Categories
ಸಿನಿ ಸುದ್ದಿ

ರೆಟ್ರೋ ಶೈಲಿಯಲ್ಲಿ ಪರಿಮಳ ಡಿಸೋಜ ಮಿಂಚಿಂಗ್! ಅದ್ಧೂರಿ ಸೆಟ್ ಸಾಂಗ್ ಜೊತೆ ಶೂಟಿಂಗ್ ಕಂಪ್ಲೀಟ್…

ವಿಲೇಜ್ ರೋಡ್ ಸಂಸ್ಥೆಯ ಮೂಲಕ ವಿನೋದ್ ಶೇಷಾದ್ರಿ ಅವರು ನಿರ್ಮಿಸುತ್ತಿರುವ ಹಾಗೂ ಡಾ.ಗಿರಿಧರ್ ಹೆಚ್ ಟಿ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ “ಪರಿಮಳ ಡಿಸೋಜಾ” ಚಿತ್ರದ ಹಾಡೊಂದರ ಚಿತ್ರೀಕರಣ ಇತ್ತೀಚೆಗೆ ನೆಲಮಂಗಲದ ಬಳಿ ನಿರ್ಮಿಸಲಾಗಿದ್ದ ಅದ್ದೂರಿ ಸೆಟ್ ನಲ್ಲಿ ನಡೆಯಿತು.

ರೆಟ್ರೋ ಶೈಲಿಯಲ್ಲಿ ಚಿತ್ರೀಕರಣಗೊಂಡಿರುವ ಈ ಹಾಡಿನಲ್ಲಿ ವಿನೋದ್ ಶೇಷಾದ್ರಿ ಹಾಗೂ ಶ್ವೇತ ರಮೇಶ್ ನಟಿಸಿದ್ದಾರೆ. ವಿನೋದ್ ಶೇಷಾದ್ರಿ ಅವರೆ ಈ ಹಾಡನ್ನು ಬರೆದಿದ್ದು, ರಾಜೇಶ್ ಕೃಷ್ಣನ್ ‌ಹಾಗೂ ಶೃತಿ.ವಿ.ಎಸ್ ಹಾಡಿದ್ದಾರೆ. ಈ ಹಾಡಿನ ಚಿತ್ರೀಕರಣದೊಂದಿಗೆ “ಪರಿಮಳ ಡಿಸೋಜಾ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಒಟ್ಟು 72 ದಿನಗಳ ಚಿತ್ರೀಕರಣ ನಡೆದಿದೆ.

ಈ ಚಿತ್ರದಲ್ಲಿ ಒಟ್ಟು ನಾಲ್ಕು ಹಾಡುಗಳಿವೆ. ಕ್ರಿಸ್ಟೋಪರ್ ಜೇಸನ್ ಸಂಗೀತ ಸಂಯೋಜನೆ ಮಾಡಿದ್ದಾರೆ. ನಾಗೇಂದ್ರ ಪ್ರಸಾದ್,ಜಯಂತ್ ಕಾಯ್ಕಿಣಿ, ಕೆ.ಕಲ್ಯಾಣ್ ಹಾಗೂ ವಿನೋದ್ ಶೇಷಾದ್ರಿ ಹಾಡುಗಳನ್ನು ಬರೆದಿದ್ದಾರೆ. ಜೋಗಿ ಪ್ರೇಮ್, ರಾಜೇಶ್ ಕೃಷ್ಣನ್, ಶೃತಿ ವಿ ಎಸ್, ನಕುಲ್ ಆಭಯಂಕರ್, ಸುಪ್ರೀಯ ರಾಮ್ ಹಾಡಿದ್ದಾರೆ,
ಕೆ .ರಾಮ್ ಛಾಯಾಗ್ರಹಣ, ಸಂಜೀವ್ ರೆಡ್ಡಿ ಸಂಕಲನ ಹಾಗೂ ವಿಜಯನಗರ ಮಂಜು ನೃತ್ಯ ಈ ಚಿತ್ರಕ್ಕಿದೆ.

ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಚಲನಚಿತ್ರದ ಜೊತೆಗೆ ಉತ್ತಮ ಸಂಗೀತಮಯ ಚಿತ್ರವೂ ಹೌದು. ಕುಟುಂಬ ಸಮೇತ ನೋಡಬಹುದಾದ ಚಿತ್ರ ನಮ್ಮದು ಎನ್ನುತ್ತಾರೆ ನಿರ್ದೇಶಕರು.

ಶ್ರೀನಿವಾಸ್ ಪ್ರಭು, ಭವ್ಯ, ಕೋಮಲ ಬನವಾಸೆ, ವಿನೋದ್ ಶೇಷಾದ್ರಿ, ಶಿವಕುಮಾರ್ ಆರಾದ್ಯ, ಮೀಸೆ ಆಂಜನಪ್ಪ, ಶ್ವೇತ ರಮೇಶ್, ಸುನೀಲ್ ಎ ಮೋಹಿತೆ, ನಾಗಮಂಗಲ ಜಯರಾಮಣ್ಣ,

ಚಂದನ ಶ್ರೀನಿವಾಸ್, ಡಾ.ಚಂದ್ರಶೇಖರ್ ಎನ್ ಆರ್, ಪೂಜಾ ರಾಮಚಂದ್ರ, ಯೋಗೇಶ್, ರೊಹಿಣಿ ಸೇರಿದಂತೆ ಐವತಕ್ಕೂ ಹೆಚ್ಚು ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ

Categories
ಸಿನಿ ಸುದ್ದಿ

ಪಾಕ್ ನೆಲದಲ್ಲೂ ವಿಕ್ರಾಂತನ ಅಬ್ಬರ! ನೇಪಾಳದಲ್ಲಿ ರೋಣನ ಯಾತ್ರೆ… 27ಕ್ಕೆ 27ದೇಶದಲ್ಲಿ ಪ್ರೀವ್ಯೂ

ಸುದೀಪ್ ಅಭಿನಯದ ವಿಕ್ರಾಂತ್ ರೋಣ ಚಿತ್ರ ದುಬೈ ನಲ್ಲಿ ವರ್ಲ್ಡ್‌ ಪ್ರೀಮಿಯರ್ ಆಗುತ್ತಿರುವ ಬಗ್ಗೆ ಸುದ್ದಿಯಾಗಿತ್ತು,
ಈಗ ‘ಸಿನೆಬಡ್ಸ್’ ಎಂಬ ಆಪ್‌ ಮೂಲಕ ಪ್ರೇಕ್ಷಕರು ವಿಕ್ರಾಂತ್‌ರೋಣ ಚಿತ್ರವನ್ನು ತನ್ನಿಷ್ಟದ ಭಾಷೆಗಳಲ್ಲಿ ನೋಡುವಂಥ ಅವಕಾಶವನ್ನು ಕಲ್ಪಿಸುತ್ತಿರುವುದು ವಿಶೇಷ.

