Categories
ಸಿನಿ ಸುದ್ದಿ

ಎಂಎಂಬಿ ಲಗಸ್ಸಿ- ಇದು ನಿರ್ಮಾಪಕರ ಸ್ನೇಹಿ! ನವರಸನ್ ಸಾರಥ್ಯದ ಸುಂದರ ಸಭಾಂಗಣ ರೆಡಿ…

ಮೈ ಮೂವೀ ಬಜಾರ್ ಮೂಲಕ ಸಾಕಷ್ಟು ಚಿತ್ರಗಳ ಇವೆಂಟ್ ಮಾಡುತ್ತಿರುವ ನವರಸನ್, ಈಗ ಮತ್ತೊಂದು ಹೊಸ ಹೆಜ್ಜೆ ಇಟ್ಟಿದ್ದಾರೆ. ಮಾಗಡಿ ರಸ್ತೆಯ ಜಿ.ಟಿ‌ ಮಾಲ್ ನ ನಾಲ್ಕನೇ ಮಹಡಿಯಲ್ಲಿ “MMB LAGACY” ಎಂಬ ಸುಂದರ ಸಭಾಂಗಣವನ್ನು ಆರಂಭಿಸಿದ್ದಾರೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ನಟ ವಿನೋದ್ ಪ್ರಭಾಕರ್, ನಿಶಾ ವಿನೋದ್ ಪ್ರಭಾಕರ್, ಖ್ಯಾತ ಗಾಯಕ ಅಲೋಕ್, ನಿರ್ಮಾಪಕರಾದ ಸಂಜಯ್ ಗೌಡ, ರವಿ ಗೌಡ, ನಟ ತಬಲ‌ನಾಣಿ, ಪಿ.ಆರ್.ಓ ಸುಧೀಂದ್ರ ವೆಂಕಟೇಶ್, ನಾಗೇಂದ್ರ ಸೇರಿದಂತೆ ಅನೇಕ ಗಣ್ಯರು ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. ಈ ಸಂದರ್ಭದಲ್ಲಿ ನವರಸನ್ “MMB LAGACY” ಕುರಿತು ಮಾಹಿತಿ ನೀಡಿದರು.

ನಾನು ಮೈ ಮೂವೀ ಬಜಾರ್ ಮೂಲಕ ಕೆಲವು ವರ್ಷಗಳಿಂದ ಸಾಕಷ್ಟು ಚಿತ್ರಗಳ ಹಲವು ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದ್ದೇನೆ. ಫೈವ್ ಸ್ಟಾರ್ ಹೋಟೆಲ್ ಗಳಲ್ಲಿ ಹೆಚ್ಚು ಕಾರ್ಯಕ್ರಮ ನಡೆದಿದೆ. ಅಲ್ಲಿ ಊಟದ ವೆಚ್ಚ ಸಾವಿರ, ಎರಡು ಸಾವಿರ ಹೀಗಿರುತ್ತದೆ. ಅಲ್ಲಿ ಒಂದು ಸಮಾರಂಭ ಮಾಡಲು ನಾಲ್ಕೈದು ಲಕ್ಷ ಖರ್ಚಾಗುತ್ತದೆ. ಎಲ್ಲಾ‌ ನಿರ್ಮಾಪಕರಿಗೂ ಅಷ್ಟು ಖರ್ಚು ಮಾಡವುದಕ್ಕೆ ಆಗುವುದಿಲ್ಲ. ಹಾಗಾಗಿ ನಾನು ಕೆಲವು ಸ್ನೇಹಿತರೊಂದಿಗೆ ಚರ್ಚಿಸಿ, ನಿರ್ಮಾಪಕರಿಗೆ ಅನುಕೂಲವಾಗುವಂತಹ ಒಂದು ವಿಶಾಲವಾದ ಸಭಾಂಗಣ ತೆರೆಯಲು ತೀರ್ಮಾನಿಸಿದೆ.

ಸ್ಥಳ ಹುಡುಕುತ್ತಿದ್ದಾಗ ಜಿ.ಟಿ.ಮಾಲ್ ನ ಮಾಲೀಕರಾದ ಆನಂದ್ ಅವರು ನಿಮಗೆ ಅನುಕೂಲವಾದರೆ, ಈ ಸ್ಥಳದಲ್ಲೇ ಆರಂಭಿಸಿ ಎಂದರು. ಕಳೆದ ಆರು ತಿಂಗಳಿನಿಂದ ಸುಮಾರು ಮೂರುವರೆ ಕೋಟಿಗೂ ಅಧಿಕ ಖರ್ಚಿನಲ್ಲಿ “MMB LAGACY” ಯನ್ನು ನಿರ್ಮಾಣ ಮಾಡಿದ್ದೇನೆ. ಈ ಜಾಗ ಯಾವುದೇ ಫೈವ್ ಸ್ಟಾರ್ ಹೋಟೆಲ್ ಗೆ ಕಡಿಮೆ ಇಲ್ಲದಂತೆ ನಿರ್ಮಾಣವಾಗಿದೆ. ಆಧುನಿಕ ಸೌಂಡ್ ಸಿಸ್ಟಮ್, ಎಲ್ ಇ ಡಿ, ನವೀನವೀನ ಲೈಟಿಂಗ್ ವ್ಯವಸ್ಥೆ ಎಲ್ಲವೂ ಇಲ್ಲಿ ಲಭ್ಯವಿದೆ.

ನಿರ್ಮಾಪಕರಿಗೆ ಹೊರೆಯಾಗದಂತೆ ದರ ನಿಗದಿ ಪಡಿಸಿದ್ದೇವೆ. ಪತ್ರಿಕಾಗೋಷ್ಠಿ, ಆಡಿಯೋ, ಟೀಸರ್, ಟ್ರೇಲರ್ ಬಿಡುಗಡೆ ಸಮಾರಂಭ ಹಾಗೂ ಪ್ರೀ ರಿಲೀಸ್ ಇವೆಂಟ್ ಮುಂತಾದ ಸಮಾರಂಭಗಳನ್ನು ಇಲ್ಲಿ ನಡೆಸಬಹುದು. ಸುಮಾರು 200ಜನ ಆರಾಮವಾಗಿ ಸಮಾರಂಭದಲ್ಲಿ ಪಾಲ್ಗೊಳ್ಳುಬಹುದು. ಸುಸಜ್ಜಿತ ಸಭಾಂಗಣ, ಊಟದ ಹಾಲ್ ಇದೆ. ಊಟ, ತಿಂಡಿ ಹಾಗೂ ಸಾಭಾಂಗಣದ ವೆಚ್ಚ ಎಲ್ಲವೂ ಕೈಗೆಟುಕುವ ಬೆಲೆಯಲ್ಲೇ ನಿಗದಿ ಮಾಡಲಾಗಿದೆ.

ಸಿನಿಮಾ ಕಾರ್ಯಕ್ರಮಗಳಲ್ಲದೆ ಹುಟ್ಟುಹಬ್ಬ ಮುಂತಾದ ಕಾರ್ಯಕ್ರಮಗಳನ್ನು ಇಲ್ಲಿ ಮಾಡಿಕೊಳ್ಳಬಹುದು. ಕನ್ನಡ ಚಿತ್ರರಂಗದ ನಿರ್ಮಾಪಕರಿಗೆ ಅನುಕೂಲವಾಗಲೆಂದೆ ತೆರೆದಿರುವ “MMB LAGACY” ಯನ್ನು ತಾವೆಲ್ಲರು ಬಳಸಿಕೊಳ್ಳಬೇಕೆಂದು ನವರಸನ್ ಮನವಿ ಮಾಡಿದರು.

Categories
ಸಿನಿ ಸುದ್ದಿ

ಹೊಸ ಜೋಡಿಗೆ ಶುಭಕೋರಿದ ರಮೇಶ್ ಅರವಿಂದ್: ಸಿರಿ ಲಂಬೋದರ ವಿವಾಹದ ಟೀಸರ್ ರಿಲೀಸ್…

ಸೌರಭ್ ಕುಲಕರ್ಣಿ ನಿರ್ದೇಶನದ “ಸಿರಿ ಲಂಬೋದರ ವಿವಾಹ” (ಎಸ್ ಎಲ್ ವಿ) ಚಿತ್ರದ ಟೀಸರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಖ್ಯಾತ ನಟ ರಮೇಶ್ ಅರವಿಂದ್ ಟೀಸರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಟೀಸರ್ ವಿಭಿನ್ನವಾಗಿದ್ದು, A2 music ಮೂಲಕ ಬಿಡುಗಡೆಯಾಗಿದೆ.

