Categories
ಸಿನಿ ಸುದ್ದಿ

ಅಜೇಯ್ ರಾವ್ ಮತ್ತೆ ನಿರ್ಮಾಣದ ಸಾಹಸ! ಕಟಿಂಗ್ ಶಾಪ್ ನಿರ್ದೇಶಕನ ಸಿನಿಮಾಗೆ ಸಿಗ್ನಲ್…

ನಟ ಅಜಯ್ ರಾವ್ ಹೊಸದೊಂದು ಸಿನಿಮಾಗೆ ಸಜ್ಜಾಗುತ್ತಿದ್ದಾರೆ. ಪವನ್ ಭಟ್ ನಿರ್ದೇಶನದ ಚಿತ್ರದಲ್ಲಿ ನಾಯಕ ನಟರಾಗಿ ನಟಿಸುತ್ತಿದ್ದು, ಈ ಚಿತ್ರದ ನಿರ್ಮಾಣವನ್ನು ಅಜಯ್ ರಾವ್ ಮಾಡುತ್ತಿದ್ದಾರೆ. ಈ ಮೂಲಕ ಕೃಷ್ಣ ಲೀಲಾ ಸಿನಿಮಾ ನಂತರ ಮತ್ತೊಮ್ಮೆ ನಿರ್ಮಾಣ ಸಾಹಸಕ್ಕೆ ಮುಂದಾಗಿದ್ದಾರೆ ನಟ ಅಜಯ್ ರಾವ್.

ನಿರ್ದೇಶಕ ಪವನ್ ಭಟ್ ಕಥೆ ಕೇಳಿ ಇಂಪ್ರೆಸ್ ಆಗಿರುವ ಅಜಯ್ ರಾವ್ ತಮ್ಮದೇ ಶ್ರೀಕೃಷ್ಣ ಆರ್ಟ್ಸ್ ಅಂಡ್ ಕ್ರಿಯೇಷನ್ಸ್ ಬ್ಯಾನರ್ ನಡಿ ಸಿನಿಮಾ ನಿರ್ಮಾಣ ಮಾಡಲು ಡಿಸೈಡ್ ಮಾಡಿದ್ದಾರೆ.

‘ಕಟಿಂಗ್ ಶಾಪ್’ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಅಂಗಳದಲ್ಲಿ ಡೈರೆಕ್ಟರ್ ಕ್ಯಾಪ್ ತೊಟ್ಟಿರುವ ಪವನ್ ಭಟ್ ಎರಡನೇ ಸಿನಿಮಾವಿದು.

ಪ್ರಿ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬ್ಯುಸಿಯಾಗಿದ್ದು ಹೊಸ ಕಲಾವಿದರಿಗಾಗಿ ಹುಡುಕಾಟ ನಡೆಸುತ್ತಿದೆ. ಸದ್ಯದಲ್ಲೇ ಟೈಟಲ್ ಹಾಗೂ ಚಿತ್ರದ ಬಗೆಗಿನ ಹೆಚ್ಚಿನ ಮಾಹಿತಿ ಹಂಚಿಕೊಳ್ಳಲಿದೆ ಚಿತ್ರತಂಡ.

Categories
ಸಿನಿ ಸುದ್ದಿ

ಆಸ್ಕರ್ ಜ್ಯೂರಿಯಾಗಿ ಕನ್ನಡ ನಿರ್ದೇಶಕ: ಪವನ್ ಒಡೆಯರ್ ಗೆ ಸಿಕ್ಕ ಅನನ್ಯ ಅವಕಾಶ…

ಪ್ರತಿಷ್ಠಿತ ಆಸ್ಕರ್ ಅವಾರ್ಡ್ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಈ ಬಾರಿ ಆಸ್ಕರ್ ಪ್ರಶಸ್ತಿ ಯಾರ ಯಾರ ಪಾಲಾಗುತ್ತೆ ಎಂಬ ಲೆಕ್ಕಾಚಾರಗಳು ಜೋರಾಗಿದೆ. ಭಾರತದಿಂದ ಬೇರೆ ಬೇರೆ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿಗೆ ಹಲವಾರು ಸಿನಿಮಾಗಳು ನಾಮ ನಿರ್ದೇಶನವಾಗಿ ಗಮನ ಸೆಳೆಯುತ್ತಿವೆ.

ಸದ್ಯ ಲೇಟೆಸ್ಟ್ ಸಮಾಚಾರವೇನಪ್ಪ ಅಂದರೆ, ಆಸ್ಕರ್ ಅವಾರ್ಡ್ ಜ್ಯೂರಿ ಸದಸ್ಯರಾಗಿ ಕನ್ನಡದ ನಿರ್ದೇಶಕರು ಪಾಲ್ಗೊಂಡಿರೋದು. ಹೌದು, ಕನ್ನಡದ ಪ್ರತಿಭಾವಂತ ನಿರ್ದೇಶಕ ಹಾಗೂ ನಿರ್ಮಾಪಕ ಪವನ್ ಒಡೆಯರ್ ಆಸ್ಕರ್ ಅವಾರ್ಡ್ ಸೆಲೆಕ್ಷನ್ ಕಮಿಟಿಯ ಸದಸ್ಯರಾಗಿ ಭಾಗಿಯಾಗಿದ್ದಾರೆ. ಈ ಖುಷಿಯ ಕ್ಷಣವನ್ನು ಪವನ್ ಒಡೆಯರ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಪವನ್ ಒಡೆಯರ್, ಆಸ್ಕರ್ ಕಮಿಟಿಯಿಂದ ನನಗೆ ಕರೆ ಬರುತ್ತದೆಂದು ನಾನು ನಿರೀಕ್ಷೆ ಕೂಡ ಮಾಡಿರಲಿಲ್ಲ. ಆರಂಭದಲ್ಲಿ ನನಗೆ ನಂಬಲೂ ಸಾಧ್ಯವಾಗಲಿಲ್ಲ. ನನ್ನ ಸಿನಿಮಾ ಕೆಲಸಗಳನ್ನು ಗುರುತಿಸಿ ಜ್ಯೂರಿಯಾಗಿ ಭಾಗವಹಿಸಲು ಆಹ್ವಾನ ನೀಡಿದ್ದು ಬಹಳ ಸಾರ್ಥಕತೆ ನೀಡಿದೆ. ನನ್ನ ನಿರ್ಮಾಣದ ‘ಡೊಳ್ಳು’ ಸಿನಿಮಾ ಇಂತಹದ್ದೊಂದು ಪ್ರತಿಷ್ಠಿತ ವೇದಿಕೆಯನ್ನು ನನಗೆ ಕಲ್ಪಿಸಿಕೊಟ್ಟಿದೆ. ಇದು ಬಹಳ ದೊಡ್ಡ ಗೌರವ ಎಂದೇ ನಾನು ಭಾವಿಸುತ್ತೇನೆ. 17 ಜನರ ತಂಡದಲ್ಲಿ ಕನ್ನಡ ಚಿತ್ರರಂಗದಿಂದ ನಾನೂ ಒಬ್ಬ ಜ್ಯೂರಿಯಾಗಿ ಭಾಗವಹಿಸಿದ್ದು ಬಹಳ ಸಂತಸ ತಂದಿದೆ ಎಂದು ಪವನ್ ಒಡೆಯರ್ ಹರುಷ ವ್ಯಕ್ತಪಡಿಸಿದ್ದಾರೆ.

