Categories
ಸಿನಿ ಸುದ್ದಿ

ಮಹಾಶರಣರ ಜೀವನಾಧರಿತ ವ್ಯೋಮಕಾಯ ಸಿದ್ಧ ಶ್ರೀ ಅಲ್ಲಮಪ್ರಭು ಟ್ರೇಲರ್ ಬಿಡುಗಡೆ…

ಹನ್ನೆರಡನೆ ಶತಮಾನದ ಮಹಾಶರಣ ಶ್ರೀ ಅಲ್ಲಮಪ್ರಭು ಅವರ ಜೀವನಾಧಾರಿತ ವ್ಯೋಮಕಾಯ ಸಿದ್ದ
“ಶ್ರೀ ಅಲ್ಲಮಪ್ರಭು” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ನಟ ನೆನಪರಲಿ ಪ್ರೇಮ್ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್ ಇದಕ್ಕೆ ಸಾಕ್ಷಿಯಾದರು.

ನನಗೂ ಚಿತ್ರರಂಗಕ್ಕೂ ಸಂಬಂಧವಿಲ್ಲ. ನನ್ನ ಕ್ಷೇತ್ರವೇ ಬೇರೆ. ಆದರೂ ನನ್ನನ್ನು ಏಕೆ ಕರೆದರೂ ಎಂದು ಯೋಚಿಸುತ್ತಿದೆ? ಅವರು ನನ್ನ ಮೇಲಿಟ್ಟಿರುವ ಪ್ರೀತಿ ಅಪಾರ. ಹಾಗಾಗಿ ಬಂದಿದ್ದೀನಿ. ಕಮರ್ಷಿಯಲ್ ಚಿತ್ರಗಳ ಪೈಪೋಟಿ ಇರುವ ಈ ಸಮಯದಲ್ಲಿ ಇಂತಹ ಕಥೆ ಆಯ್ದುಕೊಂಡಿರುವ ನಿರ್ಮಾಪಕರಿಗೆ ಮೊದಲು ಧನ್ಯವಾದ ತಿಳಿಸಬೇಕು. ವೀರಭೂಮಿ, ಧರ್ಮಭೂಮಿ, ಪುಣ್ಯಭೂಮಿ ಅಂತ ಬೇರೆ ಯಾವ ದೇಶಕ್ಕೂ ಹೆಸರಿಲ್ಲ.‌ ಆ ಎಲ್ಲಾ ಹೆಸರುಗಳಿರುವುದು ನಮ್ಮ ಭಾರತಕ್ಕೆ ಮಾತ್ರ. ಭಾರತಕ್ಕೆ ಈ ರೀತಿಯ ಹೆಸರು ಬರಲು ಸಾಕಷ್ಟು ಜನ ಸಾಧು-ಸಂತರು ಇಲ್ಲಿ ಅವತರಿಸುವುದೇ ಕಾರಣ. ಅಂತಹ ಮಹಾಪುರುಷರಾದ ಶ್ರೀಅಲ್ಲಮಪ್ರಭುಗಳ ಕುರಿತಾದ ಈ ಚಿತ್ರಕ್ಕೆ ಶುಭವಾಗಲಿ ಎಂದು ಪ್ರಮೋದ್ ಮುತಾಲಿಕ್ ಹಾರೈಸಿದರು.

ನಮ್ಮದು ಪುಣ್ಯಭೂಮಿ. ಹಿಂದೆ ಎಷ್ಟೋ ಜನ ನಮ್ಮ ದೇಶದ ಸಂಪತ್ತು ಲೂಟಿ ಮಾಡಿದರೂ, ಇನ್ನೂ ನಮ್ಮಲ್ಲಿ ಸಂಪತ್ತು ಇದೆ ಅಂದರೆ ಅದಕ್ಕೆ ಈ ಸಾಧು-ಸಂತರ ಆಶೀರ್ವಾದವೇ ಕಾರಣ. ಮಹಾಶರಣ ಅಲ್ಲಮಪ್ರಭುಗಳ ಕುರಿತಾದ ಈ ಚಿತ್ರಕ್ಕೆ ಒಳಿತಾಗಲಿ ಎಂದರು ನಟ ನೆನಪಿರಲಿ ಪ್ರೇಮ್.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಅವರು ಚಿತ್ರಕ್ಕೆ ಶುಭ ಕೋರಿದರು.

ಅಲ್ಲಮಪ್ರಭುಗಳು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ಬಳಿಗಾವಿಯಲ್ಲಿ. ಆದರೆ ಅವರ ಕಾರ್ಯಕ್ಷೇತ್ರ ಬಾಗಲಕೋಟೆ ಬಳಿಯ ತೇರಾದಾಳ. ಚಾಮರಸ ಕವಿ ಬರೆದಿರುವ ಪ್ರಭುಲಿಂಗ ಲೀಲೆ ಆಧರಿಸಿ ಈ ಚಿತ್ರ ಮಾಡಿದ್ದೀವಿ.
ಹನ್ನೆರಡನೇ ಶತಮಾನದಲ್ಲಿ ಅಲ್ಲಮಪ್ರಭುಗಳು ಮಾಡಿದ ಸಾಧನೆಗಳು ಅನಂತ. ಅನುಭವ ಮಂಟಪದ ಮೊದಲ ಆಧ್ಯಕ್ಷರು ಅವರು. ಅಂತಹ ಮಹಾಶರಣರ ಬಗ್ಗೆ ಸಿನಿಮಾ ಮಾಡಿರುವುದು ನಮ್ಮ ಪುಣ್ಯ ಎಂದು ತಿಳಿಸಿದ ನಿರ್ಮಾಪಕ ಮಾಧವಾನಂದ ಅವರು, ಮಹಾವೀರ ಪ್ರಭು ಅವರು ನಿರ್ಮಾಣಕ್ಕೆ ನನಗೆ ಜೊತೆಯಾಗಿದ್ದಾರೆ ಎಂದರು.

ನಾನು ಸುಮಾರು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸಹಾಯಕ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದೇನೆ. ನಿರ್ದೇಶಕನಾಗಿ ಇದು ಮೊದಲ ಚಿತ್ರ. ಹನ್ನೆರಡನೆಯ ಶತಮಾನದ ಕಾಲಘಟ್ಟದಲ್ಲಿ ನಡೆಯುವ ಕಥೆಯನ್ನು ತೆರೆಗೆ ತರುವುದು ಅಷ್ಟು ಸುಲಭವಲ್ಲ. ಆ ಪ್ರಯತ್ನ ಮಾಡಿದ್ದೇವೆ. ತೇರದಾಳ, ಬನವಾಸಿ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆಸಿದ್ದೇವೆ ಎನ್ನುತ್ತಾರೆ ನಿರ್ದೇಶಕ ಶರಣ್ ಗದ್ವಾಲ್.

ಸಂಕಲನಕಾರ‌ ಕೆಂಪರಾಜ್, ಛಾಯಾಗ್ರಾಹಕ ಗಿರಿ ಅವರು ಈ ಚಿತ್ರದ ಕುರಿತು ಮಾತನಾಡಿದರು.

ಸಚಿನ್ ಸುವರ್ಣ, ನೀನಾಸಂ ಅಶ್ವಥ್, ರಮೇಶ್ ಪಂಡಿತ್, ಶೃಂಗೇರಿ ರಾಮಣ್ಣ, ಗಣೇಶ್ ರಾವ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Categories
ಸಿನಿ ಸುದ್ದಿ

ಫಿಲ್ಮ್ ಚೇಂಬರ್ ಗೆ ನೂತನ ಅಧ್ಯಕ್ಷರಾಗಿ ಭಾಮ.ಹರೀಶ್ ಆಯ್ಕೆ: ಸಾ.ರಾ.ಗೋವಿಂದು ಬಣಕ್ಕೆ ಸೋಲು…

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ 64 ನೇ ವಾರ್ಷಿಕ‌ ಚುನಾವಣೆ ನಡೆದಿದ್ದು, ಭಾ.ಮ.ಹರಿಶ್ ಬಣಕ್ಕೆ ಭರ್ಜರಿ ಗೆಲುವು ಲಭಿಸಿದೆ.