ಅಂದಹಾಗೆ, ಈ ಆಪನ್ನು ಹೊರತಂದಿರುವ ಆದಿತ್ಯ ಕಶ್ಯಪ್ ಹೇಳಿದ್ದಿಷ್ಟು.
ನಮ್ಮ ಸಹೋದರ ವಿನೀತ್ ಕಶ್ಯಪ್ ಅವರು ಡೆವಲಪ್ ಮಾಡಿದ ಆಪ್ ಇದಾಗಿದ್ದು, ಪ್ಲೇಸ್ಟೋರ್‌ನಲ್ಲಿ ಇದನ್ನು ಡೌನ್‌ಲೋಡ್ ಮಾಡಿ ತೆರೆಮೇಲೆ ಯಾವುದೇ ಭಾಷೆ ಸಿನಿಮಾ ಪ್ರದರ್ಶನವಾಗುತ್ತಿರಲಿ, ನಾವು ಮೊಬೈಲ್ ನಲ್ಲಿ ನಮ್ಮಿಷ್ಟದ ಭಾಷೆ ಆಯ್ಕೆ ಮಾಡಿಕೊಂಡು ಹೆಡ್ ಫೋನ್ ಮೂಲಕ ಕೇಳುತ್ತ ಚಿತ್ರವನ್ನು ವೀಕ್ಷಿಸಬಹುದು.
ಕಳೆದವಾರ ರಿಲೀಸಾದ ತಮಿಳಿನ ರಾಕೆಟ್ರಿ ಚಿತ್ರದ ಜೊತೆ ನಾವು ಟೈಅಪ್ ಆಗಿದ್ದು, ಅದಕ್ಕೆ ಉತ್ತಮ ಪ್ರತಿಕ್ರಿಯೆ ದೊರಕಿದೆ. ಇದಲ್ಲದೆ ಓಟಿಟಿಯಲ್ಲಿ ಬರುವ ಚಿತ್ರಗಳನ್ನೂ ನಮ್ಮ ಭಾಷೆಯಲ್ಲೇ ವೀಕ್ಷಿಸಬಹುದಾಗಿದೆ. ಚಿತ್ರದ ನಿರ್ಮಾಪಕರು ಆಪ್‌ನೊಂದಿಗೆ ಮೊದಲೇ ಟೈಅಪ್ ಮಾಡಿಕೊಂಡಿದ್ದರೆ ಮಾತ್ರವೇ ಅದು ಸಾಧ್ಯವಾಗಲಿದೆ ಎಂದು ವಿವರಿಸಿದರು.

ನಿರ್ಮಾಪಕ ಜಾಕ್ ಮಂಜು ಮಾತನಾಡಿ ಒಂದೆರಡು ತಿಂಗಳ ಹಿಂದೆಯೇ ನನ್ನಬಳಿ ಬಂದಿದ್ದರೆ ಬೆಂಗಾಳಿ, ಮರಾಠಿ, ಗುಜರಾತಿ ಭಾಷೆಯಲ್ಲೂ ನಮ್ಮ ಚಿತ್ರವನ್ನು ಡಬ್ ಮಾಡಬಹುದಿತ್ತು. ನಾವು ಡಬ್ ಮಾಡಿದ ಅಷ್ಟೂ ಭಾಷೆಯ ಸೌಂಡ್‌ಟ್ರ‍್ಯಾಕನ್ನು ಇವರಿಗೆ ಕೊಟ್ಟಾಗ ಅವರು ಅದನ್ನು ತಮ್ಮ ಆಪ್‌ಗೆ ಅಳವಡಿಸುತ್ತಾರೆ. ಕೆಲ ಕೇಂದ್ರಗಳಲ್ಲಿ ಎಲ್ಲಾ ಭಾಷೆಯಲ್ಲಿ ರಿಲೀಸ್ ‌ಮಾಡಲು ಸಾಧ್ಯವಾಗದಿದ್ದಾಗ ಆ ಭಾಷೆಯ ಜನರಿಗೆ ಇದರಿಂದ ಅನುಕೂಲವಾಗುತ್ತದೆ. ಇದು
ಚಿತ್ರದ ಯಾವುದೇ ಕಂಟೆಂಟನ್ನು ಕಾಪಿ ಮಾಡಲ್ಲ, ಇದೆಲ್ಲ ತಿಳಿದುಕೊಂಡೇ ನಾವು ಮುಂದುವರೆಯುತ್ತಿದ್ದೇವೆ ಎಂದರು. ಜುಲೈ 27ರಂದು ಪ್ರಪಂಚದ 27ದೇಶಗಳಲ್ಲಿ ಪ್ರೀವ್ಯೂ ಆಗುತ್ತಿದೆ. ಜೊತೆಗೆ ದುಬೈನಲ್ಲಿ 5 ಭಾಷೆಯಲ್ಲೂ ಪ್ರದರ್ಶನವಾಗಲಿದೆ. ನಿನ್ನೆಯಷ್ಟೇ ನೇಪಾಳ ಕನ್‌ಫರ್ಮ್ ಆಯ್ತು, ಅಲ್ಲದೆ ಪಾಕಿಸ್ತಾನದಲ್ಲೂ ವಿಕ್ರಾಂತ್‌ರೋಣ ರಿಲೀಸಾಗುವ ಸಾಧ್ಯತೆಯಿದೆ. ಪ್ರಪಂಚದಾದ್ಯಂತ 3200ರಿಂದ 3500 ಚಿತ್ರಮಂದಿಗಳಲ್ಲಿ ವಿಕ್ರಾಂತ್ ರೋಣ ರಿಲೀಸಾಗುತ್ತಿದೆ, ಕರ್ನಾಟಕದಲ್ಲೇ 400ರಿಂದ 420 ಥಿಯೇಟರ್‌ಗಳಲ್ಲಿ ಬಿಡುಗಡೆಯಾಗುತ್ತಿದ್ದು, ಕರ್ನಾಟಕಕ್ಕಿಂತ ತೆಲುಗು ರಾಜ್ಯಗಳಲ್ಲಿ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಈಗಾಗಲೇ ಬಹುತೇಕ ಕಡೆಗಳಲ್ಲಿ ಅಡ್ವಾನ್ಸ್ ಬುಕ್ಕಿಂಗ್ ಶುರುವಾಗಿದ್ದು, ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ.

ಬಾಲಿವುಡ್‌ನಲ್ಲಿ 900 ಚಿತ್ರಮಂದಿರ, ಟಾಲಿವುಡ್‌ನಲ್ಲಿ 350ಕ್ಕೂ ಹೆಚ್ಚು ಥಿಯೇಟರ್ ಅಲ್ಲದೆ ವಿದೇಶಗಳಲ್ಲಿ 800ಕ್ಕೂ ಅಧಿಕ ಸ್ಕ್ರೀನ್‌ಗಳಲ್ಲಿ ವಿಕ್ರಾಂತ್‌ರೋಣ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ನಾಳೆ, ನಾಡಿದ್ದು ಈ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಿದರು.
ಈಗಾಗಲೇ ರಿಲೀಸಾಗಿರುವ ಟ್ರೇಲರ್ ಜೊತೆಗೆ ಹಾಡುಗಳಂತೂ ಒಂದಕ್ಕಿಂತ ಒಂದು ಹೆಚ್ಚಾಗಿ
ವೈರಲ್ ಆಗಿವೆ. ಅದರಲ್ಲೂ ಯಾರ ಮೊಬೈಲ್‌ನಲ್ಲಿ ನೋಡಿದರೂ ರಾರಾ.. ರಕ್ಕಮ್ಮ ಹಾಡಿನ
ರೀಲ್ಸ್ ನದ್ದೇ ಅಬ್ಬರ. ಈ ಹಾಡು ಅಷ್ಟೂ ಭಾಷೆಗಳಲ್ಲೂ ದೊಡ್ಡ ಕ್ರೇಜನ್ನೇ ಸೃಷ್ಟಿಸಿದೆ.ಶೇಂಗಾ.90ರಷ್ಟು ೩ಡಿ ವರ್ಷನ್ ಚಿತ್ರ ರಿಲೀಸಾಗುತ್ತಿದ್ದು, 3ಡಿ ಇಲ್ಲದ ಕಡೆ ಮಾತ್ರವೇ 2ಡಿ
ವರ್ಷನ್ ಪ್ರದರ್ಶನವಾಗಲಿದೆ.

