡಕ್ಕೆ ಅಭಿನಂದನೆಗಳು ಎಂದರು.

ನಟಿ ಮಯೂರಿ ಹಾಗೂ ನಿರ್ದೇಶಕ ಶೂನ್ಯ ಸಹ ಕಿರುಚಿತ್ರದ ಬಗ್ಗೆ ಪ್ರಶಂಸೆಯ ಮಾತುಗಳಾಡಿದರು.

ನಾನು ನಾಗತಿಹಳ್ಳಿ ಚಂದ್ರಶೇಖರ್ ಅವರ ಟೆಂಟ್ ಸಿನಿಮಾದಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಅಲ್ಲಿ ಸಾಕಷ್ಟು ಕಲಿತಿದ್ದೇನೆ.‌ ಆ ಕಲಿಕೆಯೆ ಈ ಕಿರುಚಿತ್ರ ಮಾಡಲು ಕಾರಣ. ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಕಥೆಯಿದು. ಪಿರಿಯಡ್ಸ್ ಎಂದರೆ ಒಂದು ಸಮಸ್ಯೆ ಅಂದುಕೊಂಡಿರುವವರು ಬಹಳ ಜನರಿದ್ದಾರೆ. ನಮ್ಮ ಈ ಪ್ರಯತ್ನದಿಂದ ಇದು ಸಮಸ್ಯೆಯಲ್ಲ .”ಮುಟ್ಟು ಮುಟ್ಟೆಂದೇಕೆ ಕೀಳಾಗಿ ಕಾಣುವಿರಿ ಮುಟ್ಟಲ್ಲವೆ ಸೃಷ್ಟಿಯಾ ಹುಟ್ಟು,,
ಮುಟ್ಟು ಮುಟ್ಟೆಂದೇಕೆ ಮುಟ್ಟಾಳರಂತೆ ಆಡುವಿರಿ ಮುಟ್ಟಲವೆ ನಮ್ಮೆಲರ ಹುಟ್ಟಿನ ಗುಟ್ಟು” ಎಂಬ ಉತ್ತಮ ಸಂದೇಶವನ್ನು ಸಾರುದ್ದೇವೆ. ಕಿರುಚಿತ್ರ ಉತ್ತಮವಾಗಿ ಮೂಡಿಬರಲು ಸಹಕಾರ ನೀಡಿದ ನನ್ನ ಇಡೀ ತಂಡಕ್ಕೆ, ನಿರ್ಮಾಣ ಮಾಡಿದ ನನ್ನ ತಂದೆ ನಾಗರಾಜ್ ಅವರಿಗೆ ಹಾಗೂ ಆಗಮಿಸಿದ ಎಲ್ಲಾ ಅತಿಥಿಗಳಿಗೆ ಧನ್ಯವಾದ ಎಂದರು ನಿರ್ದೇಶಕ ಸಮರ್ಥ್ ನಾಗರಾಜ್.

ಕಿರುಚಿತ್ರದಲ್ಲಿ ನಟಿಸಿರುವ ” ಜೊತೆಜೊತೆಯಲಿ” ಖ್ಯಾತಿಯ ಅಪೂರ್ವ, ಸಿಂಚನ ಶಿವಣ್ಣ ಮುಂತಾದವರು “ಖುತು”ವಿನ ಬಗ್ಗೆ ಮಾಹಿತಿ ನೀಡಿದರು.

ಈ ಕಿರುಚಿತ್ರ ಎನ್ ಆರ್ ಎಸ್ ಪ್ರೊಡಕ್ಷನ್ಸ್ ಯೂಟ್ಯೂಬ್ ಚಾನಲ್ ನಲ್ಲಿ ನೋಡಲು ಲಭ್ಯವಿದೆ.“ಋತು” ಮುಟ್ಟಿನ ಬಗ್ಗೆ ಒಂದು ಮನಮುಟ್ಟುವ ಕಿರುಚಿತ್ರ .

