Categories
ಸಿನಿ ಸುದ್ದಿ

ಫೈರ್ ಫ್ಲೈ ಇದು ಶಿವಣ್ಣ ಪುತ್ರಿಯ ನಿರ್ಮಾಣದ ಚಿತ್ರ: ಮಗಳ ಸಿನಿಮಾಗೆ ಶಿವಣ್ಣ ದಂಪತಿ ಶುಭ ಹಾರೈಕೆ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ
ಸಿನಿಮಾಕ್ಕಿಳಿದಿರುವುದು ಗೊತ್ತೇ ಇದೆ. ಶ್ರೀ ಮುತ್ತು ಸಿನಿ ಸರ್ವೀಸ್ ನಡಿ ಹೊಸಪ್ರತಿಭೆಗಳಿಗೆ ಅವಕಾಶ ನೀಡಲೆಂದು ಆರಂಭಿಸಿರುವ ಈ ನಿರ್ಮಾಣ ಸಂಸ್ಥೆಯ ಚೊಚ್ಚಲ ಸಿನಿಮಾ ಇಂದು ಸೆಟ್ಟೇರಿದೆ. ಬೆಂಗಳೂರಿನ ಕಾಡು ಮಲ್ಲೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಸರಳವಾಗಿ ಮುಹೂರ್ತ ನೆರವೇರಿದೆ. ಶಿವರಾಜ್ ಕುಮಾರ್ ದಂಪತಿ ಮಗಳ ಚೊಚ್ಚಲ ನಿರ್ಮಾಣ ಸಿನಿಮಾಗೆ ಶುಭ ಹಾರೈಸಿದರು.

ನಿವೇದಿತಾ ನಿರ್ಮಾಣದ ಚಿತ್ರಕ್ಕೆ ಫೈರ್ ಫ್ಲೈ ಟೈಟಲ್ ಫಿಕ್ಸ್

ನವಿರಾಗಿ ಶುರುವಾದ ಕಥೆಗೆ ಹೆಸರೊಂದು ಮೂಡಿದೆ. ಹೆಸರ ಜೊತೆಗೆ ಬರುವೆವು ಎಂದು ಚಿತ್ರತಂಡ ಶೀರ್ಷಿಕೆ ಅನಾವರಣ ಮಾಡುವುದಾಗಿ ತಿಳಿಸಿತ್ತು. ಅದರಂತೆ ಇಂದು ಟೈಟಲ್ ರಿವೀಲ್ ಮಾಡಲಾಗಿದೆ. ನಿವೇದಿತಾ ಮೊದಲ ಹೆಜ್ಜೆಗೆ ಫೈರ್ ಫ್ಲೈ ಎಂಬ ಕ್ಯಾಚಿ ಟೈಟಲ್ ಹೆಸರಿಡಲಾಗಿದೆ.

ಅಂದಹಾಗೆ ಈ ಚಿತ್ರಕ್ಕೆ ವಂಶಿ ಹೀರೋ. ನಿರ್ದೇಶನ ಕೂಡ ಅವರದ್ದೇ. ‘ಪಿಆರ್ಕೆ ಪ್ರೊಡಕ್ಷನ್ಸ್’ ನಿರ್ಮಾಣದ ‘ಮಾಯಾಬಜಾರ್’ ಸಿನಿಮಾದಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದ ಅವರು, ಇತ್ತೀಚೆಗೆ ಬಂದ ‘ಪೆಂಟಗನ್’ ಚಿತ್ರದಲ್ಲೂ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದರು.

ಈಗ ನಿವೇದಿತಾ ಬಂಡವಾಳ ಹೂಡುತ್ತಿರುವ ಮೊದಲ ಚಿತ್ರಕ್ಕೆ ನಿರ್ದೇಶನ ಮಾಡುವ ಮೂಲಕ ವಂಶಿ ಸ್ವತಂತ್ರ ನಿರ್ದೇಶಕರಾಗಿ ಮತ್ತು ಪೂರ್ಣಪ್ರಮಾಣದ ಹೀರೋ ಆಗಿ ಚಿತ್ರರಂಗದಲ್ಲಿ ಹೊಸ ಜರ್ನಿ ಆರಂಭಿಸುತ್ತಿದ್ದಾರೆ. ಜಯ್ ರಾಮ್ ಸಹ-ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ. ಅಭಿಲಾಷ್ ಕಲ್ಲಟ್ಟಿ ಛಾಯಾಗ್ರಹಣ, ಚರಣ್ ರಾಜ್ ಸಂಗೀತ ನಿರ್ದೇಶನ ಹಾಗೂ ರಘು ನಿಡುವಳ್ಳಿ ಅವರು ಸಂಭಾಷಣೆಯ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.

ಶಿವಣ್ಣ ಯಾವಾಗಲೂ ಹೊಸಬರಿಗೆ ಪ್ರೋತ್ಸಾಹ ನೀಡುತ್ತಾರೆ. ಅದೇ ರೀತಿ ನಿವೇದಿತಾ ಶಿವರಾಜ್ಕುಮಾರ್ ಕೂಡ ಹೊಸ ಪ್ರತಿಭೆಗಳಿಗೆ ವೇದಿಕೆ ಒದಗಿಸಿಕೊಡುತ್ತಿದ್ದಾರೆ.

‘ಶ್ರೀ ಮುತ್ತು ಸಿನಿ ಸರ್ವೀಸ್’ ಸಂಸ್ಥೆಯು ಅವರ ಕನಸಿನ ಕೂಸು. ಯುವ ಪ್ರತಿಭೆಗಳಿಗೆ ಮತ್ತು ಹೊಸ ಆಲೋಚನೆಗಳಿಗೆ ಅವಕಾಶ ನೀಡಲು ಈ ಸಂಸ್ಥೆ ಮುಡಿಪಾಗಿದೆ.

Categories
ಸಿನಿ ಸುದ್ದಿ

ಮಾರಕಾಸ್ತ್ರ ಹಿಡಿದ ಮಾಲಾಶ್ರೀ! ಟೀಸರ್ ಹೊರಬಂತು…

ಆಕ್ಷನ್ ಕ್ವೀನ್ ಮಾಲಾಶ್ರೀ ಪ್ರಮುಖಪಾತ್ರದಲ್ಲಿ ನಟಿಸಿರುವ “ಮಾರಕಾಸ್ತ್ರ” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಮಾಲಾಶ್ರೀ ಅವರೆ ಟೀಸರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು.

ನನಗೆ ಧನಕುಮಾರ್‌ ಮಾಸ್ಟರ್ ಮೂಲಕ ಈ ತಂಡದ ಪರಿಚಯವಾಯಿತು. ನಿರ್ದೇಶಕ ಗುರುಮೂರ್ತಿ ಸುನಾಮಿ‌ ಅವರು ಹೇಳಿದ ಕಥೆ ಇಷ್ಟವಾಯಿತು. ನಾನು ಈ ಚಿತ್ರ ಒಪ್ಪಕೊಳ್ಳಲು ನಿರ್ದೇಶಕರೆ ಕಾರಣ. ಏಕೆಂದರೆ ಅವರು ವಿಕಲ ಚೇತನರಾಗಿದ್ದರು ಕೂಡ, ಅವರಲ್ಲಿರುವ ಸಿನಿಮಾ ಪ್ರೀತಿ ಕಂಡು ಸಂತೋಷವಾಯಿತು. ಮೊದಲು ಹನ್ನೊಂದು ದಿನಗಳ ಕಾಲ ನನ್ನ ಚಿತ್ರೀಕರಣ ಎಂದು ನಿಗದಿಯಾಗಿತ್ತು. ಆನಂತರ ಒಟ್ಟು ಅರವತ್ತು ದಿನಗಳ ಕಾಲ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದೇನೆ. ನಾಲ್ಕು ಸಾಹಸ ಸನ್ನಿವೇಶಗಳಿವೆ. ನಾನು ಆಕ್ಷನ್ ಕ್ವೀನ್ ಎಂದು‌ ಕರೆಸಿಕೊಳ್ಳಲು‌ ಥ್ರಿಲ್ಲರ್ ಮಂಜು ಮಾಸ್ಟರ್ ಪ್ರಮುಖ ಕಾರಣ.