Categories
ಸಿನಿ ಸುದ್ದಿ

ಚಲನಚಿತ್ರ ರಾಷ್ಟ್ರ ಪ್ರಶಸ್ತಿ ವಿಜೇತರಿಗೆ ಫಿಲ್ಮ್ ಚೇಂಬರ್‌ ಸನ್ಮಾನ…

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಕನ್ನಡಕ್ಕೆ ಮೂರು ಪ್ರಶಸ್ತಿಗಳು ಲಭಿಸಿವೆ. ವಿಶಿಷ್ಟ ಕಥಾಹಂದರದ ‘ಡೊಳ್ಳು’ ಸಿನಿಮಾಗೆ ಅತ್ಯುತ್ತಮ ಕನ್ನಡ ಪ್ರಾದೇಶಿಕ ಸಿನಿಮಾ ಹಾಗೂ ಸಿಂಕ್ ಸೌಂಡ್ ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ ದೊರೆತಿದೆ.

‘ತಲೆದಂಡ’ ಚಿತ್ರಕ್ಕೆ ಪರಿಸರ ಕಾಳಜಿಯ ಕಥಾವಸ್ತುವುಳ್ಳ ರಾಷ್ಟ್ರ ಪ್ರಶಸ್ತಿಯ ಗರಿ ಒಲಿದಿದೆ. ‘ಅತ್ಯುತ್ತಮ ಕಲೆ ಹಾಗೂ ಸಾಂಸ್ಕೃತಿಕ ಸಿನಿಮಾ’ ವಿಭಾಗದಲ್ಲಿ ಗಿರೀಶ್​ಕಾಸರವಳ್ಳಿ ನಿರ್ದೇಶನದ ‘ನಾದದ ನವನೀತ’ ಚಿತ್ರ ಪ್ರಶಸ್ತಿಗೆ ಭಾಜನವಾಗಿದ್ದು, ಇದು ಕನ್ನಡಿಗರಿಗೆ ಹೆಮ್ಮಯ ಸಂಗತಿ.

ಫಿಲ್ಮ್‌ ಚೇಂಬರ್ ವತಿಯಿಂದ ರಾಷ್ಟ್ರ ಪ್ರಶಸ್ತಿ ವಿಜೇತರನ್ನು ಸನ್ಮಾನಿಸಲಾಯಿತು. ಡೊಳ್ಳು ಸಿನಿಮಾ ನಿರ್ಮಾಪಕರಾದ ಪವನ್ ಒಡೆಯರ್ ಹಾಗೂ ಅಪೇಕ್ಷಾ ಪುರೋಹಿತ್, ನಿರ್ದೇಶಕ ಸಾಗರ್ ಪುರಾಣಿಕ್ ಹಾಗೂ ‘ತಲೆದಂಡ’ ಚಿತ್ರದ ನಿರ್ಮಾಪಕಿ ಡಾ. ಹೇಮಾಮಾಲಿನಿ ಕೃಪಾಕರ್ ಸೇರಿದಂತೆ

ಈ ಬಾರಿ ಪ್ರಶಸ್ತಿ ವಿಜೇತರಿಗೆ ಫಿಲ್ಮಂ ಚೇಂಬರ್ ಅಧ್ಯಕ್ಷರಾದ ಭಾ.ಮಾ.ಹರೀಶ್ ಸಾರಥ್ಯದಲ್ಲಿ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಫಿಲ್ಮಂ ಚೇಂಬರ್ ಪದಾಧಿಕಾರಿಗಳು, ಮಾಜಿ ಅಧ್ಯಕ್ಷ ಚಿನ್ನೇಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದರು.

Categories
ಸಿನಿ ಸುದ್ದಿ

ಅನ್ ಲಾಕ್ ರಾಘವ ಸಿನಿಮಾಗೆ ಮಿಲಿಂದ್, ರಚೆಲ್ ಡೇವಿಡ್ ನಾಯಕ-ನಾಯಕಿ…

ರಾಮಾ ರಾಮಾ ರೇ, ಒಂದಲ್ಲ ಎರಡಲ್ಲ ಸಿನಿಮಾ ಖ್ಯಾತಿಯ ನಿರ್ದೇಶಕ ಸತ್ಯ ಪ್ರಕಾಶ್ ನಿರ್ದೇಶನದ ಜೊತೆಗೆ ಸಿನಿಮಾ ನಿರ್ಮಾಣ, ವಿತರಣೆಯಲ್ಲೂ ಬ್ಯುಸಿಯಾಗಿರೋದು ಗೊತ್ತೇ ಇದೆ. ಸದಾ ಹೊಸ ಪ್ರತಿಭೆಗಳನ್ನು ಗುರುತಿಸುವಲ್ಲಿ ಮುಂಚೂಣಿಯಲ್ಲಿರುವ ಸತ್ಯ ಪ್ರಕಾಶ್ ಮತ್ತೊಬ್ಬ ನವನಟನಿಗೆ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.

ಅವರೇ ಮಿಲಿಂದ್. 2018ರಲ್ಲಿ ತೆರೆಕಂಡ ಅನಂತ್ ನಾಗ್ ಅಭಿನಯದ ವೀಕೆಂಡ್ ಸಿನಿಮಾದಲ್ಲಿ ನಟಿಸಿದ್ದ ಮಿಲಿಂದ್ ಗಿದು ಎರಡನೇ ಸಿನಿಮಾ.

ಈ ಚಿತ್ರದಲ್ಲಿ ಪೂರ್ಣ ಪ್ರಮಾಣದ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದು, ಪಾತ್ರಕ್ಕೆ ತಯಾರಿಯೂ ಭರ್ಜರಿಯಾಗಿ ನಡೆಯುತ್ತಿದೆ. ಮಿಲಿಂದ್ ಜೋಡಿಯಾಗಿ ಲವ್ ಮಾಕ್ಟೈಲ್ ಖ್ಯಾತಿಯ ರಚೆಲ್ ಡೇವಿಡ್ ತೆರೆ ಹಂಚಿಕೊಳ್ಳುತ್ತಿದ್ದಾರೆ.