ಕಾಲ ಎಷ್ಟೇ ಮುಂದುವರೆದರೂ ಇನ್ನೂ ಕೆಲವು ಆಚರಣೆ ಬಗ್ಗೆ ಜನರಲ್ಲಿ ತಪ್ಪು ಕಲ್ಪನೆಯಿದೆ. ಅದರಲ್ಲಿ ಸ್ತ್ರೀಯರ ದೇಹದಲ್ಲಿ ತಿಂಗಳಿಗೊಮ್ಮೆ ಆಗುವ ಪಕೃತಿ ಸಹಜವಾದ ಮುಟ್ಟು ಕೂಡ ಒಂದು.
ಈ ಮುಟ್ಟಿನ ಸಮಸ್ಯೆ ಬಗ್ಗೆ ಟೆಂಟ್ ಸಿನಿಮಾದ ಸಮರ್ಥ್ ನಾಗರಾಜ್ ಮನಮುಟ್ಟುವ “ಖುತು” ಎಂಬ 22 ನಿಮಿಷಗಳ ಕಿರುಚಿತ್ರ ಮಾಡಿದ್ದಾರೆ. “” ಋತು” ವಿಗೆ ಬದಲಾಗಬೇಕು ಎಂಬ ಅಡಿಬರಹ ಕೂಡಯಿದೆ. ಇತ್ತೀಚೆಗೆ ಈ ಕಿರುಚಿತ್ರದ ಪ್ರದರ್ಶನ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್, ನಟಿ ಮಯೂರಿ ಖ್ಯಾತರಿ ಹಾಗೂ ನಿರ್ದೇಶಕ ಶೂನ್ಯ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ಮೊದಲು “ಋತು” ಕಿರುಚಿತ್ರದ ಬಗ್ಗೆ ಮಾತನಾಡಿದ ನಾಗತಿಹಳ್ಳಿ ಚಂದ್ರಶೇಖರ್, ನಾವು ಒಂದು ಕಡೆ ಚಂದ್ರಯಾನಕ್ಕೆ ಸಜ್ಜಾಗಿದ್ದೇವೆ. ಮತ್ತೊಂದು ಕಡೆ ಇಂತಹ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ‌. ಹೆಚ್ಚಾಗಿ ಹಳ್ಳಿ ಹಾಗೂ ನಗರದ ಕೆಲವು ಬಡಾವಣೆಗಳಲ್ಲಿ ಇದರ ಬಗ್ಗೆ ಅರಿವಿಲ್ಲದ ಜನ ಹೆಚ್ಚಿದ್ದಾರೆ. ಇಂದು ಹಳ್ಳಿಗಳಲ್ಲಿ ಮೂರು ವೈನ್ ಸ್ಟೋರ್ ಗಳಿರುತ್ತದೆ. ಅಜ್ಜ ಅಜ್ಜಿಯರ ಕೈಯಲ್ಲೂ ಮೊಬೈಲ್ ಇರುತ್ತದೆ. ಆದರೆ ಸರಿಯಾದ ಶೌಚಾಲಯ ಇರುವುದಿಲ್ಲ. ನಾವು ಇನ್ನೂ ಸಾಕಷ್ಟು ಬದಲಾಗಬೇಕು ಎಂಬುದನ್ನು ಸಮರ್ಥ್ ಈ ಕಿರುಚಿತ್ರದ ಮೂಲಕ ಸಮರ್ಥವಾಗಿ ತೋರಿಸಿದ್ದಾರೆ. ಇಡೀ ತಂಡಕ್ಕೆ ಅಭಿನಂದನೆಗಳು ಎಂದರು.

ನಟಿ ಮಯೂರಿ ಹಾಗೂ ನಿರ್ದೇಶಕ ಶೂನ್ಯ ಸಹ ಕಿರುಚಿತ್ರದ ಬಗ್ಗೆ ಪ್ರಶಂಸೆಯ ಮಾತುಗಳಾಡಿದರು.