ಹಿಂದಿ, ಬೆಂಗಾಲಿ, ತೆಲುಗು, ತಮಿಳು, ಗುಜರಾತಿ, ಮಲಯಾಳಂ ಭಾಷೆಗಳಿಂದ ಸಿನಿಮಾಗಳು ಆಸ್ಕರ್ ಗೆ ಆಯ್ಕೆಯಾಗಿದ್ವು. ನಮ್ಮ ಭಾಷೆಯಿಂದ ಯಾವ ಸಿನಿಮಾಗಳು ಆಸ್ಕರ್ ಗೆ ಆಯ್ಕೆ ಆಗಿಲ್ಲದಿರುವುದು ಬೇಸರದ ಸಂಗತಿ. ಮುಂದಿನ ದಿನಗಳಲ್ಲಿ ಖಂಡಿತ ನಮ್ಮ ಸಿನಿಮಾಗಳು ಆಸ್ಕರ್ ಗೆ ನಾಮ ನಿರ್ದೇಶನವಾಗಲಿವೆ ಎಂದು ಭರವಸೆಯ ಮಾತುಗಳನ್ನಾಡಿದ್ದಾರೆ ಪವನ್ ಒಡೆಯರ್.

ಪವನ್ ಒಡೆಯರ್ ನಿರ್ಮಾಣದಲ್ಲಿ ಮೂಡಿ ಬಂದಿರುವ ‘ಡೊಳ್ಳು’ ಸಿನಿಮಾ ಜನ ಮೆಚ್ಚುಗೆ ಗಳಿಸಿಕೊಂಡಿದ್ದು, ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದೆ. ಸದ್ಯ ಪವನ್ ಒಡೆಯರ್ ನಿರ್ದೇಶನದ ‘ರೆಮೋ’ ಸಿನಿಮಾ ಬಿಡುಗಡೆಯಾಗಬೇಕಿದೆ.

Categories
ಸಿನಿ ಸುದ್ದಿ

ಪೂರ್ಣಚಂದ್ರರ ಅದ್ವಿತೀಯ ಚಿತ್ರ! ಬ್ರಹ್ಮಕಮಲ ಹಿಡಿದ ಅದ್ವಿತಿ ಶೆಟ್ಟಿ…

“ದಾರಿ ಯಾವುದಯ್ಯಾ ವೈಕುಂಠಕೆ” ಖ್ಯಾತಿಯ ನಿರ್ದೇಶಕ “ಸಿದ್ದು ಪೂರ್ಣಚಂದ್ರ” ಅವರು ಕಥೆ, ಚಿತ್ರಕಥೆ ಬರೆದು ಹೊಸ ಚಿತ್ರ ನಿರ್ದೇಶಿಸುತ್ತಿದ್ದಾರೆ. ಅ ಸಿನಿಮಾಗೆ “ಬ್ರಹ್ಮಕಮಲ” ಎಂದು ಹೆಸರಿಟ್ಟಿದ್ದಾರೆ. ಈಗಾಗಲೇ ಚಿತ್ರೀಕರಣ ಪ್ರಾರಂಭವಾಗಿ ಬೆಂಗಳೂರಿನ ಸುತ್ತಮುತ್ತ ನಡೆಯುತ್ತಿದೆ.

ರಾತ್ರಿ ಹುಟ್ಟಿ ರಾತ್ರಿಯ ಬಾಡುವಂತಹ ಒಂದು ಮಗುವಿನ ಸುತ್ತ ಘಟಿಸುವ ಕಥೆಯೇ ಬ್ರಹ್ಮ ಕಮಲ.

ಈ ಚಿತ್ರದಲ್ಲಿ ಅಧ್ವಿತಿ ಶೆಟ್ಟಿ, ಲೋಕೇಂದ್ರ ಸೂರ್ಯ, ಋತು ಚೈತ್ರ, ಮಮತಾ ರಾಹುತ್, ಪ್ರಮಿಳಾ ಸುಬ್ರಹ್ಮಣ್ಯ, ಬಲ ರಾಜ್ ವಾಡಿ, ಸಿದ್ದು ಪೂರ್ಣಚಂದ್ರ, ಆಟೋ ನಾಗರಾಜ್, ಗಂಡಸಿ ಸದಾನಂದಸ್ವಾಮಿ, ಇನ್ನೂ ಮುಂತಾದವರು ಅಭಿನಯಿಸುತ್ತಿದ್ದಾರೆ.

ಛಾಯಾಗ್ರಹಣ ಲೋಕೇಂದ್ರ ಸೂರ್ಯ, ಸಂಕಲನ ದೀಪು ಸಿ ಎಸ್, ಸಂಗೀತ ಅನಂತ್ ಆರ್ಯನ್ ಮಾಡುತ್ತಿದ್ದಾರೆ. ಕಾರ್ಯಕಾರಿ ನಿರ್ಮಾಪಕರಾಗಿ ಎ.ಕೆ. ಪುಟ್ಟರಾಜು. ನಿರ್ಮಾಣ ನಿರ್ವಹಣೆ ಮತ್ತು ವಸ್ತ್ರ ವಿನ್ಯಾಸ ಋತು ಚೈತ್ರ ನಿರ್ವಹಿಸುತ್ತಿದ್ದಾರೆ.