ಚಿತ್ರದ ಚಿತ್ರೀಕರಣ ಪೂರ್ಣವಾಗಿ, ಮೊದಲಪ್ರತಿ ಸಿದ್ದವಾಗಿದೆ. “ಸಿರಿ ಲಂಬೋದರ ವಿವಾಹ” ಕಮರ್ಷಿಯಲ್ ಎಂಟರ್ಟೈನ್ಮೆಂಟ್ ವಿತ್ ಎ ಸಸ್ಪೆನ್ಸ್ ಥ್ರಿಲ್ಲರ್ ಎನ್ನಬಹುದು. ಸಿರಿ ಹಾಗೂ ಲಂಬೋದರ ಈ ಚಿತ್ರದ ನಾಯಕ, ನಾಯಕಿ ಅಲ್ಲ. ಮತ್ತೆ “ಸಿರಿ ಹಾಗೂ ಲಂಬೋದರ” ಯಾರು ಎಂದು ತಿಳಿಯಲು ಚಿತ್ರ ನೋಡಬೇಕು. ರಂಗಭೂಮಿ ಕಲಾವಿದರೇ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಈಗ ಟೀಸರ್ ಬಿಡುಗಡೆ ಮಾಡಿದ್ದೇವೆ. ಇನ್ನೆರಡು ತಿಂಗಳಲ್ಲಿ ಚಿತ್ರವನ್ನು ನಿಮ್ಮ ಮುಂದೆ ತರುತ್ತೇವೆ. ಮತ್ತೊಂದು ಖುಷಿಯ ವಿಚಾರವೆಂದರೆ, ಡಿಸೆಂಬರ್ ನಲ್ಲಿ ಓಮನ್ ಹಾಗೂ ದುಬೈ ದೇಶಗಳಲ್ಲಿ ನಮ್ಮ ಚಿತ್ರದ ಪ್ರೀಮಿಯರ್ ನಡೆಯಲಿದೆ.

ನಾನು ಸೇರಿದಂತೆ ಅನೇಕ ಸಿನಿಮಾಸಕ್ತರು ಸೇರಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದೀವಿ. ಟೀಸರ್ ಬಡುಗಡೆ ಮಾಡಿಕೊಟ್ಟ ರಮೇಶ್ ಅರವಿಂದ್ ಅವರಿಗೆ ಧನ್ಯವಾದ ಎಂದರು ಸೌರಭ್ ಕುಲಕರ್ಣಿ.

“ಸಿರಿ ಲಂಬೋದರ ವಿವಾಹ” ಸರಳ, ಸುಂದರ ಹಾಗೂ ಕುತೂಹಲ ಕಾಯ್ದುಕೊಳ್ಳುವ ಚಿತ್ರವೆಂದರು ನಟ ಸುಂದರ್ ವೀಣಾ.

ನಾವು ಇಡೀ ತಂಡ ಮೂಲತಃ ರಂಗಭೂಮಿ ಅವರು.‌ ನಮ್ಮ ಚಿತ್ರ ಈಗ ತೆರೆಗೆ ಬರಲು ಸಿದ್ದವಾಗಿದೆ. ಒಳ್ಳೆಯ ಚಿತ್ರ ಮಾಡಿರುವ ಖಷಿಯಿದೆ. ನಾನು ಈ ಚಿತ್ರದಲ್ಲಿ ವೆಡ್ಡಿಂಗ್ ಪ್ಲಾನರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೀನಿ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಾಯಕ ಅಂಜನ್ ಎ ಭಾರದ್ವಾಜ್.

ನಾನು ಈ ಹಿಂದೆ ಬಿ.ಸುರೇಶ್ ಅವರ “ದೇವರ ನಾಡಲ್ಲಿ” ಚಿತ್ರದಲ್ಲಿ ಅಭಿನಿಯಿಸಿದ್ದೆ. ಆನಂತರ ಈ ಚಿತ್ರದಲ್ಲಿ ಅಭಿನಯಿಸಿದ್ದೇನೆ. ಸೌರಭ್ ಹಾಗೂ ತಂಡದವರು ಮಾಡಿರುವ ಕಥೆ ಚೆನ್ನಾಗಿದೆ. ನನ್ನ ಪಾತ್ರಕೂಡ ಅಷ್ಟೆ ಚೆನ್ನಾಗಿದೆ ಎನ್ನುತ್ತಾರೆ ನಾಯಕಿ ದಿಶಾ ರಮೇಶ್.

ಛಾಯಾಗ್ರಾಹಕ ಕಿಟ್ಟಿ ಕೌಶಿಕ್ , ಸಂಗೀತ ನಿರ್ದೇಶಕ ಸಂಘರ್ಷ್ ಕುಮಾರ್ ಹಾಗೂ ಕಾರ್ಯಕಾರಿ ನಿರ್ಮಾಪಕಿ ನಮ್ರತಾ ಚಿತ್ರದ ಕುರಿತು ಮಾತನಾಡಿದರು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಹಿರಿಯ ನಟ ಮಂಡ್ಯ ರಮೇಶ್ ಚಿತ್ರತಂಡಕ್ಕೆ ಶುಭ ಕೋರಿದರು.

Versato ventures, pavamana creations, Fouress network selutions & Dhupada drushya ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ.

ಅಂಜನ್ ಎ ಭಾರದ್ವಾಜ್, ದಿಶಾ ರಮೇಶ್, ರಾಜೇಶ್ ನಟರಂಗ, ಸುಂದರ್ ವೀಣಾ, ಪಿ.ಡಿ.ಸತೀಶ್ ಚಂದ್ರ, ಮಜಾಭಾರತದ ಶಿವು ಹಾಗೂ ಸುಶ್ಮಿತ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಸದಾನಂದ ಕಾಳೆ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

Categories
ಸಿನಿ ಸುದ್ದಿ

300 ಚಿತ್ರಮಂದಿರ-50 ದಿನಗಳು! ಕಾಂತಾರ ಯಶಸ್ವಿ ಪ್ರದರ್ಶನ…

ಹೊಂಬಾಳೆ ಫಿಲಂಸ್ ಬ್ಯಾನರ್ ಮೂಲಕ ವಿಜಯ್ ಕಿರಗಂದೂರು ನಿರ್ಮಿಸಿ, ರಿಷಭ್ ಶೆಟ್ಟಿ ಅಭಿನಯಿಸಿ-ನಿರ್ದೇಶಿಸಿರುವ ‘ಕಾಂತಾರ’ ಚಿತ್ರ ಯಶಸ್ವಿ 50 ದಿನಗಳನ್ನು ಪೂರೈಸಿದೆ. ಸೆ. 30ರಂದು ಬಿಡುಗಡೆಯಾದ ಈ ಚಿತ್ರ ರಾಜ್ಯದ 300ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲದೆ, ವಿದೇಶಗಳಲ್ಲೂ ಹಲವು ಚಿತ್ರಮಂದಿರಗಳಲ್ಲಿ 50 ದಿನಗಳನ್ನು ಮುಗಿಸಿ, 100ನೇ ದಿನದತ್ತ ದಾಪುಗಾಲಿಟ್ಟಿದೆ. ಬರೀ ಕನ್ನಡವಷ್ಟೇ ಅಲ್ಲ, ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂಗೆ ಡಬ್ ಆಗಿರುವ ‘ಕಾಂತರ’, ಅಲ್ಲೂ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿದ್ದು, ಸದ್ಯದಲ್ಲೇ ಅಲ್ಲೂ 50 ದಿನಗಳನ್ನು ಪೂರೈಸಲಿದೆ.


‘ಕೆಜಿಎಫ್ 1’ ಮತ್ತು ‘ಕೆಜಿಎಫ್ 2’ ಚಿತ್ರಗಳ ಮೂಲಕ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಲ್ಲರೂ ಕನ್ನಡದತ್ತ ತಿರುಗಿ ನೋಡುವಂತೆ ಮಾಡಿದ್ದು ಹೊಂಬಾಳೆ ಫಿಲಂಸ್. ಈಗ ಅದೇ ಸಂಸ್ಥೆಯಿಂದ ನಿರ್ಮಾಣವಾಗಿರುವ ‘ಕಾಂತಾರ’ ಚಿತ್ರವನ್ನು ಮನೆ ಮಂದಿಯೆಲ್ಲಾ ನೋಡಿ ಇಷ್ಟಪಟ್ಟಿದ್ದಾರೆ. ಹಿರಿಯರಿಂದ ಕಿರಿಯರವರೆಗೂ ಎಲ್ಲರೂ ಮೆಚ್ಚಿಕೊಂಡಿರುವ ಈ ಚಿತ್ರ ಎಲ್ಲರಿಗೂ ಇಷ್ಟವಾಗುವುದಕ್ಕೆ ಕಾರಣ ಚಿತ್ರದ ಕಥೆ ಮತ್ತು ಮೇಕಿಂಗ್. ಹೊಂಬಾಳೆ ಫಿಲಂಸ್ ಮೊದಲಿನಿಂದಲೂ ಕಥೆಗೆ ವಿಶೇಷವಾದ ಪ್ರಾಮುಖ್ಯತೆ ನೀಡುತ್ತಾ ಬಂದಿದ್ದು, ಈಗಾಗಲೇ ‘ರಾಜಕುಮಾರ’, ‘ಯುವರತ್ನ’, ‘ಕೆಜಿಎಫ್’ ಮುಂತಾದ ಚಿತ್ರಗಳು ಈ ವಿಷಯವನ್ನು ನಿರೂಪಿಸಿದೆ. ಈಗ ‘ಕಾಂತಾರ’ ಸಹ ಇದೇ ನಿಟ್ಟಿನಲ್ಲಿ ಸಾಗಿರುವುದಷ್ಟೇ ಅಲ್ಲ, ‘ಕೆಜಿಎಫ್’ ಸರಣಿಯ ನಂತರ ಒಂದೇ ಸಂಸ್ಥೆಯ ಇನ್ನೊಂದು ಚಿತ್ರ ಸಹ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುತ್ತಿರುವುದು ವಿಶೇಷ.