ಶನಿವಾರ ಮಧ್ಯಾಹ್ನ 2 ಗಂಟೆಗೆ ಚುನಾವಣೆಯ ಮತದಾನ ಪ್ರಕ್ರಿಯೆ ಶುರುವಾಗಿ ಆರು ಗಂಟೆಯವರೆಗೆ ನಡೆಯಿತು. ಈ ಬಾರಿ ಶೇ. 62 ರಷ್ಟು ಮತದಾನ ನಡೆಯಿತು. ಒಟ್ಟು
1176 ಮತದಾನವಾಗಿದೆ. ಆ ಪೈಕಿ
796 ನಿರ್ಮಾಪಕರು, 301 ವಿತರಕರು, 679 ಪ್ರದರ್ಶರು ಈ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಭಾ. ಮ. ಹರೀಶ್ ಅವರು ಅತೀ ಹೆಚ್ಚು 781 ಮತಗಳನ್ನು‌ ಪಡೆದು ಭರ್ಜರಿ ಗೆಲುವು ಸಾಧಿಸಿದ್ದಾರೆ. ಮತ್ತೊಮ್ಮೆ ಅಧ್ಯಕ್ಷ ಸ್ಥಾನ ಬಯಸಿ ಸ್ಪರ್ಧಿಸಿದ್ದ
ಸಾ.ರಾ.ಗೋವಿಂದು ಅವರು, 378 ಮತದಾನಗಳನ್ನು ಪಡೆದು ಸೋಲು ಅನುಭವಿಸಿದ್ದಾರೆ.


ಉಪಾಧ್ಯಕ್ಷ ರಾಗಿ ಜೈ ಗದೀಶ್, ಶ್ರೀನಿವಾಸ್, ಖಜಾಂಚಿಯಾಗಿ ಸಿದ್ಧರಾಜು, ಗೌರವ ಕಾರ್ಯದರ್ಶಿಯಾಗಿ ಸುಂಸರ್ ರಾಜ್, ಕುಮಾರ್, ಕುಶಾಲ್ ಇತರರು ಆಯ್ಕೆಯಾಗಿದ್ದಾರೆ.
ಸಾ.ರಾ.ಗೋವಿಂದು ಬಣದ ವಿರುದ್ಧ ಭಾ.ಮ.ಹರೀಶ್ ಬಣ ಭರ್ಜರಿ ಗೆಲುವು ಸಾಧಿಸಿದ್ದು, ಕನ್ನಡ ಚಿತ್ರರಂಗದ ಸೇವೆಗೆ ಸದಾ ಸಿದ್ಧ ಎಂದು ಬಣ ತಿಳಿಸಿದೆ.

Categories
ಸಿನಿ ಸುದ್ದಿ

ಬಾಂಡ್ ರವಿ ಭರ್ಜರಿ ಹೊಡೆದಾಟ: ಮಂಡ್ಯ ಹೈದನ ಖದರ್ ಹೇಗಿತ್ತು ಗೊತ್ತಾ…?

ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ಪ್ರಮೋದ್ ನಟನೆಯ ಬಹು ನಿರೀಕ್ಷಿತ ಸಿನ್ಮಾ ಬಾಂಡ್ ರವಿ ಚಿತ್ರದ ಶೂಟಿಂಗ್ ಭರದಿಂದ ಸಾಗ್ತಿದೆ. ಈಗಾಗಲೇ 70ರಷ್ಟು ಶೂಟಿಂಗ್ ಕಂಪ್ಲೀಟ್ ಮಾಡಿರುವ ಚಿತ್ರತಂಡ, ಇತ್ತೀಚೆಗೆ ಬೆಂಗಳೂರಿನ HMTಯಲ್ಲಿ ಸಾಹಸ ದೃಶ್ಯದ ಚಿತ್ರೀಕರಣ ನಡೆಸಿದೆ.

ಖ್ಯಾತ ಸಾಹಸ ನಿರ್ದೇಶಕ ಮಾಸ್ಟರ್ ವಿನೋದ್ ಸಾಹಸ ಸಂಯೋಜನೆಯಲ್ಲಿ ಭರ್ಜರಿ ಸಾಹಸ ಸನ್ನಿವೇಶದ ಚಿತ್ರೀಕರಣ ನಡೆದಿದೆ. ಪ್ರಮೋದ್, ಸಹಕಲಾವಿದರು ಭರ್ಜರಿ ಆಕ್ಷನ್ ಸೀನ್ಸ್ ಭಾಗಿಯಾಗಿದ್ದರು.

ಕಳೆದ‌ ಹನ್ನೊಂದು ವರ್ಷದಿಂದ ನಿರ್ದೇಶನದ ವಿಭಾಗದಲ್ಲಿ ಕೆಲಸ ಮಾಡಿರುವ ಪ್ರಜ್ವಲ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳ್ತಿದ್ದು, ಇದೊಂದು ಕಮರ್ಷಿಯಲ್, ಆಕ್ಷನ್-ಲವ್ ಸ್ಟೋರಿ ಸಿನಿಮಾವಾಗಿದ್ದು, ಲೈಫ್ ಲೈನ್ ಫಿಲ್ಮಸ್ ಬ್ಯಾನರ್ ನಡಿ ನರಸಿಂಹಮೂರ್ತಿ ಬಂಡವಾಳ ಹೂಡ್ತಿದ್ದಾರೆ.

ಈ‌ ಹಿಂದೆ ನರಸಿಂಹಮೂರ್ತಿ ಮಾದ ಮತ್ತು ಮಾನಸಿ ಸಿನಿಮಾ ನಿರ್ಮಾಣ ಮಾಡಿದ್ದರು. ಪ್ರಮೋದ್ ಗೆ ಜೋಡಿಯಾಗಿ ಮಾಯಕನ್ನಡಿ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದ ಕಾಜಲ್ ಕುಂದರ್ ನಾಯಕಿಯಾಗಿ ನಟಿಸ್ತಿದ್ದಾರೆ.

ಮಲ್ಲಿಕಾರ್ಜುನ್ ಹಾಗೂ ಝೇವಿಯರ್ ಫರ್ನಾಂಡಿಸ್ ಸಹ ನಿರ್ಮಾಣದ ಜವಾಬ್ದಾರಿ ಹೊತ್ತಕೊಂಡಿದ್ದಾರೆ. ರವಿಕಾಳೆ, ಧರ್ಮ, ವಿಜಯ್ ಚೆಂಡೂರ್, ಶೋಭರಾಜ್, ತೆಲುಗಿನ ಖ್ಯಾತ ನಟ ರವಿ ಪ್ರಕಾಶ್ ಮುಖ್ಯ ಭೂಮಿಕೆಯಲ್ಲಿ ನಟಿಸ್ತಿದ್ದಾರೆ.

ಕೆಎಸ್ ಚಂದ್ರಶೇಖರ್ ಛಾಯಾಗ್ರಹಣ, ಅರ್ಜುನ್ ಸಂಕಲನ, ಸುನಿಲ್ – ದೇವ್ ಎನ್ ರಾಜ್ ಸಂಭಾಷಣೆ, ಮನೋಮೂರ್ತಿ ಮಧುರ ಸಂಗೀತ, ಜಯಂತ್ ಕಾಯ್ಕಿಣಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಸಿನಿಮಾಕ್ಕಿದೆ.

Categories
ಸಿನಿ ಸುದ್ದಿ

ತುಪ್ಪದ ಬೆಡಗಿಯ ಹುಟ್ಟು ಹಬ್ಬದ ಸಂಭ್ರಮ: ಸಾರಿ ಚಿತ್ರ ತಂಡದಿಂದ ಮೋಷನ್ ಪೋಸ್ಟರ್ ರಿಲೀಸ್…

ವೀರ ಮದಕರಿ” ಚಿತ್ರದಿಂದ ಕನ್ನಡಿಗರ ಮನ ಗೆದ್ದಿರುವ ರಾಗಿಣಿ, ಈವರೆಗೂ ಇಪ್ಪತ್ತೈದಕ್ಕೂ ಹೆಚ್ಚಿನ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಪ್ರಸ್ತುತ ಅವರ ನಟನೆಯ ಚಿತ್ರ “ಸಾರಿ” (ಕರ್ಮ ರಿಟರ್ನ್ಸ್) ರಿಲೀಸ್ ಗೆ ರೆಡಿಯಾಗುತ್ತಿದೆ. ರಾಗಿಣಿ ಹುಟ್ಟು ಹಬ್ಬದ ಅಂಗವಾಗಿ ಚಿತ್ರತಂಡ ಮೋಷನ್ ಪೋಸ್ಟರ್ ರಿಲೀಸ್ ಮಾಡಿದೆ

ರಾಗಿಣಿ ಬರ್ತ್ ಡೇಗೆ ವಿಷ್ ಮಾಡಿದವರಿಗೆ ಥ್ಯಾಂಕ್ಸ್ ಹೇಳುತ್ತಲೆ, ಸಿನಿಮಾ ಕುರಿತು ಹೇಳಿಕೊಂಡರು. ‘ ನನ್ನನ್ನು ಪತ್ರಕರ್ತ ಅಫ್ಜಲ್ ಭೇಟಿಯಾಗಿ ಈ ಚಿತ್ರದ ಕುರಿತು ವಿವರಿಸಿದರು. ಕಥೆ ಇಷ್ಟವಾಯಿತು. ನಿರ್ದೇಶಕ ಬ್ರಹ್ಮ ಅತ್ಯುತ್ತಮ ತಂತ್ರಜ್ಞರು. ನಾನು ಒಂದೇ ತರಹದ ಪಾತ್ರ ಮಾಡಲು ಇಷ್ಟ ಪಡುವುದಿಲ್ಲ. ಬೇರೆ ಬೇರೆ ಪಾತ್ರ ಮಾಡಬೇಕೆಂಬುದು ನನ್ನ ಆಸೆ. ಇದರಲ್ಲೂ ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಂಡಿದ್ದೀನಿ. ನಿಮ್ಮ ಹಾರೈಕೆ ಇರಲಿ ಎನ್ನುತ್ತಾರೆ ನಾಯಕಿ ರಾಗಿಣಿ ದ್ವಿವೇದಿ.