ನಾನು ನಾಗತಿಹಳ್ಳಿ ಚಂದ್ರಶೇಖರ್ ಅವರ ಟೆಂಟ್ ಸಿನಿಮಾದಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಅಲ್ಲಿ ಸಾಕಷ್ಟು ಕಲಿತಿದ್ದೇನೆ.‌ ಆ ಕಲಿಕೆಯೆ ಈ ಕಿರುಚಿತ್ರ ಮಾಡಲು ಕಾರಣ. ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಕಥೆಯಿದು. ಪಿರಿಯಡ್ಸ್ ಎಂದರೆ ಒಂದು ಸಮಸ್ಯೆ ಅಂದುಕೊಂಡಿರುವವರು ಬಹಳ ಜನರಿದ್ದಾರೆ. ನಮ್ಮ ಈ ಪ್ರಯತ್ನದಿಂದ ಇದು ಸಮಸ್ಯೆಯಲ್ಲ .”ಮುಟ್ಟು ಮುಟ್ಟೆಂದೇಕೆ ಕೀಳಾಗಿ ಕಾಣುವಿರಿ ಮುಟ್ಟಲ್ಲವೆ ಸೃಷ್ಟಿಯಾ ಹುಟ್ಟು,,
ಮುಟ್ಟು ಮುಟ್ಟೆಂದೇಕೆ ಮುಟ್ಟಾಳರಂತೆ ಆಡುವಿರಿ ಮುಟ್ಟಲವೆ ನಮ್ಮೆಲರ ಹುಟ್ಟಿನ ಗುಟ್ಟು” ಎಂಬ ಉತ್ತಮ ಸಂದೇಶವನ್ನು ಸಾರುದ್ದೇವೆ. ಕಿರುಚಿತ್ರ ಉತ್ತಮವಾಗಿ ಮೂಡಿಬರಲು ಸಹಕಾರ ನೀಡಿದ ನನ್ನ ಇಡೀ ತಂಡಕ್ಕೆ, ನಿರ್ಮಾಣ ಮಾಡಿದ ನನ್ನ ತಂದೆ ನಾಗರಾಜ್ ಅವರಿಗೆ ಹಾಗೂ ಆಗಮಿಸಿದ ಎಲ್ಲಾ ಅತಿಥಿಗಳಿಗೆ ಧನ್ಯವಾದ ಎಂದರು ನಿರ್ದೇಶಕ ಸಮರ್ಥ್ ನಾಗರಾಜ್.

ಕಿರುಚಿತ್ರದಲ್ಲಿ ನಟಿಸಿರುವ ” ಜೊತೆಜೊತೆಯಲಿ” ಖ್ಯಾತಿಯ ಅಪೂರ್ವ, ಸಿಂಚನ ಶಿವಣ್ಣ ಮುಂತಾದವರು “ಖುತು”ವಿನ ಬಗ್ಗೆ ಮಾಹಿತಿ ನೀಡಿದರು.

ಈ ಕಿರುಚಿತ್ರ ಎನ್ ಆರ್ ಎಸ್ ಪ್ರೊಡಕ್ಷನ್ಸ್ ಯೂಟ್ಯೂಬ್ ಚಾನಲ್ ನಲ್ಲಿ ನೋಡಲು ಲಭ್ಯವಿದೆ.

Categories
ಸಿನಿ ಸುದ್ದಿ

ಕನ್ನಡಕ್ಕೆ ಬಂದ ವಿಕ್ರಂ ವೇದ ಮ್ಯೂಸಿಕ್ ಡೈರೆಕ್ಟರ್! ಶಿವಣ್ಣನ ಸಿನಿಮಾಗೆ ಸ್ಯಾಮ್ ಟ್ಯೂನ್

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬಕ್ಕೆ ಸಾಲು ಸಾಲು ಸಿನಿಮಾಗಳು ಘೋಷಣೆಯಾಗಿವೆ. ಏಕಕಾಲಕ್ಕೆ ಹತ್ತಕ್ಕೂ ಹೆಚ್ಚು ಚಿತ್ರಗಳು ಅನೌನ್ಸ್ ಆಗಿವೆ. ಈ ಪೈಕಿ ಶಿವಣ್ಣ SCFC01 ಎಂಬ ತಾತ್ಕಾಲಿಕ ಶೀರ್ಷಿಕೆಯಡಿ ಹೊಸ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಲಾಗಿದೆ‌. ಈ ಚಿತ್ರದ ಮೂಲಕ ಖ್ಯಾತ ಸಂಗೀತ ನಿರ್ದೇಶಕರಾದ ಸ್ಯಾಮ್ ಸಿ.ಎಸ್ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.