ಬರೀ ಕನ್ನಡವಷ್ಟೇ ಅಲ್ಲ, ಮುಂದಿನ ದಿನಗಳಲ್ಲಿ ಒಟ್ಟು ಐದು ಭಾಷೆಗಳಲ್ಲಿ ಏಕಕಾಲಕ್ಕೆ ಹೊಂಬಾಳೆ ಫಿಲಂಸ್ ಸಂಸ್ಥೆಯು ಹಲವು ಚಿತ್ರಗಳನ್ನು ನಿರ್ಮಿಸುತ್ತಿದೆ. ಒಂದೇ ಸಂಸ್ಥೆಯಿಂದ ಐದು ಭಾಷೆಗಳಲ್ಲಿ ಏಕಕಾಲಕ್ಕೆ ಚಿತ್ರ ನಿರ್ಮಾಣ ಮಾಡುತ್ತಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯವಷ್ಟೇ ಅಲ್ಲ, ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ.
ಈಗಾಗಲೇ ಕನ್ನಡದಲ್ಲಿ ಜಗ್ಗೇಶ್ ಅಭಿನಯದಲ್ಲಿ ಸಂತೋಷ್ ಆನಂದರಾಮ್ ನಿರ್ದೇಶಿಸುತ್ತಿರುವ ‘ರಾಘವೇಂದ್ರ ಸ್ಟೋರ್ಸ್’ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಶ್ರೀಮುರಳಿ ಅಭಿನಯದಲ್ಲಿ ಡಾ. ಸೂರಿ ನಿರ್ದೇಶಿಸುತ್ತಿರುವ ‘ಬಘೀರ’ ಚಿತ್ರವು ಚಿತ್ರೀಕರಣ ಹಂತದಲ್ಲಿದೆ. ರಕ್ಷಿತ್ ಅಭಿನಯದ ಮತ್ತು ನಿರ್ದೇಶನದ ‘ರಿಚರ್ಡ್ ಆಂಟೋನಿ’ ಮತ್ತು ಯುವರಾಜ್ ಕುಮಾರ್ ಅವರಿಗೆ ಸಂತೋಷ್ ಆನಂದರಾಮ್ ನಿರ್ದೇಶಿಸಲಿರುವ ಹೊಸ ಚಿತ್ರ ಕೂಡ ಸದ್ಯದಲ್ಲೇ ಶುರುವಾಗಲಿದೆ.


ಬೇರೆ ಭಾಷೆಯ ಚಿತ್ರಗಳ ವಿಷಯಕ್ಕೆ ಬಂದರೆ, ತೆಲುಗಿನಲ್ಲಿ ಪ್ರಭಾಸ್ ಅಭಿನಯದ ‘ಸಲಾರ್’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, 2023ರ ಸೆಪ್ಟೆಂಬರ್ ನಲ್ಲಿ ಚಿತ್ರ ಬಿಡುಗಡೆಯಾಗಲಿದೆ. ತಮಿಳಿನಲ್ಲಿ ಎರಡು ಚಿತ್ರಗಳನ್ನು ಹೊಂಬಾಳೆ ನಿರ್ಮಿಸುತ್ತಿದ್ದು, ಈ ಪೈಕಿ ಒಂದು ಚಿತ್ರವನ್ನು ‘ಸೂರರೈ ಪೊಟ್ರು’ ಖ್ಯಾತಿಯ ಸುಧಾ ಕೊಂಗರಾ ನಿರ್ದೇಶನ ಮಾಡಿದರೆ, ಇನ್ನೊಂದರ ಘೋಷಣೆ ಶೀಘ್ರದಲ್ಲೇ ಆಗಲಿದೆ. ಮಲಯಾಳಂನಲ್ಲೂ ಹೊಂಬಾಳೆ ಫಿಲಂಸ್ ವತಿಯಿಂದ ಎರಡು ಚಿತ್ರ ನಿರ್ಮಾಣವಾಗುತ್ತಿವೆ. ಫಹಾದ್ ಫಾಸಿಲ್ ಅಭಿನಯದ ‘ಧೂಮಂ’ ಚಿತ್ರದ ಚಿತ್ರೀಕರಣ ಈಗಾಗಲೇ ಪ್ರಾರಂಭವಾಗಿದ್ದರೆ, ಪೃಥ್ವಿರಾಜ್ ಸುಕುಮಾರನ್ ನಟಿಸಿ-ನಿರ್ದೇಶಿಸಲಿರುವ ‘ಟೈಸನ್’ ಚಿತ್ರವು ಮುಂದಿನ ವರ್ಷ ಪ್ರಾರಂಭವಾಗಲಿದೆ. ಹಿಂದಿ ಚಿತ್ರದ ಪ್ರೀ-ಪ್ರೊಡಕ್ಷನ್ ಕೆಲಸಗಳು ನಡೆಯಲಿದ್ದು ಸದ್ಯದಲ್ಲೇ ಅಧಿಕೃತ ಘೋಷಣೆಯಾಗಲಿದೆ.

Categories
ಸಿನಿ ಸುದ್ದಿ

ಡೈಲಾಗ್ ರೈಟರ್ ಈಗ ಡೈರೆಕ್ಟರ್: ರಿಷಿ ಸಿನಿಮಾಗೆ ಪ್ರಶಾಂತ್ ರಾಜಪ್ಪ ನಿರ್ದೇಶನ…

ಚಂದನವನದಲ್ಲಿ ಡೈಲಾಗ್ ರೈಟರ್ ಆಗಿ ಗುರುತಿಸಿಕೊಂಡಿರುವ ಪ್ರಶಾಂತ್ ರಾಜಪ್ಪ ನಿರ್ದೇಶಕನಾಗಿ ಬಡ್ತಿ ಪಡೆಯುತ್ತಿದ್ದಾರೆ. ‘ವಿಕ್ಟರಿ’, ‘ಅಧ್ಯಕ್ಷ’, ‘ರನ್ನ’, ‘ಪೊಗರು’, ‘ಹೊಂದಿಸಿ ಬರೆಯಿರಿ’ ಸೇರಿದಂತೆ 25ಕ್ಕೂ ಹೆಚ್ಚು ಸಿನಿಮಾಗಳಿಗೆ ಸಂಭಾಷಣೆ ಬರೆದಿದ್ದಾರೆ ಪ್ರಶಾಂತ್ ರಾಜಪ್ಪ. ಸಹ ನಿರ್ದೇಶಕನಾಗಿಯೂ ಕೆಲಸ ಮಾಡಿದ ಅನುಭವ ಇವರಿಗಿದೆ. ಇದೀಗ ಅವೆಲ್ಲ ಅನುಭವವನ್ನು ಇಟ್ಟುಕೊಂಡು ನಿರ್ದೇಶಕನಾಗಿ ಚಂದನವನದಲ್ಲಿ ಹೊಸ ಇನಿಂಗ್ಸ್ ಆರಂಭಿಸಲು ಹೊರಟಿದ್ದಾರೆ.