ನಾನು 2000 ನೇ ಇಸವಿಯಿಂದಲ್ಲೂ ಅನಿಮೇಷನ್‌ ಹಾಗೂ ವಿ ಎಫ್ ಎಕ್ಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಈ ಕುರಿತು ಕೆಲವರಿಗೆ ತರಗತಿ ಕೂಡ ತೆಗೆದುಕೊಳ್ಳುತ್ತೇನೆ. ಹಿಂದೆ “ಸಿದ್ದಿ ಸೀರೆ” ಎಂಬ ಚಿತ್ರ ನಿರ್ದೇಶಿಸಿದ್ದ ನನಗೆ ಇದು ಎರಡನೇ ಚಿತ್ರ. ಅಫ್ಜಲ್ ಅವರು ಹೇಳಿದ ಒಂದೆಳೆ ಕಥೆ ಇಷ್ಟವಾಯಿತು. ನಾನು ಅದನ್ನು ಮುಂದುವರೆಸಿದೆ. ಇದರಲ್ಲಿ ಮಾಟ-ಮಂತ್ರ, ಬ್ಲ್ಯಾಕ್ ಮ್ಯಾಜಿಕ್ ಅಂತ ಏನು ಇಲ್ಲ. ಇದೊಂದು ಕ್ರೈಂ ಥ್ರಿಲ್ಲರ್. ಸೂಪರ್ ಹೀರೋ ಕಾನ್ಸೆಪ್ಟ್ ನ ಚಿತ್ರ ಕೂಡ ಎನ್ನುತ್ತಾರೆ ನಿರ್ದೇಶಕ ಬ್ರಹ್ಮ.

ಸಮಾರಂಭವೊಂದರಲ್ಲಿ ಬ್ರಹ್ಮ ಅವರ ಬಳಿ ಈ ಸಿನಿಮಾ ವಿಷಯ ಹೇಳಿದೆ. ನಂತರ ರಾಗಿಣಿ ಅವರು ಈ ಪಾತ್ರಕ್ಕೆ ಸೂಕ್ತ ಅನಿಸಿತು. ಅವರ ಬಳಿ ಹೋಗಿ ನೀವು ಈ ಚಿತ್ರದಲ್ಲಿ ನಟಿಸಬೇಕು ಎಂದು ಕೇಳಿದಾಗ, ತಕ್ಷಣ ಒಪ್ಪಿಕೊಂಡರು. ಅವರಿಗೆ ಧನ್ಯವಾದ. ಕೆನಡಾ ನಿವಾಸಿ ನವೀನ್ ಕುಮಾರ್ ಈ ಚಿತ್ರದ ನಿರ್ಮಾಪಕರು. ಜೈ ಕೃಪ್ಲಾನಿ ಹಾಗೂ ಜೇನ್ ಜಾರ್ಜ್ ಸಹ ನಿರ್ಮಾಪಕರು. ಬೆಂಗಳೂರು, ಸಕಲೇಶಪುರದ ಸುತ್ತ ಚಿತ್ರೀಕರಣ ಮಾಡಿದ್ದೇವೆ. ಮುಂದಿನ ಭಾಗದ ಚಿತ್ರೀಕರಣ ಹೈದರಾಬಾದ್ ನಲ್ಲಿ ನಡೆಯಲಿದೆ ಎಂದು ಕಾರ್ಯಕಾರಿ ನಿರ್ಮಾಪಕ ಅಫ್ಜಲ್ ಮಾಹಿತಿ ನೀಡಿದರು.

ಛಾಯಾಗ್ರಾಹಕ ರಾಜೀವ್ ಗಣೇಶನ್ ಹಾಗೂ ನಟ ಸ್ವರ್ಣ ಚಂದ್ರ ಕೂಡ “ಸಾರಿ” ಚಿತ್ರದ ಬಗ್ಗೆ ಮಾತನಾಡಿದರು.

Categories
ಸಿನಿ ಸುದ್ದಿ

ಲಹರಿ ಮ್ಯೂಸಿಕ್ ಸಂಸ್ಥೆಗೆ ಮತ್ತೊಂದು ಗರಿ: ಅಂಗ ಸಂಸ್ಥೆ ಎಂಆರ್ ಟಿ ಆಡಿಯೋ ಸಂಸ್ಥೆಗೆ ಗೋಲ್ಡ್ ಅವಾರ್ಡ್- ಇದು ಹೊಸ ದಾಖಲೆ

ಪ್ರಶಸ್ತಿಗಳು ಸುಮ್ಮನೆ ಹುಡುಕಿ ಬರೋದಿಲ್ಲ. ಅದಕ್ಕೆ ಪ್ರಾಮಾಣಿಕತೆ, ಪರಿಶ್ರಮ ಬೇಕು. ಇಲ್ಲೀಗ ಹೇಳ ಹೊರಟಿರುವ ವಿಷಯ, ಲಹರಿ‌ ಮ್ಯೂಸಿಕ್ ಸಂಸ್ಥೆಗೆ ಹುಡುಕಿ ಬಂದ ಪ್ರಶಸ್ತಿ.
ಹೌದು, ಈ ವರ್ಷ ಲಹರಿ ಮ್ಯೂಸಿಕ್ ಸಂಸ್ಥೆಗೆ ಯುಟ್ಯೂಬ್ ಡೈಮಂಡ್ ಅವಾರ್ಡ್ ಬಂತು. ಅದಷ್ಟೇ ಅಲ್ಲ, ಸಂಸ್ಥೆ ನಿರ್ಮಾಣ ಮಾಡಿದ ಆಲ್ಬಂ ಸಾಂಗ್ ಗೆ ಗ್ರ್ಯಾಮಿ ಅವಾರ್ಡ್ ಬಂತು. ಈಗ ಲಹರಿ‌ ಸಂಸ್ಥೆಯ ಮತ್ತೊಂದು ಅಂಗ ಸಂಸ್ಥೆ ಎಂಆರ್ ಟಿ ಮ್ಯೂಸಿಕ್ ಗೆ ಗೋಲ್ಡ್ ಅವಾರ್ಡ್ ಕೂಡ ಲಭಿಸಿದೆ.

ಈ ಕುರಿತು ಲಹರಿ ವೇಲು ಖುಷಿಯನ್ನು ಹಂಚಿಕೊಂಡಿದ್ದಾರೆ. ‘ವಿಶೇಷವೆಂದರೆ ಇದು ಶುರುವಾಗಿ ಕೇವಲ ಆರು ತಿಂಗಳಾಗಿದೆ. ಅದಾಗಲೇ ಈ ಅವಾರ್ಡ್ ಲಭಿಸಿದೆ. ಇದು ಮತ್ತಷ್ಟು ಜವಾಬ್ದಾರಿ ಹೆಚ್ಚಿಸಿದೆ. ಸಂಗೀತ ಸಂಸ್ಥೆಯ ಎಲ್ಲಾ ಹಾಡುಗಳು ಸೇರಿದಂತೆ ಅಣ್ಣಾವ್ರ ಹಾಡು, ಅಂಬರೀಷ್ ಮತ್ತು ವಿಷ್ಣುವರ್ಧನ್ ಸಿನಿಮಾಗಳ ಗೀತೆಗಳು ಮತ್ತು ಕೆಜಿಎಫ್ 2 ಹಿಂದಿ ಭಾಷೆಯ ಹಾಡುಗಳನ್ನು ಮೊದಲ ಸಲ ಉತ್ತರ ಭಾರತ ಮಾರುಕಟ್ಟೆಯನ್ನು ನಾವೇಕೆ ಪ್ರವೇಶ ಮಾಡಬಾರದು ಅಂತ ಅಲ್ಲಿಯೂ ಕಾಲಿಟ್ಟು, ಅಲ್ಲೂ ಸಹ ಆಡಿಯೋ ಸೂಪರ್ ಹಿಟ್ ಆಗಿದೆ. ಹಾಗಾಗಿ ಗೋಲ್ಡ್ ಅವಾರ್ಡ್ ಗೆ ಇದೂ ಕಾರಣವಾಗಿದೆ.