ಅವರ ಜೊತೆಗೆ ಈ ಚಿತ್ರದಲ್ಲೂ ಕೆಲಸ ಮಾಡಿದ್ದು ಖುಷಿಯಾಗಿದೆ . “ಮಾರಕಾಸ್ತ್ರ” ಚಿತ್ರದ ಸಾಹಸ ಸನ್ನಿವೇಶಗಳು ನನ್ನ ಹಿಂದಿನ “ಚಾಮುಂಡಿ”, ” ಶಕ್ತಿ” ಮುಂತಾದ ಚಿತ್ರಗಳ ಸಾಹಸ ಸನ್ನಿವೇಶಗಳನ್ನು ನೆನಪಿಸಿತು. ಇದರಲ್ಲಿ ನನ್ನದು ಪೊಲೀಸ್ ಅಧಿಕಾರಿಯ ಪಾತ್ರ ಎಂದರು ನಟಿ ಮಾಲಾಶ್ರೀ.

ನಾನು ಮೂಲತಃ ಬಳ್ಳಾರಿಯವನು. ಇದು ನನ್ನ ಮೊದಲ ಚಿತ್ರ. ಪ್ರಥಮ ಚಿತ್ರದಲ್ಲೇ ಮಾಲಾಶ್ರೀ ಅವರಿಗೆ ಆಕ್ಷನ್ ಕಟ್ ಹೇಳುತ್ತೀನಿ ಅಂದುಕೊಂಡಿರಲಿಲ್ಲ. “ಮಾರಕಾಸ್ತ್ರ” ಒಂದು ಕೌಟುಂಬಿಕ ಚಿತ್ರ‌. ಇದರಲ್ಲಿ ಆಕ್ಷನ್, ಸಸ್ಪೆನ್ಸ್, ಥ್ರಿಲ್ಲರ್ ಎಲ್ಲವೂ ಇದೆ . ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದೆ ಎಂದು ನಿರ್ದೇಶಕ ಗುರುಮೂರ್ತಿ ಸುನಾಮಿ ತಿಳಿಸಿದರು.

“ಮಾರಕಾಸ್ತ್ರ” ಚಿತ್ರದ ಕಥೆ ಚೆನ್ನಾಗಿದೆ. ಚಿತ್ರದ ಹಾಡು ಹೇಳುವುದಕ್ಕೆ ಹೋದ ನಾನು ನಿರ್ಮಾಪಕನಾದೆ. ಈ ಚಿತ್ರದಲ್ಲಿ ನಟನೆ ಕೂಡ ಮಾಡಿದ್ದೇನೆ. ನನಗೆ ನನ್ನ ದೇಶದ ಮೇಲೆ ಅಭಿಮಾನ ಹೆಚ್ಚು. ಹಾಗಾಗಿ ಈ ಚಿತ್ರದ ಹಾಡೊಂದರ ಚಿತ್ರೀಕರಣವನ್ನು ಕಾಶ್ಮೀರದಿಂದ ಕನ್ಯಾಕುಮಾರಿ ತನಕ ಸುಮಾರು ಮೂವತ್ತೆರಡು ದಿನಗಳ ಕಾಲ ಚಿತ್ರೀಕರಣ ಮಾಡಿದ್ದೇವೆ. ಸದ್ಯದಲ್ಲೇ ಹಾಡನ್ನು ಬಿಡುಗಡೆ ಮಾಡುತ್ತೇವೆ ಎಂದರು ನಿರ್ಮಾಪಕ ನಟರಾಜ್.

ಈ ಚಿತ್ರದಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕಾಣಿಸಿಕೊಂಡಿದ್ದೇನೆ ಎಂದು ತಮ್ಮ ಪಾತ್ರದ ಬಗ್ಗೆ ಹರ್ಷಿಕಾ ಪೂಣಚ್ಛ ಹೇಳಿದರು. ಚಿತ್ರದಲ್ಲಿ ನಟಿಸಿರುವ ಆನಂದ್ ಆರ್ಯ(ನಾಯಕ), ಭರತ್ ಸಿಂಗ್, ಉಗ್ರಂ ಮಂಜು, ನಿರ್ಮಾಪಕಿ ಕೋಮಲ ನಟರಾಜ್, ಕ್ರಿಯೇಟಿವ್ ಹೆಡ್ ಧನಕುಮಾರ್, ಕಾರ್ಯಕಾರಿ ನಿರ್ಮಾಪಕ ಮಂಜುನಾಥ್ ಹಾಗೂ ಹಿನ್ನೆಲೆ ಸಂಗೀತ ನೀಡಿರುವ ಸತೀಶ್ ಬಾಬು ಮುಂತಾದವರು “ಮಾರಕಾಸ್ತ್ರ” ಚಿತ್ರದ ಕುರಿತು ಮಾತನಾಡಿದರು. ಮಂಜು ಕವಿ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಅರುಣ್ ಸುರೇಶ್ ಛಾಯಾಗ್ರಹಣ ಮಾಡಿದ್ದಾರೆ.

Categories
ಸಿನಿ ಸುದ್ದಿ

ಇದು ಆರಂಭದ ಟ್ರೇಲರ್! ಅತ್ಯಾಚಾರ- ಕೊಲೆ ಸುತ್ತ ಹೋರಾಟದ ಚಿತ್ರ

ಇದೇ ಮೊದಲ ಸಲ ನಿರ್ದೇಶನದ ಜೊತೆಗೆ ಹೀರೋ ಆಗಿಯೂ ಕಾಣಿಸಿಕೊಂಡಿರುವ ಮಂಜುನಾಥ್ ಬಡಿಗೇರ್ ಚಿತ್ರವಿದು. ಶ್ರೀ ಕಾಳಿಕಾ ದೇವಿ ಪ್ರೊಡಕ್ಷನ್ಸ ಬ್ಯಾನರ್ ಅಡಿಯಲ್ಲಿ ಸಾಂಭಯ್ಯ ಆಚಾರ್ಯ ನಿರ್ಮಾಣ ಮಾಡಿರುವ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.

ತಮ್ಮ ಸಿನಿಮಾ ಕುರಿತು ನಿರ್ತದೇಶಕರು ಹೇಳುವುದಿಷ್ಟು. ಕೆಲವು ಸಿನಿಮಾಗಳಲ್ಲಿ ನಿರ್ದೇಶನ ಹಾಗು ಛಾಯಾಗ್ರಾಹಣ ವಿಭಾಗದಲ್ಲಿ ಕೆಲಸ ಮಾಡಿ ಕಿರುಚಿತ್ರಗಳನ್ನು ನಿರ್ದೇಶಿಸಿದ್ದೇನೆ. ಇದು ನೈಜ ಘಟನೆಗಳಿಂದ ಸ್ಫೂರ್ತಿ ಪಡೆದ ಕಥೆ, ಪಕ್ಷಿಗಳ ರಕ್ಷಣೆಗಾಗಿ ಹೋರಾಡುತಿದ್ದ ಯುವತಿಯ ಮೇಲೆ ಅತ್ಯಾಚಾರ ಹಾಗೂ ಕೊಲೆಯಾಗುತ್ತದೆ. ಆ ಕೊಲೆಯ ಪ್ರತಿಕಾರಕ್ಕೆ ಇಬ್ಬರು ಯುವಕರು ಮುಂದಾಗುತ್ತಾರೆ. ಅವರ ಹೋರಾಟಕ್ಕೆ ಜಯ ಸಿಗುತ್ತಾ ಎಂಬುದರ ಸುತ್ತ ಚಿತ್ರದ ಕಥೆ ಸಾಗುತ್ತದೆ.