ಇತ್ತೀಚೆಗೆ ಸತ್ಯ ಪ್ರಕಾಶ್ ನಿರ್ದೇಶನದಲ್ಲಿ ತೆರೆಕಂಡ ಮ್ಯಾನ್ ಆಫ್ ದಿ ಮ್ಯಾಚ್ ಸಿನಿಮಾ ಬಿಡುಗಡೆಯಾಗಿ ಉತ್ತಮ ವಿಮರ್ಶೆ ಪಡೆದುಕೊಂಡಿತ್ತು. ಈ ಚಿತ್ರವನ್ನು ನಿರ್ದೇಶನದ ಜೊತೆ ನಿರ್ಮಾಪಕ ಮಂಜುನಾಥ್ ಜೊತೆಗೂಡಿ

ಸತ್ಯ ಹಾಗೂ ಮಯೂರ ಪಿಕ್ಚರ್ಸ್ ಬ್ಯಾನರ್ ನಡಿ ನಿರ್ಮಾಣ ಕೂಡ ಮಾಡಿದ್ದರು. ಇದೀಗ ಮತ್ತೊಂದು ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದು, ಈ ಚಿತ್ರಕ್ಕೂ ಮಯೂರ ಪಿಕ್ಚರ್ಸ್ ಡಿ.ಮಂಜುನಾಥ್ ಕೈ ಜೋಡಿಸಿದ್ದಾರೆ.

ದೀಪಕ್ ಮಧುವನಹಳ್ಳಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಚಿತ್ರಕ್ಕೆ ಸತ್ಯ ಪ್ರಕಾಶ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ಮಾಣ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಭಾಗ್ಯರಾಜ್, ರಾಜು ಜೇಮ್ಸ್ ಬಾಂಡ್, ಕಳ್ಬೆಟ್ಟದ ದರೋಡೆಕೋರರು ಸಿನಿಮಾ ನಿರ್ದೇಶಿಸಿರುವ ದೀಪಕ್ ಮಧುವನಹಳ್ಳಿ ನಾಲ್ಕನೇ ಸಿನಿಮಾವಿದು. ರೋಮ್ಯಾಂಟಿಕ್ ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ, ಲವಿತ್ ಕ್ಯಾಮೆರಾ ವರ್ಕ್,ಅಜಯ್ ಸಂಕಲನ ಚಿತ್ರಕ್ಕಿರಲಿದೆ.

Categories
ಸಿನಿ ಸುದ್ದಿ

ರಂಗಸಮುದ್ರ ಶೂಟಿಂಗ್ ಕಂಪ್ಲೀಟ್: ಇದು ಹೊಸಬರ ಸಿನಿಮಾ- ರಂಗಾಯಣ ರಘು ಹೈಲೆಟ್…

ಹೊಯ್ಸಳ ಕ್ರಿಯೇಷನ್ಸ್ ನಿಂದ ಕೆ ಆರ್ ಹೊಯ್ಸಳ ನಿರ್ಮಿಸುತ್ತಿರುವ ‘ರಂಗಸಮುದ್ರ’ ಚಿತ್ರದ ಅಂತಿಮ ಹಂತದ ಚಿತ್ರೀಕರಣ ಮುಗಿಸಿದೆ. ಶೇ.85ರಷ್ಟು ರಾಜ್ಯದ ವಿವಿದೆಡೆಗಳಲ್ಲಿ ಚಿತ್ರೀಕರಣ ನಡೆದಿದೆ. ಬೆಂಗಳೂರು ಹೊರವಲಯದ ವಿದ್ಯಾನಗರದಲ್ಲಿ ಚಿತ್ರದ ಅಂತಿಮ ಹಂತದ ಪೂರಕ ಸನ್ನಿವೇಶಗಳನ್ನು ನಿರ್ದೇಶಕ ರಾಜಕುಮಾರ್ ಅಸ್ಕಿ ನಿರ್ದೇಶನದಲ್ಲಿ ಹಿರಿಯ ಛಾಯಾಗ್ರಾಹಕ ಗಿರಿ ಚಿತ್ರೀಕರಿಸಿದ್ದಾರೆ.

ರಂಗಾಯಣ ರಘು, ಸಂಪತ್ ರಾಜ್, ಕರಾವಳಿಯ ಕೆವಿಆರ್ ಮತ್ತು ದಿವ್ಯಾ ಗೌಡ, ಗುರುರಾಜ್ ಹೊಸಕೋಟೆ ಮೋಹನ್ ಜುನೇಜ, ಮೂಗು ಸುರೇಶ್, ಉಗ್ರಂ ಮಂಜು, ಸ್ಕಂದ ತೇಜಸ್, ಡ್ರಾಮಾ ಜ್ಯೂನಿಯರ್ ಮಹೇಂದ್ರ ಮತ್ತಿತರರು ಚಿತ್ರದ ಭೂಮಿಕೆಯಲ್ಲಿದ್ದಾರೆ. ಚಿತ್ರದ ಪ್ರಮುಖ ದೃಶ್ಯಕ್ಕೆ ಅಂತಿಮ ಹಂತದ ಚಿತ್ರೀಕರಣ ಕಳೆದ ಅಕ್ಟೋಬರ್ ನಲ್ಲಿ ನಡೆಯ ಬೇಕಿತ್ತು. ಇದಕ್ಕಾಗಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರನ್ನು ಚಿತ್ರತಂಡ ಸಂಪರ್ಕಿಸಿತ್ತು. ಆದರೆ ವಿಧಿ ಅವರನ್ನು ಹಠಾತ್ ಸೆಳೆದೊಯ್ದಿತ್ತು. ಈ ಘಟನೆಯಿಂದ ಚಿತ್ರತಂಡ ಶಾಕ್ ಗೆ ಒಳಗಾಗಿತ್ತು. ಇದೀಗ ಇನ್ನೊಬ್ಬರು ಸ್ಟಾರ್ ನಟರು ಆ ದೃಶ್ಯದಲ್ಲಿ ನಟಿಸಿದ್ದಾರೆ.

ಸದ್ಯಕ್ಕೆ ಅವರ ವಿವರಗಳನ್ನು ಸಸ್ಪೆನ್ಸ್ ಆಗಿ ಇಡಲಾಗಿದೆ. ಈ ವಿವರಗಳನ್ನು ಚಿತ್ರತಂಡ ಮುಂದಿನ ದಿನಗಳಲ್ಲಿ ಹಂಚಿಕೊಳ್ಳಲಿದೆ. ಚಿತ್ರಕ್ಕೆ ದೇಸೀ ಮೋಹನ್ ಸಂಗೀತ ನೀಡಿದ್ದಾರೆ. ಸಂಕಲನ ಶ್ರೀಕಾಂತ್, ವಾಗೀಶ್ ಚನ್ನಗಿರಿ ಗೀತ ಸಾಹಿತ್ಯ ನೀಡಿದ್ದಾರೆ.

ಚಿತ್ರದ ಹಾಡುಗಳಿಗೆ ಖ್ಯಾತ ಗಾಯಕರಾದ ಕೈಲಾಶ್ ಖೇರ್, ಕೀರವಾಣಿ, ವಿಜಯ್ ಪ್ರಕಾಶ್, ಸಂಜಿತ್ ಹೆಗ್ಡೆ ಧ್ವನಿಯಾಗಿದ್ದಾರೆ. ಶೀಘ್ರದಲ್ಲಿಯೇ ಚಿತ್ರದ ಟೀಸರ್ ಬಿಡುಗಡೆಯಾಗಲಿದೆ ಎಂಬುದು ನಿರ್ಮಾಪಕ ಕೆ ಆರ್ ಹೊಯ್ಸಳ ಮಾತು.