ಎಂಆರ್ ಟಿ ಮ್ಯೂಸಿಕ್ ಲಹರಿ ಸಂಸ್ಥೆಯ ಅಂಗ ಸಂಸ್ಥೆ. ಕೇವಲ ಆರು ತಿಂಗಳಲ್ಲಿ ಬಂದಿರೋದು ದಾಖಲೆ. ಮುಂದಿನ ದಿನಗಳಲ್ಲಿ ಎಂಆರ್ ಟಿ ಸಂಸ್ಥೆಗೆ ಆದಷ್ಟು ಬೇಗ ಡೈಮಂಡ್ ಅವಾರ್ಡ್ ಬರುವಂತೆಯೇ ಶ್ರಮ ವಹಿಸುತ್ತೇವೆ ಎನ್ನುವ ಲಹರಿ ವೇಲು, ಈ ಪ್ರಶಸ್ತಿಗೆ ಕಾರಣರಾದ ಎಲ್ಲರಿಗೂ ನಾನು ಚಿರ ಋಣಿ. ಪ್ರಮುಖವಾಗಿ ಕಲಾ ಪ್ರೇಮಿಗಳು, ಸಿನಿಮಾ ನಿರ್ದೇಶಕರು, ನಿರ್ಮಾಪಕರು ಹಾಗು ಪತ್ರಕರ್ತರಿಗೆ ಧನ್ಯವಾದಗಳು ಎಂದಿದ್ದಾರೆ ವೇಲು.

Categories
ಸಿನಿ ಸುದ್ದಿ

ವೀರ ಕಂಬಳ ಹಿಂದೆ ನಿಂತ ರಾಜೇಂದ್ರಸಿಂಗ್ ಬಾಬು; ವಿಶೇಷ ಪಾತ್ರದಲ್ಲಿ ಆದಿತ್ಯ- ಅಕ್ಟೋಬರ್‌ ವೇಳೆ ರಿಲೀಸ್…

ತುಳುನಾಡಿನ ಜಾನಪದ ಕ್ರೀಡೆಗಳಲ್ಲಿ ಬಹುಮುಖ್ಯವಾದ ಕ್ರೀಡೆ ಕಂಬಳ. ಈ ಕಂಬಳದ ಕುರಿತು “ವೀರ ಕಂಬಳ” ಎಂಬ ಚಿತ್ರವನ್ನು ಖ್ಯಾತ ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶಿಸುತ್ತಿದ್ದಾರೆ. ಅರುಣ್ ರೈ ತೋಡಾರ್ ನಿರ್ಮಾಣ ಮಾಡುತ್ತಿದ್ದಾರೆ

ಮೊದಲ ಸಲ ಕಂಬಳ ಕುರಿತು ರಾಜೇಂದ್ರ ಸಿಂಗ್ ಬಾಬು ಸಿನಿಮಾ‌ ಮಾಡಿದ್ದಾರೆ. ಆ ಸಿನಿಮಾ ಕುರಿತು ಅವರು ಹೇಳಿದ್ದಿಷ್ಟು. ನಾನು ಜನಪ್ರಿಯ ವಾರಪತ್ರಿಕೆಯೊಂದರಲ್ಲಿ “ಕಂಬಳ’ದ ಕುರಿತು ಬರುತ್ತಿದ್ದ ಬರಹಗಳನ್ನು ಓದುತ್ತಿದ್ದೆ. ಆ ವಾರಪತ್ರಿಕೆಯ ಮುಖ್ಯಸ್ಥರು ನನಗೆ ಪರಿಚಯ. ಅವರಿಂದ ಕಂಬಳದ ಬಗ್ಗೆ ಇದ್ದ ಸಾಕಷ್ಟು ಆರ್ಟಿಕಲ್ ಗಳನ್ನು ತರಿಸಿಕೊಂಡು ಓದಿ, ಇದರ ಬಗ್ಗೆ ಸಿನಿಮಾ ಮಾಡಬೇಕೆಂದು ನಿರ್ಧಾರ ಮಾಡಿದೆ. ನಂತರ ತುಳು ನಟ, ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರನ್ನು ಭೇಟಿ ಮಾಡಿದೆ. ಅವರಿಂದ ಕಂಬಳದ ಬಗ್ಗೆ ಸಾಕಷ್ಟು ಮಾಹಿತಿ ದೊರಕಿತು. ಅರುಣ್ ರೈ ತೋಡಾರ್ ಈ ಚಿತ್ರ ನಿರ್ಮಾಣಕ್ಕೆ ಮುಂದಾದರು. ಮೂಡುಬಿದಿರೆ ಬಳಿ ಇದಕ್ಕಾಗಿ ದೊಡ್ಡ ಕಂಬಳದ ಮೈದಾನ ಸಿದ್ದವಾಯಿತು.

ಇಪ್ಪತ್ತು ಜೊತೆ ಕೋಣ. ಒಂದು ಕೋಣ ನೋಡಿಕೊಳ್ಳಲು ನಾಲ್ಕು ಜನ. ಸಹ ಕಲಾವಿದರು ಸೇರಿದಂತೆ ಸುಮಾರು 500 ಕ್ಕೂ ಹೆಚ್ಚು ಜನ ಒಂದು ದಿನದ ಚಿತ್ರೀಕರಣದಲ್ಲಿ ಭಾಗವಹಿಸುತ್ತಿದ್ದರು. ಕೋಣಗಳ ಮೂಡ್ ಒಂದೇ ತರಹ ಇರುವುದಿಲ್ಲ. ಅದನೆಲ್ಲಾ ನೋಡಿಕೊಂಡು ಚಿತ್ರೀಕರಣ ಮಾಡಬೇಕಿತ್ತು. ಒಂದು ಸಲ ಓಟದ ಶಾಟ್ ತೆಗೆದರೆ, ಸುಮಾರು ಒಂದು ಗಂಟೆ ವಿಶ್ರಾಂತಿ. ನಂತರ ಚಿತ್ರೀಕರಣ. ಈ ಚಿತ್ರಕ್ಕೆ ಕಥೆಯೇ ಹೀರೋ. ಅದು ಬಿಟ್ಟರೆ,
ಕೋಣಗಳನ್ನು ಓಡಿಸುವುದರಲ್ಲಿ ಪ್ರಸಿದ್ಧರಾಗಿರುವ ಶ್ರೀನಿವಾಸ ಗೌಡ ಹಾಗೂ ನಾಟಕ ಕಲಾವಿದ ಸ್ವರಾಜ್ ಶೆಟ್ಟಿ ಕಂಬಳ ಓಡಿಸುವವರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವಿಶೇಷಪಾತ್ರದಲ್ಲಿ ಆದಿತ್ಯ ಅಭಿನಯಿಸಿದ್ದಾರೆ. ‌ರಾಧಿಕಾ ಚೇತನ್ ಪೊಲೀಸ್ ಕಮಿಷನರ್ ಆಗಿ ಕಾಣಿಸಿಕೊಂಡಿದ್ದಾರೆ. ನವೀನ್ ಪಡೀಲ್, ಗೋಪಿನಾಥ್ ಭಟ್, ಭೋಜರಾಜ್ ವಾಮಾಂಜುರು ಸೇರಿದಂತೆ ಪ್ರಸಿದ್ದ ತುಳು ನಟರು ಈ ಚಿತ್ರದಲ್ಲಿದ್ದಾರೆ. ಬಹುತೇಕ ಚಿತ್ರೀಕರಣ ಮುಗಿದಿದೆ. ಸ್ವಲ್ಪ ಭಾಗದ ಚಿತ್ರೀಕರಣ ಮಾತ್ರ ಬಾಕಿಯಿದ್ದು, ಖ್ಯಾತ ನಟ ಪ್ರಕಾಶ್ ರಾಜ್ ಅವರನ್ನು ಅಭಿನಯಿಸಲು ಕೇಳಿದ್ದೇವೆ. ಅವರು ಒಪ್ಪಿಗೆ ನೀಡಿದ್ದಾರೆ. ಸೆಪ್ಟೆಂಬರ್ ಅಥವಾ ಅಕ್ಟೋಬರ್ ನಲ್ಲಿ “ವೀರ ಕಂಬಳ” ನಿಮ್ಮ ಮುಂದೆ ಬರಲಿದೆ. ಈ ಚಿತ್ರಕ್ಕೆ ದೇಸಿ ಸಂಗೀತ ಬೇಕಿತ್ತು. ಹಾಗಾಗಿ ಅಲ್ಲಿನ ಬಗ್ಗೆ ತಿಳಿದಿರುವ ಮಣಿಕಾಂತ್ ಕದ್ರಿ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಗಿರಿ ಈ ಚಿತ್ರದ ಛಾಯಾಗ್ರಾಹಕರು. ತುಳು ಹಾಗೂ ಕನ್ನಡ ಭಾಷೆಗಳಲ್ಲಿ ಈ ಚಿತ್ರ ಬರುತ್ತಿದೆ. ತೆಲುಗು, ತಮಿಳು , ಹಿಂದಿ ಹಾಗೂ ಇಂಗ್ಲೀಷ್ ಭಾಷೆಗಳಿಗೆ ಡಬ್ ಆಗಲಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಬಿಡುಗಡೆಗೆ ಸಿದ್ದತೆ ನಡೆಯುತ್ತಿದೆ. ವಿದೇಶಗಳಲ್ಲಿ ಪ್ರೀಮಿಯರ್ ಶೋ ನಡೆಸುವ ಯೋಜನೆಯಿದೆ ಎಂದು “ವೀರ ಕಂಬಳ” ದ ಬಗ್ಗೆ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಮಾಹಿತಿ ನೀಡಿದರು. ನಂತರ ವಿಶ್ವದಾದ್ಯಂತ ಜಯಭೇರಿ ಬಾರಿಸುತ್ತಿರುವ “ಕೆ ಜಿ ಎಫ್ ೨” ಚಿತ್ರತಂಡಕ್ಕೆ ಶುಭ ಕೋರಿದ ರಾಜೇಂದ್ರ ಸಿಂಗ್ ಬಾಬು,
ಮುಂದೆ ನಾನು ಸಹ ದರ್ಶನ್ ಅವರ ಅಭಿನಯದಲ್ಲಿ ಅದ್ದೂರಿ ಚಿತ್ರವೊಂದನ್ನು ನಿರ್ದೇಶನ ಮಾಡುತ್ತೇನೆ ಎಂದರು.

