Categories
ಸಿನಿ ಸುದ್ದಿ

ಅಪ್ಪು ಕಪ್ ಸ್ಯಾಂಡಲ್ ವುಡ್ ಬ್ಯಾಡ್ಮಿಂಟನ್ ಲೀಗ್ ಲೋಗೋ ಲಾಂಚ್ ಇವೆಂಟ್ ಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಚಾಲನೆ: ಅ. 21ರಿಂದ ಮೂರು ದಿನಗಳ ಪಂದ್ಯಾವಳಿ ಶುರು…

ಪುನೀತ್ ರಾಜ್ ಕುಮಾರ್ ನೆನಪಿನಲ್ಲಿ ಆಯೋಜಿಸಿರುವ ‘ಅಪ್ಪು ಕಪ್’ ಸ್ಯಾಂಡಲ್ ವುಡ್ ಬ್ಯಾಡ್ಮಿಂಟನ್ ಲೀಗ್ ನ ಲೋಗೋ, ಜರ್ಸಿ, ಥೀಮ್ ಸಾಂಗ್ ಲಾಂಚ್ ಉದ್ಘಾಟನಾ ಸಮಾರಂಭ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನೇರವೇರಿದೆ. ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಆಟಗಾರರಿಗೆ ಶುಭಾಶಯ ಕೋರಿದರು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸಚಿವ ಆರ್. ಅಶೋಕ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗಿಯಾಗಿದ್ದರು.

ಅಪ್ಪು ಕಪ್ ಬ್ಯಾಡ್ಮಿಂಟನ್ ಬಗ್ಗೆ ಮಾತಾನಾಡಿದ ಸಚಿವ ಆರ್. ಅಶೋಕ, ಅಪ್ಪು ಕಪ್ ಬ್ಯಾಡ್ಮಿಂಟನ್ ಲೀಗ್ ಉದ್ಘಾಟನೆಯಾಗಿದೆ. ಎಲ್ಲರೂ ನಿಮ್ಮ ಅಭಿಪ್ರಾಯ ಹಂಚಿಕೊಂಡಿದ್ದೀರಾ. ಎಲ್ಲರೂ ನಾನೇ ಗೆಲ್ಲುತ್ತೇನೆ ಎಂದು ಹೇಳಿದ್ದೀರಾ. ಇದು ಪ್ರತಿಯೊಬ್ಬ ಆಟಗಾರನ ಆತ್ಮವಿಶ್ವಾಸ. ಎಲ್ಲರೂ ಗೆಲ್ಲಲು ಸಾಧ್ಯವಿಲ್ಲ. ಒಬ್ಬರೇ ಗೆಲ್ಲಲು ಆಗುವುದು. ಅಪ್ಪು ಹೆಸರಲ್ಲಿ ಮಾಡುತ್ತಿರುವ ಈ ಪಂದ್ಯಾವಳಿ ಯಶಸ್ವಿಯಾಗಲಿ. ಎಲ್ಲರಿಗೂ ಒಳ್ಳೆಯದಾಗಲಿ ಎಂದ ಅವರು, ಅಪ್ಪು ಒಟ್ಟಿಗಿನ ಒಡನಾಟ ಬಿಚ್ಚಿಟ್ಟರು. ರಾಜ್ ಕುಮಾರ್ ಅವರಲ್ಲಿದ್ದ ಗುಣಗಳು ಅಪ್ಪುವಿನಲ್ಲಿದ್ದವು. ನವೆಂಬರ್ ತಿಂಗಳಲ್ಲಿ ಅವರಿಗೆ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ಕೊಡಲಿದೆ ಎಂದರು.

ಕನ್ನಡ ಚಲನಚಿತ್ರ ಕಲಾವಿದರು ಮತ್ತು ತಂತ್ರಜ್ಞರು ಆಡುತ್ತಿರುವ ಈ ಪಂದ್ಯಾವಳಿಯಲ್ಲಿ ಜಾಕಿ ರೈಡರ್ಸ್, ರಾಜ್ ಕುಮಾರ್ ಕಿಂಗ್ಸ್, ಅರಸು ಹಂಟರ್ಸ್, ಬಿಂದಾಸ್ ಸೂಪರ್ ಸ್ಟಾರ್ಸ್, ಮಯೂರ್ ಸ್ಟ್ರೈಕರ್ಸ್, ಜೇಮ್ಸ್ ವಾರಿಯರ್, ಪವರ್ ಪೈಥಾನ್, ದೊಡ್ಮನೆ ಡ್ರ್ಯಾಗನ್ ಸೇರಿದಂತೆ ಎಂಟು ತಂಡಗಳು ಭಾಗಿಯಾಗಲಿವೆ.

ದಿಗಂತ್, ಸೃಜನ್ ಲೋಕೇಶ್, ವಸಿಷ್ಠ ಸಿಂಹ, ಪ್ರಿಯಾಂಕಾ ಉಪೇಂದ್ರ, ರಾಗಿಣಿ, ಕವಿತಾ ಲಂಕೇಶ್, ಶ್ವೇತಾ ಶ್ರೀವಾಸ್ತವ್, ಮಾಸ್ಟರ್ ಆನಂದ್ ತಂಡಗಳನ್ನು ಮುನ್ನೆಡೆಸಲಿದ್ದಾರೆ. ಇದರ ಜೊತೆಗೆ ಸ್ಯಾಂಡಲ್ ವುಡ್ ಸೆಲೆಬ್ರೆಟಿಗಳು ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾಗಿಯಾಗಲಿದ್ದಾರೆ.

ನಟ ಚೇತನ್ ಸೂರ್ಯ ತಮ್ಮದೇ ಸ್ಟೆಲ್ಲರ್ ಸ್ಟುಡಿಯೋ ಅಂಡ್ ಇವೆಂಟ್ ನಡಿ ಈ ಪಂದ್ಯಾವಳಿ ಆಯೋಜಿಸಿದ್ದು, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ ಮಾ ಹರೀಶ್ ಚೇತನ್ ಗೆ ಸಾಥ್ ಕೊಟ್ಟಿದ್ದಾರೆ. ಇದೇ ತಿಂಗಳ 21ರಿಂದ ಮೂರು ದಿನಗಳ ಕಾಲ ಅಪ್ಪು ನೆನಪಿನಲ್ಲಿ ಸ್ಯಾಂಡಲ್ ವುಡ್ ಬ್ಯಾಡ್ಮಿಂಟನ್ ಲೀಗ್ ನಡೆಯಲಿದೆ.

ಇನ್ನು ಜಾಕಿ ರೈಡರ್ಸ್ ತಂಡದ ಒಡೆತನದ ಜವಾಬ್ದಾರಿಯನ್ನು ಅಪ್ಲೆಕ್ಸ್ ಸಾಫ್ಟ್‌ವೇರ್ ಮಾಲೀಕರಾದ ಗಿರೀಶ್ ಕುಮಾರ್ ಹೊತ್ತುಕೊಂಡಿದ್ದರೆ, ರಾಜ್ ಕುಮಾರ್ ಕಿಂಗ್ಸ್ ತಂಡಕ್ಕೆ ನಿರ್ಮಾಪಕ ರವಿಕುಮಾರ್ ಬಿ ಮಾಲೀಕರು, ಅರಸು ಹಂಟರ್ಸ್ ಟೀಂ ನಮೋ ವೆಲ್ ನೆಸ್ ಮಾಲೀಕ ಮಹೀಂದ್ರ, ಬಿಂದಾಸ್ ಸೂಪರ್ ಸ್ಟಾರ್ಸ್ ತಂಡಕ್ಕೆ ನಿರ್ಮಾಪಕಿ ರಾಮದೇವಿ ಇದ್ದಾರೆ.

ಜೇಮ್ಸ್ ವಾರಿಯರ್ ತಂಡಕ್ಕೆ ಬ್ಯಾಡ್ಮಿಂಟನ್ ಅಕಾಡೆಮಿ ಮಾಲೀಕ ಚಂದ್ರಶೇಖರ್, ಪವರ್ ಪೈಥಾನ್ ತಂಡಕ್ಕೆ ಬಿಗ್ ಮೇಕರ್ಸ್ ಮಾಲೀಕ ಸಂತೋಷ್, ದೊಡ್ಮನೆ ಡ್ರ್ಯಾಗನ್ ತಂಡಕ್ಕೆ ನಿರ್ಮಾಪಕ ಮಂಜುನಾಥ್ ಸುಪುತ್ರ ಹರ್ಷ, ಮಯೂರ್ ಸ್ಟ್ರೈಕರ್ ತಂಡದ ಒಡೆತನವನ್ನು ಗುಬ್ಬಿ ವೀರಣ್ಣ ಮೊಮ್ಮಗ ಹಾಗೂ ಕಾರ್ನರ್ ಹೌಸ್ ಮಾಲೀಕ ಶಿವಪ್ರದೀಪ್ ಹೊತ್ತುಕೊಂಡಿದ್ದಾರೆ.