Categories
ಸಿನಿ ಸುದ್ದಿ

ಕಿಚ್ಚ ಸುದೀಪ್ ಮುಂದಿನ ಚಿತ್ರ ಯಾವುದು ಗೊತ್ತಾ? ತಮಿಳು ನಿರ್ಮಾಪಕರ ಜೊತೆ ಹೊಸ ಸಿನಿಮಾ ಮಾಡ್ತಾರೆ ಬಾದ್ ಷಾ…

ವಿಕ್ರಾಂತ್ ರೋಣ ಬಳಿಕ ಕಿಚ್ಚ ಸುದೀಪ್ ಅವರ ಮುಂದಿನ ಸಿನಿಮಾ ಯಾವುದು? ಸದ್ಯಕ್ಕೆ ಎಲ್ಲರಿಗೂ ಕುತೂಹಲ ಇದೆ. ಮತ್ತೆ ಸುದೀಪ್ ಅವರು ಅನೂಪ್ ಭಂಡಾರಿ ಜೊತೆ ಸಿನಿಮಾ ಮಾಡಲಿದ್ದಾರೆ ಎಂಬ ಮಾತುಗಳೂ ಕೇಳಿ ಬರುತ್ತಿವೆ. ಹಾಗಂತೆ ಹೀಗಂತೆ ಎಂಬ ಮಾತುಗಳು ಎಷ್ಟರ‌ಮಟ್ಟಿಗೆ ಸರಿಯೋ ತಪ್ಪೋ ಗೊತ್ತಿಲ್ಲ. ಸದ್ಯದ ಮಾಹಿತಿ ಪ್ರಕಾರ, ಸುದೀಪ್ ಅವರು ಈಗ ಕನ್ನಡ ಮತ್ತು ತಮಿಳು ಭಾಷೆಯಲ್ಲಿ ತಯಾರಾಗುವ ಸಿನಿಮಾವೊಂದನ್ನು ಮಾಡಲಿದ್ದಾರೆ ಎಂಬ ಸುದ್ದಿ ಬಂದಿದೆ.

ಹೌದು, ಸುದೀಪ್ ತಮಿಳಿನ ಹೊಸ ನಿರ್ದೇಶಕರೊಬ್ಬರ ಕಥೆ ಕೇಳಿದ್ದು, ಆ ಚಿತ್ರ ಮಾಡಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎನ್ನಲಾಗಿದೆ.

ಅಂದಹಾಗೆ, ಸುದೀಪ್ ಅವರ ಹೊಸ ಸಿನಿಮಾ ನಿರ್ಮಿಸುತ್ತಿರೋದು ತಮಿಳಿನ ಹೆಸರಾಂತ ನಿರ್ಮಾಪಕ, ವಿತರಕ ಕಲೈಪುಲಿ ಎಸ್.ತಾನು. ತಮಿಳು ಚಿತ್ರರಂಗದಲ್ಲಿ ಇವರು ಅನೇಕ ಹಿಟ್ ಸಿನಿಮಾಗಳನ್ನು ವಿತರಣೆ ಕೂಡ ಮಾಡಿದ್ದಾರೆ. ರಜನಿಕಾಂತ್ ಅವರ ಕಬಾಲಿ, ಕಮಲ್ ಹಾಸನ್ ಅವರ ಆಲವಂತಾನ್, ವಿಜಯ್ ಅವರ ತುಪಾಕಿ, ಸೂರ್ಯ ಅವರ ಕಾಕ ಕಾಕ ಹಾಗು ಧನುಷ್ ಅವರ ಅಸುರನ್ ಸಿನಿಮಾಗಳನ್ನು ನಿರ್ಮಿಸಿದ್ದಾರೆ.

ಸದ್ಯದ ಮಾಹಿತಿ ಪ್ರಕಾರ ಸುದೀಪ್ ಅವರಿಗೆ ಇವರೊಂದು ಸಿನಿಮಾ ನಿರ್ಮಾಣ ಮಾಡುತ್ತಿದ್ದು, ಅದು ಕನ್ನಡ ಹಾಗು ತಮಿಳು ಭಾಷೆಯಲ್ಲಿ ತಯಾರಾಗಲಿದೆ ಎನ್ನಲಾಗಿದೆ. ಇತ್ತೀಚೆಗಷ್ಟೇ ಅ ಸಿನಿಮಾ ಕುರಿತು ಮಾತುಕತೆ ಮುಗಿದಿದ್ದು, ಹೊಸ ನಿರ್ದೇಶಕರ ಕಥೆಯಲ್ಲಿ ಸುದೀಪ್ ಹೀರೋ ಅವರು ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ.

ಅದೇನೆ ಇರಲಿ, ಸುದೀಪ್ ಅಭಿಮಾನಿಗಳಿಗೆ ತಮ್ಮ ಕಿಚ್ಚ ಬಾಸ್ ಮುಂದೆ ಯಾವ ಸಿನಿಮಾ ಮಾಡ್ತಾರೆ ಎಂಬ ಕುತೂಹಲಕ್ಕೆ ಈಗ ಈ ಸುದ್ದಿ ಉತ್ತರ ನೀಡಿದೆ. ಇದು ಯಾವಾಗ ಶುರುವಾಗುತ್ತೆ, ಯಾರೆಲ್ಲ ಇರುತ್ತಾರೆ ಎಂಬುದಕ್ಕೆ ಕಾದು ನೋಡಬೇಕಿದೆ.