ನನಗೆ ತುಳು ಚಿತ್ರದಲ್ಲಿ ಅಭಿನಯಿಸುವ ಆಸೆ ಮುಂಚಿನಿಂದಲೂ ಇತ್ತು. ಏಕೆಂದರೆ ನನ್ನ ಅಜ್ಜಿ ಹಾಗೂ ಅಮ್ಮ ಇಬ್ಬರೂ ದಕ್ಷಿಣ ಕನ್ನಡದವರು. ನಾನು ಚಿತ್ರದಲ್ಲಿ ಅಭಿನಯಿಸುವ ವಿಷಯ ನನಗೆ ಗೊತ್ತಿರಲಿಲ್ಲ. ನಿರ್ಮಾಪಕರು ಈ ರೀತಿ ಪಾತ್ರವಿದೆ. ನೀವು ಮಾಡಬೇಕೆಂದರು. ವಿಭಿನ್ನ ಪಾತ್ರದಲ್ಲಿ ಅಭಿನಯಿಸಿದ್ದೇನೆ. ನಾನು ಮೊದಲ‌ ದಿನ‌ ಚಿತ್ರೀಕರಣಕ್ಕೆ ಸಿದ್ದವಾಗಿ ಬಂದಾಗ ಅಲ್ಲಿದವರೆಲ್ಲ ನನ್ನ ನೋಡಿ ಆಶ್ಚರ್ಯಪಟ್ಟರು. ಚಿತ್ರ ಬಿಡುಗಡೆಯಾದಾಗ ನನ್ನ ಪಾತ್ರದ ಬಗ್ಗೆ ನಿಮಗೂ ತಿಳಿಯಬಹುದು ಎಂದರು ನಟ ಆದಿತ್ಯ.

ಎಷ್ಟೋ ಜನಕ್ಕೆ ನಾನು ತುಳುನಾಡಿನವಳೆಂದು ತಿಳಿದಿಲ್ಲ. ನನ್ನ ಮಾತೃ ಭಾಷೆ ಕೂಡ ತುಳು. ಈ ಚಿತ್ರದಲ್ಲಿ ಅಭಿನಯಿಸಲು ಅವಕಾಶ ಕೊಟ್ಟ ನಿರ್ದೇಶಕರಿಗೆ ವಂದನೆಗಳು. ಪೊಲೀಸ್ ಕಮಿಷನರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೀನಿ ಎಂದರು ನಟಿ ರಾಧಿಕಾ ಚೇತನ್.

ನಮ್ಮ ಊರಿನಲ್ಲಿ ನಡೆಯುವ ಕಂಬಳಕ್ಕೆ ರಾಜೇಂದ್ರ ಸಿಂಗ್ ಬಾಬು ಅವರನ್ನು ಆಹ್ವಾನಿಸಲು ಕಂಬಳದ ಅಧ್ಯಕ್ಷರು ಹೇಳಿದರು. ಬಾಬು ಸರ್ ನಮ್ಮ ಊರಿಗೆ ಬಂದರು. ಅಲ್ಲಿ ಈ ಚಿತ್ರದ ಮಾತುಕತೆಯಾಗಿ, ಚಿತ್ರ ಆರಂಭವಾಯಿತು. ನಾನು ರಾಜೇಂದ್ರ ಸಿಂಗ್ ಬಾಬು ಅವರ ದೊಡ್ಡ ಅಭಿಮಾನಿ. ಅವರು ನಮ್ಮ ಚಿತ್ರ ನಿರ್ದೇಶನ ಮಾಡುತ್ತಿರುವುದು ಸಂತೋಷ ತಂದಿದೆ ಎಂದರು ನಿರ್ಮಾಪಕ ಅರುಣ್ ರೈ ತೋಡಾರ್.

ನಾನು ಮೂಲತಃ ರಂಗಭೂಮಿಯವನು. ತುಳು ಭಾಷೆಯ ಸಾಕಷ್ಟು ನಾಟಕಗಳಿಗೆ ಸಂಭಾಷಣೆ ಬರೆದಿದ್ದೇನೆ. ರಾಜೇಂದ್ರ ಸಿಂಗ್ ಬಾಬು ಅವರು ನನ್ನನ್ನು ಭೇಟಿಯಾಗಿ ಈ ಚಿತ್ರಕ್ಕೆ ತುಳು ಹಾಗೂ ಕನ್ನಡದಲ್ಲಿ ಸಂಭಾಷಣೆ ಬರೆಯಲು ಹೇಳಿದರು. ಈವರೆಗೂ ನಾನು ಕನ್ನಡ ಚಿತ್ರಕ್ಕೆ ಸಂಭಾಷಣೆ ಬರೆದಿರಲಿಲ್ಲ. ಇದೇ ಮೊದಲು. ಕನ್ನಡ ಚಿತ್ರರಂಗಕ್ಕೆ ಇದು ದೊಡ್ಡ ಚಿತ್ರವಾಗುತ್ತದೆ. ತುಳು ಭಾಷೆಯಲಂತೂ ಪ್ರಚಂಡ ಯಶಸ್ಸು ಕಾಣಲಿದೆ ಎಂದು ಚಿತ್ರಕಥೆ , ಸಂಭಾಷಣೆ ಬರೆದಿರುವ ವಿಜಯ್ ಕುಮಾರ್ ಕೋಡಿಯಾಲ್ ಬೈಲ್ ತಿಳಿಸಿದರು.

ಚಿತ್ರದಲ್ಲಿ ಅಭಿನಯಿಸಿರುವ ಶ್ರೀನಿವಾಸ ಗೌಡ , ಸ್ವರಾಜ್ ಶೆಟ್ಟಿ ಹಾಗೂ ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ “ವೀರ ಕಂಬಳ” ದ ಕುರಿತು ಮಾತನಾಡಿದರು.