Categories
ಸಿನಿ ಸುದ್ದಿ

ರಾಂಚಿ ಟೀಸರ್ ಹೊರಬಂತು: ಇದು ರಿಯಲ್ ಸ್ಟೋರಿ ಸಿನಿಮಾ…

ರುದ್ರಾನಂದ ಆರ್ ಎನ್ ಹಾಗೂ ಅರುಣ್ ಕುಮಾರ್ ಎನ್ ನಿರ್ಮಾಣ‌ದ, ಶಶಿಕಾಂತ್ ಗಟ್ಟಿ ನಿರ್ದೇಶನದ, ನೈಜಘಟನೆ ಆಧಾರಿತ “ರಾಂಚಿ” ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರ ನವೆಂಬರ್ 11 ರಂದು ಬಿಡುಗಡೆಯಾಗುತ್ತಿದೆ.

ನಾನು ಐ ಪಿ ಸಿ ಸೆಕ್ಷನ್ 300 ಎಂಬ ಸಿನಿಮಾ ನಿರ್ದೇಶನ ಮಾಡುತ್ತಿದ್ದೆ. ಆಗ ನನಗೆ “ರಾಂಚಿ”ಯಿಂದ ಒಂದು ಕರೆ ಬರುತ್ತದೆ. ನೀವು ರೈಲ್ವೆ ಇಲಾಖೆ ಕುರಿತು ಒಂದು ಡಾಕ್ಯುಮೆಂಟರಿ ಮಾಡಿಕೊಡಬೇಕು. ರಾಂಚಿಗೆ ಬನ್ನಿ. ಅವರ ಪರಿಶುದ್ಧ ಹಿಂದಿ ಭಾಷೆ ಕೇಳಿ, ಇದು ಸರ್ಕಾರದಿಂದ ಬಂದಿರುವ ಕರೆ ಎಂದು ತಿಳಿದು ಸಂತೋಷವಾಯಿತು. ಆಮೇಲೆ ಯೋಚನೆ ಮಾಡಿದೆ. ಸರ್ಕಾರ ಇಂತಹ ವಿಷಯವನ್ನು ಟೆಂಡರ್ ಮೂಲಕ ಕರೆಯುತ್ತಾರೆ. ಇದು ಸುಳ್ಳು ಇರಬಹುದು ಎಂದು ಅಲ್ಲಿನ ಪೊಲೀಸ್ ಅಧಿಕಾರಿ ಪ್ರವೀಣ್ ಕುಮಾರ್ ಅವರಿಗೆ ಫೋನ್ ಮಾಡಿ ಈ ಬಗ್ಗೆ ಕೇಳಿದೆ. ಅವರು ಇದೆಲ್ಲಾ ಸುಳ್ಳು. ನೀವು ಇಲ್ಲಿಗೆ ಬರಬೇಡಿ ಎಂದರು. ಈ ರೀತಿ ಸಾಕಷ್ಟು ನಿರ್ದೇಶಕರು, ನಿರ್ಮಾಪಕರು ಈ ರೀತಿಯ ಕರೆಯಿಂದ ಮೋಸ ಹೋಗಿದ್ದಾರೆ. ಈ ವಿಷಯವನ್ನಿಟ್ಟುಕೊಂಡೆ “ರಾಂಚಿ” ಸಿನಿಮಾ ಮಾಡಿದ್ದೇವೆ.


ನಾಯಕ ಪ್ರಭು ಮುಂಡ್ಕರ್ ಕಥೆ ಕೇಳಿ ನಟಿಸಲು ಒಪ್ಪಿದರು. ರುದ್ರಾನಂದ ಹಾಗೂ ಅರುಣ್‌ ಕುಮಾರ್ ನಿರ್ಮಾಣಕ್ಕೆ ಮುಂದಾದರು. ನೈಜಘಟನೆ ಆಧಾರಿತ ಸಿನಿಮಾ‌ವಿದು. “ರಾಂಚಿ”ಯಲ್ಲೇ ಹೆಚ್ಚಿನ ಭಾಗದ ಚಿತ್ರೀಕರಣ ನಡೆದಿದೆ‌. 2020 ರಲ್ಲೇ ಸೆನ್ಸಾರ್ ಆಗಿತ್ತು. ಕೊರೋನ ಕಾರಣದಿಂದ ಬಿಡುಗಡೆ ವಿಳಂಬವಾಯಿತು. ಒಂದೊಳ್ಳೆ ಸಿನಿಮಾ ಮಾಡಿರುವ ಖುಷಿಯಿದೆ. ದಿವ್ಯ ಉರುಡಗ, ಟೋಟ ರಾಯ್ ಚೌಧರಿ, ಆರತಿ ನಾಯರ್, ಲಕ್ಷ್ಮಣ್ ಗೌಡ, ಸುರೇಶ್ ಹೆಬ್ಳೀಕರ್, ಉಷಾ ಭಂಡಾರಿ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ ಎಂದು ಚಿತ್ರದ ಕುರಿತು ನಿರ್ದೇಶಕ ಶಶಿಕಾಂತ್ ಗಟ್ಟಿ ಮಾಹಿತಿ ನೀಡಿದರು.

ಕೋವಿಡ್ ನಂತರ ಜನ ಸಿನಿಮಾ ನೋಡುವ ರೀತಿ ಬದಲಾಗಿದೆ. ಜನರ ನಿರೀಕ್ಷೆ ಬೇರೆ ತರಹ ಇದೆ.
” ಕೆ.ಜಿ.ಎಫ್”, “ಚಾರ್ಲಿ”, ” ಕಾಂತಾರ” ದಂತಹ ಚಿತ್ರಗಳ ಗೆಲುವು ಇದಕ್ಕೆ ಸಾಕ್ಷಿ. ನಾನು ಸೈಂಟಿಸ್ಟ್ ಆಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದೆ. ಆನಂತರ ಚಿತ್ರರಂಗಕ್ಕೆ ಬಂದೆ. ನಾನು “ಡಬಲ್ ಇಂಜಿನ್” ಚಿತ್ರದಲ್ಲಿ ನಟಿಸಬೇಕಾದರೆ ಶಶಿಕಾಂತ್ ಈ ಚಿತ್ರದ ಕಥೆ ಹೇಳಿದರು. ನನಗೂ ನೈಜಘಟನೆ ಆಧಾರಿತ ಚಿತ್ರದಲ್ಲಿ ನಟಿಸಬೇಕೆಂಬ ಆಸೆಯಿತ್ತು. ಆ ಸಮಯದಲ್ಲಿ ಈ ಕಥೆ ಕೇಳಿ, ನಟಿಸಲು ಒಪ್ಪಿದೆ ಎಂದರು ನಟ ಪ್ರಭು ಮುಂಡ್ಕರ್.

ಪ್ರಭು ಅವರ ಮೂಲಕ ನಿರ್ದೇಶಕ ಶಶಿಕಾಂತ್ ಗಟ್ಟಿ ಅವರ ಪರಿಚಯವಾಯಿತು. ಅವರು ಹೇಳಿದ ಕಥೆ ಮನಸ್ಸಿಗೆ ಹತ್ತಿರವಾಯಿತು. ನಿರ್ಮಾಣಕ್ಕೆ ಮುಂದಾದೆ ಎಂದು ನಿರ್ಮಾಪಕ ಅರುಣ್ ಕುಮಾರ್ ತಿಳಿಸಿದರು. ಚಿತ್ರದಲ್ಲಿ ನಟಿಸಿರುವ ಆರತಿ ನಾಯರ್, ಲಕ್ಷ್ಮಣ್ ಗೌಡ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Categories
ಸಿನಿ ಸುದ್ದಿ

ಹಬೀಬಿ ಅಂತ ಹಾಡಿ ಕುಣಿದ ಜಯರಾಜ್! ಕನ್ನಡಕ್ಕೆ ಬಂದ ಪಂಜಾಬಿ ಬೆಡಗಿ: ಡಾಲಿ ಜೊತೆ ಸಖತ್ ಸ್ಟೆಪ್…

ನಟ ಡಾಲಿ ಧನಂಜಯ ಕನ್ಮಡ ಚಿತ್ರ ರಂಗದಲ್ಲಿ ಸಕಲಕಲಾವಲ್ಲಭ ಅಂತಾನೇ ಪ್ರಖ್ಯಾತಿ . ಡಾಲಿ ಧನಂಜಯ್ ಅಭಿನಯದ ಹೆಡ್ ಬುಷ್ ಸಿನಿಮಾ ತೆರೆಗೆ ಬರಲು ಸಿದ್ದವಾಗಿದೆ. ಸಿನಿಮಾ ತಂಡ ಭರ್ಜರಿ ಪ್ರಚಾರದಲ್ಲಿ ಬ್ಯುಸಿ ಆಗಿದೆ. ಸದ್ಯ ಪ್ರೇಕ್ಷಕರ ಹಾಗೂ ಪಡ್ಡೆ ಹುಡುಗರ ಹಾರ್ಡ್ ಬೀಟ್ ಹೆಚ್ಚು ಮಾಡೋ ಹೊಸ ಸಾಂಗ್ ರಿಲೀಸ್ ಆಗಿದೆ.