ಈ ಚಿತ್ರದಲ್ಲಿ ನಾಯಕಿಯಾಗಿ ನಿಶ್ಚಿತಾ ಶೆಟ್ಟಿ ನಟಿಸಿದ್ದು, ಅವರಿಗೆ ಜಗನ್ನಾಥ ದಾಸರು ಬಳಿಕ ನಟಿಸುತ್ತಿರುವ ಎರಡನೇ ಚಿತ್ರವಿದು. ಎರಡನೇ ನಾಯಕನಾಗಿ ಪೃಥ್ವಿರಾಜ್ ಅಭಿನಯಿಸಿದ್ದಾರೆ ಎಂಬುದು ನಿರ್ದೇಶಕರ ಮಾತು.

ಇನ್ನು ಇಲ್ಲಿ ಗಣೇಶ್ ರಾವ್ ಮಾತನಾಡಿ, ಇದುವರೆಗೆ 310 ಸಿನಿಮಾಗಳಲ್ಲಿ ನಟಿಸಿದ್ದೇನೆ ಅವುಗಳಲ್ಲಿ 150ಕ್ಕೂ ಅಧಿಕ ಚಿತ್ರಗಳಲ್ಲಿ ಪೊಲೀಸ್ ಪಾತ್ರದಲ್ಲಿ ಅಭಿನಯಿಸಿದ್ದೇನೆ, ಈ ಚಿತ್ರದಲ್ಲಿ ಮೊದಲು ನೆಗೆಟಿವ್ ಶೇಡ್ ನಲ್ಲಿ ಕಾಣಿಸಿಕೊಂಡಿದ್ದು, ನಂತರ ನಾಯಕರಿಗೆ ಸಹಾಯ ಮಾಡುವ ಪಾತ್ರ ನನ್ನದು ಎಂದರು.

ಕುಮಾರ್ ಬೋರಕನವರ್, ರಜತಾದ್ರಿ ಪ್ರಶಾಂತಂ, ಪ್ರಿಯಾಂಕಾ, ಕಾಳಚಾರಿ, ಪ್ರಭು ಹಿರೇಮಠ್ ಪ್ರಮುಖ ತಾರಾಗಣದಲ್ಲಿದ್ದಾರೆ.

ಈ ಚಿತ್ರದಲ್ಲಿ ಛಾಯಾಗ್ರಾಹಣ ಮುಂಜಾನೆ ಮಂಜು ಮಾಡಿದರೆ, ಅಲೆಕ್ಸ್ ಸಂಗೀತ ನೀಡಿದ್ದಾರೆ. ಸಂಕಲನ ಆಚಾರ್ಯ ಗುರು ಮಾಡಿದ್ದು ಚಿತ್ರವನ್ನು ಜುಲೈ ನಲ್ಲಿ ಬಿಡುಗಡೆ ಮಾಡಲು ಚಿತ್ರ ತಂಡ ತಯಾರಿ ಮಾಡಿಕೊಳ್ಳುತ್ತಿದೆ.

Categories
ಸಿನಿ ಸುದ್ದಿ

ಐವತ್ತು ದಿನದ ಸಂಭ್ರಮದಲ್ಲಿ ಬಿಸಿಲು ಕುದುರೆ ತಂಡ

ಕನ್ನಡದ ಸೂಪರ್ ಹಿಟ್ ಚಿತ್ರಗಳಿಗೆ ಸೂಪರ್ ಹಿಟ್ ಹಾಡುಗಳನ್ನು ಬರೆದಿರುವ ಹೃದಯ ಶಿವ ನಿರ್ದೇಶನದ “ಬಿಸಿಲು ಕುದುರೆ” ಚಿತ್ರ ಕಳೆದ ಏಪ್ರಿಲ್ 21ರಂದು ಬಿಡುಗಡೆಯಾಗಿತ್ತು. ಚಿತ್ರ ಈಗ ಐವತ್ತು ದಿನಗಳನ್ನು ಪೂರೈಸಿದೆ. ಈ ಸಂತಸವನ್ನು ಚಿತ್ರತಂಡದ ಸದಸ್ಯರು ಮಾಧ್ಯಮದ ಮುಂದೆ ಹಂಚಿಕೊಂಡರು.

ಅರುಣ್ಯದಂಚಿನಲ್ಲಿ ತುಂಡುಭೂಮಿ ಹೊಂದಿರುವ ರೈತನ ಬವಣೆಯ ಕುರಿತಾದ ಈ ಚಿತ್ರವನ್ನು ಜನರು ನೋಡಿ ಮೆಚ್ಚಿಕೊಂಡಿದ್ದಾರೆ. ಚಿತ್ರ ಒಂದೇ ಚಿತ್ರಮಂದಿರದಲ್ಲಿ ಐವತ್ತು ದಿನ ಪೂರೈಸಿಲ್ಲ. ರಾಜ್ಯದ ವಿವಿಧ ಕಡೆ ಬಿಡುಗಡೆಯಾಗಿ ಪ್ರದರ್ಶನ ಕಂಡು ಈಗ ಐವತ್ತನೇ ದಿನ ಪೂರೈಸಿದೆ. ಸದ್ಯದಲ್ಲೇ “ಬಿಸಿಲು ಕುದುರೆ” ಓಟಿಟಿಯಲ್ಲೂ ಬರಲಿದೆ. ಇದಕ್ಕೆ ಕಾರಣರಾದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸುತ್ತೇನೆ. ಸದ್ಯದಲ್ಲೇ ನನ್ನ ನಿರ್ದೇಶನದಲ್ಲಿ ಎರಡು ಹೊಸ ಚಿತ್ರಗಳು ಆರಂಭವಾಗಲಿದೆ. ಅದರಲ್ಲಿ ಒಂದು ಬಿಗ್ ಬಜೆಟ್ ನ ಚಿತ್ರವಾಗಿರಲಿದೆ ಎಂದರು ನಿರ್ದೇಶಕ ಹೃದಯ ಶಿವ.

ನಾನು ಚಿತ್ರದ ಕುರಿತು ಬಿಡುಗಡೆ ಪೂರ್ವದಲ್ಲೇ ಸಾಕಷ್ಟು ಮಾತನಾಡಿದ್ದೇನೆ. ಈಗ ಐವತ್ತನೇ ದಿನದ ಸಂತೋಷವನ್ನು ಸಂಭ್ರಮಿಸುತ್ತಿದ್ದೇನೆ ಎಂದು ನಟ ಸಂಪತ್ ಮೈತ್ರೇಯ ತಿಳಿಸಿದರು.

ಚಿತ್ರದಲ್ಲಿ ನಟಿಸಿರುವ ಸುನೀತಾ, ಕರಿಸುಬ್ಬು, ವಿಕ್ಚರಿ ವಾಸು, ಸಂಗೀತ ನಿರ್ದೇಶಕ ಇಮ್ತಿಯಾಜ್ ಸುಲ್ತಾನ್,
ಛಾಯಾಗ್ರಾಹಕ ನಾಗಾರ್ಜುನ, ಸಂಕಲನಕಾರ ಕೆಂಪರಾಜ್ ಸೇರಿದಂತೆ ಚಿತ್ರತಂಡದ ಅನೇಕ ಸದಸ್ಯರು “ಬಿಸಿಲು ಕುದರೆ” ಯಶಸ್ಸಿನ ಬಗ್ಗೆ ಮಾತನಾಡಿದರು.
ಹೃದಯ ಶಿವ ಚಿತ್ರತಂಡದವರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಿದರು.