ವಿಕ್ರಂ ವೇದ ಸೇರಿದಂತೆ ಹಲವು ಬ್ಲಾಕ್ ಬಸ್ಟರ್ ಹಿಟ್ ಸಿನಿಮಾಗಳಿಗೆ ಟ್ಯೂನ್ ಹಾಕಿರುವ ಸ್ಯಾಮ್ ಕರುನಾಡ ಚಕ್ರವರ್ತಿ ಶಿವಣ್ಣ ಬಣ್ಣ ಹಚ್ಚಲಿರುವ ಅಪ್ ಕಮ್ಮಿಂಗ್ ಪ್ರಾಜೆಕ್ಟ್ ಗೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಸುಧೀರ್ ಚಂದ್ರ ಪದ್ರಿ ನಿರ್ಮಿಸುತ್ತಿರುವ ಈ ಚಿತ್ರವನ್ನು ಕಾರ್ತಿಕ್ ಅದ್ವೈತ್ ನಿರ್ದೇಶನದಲ್ಲಿ ಮಾಡಲಿದ್ದಾರೆ.

ಇದು ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು, ಕನ್ನಡ, ತೆಲುಗು, ಮಲಯಾಳಂ ಹಾಗೂ ತಮಿಳುಭಾಷೆಯಲ್ಲಿ ಬಿಡುಗಡೆಯಾಗಲಿದೆ. ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಪ್ರಾಜೆಕ್ಟ್ ಮೂಲಕ ಸ್ಯಾಮ್ ಸಿ ಎಸ್ ಪ್ಯಾನ್ ಇಂಡಿಯಾ ಮ್ಯೂಸಿಕಲ್ ಐಕಾನ್ ಆಗಲಿದ್ದಾರೆ.

Categories
ಸಿನಿ ಸುದ್ದಿ

ಜಂಟಲ್ ಮ್ಯಾನ್ 2 ಸಿನಿಮಾಗೆ ಚಾಲನೆ: ಸಂಗೀತ ಸಂಯೋಜನೆ ಶುರು

ಈ ಹಿಂದೆ ‘ಜಂಟಲ್ ಮ್ಯಾನ್’, ‘ಕಾದಲ್ ದೇಶಂ’ ಸೇರಿದಂತೆ ಹಲವು ಸೂಪರ್ ಹಿಟ್ ತಮಿಳು ಚಿತ್ರಗಳನ್ನು ನಿರ್ಮಿಸಿರುವ ಕೆ.ಟಿ. ಕುಂಜುಮೋನ್, ಈಗ ಬಹಳ ದಿನಗಳ ನಂತರ ‘ಜಂಟಲ್ ಮ್ಯಾನ್ 2’ ಚಿತ್ರದ ಮೂಲಕ ನಿರ್ಮಾಣಕ್ಕೆ ವಾಪಸ್ಸಾಗಿದ್ದಾರೆ.

ಈ ಚಿತ್ರದ ಮುಹೂರ್ತ ಸದ್ಯದಲ್ಲೇ ನಡೆಯಲಿದ್ದು, ಅದಕ್ಕೂ ಮುನ್ನ, ಸಂಗೀತ ಸಂಯೋಜನೆಯ ಕೆಲಸಗಳು ಪ್ರಾರಂಭವಾಗಿವೆ.
RRR ಚಿತ್ರದ ‘ನಾಟ್ಟು ನಾಟ್ಟು’ ಹಾಡಿಗೆ ಆಸ್ಕರ್ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದ ತೆಲುಗಿನ ಖ್ಯಾತ ಸಂಗೀತ ನಿರ್ದೇಶಕ ಎಂ.ಎಂ. ಕೀರವಾಣಿ, ‘ಜಂಟಲ್ ಮ್ಯಾನ್ 2’ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದಾರೆ.