ಹೆಡ್ ಬುಷ್ ಚಿತ್ರದ ಪಾಯಲ್ ರಜಪೂತ್ ಹೆಜ್ಜೆ ಹಾಕಿರೋ ಹಬೀಬಿ ಸಾಂಗ್ ರಿಲೀಸ್ ಆಗಿದೆ . ಪಂಜಾಬಿ ಬೆಡಗಿ ಪಾಯಲ್ ಮೈಮಾಟಕ್ಕೆ ಹುಡುಗರು ಪಾಗಲ್ ಆಗೋದು ಗ್ಯಾರೆಂಟಿ.

ಟಾಲಿವುಡ್ ನಲ್ಲಿ ಮಿಂಚಿನ ಸಂಚಲನ ಮೂಡಿಸಿದ್ದ ಪಾಯಲ್ ಈಗ ಸ್ಯಾಂಡಲ್ ವುಡ್ ಗೆ ಹೆಜ್ಜೆ ಇಟ್ಟಿದ್ದು ಜೈರಾಜ್ ಜೊತೆ ಮಸ್ ಆಗಿ ಹೆಜ್ಜೆ ಹಾಕಿದ್ದಾರೆ.

ಇಷ್ಟು ದಿನ ಅಭಿನಯದ ಮೂಲಕವೇ ಪ್ರೇಕ್ಷಕರನ್ನ ರಂಜಿಸಿ ನಟ ರಾಕ್ಷಸ ಎಂದು ಹೆಸರು ಪಡೆದುಕೊಂಡಿದ್ದ ಧನಂಜಯ್ ಈ ಹಾಡಿನ ಮೂಲಕ ಅಭಿಮಾನಿಗಳಿಂದ ಪದ ರಾಕ್ಷಸ ಎಂದು ಕರೆಸಿಕೊಳ್ತಿದ್ದಾರೆ. ಯೆಸ್ ಸದ್ಯ ಬಿಡುಗಡೆ ಆಗಿರೋ ಹೆಡ್ ಬುಷ್ ಸಿನಿಮಾದ ಹಬೀಬಿ ಹಾಡನ್ನ ಖುದ್ದು ಡಾಲಿ ಧನಂಜಯ್ ಅವರೇ ಬರೆದಿರೋದು ವಿಶೇಷ.

ಈ ಹಿಂದೆ ಬಡವರಾಸ್ಕಲ್, ಆರ್ಕ್ಯಾಸ್ಟ್ರಾ ಚಿತ್ರಗಳಿಗೆ ಸಾಹಿತ್ಯ ಬರೆದ ಮೇಲೆ, ಹೆಡ್ ಬುಷ್ ಗಾಗಿ ರಮಿಸೋ, ರಂಜಿಸೋ ಸಾಹಿತ್ಯ ಬರೆದಿದ್ದಾರೆ ಡಾಲಿ ಧನಂಜಯ, ಚರಣ್ ರಾಜ್ ಸಂಗೀತ ಅರೆಬಿಕ್ ಶೈಲಿಯ ಕ್ಯಾಬರೇ ಹಾಡಿಗೆ ಸದ್ಯ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹೆಡ್ ಬುಸ್ ಸಿನಿಮಾ ಇದೇ ತಿಂಗಳ 21ಕ್ಕೆ ತೆರೆಗೆ ಬರುತ್ತಿದ್ದು, ಡಾಲಿ ಧನಂಜಯ್ ಜಯರಾಜ್ ಆಗಿ ಪ್ರೇಕ್ಷಕರ ಮುಂದೆ ರೆಟ್ರೋ ಸ್ಟೈಲ್ ನಲ್ಲಿ ಎಂಟ್ರಿಕೊಡಲಿದ್ದಾರೆ.

ಅಗ್ನಿ ಶ್ರೀಧರ್ ಕತೆ , ಶೂನ್ಯ ಅವ್ರ ನಿರ್ದೇಶನ ಸಿನಿಮಾಗಿದ್ದು ಸೋಮಣ್ಣ ಟಾಕೀಸ್ ಹಾಗೂ ಡಾಲಿ ಪಿಚ್ಚರ್ ಅಡಿಯಲ್ಲಿ ಚಿತ್ರ ನಿರ್ಮಾಣ ಆಗಿದೆ. ಜೀ ಸ್ಟುಡಿಯೋಸ್ ಸಿನಿಮಾವನ್ನ ವಿತರಣೆ ಮಾಡುತ್ತಿದೆ. ಸಿನಿಮಾದಲ್ಲಿ ಬಹು ದೊಡ್ಡ ತಾರಾಬಳಗವಿದ್ದು ಲೂಸ್ ಮಾದ ಯೋಗಿ , ನಿರಂಜನ್ ,ರೋಷನ್ ಶ್ರುತಿ ಹರಿಹರನ್ , ಇನ್ನು ಅನೇಕರು ಅಭಿನಯಿಸಿದ್ದಾರೆ…

Categories
ಸಿನಿ ಸುದ್ದಿ

ಮತ್ತೆ ಉಪ್ಪಿ- ಶಿವಣ್ಣ ಕಾಂಬಿನೇಷನ್ ಸಿನಿಮಾ: ಅರ್ಜುನ್‌ ಜನ್ಯ ನಿರ್ದೇಶನದ ಪ್ಯಾನ್ ಇಂಡಿಯಾ ಚಿತ್ರ…

ಇತ್ತೀಚೆಗಷ್ಟೇ ‘ಗಾಳಿಪಟ 2’ ಎಂಬ ಬ್ಲಾಕ್ಬಸ್ಟರ್ ಚಿತ್ರವನ್ನು ತಮ್ಮ ಸೂರಜ್ ಪ್ರೊಡಕ್ಷನ್ಸ್ನಡಿ ನಿರ್ಮಿಸಿದ್ದ ರಮೇಶ್ ರೆಡ್ಡಿ, ಇದೀಗ ಇನ್ನೊಂದು ದೊಡ್ಡ ಸಾಹಸಕ್ಕೆ ಕೈ ಹಾಕಿದ್ದಾರೆ. ಅರ್ಜುನ್ ಜನ್ಯ ನಿರ್ದೇಶನದಲ್ಲಿ, ಶಿವರಾಜಕುಮಾರ್ ಅಭಿನಯದಲ್ಲಿ ಅವರು ‘45’ ಎಂಬ ಪ್ಯಾನ್ ಇಂಡಿಯಾ ಚಿತ್ರವನ್ನು ನಿರ್ಮಿಸುತ್ತಿರುವುದು ಗೊತ್ತೇ ಇದೆ. ಈಗ ಈ ಚಿತ್ರಕ್ಕೆ ಉಪೇಂದ್ರ ಸೇರ್ಪಡೆಯಾಗಿದ್ದು, ಅವರೂ ಇನ್ನೊಬ್ಬ ನಾಯಕನಾಗಿ ಅಭಿನಯಿಸುತ್ತಿದ್ದಾರೆ.