ಅರ್ ಗಿರಿ ಛಾಯಾಗ್ರಹಣ, ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ ಹಾಗೂ ಶ್ರೀನಿವಾಸ್ ಆರ್ ಬಾಬು ಸಂಕಲನವಿರುವ ಈ ಚಿತ್ರಕ್ಕೆ ವಿಜಯ್ ಕುಮಾರ್ ಕಿಡಿಯಾಲ್ ಬೈಲ್ ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ರಾಜೇಶ್ ಕುಡ್ಲ ಅವರ ನಿರ್ಮಾಣ ನಿರ್ವಹಣೆ “ವೀರ ಕಂಬಳ” ಚಿತ್ರಕ್ಕಿದೆ.

ಆದಿತ್ಯ, ರಾಧಿಕಾ ಚೇತನ್, ಗೋಪಿನಾಥ್ ಭಟ್, ಭೋಜರಾಜ್ ವಾಮಾಂಜೂರು, ಮೈಮ್ ರಮೇಶ್, ರಾಜಶೇಖರ ಕೋಟ್ಯಾನ್, ಉಷಾ ಭಂಡಾರಿ, ಶ್ರೀನಿವಾಸ ಗೌಡ, ಸ್ವರಾಜ್ ಶೆಟ್ಟಿ, ವೀಣಾ ಪೊನ್ನಪ್ಪ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.


Categories
ಸಿನಿ ಸುದ್ದಿ

ಫಿಲ್ಮ್ ಚೇಂಬರ್ ಚುನಾವಣೆ: ಗೆಲ್ಲುವ ಭರವಸೆಯಲ್ಲಿ ಸಾ.ರಾ.ಗೋವಿಂದು ತಂಡ…

ಕನ್ನಡ ಚಲನಚಿತ್ರೋದ್ಯಮದ ಅತ್ಯುನ್ನತ ಸಂಸ್ಥೆಯಾದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ (ಕೆಎಫ್‌ಸಿಸಿ) ವಾರ್ಷಿಕ ಚುನಾವಣೆ ಇದೇ ಶನಿವಾರ, ಮೇ 28 ರಂದು ನಡೆಯಲಿದೆ.

ಮತದಾನಕ್ಕೆ ಇದೀಗ ಕೆಲವೇ ದಿನಗಳು ಬಾಕಿ ಉಳಿದಿವೆ. ಈ ಬಾರಿ ಅಖಾಡದಲ್ಲಿ ಘಟಾನುಘಟಿಗಳಿದ್ದಾರೆ. ಚೇಂಬರ್ ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದು ನೇತೃತ್ವದ ತಂಡ ಎದುರಾಳಿ ಸ್ಪರ್ಧಿಗಳಿಗಿಂತ ಮುಂದಿದೆ ಎಂಬ ಮಾತುಗಳು ಗಾಂಧಿ ನಗರದಲ್ಲಿ ಕೇಳಿ ಬರುತ್ತಿದ್ದು, ಅದೀಗ ಸ್ಪಷ್ಟವಾಗಿ ಗೋಚರಿಸುತ್ತಿದೆ. ನಾಲ್ಕು ವರ್ಷಗಳ ಬಳಿಕ ಸಾ.ರಾ. ಗೋವಿಂದು ಅವರು ಎರಡನೇ ಬಾರಿಗೆ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿ ಪುನಃ ಅಧ್ಯಕ್ಷರಾಗಲು ತಯಾರಿ ನಡೆಸಿದ್ದಾರೆ.

ಈ ಸಲ ಅವರ ನೇತೃತ್ವದಲ್ಲಿ ನಿರ್ಮಾಪಕ ವಲಯದಿಂದ ಕರಿಸುಬ್ಬು (ಉಪಾಧ್ಯಕ್ಷ, ಸ್ಥಾನ), ಕೆ.ಎಂ.ವೀರೇಶ್ ನಿರ್ಮಾಪಕ ವಲಯದಿಂದ (ಗೌರವ ಕಾರ್ಯದರ್ಶಿ), ಎಂ.ಎನ್.ಕುಮಾರ್ ವಿತರಕ ವಲಯದಿಂದ (ಗೌರವ ಕಾರ್ಯದರ್ಶಿ) ಪಿ.ಎನ್.ಜ್ಞಾನೇಶ್ವರ್ ಐತಾಳ್ ವಿತರಕ ವಲಯದಿಂದ (ಉಪಾಧ್ಯಕ್ಷ), ಜೆ.ಪಿ.ಕುಮಾರ್ ಪ್ರದರ್ಶಕರ ವಲಯದಿಂದ (ಉಪಾಧ್ಯಕ್ಷ) ಎಲ್.ಸಿ.ಕುಶಾಲ್ ಪ್ರದರ್ಶಕರ ವಲಯದಿಂದ (ಗೌರವ ಕಾರ್ಯದರ್ಶಿ ಹಾಗು ಜಿ.ಕೆ.ಜಯಸಿಂಹ ಮುಸುರಿ ಗೌರವ ಖಜಾಂಚಿ ವಿವಿಧ ಹುದ್ದೆಗಳಿಗೆ ಸ್ಪರ್ಧಿಸಲಿದ್ದಾರೆ.

ಈಗಾಗಲೇ ಈ ಹಿಂದೆ ಈ ತಂಡ ಅಧಿಕಾರದಲ್ಲಿದ್ದಾಗ ಸಾಕಷ್ಟು ಒಳ್ಳೆಯ ಕೆಲಸಗಳನ್ನು ಮಾಡಿದ್ದರ ಆಧಾರದ ಮೇಲೆ ಮತ್ತೆ ಸ್ಫರ್ಧೆಗಿಳಿದಿದೆ. ಕೆ.ಎಂ.ವೀರೇಶ್ ಅವರು ಕೋವಿಡ್ ಸಂದರ್ಭದಲ್ಲಿ ತಮ್ಮ ಕೆಲಸವನ್ನು ನಿರ್ವಹಿಸಿದ ಪರಿ ಎಲ್ಲರಿಗೂ ಗೊತ್ತಿದೆ. ಅವರ ಕೆಲಸ ಮೆಚ್ಚುಗೆಗೂ ಪಾತ್ರವಾಗಿತ್ತು. ಈಗಾಗಲೇ ಕೆಎಫ್‌ಸಿಸಿಯಲ್ಲಿ ಇತರ ಹುದ್ದೆಗಳಲ್ಲೂ ಅವರು ಉತ್ತಮ ಸೇವೆ ಸಲ್ಲಿಸಿದ್ದಾರೆ.
ಸಾ.ರಾ.ಗೋವಿಂದು ಮತ್ತು ಎನ್.ಎಂ.ಕುಮಾರ್ ಅವರು 2008ರಲ್ಲಿ ಕೆಎಫ್‌ಸಿಸಿ ಸದಸ್ಯರಿಗೆ ಕಲ್ಯಾಣ ನಿಧಿಯನ್ನು ಪರಿಚಯಿಸಿದ್ದರು.

ಕಳೆದ ಐದು ವರ್ಷಗಳಲ್ಲಿ ಈ ನಿಧಿಯು ವೈದ್ಯಕೀಯ ಚಿಕಿತ್ಸೆಗಾಗಿ ಸದಸ್ಯರಿಗೆ ರೂ.3,71,76,000 ವಿತರಿಸಿರುವುದು ಹೆಗ್ಗಳಿಕೆ. ನಿಧನರಾದ ಸದಸ್ಯರ ಕುಟುಂಬಗಳಿಗೆ ಪರಿಹಾರ ನೀಡಿದೆ. ಪ್ರತಿ ಸದಸ್ಯನ ಕಲ್ಯಾಣ ನಿಧಿ ಈಗ 2.5 ಲಕ್ಷ ರೂ. 5 ಲಕ್ಷಕ್ಕೆ ದ್ವಿಗುಣಗೊಳಿಸುವುದಾಗಿಯೂ ಸಾ.ರಾ. ಗೋವಿಂದು ಭರವಸೆ ನೀಡಿದ್ದಾರೆ.
ಇದಲ್ಲದೇ ಚಿತ್ರರಂಗಕ್ಕೆ ಸರ್ಕಾರದಿಂದ ಹಲವಾರು ಯೋಜನೆಗಳನ್ನು ಜಾರಿಗೊಳಿಸಲು ಈ ತಂಡ ಕಾರಣರಾಗಿದೆ.