ಕೀರವಾಣಿ ಸಂಗೀತಕ್ಕೆ ಖ್ಯಾತ ಗೀತರಚನೆಕಾರ ವೈರಮುತ್ತು ಸಾಹಿತ್ಯ ರಚಿಸುತ್ತಿದ್ದಾರೆ. ಈಗಾಗಲೇ ಸೋಮವಾರದಿಂದ ಕೇರಳದ ಬೋಲ್ ಗಟ್ಟಿ ಪ್ಯಾಲೇಸ್ ಐಲೆಂಡ್‌ನಲ್ಲಿ ಟ್ಯೂನ್ ಹಾಕುವ ಕೆಲಸ ಪ್ರಾರಂಭವಾಗಿದೆ. ಈ ಸೆಷನ್ನಲ್ಲಿ ಕೀರವಾಣಿ, ವೈರಮುತ್ತು, ಕುಂಜುಮೋನ್, ಗೋಕುಲ್ ಕೃಷ್ಣ ಮುಂತಾದವರು ಭಾಗವಹಿಸಿದ್ದಾರೆ.


‘ಜಂಟಲ್ ಮ್ಯಾನ್ 2’ ಚಿತ್ರಕ್ಕೆ ಎ. ಗೋಕುಲ್ ಕೃಷ್ಣ ಕಥೆ-ಚಿತ್ರಕಥೆ ರಚಿಸುವುದರ ಜೊತೆಗೆ ನಿರ್ದೇಶನವನ್ನೂ ಮಾಡುತ್ತಿದ್ದಾರೆ. ಚಿತ್ರವು ಸದ್ಯ ಪ್ರೀ-ಪ್ರೊಡಕ್ಷನ್ ಹಂತದಲ್ಲಿದ್ದು, ಸದ್ಯದಲ್ಲೇ ಕಲಾವಿದರು ಮತ್ತು ತಂತ್ರಜ್ಞರ ಪಟ್ಟಿ ಹೊರಬೀಳಲಿದೆ.

Categories
ಸಿನಿ ಸುದ್ದಿ

ಸುದೀಪ್ ಮನೆ ಅಲ್ಲ, ಚೇಂಬರ್ ಮುಂದೆ ಧರಣಿ ಕೂತ ನಿರ್ಮಾಪಕ ಎನ್.ಕುಮಾರ್!

ನಟ ಸುದೀಪ್ ಅವರು ನಮಗೆ ಮಾತು ಕೊಟ್ಟಂತೆ ನಮಗೆ ಡೇಟ್ ನೀಡಿ ಜೊತೆಗೆ ಸಿನಿಮಾ ಮಾಡಬೇಕು. ಒಂದು‌ ವೇಳೆ ಸಿನಿಮಾ ಮಾಡಲು ಡೇಟ್ ಕೊಡದಿದ್ದರೆ ಅವರ ಮನೆಯ ಮುಂದೆ ಧರಣಿ ಕೂರುವುದಾಗಿ ನಿರ್ಮಾಪಕ ಎನ್.ಕುಮಾರ್ ಹೇಳಿಕೆ ನೀಡಿದ್ದರು. ಆದರೆ, ಕುಮಾರ್ ಅವರು ಸುದೀಪ್ ಮನೆಯ ಮುಂದೆ ಧರಣಿ ಮಾಡಲಿಲ್ಲ. ಸುದೀಪ್ ಮನೆಯ ಮುಂದರ ಧರಣಿ ಮಾಡದೆ, ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಎದರು ಧರಣಿ ನಡೆಸಿದ್ದಾರೆ.