Categories
ಸಿನಿ ಸುದ್ದಿ

ಅವರು ಹೇಳಿದ್ದು 9 ಸುಳ್ಳು ಕಥೆಗಳು! ಇದು ಹೊಸಬರ ಚಿತ್ರ: ಟ್ರೇಲರ್ ಗೆ ಶಿವಣ್ಣ ಧ್ವನಿ…

ಶೃಂಗಾರ, ಹಾಸ್ಯ, ಕರುಣ ಸೇರಿದಂತೆ ಹೀಗೆ ನವರಸಗಳಿದೆ ಇಂತಹ ನವರಸಗಳನ್ನು ಆಧರಿಸಿ “9 ಸುಳ್ಳು ಕಥೆಗಳು” ಎಂಬ ಚಿತ್ರ ನಿರ್ದೇಶನ ಮಾಡಿದ್ದಾರೆ ಮಂಜುನಾಥ್ ಮುನಿಯಪ್ಪ.

ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ನಡೆಯಿತು. ಟ್ರೇಲರ್ ಗೆ‌ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಧ್ವನಿ ನೀಡಿರುವುದು ಚಿತ್ರದ ವಿಶೇಷ. ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಸದಾಶಿವ ಶೆಣೈ, ಪತ್ರಕರ್ತ, ನಿರ್ಮಾಪಕ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್ ಮುಖ್ಯ ಅತಿಥಿಗಳಾಗಿ ಆಗಮಿಸಿ ಟ್ರೇಲರ್ ಹಾಗೂ ಹಾಡುಗಳನ್ನು ಬಿಡುಗಡೆ ಮಾಡಿದರು.

ಮೂಲತಃ ರಂಗಭೂಮಿಯಲ್ಲಿ ಸಾಕಷ್ಟು ವರ್ಷಗಳಿಂದ ಅನುಭವವಿರುವ ಮಂಜುನಾಥ್ ಮುನಿಯಪ್ಪ ನಿರ್ದೇಶಿಸಿ, ನಿರ್ಮಿಸಿರುವ ಮೊದಲ ಚಿತ್ರವಿದು.

ಇದೊಂದು ನೈಜ ಘಟನೆ ಆಧಾರಿತ ಚಿತ್ರ. ಕೆಲವು ಪುಸ್ತಕಗಳ ಹಾಗೂ ಸಣ್ಣಕಥೆಗಳನ್ನು ಓದಿದ್ದೀನಿ‌. ನವರಸಗಳನ್ನು ಆಧರಿಸಿ ಈ ಚಿತ್ರದ ಕಥೆ ಮಾಡಿದೆ‌‌. ನಂತರ ನಿರ್ಮಾಪಕರಿಗೆ ಹುಡುಕಾಡಿದೆ. ಯಾರು ಸಿಗಲಿಲ್ಲ.
ನನ್ನ ಸ್ನೇಹಿತ ಸೂರ್ಯನಾರಾಯಣ್ ಮೊದಲು ದೊಡ್ಡ ಮೊತ್ತದ ಹಣ ನೀಡಿ ಈ ಚಿತ್ರಕ್ಕೆ ಚಾಲನೆ ನೀಡಿದರು. ನಂತರ ಸಾಕಷ್ಟು ಗೆಳೆಯರು ನನ್ನ ಜೊತೆಯಾದರು.

ಪ್ರಮೋದ್ ಶೆಟ್ಟಿ, ವಿನಾಯಕ ಜೋಶಿ, ಕರಿ ಸುಬ್ಬು, ಸುಕೃತ ವಾಗ್ಲೆ, ಲಕ್ಷ್ಮೀ ಚಂದ್ರಶೇಖರ್ ಸೇರಿದಂತೆ ನೂರಕ್ಕೂ ಅಧಿಕ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ‌. ಶಿವರಾಜಕುಮಾರ್ ಅವರು ಟ್ರೇಲರ್ ಗೆ ಧ್ವನಿ ನೀಡಿದ್ದಾರೆ. ಪ್ರವೀಣ್ – ಪ್ರದೀಪ್ ಸಂಗೀತ ನಿರ್ದೇಶನದಲ್ಲಿ ಆರು ಹಾಡುಗಳು ಅದ್ಭುತವಾಗಿ ಮೂಡಿಬಂದಿದೆ ಎಂದು ನಿರ್ದೇಶಕ ಮಂಜುನಾಥ್ ಮುನಿಯಪ್ಪ ಚಿತ್ರದ ಬಗ್ಗೆ ವಿವರಣೆ ನೀಡಿದರು.

ಚಿತ್ರದಲ್ಲಿ ಆರು ಹಾಡುಗಳಿವೆ. ಸಂತ ಶಿಶುನಾಳ ಶರೀಫರ ಗೀತೆಯೊಂದನ್ನು ಬಳಸಿಕೊಂಡಿದ್ದೇವೆ. ವಿಕ್ರಮ್ ವಸಿಷ್ಠ, ಸತೀಶ್ ಬೆಲ್ಲೂರು ಹಾಗೂ ಕಿರಣ್ ವಿಪ್ರ ಹಾಡುಗಳನ್ನು ಬರೆದಿದ್ದಾರೆ. ವಿಜಯ್ ಪ್ರಕಾಶ್, ರಾಜೇಶ್ ಕೃಷ್ಣನ್, ವಾರಿಜಾಶ್ರೀ, ಶಶಿಧರ್ ಕೋಟೆ, ಚಿಂತನ್ ವಿಕಾಸ್ ಸೇರಿದಂತೆ ಪ್ರಸಿದ್ದ ಗಾಯಕರು ಈ ಹಾಡುಗಳನ್ನು ಹಾಡಿದ್ದಾರೆ‌.

ನಟ ಹಾಗೂ ನಿರ್ದೇಶಕ ರಿಷಭ್ ಶೆಟ್ಟಿ ಇದೇ ಮೊದಲ ಬಾರಿಗೆ ನಮ್ಮ ಚಿತ್ರದ ಕನ್ನಡದ ಹಾಡೊಂದನ್ನು ಹಾಡಿದ್ದಾರೆ ಎಂದು ಸಂಗೀತ ನಿರ್ದೇಶಕರಾದ ಪ್ರವೀಣ್ & ಪ್ರದೀಪ್ ಸಂಗೀತದ ಬಗ್ಗೆ ಮಾಹಿತಿ ನೀಡಿದರು.