ನಿರ್ದೇಶಕನಾಗಬೇಕು ಎಂಬುದು ಪ್ರಶಾಂತ್ ರಾಜಪ್ಪ ಅವರ ಬಹಳ ವರ್ಷದ ಕನಸು. ಆ ಕನಸೀಗ ನನಸಾಗುವ ಹಂತಕ್ಕೆ ಬಂದಿದೆ. ಸಿನಿಮಾ ಬರಹಗಾರನಾಗಿ, ನಿರ್ದೇಶಕರಾದ ಗುರು ಪ್ರಸಾದ್, ಪಿ.ಸಿ. ಶೇಖರ್, ಹೆಚ್. ಪಿ. ದಾಸ್ ಜೊತೆ ಸಹ ನಿರ್ದೇಶಕನಾಗಿ ಚಿತ್ರರಂಗದಲ್ಲಿ ದುಡಿದ ಅನುಭವವನ್ನು ತಮ್ಮ ಮೊದಲ ಚಿತ್ರಕ್ಕೆ ಧಾರೆ ಎರೆಯುತ್ತಿದ್ದಾರೆ. ಕಥೆ, ಚಿತ್ರಕಥೆ, ಡೈಲಾಗ್ ಬರೆದು ನಿರ್ದೇಶನ ಮಾಡುವುದರ ಮೂಲಕ ಡೈರೆಕ್ಟರ್ ಕ್ಯಾಪ್ ತೊಡುತ್ತಿದ್ದಾರೆ.

‘ಆಪರೇಷನ್ ಅಲಮೇಲಮ್ಮ’, ‘ಕವಲು ದಾರಿ’ ಸಿನಿಮಾ ಖ್ಯಾತಿಯ ನಟ ರಿಷಿ ಪ್ರಶಾಂತ್ ರಾಜಪ್ಪ ಮೊದಲ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಕಾಮಿಡಿ ಎಮೋಷನಲ್ ಡ್ರಾಮಾ ಸಿನಿಮಾ ಇದಾಗಿದ್ದು, ಸಿನಿಮಾದ ಪ್ರಿಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಡಿಸೆಂಬರ್ ನಲ್ಲಿ ಸಿನಿಮಾ ಸೆಟ್ಟೇರಲಿದ್ದು, ಜನವರಿಯಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಸದ್ಯದಲ್ಲೇ ಸಿನಿಮಾ ಟೈಟಲ್, ತಾರಾಬಳಗ ಎಲ್ಲವನ್ನೂ ರಿವೀಲ್ ಮಾಡೋದಾಗಿ ಪ್ರಶಾಂತ್ ರಾಜಪ್ಪ ತಿಳಿಸಿದ್ದಾರೆ.

Categories
ಸಿನಿ ಸುದ್ದಿ

ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ! ನೋಡ ನೋಡ ಎಷ್ಟು ಚೆಂದ ಉಂಟು ಸಿನಿಮಾ ಟೈಟಲ್ಲು!!

ಕೆಲ ಸಿನಿಮಾಗಳು ತಮ್ಮ ಶೀರ್ಷಿಕೆಯ ಮೂಲಕವೇ ಒಂದಷ್ಟು ಸುದ್ದಿಯಾಗುತ್ತವೆ. ಅಷ್ಟೇ ಯಾಕೆ ಕುತೂಹಲವನ್ನೂ ಹೆಚ್ಚಿಸುತ್ತವೆ. ಬಹುತೇಕ ಹೊಸಬರ ಸಿನಿಮಾಗಳೇ ಸದ್ದು ಮಾಡುತ್ತವೆ. ಅಂತಹ ಸಿನಿಮಾಗಳ ಸಾಲಿಗೆ ‘ ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ’ ಕೂಡ ಸೇರಿದೆ. ಹೌದು, ಇದು ಹೊಸಬರ ಸಿನಿಮಾ. ಸದ್ಯ ಟೈಟಲ್ಲು ಕ್ರೇಜ್ ಹೆಚ್ಚಿಸಿದೆ. ಆ ಸಿನಿಮಾ ಕುರಿತು ಒಂದಷ್ಟು ಮಾತುಕತೆ…

ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರರಂಗ ಪ್ರಯೋಗತ್ಮಕ ಚಿತ್ರದ ಕಡೆ ಮುಖ ಮಾಡಿದೆ, ಅದರಲ್ಲಿ ಹಳ್ಳಿ ಸೊಗಡಿನ ಚಿತ್ರಗಳ ಸಂಖ್ಯೆ ಜಾಸ್ತಿ, ಮಂಡ್ಯ, ಮಂಗಳೂರು, ಕುಂದಾಪುರ ಹೀಗೆ ಅದರ ಪಟ್ಟಿಗೆ ಈಗ ಹೊಸ ಜಾಗ ಸೇರ್ಪಡೆ ಆಗಿದೆ ಅದೇ ಉತ್ತರ ಕನ್ನಡ ಜಿಲ್ಲೆ, ಅದು “ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ” ಚಿತ್ರದ ಮೂಲಕ.

ಹೌದು, ಈ ಚಿತ್ರವನ್ನು ಶಿರಸಿ, ಯಲ್ಲಾಪುರ, ಹೊನ್ನಾವರ ದಲ್ಲಿ ಚಿತ್ರೀಕರಣ ಮಾಡಲಾಗಿದ್ದು, ಅಲ್ಲಿಯ ಸ್ಥಳೀಯ ಪ್ರತಿಭೆಗಳನ್ನೇ ಬಳಸಿಕೊಂಡಿರೋದು ವಿಶೇಷ.

ಈ ಚಿತ್ರದ ವಿಶೇಷತೆ ಚಿತ್ರಕ್ಕೆ ಬಳಸಿರುವ ಉತ್ತರಕನ್ನಡ ಭಾಷೆ ಹಾಗೂ ರಮಣೀಯ ಸ್ಥಳಗಳು ನೋಡುಗನ ಕಣ್ಮನ ಸೆಳೆದರೆ, ಚಿತ್ರಕಥೆಯ ಹೊಸತನ ಸ್ಪೆಷಲ್ ಆಗಿದೆ. ಇನ್ನು ಚಿತ್ರರಂಗದಲ್ಲಿ ಇಲ್ಲಿಯವರೆಗೆ ಕೇಳದ ಮತ್ತು ನೋಡದ ಹೊಸ ಕಥೆ ಇಲ್ಲಿದೆ ಎಂಬುದು ತಂಡದ ಮಾತು.

ಕಥೆ ಇದು…

ಒಬ್ಬ ಫೋಟೋಗ್ರಾಫರ್ ಹಾಗೂ ಫೋಟೋ ಸ್ಟುಡಿಯೋ ನಡುವಿನ ಭಾವನೆಯ ಹೋರಾಟ ಈ ಚಿತ್ರದ ಹೈಲೈಟ್,
ಜೊತೆಗೆ, ಮುದ್ದಾದ ಪ್ರೇಮಿಗಳ ಕಥೆ, ಒಬ್ಬ ಇನ್ಶೂರೆನ್ಸ್ ಮಾಡಿಸುವವ ಹಾಗೂ ಅವನ ವೈಯಕ್ತಿಕ ಜೀವನದ ಬಗ್ಗೆ, ಒಬ್ಬ ಜಮೀನ್ದಾರ ಅವನ ಮತ್ತು ಫೋಟೋಗ್ರಾಫರ್ ನಡುವಿನ ನಡೆಯೋ ಸಂಘರ್ಷ ನೋಡುಗರಿಗೆ ಹೊಸ ಅನುಭವ ನೀಡಲಿದೆ ಎಂಬುದು ತಂಡದ ಹೇಳಿಕೆ.

ನಿರ್ಮಾಪರಾಗಿ ವೆಂಕಟೇಶ್ವರ ರಾವ್, ಬಳ್ಳಾರಿ ರವರು ಮೊದಲಬಾರಿಗೆ ಸೃಜನ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣ ಮಾಡುತ್ತಿರುವ ಮೊದಲ ಸಿನೆಮಾವಿದು.

ಕಿರುತೆರೆಯಲ್ಲಿ 6 ವರ್ಷಗಳ ಕಾಲ “ಅಗ್ನಿಸಾಕ್ಷಿ”ದಾರಾವಾಹಿಯಲ್ಲಿದ್ದ ನಟ ರಾಜೇಶ್ ಧ್ರುವ ನಿರ್ದೇಶಕರು. ಉಳಿದಂತೆ ರವಿ ಸಾಲಿಯಾನ್, ರಾಧಿಕಾ, ಅಚ್ಯುತ್ ರಾವ್, ಸಂಪತ್ ಜೆ ರಾಮ್, ಕಾಮಿಡಿ ಕಿಲಾಡಿಗಳು ಖ್ಯಾತಿಯ ಶುಭಲಕ್ಷ್ಮಿ, ಕನ್ಯಾಕುಮಾರಿ ಧಾರವಾಹಿ ಖ್ಯಾತಿಯ ನಕುಲ್ ಶರ್ಮ, ರಕ್ಷಿತ್, ರವಿ ಮೂರೂರು ಹಾಗೂ ವಿಶೇಷ ಪಾತ್ರದಲ್ಲಿ ಕಿರುತೆರೆ ನಟ ಶಿಶಿರ್ ಹಾಗೂ ಹಲವು ಹೊಸ ಕಲಾವಿದರು ಈ ಸಿನಿಮಾದಲ್ಲಿದ್ದಾರೆ.