Categories
ಸಿನಿ ಸುದ್ದಿ

ಲವ್ ಮಿ ಆರ್ ಹೇಟ್ ಮಿ ಸಿನಿಮಾಗೆ ಶೂಟಿಂಗ್ ಮುಕ್ತಾಯ: ಸೆಪ್ಟೆಂಬರ್ 29ಕ್ಕೆ ರಿಲೀಸ್

ನಾಯಕ ಡಾರ್ಲಿಂಗ್ ಕೃಷ್ಣ ಅವರ ಹುಟ್ಟುಹಬ್ಬಕ್ಕೆ. “ಲವ್ ಮೀ ಆರ್ ಹೇಟ್ ಮೀ” ಚಿತ್ರದ ಬಿಡುಗಡೆಯ ದಿನಾಂಕ ಘೋಷಣೆಯಾಗಿದೆ. ಬಹ ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ 29 ರಂದು ಬಿಡುಗಡೆಯಾಗಲಿದೆ.

ದೀಪಕ್ ಗಂಗಾಧರ್ ಕಥೆ, ಚಿತ್ರಕಥೆ ಬರೆದು ಮೊದಲ ಬಾರಿಗೆ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ದೀಪಕ್ ಗಂಗಾಧರ್ ಮೂವೀಸ್ ಲಾಂಛನದಲ್ಲಿ ದೀಪಕ ಗಂಗಾಧರ್ ಅವರ ಜೊತೆಗೆ ಸುನೀಲ್ ಬಿ.ಎನ್, ಮದನ್ ಗಂಗಾಧರ್, ಚಂದನ್ ಜೆ ಹಾಗೂ ನಾಗರಾಜ್ ಗೌಡ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

ಲವ್ ಸ್ಟೋರಿ ಜಾನರ್ ನ ಈ ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ.

ಐದು ಹಾಡುಗಳಿರುವ ಈ ಚಿತ್ರಕ್ಕೆ ಶ್ರೀನಿಧರ್ ಸಂಭ್ರಮ್ – ನಕುಲ್ ಅಭಯಂಕರ್ ಸಂಗೀತ ನೀಡಿದ್ದಾರೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನವಿದೆ.

ರವಿವರ್ಮ ಸಾಹಸ ನಿರ್ದೇಶನ, ಈಶ್ವರಿ ಕುಮಾರ್ ಕಲಾ ನಿರ್ದೇಶನ, ಮುರಳಿ ಹಾಗೂ ಮೋಹನ್ ಅವರ ನೃತ್ಯ ನಿರ್ದೇಶನವಿರುವ ಈ ಚಿತ್ರಕ್ಕೆ ಯೋಗಾನಂದ್ ಮುದ್ದಾನ್, ರಘು ನಡವಳ್ಳಿ ಹಾಗೂ ರಘು ಸಂಭಾಷಣೆ ಬರೆದಿದ್ದಾರೆ.

ಡಾರ್ಲಿಂಗ್ ಕೃಷ್ಣ ಅವರಿಗೆ ನಾಯಕಿಯಾಗಿ ರಚಿತಾರಾಮ್ ನಟಿಸುತ್ತಿದ್ದಾರೆ. ರೂಪೇಶ್ ಶೆಟ್ಟಿ, ನಂದಿನಿ, ರಾಕೇಶ್ ಪೂಜಾರಿ, ದೀಪಿಕಾ, ಪ್ರವೀಣ್, ಸುಂದರ್ ವೀಣಾ, ರಮೇಶ್ ಭಟ್ ಮುಂತಾದವರು “ಲವ್ ಮೀ ಆರ್ ಹೇಟ್ ಮೀ” ಚಿತ್ರದ ತಾರಾಬಳಗದಲ್ಲಿದ್ದಾರೆ.

Categories
ಸಿನಿ ಸುದ್ದಿ

ಟೋಬಿ ಇದು ರಾಜ್ ಬಿ ಶೆಟ್ಟಿ ಚಿತ್ರ: ಆಗಸ್ಟ್ 25ಕ್ಕೆ ರಿಲೀಸ್

ಮೊದಲಿನಿಂದಲೂ ತಮ್ಮ ವಿಭಿನ್ನಪಾತ್ರಗಳ ಮೂಲಕ ಜನರ ಮನ ಗೆದ್ದಿರುವ ರಾಜ್ ಬಿ ಶೆಟ್ಟಿ ನಾಯಕರಾಗಿ ನಟಿಸಿರುವ “ಟೋಬಿ” ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ವಿಭಿನ್ನ ಕಥೆಯ ಈ ಚಿತ್ರ ಆಗಸ್ಟ್ 25 ರಂದು ಬಿಡುಗಡೆಯಾಗಲಿದೆ.‌ ಪ್ರತಿಷ್ಠಿತ ಕೆ.ವಿ.ಎನ್ ಪ್ರೊಡಕ್ಷನ್ಸ್ ಈ ಚಿತ್ರದ ವಿತರಣೆ ಹಕ್ಕು ಪಡೆದುಕೊಂಡಿದೆ. “ಟೋಬಿ” ಚಿತ್ರಕ್ಕೆ “ಮಾರಿ ಮಾರಿ ..ಮಾರಿಗೆ ದಾರಿ” ಎಂಬ ಅಡಿಬರಹವಿದೆ.

ಮೋಷನ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಈ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಮೋಷನ್ ಪೋಸ್ಟರ್ ಸಾಕಷ್ಟು ಕುತೂಹಲ ಮೂಡಿಸಿದೆ.

ರಾಜ್ ಬಿ ಶೆಟ್ಟಿ ಈವರೆಗಿನ ಚಿತ್ರಗಳ ಪೈಕಿ “ಟೋಬಿ” ಬಿಗ್ ಬಜೆಟ್ ನ ಚಿತ್ರವಾಗಿದೆ. ಲೈಟರ್ ಬುದ್ಧ ಫಿಲಂಸ್, ಅಗಸ್ತ್ಯ ಫಿಲ್ಮ್ಸ್ ಹಾಗೂ ಕಾಫಿ ಗ್ಯಾಂಗ್ ಸ್ಟುಡಿಯೋ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ರವಿ ರೈ ಕಳಸ ಈ ಚಿತ್ರದ ನಿರ್ಮಾಪಕರು. ಶಾಮಿಲ್ ಬಂಗೇರ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.

ಮೂಲಕಥೆ ಟಿ.ಕೆ ದಯಾನಂದ್ ಅವರದು. ರಾಜ್ ಬಿ. ಶೆಟ್ಟಿ ರಚೆನೆ ಹಾಗೂ ಬಾಸಿಲ್ ಅವರ ನಿರ್ದೇಶನ ಈ ಚಿತ್ರಕ್ಕಿದೆ. ಮಿಥುನ್ ಮುಕುಂದನ್ ಸಂಗೀತ ನಿರ್ದೇಶನ, ಪ್ರವೀಣ್ ಶ್ರೀಯನ್ ಛಾಯಾಗ್ರಹಣ – ಸಂಕಲನ ಹಾಗೂ ಅರ್ಜುನ್ ರಾಜ್ – ರಾಜಶೇಖರ್ ಅವರ ಸಾಹಸ ನಿರ್ದೇಶನ “ಟೋಬಿ” ಚಿತ್ರಕಿದ್ದು, ರಾಜ್ ಬಿ ಶೆಟ್ಟಿ, ಸಂಯುಕ್ತ ಹೊರನಾಡು, ಚೈತ್ರಾ ಆಚಾರ್, ಗೋಪಾಲಕೃಷ್ಣ ದೇಶಪಾಂಡೆ, ದೀಪಕ್ ರಾಜ್ ಶೆಟ್ಟಿ ಮುಂತಾದವರು ತಾರಾಬಳಗದಲ್ಲಿದ್ದಾರೆ.