ನಮ್ಮ ಜೊತೆಗೆ ಒಂದು ಸಿನಿಮಾ ಮಡಿಕೊಡಬೇಕು ಎಂದು ಸುದೀಪ್ ಅವರಿಗೆ ಅಡ್ವಾನ್ಸ್ ಕೊಡಲಾಗಿತ್ತಂತೆ. ಆಎರೆ, ಸುದೀಪ್ ಮಾತ್ರ ಸಿನಿಮಾ ಮಾಡಲು ಡೇಟ್ ಕೊಡದೆ, ಅಡ್ವಾನ್ಸ್ ಕೂಡ ಕೊಡದೆ ಚಿತ್ರ ಮುಂದೂಡುತ್ತಿದ್ದಾರೆ. ಹೀಗಾಗಿ ನನಗೆ ನಷ್ಟ ಕಷ್ಟ ಎರಡೂ ಆಗಿದೆ ಅಂತ ಈ ಹಿಂದೆ ಕುಮಾರ್ ಅವರು ವಾಣಿಜ್ಯ ಮಂಡಳಿಯಲ್ಲಿಬಪ್ರೆಸ್ ಮೀಟ್ ಮಾಡಿ ಸುದೀಪ್ ವಿರುದ್ಧ ಆರೋಪ ಮಾಡಿದ್ದರು. ಆಗ ಕುಮಾರ್, ನನಗೆ ಸುದೀಪ್ ಸ್ಪಂದಿಸದಿದ್ದರೆ ಅವರ ಮನೆಯ ಮುಂದೆ ಧರಣಿ ನಡೆಸುವುದಾಗಿ ಹೇಳಿದ್ದರು. ಆದರೆ, ಕುಮಾರ್ ಮಾತ್ರ ಸುದೀಪ್ ಅವರ ಮನೆಯ ಮುಂದೆ ಧರಣಿ ಮಾಡಲಿಲ್ಲ.

ಸುದೀಪ್ ಕೂಡ ವಾಣಿಜ್ಯ ಮಂಡಳಿಗೆ ಸುದೀರ್ಘ ಪತ್ರ ಬರೆದು, ನಾನು ನ್ಯಾಯಾಲಯದ ಮೊರೆ ಹೋಗುವುದಾಗಿ ಹೇಳಿದ್ದರು. ನಾನು ತಪ್ಪು ಮಾಡಿದ್ದರೆ ಅಲ್ಲೇ ದಂಡ ಕಟ್ಟುತ್ತೇನೆ ಎಂದಿದ್ದರು.
ಆದರೆ, ಕುಮಾರ್ ಇದಕ್ಕೆ ಒಪ್ಪದೆ ವಾಣಿಜ್ಯ ಮಂಡಳಿಯಲ್ಲಿ ಸಮಸ್ಯೆ ಬಗೆಹರಿಯಬೇಕು ಎಂದು ಚೇಂಬರ್ ಮುಂದೆ ಧರಣಿ ನಡೆಸಿದ್ದಾರೆ.

ಧರಣಿ ವೇಳೆ ಕುಮಾರ್ ಹೇಳಿದಿಷ್ಟು, ವಾಣಿಜ್ಯ ಮಂಡಳಿ ಇದಕ್ಕೆ ಸಂಬಂಧಿಸಿದಂತೆ ಸಭೆ ಕರೆಯಲಿ, ಆ ಸಭೆಗೆ ಸುದೀಪ್ ಬರಬೇಕು. ಅಲ್ಲೇ ನಾನು ಎಲ್ಲಾ ದಾಖಲೆ ಕೊಡುತ್ತೇನೆ. ಸುದೀಪ್ ಬಗ್ಗೆ ಎಲ್ಲೂ ಕೆಟ್ಟ ಪದ ಮಾತಾಡಿಲ್ಲ. ನನ್ನ ಸಮಸ್ಯೆಗೆ ಅವರು ಸ್ಪಂದಿಸಿಲ್ಲ ಎಂದು ಹೇಳಿದ್ದೇನೆ. ಚೇಂಬರ್ ನಮ್ಮ ಮಾತೃಸಂಸ್ಥೆ . ಏನೇ ಸಮಸ್ಯೆ ಇದ್ದರೂ ಅಲ್ಲೇ ಬಗೆಹರಿಸಿಕೊಳ್ಳೋಣ ಎಂದರು.

error: Content is protected !!