ಕಥೆ – ಚಿತ್ರಕಥೆಯನ್ನು ಅಭಿಷೇಕ್ ಶಿರಸಿ, ಹಾಗೂ ಪೃಥ್ವಿಕಾಂತ ಬರೆದರೆ, ಸಂಭಾಷಣೆಯನ್ನು ಅಜಿತ್ ಬೊಪ್ಪನಳ್ಳಿ ಬರೆದಿದ್ದಾರೆ.

ಮನೋಜ್ ಸಿನಿ ಸ್ಟುಡಿಯೋ ಛಾಯಾಗ್ರಹಣ, ಗಣಪತಿ ಭಟ್ ಸಂಕಲನವಿದೆ. ,ಚಿತ್ರದ ಹಾಡುಗಳಿಗೆ
ಶ್ರೀರಾಮ್ ಗಂಧರ್ವ ರವರ ಸಂಗೀತ ಮತ್ತು ಪ್ರಮೋದ್ ಮರವಂತೆ ಅವರ ಸಾಹಿತ್ಯ ಇದೆ. ಸ್ವಸ್ತಿಕ್ ಕಾರೆಕಾಡ್ ಹಿನ್ನೆಲೆ ಸಂಗೀತವಿದೆ.

Categories
ಸಿನಿ ಸುದ್ದಿ

ಸೆಕೆಂಡ್ ಲೈಫ್ ಮತ್ತು ಕರುಳ ಬಳ್ಳಿ! ಹೊಸ ಕಥೆ

ಮಗು ಜನಿಸಿದ ಕೆಲವೇ ದಿನಗಳಲ್ಲಿ ಕರುಳಬಳ್ಳಿ(ಹೊಕ್ಕಳು ಬಳ್ಳಿ) ಬೀಳುತ್ತದೆ. ಅದನ್ನು ಕ್ಯಾನ್ಸರ್‌ ರೋಗಿಗಳ ಔಷದಿಗೆ ಬಳಸಿಕೊಳ್ಳಲಾಗುತ್ತದೆ. ಕರ್ನಾಟಕ ಒಂದರಲ್ಲೆ 70-80 ಸಾವಿರ ಜನರು ಕ್ಯಾನ್ಸರ್ ಗೆ ತುತ್ತಾಗುತ್ತಿದ್ದಾರೆ. ಅಂತಹವರಿಗೆ ಇದು ಉಪಯೋಗವಾಗುತ್ತದೆ. ಕರುಳಬಳ್ಳಿಯನ್ನು ಶೇಖರಿಸಿಡುವ ಕಾರ್ಯ ಕೂಡ ಎಲ್ಲೆಡೆ ನಡೆಯುತ್ತಿದೆ. ಈ ಅಂಶವನ್ನೇ ಪ್ರಮುಖವಾಗಿಟ್ಟು ಕೊಂಡು “2 nd ಲೈಫ್” ಚಿತ್ರ ತಯಾರಾಗಿದೆ. ಇತ್ತೀಚಿಗೆ ಈ ಚಿತ್ರದ ಟ್ರೇಲರ್ ಬಿಡುಗಡೆಯಾಯಿತು. ಜಯಣ್ಣ ಫಿಲಂಸ್ ಹಾಗೂ ಶುಕ್ರ ಫಿಲಂಸ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸಿದೆ.

ಜೀವನದಲ್ಲಿ ಯಾವುದೋ ದೊಡ್ಡ ಅನಾಹುತ ನಡೆದು ಅದರಿಂದ ಪಾರಾದಾಗ ಎಲ್ಲರೂ ಹೇಳುವುದು. ನಿನ್ನ ಹೊಸಜೀವನ ಆರಂಭವಾಗಿದೆ ಅಂತ. ಈ ರೀತಿಯ ಘಟನೆ ಚಿತ್ರದಲ್ಲಿ ನಡೆಯುವುದರಿಂದ ಚಿತ್ರಕ್ಕೆ “2nd ಲೈಫ್” ಅಂತ ಹೆಸರಿಡಲಾಗಿದೆ. ಈಗ ಟ್ರೇಲರ್ ಬಿಡುಗಡೆಯಾಗಿದೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ ಎಂದು ನಿರ್ದೇಶಕ ರಾಜು ದೇವಸಂದ್ರ ಚಿತ್ರದ ಕುರಿತು ವಿವರಣೆ ನೀಡಿದರು.

ನಾನು ಈ ಹಿಂದೆ “ಸ್ವಾರ್ಥ ರತ್ನ” ಎಂಬ ಚಿತ್ರದಲ್ಲಿ ‌ಅಭನಯಸಿದ್ದೆ. ಈಗ “2 nd ಲೈಫ್” ಚಿತ್ರದಲ್ಲಿ ನಟಿಸಿದ್ದೇನೆ. ನಾನು ಮೂಲತಃ ಆಡಿಟರ್. ಮಂಜುಳಾ ರಮೇಶ್ ಅವರು ಬರೆದಿರುವ ಈ ಚಿತ್ರದ ಕಥೆ ಹಿಡಿಸಿತು. ಪಿ.ಆರ್.ಕೆ ಆಡಿಯೋ ಮೂಲಕ ಹಾಡು ಬಿಡುಗಡೆಯಾಗಿದೆ. ಕನ್ನಡ, ತೆಲುಗು ಹಾಗೂ ತಮಿಳು ಮೂರು ಭಾಷೆಗಳಲ್ಲಿ ನಮ್ಮ ಚಿತ್ರ ನಿರ್ಮಾಣವಾಗಿದೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ ಪ್ರೋತ್ಸಾಹಿಸಿ ಎಂದರು ನಾಯಕ ಆದರ್ಶ ಗುಂಡುರಾಜ್.

ಈ‌ ಚಿತ್ರದಲ್ಲಿ ನನ್ನದು ಕುರುಡಿಯ ಪಾತ್ರ ಎಂದು ತಮ್ಮ ಪಾತ್ರದ ಬಗ್ಗೆ ನಾಯಕಿ ಸಿಂಧೂ ರಾವ್ ತಿಳಿಸಿದರು.

ಸಂಗೀತ ನಿರ್ದೇಶಕ ಆರವ್ ರಿಶಿಕ್, ಛಾಯಾಗ್ರಹಕ ರಮೇಶ್ ಕೊಯಿರ, ನಟ ಶಿವಪ್ರದೀಪ್ ಹಾಗೂ ಸಹ ನಿರ್ಮಾಪಕ – ನಟ ರುದ್ರಮುನಿ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

Categories
ಸಿನಿ ಸುದ್ದಿ

ಜಾಗೃತಿಗೊಂದು ಪ್ರಜಾರಾಜ್ಯ! ತಬಲ ನಾಣಿ ಈಗ ಆಟೋ ಡ್ರೈವರ್…

ವೀರೇನ್ ಕ್ರಿಯೇಷನ್ಸ್ ಲಾಂಛನದಲ್ಲಿ ಡಾ||ವರದರಾಜು ಡಿ.ಎನ್ ನಿರ್ಮಿಸಿರುವ, ವಿಜಯ್ ಭಾರ್ಗವ್ ನಿರ್ದೇಶಿಸಿರುವ ಚಿತ್ರ “ಪ್ರಜಾರಾಜ್ಯ”. ಇತ್ತೀಚೆಗೆ ಈ ಚಿತ್ರದ ಪ್ರಥಮ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ವಿವರಣೆ ನೀಡಿದರು.

ನಾನು ವೈದ್ಯ. ನರರೋಗ ತಜ್ಞನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಸಮಾಜದ ಕೆಲವು ವಿಷಯಗಳು ನನ್ನನ್ನು ಚಿತ್ರ ಮಾಡಲು ಪ್ರೇರೇಪಿಸಿತು. ಈ ಸಮಾಜದಲ್ಲಿ ಪ್ರತಿಯೊಬ್ಬರಿಗೂ ಉತ್ತಮವಾದ ಶಿಕ್ಷಣ ಹಾಗೂ ಆರೋಗ್ಯ ಉಚಿತವಾಗಿ ಸಿಗಬೇಕು. ಅದನ್ನು ಕೇಳುವ ಹಕ್ಕು ನಮಗಿದೆ. ಏಕೆಂದರೆ ನಾವು ಸರ್ಕಾರಕ್ಕೆ ತೆರಿಗೆ ಕಟ್ಟಿರುತ್ತೇವೆ. ಶಿಕ್ಷಣ ವ್ಯವಸ್ಥೆ, ಆರೋಗ್ಯ ಸಮಸ್ಯೆ ಹಾಗೂ ರೈತರ ಕಷ್ಟಕಾರ್ಪಣ್ಯಗಳ ಸುತ್ತ ನಮ್ಮ ಚಿತ್ರದ ಕಥೆ ಸಾಗುತ್ತದೆ. ಉಪೇಂದ್ರ ಅವರ “ಉಪೇಂದ್ರ” ಚಿತ್ರ ನನಗೆ ಸ್ಪೂರ್ತಿ. ಆರ್ಥಿಕ ಸ್ವಾತಂತ್ರ್ಯಕ್ಕಾಗಿ ಹೋರಾಟ ಎಂಬ ಅಡಿಬರಹ ಈ ಚಿತ್ರಕ್ಕಿದೆ.
“ಪ್ರಜಾರಾಜ್ಯ” ಚಿತ್ರದ ಚಿತ್ರೀಕರಣ ಪೂರ್ಣವಾಗಿದ್ದು, ತೆರೆಗೆ ಬರಲು ಸಿದ್ದವಾಗಿದೆ.


ನಾನೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ಮಾಣ ಮಾಡಿದ್ದೇನೆ. ವಿಜಯ್ ಭಾರ್ಗವ್ ನಿರ್ದೇಶನ ಮಾಡಿದ್ದಾರೆ. ಹಿರಿಯ ನಟರಾದ ದೇವರಾಜ್, ನಾಗಾಭರಣ, ಸುಧಾರಾಣಿ, ಅಚ್ಯತಕುಮಾರ್ ತಬಲಾನಾಣಿ, ಸುಧಾ ಬೆಳವಾಡಿ, ಸಂಪತ್ ಮೈತ್ರೇಯ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ನಾನು ಕೂಡ ನಟಿಸಿದ್ದೇನೆ. ಇದು ನಾಯಕ ಪ್ರಧಾನ ಚಿತ್ರವಲ್ಲ. ಚಿತ್ರ ನೋಡಿದ ಪ್ರೇಕ್ಷಕನಿಗೆ ಈ ಚಿತ್ರ ಇಷ್ಟವಾಗಿ, ಆತನಿಗೆ ಹೌದು, ನಾವು ಈ ರೀತಿ ಬದಲಾಗಬೇಕು ಎನಿಸಿದರೆ ಆತನೇ ನಮ್ಮ ಚಿತ್ರದ ನಾಯಕ ಎಂದು ನಿರ್ಮಾಪಕ ವರದರಾಜ್ “ಪ್ರಜಾರಾಜ್ಯ” ಚಿತ್ರದ ಬಗ್ಗೆ ಸಂಪೂರ್ಣ ವಿವರ ನೀಡಿದರು.

ಸರಿಸುಮಾರು ೪೦೦ ಕ್ಕೂ ಅಧಿಕ ಚಿತ್ರಗಳು ವರ್ಷಕ್ಕೆ ಬಿಡುಗಡೆಯಾಗುತ್ತಿದೆ. ನೋಡುಗರಿಗೆ ಬೇಕಾದ ರೀತಿಯಲ್ಲಿ ಸಿನಿಮಾ ಮಾಡುವವರು ಹೆಚ್ಚಾಗಿದ್ದಾರೆ. ಆದರೆ ಸಾಮಾಜಿಕ ಕಳಕಳಿಯಿಟ್ಟುಕೊಂಡು ತಮಗೆ ಅನಿಸಿದ್ದನ್ನು ಸಿನಿಮಾ ಮಾಡಿರುವ ಡಾಕ್ಟರ್ ವರದರಾಜ್ ಅವರ ಧೈರ್ಯ ನಿಜಕ್ಕೂ ಮೆಚ್ಚುವಂತದು. ಅವರಿಗೆ ಹಾಗೂ ತಂಡಕ್ಕೆ ಶುಭವಾಗಲಿ ಎಂದರು ನಾಗಾಭರಣ.

ಈ ಚಿತ್ರದಲ್ಲಿ ನನ್ನದು ಆಟೋ ಡ್ರೈವರ್ ಪಾತ್ರ. ನನಗೆ ತಪ್ಪು ಅನಿಸಿದ್ದನ್ನು ನೇರವಾಗಿ ಹೇಳುವ ವ್ಯಕ್ತಿ ಕೂಡ. ಅವಕಾಶ ನೀಡಿದ ನಿರ್ಮಾಪಕರಿಗೆ ಧನ್ಯವಾದ ಎಂದರು ನಟ ತಬಲನಾಣಿ.

ನನ್ನ ಮೇಲೆ ಭರವಸೆಯಟ್ಟು ಇಂತಹ ಉತ್ತಮ ಕಥೆಯುಳ್ಳ ಚಿತ್ರ ನಿರ್ದೇಶಿಸಲು ಅವಕಾಶ ನೀಡಿದ ನಿರ್ಮಾಪಕರಿಗೆ ಧನ್ಯವಾದ. ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ. ನೋಡಿ ಪ್ರೋತ್ಸಾಹ ನೀಡಿ ಎನ್ನುತ್ತಾರೆ ನಿರ್ದೇಶಕ ವಿಜಯ್ ಭಾರ್ಗವ್.

ಚಿತ್ರದಲ್ಲಿ ನಟಿಸಿರುವ ಕೆ.ಜಿ.ಎಫ್ ತಾತ ಎಂದೆ ಖ್ಯಾತರಾಗಿರುವ ಕೃಷ್ಣೋಜಿರಾವ್ ಕೂಡ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು.

ಸಂಗೀತ ನಿರ್ದೇಶಕ ವಿಜೇತ್ ಮಂಜಯ್ಯ ಹಾಗೂ ಛಾಯಾಗ್ರಾಹಕ ರಾಕೇಶ್ ಸಿ ತಿಲಕ್ ಹಾಗೂ ನಿರ್ಮಾಣ ನಿರ್ವಾಹಕ ರವಿಶಂಕರ್ ಚಿತ್ರದ ಕುರಿತು ಮಾತನಾಡಿದರು.

ಯೋಗರಾಜ್ ಭಟ್ ಹಾಗೂ ಡಾ.ವಿ.ನಾಗೇಂದ್ರ ಪ್ರಸಾದ್ ಈ ಚಿತ್ರದ ಹಾಡುಗಳನ್ನು ಬರೆದಿದ್ದಾರೆ. “ಕೆ.ಜಿ.ಎಫ್” ಖ್ಯಾತಿಯ ಶ್ರೀಕಾಂತ್ ಸಂಕಲನಕಾರರಾಗಿ ಕಾರ್ಯ ನಿರ್ವಹಿಸಿದ್ದಾರೆ.

Categories
ಸಿನಿ ಸುದ್ದಿ

ಅಪ್ಪು ನೆನಪಲ್ಲಿ ಮಕ್ಕಳ ಚಿತ್ರೋತ್ಸವ: ಲೋಗೋ ಅನಾವರಣ- ಉಲ್ಲಾಸ್ ಸ್ಕೂಲ್ ಸಿನಿಮಾಸ್ ಮೂಲಕ ಮಕ್ಕಳ ಚಿತ್ರಕ್ಕೆ ಪ್ರೋತ್ಸಾಹ…

ಮಕ್ಕಳ ದಿನಾಚರಣೆ ಪ್ರಯುಕ್ತ ಉಲ್ಲಾಸ್ ಸ್ಕೂಲ್ ಸಿನಿಮಾಸ್ ವತಿಯಿಂದ ‘ಮಕ್ಕಳ ಚಿತ್ರೋತ್ಸವ’ ಲೋಗೋ ಲಾಂಚ್ ಮಾಡಲಾಗಿದೆ.. ಜನವರಿ 26ರಿಂದ ಮೂರು ದಿನ ನಡೆಯುವ ಮಕ್ಕಳ ಚಲನ ಚಿತ್ರೋತ್ಸವವನ್ನು ಇದೇ ಮೊದಲ ಬಾರಿಗೆ ಉಲ್ಲಾಸ್ ಸ್ಕೂಲ್ ಸಿನಿಮಾಸ್ ಆಯೋಜನೆ ಮಾಡಿದೆ. ಅದರ ಪೂರ್ವಭಾವಿಯಾಗಿ ಇತ್ತೀಚೆಗೆ ಚಂದನವನದ ಬಾಲನಟರನ್ನೆಲ್ಲ ಒಟ್ಟು ಗೂಡಿಸಿ ಮಕ್ಕಳ ಚಲನಚಿತ್ರೋತ್ಸವ ಲೋಗೋ ಲಾಂಚ್ ಮಾಡಿಸಲಾಗಿದೆ.