Categories
ಸಿನಿ ಸುದ್ದಿ

ಕನ್ನಡದಲ್ಲೊಂದು ಜೈ ಭೀಮ್ ರೀತಿಯ ಕಥೆ! ಪಾಲಾರ್ ಎಂಬ ದಲಿತರ ಮೇಲಿನ ದೌರ್ಜನ್ಯ ಕುರಿತ ಚಿತ್ರ…

‌‌‌‌‌ ಯುವ ನಿರ್ದೇಶಕ ಜೀವಾ ನವೀನ್ ಅವರು ಕನ್ನಡದಲ್ಲೊಂದು ಜೈ ಭೀಮ್, ಅಸುರನ್, ಕರ್ನನ್, ನಾರಪ್ಪ ರೀತಿಯ ಸಿನೆಮಾ ನಿರ್ದೇಶನ ಮಾಡಿದ್ದಾರೆ. ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ದ ಹೋರಾಡುವ ಕಥಾಹಂದರ ಇಟ್ಟುಕೊಂಡು ಪಾಲಾರ್ ಸಿನೆಮಾಗೆ ಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಚಿತ್ರವೀಗ ಬಿಡುಗಡೆಗೆ ಸಿದ್ಧವಾಗಿದೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡ ನಿರ್ದೇಶಕ ಜೀವಾ ನವೀನ್ ” ಅವಿಭಜಿತ ಕೋಲಾರ ಜಿಲ್ಲೆ ಮತ್ತು ದೇವನಹಳ್ಳಿ ಭಾಗದಲ್ಲಿ ನಡೆದ ನೈಜ ಘಟನೆಗಳನ್ನು ಇಟ್ಟುಕೊಂಡು ಅದೇ ಭಾಗದಲ್ಲಿ ಚಿತ್ರೀಕರಣ ಮಾಡಿದ್ದೇವೆ. ಇದೊಂದು ಮಹಿಳಾ ಪ್ರಧಾನ, ಸಂಘರ್ಷದ ಕಥೆ, ತಮಗೂ ಬದುಕಲು ಹಕ್ಕಿದೆ ಎಂದು ತೋರಿಸಿದ ದಲಿತರ ಹೋರಾಟದ ಕಥನ ಎಂದು ಹೇಳಿದರು.

ತೆಲುಗಿನ ‘ಸಿನಿಮಾ ಬಂಡಿ’ ಖ್ಯಾತಿಯ ನಟಿ, ಗಾಯಕಿ ವೈ.ಜಿ.ಉಮಾ ಕೋಲಾರ ಅವರು ಮುಖ್ಯಪಾತ್ರದಲ್ಲಿ ನಟಿಸಿರುವ ‘ಪಾಲಾರ್‌’ ತನ್ನ ವಿಶಿಷ್ಟ ಹೆಸರಿನ ಮೂಲಕ ಗಮನ ಸೆಳೆದಿದೆ. ನೀನಾಸಂನಲ್ಲಿ ತರಬೇತಿ ಪಡೆದಿರುವ ಉಮಾ ಜೊತೆ ನಾಯಕನಾಗಿ ರಾಷ್ಟ್ರೀಯ ನಾಟಕ ಶಾಲೆಯ ತಿಲಕ್ ರಾಜ್ ಬಣ್ಣ ಹಚ್ಚಿದ್ದಾರೆ.

ಜೊತೆಗೆ ಈ ಸಿನಿಮಾದಲ್ಲಿ ಸುಮಾರು ನೂರಕ್ಕೂ ಹೆಚ್ಚು ಕಲಾವಿದರು ಅಭಿನಯಿಸಿದ್ದಾರೆ. ಚಿತ್ರಕ್ಕೆ ಆಸಿಫ್ ರೆಹಾನ್, ಅವರ ಛಾಯಾಗ್ರಹಣ, ವಲಿ ಕುಲಾಯಿಸ್ ಸಂಕಲನವಿದೆ. ರಾಜಮೌಳಿ ತಂಡದ ಸಾಹಿತಿ ವರದರಾಜ್ ಚಿಕ್ಕಬಳ್ಳಾಪುರ 4 ಹಾಡುಗಳನ್ನು ರಚಿಸಿದ್ದಾರೆ. ಸುಬ್ರಮಣ್ಯ ಆಚಾರ್ಯ ಅವರ ಸಂಗೀತವಿದ್ದು, ಶ್ವೇತಾ ದೇವನಹಳ್ಳಿ, ಸುಪ್ರೀತ್ ಪಲ್ಗುಣ, ಸುಬ್ರಮಣ್ಯ ಆಚಾರ್ಯ ಜೊತೆಗೆ ಉಮಾ ವೈ ಜಿ ಕೋಲಾರ ಹಾಡುಗಳಿಗೆ ದನಿಯಾಗಿದ್ದಾರೆ.

ಪಾಲಾರ್ ಟೈಟಲ್‌ನ ವಿಶೇಷತೆಯನ್ನು ವಿವರಿಸಿದ ನಿರ್ದೇಶಕರು, “ನಂದಿ ಬೆಟ್ಟದಲ್ಲಿ ಹುಟ್ಟಿದ ಪಾಲಾರ್‌ ನದಿ ಕೋಲಾರದ ಬೇತಮಂಗಲವರೆಗೂ ಭೂಮಿಯ ಒಳಗಡೆಯೇ ಹರಿಯುತ್ತದೆ. ಆ ನಂತರ ಆಂದ್ರಪ್ರದೇಶ, ತಮಿಳು ನಾಡಿನಾದ್ಯಂತ ಹರಿದು ಸಮುದ್ರ ಸೇರುತ್ತದೆ. ಈ ನದಿ ಭೂಮಿಯ ಒಳಗಡೆ ಇದ್ದಾಗ ಬಿಸಿಯಾಗಿರುತ್ತದೆ. ಇದೇರೀತಿಯ ಕುದಿತ ದಲಿತರ ಆಂತರ್ಯದಲ್ಲಿ ಅಡಗಿದೆ. ಸಂದರ್ಭ ಸಿಕ್ಕಾಗ ಅದು ಹೊರಬಂದು, ಆಕ್ರೋಶ ಸ್ಫೋಟಿಸಿದಾಗ ಏನಾಗುತ್ತದೆ ಎಂಬುದೇ ಪಾಲಾರ್‌ ಚಿತ್ರದ ಕಥೆ. ಪಾಲಾರ್ ನದಿಗೂ ನಮ್ಮ ಕಥೆಗೂ ಸಂಬಂಧವಿಲ್ಲ. ಒಂದು ರೂಪಕವಾಗಿ ಅದನ್ನು ಬಳಸಿದ್ದೇವೆ. ಅಲ್ಲದೆ ಪಾಲಾರ್‌ ಎಂಬ ಕಾಲ್ಪನಿಕ ಹಳ್ಳಿಯಲ್ಲಿ ನಮ್ಮ ಕಥೆ ನಡೆಯುತ್ತದೆ” ಎಂದು ವಿವರಿಸಿದರು.