ನಾನು ಸಾಹಿತ್ಯ ಪ್ರೇಮಿಯಾಗಿ ಕಾಣಿಸಿಕೊಂಡಿದ್ದೀನಿ ಎಂದರು ನಟ ವಿನಾಯಕ ಜೋಶಿ.‌ ನಿರ್ದೇಶಕರು ನನ್ನ ಬಹುಕಾಲದ ಗೆಳೆಯ. ಉತ್ತಮ ಪಾತ್ರಕೊಟ್ಟಿದ್ದಾರೆ ಎಂದು ಪ್ರಮೋದ್ ಶೆಟ್ಟಿ ಹೇಳಿದರು. ಕರಿಸುಬ್ಬು ಮತ್ತು ಕೃಷ್ಣ ಹೆಬ್ಬಾಳೆ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು. ಈ ಚಿತ್ರಕ್ಕಾಗಿ
ಮೈಲಿಗಟ್ಟಲೆ ಓಡಿದ ಅನುಭವವನ್ನು ಹಿರಿಯ ನಟಿ ಲಕ್ಷ್ಮೀ ಚಂದ್ರಶೇಖರ್ ಹಂಚಿಕೊಂಡರು.

ಪರಮೇಶ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಶ್ರೀಕಾಂತ್ ಅವರ ಸಂಕಲನವಿದೆ.

ಪ್ರಮೋದ್ ಶೆಟ್ಟಿ, ವಿನಾಯಕ ಜೋಶಿ, ಕೃಷ್ಣ ಹೆಬ್ಬಾಳೆ, ಸಕೃತ ವಾಗ್ಲೆ, ಕರಿಸುಬ್ಬು, ನಂದಗೋಪಾಲ್, ಲಕ್ಷ್ಮೀ ಚಂದ್ರಶೇಖರ್, ಶ್ರೀನಿವಾಸಪ್ರಭು, ಸುನೇತ್ರ ಪಂಡಿತ್, ಸುಪ್ರಿತಾ ಶೆಟ್ಟಿ, ಸುಂದರ್ ವೀಣಾ, ವೀಳ್ಯಾ ರಾಘವೇಂದ್ರ ಸೇರಿದಂತೆ ನೂರಕ್ಕೂ ಅಧಿಕ ಕಲಾವಿದರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Categories
ಸಿನಿ ಸುದ್ದಿ

ನೀನು ಬಗೆಹರಿಯದ ಹಾಡು- ಇದು‌ ಗಾಳಿಪಟದ ಹಾಡು…

ರಮೇಶ್‌ ರೆಡ್ಡಿ ಅವರ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಗಾಳಿಪಟ 2” ಚಿತ್ರ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಚಿತ್ರ ಬಿಡುಗಡೆಗೆ ಅಭಿಮಾನಿ ಸಮೂಹ ಕಾತುರದಿಂದ ಕಾಯುತ್ತಿದೆ.

ಈ ಚಿತ್ರಕ್ಕಾಗಿ ಜಯಂತ ಕಾಯ್ಕಿಣಿ ಅವರು ಬರೆದಿರುವ “ನೀನು ಬಗೆಹರಿಯದ ಹಾಡು” ಎಂಬ ಗೀತೆ ಇತ್ತೀಚೆಗೆ ಬಿಡುಗಡೆಯಾಗಿದೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಹಾಡನ್ನು ಖ್ಯಾತ ಗಾಯಕ ನಿಹಾಲ್ ತಾವ್ರೋ ಹಾಡಿದ್ದಾರೆ.
ಪವನ್ ಕುಮಾರ್ ಹಾಗೂ ಶರ್ಮಿಳಾ ಮಾಂಡ್ರೆ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ. ಕುದುರೆಮುಖದ ಸುಂದರ ಪರಿಸರದಲ್ಲಿ ಈ ಹಾಡಿನ‌ ಚಿತ್ರೀಕರಣ ನಡೆದಿದೆ. ಧನು ನೃತ್ಯ ನಿರ್ದೇಶನ ಮಾಡಿದ್ದಾರೆ.

ಸದ್ಯದಲ್ಲೇ ಟೀಸರ್, ಟ್ರೇಲರ್ ಹಾಗೂ ಇನ್ನೂ ಎರಡು ಹಾಡುಗಳ ಬಿಡುಗಡೆಯಾಗಲಿದೆ. ಆಗಸ್ಟ್ 12 ಕ್ಕೆ ಚಿತ್ರ ತೆರೆಗೆ ಬರಲಿದೆ.

ಗೋಲ್ಡನ್ ಸ್ಟಾರ್ ಗಣೇಶ್, ದಿಗಂತ್, ಪವನ್ ಕುಮಾರ್, ವೈಭವಿ ಶಾಂಡಿಲ್ಯ, ಶರ್ಮಿಳಾ ಮಾಂಡ್ರೆ, ಅನಂತನಾಗ್, ಸುಧಾ ಬೆಳವಾಡಿ, ಬುಲೆಟ್ ಪ್ರಕಾಶ್, ಪದ್ಮಜಾರಾವ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಸಂತೋಷ್ ರೈ ಪಾತಾಜೆ ಈ ಚಿತ್ರದ ಛಾಯಾಗ್ರಹಕರು.

Categories
ಸಿನಿ ಸುದ್ದಿ

ಲಂಕಾಸುರ ಟೈಟಲ್ ಟ್ರ್ಯಾಕ್ ಗೆ ಭರ್ಜರಿ ಮೆಚ್ಚುಗೆ…

ವಿನೋದ್ ಪ್ರಭಾಕರ್ ನಾಯಕನಾಗಿ ನಟಿಸುವುದರೊಂದಿಗೆ, ನಿರ್ಮಾಣವನ್ನು ಮಾಡುತ್ತಿರುವ ಚಿತ್ರ “ಲಂಕಾಸುರ”. ಇದು ಟೈಗರ್ ಟಾಕೀಸ್ ಸಂಸ್ಥೆಯ ಮೊದಲ ಚಿತ್ರವೂ ಹೌದು. ನಿಶಾ ವಿನೋದ್ ಪ್ರಭಾಕರ್ ಈ ಚಿತ್ರದ ನಿರ್ಮಾಪಕರು. ಪ್ರಮೋದ್ ಕುಮಾರ್ ನಿರ್ದೇಶಕರು.

“ಅಣ್ಣ ಗನ್ ಹಿಡ್ದು ನಿಂತ ಅಂದ್ರೆ ಭಸ್ಮಾಸುರ,
ಲಾಂಗ್ ಹಿಡ್ದು ನಡ್ಕೊಂಡು ಬಂದ್ರೆ ಲಂಕಾಸುರ.
ಲಂಕಾಸುರ ಲಂಕಾಸುರ .. ಎಂಬ ಟೈಟಲ್ ಟ್ರ್ಯಾಕ್ A2 ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ.

ಸಾಕಷ್ಟು ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಚೇತನ್ ಕುಮಾರ್ ಬರೆದಿರುವ ಈ ಹಾಡನ್ನು ವಿಜೇತ್ ಕೃಷ್ಣ ಅವರೆ ಹಾಡಿದ್ದಾರೆ. ಜೋಯೆಲ್ ಶಾಸ್ತ್ರಿ ಗಿಟಾರ್ ನುಡಿಸಿದ್ದಾರೆ.