ಜನವರಿ 26ರಿಂದ ಮೂರು ದಿನಗಳ ಕಾಲ ‘ಮಕ್ಕಳ ಚಲನಚಿತ್ರೋತ್ಸವ’ ನಡೆಯಲಿದ್ದು, ಈ ಬಾರಿ ಪುನೀತ್ ರಾಜ್ ಕುಮಾರ್ ಅವರ ಸ್ಮರಣಾರ್ಥ ಕೇವಲ ಕನ್ನಡ ಸಿನಿಮಾಗಳಿಗೆ ಆದ್ಯತೆ ನೀಡಲಾಗಿದೆ. ಕಾರ್ಯಕ್ರಮದಲ್ಲಿ ಬಾಲ ನಟರಾಗಿ ಪ್ರಖ್ಯಾತಿ ಗಳಿಸಿದ್ದ ಕಲಾವಿದರನ್ನು ಒಂದೆಡೆ ಸೇರಿಸಿದ್ದು ವಿಶೇಷವಾಗಿತ್ತು. ಮಾಸ್ಟರ್ ಮಂಜುನಾಥ್, ಮಾಸ್ಟರ್ ರೋಹಿತ್, ಸುನಿಲ್ ರಾವ್, ವಿಜಯ ರಾಘವೇಂದ್ರ, ಮಾಸ್ಟರ್ ಆನಂದ್, ಅಭಿಷೇಕ್, ವಿನಾಯಕ ಜೋಶಿ, ಹೇಮಾ ಪಂಚಮುಖಿ, ಎಸ್.ಎಸ್. ಕೀರ್ತನ, ನಟರಾಜ್ ಗುಬ್ಬಿ ಸೇರಿದಂತೆ ಹಲವು ಕಲಾವಿದರು ಪಾಲ್ಗೊಂಡಿದ್ದು ವಿಶೇಷವಾಗಿತ್ತು.

ಮಕ್ಕಳ ಚಿತ್ರಕ್ಕೆ ಆದ್ಯತೆ ಕಡಿಮೆಯಾಗುತ್ತಿದೆ. ಎಲ್ಲಾ ಫಿಲಂ ಪೆಸ್ಟಿವಲ್ ಗಳಿಗೆ ಹತ್ತು ಹದಿನೈದು ಸಿನಿಮಾಗಳನ್ನು ಕಳುಹಿಸಿದ್ರು ಒಂದೂ ಸಿನಿಮಾ ಕೂಡ ಸೆಲೆಕ್ಟ್ ಆಗೋದಿಲ್ಲ. ಮಕ್ಕಳ ಚಿತ್ರಕ್ಕೆ ಆದ್ಯತೆ ನೀಡೋ ದೃಷ್ಟಿಕೋನದಿಂದ ಉಲ್ಲಾಸ್ ಸ್ಕೂಲ್ ಸಿನಿಮಾಸ್ ವತಿಯಿಂದ ಇದೇ ಮೊದಲ ಬಾರಿಗೆ ಮಕ್ಕಳ ಚಲನಚಿತ್ರೋತ್ಸವ ಆಯೋಜಿಸಲಾಗಿದೆ.

ಈ ಬಾರಿ ಅಪ್ಪು ಅವರ ಸ್ಮರಣಾರ್ಥ ಕೇವಲ ಕನ್ನಡ ಸಿನಿಮಾಗಳನ್ನು ಮಾತ್ರ ಚಲನಚಿತ್ರೋತ್ಸವದಲ್ಲಿ ಪ್ರದರ್ಶನ ಮಾಡಲಾಗುವುದು ಎಂದು ಉಲ್ಲಾಸ್ ಸ್ಕೂಲ್ ಆಫ್ ಸಿನಿಮಾಸ್ ಮುಖ್ಯಸ್ಥ ಉಲ್ಲಾಸ್ ಮಾಹಿತಿ ಹಂಚಿಕೊಂಡಿದ್ದಾರೆ.

ಲೋಗೋ ಲಾಂಚ್ ಮಾಡಿ ಮಾತನಾಡಿದ ನಟ ವಿಜಯ ರಾಘವೇಂದ್ರ, ನಾವು ತುಂಬಾ ಅದೃಷ್ಟವಂತ ತಲೆಮಾರು ಅಂತ ಹೇಳೋಕೆ ಇಷ್ಟಪಡ್ತೀನಿ. ಮುಂಬರುವ ಜನರೇಷನ್ ಗೆ ಈ ರೀತಿ ಸಪೋರ್ಟ್ ಸಿಗುತ್ತೋ ಇಲ್ವೋ ಗೊತ್ತಿಲ್ಲ. ಇವತ್ತು ಎಲ್ಲಾ ಬಾಲನಟರೂ ಒಂದೇ ವೇದಿಕೆಯಲ್ಲಿ ಮತ್ತೆ ಸೇರುವಂತಾಯ್ತು ಇದನ್ನು ಸಾಧ್ಯವಾಗಿಸಿದಕ್ಕೆ ಎಲ್ಲರಿಗೂ ಆಭಾರಿ.

ಬಾಲನಟರಾಗಿದ್ದಾಗ ನಿರ್ದೇಶಕರಿಂದ, ಹಿರಿಯ ಕಲಾವಿದರಿಂದ ಸಿಕ್ಕ ಸಪೋರ್ಟ್, ತರಭೇತಿ ಎಲ್ಲವೂ ನಮ್ಮನ್ನು ಇಲ್ಲಿವರೆಗೆ ಕರೆತಂದು ನಿಲ್ಲಿಸಿವೆ. ಮಕ್ಕಳ ಚಿತ್ರಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಆರಂಭವಾಗಿರುವ ಮಕ್ಕಳ ಚಲನಚಿತ್ರೋತ್ಸವ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ಮಾಜಿ ಅಧ್ಯಕ್ಷರಾದ ಚಿನ್ನೇಗೌಡ್ರು, ಸುಂದರ್ ರಾಜ್, ಎಮ್ ಏನ್ ಕುಮಾರ್, ಟಿ ಪಿ ಸಿದ್ದರಾಜು ಸೇರಿದಂತೆ ಹಲವರು ಇದ್ದರು.

Categories
ಸಿನಿ ಸುದ್ದಿ

ಪ್ರಜ್ವಲ್ ಅಬ್ಬರ ಜೋರು! ಅಪ್ಪ ಮಗನ ಅಪರೂಪದ ಕಥೆ ನವೆಂಬರ್ 18ಕ್ಕೆ ಅನಾವರಣ…

ಕೆ.ರಾಮ್‌ ನಾರಾಯಣ್ ಅವರ ನಿರ್ದೇಶನದಲ್ಲಿ ಪ್ರಜ್ವಲ್ ದೇವರಾಜ್ ನಾಯಕನಾಗಿ ನಟಿಸಿರುವ ಚಿತ್ರ ಅಬ್ಬರ
ನವೆಂಬರ್ 18ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಟೈಸನ್, ಕ್ರ‍್ಯಾಕ್ ನಂತರ ರಾಮ್‌ನಾರಾಯಣ್ ನಿರ್ದೇಶಿಸಿರುವ ಚಿತ್ರವಿದು. ಸಿ. ಅಂಡ್ ಎಂ.ಮೂವೀಸ್ ಬ್ಯಾನರ್ ನಲ್ಲಿ ಬಸವರಾಜ್ ಮಂಚಯ್ಯ ಅವರು ನಿರ್ಮಿಸಿದ್ದಾರೆ.


ಆಕ್ನ್ , ಫ್ಯಾಮಿಲಿ ಬಾಂಡಿಂಗ್, ಕಾಮಿಡಿ ಎಂಟರ್‌ಟೈನರ್ ಕಥಾಹಂದರ ಹೊಂದಿರೋ ಈ ಚಿತ್ರದಲ್ಲಿ ತಂದೆ ಮಗನ ನಡುವಿನ ಭಾವನಾತ್ಮಕ ಸಂಬಂಧ ಹಾಗೂ ಅದರ ಮಹತ್ವದ ಕುರಿತು ಹೇಳಲಾಗಿದೆ. ಪ್ರಜ್ವಲ್ ಜೊತೆ ರಾಜಶ್ರೀ ಪೊನ್ನಪ್ಪ, ನಿಮಿಕಾ ರತ್ನಾಕರ್ ಹಾಗೂ ಲೇಖಾಚಂದ್ರ ನಾಯಕಿಯರಾಗಿ ಅಭಿನಯಿಸಿದ್ದಾರೆ.

ನಾಯಕ ತನ್ನ ಫ್ಯಾಮಿಲಿಗೋಸ್ಕರ ಏನೆಲ್ಲ ಮಾಡುತ್ತಾನೆ ಅನ್ನೋದನ್ನು ಪ್ರೇಕ್ಷಕರ ಮನಮುಟ್ಟುವ ಹಾಗೆ ನಿರೂಪಿಸಲಾಗಿದೆ. ತಂದೆ ಒಂದು ಒಂದು ತಪ್ಪು ಮಾಡ್ತಾನೆ, ಅದನ್ನು ಸರಿಪಡಿಸುವುಕ್ಕೆ ಹೋಗಿ ಮತ್ತೊಂದು ತಪ್ಪು ಮಾಡ್ತಾನೆ. ನಂತರ ಮಗ ಅದನ್ನು ಹೇಗೆ ಸರಿಪಡಿಸ್ತಾನೆ ಅನ್ನೋದೇ ಈ ಚಿತ್ರದ ಎಳೆ.