ಶಿವಣ್ಣ ಮತ್ತು ಉಪೇಂದ್ರ ಜೊತೆಯಾಗಿ ಕೆಲಸ ಮಾಡುತ್ತಿರುವುದು ಇದು ನಾಲ್ಕನೇ ಬಾರಿ. ಈ ಹಿಂದೆ ‘ಓಂ’ ಚಿತ್ರದಲ್ಲಿ ಶಿವಣ್ಣ ಅವರನ್ನು ನಿರ್ದೇಶಿಸಿದ್ದರು ಉಪೇಂದ್ರ. ಆ ನಂತರ ಇಬ್ಬರೂ ‘ಪ್ರೀತ್ಸೇ‘ ಮತ್ತು ‘ಲವ-ಕುಶ’ ಚಿತ್ರದಲ್ಲಿ ಜೊತೆಯಾಗಿ ನಟಿಸಿದ್ದರು. ಈಗ ದೊಡ್ಡ ಗ್ಯಾಪ್ನ ನಂತರ ಅವರಿಬ್ಬರೂ ‘45’ ಚಿತ್ರದಲ್ಲಿ ಮತ್ತೆ ಒಟ್ಟಾಗಿ ನಟಿಸಲಿದ್ದಾರೆ.


ಶಿವರಾಜಕುಮಾರ್ ಅವರ ಹುಟ್ಟುಹಬ್ಬದಂದು ಅಧಿಕೃತವಾಗಿ ಘೋಷಣೆಯಾದ ‘45’, ಈಗ ಪ್ರೀ-ಪ್ರೊಡಕ್ಷನ್ ಹಂತದಲ್ಲಿದೆ. ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದ ಚಿತ್ರೀಕರಣವು ಡಿಸೆಂಬರ್ನಿಂದ ಅಧಿಕೃತವಾಗಿ ಪ್ರಾರಂಭವಾಗಲಿದೆ.


ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಅವರೇ ಕಥೆ-ಚಿತ್ರಕಥೆ ಬರೆದಿದ್ದು, ನಿರ್ದೇಶನದ ಜೊತೆಗೆ ಸಂಗೀತ ನಿರ್ದೇಶನದ ಜವಾಬ್ದಾರಿಯನ್ನು ಸಹ ಅವರೇ ಹೊತ್ತಿದ್ದಾರೆ. ಈಗಾಗಲೇ ಚಿತ್ರ ಪ್ರಾರಂಭವಾಗುವುದಕ್ಕೆ ಮುನ್ನವೇ ಚಿತ್ರದ ಆಡಿಯೋ ಹಕ್ಕುಗಳಿಗೆ ಭಾರೀ ಡಿಮ್ಯಾಂಡ್ ಉಂಟಾಗಿದೆ.

Categories
ಸಿನಿ ಸುದ್ದಿ

ಪಂಖುರಿ ಸಿನಿಮಾ ಟೀಸರ್ ರಿಲೀಸ್ ಆಯ್ತು: ಇದು ಕುಂದನಾ ರೆಡ್ಡಿ ಚಿತ್ರ…

ದಿನ ಕಳೆದಂತೆ ಹೊಸ ಬಗೆಯ ಚಿತ್ರಗಳು ರಿಲೀಸ್ ಆಗುತ್ತಲೇ ಇವೆ. ಆ ಸಾಲಿಗೆ ಈಗ ಪ್ರೇಕ್ಷಕರ ಮುಂದೆ ಬರಲು ಪಂಖುರಿ ಚಿತ್ರ ರೆಡಿಯಾಗುತ್ತಿದೆ.
ಅದಕ್ಕೂ ಮುನ್ನ ಚಿತ್ರದ ಟೀಸರ್ ರಿಲೀಸ್ ಆಗಿದ್ದು ಎಲ್ಲೆಡೆ ಒಳ್ಳೆಯ ಮೆಚ್ಚುಗೆ ಪಡೆದುಕೊಂಡಿದೆ. ಇನ್ನು ಚಿತ್ರದ ನಾಯಕಿ ಕುಂದನಾ ರೆಡ್ಡಿ ಅವರು ಇತ್ತೀಚೆಗೆ ತಮ್ಮ ಹುಟ್ಟುಹಬ್ಬವನ್ನು ಬೆತೆಲ್ ಚೈಲ್ಡ್ ಕೇರ್ ಸೆಂಟರ್ ನ ಮಕ್ಕಳ ಜೊತೆ ಅರ್ಥಪೂರ್ಣವಾಗಿ ಆಚರಿಸಿಕೊಂಡರು. A2Music ನಲ್ಲಿ ಚಿತ್ರದ ಟೀಸರ್ ಬಿಡುಗಡೆ ಆಗಿದ್ದು, ಸಾಕಷ್ಟು ವೀಕ್ಷಣೆ ಪಡೆದುಕೊಂಡಿದೆ.

ಕುಂದನಾ ನಟಿಸಿರುವ ಪಂಖುರಿ ಸಿನಿಮಾ ಮಹಿಳಾ ದೌರ್ಜನ್ಯದ ವಿರುದ್ಧದ ಕಥಾಹಂದರವಿದೆ. ಒಂಟಿ ಹೆಣ್ಣಿಗೆ ಸಮಾಜದಲ್ಲಿ ಎದುರಾಗುವ ಸಮಸ್ಯೆಗಳೇನು ಎಂಬ ಅಂಶವನ್ನು ಇಲ್ಲಿ ತೋರಿಸಲಾಗಿದೆ. ಕುಂದನಾ ಜತೆ ಶಶಿಶೇಖರ್ ಪ್ರಧಾನ ಪಾತ್ರದಲ್ಲಿ ನಟಿಸಿದ್ದಾರೆ.

ಸಿನಿಮಾ ಕುರಿತು ಹೇಳುವ ಕುಂದನಾ, ಉತ್ತಮ ಪಾತ್ರದ ನಿರೀಕ್ಷೆಯಲ್ಲಿದ್ದ ನನಗೆ ಉತ್ತಮ ಅವಕಾಶ ಸಿಕ್ಕಿದೆ ಎನ್ನುತ್ತಾರೆ.

ಅಂದಹಾಗೆ, ಪ್ರಕೃತಿ ಪಿಕ್ಚರ್ಸ್ ಬ್ಯಾನರ್ ನಲ್ಲಿ , ಅಫ್ಜಲ್ ಅವರ ಸಹಯೋಗದೊಂದಿಗೆ ಸಿನಿಮಾ ನಿರ್ಮಾಣದ ಮೂಲಕ ಯುವ ನಿರ್ಮಾಪಕಿ ಆಗಿಯೂ ಪಂಖುರಿ ಚಿತ್ರದ ನಟಿ ಕುಂದನಾ ಕಾರ್ಯನಿರ್ವಹಿಸುತ್ತಿದ್ದಾರೆ. ಇಲ್ಲಿ ಶಾರದ ಪಾತ್ರದಲ್ಲಿ ಕುಂದನಾ ಕಾಣಿಸಿಕೊಳ್ಳುತ್ತಿದ್ದಾರೆ.

ಅದೇನೆ ಇರಲಿ, ಚಿಕ್ಕಂದಿನಲ್ಲೇ ಸೆಲೆಬ್ರಿಟಿಯಾಗುವ ಆಸೆ ಕಂಡಿದ್ದ ಕುಂದನಾ, ತಮ್ಮ ಆಸೆ ಈಡೇರಿಸಿಕೊಳ್ಳಲು ಹಗಲಿರಳು ಶ್ರಮಿಸಿ ಇಂದು ಕಂಡ ಕನಸನ್ನು ಈಡೇರಿಸಿಕೊಂಡಿದ್ದಾರೆ. ಬಾಲ್ಯದ ದಿನಗಳಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿ ಮುಂದಿದ್ದರು . ಇದೀಗ ‘ಪಂಖುರಿ’ ಚಿತ್ರದ ಮೂಲಕ ಕನ್ನಡ ಚಂದನವನಕ್ಕೆ ಪಾದಾರ್ಪಣೆ ಮಾಡಿದ್ದಾರೆ.

ಮೂಲತಃ  ಆಂಧ್ರದವರಾದ ಕುಂದನಾ, ಬೆಂಗಳೂರಿನಲ್ಲಿ. ಬದುಕು ಕಟ್ಟಿಕೊಂಡಿದ್ದು , ಕನ್ನಡವನ್ನು ಲೀಲಾಜಾಲವಾಗಿ ಮಾತನಾಡುವ ಮೂಲಕ ಇಲ್ಲಿಯೇ ಗಟ್ಟಿ ನೆಲೆ ಕಾಣುವ ಆಸೆ ಹೊಂದಿದ್ದಾರೆ. ಇ ಕಾಮರ್ಸ್ ನಲ್ಲಿ ಸ್ನಾಕೋತ್ತರ ಪದವಿ ಪಡೆದಿರುವ ಅವರು, ಎಂಎನ್ ಸಿ ಕಂಪನಿಯಲ್ಲಿ ದೊಡ್ಡ ಹುದ್ದೆಯಲ್ಲಿದ್ದಾರೆ. ಆದರೆ, ಕನ್ನಡ ಚಿತ್ರರಂಗದ ಮೇಲಿರುವ ಆಸಕ್ತಿ ಪಂಖುರಿ ಚಿತ್ರದ ಮೂಲಕ ತೆರೆಗೆ ಬರುತ್ತಿದ್ದಾರೆ.