ಮೋಹನ್ ಕುಮಾರ್ ನೃತ್ಯ ನಿರ್ದೇಶನ ಮಾಡಿರುವ ಈ ಹಾಡಿನಲ್ಲಿ ನಾಯಕ ವಿನೋದ್ ಪ್ರಭಾಕರ್ ಅಭಿನಯಿಸಿದ್ದಾರೆ.
ಹೆಚ್.ಎಂ.ಟಿ, ಟೊರಿನೊ ಫ್ಯಾಕ್ಟರಿ ಹಾಗೂ ಮಲ್ಲೇಶ್ವರಂ ದೋಬಿ ಘಾಟ್ ನಲ್ಲಿ ನಿರ್ಮಿಸಲಾಗಿದ್ದ ಆರು ಅದ್ದೂರಿ ಸೆಟ್ ಗಳಲ್ಲಿ ಈ ಹಾಡಿನ ಚಿತ್ರೀಕರಣ ನಡೆದಿದೆ.

Categories
ಸಿನಿ ಸುದ್ದಿ

ಅನ್ ಲಾಕ್ ರಾಘವ: ಟೈಟಲ್ ಅನಾವರಣ ಮಾಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್…

ರಾಮ ರಾಮ ರೇ ನಿರ್ದೇಶಕ ಸತ್ಯಪ್ರಕಾಶ್ ಹೊಸ ಸಿನಿಮಾ ಅನೌನ್ಸ್ ಮಾಡಿದ್ದಾರೆ. ಆ ಚಿತ್ರಕ್ಕೆ ಅನ್ ಲಾಕ್ ರಾಘವ ಎಂದು ಹೆಸರಿಡಲಾಗಿದೆ. ಈ ಶೀರ್ಷಿಕೆಯನ್ನು ಅಶ್ವಿನಿ ಪುನೀತ್ ರಾಜ್ ಕುಮಾರ್ ಅನಾವರಣಗೊಳಿಸಿದ್ದಾರೆ

ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ, ‘ ರಾಮಾ ರಾಮಾ ರೇ’, ‘ಒಂದಲ್ಲಾ ಎರಡಲ್ಲಾ’, ‘ಮ್ಯಾನ್ ಆಫ್ ದಿ ಮ್ಯಾಚ್’ನಂತಹ ಅಪರೂಪದ ಸಿನಿಮಾ ಕಥೆ ಹೇಳಿ ಸಕ್ಸಸ್ ಕಂಡಿರುವ ನಿರ್ದೇಶಕ ಸತ್ಯಪ್ರಕಾಶ್ ನಿರ್ಮಾಣದ ಹೊಸ ಸಿನಿಮಾದ ಟೈಟಲ್ ನ್ನು ರಿವೀಲ್ ಆಗಿದೆ. ಸತ್ಯ ಮತ್ತು ಮಯೂರ ಪಿಕ್ಚರ್ಸ್ ವತಿಯಿಂದ ನಿರ್ಮಾಣವಾಗುತ್ತಿರುವ ‘ಅನ್ ಲಾಕ್ ರಾಘವ’ ಸಿನಿಮಾದ ಶೀರ್ಷಿಕೆ ಹಾಗೂ ಫಸ್ಟ್ ಲುಕ್ ನ್ನು ಶ್ರೀಮತಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ನಿರ್ಮಾಪಕ ಸತ್ಯಪ್ರಕಾಶ್ ಮಾತನಾಡಿ, ಇಂಡಸ್ಟ್ರೀಗೆ ಬಂದಾಗ ದೊಡ್ಡ ಟೀಂ ಕಟ್ಟಬೇಕು ಎಂಬ ಆಸೆ ಇತ್ತು. ದೀಪಕ್ ಮಧುವನಹಳ್ಳಿ ನಿರ್ದೇಶನ ಮಾಡ್ತಿರುವ ಈ ಸಿನಿಮಾ ನಿಜವಾದ ಕಮರ್ಷಿಯಲ್ ಸಿನಿಮಾ. ತುಂಬಾ ಹೊಸ ಪ್ರೆಸೆಂಟೇಷನ್ ನಲ್ಲಿ ಸಿನಿಮಾ ಮಾಡಿದ್ದೇವೆ. ಇಡೀ ಸಿನಿಮಾ ರೋಮ್ಯಾಂಟಿಕ್ ಕಾಮಿಡಿ ಜರ್ನಿ ಇರುತ್ತದೆ. ಮೂರು ರೀತಿ ಕಾಮಿಡಿ ಇರುತ್ತದೆ. ಪಾತ್ರ ಏನು ಮಾತಾಡ್ತಾರೆ ಅಂತಾ ಗೊತ್ತಾಗಲ್ಲ. ಆದ್ರೆ ಪ್ರೇಕ್ಷಕ ನಗ್ತಾರೆ. ಅನೂಪ್ ಸೀಳಿನ್ ಸರ್ ಅದ್ಭುತ ಮ್ಯೂಸಿಕ್ ಕೊಟ್ಟಿದ್ದಾರೆ ಎಂದರು.

‘ಭಾಗ್ಯರಾಜ್’, ‘ಕಳ್ಬೆಟ್ಟದ ದರೋಡೆಕೋರರು’, ‘ರಾಜು ಜೇಮ್ಸ್ ಬಾಂಡ್’ ಚಿತ್ರಗಳನ್ನು ನಿರ್ದೇಶಿಸಿರುವ ದೀಪಕ್ ಮಧುವನಹಳ್ಳಿ ನಿರ್ದೇಶಿಸುತ್ತಿರುವ ಈ ಸಿನಿಮಾಗೆ ಡಿ ಸತ್ಯಪ್ರಕಾಶ್ ಕತೆ-ಚಿತ್ರಕತೆ-ಸಂಭಾಷಣೆ ಬರೆದು ನಿರ್ಮಾಣದ ಜವಾಬ್ದಾರಿ ಕೂಡ ಹೊತ್ತುಕೊಂಡಿದ್ದಾರೆ. ‘ವೀಕೆಂಡ್’ ಸಿನಿಮಾ ಮೂಲಕ ಭರವಸೆ ಮೂಡಿಸಿರುವ ನವನಟ ಮಿಲಿಂದ್ ನಾಯಕನಾಗಿ ಹಾಗೂ ‘ಲವ್ ಮಾಕ್ಟೇಲ್ – 2’ ಚಿತ್ರದ ರೇಚಲ್ ಡೇವಿಡ್ ನಾಯಕಿಯಾಗಿ ಬಣ್ಣ ಹಚ್ಚಿದ್ದು, ಸಾಧುಕೋಕಿಲ, ಅವಿನಾಶ್, ರಮೇಶ್ ಭಟ್, ಸುಂದರ್ ವೀಣಾ, ಧರ್ಮಣ್ಣ ಕಡೂರು, ಭೂಮಿಶೆಟ್ಟಿ ಮೊದಲಾದ ಕಲಾವಿದರು ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾಕ್ಕೆ ಅನೂಪ್ ಸೀಳಿನ್ ಸಂಗೀತ ನೀಡುತ್ತಿದ್ದು, ಲವಿತ್ ಛಾಯಾಗ್ರಹಣ ಹಾಗೂ ಅಜಯ್ ಕುಮಾರ್ ಸಂಕಲನವಿದೆ.