ಬಾಗೇಪಲ್ಲಿ, ಕೋಲಾರ, ದೇವನಹಳ್ಳಿ, ಚಿಕ್ಕಾಬಳ್ಳಾಪುರ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದ್ದು ಸದ್ಯ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆದಿದೆ.
ಸೌನವಿ ಕ್ರಿಯೇಷನ್ ಮತ್ತು ಹೆಲೋ ಗ್ಲೋಬಲ್ ಬ್ಯಾನರ್ ಅಡಿಯಲ್ಲಿ ಕೆ.ಆರ್. ಸೌಜನ್ಯ, ಸೌಂದರ್ಯ ಕೆ.ಆರ್ ಮತ್ತು ನವೀನ್ ಕುಮಾರ್ ಬಾಬು ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.
ಸದ್ಯದಲ್ಲೇ ಚಿತ್ರದ ಟ್ರೈಲರ್ ಮತ್ತು ಹಾಡುಗಳನ್ನು ಬಿಡುಗಡೆಗೊಳಿಸಿ, ನವಂಬರ್ ನಲ್ಲಿ ಚಿತ್ರ ಬಿಡುಗಡೆ ಮಾಡುವುದಾಗಿ ಚಿತ್ರತಂಡ ತಿಳಿಸಿದೆ.

Categories
ಸಿನಿ ಸುದ್ದಿ

ಪ್ರೇಕ್ಷಕರ ಮುಂದೆ ಹೊಂದಿಸಿ ಬರೆಯಿರಿ: ನವೆಂಬರ್ 18ಕ್ಕೆ ರಿಲೀಸ್

ರಾಮೇನಹಳ್ಳಿ ಜಗನ್ನಾಥ್ ನಿರ್ದೇಶನದ ಬಹು ನಿರೀಕ್ಷೆ ಮೂಡಿಸಿರುವ ‘ಹೊಂದಿಸಿ ಬರೆಯಿರಿ’ ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ನವೆಂಬರ್ 18ಕ್ಕೆ ಸಿನಿಮಾ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಬಹು ದೊಡ್ಡ ಹಾಗೂ ಕಲರ್ ಫುಲ್ ತಾರಾಗಣ ಚಿತ್ರದಲ್ಲಿದ್ದು, ಪ್ರವೀಣ್ ತೇಜ್, ಐಶಾನಿ ಶೆಟ್ಟಿ, ಸಂಯುಕ್ತ ಹೊರನಾಡು, ಶ್ರೀ ಮಹದೇವ್, ಭಾವನಾ ರಾವ್, ನವೀನ್ ಶಂಕರ್, ಅರ್ಚನಾ ಜೋಯಿಸ್ ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ.

ಪರಿಸ್ಥಿತಿಗಳೊಂದಿಗೆ ಹೊಂದಿಕೊಂಡು ಸಾಗುವ ಬದುಕಿನ ಪಯಣವೇ ಜೀವನ ಎನ್ನುವ ಎಳೆಯನ್ನು ಮೂಲವಾಗಿಟ್ಟುಕೊಂಡು ಅದರ ಸುತ್ತ ಹೆಣೆಯಲಾದ ಕಥಾಹಂದರವೇ ‘ಹೊಂದಿಸಿ ಬರೆಯಿರಿ’ ಸಿನಿಮಾ. ಚಿತ್ರದಲ್ಲಿ ಐದು ಜನ ಸ್ನೇಹಿತರ ಬದುಕಿನ ಒಂದೊಂದು ಕಥೆಯಿದೆ. ಭಾವನಾತ್ಮಕ ಜರ್ನಿಯೂ ಇದೆ. ಈಗಾಗಲೇ ಚಿತ್ರದ ಸ್ಯಾಂಪಲ್ ಗಳ ಮೂಲಕ ಗಮನ ಸೆಳೆದಿರುವ ಈ ಚಿತ್ರ ಸಿನಿರಸಿಕರಲ್ಲಿ ನಿರೀಕ್ಷೆಯನ್ನು ಹೆಚ್ಚಿಸಿದೆ. ಚಿತ್ರದ ಪ್ರಚಾರ ಕಾರ್ಯ ಭರ್ಜರಿಯಾಗಿ ನಡೆಯುತ್ತಿದ್ದು ನವೆಂಬರ್ 18ಕ್ಕೆ ರಾಜ್ಯಾದ್ಯಂತ ಚಿತ್ರ ಬಿಡುಗಡೆ ಮಾಡಲು ಡೇಟ್ ಕನ್ಫರ್ಮ್ ಮಾಡಿದೆ ಚಿತ್ರತಂಡ.

ಚಿತ್ರದಲ್ಲಿ ಎಂಟು ಹಾಡುಗಳಿದ್ದು ಈಗಾಗಲೇ ಒಂದು ಸಾಂಗ್ ಬಿಡುಗಡೆಯಾಗಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಅಕ್ಟೋಬರ್ ನಲ್ಲಿ ಟ್ರೇಲರ್ ರಿಲೀಸ್ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದೆ. ನಿರ್ದೇಶಕ ಜಗನ್ನಾಥ್ ಗಿದು ಮೊದಲ ಸಿನಿಮಾ. ರಾಕ್ ಲೈನ್ ಪ್ರೊಡಕ್ಷನ್ ನಲ್ಲಿ ಕೆಲಸ ಮಾಡಿದ ಅನುಭವ ಇವರಿಗಿದೆ. ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಮಾಡುವುದರ ಜೊತೆಗೆ ನಿರ್ಮಾಣವನ್ನು ತಾವೇ ಮಾಡಿದ್ದಾರೆ.

ಶಾಂತಿ ಸಾಗರ್ ಹೆಚ್.ಜಿ ಕ್ಯಾಮೆರಾ ನಿರ್ದೇಶನ, ಜೋ ಕೋಸ್ಟ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಕೆ. ಕಲ್ಯಾಣ್, ಹೃದಯಶಿವ ಹಾಗೂ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಚಿತ್ರದ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಟಗರು ಖ್ಯಾತಿಯ ಮಾಸ್ತಿ, ಪ್ರಶಾಂತ್ ರಾಜಪ್ಪ ಹಾಗೂ ನಿರ್ದೇಶಕ ಜಗನ್ನಾಥ್ ಮೂವರ ಸಂಭಾಷಣೆ ಚಿತ್ರಕ್ಕಿದೆ. ಸಂಡೇ ಸಿನಿಮಾಸ್ ಬ್ಯಾನರ್ ನಡಿ ರಾಮೇನಹಳ್ಳಿ ಜಗನ್ನಾಥ್ ಹಾಗೂ ಸ್ನೇಹಿತರು ಸೇರಿ ಹೊಂದಿಸಿ ಬರೆಯಿರಿ ಚಿತ್ರ ನಿರ್ಮಾಣ ಮಾಡಿದ್ದಾರೆ. ಸುನೀಲ್ ಪುರಾಣಿಕ್, ಪ್ರವೀಣ್ ಡಿ ರಾವ್ , ಧರ್ಮೇಂದ್ರ ಅರಸ್, ನಂಜುಂಡೇ ಗೌಡ, ಸುಧಾ ನರಸಿಂಹರಾಜು ಒಳಗೊಂಡ ದೊಡ್ಡ ತಾರಾಬಳಗ ಚಿತ್ರದಲ್ಲಿದೆ.