ಈ ಚಿತ್ರಕ್ಕೆ ದೋಸ್ತಿ ವಿ ಆನಂದ ನಿರ್ದೇಶಕರು. ಇನ್ನೂ ಹೆಸರಿಡದ ಎರಡು ಸಿನಿಮಾಊ ಇವರು ಕಾಣಿಸಿಕೊಳ್ಳಲಿದ್ದಾರೆ.

ಕುಂದನ ಕೇವಲ ನಟನೆ ಮಾತ್ರವಲ್ಲದೆ ನೃತ್ಯದಲ್ಲೂ ಸೈ ಎನಿಸಿಕೊಂಡಿದ್ದಾರೆ. ಶಾಲಾ ದಿನಗಳು ಮತ್ತು ಕೆಲಸದಲ್ಲಿದ್ದಾಗ ಸಂಸ್ಥೆಯ ಕಾರ್ಯಕ್ರಮಗಳಲ್ಲಿಯೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಮಾಡಿದ ಅನುಭವ ಇದೆ.

Categories
ಸಿನಿ ಸುದ್ದಿ

ಮರ್ಡರ್ ಲೈವ್ ನಲ್ಲಿ ಶರ್ಮಿಳಾ ಮಾಂಡ್ರೆ! ಹಾಲಿವುಡ್ ಶೈಲಿಯ ಕನ್ನಡ, ತಮಿಳು ಸಿನಿಮಾ…

ಕನ್ನಡತಿ ಶರ್ಮಿಳಾ ಮಾಂಡ್ರೆ ‘ಮಿರತ್ತಲ್’ ಎಂಬ ತಮಿಳು ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದರು. ಈಗ 10 ವರ್ಷಗಳ ನಂತರ ‘ಮರ್ಡರ್ ಲೈವ್’ ಎಂಬ ಹಾಲಿವುಡ್ ಶೈಲಿಯ ಕನ್ನಡ ಮತ್ತು ತಮಿಳು ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದಾರೆ.
‘ಮರ್ಡರ್ ಲೈವ್’ ಒಂದು ಸೈಕಲಾಜಿಕಲ್ ಕ್ರೈಮ್ ಥ್ರಿಲ್ಲರ್ ಚಿತ್ರವಾಗಿದ್ದು, ‘ಬ್ಲೈಂಡ್ ಡೇಟ್’, ‘ಸ್ಕೈ ಹೈ’, ‘ಗ್ಲಿಚ್’ ಮುಂತಾದ ಹಾಲಿವುಡ್ ಚಿತ್ರಗಳನ್ನು ನಿರ್ದೇಶಿಸಿರುವ ನಿಕೋ ಮಾಸ್ತೋರಾಕಿಸ್ ಅವರ ಕಥೆಯನ್ನು ಆಧರಿಸಿದೆ.

ಸೈಕೋ ಕಿಲ್ಲರ್ ಮತ್ತು ನಾಲ್ವರು ಮಹಿಳೆಯರ ಸುತ್ತ ಸುತ್ತುವ ಈ ಚಿತ್ರದಲ್ಲಿ, ಕಷ್ಟದ ಪರಿಸ್ಥಿಯಲ್ಲಿ ಸಾಮಾನ್ಯ ಮನುಷ್ಯರೂ ಹೇಗೆ ಸಿಡಿದೆದ್ದು ಹೀರೋಗಳಾಗುತ್ತಾರೆ ಎಂದು ಹೇಳಲಾಗಿದೆ.


ಸೈಕೋ ಕಿಲ್ಲರ್ ಒಬ್ಬ ಜಗತ್ತಿನ ಯಾವುದೇ ಕಂಪ್ಯೂಟರ್ ಹ್ಯಾಕ್ ಮಾಡಿ, ಅದರ ಮೂಲಕ ಲೈವ್ ಆಗಿ ಕೊಲೆ ಮಾಡುವ ಕಥೆ ಇರುವ ಈ ಚಿತ್ರವನ್ನು ಸಂಪೂರ್ಣವಾಗಿ ಇಂಗ್ಲೆಂಡ್‌ನಲ್ಲಿ ಚಿತ್ರೀಕರಿಸಲಾಗಿದೆ. ಸೂರ್ಯ ಅಭಿನಯದ ‘ಇಟಿ’ ಮತ್ತು ಶಿವಕಾರ್ತಿಕೇಯನ್ ಅಭಿನಯದ ‘ಡಾಕ್ಟರ್’ ಚಿತ್ರಗಳಲ್ಲಿ ವಿಲನ್ ಪಾತ್ರ ಮಾಡಿದ್ದ ವಿನಯ್ ರೈ, ಈ ಚಿತ್ರದಲ್ಲಿ ಬಹಳ ಕ್ಲಿಷ್ಟಕರವಾದ ನೆಗೆಟಿವ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಹಲವು ವಿಭಿನ್ನ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿರುವ ಕನ್ನಡತಿ ಶರ್ಮಿಳಾ ಮಾಂಡ್ರೆ, ಈ ದ್ವಿಭಾಷಾ ಚಿತ್ರದಲ್ಲಿ ನಾಯಕಿಯಾಗಿದ್ದಾರೆ. ಇವರಿಬ್ಬರ ಜೊತೆಗೆ ಹಾಲಿವುಡ್ ನಟಿ ನವೋಮಿ ವಿಲ್ಲೋ ಸಹ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಡಾಟ್‌ಕಾಮ್ ಎಂಟರ್ಟೈನ್ಮೆಂಟ್ ಸಂಸ್ಥೆಯಡಿ ಈ ಚಿತ್ರ ನಿರ್ಮಾಣವಾಗಿದ್ದು, ಮುರುಗೇಶ್ ನಿರ್ದೇಶನ ಮಾಡಿದ್ದಾರೆ. ಅಪಾರ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಚಿತ್ರವನ್ನು ಅತ್ಯುನ್ನತ ತಂತ್ರಜ್ಞಾನ ಬಳಸಿ ಚಿತ್ರೀಕರಣ ಮಾಡಲಾಗಿದೆ.

ಪ್ರಶಾಂತ್ ಡಿ ಸಂಗೀತ ಸಂಯೋಜಿಸಿರುವ ಈ ಚಿತ್ರಕ್ಕೆ ಮದನ್ ಅವರ ಸಂಕಲನವಿದೆ.
ಈಗಾಗಲೇ ‘ಮರ್ಡರ್ ಲೈವ್’ ಚಿತ್ರದ ಚಿತ್ರೀಕರಣ ಮುಗಿದಿದ್ದು, ಇತ್ತೀಚೆಗೆ ಚಿತ್ರದ ಮೊದಲ ಪೋಸ್ಟರ್ ಬಿಡುಗಡೆಯಾಗಿದೆ.

Categories
ಸಿನಿ ಸುದ್ದಿ

ಹೊಸಬರ ಚಿತ್ರ ಜೋರು! ಕನ್ನಡದಲ್ಲಿ ಮತ್ತೊಂದು ಜೋರಾದ ಗ್ಯಾಂಗ್ ಸ್ಟರ್ ಸಿನಿಮಾಗೆ ಚಾಲನೆ…

ಕನ್ನಡದಲ್ಲಿ ದಿನ ಕಳೆದಂತೆ ಹೊಸಬರ ಆಗಮನವಾಗುತ್ತಲೇ ಇದೆ. ಆ ಸಾಲಿಗೆ ಈಗ ‘ಜೋರು’ ಎಂಬ ಹೊಸಬರ ಚಿತ್ರವೂ ಸೇರಿದೆ. ಹೌದು, ಚಿತ್ರದ ಶೀರ್ಷಿಕೆ ಹೇಳುವಂತೆ, ಹೊಸಬರು ಕೊಂಚ ‘ಜೋರು’ ಸೌಂಡು ಮಾಡೋಕೆ ಸಜ್ಜಾಗುತ್ತಿದ್ದಾರೆ.