ಚಿತ್ರಕ್ಕೆ ಲವಿತ್ ಛಾಯಾಗ್ರಹಣವಿದೆ. ಅನೂಪ್ ಸೀಳಿನ್
ಸಂಗೀತ, ಅಜಯ್ ಕುಮಾರ್ ಸಂಕಲನವಿದೆ.
ಮಿಲಿಂದ್, ರೇಚಲ್ ಡೇವಿಡ್, ಸಾಧುಕೋಕಿಲ, ಅವಿನಾಶ್, ರಮೇಶ್ ಭಟ್, ಸುಂದರ್ ವೀಣಾ, ಧರ್ಮಣ್ಣ ಕಡೂರು, ಭೂಮಿಶೆಟ್ಟಿ ಹಾಗೂ ಮತ್ತಿತರರು ಚಿತ್ರದಲ್ಲಿದ್ದಾರೆ.

Categories
ಸಿನಿ ಸುದ್ದಿ

ತಲೆದಂಡ ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ: ಸಂಚಾರಿ ವಿಜಯ್ ಗೆ ಪ್ರಶಸ್ತಿ ಅರ್ಪಿಸಿದ ನಿರ್ದೇಶಕ….

68 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು, 2020ನೇ ಸಾಲಿನಲ್ಲಿ ಬಿಡುಗಡೆಯಾದ ಸಿನಿಮಾಗಳ ಪೈಕಿ ತಮಿಳಿನ ಸೂರಾರೈ ಪೋಟ್ರು ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ಭಾಜನವಾಗಿದೆ. ಕನ್ನಡದ ತಲೆದಂಡ, ಡೊಳ್ಳು , ನಾದದ ನವನೀತ ಮತ್ತು ತುಳು ಭಾಷೆಯ ಜೀಟಿಗೆ ಸಿನಿಮಾಗಳು ರಜತ ಕಮಲ ಪಡದುಕೊಂಡಿವೆ.

ಹಾಗೆ ನೋಡಿದರೆ ಬಾಲಿವುಡ್ ಸಿನಿಮಾಗಳೇ ಹೆಚ್ಚು ಈ ರಾಷ್ಟ್ರೀಯ ಪ್ರಶಸ್ತಿಗಳ ಸಾಲಿನಲ್ಲಿ‌ ಮುಂಚೂಣಿಯಲ್ಲಿರುತ್ತಿದ್ದವು. ಈ ಬಾರಿ ಸೌತ್ ಇಂಡಿಯನ್ ಸಿನಿಮಾಗಳೇ ಹೆಚ್ಚು ಪ್ರಶಸ್ತಿಗಳನ್ನು ಬಾಚಿವೆ.
ನಟ ಸಂಚಾರಿ ವಿಜಯ್ ಅಭಿನಯದ ಪ್ರವೀಣ್ ಕೃಪಾಕರ್ ನಿರ್ದೇಶನದ ತಲೆದಂಡ ಚಿತ್ರವನ್ನು ಪರಿಸರ ಸಂರಕ್ಷಣೆ ಸಂಬಂಧಿತ ಅತ್ಯುತ್ತಮ ಚಿತ್ರ ಪ್ರಶಸ್ತಿ ಎಂದು ಪರಿಗಣಿಸಲಾಗಿದೆ. ಪ್ರಶಸ್ತಿಯು ರಜತ ಕಮಲ ಮತ್ತು 1.50 ಲಕ್ಷ ನಗದು ಒಳಗೊಂಡಿದೆ. ಸಾಗರ್ ಪುರಾಣಿಕ್ ನಿರ್ದೇಶನದ ಡೊಳ್ಳು ಚಿತ್ರವೂ ಅತ್ಯುತ್ತಮ ಕನ್ನಡ ಚಿತ್ರ ವಿಭಾಗದಡಿ ರಜತ ಕಮಲಕ್ಕೆ ಭಾಜನವಾಗಿದೆ. ಪ್ರಶಸ್ತಿ ಒಂದುಬಲಕ್ಷ ನಗದು ಒಳಗೊಂಡಿದೆ. ಅತ್ತ್ಯುತ್ತಮ ಧ್ವನಿಗ್ರಹಣಕ್ಕೂ ಚಿತ್ರ ಪ್ರಶಸ್ತಿ ಪಡೆದಿದೆ.

ಸಂತೋಷ್ ಮಾಡ ನಿರ್ದೇಶನದ ತುಳು ಭಾಷೆಯ ಜೀಟಿಗೆ ಸಿನಿಮಾಗೂ ಪ್ರಶಸ್ತಿ ಬಂದಿದ್ದು, ಅತ್ಯುತ್ತಮ ಕಲರ, ಸಂಸ್ಕೃತಿ ಆಧಾರಿತ ಚಿತ್ರ ವಿಭಾಗದಡಿ ಗಿರೀಶ್ ಕಾಸರವಳ್ಳಿ ನಿರ್ದೇಶನದ ನಾದದ ನವನೀತ ಸಿನಿಮಾಗೆ ಪ್ರಶಸ್ತಿ ಲಭಿಸಿದೆ.

ಡೊಳ್ಳು ಸಿನಿಮಾಗೆ ಪ್ರಶಸ್ತಿ ಪಡೆದ ನಿರ್ದೇಶಕ ಸಾಗರ್ ಪುರಾಣಿಕ್, ಇಂತಹ ವಿಷಯದ ಸಿನಿಮಾ ನಿರ್ಮಾಣ ಮಾಡಲು‌ ಪವನ್ ಒಡೆಯರ್ ಮುಂದಾಗಿದ್ದರಿಂದಲೇ ಇದು ಸಾಧ್ಯವಾಗಿದೆ. ಜಾಗತೀಕರಣದ ಪರಿಣಾಮವನ್ನು ಈ ಸಿನಿಮಾ‌ ಮೂಲಕ ತೋರಿಸಿದ್ದೇವೆ. ಪ್ರಶಸ್ತಿಗೆ ಆಯ್ಕೆ ಮಾಡಿದ ಎಲ್ಲರಿಗೂ ಧನ್ಯವಾದ ಎಂದಿದ್ದಾರೆ.


ತಲೆದಂಡ ಸಿನಿಮಾ ನಿರ್ದೇಶಕ ಪ್ರವೀಣ್ ಕೃಪಾಕರ್, ನಾನು ವೈಯಕ್ತಿಕವಾಗಿ ಸಂಚಾರಿ ವಿಜಯ್ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಸಿಗಲಿದೆ ಎಂಬ ನಿರೀಕ್ಷೆಯಲ್ಲಿದ್ದೆ. ಶೋಲಿಗ ಬುಡಕಟ್ಟು ಜನಾಂಗಕ್ಕೆ ಸೇರಿದ ಅರೆಬುದ್ಧಿ ಮಾಂದ್ಯ ಕುನ್ನ ಎಂಬ ಪಾತ್ರದಲ್ಲಿ ವಿಜಯ್ ಅದ್ಭುತವಾಗಿ ನಟಿಸಿದ್ದರು. ಹಾಗಾಗಿ ಈ ಪ್ರಶಸ್ತಿಯನ್ನು ವಿಜಯ್ ಅವರಿಗೆ ಅರ್ಪಿಸುತ್ತೇನೆ ಎಂದಿದ್ದಾರೆ.

error: Content is protected !!