Categories
ಸಿನಿ ಸುದ್ದಿ

ಲವ್ ಲೀ ಸಿಂಹ! ನಡೀತಾ ಇದೆ ಭರ್ಜರಿ ಶೂಟಿಂಗ್…

ಸ್ಯಾಂಡಲ್ ವುಡ್ ಪ್ರತಿಭಾನ್ವಿತ ನಟ ವಸಿಷ್ಠ ಸಿಂಹ ಅಭಿನಯದ ಬಹು ನಿರೀಕ್ಷಿತ ಸಿನಿಮಾಗಳಲ್ಲೊಂದು ‘ಲವ್ ಲಿ’. ವಸಿಷ್ಠ ಸಿಂಹ ಅಭಿಮಾನಿ ಬಳಗ ಕೂಡ ಈ ಚಿತ್ರದ ಮೇಲೆ ಅಪಾರ ನಿರೀಕ್ಷೆ ಇಟ್ಟುಕೊಂಡಿದೆ. ಚಿತ್ರದ ಪೋಸ್ಟರ್ ಗಳಲ್ಲಿ ವಸಿಷ್ಠ ಲುಕ್ ಸಖತ್ ಇಂಪ್ರೆಸ್ ಮಾಡಿದ್ದು ‘ಲವ್ ಲಿ’ ಸಿನಿಮಾ ಅಪ್ಡೇಟ್ ಗಳೂ ನಿರೀಕ್ಷೆ ಹೆಚ್ಚಿಸಿವೆ. ಲವ್ ಲಿ ಚಿತ್ರೀಕರಣ ಕೂಡ ಭರದಿಂದ ಸಾಗುತ್ತಿದ್ದು ಮೊದಲ ಶೆಡ್ಯೂಲ್ ಯಶಸ್ವಿಯಾಗಿ ಮುಗಿಸಿರುವ ಚಿತ್ರತಂಡ ಸೆಕೆಂಡ್ ಶೆಡ್ಯೂಲ್ ಚಿತ್ರೀಕರಣದಲ್ಲಿ ಬ್ಯುಸಿಯಾಗಿದೆ.

ನಾಗರಭಾವಿಯ ಕಿಂಗ್ಸ್ ಕ್ಲಬ್ ನಲ್ಲಿ ‘ಲವ್ ಲಿ’ ಚಿತ್ರದ ಸೆಕೆಂಡ್ ಶೆಡ್ಯೂಲ್ ಚಿತ್ರೀಕರಣ ನಡೆಯುತ್ತಿದೆ. ಇಲ್ಲಿನ ಕಿಂಗ್ಸ್ ಕ್ಲಬ್ ನಲ್ಲಿ ಆಫೀಸ್ ಸೆಟ್ ನಿರ್ಮಾಣ ಮಾಡಲಾಗಿದ್ದು ವಸಿಷ್ಠ ಸಿಂಹ, ಸಾಧುಕೋಕಿಲ, ನಟಿ ಸಮೀಕ್ಷಾ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೂರಜ್ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ.

‘ಲವ್ ಲಿ’ ಚಿತ್ರಕ್ಕೆ ಚೇತನ್ ಕೇಶವ್ ನಿರ್ದೇಶನವಿದೆ. ಇದೊಂದು ಕಮರ್ಶಿಯಲ್ ರೋಮ್ಯಾಂಟಿಕ್ ಲವ್ ಸ್ಟೋರಿ ಸಿನಿಮಾವಾಗಿದ್ದು, ರೌಡಿಸಂ ಕಥಾಹಂದರವೂ ಚಿತ್ರದಲ್ಲಿದೆ. ವಸಿಷ್ಠ ಸಿಂಹನಿಗೆ ನಾಯಕಿಯಾಗಿ ಜಾರ್ಕಂಡ್ ಮೂಲದ ಸ್ಟೆಫಿ ಪಟೇಲ್ ನಟಿಸುತ್ತಿದ್ದು, ಕೊರಿಯನ್ ವೆಬ್ ಸೀರೀಸ್, ತಮಿಳು, ಹಿಂದಿ ಸಿನಿಮಾಗಳಲ್ಲಿ ನಟಿಸಿರುವ ಸ್ಟೆಫಿ ಪಟೇಲ್ ಗೆ ಇದು ಮೊದಲ ಕನ್ನಡ ಸಿನಿಮಾ. ಮಾಸ್ಟರ್ ಆನಂದ್ ಪುತ್ರಿ ವಂಶಿಕಾ ಕೂಡ ಲವ್ ಲಿ ಚಿತ್ರತಂಡ ಸೇರಿಕೊಂಡಿದ್ದು, ಸುಬ್ಬಲಕ್ಷ್ಮಿ ಸಂಸಾರ ಸೀರಿಯಲ್ ಖ್ಯಾತಿಯ ಸಮೀಕ್ಷಾ ಲವ್ ಲಿ ಚಿತ್ರದಲ್ಲಿ ಪ್ರಮುಖ ರೋಲ್ ನಲ್ಲಿ ಮಿಂಚಲಿದ್ದಾರೆ.

ಚಿತ್ರವನ್ನು ಎಂ.ಆರ್ ರವೀಂದ್ರ ಕುಮಾರ್ ನಿರ್ಮಿಸುತ್ತಿದ್ದು, ಅಶ್ವಿನ್ ಕೆನಡಿ ಕ್ಯಾಮೆರಾ ವರ್ಕ್, ಹರೀಶ್ ಕೊಮ್ಮೆ ಸಂಕಲನ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ.