ಚಿತ್ರಕ್ಕೆ ನಾಗಭೂಷಣ್ ಎಸ್.ಆರ್. ನಿರ್ದೇಶಕರು. ಚಿತ್ರಕ್ಕೆ ಹಾಡುಗಳ ಸಂಯೋಜನೆಗೆ ಚಾಲನೆ ಕೊಡುವ ಮೂಲಕ ಚಿತ್ರದ ಕೆಲಸಗಳನ್ನು ಶುರುವಿಟ್ಟುಕೊಂಡಿದ್ದಾರೆ.
ಚಿತ್ರಕ್ಕೆ ಧರ್ಮ ವಿಶ್ ಸಂಗೀತ ನೀಡುತ್ತಿದ್ದಾರೆ.


‘ಜೋರು’ ಇದೊಂದು ಗ್ಯಾಂಗ್ ಸ್ಟರ್ ಡ್ರಾಮಾ ಕಥಾಹಂದರ ಹೊಂದಿರುವ ಸಿನಿಮಾವನ್ನು ಶ್ರೀ ಮಹೇಶ್ವತಿ ಕಂಬೈನ್ಸ್ ಮೂಲಕ ಸರಸ್ವತಿ ಆರ್. ನಾಗೇಶ್ ಅವರು ನಿರ್ಮಾಣ ಮಾಡುತ್ತಿದ್ದಾರೆ. ಕಾರ್ಯಕಾರಿ ನಿರ್ಮಾಪಕರಾಗಿ ರಾಮ್ ಪ್ರಸಾದ್ ಕಾರ್ಯ ನಿರ್ವಹಿಸಲಿದ್ದಾರೆ.

ಇನ್ನು ಈ ಸಿನಿಮಾಗೆ ಧನುಷ್ ಕುಮಾರ್ ಹೀರೋ ಆಗಿ ಕನ್ನಡ‌ ಚಿತ್ರರಂಗವನ್ನು ಸ್ಪರ್ಶಿಸುತ್ತಿದ್ದಾರೆ. ಈ ಚಿತ್ರದ ಮೂಲಕ ಗಾಂಧಿನಗರದಲ್ಲಿ ಜೋರು ಸೌಂಡು ಮಾಡೋಕೆ ರೆಡಿಯಾಗಿದ್ದಾರೆ. ಇನ್ನು ಧನುಷ್ ಕುಮಾರ್ ಅವರಿಗೆ ನಾಯಕಿಯನ್ನು ಹುಡುಕಲಾಗುತ್ತಿದೆ. ಇಷ್ಟರಲ್ಲೇ ನಾಯಕಿಯ ಆಯ್ಕೆ ಪ್ರಕ್ರಿಯೆ ನಡೆಯಲಿದೆ.


ಸಿನಿಮಾ ಚಿತ್ರೀಕರಣ ಬೆಂಗಳೂರು, ಉತ್ತರ ಕರ್ನಾಟಕ, ಕೋಲಾರ ಸುತ್ತ ಮುತ್ತ ನಡೆಯಲಿದೆ. ಚಿತ್ರದಲ್ಲಿ 5 ಹಾಡುಗಳಿವೆ. ಅಂದಹಾಗೆ, ಜೇಮ್ಸ್ ಖ್ಯಾತಿಯ
ಚೇತನ್ ಕುಮಾರ್ ಅವರ ಸಾಹಿತ್ಯ ಚಿತ್ರಕ್ಕಿದೆ. ಜೊತೆಗೆ 4 ಭರ್ಜರಿ ಫೈಟ್ ಗಳಿವೆ.
ಚಿತ್ರಕ್ಕೆ ರಾಮ ರಾಮ ರೇ ಖ್ಯಾತಿಯ ಲವೀತ್ ಛಾಯಾಗ್ರಹಣವಿದೆ. ಎಮ್.ವಿಜಯ್ ಕುಮಾರ್ ಸಂಕಲನ ಮಾಡಿದರೆ, ಕೆಜಿಎಫ್ ಖ್ಯಾತಿಯ ಮೋಹನ್ ನೃತ್ಯ ನಿರ್ದೇಶನ ಮಾಡಲಿದ್ದಾರೆ.


ಅರ್ಜುನ್ ರಾಜ್ ಅವರ ಸ್ಟಂಟ್ಸ್ ಚಿತ್ರಕ್ಕಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಡಿಸೆಂಬರ್ ನಲ್ಲಿ ಮೊದಲ ಹಂತದ ಚಿತ್ರೀಕರಣ ಶುರುವಾಗಲಿದೆ.

Categories
ಸಿನಿ ಸುದ್ದಿ

ಕನ್ನಡದ ಎರಡು ಸಿನಿಮಾದಲ್ಲಿ ಕಬೀರ್ ಬೇಡಿ! ನಿರ್ಮಾಪಕ ತ್ರಿವಿಕ್ರಮ ಸಾಪಲ್ಯ ಅವರ ಎರಡು ಚಿತ್ರದಲ್ಲಿ ಬಾಲಿವುಡ್ ನಟನ ಎಂಟ್ರಿ…

ಅಂತಾರಾಷ್ಟ್ರೀಯ ಖ್ಯಾತಿಯ ಹಾಲಿವುಡ್ ಹಾಗೂ ಬಾಲಿವುಡ್ ನಟ ಕಬೀರ್ ಬೇಡಿ ಅವರು ಮೊಟ್ಟ ಮೊದಲ ಬಾರಿಗೆ “ಹಂಟರ್” ಕನ್ನಡ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಹಾಲಿವುಡ್ ನಲ್ಲಿ ಹಲವಾರು ಸಿನಿಮಾಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದ ಕಬೀರ್ ಬೇಡಿ ಅಲ್ಲಿ ಜೇಮ್ಸ್ ಬಾಂಡ್, ಮೈಕಲ್ ಕೇನ್ ಮೊದಲಾದ ಖ್ಯಾತ ನಾಮರೊಂದಿಗೆ ಅಭಿನಯಿಸಿದ್ದಾರೆ ಕೂಡ.

ಇದೀಗ ನಿರ್ಮಾಪಕ ತ್ರಿವಿಕ್ರಮ ಸಪಲ್ಯ ರವರು ನಮ್ಮ ಭಾಷೆಯ ಚಿತ್ರಕ್ಕೂ ಅವರನ್ನು ಪರಿಚಯಿಸಿರುವುದು ಚಿತ್ರದ ಕುತೂಹಲ ಹೆಚ್ಚಿಸಿದೆ. ಪ್ಯಾನ್ ಇಂಡಿಯಾ ಮಾದರಿಯ ಈ ಸಿನಿಮಾದಲ್ಲಿ ನಿರಂಜನ್ ಮತ್ತು ಸೌಮ್ಯ ಮೆನನ್ ನಾಯಕ-ನಾಯಕಿಯರಾಗಿದ್ದು ಪ್ರಕಾಶ್ ರಾಜ್, ನಾಝರ್ ಮತ್ತು ಸುಮನ್ ಪ್ರಧಾನ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

ಯುರೋಪ್ ನಾದ್ಯಂತ ಧೂಳೆಬ್ಬಿಸಿದ್ದ ನಂಬರ್ 1 ಟಿವಿ ಸೀರಿಸ್ “ಸಂದೋಕನ್” ನಲ್ಲಿ ನಟಿಸಿದ್ದ ಬೇಡಿಯವರಿಗೆ ಕಳೆದ ಸೆಪ್ಟೆಂಬರ್ ನಲ್ಲಿ ಇಟೆಲಿಯ ವೆನಿಸ್ ನಲ್ಲಿ “Life time achievement award” ಬಂದ ನಂತರ, ಇದೇ ಮೊದಲ ಬಾರಿಗೆ ಚಿತ್ರ ವೊಂದರಲ್ಲಿ ಅಭಿನಯಿಸುತ್ತಿದ್ದಾರೆ. ಅದೂ ಕನ್ನಡ ಭಾಷೆಯ ಚಿತ್ರ ಎಂಬುದು ವಿಶೇಷ.