Categories
ಸಿನಿ ಸುದ್ದಿ

ದುಬೈನಲ್ಲಿ ಡಾ. ರಾಜ್ ಕಪ್ ಸೀಸನ್ 6: ಹರಾಜು ಪ್ರಕ್ರಿಯೆ ಶುರು- ಅಶ್ವಿನಿ ಪುನೀತ್ ವಿಶೇಷ ಅತಿಥಿ

ಸ್ಯಾಂಡಲ್ ವುಡ್ ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ ಶುರುವಾಗ್ತಿದೆ. ಸಿಸಿಎಲ್ ಕ್ರಿಕೆಟ್ ಲೀಗ್ ಬೆನ್ನಲ್ಲೀಗ ಡಾ.ರಾಜ್ ಕಪ್ ಸೀಸನ್ 6ಗೆ ಮುಹೂರ್ತ ಫಿಕ್ಸ್ ಆಗಿದ್ದು, ಇದಕ್ಕಾಗಿ ತಾರೆಯರು ತಯಾರಿ ಆರಂಭಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ ಸ್ಮರಣಾರ್ಥವಾಗಿ ರಾಜ್ ಕಪ್ ಆಯೋಜಿಸಲಾಗಿದ್ದು, ಇದೇ ಜೂನ್ 17 ರಂದು ದುಬೈನಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ವಿಶೇಷ ಅತಿಥಿಯಾಗಿ ಆಗಮಿಸಲಿದ್ದಾರೆ. ಕ್ರಿಕೆಟ್ ಪಂದ್ಯಾವಳಿಗೆ ಸಂಬಂಧಪಟ್ಟಂತೆ ಆಯೋಜಕರಾದ ರಾಜೇಶ್ ಬ್ರಹ್ಮಾವರ, ಅನಿರುಧ್ ಮಣಿಕಾಂತ್ ಕದ್ರಿ, ಸಿಂಪಲ್ ಸುನಿ, ರವಿಶಂಕರ್ ಗೌಡ, ಜೇಮ್ಸ್ ಚೇತನ್, ಪವನ್ ಒಡೆಯರ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದಾರೆ.

ರಾಜ್ ಕಪ್ ಆಯೋಜಕರಾದ ರಾಜೇಶ್ ಬ್ರಹ್ಮಾವರ ಮಾತನಾಡಿ, ಇದೇ 17ಕ್ಕೆ ದುಬೈನಲ್ಲಿ ರಾಜ್ ಕಪ್ ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದೆ. ಕಳೆದ ಬಾರಿ 8 ತಂಡ ಇತ್ತು. ಈ ಬಾರಿ 12 ತಂಡಗಳಾಗಿವೆ. 1000ಕ್ಕೂ ಹೆಚ್ಚು ಅಪ್ಲೀಕೇಷನ್ ಬಂದಿತ್ತು. ಅವುಗಳಲ್ಲಿ ರೂಲ್ಸ್ ಗೆ ತಕ್ಕಂತೆ ಆಯ್ಕೆ ಮಾಡಲಾಗಿದೆ. 12 ತಂಡಗಳಿಗೆ 12 ಕ್ಯಾಪ್ಟನ್, 12 ವೈಸ್ ಕ್ಯಾಪ್ಟನ್, ಸ್ಟಾರ್ ಕ್ಯಾಪ್ಟನ್ ಇರಲಿದ್ದಾರೆ. ರಾಜ್ ಕಪ್ ಸೀಸನ್ 6ನ್ನು ಆರು ದೇಶಗಳಲ್ಲಿ ಮಾಡುವ ಪ್ಲಾನ್ ನಡೆದಿದೆ. ಶ್ರೀಲಂಕಾ, ಸಿಂಗಾಪುರ್, ಮಲೇಷ್ಯಾ, ಬ್ಯಾಂಕಾಕ್ ಮತ್ತು ದುಬೈನಲ್ಲಿ ಪಂದ್ಯ ನಡೆಯಲಿವೆ. ಇನ್ನೊಂದು ದೇಶ ಬಾಕಿ ಉಳಿದಿದೆ. ದುಬೈನಲ್ಲಿ ನಡೆಯುವ ಆಟಗಾರರ ಹರಾಜಿನಲ್ಲಿ ಮುಖ್ಯ ಅತಿಥಿಯಾಗಿ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

ನಟ ಅನಿರುದ್ಧ್ ಮಾತನಾಡಿ, ಡಾ.ರಾಜ್ ಕಪ್ ಹೆಸರಲ್ಲೇ ಸಕಾರಾತ್ಮಕತೆ ಇದೆ. ಆ ಒಂದು ವ್ಯಕ್ತಿಗೆ ಮಹಾನ್ ಕಲಾವಿದರಿಗೆ ಅವ್ರ ಹೆಸರಲ್ಲಿ ಅವರ ಸ್ಮಾರಣಾರ್ಥವಾಗಿ ಕ್ರಿಕೆಟ್ ಪಂದ್ಯಾವಳಿ ಆಡುತ್ತಿರುವುದು ನಿಜಕ್ಕೂ ಸಂತೋಷ. ಅದರಲ್ಲಿ ನಾನು ಭಾಗಿಯಾಗಿದ್ದು, ರಾಜೇಶ್ ಅವಕಾಶ ಕಲ್ಪಿಸಿಕೊಟ್ಟಿದ್ದು, ನನಗೆ ವೈಯಕ್ತಿಕವಾಗಿ ಬಹಳ ಸಂತೋಷವಾಗಿದೆ. ರಾಜೇಶ್ ನನಗೆ ಆತ್ಮೀಯರು. ನನ್ನ ಮೊದಲ ಸಿನಿಮಾದಲ್ಲಿ ಒಟ್ಟಿಗೆ ಅಭಿನಯಿಸಿದ್ದೇವೆ. ಕ್ರಿಕೆಟ್ ಅನ್ನೋದು ನಿಮಿತ್ತ ಅಷ್ಟೇ. ನಮ್ಮ ಕನ್ನಡ ಚಿತ್ರರಂಗದ ಒಗ್ಗಟ್ಟಾಗಿದ್ದೇವೆ. ನಮ್ಮಲ್ಲಿ ಬಾಂಧವ್ಯ ಇದೆ ಅನ್ನೋದನ್ನು ತೋರಿಸಿಕೊಡುತ್ತದೆ. ಈ ಪಂದ್ಯಾವಳಿ ಯಶಸ್ವಿಯಾಗಲಿ ಎಂದರು.