Categories
ಸಿನಿ ಸುದ್ದಿ

ದೂರದರ್ಶನದಲ್ಲಿ ಉಗ್ರಂ ಮಂಜು ಹೊಸ ಅವತಾರ…

ದೂರದರ್ಶನ ಸಿನಿಮಾ ಸದ್ಯ ಕುತೂಹಲದ ಕೇಂದ್ರ ಬಿಂದು. ವಿಭಿನ್ನ ಪೋಸ್ಟರ್, ಟೀಸರ್ ಝಲಕ್ ಮತ್ತು ಇಲ್ಲಿವರೆಗೂ ಮನ ಮುಟ್ಟುವ ಪ್ರಚಾರ ದ ಮೂಲಕ ನಿರೀಕ್ಷೆ ಇಮ್ಮಡಿಗೊಳಿಸಿದೆ. ಈ ಚಿತ್ರದಲ್ಲಿ ಉಗ್ರಂ ಸಿನಿಮಾ ಖ್ಯಾತಿಯ ಮಂಜು ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಇದುವರೆಗೂ
ಮಾಡಿರುವ ಸಿನಿಮಾಗಳಿಗಿಂತ ಈ ಚಿತ್ರದಲ್ಲಿ ವಿಭಿನ್ನ ಪಾತ್ರದ ಮೂಲಕ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದ್ದಾರೆ. ಕಿಟ್ಟಿ ಎಂಬ ಪಾತ್ರಕ್ಕೆ ಉಗ್ರಂ ಮಂಜು ಬಣ್ಣ ಹಚ್ಚಿದ್ದು, ಸಾಲು ಸಾಲು ಒದ್ದಾಟ ಅನುಭವಿಸುವ, ವೈಫಲ್ಯಗಳನ್ನು ಎದುರಿಸಿಕೊಂಡು ಗುರಿ ಬೆನ್ನಟ್ಟವ ಗಟ್ಟಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ನಾಯಕ ಮನು ಮತ್ತು ಕಿಟ್ಟಿ ಹೈವೋಲ್ಟೇಜ್ ಸೀಕ್ವೆನ್ಸ್ ಸಿನಿಮಾದಲ್ಲಿದೆ. ಮಂಜು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುವುದರ ಜೊತೆಗೆ
ಕಾರ್ಯಕಾರಿ ನಿರ್ಮಾಪಕನಾಗಿ, ಕಲಾ ವಿನ್ಯಾಸಕನಾಗಿಯೂ ತಂಡದ ಜೊತೆ ಜವಾಬ್ದಾರಿಯನ್ನ ಹಂಚಿಕೊಂಡಿದ್ದಾರೆ.

ನೈಜ ಘಟನೆ ಹಾಗೂ ಕಾಲ್ಪನಿಕತೆ ಕಥಾಹಂದರ ಸುತ್ತ ಸಾಗುವ ದೂರದರ್ಶನ ಸಿನಿಮಾದಲ್ಲಿ ಪೃಥ್ವಿ ಅಂಬರ್ ನಾಯಕನಾಗಿ ನಟಿಸಿದ್ದು, ಅಯಾನಾ ನಾಯಕಿಯಾಗಿ ಅಭಿನಯಿಸಿದ್ದಾರೆ. ಉಳಿದಂತೆ ಹರಿಣಿ, ದೀಪಕ್ ರೈ ಪಾಣಾಜೆ, ರಘು ರಮಣಕೊಪ್ಪ, ಹುಲಿ ಕಾರ್ತಿಕ್, ಸೂರಜ್ ಮಂಗಳೂರು, ಸೂರ್ಯ ಕುಂದಾಪುರ ಸೇರಿದಂತೆ ಮತ್ತಿತರ ತಾರಾಗಣ ಸಿನಿಮಾದಲ್ಲಿದೆ.

ಸುಕೇಶ್ ಶೆಟ್ಟಿ ನಿರ್ದೇಶನದಲ್ಲಿ ತಯಾರಾಗುತ್ತಿರುವ “ದೂರದರ್ಶನ” ಚಿತ್ರ ಈಗಷ್ಟೇ ಡಬ್ಬಿಂಗ್ ಮುಗಿಸಿ ಶೀಘ್ರದಲ್ಲಿ ತೆರೆಗೆ ತರಲು ಚಿತ್ರ ತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸ ಗಳಲ್ಲಿ ಬ್ಯುಸಿಯಾಗಿದೆ .
ಸಿನಿಮಾವನ್ನು ವಿಎಸ್ ಮೀಡಿಯಾ ಎಂಟರ್ ಪ್ರೈಸಸ್ ಬ್ಯಾನರ್ ನಡಿ ರಾಜೇಶ್ ಭಟ್ ನಿರ್ಮಾಣ ಮಾಡಿದ್ದಾರೆ.

ವಾಸುಕಿ ವೈಭವ್ ಸಂಗೀತ ಸಂಯೋಜನೆ, ಅರುಣ್ ಸುರೇಶ್ ಕ್ಯಾಮೆರಾ ವರ್ಕ್, ನಂದೀಶ್ ಟಿಜಿ ಸಂಭಾಷಣೆ, ಪ್ರದೀಪ್ ಆರ್ ರಾವ್ ಸಂಕಲನ ಸಿನಿಮಾಕ್ಕಿದೆ. ದೂರದರ್ಶನ ಸಿನಿಮಾದಲ್ಲಿ ನಾಲ್ಕು ಹಾಡುಗಳು, ಎರಡು ಫೈಟ್ ಸೀನ್ಸ್ ಗಳಿದ್ದು, ಹೊಡೆದಾಟದ ದೃಶ್ಯಗಳನ್ನು ನೈಜ ರೀತಿಯಲ್ಲಿ ಚಿತ್ರೀಕರಿಸಲಾಗಿದೆ. ಶೀರ್ಘದಲ್ಲಿಯೇ ಚಿತ್ರತಂಡ ತೆರೆಗೆ ಬರಲು ಸಜ್ಜಾಗುತ್ತಿದೆ.

Categories
ಸಿನಿ ಸುದ್ದಿ

ನ್ಯಾನೋ ನಾರಾಯಣಪ್ಪನ ಟ್ರೇಲರ್ ಧಮಾಕ! ಚಿತ್ರ ಬಿಡುಗಡೆಗೆ ರೆಡಿ…

ಕೆಜಿಎಫ್ ಸಿನಿಮಾ ಮೂಲಕ ಖ್ಯಾತಿಗಳಿಸಿರುವ ಕೆಜಿಎಫ್ ತಾತಾ ಎಂದೇ ಕರೆಸಿಕೊಳ್ಳೋ ಕೃಷ್ಣಾಜಿ ರಾವ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಈಗ ಫುಲ್ ಬ್ಯುಸಿ. ‘ನ್ಯಾನೋ ನಾರಾಯಣಪ್ಪ’ ಸಿನಿಮಾದಲ್ಲಿ ಕೃಷ್ಣ ಜಿ ರಾವ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು ಬಿಡುಗಡೆಯ ಬಾಗಿಲಲ್ಲಿರುವ ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ.