ಇದಲ್ಲದೆ ಕಬೀರ್ ಬೇಡಿಯವರು ತ್ರಿವಿಕ್ರಮ ಸಾಪಲ್ಯರವರ ಮತ್ತೊಂದು ಚಿತ್ರದಲ್ಲೂ ಅಭಿನಯಿಸುತ್ತಿರುವ ಮಾಹಿತಿ ಹೊರಬಿದ್ದಿದೆ. ಅಕ್ಟೋಬರ್ 7 ರಿಂದ ಚಿತ್ರೀಕರಣ ಆರಂಭಗೊಳ್ಳಲಿರುವ ಸುಮಾರು 800 ವರ್ಷಗಳ ಹಿಂದಿನ ಕಥೆಯಾಧಾರಿತ ಪಿರಿಯಾಡಿಕ್ ಸಿನಿಮಾದಲ್ಲಿ ಬೆಂಗಾಲಿ ನಟ ಸೌಮಿಕ್ ಚಟರ್ಜಿ ಪ್ರಮುಖ ಪಾತ್ರದಲ್ಲಿದ್ದು, ಕನ್ನಡದ ಖ್ಯಾತ ಹಿರಿಯ ನಟಿಯರಾದ ಶ್ರುತಿ ಹಾಗೂ ಭವ್ಯ ಮುಖ್ಯ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

ಒಟ್ಟಿನಲ್ಲಿ ತ್ರಿವಿಕ್ರಮ ರವರು ಎರಡು ಸಿನಿಮಾಗಳನ್ನು ಜಂಟಿಯಾಗಿ ಚಿತ್ರೀಕರಿಸಿ, ಅದೆರಡರಲ್ಲೂ ಕಬೀರ್ ಬೇಡಿಯಂತಹ ವಿಶ್ವದ ಪ್ರಖ್ಯಾತ ನಟನನ್ನು ಕರೆತಂದು ಚಿತ್ರರಂಗದಲ್ಲಿ ಹೊಸ ಸಂಚಲನ ಸ್ರಷ್ಟಿಸಿರುತ್ತಾರೆ. ಅವರೊಬ್ಬ ದಿಟ್ಟ ನಿರ್ಮಾಪಕ ಎನ್ನುವುವುದಕ್ಕೆ ಇದು ಸಾಕ್ಷಿ.

Categories
ಸಿನಿ ಸುದ್ದಿ

ಗಜರಾಮನಿಗೆ ಅಭಿಷೇಕ್ ಕ್ಲಾಪ್: ರಾಜವರ್ಧನ್ ಹೊಸ ಚಿತ್ರಕ್ಕೆ ಚಾಲನೆ…

‘ಮ್ಯಾಸಿವ್ ಸ್ಟಾರ್’ ರಾಜವರ್ಧನ್ ಬಿಚ್ಚುಗತ್ತಿ ಸಿನಿಮಾ ನಂತರ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ನಾಯಕ‌ ನಟನಾಗಿ ಅಭಿನಯಿಸುತ್ತಿರುವ ಪ್ರಣಯಂ, ಹಿರಣ್ಯ ಸಿನಿಮಾ ಬಿಡುಗಡೆಗೆ ಮೊದಲೇ ಮಾಸ್ ಸಬ್ಜೆಕ್ಟ್ ಸಿನಿಮಾವೊಂದು ರಾಜವರ್ಧನ್ ಬತ್ತಳಿಕೆ ಸೇರಿದೆ. ಅದುವೇ ‘ಗಜರಾಮ’. ಫಸ್ಟ್ ಲುಕ್ ಪೋಸ್ಟರ್ ಮೂಲಕ ಕಿಕ್ ಕೊಟ್ಟ ಈ ಚಿತ್ರದ ಮುಹೂರ್ತ ಬುಧವಾರ ನೆರವೇರಿದೆ.

ನಿರ್ದೇಶಕ ಸುನೀಲ್ ಕುಮಾರ್ ವಿ.ಎ ಹೆಣೆದ ಕಥೆ ಕೇಳಿ ಇಂಪ್ರೆಸ್ ಆಗಿರುವ ರಾಜವರ್ಧನ್ ‘ಗಜರಾಮ’ನಾಗಿ ಅಬ್ಬರಿಸಲು ಗ್ರೀನ್ ಸಿಗ್ನಲ್ ಕೊಟ್ಟಿದ್ದು ಇಂದು ಚಿತ್ರದ ಮುಹೂರ್ತ ನೇರವೇರಿದೆ. ಚಿತ್ರಕ್ಕೆ ಜೂನಿಯರ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಕ್ಲ್ಯಾಪ್ ಮಾಡುವ ಮೂಲಕ ಚಿತ್ರತಂಡಕ್ಕೆ ಸಾಥ್ ನೀಡಿದ್ದಾರೆ.

ಚಿತ್ರಕ್ಕೆ ಕ್ಲ್ಯಾಪ್ ಮಾಡಿ ಮಾತನಾಡಿದ ಅಭಿಷೇಕ್ ಅಂಬರೀಶ್ ನಮ್ಮ ತಂದೆ ಗಜೇಂದ್ರ ಎನ್ನುವ ಸಿನಿಮಾ ಮಾಡಿದ್ರು ಈಗ ನನ್ನ ಸ್ನೇಹಿತ ಗಜರಾಮ ಹೆಸರಿನ ಚಿತ್ರದಲ್ಲಿ ನಟಿಸುತ್ತಿದ್ದಾರೆ. ರಾಜವರ್ಧನ್ ಮೋಷನ್ ಪೋಸ್ಟರ್ ನಲ್ಲಿ ತುಂಬಾ ಚೆನ್ನಾಗಿ ಕಾಣಿಸಿಕೊಂಡಿದ್ದಾರೆ. ಇಡೀ ಚಿತ್ರತಂಡಕ್ಕೆ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದ್ದಾರೆ.

ಒಂದೊಳ್ಳೆ ಫ್ಯಾಮಿಲಿ ಎಂಟಟೈನ್ಮೆಂಟ್ ಹಾಗೂ ಮಾಸ್ ಕಟೆಂಟ್ ಒಳಗೊಂಡ ಒಂದೊಳ್ಳೆ ಕಥೆ ಚಿತ್ರದಲ್ಲಿದೆ. ನನ್ನ ಪಾತ್ರದ ಬಗ್ಗೆ ಕೇಳಿ ಇಷ್ಟವಾಯ್ತು. ಒಳ್ಳೆ ಪ್ರೊಡಕ್ಷನ್ ಹೌಸ್, ಒಳ್ಳೆ ನಿರ್ಮಾಪಕರು, ಒಳ್ಳೆ ಚಿತ್ರ ಸಿಕ್ಕಾಗ ಕೈ ಬಿಡಬಾರದು. ನನಗೆ ಸ್ಟೋರಿ ಲೈನ್ ಪರ್ಸನಲಿ ಖುಷಿ ಕೊಟ್ಟಿದೆ ಎಂದು ನಾಯಕ ರಾಜವರ್ಧನ್ ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಚಿತ್ರದಲ್ಲಿ ರಾಜವರ್ಧನ್ ಗೆ ನಾಯಕಿಯಾಗಿ ಕೊಡಗಿನ ಬೆಡಗಿ ತಪಸ್ವಿನಿ ಪೂಣಚ್ಚ ತೆರೆ ಹಂಚಿಕೊಳ್ಳುತ್ತಿದ್ದಾರೆ. ಹರಿಕಥೆ ಅಲ್ಲ ಗಿರಿಕಥೆ ನಂತರ ಇವರು ನಟಿಸುತ್ತಿರುವ ಎರಡನೇ ಸಿನಿಮಾವಿದು.

ಚಿತ್ರರಂಗದಲ್ಲಿ ಸಹಾಯಕ ನಿರ್ದೇಶಕನಾಗಿ ಹಲವು ವರ್ಷಗಳ ಕಾಲ ದುಡಿದು ಅನುಭವವಿರುವ ಸುನೀಲ್ ಕುಮಾರ್ ‘ಗಜರಾಮ’ ಸಿನಿಮಾ ಮೂಲಕ ಡೈರೆಕ್ಟರ್ ಕ್ಯಾಪ್ ತೊಡುತ್ತಿದ್ದಾರೆ. ರಾಜವರ್ಧನ್ ಗಾಗಿ
ಆಕ್ಷನ್, ಮಾಸ್ ಎಂಟಟೈನರ್ ಕಥೆ ಹೆಣೆದಿರೋ ನಿರ್ದೇಶಕರು ಸಾಕಷ್ಟು ತಯಾರಿಯೊಂದಿಗೆ ನಾಳೆಯಿಂದ ಚಿತ್ರೀಕರಣಕ್ಕೆ ಹೊರಡುತ್ತಿದ್ದಾರೆ. ನಟ ದೀಪಕ್ ಪ್ರಿನ್ಸ್ ಈ ಚಿತ್ರದ ಸ್ಪೆಷಲ್ ರೋಲ್ ಒಂದರಲ್ಲಿ ಬಣ್ಣ ಹಚ್ಚುತ್ತಿರೋದು ಈ ಚಿತ್ರದ ಸ್ಪೆಷಲ್ ಸಂಗತಿಗಳಲ್ಲೊಂದು.