ಡಾ. ರಾಜ್ ಕಪ್ ಸೀಸನ್ 6 ನಲ್ಲಿ ಒಟ್ಟು 12 ತಂಡಗಳು ಭಾಗಿಯಾಗಲಿದ್ದು, 27 ಮ್ಯಾಚ್ ಗಳು ನಡೆಯಲಿದೆ. ಡಾಲಿ ಧನಂಜಯ್, ಅನಿರುದ್ದ್, ಡಾರ್ಲಿಂಗ್ ಕೃಷ್ಣ , ಅಭಿಷೇಕ್ ಅಂಬರೀಶ್, ನೀನಾಸಂ ಸತೀಶ್, ಲೂಸ್ ಮಾದ ಯೋಗಿ, ವಶಿಷ್ಠ ಸಿಂಹ, ಪ್ರಜ್ವಲ್, ಕೋಮಲ್, ಶ್ರೀನಗರ ಕಿಟ್ಟಿ, ರಾಜುಗೌಡ ನೇತೃತ್ವದ ತಂಡಗಳು ಪಾಲ್ಗೊಳ್ಳಲಿವೆ. ಇನ್ನು, ರಾಜ್ ಕಪ್ ಸೀಸನ್ 6ರ ಲೀಗ್ ಮ್ಯಾಚ್ ಗಳು ವಿದೇಶದಲ್ಲಿ ನಡೆಯಲಿದೆ. ಈ ಬಾರಿ ಲೀಗ್ ಪಂದ್ಯಗಳು ಶ್ರೀಲಂಕಾ, ಸಿಂಗಾಪುರ್, ಮಲೇಷ್ಯಾ ಬ್ಯಾಂಕಾಕ್ ಮತ್ತು ದುಬೈನಲ್ಲಿ ನಡೆಯಲಿವೆ. ಈ ಮಹತ್ವದ ರಾಜ್ ಕಫ್ ಟೂರ್ನಿಗಾಗಿ ಸ್ಯಾಂಡಲ್ ವುಡ್ ತಾರೆಯರು, ತಂತ್ರಜ್ಞರು, ರಾಜಕೀಯ, ಮಾಧ್ಯಮದವರು ಭಾಗಿಯಾಗಲಿದ್ದಾರೆ.

Categories
ಸಿನಿ ಸುದ್ದಿ

ಲವ್ ಲಿ ಹಾಡಿಗೆ ಜೈ ಅಂದ ಪ್ರೇಕ್ಷಕ: ಟೈಟಲ್ ಸಾಂಗ್ ರಿಲೀಸ್ ಮಾಡಿದ ತಾರೆಯರು

ವಸಿಷ್ಠ ಸಿಂಹ ನಾಯಕರಾಗಿ ಅಭಿನಯಿಸಿರುವ ‘ಲವ್ ಲಿ’ ಚಿತ್ರದ ಟೈಟಲ್ ಹಾಡು ಇತ್ತೀಚಿಗೆ ಬಿಡುಗಡೆಯಾಗಿದ್ದು, ಜಾಲತಾಣದಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ವಿಶೇಷವಾದ ಈ ಗೀತೆಯನ್ನು ಬಿಡುಗಡೆ ಮಾಡಲು ಮುಖ್ಯ ಅಥಿತಿಗಳಾಗಿ ಕ್ರೇಜಿ ಸ್ಟಾರ್ ರವಿಚಂದ್ರನ್, ರಿಯಲ್ ಸ್ಟಾರ್ ಉಪೇಂದ್ರ, ‘ನೆನಪಿರಲಿ’ ಪ್ರೇಮ್, ಪ್ರಿಯಂಕಾ ಉಪೇಂದ್ರ ಹಾಗೂ ಹರಿಪ್ರಿಯ ಆಗಮಿಸಿದ್ದರು. ಅಭುವನಾಸ್ ಕ್ರೀಯೆಷನ್ಸ್ ಬ್ಯಾನರ್ ನಲ್ಲಿ ರವೀಂದ್ರ ಕುಮಾರ್ ನಿರ್ಮಿಸಿರುವ ಈ ಚಿತ್ರಕ್ಕೆ ಕಥೆ ಬರೆದು ಮೊದಲಬಾರಿ ನಿರ್ದೇಶನ ಮಾಡಿದ್ದಾರೆ ಯುವ ಪ್ರತಿಭೆ ಚೇತನ್ ಕೇಶವ್.

‘ನಿರ್ಮಾಪಕರ ಸಹಕಾರದಿಂದ ಸಿನಿಮಾ ಇಷ್ಟು ಚೆನ್ನಾಗಿ ಬಂದಿದೆ. ಸಾಂಗ್ ನಂತೆ ಸಿನಿಮಾ ಕೂಡ ಕಲರ್ ಫುಲ್ ಆಗಿ ಬಂದಿದೆ. ಪ್ರೀತಿಯಲ್ಲಿ ಎನೆಲ್ಲಾ ಇರುತ್ತೆ ಎಂಬುದು ಸಿನಿಮಾ. ಮೊದಲ ಭಾಗದಲ್ಲಿ ರೋಮ್ಯಾಂಟಿಕ್ ಕಥೆ ಇದ್ದರೆ, ದ್ವಿತೀಯಾರ್ಧದಲ್ಲಿ ಕಂಟೆಂಟ್ ಬಗ್ಗೆ ಹೇಳಲಾಗಿದೆ. ನಾನು 9 ವರ್ಷದಿಂದ ಚಿತ್ರರಂಗದಲ್ಲಿದ್ದೀನಿ. ನಿರ್ದೇಶಕ ನರ್ತನ್ ಜೊತೆ ‘ಮಫ್ತಿ’ ಚಿತ್ರಕ್ಕೆ ಕೆಲಸ ಮಾಡಿದ್ದೇನೆ. ಸ್ಕೂಲ್ ದಿನಗಳಿಂದ ನನಗೆ ಸಿನಿಮಾ ಮಾಡುವ ಆಸೆ. ಉಪೇಂದ್ರ, ರವಿಚಂದ್ರನ್ ಅವರು ನನಗೆ ಸ್ಪೂರ್ತಿ. ಆದರೆ ನಾನು ಹೆಚ್ಚಾಗಿ ಆ್ಯಕ್ಷನ್ ಸಿನಿಮಾಗೆ ಕೆಲಸ ಮಾಡಿದ್ದೇನೆ. ಹಾಗಾಗಿ ಈ ಚಿತ್ರದಲ್ಲಿ ಮಾಸ್ , ಕ್ಲಾಸ್ ಎರಡನ್ನು ಬಳಸಿದ್ದೇನೆ.

ಚಿತ್ರದಲ್ಲಿ ಸೋಷಿಯಲ್ ಮೆಸೇಜ್ ಕೂಡ ಇದೆ. ಮಂಗಳೂರು, ಬೆಂಗಳೂರು ಉಡುಪಿಯಲ್ಲಿ ಚಿತ್ರೀಕರಣ ಮಾಡಲಾಗಿದೆ. ಇನ್ನು ಲಂಡನ್ ನಲ್ಲಿ ಒಂದು ಸಾಂಗ್ ಶೂಟಿಂಗ್ ಮಾಡಲು ಯೋಜನೆ ಹಾಕಲಾಗಿದೆ. ರೌಡಿಸಮ್, ಲವ್, ಡ್ರಾಮಾ ಹಾಗೂ ಫ್ಯಾಮಿಲಿ ಜಾನರ್ ನಲ್ಲಿ ಸಿನಿಮಾ ಸಾಗುತ್ತದೆ. ಪ್ರೀತಿ, ನಂಬಿಕೆ ಮೇಲೆ ಸಂಬಂಧಗಳು ಮುಖ್ಯ. ಅವುಗಳನ್ನು ಹೇಗೆ ಉಳಿಸುಕೊಳ್ಳಬೇಕು? ಎಂಬುದು ಕಥೆಯಲ್ಲಿ ಇದೆ. ಸಿನಿಮಾ ಪ್ರೇಕ್ಷಕರಿಗೆ ಕನೆಕ್ಟ್ ಆಗುತ್ತದೆ. ಚಿತ್ರದಲ್ಲಿ ಮೂರು ಆ್ಯಕ್ಷನ್, ನಾಲ್ಕು ಹಾಡುಗಳಿದೆ’ ಎಂದು ನಿರ್ದೇಶಕ ಚೇತನ್ ಕೇಶವ್ ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ನಾಯಕ ವಸಿಷ್ಠ ಸಿಂಹ ಮಾತನಾಡಿ, ‘ನನ್ನನ್ನು ತುಂಬಾ ಕಾಡಿದಂತಹ ಸಿನಿಮಾ ಇದು. ಈಗ ಈ ಹಾಡಿನಿಂದ ಪ್ರಮೋಷನ್ ಶುರು ಮಾಡಿದ್ದು, ಆಗಸ್ಟ್ ನಲ್ಲಿ ಸಿನಿಮಾ ರಿಲೀಸ್ ಮಾಡುವ ಯೋಜನೆ ಇದೆ. ಇದು ಸುಂದರ ಪ್ರೇಮಕಥೆಯ ಚಿತ್ರ. ಕಥೆ ಕೇಳಿದಾಗ ತುಂಬಾ ಇಷ್ಟ ಆಯ್ತು. ನಿರ್ಮಾಪಕರು ಸೇರಿದಂತೆ ಚಿತ್ರತಂಡದ ಸಹಕಾರಕ್ಕೆ ಧನ್ಯವಾದ ಎಂದರು.