‘ಕೆಮಿಸ್ಟ್ರಿ ಆಫ್ ಕರಿಯಪ್ಪ’, ‘ಕ್ರಿಟಿಕಲ್ ಕೀರ್ತನೆಗಳು’ ಸಿನಿಮಾ ಮೂಲಕ ಭರವಸೆ ಮೂಡಿಸಿರುವ ಕುಮಾರ್ ನಿರ್ದೇಶನ ಸಾರಥ್ಯದಲ್ಲಿ ಮೂಡಿ ಬಂದಿರುವ ಸಿನಿಮಾ ‘ನ್ಯಾನೋ ನಾರಾಯಣಪ್ಪ’. ಚಿತ್ರದ ಮುಖ್ಯ ಭೂಮಿಕೆಯಲ್ಲಿ ಕೃಷ್ಣಾಜಿ ರಾವ್ ನಟಿಸಿದ್ದು. ಫಸ್ಟ್ ಲುಕ್ ಪೋಸ್ಟರ್, ಟೈಟಲ್ ಮೂಲಕ ಗಮನ ಸೆಳೆದ ಚಿತ್ರತಂಡ ಈಗ ಟ್ರೇಲರ್ ಬಿಡುಗಡೆ ಮಾಡುವ ಮೂಲಕ ನಿರೀಕ್ಷೆಯನ್ನು ಹೆಚ್ಚಿಸಿದೆ.

ಕೆಜಿಎಫ್ ನಲ್ಲಿ ಪುಟ್ಟ ಪಾತ್ರದ ಮೂಲಕ ಜನಪ್ರಿಯತೆ ಗಳಿಸಿಕೊಂಡ ಕೃಷ್ಣಾಜಿ ರಾವ್ ಈ ಚಿತ್ರದಲ್ಲಿ ಇಡೀ ಸಿನಿಮಾ ಆವರಿಸಿಕೊಂಡಿದ್ದಾರೆ. ಕುಮಾರ್ ಹಿಂದಿನ ಸಿನಿಮಾಗಳಂತೆ ಕಾಮಿಡಿ ಈ ಚಿತ್ರದ ಮೂಲ ಮಂತ್ರವಾಗಿದ್ದು ಭಾವನಾತ್ಮಕ ಅಂಶಗಳು ಸಿನಿಮಾದಲ್ಲಿವೆ ಅನ್ನೋದು ಟ್ರೇಲರ್ ನೋಡಿದ್ರೆ ಗೊತ್ತಾಗುತ್ತೆ.

ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಮಾಡುವುದರ ಜೊತೆಗೆ ನಿರ್ಮಾಣವನ್ನು ಮಾಡಿದ್ದಾರೆ ಕುಮಾರ್. ಕಾಮಿಡಿ ಎಮೋಷನಲ್ ಸಿನಿಮಾ ಇದಾಗಿದ್ದು, ಕುಟುಂಬ ಸಮೇತ ನೋಡಿ ಎಂಜಾಯ್ ಮಾಡಬಹುದಾದ ಸಬ್ಜೆಕ್ಟ್ ಚಿತ್ರದಲ್ಲಿದೆ. ಶಿವಶಂಕರ ಕ್ಯಾಮೆರಾ ನಿರ್ದೇಶನ, ಆಕಾಶ್ ಪರ್ವ ಸಂಗೀತ, ದೀಪು ಮತ್ತು ಸಿದ್ದಾರ್ಥ್ ನಾಯಕ ಸಂಕಲನ ಚಿತ್ರಕ್ಕಿದೆ.

ಕಾಕ್ರೋಚ್ ಸುಧಿ, ಪ್ರಶಾಂತ್ ಸಿದ್ದಿ, ಅಕ್ಷತ ಕುಕ್ಕಿ, ಅಪೂರ್ವ ಸೇರಿದಂತೆ ಪ್ರತಿಭಾನ್ವಿತ ಕಲಾವಿದರ ಬಳಗ ಚಿತ್ರದಲ್ಲಿದೆ. ಚಿತ್ರದ ಪ್ರಚಾರ ಕಾರ್ಯದಲ್ಲಿ ಸಿನಿಮಾ ತಂಡ ಬ್ಯುಸಿಯಾಗಿದ್ದು ಅಕ್ಟೋಬರ್ ನಲ್ಲಿ ಚಿತ್ರ ಬಿಡುಗಡೆಯಾಗಲಿದೆ.

Categories
ಸಿನಿ ಸುದ್ದಿ

ದುಬೈನಲ್ಲಿ ಡಾಲಿ! ಜಯರಾಜ್ ಗೆಟ್ಟಪ್ಪಲ್ಲೇ ಬೆಲ್‌ ಬಾಟಂ ಪ್ಯಾಂಟ್ ಧರಿಸಿ ಫ್ಲೈಟ್ ಏರಿದ ಧನಂಜಯ…

ದುಬೈನಲ್ಲಿ ನಡೆಯಲಿರೋ ರಾಜ್ ಕಪ್ ಗಾಗಿ ಕ್ರಿಕೆಟ್ ಆಡಲು ಹೋಗಿರೋ ಧನಂಜಯ ಜತೆಗೆ ಹೆಡ್ ಬುಷ್ ಚಿತ್ರದ ಪ್ರಚಾರವನ್ನ ಭಿನ್ನವಾಗಿ ಮಾಡಲು ಹೊರಟಿದ್ದಾರೆ.

ಹೆಡ್ ಬುಷ್ ಚಿತ್ರ ಅಕ್ಟೋಬರ್ 21ಕ್ಕೆ ವಿಶ್ವದಾದ್ಯಂತ ರಿಲೀಸ್ ಆಗುತ್ತಿದೆ. ಈ ನಡುವೆ ಧನಂಜಯ ವಿಶ್ವ ಪರ್ಯಟನೆ ಮಾಡುವ ಮೂಲಕ ಸಿನಿಮಾವ ಪ್ರಚಾರ ಶುರು ಮಾಡಿದ್ದಾರೆ.

error: Content is protected !!