ಮತ್ತೊಂದೆಡೆ, ಗೋವಿಂದು ಅವರ ಎದುರಾಕಲಿ ತಂಡ ಅಷ್ಟೊಂದು ಬಲವಿಲ್ಲ ಎಂಬ ನಂಬಿಕೆ ಈ ತಂಡಕ್ಕಿದೆ.
ಕೆಎಫ್‌ಸಿಸಿಯಲ್ಲಿ 1,290 ನಿರ್ಮಾಪಕರು, 412 ವಿತರಕರು ಮತ್ತು 187 ಪ್ರದರ್ಶಕರು ಸೇರಿದಂತೆ ಒಟ್ಟು 1,800 ಮತದಾರರಿದ್ದಾರೆ. ಶನಿವಾರ ಮಧ್ಯಾಹ್ನ 2ರಿಂದ ಸಂಜೆ 6ರವರೆಗೆ ಮತದಾನ ನಡೆಯಲಿದ್ದು, ಅದೇ ದಿನ ಸಂಜೆ ವಿಜೇತರನ್ನು ಘೋಷಿಸಲಾಗುತ್ತದೆ.

Categories
ಸಿನಿ ಸುದ್ದಿ

ಲಾಂಗ್ ಹಿಡಿದ ವಸಿಷ್ಠ: ಧಮ್ ಜೊತೆ Love…ಲೀ ಎಂಟ್ರಿ ಕೊಟ್ಟ ಸಿಂಹ…

ಕಂಚಿನ ಕಂಠದ ಗಾಯಕ… ಪ್ರತಿಭಾನ್ವಿತ ನಾಯಕ ವಸಿಷ್ಠ ಸಿಂಹ ಭತ್ತಳಿಕೆಯಲ್ಲಿರುವ ಬಹುನಿರೀಕ್ಷಿತ Love..ಲಿ ಸಿನಿಮಾ ಅಂಗಳದಿಂದ ನಯಾ ಪೋಸ್ಟರ್ ರಿಲೀಸ್ ಆಗಿದೆ. ರಕ್ತಸಿಕ್ತ ಕೈಯಲ್ಲಿ ಲಾಂಗ್ ಹಿಡಿದು, ಮತ್ತೊಂದು ಕೈಯಲ್ಲಿ ಧಮ್ ಎಳೆಯುತ್ತಾ, ರಾ ಲುಕ್ ನಲ್ಲಿ ವಸಿಷ್ಠ ಸಿಂಹ ಎಂಟ್ರಿ ಕೊಟ್ಟಿದ್ದು, ಈ ಪೋಸ್ಟರ್ ಗೆ ಚಿತ್ರಾಭಿಮಾನಿಗಳು ಫಿದಾ ಆಗಿದ್ದಾರೆ.

ಕಳೆದ ಕೆಲ ದಿನಗಳ ಹಿಂದಷ್ಟೇ Love..ಲಿ ಚಿತ್ರದ ಇಂಟ್ರೊಡಕ್ಷನ್ ಸೀನ್ಸ್ ಅದ್ದೂರಿಯಾಗಿ ಮೂಡಿ ಮೂಡಿ ಬಂದಿರುವ ಬಗ್ಗೆ ಮಾಹಿತಿ‌ ಕೊಟ್ಟಿದ್ದ ಚಿತ್ರತಂಡ ಈಗ ಹೊಸ ಪೋಸ್ಟರ್ ವೊಂದನ್ನು ರಿಲೀಸ್ ಮಾಡುವ ಮೂಲಕ ಸಿನಿಮಾ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.

ಮಫ್ತಿ ಸಿನಿಮಾ ನಿರ್ದೇಶಕ ನರ್ತನ್‌ ಜೊತೆಗೆ ಕೆಲಸ ಮಾಡಿರುವ ಅನುಭವ ಇರುವ ಚೇತನ್‌ ಕೇಶವ್‌ ನೈಜ ಘಟನೆಗಳನ್ನು ಆಧಾರವಾಗಿಟ್ಟುಕೊಂಡು love..ಲಿ ಸಿನಿಮಾ ನಿರ್ದೇಶನ ಮಾಡುತ್ತಿದ್ದು, ರವೀಂದ್ರ ಕುಮಾರ್‌ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಹರೀಶ್‌ಕೊಂಬೆ ಕ್ಯಾಮೆರಾ, ಅನೂಪ್‌ ಸಿಳೀನ್‌ ಸಂಗೀತ ಸಂಯೋಜನೆ ಮಾಡಲಿದ್ದಾರೆ.

ವಸಿಷ್ಠ ಸಿಂಹ ಕೈಯಲ್ಲಿ ಸಾಕಷ್ಟು ಪ್ರಾಜೆಕ್ಟ್​​ಗಳಿವೆ. ಜಯರಾಜ್​ ಜೀವನ ಆಧರಿಸಿ ‘ಹೆಡ್ ಬುಷ್’ ‘ಸಿಂಬಾ’, ‘ಓದೆಲಾ ರೈಲ್ವೇ ಸ್ಟೇಷನ್’ ಸೇರಿ ಹಲವು ಸಿನಿಮಾಗಳಲ್ಲಿ ವಸಿಷ್ಠ ಬ್ಯುಸಿಯಾಗಿದ್ದಾರೆ.

Categories
ಸಿನಿ ಸುದ್ದಿ

ಗುಡ್‌ ಗುಡ್ಡರ್‌ ಗುಡ್ಡೆಸ್ಟ್‌ ಸಿನಿಮಾ ಶುರು: ಹ್ಯೂಮರ್‌ ಸೆಟೈರ್‌ ಕಾಮಿಡಿ ಚಿತ್ರಕ್ಕೆ ಯುವಧೀರ ಹೀರೋ…

ಕಳೆದ ಹದಿನೈದು ವರ್ಷಗಳಿಂದ ಚಿತ್ರರಂಗದಲ್ಲಿ ಸಂಭಾಷಣೆಕಾರನಾಗಿ ಗುರುತಿಸಿಕೊಂಡಿರುವ ಯುವಧೀರ, ಗುಡ್ ಗುಡ್ಡರ್ ಗುಡೆಸ್ಟ್ ಸಿನಿಮಾ ಮೂಲಕ ನಿರ್ದೇಶನಕ್ಕಿಳಿದಿದ್ದಾರೆ. ಇತ್ತೀಚೆಗೆ ಮುಹೂರ್ತ ನೆರವೇರಿದ್ದು, ಜೀ ಕನ್ನಡದ ಡಿಕೆಡಿ ಶೋ ವಿನ್ನರ್ ಚೈತ್ರಾಲಿ ಕ್ಲ್ಯಾಪ್ ಮಾಡಿದ್ರೆ, ಬೂಸೆ ಗೌಡ ಎಂಬ ಭರತನಾಟ್ಯದಲ್ಲಿ ನ್ಯಾಷನಲ್ ಅವಾರ್ಡ್ ಪಡೆದ ಅಂಧರೊಬ್ಬರು ಕ್ಯಾಮೆರಾಗೆ ಚಾಲನೆ ನೀಡಿದರು.

ಕಳೆದ ಹದಿನೈದು ವರ್ಷಗಳಿಂದ ಸಿನಿಮಾಗಳಲ್ಲಿ ಸಂಭಾಷಣೆಕಾರನಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಮಿಂಚು, ಜಾನಿ ಜಾನಿ ಎಸ್ ಪಪ್ಪಾ ಸೇರಿದಂತೆ ಹಲವು ಸಿನಿಮಾಗಳಲ್ಲಿ ಕೆಲಸ ಮಾಡಿದ್ದೇನೆ. ಇದು ನನ್ನ ಮೊದಲ ನಿರ್ದೇಶನ ಸಿನಿಮಾ. ಒಂದೇ ಕಥೆ ಮೂರು ಟ್ರ್ಯಾಕ್ ನಲ್ಲಿ ನಡೆಯುತ್ತದೆ. ಇದು ಯಾವ ಜಾನರ್ ಸಿನಿಮಾ ಅನ್ನೋದು ವರ್ಗೀಕೃತ ಮಾಡುವುದು ಕಷ್ಟ. ಹೀಗಾಗಿ ಇದು ಮಲ್ಟಿಪಲ್ ಜಾನರ್ ನ ಸಿನಿಮಾ ಎಂದು ನಿರ್ದೇಶಕ ಯುವಧೀರ ಮಾಹಿತಿ ಹಂಚಿಕೊಂಡರು.