ನಂತರ ನಾಯಕಿ ಸ್ಟೇಪಿ ಪಟೇಲ್ ‘ನಾನು ತಮಿಳು, ತೆಲುಗು ಸಿನಿಮಾಗಳಲ್ಲಿ ನಟಿಸಿದ್ದು ಕನ್ನಡ ಮೊದಲ ಸಿನಿಮಾ. ಒಳ್ಳೆ ತಂಡದ ಜೊತೆ ಕೆಲಸ ಮಾಡಿದ ಖುಷಿ ಇದೆ. ನಾನು ಇನ್ನಷ್ಟು ಸಿನಿಮಾ ಮಾಡಲು ನಿಮ್ಮ ಆಶಿರ್ವಾದ ಬೇಕು. ನಾನು ಈ ಚಿತ್ರದಲ್ಲಿ ಜನನಿ ಎಂಬ ಪಾತ್ರ ನಿರ್ವಹಿಸಿದ್ದೇನೆ’ ಎಂದು ಹೇಳಿದರು.

ಸಹ ನಿರ್ಮಾಪಕರಾದ ಬಾಲಕೃಷ್ಣ ಜಿ.ಎನ್, ಕೃಷ್ಣ, ಬೇಬಿ ವಂಶಿಕಾ ತಮ್ಮ ಅನುಭವ ಹಂಚಿಕೊಂಡರು. ಅಥಿತಿಗಳಾಗಿ ಆಗಮಿಸಿದ್ದ ರವಿಚಂದ್ರನ್ ಅಭುವನಾಸ್ ಯೂಟ್ಯೂಬ್ ಚಾನೆಲ್ ಗೆ ಚಾಲನೆ ನೀಡಿ ಚಿತ್ರ ‘ಲವ್ ಲಿ’ ಆಗಿರುತ್ತದೆ. ಹೊಸಬರಲ್ಲಿ ಉತ್ಸಾಹವಿದ್ದು, ಹಾಡು ಚೆನ್ನಾಗಿ ಬಂದಿದೆ. ತಂಡಕ್ಕೆ ಒಳ್ಳೆಯದಾಗಲಿ’ ಎಂದರು.

ಹಾಡು ಬಿಡುಗಡೆ ಮಾಡಿದ ಉಪೇಂದ್ರ ಅವರು ಮಾತನಾಡಿ ‘ಸಾಂಗ್ ಇಂಪಾಗಿದ್ದು, ಇಂಟ್ರೆಸ್ಟ್ ಆಗಿ ಕೂಡ ಇದೆ. ಸಾಂಗ್ ನೋಡುತ್ತಿದ್ದರೆ ನಂಗೆ ಸಿನಿಮಾ ನೋಡಬೇಕು ಅನಿಸುತ್ತಿದೆ’ ಎಂದರು.

ನೆನಪಿರಲಿ ಪ್ರೇಮ್ ‘ತಂಡಕ್ಕೆ ಒಳ್ಳೆಯದಾಗಲಿ ಎಂದು ಹಾರೈಸಿದರು. ಪ್ರಿಯಂಕಾ ಉಪೇಂದ್ರ ಹಾಗೂ ಹರಿಪ್ರಿಯ ಅವರು ಹಾಡಿನ ಬಗ್ಗೆ ತಮ್ಮ ಅನಿಸಿಕೆ ತಿಳಿಸಿದರು.

Categories
ಸಿನಿ ಸುದ್ದಿ

ಸಂಜೆ ಆದ್ರೆ ಆಗು ರೆಡಿ, ನೈಂಟಿ ಹೊಡಿ, ಮನೀಗ್ ನಡಿ: ಇದು ಬಿರಾದಾರ ನಟನೆಯ 500 ನೇ ಸಿನಿಮಾ‌ ಸಾಂಗು

ಅಂತಾರಾಷ್ಟ್ರೀಯ ಪ್ರಶಸ್ತಿ ವಿಜೇತ ನಟ ಬಿರಾದಾರ್ ಅಭಿನಯದ ಐನೂರನೇ ಸಿನಿಮಾ ಸುದ್ದಿಯಲ್ಲಿದ್ದ “90 ಬಿಡಿ ಮನೀಗ್ ನಡಿ” ಸಿನಿಮಾ ಇದೀಗ ಚಿತ್ರದ ಟೈಟಲ್ ಹಾಡನ್ನ ಬಿಡುಗಡೆಗೊಳಿಸಿ ಸದ್ದು ಮಾಡತೊಡಗಿದೆ. ಈ ಹಿಂದೆ ಉತ್ತರ ಕರ್ನಾಟಕದ ನಾಟಿ ಶೈಲಿಯ “ಸಿಂಗಲ್ ಕಣ್ಣಾ ಹಾರಸ್ತಿ.. ಡಬ್ಬಲ್ ಹಾರನ್ ಬಾರಸ್ತಿ..” ಎಂಬ ಕಚಗುಳಿ ಇಡುವ ಜವಾರಿ ಹಾಡು ಬಿಟ್ಟು ಹಿಟ್ ಮಾಡಿಕೊಂಡಿತ್ತು. ಎಪ್ಪತ್ತು ವರ್ಷದ ಬಿರಾದಾರ್ ಚಿತ್ರದ ನಾಯಕಿಯ ಜೊತೆ ಡಾನ್ಸ್ ಮಾಡಿದ ಎನರ್ಜಿ ಕಂಡು ಪ್ರೇಕ್ಷಕರು ಫುಲ್ ಮಾರ್ಕ್ಸ್ ನೀಡಿದ್ದರು. ಅಲ್ಲಿಂದಾಚೆಗೆ ಚಿತ್ರದ ಮೇಲೊಂದು ನಿರೀಕ್ಷೆ ಮೂಡಿಕೊಂಡಿತ್ತು.

ಚಿತ್ರತಂಡ ಇದೀಗ ಡಾ. ವಿ. ನಾಗೇಂದ್ರ ಪ್ರಸಾದ್ ರಚನೆಯ, ಡಾ. ರಾಜೇಶ್ ಕೃಷ್ಣನ್ ಧ್ವನಿಯಲ್ಲಿ ಮೂಡಿಬಂದ ಹಾಡು ಬಿಡುಗಡೆಗೊಳಿಸಿದೆ. ಕಿರಣ್ ಶಂಕರ್ ಸಂಗೀತ ನಿರ್ದೇಶನವಿರುವ ಈ ಹಾಡು ” ಸಂಜೆ ಗಂಟ ಸುಮ್ನೆ ದುಡಿ.. ನೈಂಟಿ ಹೊಡಿ ಮನೀಗ್ ನಡಿ” ಎಂಬ ಸಾಲುಗಳಿಂದ ಪ್ರಾರಂಭಗೊಂಡು, “ಸಂಜೆ ಆದ್ರೆ ಆಗು ರೆಡಿ.. ನೈಂಟಿ ಹೊಡಿ ಮನೀಗ್ ನಡಿ” ಎಂಬ ಸಾಲಿನ ಜೊತೆ ಸೇರಿಕೊಂಡು ” ಇವತ್ತೆ ಲಾಸ್ಟು ಗುರು, ನಾಳೆಯಿಂದ ನಾನ್ ಎಣ್ಣೆ ಹೊಡಿಯಲ್ಲ” ಎನ್ನುತ್ತಾ ಮಜವಾಗಿ ಕೊನೆಗೊಳ್ಳುತ್ತದೆ.