ತಾನು ನಡೆಯುವ ದಾರಿ ಹೀಗೇ ಇರಬೇಕು ಅಂದುಕೊಂಡಿದ್ದರೂ ಅದು ಹೋಗ್ತಾ ಹೋಗ್ತಾ ಕಳೆದುಹೋಗುತ್ತದೆ. ಮನುಷ್ಯ ಯಾವಾಗಲೂ ಜಾಗೃತನಾಗಿರಬೇಕು ಎನ್ನುವುದೇ ಅಬ್ಬರ ಚಿತ್ರದ ಸಂದೇಶ.

ನಾಯಕ ಪ್ರಜ್ವಲ್ ಚಿತ್ರದಲ್ಲಿ ಮೂರು ವಿಭಿನ್ನ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಅಲ್ಲದೆ ಎರಡು ಡ್ಯುಯೆಟ್ ಹಾಡುಗಳನ್ನು ಥೈಲ್ಯಾಂಡ್‌ನಲ್ಲಿ ಚಿತ್ರೀಕರಿಸಲಾಗಿದೆ.


ಶೋಭರಾಜ್, ರವಿಶಂಕರ್, ಶಂಕರ್ ಅಶ್ವಥ್, ವಿಕ್ಟರಿವಾಸು, ಕೋಟೆ ಪ್ರಭಾಕರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಅಲ್ಲದೆ ರವಿ ಬಸ್ರೂರು ಅವರ ಅದ್ಭುತ ಮ್ಯೂಸಿಕ್, ಜೆ.ಕೆ.ಗಣೇಶ್ ಅವರ ಕ್ಯಾಮೆರಾವರ್ಕ್ ಚಿತ್ರಕ್ಕಿದೆ.

Categories
ಸಿನಿ ಸುದ್ದಿ

ಟೆಂಪರ್ ಸಿನಿಮಾ ಬಿಡುಗಡೆಗೆ ರೆಡಿ: ಇದು ಮಂಜು ಕವಿ ಚಿತ್ರ…

ಹಲವಾರು ವರ್ಷಗಳಿಂದ ಗೀತರಚನೆಕಾರನಾಗಿ, ಸಂಗೀತ ಸಂಯೋಜಕನಾಗಿ ಗುರುತಿಸಿಕೊಂಡಿರುವ ಮಂಜುಕವಿ, ಟೆಂಪರ್ ಚಿತ್ರದ ಮೂಲಕ ನಿರ್ದೇಶಕರಾಗಿದ್ದಾರೆ. ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ನಿರ್ಮಾಣವಾಗಿರುವ, ಮಾಸ್ ಲವ್‌ಸ್ಟೋರಿ ಒಳಗೊಂಡ ಟೆಂಪರ್ ಚಿತ್ರದ ಟ್ರೇಲರ್ ನವೆಂಬರ್ ನಲ್ಲಿ ಬಿಡುಗಡೆಯಾಗಲಿದ್ದು,, ಚಿತ್ರ ಡಿಸೆಂಬರ್‌ನಲ್ಲಿ ತೆರೆ ಕಾಣಲಿದೆ.

ಇದೊಂದು ಫ್ಯಾಮಿಲಿ ಸೆಂಟಿಮೆಂಟ್ ಚಿತ್ರ. ಬೆಂಗಳೂರು, ಮಂಡ್ಯ, ಮೈಸೂರು, ನಂಜನಗೂಡು, ಶ್ರೀರಂಗಪಟ್ಟಣ, ಚಿಕ್ಕಮಗಳೂರು ಹಾಗೂ ಮಡಿಕೇರಿ ಸುತ್ತಮುತ್ತ 50 ದಿನಗಳ ಕಾಲ ಚಿತ್ರದ ಚಿತ್ರೀಕರಣ ನಡೆಸಲಾಗಿದೆ.

ಚಿಕ್ಕವನಿದ್ದಾಗಿಂದಲೂ ಯಾವುದೇ ವಿಷಯಕ್ಕಾದರೂ ತಕ್ಷಣ ಕೋಪಗೊಳ್ಳುವಂಥ ಗುಣವಿರುವ ನಾಯಕ, ಕಾರ್ ಗ್ಯಾರೇಜ್ ಇಟ್ಟುಕೊಂಡಿರುತ್ತಾನೆ, ಅದೇ ಊರಿನ ಗೌಡನ ಮಗಳು ಗೀತಾ ಮೇಲೆ ಆತನಿಗೆ ಲವ್ವಾಗುತ್ತದೆ, ಆ ಸಂದರ್ಭದಲ್ಲಿ ಆತ ಹೇಗೆ ತನ್ನ ಕುಟುಂಬ ಹಾಗೂ ತನ್ನ ಪ್ರೇಯಸಿ ಇಬ್ಬರನ್ನು ಕಾಪಾಡಿಕೊಳ್ಳುತ್ತಾನೆ ಎನ್ನುವುದೇ ಟೆಂಪರ್ ಚಿತ್ರದ ಕಥೆ ಅಂತ ನಿರ್ದೇಶಕರು ಹೇಳುತ್ತಾರೆ.


ಶ್ರೀಬಾಲಾಜಿ ಎಂಟರ್ ಪ್ರೈಸಸ್ ಲಾಂಚನದಲ್ಲಿ ಮೋಹನ್ ಬಾಬು ಬಿ. ಹಾಗೂ ವಿ. ವಿನೋದ್‌ಕುಮಾರ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಮಂಜುಕವಿ ಅವರೇ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ನಿರ್ದೇಶಿಸಿದ್ದಾರೆ.

ಈ ಚಿತ್ರದ ಮೂಲಕ ಆರ್ಯನ್ ಸೂರ್ಯ ಹಾಗೂ ಕಾಶಿಮಾ ಮೊದಲ ಬಾರಿಗೆ ನಾಯಕ, ನಾಯಕಿಯಾಗಿ ಬಣ್ಣ ಹಚ್ಚಿದ್ದು, ಪತ್ರಕರ್ತ ಧನು ಯಲಗಚ್ ಹಾಗೂ ಮಜಾ ಟಾಕೀಸ್ ಪವನ್‌ಕುಮಾರ್ ನಾಯಕನ ಸ್ನೇಹಿತರಾಗಿ ಕಾಣಿಸಿಕೊಂಡಿದ್ದಾರೆ. ಬಾಲನಟನಾಗಿ ಮಾಸ್ಟರ್ ಪವನ್ ಮೋರೆ ಅಭಿನಯಿಸಿದ್ದಾರೆ.


ಉಳಿದಂತೆ ತಬಲಾನಾಣಿ, ಸುಧಾ ಬೆಳವಾಡಿ, ಟೆನ್ನಿಸ್ ಕೃಷ್ಣ, ಊರಗೌಡನಾಗಿ ಬಲ ರಾಜವಾಡಿ, ಯತಿರಾಜ್ ನಂದಿನಿ ವಿಠಲ, ಪ್ರಿಯ ತರುಣ್, ಸನತ್ ವಿನೋದ್ ಮೀಥಾಲಿ ಶಶಿ ಹಾಗೂ ಅನೇಕ ಹಿರಿಯ ಕಲಾವಿದರು ಈ ಚಿತ್ರದಲಿ ನಟಿಸಿದ್ದಾರೆ. ಅಲ್ಲದೆ ನಿರ್ದೇಶನ ತಂಡದಲ್ಲಿ ಎಸ್ ಜೆ. ಸಂಜಯ್ ಜೀವನ್, ಪ್ರವಿ, ಸಂಜಯ್ ಕಿರಣ್, ಎಂ.ಎಸ್. ಶ್ರೀಮಂತ್ ರಾಜ್, ಸುಯೋದ ಕಾರ್ಯ ನಿರ್ವಹಿಸಿದ್ದಾರೆ.

ಚಿತ್ರದಲ್ಲಿ ಒಟ್ಟು 5 ಹಾಡುಗಳಿದ್ದು, ಆರ್.ಹರಿಬಾಬು ಸಂಗೀತ ಸಂಯೋಜನೆ ಮಾಡಿದ್ದಾರೆ. ಆರ್.ಕೆ. ಶಿವಕುಮಾರ್ ಅವರ ಕ್ಯಾಮರಾ ವರ್ಕ್, ಬಿ.ಎಸ್. ಕೆಂಪರಾಜ್ ಅವರ ಸಂಕಲನ ಈ ಚಿತ್ರಕ್ಕಿದೆ.

error: Content is protected !!