ಸುಚೇಂದ್ರ ಪ್ರಸಾದ್, ಇವರು ಇಟ್ಟಿರುವ ಶೀರ್ಷಿಕೆ ವ್ಯಾಕರಣ ಬದ್ಧವಲ್ಲ ಹಾಗೇಯೇ ಸಿನಿಮಾ ಕೂಡ ಎಲ್ಲ ವ್ಯಾಕರಣವನ್ನ ಮುರಿಯಲಿದೆ. ಇದು ನಿಜ ಜೀವನದ ಕೆಲವು ಪ್ರಸಂಗ ತಳುಕು ಹಾಕಿ ಕಥೆ ರೆಡಿ ಮಾಡಿದ್ದಾರೆ. ಒಳ್ಳೆ ಕಥಾಹಂದರವನ್ನು ತಯಾರಿಸಿದ್ದಾರೆ ಎಂದು ಹಿರಿಯ ಕಲಾವಿದ ಸುಚೇಂದ್ರ ಪ್ರಸಾದ್ ಹೇಳಿದರು.

ಯುವಧೀರ ನಿರ್ದೇಶನದ ಜೊತೆಗೆ ತಾವೇ ಈ ಸಿನಿಮಾದಲ್ಲಿ ನಾಯಕನಾಗಿ ಅಭಿನಯಿಸುತ್ತಿದ್ದು, ಇವರಿಗೆ ಜೋಡಿಯಾಗಿ ಆದ್ಯಾ ಪ್ರಿಯಾ ಕಾಣಿಸಿಕೊಳ್ಳಲಿದ್ದಾರೆ. ಉಳಿದಂತೆ ಸೋನುಗೌಡ, ಪ್ರಮೋದ್ ಶೆಟ್ಟಿ, ಗೋಪಾಲ್ ಕೃಷ್ಣ ದೇಶಪಾಂಡೆ, ಸುಚೇಂದ್ರ ಪ್ರಸಾದ್, ವಿ.ಮನೋಹರ್, ಸೇರಿದಂತೆ ದೊಡ್ಡ ತಾರಾಬಳಗವೇ ಇದೆ.

ಶ್ರೀನಿಧಿ ಪಿಕ್ಚರ್ ಬ್ಯಾನರ್‌ ತಯಾರಾಗುತ್ತಿರುವ ಗುಡ್ ಗುಡ್ಡರ್ ಗುಡ್ಡೆಸ್ಟ್ ಚಿತ್ರಕ್ಕೆ ಬಿಲ್ಡರ್‌ ಆಗಿರುವ ಸುರೇಶ್‌ ಬಿ ನಿರ್ಮಾಣ ಮಾಡಿದ್ದು, ಇದೊಂದು ಡಾರ್ಕ್‌ ಹ್ಯೂಮರ್‌ ಸೆಟೈರ್‌ ಕಾಮಿಡಿ ಚಿತ್ರವಾಗಿದ್ದು, ಜೊತೆಗೆ ರೊಮ್ಯಾನ್ಸ್‌, ಥ್ರಿಲ್ಲರ್‌, ಡ್ರಾಮಾ, ಕ್ರೈಂ, ಆ್ಯಕ್ಷನ್‌ ಕೂಡ ಒಳಗೊಂಡಿದೆ. ಬೆಂಗಳೂರು,‌ ಮಂಗಳೂರು, ಮೈಸೂರು ಸುತ್ತಮುತ್ತ 45 ದಿನಗಳ ಕಾಲ ಶೂಟಿಂಗ್ ನಡೆಯಲಿದೆ. ಸಂದೀಪ್ ಹೊಲ್ಲೂರಿ ಕ್ಯಾಮೆರಾ, ಶಶಾಂಕ್ ಶೇಷಗಿರಿ ಸಂಗೀತ, ಕಿರಣ್ ಸಂಕಲನ ಸಿನಿಮಾಕ್ಕಿದೆ.

Categories
ಸಿನಿ ಸುದ್ದಿ

ಕಿರಿಕ್ ಶಂಕರನಿಗೆ ಆರ್.ಚಂದ್ರು ಸಾಥ್! ಯೋಗಿ ಚಿತ್ರದ ಟ್ರೇಲರ್ ರಿಲೀಸ್… ಮೇ.27ಕ್ಕೆ ಸಿನಿಮಾ ಬಿಡುಗಡೆ

ಲೂಸ್ ಮಾದ ಯೋಗಿ ನಾಯಕರಾಗಿ ನಟಿಸಿರುವ “ಕಿರಿಕ್ ಶಂಕರ್” ಚಿತ್ರದ ಟ್ರೇಲರನ್ನು ಖ್ಯಾತ ನಿರ್ದೇಶಕ ಆರ್ ಚಂದ್ರು ಬಿಡುಗಡೆ ಮಾಡಿ ಶುಭ ಕೋರಿದರು.

ನಾನು “ತಾಜ್ ಮಹಲ್” ಚಿತ್ರ ಮಾಡಿದಾಗಿನಿಂದಲೂ ಎಂ. ಎನ್. ಕುಮಾರ್ ಅವರು ನೀಡುತ್ತಿರುವ ಪ್ರೋತ್ಸಾಹ ಅಪಾರ. ಅವರು ಈಗ ಸಿನಿಮಾ ಮಾಡು ಅಂದರು, ನಾನು ಮಾಡಲು ಸಿದ್ದ. ಅವರ ನಿರ್ಮಾಣದಲ್ಲಿ ಮೂಡಿಬಂದಿರುವ ಈ ಚಿತ್ರಕ್ಕೆ ಹಾಗೂ ಇಡೀ ತಂಡಕ್ಕೆ ನನ್ನ ಶುಭಾಶಯ. ಚಿತ್ರ ಯಶಸ್ವಿಯಾಗಲಿ ಅಂದರು ಆರ್ ಚಂದ್ರು. ಮತ್ತೊಬ್ಬ ಅತಿಥಿ ALL OK ಕೂಡ ಚಿತ್ರತಂಡಕ್ಕೆ ಶುಭ ಕೋರಿದರು.

ಇಡೀ ತಂಡದ ಪರಿಶ್ರಮದಿಂದ ಈ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಒಳ್ಳೆಯ ಮನಸ್ಸುಗಳು ಸೇರಿ ಮಾಡುವ ಕೆಲಸ ಒಳ್ಳೆಯದೆ ಆಗುತ್ತದೆ ಎಂಬ ಭರವಸೆ ಇದೆ. ನಮ್ಮ ಚಿತ್ರ ನೋಡಿ ಹಾರೈಸಿ ಎಂದರು ನಿರ್ದೇಶಕ ಅನಂತರಾಜ್.

ನಾನು‌ ಏಪ್ರಿಲ್ ನಲ್ಲಿ ಬಿಡುಗಡೆ ಮಾಡುವುದಾಗಿ ಹೇಳಿದ್ದೆ.‌ ತುಂಬಾ ಚಿತ್ರಗಳು ಬಿಡುಗಡೆಯಾಗಿದ್ದರಿಂದ ಈ 27ರಂದು 150 ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ “ಕಿರಿಕ್ ಶಂಕರ್” ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದೇವೆ ಎಂದರು ನಿರ್ಮಾಪಕ ಎಂ.ಎನ್.ಕುಮಾರ್.

ನಾನು ಅಣ್ಣವ್ರ ಬ್ಯಾನರ್ ಬಿಟ್ಟರೆ ಇದೇ ದೊಡ್ಡ ಬ್ಯಾನರ್ ನಲ್ಲಿ ನಟನೆ ಮಾಡಿರುವುದು. ನಿರ್ದೇಶಕರು ಸಹ ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿರುವವರು. ಅವರ ಜೊತೆ ಕೆಲಸ ಮಾಡಿದ್ದು ಸಂತೋಷ ತಂದಿದೆ. ಎಲ್ಲರ ಪರಿಶ್ರಮದಿಂದ ಚಿತ್ರ ಚೆನ್ನಾಗಿ ಬಂದಿದೆ ಎಂದರು ನಾಯಕ ಲೂಸ್ ಮಾದ ಯೋಗಿ.

ನಾಯಕಿ ಅದ್ವಿಕ ಸಹ ಅಭಿನಯದ ಅನುಭವ ಹಂಚಿಕೊಂಡರು. ನಟ ರಿತೇಶ್, ನಟ ಹಾಗೂ ಸಂಕನಕಾರ ನಾಗೇಂದ್ರ ಅರಸ್ , ಸಂಗೀತ ನಿರ್ದೇಶಕ ವೀರ ಸಮರ್ಥ್, ಛಾಯಾಗ್ರಾಹಕ ಜೆ.ಜಿ ಕೃಷ್ಣ ಹಾಗೂ
ಕಾರ್ಯಕಾರಿ ನಿರ್ಮಾಪಕ ಯೋಗೀಶ್ ಹುಣಸೂರು “ಕಿರಿಕ್ ಶಂಕರ್” ಚಿತ್ರದ ಬಗ್ಗೆ ಮಾತನಾಡಿದರು.

error: Content is protected !!