ಮೆಲೋಡಿ ಹಾಡುಗಳ ಮಾಂತ್ರಿಕ
ಮನೋಮೂರ್ತಿ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಕೆ.ಎಸ್.ಚಂದ್ರಶೇಖರ್ ಛಾಯಾಗ್ರಾಹಣ, ಜ್ಞಾನೇಶ್ ಬಿ ಮಠದ್ ಸಂಕಲನ, ಧನಂಜಯ್ ನೃತ್ಯ ನಿರ್ದೇಶನ, ಚಿನ್ಮಯ್ ಭಾವಿಕೆರೆ, ಜಯಂತ್ ಕಾಯ್ಕಿಣಿ ಸಾಹಿತ್ಯವಿದೆ.

ಲೈಫ್ ಲೈನ್ ಫಿಲ್ಮಂ ಪ್ರೊಡಕ್ಷನ್ ನಡಿ ನರಸಿಂಹ ಮೂರ್ತಿ ಚಿತ್ರವನ್ನು ನಿರ್ಮಾಣ ಮಾಡ್ತಿದ್ದು, ಮಲ್ಲಿಕಾರ್ಜುನ್ ಕಾಶಿ ಮತ್ತು ಝವೀಯರ್ ಫರ್ನಾಂಡಿಸ್ ಕೂಡ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.

Categories
ಸಿನಿ ಸುದ್ದಿ

ಕಿರೀಟಿ ಹುಟ್ಟುಹಬ್ಬಕ್ಕೆ ಚಿತ್ರದ ಶೀರ್ಷಿಕೆ ಅನಾವರಣ: ಸೆಪ್ಟೆಂಬರ್ 29ಕ್ಕೆ ಟೈಟಲ್ ರಿಲೀಸ್…

ಚಂದನವನಕ್ಕೆ ಗಾಲಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದಾಗಿದೆ. ಅದ್ಧೂರಿಯಾಗಿ ನಡೆದ ಚಿತ್ರದ ಮುಹೂರ್ತ ಕಾರ್ಯಕ್ರಮದಲ್ಲಿ ಎಸ್ ಎಸ್ ರಾಜಮೌಳಿ ಕಿರೀಟಿಗೆ ಸಾಥ್ ನೀಡಿ ಪ್ರೋತ್ಸಾಹಿಸಿದ್ದು ಗೊತ್ತೇ ಇದೆ. ಇಂಟ್ರಡಕ್ಷನ್ ಟೀಸರ್ ಮೂಲಕ ಗಮನ ಸೆಳೆದಿರೋ ಕಿರೀಟಿ ಒಂದೇ ನೋಟಕ್ಕೆ ಎಲ್ಲರನ್ನು ಸೆಳೆದಿದ್ದಾರೆ. ಸ್ಯಾಂಡಲ್ ವುಡ್ ಅಂಗಳಕ್ಕೆ ಭರವಸೆಯ ನಾಯಕ ನಟನಾಗುತ್ತಾನೆ ಎಂಬ ಭವಿಷ್ಯ ವಾಣಿಯೂ ಕೇಳಿ ಬಂದಿವೆ. ಎಲ್ಲರ ಪ್ರೋತ್ಸಾಹದ ನುಡಿಗಳೊಂದಿಗೆ ಯಂಗ್ ಅಂಡ್ ಎನರ್ಜಿಟಿಕ್ ಕಿರೀಟಿ ಮೊದಲ ಚಿತ್ರದ ಚಿತ್ರೀಕರಣದಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ಸದ್ಯ ಕಿರೀಟಿ ಮೊದಲ ಚಿತ್ರದಿಂದ ಲೇಟೆಸ್ಟ್ ಅಪ್ ಡೇಟ್ ಹೊರಬಿದ್ದಿದೆ. ಅದುವೇ ಚಿತ್ರದ ಟೈಟಲ್.

ಎಸ್. ಕಿರೀಟಿ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟು ಚಿತ್ರೀಕರಣದಲ್ಲಿ ತೊಡಗಿದ್ರು ಕೂಡ ಇಲ್ಲಿವರೆಗೂ ಸಿನಿಮಾದ ಟೈಟಲ್ ಅನಾವರಣ ಆಗಿರಲಿಲ್ಲ. ಫೈನಲಿ ಸಿನಿಮಾ ತಂಡ ಟೈಟಲ್ ರಿವೀಲ್ ಮಾಡಲು ಪ್ಲ್ಯಾನ್ ಮಾಡಿಕೊಂಡಿದೆ. ಅದು ಒಂದು ವಿಶೇಷ ದಿನದಂದು. ಹೌದು, ಸೆಪ್ಟೆಂಬರ್ 29 ಕಿರೀಟಿ ಹುಟ್ಟುಹಬ್ಬ. ಆ ದಿನವೇ ಚಿತ್ರದ ಟೈಟಲ್ ರಿವೀಲ್ ಮಾಡಬೇಕು ಅನ್ನೋದು ಚಿತ್ರತಂಡದ ಪ್ಲ್ಯಾನ್.
ಆದ್ರಿಂದ ಸೆಪ್ಟೆಂಬರ್ 29ರಂದು ಸಂಜೆ 6.39ಕ್ಕೆ ವಾರಾಹಿ ಚಲನಚಿತ್ರ ಯೂಟ್ಯೂಬ್ ಚಾನೆಲ್ ನಲ್ಲಿ ಕಿರೀಟಿ ಮೊದಲ ಚಿತ್ರದ ಟೈಟಲ್ ಲಾಂಚ್ ವೀಡಿಯೋ ಬಿಡುಗಡೆಯಾಗೋದು ಫಿಕ್ಸ್ ಆಗಿದೆ.

ರಾಧಾಕೃಷ್ಣ ರೆಡ್ಡಿ ನಿರ್ದೇಶನ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಈ ಚಿತ್ರಕ್ಕೆ ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ವಾರಾಹಿ ಫಿಲ್ಮಂ ಪ್ರೊಡಕ್ಷನ್ ಬಂಡವಾಳ ಹೂಡಿ ನಿರ್ಮಾಣ ಮಾಡುತ್ತಿದೆ. ಇದು ವಾರಾಹಿ ಸಂಸ್ಥೆಯ 15ನೇ ಸಿನಿಮಾ ಕೂಡ ಆಗಿದ್ದು ಅಷ್ಟೇ ಅದ್ದೂರಿಯಾಗಿ ಸಿನಿಮಾವನ್ನು ನಿರ್ಮಾಣ ಮಾಡಲಾಗುತ್ತಿದೆ. ಕನ್ನಡ ಮತ್ತು ತೆಲುಗು ಎರಡೂ ಭಾಷೆಯಲ್ಲಿ ನಿರ್ಮಾಣವಾಗುತ್ತಿರೋ ಈ ಚಿತ್ರದ ಮೂಲಕ ಕಿರೀಟಿ ಕನ್ನಡ ಮತ್ತು ತೆಲುಗು ಎರಡೂ ಇಂಡಸ್ಟ್ರಿಗೆ ಏಕಕಾಲದಲ್ಲಿ ಹೀರೋ ಆಗಿ ಲಾಂಚ್ ಆಗುತ್ತಿದ್ದಾರೆ.

ಚಿತ್ರದಲ್ಲಿ ರವಿಚಂದ್ರನ್, ಜೆನಿಲಿಯಾ ರಿತೇಶ್ ದೇಶ್ ಮುಖ್, ಶ್ರೀಲೀಲಾ ಸೇರಿದಂತೆ ದೊಡ್ಡ ತಾರಾಬಳಗವೇ ಇದೆ. ಚಿತ್ರದ ತಾಂತ್ರಿಕ ವರ್ಗ ಕೂಡ ಶ್ರೀಮಂತವಾಗಿದ್ದು ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ, ಬಾಹುಬಲಿ ಸಿನಿಮಾದ ಕಣ್ಣು ಕೆ ಸೆಂಥಿಲ್ ಕುಮಾರ್ ಛಾಯಾಗ್ರಹಣ, ರವೀಂದರ್ ಕಲಾ ನಿರ್ದೇಶನ, ಭಾರತದ ಟಾಪ್ ಸ್ಟಂಟ್ ಡೈರೆಕ್ಟರ್ ಪೀಟರ್ ಹೆನ್ ಆಕ್ಷನ್ ಚಿತ್ರಕ್ಕಿದೆ.

error: Content is protected !!