ಇದೇ ಚಿತ್ರದ “ಸಿಂಗಲ್ ಕಣ್ಣಾ” ಹಾಡಿಗೆ ಬಿರಾದಾರ್ ಜೊತೆ ಪ್ರಯೋಗ ಮಾಡಿ ಗೆದ್ದ ಭೂಷಣ್ ಇಲ್ಲಿಯೂ ಕೊರಿಯೋಗ್ರಫಿಯಲ್ಲಿ ಸದ್ದು ಮಾಡಿದ್ದಾರೆ.
‘ಅಮ್ಮ ಟಾಕೀಸ್ ಬಾಗಲಕೋಟೆ’ ಸಂಸ್ಥೆಯಡಿ ರತ್ನಮಾಲ ಬಾದರದಿನ್ನಿ ನಿರ್ಮಿಸಿರುವ ಈ ಚಿತ್ರಕ್ಕೆ ಉಮೇಶ್ ಬಾದರದಿನ್ನಿ ಮತ್ತು ನಾಗರಾಜ್ ಅರೆಹೊಳೆ ಜಂಟಿಯಾಗಿ ನಿರ್ದೇಶನ ಮಾಡಿದ್ದು, ಕೃಷ್ಣ ನಾಯ್ಕರ್ ಛಾಯಾಗ್ರಹಣ, ವೆಂಕಿ ಯುಡಿವಿ ಸಂಕಲನವಿದೆ.

ಒಟ್ಟಿನಲ್ಲಿ ಮಜವಾದ ಸಾಹಿತ್ಯದ ಜೊತೆ ನಶೆ ಏರಿಸುವ ಎಣ್ಣೆ ಹಾಡಿಗೆ ನಟ ಬಿರಾದಾರ್ ಜೊತೆ ಕರಿಸುಬ್ಬು, ಪ್ರಶಾಂತ್ ಸಿದ್ದಿ ಸಖತ್ ಸ್ಟೆಪ್ ಹಾಕಿದ್ದು, ಹಾಡಿಗೊಂದು ಮೆರಗುಕೊಟ್ಟಿದ್ದಾರೆ. ಅಂದಹಾಗೆ ಇದೇ ಬರುವ ಹದಿನೇಳನೇ ತಾರೀಖಿಗೆ ಚಿತ್ರದ ಟ್ರೈಲರ್ ಬಿಡುಗಡೆಯ ಸಿದ್ಧತೆಯಲ್ಲಿ ಚಿತ್ರತಂಡವಿದೆ.

Categories
ಸಿನಿ ಸುದ್ದಿ

ಸಪ್ಲೈಯರ್ ಶಂಕರ ಶೂಟಿಂಗ್ ಮುಗಿಸಿದ: ಗಂಟುಮೂಟೆ ಹುಡುಗ ಸಿನಿಮಾ ಹೀರೋ

ಗಂಟುಮೂಟೆ, ಟಾಮ್ ಅಂಡ್ ಜೆರ್ರಿ ಸಿನಿಮಾಗಳ ಮೂಲಕ ಭರವಸೆ ಮೂಡಿಸಿರುವ ನಾಯಕ ನಿಶ್ಚಿತ್ ಕೊರೋಡಿ Supplier ಶಂಕರ ಎಂಬ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಯುವ ಪ್ರತಿಭೆ ರಂಜಿತ್ ಸಿಂಗ್ ರಜಪೂತ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ. ತ್ರಿನೇತ್ರ ಫಿಲ್ಮಂಸ್ ಸಂಸ್ಥೆಯಡಿ ಎಂ.ಚಂದ್ರಶೇಖರ್ ಹಾಗೂ ನಾಗೇಂದ್ರ ಸಿಂಗ್ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಸದ್ದಿಲ್ಲದೇ ಶೂಟಿಂಗ್ ಮುಗಿಸಿರುವ Supplier ಶಂಕರ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ. ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ.

ಟೈಟಲ್ ಹೇಳುವಂತೆ ಒಬ್ಬ ಬಾರ್ Supplier ಸುತ್ತಾ ಇಡೀ ಸಿನಿಮಾ ಸಾಗುತ್ತದೆ. ನಿಶ್ಚಿತ್ ಗೆ ಜೋಡಿಯಾಗಿ ಲಗೋರಿ ಸಿನಿಮಾ ಖ್ಯಾತಿಯ ದೀಪಿಕಾ ಆರಾಧ್ಯ ನಟಿಸಿದ್ದು, ಗೋಪಾಲ ಕೃಷ್ಣ ದೇಶಪಾಂಡೇ, ಜ್ಯೋತಿ ರೈ, ನವೀನ್ ಡಿ ಪಡಿಲ್ ಸೇರಿದಂತೆ ಒಂದಷ್ಟು ಹೊಸಬರು ಚಿತ್ರದಲ್ಲಿದ್ದಾರೆ. Supplier ಶಂಕರ ಸಿನಿಮಾಗೆ ರಂಜಿತ್, ಕಥೆ , ಚಿತ್ರಕಥೆ, ಸಂಭಾಷಣೆ ಜೊತೆಗೆ ಸಾಹಿತ್ಯದ ಜವಾಬ್ದಾರಿ ಕೂಡ ಹೊತ್ತುಕೊಂಡಿದ್ದಾರೆ.

ವಿಜಯ್ ಪ್ರಕಾಶ್, ಅಮ್ಮ ನನ್ನೀ ಈ ಜನುಮ ಖ್ಯಾತಿಯ ಸುನಿಲ್ ಕಶ್ಯಪ್, ಮೋಹನ್ ಬಿನ್ನಿಪೇಟೆ, ಸಂತೋಷ್ ವೆಂಕಿ, ನಕುಲ್ ಅಭಯ್ಯಂಕರ್, ಐಶ್ವರ್ಯ ರಂಗರಾಜನ್ ಹಾಡುಗಳಿಗೆ ಧ್ವನಿಯಾಗಿದ್ದು, ರವಿ ಬಸ್ರೂರ್ ಬಳಿ ಕೆಲಸ ಮಾಡಿರುವ ಆರ್.ಬಿ.ಭರತ್ ಸಂಗೀತ ನೀಡಿದ್ದಾರೆ.

ಸತೀಶ್ ಚಂದ್ರಯ್ಯ ಸಂಕಲನ, ಸತೀಶ್ ಕುಮಾರ್.ಎ ಛಾಯಾಗ್ರಹಣ, ಬಾಲಾಜಿ ಕಲಾ ನಿರ್ದೇಶನ Supplier ಶಂಕರ್ ಸಿನಿಮಾಗಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ ಚಿತ್ರತಂಡ ವರ್ಷಾಂತ್ಯಕ್ಕೆ ಸಿನಿಮಾವನ್ನು ತೆರೆಗೆ ತರವು ಯೋಜನೆ ಹಾಕಿಕೊಂಡಿದೆ.

error: Content is protected !!